Hijab row | ಇಸ್ಲಾಮಿಕ್‌ ದೇಶಗಳಲ್ಲಿ 10 ಸಾವಿರ ಆತ್ಮಹತ್ಯೆ ದಾಳಿ, ನಮ್ಮಲ್ಲಿ ಒಂದು ಮಾತ್ರ: ಹಿಜಾಬ್‌ ಪರ ವಕೀಲರ ವಾದ - Vistara News

ಕೋರ್ಟ್

Hijab row | ಇಸ್ಲಾಮಿಕ್‌ ದೇಶಗಳಲ್ಲಿ 10 ಸಾವಿರ ಆತ್ಮಹತ್ಯೆ ದಾಳಿ, ನಮ್ಮಲ್ಲಿ ಒಂದು ಮಾತ್ರ: ಹಿಜಾಬ್‌ ಪರ ವಕೀಲರ ವಾದ

ಉಡುಪಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್‌ ಧಾರಣೆಯ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಾದವಿವಾದ ನಡೆಯುತ್ತಿದ್ದು, ಮಂಗಳವಾರವೂ ಮುಂದುವರಿಯಲಿದೆ.

VISTARANEWS.COM


on

udupi hijab students
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವ ದೆಹಲಿ: ಇಸ್ಲಾಮಿಕ್‌ ದೇಶಗಳಲ್ಲಿ ಇದುವರೆಗೂ ಹತ್ತು ಸಾವಿರ ಆತ್ಮಹತ್ಯಾ ದಾಳಿಗಳು ನಡೆದಿವೆ. ಆದರೆ ಭಾರತದಲ್ಲಿ ನಡೆದಿರುವುದು ಒಂದೇ ಒಂದು, ಪುಲ್ವಾಮ ದಾಳಿ ಮಾತ್ರ. ಇದು ಇಲ್ಲಿನ ಮುಸ್ಲಿಮರು ದೇಶದ ಮೇಲಿಟ್ಟಿರುವ ವಿಶ್ವಾಸಕ್ಕೆ ಸಾಕ್ಷಿ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್‌ ಪರ ವಕೀಲರಾದ ಹಿರಿಯ ನ್ಯಾಯವಾದಿ ದುಶ್ಯಂತ ದವೆ ವಾದಿಸಿದ್ದಾರೆ.

ಮುಸ್ಲಿಂ ಯುವತಿಯರು ಹಿಜಾಬ್‌ ಧರಿಸುವುದು ಯಾರ ಧಾರ್ಮಿಕ ಭಾವನೆಗಳಿಗೂ ನೋವುಂಟು ಮಾಡುವುದಿಲ್ಲ. ಹಿಜಾಬ್‌ ಅವರ ವ್ಯಕ್ತಿತ್ವದ ವಿಶಿಷ್ಟತೆಯಾಗಿದೆ. ಆದರೆ ಲವ್‌ ಜಿಹಾದ್‌ ಆರೋಪಗಳು, ಶಿಕ್ಷಣ ಸಂಸ್ಥೆಗಳಲ್ಲಿ ಅವರು ಹಿಜಾಬ್‌ ಧರಿಸುವುದಕ್ಕೆ ನಿರಾಕರಣೆ ಇತ್ಯಾದಿಗಳು ಅಲ್ಪಸಂಖ್ಯಾತ ಸಮುದಾಯವನ್ನು ಅಂಚಿಗೆ ತಳ್ಳುವ ಮನೋಭಾವದ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತಿವೆ. ಭಾರತವು ಪ್ರಗತಿಪರ ಮನೋಧರ್ಮದಲ್ಲಿ ಬೆಳೆದುಬಂದಿದ್ದು, ವೈವಿಧ್ಯತೆಯೇ ಇಲ್ಲಿನ ಏಕತೆಯಾಗಿದೆ ಎಂದು ದವೆ ವಾದಿಸಿದರು.

ಪಾಶ್ಚಿಮಾತ್ಯ ದೇಶಗಳು ಹಿಜಾಬ್ ಧಾರಣೆಗೆ ಅವಕಾಶ ನೀಡಿವೆ. ಅಮೆರಿಕದ ಸೈನ್ಯದಲ್ಲೂ ಟರ್ಬನ್‌ಗಳಿಗೆ ಅವಕಾಶ ನೀಡಲಾಗಿದೆ. ಸಿಕ್ಖರು ಟರ್ಬನ್‌ ಧರಿಸುವುದಕ್ಕೆ ಯಾವುದೇ ಆಕ್ಷೇಪ ಇಲ್ಲ. ಹಾಗೆಯೇ ಮುಸ್ಲಿಂ ಮಹಿಳೆಯರ ಹಿಜಾಬ್‌ಗೂ ಆಕ್ಷೇಪ ಇರಬಾರದು. ಕೆಲವು ತಿಲಕ ಇಡಲು, ಕೆಲವರು ಕ್ರಾಸ್‌ ಧರಿಸಲು ಇಷ್ಟಪಡಬಹುದು. ಹೀಗಿರುವಾಗ ಹಿಜಾಬ್‌ ಹೇಗೆ ದೇಶದ ಏಕತೆಗೆ ಧಕ್ಕೆಯಾಗುತ್ತದೆ ಎಂದು ದವೆ ಪ್ರಶ್ನಿಸಿದರು.

ನೀವು (ರಾಜ್ಯ ಸರ್ಕಾರ) ಸಮವಸ್ತ್ರದ ನೆವದಲ್ಲಿ ಹಿಜಾಬ್‌ ನಿಷೇಧದ ನಿರ್ಣಯ ನೀಡುತ್ತೀರಿ. ಆದರೆ ಅದರ ಮೂಲ ಉದ್ದೇಶವೇ ಬೇರೆಯಾಗಿದೆ. ನೀವು ನಿಮ್ಮ ನಂಬಿಕೆಗಳನ್ನು ಆಚರಿಸಲು ನಾವು ಬಿಡುವುದಿಲ್ಲ ಎನ್ನುವ ಮೂಲಕ, ನಾವು ಹೇಳಿದಂತೆ ನೀವು ಕೇಳಬೇಕು ಎನ್ನುವ ಸಂದೇಶ ರವಾನೆ ಮಾಡಲಾಗುತ್ತಿದೆ ಎಂದು ಅವರು ರಾಜ್ಯ ಸರ್ಕಾರವನ್ನು ಆಕ್ಷೇಪಿಸಿದರು.‌

ಇದನ್ನೂ ಓದಿ | Hijab Row | ಮೋದಿ ಪೇಟ, ಜೀನ್ಸ್‌, ನೆಹರು, ಇವು ಹಿಜಾಬ್‌ ವಿಚಾರಣೆ ವೇಳೆ ಪ್ರಸ್ತಾಪವಾದ ವಿಷಯಗಳು!

ನಮ್ಮ ಸಂವಿಧಾನ ಯಾವಾಗಲೂ ಮುಕ್ತತೆಯಿಂದ ನಡೆದುಕೊಂಡಿದೆ. ಹಿಜಾಬ್‌ ಧರಿಸಬಲ್ಲ ಹಕ್ಕು ಸಂವಿಧಾನದ ಆರ್ಟಿಕಲ್‌ 25ರ ಪ್ರಕಾರ ಪ್ರಜೆಗೆ ದತ್ತವಾಗಿದ್ದು, ಇದನ್ನು ಎಲ್ಲಿ ಬೇಕಿದ್ದರೂ ನಾವು ಆಚರಿಸಬಹುದಾಗಿದೆ. ನಮ್ಮ ಧಾರ್ಮಿಕ ನಂಬಿಕೆಗಳನ್ನು ಎಲ್ಲಿ ಬೇಕಿದ್ದರೂ ಮುಕ್ತವಾಗಿ ನಂಬುವುದು, ಆಚರಿಸುವುದು, ಪ್ರತಿಪಾದಿಸುವುದು ಆರ್ಟಿಕಲ್‌ 25ರ ಪ್ರಕಾರ ಸಾಧ್ಯ. ತರಗತಿಗಳಲ್ಲೂ ಇದನ್ನು ಮಾಡಬಹುದಾಗಿದೆ ಎಂದು ದವೆ ಪ್ರತಿಪಾದಿಸಿದರು.

ಹಿಜಾಬ್‌ ಧರಿಸುವುದು ತನ್ನ ಧಾರ್ಮಿಕ ಆಚರಣೆಗೆ ಅಗತ್ಯ ಎಂದು ಮುಸ್ಲಿಂ ಮಹಿಳೆ ಹೇಳಿದರೆ ಅದನ್ನು ಯಾವುದೇ ಕೋರ್ಟ್‌ ಅಥವಾ ಆಡಳಿತ ವ್ಯವಸ್ಥೆ ನಿರಾಕರಿಸುವಂತಿಲ್ಲ ಎಂದು ದವೆ ವಾದಿಸಿದ್ದಾರೆ.

ಉಡುಪಿಯ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ತರಗತಿಯೊಳಗೆ ಹಿಜಾಬ್ ಧರಿಸುವ ವಿಚಾರದಲ್ಲಿ ಎದ್ದ ವಿವಾದಕ್ಕೆ ಸಂಬಂಧಿಸಿ, ತರಗತಿಯಲ್ಲಿ ಹಿಜಾಬ್‌ ನಿಷೇಧಿಸಿ ಫೆಬ್ರವರಿ 5ರಂದು ಸರ್ಕಾರ ಆದೇಶಿಸಿತ್ತು. ಹಿಜಾಬ್‌ ಧಾರಣೆಗೆ ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ತಂಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಏಳು ದಿನಗಳಿಂದ ನ್ಯಾಯಮೂರ್ತಿಗಳಾದ ಹೇಮಂತ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರ ಪೀಠದ ಮುಂದೆ ವಿಚಾರಣೆ ನಡೆಯುತ್ತಿದ್ದು, ಮಂಗಳವಾರ ಮುಂದುವರಿಯಲಿದೆ.

ಇದನ್ನೂ ಓದಿ | ವಿಸ್ತಾರ Explainer | ಇರಾನ್‌ನಲ್ಲಿ ಹಿಜಾಬ್‌ ಕಟ್ಟಳೆ, ಹೊರಬರಲು ಆಗುವುದಿಲ್ಲವೇ ಮಹಿಳೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Actor Darshan : ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ

Actor Darshan : ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ ಬಳ್ಳಾರಿ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್‌ ಮಾಡುವಂತೆ ವಕೀಲರು ವಾದ ಮಾಡಿಸಲಿದ್ದಾರೆ.

VISTARANEWS.COM


on

Hc to hear Darshans bail plea tomorrow

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ (Actor Darshan) ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ (MRI) ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

Continue Reading

ಬೆಂಗಳೂರು

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

Bengaluru News

ಬೆಂಗಳೂರು: ಡಿನ್ನರ್‌ ಮುಗಿಸಿ ಬರುತ್ತಿದ್ದ ಪ್ರೇಮಿಗಳಿಗೆ ಕಿರಾತಕರು ಅಡ್ಡ ಹಾಕಿ, ಬಳಿಕ ಯುವಕನ ಕುತ್ತಿಗೆ ಚಾಕು ಇಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರು. ಇದೀಗ ಆ ಆರೋಪಿಗಳಿಗೆ 10 ವರ್ಷಗಳ ನಂತರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2014ರ ಏಪ್ರಿಲ್ 11ರಂದು ಪ್ರೇಮಿಗಳಿಬ್ಬರು ಎಂ.ಜಿ ರೋಡ್‌ನಲ್ಲಿ ಡಿನ್ನರ್ ಮುಗಿಸಿ ಪುಲಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ (Bengaluru News) ನೇತಾಜಿ ರಸ್ತೆಯಲ್ಲಿ ಮಧ್ಯರಾತ್ರಿ 12:30ರ ಸಮಯಲ್ಲಿ ಕಾರಿನಲ್ಲಿ ಕುಳಿತಿದ್ದರು. ಈ ವೇಳೆ ಕಾಮುಕರ ದಂಡು ಅವರನ್ನು ಸುತ್ತುವರಿದು ಕಾರು ಏರಿಕೊಂಡಿದ್ದರು.

ಶೇಕ್ ಹೈದರ್, ಸೈಯದ್ ಶಫಿಕ್, ಮಹಮ್ಮಸ್ ಹಫೀಜ್, ಶೋಯಬ್ @ ಶೇಖ್ ಕಲ್ವಾನ ಕಾರಿನಲ್ಲಿ ಪ್ರೇಮಿಗಳು ಇದ್ದರೆ, ಮಹಮ್ಮದ್ ಇಸಾಕ್ ಎಂಬಾತ ಕಾಮುಕರ ಕಾರನ್ನು ಫಾಲೋ ಮಾಡಿದ್ದ. ಬಳಿಕ ರಾತ್ರಿಯಿಡಿ ಸಂತ್ರಸ್ತೆ ಕಾರಿನಲ್ಲೇ ಪುಲಕೇಶಿ ನಗರ ಸುತ್ತಾಡಿದ್ದರು. ಕಾರಿನಲ್ಲಿ ಆ ಯುವತಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡಿದ್ದರು. ಕೊನೆಗೆ ಕಾಮುಕರ ಗುಂಪಿನ ನಾಯಕ ಶೇಕ್ ಹೈದರ್ ಆಜ್ಞೆಯಂತೆ ಸಂತ್ರಸ್ತೆಯ ಸ್ನೇಹಿತನನ್ನು ಕಾರಿನಿಂದ ಇಳಿಸಿದ್ದರು.

ಸೈಯದ್ ಶಫಿಕ್, ಹಫಿಜ್, ಶೋಯಬ್ ಆ ಯುವಕನ ಕುತ್ತಿಗೆಗೆ ಚಾಕು ಹಿಡಿದು ಕೊಂಡಿದ್ದರು. ಕಾರಿನಲ್ಲಿದ್ದ ಶೇಕ್ ಹೈದರ್ ನಾನು ಹೇಳಿದ ಹಾಗೆ ಕೇಳದಿದ್ದರೆ ನಿನ್ನ ಹುಡುಗನನ್ನು ಕೊಲೆ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದ. ನಂತರ ಯುವತಿ ಮೇಲೆ ಮೃಘೀಯ ರೀತಿ ವರ್ತಿಸಿದ್ದ. ತನ್ನ ಕಣ್ಣ ಮುಂದೆಯೇ ತನ್ನ ನಂಬಿ ಬಂದ ಪ್ರೇಯಸಿ ಮೇಲೆ ಕಾಮುಕರು ಪಿಶಾಚಿಗಳಂತೆ ಎಗರಿದ್ದರೂ ಏನು ಮಾಡಲು ಆಗದೆ ಅಸಯಾಕನಾಗಿದ್ದ.

ಯುವತಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ 50 ಸಾವಿರ ರೂ. ಗೆ ಡಿಮ್ಯಾಂಡ್ ಮಾಡಿದ್ದರು. ಹಣ ನೀಡದಿದ್ದಾಗ ಹುಡುಗನ ಕೈಯಲ್ಲಿದ್ದ ವಾಚ್‌ನ ಕಿತ್ತುಕೊಂಡು ಹೋಗಿದ್ದರು. ಈ ಘಟನೆ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲಿಗೆ ಅಂದಿನ ಇನ್‌ಸ್ಪೆಕ್ಟರ್‌ ಸರಿಯಾದ ಸೆಕ್ಷನ್ ಹಾಕಿಲ್ಲ ಎಂದು ಸಸ್ಪೆಂಡ್ ಕೂಡ ಆಗಿದ್ದರು. ಇದಾದ ನಂತರ ಅಂದಿನ ಪುಲಕೇಶಿ ನಗರ ಉಪವಿಭಾಗ ಎಸಿಪಿ ನೂರುಲ್ಲ ಶರೀಫ್ ತನಿಖೆ ನಡೆಸಿ ನ್ಯಾಯಲಯಕ್ಕೆ ಐವರು ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಕಾರಿನಲ್ಲಿ ಸಿಕ್ಕ ಆರೋಪಿಯ ತಲೆಕೂದಲು ಮತ್ತು ವೀರ್ಯದ ಕರುಹುಗಳು ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿತ್ತು. ಆರೋಪಿಗಳು ರಾಜಕೀಯ ಪ್ರಭಾವ ಹೊಂದಿದ್ದರು. ಆದರೆ ಇದ್ಯಾವುದಕ್ಕೂ ಮಣಿಯದ ಪೊಲೀಸರು ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದರು. ಸದ್ಯ ಆರೋಪಿಗಳ ಪೈಕಿ ಎ1 ಆರೋಪಿ ಶೇಕ್ ಹೈದರ್‌ಗೆ ಜೀವಾವಧಿ ಶಿಕ್ಷೆ 31 ಸಾವಿರ ದಂಡ ಹಾಗೂ ಎ2 ಸೈಯದ್ ಶಫಿಕ್ 10 ವರ್ಷ ಸಜೆ 23 ಸಾವಿರ ದಂಡ, ಎ3 ಮೊಹಮ್ಮದ್ ಹಫೀಜ್‌ಗೆ 3500 ದಂಡ, ಎ4 ಶೋಯಬ್ ಗೆ 1 ವರ್ಷ ಸಜೆ ಹಾಗೂ 3500 ದಂಡ ಹಾಗೂ ಎ5 ಮಹಮ್ಮದ್ ಇಸಾಕ್‌ಗೆ 6 ತಿಂಗಳ ಸಜೆ ಹಾಗೂ 3000 ದಂಡ ವಿಧಿಸಿ 57ನೇ ಸಿಸಿಹೆಚ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

Continue Reading

ಬೆಂಗಳೂರು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರ ಬೇಲ್‌ ಕನಸು ನಚ್ಚು ನೂರಾಗಿದೆ. ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ 9 ಕಾರಣಗಳನ್ನು ಕೊಟ್ಟಿದೆ.

VISTARANEWS.COM


on

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್‌ ಆಗಿರುವ ನಟ ದರ್ಶನ್‌‌ (Actor Darshan) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನುನಿನ್ನೆ ಸೋಮವಾರ ಕೋರ್ಟ್‌ ವಜಾಗೊಳಿಸಿತು. ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದ್ದಕ್ಕೆ ಕೋರ್ಟ್‌ 9 ಕಾರಣಗಳನ್ನು ನೀಡಿದೆ.

ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಲು ಪ್ರಮುಖ ಕಾರಣಗಳು!

  • -ಐ ವಿಟ್ನೆಸ್ ಹೇಳಿಕೆಗಳು ಕಾನೂನು ಪ್ರಕಾರವಾಗಿವೆ
  • -ರೇಣುಕಾಸ್ವಾಮಿ ಮೃತದೇಹದ ಗುರುತು ಪತ್ತೆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ತಡವಾಗಿಲ್ಲ.
  • -ದರ್ಶನ್ ಟ್ರಯಲ್ ಆರಂಭವಾದ ಬಳಿಕ ಆರೋಪಿಗಳ ಹೇಳಿಕೆಯ ಬಗ್ಗೆ ತಿಳಿಯುತ್ತದೆ.
  • -ದರ್ಶನ್ ಕ್ರಾಸ್ ಎಕ್ಸಾಮಿನ್ ಮಾಡಿದಾಗ ರಿಕವರಿಯ ಅಂಶಗಳ ಬಗ್ಗೆ ತಿಳಿಯುತ್ತದೆ
  • -ಸಿಡಿಆರ್ ನಲ್ಲಿ ಎ೨ ಆರೋಪಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿರೋದು ಸ್ಪಷ್ಟವಾಗಿದೆ
  • -ಈ ಹಂತದಲ್ಲಿ ಸಾಕ್ಷಿಗಳ ಹೇಳಿಕೆ ತಡವಾಗಿದೆ ಅನ್ನೋದಕ್ಕೆ ಪುರಾವೆಗಳಿಲ್ಲ
  • -ಡಿ ಎನ್ ಎ ಟೆಸ್ಟ್‌ ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿ ಇದ್ದ ಬಗ್ಗೆ ಸ್ಪಷ್ಟಪಡಿಸಿದೆ
  • -ಪೋಸ್ಟ್ ಮಾರ್ಟಂ ರಿಪೋರ್ಟ್ ನಲ್ಲಿ ರೇಣುಕಾಸ್ವಾಮಿ ಯ ಕೊಲೆಯ ಕ್ರೂರತೆ ಬಗ್ಗೆ ತಿಳಿಸಿದೆ
  • -ಸಮಾಜದಲ್ಲಿ ದರ್ಶನ್ ರೋಲ್ ಮಾಡೆಲ್ ಆಗಿದ್ದು, ಸಾಕಷ್ಟು ಜನ್ರು ಪ್ರಭಾವಿತರಾಗಿರ್ತಾರೆ

ಹತ್ಯೆ ಕೇಸ್‌ ಆರೋಪಿ ದರ್ಶನ್‌ಗೆ ಮತ್ತಷ್ಟು ದಿನ ಜೈಲುವಾಸವೇ ಫಿಕ್ಸ್ ಆಗಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ಆರೋಪಿ ದರ್ಶನ್‌ಗೆ ನ್ಯಾಯಾಲಯ ಬಿಗ್‌ ಶಾಕ್‌ ನೀಡಿದೆ. ಸ್ಯಾಂಡಲ್‌‌ವುಡ್ ಜಗ್ಗುದಾದಾನ ಬೇಲ್‌ ಅರ್ಜಿ ವಜಾಗೊಳಿಸಿರುವ ಕೋರ್ಟ್‌, ಜಾಮೀನು ನಿರಾಕರಣೆಗೆ ಹಲವು ಕಾರಣ ನೀಡಿದೆ. ವಿಸ್ತಾರ ನ್ಯೂಸ್‌ಗೆ ಬೇಲ್‌ ರಿಜೆಕ್ಟ್‌‌ ಬಗ್ಗೆ ಕೋರ್ಟ್‌ ಉಲ್ಲೇಖಿಸಿದ ಅಂಶಗಳ ಪಿನ್‌ ಟು ಪಿನ್‌ ಮಾಹಿತಿ ಲಭ್ಯವಾಗಿದೆ. ಸದ್ಯ ಜೈಲಲ್ಲಿರುವ ದರ್ಶನ್‌ಗೆ ಜಾಮೀನು ಅನ್ನೋದು ಮರೀಚಿಕೆ ಆಗಿದೆ. ನ್ಯಾಯಾಲಯ ಉಲ್ಲೇಖಿಸಿದ ಅಂಶಗಳ ನೋಡಾದಾದರೆ, ಕೊಲೆ ಕೇಸಲ್ಲಿ ಐ ವಿಟ್ನೆಸ್ ಹೇಳಿಕೆಗಳು ಕಾನೂನು ಪ್ರಕಾರವಾಗಿವೆ ಅಂತಾ ಆದೇಶದಲ್ಲಿ ತಿಳಿಸಲಾಗಿದೆ.

ದರ್ಶನ್‌ ಪರ ವಕೀಲರ ಆರೋಪದಂತೆ ರೇಣುಕಾಸ್ವಾಮಿ ಮೃತದೇಹ ಗುರುತಿನ ಬಳಿಕ ಮರಣೋತ್ತರ ಪರೀಕ್ಷೆ ತಡವಾಗಿಲ್ಲ, ದರ್ಶನ್ ಟ್ರಯಲ್ ಆರಂಭ ಬಳಿಕ ಆರೋಪಿಗಳ ಹೇಳಿಕೆ ತಿಳಿಯುತ್ತದೆ. ದರ್ಶನ್ ಕ್ರಾಸ್ ಎಕ್ಸಾಮ್‌‌‌‌‌‌ ಮಾಡಿದಾಗ ರಿಕವರಿ ಅಂಶ ತಿಳಿಯುತ್ತದೆ. ಸಿಡಿಆರ್‌ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿರೋದು ಸ್ಪಷ್ಟವಾಗಿದೆ ಅಂತಾ ಬೇಲ್‌ ಅರ್ಜಿ ವಜಾಗೊಳಿಸಿದೆ. ಮಾತ್ರವಲ್ಲ ಕೊಲೆ ಕೇಸಲ್ಲಿ ಸಾಕ್ಷಿಗಳ ಹೇಳಿಕೆ ತಡವಾಗಿದೆ ಅನ್ನೋದಕ್ಕೆ ಪುರಾವೆಗಳಿಲ್ಲ, DNA ಟೆಸ್ಟ್‌‌ನಲ್ಲಿ ದರ್ಶನ್ ಕೃತ್ಯ ನಡೆದ ಸ್ಥಳದಲ್ಲಿ ಇದ್ದ ಬಗ್ಗೆ ಸ್ಪಷ್ಟಪಡಿಸಿದೆ. ಪೋಸ್ಟ್‌‌ಮಾರ್ಟಂ ವರದಿ ರೇಣುಕಾಸ್ವಾಮಿ ಕೊಲೆಯ ಕ್ರೂರತೆ ತಿಳಿಸಿದೆ ಎಂದಿರುವ ಕೋರ್ಟ್‌, ದರ್ಶನ್‌ಗೆ ಜಾಮೀನು ನೀಡಲು ನಿರಾಕರಿಸಿದ್ದು, ಬೇಲ್ ಅರ್ಜಿ ವಜಾಗೊಳಿಸಿದೆ.

ಹೈಕೋರ್ಟ್‌ನತ್ತ ದಚ್ಚು-ಪವಿ ಬೇಲ್‌ ಅರ್ಜಿ?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ದರ್ಶನ್‌, ಜಾಮೀನು ಪಡೆದು ಹೊರಬರುವ ದಿನಕ್ಕಾಗಿ ಕಾಯುತ್ತಾ ಇದ್ದರು. ಆದರೆ ಸ್ಯಾಂಡಲ್‌ವುಡ್ ಕಾಟೇರನ ಬೇಲ್‌‌ ಕನಸು ನುಚ್ಚು ನೂರಾಯಿತು. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ನಿನ್ನೆ ಬೇಲ್ ಆದೇಶ ಹೊರಬಿದ್ದಿದ್ದು, ದರ್ಶನ್​ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರ ತಂಡ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ.

ಸೆಷನ್‌ ಕೋರ್ಟ್‌ನ ಆದೇಶ ಪ್ರತಿ ಸೇರಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಲು ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು. ಮತ್ತೊಂದೆಡೆ ಸದ್ಯಕ್ಕೆ ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ, ದರ್ಶನ್ ಬೆಂಗಳೂರಿಗೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಈಗಾಗಲೇ ದರ್ಶನ್ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಲು ಪ್ಲ್ಯಾನ್​ ನಡೆದಿದೆ.

ದರ್ಶನ್ ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ನಡೆಯಲು ಕೂಡ ದರ್ಶನ್‌ಗೆ ಕಷ್ಟ ಆಗುತ್ತಿದೆ ಎನ್ನಲಾಗಿದೆ. ಅನಾರೋಗ್ಯದ ನೆಪದಲ್ಲಾದರೂ ಚಾಲೆಂಜಿಂಗ್‌ ಸ್ಟಾರ್‌, ಬೆಂಗಳೂರು ಜೈಲು ಸೇರುವ ಯತ್ನ ನಡೆಸ್ತಿದ್ದಾರೆ ಎನ್ನಲಾಗ್ತಿದೆ. ಈ ಮಧ್ಯೆ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ಮತ್ತೊಂದೆಡೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡಗೂ ಬೇಲ್‌ ಸಿಕ್ಕಿಲ್ಲ. ಹೀಗಾಗಿ ಜೈಲುಹಕ್ಕಿ, ದರ್ಶನ್ ಗೆಳತಿ ಪವಿತ್ರಾ ಕೂಡ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದ್ದಾರೆ. ಪವಿತ್ರಾ ಗೌಡ ಪರ ವಕೀಲರ ತಂಡ, ಬೇಲ್‌‌ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಈವರೆಗೆ ಐವರಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳಿಗೆ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಹತ್ಯೆ ಕೇಸ್‌ನ ಎ8 ರವಿಶಂಕರ್ ಹಾಗೂ ಎ13 ದೀಪಕ್‌ಗೆ ಬೇಲ್ ನೀಡಿದ ಕೋರ್ಟ್‌ ಆದೇಶಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಐವರಿಗೆ ಜಾಮೀನು ಸಿಕ್ಕಿದ್ದು, ಇದೀಗ ಮತ್ತಿಬ್ಬರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಮರ್ಡರ್‌ ಕೇಸ್‌ನ ಎ8 ಆಗಿರುವ ರವಿಶಂಕರ್ ಕ್ಯಾಬ್‌ವೊಂದರ ಚಾಲಕನಾಗಿರುವ ಹಿನ್ನೆಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ಸ್ವಾಮಿಯನ್ನು ಕರೆತಂದಿದ್ದ ಅಷ್ಟೇ ಎಂದು ವಕೀಲರು ವಾದ ಮಾಡಿದ್ದು, ಹತ್ಯೆ ಕೇಸಲ್ಲಿ ರವಿಶಂಕರ್ ಒಳಸಂಚು ಮೇಲ್ನೋಟಕ್ಕೆ ಕಾಣದ ಹಿನ್ನೆಲೆ ಬೇಲ್ ನೀಡುವಂತ ಮನವಿ ಕೂಡ ಮಾಡಲಾಗಿತ್ತು.

ಮತ್ತೊಂದೆಡೆ ಎ13 ದೀಪಕ್ ವಿರುದ್ಧ ಸಾಕ್ಷ್ಯ ನಾಶ ಮಾಡಿರುವ ಆರೋಪ ಕೇಳಿ ಬಂದಿತ್ತು. ಆದರೆ ದೀಪಕ್‌‌ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದಿರುವ ವಕೀಲರು, ಜಾಮೀನು ಕೋರಿ ಮನವಿ ಮಾಡಿದ್ದು, ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಕೂಡ ಆಕ್ಷೇಪ ವ್ಯಕ್ತಪಡಿಸದ ಹಿನ್ನೆಲೆ ಜಾಮೀನು ಸಿಕ್ಕಿದ್ದು, ಇಬ್ಬರಿಗೂ ರಿಲೀಫ್ ಸಿಕ್ಕಿದೆ. ಇಬ್ಬರು ಆರೋಪಿಗಳ ವಿರುದ್ಧವೂ ಜಾಮೀನು ನೀಡಬಹುದಾದ ಪ್ರಕರಣ ಹಿನ್ನೆಲೆ ನ್ಯಾಯಾಲಯ ಬೇಲ್ ನೀಡಿದೆ. ಜಾಮೀನು ಪ್ರಕ್ರಿಯೆ ಮುಗಿದ ಬಳಿಕ ಇಬ್ಬರೂ ರಿಲೀಸ್ ಆಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Actor Darshan : ನಟ ದರ್ಶನ್‌ಗೆ ಬಿಟ್ಟು ಬಿಡದೆ ಕಾಡುತ್ತಿದೆ ಬೆನ್ನು ನೋವು; ನಾಳೆ ಆರು ಮಂದಿಯ ಬೇಲ್‌ ಭವಿಷ್ಯ

Actor Darshan : ನಟ ದರ್ಶನ್‌ಗೆ ಬಿಟ್ಟು ಬಿಡದೆ ಬೆನ್ನು ನೋವು ಕಾಡುತ್ತಿದೆ. ಮತ್ತೊಂದು ಕಡೆ ನಾಳೆ ಸೋಮವಾರ ಆರು ಮಂದಿಯ ಬೇಲ್‌ ಭವಿಷ್ಯ ನಿರ್ಧಾರವಾಗಲಿದೆ.

VISTARANEWS.COM


on

Actor Darshan suffers from back pain

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy case) ಬಳ್ಳಾರಿ ಜೈಲಲ್ಲಿರೋ ನಟ ದರ್ಶನ್‌ಗೆ (Actor Darshan) ಬಿಟ್ಟು ಬಿಡದೆ ಬೆನ್ನು ನೋವು ಕಾಡುತ್ತಿದೆ ಎನ್ನಲಾಗಿದೆ. ಬೆನ್ನು ನೋವಿಗಾಗಿ ಬಿಮ್ಸ್ ಆಸ್ಪತ್ರೆ ವೈದ್ಯರಿಂದ ತಪಾಸಣೆ ನಡೆದಿದ್ದು, ಚಿಕಿತ್ಸೆಗೆ ಸೂಚನೆ ನೀಡಲಾಗಿದೆ. ಹೀಗಿದ್ದರೂ ಚಿಕಿತ್ಸೆಗೆ ಒಪ್ಪದೆ ನಟ ದರ್ಶನ್ ನೋವಿನಲ್ಲೇ ಇದ್ದಾನೆ. ಎಮ್‌ಆರ್‌ಐ ಸ್ಕ್ಯಾನ್‌, ಸಿಟಿ ಸ್ಕ್ಯಾನೂ ಯಾವುದು ಬೇಡ ,ನಾನೂ ಎಲ್ಲೂ ಹೋಗಲ್ಲ ಅಂತಿದ್ದರಂತೆ. ವೈದ್ಯರು ನಟ ದರ್ಶನ್‌ಗೆ ಆಪರೇಷನ್ ಮಾಡುವ ಅಗತ್ಯವಿದೆ ಎಂದಿದ್ದಾರೆ. ಆದರೂ ಒಪ್ಪದೆ ಚಿಕಿತ್ಸೆಗೆ ನಿರಾಕರಿಸುತ್ತಿದ್ದರಂತೆ.

ಇಷ್ಟು ಬೆನ್ನು ನೋವಿಗೆ ಯಾತನೆ ಅನುಭವಿಸಿದ್ದರೂ ಚಿಕಿತ್ಸೆ ಬೇಡ ಅಂತಿರೋದ್ಯಾಕೆ ಎಂದು ಜೈಲಾಧಿಕಾರಿಗಳು ಪ್ರಶ್ನಿಸಿದ್ದಾರೆ. ಈ ಬಗ್ಗೆ ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ಬಳ್ಳಾರಿ ಜೈಲಾಧಿಕಾರಿಗಳು ತಂದಿದ್ದಾರೆ. ಮುಂದಿನ ಬಾರಿ ಕುಟುಂಬಸ್ಥರು ಬಂದಾಗ ಚಿಕಿತ್ಸೆ ಬಗ್ಗೆ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ. ಆರೋಗ್ಯದ ವಿಚಾರದಲ್ಲಿ ಯಾವುದೇ ಸಮಸ್ಯೆ ಬರದೆ ಎಚ್ಚರ ವಹಿಸಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ನಾಳೆ ನಿರ್ಧಾರವಾಗಲಿದೆ ಆರು ಮಂದಿಯ ಭವಿಷ್ಯ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿ ಆರು ಮಂದಿಯ ಜಾಮೀನು ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ. ಅ.14ರಂದು ಸಿಸಿಹೆಚ್ 57 ಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ಮೂಡಿದೆ. ನಟ ದರ್ಶನ್‌ ಜಾಮೀನು ಭವಿಷ್ಯ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

A2 ನಟ ದರ್ಶನ್, A1 ಪವಿತ್ರಾಗೌಡ, A8 ರವಿಶಂಕರ್, A11 ನಾಗರಾಜ್ ಹಾಗೂ A12 ಲಕ್ಷ್ಮಣ್, A13 ದೀಪಕ್ ಜಾಮೀನು ಭವಿಷ್ಯ ನಿರ್ಧರವಾಗಲಿದೆ. ಈಗಾಗಲೇ ಎಸ್‌ಪಿಪಿ ದೀಪಕ್ ಮತ್ತು ರವಿಶಂಕರ್‌ಗೆ ಜಾಮೀನು ನೀಡಬಹುದು ಎಂದಿದ್ದಾರೆ. ಆದರೆ ದರ್ಶನ್ ಸೇರಿ ನಾಲ್ವರ ಜಾಮೀನಿಗೆ ಎಸ್‌ಪಿಪಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೊಲೆಯಲ್ಲಿ ಭಾಗಿಯಾದ ಸಾಕ್ಷ್ಯಗಳ ಬಗ್ಗೆ ಸಂಪೂರ್ಣ ಉಲ್ಲೇಖಿಸಲಾಗಿದೆ. ದರ್ಶನ್ ಪರವಾಗಿ ವಕಾಲತ್ತು ವಹಿಸಿರುವ ಹಿರಿಯ ವಕೀಲ‌ ಸಿವಿ ನಾಗೇಶ್‌ರಿಂದ ಸಾಕ್ಷ್ಯಗಳೇ ಇಲ್ಲವೆಂಬಂತೆ ವಾದಿಸಿದ್ದಾರೆ. ಪವಿತ್ರಾಗೌಡ ಪರವಾಗಿ ಟಾಮಿ ಸೆಬಾಸ್ಟಿಯನ್ ವಾದಿಸಿದ್ದರು. ಇತ್ತ ಕೋರ್ಟ್ ತೀರ್ಪು, ಅತ್ತ ಜೈಲಲ್ಲಿ ಆರೋಪಿಗಳಿಗೆ ಟೆನ್ಷನ್‌ ಶುರುವಾಗಿದೆ.

Continue Reading
Advertisement
Latest7 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest7 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest8 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ9 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest9 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest10 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest11 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest13 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ14 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest14 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌