Himanta Biswa Sharma: ಶಾರುಖ್‌ ಯಾರು ಎಂದೇ ಗೊತ್ತಿರಲಿಲ್ಲ, ಅವರೇ ಪರಿಚಯ ಮಾಡಿಕೊಂಡರು ಎಂದ ಅಸ್ಸಾಂ ಸಿಎಂ - Vistara News

ದೇಶ

Himanta Biswa Sharma: ಶಾರುಖ್‌ ಯಾರು ಎಂದೇ ಗೊತ್ತಿರಲಿಲ್ಲ, ಅವರೇ ಪರಿಚಯ ಮಾಡಿಕೊಂಡರು ಎಂದ ಅಸ್ಸಾಂ ಸಿಎಂ

ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ (Himanta Biswa Sharma) ಅವರಿಗೆ ಬಾಲಿವುಡ್‌ ನಟ ಶಾರುಖ್‌ ಖಾನ್‌ ಯಾರೆಂದು ತಿಳಿದಿರಲಿಲ್ಲವಂತೆ. ಪಠಾಣ್‌ ಸಿನಿಮಾ ಪ್ರದರ್ಶನ ವಿಚಾರದಲ್ಲಿ ನಟ ಕರೆ ಮಾಡಿದ್ದು, ಅವರ ಪರಿಚಯ ಮಾಡಿಕೊಂಡು ಮಾತನಾಡಿದ್ದಾಗಿ ಹಿಮಂತ್‌ ತಿಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುವಾಹಟಿ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಆದರೆ, ಅಸ್ಸಾಂನ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ (Himanta Biswa Sharma) ಅವರಿಗೆ ಶಾರುಖ್‌ ಯಾರು ಎನ್ನುವುದು ನಿಜಕ್ಕೂ ತಿಳಿದಿರಲಿಲ್ಲವಂತೆ. ಈ ಬಗ್ಗೆ ಅವರೇ ಮಾಹಿತಿ ಕೊಟ್ಟಿದ್ದಾರೆ.

ಇದನ್ನೂ ಓದಿ: Pathaan Movie : ಮುಂಗಡ ಟಿಕೆಟ್‌ಗಳ ಮಾರಾಟದಲ್ಲಿ 20 ಕೋಟಿ ರೂ. ದಾಟಿದ ʻಪಠಾಣ್‌ʼ
ಶಾರುಖ್‌ ಅವರ ʼಪಠಾಣ್‌ʼ ಸಿನಿಮಾದ ʼಬೇಷರಮ್‌ ರಂಗ್‌ʼ ಹಾಡಿನಲ್ಲಿ ನಟಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ತೊಟ್ಟಿದ್ದರ ಬಗ್ಗೆ ಭಾರೀ ವಿವಾದ ಉಂಟಾಗಿತ್ತು. ಪಠಾಣ್‌ ಸಿನಿಮಾವನ್ನೇ ಬಹಿಷ್ಕರಿಸುವುದಾಗಿ ಕೆಲವು ಸಂಘಟನೆಗಳು ಹೇಳಿದ್ದವು. ಈ ಸಿನಿಮಾ ಜ.25 ರಂದು ತೆರೆ ಕಾಣಲಿದ್ದು, ಅಸ್ಸಾಂನಲ್ಲಿ ಸಿನಿಮಾ ಬಿಡುಗಡೆಗೆ ತೊಂದರೆ ಏನಾದರೂ ಇದೆಯೇ ಎನ್ನುವುದರ ಬಗ್ಗೆ ಚರ್ಚಿಸಲು ಶಾರುಖ್‌ ಅವರು ಅಸ್ಸಾಂನ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಅವರಿಗೆ ಕರೆ ಮಾಡಿದ್ದಾರೆ.

ಆದರೆ ಹಿಮಂತ್‌ ಅವರಿಗೆ ಶಾರುಖ್‌ ಯಾರು ಎಂದೇ ತಿಳಿದಿರಲಿಲ್ಲವಂತೆ. ಮೊದಲಿಗೆ ಶಾರುಖ್‌ ತಮ್ಮನ್ನು ತಾವು ಪರಿಚಯ ಮಾಡಿಕೊಂಡು ಮೆಸೇಜ್‌ ಮಾಡಿದ್ದಾರೆ. ಕರೆ ಮಾಡುವುದಕ್ಕೆ ಕೇಳಿದ್ದಾರೆ. ಆದರೆ ಆಗ ಮುಖ್ಯಮಂತ್ರಿಗಳು ಕೆಲಸದಲ್ಲಿದ್ದ ಹಿನ್ನೆಲೆ ಮಧ್ಯರಾತ್ರಿ 2 ಗಂಟೆಗೆ ನಟನೊಂದಿಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: SRK and Deepika Movies: ಇಲ್ಲಿವೆ ಶಾರುಖ್‌ ಖಾನ್‌ – ದೀಪಿಕಾ ಜತೆಯಾಗಿ ನಟಿಸಿರುವ ಚಿತ್ರಗಳು ಮತ್ತು ಅವುಗಳ ಬಜೆಟ್
“ನನಗೆ ನನ್ನ ಕಾಲದ ನಟರು ಗೊತ್ತು. ಆದರೆ, ಶಾರುಖ್‌ ಯಾರೆಂದು ತಿಳಿದಿರಲಿಲ್ಲ. ಅವರೇ ಪರಿಚಯ ಮಾಡಿಕೊಂಡು ಮಾತನಾಡಿದರು. ಇಲ್ಲಿ ಸಿನಿಮಾ ಪ್ರದರ್ಶನಕ್ಕೆ ತೊಂದರೆಯಿದೆಯೇ ಎಂದು ಚರ್ಚಿಸಿದರು. ಇಲ್ಲಿನ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ಜವಾಬ್ದಾರಿ ಪೊಲೀಸ್‌ ಇಲಾಖೆ ಮೇಲಿದೆ. ಹಾಗಾಗಿ ನೀವು ಚಿಂತಿಸದಿರಿ ಎಂದು ನಾನು ಅವರಿಗೆ ತಿಳಿಸಿದ್ದೇನೆ” ಎಂದು ಸಿಎಂ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

ರಾಹುಲ್‌ ಗಾಂಧಿ ಅವರು ಗಂಡಸು ಹೌದೋ, ಅಲ್ಲವೋ ಎಂಬುದನ್ನು ತಿಳಿಯಲು ಬಿಜೆಪಿ ನಾಯಕರು ತಮ್ಮ ತಾಯಿ, ಪುತ್ರಿಯರನ್ನು ಅವರ ಜತೆ ಮಲಗಿಸಬೇಕು ಎಂದು ಗುಜರಾತ್‌ ಕಾಂಗ್ರೆಸ್‌ ನಾಯಕ ಪ್ರತಾಪ್‌ ದುಧನ್‌ ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಇವರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pratap Dudhat
Koo

ಗಾಂಧಿನಗರ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದ ಸೃಷ್ಟಿಸುತ್ತಿವೆ. ಪ್ರತಿಪಕ್ಷ ನಾಯಕರ ವಿರುದ್ಧ ಮಾತನಾಡುವ ಭರದಲ್ಲಿ ಅವಾಚ್ಯ, ಅಶ್ಲೀಲ ಪದಗಳ ಬಳಕೆ, ಏಕವಚನದಲ್ಲಿಯೇ ದಾಳಿ ಮಾಡುವುದು ಸೇರಿ ಹಲವು ರೀತಿಯ ಹೇಳಿಕೆಗಳು ಜನರಲ್ಲಿ ಅಸಹ್ಯ ಮೂಡಿಸಿವೆ. ಇದರ ಬೆನ್ನಲ್ಲೇ, ಗುಜರಾತ್‌ ಕಾಂಗ್ರೆಸ್‌ ನಾಯಕ (Gujarat Congress Leader) ಪ್ರತಾಪ್‌ ದುಧತ್‌ (Pratap Dudhat) ಅವರು ನೀಡಿದ ಹೇಳಿಕೆಯು ಭಾರಿ ವಿವಾದ ಭುಗಿಲೆಬ್ಬಿಸಿದೆ. “ರಾಹುಲ್‌ ಗಾಂಧಿ ಅವರು ಗಂಡಸೋ ಅಥವಾ ನಪುಂಸಕರೋ ಎಂಬುದನ್ನು ತಿಳಿಯಲು, ನಿಮ್ಮ ತಾಯಿ, ಪುತ್ರಿಯರನ್ನು ಅವರ ಜತೆ ಮಲಗಿಸಿ” ಎಂಬುದಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವುದು ಭಾರಿ ಸಂಚಲನ ಮೂಡಿಸಿದೆ.

ಚುನಾವಣಾ ಸಭೆಯೊಂದರಲ್ಲಿ ಮಾತನಾಡಿದ ಪ್ರತಾಪ್‌ ದುಧತ್‌, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು. “ಬಿಜೆಪಿ ನಾಯಕರು ಯಾವಾಗಲೂ ರಾಹುಲ್‌ ಗಾಂಧಿ ಅವರ ಮದುವೆ ಬಗ್ಗೆ ಮಾತನಾಡುತ್ತಾರೆ. ಅಷ್ಟಕ್ಕೂ, ರಾಹುಲ್‌ ಗಾಂಧಿ ಅವರು ಗಂಡಸೋ ಅಥವಾ ನಪುಂಸಕರೋ ಎಂಬುದನ್ನು ತಿಳಿಯಲು ನಿಮ್ಮ ಪುತ್ರಿಯರು, ತಾಯಿಯನ್ನು ಅವರ ಜತೆ ಮಲಗಿಸಿ. ಆಗ ನಿಮಗೆ ರಾಹುಲ್‌ ಗಾಂಧಿ ಗಂಡಸು ಹೌದೋ, ಅಲ್ಲವೋ ಎಂಬುದು ಗೊತ್ತಾಗುತ್ತದೆ” ಎಂದು ಹೇಳಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದ್ದು, ಕಾಂಗ್ರೆಸ್ ನಾಯಕನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಾಪ್‌ ದುಧತ್‌ ಅವರ ವಿಡಿಯೊ ವೈರಲ್‌ ಆಗುತ್ತಲೇ ಜನ ಪ್ರತಿಕ್ರಿಯಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. “ದೇಶದ ಹೆಣ್ಣುಮಕ್ಕಳಿಗೆ ಕಾಂಗ್ರೆಸ್‌ ಕೊಡುವ ಗೌರವ ಹೇಗಿದೆ ನೋಡಿ” ಎಂಬುದಾಗಿ ಒಬ್ಬರು ಟೀಕಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 25 ಕ್ಷೇತ್ರಗಳಲ್ಲೂ ಗೆಲ್ಲಬಾರದು ಎಂದು ತೀರ್ಮಾನಿಸಿದೆ. ಇದೇ ಕಾರಣಕ್ಕಾಗಿ ಆ ಪಕ್ಷದ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮತಗಳನ್ನು ಕೇಳಲು ಬಂದಾಗ ಇಂತಹ ನಾಯಕರಿಗೆ ಹೆಣ್ಣುಮಕ್ಕಳು ಸರಿಯಾಗಿ ಪಾಠ ಕಲಿಸಬೇಕು” ಎಂದು ಇನ್ನೊಬ್ಬರು ಹೇಳಿದ್ದಾರೆ. ಅಷ್ಟೇ ಅಲ್ಲ, “ಈ ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್‌ ದಾಖಲಿಸಬೇಕು”, “ಹೆಣ್ಣುಮಕ್ಕಳ ಬಗ್ಗೆ ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡಿ, ಮಾತಾಡಿಯೇ ಕಾಂಗ್ರೆಸ್‌ ಸೋಲಿಗೆ ಕಾರಣರಾಗಿದ್ದಾರೆ”, “ಕಾಂಗ್ರೆಸ್‌ನಲ್ಲಿ ಟಿಕೆಟ್‌ ಗಿಟ್ಟಿಸಿಕೊಳ್ಳಲು ಹೀಗೆ ಮಾತನಾಡುವುದೇ ಮೊದಲ ಅರ್ಹತೆ ಇರಬೇಕು” ಎಂಬುದು ಸೇರಿ ನೂರಾರು ಜನ ಕಾಂಗ್ರೆಸ್‌ ನಾಯಕನ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ನಾಯಕ ಸುರ್ಜೇವಾಲಾ ಅವರ ವಿವಾದಾತ್ಮಕ ಹೇಳಿಕೆ ಬಳಿಕ ಟಿಎಂಸಿಗೂ ಸಂಕಷ್ಟ

Continue Reading

Lok Sabha Election 2024

Voter Slip: ಮತದಾನಕ್ಕೆ ಇನ್ನೊಂದೇ ದಿನ ಬಾಕಿ; ವೋಟರ್ ಸ್ಲಿಪ್ ಸಿಕ್ಕಿಲ್ಲವೇ? ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಿ

Voter Slip: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆಯಲಿದೆ. ಇನ್ನೂ ಮತದಾರರ ಮಾಹಿತಿ ಸ್ಲಿಪ್ ಸಿಕ್ಕಿಲ್ಲವಾದರೆ ಚಿಂತೆ ಬೇಡ. ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಿ. ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

Voter Slip
Koo

ಬೆಂಗಳೂರು: ಲೋಕಸಭಾ ಚುನಾವಣೆ 2024ರ (Lok Sabha Election 2024) ಪ್ರಯುಕ್ತ ರಾಜ್ಯದಲ್ಲಿ (karnataka) ಇದೇ ತಿಂಗಳ 26ರಂದು ಮೊದಲ ಹಂತದ ಮತದಾನ (voting) ನಡೆಯಲಿದೆ. ಭಾರತೀಯ ಚುನಾವಣಾ ಆಯೋಗ (Election Commission of India) ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ನೋಂದಾಯಿತ ಮತದಾರರಿಗೆ ಮತದಾರರ ಮಾಹಿತಿ ಸ್ಲಿಪ್ (Voter Slip) ಅನ್ನು ಮುದ್ರಿಸಿ ಕಳುಹಿಸುತ್ತಿದೆ.

ಒಂದು ವೇಳೆ ಈ ಸ್ಲಿಪ್ ಸಿಕ್ಕಿಲ್ಲದಿದ್ದರೆ ಚಿಂತೆ ಬೇಡ. ನೀವೇ ಇದನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಅರಿವಿಲ್ಲದವರಿಗೆ ಮತದಾರರ ಚೀಟಿ ಅಥವಾ ವಿಐಎಸ್ ಎನ್ನುವುದು ಇಐಸಿಯಿಂದ ಚುನಾವಣೆಗೆ ಮುಂಚಿತವಾಗಿ ಅಗತ್ಯ ವಿವರಗಳ ಬಗ್ಗೆ ಮತದಾರರಿಗೆ ತಿಳಿಸಲು ನೀಡಿದ ದಾಖಲೆಯಾಗಿದೆ.

ವಿಐಎಸ್ ಎಂದರೆ ಏನು?

ಸ್ಲಿಪ್ ಹೆಸರು, ವಯಸ್ಸು, ಲಿಂಗ, ಅಸೆಂಬ್ಲಿ ಕ್ಷೇತ್ರ ಮತ್ತು ಪ್ರಮುಖವಾಗಿ ಮತಗಟ್ಟೆ ಸ್ಥಳ, ಕೊಠಡಿ ಸಂಖ್ಯೆ, ಮತದಾನದ ದಿನಾಂಕ ಮತ್ತು ಹೆಚ್ಚಿನ ವಿವರಗಳನ್ನು ಇದು ಒಳಗೊಂಡಿರುತ್ತದೆ. ಇದರೊಂದಿಗೆ ಮತದಾರರ ವಿವರಗಳನ್ನು ತ್ವರಿತವಾಗಿ ಪರಿಶೀಲಿಸಲು ಕ್ಯೂಆರ್ ಕೋಡ್ ಅನ್ನು ಸಹ ಇದು ಒಳಗೊಂಡಿದೆ.

ಇದನ್ನೂ ಓದಿ: Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?


ಈವರೆಗೆ ಮತದಾರರ ಮಾಹಿತಿ ಸ್ಲಿಪ್ ಸಿಗದೇ ಇದ್ದರೆ ಮತದಾನದ ದಿನಾಂಕದ ಮೊದಲು ಅದನ್ನು ಖಂಡಿತಾ ಸ್ವೀಕರಿಸುತ್ತೀರಿ. ಇಲ್ಲವಾದರೆ ಚುನಾವಣಾ ಆಯೋಗದ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮತ್ತು ಅಧಿಕೃತ ವೆಬ್‌ಸೈಟ್ ನಿಂದ ತಕ್ಷಣವೇ ಅದನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಫೋನ್‌ನಲ್ಲಿ ಪಡೆಯುವುದು ಹೇಗೆ?

ಫೋನ್‌ನಲ್ಲಿ ಮತದಾರರ ಮಾಹಿತಿ ಸ್ಲಿಪ್ ಅಥವಾ ವಿಐಎಸ್ ಅನ್ನು ಹೇಗೆ ಡೌನ್‌ಲೋಡ್ ಮಾಡುವುದು ಎಂಬುದರ ಕುರಿತು ಹಂತ-ಹಂತದ ಮಾಹಿತಿ ಇಲ್ಲಿದೆ.

– ಮೊಬೈಲ್ ಅಪ್ಲಿಕೇಶನ್ ಬಳಸಿ ಮತದಾರರ ಮಾಹಿತಿ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಇದಕ್ಕಾಗಿ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ ತೆರೆದು ಮತದಾರರ ಸಹಾಯವಾಣಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.

– ಡೌನ್‌ಲೋಡ್ “E-EPIC” ಆಯ್ಕೆಯನ್ನು ಟ್ಯಾಪ್ ಮಾಡಿ. ನೋಂದಾಯಿತ ಫೋನ್ ಸಂಖ್ಯೆ, ಪಾಸ್‌ವರ್ಡ್ ಮತ್ತು ಒಟಿಪಿ ಬಳಸಿ ಲಾಗಿನ್ ಮಾಡಿ. ಈಗಾಗಲೇ ನೋಂದಾಯಿಸದಿದ್ದರೆ ಮತದಾರ ಐಡಿ ಕಾರ್ಡ್‌ನಲ್ಲಿ ಇರುವ ಎಪಿಕ್ ಸಂಖ್ಯೆಯನ್ನು ನಮೂದಿಸಿ. ಪರ್ಯಾಯವಾಗಿ ಅಪ್ಲಿಕೇಶನ್ ಉಲ್ಲೇಖ ಸಂಖ್ಯೆಯನ್ನು ಬಳಸಿಕೊಂಡು ಮತದಾರರ ಮಾಹಿತಿ ಸ್ಲಿಪ್ ಅನ್ನು ನೋಡಬಹುದು.

– ಇದರ ಅನಂತರ ನಿಮ್ಮ ವೋಟರ್ ಸ್ಲಿಪ್ ವಿವರಗಳನ್ನು ಕಾಣಬಹುದು. ಅದರ ಮೇಲೆ ಟ್ಯಾಪ್ ಮಾಡಿ ಮತ್ತು ವಿಐಸಿ ಡಾಕ್ಯುಮೆಂಟ್ ತೆರೆಯಲು ಒಟಿಪಿಯನ್ನು ಮತ್ತೆ ನಮೂದಿಸಿ. ಬಳಿಕ ಇದನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.

ವೆಬ್‌ಸೈಟ್ ನಲ್ಲಿ ಹೇಗೆ?

https://voters.eci.gov.in/ ತೆರೆದು ಫೋನ್ ನಂಬರ್, ಪಾಸ್‌ವರ್ಡ್ ಮತ್ತು ಒಟಿಪಿ ಬಳಸಿ ಲಾಗಿನ್ ಮಾಡಿ. ವೆಬ್‌ಸೈಟ್‌ಗೆ ಹೊಸಬರಾಗಿದ್ದರೆ ಮೊದಲು ನೊಂದಾಯಿಸಿಕೊಳ್ಳಿ.

ಡೌನ್‌ಲೋಡ್ E-EPIC ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ಬಳಿಕ ಮತದಾರರ ಗುರುತಿನ ಚೀಟಿಯಲ್ಲಿರುವ EPIC ಸಂಖ್ಯೆಯನ್ನು ನಮೂದಿಸಿ.

ಒಮ್ಮೆ ಇದನ್ನು ಮಾಡಿದ ಅನಂತರ, ವಿಐಸಿ ಜೊತೆಗೆ E-EPIC ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಒಮ್ಮೆ E-EPIC ಅನ್ನು ಹೊಂದಿದ್ದರೆ ಸಂಪೂರ್ಣ ಪುಟವನ್ನು ಅಥವಾ ವಿಐಸಿ ಪುಟವನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ. ಮತ ಚಲಾಯಿಸಲು ಇದನ್ನು ನಿಮ್ಮೊಂದಿಗೆ ಮತಗಟ್ಟೆಗೆ ಕೊಂಡೊಯ್ಯಬಹುದಾಗಿದೆ.

Continue Reading

Lok Sabha Election 2024

Lok Sabha Election 2024: ಚುನಾವಣಾ ಕಣಕ್ಕೆ ಧುಮುಕಿದ ಖಲಿಸ್ತಾನಿ ನಾಯಕ ಅಮೃತ್​ಪಾಲ್​ ಸಿಂಗ್‌; ಯಾವ ಕ್ಷೇತ್ರ?

Lok Sabha Election 2024: ಪ್ರಮುಖ ಬೆಳವಣಿಗೆಯೊಂದರಲ್ಲಿ ಜೈಲಿನಲ್ಲಿರುವ ಖಲಿಸ್ತಾನಿ ಪರ ಬೋಧಕ ಅಮೃತ್‌ಪಾಲ್‌ ಸಿಂಗ್ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾನೆ. ಈ ಬಗ್ಗೆ ಆತನ ಕಾನೂನು ಸಲಹೆಗಾರ ರಾಜ್‌ದೇವ್‌ ಸಿಂಗ್ ಖಾಲ್ಸಾ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಅಮೃತ್‌ಪಾಲ್‌ ಸಿಂಗ್ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿದ್ದಾನೆ.

VISTARANEWS.COM


on

Lok Sabha Election 2024
Koo

ಚಂಡಿಗಢ: ಪ್ರಮುಖ ಬೆಳವಣಿಗೆಯೊಂದರಲ್ಲಿ ಜೈಲಿನಲ್ಲಿರುವ ಖಲಿಸ್ತಾನಿ ಪರ ಬೋಧಕ (Pro-Khalistani preacher) ಅಮೃತ್‌ಪಾಲ್‌ ಸಿಂಗ್ (Amritpal Singh) ಲೋಕಸಭಾ ಚುನಾವಣೆ (Lok Sabha Election 2024)ಯಲ್ಲಿ ಪಂಜಾಬ್‌ನ ಖದೂರ್ ಸಾಹಿಬ್ (Khadoor Sahib) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾನೆ ಎಂದು ಆತನ ಕಾನೂನು ಸಲಹೆಗಾರ ಬುಧವಾರ ತಿಳಿಸಿದ್ದಾರೆ.

ʼʼಅಮೃತ್‌ಪಾಲ್‌ ಸಿಂಗ್ ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ನಾನು ಇಂದು ದಿಬ್ರುಗಢದಲ್ಲಿ ಅಮೃತಪಾಲ್ ಸಿಂಗ್‌ನನ್ನು ಭೇಟಿಯಾದೆ. ಖದೂರ್ ಸಾಹಿಬ್‌ನಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ಅವರು ಖಚಿತಪಡಿಸಿದ್ದಾರೆ” ಎಂದು ಕಾನೂನು ಸಲಹೆಗಾರ ರಾಜ್‌ದೇವ್‌ ಸಿಂಗ್ ಖಾಲ್ಸಾ ಹೇಳಿದ್ದಾರೆ. ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತ್‌ಪಾಲ್‌ ಸಿಂಗ್ ಪ್ರಸ್ತುತ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿದ್ದಾನೆ. ಮೂಲಗಳ ಪ್ರಕಾರ, ಮುಖ್ಯವಾಹಿನಿಯ ಪಕ್ಷವೊಂದು ಅಮೃತಪಾಲ್ ಸಿಂಗ್‌ಗೆ ಬಾಹ್ಯ ಬೆಂಬಲ ನೀಡುವ ಸಾಧ್ಯತೆ ಇದೆ.

ಅಮೃತ್‌ಪಾಲ್‌ ಸಿಂಗ್‌ನ ಹಿನ್ನೆಲೆ

ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಆರು ತಿಂಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ ಸಂದರ್ಭದಲ್ಲಿ. ಈ ಸಂಘಟನೆಯನ್ನು ಸ್ಥಾಪಿಸಿದವನು ನಟ, ಚಳವಳಿಗಾರ ದೀಪ್‌ ಸಿಧು. ಇವನು 2022ರ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇವನನ್ನು ಸರ್ಕಾರ ಸಾಯಿಸಿದೆ ಎಂದು ಅಮೃತ್‌ಪಾಲ್‌ ಮತ್ತು ಬೆಂಬಲಿಗರು ಆರೋಪಿಸುತ್ತ ಬಂದಿದ್ದಾರೆ.

ಅಮೃತ್‌ಪಾಲ್‌ ಯಾವತ್ತೂ ಸಿಧುವನ್ನು ಭೇಟಿ ಮಾಡಿದವನೇ ಅಲ್ಲ. ಆದರೆ ಆನ್‌ಲೈನ್‌ನಲ್ಲಿ ತನ್ನನ್ನು ಅತ್ಯಂತ ಪ್ರಭಾವಿಸಿದ್ದ ಎಂದು ಹೇಳಿಕೊಳ್ಳುತ್ತಾನೆ. ಸಿಧುವಿನ ಸಾವಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಿಧುವಿನ ಸಲಹೆಯಂತೆ ತಾನು ಗಡ್ಡ ಟ್ರಿಮ್‌ ಮಾಡಿಕೊಳ್ಳುವುದು ಬಿಟ್ಟಿರುವುದಾಗಿ ಹೇಳಿದ್ದ.

2022ರ ಸೆಪ್ಟೆಂಬರ್‌ 25ರಂದು ಆನಂದ್‌ಪುರ ಸಾಹಿಬ್‌ನಲ್ಲಿ ನಡೆದ ಸಿಖ್‌ ಧರ್ಮದ ಸಾಂಪ್ರದಾಯಿಕ ಬ್ಯಾಪ್ಟಿಸಂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮೃತ್‌ಪಾಲ್‌, ʼಅಮೃತಧಾರಿ ಸಿಖ್‌ʼ ಎನಿಸಿದ. ಈ ಕಾರ್ಯಕ್ರಮಕ್ಕೆ ಹರಿದುಬಂದ ಜನಸಾಗರ ನೋಡಿ ಪಂಜಾಬ್‌ ಅವಾಕ್ಕಾಯಿತು. ಇದಾದ ನಾಲ್ಕು ದಿನಗಳ ನಂತರ ಸೆ. 29ರಂದು ʼದಸ್ತರ್‌ ಬಂದಿʼ ಕಾರ್ಯಕ್ರಮ ನಡೆಯಿತು. ಇದಕ್ಕೂ ದಾಖಲೆ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ಇದು ನಡೆದುದು ರೋಡೆ ಗ್ರಾಮದಲ್ಲಿ. ಅದು ಖಲಿಸ್ತಾನ್‌ ಚಳವಳಿಯ ರಾಕ್ಷಸ ಭಯೋತ್ಪಾದಕನಾಗಿದ್ದ ಜರ್ನೈಲ್‌ ಸಿಂಗ್‌ ಭಿಂದ್ರಾನ್‌ವಾಲೆಯ ಜನ್ಮಸ್ಥಳ.

ಇದನ್ನೂ ಓದಿ: ವಿಸ್ತಾರ Explainer: ಯಾರು ಈ ಖಲಿಸ್ತಾನಿ, ಪ್ರತ್ಯೇಕತಾವಾದಿ ನಾಯಕ ಅಮೃತ್​ಪಾಲ್​ ಸಿಂಗ್‌?

ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದಾನೆ. ಹಿಂದು ರಾಷ್ಟ್ರ ವಾದ ಸರಿ ಎಂದಾದರೆ ಖಲಿಸ್ತಾನ್‌ ಯಾಕೆ ತಪ್ಪು ಎಂದು ಪ್ರಶ್ನಿಸುತ್ತಾನೆ. ಇವನು ಪಾರಂಪರಿಕ ಧಾರ್ಮಿಕ ತರಬೇತಿ ಪಡೆದು ಮುಖ್ಯಸ್ಥನಾಗಿಲ್ಲ. ರಾಜಕೀಯ ವಿಚಾರದಿಂದ ಆರಂಭಿಸಿ ಮತೀಯ ಗುರು ಎನಿಸಿಕೊಂಡವನು. ಧಾರ್ಮಿಕ ವಿಷಯಗಳನ್ನು ಉಲ್ಲೇಖಿಸುವಾಗ ಈತನ ತಿಳಿವಳಿಕೆಯ ಪೊಳ್ಳುತನ ಎದ್ದು ಕಾಣಿಸುತ್ತದೆ. ಆದರೂ ಈತನ ಕಠೋರ ರಾಜಕೀಯ ನಿಲುವುಗಳಿಂದಾಗಿ ಅಭಿಮಾನಿಗಳು ಈತನನ್ನು ಸುತ್ತುವರಿಯುತ್ತಾರೆ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ. 

Continue Reading

ದೇಶ

Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Kotak Mahindra Bank: ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ಶಾಕ್‌ ಕೊಟ್ಟಿದೆ. ಹೊಸ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಣೆ, ಮೊಬೈಲ್‌ ಬ್ಯಾಂಕಿಂಗ್ ಹಾಗೂ ಆನ್‌ಲೈನ್‌ ಸೇವೆಗಳನ್ನು ನೀಡುವುದಕ್ಕೆ ಆರ್‌ಬಿಐ ನಿರ್ಬಂಧ ವಿಧಿಸಿದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇಂತಹ ಕ್ರಮ ತೆಗೆದುಕೊಳ್ಳಲಾಗಿದ್ದು, ಇದರಿಂದ ಬ್ಯಾಂಕ್‌ಗೆ ಭಾರಿ ನಷ್ಟವಾಗಲಿದೆ ಎಂದು ತಿಳಿದುಬಂದಿದೆ.

VISTARANEWS.COM


on

Kotak Mahindra Bank
Koo

ಮುಂಬೈ: ನಿಯಮಗಳ ಪಾಲನೆಯ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ಗೆ (Paytm Payments Bank) ಹಲವು ನಿರ್ಬಂಧ ವಿಧಿಸಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಈಗ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Mahindra Bank) ಕೂಡ ಹಲವು ನಿರ್ಬಂಧ ವಿಧಿಸಿದೆ. ಅದರಲ್ಲೂ, ಹೊಸ ಗ್ರಾಹಕರಿಗೆ ನೂತನ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸುವುದು ಪ್ರಮುಖ ನಿರ್ಬಂಧವಾಗಿದೆ. ಇದರಿಂದ ಬ್ಯಾಂಕ್‌ಗೆ ಹೊಸ ಗ್ರಾಹಕರನ್ನು ಸೆಳೆಯಲು ಕಷ್ಟವಾಗಲಿದೆ ಎಂದು ತಿಳಿದುಬಂದಿದೆ.

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಆರ್‌ಬಿಐ ನಿಷೇಧಕ್ಕೆ ಕಾರಣವೇನು?

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಹಳೆಯ ಗ್ರಾಹಕರಿಗೆ ತೊಂದರೆ ಇದೆಯೇ?

ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈಗಾಗಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್ ಕ್ರೆಡಿಟ್‌ ಕಾರ್ಡ್‌ ಹೊಂದಿರುವವರು, ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕ್‌ ಸೌಲಭ್ಯ ಹೊಂದಿರುವವರು ಸೇವೆಗಳನ್ನು ಪಡೆಯಬಹುದಾಗಿದೆ. ಹಾಗಾಗಿ, ಹಳೆಯ ಗ್ರಾಹಕರಿಗೆ ಆರ್‌ಬಿಐ ಆದೇಶದಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಿಳಿದುಂದಿದೆ.

ಇದನ್ನೂ ಓದಿ: Paytm Layoffs: ಪೇಟಿಎಂನಲ್ಲಿ ಉದ್ಯೋಗ ಕಡಿತದ ಭೀತಿ; ಎಷ್ಟು ಮಂದಿಗೆ ಗೇಟ್‌ಪಾಸ್‌?

Continue Reading
Advertisement
Neha Murder Case
ಕರ್ನಾಟಕ17 mins ago

Neha Murder Case: ಹುಬ್ಬಳ್ಳಿಯಲ್ಲಿ ಸಿಐಡಿ ಸ್ಥಳ ಮಹಜರು; ಫಯಾಜ್‌ನ ಗಲ್ಲಿಗೇರಿಸಲು ಎಬಿವಿಪಿ ಕಾರ್ಯಕರ್ತರ ಆಗ್ರಹ

IPL 2024
ಕ್ರೀಡೆ18 mins ago

IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

Pratap Dudhat
ದೇಶ28 mins ago

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

Lok Sabha Election 2024 Munirathna stops Darshan from campaigning for DK Suresh
Lok Sabha Election 202438 mins ago

Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

Money Guide
ಮನಿ-ಗೈಡ್1 hour ago

Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Karnataka Weather
ಕರ್ನಾಟಕ1 hour ago

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Lok Sabha Election 2024 Vote on April 26 and get 10 percent discount on these hotels
Lok Sabha Election 20241 hour ago

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Actress Saree Fashion
ಫ್ಯಾಷನ್2 hours ago

Actress Saree Fashion: ಟ್ರೆಂಡಿ ಸನ್‌ ಶೇಡ್‌ ಸೀರೆಯಲ್ಲಿ ನಟಿ ತೇಜಸ್ವಿನಿ ಶರ್ಮಾ ಸಮ್ಮರ್‌ ಲುಕ್‌

Sachin Tendulkar Birthday
ಕ್ರೀಡೆ2 hours ago

Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

Condemns Neha murder case Gangavathi bandh
ಕೊಪ್ಪಳ2 hours ago

Neha Murder Case: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್; ಉತ್ತಮ ಪ್ರತಿಕ್ರಿಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌