Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು? - Vistara News

ದೇಶ

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Horlicks Label: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಾರ್ಲಿಕ್ಸ್‌ ಸೇರಿ ಹಲವು ಮಾಲ್ಟ್‌ ಆಧಾರಿತ ಪಾನೀಯಗಳ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಎಂಬ ಲೇಬಲ್‌ ತೆಗೆದುಹಾಕಲಾಗಿದೆ. ಇನ್ನು ಇವು ಕ್ರಿಯಾತ್ಮಕ ಪೌಷ್ಟಿಕ ಪಾನೀಯ ಎನಿಸಿಕೊಳ್ಳಲಿವೆ. ಇದರಿಂದ ಜನರ ದಾರಿ ತಪ್ಪಿಸುವ ಜಾಹೀರಾತು, ಗ್ರಾಹಕರ ಗೊಂದಲ ನಿವಾರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Horlicks Label
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದಲ್ಲಿ ಹಾರ್ಲಿಕ್ಸ್‌ ಕುಡಿಯದವರೇ ಇರಲಿಕ್ಕಿಲ್ಲ. ಚಿಕ್ಕ ಮಕ್ಕಳಿಂದ ಹಿಡಿದು, ದೊಡ್ಡವರವರೆಗೆ ಕುಡಿಯುತ್ತಾರೆ. ಅದರಲ್ಲೂ, ಯಾರು ಬಾಲ್ಯದಲ್ಲಿ ಹಾರ್ಲಿಕ್ಸ್‌ ಕುಡಿದಿಲ್ಲವೋ, ಅಷ್ಟರಮಟ್ಟಿಗೆ ಅವರ ಬಾಲ್ಯ ‘ಸಪ್ಪೆ’ ಎಂದೇ ಹೇಳಲಾಗುತ್ತಿದೆ. ಇಂತಹ ನೆನಪುಗಳ ಹಿನ್ನೆಲೆ ಹೊಂದಿರುವ ಹಾರ್ಲಿಕ್ಸ್‌ ಬಾಟಲಿ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ (Health Food Drinks) ಎಂಬ ಲೇಬಲ್‌ಅನ್ನು (Horlicks Label) ಹಿಂದುಸ್ತಾನ್‌ ಯುನಿಲಿವರ್‌ (HUL) ತೆಗೆದುಹಾಕಿದೆ. ಇತ್ತೀಚಿನ ನಿಯಮಗಳ ಬದಲಾವಣೆ ಭಾಗವಾಗಿ ಲೇಬಲ್‌ಅನ್ನು ತೆಗೆದುಹಾಕಿದೆ ಎಂದು ಹೇಳಲಾಗುತ್ತಿದೆ.

ಹಾರ್ಲಿಕ್ಸ್‌ ಬಾಟಲಿ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಲೇಬೆಲ್‌ ತೆಗೆದುಹಾಕಲಾಗಿದ್ದು, ಈಗ ಹಾರ್ಲಿಕ್ಸ್‌ ಸೇರಿ ಹಲವು ರೀತಿಯ ಪಾನೀಯಗಳನ್ನು ಕ್ರಿಯಾತ್ಮಕ ಪೌಷ್ಟಿಕ ಪಾನೀಯ (Functional Nutritional Drinks) ಎಂಬ ಹೊಸ ಕೆಟಗರಿಗೆ ಸೇರಿಸಲಾಗಿದೆ. ಪಾನೀಯಗಳನ್ನು ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಕೆಟಗರಿಯಿಂದ ತೆಗೆದು, ಕ್ರಿಯಾತ್ಮಕ ಪೌಷ್ಟಿಕ ಪಾನೀಯಗಳ ಪಟ್ಟಿಗೆ ಸೇರಿಸಬೇಕು. ವೆಬ್‌ಸೈಟ್‌ ಸೇರಿ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲೂ ಇದನ್ನೇ ನಮೂದಿಸಬೇಕು ಎಂಬುದಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಿಂದುಸ್ತಾನ್‌ ಯುನಿಲಿವರ್‌ ಈ ಕ್ರಮ ತೆಗೆದುಕೊಂಡಿದೆ.

“ಸಚಿವಾಲಯದ ಸೂಚನೆಯಂತೆ ನಾವು ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಕೆಟಗರಿಯನ್ನು ಕ್ರಿಯಾತ್ಮಕ ಪೌಷ್ಟಿಕ ಪಾನೀಯ ಎಂಬುದಾಗಿ ಬದಲಾಯಿಸಿದ್ದೇವೆ. ಈ ಹೆಸರಿನಿಂದಲೇ ಕರೆಯುವುದು ಸಮಂಜಸ ಎಂಬ ನಿರ್ಧಾರಕ್ಕೆ ಬರಲಾಗಿದೆ. ಹಾಗೆಯೇ, ಹೊಸ ಹೆಸರು ಪಾರ್ದರ್ಶಕವಾಗಿಯೂ ಇದೆ. ಹಾಗಾಗಿ, ಹೊಸ ಹೆಸರನ್ನು ಇಡಲಾಗಿದೆ” ಎಂದು ಹಿಂದುಸ್ತಾನ್‌ ಯುನಿಲಿವರ್‌ನ ಚೀಫ್‌ ಫೈನಾನ್ಶಿಯಲ್‌ ಆಫೀಸರ್‌ ರಿತೇಶ್‌ ತಿವಾರಿ ಮಾಹಿತಿ ನೀಡಿದ್ದಾರೆ. ಇದರಿಂದ ದಾರಿತಪ್ಪಿಸುವ ಜಾಹೀರಾತುಗಳ ತಡೆಯಾಗುವುದರ ಜತೆಗೆ ಗ್ರಾಹಕರಿಗೂ ಗೊಂದಲ ಇರುವುದಿಲ್ಲ ಎಂಬುದು ಸಚಿವಾಲಯದ ಚಿಂತನೆಯಾಗಿದೆ ಎಂದು ತಿಳಿದುಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಕಾಯ್ದೆ ಅಡಿಯಲ್ಲಿ ಹೆಲ್ತ್‌ ಡ್ರಿಂಕ್ಸ್‌ ಎಂಬ ಪದಕ್ಕೆ ಸರಿಯಾದ ವ್ಯಾಖ್ಯಾನ ಸಿಗದ ಕಾರಣ ಹೊಸ ಹೆಸರು ಸೂಚಿಸಲಾಗಿದೆ. ಇದೇ ಕಾರಣಕ್ಕಾಗಿ ಇತ್ತೀಚೆಗೆ ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು (FSSAI) ಇತ್ತೀಚೆಗೆ ಎಲ್ಲ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳಿಗೆ ಹೆಲ್ತ್‌ ಡ್ರಿಂಕ್ಸ್‌ ಅಥವಾ ಎನರ್ಜಿ ಡ್ರಿಂಕ್ಸ್‌ ಎಂಬ ಕೆಟಗರಿಯನ್ನು ತೆಗೆದುಹಾಕಬೇಕು ಎಂದು ಸೂಚಿಸಿತ್ತು. ಡೇರಿ, ಸಿರೀಲ್‌ ಅಥವಾ ಮಾಲ್ಟ್‌ ಆಧಾರಿತ ಪಾನೀಯಗಳ ಮೇಲಿನ ಲೇಬೆಲ್‌ ತೆಗೆದುಹಾಕಲು ಸೂಚಿಸಿತ್ತು. ಅದರಂತೆ, ಕೆಟಗರಿಯನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂತಹದ್ದೊಂದು ಕ್ರಮ ತೆಗೆದುಕೊಂಡಿದೆ.

VISTARANEWS.COM


on

Indian Army
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನಡುತ್ತಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) (ಜುಲೈ 26) ಎಚ್ಚರಿಕೆ ನೀಡಿದ್ದಾರೆ. ಇನ್ನು, ಜಮ್ಮು-ಕಾಶ್ಮೀರ ಗಡಿಯಲ್ಲಿ ಇತ್ತೀಚೆಗೆ ಉಗ್ರರ ದಾಳಿ ಜಾಸ್ತಿಯಾಗಿದ್ದು, ಸೈನಿಕರು, ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಜಮ್ಮು-ಕಾಶ್ಮೀರ (Jammu Kashmir Border) ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಸೈನಿಕರನ್ನು ನಿಯೋಜಿಸಲು ಕೇಂದ್ರ ಸರ್ಕಾರ (Central Government) ಆದೇಶ ನೀಡಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಪಾಕ್‌ನಿಂದಲೂ ಹೆಚ್ಚುವರಿ ಸೈನಿಕರ ನಿಯೋಜನೆ

ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ವಾಣಿಜ್ಯ

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

ಭಾರತ ಮತ್ತು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಮುಕೇಶ್ ಅಂಬಾನಿ (Mukesh Ambani) ಫೋರ್ಬ್ಸ್ ನಿಯತಕಾಲಿಕೆಯಿಂದ ವಿಶ್ವದ ಅಗ್ರ 10 ಶ್ರೀಮಂತ ವ್ಯಕ್ತಿಗಳಲ್ಲಿ ಸತತವಾಗಿ ಸ್ಥಾನ ಪಡೆಯುತ್ತಿದ್ದಾರೆ. ಅವರ ಸಂಪತ್ತಿನ ನಿವ್ವಳ ಮೌಲ್ಯ 80.7 ಬಿಲಿಯನ್ ಡಾಲರ್, ಅಂದರೆ 7.65 ಲಕ್ಷ ಕೋಟಿ ರೂಪಾಯಿಗಳಾಗಿದೆ. ಅವರ ವೃತ್ತಿ ಜೀವನ, ಸಂಪತ್ತಿನ ಬಗ್ಗೆ ಇನ್ನಷ್ಟು ಕೂತಹಲಕಾರಿ ಸಂಗತಿಗಳು ಇಲ್ಲಿವೆ.

VISTARANEWS.COM


on

By

Mukesh Ambani
Koo

ಇತ್ತೀಚೆಗೆ ಪುತ್ರ ಅನಂತ್ ಅಂಬಾನಿಯ ಮದುವೆಯನ್ನು (anant ambani wedding) ಅದ್ಧೂರಿಯಾಗಿ ನಡೆಸಿ ವಿಶ್ವದ ಗಮನ ಸೆಳೆದ ಭಾರತದ ಅತ್ಯಂತ ಶ್ರೀಮಂತ ಉದ್ಯಮಿ (India’s richest businessman) ಮುಕೇಶ್ ಅಂಬಾನಿ (Mukesh Ambani) ಅವರ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಬೇಕು ಎನ್ನುವ ಕುತೂಹಲ ಎಲ್ಲರಲ್ಲೂ ಹೆಚ್ಚಾಗಿದೆ. ಅದರಲ್ಲೂ ಮುಖ್ಯವಾಗಿ ಅವರ ಆದಾಯ, ಸಂಪತ್ತು, ಯಾವ ರೀತಿಯ ಜೀವನ ನಡೆಸುತ್ತಿದ್ದಾರೆ ಎಂಬುದು ಎಲ್ಲರ ಗಮನ ಸೆಳೆಯುತ್ತಿದೆ.

ಭಾರತೀಯ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮತ್ತು ಅತಿದೊಡ್ಡ ಷೇರುದಾರರಾಗಿರುವ ಮುಖೇಶ್ ಅಂಬಾನಿ ಪೆಟ್ರೋಕೆಮಿಕಲ್ಸ್, ರಿಫೈನಿಂಗ್, ತೈಲ ಮತ್ತು ಅನಿಲ ಪರಿಶೋಧನೆಯಂತಹ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿರುವ ಅವರ ನಿವ್ವಳ ಸಂಪತ್ತಿನ ಮೌಲ್ಯ 80.7 ಬಿಲಿಯನ್ ಡಾಲರ್ ಅಂದರೆ 7.65 ಲಕ್ಷ ಕೋಟಿ ರೂಪಾಯಿ.

ಭಾರತ ಮತ್ತು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಅವರು ಫೋರ್ಬ್ಸ್ ನಿಯತಕಾಲಿಕೆಯಿಂದ ವಿಶ್ವದ ಅಗ್ರ 10 ಶ್ರೀಮಂತ ವ್ಯಕ್ತಿಗಳಲ್ಲಿ ಸತತವಾಗಿ ಸ್ಥಾನ ಪಡೆಯುತ್ತಿದ್ದಾರೆ. 1957ರ ಏಪ್ರಿಲ್ 19ರಂದು ಜನಿಸಿರುವ ಮುಖೇಶ್ ಅಂಬಾನಿ ಅವರ ವಯಸ್ಸು 65, ಅವರ ಸಂಬಳ 15 ಕೋಟಿ ರೂ. ಗಳಾಗಿದ್ದು, ದೈನಂದಿನ ಆದಾಯ 163 ಕೋಟಿ ರೂ. ಗಳಾಗಿದೆ.


ಆರಂಭಿಕ ವೃತ್ತಿಜೀವನ

ಮುಖೇಶ್ ಅಂಬಾನಿ ಪ್ರಸ್ತುತ ಭಾರತದ ಅತಿದೊಡ್ಡ ಮತ್ತು ವೈವಿಧ್ಯಮಯ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಅಧ್ಯಕ್ಷರು ಮತ್ತು ಅತಿದೊಡ್ಡ ಷೇರುದಾರರಾಗಿದ್ದಾರೆ. ಅಂಬಾನಿ 1981 ರಲ್ಲಿ ಆರ್‌ಐಎಲ್‌ಗೆ ಸೇರಿದರು. ಕಂಪೆನಿಯ ತ್ವರಿತ ಬೆಳವಣಿಗೆ ಮತ್ತು ವಿಸ್ತರಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಆರ್‌ಐಎಲ್ ಮುಕೇಶ್ ಅಂಬಾನಿ ನಾಯಕತ್ವದಲ್ಲಿ ಪೆಟ್ರೋಕೆಮಿಕಲ್ಸ್, ರಿಫೈನಿಂಗ್, ತೈಲ ಮತ್ತು ಅನಿಲ ಪರಿಶೋಧನೆ, ಜವಳಿ, ಚಿಲ್ಲರೆ ವ್ಯಾಪಾರ ಮತ್ತು ದೂರಸಂಪರ್ಕ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸುತ್ತಿದೆ. ಅಂಬಾನಿ ತನ್ನ ಅಂಗಸಂಸ್ಥೆಯಾದ ರಿಲಯನ್ಸ್ ರಿಟೇಲ್ ಮೂಲಕ ಭಾರತದ ಚಿಲ್ಲರೆ ಮಾರುಕಟ್ಟೆಗೆ ಕಂಪೆನಿಯು ಯಶಸ್ವಿಯಾಗಿ ಪ್ರವೇಶಿಸುವಂತೆ ಮಾಡಿದ್ದಾರೆ. ಇದು ಭಾರತದಲ್ಲಿನ ಅತಿದೊಡ್ಡ ಚಿಲ್ಲರೆ ಸರಪಳಿಗಳಲ್ಲಿ ಒಂದಾಗಿದೆ.

2010ರಲ್ಲಿ ರಿಲಯನ್ಸ್ ಜಿಯೋವನ್ನು ಪ್ರಾರಂಭಿಸುವುದರೊಂದಿಗೆ ಅಂಬಾನಿ ಭಾರತೀಯ ದೂರಸಂಪರ್ಕ ವಲಯಕ್ಕೆ ಕಂಪೆನಿಯನ್ನು ಮುನ್ನಡೆಸಿದರು. ಇದು ಉದ್ಯಮವನ್ನು ಅಭಿವೃದ್ಧಿ ಪಡಿಸಿದ್ದು, ದೇಶವನ್ನು ಡೇಟಾ-ಚಾಲಿತ ಸಮಾಜವಾಗಿ ಪರಿವರ್ತಿಸಿತು. 400 ಮಿಲಿಯನ್ ಚಂದಾದಾರರನ್ನು ಹೊಂದಿರುವ ಜಿಯೋ ಭಾರತದಲ್ಲಿ ಅತಿದೊಡ್ಡ ಮೊಬೈಲ್ ನೆಟ್‌ವರ್ಕ್ ಆಪರೇಟರ್ ಆಗಿದೆ.

ಅಂಬಾನಿಯವರ ವ್ಯವಹಾರ ಕುಶಾಗ್ರಮತಿ ಮತ್ತು ನಾಯಕತ್ವದ ಕೌಶಲಗಳು ಅವರನ್ನು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರನ್ನಾಗಿ ಮಾಡಿದೆ. ಜಾಗತಿಕ ವ್ಯಾಪಾರ ಸಮುದಾಯದಲ್ಲಿ ಪ್ರಮುಖ ವ್ಯಕ್ತಿಯಾಗುವಂತೆ ಮಾಡಿದೆ. ಅವರು ಭಾರತೀಯ ವ್ಯಾಪಾರ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಗಾಗಿ ಹಲವಾರು ಪ್ರಶಸ್ತಿಗಳು ಮತ್ತು ಮನ್ನಣೆಯನ್ನು ಪಡೆದಿದ್ದಾರೆ.

ನಿವ್ವಳ ಮೌಲ್ಯ 2024

2022ರಲ್ಲಿ ಉದ್ಯಮಿ ಮತ್ತು ಬಿಲಿಯನೇರ್ ಗೌತಮ್ ಅದಾನಿ ಇವರನ್ನು ನಂಬರ್‌ 1 ಪಟ್ಟದಿಂದ ಕೆಳಗಿಳಿಸುವವರೆಗೂ ಮುಖೇಶ್ ಅಂಬಾನಿ ನಿರಂತರವಾಗಿ ಭಾರತದ ಶ್ರೀಮಂತ ವ್ಯಕ್ತಿಯಾಗಿದ್ದರು. ಆದರೆ ಹಿಂಡೆನ್‌ಬರ್ಗ್ ರಿಸರ್ಚ್‌ನಿಂದ ಅದಾನಿ ಗುಂಪಿನ ವಿರುದ್ಧ ಇತ್ತೀಚಿನ ಆರೋಪಗಳಿಂದಾಗಿ ಅಂಬಾನಿ ಮತ್ತೊಮ್ಮೆ ಶ್ರೀಮಂತ ಎಂಬ ಬಿರುದನ್ನು ಗಳಿಸಿದ್ದಾರೆ.

ಗಳಿಕೆಯ ಆಸ್ತಿ ಎಷ್ಟು?

ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷರಾಗಿ ಮತ್ತು ಅತಿದೊಡ್ಡ ಷೇರುದಾರರಾಗಿ ಮುಖೇಶ್ ಅಂಬಾನಿ ಪೆಟ್ರೋಕೆಮಿಕಲ್ಸ್, ರಿಫೈನಿಂಗ್, ತೈಲ ಮತ್ತು ಅನಿಲ ಪರಿಶೋಧನೆ, ಜವಳಿ, ಚಿಲ್ಲರೆ ವ್ಯಾಪಾರ ಮತ್ತು ದೂರಸಂಪರ್ಕ ಸೇರಿದಂತೆ ಹಲವಾರು ಉದ್ಯಮಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿದ್ದಾರೆ. ಅವರು ರಿಯಲ್ ಎಸ್ಟೇಟ್ ಮತ್ತು ಇತರ ಹೂಡಿಕೆಗಳಲ್ಲಿ ಆಸ್ತಿಯನ್ನು ಹೊಂದಿದ್ದಾರೆ.

ಮನೆ ಮತ್ತು ರಿಯಲ್ ಎಸ್ಟೇಟ್ ಆಸ್ತಿಗಳು

ಮುಖೇಶ್ ಅಂಬಾನಿ ಭಾರತ ಮತ್ತು ಪ್ರಪಂಚದಾದ್ಯಂತ ಹಲವಾರು ಐಷಾರಾಮಿ ಮನೆಗಳು ಮತ್ತು ಆಸ್ತಿಗಳನ್ನು ಹೊಂದಿದ್ದಾರೆ. ಇದರಲ್ಲಿ ಪ್ರಮುಖವಾದವುಗಳೆಂದರೆ ಆಂಟಿಲಿಯಾ ಮುಂಬಯಿನಲ್ಲಿರುವ 27 ಅಂತಸ್ತಿನ ವಸತಿ ಗಗನಚುಂಬಿ ಕಟ್ಟಡವು ವಿಶ್ವದ ಅತ್ಯಂತ ದುಬಾರಿ ಖಾಸಗಿ ನಿವಾಸಗಳಲ್ಲಿ ಒಂದಾಗಿದೆ.

ಸ್ಟೋಕ್ ಪಾರ್ಕ್ ಎಸ್ಟೇಟ್ ಇಂಗ್ಲೆಂಡ್‌ನ ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಅನ್ನು 500 ಕೋಟಿ ರೂ. ಹೆಚ್ಚು ನೀಡಿ ಖರೀದಿ ಮಾಡಲಾಗಿದೆ.

ದುಬೈನ ಪಾಮ್ ಜುಮೇರಾದಲ್ಲಿ ನೆಲೆಗೊಂಡಿರುವ ಅರಮನೆಯ ವಿಲ್ಲಾವನ್ನು 80 ಮಿಲಿಯನ್‌ ಡಾಲರ್ ನೀಡಿ ಖರೀದಿಸಲಾಗಿದೆ. ಇದು ದುಬೈನಲ್ಲಿ ಇಲ್ಲಿಯವರೆಗಿನ ಅತ್ಯಂತ ದುಬಾರಿ ರಿಯಲ್ ಎಸ್ಟೇಟ್ ಖರೀದಿಯಾಗಿದೆ ಎಂದು ಹೇಳಲಾಗುತ್ತದೆ.

Mukesh Ambani
Mukesh Ambani


ಯಾವ ಕಾರುಗಳಿವೆ?

ಮುಕೇಶ್ ಅಂಬಾನಿ ಅವರು ಮರ್ಸಿಡಿಸ್-ಬೆನ್ಜ್, ಬಿಎಂಡಬ್ಲ್ಯೂ, ರೋಲ್ಸ್-ರಾಯ್ಸ್ ಮತ್ತು ಮೇಬ್ಯಾಕ್‌ನಂತಹ ಉನ್ನತ-ಮಟ್ಟದ ಬ್ರ್ಯಾಂಡ್‌ಗಳನ್ನು ಒಳಗೊಂಡಂತೆ ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ ಫೆರಾರಿ ಎಸ್ ಎಫ್ 90 ಸ್ಟ್ರಾಡೇಲ್ ವ್ಯಾಪಾರ ಅಧಿಕಾರಿ, ವಿವಿಐಪಿಗಳು ಬಳಸುವ ಜನಪ್ರಿಯ ಐಷಾರಾಮಿ ಕಾರುಗಳಲ್ಲಿ ಒಂದಾಗಿದೆ.

ಬಿಎಂಡಬ್ಲ್ಯೂ 7 ಸರಣಿ ಸೌಕರ್ಯ, ಕಾರ್ಯಕ್ಷಮತೆ ಮತ್ತು ತಂತ್ರಜ್ಞಾನಕ್ಕೆ ಹೆಸರುವಾಸಿಯಾದ ಮತ್ತೊಂದು ಐಷಾರಾಮಿ ಸೆಡಾನ್.

ಪ್ರೀಮಿಯಂ ಐಷಾರಾಮಿ ಕಾರು ರೋಲ್ಸ್ ರಾಯ್ಸ್ ಫ್ಯಾಂಟಮ್ ಟೈಮ್‌ಲೆಸ್ ವಿನ್ಯಾಸ ಮತ್ತು ಕ್ಲಾಸಿಕ್ ಸ್ಟೈಲಿಂಗ್‌ಗೆ ಹೆಸರುವಾಸಿಯಾಗಿದೆ.

ಮರ್ಸಿಡಿಸ್ ಮೇಬ್ಯಾಕ್ ಬೆನ್ಜ್ ಎಸ್ 660 ಗಾರ್ಡ್ ಐಷಾರಾಮಿ ಕಾರು ಅದರ ವಿಶಾಲವಾದ ಒಳಾಂಗಣ, ಉನ್ನತ-ಮಟ್ಟದ ಸೌಕರ್ಯಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಖ್ಯಾತಿ ಪಡೆದಿದೆ.


ದತ್ತಿ ಕಾರ್ಯಗಳು ಏನೇನು?

ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬವು ಅನೇಕ ದತ್ತಿ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದೆ. ಇದರಲ್ಲಿ ರಿಲಯನ್ಸ್ ಫೌಂಡೇಶನ್ ಕೂಡ ಒಂದಾಗಿದೆ. ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಸ್ಥಾಪಿಸಿದ ಈ ಸಂಸ್ಥೆ, ಶಿಕ್ಷಣ, ಆರೋಗ್ಯ ರಕ್ಷಣೆ, ಗ್ರಾಮೀಣ ಪರಿವರ್ತನೆ, ನಗರ ನವೀಕರಣ, ವಿಪತ್ತು ನಿರ್ವಹಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತದೆ.

ರಿಲಯನ್ಸ್ ಫೌಂಡೇಶನ್ ಭಾರತದಲ್ಲಿ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಅವಕಾಶಗಳನ್ನು ಒದಗಿಸುವಲ್ಲಿ ಸಕ್ರಿಯವಾಗಿದೆ. ಗುಣಮಟ್ಟದ ಶಿಕ್ಷಣದ ಪ್ರವೇಶವನ್ನು ಸುಧಾರಿಸಲು ಪ್ರತಿಷ್ಠಾನವು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತದೆ ಮತ್ತು ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಶಾಲೆಗಳನ್ನು ನಿರ್ಮಿಸಿದೆ.

ಇದನ್ನೂ ಓದಿ: Sameer Nigam: ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌; ಬಾಯ್ಕಾಟ್‌ ಪೆಟ್ಟಿಗೆ ಥಂಡಾ

Continue Reading

ದೇಶ

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Physical Assault: ವರದಿಯ ಪ್ರಕಾರ, ಮೂರು ತಿಂಗಳ ಹಿಂದೆ ರೇವಾದ ಜಾವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾತ್ರಿ ತನ್ನ ಮೊಬೈಲ್ ಫೋನ್ ನಲ್ಲಿ ಪೋರ್ನ್ ವಿಡಿಯೊ ನೋಡಿದ್ದಾನೆ. ಬಳಿಕ ತನ್ನ ಪಕ್ಕದಲ್ಲಿ ಮಲಗಿದ್ದ ಸಹೋದರಿಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ. ಆಕೆ ತಂದೆಗೆ ಹೇಳುವುದಾಗಿ ಹೇಳಿದಾಗ ಕೊಲೆ ಮಾಡಿದ್ದ.

VISTARANEWS.COM


on

Physical Assault
Koo

ಭೋಪಾಲ್: 13 ವರ್ಷದ ಬಾಲಕನೊಬ್ಬ ತನ್ನ 9 ವರ್ಷದ ತಂಗಿಯ ಮೇಲೆ ಅತ್ಯಾಚಾರ ಎಸಗಿ (Physical Assault) ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ತನಿಖಾಧಿಕಾರಿಗಳು 3 ತಿಂಗಳಲ್ಲಿ ನಡೆಸಿದ 50 ಕ್ಕೂ ಹೆಚ್ಚು ಡಿಎನ್ಎ ಪರೀಕ್ಷೆಗಳ ಬಳಿಕ , ಬಾಲಕಿ ಖಾಸಗಿ ಭಾಗಗಳಲ್ಲಿ ಕಂಡುಬಂದ ವೀರ್ಯ ಆಕೆಯ ಹಿರಿಯ ಸಹೋದರನ ವೀರ್ಯದೊಂದಿಗೆ ಹೊಂದಿಕೆಯಾದ ಬಳಿಕ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಎಲ್ಲವನ್ನೂ ತಿಳಿದಿದ್ದ ತಾಯಿ ಮತ್ತು ಇಬ್ಬರು ಹಿರಿಯ ಸಹೋದರಿಯರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಹೀಗಾಗಿ ಆರೋಪಿಗಳು, ಆತನ ತಾಯಿ ಮತ್ತು ಇಬ್ಬರು ಅಕ್ಕಂದಿರನ್ನು ಬಂಧಿಸಲಾಗಿದೆ.

ವರದಿಯ ಪ್ರಕಾರ, ಮೂರು ತಿಂಗಳ ಹಿಂದೆ ರೇವಾದ ಜಾವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾತ್ರಿ ತನ್ನ ಮೊಬೈಲ್ ಫೋನ್ ನಲ್ಲಿ ಪೋರ್ನ್ ವಿಡಿಯೊ ನೋಡಿದ್ದಾನೆ. ಬಳಿಕ ತನ್ನ ಪಕ್ಕದಲ್ಲಿ ಮಲಗಿದ್ದ ಸಹೋದರಿಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ. ಆಕೆ ತಂದೆಗೆ ಹೇಳುವುದಾಗಿ ಹೇಳಿದಾಗ ಕೊಲೆ ಮಾಡಿದ್ದ.

3 ತಿಂಗಳಲ್ಲಿ 55 ಜನರ ಡಿಎನ್ಎ ಪರೀಕ್ಷೆ

ಪೊಲೀಸರು 55 ಜನರ ಡಿಎನ್ಎ ಪರೀಕ್ಷೆಗಳನ್ನು ನಡೆಸಿದ್ದರು. ಆದರೆ ಬಾಲಕಿಯ ದೇಹದಲ್ಲಿ ಕಂಡುಬಂದ ಮಾದರಿಯು ಯಾವುದಕ್ಕೂ ಹೋಲಿಕೆಯಾಗಿರಲಿಲ್ಲ. ಕಿರಿಯ ಮಗಳನ್ನು ಕಳೆದುಕೊಂಡು ಈಗಾಗಲೇ ಮೂರು ತಿಂಗಳುಗಳು ಕಳೆದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬ ಆರೋಪಿಸಿದ್ದರು. ಅಂತಿಮವಾಗಿ ಪೊಲೀಸರು ಸಹೋದರನನ್ನು ಪರೀಕ್ಷೆಗೆ ಕರೆದೊಯ್ದ ಆತನ ವೀರ್ಯವು ಮಾದರಿ ಪರಿಶೀಲನೆ ನಡೆಸಿದಾಗ ಹೊಂದಿಕೆಯಾಗಿತ್ತು.

ಇದನ್ನೂ ಓದಿ: Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

ಪೊಲೀಸರು ಪ್ರಶ್ನಿಸಿದ ಬಳಿಕ ಆತ ತನ್ನ ಅಪರಾಧ ಒಪ್ಪಿಕೊಂಡಿದ್ದಾನೆ. ಮೊಬೈಲ್​​ನಲ್ಲಿ ಅಶ್ಲೀಲ ಚಿತ್ರವನ್ನು ನೋಡಿದ್ದೆ. ತನ್ನ ಕಾಮಕ್ಕೆ ಮಣಿದು ಆಕೆ ಮೇಲೆ ಅತ್ಯಾಚಾರ ಎಸಗಿದೆ ಎಂದು ಹೇಳಿಕೊಂಡಿದ್ದಾನೆ. ಎಲ್ಲವನ್ನೂ ತಂದೆಗೆ ಹೇಳುತ್ತೇನೆ ಎಂದು ಹೇಳಿದಾಗ ಕೊಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಆರೋಪಿ ತನ್ನ ತಾಯಿ ಮತ್ತು ಹಿರಿಯ ಸಹೋದರಿಯರಿಗೆ ಎಲ್ಲವನ್ನೂ ಹೇಳಿ. ಅವರು ಸೇರಿಕೊಂಡು ತಂದೆ ಮತ್ತು ಪೊಲೀಸರಿಂದ ರಕ್ಷಿಸಿದ್ದರು.

ಭಾರತೀಯ ದಂಡ ಸಂಹಿತೆಯಡಿ ಅತ್ಯಾಚಾರ, ಕೊಲೆ ಮತ್ತು ಸಾಕ್ಷ್ಯಗಳನ್ನು ಮರೆಮಾಚಿದ್ದಕ್ಕಾಗಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಜೈಲಿಗೆ ಕಳುಹಿಸಲಾಗಿದೆ. ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದೇಶ

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Rahul Gandhi: ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. ಇದೇ ವೇಳೆ, ಪರೀಕ್ಷೆಯಲ್ಲಿ ಎಷ್ಟು ವೋಟ್‌ ಪಡೆದಿದ್ದೀರಿ ಎಂಬುದಾಗಿ ಬಾಯಿತಪ್ಪಿ ಕೇಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ‌ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಛೀಮಾರಿ ಹಾಕಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ, ನೀಟ್‌ ಅಭ್ಯರ್ಥಿಗಳಿಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೇಳಿದ ಪ್ರಶ್ನೆ ಈಗ ಭಾರಿ ವೈರಲ್‌ ಆಗಿದೆ.

ಹೌದು, ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. “ನೀಟ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆಯೇ” ಎಂಬುದಾಗಿ ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳಿಗೆ ಕೇಳಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹೌದು ಎಂದಿದ್ದಾರೆ. ಆಗ, ರಾಹುಲ್‌ ಗಾಂಧಿ ಅವರು, “ಪರೀಕ್ಷೆಯಲ್ಲಿ ಎಷ್ಟು ವೋಟು ಗಳಿಸಿದ್ದೀರಿ” ಎಂಬುದಾಗಿ ಪ್ರಶ್ನಿಸಿದ್ದಾರೆ. ಎಷ್ಟು ಅಂಕ ಪಡೆದಿದ್ದೀರಿ ಎಂಬುದಾಗಿ ಹೇಳುವ ಬದಲು ಅವರು ಎಷ್ಟು ವೋಟು ಗಳಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ 240 ಎಂಬುದಾಗಿ ವಿದ್ಯಾರ್ಥಿ ಹೇಳಬೇಕಿತ್ತು” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಮುಗಿದರೂ ರಾಹುಲ್‌ ಗಾಂಧಿ ಅವರು ಇನ್ನೂ ಅದರಿಂದ ಹೊರಬಂದಿಲ್ಲ” ಎಂಬುದಾಗಿ ಮತ್ತೊಬ್ಬರು ಕಾಲೆಳೆದಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಡಿಯೊಗೆ ಕಮೆಂಟ್‌ ಮಾಡಿದ್ದಾರೆ.

ಏನಿದು ನೀಟ್‌ ಪ್ರಕರಣ?

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Continue Reading
Advertisement
Indian Army
ದೇಶ26 mins ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ59 mins ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ1 hour ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Aishwarya Rai Bachchan
ಸಿನಿಮಾ1 hour ago

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Mukesh Ambani
ವಾಣಿಜ್ಯ1 hour ago

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು2 hours ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

The woman shows gray hair on her head. Hair with fragments of gray hair, hair roots requiring dyeing
ಆರೋಗ್ಯ2 hours ago

Ways to Prevent Gray Hair: 30 ದಾಟುವ ಮೊದಲೇ ಕೂದಲು ಬೆಳ್ಳಗಾಗುತ್ತಿದೆಯೇ? ಇದಕ್ಕಿದೆ ಸರಳ ಪರಿಹಾರ

Yadgiri News Kolluru bridge inundation MLA Channareddy Patil tunnuru visit inspection
ಯಾದಗಿರಿ2 hours ago

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ಶಾಸಕ ಚನ್ನಾರೆಡ್ಡಿ ಪಾಟೀಲ ಭೇಟಿ

Nirmala Sahaya Hasta programme by Okkaliga Yuva Brigade on 28th July and 1st 3rd and 5th August
ಬೆಂಗಳೂರು2 hours ago

Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

Karnataka weather Forecast
ಮಳೆ2 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ7 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ7 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌