Narendra Modi: ಅಮೆರಿಕ ಸಂಸತ್‌ನಲ್ಲಿ ಮೋದಿ ಭಾಷಣದ ಮೋಡಿ; ಆಹ್ವಾನ ಸ್ವೀಕರಿಸಿದ ಪ್ರಧಾನಿ - Vistara News

ದೇಶ

Narendra Modi: ಅಮೆರಿಕ ಸಂಸತ್‌ನಲ್ಲಿ ಮೋದಿ ಭಾಷಣದ ಮೋಡಿ; ಆಹ್ವಾನ ಸ್ವೀಕರಿಸಿದ ಪ್ರಧಾನಿ

Narendra Modi: ನರೇಂದ್ರ ಮೋದಿ ಅವರು ಜೂನ್‌ 21ರಿಂದ 24ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಪ್ರಧಾನಿಯನ್ನು ಸ್ವಾಗತಿಸಲು ಸಾವಿರಾರು ಅನಿವಾಸಿ ಭಾರತೀಯರು ಸಜ್ಜಾಗಿದ್ದಾರೆ. ಭೇಟಿ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರ ಭೋಜನಕೂಟದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

VISTARANEWS.COM


on

PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜೂನ್‌ 21ರಿಂದ 24ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 22ರಂದು ಅಮೆರಿಕ ಸಂಸತ್‌ ಉದ್ದೇಶಿಸಿ ಮಾತನಾಡಲಿದ್ದಾರೆ. ಶ್ವೇತಭವನದ ಸೌತ್‌ಲಾನ್‌ನಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಇನ್ನು, ಅಮೆರಿಕದ ಆಹ್ವಾನವನ್ನು ಸ್ವೀಕರಿಸಿದ ಮೋದಿ, “ನಿಮ್ಮ ಆಮಂತ್ರಣವನ್ನು ಸ್ವೀಕರಿಸುವುದು ಗೌರವದ ಸಂಗತಿ” ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರಿಗೆ ನೀಡಿರುವ ಆಮಂತ್ರಣದ ಫೋಟೊವನ್ನು ಹೌಸ್‌ ಸ್ಪೀಕರ್‌ ಕೆವಿನ್‌ ಮೆಕಾರ್ಥಿ ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. “ನನ್ನನ್ನು ಆಹ್ವಾನಿಸಿದ ಮೆಕಾರ್ಥಿ ಸೇರಿ ಎಲ್ಲ ನಾಯಕರಿಗೆ ಧನ್ಯವಾದ. ಅಮೆರಿಕ ಸಂಸತ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮತ್ತೆ ಭಾಗವಹಿಸಲು, ಭಾಷಣ ಮಾಡಲು ನನಗೆ ಸಂತಸ ಎನಿಸುತ್ತದೆ. ಭಾರತ-ಅಮೆರಿಕ ಸಂಬಂಧ ವೃದ್ಧಿ, ಪ್ರಜಾಪ್ರಭುತ್ವ ಮೌಲ್ಯಗಳ ವಿಚಾರದಲ್ಲಿ ಎರಡೂ ದೇಶಗಳ ನಡುವಿನ ಬಾಂಧವ್ಯ, ಜಾಗತಿಕ ಶಾಂತಿ ಹಾಗೂ ಸಮೃದ್ಧಿ ಕುರಿತು ಎರಡೂ ದೇಶಗಳು ಹೊಂದಿರುವ ಸಂಬಂಧದ ಬಗ್ಗೆ ಹೆಮ್ಮೆ ಎನಿಸುತ್ತದೆ” ಎಂದು ಮೋದಿ ಹೇಳಿದ್ದಾರೆ.

ಅಮೆರಿಕದ ಸ್ಟೇಟ್ಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಸೆನೆಟ್‌ನ ಉಭಯಪಕ್ಷೀಯ ನಾಯಕತ್ವದ ಪರವಾಗಿ ಜೂನ್ 22ರ ಗುರುವಾರ ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ಮೋದಿಯನ್ನು ಆಹ್ವಾನಿಸುವುದು ನಮ್ಮ ಗೌರವವಾಗಿದೆ ಎಂದು ಹೌಸ್ ಸ್ಪೀಕರ್ ಕೆವಿನ್ ಮೆಕಾರ್ಥಿ, ಸೆನೆಟ್ ನಾಯಕ ಚಕ್ ಶುಮರ್, ಸೆನೆಟ್ ರಿಪಬ್ಲಿಕನ್ ನಾಯಕ ಮಿಚ್ ಮೆಕ್‌ಕಾನ್ನೆಲ್ ಮತ್ತು ಹೌಸ್ ಡೆಮಾಕ್ರಟಿಕ್ ನಾಯಕ ಹಕೀಮ್ ಜೆಫ್ರೀಸ್ ಅವರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಆಹ್ವಾನಕ್ಕೆ ನರೇಂದ್ರ ಮೋದಿ ಪ್ರತಿಕ್ರಿಯೆ

ಭಾರತದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆ

ನರೇಂದ್ರ ಮೋದಿ ಅವರು ಜೂನ್‌ 22ರಂದು ಅಮೆರಿಕ ಸಂಸತ್‌ ಉದ್ದೇಶಿಸಿ ಭಾಷಣ ಮಾಡಿದ ಬಳಿಕ ವಿಶೇಷ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅಮೆರಿಕ ಸಂಸತ್‌ನಲ್ಲಿ ಮೋದಿ ಮಾಡುತ್ತಿರುವ ಎರಡನೇ ಭಾಷಣ ಇದಾಗಿದೆ. ಆ ಮೂಲಕ ಮೋದಿ ಅವರು ಅಮೆರಿಕ ಸಂಸತ್‌ನಲ್ಲಿ ಭಾಷಣ ಮಾಡಿದ ಭಾರತದ ಎರಡನೇ ಪ್ರಧಾನಿ ಎನಿಸಲಿದ್ದಾರೆ. ಮೋದಿ ಭಾಷಣದ ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರ ಜತೆ ಭೋಜನಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಮೋದಿ ಅವರನ್ನು ಸ್ವಾಗತಿಸಲು ಅನಿವಾಸಿ ಭಾರತೀಯರು ಕಾತರದಿಂದ ಕಾಯುತ್ತಿದ್ದಾರೆ.

ನಿಮ್ಮ ಭಾಷಣದ ಸಮಯದಲ್ಲಿ, ಭಾರತದ ಭವಿಷ್ಯದ ಬಗ್ಗೆ ನಿಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಲು ಮತ್ತು ಉಭಯ ರಾಷ್ಟ್ರಗಳು ಎದುರಿಸುತ್ತಿರುವ ಜಾಗತಿಕ ಸವಾಲುಗಳ ಬಗ್ಗೆ ಮಾತನಾಡಲು ನಿಮಗೆ ಅವಕಾಶವಿದೆ. ನಿಮ್ಮ ಈ ಭಾಷಣವು ಅಮೆರಿಕ ಮತ್ತು ಭಾರತದ ನಡುವಿನ ನಿರಂತರ ಸ್ನೇಹವನ್ನು ಕಾಪಿಡಲಿದೆ ಎಂದು ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Narendra Modi: ವಿಶ್ವದ ಗೌರವಕ್ಕೆ ಮೋದಿ ಅರ್ಹ; ಸಾಗರೋತ್ತರ ಕಾಂಗ್ರೆಸ್‌ ನಾಯಕನಿಂದಲೇ ಬಂತು ಮೆಚ್ಚುಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Tech Mahindra: ಐಟಿ ಸೇವೆಗಳಿಗೆ ಹೆಸರುವಾಸಿಯಾಗಿರುವ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದದಲ್ಲಿ 661 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೇ, 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಟೆಕ್‌ ಮಹೀಂದ್ರಾ ತೀರ್ಮಾನಿಸಿದೆ. ಇದು ಫ್ರೆಶರ್‌ಗಳಿಗೆ ಭಾರಿ ಅನುಕೂಲವಾಗಲಿದೆ.

VISTARANEWS.COM


on

Tech Mahindra
Koo

ನವದೆಹಲಿ: ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ, ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

“ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. ನಾಲ್ಕನೇ ತ್ರೈಮಾಸಿಕದಲ್ಲಿ ಟೆಕ್‌ ಮಹೀಂದ್ರಾ ನಿವ್ವಳ ಲಾಭದ ಪ್ರಮಾಣವು 709.47 ಕೋಟಿ ರೂ. ಇರಲಿದೆ ಎಂಬುದಾಗಿ ಮನಿಕಂಟ್ರೋಲ್‌ (Moneycontrol) ಅಂದಾಜಿಸಿತ್ತು.

6 ಸಾವಿರ ಫ್ರೆಶರ್‌ಗಳ ನೇಮಕ

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

50 ಸಾವಿರ ನೌಕರರಿಗೆ ಎಐ ತರಬೇತಿ

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ಇನ್ನು, ಟೆಕ್‌ ಟೆಕ್‌ ಮಹೀಂದ್ರಾ ಕಂಪನಿಯ ವಾರ್ಷಿಕ ಲಾಭವೂ ಶೇ.6.2ರಷ್ಟು ಅಂದರೆ, 12,871 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೂ ಉದ್ಯೋಗ ಸೃಷ್ಟಿ ಸೇರಿ ಹಲವು ಯೋಜನೆಗಳಿಗೆ ಟೆಕ್‌ ಮಹೀಂದ್ರಾ ಚಾಲನೆ ನೀಡುತ್ತಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Continue Reading

ದೇಶ

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

China Road: ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಎನಿಸಿರುವ ಸಿಯಾಚಿನ್‌ ಹಿಮಪ್ರದೇಶದ ಬಳಿಯೇ ಚೀನಾ ರಸ್ತೆ ನಿರ್ಮಿಸಿರುವ ಸ್ಯಾಟಲೈಟ್‌ ಫೋಟೊಗಳು ಲಭ್ಯವಾಗಿವೆ. ಕಳೆದ ವರ್ಷದ ಜೂನ್‌ ಹಾಗೂ ಆಗಸ್ಟ್‌ ಅವಧಿಯಲ್ಲಿ ಚೀನಾ ರಸ್ತೆ ನಿರ್ಮಾಣ ಆರಂಭಿಸಿದ್ದು, ಇದರ ಚಿತ್ರಗಳನ್ನು ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ ಬಿಡುಗಡೆ ಮಾಡಿದೆ. ಚೀನಾ ರಸ್ತೆ ನಿರ್ಮಿಸಿದ ಚಿತ್ರಗಳು ಸ್ಪಷ್ಟವಾಗಿ ಕಾಣುತ್ತಿವೆ.

VISTARANEWS.COM


on

China Road
Koo

ನವದೆಹಲಿ: ಕಾಶ್ಮೀರದ ಲಡಾಕ್‌ ಬಳಿಯ ವಾಸ್ತವ ನಿಯಂತ್ರಣ ರೇಖೆ (LoC) ಬಳಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿ ಬಿಕ್ಕಟ್ಟು ಸೃಷ್ಟಿಸಿದ್ದ ಚೀನಾ ಈಗ ಮತ್ತೊಂದು ಉದ್ಧಟತನ ತೋರಿದೆ. ಹೌದು, ಪಾಕ್‌ ಆಕ್ರಮಿತ ಕಾಶ್ಮೀರದ (Pak Occupied Kashmir) ಬಳಿ ನೂತನವಾಗಿ ರಸ್ತೆ ನಿರ್ಮಿಸುವ (China Road) ಮೂಲಕ ಚೀನಾ ಗಡಿ ನಿಯಮಗಳನ್ನು ಗಾಳಿಗೆ ತೂರಿದೆ. ಇದು ಭಾರತದ ಜತೆ ಮತ್ತೊಂದು ಬಿಕ್ಕಟ್ಟು ಸೃಷ್ಟಿಸುವ ಹುನ್ನಾರ ಎಂದು ಹೇಳಲಾಗುತ್ತಿದೆ. ಕಳೆದ ವರ್ಷದ ಜೂನ್‌ ಹಾಗೂ ಆಗಸ್ಟ್‌ ಅವಧಿಯಲ್ಲಿ ಚೀನಾ ರಸ್ತೆ ನಿರ್ಮಾಣ ಆರಂಭಿಸಿದ್ದು, ಇದರ ಚಿತ್ರಗಳನ್ನು ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ ಬಿಡುಗಡೆ ಮಾಡಿದೆ. ಚೀನಾ ರಸ್ತೆ ನಿರ್ಮಿಸಿದ ಚಿತ್ರಗಳು ಸ್ಪಷ್ಟವಾಗಿ ಕಾಣುತ್ತಿವೆ.

ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಎನಿಸಿರುವ ಸಿಯಾಚಿನ್‌ ಹಿಮಪ್ರದೇಶದ ಬಳಿಯೇ ಚೀನಾ ರಸ್ತೆ ನಿರ್ಮಿಸಿರುವ ಸ್ಯಾಟಲೈಟ್‌ ಫೋಟೊಗಳು ಲಭ್ಯವಾಗಿವೆ. 1963ರಲ್ಲಿ ಚೀನಾಗೆ ಬಿಟ್ಟುಕೊಟ್ಟಿರುವ, ಪಾಕ್‌ ಆಕ್ರಮಿತ ಕಾಶ್ಮೀರದ ಭಾಗವಾಗಿದ್ದ ಶಾಕ್ಸ್‌ಗಾಮ್‌ ಕಣಿವೆಯಲ್ಲಿ ಚೀನಾ ರಸ್ತೆ ನಿರ್ಮಿಸಿದೆ. ಇದು ಭಾರತದ ಇಂದಿರಾ ಕೋಲ್ ಪ್ರದೇಶದಿಂದ ಕೇವಲ 50 ಕಿಲೋ ಮೀಟರ್‌ ದೂರದಲ್ಲಿರುವುದರಿಂದ ಆತಂಕ ಹೆಚ್ಚಾಗಿದೆ.

ಇಂದಿರಾ ಕೋಲ್‌ ಪ್ರದೇಶಕ್ಕೆ ಕಳೆದ ಮಾರ್ಚ್‌ನಿಂದ ಇದುವರೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಎರಡು ಬಾರಿ ಭೇಟಿ ನೀಡಿದ್ದರು. ಇದರಿಂದ ಕೇವಲ 50 ಕಿಲೋಮೀಟರ್‌ ದೂರದಲ್ಲಿ ಚೀನಾ ರಸ್ತೆ ನಿರ್ಮಿಸಿದ ಕಾರಣ ಮುಂದಿನ ದಿನಗಳಲ್ಲಿ ಭಾರತದ ಜತೆಗಿನ ಬಿಕ್ಕಟ್ಟನ್ನು ಉಲ್ಬಣಿಸುವ ಸಾಧ್ಯತೆ ಇದೆ. ಇದೇ ಸಂಚಿನಿಂದಾಗಿಯೇ ಚೀನಾ ರಸ್ತೆ ನಿರ್ಮಾಣ ಮಾಡಿದೆ ಎಂದು ಹೇಳಲಾಗುತ್ತಿದೆ.

ಭಾರತಕ್ಕೆ ಏಕೆ ಆತಂಕಕಾರಿ?

ಸಿಯಾಚಿನ್‌ ಹಿಮಪ್ರದೇಶದಲ್ಲಿ ಚೀನಾ ರಸ್ತೆ ನಿರ್ಮಿಸಿರುವುದು ಭಾರತಕ್ಕೆ ಹಲವು ರೀತಿಯಲ್ಲಿ ಆತಂಕ ಎನಿಸಿದೆ. ಗಡಿಯಲ್ಲಿ ರಸ್ತೆ ನಿರ್ಮಿಸಿದರೆ ಚೀನಾ ಸುಲಭವಾಗಿ ಮಿಲಿಟರಿ ಸಲಕರಣೆಗಳನ್ನು, ಸೈನಿಕರನ್ನು ಗಡಿಗೆ ನಿಯೋಜಿಸಬಹುದು. ಇದಾದ ಬಳಿಕ ಭಾರತದ ಜತೆ ತಗಾದೆ ತೆಗೆಯಲು ಚೀನಾಗೆ ಅನುಕೂಲವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆದರೆ, ಇದಕ್ಕೆ ಭಾರತ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

Continue Reading

ದೇಶ

Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

Lok Sabha Election 2024: ಕರ್ನಾಟಕ ಸೇರಿದಂತೆ ದೇಶದ ಒಟ್ಟು 12 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಹಬ್ಬ (Voting) ರಂಗೇರಿದೆ. ಎರಡನೇ ಹಂತದಲ್ಲಿ ಒಟ್ಟು 88 ಲೋಕಸಭಾ ಕ್ಷೇತ್ರಗಳಲ್ಲಿ (Lok sabha election 2024) ಇಂದು ಮತದಾನಕ್ಕೆ ಮತದಾರ ಸಜ್ಜಾಗಿದ್ದು, ಕೇರಳ (Kerala) ದ ಎಲ್ಲಾ 20 ಕ್ಷೇತ್ರಗಳು, ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶದ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 8 ಕ್ಷೇತ್ರಗಳು, ಅಸ್ಸಾಂ ಮತ್ತು ಬಿಹಾರಗಳ 5 ಕ್ಷೇತ್ರಗಳು, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದ 2, ಜಮ್ಮು-ಕಾಶ್ಮೀರ, ಮಣಿಪುರ, ತ್ರಿಪುರಗಳಲ್ಲಿ ತಲಾ 1 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

VISTARANEWS.COM


on

By

Lok sabha election 2024
Koo

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ಒಟ್ಟು 12 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಹಬ್ಬ (Voting) ರಂಗೇರಿದೆ. ಎರಡನೇ ಹಂತದಲ್ಲಿ ಒಟ್ಟು 88 ಲೋಕಸಭಾ ಕ್ಷೇತ್ರಗಳಲ್ಲಿ (Lok sabha election 2024) ಇಂದು ಮತದಾನಕ್ಕೆ ಮತದಾರ ಸಜ್ಜಾಗಿದ್ದು, ಕೇರಳ (Kerala) ದ ಎಲ್ಲಾ 20 ಕ್ಷೇತ್ರಗಳು, ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶದ ಮತ್ತು ಮಹಾರಾಷ್ಟ್ರಗಳಲ್ಲಿ ತಲಾ 8 ಕ್ಷೇತ್ರಗಳು, ಅಸ್ಸಾಂ ಮತ್ತು ಬಿಹಾರಗಳ 5 ಕ್ಷೇತ್ರಗಳು, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದ 2, ಜಮ್ಮು-ಕಾಶ್ಮೀರ, ಮಣಿಪುರ, ತ್ರಿಪುರಗಳಲ್ಲಿ ತಲಾ 1 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಒಟ್ಟು 89 ಕ್ಷೇತ್ರಗಳಲ್ಲಿ ಮತದಾನ ನಡೆಯಬೇಕಿತ್ತು. ಆದರೆ ಮಧ್ಯಪ್ರದೇಶದ ಬೇಟುಲ್‌ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಹುಜನ ಸಮಾವಾದಿ ಪಕ್ಷದ ಅಭ್ಯರ್ಥಿ ನಿಧನದಿಂದಾಗಿ ಮತದಾನ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಈ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಸಲು ನಿರ್ಧರಿಸಲಾಗಿದೆ. ಹೀಗಾಗಿ ಇಂದು 88 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಹೈವೋಲ್ಟೇಜ್‌ ಕ್ಷೇತ್ರಗಳು ಯಾವ್ಯಾವು ?

ಇಂದು ಎರಡನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಪ್ರಮುಖ ನಾಯಕರು ಸ್ಪರ್ಧಿಸುತ್ತಿರುವ ಹೈ ವೋಲ್ಟೇಜ್‌ (High Profile names) ಕ್ಷೇತ್ರಗಳ ಮೇಲೆ ಎಲ್ಲ ಕಣ್ಣು ನೆಟ್ಟಿದೆ.ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸ್ಪರ್ಧಿಸುತ್ತಿರುವ ಕೇರಳದ ವಯನಾಡು, ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ (Rajiv Chandrshekar) ಮತ್ತು ಕಾಂಗ್ರೆಸ್‌ನ ಶಶಿ ತರೂರು (Shashi Tharoor) ಮುಖಾಮುಖಿಯಾಗಿ ಸ್ಪರ್ಧಿಸಿರುವ ತಿರುವನಂತಪುರಂನಲ್ಲಿ ಇಂದು ಮತದಾನ ನಡೆಯುತ್ತಿದೆ. ಅಷ್ಟೇ ಅಲ್ಲದೇ ನಟಿ ಹೇಮಾ ಮಾಲಿನಿ, ರಾಮಾಯಣ ಧಾರಾವಾಹಿ ಖ್ಯಾತಿಯ ಅರುಣ್‌ ಗೋವಿಲ್‌, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ, ಕೆ.ಸಿ.ವೇಣುಗೋಪಾಲ್‌, ಭೂಪೇಶ್‌ ಭಗೇಲ್‌ ಮ್ತು ಅಶೋಕ್‌ ಗೆಹ್ಲೋಟ್‌ ಪುತ್ರ ವೈಭವ್‌ ಗೆಹ್ಲೋಟ್‌ ಕಣದಲ್ಲಿರುವ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ರಂಗೇರಿದೆ.

ಇದನ್ನೂ ಓದಿ: Loka sabha election-2024: ಮೋದಿ ಗೆದ್ದಿದ್ದ ವಡೋದರ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ!

ಎರಡನೇ ಹಂತದಲ್ಲಿ ಕರ್ನಾಟಕ ಮತ್ತು ಕೇರಳ ರಾಜ್ಯಗಳು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಅತ್ಯಂತ ಚಾಲೆಂಜಿಂಗ್‌ ರಾಜ್ಯಗಳಾಗಿವೆ. ಕರ್ನಾಟಕದಲ್ಲಿ ಅತೀ ಹೆಚ್ಚು ಸೀಟು ಪಡೆದು ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್‌ ಹವಣಿಸುತ್ತಿದ್ದರೆ, ಅತ್ತ ಕೇರಳದಲ್ಲಿ ಬಿಜೆಪಿಯೂ ಅದೇ ಕಸರತ್ತಿನಲ್ಲಿ ತೊಡಗಿದೆ. ಕೇರಳದಲ್ಲಿ ಗೆಲುವಿನ ಖಾತೆ ತೆರೆಯಲೇಬೇಕೆಂಬ ಗುರಿಯೊಂದಿಗೆ ಕೇಂದ್ರ ಸಚಿವರಾದ ರಾಜೀವ್‌ ಚಂದ್ರಶೇಖರ್‌ ಮತ್ತು ವಿ. ಮುರಳೀಧರನ್‌ರನ್ನು ಕಣಕ್ಕಿಳಿಸಿದೆ. ಇನ್ನು ಕಳೆದ 20 ವರ್ಷಗಳಿಂದ ಕಾಂಗ್ರೆಸ್‌ ಭದ್ರಕೋಟೆಯಂತಿರುವ ವಯನಾಡು ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಕೆ. ಸುರೇಂದ್ರನ್‌ ಅವರನ್ನು ಬಿಜೆಪಿ ಕಣಕ್ಕಿಳಿಸಿ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.


Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು.

VISTARANEWS.COM


on

Lok sabha Election
Koo

ದೇಶದಲ್ಲಿ ಲೋಕಸಭೆ ಚುನಾವಣೆಯ (lok sabha election) ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ (ಏಪ್ರಿಲ್‌ 26) ಶುಕ್ರವಾರ ನಡೆಯುತ್ತಿದೆ. ಮತದಾನವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದರ ಜತೆಗೆ, ಮತದಾನ ಪ್ರಮಾಣವನ್ನೂ ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಆಯೋಗ ಘೋಷಿಸಿದೆ. ಭಾರತದಲ್ಲಿ ಚುನಾವಣೆ ನಡೆಯುತ್ತದೆ ಎಂದರೆ ಜಗತ್ತೇ ಅದನ್ನು ಕುತೂಹಲದಿಂದ ವೀಕ್ಷಿಸುತ್ತದೆ. ಯಾಕೆಂದರೆ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ, 140 ಕೋಟಿ ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರದಲ್ಲಿ, ಯಾವುದೇ ಹಿಂಸಾಚಾರವಿಲ್ಲದೆ, ಒಂದೇ ಒಂದು ಜೀವಹಾನಿಯಿಲ್ಲದೆ, ಯಾವ ಲೋಪದೋಷವೂ ಇಲ್ಲದಂತೆ, ಜಗತ್ತಿಗೇ ಮಾದರಿಯಾಗಿ ನಡೆಯುವ ಮತದಾನ ಪ್ರಕ್ರಿಯೆ ಹಲವು ದೇಶಗಳಿಗೆ ಅಧ್ಯಯನ ಯೋಗ್ಯವಾಗಿ ಕಾಣುತ್ತದೆ. ದಾಖಲೆ ಸಂಖ್ಯೆಯ ಜನರು ಮತದಾನ ಮಾಡಲು ಏಳೆಂಟು ಹಂತಗಳನ್ನು ತೆಗೆದುಕೊಂಡರೂ, ಒಂದೇ ದಿನದಲ್ಲಿ ಸಂಶಯಕ್ಕೆಡೆಯಿಲ್ಲದಂತೆ ಫಲಿತಾಂಶವನ್ನು ಪಡೆಯುವುದು ವಿಶೇಷ. ಅಮೆರಿಕದಂಥ ದೇಶದಲ್ಲೇ ಚುನಾವಣೆ ಹಲವು ಸಲ ಗೊಂದಲಮಯವಾಗಿರುತ್ತದೆ ಎಂಬುದನ್ನು ನೋಡಿದರೆ, ನಮ್ಮದು ಅಧ್ಯಯನಯೋಗ್ಯವೇ ಸರಿ.

ಪ್ರಸ್ತುತ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಏರಲು ಜನತೆಯ ಆಶೀರ್ವಾದ ಕೋರಿದೆ. ನರೇಂದ್ರ ಮೋದಿಯವರು ಪಕ್ಷಕ್ಕೆ ಹಾಗೂ ಎನ್‌ಡಿಎ ಮೈತ್ರಿಕೂಟಕ್ಕೆ ಸಮರ್ಥ ನಾಯಕತ್ವ ನೀಡಿದ್ದಾರೆ. ಹಲವು ದಶಕಗಳ ಕಾಲ ದೇಶವನ್ನು ಆಳಿ ಸದ್ಯ ಅಧಿಕೃತ ವಿಪಕ್ಷ ಸ್ಥಾನಮಾನವನ್ನೂ ಹೊಂದಿಲ್ಲದ ಕಾಂಗ್ರೆಸ್‌, ಮರಳಿ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದೆ. ಕಾಂಗ್ರೆಸ್‌ ಪಕ್ಷ ಹಲವು ಮಿತ್ರಪಕ್ಷಗಳನ್ನು ಸೇರಿಸಿಕೊಂಡು ಇಂಡಿಯಾ ಬ್ಲಾಕ್‌ ರಚಿಸಿಕೊಂಡು ಬಿಜೆಪಿಯ ಅಶ್ವಮೇಧವನ್ನು ಕಟ್ಟಿಹಾಕಲು ಯತ್ನಿಸುತ್ತಿದೆ. ಚುನಾವಣೆಯ ಪ್ರಚಾರ ಕಣದಲ್ಲಿ ಹಲವು ವಾದವಿವಾದಗಳು, ವಾಗ್ವಾದಗಳು ನಡೆದುಹೋಗಿವೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದು ಮತದಾರನಿಗೆ ಬಿಟ್ಟ ವಿಷಯ. ಮತದಾರ ಸಾಕಷ್ಟು ಬುದ್ಧಿವಂತನಾಗಿದ್ದು, ತನ್ನ ಆಯ್ಕೆಯನ್ನು ಆತ ಮಾಡಬಲ್ಲ.

ಆದರೆ, ಚಿಂತಿಸಬೇಕಾದ ಒಂದು ವಿಷಯವೆಂದರೆ, ಮತದಾನದ ಪ್ರಮಾಣ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ. ವಿದ್ಯಾವಂತರೇ ಮತದಾನ ಮಾಡುತ್ತಿಲ್ಲ ಎಂಬುದು ನಮ್ಮ ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ಕೊರಗುಗಳಲ್ಲಿ ಒಂದು. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ (2019) ಇಡೀ ರಾಜ್ಯದಲ್ಲೇ ಕನಿಷ್ಠ ಪ್ರಮಾಣ (ಶೇ 53.7) ಮತದಾನವಾಗಿತ್ತು. ಬೆಂಗಳೂರು ಸೆಂಟ್ರಲ್‌ನಲ್ಲಿ ಮತದಾನ ಪ್ರಮಾಣ ಸೇಕಡ 54.3, ಬೆಂಗಳೂರು ಉತ್ತರದಲ್ಲಿ ಮತದಾನ ಪ್ರಮಾಣ ಶೇಕಡ 54.7 ಇತ್ತು. ಇದೇ ವೇಳೆ ಬೆಂಗಳೂರು ಗ್ರಾಮಾಂತರದಲ್ಲಿ ಮತದಾನ ಪ್ರಮಾಣ ಶೇಕಡ 64.9 ಇತ್ತು. ಕರ್ನಾಟಕದ ಒಟ್ಟು ಮತದಾನ ಪ್ರಮಾಣ ಶೇಕಡ 68 ಇತ್ತು. ಆದ್ದರಿಂದ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಬೇಕು ಎಂಬ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಿಗೆ ಪೂರಕವಾಗಿ ಎಲ್ಲರೂ ಸ್ಪಂದಿಸಬೇಕಿದೆ. ಸಾಮಾನ್ಯವಾಗಿ ವಾರಾಂತ್ಯ ಅಥವಾ ವಾರದ ಆರಂಭದಲ್ಲಿ ಮತದಾನ ದಿನ ನಿಗದಿಪಡಿಸಿದರೆ ಒಂದಿಷ್ಟು ಸಂಖ್ಯೆಯ ಮತದಾರರು ಪ್ರವಾಸಕ್ಕೆ ಹೊರಡುವ ಪ್ರವೃತ್ತಿಯನ್ನು ನಾವು ಈ ಹಿಂದಿನ ಚುನಾವಣೆಗಳಲ್ಲಿ ಗಮನಿಸಿದ್ದೇವೆ. ಅದನ್ನು ತಪ್ಪಿಸಲು ಆಯೋಗ ವಾರದ ನಡುವೆ ಮತದಾನದ ದಿನ ನಿಗದಿಪಡಿಸಿದೆ. ಹಾಗೆಯೇ ಈ ದಿನ ಸಾರ್ವತ್ರಿಕ ರಜೆಯನ್ನು ನೀಡಲಾಗಿದೆ. ರಜೆಯೆಂದು ಪ್ರವಾಸ ಹೋಗುವ ನಗರದ ಮತದಾರರ ಚಾಳಿಯನ್ನು ತಪ್ಪಿಸಲು ಹೆಚ್ಚಿನ ಪ್ರವಾಸೀ ತಾಣಗಳನ್ನು ಕ್ಲೋಸ್‌ ಮಾಡಲಾಗುತ್ತಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಅಂಥ ಒಂದು ಮತದ ಸಂಗ್ರಹಕ್ಕೆ ಮೂರ್ನಾಲ್ಕು ಮಂದಿಯನ್ನು ನಿಯೋಜಿಸಲಾಗುತ್ತದೆ ಎಂದರೆ, ಒಂದೊಂದು ಮತವನ್ನೂ ಆಯೋಗ ಎಷ್ಟು ಗಂಭಿರವಾಗಿ ಪರಿಗಣಿಸಿದೆ ಎಂಬುದನ್ನು ಗಮನಿಸಬಹುದು. ಅಗತ್ಯವಿದ್ದವರು ಇದರ ಸದ್ಬಳಕೆ ಮಾಡಿಕೊಂಡಿದ್ದಾರೆ. ಭಾರತೀಯ ಚುನಾವಣಾ ಆಯೋಗವು ನವೀನ ಮತ್ತು ವಿನೂತನ ಮತದಾರರ ಜಾಗೃತಿ ಅಭಿಯಾನಗಳನ್ನು ಆಯೋಜಿಸಿರುವುದರ ಜೊತೆಗೆ ಹೋಟೆಲ್ ಉದ್ಯಮಿಗಳು, ಕಂಪನಿಗಳು ಮತ್ತು ಇತರ ಸಂಸ್ಥೆಗಳು ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಮತದಾರರನ್ನು ಓಲೈಸಲು ತಮ್ಮನ್ನು ತಾವು ತೊಡಗಿಸಿಕೊಂಡಿವೆ. ಯುವ ಮತದಾರರಿಗೆ, ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬುಡಕಟ್ಟು ಸಮುದಾಯಗಳಿಗೆ ವಿಶೇಷ ಮತಗಟ್ಟೆ ರಚಿಸಲಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು. ಸಂವಿಧಾನದ ಪ್ರಕಾರ ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಮತದಾನದ ಒಂದು ದಿನದಂದು ಮಾತ್ರವೇ ಪ್ರಜೆ ಪ್ರಭುವಾಗಿರುತ್ತಾನೆ. ಅಂದು ಸರಿಯಾಗಿ ತಮ್ಮ ಅಧಿಕಾರ ಚಲಾಯಿಸದೇ ಹೋದರೆ ಮುಂದಿನ ಐದು ವರ್ಷ ತಮಗಿಷ್ಟವಿಲ್ಲದ ವ್ಯಕ್ತಿಗಳ ಗುಲಾಮರಾಗಿರಬೇಕಾಗುತ್ತದೆ. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಬೇಕು. ಆಗ ಮಾತ್ರ ಮತದಾನ ಪ್ರಮಾಣ ಹೆಚ್ಚಲು ಸಾಧ್ಯವಾಗುತ್ತದೆ.

Continue Reading
Advertisement
Kiran Raj Met Jon Abraham
ಸ್ಯಾಂಡಲ್ ವುಡ್8 mins ago

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Tech Mahindra
ದೇಶ8 mins ago

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Pune Police 60 Hours Operation; Drugs worth more than Rs 1300 crore seized
ಕ್ರೈಂ37 mins ago

Physical Abuse: ಹಿಟಾಚಿ ಕೆಳಗೇ 7 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪಿಶಾಚಿ

Lok Sabha Election 2024 sandalwood celebs where do cast their votes
ರಾಜಕೀಯ38 mins ago

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

China Road
ದೇಶ49 mins ago

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

Lok sabha election 2024
ದೇಶ1 hour ago

Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

Crime Scene
ಕ್ರೈಂ1 hour ago

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

lok sabha election 2024 sudha murthy voting
Live News2 hours ago

Lok Sabha Election 2024: ಲೋಕಸಭೆ ಚುನಾವಣೆ 2024 ಮತದಾನ Live News

ಅಂಕಣ2 hours ago

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Eating Bread
ಆಹಾರ/ಅಡುಗೆ2 hours ago

Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ17 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ17 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ20 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202422 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌