ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; 'ಕ್ವೀನ್ಸ್'‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ? - Vistara News

EXPLAINER

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲು ಚುನಾವಣೆಗೂ ಮುನ್ನ ಘೋಷಿಸಿದ ಮಹಿಳಾ ಕೇಂದ್ರಿತ ಯೋಜನೆಗಳ ಪಾಲು ಕೂಡ ಜಾಸ್ತಿ ಇದೆ. ಇದರಿಂದ ಹೆಣ್ಣುಮಕ್ಕಳು ಬಿಜೆಪಿ ಪರ ವಾಲಲು ಸಾಧ್ಯವಾಯಿತು ಎಂದು ವಿಶ್ಲೇಷಿಸಲಾಗಿದೆ.

VISTARANEWS.COM


on

Narendra Modi With Women
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2023) ಪ್ರಕಟವಾಗಿದ್ದು, ತೆಲಂಗಾಣ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಭರಪೂರ ಉಚಿತ ಕೊಡುಗೆಗಳ ‘ಗ್ಯಾರಂಟಿ’ ನೀಡಿದ್ದರೂ ಜನ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಬಿಜೆಪಿ ಮೂರೂ ರಾಜ್ಯಗಳಲ್ಲಿ ಗೆಲುವು ಸಾಧಿಸಲು ನಾನಾ ಕಾರಣಗಳಿದ್ದರೂ, ಹೆಣ್ಣುಮಕ್ಕಳ ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿರುವುದು ಪ್ರಮುಖ ಕಾರಣವಾಗಿದೆ. ವಿಶೇಷವಾಗಿ ಗೃಹಿಣಿಯರು ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಗೆ ಮತ ನೀಡಿದ್ದು ಚುನಾವಣೆಯಲ್ಲಿ ಟರ್ನಿಂಗ್‌ ಪಾಯಿಂಟ್‌ ಆಗಿದೆ ಎಂದು ವಿಶ್ಲೇಷಿಸಲಾಗಿದೆ. ಹಾಗಾದರೆ, ಮೂರೂ ರಾಜ್ಯಗಳಲ್ಲಿ ಬಿಜೆಪಿಯು ಹೆಣ್ಣುಮಕ್ಕಳನ್ನು ಸೆಳೆದಿದ್ದು ಹೇಗೆ? ಯಾವ ಯೋಜನೆಗಳು ಸ್ತ್ರೀಯರ ಮತಗಳನ್ನು ವಾಲಿಸಿದವು ಎಂಬುದರ ಕಿರು ಮಾಹಿತಿ ಇಲ್ಲಿದೆ.

ಲಾಡ್ಲಿ ಬೆಹ್ನಾ ಯೋಜನೆ

ಮಧ್ಯಪ್ರದೇಶದಲ್ಲಿ ಬಡ ಹೆಣ್ಣುಮಕ್ಕಳಿಗೆ ಮಾಸಿಕ 1 ಸಾವಿರ ರೂ. ಸಹಾಯ ಧನ ನೀಡುವುದೇ ಲಾಡ್ಲಿ ಬೆಹನಾ ಯೋಜನೆಯಾಗಿದೆ. ಕಾಂಗ್ರೆಸ್‌ ಉಚಿತ ಕೊಡುಗೆಗಳ ಘೋಷಣೆಯನ್ನು ಮೊದಲೇ ಅರಿತಿದ್ದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 2023ರ ಮಾರ್ಚ್‌ನಲ್ಲಿಯೇ ಲಾಡ್ಲಿ ಬೆಹನಾ ಯೋಜನೆಯನ್ನು ಜಾರಿಗೆ ತಂದರು. ಯೋಜನೆ ಜಾರಿಗೆ ತಂದು, ಬಡ ಹೆಣ್ಣುಮಕ್ಕಳ ಖಾತೆಗಳಿಗೆ ಮಾಸಿಕ 1 ಸಾವಿರ ರೂ. ಜಮೆ ಮಾಡಿಸಿದರು. ಆ ಮೂಲಕ ಸರ್ಕಾರವು ಮಹಿಳೆಯರ ಪರ ಇದೆ ಎಂಬ ಸಂದೇಶ ರವಾನಿಸಿದರು. ಅಲ್ಲದೆ, ಹೆಣ್ಣುಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.35ರಷ್ಟು ಮೀಸಲಾತಿ ಘೋಷಿಸಿದರು. 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಿದರು. ಇದು ಮಧ್ಯಪ್ರದೇಶದಲ್ಲಿ ಹೆಣ್ಣುಮಕ್ಕಳು ಬಜೆಪಿ ಪರ ವಾಲಲು ಸಾಧ್ಯವಾಯಿತು ಎಂದು ವಿಶ್ಲೇಷಿಸಲಾಗಿದೆ.

Shivraj Singh Chouhan

ರಾಜಸ್ಥಾನದಲ್ಲಿ ಕೈ ಹಿಡಿದ ಭರವಸೆ

ರಾಜಸ್ಥಾನದಲ್ಲಿ ಹೆಣ್ಣುಮಕ್ಕಳ ಸಮಸ್ಯೆಗಳನ್ನು, ಆ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದನ್ನು ಪ್ರಚಾರದ ಅಸ್ತ್ರವಾಗಿಸಿಕೊಂಡ ಬಿಜೆಪಿಯು, ಚುನಾವಣೆ ಪ್ರಣಾಳಿಕೆಯಲ್ಲಿ ಹಲವು ಭರವಸೆಗಳನ್ನೂ ನೀಡಿತು. ಇದು ಚುನಾವಣೆಯಲ್ಲಿ ಹೆಣ್ಣುಮಕ್ಕಳು ಬಿಜೆಪಿಗೆ ಮತ ಹಾಕಲು ಸಾಧ್ಯವಾಯಿತು. ಪ್ರಣಾಳಿಕೆಯಲ್ಲಿ ಬಿಜೆಪಿಯು, ಹೆಣ್ಣು ಮಕ್ಕಳಿಗಾಗಿ ಲಾಡೋ ಪ್ರೋತ್ಸಾಹ್ ಯೋಜನೆಯನ್ನು ಪರಿಚಯಿಸುವುದಾಗಿ ತಿಳಿಸಿತು. ಇದರ ಅಡಿಯಲ್ಲಿ ಮಧ್ಯಪ್ರದೇಶದ ಲಾಡ್ಲಿ ಲಕ್ಷ್ಮಿ ಯೋಜನೆಯಂತೆಯೇ ಪ್ರತಿ ಹೆಣ್ಣು ಮಗುವಿನ ಹೆಸರಿನಲ್ಲಿ 2 ಲಕ್ಷ ರೂ. ಉಳಿತಾಯ ಬಾಂಡ್ ನೀಡಲಾಗುವುದು ಎಂದು ಹೇಳಿತು.

ಇನ್ನು ಗ್ರಾಮೀಣ ಪ್ರದೇಶದ ಮಹಿಳೆಯರನ್ನು ಸ್ವಾವಲಂಬಿ ಮಾಡುವುದಕ್ಕಾಗಿ ಬಿಜೆಪಿಯು ಸುಮಾರು 6 ಲಕ್ಷ ಮಹಿಳೆಯರಿಗೆ ಲಕಪತಿ ದೀದಿ ಸ್ಕೀಮ್‌ನಲ್ಲಿ ತರಬೇತಿ ಮತ್ತು ಆರ್ಥಿಕ ಬೆಂಬಲ ನೀಡುವುದಾಗಿ ಘೋಷಿಸಿತು. ಅಲ್ಲದೆ, ಉಜ್ವಲಾ ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಮೇಲೆ 450 ರೂ. ಸಬ್ಸಿಡಿ ನೀಡಲಾಗುವುದು. ಮಾತೃ ವಂದನಾ ಯೋಜನೆಯ ಮೊತ್ತವನ್ನು 5000 ರೂ.ನಿಂದ 8000 ರೂ.ವರೆಗೆ ಹೆಚ್ಚಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಬಿಜೆಪಿಗೆ ವರದಾನವಾಯಿತು. ಕಾಂಗ್ರೆಸ್‌ ಕೂಡ ಇಂತಹ ಉಚಿತ ಕೊಡುಗೆಗಳ ಭರವಸೆ ನೀಡಿದರೂ ಆಡಳಿತ ವಿರೋಧಿ ಅಲೆಯು ಆ ಪಕ್ಷಕ್ಕೆ ಮುಳುವಾಯಿತು.

ಛತ್ತೀಸ್‌ಗಢದಲ್ಲೂ ನಾರಿ ಶಕ್ತಿ ಬಲ

ಕರ್ನಾಟಕದಲ್ಲಿ ಹೆಣ್ಣುಮಕ್ಕಳಿಗೆ ಭರವಸೆ ನೀಡಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದನ್ನು ಮನಗಂಡಿದ್ದ ಬಿಜೆಪಿಯು ಛತ್ತೀಸ್‌ಗಢದಲ್ಲೂ ಮಹಿಳಾ ಕೇಂದ್ರಿತವಾಗಿಯೇ ಭರವಸೆಗಳನ್ನು ನೀಡಿತು. ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12 ಸಾವಿರ ರೂ. ಆರ್ಥಿಕ ನೆರವು, ಗ್ಯಾಸ್‌ ಸಬ್ಸಿಡಿ ಸೇರಿ ಹಲವು ಘೋಷಣೆ ಮಾಡಲಾಯಿತು. ಚುನಾವಣೆಯಲ್ಲಿ ಇವುಗಳ ಕುರಿತು ಭಾರಿ ಪ್ರಚಾರ ನಡೆಸಲಾಯಿತು. ಸಾಮಾಜಿಕ ಜಾಲತಾಣಗಳನ್ನೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಯಿತು. ಇದು ಬಿಜೆಪಿಯು ಹೆಣ್ಣುಮಕ್ಕಳ ಮತಗಳನ್ನು ಪಡೆಯುವಲ್ಲಿ, ಆ ಮೂಲಕ ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬರುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿತು.

ಇದನ್ನೂ ಓದಿ: ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

ಛತ್ತೀಸ್‌ಗಢದಲ್ಲಿ ಮೋದಿ ಸರ್ಕಾರ ಬುಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳು ಕೂಡ ಅವರ ಒಲವು ಗಳಿಸಲು ನೆರವಾಗಿವೆ. ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿಯೇ (ನ.15ರಂದು) ಪ್ರಧಾನಿ ಮೋದಿ, ʼವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳʼ (particularly vulnerable tribal groups – PVTG) ಅಭಿವೃದ್ಧಿಗಾಗಿ ನೂತನ ಕಾರ್ಯಕ್ರಮವೊಂದನ್ನು ಘೋಷಿಸಿದ್ದರು. ಈ ಯೋಜನೆಯು 24,000 ಕೋಟಿ ರೂ. ವೆಚ್ಚದಲ್ಲಿ ಅಂಚಿನಲ್ಲಿರುವ ಬುಡಕಟ್ಟು ಸಮುದಾಯಗಳವರಿಗೆ ತಲುಪುವಂಥ ರಸ್ತೆ, ಟೆಲಿಕಾಂ ಸಂಪರ್ಕ, ಶಿಕ್ಷಣ, ಆರೋಗಹ್ಯ ಸೇವೆ, ಪೌಷ್ಟಿಕತೆಯ ಮತ್ತಿತ ಸೌಲಭ್ಯಗಳನ್ನು ತಲುಪಿಸುವ ಕಾರ್ಯಕ್ರಮವಾಗಿದೆ. ಇದು ಕೂಡ ಚುನಾವಣೆಯಲ್ಲಿ ಮತಗಳನ್ನು ಸೆಳೆಯಲು ಸಾಧ್ಯವಾಯಿತು ಎಂದು ಹೇಳಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Mudra loan: ಕೇಂದ್ರ ಬಜೆಟ್‌ನಲ್ಲಿ ಮುದ್ರಾ ಸಾಲ ಮಿತಿ ಹೆಚ್ಚಳ; ಷರತ್ತುಗಳೇನು? ಯಾರಿಗೆ ಪ್ರಯೋಜನ?

ಮುದ್ರಾ ಸಾಲದ (Mudra loan) ಮಿತಿಗಳನ್ನು ಹೆಚ್ಚಿಸಿರುವುದರಿಂದ ಅನೇಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಮುಖ್ಯವಾಗಿ ಸಣ್ಣ ಉದ್ಯಮಿಗಳು ಮತ್ತು ಉದ್ಯಮಿಗಳು ಇದರ ಲಾಭ ಪಡೆಯಲಿದ್ದಾರೆ. ಹೆಚ್ಚಿನ ಸಾಲದ ಮಿತಿಯೊಂದಿಗೆ ಇದಕ್ಕೆ ಕೆಲವು ಷರತ್ತುಗಳನ್ನು ಸಹ ಪರಿಚಯಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.

VISTARANEWS.COM


on

By

Mudra loan
Koo

ಕೇಂದ್ರ ಬಜೆಟ್‌ನಲ್ಲಿ (Union Budget 2024) ಈ ಬಾರಿ ಹಲವಾರು ವಿಷಯಗಳ ಬಗ್ಗೆ ಕಾಳಜಿ ವಹಿಸಲಾಗಿದೆ. ಮೋದಿ ಸರ್ಕಾರದ (Modi government) ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಸಂಸತ್ತಿನಲ್ಲಿ ಮಂಡಿಸಿ ಹಲವು ಜನಪರ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ವೇಳೆ ಅವರು ಮುದ್ರಾ ಸಾಲದ (Mudra loan) ಕುರಿತು ಮಾತನಾಡಿದ್ದು, ಅದರ ಮಿತಿಗಳನ್ನು ಹೆಚ್ಚಿಸಿರುವುದಾಗಿ ತಿಳಿಸಿದ್ದಾರೆ.

ಮುದ್ರಾ ಸಾಲದ ಮಿತಿಗಳನ್ನು ಹೆಚ್ಚಿಸಿರುವುದರಿಂದ ಅನೇಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಮುಖ್ಯವಾಗಿ ಸಣ್ಣ ಉದ್ಯಮಿಗಳು ಮತ್ತು ಉದ್ಯಮಿಗಳು ಇದರ ಲಾಭ ಪಡೆಯಲಿದ್ದಾರೆ. ಹೆಚ್ಚಿನ ಸಾಲದ ಮಿತಿಯೊಂದಿಗೆ ಇದಕ್ಕೆ ಕೆಲವು ಷರತ್ತುಗಳನ್ನು ಸಹ ಪರಿಚಯಿಸಲಾಗಿದೆ. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.
ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದು ಉದ್ಯಮಿಯಾಗಲು ಬಯಸುವವರಿಗೆ ವರದಾನವಾಗಿದೆ.

ಷರತ್ತುಗಳು ಏನು?

ಹೆಚ್ಚಿದ ಸಾಲದ ಮಿತಿಗೆ ಅರ್ಹತೆ ಪಡೆಯಲು ಸಾಲಗಾರರು ಈ ಹಿಂದೆ ಮುದ್ರಾ ಸಾಲವನ್ನು ತೆಗೆದುಕೊಂಡು ಪೂರ್ಣವಾಗಿ ಮರುಪಾವತಿಸಿರಬೇಕು. ಹಾಗಿದ್ದರೆ ಮಾತ್ರ ಹೊಸ ಪ್ರಯೋಜನಗಳನ್ನು ಪಡೆಯಬಹುದು.

ಮುದ್ರಾ ಸಾಲ ವಿಭಾಗಗಳು

ಮುದ್ರಾ ಸಾಲಗಳನ್ನು ಮೂರು ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ʼಶಿಶುʼ ವಿಭಾಗದಲ್ಲಿ 50,000 ರೂ.ವರೆಗೆ ಸಾಲ, ʼಕಿಶೋರʼ ವಿಭಾಗದಲ್ಲಿ 50,000 ರೂ.ನಿಂದ 5 ಲಕ್ಷ ರೂ. ವರೆಗೆ ಸಾಲ, ʼತರುಣ್ʼ ವಿಭಾಗದಲ್ಲಿ 5 ಲಕ್ಷದಿಂದ 10 ಲಕ್ಷ ರೂ.ವರೆಗಿನ ಸಾಲಗಳು.

ಪರಿಣಾಮ ಮತ್ತು ವ್ಯಾಪ್ತಿ ಏನು?

ಪ್ರಧಾನಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ) ಅಡಿಯಲ್ಲಿ 47 ಕೋಟಿಗೂ ಹೆಚ್ಚು ಸಣ್ಣ ಮತ್ತು ದೊಡ್ಡ ಉದ್ಯಮಗಳಿಗೆ 27.75 ಲಕ್ಷ ಕೋಟಿ ರೂ.ಗಳ ಸಾಲವನ್ನು ವಿತರಿಸಲಾಗಿದೆ. ಗಮನಾರ್ಹ ಸಂಗತಿ ಎಂದರೆ ಮಂಜೂರಾದ ಒಟ್ಟು 44.46 ಕೋಟಿ ಸಾಲದಲ್ಲಿ ಶೇ.69ರಷ್ಟು ಮಹಿಳಾ ಉದ್ಯಮಿಗಳಿಗೆ ನೀಡಲಾಗಿದೆ.

Mudra loan
Mudra loan


ಹಿಂದುಳಿದ ವರ್ಗದವರಿಗೆ ಬೆಂಬಲ

2015ರ ಏಪ್ರಿಲ್ 8ರಂದು ಪ್ರಾರಂಭವಾದ ಮುದ್ರಾ ಯೋಜನೆಯು 2016ರಲ್ಲಿ ಪ್ರಾರಂಭವಾದ ಎಸ್‌ಯುಪಿಐ ಯೋಜನೆಯೊಂದಿಗೆ ವಿಶೇಷವಾಗಿ ಮಹಿಳೆಯರು ಮತ್ತು ಎಸ್ ಸಿ/ ಎಸ್‌ಟಿ ಸಮುದಾಯಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಗಳು ಹೊಸ ಉದ್ಯಮಗಳ ಸ್ಥಾಪನೆಯನ್ನು ಬೆಂಬಲಿಸುತ್ತವೆ ಮತ್ತು ಮಹಿಳೆಯರ ಆರ್ಥಿಕ ಉನ್ನತಿಗೆ ಪ್ರೋತ್ಸಾಹ ನೀಡುತ್ತದೆ.

ಇದನ್ನೂ ಓದಿ: Union Budget 2024: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ₹7,559 ಕೋಟಿ ಅನುದಾನ; ಕಳೆದ ವರ್ಷಕ್ಕಿಂತ ಕಡಿಮೆ

ಉದ್ಯಮಶೀಲತೆಗೆ ಉತ್ತೇಜನ

ʼಮುದ್ರಾʼ ಯೋಜನೆ ಮತ್ತು ಎಸ್‌ಯುಪಿಐ ಯೋಜನೆಗಳು ಅಗತ್ಯ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಸಣ್ಣ ಮತ್ತು ಅತಿಸಣ್ಣ ಉದ್ಯಮಗಳನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾಗಿದೆ. ವ್ಯಾಪಾರ ಅವಕಾಶಗಳನ್ನು ಮುಂದುವರಿಸಲು ಅನನುಕೂಲಕರ ಪರಿಸ್ಥಿತಿ ಎದುರಿಸುತ್ತಿರುವವರನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಬ್ಯಾಂಕ್‌ಗಳ ಸ್ಥಳೀಯ ಶಾಖೆಗೆ ಹೋಗಿ ಮುದ್ರಾ ಸಾಲ ಯೋಜನೆಯ ಮಾಹಿತಿ ಪಡೆಯಬಹುದು.

Continue Reading

ದೇಶ

Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Union Budget 2024: ಕೇಂದ್ರ ಸರ್ಕಾರವು ಚಿನ್ನದ ಮೇಲಿನ ಕಸ್ಟಮ್ಸ್‌ ಸುಂಕವನ್ನು ಇಳಿಕೆ ಮಾಡಿದ್ದು, ಗ್ರಾಹಕರು ಚಿನ್ನ ಖರೀದಿಸಲು ತುದಿಗಾಲಿನ ಮೇಲೆ ನಿಂತಿದ್ದಾರೆ. ಮತ್ತೊಂದೆಡೆ, ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ ಎಂಬ ಪ್ರಶ್ನೆಯು ಹೂಡಿಕೆದಾರರಿಗೆ ಕಾಡುತ್ತಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ.

VISTARANEWS.COM


on

Union Budget 2024
Koo

ನವದೆಹಲಿ: ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ.6ರಷ್ಟು ಇಳಿಕೆ ಮಾಡಲಾಗುವುದು ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ನಲ್ಲಿ (Union Budget 2024) ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯು ಇಳಿಕೆಯಾಗಲಿದೆ. ಇದು ಗ್ರಾಹಕರಿಗೆ ಶುಭ ಸುದ್ದಿಯಾಗಿದೆ. ಇನ್ನು, ಚಿನ್ನದ ಮೇಲಿನ ಕಸ್ಟಮ್ಸ್‌ ಸುಂಕವನ್ನು ಇಳಿಸಿರುವುದು ಚಿನ್ನದ ಮೇಲೆ ಹೂಡಿಕೆ ಮಾಡಲು ಸಕಾರಾತ್ಮಕ ಪರಿಣಾಮವೇ? ಈಗ ಚಿನ್ನದ ಮೇಲೆ ಹೂಡಿಕೆ ಮಾಡಲು ಸಕಾಲವೇ ಎಂಬ ಪ್ರಶ್ನೆಗಳು ಉದಯಿಸಿವೆ. ಇಂತಹ ಪ್ರಶ್ನೆಗಳಿಗೆ ತಜ್ಞರು ಉತ್ತರ ನೀಡಿದ್ದಾರೆ.

ಕಸ್ಟಮ್ಸ್‌ ಸುಂಕ ಇಳಿಸಿದ್ದು ಹೂಡಿಕೆಗೆ ಸಕಾರಾತ್ಮಕವೇ?

ಕೇಂದ್ರ ಸರ್ಕಾರವು ಚಿನ್ನದ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ.6ರಷ್ಟು ಇಳಿಸಿರುವುದು ಗ್ರಾಹಕರು ಖರೀದಿಸಲು ಉತ್ತಮ ಸಮಯವಾಗಿರುವುದರ ಜತೆಗೆ ಹೂಡಿಕೆಗೂ ಸಕಾಲವಾಗಿದೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಚಿನ್ನದ ಬೆಲೆಯು ಏಕಾಏಕಿ ಇಳಿಕೆಯಾಗಲಿದ್ದು, ಮದುವೆ ಸೇರಿ ಹಲವು ಸಮಾರಂಭಗಳಿಗೆ ಗ್ರಾಹಕರು ಚಿನ್ನ ಖರೀದಿಸಲು ಅನುಕೂಲವಾಗಲಿದೆ. ಇನ್ನು, ಚಿನ್ನದ ಬೆಲೆಯು ಇಳಿಕೆಯಾಗುವ ಕಾರಣ ಹೂಡಿಕೆ ಮಾಡುವವರೂ ಹೆಚ್ಚಿನ ಪ್ರಮಾಣದ ಚಿನ್ನವನ್ನು ಖರೀದಿಸಬಹುದಾಗಿದೆ.

ಚಿನ್ನದ ಬೆಲೆಯನ್ನು ಜಾಗತಿಕ ಆರ್ಥಿಕ ಪರಿಸ್ಥಿತಿಗಳು, ಜಾಗತಿಕ ರಾಜಕೀಯ ಬೆಳವಣಿಗೆಗಳು, ಹೂಡಿಕೆದಾರರ ಮನಸ್ಥಿತಿ ಸೇರಿ ಹಲವು ಅಂಶಗಳ ಮೇಲೆ ನಿರ್ಧರಿಸಲಾಗುತ್ತದೆ. ಇದರಿಂದಾಗಿ, ಬಹುತೇಕ ಸಂದರ್ಭದಲ್ಲಿ ಚಿನ್ನದ ಬೆಲೆಯು ಏರಿಕೆಯೇ ಆಗುತ್ತದೆ. ಹಾಗಾಗಿ, ಚಿನ್ನದ ಬೆಲೆಯು ಕಡಿಮೆಯಾದಾಗಲೇ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದರೆ, ಅದು ಹೂಡಿಕೆಯ ದೃಷ್ಟಿಯಿಂದ ಉತ್ತಮ ನಿರ್ಧಾರವಾಗುತ್ತದೆ. ಆದರೆ, ಇರುವ ಹಣವನ್ನೆಲ್ಲ ಚಿನ್ನದ ಮೇಲೆಯೇ ಹೂಡಿಕೆ ಮಾಡುವುದು ಅಪಾಯಕಾರಿ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

“ಚಿನ್ನದ ಮೇಲಿನ ಮೂಲ ಕಸ್ಟಮ್ಸ್‌ ಸುಂಕವನ್ನು ಇಳಿಕೆ ಮಾಡಿರುವುದು ಖರೀದಿ ಜತೆಗೆ ದೇಶೀಯ ಚಿನ್ನದ ಉದ್ಯಮದಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಲಿದೆ. ಇದರಿಂದಾಗಿ ಚಿನ್ನದ ಮೇಲಿನ ಒಟ್ಟು ಶೇ.18.5ರಷ್ಟು ತೆರಿಗೆಯು ಶೇ.9ಕ್ಕೆ (ಜಿಎಸ್‌ಟಿ ಸೇರಿ) ಇಳಿಯಲಿದೆ. ಇದರಿಂದ ಖರೀದಿ ಹಾಗೂ ಹೂಡಿಕೆ ಮಾಡಲು ಉತ್ತಮ ಸಮಯವಾಗಿದೆ” ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ರೀಜನಲ್‌ ಸಿಇಒ ಸಚಿನ್‌ ಜೈನ್‌ ಅವರು ನ್ಯೂಸ್‌ 18 ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಹೂಡಿಕೆ ಮಾಡುವವರಿಗೆ ತೆರಿಗೆ ಬಗ್ಗೆಯೂ ಗಮನ ಇರಲಿ

ಚಿನ್ನದ ಬೆಲೆ ಇಳಿಕೆಯಾಗಿದೆ ಎಂದು ಹೆಚ್ಚಾಗಿ ಚಿನ್ನವನ್ನು ಖರೀದಿಸುವ ಮುನ್ನ ಕ್ಯಾಪಿಟಲ್‌ ಗೇನ್‌ (Capital Gain) ಬಗ್ಗೆಯೂ ಗಮನ ಹರಿಸಬೇಕು. ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಕ್ಯಾಪಿಟಲ್‌ ಗೇನ್‌ ಅಂದರೆ, ಹೂಡಿಕೆ ಮೇಲಿನ ತೆರಿಗೆಯನ್ನು ಏರಿಕೆ ಮಾಡಿರುವುದರಿಂದ ಚಿನ್ನದ ಮೇಲೆ ಹೆಚ್ಚು ಹೂಡಿಕೆ ಮಾಡಿ, ಬಳಿಕ ಚಿನ್ನವನ್ನು ಮಾರಾಟ ಮಾಡಲು ಮುಂದಾದರೆ, ತೆರಿಗೆ ಹೊಡೆತ ಬೀಳುತ್ತದೆ ಎಂಬುದು ಹೂಡಿಕೆದಾರರು ಗಮನಿಸಬೇಕಾದ ಪ್ರಮುಖ ಸಂಗತಿಯಾಗಿದೆ.

ನೀವು ಚಿನ್ನವನ್ನು ಖರೀದಿಸಿ, ಅದನ್ನು 2 ವರ್ಷದ ಬಳಿಕ ಮಾರಾಟ ಮಾಡಿದರೆ, ನಿಮಗೆ ನಿಗದಿಯಂತೆ ಆದಾಯ ತೆರಿಗೆ ಸ್ಲ್ಯಾಬ್‌ ರೇಟ್‌ ಪ್ರಕಾರ ತೆರಿಗೆಯನ್ನು ವಿಧಿಸಲಾಗುತ್ತದೆ. ಆದರೆ, ನೀವು ಖರೀದಿಸಿದ ಚಿನ್ನವನ್ನು 24 ತಿಂಗಳ ಬಳಿಕ ಮಾರಾಟ ಮಾಡಿದರೆ, ನೀವು ದೀರ್ಘಾವಧಿ ಹೂಡಿಕೆ ಕ್ಯಾಪಿಟಲ್‌ ಗೇನ್ಸ್‌ ವ್ಯಾಪ್ತಿಗೆ ಬಂದು, ಮಾರಾಟ ಮಾಡಿದ ಬಳಿಕ ಆಗುವ ಕ್ಯಾಪಿಟಲ್‌ ಗೇನ್‌ನಲ್ಲಿ ಶೇ.12.5ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: Union Budget 2024: ಹಳೇ ತೆರಿಗೆ Vs ಹೊಸ ತೆರಿಗೆ; ಯಾರಿಗೆ ಯಾವುದು ಅನುಕೂಲ? ಇಲ್ಲಿದೆ ಕಂಪ್ಲೀಟ್ ಮಾಹಿತಿ

Continue Reading

ಬಜೆಟ್ 2024

Union Budget 2024: ಹಳೇ ತೆರಿಗೆ Vs ಹೊಸ ತೆರಿಗೆ; ಯಾರಿಗೆ ಯಾವುದು ಅನುಕೂಲ? ಇಲ್ಲಿದೆ ಕಂಪ್ಲೀಟ್ ಮಾಹಿತಿ

Union Budget 2024: ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಂಡವರ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಏರಿಕೆ, ಸ್ಲ್ಯಾಬ್‌ಗಳ ಸ್ಟ್ರಕ್ಚರ್‌ ಬದಲಿಸಿದ ಕಾರಣ ಬಹುತೇಕ ಜನ ಹೊಸ ತೆರಿಗೆ ಪದ್ಧತಿಯೇ ಹೆಚ್ಚು ಅನುಕೂಲ ಎಂಬುದಾಗಿ ಭಾವಿಸಿದ್ದಾರೆ. ಆದರೆ, ಹೆಚ್ಚು ಸಂಬಳ ಇರುವವರಿಗೆ ಹಳೆಯ ತೆರಿಗೆ ಪದ್ಧತಿಯೇ ಹೆಚ್ಚು ಲಾಭದಾಯಕವಾಗಿದೆ. ಯಾರಿಗೆ ಯಾವ ತೆರಿಗೆ ಪದ್ಧತಿ ಹೆಚ್ಚು ಅನುಕೂಲ ಎಂಬುದರ ಮಾಹಿತಿ ಹೀಗಿದೆ…

VISTARANEWS.COM


on

Union Budget 2024
Koo

ನವದೆಹಲಿ: ಉದ್ಯೋಗಿಗಳಿಗೆ, ತೆರಿಗೆ ಪಾವತಿದಾರರಿಗೆ ಅನುಕೂಲವಾಗುವ ದಿಸೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ನಲ್ಲಿ (Union Budget 2024) ಹಲವು ಕ್ರಮಗಳನ್ನು ಘೋಷಣೆ ಮಾಡಿದ್ದಾರೆ.‌ ಅದರಲ್ಲೂ, ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಏರಿಕೆ, ಹೊಸ ತೆರಿಗೆ ಪದ್ಧತಿಯ ಸ್ಲ್ಯಾಬ್‌ಗಳ ಬದಲಾವಣೆ ಮಾಡಿದ ಕಾರಣ ಹೊಸ ತೆರಿಗೆ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಒಳಿತು ಎಂದು ಹೇಳಲಾಗುತ್ತಿದೆ. ಹಾಗಂತ, ಹಳೆಯ ತೆರಿಗೆ ಪದ್ಧತಿಯನ್ನು ಅಳವಡಿಸಿಕೊಳ್ಳುವವರಿಗೆ ನಷ್ಟ ಎಂದಲ್ಲ. ಹೆಚ್ಚಿನ ಸಂಬಳ ಪಡೆಯುವವರಿಗೆ ಹಳೆಯ ತೆರಿಗೆ ಪದ್ಧತಿಯು ತೆರಿಗೆ ಉಳಿಸುತ್ತದೆ. ಹಾಗಾದರೆ, ಎಷ್ಟು ಸಂಬಳ ಇರುವವರು ಯಾವ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ? ಇಲ್ಲಿದೆ ಮಾಹಿತಿ.

ಹೊಸ ತೆರಿಗೆ ಪದ್ಧತಿ ಯಾರಿಗೆ ಅನುಕೂಲ?

ಸ್ಟಾಂಡರ್ಡ್‌ ಡಿಡಕ್ಷನ್‌ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ. ಈ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು ಕೇಂದ್ರ ಸರ್ಕಾರವೀಗ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು 50 ಸಾವಿರ ರೂ.ನಿಂದ 75 ಸಾವಿರ ರೂ.ಗೆ ಏರಿಕೆ ಮಾಡಿರುವುದರಿಂದ, ಹೊಸ ತೆರಿಗೆಯ ಸ್ಲ್ಯಾಬ್‌ಗಳ ಸ್ಟ್ರಕ್ಚರ್‌ ಬದಲಾವಣೆ ಮಾಡಿರುವುದರಿಂದ 6-7 ಲಕ್ಷ ರೂ. ಆದಾಯ ಗಳಿಸುವವರು ಶೇ.10ರಷ್ಟು ಬದಲು ಶೇ.5ರಷ್ಟು ತೆರಿಗೆ ಪಾವತಿಸುತ್ತಾರೆ. ಇನ್ನು, 9-10 ಲಕ್ಷ ರೂ. ಆದಾಯ ಗಳಿಸುವವರು ಶೇ.15ರ ಬದಲು ಶೇ.10ರಷ್ಟು ತೆರಿಗೆ ಪಾವತಿಸಲಿದ್ದಾರೆ.

Viral Video
ITR Filing

ವರ್ಷಕ್ಕೆ ಸುಮಾರು 7.75 ಲಕ್ಷ ರೂ.ವರೆಗೆ ಸಂಬಳ ಪಡೆಯುವವರು ಇನ್ನು ಮುಂದೆ ಯಾವುದೇ ತೆರಿಗೆ ಪಾವತಿ ಮಾಡಬೇಕಿಲ್ಲ. ಅವರು ಶೂನ್ಯ ತೆರಿಗೆ ವ್ಯಾಪ್ತಿಯಲ್ಲೇ ಬರಲಿದ್ದಾರೆ. ಹಾಗಾಗಿ, ಮಧ್ಯಮ ವರ್ಗದವರಿಗೆ ಹೊಸ ತೆರಿಗೆ ಪದ್ಧತಿಯು ಹೆಚ್ಚು ಅನುಕೂಲಕರವಾಗಿದೆ.

ಹಳೆಯ ತೆರಿಗೆ ಪದ್ಧತಿಯಿಂದ ಯಾರಿಗೆ ಲಾಭ?

8 ಲಕ್ಷ ರೂಪಾಯಿಗಿಂತ ಹೆಚ್ಚು ವಾರ್ಷಿಕ ಸಂಬಳ ಪಡೆಯುವವರಿಗೆ ಹಳೆಯ ತೆರಿಗೆ ಪದ್ಧತಿಯು ಹೆಚ್ಚು ಲಾಭದಾಯಕವಾಗಲಿದೆ. ಸುಮಾರು 11 ಲಕ್ಷ ರೂ. ವಾರ್ಷಿಕ ಆದಾಯ ಪಡೆಯುವವರು, ಹಳೆಯ ತೆರಿಗೆ ಪದ್ಧತಿ ಅನ್ವಯ ಸ್ಟಾಂಡರ್ಡ್‌ ಡಿಡಕ್ಷನ್‌, 2 ಲಕ್ಷ ರೂ.ವರೆಗಿನ ಗೃಹ ಸಾಲ, ಮನೆ ಬಾಡಿಗೆ (HRA) ಮೊತ್ತವನ್ನು ಡಿಡಕ್ಷನ್‌ ಮಾಡಿಕೊಂಡರೆ, ಹಳೆಯ ತೆರಿಗೆ ಪದ್ಧತಿಯು ಹೆಚ್ಚು ಅನುಕೂಲವಾಗಲಿದೆ.

ITR Filing
ITR Filing

ಇನ್ನು, ಗಂಡ-ಹೆಂಡತಿ ಇಬ್ಬರೂ 11 ಲಕ್ಷ ರೂ. ಆದಾಯ ಹೊಂದಿದ್ದರಂತೂ, ಹೆಚ್ಚಿನ ಲಾಭ ಪಡೆಯಲಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ. ಅಷ್ಟೇ ಅಲ್ಲ, 11 ಲಕ್ಷ ರೂ.ನಿಂದ 60 ಲಕ್ಷ ರೂ.ವರೆಗೆ ಸಂಬಳ ಪಡೆಯುವವರು ಕೂಡ ಹಳೆಯ ತೆರಿಗೆ ಪದ್ಧತಿ ಅನ್ವಯ ಹೆಚ್ಚು ಹಣವನ್ನು ಉಳಿಸಬಹುದಾಗಿದೆ ಎಂಬುದಾಗಿ ಹಣಕಾಸು ತಜ್ಞರು ತಿಳಿಸಿದ್ದಾರೆ.

ಹಳೇ ತೆರಿಗೆ ಪದ್ಧತಿ ರದ್ದಾಗುತ್ತದೆಯೇ?

ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಳ್ಳುವವರಿಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಕಾರಣ ಹಳೆಯ ತೆರಿಗೆ ಪದ್ಧತಿಯನ್ನು ಒಂದು ವರ್ಷದಲ್ಲಿ ರದ್ದುಗೊಳಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಇದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅಲ್ಲಗಳೆದಿದ್ದಾರೆ.

“ಹಳೆಯ ತೆರಿಗೆ ಪದ್ಧತಿಯನ್ನು ರದ್ದುಗೊಳಿಸುವ ಕುರಿತು ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಏಕಾಏಕಿ ಹಳೆಯ ತೆರಿಗೆ ಪದ್ಧತಿಯನ್ನು ತೆಗೆದುಹಾಕಲು ಕೂಡ ಆಗುವುದಿಲ್ಲ. ಹಳೆಯ ತೆರಿಗೆ ಪದ್ಧತಿಯನ್ನು ಇನ್ನಷ್ಟು ಸುಲಭಗೊಳಿಸುವ ದಿಸೆಯಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಪರಿಚಯಿಸಲಾಗಿದೆ. ಆದರೆ, ಹಳೆಯ ತೆರಿಗೆ ಪದ್ಧತಿಯನ್ನು ತೆಗೆದುಹಾಕುವ ನಿರ್ಧಾರ ತೆಗೆದುಕೊಂಡಿಲ್ಲ” ಎಂದು ಬಜೆಟ್‌ ಮಂಡನೆ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ: NPS Vatsalya Scheme: ಏನಿದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆ? ನಮ್ಮ ಮಕ್ಕಳಿಗೆ ಇದರಿಂದೇನು ಪ್ರಯೋಜನ?

Continue Reading

ದೇಶ

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ತತ್ತರಿಸಿದ ಪಾಕಿಗಳು; ಈ ನಾಲ್ವರು ಯೋಧರ ಸಾಹಸ ರೋಚಕ!

ಕಾರ್ಗಿಲ್ (Kargil Vijay Diwas) ಯುದ್ಧದ ಸಮಯದಲ್ಲಿ ದೇಶದ ಸಾರ್ವಭೌಮತೆಗೆ ಒಂದಿಷ್ಟೂ ಧಕ್ಕೆಯಾಗದಂತೆ ಸೇನಾ ಯೋಧರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಅವರ ಶೌರ್ಯ, ಧೈರ್ಯ ಮತ್ತು ಉತ್ಸಾಹದ ಕಥೆಗಳು ಕೇವಲ ನಮ್ಮನ್ನು ಹೆಮ್ಮೆ ಪಡುವಂತೆ ಮಾಡುವುದು ಮಾತ್ರವಲ್ಲ. ಜೊತೆಗೆ ನಮ್ಮ ಕಣ್ಣುಗಳನ್ನೂ ತೇವಗೊಳ್ಳುವಂತೆ ಮಾಡುತ್ತದೆ. ಅಂತಹ ಕಾರ್ಗಿಲ್ ವೀರರ ಕಥೆಗಳು ಇಲ್ಲಿವೆ.

VISTARANEWS.COM


on

By

Kargil Vijay Diwas 2024
Koo

ಜಮ್ಮು ಕಾಶ್ಮೀರದ (jammu and kashmir) ಕಾರ್ಗಿಲ್‌ನಲ್ಲಿ (Kargil Vijay Diwas 2024) 1999ರ ಮೇ ತಿಂಗಳಿನಲ್ಲಿ ಪಾಕಿಸ್ತಾನದ (pakistan army) ದಾಳಿಕೋರರು ಮತ್ತು ಭಾರತೀಯ ಸೇನೆಯ (indian army) ನಡುವೆ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದವರೆಗೆ ಅಂದರೆ ಸುಮಾರು ಮೂರು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಸೈನಿಕರು ಮತ್ತು ಭಯೋತ್ಪಾದಕರನ್ನು ಬಗ್ಗುಬಡಿದು ವಿಜಯ ಸಾಧಿಸಿತ್ತು. ಆದರೆ ಈ ಸಾಹಸದಲ್ಲಿ ಅನೇಕ ಭಾರತೀಯ ಯೋಧರು ಹುತಾತ್ಮರಾದರು.

ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕರನ್ನು ಸ್ಮರಿಸಲು ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಹಲವಾರು ಸೇನಾ ನಾಯಕರು ದೇಶವೇ ಹೆಮ್ಮೆಪಡುವಂತಹ ಅಸಾಧಾರಣ ಶೌರ್ಯವನ್ನು ಪ್ರದರ್ಶಿಸಿದ್ದರು. ಕಾರ್ಗಿಲ್‌ನ ಡ್ರಾಸ್‌ ಪ್ರದೇಶದಲ್ಲಿ ಪಾಕಿಸ್ತಾನಿ ದಾಳಿಕೋರರು ವಶಪಡಿಸಿಕೊಂಡ ಪ್ರದೇಶಗಳನ್ನು ಹಿಂಪಡೆಯಲು 1999ರಲ್ಲಿ ಪ್ರಾರಂಭಿಸಲಾದ ‘ಆಪರೇಷನ್ ವಿಜಯ್’ನ ಯಶಸ್ಸನ್ನು ಕಾರ್ಗಿಲ್ ವಿಜಯ್ ದಿನವು ಸೂಚಿಸುತ್ತದೆ.
ಕಾರ್ಗಿಲ್ ಯುದ್ಧದ ಸಮಯದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕ ಶಾಂತಿಯಿಂದ ಮಲಗಲು ಸೇನಾ ಯೋಧರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಅವರ ಶೌರ್ಯ, ಧೈರ್ಯ ಮತ್ತು ಉತ್ಸಾಹದ ಕಥೆಗಳು ಕೇವಲ ನಮ್ಮನ್ನು ಹೆಮ್ಮೆ ಪಡುವಂತೆ ಮಾಡುವುದು ಮಾತ್ರವಲ್ಲ, ನಮ್ಮ ಕಣ್ಣುಗಳು ತೇವಗೊಳ್ಳುವಂತೆ ಮಾಡುತ್ತದೆ. ಅಂತಹ ಕಾರ್ಗಿಲ್ ವೀರರ ಕಥೆಗಳು ಇಲ್ಲಿದೆ.

Kargil Vijay Diwas
Kargil Vijay Diwas


ಕ್ಯಾಪ್ಟನ್ ವಿಕ್ರಮ್ ಬಾತ್ರಾ

1974ರ ಸೆಪ್ಟೆಂಬರ್ 9ರಂದು ಹಿಮಾಚಲ ಪ್ರದೇಶದ ಪಾಲಂಪುರದಲ್ಲಿ ಜನಿಸಿದ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ತಾಯಿ ಕಮಲ್ ಕಾಂತ ಶಾಲಾ ಶಿಕ್ಷಕಿಯಾಗಿದ್ದು, ತಂದೆ ಗಿರಿಧಾರಿ ಲಾಲ್ ಬಾತ್ರಾ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದರು.


1996ರ ಜೂನ್‌ನಲ್ಲಿ ಮಾಣೆಕ್‌ ಶಾ ಬೆಟಾಲಿಯನ್‌ನಲ್ಲಿ ಐಎಂಎಗೆ ಸೇರಿದ ವಿಕ್ರಮ್ ಬಾತ್ರಾ ತಮ್ಮ 19 ತಿಂಗಳ ತರಬೇತಿಯನ್ನು ಪೂರ್ಣಗೊಳಿಸಿದ ಅನಂತರ 1997ರ ಡಿಸೆಂಬರ್ 6ರಂದು ಐಎಂಎನಿಂದ ಪದವಿ ಪಡೆದರು. ಅವರನ್ನು ಜಮ್ಮು ಮತ್ತು ಕಾಶ್ಮೀರ ರೈಫಲ್ಸ್‌ನ 13ನೇ ಬೆಟಾಲಿಯನ್‌ಗೆ ಲೆಫ್ಟಿನೆಂಟ್ ಆಗಿ ನಿಯೋಜಿಸಲಾಯಿತು. ತರಬೇತಿ ಮತ್ತು ಹಲವಾರು ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅನಂತರ ಅವರ ಬೆಟಾಲಿಯನ್, 13 ಜಮ್ಮು ಆಂಡ್ ಕಾಶ್ಮೀರ್ ರೈಫಲ್ಸ್ ನ ಉತ್ತರ ಪ್ರದೇಶದ ಶಹಜಹಾನ್‌ಪುರಕ್ಕೆ ಹೋಗಲು ಆದೇಶವನ್ನು ಪಡೆದರು. ಜೂನ್ 5ರಂದು ಬೆಟಾಲಿಯನ್ ಆದೇಶಗಳನ್ನು ಬದಲಾಯಿಸಲಾಯಿತು ಮತ್ತು ಜಮ್ಮು ಮತ್ತು ಕಾಶ್ಮೀರದ ಡ್ರಾಸ್‌ಗೆ ಅವರನ್ನು ಸ್ಥಳಾಂತರಿಸಲು ಆದೇಶಿಸಲಾಯಿತು.

ಕಾರ್ಗಿಲ್ ಯುದ್ಧದ ಹೀರೋ ಎಂದೇ ಕರೆಯಲ್ಪಡುವ ವಿಕ್ರಮ್ ಬಾತ್ರಾ ʼಶಿಖರ 5140ʼ ಅನ್ನು ಪುನಃ ಪಾಕಿಸ್ತಾನಿಯರಿಂದ ವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಶಿಖರವನ್ನು ವಶಪಡಿಸಿಕೊಂಡ ಅನಂತರ ಅವರು ವಾಪಸ್‌ ಶಿಬಿರಕ್ಕೆ ಬಂದು ವಿರಾಮ ತೆಗೆದುಕೊಳ್ಳಲು ಅವಕಾಶ ಇತ್ತು. ಆದರೆ ಅವರು ವಿರಮಿಸದೆ ಸ್ವಯಂಪ್ರೇರಣೆಯಿಂದ ಪೀಕ್ 4875 ಶಿಖರವನ್ನು ವಶಪಡಿಸಿಕೊಳ್ಳಲು ಮತ್ತೊಂದು ಕಾರ್ಯಾಚರಣೆಯನ್ನು ಕೈಗೊಂಡರು. ಇದು ಭಾರತೀಯ ಸೇನೆಯು ಪ್ರಯತ್ನಿಸಿದ ಅತ್ಯಂತ ಕಷ್ಟಕರವಾದ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಇದರಲ್ಲಿ ವಿಕ್ರಮ್ ಬಾತ್ರಾ ವೀರಾವೇಶದಿಂದ ಮತ್ತು ಸಾಹಸದಿಂದ ಹೋರಾಡಿ ಹಲವಾರು ವೈರಿ ಸೈನಿಕರನ್ನು ಕೊಂದರು. ಆದರೆ ಅಂತಿಮವಾಗಿ ತಾವು ಹುತಾತ್ಮರಾದರು. ಮರಣೋತ್ತರವಾಗಿ ಅವರಿಗೆ ಭಾರತದ ಅತ್ಯುನ್ನತ ಮತ್ತು ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ಪರಮ ವೀರ ಚಕ್ರವನ್ನು ನೀಡಿ ಗೌರವಿಸಲಾಯಿತು.


ಕಾರ್ಗಿಲ್ ಯುದ್ಧದ ಸಮಯದಲ್ಲಿ ಅವರು ಹೇಳುತ್ತಿದ್ದ ಒಂದು ಮಾತನ್ನು ಈಗಲೂ ಅವರ ಮನೆಯವರು ನೆನಪಿಸಿಕೊಳ್ಳುತ್ತಾರೆ. ಒಂದೋ ನಾನು ತ್ರಿವರ್ಣ ಹಾರಿಸಿದ ಅನಂತರ ಹಿಂತಿರುಗುತ್ತೇನೆ ಅಥವಾ ನಾನು ಆ ಧ್ವಜದಲ್ಲಿ ಸುತ್ತಿ ಹಿಂತಿರುಗುತ್ತೇನೆ. ಆದರೆ ನಾನು ಖಂಡಿತವಾಗಿ ಹಿಂತಿರುಗುತ್ತೇನೆ!

Kargil Vijay Diwas
Kargil Vijay Diwas


ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್

1980ರ ಮೇ 10ರಂದು ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸಿಕಂದರಾಬಾದ್‌ನಲ್ಲಿ ಕರಣ್ ಸಿಂಗ್ ಯಾದವ್ ಮತ್ತು ಸಂತರಾ ದೇವಿ ದಂಪತಿಯ ಮಗನಾಗಿ ಜನಿಸಿದರು. 1999ರ ಆಗಸ್ಟ್ ನಲ್ಲಿ ಪರಮವೀರ ಚಕ್ರ ಪ್ರಶಸ್ತಿ ಪಡೆದ ಅತ್ಯಂತ ಕಿರಿಯ ವ್ಯಕ್ತಿ. ನಯಾಬ್ ಸುಬೇದಾರ್ ಯೋಗೇಂದ್ರ ಸಿಂಗ್ ಯಾದವ್ ಬೆಟಾಲಿಯನ್ 1999ರ ಜೂನ್ 12ರಂದು ಟೋಲೋಲಿಂಗ್ ಟಾಪ್ ಅನ್ನು ವಶಪಡಿಸಿಕೊಂಡಿತು. ಈ ವೇಳೆ ಇಬ್ಬರು ಅಧಿಕಾರಿಗಳು, 2 ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 21 ಸೈನಿಕರು ತಮ್ಮ ಪ್ರಾಣ ತ್ಯಾಗ ಮಾಡಿದರು.


ಘಟಕ್ ಪ್ಲಟೂನ್‌ನ ಭಾಗವಾಗಿದ್ದ ಯೋಗೇಂದ್ರ ಸಿಂಗ್ ಯಾದವ್ ಅವರನ್ನು ಟೈಗರ್ ಹಿಲ್‌ನಲ್ಲಿ ಸುಮಾರು 16500 ಅಡಿ ಎತ್ತರದ ಬಂಡೆಯ ಕಡಿದಾದ ಮೇಲ್ಭಾಗದಲ್ಲಿ ನೆಲೆಗೊಂಡಿರುವ ಮೂರು ಆಯಕಟ್ಟಿನ ಬಂಕರ್‌ಗಳನ್ನು ಸೆರೆಹಿಡಿಯಲು ನಿಯೋಜಿಸಲಾಗಿತ್ತು. ಶತ್ರುಗಳು ಬಂಕರ್‌ನಿಂದ ರಾಕೆಟ್ ದಾಳಿ ಮಾಡುತ್ತಿದ್ದರೂ ಅವರು ಹಗ್ಗದ ಸಹಾಯದಿಂದ ಪರ್ವತ ಹತ್ತುತ್ತ ವೈರಿಗಳನ್ನು ಕಂಗೆಡಿಸಿದರು. ಹಲವಾರು ಗುಂಡೇಟು ತಗಲಿದರೂ ನೋವನ್ನು ತೋರ್ಪಡಿಸದೆ ಕಾರ್ಯಾಚರಣೆಯನ್ನು ಮುಂದುವರಿಸಿದರು. ಶತ್ರು ಬಂಕರ್‌ಗೆ ತವಳಿಕೊಂಡು ಹೋಗಿ ಗ್ರೆನೇಡ್ ಹಾರಿಸಿದರು. ಅದು ನಾಲ್ಕು ಪಾಕಿಸ್ತಾನಿ ಸೈನಿಕರನ್ನು ಕೊಂದಿತು ಮತ್ತು ಶತ್ರುಗಳನ್ನು ಹಿಮ್ಮೆಟ್ಟಿಸಿತು. ಇದು ಭಾರತದ ಉಳಿದ ತುಕಡಿಗಳಿಗೆ ಬಂಡೆಯನ್ನು ಏರಲು ಅವಕಾಶ ಮಾಡಿಕೊಟ್ಟಿತು.

ಯಾದವ್ ಹೋರಾಟವನ್ನು ಮುಂದುವರಿಸಿದರು. ಎರಡನೇ ಬಂಕರ್ ಅನ್ನು ಸಹ ಸೈನಿಕರ ಸಹಾಯದಿಂದ ನಾಶಪಡಿಸಿದರು. ಇನ್ನೂ ಹಲವು ಪಾಕಿಸ್ತಾನಿ ಸೈನಿಕರನ್ನು ಕೊಂದರು. ಇದು ತುಕಡಿಯ ಉಳಿದವರಿಗೆ ಆಗಮಿಸಲು ಮತ್ತೊಮ್ಮೆ ಅವಕಾಶವನ್ನು ಒದಗಿಸಿತು. ಈ ರೀತಿಯಾಗಿ ಅವರು ಕಾರ್ಗಿಲ್ ಯುದ್ಧದ ಅತ್ಯಂತ ಕಠಿಣ ಕಾರ್ಯಾಚರಣೆಗಳಲ್ಲಿ ಒಂದರಲ್ಲಿ ಮೇಲುಗೈ ಸಾಧಿಸುತ್ತ ಮುನ್ನಡೆದರು.


ಸಂದರ್ಶನವೊಂದರಲ್ಲಿ ಮಾತನಾಡಿದ್ದ ಯೋಗೇಂದ್ರ ಸಿಂಗ್ ಯಾದವ್, ಸೈನಿಕನು ನಿಸ್ವಾರ್ಥ ಪ್ರೇಮಿಯಂತೆ. ಬೇಷರತ್ತಾದ ಈ ಪ್ರೀತಿಯೊಂದಿಗೆ ದೃಢಸಂಕಲ್ಪ ಬರುತ್ತದೆ ಮತ್ತು ತನ್ನ ರಾಷ್ಟ್ರ, ತನ್ನ ರೆಜಿಮೆಂಟ್ ಮತ್ತು ತನ್ನ ಸಹ ಸೈನಿಕರ ಮೇಲಿನ ಈ ಪ್ರೀತಿಗಾಗಿ ಸೈನಿಕನು ತನ್ನ ಜೀವದ ಬಗ್ಗೆ ಯೋಚಿಸುವುದಿಲ್ಲ ಎಂದು ಹೇಳಿದ್ದರು.

Kargil Vijay Diwas
Kargil Vijay Diwas

ಕ್ಯಾಪ್ಟನ್ ಮನೋಜ್ ಕುಮಾರ್ ಪಾಂಡೆ

1975ರ ಜೂನ್ 25ರಂದು ಉತ್ತರ ಪ್ರದೇಶದ ಸೀತಾಪುರದ ರೂಧಾ ಗ್ರಾಮದಲ್ಲಿ ಗೋಪಿ ಚಂದ್ ಪಾಂಡೆ ಮತ್ತು ಮೋಹಿನಿ ಪಾಂಡೆ ದಂಪತಿಗೆ ಜನಿಸಿದ ಮನೋಜ್ ಕುಮಾರ್ ಪಾಂಡೆ ಅವರು 1/11 ಗೂರ್ಖಾ ರೈಫಲ್ಸ್‌ನ ಸೈನಿಕರಾಗಿದ್ದರು. ಅವರ ತಂದೆಯ ಪ್ರಕಾರ, ಅವರು ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಪರಮವೀರ ಚಕ್ರವನ್ನು ಪಡೆಯುವ ಏಕೈಕ ಗುರಿಯೊಂದಿಗೆ ಭಾರತೀಯ ಸೇನೆಗೆ ಸೇರಿದ್ದರು. ಅವರಿಗೆ ಮರಣೋತ್ತರವಾಗಿ ಪರಮವೀರ ಚಕ್ರವನ್ನು ನೀಡಲಾಯಿತು.


ಕಾರ್ಗಿಲ್ ಯುದ್ಧದಲ್ಲಿ ಶತ್ರು ಪಡೆಗಳನ್ನು ತೆರವುಗೊಳಿಸಲು ಅವರ ತಂಡವನ್ನು ನಿಯೋಜಿಸಲಾಯಿತು. ಒಳನುಗ್ಗುವವರನ್ನು ಹಿಂದಕ್ಕೆ ತಳ್ಳಲು ಅವರು ಸರಣಿ ದಾಳಿಗಳನ್ನು ನಡೆಸಿದರು. ಈ ವೇಳೆ ತೀವ್ರ ಗಾಯಗೊಂಡ ಅವರು ಆಕ್ರಮಣವನ್ನು ಮುಂದುವರಿಸಿದರು. ಇದು ಅಂತಿಮವಾಗಿ ಬಟಾಲಿಕ್ ವಲಯದ ಜೌಬರ್ ಟಾಪ್ ಮತ್ತು ಖಲುಬರ್ ಬೆಟ್ಟವನ್ನು ವಶಪಡಿಸಿಕೊಳ್ಳಲು ಕಾರಣವಾಯಿತು. ಅವರ ಧೈರ್ಯ ಮತ್ತು ನಾಯಕತ್ವಕ್ಕಾಗಿ ಅವರಿಗೆ ಮರಣೋತ್ತರವಾಗಿ ಪರಮವೀರ ಚಕ್ರವನ್ನು ನೀಡಲಾಯಿತು.

Kargil Vijay Diwas
Kargil Vijay Diwas


ಲೆಫ್ಟಿನೆಂಟ್ ಬಲ್ವಾನ್ ಸಿಂಗ್

1973ರ ಅಕ್ಟೋಬರ್‌ನಲ್ಲಿ ಹರಿಯಾಣದ ರೋಹ್ಟಕ್ ಜಿಲ್ಲೆಯ ಸಾಸ್ರೌಲಿಯಲ್ಲಿ ಜನಿಸಿದ ಲೆಫ್ಟಿನೆಂಟ್ ಬಲ್ವಾನ್ ಸಿಂಗ್ 1999ರ ಜುಲೈ 3ರಂದು ತನ್ನ ಘಟಕ್ ಪ್ಲಟೂನ್‌ನೊಂದಿಗೆ ಬಹುಮುಖಿ ದಾಳಿಯ ಭಾಗವಾಗಿ ಈಶಾನ್ಯ ದಿಕ್ಕಿನಿಂದ ಟೈಗರ್ ಹಿಲ್‌ನ ಮೇಲೆ ದಾಳಿ ಮಾಡಲು ನಿಯೋಜಿಸಲಾಯಿತು. ಈ ಮಾರ್ಗವು 16,500 ಅಡಿ ಎತ್ತರದಲ್ಲಿದೆ. ಇದು ಹಿಮದಿಂದ ಆವೃತವಾಗಿದೆ. ಅಪಾಯಕಾರಿ ಬಿರುಕುಗಳಿಂದ ಕೂಡಿದ್ದು, ಜಲಪಾತಗಳಿಂದ ಕೂಡಿದೆ.

ಗೊತ್ತುಪಡಿಸಿದ ಸ್ಥಳ ತಲುಪಲು ಅತ್ಯಂತ ಕಷ್ಟಕರವಾದ ಮತ್ತು ಅನಿಶ್ಚಿತ ಮಾರ್ಗದಲ್ಲಿ ಅವರ ತಂಡವು ಫಿರಂಗಿ ಶೆಲ್‌ಗಳ ಮೂಲಕ 12 ಗಂಟೆಗಳ ಕಾಲ ಮುನ್ನಡೆದು ಶತ್ರುಗಳನ್ನು ಆಘಾತಕ್ಕೊಳಗಾಗಿಸಿತು. ಇವರ ಸಾಹಸಮಯ ದಾಳಿ ನೋಡಿದ ಶತ್ರುಗಳು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದರು!

ಇದನ್ನೂ ಓದಿ: Union Budget 2024 Live: ಕಸ್ಟಮ್ಸ್‌ ತೆರಿಗೆ ಇಳಿಸಿದ ಕೇಂದ್ರ; ವೈದ್ಯಕೀಯ ಉಪಕರಣಗಳಿಗೆ ಕಸ್ಟಮ್ಸ್‌ ಸುಂಕದಿಂದ ವಿನಾಯಿತಿ

ಗುಂಡಿನ ಚಕಮಕಿಯಲ್ಲಿ ಲೆಫ್ಟಿನೆಂಟ್ ಬಲ್ವಾನ್ ಸಿಂಗ್ ಗಂಭೀರವಾಗಿ ಗಾಯಗೊಂಡರು. ಆದರೂ ಅವರು ಶತ್ರುವನ್ನು ಮುಗಿಸಲು ನಿರ್ಧರಿಸಿದರು. ಶತ್ರುಗಳನ್ನು ಸುತ್ತುವರಿದು ನಾಲ್ವರನ್ನು ಕೊಂದರು. ಬಲ್ವಾನ್ ಸಿಂಗ್ ನಾಯಕತ್ವ, ಅವರ ಧೈರ್ಯ ಮತ್ತು ಅವರ ಶೌರ್ಯವು ಟೈಗರ್ ಹಿಲ್ ಅನ್ನು ವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿತು. ಅವರ ಧೈರ್ಯ ಮತ್ತು ಶೌರ್ಯಕ್ಕಾಗಿ ಅವರಿಗೆ ಮಹಾವೀರ ಚಕ್ರವನ್ನು ನೀಡಲಾಯಿತು.

Continue Reading
Advertisement
Womens Asia Cup Final
ಕ್ರೀಡೆ13 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ17 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ44 mins ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ53 mins ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ57 mins ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ1 hour ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ1 hour ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ1 hour ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Shiva Rajkumar played the dupe for saikumar in film
ಸ್ಯಾಂಡಲ್ ವುಡ್1 hour ago

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Paris Olympic
ಕ್ರೀಡೆ2 hours ago

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ1 hour ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ24 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌