Pariksha Pe Charcha 2024: ಪರೀಕ್ಷೆ ಕುರಿತು ವಿದ್ಯಾರ್ಥಿಗಳಿಗೆ ಮೋದಿ ನೀಡಿದ ಟಾಪ್ 10 ಸಲಹೆಗಳಿವು - Vistara News

ದೇಶ

Pariksha Pe Charcha 2024: ಪರೀಕ್ಷೆ ಕುರಿತು ವಿದ್ಯಾರ್ಥಿಗಳಿಗೆ ಮೋದಿ ನೀಡಿದ ಟಾಪ್ 10 ಸಲಹೆಗಳಿವು

Pariksha Pe Charcha 2024: ಏಳನೇ ಸಾಲಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನರೇಂದ್ರ ಮೋದಿ ಅವರು ಹಲವು ಸಲಹೆ ನೀಡಿದ್ದಾರೆ. ಪ್ರಮುಖ 10 ಸಲಹೆಗಳು ಇಲ್ಲಿವೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನರೇಂದ್ರ ಮೋದಿ ಅವರು 2024ನೇ ಸಾಲಿನ ಪರೀಕ್ಷಾ ಪೇ ಚರ್ಚಾ (Pariksha Pe Charcha 2024) ಕಾರ್ಯಕ್ರಮ ನಡೆಸಿಕೊಟ್ಟಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಗೊಂದಲ ನಿವಾರಿಸುವ ಪ್ರಯತ್ನ ಮಾಡಿದ್ದಾರೆ. ಅದರಲ್ಲೂ, ಪರೀಕ್ಷೆಯ ಕುರಿತು ವಿದ್ಯಾರ್ಥಿಗಳು (Students) ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದು, ಪ್ರಧಾನಿಯು (Narendra Modi) ಹಲವು ಸಲಹೆಗಳನ್ನು ನೀಡಿದ್ದಾರೆ. ಉದಾಹರಣೆ, ನಿದರ್ಶನಗಳ ಮೂಲಕ ಪರೀಕ್ಷಾ ಭಯ ಹೋಗಲಾಡಿಸಲು ಯತ್ನಿಸಿದ್ದಾರೆ. ಅವುಗಳಲ್ಲಿ ಪ್ರಮುಖ 10 ಸಲಹೆಗಳು ಇಲ್ಲಿವೆ.

  1. ರೈಲು ಬರುತ್ತಲೇ ಯಾರೂ ಸ್ಟೇಷನ್‌ ತಲುಪುವುದಿಲ್ಲ. ರೈಲು ಬರುವ 10 ನಿಮಿಷ ತೆರಳುತ್ತೇವೆ. ಹಾಗೆಯೇ, ಪರೀಕ್ಷೆಯ ಕೊಠಡಿಗೂ ಮೊದಲೇ ತೆರಳಬೇಕು. ಕೊಠಡಿಯ ಬಾಗಿಲಿನವರೆಗೆ ಪುಸ್ತಕ ಹಿಡಿದುಕೊಂಡು ಹೋಗಬಾರದು. 10 ನಿಮಿಷ ಮೊದಲೇ ಪರೀಕ್ಷಾ ಕೇಂದ್ರಕ್ಕೆ ತೆರಳಿ. ಗೆಳೆಯರೊಂದಿಗೆ ಮಾತನಾಡಿ, ಒಂದು ಜೋಕ್‌ ಹೇಳಿ, ಮೊದಲು ನಿರಾತಂಕವಾಗಿ ಉಸಿರಾಡಿ.
  2. ಪ್ರಶ್ನೆಪತ್ರಿಕೆ ಕೈಗೆ ನೀಡುತ್ತಲೇ ಗಾಬರಿಯಾಗದಿರಿ. ಪ್ರಶ್ನೆ ಪತ್ರಿಕೆ ಸಿಗುತ್ತಲೇ ಎಲ್ಲ ಪ್ರಶ್ನೆಗಳನ್ನು ಓದಿಕೊಳ್ಳಿ. ಯಾವ ಪ್ರಶ್ನೆಗೆ ಹೆಚ್ಚು ಸಮಯ ಬೇಕಾಗುತ್ತದೆ ಎಂಬುದನ್ನು ಯೋಚಿಸಿ. ಊಟ ಮಾಡುವಾಗ ಯಾರೂ ಗಡಿಯಾರ ನೋಡುವುದಿಲ್ಲ. ಹಾಗೆಯೇ, ಪರೀಕ್ಷೆ ಬರೆಯುವಾಗ ಅನಗತ್ಯವಾಗಿ ಗಡಿಯಾರ ನೋಡಿಕೊಳ್ಳದಿರಿ. ಅವಸರಕ್ಕೆ ಬಿದ್ದು ಬರೆಯಲು ಮುಂದಾಗದಿರಿ.
  3. ಪರೀಕ್ಷೆಗೆ ಹೆಚ್ಚಿನ ವಿದ್ಯಾರ್ಥಿಗಳು ಓದಿಕೊಂಡು ಹೋಗುತ್ತಾರೆಯೇ ಹೊರತು, ಮೊದಲು ಬರೆದು ಬರೆದು ಅಭ್ಯಾಸ ಮಾಡಿಕೊಂಡಿರುವುದಿಲ್ಲ. ಹಾಗಾಗಿ, ಎಷ್ಟೇ ಓದಿದರೂ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆಯಲು ಆಗುವುದಿಲ್ಲ. ಹಾಗಾಗಿ, ಪರೀಕ್ಷೆಗೂ ಮೊದಲು ಪ್ರಶ್ನೆಗಳಿಗೆ ಉತ್ತರ ಬರೆದು ಬರೆದು ಅಭ್ಯಾಸ ಮಾಡಿಕೊಳ್ಳಿ. ಆಗ ಮನನವೂ ಆಗುತ್ತದೆ, ಪರೀಕ್ಷೆಯಲ್ಲಿ ಸುಲಭವಾಗಿ ಬರೆಯುವುದೂ ಸಾಧ್ಯವಾಗುತ್ತದೆ.
  4. ಯಾರೇ ಆಗಲಿ, ನೀರಿಗೆ ಇಳಿಯದ ಹೊರತು ಈಜು ಕಲಿಯಲು ಸಾಧ್ಯವಿಲ್ಲ. ಹಾಗೆಯೇ, ಹಳೆಯ ಪ್ರಶ್ನೆಪತ್ರಿಕೆಗಳಿಗೆ, ಪ್ರಶ್ನೆಗಳಿಗೆ ಬರೆದು, ನೋಟ್ಸ್‌ಗಳನ್ನು ಮಾಡಿಕೊಂಡು ಪರೀಕ್ಷೆಗೆ ತಯಾರಾಗಿ. ಬರೆದು ಅಭ್ಯಾಸ ಮಾಡಿಕೊಂಡರೆ, ಮನನ ಮಾಡಿಕೊಂಡರೆ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಬಹುದು.
  5. ವಿದ್ಯಾರ್ಥಿಗಳು ಓದಿಕೊಂಡು, ಬರೆದುಕೊಂಡು ಪರೀಕ್ಷೆಗೆ ಹೋಗುವುದರ ಜತೆಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಾಗಲೇ ಶಿಕ್ಷಕರೊಂದಿಗೆ ಉತ್ತಮ ಒಡನಾಟ ಇಟ್ಟುಕೊಳ್ಳಬೇಕು. ಓದುವಾಗ ಗೊಂದಲ ಬಂದರೆ ಶಿಕ್ಷಕರಿಗೆ ಪ್ರಶ್ನೆ ಕೇಳಬೇಕು, ಮನೆಯಲ್ಲಿದ್ದರೆ ಮೊಬೈಲ್‌ ಕರೆ ಮಾಡಬೇಕು. ಆಗ ತಕ್ಷಣವೇ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ.
  6. ಎಲ್ಲ ವಿದ್ಯಾರ್ಥಿಗಳ ಬಳಿಯೂ, ಮನೆಗಳಲ್ಲೂ ಮೊಬೈಲ್‌ ಇದೆ. ಆ ಮೊಬೈಲ್‌ಅನ್ನು ನಿತ್ಯ ಚಾರ್ಜ್‌ ಮಾಡದಿದ್ದರೆ ಅದು ಸ್ವಿಚ್‌ಆಫ್‌ ಆಗುತ್ತದೆ. ಹಾಗೆಯೇ, ಮನುಷ್ಯನ ದೇಹವನ್ನೂ ರಿಚಾರ್ಜ್‌ ಮಾಡಬೇಕಾಗುತ್ತದೆ. ಅದರಲ್ಲೂ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮೆದುಳು, ಮನಸ್ಸಿನ ಜತೆಗೆ ದೇಹವನ್ನೂ ಉಲ್ಲಸಿತಗೊಳಿಸಬೇಕು.
  7. ವಿದ್ಯಾರ್ಥಿಗಳು ಒಂದೇ ಕಡೆ ಓದುವ ಬದಲು ಎಳೆ ಬಿಸಿಲಿನಲ್ಲಿ ಕುಳಿತು ಓದಬೇಕು. ಶಾಂತಿಯುತ ವಾತಾವರಣದಲ್ಲಿ ಅಧ್ಯಯನ ಮಾಡಬೇಕು. ಸರಿಯಾಗಿ ನಿದ್ದೆ ಮಾಡಬೇಕು. ಮೊಬೈಲ್‌ನಲ್ಲಿ ಒಂದರ ಹಿಂದೆ ಒಂದು ರೀಲ್ಸ್‌ಗಳನ್ನು ನೋಡಿದರೆ, ಮೊದಲು ನೋಡಿದ ರೀಲ್‌ ನೆನಪಿರುವುದಿಲ್ಲ. ಹಾಗಾಗಿ, ಎಡೆಬಿಡದೆ ಓದುವ ಬದಲು ದೇಹಕ್ಕೆ ಬೇಕಾಗುವಷ್ಟು ನಿದ್ದೆ ಮಾಡಬೇಕು. ಇದು ಮೆದುಳು, ಮನಸ್ಸು ಹಾಗೂ ದೇಹದ ಮೇಲೆ ಪರಿಣಾಮ ಬೀರುತ್ತದೆ. ಹಾಗಂತ, ಮೋದಿ ಹೇಳಿದರು ಎಂದು ಬರೀ ನಿದ್ದೆಯನ್ನೇ ಮಾಡಬೇಡಿ ಎಂದು ಚಟಾಕಿ ಹಾರಿಸಿದರು.
  8. ಮಕ್ಕಳು ಓದುವುದು, ಬರೆಯುವುದು, ಮನನ ಮಾಡಿಕೊಳ್ಳುವುದು ಎಷ್ಟು ಮುಖ್ಯವೋ ಆಹಾರವೂ ಅಷ್ಟೇ ಮುಖ್ಯ. ಪರೀಕ್ಷೆಯ ದಿನಗಳಲ್ಲಿ ನಿಯಮಿತ ಆಹಾರ ಸೇವಿಸಿ. ಬಡತನ ಇರಲಿ, ಸಿರಿತನ ಇರಲಿ, ಇರುವ ಆಹಾರ ಸೇವಿಸಿ. ಸರಿಯಾದ ಸಮಯಕ್ಕೆ ಊಟ ಮಾಡಿ.
  9. ವ್ಯಾಯಾಮವು ವಿದ್ಯಾರ್ಥಿಗಳಿಗೆ ಪ್ರಮುಖವಾಗಿದೆ. ನಿತ್ಯವೂ ಬೆಳಗ್ಗೆ ಎದ್ದು ಹಲ್ಲುಜ್ಜುವ ರೀತಿ, ಬೆಳಗ್ಗೆ ಎದ್ದ ತಕ್ಷಣ 10 ನಿಮಿಷವಾದರೂ ವ್ಯಾಯಾಮ ಮಾಡಿ. ಇದರಿಂದ ದೇಹವು ಉಲ್ಲಾಸಗೊಳ್ಳುತ್ತದೆ. ದೈಹಿಕ ಚಟುವಟಿಕೆಯು ವಿದ್ಯಾರ್ಥಿಗಳಿಗೆ ಪ್ರಮುಖವಾಗಿದೆ.
  10. ನಾವು ಚಳಿಯೊಂದಿಗೆ ಜೀವನ ಸಾಗಿಸುವ ಮನಸ್ಥಿತಿ ರೂಢಿಸಿಕೊಂಡರೆ, ಹೆಚ್ಚು ಚಳಿ ಎನಿಸುವುದಿಲ್ಲ. ಪರೀಕ್ಷೆಯೂ ಹಾಗೆಯೇ, ನಾವು ಮೊದಲು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವ ದೃಢ ನಿಶ್ಚಯ ಮಾಡಿಕೊಳ್ಳಬೇಕು. ನಾವು ಮೊದಲು ಮೆದುಳನ್ನು ಪರೀಕ್ಷೆಗೆ ಸಿದ್ಧಗೊಳಿಸುವ ಜತೆಗೆ ಮನಸ್ಸನ್ನೂ ಹುರಿಗೊಳಿಸಬೇಕು. ಈ ಪರೀಕ್ಷೆಯಲ್ಲಿ ನಾನು ಉತ್ತಮ ಅಂಕ ಪಡೆಯುತ್ತೇನೆ ಎಂದು ನಿಶ್ಚಯ ಮಾಡಿಕೊಳ್ಳಬೇಕು.

ಇದನ್ನೂ ಓದಿ: Pariksha Pe Charcha 2024: ಪರೀಕ್ಷೆ ಒತ್ತಡ ನಿವಾರಣೆ ಹೇಗೆ? ಮೋದಿ ಮೇಷ್ಟ್ರು ಹೇಳಿದ್ದಿಷ್ಟು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ದೇಶ

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

NEET-UG: ನೀಟ್-ಯುಜಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

NEET-UG
Koo

ಗಾಂಧಿನಗರ: ನೀಟ್-ಯುಜಿ (NEET-UG) ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಭಾನುವಾರ (ಮೇ 5) ನೀಟ್-ಯುಜಿ ಪರೀಕ್ಷೆ ನಡೆಸಿತ್ತು. ಈ ವೇಳೆ ಗೋಧ್ರಾ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆದಿದೆ ಎಂಬ ಸುಳಿವು ಜಿಲ್ಲಾಧಿಕಾರಿಗೆ ದೊರೆತ ನಂತರ ತನಿಖೆ ನಡೆಸಲಾಗಿತ್ತು. ಈ ವೇಳೆ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು

ಸದ್ಯ ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತುಷಾರ್ ಭಟ್‌ ಕಾರಿನಲ್ಲಿ 7 ಲಕ್ಷ ರೂ. ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ. ಇದು ಅಭ್ಯರ್ಥಿಯೊಬ್ಬರನ್ನು ಮೆರಿಟ್ ಪಟ್ಟಿಗೆ ಸೇರಿಸಲು ಸಹಾಯ ಮಾಡುವಂತೆ ವೋರಾ ಮುಂಗಡವಾಗಿ ಪಾವತಿಸಿದ ಮೊತ್ತ ಎಂದು ಪೊಲೀಸರು ತಿಳಿಸಿದ್ದಾರೆ.

ವಂಚನೆ ಹೇಗೆ?

ವಿಚಾರಣೆ ವೇಳೆ ವಂಚನೆಯ ಜಾಲದ ವಿವರ ಬೆಳಕಿಗೆ ಬಂದಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಜಿಲ್ಲಾ ಶಿಕ್ಷಣ ಅಧಿಕಾರಿಯ ದೂರಿನ ಮೇರೆಗೆ ಗೋಧ್ರಾ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯ್ ಜಲರಾಮ್ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತುಷಾರ್ ಭಟ್ ನೀಟ್‌ ಕೇಂದ್ರದ ಉಪ ಅಧೀಕ್ಷಕರಾಗಿ ನೇಮಕಗೊಂಡಿದ್ದರು. ತನಿಖೆ ವೇಳೆ ಅವರ ಮೊಬೈಲ್‌ನಲ್ಲಿ ಸಾಕ್ಷಿ ದೊರೆತಿದೆ. ಪರಶುರಾಮ್ ರಾಯ್ ವ್ಯಾಟ್‌ಆ್ಯಪ್‌ ಮೂಲಕ ಕಳುಹಿಸಿದ 16 ಅಭ್ಯರ್ಥಿಗಳ ಪಟ್ಟಿ ಕಂಡು ಬಂದಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಪಟ್ಟಿಯ ಬಗ್ಗೆ ಕೇಳಿದಾಗ ತುಷಾರ್‌ ಭಟ್‌, ಇವರು ತಮ್ಮ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಎಂದು ಹೇಳಿದ್ದಾರೆ. ಈ ಅಭ್ಯರ್ಥಿಗಳು ಬಿಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಲು ತಲಾ 10 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ಕಿರಿತ್ ಪಟೇಲ್ ತಿಳಿಸಿದ್ದಾರೆ.

ಸದ್ಯ ತುಷಾರ್‌ ಭಟ್‌ ಅವರ ಮೊಬೈಲ್‌ ಫೋನ್‌, ನಗದು ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮೂವರು ಆರೋಪಿಗಳ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿದೆ ಎಂದು ಗೋಧ್ರಾ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Continue Reading

ವಿದೇಶ

Indian Sailors Released: ಭಾರತಕ್ಕೆ ಭಾರೀ ರಾಜತಾಂತ್ರಿಕ ಗೆಲುವು; ಐವರು ಭಾರತೀಯ ನಾವಿಕರು ರಿಲೀಸ್‌

Indian Sailors Released:ಇರಾನ್‌ ಜೊತೆಗಿನ ಭಾರತದ ಮಾತುಕತೆ ಯಶಸ್ವಿಯಾಗಿದ್ದು, ವಶಕ್ಕೆ ಪಡೆದಿರುವ ಐವರನ್ನು ರಿಲೀಸ್‌ ಮಾಡಲು ಇರಾನ್‌ ಒಪ್ಪಿದ್ದು, ಅವರನ್ನು ಈಗಾಗಲೇ ತಾಯ್ನಾಡಿಗೆ ಕಳುಹಿಸಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ. ಇದು ಭಾರತದ ಬಹುದೊಡ್ಡ ರಾಜತಾಂತ್ರಿಕ ಗೆಲುವಾಗಿದೆ.

VISTARANEWS.COM


on

Indian Sailors Released
Koo

ಟೆಹ್ರಾನ್‌: ವಶಕ್ಕೆ ಪಡೆದಿದ್ದ ಇಸ್ರೇಲ್‌(Israel) ಮೂಲದ ಹಡಗಿನಲ್ಲಿದ್ದ ಐವರು ಭಾರತೀಯರನ್ನು(Indian Sailors Released) ಇರಾನ್‌(Iran) ಕೊನೆಗೂ ಬಿಡುಗಡೆಗೊಳಿಸಿದೆ. ಇರಾನ್‌ ಜೊತೆಗಿನ ಭಾರತದ ಮಾತುಕತೆ ಯಶಸ್ವಿಯಾಗಿದ್ದು, ವಶಕ್ಕೆ ಪಡೆದಿರುವ ಐವರನ್ನು ರಿಲೀಸ್‌ ಮಾಡಲು ಇರಾನ್‌ ಒಪ್ಪಿದ್ದು, ಅವರನ್ನು ಈಗಾಗಲೇ ತಾಯ್ನಾಡಿಗೆ ಕಳುಹಿಸಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರಿ(Indian Embassy) ಕಚೇರಿ ಹೇಳಿದೆ. ಇದು ಭಾರತದ ಬಹುದೊಡ್ಡ ರಾಜತಾಂತ್ರಿಕ ಗೆಲುವಾಗಿದೆ.

ಈ ರಾಜತಾಂತ್ರಿಕ ಗೆಲುವಿಗೆ ಬಂದರ್ ಅಬ್ಬಾಸ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, ಇರಾನ್ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದೆ. ಇಸ್ರೇಲ್-ಸಂಬಂಧಿತ ಸರಕು ಹಡಗನ್ನು ಏ.13 ರಂದು ಇರಾನ್ ವಶಪಡಿಸಿಕೊಂಡಿತು. ಅದರಲ್ಲಿ 17 ಭಾರತೀಯರು ಇದ್ದರು. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಬಳಿ ಕಂಟೈನರ್ ಹಡಗನ್ನು ವಶಪಡಿಸಿಕೊಂಡಿತ್ತು. ಏ.13 ರಂದು ಇರಾನ್ ವಶಪಡಿಸಿಕೊಂಡಿದ್ದ ಇಸ್ರೇಲ್ ಸಂಪರ್ಕಿತ ಸರಕು ಹಡಗು ‘ಎಂಎಸ್‌ಸಿ ಏರೀಸ್’ನ 17 ಭಾರತೀಯ ಸಿಬ್ಬಂದಿಯಲ್ಲಿ ಒಬ್ಬರಾದ ಕೇರಳದ ತ್ರಿಶೂರ್‌ನ ಆನ್ ಟೆಸ್ಸಾ ಜೋಸೆಫ್ ಏ.18 ರಂದು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದರು. 17 ಭಾರತೀಯ ಸಿಬ್ಬಂದಿಯಲ್ಲಿ ಒಬ್ಬರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ. ಇತರರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿತ್ತು. ಒಪ್ಪಂದದ ಜವಾಬ್ದಾರಿಗಳನ್ನು ಪೂರೈಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ.

ಬಿಡುಗಡೆಗೊಂಡವರಲ್ಲಿ ಐವರು ಭಾರತೀಯರು, ಓರ್ವ ಫಿಲಿಪ್ಪೀನ್ಸ್ ಹಾಗೂ ಓರ್ವ ಎಸ್ಟೋನಿಯಾ ಪ್ರಜೆಗಳು ಸೇರಿದ್ದಾರೆ. ಪೋರ್ಚುಗೀಸ್ ಧ್ವಜ ಹೊಂದಿರುವ ಎಂಎಸ್‍ಸಿ ಏರೀಸ್ ಹಡಗನ್ನು ಎಪ್ರಿಲ್ 13ರಂದು ಇರಾನ್‍ನ ರೆವೊಲ್ಯುಷನರಿ ಗಾಡ್ರ್ಸ್ ವಶಕ್ಕೆ ಪಡೆದಿತ್ತು. ಕಂಟೈನರ್ ಹಡಗು ಇಸ್ರೇಲ್ ಜತೆ ಸಂಪರ್ಕ ಹೊಂದಿತ್ತು ಎಂದು ಇರಾನ್ ವಿದೇಶಾಂಗ ಇಲಾಖೆ ಹೇಳಿತ್ತು. ಇರಾನ್‍ನ ಕ್ರಮವನ್ನು ಸ್ವಾಗತಿಸಿರುವ ಪೋರ್ಚುಗಲ್, ಉಳಿದ 17 ಸಿಬ್ಬಂದಿಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದೆ. ಹಡಗಿನ ಎಲ್ಲಾ ಸಿಬ್ಬಂದಿಗಳನ್ನೂ ಮಾನವೀಯ ನೆಲೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಆದರೆ ಜಫ್ತಿ ಮಾಡಿರುವ ಹಡಗನ್ನು ಬಿಡುಗಡೆಗೊಳಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವರು ಕಳೆದ ವಾರ ಹೇಳಿದ್ದರು.

ಇದನ್ನೂ ಓದಿ:Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

ಇರಾನ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಭಾರತ ವಿದೇಶಾಂಗ ಇಲಾಖೆ ಭಾರತೀಯರ ಸುರಕ್ಷಿತ ಬಿಡುಗಡೆ ಒತ್ತಾಯಿಸಿತ್ತು. ಖುದ್ದು ಕೇಂದ್ರ ಸಚಿವ ಜೈಶಂಕರ್​ ಸಹ ಇರಾನ್ ಜತೆ ಮಾತುಕತೆ ನಡೆಸಿ ಭಾರತೀಯರನ್ನು ಬಿಟ್ಟು ಕಳುಹಿಸುವಂತೆ ಮನವಿ ಮಾಡಿದ್ದು, ರಾಜತಾಂತ್ರಿಕ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿತ್ತು.


Promoted

Continue Reading

ದೇಶ

Solar Power: ಜಾಗತಿಕವಾಗಿ ಮತ್ತೊಮ್ಮೆ ಬೆಳಗಿದ ಭಾರತ; ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ

Solar Power: 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್‌ ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಜಪಾನ್‌ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಒಂಬತ್ತನೇ ಸ್ಥಾನದಲ್ಲಿತ್ತು. ಸುಮಾರು ಎಂಟು ವರ್ಷಗಳಲ್ಲಿ ಇದೀಗ 3ನೇ ಸ್ಥಾನಕ್ಕೆ ಜಿಗಿದಿದೆ. 2023ರಲ್ಲಿಭಾರತದಲ್ಲಿ ಸೌರ ಶಕ್ತಿಯಿಂದ ಶೇ. 5.8ರಷ್ಟು ವಿದ್ಯುತ್‌ ಉತ್ಪಾದಿಸಲಾಗಿದೆ ಎಂದು ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‌ ತಿಳಿಸಿದೆ.

VISTARANEWS.COM


on

Solar Power
Koo

ನವದೆಹಲಿ: ಜಾಗತಿಕ ಮಟ್ಟದಲ್ಲಿ ಭಾರತ ಮತ್ತೊಮ್ಮೆ ಗಮನ ಸೆಳೆದಿದೆ. 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್‌ (Solar Power) ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ (Third largest Solar Power Generator). ಜಪಾನ್‌ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಒಂಬತ್ತನೇ ಸ್ಥಾನದಲ್ಲಿತ್ತು. ಸುಮಾರು ಎಂಟು ವರ್ಷಗಳಲ್ಲಿ ಇದೀಗ 3ನೇ ಸ್ಥಾನಕ್ಕೆ ಜಿಗಿದಿದೆ.

2023ರಲ್ಲಿ ಜಾಗತಿಕ ವಿದ್ಯುತ್‌ ವಲಯದಲ್ಲಿ ದಾಖಲೆಯ ಶೇ. 5.5ರಷ್ಟು ಸೌರ ಶಕ್ತಿಯನ್ನು ಉತ್ಪಾದಿಸಲಾಗಿದೆ. ಇತ್ತ ಭಾರತದಲ್ಲಿ ಸೌರ ಶಕ್ತಿಯಿಂದ ಶೇ. 5.8ರಷ್ಟು ವಿದ್ಯುತ್‌ ಉತ್ಪಾದಿಸಲಾಗಿದೆ ಎಂದು ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‌ (Ember) ತಿಳಿಸಿದೆ.

6 ಪಟ್ಟು ಏರಿಕೆ

2023ರಲ್ಲಿ ಜಾಗತಿಕ ಸೌರ ಉತ್ಪಾದನೆಯು 2015ಕ್ಕಿಂತ ಆರು ಪಟ್ಟು ಹೆಚ್ಚಳ ದಾಖಲಿಸಿದೆ. ಇದೇ ವೇಳೆ ಭಾರತದಲ್ಲಿಯೂ ಗಮನಾರ್ಹ ಬೆಳವಣಿಗೆ ಕಂಡು ಬಂದಿದೆ. ಸೌರ ವಿದ್ಯುತ್‌ 2015ರಲ್ಲಿದ್ದ ಶೇ. 0.5ರಿಂದ 2023ಕ್ಕೆ ಶೇ. 5.8ಕ್ಕೆ ಏರಿಕೆಯಾಗಿದೆ ಎಂದು ಎಂಬರ್‌ ತನ್ನ ವರದಿಯಲ್ಲಿ ಕಂಡುಕೊಂಡಿದೆ. ಇಂಟರ್‌ ನ್ಯಾಷನಲ್‌ ಎನರ್ಜಿ ಏಜೆನ್ಸಿಯ(IEA) ಪ್ರಕಾರ, 2030ರ ವೇಳೆಗೆ ಸೌರ ವಿದ್ಯುತ್ ಉತ್ಪಾದನೆಯು ಜಾಗತಿಕ ವಿದ್ಯುತ್ ಉತ್ಪಾದನೆಯ ಶೇ. 22ಕ್ಕೆ ಏರಿಕೆಯಾಗಲಿದೆ. ಭಾರತದ ವಾರ್ಷಿಕ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆಗೆ ಅರ್ಧದಷ್ಟು (2023ರಲ್ಲಿ 1.18 ಗಿಗಾಟನ್) ವಿದ್ಯುತ್ ಉತ್ಪಾದನೆ ಕಾರಣವಾಗುತ್ತಿರುವುದರಿಂದ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವುದು ಅನಿವಾರ್ಯ ಎನಿಸಿಕೊಂಡಿದೆ.

ಸೌರ ಶಕ್ತಿ ಸತತ 19ನೇ ವರ್ಷವೂ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿದ್ಯುತ್ ಮೂಲ ಎನಿಸಿಕೊಂಡಿದೆ. 2023ರಲ್ಲಿ ವಿಶ್ವಾದ್ಯಂತ ಕಲ್ಲಿದ್ದಲಿಗಿಂತ ಎರಡು ಪಟ್ಟು ಹೆಚ್ಚು ಸೌರ ಶಕ್ತಿಯಿಂದ ವಿದ್ಯುತ್‌ ಉತ್ಪಾದನೆಯಾಗಿದೆ. ಇನ್ನು ಈ ಅವಧಿಯ ಸೌರ ಉತ್ಪಾದನೆಯಲ್ಲಿ ಭಾರತವು ವಿಶ್ವದ ನಾಲ್ಕನೇ ಅತಿ ದೊಡ್ಡ ಹೆಚ್ಚಳವನ್ನು ದಾಖಲಿಸಿದೆ. ಚೀನಾ (+156 ಟಿಡಬ್ಲ್ಯುಎಚ್‌), ಅಮೆರಿಕ (+33 ಟಿಡಬ್ಲ್ಯುಎಚ್‌), ಬ್ರೆಜಿಲ್ (+22 ಟಿಡಬ್ಲ್ಯುಎಚ್‌) ಬಳಿಕ ಭಾರತ (+18 ಟಿಡಬ್ಲ್ಯುಎಚ್‌) ಇದೆ.

ಎಂಬರ್‌ನ ಏಷ್ಯಾ ಕಾರ್ಯಕ್ರಮದ ನಿರ್ದೇಶಕ ಆದಿತ್ಯ ಲೊಲ್ಲಾ ಮಾತನಾಡಿ, ”ಶುದ್ಧ ವಿದ್ಯುತ್ ಹೆಚ್ಚಿಸಬೇಕಿರುವುದು ವಿದ್ಯುತ್ ವಲಯದಲ್ಲಿ ಇಂಗಾಲದ ಹೊರಸೂಸುವಿಕೆ ಕಡಿಮೆ ಮಾಡಲು ಮಾತ್ರವಲ್ಲದೇ ಏರುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ಆರ್ಥಿಕ ಹೊರೆಯನ್ನು ದೂರ ಸರಿಸಲು ಅವಶ್ಯಕವಾಗಿದೆ. ಅಲ್ಲದೇ ಇದು ಹವಾಮಾನ ಬದಲಾವಣೆಯನ್ನು ನಿಭಾಯಿಸುವಲ್ಲೂ ನಿರ್ಣಾಯಕ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Renewable Energy: ಭಾರತದಲ್ಲಿದೆ ಪ್ಯಾರಿಸ್‌ಗಿಂತ 5 ಪಟ್ಟು ದೊಡ್ಡದಾದ ಸೋಲಾರ್‌ ಪವರ್‌ ಘಟಕ!‌

ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಕಾಪ್​ 28 ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ವಿಶ್ವದ ವಿವಿಧ ರಾಷ್ಟ್ರಗಳು 2030ರ ವೇಳೆಗೆ ಜಾಗತಿಕ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಮೂರು ಪಟ್ಟು ಹೆಚ್ಚಿಸುವ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿವೆ. ಇದರಲ್ಲಿ ಭಾರತವೂ ಒಂದಾಗಿದೆ. ದೇಶದಲ್ಲಿ ಈಗಾಗಲೇ ವಿವಿಧ ಯೋಜನೆಗಳ ಮೂಲಕ ಸೌರ ವಿದ್ಯುತ್‌ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ.

Continue Reading
Advertisement
ICMR Dietary Guidelines
ಆರೋಗ್ಯ2 mins ago

ICMR Dietary Guidelines: ಬೊಜ್ಜು ತಡೆಯಲು ಏನು ಮಾಡಬೇಕು? ಮಾರ್ಗಸೂಚಿ ಬಿಡುಗಡೆ ಮಾಡಿದ ಸಂಶೋಧನಾ ಸಂಸ್ಥೆ

Murder Case
ಬೆಂಗಳೂರು5 mins ago

Murder case : ಪ್ರೀತಿ ವಿಷ್ಯಕ್ಕೆ ಬೀದಿ ಹೆಣವಾದ! ಮಗನ ಡೆಡ್‌ಬಾಡಿ ನೋಡಿ ಮೂರ್ಛೆ ಹೋದ ತಾಯಿ

pm narendra modi basava jayanti 2024
ಪ್ರಮುಖ ಸುದ್ದಿ37 mins ago

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

Sharia law
ವಿದೇಶ49 mins ago

Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Rain Effect In karnataka
ಮಳೆ53 mins ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

NEET-UG
ದೇಶ55 mins ago

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

prajwal revanna case women
ಪ್ರಮುಖ ಸುದ್ದಿ1 hour ago

Prajwal Revanna Case: “ಟ್ರಾನ್ಸ್‌ಫರ್‌ಗಾಗಿ ಪೀಡಿಸಿ ತಿಂದ…” ಪ್ರಜ್ವಲ್‌ ವಿಡಿಯೋದಲ್ಲಿದ್ದ ಸರ್ಕಾರಿ ಅಧಿಕಾರಿಣಿಯರಿಂದಲೂ ಈಗ ದೂರು!

Dog Bite in Belgavi
ಬೆಳಗಾವಿ2 hours ago

Dog Bite : ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್‌

Indian Sailors Released
ವಿದೇಶ2 hours ago

Indian Sailors Released: ಭಾರತಕ್ಕೆ ಭಾರೀ ರಾಜತಾಂತ್ರಿಕ ಗೆಲುವು; ಐವರು ಭಾರತೀಯ ನಾವಿಕರು ರಿಲೀಸ್‌

Sanjiv Goenka
ಪ್ರಮುಖ ಸುದ್ದಿ2 hours ago

Sanjiv Goenka: ರಾಹುಲ್‌ಗೆ ಬೈದ ಗೋಯೆಂಕಾ; ಈ ಹಿಂದೆ ಧೋನಿಯನ್ನೇ ಕ್ಯಾಪ್ಟನ್ಸಿಯಿಂದ ತೆಗೆದಿದ್ದರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect In karnataka
ಮಳೆ53 mins ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ7 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ14 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ16 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ16 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ23 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ23 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ23 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು24 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ24 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಟ್ರೆಂಡಿಂಗ್‌