ವಿಸ್ತಾರ Explainer | ಮೋದಿ ಅವಧಿಯಲ್ಲಿ ಅಧಿಕಾರಶಾಹಿ ವ್ಯವಸ್ಥೆ ಕ್ರಾಂತಿಕಾರಕವಾಗಿ ಬದಲಾಗಿದ್ದು ಹೇಗೆ? ಏನಿದು 360 ಡಿಗ್ರಿ ಪ್ರಯೋಗ? - Vistara News

EXPLAINER

ವಿಸ್ತಾರ Explainer | ಮೋದಿ ಅವಧಿಯಲ್ಲಿ ಅಧಿಕಾರಶಾಹಿ ವ್ಯವಸ್ಥೆ ಕ್ರಾಂತಿಕಾರಕವಾಗಿ ಬದಲಾಗಿದ್ದು ಹೇಗೆ? ಏನಿದು 360 ಡಿಗ್ರಿ ಪ್ರಯೋಗ?

ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಎಂಟು ವರ್ಷದಲ್ಲಿ ಅಧಿಕಾರಶಾಹಿಗೆ ಹೊಸ ವೇಗ ನೀಡಿದ್ದಾರೆ. ಬ್ರಿಟಿಷ್‌ ಪದ್ಧತಿ ಹಾಗೂ ಮನಸ್ಥಿತಿಗೆ ಇತಿಶ್ರೀ ಹಾಡಿದ್ದಾರೆ. ಹಾಗಾದರೆ, ಅಧಿಕಾರಶಾಹಿ ಸುಧಾರಣೆಗೆ ಮೋದಿ ತೆಗೆದುಕೊಂಡ ಕ್ರಮಗಳು ಯಾವವು? ಇಲ್ಲಿದೆ ವಿಸ್ತಾರ Explainer.

VISTARANEWS.COM


on

Narendra Modi To Visit US
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಘಟನೆ 1
ಅದು 2001. ನರೇಂದ್ರ ಮೋದಿ ಅವರು ಆಗತಾನೆ ಮುಖ್ಯಮಂತ್ರಿಯಾಗಿದ್ದರು. ಸರ್ಕಾರದ ಎಲ್ಲ ಕಾರ್ಯಭಾರವನ್ನು ವೀಕ್ಷಿಸುವ, ಕಲಿತುಕೊಳ್ಳುವ ಹಂತದಲ್ಲಿದ್ದರು. ಇಂತಹ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿತು. ರಾಜ್ಯದ 23 ಜಿಲ್ಲೆಗಳು ಭೂಕಂಪನದಿಂದ ಸಂಕಷ್ಟಕ್ಕೆ ಸಿಲುಕಿದವು. ಜನರ ರಕ್ಷಣೆ, ಪರಿಹಾರ ಕಾರ್ಯವು ಕ್ಷಿಪ್ರವಾಗಿ ಸಾಗಬೇಕಿತ್ತು. ರಾಜ್ಯದ ಬಹುತೇಕ ಭಾಗದಲ್ಲಿ ಪರಿಹಾರ ಕಾರ್ಯ ಆಗಬೇಕಿತ್ತು.

ಸಂಘ ಪರಿವಾರದ ಮೋದಿ ಅವರು ಆರ್‌ಎಸ್‌ಎಸ್‌ನಲ್ಲಿ ತಾವು ಕಲಿತಿದ್ದ ಸಂಘಟನೆ, ಆಡಳಿತ ಕೌಶಲ, ಶಿಸ್ತನ್ನು ಅಧಿಕಾರಶಾಹಿ ಮೇಲೆ ಪ್ರಯೋಗ ಮಾಡಿದರು. ಒಂದು ತಹಸೀಲ್‌ಗೆ (ತಾಲೂಕು) ಒಬ್ಬ ಅಧಿಕಾರಿಯನ್ನು ನಿಯೋಜಿಸಿದರು. ಉನ್ನತ ಅಧಿಕಾರಿಗಳು ನಿಂತು ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಮಾಡಿದರು. ಅಧಿಕಾರಿಗಳು ವಾರಾಂತ್ಯದ ವೇಳೆ, ರಜೆಯ ವೇಳೆಯೂ ಕಾರ್ಯನಿರ್ವಹಿಸಬೇಕು, ಜನರ ಸಂಕಷ್ಟ ನಿವಾರಿಸಬೇಕು ಎಂದು ಸೂಚಿಸಿದರು. ಪರಿಣಾಮವಾಗಿ, ಭೂಕಂಪ ಸಂಭವಿಸಿದ ಒಂದೇ ವರ್ಷದಲ್ಲಿ ಗುಜರಾತ್‌ನ 23 ಜಿಲ್ಲೆಗಳು ಚೇತರಿಸಿಕೊಂಡಿದ್ದವು. ಪರಿಹಾರ ಕಾರ್ಯ ಪೂರ್ಣಗೊಂಡಿತ್ತು.

ಘಟನೆ 2
ಅದು 2018, ಡಿಸೆಂಬರ್.‌ ಅಗಸ್ಟಾ ವೆಸ್ಟ್‌ಲ್ಯಾಂಡ್‌ ವಿವಿಐಪಿ ಹೆಲಿಕಾಪ್ಟರ್‌ ಖರೀದಿ ವೇಳೆ 3,600 ಕೋಟಿ ರೂ. ವಂಚನೆ ಪ್ರಕರಣದ ಪ್ರಮುಖ ಆರೋಪಿ ಕ್ರಿಶ್ಟಿಯನ್‌ ಮೈಕೆಲ್‌ನನ್ನು ಭಾರತಕ್ಕೆ ಕರೆತಂದ ಸುದ್ದಿ ಎಲ್ಲರಿಗೂ ಗೊತ್ತಿದೆ. ಆದರೆ, ಅದರ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ಶ್ರಮ ಅಪಾರವಾಗಿದೆ ಎಂಬುದು ತುಂಬ ಜನರಿಗೆ ಗೊತ್ತಿಲ್ಲ. ಹೌದು, ಕ್ರಿಶ್ಟಿಯನ್‌ ಮೈಕೆಲ್‌ನನ್ನು ಭಾರತಕ್ಕೆ ಕರೆತರುವ ಮುನ್ನ ‘ಜೇಮ್ಸ್‌ ಬಾಂಡ್’‌ ಖ್ಯಾತಿಯ ಅಜಿತ್‌ ದೋವಲ್‌ ಅವರು ಯುಎಇ ಜತೆ ನಿರಂತರವಾಗಿ ಸಂಪರ್ಕದಲ್ಲಿದ್ದರು. ಹಲವು ಬಾರಿ ಭೇಟಿ ನೀಡಿದ್ದರು. ಪ್ರಕರಣದಲ್ಲಿ ಕ್ರಿಶ್ಟಿಯನ್‌ ಮೈಕೆಲ್‌ ಪಾತ್ರದ ಕುರಿತು ದಾಖಲೆ ಒದಗಿಸಿದರು. ಯುಎಇ ಹತ್ತಾರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಇದಾದ ಬಳಿಕವೇ ಯುಎಇಯು ಭಾರತಕ್ಕೆ ಕ್ರಿಶ್ಟಿಯನ್‌ ಮೈಕೆಲ್‌ನನ್ನು ಹಸ್ತಾಂತರಿಸಲು ಸಮ್ಮತಿ ಸೂಚಿಸಿತು. ಅಷ್ಟೇ ಅಲ್ಲ, ಮೈಕೆಲ್‌ನನ್ನು ಹಸ್ತಾಂತರಕ್ಕೆ ಒಪ್ಪಿದ ಕೆಲವೇ ಗಂಟೆಗಳಲ್ಲಿ, ರಾತ್ರೋರಾತ್ರಿ ಯುಎಇಗೆ ವಿಶೇಷ ವಿಮಾನ ಕಳುಹಿಸಿ, ಆರೋಪಿಯನ್ನು ಭಾರತಕ್ಕೆ ಕರೆತರುವ ತನಕವೂ ಅಜಿತ್‌ ದೋವಲ್‌ ಎಂಬ ಮಾಸ್ಟರ್‌ ಮೈಂಡ್‌ ನಿರ್ಣಾಯಕ ಕೆಲಸ ಮಾಡಿತು.

ಅಧಿಕಾರಶಾಹಿಗಳು, ಅದರಲ್ಲೂ, ಸರ್ಕಾರದ ಉನ್ನತ ಹುದ್ದೆಗಳಲ್ಲಿರುವವರು, ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುವವರು, ರಾಜ್ಯಗಳಿಗೆ ನಿಯೋಜನೆಗೊಂಡ ಐಎಎಸ್‌ ಅಧಿಕಾರಿಗಳು ಐಷಾರಾಮಿ ಜೀವನ ನಡೆಸುತ್ತಾರೆ. ಇವರು ಸರ್ಕಾರದ ಕಾರುಗಳಲ್ಲಿ ಓಡಾಡುವವರು, ಸರ್ಕಾರಿ ಬಂಗಲೆಗಳಲ್ಲಿ ವಾಸಿಸುವವರು, ಸರ್ಕಾರದಿಂದ ಲಕ್ಷ ಲಕ್ಷ ರೂ. ಸಂಬಳ ಎಣಿಸಿಕೊಂಡು ಸುಖವಾಗಿ ಇರುವವರು ಎಂಬ ಮಾತಿತ್ತು. ಬಹುತೇಕ ಅಧಿಕಾರಿಗಳೂ ಹಾಗೆಯೇ ವರ್ತಿಸುತ್ತಿದ್ದರು. ಕಚೇರಿಗಳಲ್ಲಿ ಕುರ್ಚಿ ಬಿಸಿ ಮಾಡಿ ಸಮಯವಾಗುತ್ತಲೇ ಮನೆಗೆ ಹೊರಟುಬಿಡುತ್ತಿದ್ದರು. ಇದೇ ಕಾರಣದಿಂದಾಗಿಯೇ ವ್ಯವಸ್ಥೆಯ ಲೋಪದ ವಿಚಾರಕ್ಕೆ ಬಂದಾಗ ಅಧಿಕಾರಶಾಹಿಯ ವೈಫಲ್ಯವನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿತ್ತು.

ಆದರೆ…

ಆದರೆ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಅಧಿಕಾರಶಾಹಿ ವ್ಯವಸ್ಥೆಯೇ ಬದಲಾಗಿದೆ. ಪ್ರಧಾನಿಗೋ, ಸಚಿವರಿಗೋ ಪಿಪಿಟಿ ಪ್ರೆಸೆಂಟೇಷನ್‌ ತೋರಿಸಿ, ನಾಲ್ಕು ಸಲಹೆ ಕೊಟ್ಟು ಸುಮ್ಮನಾಗುವ ಕಾಲಕ್ಕೆ, ಬ್ರಿಟಿಷ್‌ ಕಾಲದ ಶಿಷ್ಟಾಚಾರದ ಆಡಳಿತ ಶೈಲಿಗೆ ಮೋದಿ ಅವರು ತಿಲಾಂಜಲಿ ಇಟ್ಟು ವರ್ಷಗಳೇ ಕಳೆದಿವೆ. ಇದಕ್ಕೆ ಈ ಮೇಲಿನ ಎರಡು ನಿದರ್ಶನಗಳೇ ಸಾಕ್ಷಿಯಾಗಿವೆ. ಹಾಗಾದರೆ, ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಅಧಿಕಾರಶಾಹಿ ವ್ಯವಸ್ಥೆಯು ಹೇಗೆ ಬದಲಾಗಿದೆ? ಇದರ ದಿಸೆಯಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ದಿಟ್ಟ ಕ್ರಮಗಳು ಯಾವವು? ಸರ್ಕಾರದ ಉನ್ನತ ಅಧಿಕಾರಿಗಳು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ? ಕಾರ್ಯನಿರ್ವಹಿಸದವರ ಪರಿಸ್ಥಿತಿ ಏನಾಗಿದೆ? ಇದರಿಂದ ಕಾರ್ಯದಕ್ಷತೆ ಎಷ್ಟರಮಟ್ಟಿಗೆ ಸುಧಾರಣೆಯಾಗಿದೆ ಎಂಬುದರ ವಿಸ್ತೃತ ಮಾಹಿತಿ ಇಲ್ಲಿದೆ.

1. ದಕ್ಷತೆಯೇ ಮೊದಲು, ಬಡ್ತಿ ನಿಯಮ ಬದಲು
ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮೊದಲು ವಯಸ್ಸು, ಅನುಭವ ಸೇರಿ ಕೆಲವೇ ಮಾನದಂಡಗಳ ಆಧಾರದ ಮೇಲೆ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗುತ್ತಿತ್ತು. ವಾರ್ಷಿಕ ಗೌಪ್ಯ ವರದಿಗಳು (Annual Confidential Reports-ACR) ಹಾಗೂ ಸಾಧಾರಣ, ಉತ್ತಮ, ಅತ್ಯುತ್ತಮ ಹಾಗೂ ಶ್ರೇಷ್ಠ ಎಂಬ ಮೌಲ್ಯಾಂಕ ಆಧರಿಸಿ ಮುಂಬಡ್ತಿ ನೀಡಲಾಗುತ್ತಿತ್ತು. ಆದರೆ, ನರೇಂದ್ರ ಮೋದಿ ಅವರು 2015ರಲ್ಲಿ ಎಸಿಆರ್‌ಅನ್ನು ರದ್ದುಗೊಳಿಸಿದರು. ಇದರ ಬದಲಾಗಿ ಅಧಿಕಾರಿಗಳನ್ನು 360 ಡಿಗ್ರಿ ಆಯಾಮದಲ್ಲಿ ಪರಿಶೀಲಿಸುವ ವಾರ್ಷಿಕ ಕ್ಷಮತೆ ಮೌಲ್ಯಮಾಪನ ವರದಿ (Annual Performance Appraisal Report-APAR) ವ್ಯವಸ್ಥೆ ಜಾರಿಗೊಳಿಸಿದರು. ಅಧಿಕಾರಿಗಳ ಕಾರ್ಯನಿರ್ವಹಣೆ, ಕಾರ್ಯಕ್ಷಮತೆ, ದಕ್ಷತೆ, ಚಾಣಾಕ್ಷತನ, ಕೌಶಲ ಸೇರಿ ಸಕಲ ಅಂಶಗಳನ್ನು ಪರಿಗಣಿಸಿ, 360 ಡಿಗ್ರಿಯಲ್ಲಿ ಪರಿಶೀಲನೆ ನಡೆಸಿ, 0-10 ಅಂಕ ನೀಡುವ ವ್ಯವಸ್ಥೆ ಜಾರಿಗೆ ತಂದರು. ಇದರ ಅನ್ವಯವೇ ಬಡ್ತಿ ನೀಡುವುದರಿಂದ ಅಧಿಕಾರಿಗಳ ಮಧ್ಯೆಯೇ ಸ್ಪರ್ಧೆ ಏರ್ಪಡುತ್ತಿದೆ. ಕೆಲಸದಲ್ಲಿ ದಕ್ಷತೆ, ಕಾರ್ಯಕ್ಷಮತೆ ಅಳವಡಿಸಿಕೊಳ್ಳಲಾಗುತ್ತಿದೆ.

2. ಇದ್ದರೆ ಕೆಲಸಕ್ಕೆ ಬದ್ಧತೆ, ಯುವಕರಿಗೂ ಉನ್ನತ ಹುದ್ದೆ ನೀಡಲು ಆದ್ಯತೆ
ಮೋದಿ ಅವರಿಗೆ ‘ಗುಜರಾತ್‌ ದಿನ’ಗಳಿಂದಲೂ ಯುವಕರಿಗೆ, ಯುವ ಮನಸ್ಸುಗಳಿಗೆ ಸಕಲ ಕ್ಷೇತ್ರಗಳಲ್ಲಿ ಆದ್ಯತೆ ನೀಡುವುದು ರೂಢಿ. ಇದನ್ನು ಪ್ರಧಾನಿಯಾದ ಮೇಲೂ, ಅಧಿಕಾರಶಾಹಿ ಮೇಲೂ ಮೋದಿ ಪ್ರಯೋಗಿಸಿದ್ದಾರೆ. ದೇಹಕ್ಕಾದ ವಯಸ್ಸನ್ನೇ ಅನುಭವ ಎಂದಷ್ಟೇ ಪರಿಗಣಿಸದೆ, ದಶಕಗಳವರೆಗೆ ಕುರ್ಚಿ ಬಿಸಿ ಮಾಡಿದವರನ್ನು, ತಲೆಕೂದಲು ಬೆಳ್ಳಗಾಗಿದ್ದನ್ನೇ ಕಾರ್ಯಕ್ಷಮತೆ ಎಂದು ಪರಿಗಣಿಸದೆ ಕಿರಿಯ ವಯಸ್ಸಿನ ಐಎಎಸ್‌ ಅಧಿಕಾರಿಗಳಿಗೆ ಕ್ಷಿಪ್ರವಾಗಿ ಬಡ್ತಿ ನೀಡುವ ರೂಢಿ ಜಾರಿಗೆ ಬಂದಿದೆ. ಒಬ್ಬ ಜಂಟಿ ಕಾರ್ಯದರ್ಶಿ (ಐಎಎಸ್)‌ಯು ಸಮರ್ಥವಾಗಿದ್ದರೆ, ಚಾಣಾಕ್ಷನಾಗಿದ್ದರೆ ಅವರಿಗಾದ ವಯಸ್ಸನ್ನೂ ಪರಿಗಣಿಸದೆ, ಕೇವಲ ಮೂರೇ ವರ್ಷದಲ್ಲಿ ಅವರಿಗೆ ಹೆಚ್ಚುವರಿ ಕಾರ್ಯದರ್ಶಿ ಹುದ್ದೆ ನೀಡಲಾಗುತ್ತಿದೆ. ಇದರಿಂದ ಅಧಿಕಾರಶಾಹಿಯಲ್ಲಿ ನವಚೈತನ್ಯ ಮೂಡುತ್ತಿದೆ.

3. ಧೂಳು ತಿನ್ನುವಂತಿಲ್ಲ ಫೈಲು
ಸರ್ಕಾರದ ಕಚೇರಿಗಳಲ್ಲಿ, ತಿಜೋರಿಗಳಲ್ಲಿ, ಟೇಬಲ್‌ಗಳ ಮೇಲೆ ವರ್ಷಗಟ್ಟಲೆ ಫೈಲ್‌ಗಳು ಧೂಳು ತಿನ್ನುವ ವ್ಯವಸ್ಥೆಯನ್ನು ಮೋದಿ ಅವರು ಸಂಪೂರ್ಣವಾಗಿ ಬದಲಾಯಿಸಿದ್ದಾರೆ. ಅದರಲ್ಲೂ, ಬ್ರಿಟಿಷ್‌ ಕಾಲದ ಏಳು ಹಂತಗಳ ಕಡತಗಳ ಸಂಚಾರಕ್ಕೆ ಇತಿಶ್ರೀ ಹಾಡಿದ್ದಾರೆ. ಸೆಕ್ಷನ್‌ ಆಫೀಸರ್‌, ಕಾರ್ಯದರ್ಶಿ, ಉಪ ಕಾರ್ಯದರ್ಶಿ, ನಿರ್ದೇಶಕ, ಜಂಟಿ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿ ಅವರ ಬಳಿ ಫೈಲ್‌ಗಳು ಸಂಚರಿಸದಂತೆ ಮಾಡಿದ್ದಾರೆ. ಕೇಂದ್ರ ಸಚಿವಾಲಯಗಳಲ್ಲಿ ಜಂಟಿ ಕಾರ್ಯದರ್ಶಿಯನ್ನೇ ಹೆಚ್ಚುವರಿ ಕಾರ್ಯದರ್ಶಿಯನ್ನಾಗಿ ಬಡ್ತಿ ನೀಡುವುದರಿಂದ ಒಂದು ಹಂತದಲ್ಲಿ ಫೈಲ್‌ ವಿಲೇವಾರಿಯಾಗುವಂತೆ ಮಾಡಲಾಗಿದೆ. ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರು “ನಾನು ಕೆಲವೇ ಗಂಟೆಯಲ್ಲಿ ರೈಲ್ವೆ ಯೋಜನೆಗೆ ಅನುಮೋದನೆ ಪಡೆದೆ” ಎಂದು ಹೇಳಿರುವುದು ಕಡತಗಳ ವಿಲೇವಾರಿಗೆ ವೇಗ ನೀಡಿರುವುದಕ್ಕೆ ಸಾಕ್ಷಿಯಾಗಿದೆ.

4. ತಂತ್ರಜ್ಞಾನ ಅಳವಡಿಕೆ, ತಜ್ಞರಿಗೆ ಬೇಡಿಕೆ
ಐಎಎಸ್‌ ಅಧಿಕಾರಿಗಳನ್ನು ಮಾತ್ರವೇ ಉನ್ನತ ಹುದ್ದೆಗಳಿಗೆ ನೇಮಕ ಮಾಡಬೇಕು ಎಂಬ ಅಲಿಖಿತ ನಿಯಮಕ್ಕೆ ಮೋದಿ ಅಂತ್ಯ ಹಾಡಿದ್ದಾರೆ. ಅದರಲ್ಲೂ ಟೆಲಿಕಾಂ, ಆರೋಗ್ಯ, ಪರಿಸರ, ಅರಣ್ಯ ಹಾಗೂ ತ್ಯಾಜ್ಯ ನಿರ್ವಹಣೆ ಇಲಾಖೆಗಳಲ್ಲಿ ಸುಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಈ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವವರು ಐಎಎಸ್‌ ಅಧಿಕಾರಿಗಳಾಗಿರುವ ಜತೆಗೆ ತಂತ್ರಜ್ಞರೂ ಆಗಿರಬೇಕು. ತಂತ್ರಜ್ಞಾನ ಬಳಸುವುದು, ಅಳವಡಿಸಿಕೊಳ್ಳುವುದು ಅವಶ್ಯವಾಗಿರುತ್ತದೆ. ಹಾಗಾಗಿ ಐಆರ್‌ಎಸ್‌ ಸೇರಿ ಉನ್ನತ ಪರೀಕ್ಷೆ ಬರೆದು ಉತ್ತೀರ್ಣರಾದವರು, ತಂತ್ರಜ್ಞರು, ಚಾಣಾಕ್ಷರನ್ನು ಉನ್ನತ ಹುದ್ದೆಗಳಿಗೆ ನೇಮಿಸಲಾಗುತ್ತಿದೆ. ಭಾರತೀಯ ಕ್ರೀಡಾ ಪ್ರಾಧಿಕಾರದ ಮಹಾ ನಿರ್ದೇಶಕರಾಗಿದ್ದ ಸಂದೀಪ್‌ ಪ್ರಧಾನ್‌ ಅವರನ್ನು ಖೇಲೋ ಇಂಡಿಯಾದ ಸಿಇಒ ಆಗಿ ಮಾಡಿದ್ದು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿದ್ದ ಜಗದೀಶ್‌ ಠಕ್ಕರ್‌ ಅವರನ್ನು ಗುಜರಾತ್‌ ಮಾಹಿತಿ ಇಲಾಖೆಯ ಉನ್ನತ ಹುದ್ದೆಗೆ ನೇಮಿಸಿದ್ದೇ ಇದಕ್ಕೆ ನಿದರ್ಶನವಾಗಿದೆ. ಅಷ್ಟೇ ಏಕೆ, ವಿದೇಶಾಂಗ ಕಾರ್ಯದರ್ಶಿಯಾಗಿದ್ದ ಎಸ್‌.ಜೈಶಂಕರ್‌ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವರನ್ನಾಗಿ ಮಾಡಿದ್ದು ಕೂಡ ಅರ್ಹತೆಗೆ ಆದ್ಯತೆ ಎಂಬುದಕ್ಕೆ ಉದಾಹರಣೆಯಾಗಿದೆ.

5. ಮಾಡು ಇಲ್ಲವೇ ಮನೆಗೆ ನಡಿ
ಸಮರ್ಪಕವಾಗಿ ಕಾರ್ಯನಿರ್ವಹಿಸದವರು, ಭ್ರಷ್ಟಾಚಾರದಲ್ಲಿ ತೊಡಗಿದವರು, ನಿರ್ಲಕ್ಷಿಸಿದವರನ್ನು ಮನೆಗೆ ಕಳುಹಿಸುವುದು ಕಳೆದ ಎಂಟು ವರ್ಷದಲ್ಲಿ ಹೆಚ್ಚಾಗಿದೆ. 2014ರಿಂದ 2022ರ ಅಂತ್ಯದ ವೇಳೆಗೆ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 400ಕ್ಕೂ ಅಧಿಕಾರಿಗಳಿಗೆ ಒತ್ತಾಯಪೂರ್ವಕ ನಿವೃತ್ತಿ ನೀಡಿ, ಮನೆಗೆ ಕಳುಹಿಸಲಾಗಿದೆ. ಕಳೆದ ಡಿಸೆಂಬರ್‌ನಲ್ಲಷ್ಟೇ ಟೆಲಿಕಾಂ ಇಲಾಖೆಯ 10 ಅಧಿಕಾರಿಗಳನ್ನು ಮನೆಗೆ ಕಳುಹಿಸಲಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದ ವೇಳೆ ನಿದ್ದೆಗೆ ಜಾರಿದರು ಎಂಬ ಕಾರಣಕ್ಕಾಗಿ ಅಧಿಕಾರಿಯೊಬ್ಬರಿಗೆ ಬಲವಂತದ ನಿವೃತ್ತಿ ನೀಡಿದ್ದು ದಕ್ಷತೆಗೆ ಎಷ್ಟರಮಟ್ಟಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂಬುದಕ್ಕೆ ಉದಾಹರಣೆಯಾಗಿದೆ.

ಇವುಗಳ ಜತೆಗೆ, ನರೇಂದ್ರ ಮೋದಿ ಅವರು ಖುದ್ದು ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುವುದು, ಅವರಿಗೆ ಶಹಬ್ಬಾಶ್‌ ಎನ್ನುವುದು, ಹೊಸ ಹೊಸ ಐಡಿಯಾಗಳನ್ನು ನೀಡಲು ಸ್ವಾತಂತ್ರ್ಯ ಕೊಟ್ಟಿರುವುದು, ಕಾರ್ಯಭಾರದಲ್ಲಿ ಮುಕ್ತ ವಾತಾವರಣ ಇರುವುದು ಕೂಡ ಬ್ಯೂರೋಕ್ರಸಿಯ ಸಾಮರ್ಥ್ಯ ಹೆಚ್ಚಾಗಲು ಕಾರಣವಾಗಿದೆ.

ಮೋದಿ ಸರ್ಕಾರದ ‘ಮೆದುಳು’ ಇವರೇ ನೋಡಿ
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದಕ್ಷ ಅಧಿಕಾರಿಗಳನ್ನು ಗುರುತಿಸಿ, ಅವರಿಗೆ ಉನ್ನತ ಹುದ್ದೆ ನೀಡಿ, ಯಾವುದೇ ಸಮಸ್ಯೆ ಎದುರಾದರೂ ತತ್‌ಕ್ಷಣದಲ್ಲಿ ಬಗೆಹರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಲಾಗಿದೆ. ಹಾಗಾಗಿಯೇ, ಕೊರೊನಾ ಬಿಕ್ಕಟ್ಟು, ಉಗ್ರರ ದಾಳಿಗೆ ಪ್ರತಿದಾಳಿ, ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣದ ಬಳಿಕ ಭಾರತದ ವಿದ್ಯಾರ್ಥಿಗಳ ರಕ್ಷಣೆ, ರಾಜತಾಂತ್ರಿಕ ಪರಿಹಾರ ಸೇರಿ ಎಲ್ಲ ವಿಷಮ ಪರಿಸ್ಥಿತಿಯಲ್ಲೂ ಅಧಿಕಾರಿಗಳು ದಕ್ಷತೆ ಮೆರೆದಿದ್ದಾರೆ. ಅಂತಹ ದಕ್ಷ ಅಧಿಕಾರಿಗಳು, ಅವರ ಕಿರು ಪರಿಚಯ ಇಲ್ಲಿದೆ.

ಸ್ಪೈ ಮಾಸ್ಟರ್‌

ಸಮಂತ್‌ ಕುಮಾರ್‌ ಗೋಯಲ್‌, 1984ರ ಶ್ರೇಣಿಯ ಐಪಿಎಸ್‌ ಅಧಿಕಾರಿ, ಪಂಜಾಬ್‌ ಕೇಡರ್‌
ಭಾರತೀಯ ಗುಪ್ತಚರ ಸಂಸ್ಥೆ ರಿಸರ್ಚ್‌ & ಅನಾಲಿಸಿಸ್ ವಿಂಗ್‌ನ (ರಾ) ಪ್ರಧಾನ ಕಾರ್ಯದರ್ಶಿಯಾಗಿ 2019ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ದೊವೆಲ್‌ ಅವರ ನೆಚ್ಚಿನ ಸಹವರ್ತಿ. ಬಾಲಾಕೋಟ್‌ ದಾಳಿಯಲ್ಲಿ ತಮ್ಮ ಛಾಪು ಮೂಡಿಸಿದವರು. ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ಪಾಕ್‌ ಪ್ರಾಯೋಜಿತ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಆಳವಾಗಿ ಬಲ್ಲವರು. ಜಾಗತಿಕ ಖಾಲಿಸ್ತಾನ್‌ ನೆಟ್‌ ವರ್ಕ್‌ ಅನ್ನು ಹತ್ತಿಕ್ಕುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಪ್ರತಿಭಾನ್ವಿತ ಅಧಿಕಾರಿ
ತಪನ್‌ ಡೇಕಾ, 1988ರ ಶ್ರೇಣಿಯ ಐಪಿಎಸ್‌ ಅಧಿಕಾರಿ, ಹಿಮಾಚಲ ಪ್ರದೇಶ ಕೇಡರ್‌
ಇಂಟಲಿಜೆನ್ಸ್‌ ಬ್ಯೂರೋದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹೊಸ ಜವಾಬ್ದಾರಿಯನ್ನು ವಹಿಸಿ ಕೆಲವು ತಿಂಗಳುಗಳಾಗಿವೆ. ಇತರ ಹಲವು ಕಾನುನು ಸುವ್ಯವಸ್ಥೆ ಮತ್ತು ಭದ್ರತಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದು, ವಿಚಕ್ಷಣ ವಿಭಾಗದ ಜತೆ ಅಮಿತ ಸಹಕಾರ ನೀಡಿದ್ದಾರೆ. ಎಲ್ಲಕ್ಕಿಂತ ಮೇಲಿನದ್ದು ಪ್ರತಿಭೆ ಎಂಬ ಸಂದೇಶವನ್ನು ಅವರ ನೇಮಕಾತಿ ರವಾನಿಸಿದೆ.

ಭವಿಷ್ಯದ ಬ್ಯೂರೋಕ್ರಟ್
ಪರಮೇಶ್ವರನ್‌ ಅಯ್ಯರ್‌, 1981ರ ಶ್ರೇಣಿಯ ಐಎಎಸ್‌ ಅಧಿಕಾರಿ, ಉತ್ತರ ಪ್ರದೇಶ ಕೇಡರ್
ನೀತಿ ಆಯೋಗದ ಸಿಇಒ. ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ದುಡಿದ ಅನುಭವ ಇದೆ. ತಳಮಟ್ಟದಲ್ಲಿ ತಂತ್ರಜ್ಞಾನದ ಮೂಲಕ ಆಡಳಿತವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ನಿಷ್ಣಾತರು. ಸ್ವಚ್ಛ ಭಾರತ ಅಭಿಯಾನವನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ದವರು. ಇದಕ್ಕಾಗಿ ಟಾಯ್ಲೆಟ್‌ ಮ್ಯಾನ್‌ ಎಂದು ಖ್ಯಾತಿ ಗಳಿಸಿದವರು. ನೀತಿ ನಿರೂಪಣೆಯಲ್ಲಿ ಮೋದಿಯವರ ನೆಚ್ಚಿನ ಬಂಟ.

ಬೆಳವಣಿಗೆಯ ವ್ಯವಸ್ಥಾಪಕ
ಟಿ. ವಿ. ಸೋಮನಾಥನ್‌, 1987ರ ಶ್ರೇಣಿಯ ಐಎಎಸ್‌ ಅಧಿಕಾರಿ, ತಮಿಳುನಾಡು ಕೇಡರ್
ಹಣಕಾಸು ಮತ್ತು ವೆಚ್ಚ ಕಾರ್ಯದರ್ಶಿಯಾಗಿ ಕೋವಿಡ್‌ ಬಿಕ್ಕಟ್ಟಿನ ಸಂದರ್ಭ ಸರ್ಕಾರದ ವೆಚ್ಚಗಳನ್ನು ನಿರ್ವಹಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮುಖ್ಯವಾಗಿ ಬೆಳವಣಿಗೆ, ಹೂಡಿಕೆಗೆ ಪೂರಕವಾಗಿ ನಿಯಮಾವಳಿಗಳನ್ನು ಸರಳಗೊಳಿಸಿದ್ದಾರೆ. ಪ್ರಧಾನಿ ಮೋದಿಯವರ ಮೆಚ್ಚುಗೆ ಗಳಿಸಿದ್ದಾರೆ.

ವಿಶ್ವಾಸಾರ್ಹ ಅನುಷ್ಠಾನಕ್ಕೆ ಹೆಸರಾಗಿರುವ ಅಧಿಕಾರಿ
ಭರತ್‌ ಲಾಲ್‌, 1988ರ ಶ್ರೇಣಿಯ ಭಾರತೀಯ ಅರಣ್ಯ ಸೇವಾ ಅಧಿಕಾರಿ, ಗುಜರಾತ್‌ ಕೇಡರ್
ನ್ಯಾಷನಲ್‌ ಸೆಂಟರ್‌ ಫಾರ್‌ ಗುಡ್‌ ಗವರ್ನೆನ್ಸ್‌ನ ಪ್ರಧಾನ ನಿರ್ದೇಶಕ. ಮೋದಿಯವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ, ದಿಲ್ಲಿಯಲ್ಲಿ ಗುಜರಾತ್‌ ರೆಸಿಡೆಂಟ್‌ ಕಮೀಶನರ್‌ ಆಗಿ ಸೇವೆ ಸಲ್ಲಿಸಿದ್ದರು. ಗುಜರಾತ್‌ಗೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗುಜರಾತ್‌ ಮಾದರಿಯ ಅಭಿವೃದ್ಧಿಯನ್ನು ಕೇಂದ್ರದಲ್ಲೂ ವಿಸ್ತರಿಸಿದವರು. ಜಲ್‌ ಜೀವನ್‌ ಮಿಶನ್‌ ಅಭಿಯಾನದ ಯಶಸ್ಸಿನಿಂದ ಖ್ಯಾತಿ ಗಳಿಸಿದ್ದಾರೆ.

ಆಲ್‌ ರೌಂಡರ್‌

ಪ್ರಮೋದ್‌ ಕುಮಾರ್‌ ಮಿಶ್ರಾ, 1972ರ ಶ್ರೇಣಿಯ ಐಎಎಸ್‌ ಅಧಿಕಾರಿ, ಗುಜರಾತ್‌ ಕೇಡರ್
ಕಳೆದ 2019ರಿಂದ ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿ. ವಿಪತ್ತು ನಿರ್ವಹಣೆ, ವಿದ್ಯುತ್‌ ವಲಯ, ಆಹಾರ ಭದ್ರತೆ, ಕೃಷಿ, ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮೂಲಸೌಕರ್ಯ ಹಣಕಾಸು ವಿಷಯಗಳಲ್ಲಿ ಅಪಾರ ಅನುಭವಿ. ಮೋದಿಯವರು ಗುಜರಾತ್‌ ಸಿಎಂ ಆಗಿದ್ದಾಗಲೂ ಅವರಿಗೆ ಪ್ರಧಾನ ಕಾರ್ಯದರ್ಶಿ ಆಗಿದ್ದವರು. 2008ರ ವೇಳೆಗೆ ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. 2014ರಲ್ಲಿ ಮೋದಿಯವರು ಪ್ರಧಾನಿಯಾದ ಬಳಿಕ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾದರು.

ಭದ್ರತಾ ವಲಯದ ದಿಗ್ಗಜ
ಅಜಿತ್ ದೊವಲ್‌, 1968ರ ಶ್ರೇಣಿಯ ಐಪಿಎಸ್‌ ಅಧಿಕಾರಿ, ಕೇರಳ ಕೇಡರ್

2014ರಿಂದ ರಾಷ್ಟ್ರೀಯ ಭದ್ರತಾ ಸಲಹೆಗಾರ. ಕೀರ್ತಿಚಕ್ರ ಪುರಸ್ಕೃತ ಮೊದಲ ಪೊಲೀಸ್‌ ಅಧಿಕಾರಿ. ಆಂತರಿಕ ಸುರಕ್ಷತೆಗೆ ಬೆದರಿಕೆಯಾದಾಗ, ಅದರ ನಿರ್ವಹಣೆಯಿಂದ ಆರಂಭಿಸಿ ಗಡಿಯಾಚೆಗಿನ ಕಾರ್ಯಾಚರಣೆಯ ತನಕ ಎಲ್ಲ ವಿಧದ ಕಾರ್ಯಾಚರಣೆಗಳ ಮೇಲುಸ್ತುವಾರಿ ವಹಿಸಿದ ಹಿರಿಮೆ ಅವರಿಗಿದೆ. ರಾಷ್ಟ್ರೀಯ ಭದ್ರತೆ ಕುರಿತ ಪ್ರಮುಖ ತಂತ್ರಗಾರಿಕೆಯಲ್ಲಿ ನೇತೃತ್ವ ವಹಿಸಿದ್ದಾರೆ.

ಹಣಕಾಸು ವ್ಯವಸ್ಥಾಪಕ
ಶಕ್ತಿಕಾಂತ ದಾಸ್‌, 1980ರ ಶ್ರೇಣಿಯ ಐಎಎಸ್‌ ಅಧಿಕಾರಿ, ತಮಿಳುನಾಡು ಕೇಡರ್
ಆರ್‌ಬಿಐ ಗವರ್ನರ್‌ ಆಗಿ ದೇಶದ ಆರ್ಥಿಕತೆಯ ಪ್ರಗತಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಹಾಗೂ ಜಾಗತಿಕ ಆರ್ಥಿಕ ಹಿಂಜರಿತದ ಸವಾಲನ್ನು ಎದುರಿಸುವಲ್ಲಿ ಜವಾಬ್ದಾರಿಯುತ ಪಾತ್ರ ವಹಿಸಿದ್ದಾರೆ. ಜಿಎಸ್‌ಟಿ ಮತ್ತು ನೋಟು ಅಮಾನ್ಯತೆಯ ಜಾರಿಯಲ್ಲಿ ಮಹತ್ವದ ಹೊಣೆಗಳನ್ನು ನಿಭಾಯಿಸಿದ್ದರು. ಈಗ ಆರ್ಥಿಕತೆಯನ್ನು ಸಹಜ ಸ್ಥಿತಿಗೆ ತಂದು ಅಭಿವೃದ್ಧಿಪಥದಲ್ಲಿ ಮುನ್ನಡೆಸಲು ಮಾರ್ಗದರ್ಶನ ನೀಡುತ್ತಿದ್ದಾರೆ.

ವಿಪತ್ತಿನ ವ್ಯವಸ್ಥಾಪಕ
ರಾಜೀವ್‌ ಗೌಬಾ, 1982ರ ಶ್ರೇಣಿಯ ಐಎಎಸ್‌ ಅಧಿಕಾರಿ, ಜಾರ್ಖಂಡ್‌ ಕೇಡರ್

2019ರಿಂದ ಸಂಪುಟ ಕಾರ್ಯದರ್ಶಿ. ಸರ್ಕಾರದ ಕೋವಿಡ್-‌19 ನಿರ್ವಹಣೆಯ ಸೂತ್ರಗಳನ್ನು ಹೆಣೆದವರು. 2017-2019ರ ನಡುವೆ ಗೃಹ ಕಾರ್ಯದರ್ಶಿಯಾಗಿದ್ದರು. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿಯಲ್ಲಿ ಪ್ರಮುಖ ಕಾರ್ಯತಂತ್ರಜ್ಞರಾಗಿ ಸೇವೆ ಸಲ್ಲಿಸಿದ್ದರು. ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ರೂಪಿಸುವಲ್ಲಿ ಶ್ರಮಿಸಿದವರು.

ಗೃಹ-ವ್ಯವಸ್ಥಾಪಕ
ಅಜಯ್‌ ಕುಮಾರ್‌ ಭಾಲಾ, 1984ರ ಶ್ರೇಣಿಯ ಐಎಎಸ್‌ ಅಧಿಕಾರಿ, ಅಸ್ಸಾಂ-ಮೇಘಾಲಯ ಕೇಡರ್
2019ರಿಂದ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಸ್ಸಾಂನಲ್ಲಿ ಎನ್‌ಆರ್‌ಸಿ ( ನ್ಯಾಶನಲ್‌ ರಿಜಿಸ್ಟರ್‌ ಆಫ್‌ ಸಿಟಿಜನ್ಸ್)‌ ಅನುಷ್ಠಾನ, ಈಶಾನ್ಯ ರಾಜ್ಯಗಳಲ್ಲಿ ಎಎಫ್‌ಎಸ್‌ಪಿಎ ರದ್ದತಿಯ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನೀತಿ ನಿರ್ಧಾರಗಳ ಜಾರಿಗೆ ಸಾಥ್‌ ನೀಡಿದವರು.

ಇದನ್ನೂ ಓದಿ | Ashwini Vaishnaw | ಭ್ರಷ್ಟಾಚಾರಕ್ಕಿಲ್ಲ ಸಹಿಷ್ಣುತೆ, 10 ಅಧಿಕಾರಿಗಳಿಗೆ ಗೇಟ್‌ಪಾಸ್‌ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
IPL 2024 - Points Table
ಕ್ರೀಡೆ4 mins ago

IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

Reservation Row
Lok Sabha Election 20244 mins ago

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Gurpatwant Singh Pannun
ವಿದೇಶ19 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

Sangeeth Sivan dies Riteish Deshmukh Tusshar Kapoor pay tribute
ಮಾಲಿವುಡ್26 mins ago

Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

SRH vs LSG
ಕ್ರೀಡೆ43 mins ago

SRH vs LSG: ಬಿರುಸಿನ ಅರ್ಧಶತಕ ಬಾರಿಸಿ ಗೇಲ್​, ನರೈನ್​ ದಾಖಲೆ ಮುರಿದ ಟ್ರಾವಿಸ್ ಹೆಡ್​

bagalakote unrest
ಕ್ರೈಂ52 mins ago

Bagalakote Unrest: ಹಿಂದೂ ಯುವಕ- ಮುಸ್ಲಿಂ ಯುವತಿ ನವದಂಪತಿ ರಕ್ಷಣೆಗೆ ನಿಂತ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ಲಾಠಿಚಾರ್ಜ್‌

Do You Know
ಲೈಫ್‌ಸ್ಟೈಲ್1 hour ago

Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

hd revanna jailed prajwal revanna case
ಕ್ರೈಂ1 hour ago

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Nijjar Killling
ವಿದೇಶ1 hour ago

Nijjar Killing: ಒಂದೇ ದಿನದಲ್ಲಿ ಸ್ಟೂಡೆಂಟ್‌ ವೀಸಾ ಪಡೆದು ಕೆನಡಾಕ್ಕೆ ಬಂದಿದ್ನಂತೆ ನಿಜ್ಜರ್‌ ಹಂತಕ

Maldives
ದೇಶ1 hour ago

Maldives: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಸಚಿವ ಮೂಸಾ ಜಮೀರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌