ದೇಶ
New Parliament Building: ಪ್ರಜಾಪ್ರಭುತ್ವ ದೇಗುಲದ ಉದ್ಘಾಟನೆ; ಅದ್ಧೂರಿ ಕಾರ್ಯಕ್ರಮದ ವಿಡಿಯೊ ಇಲ್ಲಿವೆ
New Parliament Building: ನೂತನ ಸಂಸತ್ ಭವನಕ್ಕೆ ನರೇಂದ್ರ ಮೋದಿ ಚಾಲನೆ ನೀಡಿದ್ದು, ಇಡೀ ದಿನದ ಕಾರ್ಯಕ್ರಮಗಳ ಪ್ರಮುಖ ವಿಡಿಯೊಗಳು ಹೀಗಿವೆ…
ನವದೆಹಲಿ: ಭಾರತದ ಪ್ರಜಾಪ್ರಭುತ್ವದ ದೇಗುಲದಂತಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತಿಯಲ್ಲಿ ಉದ್ಘಾಟಿಸಿದ್ದಾರೆ. ಇಡೀ ಉದ್ಘಾಟನೆ ಕಾರ್ಯಕ್ರಮ ಹೇಗೆ ನೆರವೇರಿತು? ಸೆಂಗೋಲ್ ಪ್ರತಿಷ್ಠಾಪನೆ ಕಾರ್ಯಕ್ರಮ ಹೇಗೆ ನಡೆಯಿತು ಎಂಬುದು ಸೇರಿ ಇಡೀ ಕಾರ್ಯಕ್ರಮದ ಪ್ರಮುಖ ವಿಡಿಯೊಗಳು ಇಲ್ಲಿವೆ.
ಸಂಸತ್ ಭವನದ ಉದ್ಘಾಟನೆ
ಹೀಗಿದೆ ಸಂಸತ್ ಭವನದ ಒಳಾಂಗಣ
Our new Parliament building is magnificent and awe inspiring.
— Tejasvi Surya (@Tejasvi_Surya) May 28, 2023
It truly represents the collective will, aspirations and energy of our people.
It reminds the world that we are a millennia old unbroken civilisation with deep cultural roots that can nourish the spiritual thirst… pic.twitter.com/YqgSZbV3pf
ಸೆಂಗೋಲ್ ಪ್ರತಿಷ್ಠಾಪನೆ
#WATCH | PM Modi installs the historic 'Sengol' near the Lok Sabha Speaker's chair in the new Parliament building pic.twitter.com/Tx8aOEMpYv
— ANI (@ANI) May 28, 2023
ಪೂಜಾ ಕೈಂಕರ್ಯದಲ್ಲಿ ಮೋದಿ, ಓಂ ಬಿರ್ಲಾ
#WATCH PM Modi and Lok Sabha Speaker Om Birla begin pooja for the inauguration of the new Parliament building
— ANI (@ANI) May 28, 2023
The puja ceremony will continue for about an hour. After the puja, the PM will receive the 'Sengol' and install it in the new Parliament. pic.twitter.com/S13eVwZZD3
ಸಂಸತ್ ಭವನದಲ್ಲಿ ಸರ್ವಧರ್ಮ ಪ್ರಾರ್ಥನೆಯ ಸಂದೇಶ
#WATCH | 'Sarv-dharma' prayers are underway at the new Parliament building as the inauguration ceremony is led by PM Modi pic.twitter.com/6NyADeDZoM
— ANI (@ANI) May 28, 2023
ಸೆಂಗೋಲ್ಗೆ ಮೋದಿ ದೀರ್ಘದಂಡ ನಮಸ್ಕಾರ
#WATCH | PM Modi bows as a mark of respect before the 'Sengol' during the ceremony to mark the beginning of the inauguration of the new Parliament building pic.twitter.com/7DDCvx22Km
— ANI (@ANI) May 28, 2023
ಸಂಸತ್ ಭವನದಲ್ಲಿ ಕಲಾ ತಂಡಗಳ ಮೆರುಗು
ಇದನ್ನೂ ಓದಿ: New Parliament Building: ಪ್ರಜಾಪ್ರಭುತ್ವದ ನವ ಶಕ್ತಿ ಕೇಂದ್ರ, ವೈವಿಧ್ಯದ ಆಗರ ನೂತನ ಸಂಸತ್ ಭವನ
ದೇಶ
Mulayam Singh Yadav: ಮುಲಾಯಂ ಸಿಂಗ್ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್ ಎಂದರೆ ರೂಲ್ಸ್!
Mulayam Singh Yadav: ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿದ ಕಾರಣ ಮುಲಾಯಂ ಸಿಂಗ್ ಯಾದವ್ ಮೂರ್ತಿಯನ್ನು ತೆರವುಗೊಳಿಸಲಾಗಿದೆ.
ಲಖನೌ: ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ (Uttar Pradesh) ಕಾನೂನು ಪಾಲನೆ ಹಾಗೂ ಕಾನೂನು ಸುವ್ಯವಸ್ಥೆಗೆ (Law And Order) ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು, ಅಪರಾಧಿಗಳನ್ನು ಮಟ್ಟಹಾಕುವುದು ಸೇರಿ ಹಲವು ದಿಸೆಯಲ್ಲಿ ಯೋಗಿ ಆದಿತ್ಯನಾಥ್ ಕ್ರಮ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ, ಅನುಮತಿ ಇಲ್ಲದೆ ಮೂರ್ತಿ ಸ್ಥಾಪನೆ ಮಾಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮೂರ್ತಿಯನ್ನು (Mulayam Singh Yadav) ತೆರವುಗೊಳಿಸಲಾಗಿದೆ.
ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಮಾಜವಾದಿ ಪಕ್ಷದ ಕಚೇರಿಯನ್ನು ನಿರ್ಮಿಸಲಾಗಿದೆ. ಆ ಕಚೇರಿಯ ಬಳಿ ಮುಲಾಯಂ ಸಿಂಗ್ ಯಾದವ್ ಅವರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಆದರೆ, ಅನುಮತಿ ಇಲ್ಲದೆ ಆರು ಅಡಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಪರಿಷತ್ ಅಧಿಕಾರಿಗಳು ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಆದರೆ, ಮೂರ್ತಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಸಮಾಜವಾದಿ ಪಕ್ಷದ ಹರ್ದೋಯಿ ಜಿಲ್ಲಾ ಘಟಕವು ನಿರಾಕರಿಸಿದೆ.
BREAKING: UP Civic Body Removes
— ADV. ASHUTOSH J. DUBEY 🇮🇳 (@AdvAshutoshBJP) September 26, 2023
Mulayam Singh Yadav Statue 'Installed Without Permission' In Hardoi.
The deceased Samajwadi Party leader's 6-foot-tall statue was installed on a platform at the SP office near the Nagar Palika Parishad office by district president Virendra Yadav. pic.twitter.com/2u53gREjG4
ನೋಟಿಸ್ ನೀಡಿದರೂ ಡೋಂಟ್ ಕೇರ್
“ನಗರ ಪಾಲಿಕೆ ಪರಿಷತ್ನಿಂದ ಹರ್ದೋಯಿಯಲ್ಲಿ ಎಂಟು ಅಂಗಡಿಗಳನ್ನು ವ್ಯಾಪಾರಿಗಳಿಗೆ ನೀಡಲಾಗಿದೆ. ಇವುಗಳ ಬಳಿಯೇ ಸಮಾಜವಾದಿ ಪಕ್ಷದ ಕಚೇರಿ ನಿರ್ಮಿಸಲಾಗಿದೆ. ಆದರೆ, ಅನುಮತಿ ಇಲ್ಲದೆಯೇ ನಗರ ಪಾಲಿಕೆ ಪರಿಷತ್ ಕಚೇರಿ ಬಳಿಯೇ ಮುಲಾಯಂ ಸಿಂಗ್ ಯಾದವ್ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸಲಾಗಿದೆ” ಎಂದು ನಗರ ಪಾಲಿಕೆ ಪರಿಷತ್ ಇ.ಒ ವಿನೋದ್ ಕುಮಾರ್ ಸೋಲಂಕಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Women’ Reservation bill : ಮಹಿಳಾ ಮೀಸಲಾತಿಗೆ ಸಿದ್ದರಾಮಯ್ಯ ಸ್ವಾಗತ, ಈಗ ಯೋಗಿ ಆದಿತ್ಯನಾಥ್ ಏನಂತಾರೆ?
“ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿರುವ ಮೂರ್ತಿಯನ್ನು ತೆರವುಗೊಳಿಸಬೇಕು ಎಂದು ಸೆಪ್ಟೆಂಬರ್ 23ರಂದು ನೋಟಿಸ್ ಜಾರಿಗೊಳಿಸಲಾಗಿತ್ತು. 24 ಗಂಟೆಯಲ್ಲಿ ಮೂರ್ತಿ ತೆರವುಗೊಳಿಸಬೇಕು ಎಂದು ಸೂಚಿಸಲಾಗಿತ್ತು. ಆದರೆ, ಗಡುವು ಮೀರಿದರೂ ಮೂರ್ತಿ ತೆರವು ಮಾಡದ ಕಾರಣ ಅಧಿಕಾರಿಗಳೇ ತೆರವು ಮಾಡಬೇಕಾಯಿತು” ಎಂದು ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ಕಚೇರಿ ಹಾಗೂ ಮೂರ್ತಿ ಪ್ರತಿಷ್ಠಾಪನೆಗೆ ಸಮಾಜವಾದಿ ಪಕ್ಷದ ಕಾರ್ಯಕರ್ತರು 10 ಲಕ್ಷ ರೂ. ಸಂಗ್ರಹಿಸಿದ್ದರು ಎಂದು ತಿಳಿದುಬಂದಿದೆ.
ಕ್ರೈಂ
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ. ಆಕೆ ಮನೆ ಮನೆಗೆ ತೆರಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಸಹಾಯ ಮಾಡದಿರುವುದು ಕೂಡ ಅಮಾನವೀಯ ಎನಿಸಿದೆ.
ಭೋಪಾಲ್: ದೇಶದಲ್ಲಿ ಬಾಲಕಿಯರು ಸೇರಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು, ಅತ್ಯಾಚಾರ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಎಷ್ಟೇ ಕಠಿಣ ಕ್ರಮ ಜಾರಿಗೆ ತಂದರೂ ಕ್ರೂರ ಜನ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ.
ಉಜ್ಜಯಿನಿಯ ಬದ್ನಗರದ ಬಳಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದಾದ ಬಳಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಅರೆಬೆತ್ತಲೆಯಾಗಿ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದಾಳೆ. ನನಗೆ ಸಹಾಯ ಮಾಡಿ ಎಂದು ಮನೆ ಮನೆಗೆ ತೆರಳಿ ಅಂಗಲಾಚಿದರೂ ಯಾರೋಬ್ಬರು ಕೂಡ ಬಾಲಕಿಗೆ ಸಹಾಯ ಮಾಡಿಲ್ಲ. ಬಾಲಕಿಯ ದುಸ್ಥಿತಿಯನ್ನು ನೋಡಿಕೊಂಡು ಸುಮ್ಮನಿದ್ದರೇ ಹೊರತು, ಏನಾಯ್ತಮ್ಮ ಎಂದು ಕೇಳಿಲ್ಲ, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡಿಲ್ಲ. ಇಂತಹ ಭೀಕರ ದೃಶ್ಯಗಳಿರುವ ವಿಡಿಯೊ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಆಸ್ಪತ್ರೆಗೆ ಸಾಗಿಸಿದ ಸಂತ
ಗೋಳಾಡುತ್ತ ಗೋಳಾಡುತ್ತ ಬಾಲಕಿಯು ಆಶ್ರಮವೊಂದನ್ನು ಪ್ರವೇಶಿಸಿದ್ದಾಳೆ. ಅಲ್ಲಿರುವ ಸಂತರೊಬ್ಬರು ಬಾಲಕಿಗೆ ಟವೆಲ್ ಹೊದಿಸಿ, ಆಕೆಯನ್ನು ಉಜ್ಜಯಿನಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ನಿಜ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಗೊತ್ತಾಗಿದೆ. ರಕ್ತಸ್ರಾವ, ಮೈತುಂಬ ಗಾಯಗಳಾದ ಕಾರಣ ಬಾಲಕಿಯನ್ನು ಇಂದೋರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ದೂರು ನೀಡಲು ಹೋದ ದಲಿತ ಮಹಿಳೆ ಮೇಲೆಯೇ ಅತ್ಯಾಚಾರ ಎಸಗಿದ ಪಿಎಸ್ಐ; ಇದೆಂಥಾ ಅನಾಚಾರ!
ಬಾಲಕಿ ಮೇಲೆ ಯಾರು ಅತ್ಯಾಚಾರ ಎಸಗಿದ್ದಾರೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಬಾಲಕಿಯಂತೂ ಪೊಲೀಸರ ಒಂದು ಪ್ರಶ್ನೆಗೂ ಉತ್ತರಿಸಲು ಆಗದಷ್ಟು ಕುಗ್ಗಿಹೋಗಿದ್ದಾಳೆ. ಅಪರಿಚಿತರ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಹಾಗೆಯೇ, ಆರೋಪಿಗಳ ಕುರಿತು ಸುಳಿವು ಸಿಕ್ಕರೆ ಮಾಹಿತಿ ಕೊಡಿ ಎಂಬುದಾಗಿಯೂ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ದೇಶ
Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!
Stadium Row: ದೆಹಲಿಯ ಕ್ರೀಡಾಂಗಣದಲ್ಲಿ (Delhi’s Thyagraj Stadium) ಅಭ್ಯಾಸ ನಡೆಸುತ್ತಿದ್ದ ಕ್ರೀಡಾಳುಗಳನ್ನು ಹೊರಗೆ ಕಳುಹಿಸಿ ಅಲ್ಲಿ ತಮ್ಮ ನಾಯಿ ಜತೆಗೆ ಮಾಕಿಂಗ್ ಮಾಡುತ್ತಿದ್ದ ಐಎಎಸ್ (IAS) ಅಧಿಕಾರಿ ರಿಂಕು ದುಗ್ಗ ಅವರಿಗೆ ಈಗ ಸರ್ಕಾರ ಕಡ್ಡಾಯ ನಿವೃತ್ತಿಯ ಸೂಚನೆ ನೀಡಿದೆ.
ದೆಹಲಿ: ದೆಹಲಿಯ ತ್ಯಾಗರಾಜ ಕ್ರೀಡಾಂಗಣದಿಂದ (Delhi’s Thyagraj Stadium) ಕ್ರೀಡಾಳುಗಳನ್ನು ಹೊರಗಟ್ಟಿ ನಾಯಿಯೊಂದಿಗೆ ವಾಕಿಂಗ್ ಮಾಡಿದ್ದ ಐಎಎಸ್ (IAS) ಅಧಿಕಾರಿ ರಿಂಕು ದುಗ್ಗ (54) ಅವರನ್ನು ಸರ್ಕಾರ ಕಡ್ಡಾಯ ನಿವೃತ್ತಿಗೊಳಿಸಿದೆ. 1994ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಿಂಕು ದುಗ್ಗ ಅರುಣಾಚಲ ಪ್ರದೇಶದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ರಿಂಕು ದುಗ್ಗ ಅವರ ಪತಿ ಸಂಜೀವ್ ಖೈರ್ವಾರ್ ಕೂಡ 1994ರ ಬ್ಯಾಚ್ನ ಐಎಎಸ್ ಅಧಿಕಾರಿ. ಅವರನ್ನು ಕಳೆದ ವರ್ಷ ದೆಹಲಿಯಿಂದ ಲಡಾಕ್ಗೆ ವರ್ಗಾಯಿಸಲಾಗಿತ್ತು. ಇವರು ತಮ್ಮ ನಾಯಿಯ ಜತೆ ವಾಕಿಂಗ್ಗೆ ಹೋಗಲೆಂದು ದೆಹಲಿಯ ತ್ಯಾಗರಾಜ ಸ್ಟೇಡಿಯಂಅನ್ನು ಸಂಜೆ ಏಳು ಗಂಟೆಗೇ ಖಾಲಿ ಮಾಡಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ದೆಹಲಿಯಿಂದ ವರ್ಗಾಯಿಸಿ ಕಳೆದ ವರ್ಷ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು.
ರಿಂಕು ದುಗ್ಗ ಅವರ ಕೆಲಸದ ದಾಖಲೆಗಳನ್ನು ಪರಿಶೀಲಿಸಿ ಕಡ್ಡಾಯ ನಿವೃತ್ತಿಗೆ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸೆಂಟ್ರಲ್ ಸಿವಿಲ್ ಸರ್ವಿಸಸ್ (CCS) ಪೆನ್ಶನ್ ರೂಲ್ಸ್, 1972ರ ಫಂಡಮೆಂಟಲ್ ರೂಲ್ಸ್ (FR) 56(j), ರೂಲ್ 48 ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಒಮ್ಮತದ ಅಭಿಪ್ರಾಯ ಇದ್ದರೆ ಯಾವುದೇ ಸರ್ಕಾರಿ ಉದ್ಯೋಗಿಗೆ ಕಡ್ಡಾಯ ನಿವೃತ್ತಿ ಸೂಚಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಿಂಕು ದುಗ್ಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಿವಾದವೇನು?
ದೆಹಲಿಯ ಕಂದಾಯ ವಿಭಾಗದ ಪ್ರಿನ್ರಿಪಾಲ್ ಸೆಕ್ರೆಟರಿ ಅಗಿದ್ದ ಖೈರ್ವಾರ್ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತ್ಯಾಗರಾಜ ಸ್ಟೇಡಿಯಂನಿಂದ ಎಲ್ಲ ಕ್ರೀಡಾಳುಗಳನ್ನು ಏಳು ಗಂಟೆಗೆ ಹೊರ ಹೋಗುವಂತೆ ನೋಡಿಕೊಂಡು ಬಳಿಕ ಅವರು ತಮ್ಮ ಪತ್ನಿ ರಿಂಕು ದುಗ್ಗ ಮತ್ತು ನಾಯಿ ಜತೆ ಅಲ್ಲಿ ವಾಕಿಂಗ್ ಮಾಡುತ್ತಿದ್ದರು! ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ಕೇಳಿ ಬಂದಿತ್ತು.
ಇದನ್ನೂ ಓದಿ: UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
ವಿವಾದದ ಬಳಿಕ 1994ರ ಬ್ಯಾಚ್ನ ಎಜಿಎಂಯುಟಿ ಕೇಡರ್ಗೆ ಸೇರಿದ ರಿಂಕು ದುಗ್ಗ ಅವರನ್ನು 2022ರ ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶಕ್ಕೆ ನಿಯೋಜಿಸಲಾಗಿತ್ತು. ಅವರನ್ನು ಈಶಾನ್ಯ ರಾಜ್ಯದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಇನ್ನಷ್ಟು ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ದೇಶ
Lok Sabha Election 2024: 2.5 ಲಕ್ಷ ಗ್ರಾಮಗಳಲ್ಲಿ ಬಿಜೆಪಿ ‘ರಥ’ಯಾತ್ರೆ; ‘ಲೋಕ’ ಸಮರಕ್ಕೆ ರಣತಂತ್ರ
Lok Sabha Election 2024: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲು ಬಿಜೆಪಿಯು ರಣತಂತ್ರ ರೂಪಿಸಿದೆ. ಗ್ರಾಮೀಣ ಸಂವಾದ ಯಾತ್ರೆ ಮೂಲಕ ಗ್ರಾಮೀಣ ಭಾಗದ ಜನರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. ಇದರ ಮಾಹಿತಿ ಇಲ್ಲಿದೆ.
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (Lok Sabha Election 2024) ಬಿಜೆಪಿ ಸೇರಿ ಎಲ್ಲ ಪಕ್ಷಗಳು ಸಕಲ ರೀತಿಯಲ್ಲಿ ಸಜ್ಜಾಗುತ್ತಿವೆ. ಸುಮಾರು 26 ಪಕ್ಷಗಳನ್ನು ಒಗ್ಗೂಡಿಸಿಕೊಂಡು ಪ್ರತಿಪಕ್ಷಗಳು ಇಂಡಿಯಾ ಒಕ್ಕೂಟ (INDIA Bloc) ರಚಿಸಿದರೆ, ಬಿಜೆಪಿಯೂ ಎನ್ಡಿಎ (NDA) ಮೈತ್ರಿಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತಿದೆ. ಅದರಲ್ಲೂ, ಲೋಕಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದು, ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ಹೊಸ ಮಾದರಿಯಲ್ಲಿ ರಥಯಾತ್ರೆ (Grameen Samvaad Yatra) ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.
ಹೌದು, ಬಿಜೆಪಿಯು ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ‘ಗ್ರಾಮೀಣ ಸಂವಾದ ಯಾತ್ರೆ’ ಕೈಗೊಳ್ಳಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡುವುದು, ಕೇಂದ್ರದ ಸಾಧನೆ, ಪ್ರಮುಖ ತೀರ್ಮಾನಗಳನ್ನು ಜನರಿಗೆ ತಿಳಿಸುವುದು ಗ್ರಾಮೀಣ ಸಂವಾದ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದರೊಂದಿಗೆ, ಲೋಕಸಭೆ ಚುನಾವಣೆಯಲ್ಲಿ ಗ್ರಾಮೀಣ ಭಾಗದ ಜನರನ್ನು ತನ್ನತ್ತ ಸೆಳೆಯುವುದು ಬಿಜೆಪಿಯ ರಣತಂತ್ರವಾಗಿದೆ ಎನ್ನಲಾಗಿದೆ.
1,500 ರಥಗಳು ಸಜ್ಜು
ದೇಶದ ಸುಮಾರು 2.5 ಲಕ್ಷ ಗ್ರಾಮಗಳಲ್ಲಿ ರಥಗಳ ಮೂಲಕ ಗ್ರಾಮೀಣ ಸಂವಾದ ಯಾತ್ರೆ ಕೈಗೊಳ್ಳುವುದು ಬಿಜೆಪಿಯ ಯೋಜನೆಯಾಗಿದೆ. ಇದಕ್ಕಾಗಿ 1,500 ಅತ್ಯಾಧುನಿಕ ರಥಗಳನ್ನು ಕೂಡ ಸಿದ್ಧಪಡಿಸಲಾಗುತ್ತಿದೆ. ಜಿಪಿಎಸ್ ಅಳವಡಿಕೆ ಮಾಡಲಾದ, ಡ್ರೋನ್ಗಳ ನಿರ್ವಹಣೆ ಸೇರಿ ಹಲವು ರೀತಿಯಲ್ಲಿ ಜನರ ಜತೆ ಸಂವಾದ ನಡೆಸಲು ಸಾಧ್ಯವಾಗುವ ಅತ್ಯಾಧುನಿಕ ರಥಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Lok Sabha Election 2024 : ಸೀಟು ಹಂಚಿಕೆ ಚರ್ಚೆ ಆಗಿಲ್ಲ; ಸುಮಲತಾ ʼಅತಂತ್ರʼದ ಬಗ್ಗೆ ಎಚ್ಡಿಕೆ ಹೇಳಿದ್ದೇನು?
ಕೇಂದ್ರದ ಸಚಿವರು, ಸಂಸದರು, ಬಿಜೆಪಿ ನಾಯಕರು, ಶಾಸಕರು ಸೇರಿ ಹಲವರು ಗ್ರಾಮೀಣ ಸಂವಾದ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಇಳಿಸಿದೆ. ಇದರ ಜತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನೂ ಇಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಭಾರಿ ಪ್ರಮಾಣದ ಪ್ರಚಾರಕ್ಕೂ ಬಿಜೆಪಿ ಎಲ್ಲ ರೀತಿಯಲ್ಲಿ ಸಜ್ಜಾಗುತ್ತಿದೆ.
-
ದೇಶ14 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ22 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್21 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ22 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್