New Parliament Building: ಪ್ರಜಾಪ್ರಭುತ್ವ ದೇಗುಲದ ಉದ್ಘಾಟನೆ; ಅದ್ಧೂರಿ ಕಾರ್ಯಕ್ರಮದ ವಿಡಿಯೊ ಇಲ್ಲಿವೆ - Vistara News

ದೇಶ

New Parliament Building: ಪ್ರಜಾಪ್ರಭುತ್ವ ದೇಗುಲದ ಉದ್ಘಾಟನೆ; ಅದ್ಧೂರಿ ಕಾರ್ಯಕ್ರಮದ ವಿಡಿಯೊ ಇಲ್ಲಿವೆ

New Parliament Building: ನೂತನ ಸಂಸತ್‌ ಭವನಕ್ಕೆ ನರೇಂದ್ರ ಮೋದಿ ಚಾಲನೆ ನೀಡಿದ್ದು, ಇಡೀ ದಿನದ ಕಾರ್ಯಕ್ರಮಗಳ ಪ್ರಮುಖ ವಿಡಿಯೊಗಳು ಹೀಗಿವೆ…

VISTARANEWS.COM


on

Narendra Modi In New Parliament Building
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ ಪ್ರಜಾಪ್ರಭುತ್ವದ ದೇಗುಲದಂತಿರುವ ನೂತನ ಸಂಸತ್‌ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಉಪಸ್ಥಿತಿಯಲ್ಲಿ ಉದ್ಘಾಟಿಸಿದ್ದಾರೆ. ಇಡೀ ಉದ್ಘಾಟನೆ ಕಾರ್ಯಕ್ರಮ ಹೇಗೆ ನೆರವೇರಿತು? ಸೆಂಗೋಲ್‌ ಪ್ರತಿಷ್ಠಾಪನೆ ಕಾರ್ಯಕ್ರಮ ಹೇಗೆ ನಡೆಯಿತು ಎಂಬುದು ಸೇರಿ ಇಡೀ ಕಾರ್ಯಕ್ರಮದ ಪ್ರಮುಖ ವಿಡಿಯೊಗಳು ಇಲ್ಲಿವೆ.

ಸಂಸತ್‌ ಭವನದ ಉದ್ಘಾಟನೆ

ಹೀಗಿದೆ ಸಂಸತ್‌ ಭವನದ ಒಳಾಂಗಣ

ಸೆಂಗೋಲ್‌ ಪ್ರತಿಷ್ಠಾಪನೆ

ಪೂಜಾ ಕೈಂಕರ್ಯದಲ್ಲಿ ಮೋದಿ, ಓಂ ಬಿರ್ಲಾ

ಸಂಸತ್‌ ಭವನದಲ್ಲಿ ಸರ್ವಧರ್ಮ ಪ್ರಾರ್ಥನೆಯ ಸಂದೇಶ

ಸೆಂಗೋಲ್‌ಗೆ ಮೋದಿ ದೀರ್ಘದಂಡ ನಮಸ್ಕಾರ

ಸಂಸತ್‌ ಭವನದಲ್ಲಿ ಕಲಾ ತಂಡಗಳ ಮೆರುಗು

ಇದನ್ನೂ ಓದಿ: New Parliament Building: ಪ್ರಜಾಪ್ರಭುತ್ವದ ನವ ಶಕ್ತಿ ಕೇಂದ್ರ, ವೈವಿಧ್ಯದ ಆಗರ ನೂತನ ಸಂಸತ್‌ ಭವನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಸತ್ಯಂ ಶಿವಂ ಸುಂದರಂ

ನನ್ನ ದೇಶ ನನ್ನ ದನಿ ಅಂಕಣ: ಶತಕೋಟಿ ಹಿಂದೂಗಳ ಪರಮೇಶ್ವರ ಇನ್ನೆಷ್ಟು ಕಾಯಬೇಕು? ಕಾದಿದ್ದು ಸಾಕು. ನಮಗೆ ಮುಕ್ತಿ ದಯಪಾಲಿಸುವ ಆ ಮುಕ್ತಿನಾಥನಿಗೆ ಇನ್ನಾದರೂ ವಿಮೋಚನೆಯಾಗಲಿ.

VISTARANEWS.COM


on

varanasi nandi
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ: ಭಾರತವನ್ನು ತುಂಡರಿಸಲಿಚ್ಛಿಸುವ ವಿಚ್ಛಿದ್ರಕಾರೀ ಶಕ್ತಿಗಳು ವಿಜೃಂಭಿಸುತ್ತಿವೆ! ಆಸುರೀ ಶಕ್ತಿಗಳೇ ಹಾಗೆ. ನಿಜ. ಅಬ್ಬರ ಜಾಸ್ತಿ. ಸನಾತನ ಧರ್ಮದ ಬಗೆಗೆ ಅಣು ಪ್ರಮಾಣದ ಅರಿವು ಇಲ್ಲದಿದ್ದರೂ, ಆರ್ಯ-ದ್ರಾವಿಡ ಜನಾಂಗೀಯ ಸಿದ್ಧಾಂತ ಎಂಬುದು ಶತಪ್ರತಿಶತ ಅಬದ್ಧ ಎಂಬುದು ವೈಜ್ಞಾನಿಕವಾಗಿ ರುಜುವಾತಾಗಿದ್ದರೂ, ದ್ರಾವಿಡ ಪಕ್ಷದ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವವರು ನಾಲಿಗೆ ಹರಿಬಿಡುತ್ತಾರೆ. ಇನ್ನು ಕೆಲ “ಸಜ್ಜನರು” ಶ್ರೀರಾಮನ ಬಗೆಗೇ ವಿಷ ಕಾರುತ್ತಾರೆ.

ನಿಜ, ಇದು ಎಂದೆಂದಿಗೂ ಮುಗಿಯದ ಹೋರಾಟ. ಶ್ರೀರಾಮ ಜನ್ಮಭೂಮಿ ದೇವಾಲಯದ ಪುನರ್ನಿರ್ಮಾಣ, ಪ್ರಾಣ ಪ್ರತಿಷ್ಠಾಪನೆಗಳು ಒಂದು ಹಂತಕ್ಕೆ ಬರುತ್ತಿದ್ದಂತೆ ಭಾರತ-ವಿರೋಧೀ ಶಕ್ತಿಗಳಿಗೆ ಸಹಿಸಲಾರದಂತಹ ಸಂಕಟ.

ಭಾರತವನ್ನು ಜೋಡಿಸುವ ಹೆಸರಿನಲ್ಲಿ, ಜನರನ್ನು ಒಂದುಗೂಡಿಸುವ ಬದಲು, ಕೆಲವರು ಇನ್ನಷ್ಟು ವಿಭಜನೆಗೆ ಸನ್ನಾಹ ಮಾಡುತ್ತಿದ್ದಾರೆ. ಇನ್ನು ಕೆಲವರು ಉತ್ತರ ಭಾರತ – ದಕ್ಷಿಣ ಭಾರತಗಳನ್ನು ಬೇರೆ ಬೇರೆ ಮಾಡಲು ಹವಣಿಸುತ್ತಿದ್ದಾರೆ. ಕರ್ನಾಟಕದ ಕುಡಿಯುವ ನೀರನ್ನೂ ತಮಿಳುನಾಡಿಗೆ ಹರಿಸಿದವರು, ದಕ್ಷಿಣ ಭಾರತವೇ ಪ್ರತ್ಯೇಕವಾಗಬೇಕು ಎನ್ನುತ್ತಾರೆ. ಕರ್ನಾಟಕದ ಹಣ ಉತ್ತರ ಭಾರತಕ್ಕೆ ಹೋಗುತ್ತಿದೆ, ಎಂದು ಗುರುಗುಟ್ಟುವವರು ತೆರಿಗೆಯನ್ನೇ ಕಟ್ಟದ ಸಮುದಾಯಗಳಿಗೆ ತೆರಿಗೆದಾರರ ಕೋಟಿಕೋಟಿ ಹಣವನ್ನು ಸುರಿಯುತ್ತಾರೆ. ದೇವಾಲಯಗಳ ಹಣ ಸೂರೆಮಾಡಿ, ಚರ್ಚು – ಮಸೀದಿಗಳಿಗೆ ಬಹಳ ದೊಡ್ಡ ಮೊತ್ತವನ್ನು ಹಂಚಿ ಮೆರೆಯುತ್ತಿದ್ದಾರೆ.

ಸೋಮನಾಥನ, ಶ್ರೀರಾಮನ ದೇವಾಲಯಗಳ ವಿಮೋಚನೆಯಾಗಲು ಏಳೆಂಟು ದಶಕಗಳೇ ಬೇಕಾದವು. ಇದೀಗ ಮಥುರೆ – ಕಾಶಿಗಳು ಕಾಯುತ್ತಿವೆ.

ಕಾಶಿಯನ್ನು ಧ್ವಂಸ ಮಾಡಿದವನು ಬರೀ ಔರಂಗಜೇಬನಷ್ಟೇ ಅಲ್ಲ. ವಿಗ್ರಹ ಭಂಜನೆಗೇ ಕುಖ್ಯಾತನಾದ ಇಸ್ಲಾಮೀ ದಾಳಿಕೋರ ಕುತ್ಬುದ್ದೀನ್ ಐಬಕ್, ಸಾಮಾನ್ಯ ಯುಗದ ೧೧೯೪ರಲ್ಲಿ ಇದೇ ಕಾಶಿ ವಿಶ್ವನಾಥನ ದೇವಾಲಯವನ್ನು ಧ್ವಂಸ ಮಾಡಿದ. ಆ ಕಾಲದ (ಸಮಕಾಲೀನ) ಮುಸ್ಲಿಂ ಇತಿಹಾಸಕಾರ ಹಸನ್ ನಿಜಾಮಿ ದಾಖಲಿಸಿರುವಂತೆ, ಒಂದು ಸಾವಿರ ದೇವಾಲಯಗಳನ್ನು ನಾಶ ಮಾಡಿ ಲೂಟಿ ಮಾಡಿದ ಐಶ್ವರ್ಯವನ್ನು, ಈ ಐಬಕ್ ಹದಿನೆಂಟು ಒಂಟೆಗಳ ಮೇಲೆ ಮುನ್ನೂರು ಆನೆಗಳ ಮೇಲೆ ಕೊಂಡೊಯ್ದ. ಅಷ್ಟೇ ಅಲ್ಲ, ಸುಪ್ರಸಿದ್ಧ ಸಾರನಾಥ್ ಸೇರಿದಂತೆ, ಅನೇಕ ಬೌದ್ಧ ದೇವಾಲಯಗಳನ್ನೂ ಧ್ವಂಸ ಮಾಡಿದ. ಇಂದು ಸಾರನಾಥದ ಎಲ್ಲೆಡೆ ಕಾಣುವ ಧ್ವಂಸಾವಶೇಷಗಳನ್ನು ನೋಡಿದರೆ, ಮನಸ್ಸು – ನಾಲಿಗೆ – ಹೃದಯಗಳು ಕಹಿಯಾಗಿಬಿಡುತ್ತವೆ.

vikram sampath

ಭಾರತೀಯರು ತಮ್ಮ ಹೋರಾಟವನ್ನು ಎಂದಿಗೂ ನಿಲ್ಲಿಸಿದವರಲ್ಲ. ಇಂದಿಗೂ ನಿಲ್ಲಿಸಬೇಕಿಲ್ಲ. ಸಾ|| ಯುಗದ ೧೨೧೨ರಲ್ಲಿ ಬಂಗಾಳದ ಸೇನ್ ವಂಶದ ರಾಜ ವಿಶ್ವರೂಪನು, ಕಾಶಿಗೆ ಬಂದು, ವಿಶ್ವನಾಥನ ದೇವಾಲಯದ ತಾಣದಲ್ಲಿಯೇ “ಈ ನಗರವು ವಿಶ್ವೇಶ್ವರನದು” ಎಂದು ಬರೆಸಿದ ಕಂಬವೊಂದನ್ನು ಸ್ಥಾಪಿಸಿದ. ಪೂರ್ವ ಭಾರತದ ರಾಜರೂ ದೇವಾಲಯ ಪುನರ್-ಸ್ಥಾಪನೆಯ ಈ ಹೋರಾಟದಲ್ಲಿ ಕೈಜೋಡಿಸಿದರು. ಗುಜರಾತ್ ಪ್ರಾಂತದ ವ್ಯಾಪಾರಿ ಸೇಠ್ ವಸ್ತುಪಾಲನು ೧೨೩೦ರಲ್ಲಿ ಒಂದು ಲಕ್ಷ ಸ್ವರ್ಣ ವರಹಗಳನ್ನು ಅರ್ಪಿಸಿ ಪುನರ್ನಿರ್ಮಾಣಕ್ಕೆ ಚಾಲನೆ ನೀಡಿದ. ಈ ನಿರ್ಮಾಣ ಕಾರ್ಯಕ್ಕೆ ಕನಿಷ್ಠ ನಲವತ್ತು ಐವತ್ತು ವರ್ಷಗಳು ಬೇಕಾದವು.

ಪೂರ್ವ-ಪಶ್ಚಿಮ, ಉತ್ತರ – ದಕ್ಷಿಣ ಎಂದು ಮತ್ತೆ ಮತ್ತೆ ನಮ್ಮ ದೇಶವನ್ನು ವಿಚ್ಛೇದಿಸುವ, ತುಂಡು ತುಂಡು ಮಾಡುವ ಉದ್ದೇಶದ ದೇಶದ್ರೋಹಿಗಳು ಈ ಎಲ್ಲ ಐತಿಹಾಸಿಕ ಸಂಗತಿಗಳನ್ನೂ ಅಧ್ಯಯನ ಮಾಡಬೇಕಿದೆ. ಜಾತಿ, ವರ್ಣ, ಪ್ರಾಂತ, ಭಾಷೆಗಳ ಮೇಲೆ ಜನರನ್ನು ಒಡೆದು ಆಳುವ ದುರ್ಬುದ್ಧಿಜೀವಿಗಳನ್ನು ನಮ್ಮ ಜನ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ.

ಅದೊಂದು ದುರ್ಭರ ಕಾಲ. ಇಸ್ಲಾಮೀ ದುರಾಡಳಿತಕ್ಕೆ ಕಾಶಿಯ ಪ್ರಾಂತ್ಯ ಸಿಲುಕಿತ್ತು. ತಮ್ಮ ದೇಶದಲ್ಲಿಯೇ ಕಾಫಿರರೆನಿಸಿಕೊಂಡ ದೌರ್ಭಾಗ್ಯದ ಹಿಂದೂಗಳು ಅತ್ಯಂತ ಅವಮಾನಕಾರವಾದ ಜಿಜಿಯಾ ತೆರಿಗೆಯನ್ನು ತೆರಬೇಕಿತ್ತು. ಅದೂ ತುಂಬಾ ಹೀನಾಯವಾಗಿ. ಜಿಜಿಯಾ ಕಿತ್ತುಕೊಳ್ಳುವ ಲೂಟಿಕೋರನು ಕುದುರೆಯ ಮೇಲೆ ಕುಳಿತು ದರ್ಪದಿಂದ ವಸೂಲಿ ಮಾಡುತ್ತಿದ್ದ. ತೆರಿಗೆದಾರರು ದೈನ್ಯದಿಂದ ಬರಿಗಾಲಲ್ಲಿ ಹೋಗಿ, ಜೀಹುಜೂರ್ ಸಲ್ಲಿಸಿ ಜಿಜಿಯಾ ತೆರಬೇಕಿತ್ತು. ಆದರೇನು. ಹಿಂದೂಗಳ ಧರ್ಮಶ್ರದ್ಧೆ ಅನುಪಮವಾದುದು. ಕಾಶಿಯ ವಿಶ್ವನಾಥನ ದರ್ಶನ ಮಾಡುವುದನ್ನು ಎಂದಿಗೂ ನಿಲ್ಲಿಸಲಿಲ್ಲ. ನಮ್ಮ ಕರ್ನಾಟಕದ ಹೊಯ್ಸಳರ ಮೂರನೆಯ ವೀರನರಸಿಂಹನು ಕಾಶಿಯ ಯಾತ್ರಿಕರು ಈ ತೆರಿಗೆ ಪಾವತಿಸಲು ನೆರವಾಗಲು, ಹೆಬ್ಬಾಳೆ ಎಂಬ ಗ್ರಾಮದ ಪೂರ್ಣ ಆದಾಯವನ್ನೇ ಮೀಸಲಾಗಿಟ್ಟಿದ್ದ. ಇತ್ತೀಚಿನ ಉತ್ಖನನದಲ್ಲಿ ವೀರನರಸಿಂಹನ ಶಿಲಾಶಾಸನವೊಂದು ಬೆಳಕಿಗೆ ಬಂದಿರುವುದನ್ನು ನಾವಿಲ್ಲಿ ಸ್ಮರಿಸಬಹುದು. ಪಕ್ಕದ ಆಂಧ್ರದ ತೆಲುಗು ಕವಿ ಶ್ರೀನಾಥನು ವಿಜಯನಗರದ ಆಸ್ಥಾನ ಕವಿ. ಅವನು ಕಾಶಿ ಖಂಡವನ್ನು ತೆಲುಗಿಗೆ ಅನುವಾದಿಸಿದ್ದಾನೆ. ಭಾಷೆಯ ಹೆಸರಿನಲ್ಲಿ ಭಾರತೀಯರನ್ನು ಒಡೆದು ಆಳುವ ದ್ರೋಹಿಗಳಿಗೆ, ಅವರ ಕೊರಳಪಟ್ಟಿ ಹಿಡಿದು ನಮ್ಮ ಜನ ಈ ಅಂಶವನ್ನು ತಿಳಿಸಬೇಕಿದೆ, ಪ್ರಶ್ನಿಸಬೇಕಿದೆ.

ಇಸ್ಲಾಮೀ ದಾಳಿಯ ಅಮಾನುಷ ಹೊಡೆತಕ್ಕೆ ಸಿಲುಕಿ ಕಾಶಿಯ ಅನೇಕ ವಿದ್ವಾಂಸರು – ಪಂಡಿತರು ದಕ್ಷಿಣ ಭಾರತದ ಅನೇಕ ಪ್ರಾಂತಗಳಿಗೆ ವಲಸೆ ಬಂದರು. ಭಟ್ಟ, ಶೇಷ, ಧರ್ಮಾಧಿಕಾರಿ ಮೊದಲಾದ ಉಪನಾಮಗಳ ಈ ವಿದ್ವಾಂಸರು, ಮತ್ತೆ ಕಾಶಿಗೆ ಹಿಂತಿರುಗಿ ಅಲ್ಲಿಯ ವಿದ್ವತ್-ಪುನರುತ್ಥಾನಕ್ಕೆ ಶ್ರಮಿಸಿದರು. ಕೆಲವು ಮೂರ್ಖರು ಶಿವಾಜಿ ಮಹಾರಾಜರಿಗೆ ಪಟ್ಟಾಭಿಷೇಕ ಮಾಡಲು ನಿರಾಕರಿಸಿದಾಗ, ಕಾಶಿಯಿಂದ ಬಂದ ಗಾಗಾ ಭಟ್ಟರು ಈ ಪಟ್ಟಾಭಿಷೇಕವನ್ನು ನಿರ್ವಹಿಸಿದುದು ಇತಿಹಾಸವೇ ಆಗಿದೆ. ವಿಶೇಷವೆಂದರೆ, ಅಂತಹ ವಲಸೆಯ ಋತ್ವಿಕರಾದ ದೀಕ್ಷಿತರೇ ಶ್ರೀರಾಮ ಜನ್ಮಭೂಮಿ ದೇವಾಲಯದ ಇತ್ತೀಚಿನ ಪ್ರಾಣಪ್ರತಿಷ್ಠೆಯ ಸೂತ್ರಧಾರರಾಗಿದ್ದುದು ಗಮನಿಸಬೇಕಾದುದು.

೧೪ನೆಯ ಶತಮಾನದಲ್ಲಿ ಜೌನಪುರದ ನವಾಬ ಮತ್ತೆ ಕಾಶಿಯ ದೇವಾಲಯವನ್ನು ಧ್ವಂಸ ಮಾಡಿದ. ಮತ್ತೆ ನಿರ್ಮಿಸಲ್ಪಟ್ಟ ದೇವಾಲಯವನ್ನು ಸಿಕಂದರ್ ಲೋಧಿಯು ನೆಲಸಮ ಮಾಡಿದ. ಯಾರಪ್ಪಾ, ಈ ಲೋಧಿ ಎನ್ನುವಿರೋ? ದೆಹಲಿಯಲ್ಲಿ ಲೋಧಿ ಎಸ್ಟೇಟ್, ಲೋಧಿ ರೋಡ್, ಲೋಧಿ ಕಾಲೋನಿ ಇತ್ಯಾದಿ ಇತ್ಯಾದಿ ಇವೆಯಲ್ಲಾ, ಆ ಲೋಧಿ ವಂಶದವನೇ ಈತ. ಭಾರತದ ರಾಜಧಾನಿಯಲ್ಲಿ ಅಕ್ಬರ್ ರೋಡ್, ಬಾಬರ್ ರೋಡ್, ಔರಂಗಜೇಬ್ ರೋಡ್, ಮೊದಲಾದವನ್ನು ಹೆಸರಿಸಿದವರು, ಹಾಗೆ ಹೆಸರಿಸಿ ಧನ್ಯರಾದವರು ಮತ್ತು ಬ್ರಿಟಿಷರಿಗೆ ಪ್ರೀತಿಪಾತ್ರರಾಗಿ ಅವರಿಂದ ಅಧಿಕಾರ ಹಸ್ತಾಂತರ ಪಡೆದವರೇ. ಇಂದು ಆ ದಾಳಿಕೋರರ ಹೆಸರುಗಳನ್ನು ಬದಲಾಯಿಸಬೇಕೆಂದರೆ ಅಡ್ಡಗಾಲು ಹಾಕುತ್ತಿರುವವರೂ ಈ ಬ್ರಿಟಿಷ್ ಪ್ರೀತಿಪಾತ್ರರ ವಂಶೀಕರೇ!

ಲೋಧಿಯ ಅನಂತರ ಹಿಂದೂಗಳು ಮತ್ತೆ ಕಾಶಿಯ ವಿಶ್ವನಾಥನ ದೇವಾಲಯದ ಮರು-ನಿರ್ಮಾಣಕ್ಕೆ, ನಾರಾಯಣ ಭಟ್ಟರ ನೇತೃತ್ವದಲ್ಲಿ ರಾಜಾ ತೋಡರಮಲ್ ಸಹಾಯ ಪಡೆದರು.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಇತಿಹಾಸದ ಸಂಕ್ರಮಣ ಕಾಲದಲ್ಲಿ ಹಿಂದೂಗಳ ಸಹಾಯ ನಿರೀಕ್ಷಿಸಿದ್ದ ಪರ್ಷಿಯನ್ನರು

ಔರಂಗಜೇಬನು ಇಸ್ಲಾಮಿನ ಕಡುನಿಷ್ಠ ಅನುಯಾಯಿ. ತನ್ನ ಮತಶ್ರದ್ಧೆಗೆ ಅನುಸಾರವಾಗಿ ಮಥುರೆ – ಕಾಶಿಗಳೂ ಸೇರಿದಂತೆ, ಅಕ್ಷರಶಃ ಸಾವಿರಾರು ದೇವಾಲಯಗಳನ್ನು ಧ್ವಂಸ ಮಾಡಿದ. ಆ ಅವಧಿಯಲ್ಲಿ ಮತ್ತು ಅನಂತರದಲ್ಲಿ ಅನೇಕ ಮರಾಠಾ ರಾಜರು, ಈ ಹಿಂದೂ ದೇವಾಲಯಗಳನ್ನು ಹಿಂಪಡೆಯಲು ಶ್ರಮಿಸಿದರೂ ಅದೇಕೋ ಸಾಧ್ಯವೇ ಆಗಲಿಲ್ಲ. ಮಲ್ಹಾರ್ ರಾವ್ ಹೋಳ್ಕರ್ ಸಹ ಕಾಶಿಯನ್ನು ಪಡೆಯಲು ಯತ್ನಿಸಿದರು. ಅದೂ ಸಾಧ್ಯವಾಗಲಿಲ್ಲ. ವಿಶೇಷವೆಂದರೆ, ಅವರ ಸೊಸೆ ಅಹಲ್ಯಾಬಾಯಿ ಹೋಳ್ಕರ್ ಅವರು ಮೂಲ ಕಾಶಿ ದೇವಾಲಯದ ಪಕ್ಕದಲ್ಲಿ ಹೊಸದೊಂದು ದೇವಾಲಯವನ್ನೇ ನಿರ್ಮಿಸಿದರು. ಅದೇ ಇಂದು ನಮ್ಮ ನಡುವೆ ಇರುವ ದೇವಾಲಯ. ಹಿಮಾಲಯದಿಂದ ಮೊದಲ್ಗೊಂಡು ನಮ್ಮ ಗೋಕರ್ಣವೂ ಸೇರಿದಂತೆ, ಇಡೀ ಭಾರತದಲ್ಲಿ ಅಹಲ್ಯಾಬಾಯಿ ಅವರು ಅನೇಕ ದೇವಾಲಯಗಳನ್ನು ನಿರ್ಮಿಸಿದರು, ಜೀರ್ಣೋದ್ಧಾರ ಮಾಡಿಸಿದರು. ಪ್ರತಿಕೂಲ ವಾತಾವರಣದಲ್ಲಿಯೂ ಅವರ ಈ ಸಾಹಸವು ಸನಾತನ ಧರ್ಮದ ಪುನರುತ್ಥಾನದ ಅಪೂರ್ವ ಘಟ್ಟವಾಗಿದೆ. ಕನ್ನಡ, ಮರಾಠೀ, ತೆಲುಗು, ತಮಿಳು ಎಂದೆಲ್ಲಾ ಭೇದ ಮಾಡಿ ಹೊಸ ಹೊಸ ವಿಚ್ಛಿದ್ರಕಾರೀ ಸಿದ್ಧಾಂತಗಳನ್ನು ಹೆಣೆಯುವ ದ್ರೋಹಿ ಅಕಾಡೆಮಿಷಿಯನ್ನರು ಈ ಸಂಗತಿಗಳನ್ನು ಅಪ್ಪಿತಪ್ಪಿ ಉಲ್ಲೇಖಿಸುವುದಿಲ್ಲ. ೧೮೩೫ರಲ್ಲಿ ಪಂಜಾಬಿನ ಸಿಂಹ, ಸಿಖ್ ದೊರೆ ರಣಜಿತ್ ಸಿಂಹರು ಕಾಶಿ ವಿಶ್ವನಾಥನ ಈ ದೇವಾಲಯದ ಗೋಪುರಕ್ಕೆ ಒಂದು ಟನ್ ತೂಕದ ಚಿನ್ನದ ತಗಡುಗಳನ್ನು ಹೊದಿಸುವ ಸೇವೆ ಸಲ್ಲಿಸಿದರು. ಹಿಂದೂಗಳ – ಸಿಖ್ಖರ ನಡುವೆ ಖಲಿಸ್ತಾನವನ್ನು ಹುಟ್ಟುಹಾಕಿದ ಬೆಳೆಸಿದ ದೇಶದ್ರೋಹಿಗಳಿಗೆ, ಜನರೇ ಈ ಅಂಶವನ್ನು ತಿಳಿಸಬೇಕಿದೆ.

ಶತಕೋಟಿ ಹಿಂದೂಗಳ ಪರಮೇಶ್ವರ ಇನ್ನೆಷ್ಟು ಕಾಯಬೇಕು? ಕಾದಿದ್ದು ಸಾಕು. ನಮಗೆ ಮುಕ್ತಿ ದಯಪಾಲಿಸುವ ಆ ಮುಕ್ತಿನಾಥನಿಗೆ ಇನ್ನಾದರೂ ವಿಮೋಚನೆಯಾಗಲಿ. ಶೀಘ್ರವಾಗಿ ನಂದಿಯ ಪ್ರತೀಕ್ಷೆಗೆ ಒಂದು ಸಕಾರಾತ್ಮಕ ಅಂತ್ಯ ದೊರೆಯಲಿ. ಸತ್ಯಂ ಶಿವಂ ಸುಂದರಂ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಶತಮಾನದಾಚೆಗೆ ವಿಸ್ತರಿಸಿದ ಪ್ರತಿಭೆ ಪ್ರೊ || ಎಲ್.ಎಸ್. ಶೇಷಗಿರಿರಾವ್

Continue Reading

ದೇಶ

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

ಕೇಂದ್ರವು ಸಿಎಎ (CAA) ಅಡಿಯಲ್ಲಿ ನಿಯಮಗಳನ್ನು ಹೊರಡಿಸಿದ ಒಂದು ದಿನದ ನಂತರ, ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಿಯಮಗಳ ಅನುಷ್ಠಾನಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

VISTARANEWS.COM


on

Supreme Court
Koo

ಹೊಸದಿಲ್ಲಿ: ಪೌರತ್ವ (ತಿದ್ದುಪಡಿ) ಕಾಯಿದೆಯ (Citizenship amendment Act – CAA) ಸಾಂವಿಧಾನಿಕ ಸಿಂಧುತ್ವವನ್ನು ಹಾಗೂ ಕೋರ್ಟ್‌ ನಿರ್ಧರಿಸುವವರೆಗೆ ಪೌರತ್ವ ತಿದ್ದುಪಡಿ ಕಾಯಿದೆಯ ಅನುಷ್ಠಾನವನ್ನು ತಡೆಯಲು ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ (Supreme court) ಕೈಗೆತ್ತಿಕೊಳ್ಳಲಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಸಲ್ಲಿಕೆಗಳನ್ನು ಗಮನಿಸಿದೆ. ಒಮ್ಮೆ ವಲಸಿಗ ಹಿಂದೂಗಳಿಗೆ ಭಾರತೀಯ ಪೌರತ್ವವನ್ನು ನೀಡಿದರೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂಬ ಕಾರಣದಿಂದ ಶೀಘ್ರ ವಿಚಾರಣೆಗಾಗಿ ಒತ್ತಾಯಿಸಲಾಗಿದೆ.

ಸಿಎಎ ಕಾಯಿದೆಯನ್ನು 2019ರಲ್ಲಿ ಸಂಸತ್ತು ಅಂಗೀಕರಿಸಿದೆ. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಡಿಸೆಂಬರ್ 31, 2014ರ ಮೊದಲು ವಲಸೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡುವ ಉದ್ದೇಶವನ್ನು ಹೊಂದಿದೆ.

ಕೇಂದ್ರವು ಸಿಎಎ ಅಡಿಯಲ್ಲಿ ನಿಯಮಗಳನ್ನು ಹೊರಡಿಸಿದ ಒಂದು ದಿನದ ನಂತರ, ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಿಯಮಗಳ ಅನುಷ್ಠಾನಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಕಾನೂನನ್ನು ತಡೆಹಿಡಿಯಬೇಕು; ಈ ಕಾನೂನಿನ ಪ್ರಯೋಜನದಿಂದ ವಂಚಿತರಾಗುವ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದೆ.

IUML ಜೊತೆಗೆ, ಇತರ ಪಕ್ಷಗಳು ಮತ್ತು ವ್ಯಕ್ತಿಗಳಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (DYFI), ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಾ, ಅಸ್ಸಾಂನ ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಕ್ ಮತ್ತು ಇತರರು ಸಹ ಅರ್ಜಿಗಳನ್ನು ಸಲ್ಲಿಸಿದ್ದಾರೆ.

2019ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ CAA ಅನ್ನು ಪ್ರಶ್ನಿಸಿದ ಆರಂಭಿಕ ಪಕ್ಷಗಳಲ್ಲಿ ಒಂದಾದ IUML, ನಿರ್ದಿಷ್ಟ ದೇಶಗಳಿಂದ ಬಂದ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವ ಈ ಕಾನೂನು ʼವೇಗದ ಪ್ರಕ್ರಿಯೆʼಯನ್ನು ಸ್ಥಾಪಿಸುತ್ತಿದೆ. ಇದು ಕೇವಲ ಧಾರ್ಮಿಕ ಗುರುತನ್ನು ಆಧರಿಸಿ ತಾರತಮ್ಯಪೂರಿತವಾದ ಆಡಳಿತವನ್ನು ಜಾರಿಗೊಳಿಸುತ್ತದೆ ಎಂದು ವಾದಿಸಿದೆ.

ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅರ್ಜಿದಾರರ ನಿಲುವನ್ನು ನಿರಾಕರಿಸಿದ್ದಾರೆ. “ಯಾವುದೇ ಅರ್ಜಿದಾರರಿಗೆ ಪೌರತ್ವ ನೀಡುವಿಕೆಯನ್ನು ಪ್ರಶ್ನಿಸಲು ಯಾವುದೇ ಅಧಿಕಾರವಿಲ್ಲ” ಎಂದು ಹೇಳಿದ್ದಾರೆ. ಸಿಎಎ ವಿರುದ್ಧ 237 ಅರ್ಜಿಗಳು ಬಾಕಿ ಉಳಿದಿದ್ದು, ನಿಯಮಗಳ ಅನುಷ್ಠಾನಕ್ಕೆ ತಡೆ ಕೋರಿ ನಾಲ್ಕು ಮಧ್ಯಂತರ ಅರ್ಜಿಗಳಿವೆ.

ಇದನ್ನೂ ಓದಿ: CAA: ಸಿಎಎ ತಡೆ ಕೋರಿದ ಅರ್ಜಿಗಳು ಮಾ.19ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Continue Reading

ದೇಶ

Ukrainian Minister: ಶೀಘ್ರ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಭಾರತಕ್ಕೆ ಭೇಟಿ; ಉದ್ದೇಶವೇನು?

Ukrainian Minister: ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಈ ತಿಂಗಳಾಂತ್ಯಕ್ಕೆ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.

VISTARANEWS.COM


on

Ukrainian minister
Koo

ನವದೆಹಲಿ: ಉಕ್ರೇನ್ ವಿದೇಶಾಂಗ ಸಚಿವ (Ukrainian Minister) ಡಿಮಿಟ್ರೊ ಕುಲೆಬಾ (Dmytro Kuleba) ಈ ತಿಂಗಳಾಂತ್ಯಕ್ಕೆ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. 2022ರಲ್ಲಿ ರಷ್ಯಾ-ಉಕ್ರೇನ್‌ ಯುದ್ಧ ಪ್ರಾರಂಭವಾದ ನಂತರ ಮೊದಲ ಬಾರಿ ಉಕ್ರೇನ್‌ನ ಸಚಿವರೊಬ್ಬರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಶಾಂತಿ ಶೃಂಗಸಭೆಗೆ ಬೆಂಬಲ ನೀಡುವಂತೆ ಮನವಿ ಮಾಡುವ ಉದ್ದೇಶದಿಂದ ಅವರು ದೆಹಲಿಗೆ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕುಲೇಬಾ ಅವರು ಉನ್ನತ ಮಟ್ಟದ ನಿಯೋಗದೊಂದಿಗೆ ಭಾರತ-ಉಕ್ರೇನ್ ಅಂತರ್‌-ಸರ್ಕಾರಿ ಆಯೋಗ (India-Ukraine inter-governmental commission)ದ ಸಭೆಯ ಸಹ ಅಧ್ಯಕ್ಷತೆ ವಹಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. 1994ರಲ್ಲಿ ಸ್ಥಾಪನೆಯಾದ ಭಾರತ-ಉಕ್ರೇನ್ ಅಂತರ್‌-ಸರ್ಕಾರಿ ಆಯೋಗವು ವ್ಯಾಪಾರ, ಆರ್ಥಿಕ, ವೈಜ್ಞಾನಿಕ, ತಾಂತ್ರಿಕ, ಕೈಗಾರಿಕಾ ಮತ್ತು ಸಾಂಸ್ಕೃತಿಕ ಸಹಕಾರ ಸೇರಿದಂತೆ ದ್ವಿಪಕ್ಷೀಯ ಸಂಬಂಧದ ಎಲ್ಲ ಅಂಶಗಳನ್ನು ಮೇಲ್ವಿಚಾರಣೆ ನಡೆಸುತ್ತಿದೆ.

ಉಕ್ರೇನ್ ವಿದೇಶಾಂಗ ಸಚಿವರ ಭಾರತ ಭೇಟಿಯನ್ನು ಎರಡೂ ದೇಶಗಳು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೂ ಅವರು ಮಾರ್ಚ್ 28ರ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಸ್ವಿಟ್ಜರ್ಲೆಂಡ್‌ನ ಉದ್ದೇಶಿತ ಶಾಂತಿ ಶೃಂಗಸಭೆಯು ಕುಲೇಬಾ ಅವರ ಕಾರ್ಯಸೂಚಿಯ ಪಟ್ಟಿಯಲ್ಲಿನ ಮುಖ್ಯ ಅಂಶವಾಗಿರಲಿದೆ ಎಂದು ಅಂದಾಜಿಸಲಾಗಿದೆ. ಉಕ್ರೇನ್-ರಷ್ಯಾ ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಶಾಂತಿ ಸಮ್ಮೇಳನದಲ್ಲಿ ಭಾಗವಹಿಸಲು ಚೀನಾ ಮುಂದಾಗಿದೆ. ಈ ಬೇಸಗೆಯ ವೇಳೆಗೆ ಶಾಂತಿ ಶೃಂಗಸಭೆಯನ್ನು ನಡೆಸುವ ಗುರಿಯನ್ನು ಹೊಂದಿದೆ ಎಂದು ಸ್ವಿಟ್ಜರ್ಲೆಂಡ್‌ ಸರ್ಕಾರ ಹೇಳಿದೆ.

ಉಕ್ರೇನ್ ಮೇಲಿನ ರಷ್ಯಾದ ಆಕ್ರಮಣವನ್ನು ಭಾರತ ಸಾರ್ವಜನಿಕವಾಗಿ ಖಂಡಿಸಿಲ್ಲ. ಅದಾಗ್ಯೂ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷಕ್ಕೆ ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳುವ ಎಲ್ಲ ಮಾರ್ಗವನ್ನು ಬೆಂಬಲಿಸುವುದಾಗಿ ಪದೇ ಪದೆ ಒತ್ತಿ ಹೇಳಿದೆ.

ಕಳೆದ ವರ್ಷ ಮೇ 21ರಂದು ಪ್ರಧಾನಿ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿದ್ದ ಉಕ್ರೇನ್‌ ಅಧ್ಯಕ್ಷ ಜೆಲನ್‌ಸ್ಕಿ ರಷ್ಯಾ-ಉಕ್ರೇನ್‌ ನಡುವಣ ಯುದ್ಧವನ್ನು ಸಮಾಪ್ತಿಗೊಳಿಸಲು ನೆರವು ಕೋರಿದ್ದರು. ಜಪಾನ್‌ನ ಹಿರೋಷಿಮಾದಲ್ಲಿ ನಡೆದ ಜಿ-7 ಶೃಂಗದ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಮಾತುಕತೆ ನಡೆಸಿದ ಜೆಲನ್‌ಸ್ಕಿ ಅವರು, ತಮ್ಮ ಶಾಂತಿ ಪ್ರಸ್ತಾಪಕ್ಕೆ ಮೋದಿಯವರ ಬೆಂಬಲ ಕೋರಿದ್ದರು.

ಭಾರತವು ರಷ್ಯಾ ಮತ್ತು ಉಕ್ರೇನ್‌ ಜತೆಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಹಿನ್ನೆಲೆಯಲ್ಲಿ ಉಕ್ರೇನ್‌ ಅಧ್ಯಕ್ಷರು ಬೆಂಬಲ ನಿರೀಕ್ಷಿಸಿದ್ದರು. ಉಕ್ರೇನ್‌ ವಿರುದ್ಧ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಉಕ್ರೇನ್‌ ಮತ್ತು ಭಾರತದ ನಾಯಕರು ಮುಖಾಮುಖಿಯಾಗಿದ್ದರು. ರಷ್ಯಾ-ಉಕ್ರೇನ್‌ ನಡುವೆ ಯುದ್ಧ ಶೀಘ್ರ ಅಂತ್ಯವಾಗಬೇಕು, ಯುದ್ಧಕ್ಕಿದು ಕಾಲವಲ್ಲ ಎಂದು ಈ ಹಿಂದೆಯೇ ಪ್ರಧಾನಿ ಮೋದಿ ಎರಡೂ ದೇಶಗಳಿಗೆ ಸಲಹೆ ನೀಡಿದ್ದರು. ಅಲ್ಲದೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಕದನ ವಿರಾಮ ಘೋಷಿಸುವಂತೆ ರಷ್ಯಾ ಸರ್ಕಾರದ ಮನವೊಲಿಸಿದ್ದರು. 2022ರಲ್ಲಿ ಈ ಎರಡು ದೇಶಗಳ ನಡುವೆ ಯುದ್ಧ ಆರಂಭವಾಗಿದ್ದು ಅಪಾರ ಸಾವು-ನೋವು ಸಂಭವಿಸಿದೆ.

ಇದನ್ನೂ ಓದಿ | Russia Ukraine war | ಧಾನ್ಯ ಸಾಗಣೆಗೆ ಬಂದರು ಮುಕ್ತ: ರಷ್ಯಾ ಮತ್ತು ಉಕ್ರೇನ್‌ ಒಪ್ಪಂದ

Continue Reading

ದೇಶ

Narendra Modi: ರಷ್ಯಾ ಅಧ್ಯಕ್ಷರಾಗಿ ಪುನರಾಯ್ಕೆಯಾದ ವ್ಲಾಡಿಮಿರ್‌ ಪುಟಿನ್‌ಗೆ ಅಭಿನಂದನೆ ತಿಳಿಸಿದ ಮೋದಿ

Narendra Modi: ರಷ್ಯಾ ಅಧ್ಯಕ್ಷರಾಗಿ ಆಯ್ಕೆಯಾದ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

modi putin
Koo

ನವದೆಹಲಿ: ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ (Russia Presidential Elections) ಐತಿಹಾಸಿಕ ಗೆಲುವು ಸಾಧಿಸಿರುವ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರಿಗೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಪುಟಿನ್‌ ಸುಮಾರು ಶೇ. 87.8ರಷ್ಟು ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪುಟಿನ್‌ ಅವರನ್ನು ಅಭಿನಂದಿಸಿದ ಮೋದಿ, “ರಷ್ಯಾ ಒಕ್ಕೂಟದ ಅಧ್ಯಕ್ಷರಾಗಿ ಪುನರಾಯ್ಕೆಯಾದ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಹಾರ್ದಿಕ ಅಭಿನಂದನೆಗಳು” ಎಂದು ಪೋಸ್ಟ್ ಮಾಡಿದ್ದಾರೆ. “ಮುಂಬರುವ ದಿನಗಳಲ್ಲಿ ಭಾರತ ಮತ್ತು ರಷ್ಯಾ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಅವರು ಬರೆದುಕೊಂಡಿದ್ದಾರೆ.

ಭಾರತ ಮತ್ತು ರಷ್ಯಾ ನಡುವೆ ಬಹಳ ಹಿಂದಿನಿಂದಲೂ ಉತ್ತಮ ಸಂಬಂಧವಿದೆ. ರಷ್ಯಾವು ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರ ದೇಶವಾಗಿ ಗುರುತಿಸಿಕೊಂಡಿದೆ. ಅಲ್ಲದೆ ಮಧ್ಯಪ್ರಾಚ್ಯ ರಫ್ತುದಾರ ದೇಶವನ್ನು ಹಿಂದಿಕ್ಕಿ ರಷ್ಯಾ ಭಾರತದ ಅಗ್ರ ತೈಲ ಪೂರೈಕೆದಾರನಾಗಿ ಮಾರ್ಪಟ್ಟಿದೆ.

ಮೂರನೇ ಮಹಾಯುದ್ಧದ ಎಚ್ಚರಿಕೆ

ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ದಾಖಲೆಯ 77.5% ಮತದಾನವಾಗಿತ್ತು ಎಂದು ರಷ್ಯಾದ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಮುಂದಿನ ಆರು ವರ್ಷಗಳವರೆಗೆ ವ್ಲಾಡಿಮಿರ್‌ ಪುಟಿನ್‌ ಅವರೇ ರಷ್ಯಾ ಅಧ್ಯಕ್ಷರಾಗಿ ಇರಲಿದ್ದಾರೆ. ಇವರು ಆರು ವರ್ಷ ರಷ್ಯಾ ಅಧ್ಯಕ್ಷರಾಗಿ ಆಡಳಿತ ನಡೆಸಿದರೆ ರಷ್ಯಾದ 200 ವರ್ಷಗಳ ಇತಿಹಾಸದಲ್ಲಿಯೇ ಅತಿ ಹೆಚ್ಚು ಅವಧಿಗೆ ಆಡಳಿತ ನಡೆಸಿದ ಅಧ್ಯಕ್ಷ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 

ಅಧ್ಯಕ್ಷರಾಗಿ ಚುನಾಯಿತರಾದ ಬೆನ್ನಲ್ಲೇ ಪುಟಿನ್‌ ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಮೂರನೇ ಮಹಾಯುದ್ಧದ ಎಚ್ಚರಿಕೆ ನೀಡಿದ್ದಾರೆ. ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಭಾಷಣ ಮಾಡಿದ ವ್ಲಾಡಿಮಿರ್‌ ಪುಟಿನ್‌, ಮಹಾಯುದ್ಧದ ಕುರಿತೇ ಪ್ರಸ್ತಾಪಿಸಿದರು. “ಮೂರನೇ ಮಹಾಯುದ್ಧಕ್ಕೆ ಒಂದೇ ಹೆಜ್ಜೆ ಬಾಕಿ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮೂರನೇ ಮಹಾಯುದ್ಧದಲ್ಲಿ ಯಾರಿಗೆ ಆಸಕ್ತಿ ಇದೆ ಎಂಬುದು ಗೊತ್ತಿದೆ. ನ್ಯಾಟೋ ಪಡೆಗಳು ಈಗಾಗಲೇ ಉಕ್ರೇನ್‌ನಲ್ಲಿ ಬೀಡು ಬಿಟ್ಟಿವೆ. ಫ್ರಾನ್ಸ್‌ ಹಾಗೂ ಬ್ರಿಟನ್‌ವನ್ನು ಎದುರಿಸಲು ರಷ್ಯಾ ಸಜ್ಜಾಗಿದೆ” ಎಂದು ಬಹಿರಂಗವಾಗಿಯೇ ವ್ಲಾಡಿಮಿರ್‌ ಪುಟಿನ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Vladimir Putin: ವ್ಲಾದಿಮಿರ್‌ ಪುಟಿನ್‌ ಹೊಸ ಪ್ರೇಯಸಿಯಂತೆ ಈ ಬಾರ್ಬಿ ಚೆಲುವೆ!

“ನ್ಯಾಟೋ ಪಡೆಗಳು ಉಕ್ರೇನ್‌ನಲ್ಲಿ ಬೀಡು ಬಿಟ್ಟಿರುವುದು ಮೂರನೇ ಮಹಾಯುದ್ಧಕ್ಕೆ ಪ್ರಚೋದನೆ ನೀಡುವಂತಿದೆ. ಆದರೆ, ಇದು ಅವರಿಗೆ ಔಚಿತ್ಯವಲ್ಲ. ಸಾವಿರಾರು ಸಂಖ್ಯೆಯಲ್ಲಿ ಜನ ಮೃತಪಡುತ್ತಿದ್ದಾರೆ ಎಂಬುದು ಅವರಿಗೆ ಗೊತ್ತಿದೆ. ಹೀಗಿದ್ದರೂ ಪ್ರಚೋದನೆ ನೀಡುತ್ತಿರುವುದು ಅಪಾಯಕಾರಿಯಾಗಿದೆ. ಹಾಗಾಗಿ, ನಾವು ಉಕ್ರೇನ್‌ ಮೇಲೆ ಮತ್ತೊಂದು ವಿಶೇಷ ಮಿಲಿಟರಿ ಕಾರ್ಯಾಚರಣೆ ನಡೆಸುತ್ತೇವೆ” ಎಂದು ಹೇಳಿದ್ದಾರೆ. ಇದು ಈಗ ಉಕ್ರೇನ್‌ ಜನರಿಗೆ ಮತ್ತಷ್ಟು ಆತಂಕ ತಂದೊಡ್ಡಿದೆ. ಇದಕ್ಕೂ ಮೊದಲು ಕೂಡ ವ್ಲಾಡಿಮಿರ್‌ ಪುಟಿನ್‌ ಅವರು ಅಣ್ವಸ್ತ್ರ ದಾಳಿಯ ಎಚ್ಚರಿಕೆ ನೀಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Benefits of Kasoori Methi
ಆರೋಗ್ಯ4 mins ago

Benefits of Kasoori Methi: ಕಸೂರಿ ಮೇಥಿ ರುಚಿ ಹೆಚ್ಚಿಸಲು ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಸೂಕ್ತ

varanasi nandi
ಅಂಕಣ24 mins ago

ನನ್ನ ದೇಶ ನನ್ನ ದನಿ ಅಂಕಣ: ಸತ್ಯಂ ಶಿವಂ ಸುಂದರಂ

Raja Marga human robots
ಸ್ಫೂರ್ತಿ ಕತೆ39 mins ago

Raja Marga Column : ಭಾವನೆಗಳೇ ಇಲ್ಲದ ರೋಬೋಟ್‌ನಂಥ ಮನುಷ್ಯರ ಜತೆ ಬದುಕೋದಾದರೂ ಹೇಗೆ?

Supreme Court
ದೇಶ46 mins ago

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

Fruits and Vegetables Spilling from Paper Bag
ಆರೋಗ್ಯ1 hour ago

Health Tips: ಈ ಹಣ್ಣು ಮತ್ತು ತರಕಾರಿಗಳನ್ನು ಎಂದಿಗೂ ಜೊತೆಯಾಗಿ ಇಡಲೇಬಾರದು!

Rain alert issued for Ramanagara and Kalaburagi Rising temperature in coastal areas
ಮಳೆ2 hours ago

Karnataka Weather : ರಾಜ್ಯದಲ್ಲಿಂದು ಬಿಸಿಲು, ಮಳೆ, ಗಾಳಿ ಒಟ್ಟೊಟ್ಟಿಗೆ ದಾಳಿ

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Ukrainian minister
ದೇಶ7 hours ago

Ukrainian Minister: ಶೀಘ್ರ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಭಾರತಕ್ಕೆ ಭೇಟಿ; ಉದ್ದೇಶವೇನು?

Techie couple assaulted over parking issue in Bengaluru
ಕರ್ನಾಟಕ8 hours ago

Assault Case: ಬೆಂಗಳೂರಲ್ಲಿ ಪಾರ್ಕಿಂಗ್‌ ವಿಚಾರಕ್ಕೆ ಟೆಕ್ಕಿ ದಂಪತಿ ಮೇಲೆ ಹಲ್ಲೆ

Banaglore incident
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಬೆಂಗಳೂರು ರೌಡಿಗಳ ಸಾಮ್ರಾಜ್ಯ ಆಗದಿರಲಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು14 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ4 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌