Site icon Vistara News

Israel Palestine War: ಪ್ಯಾಲೆಸ್ತೀನ್‌ಗೆ ಭಾರತದಿಂದ ಮಾನವೀಯ ನೆರವು; ಪ್ರಧಾನಿ ಮೋದಿ ಭರವಸೆ

PM Narendra Modi

ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ (Israel Palestine War) ಮಧ್ಯೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಗುರುವಾರ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ (palestine president Mahmoud Abbas) ಅವರೊಂದಿಗೆ ಮಾತನಾಡಿದ್ದಾರೆ. ಅಲ್ಲದೇ, ಗಾಜಾದ ಅಲ್-ಅಹ್ಲಿ ಆಸ್ಪತ್ರೆ ಮೇಲಿನ ದಾಳಿಯನ್ನು ಖಂಡಿಸಿರುವ ಅವರು, ಸಂತಾಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಭಾರತವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುತ್ತದೆ (Humanitarian Aid) ಎಂಬ ಭರವಸೆಯನ್ನು ನೀಡಿದ್ದಾರೆ.

ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರ ಜತೆಗಿನ ಮಾತುಕತೆಯಲ್ಲಿ , ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ಪಾಲಿಸಿಕೊಂಡಿರುವ ದೀರ್ಘ ಕಾಲದ ನೀತಿಯನ್ನು ಪುನರುಚ್ಚರಿಸಿದ್ದಾರೆ. “ಪ್ಯಾಲೆಸ್ತೀನ್ ಅಧ್ಯಕ್ಷ ಎಚ್.ಇ. ಮಹಮೂದ್ ಅಬ್ಬಾಸ್ ಜತೆ ಮಾತನಾಡಿದೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರ ಪ್ರಾಣಹಾನಿಗಾಗಿ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೇಸ್ಟಿನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ. ಈ ಪ್ರದೇಶದಲ್ಲಿ ಹಿಂಸಾಚಾರ ಮತ್ತು ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವದ ನಿಲುವನ್ನು ಪುನರುಚ್ಚಾರ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಗಾಜಾ ಪಟ್ಟಿಯಿಂದ ಭಾರತೀಯರನ್ನು ವಾಪಸ್ ಕರೆ ತರುವುದು ಕಷ್ಟ

ಆಪರೇಷನ್ ಅಜಯ್ (Operation Ajay) ಹೆಸರಿನಲ್ಲಿ ಇಸ್ರೇಲ್‌ನಲ್ಲಿರುವ ಭಾರತೀಯ ಪ್ರಜೆಗಳನ್ನು (Indian Citizens) ಕೇಂದ್ರ ಸರ್ಕಾರವು (Central Government) ಯಶಸ್ವಿಯಾಗಿ ತಾಯ್ನಾಡಿಗೆ ಯಶಸ್ವಿಯಾಗಿ ಕರೆ ತರುತ್ತಿದೆ. ಆದರೆ, ಅದೇ ಪ್ಯಾಲೆಸ್ತೀನ್‌ಲ್ಲಿರುವ ಭಾರತೀಯರನ್ನು ಸದ್ಯಕ್ಕೆ ಕರೆ ತರುವುದು ಕಷ್ಟ ಎಂದು ಸರ್ಕಾರ ಕೈ ಚೆಲ್ಲಿದೆ. ಯುದ್ಧಪೀಡಿತ ಗಾಜಾ ಪಟ್ಟಿಯಲ್ಲಿ (Gaza Strip) ಸದ್ಯಕ್ಕೆ ನಾಲ್ವರು ಭಾರತೀಯರಿದ್ದಾರೆ. ಆದರೆ, ಅವರ ಸ್ಥಳಾಂತರಕ್ಕೆ ಕಾಲ ಇನ್ನೂ ಪಕ್ವವಾಗಿಲ್ಲ. ಹಾಗಿದ್ದೂ ದೊರೆಯುವ ಮೊದಲ ಅವಕಾಶದಲ್ಲೇ ಅವರನ್ನು ಕರೆ ತರಲಾಗುವುದು ಎಂದ ವಿದೇಶಾಂಗ ಸಚಿವಾಲಯವು ತಿಳಿಸಿದೆ(Israel Palestine War).

ಗಾಜಾದಲ್ಲಿನ ಪರಿಸ್ಥಿತಿಯು ಯಾವುದೇ ಸ್ಥಳಾಂತರಕ್ಕೆ ಪೂರಕವಾಗಿಲ್ಲ, ಪರಿಸ್ಥಿತಿ ಗಂಭೀರವಾಗಿದೆ. ಆದರೆ ನಮಗೆ ಅವಕಾಶ ಸಿಕ್ಕರೆ, ನಾವು ಅಲ್ಲಿರುವ ಭಾರತೀಯ ಪ್ರಜೆಗಳನ್ನು ಕರೆ ತರುತ್ತೇವೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಭರವಸೆ ನೀಡಿದ್ದಾರೆ.

ಪ್ಯಾಲೆಸ್ತೀನ್‌ನಲ್ಲಿರುವ ನಾಲ್ವರು ಭಾರತೀಯರ ಪೈಕಿ ಒಬ್ಬರು ವೆಸ್ಟ್‌ ಬ್ಯಾಂಕ್‌ನಲ್ಲಿದ್ದಾರೆ. ಅಲ್ಲದೇ, ಇಸ್ರೇಲ್-ಹಮಾಸ್ ನಡುವಿನ ಸೇನಾ ಸಂಘರ್ಷದಲ್ಲೇ ಭಾರತೀಯರು ಮೃತಪಟ್ಟ ಯಾವುದೇ ವರದಿಗಳಿಲ್ಲ. ಅಲ್ಲದೇ, ಇಸ್ರೇಲ್‌ ಮೇಲಿನ ದಾಳಿಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಹೇಳಿದ್ದಾರೆ.

Exit mobile version