Pre Wedding Shoot: ಯುನಿಫಾರ್ಮ್‌ನಲ್ಲೇ ಪೊಲೀಸ್‌ ಅಧಿಕಾರಿಗಳ ಪ್ರಿ ವೆಡ್ಡಿಂಗ್‌ ಶೂಟ್‌; ಸಿನಿಮಾ ಸ್ಟೈಲ್‌ ವಿಡಿಯೊ ಇಲ್ಲಿದೆ - Vistara News

ದೇಶ

Pre Wedding Shoot: ಯುನಿಫಾರ್ಮ್‌ನಲ್ಲೇ ಪೊಲೀಸ್‌ ಅಧಿಕಾರಿಗಳ ಪ್ರಿ ವೆಡ್ಡಿಂಗ್‌ ಶೂಟ್‌; ಸಿನಿಮಾ ಸ್ಟೈಲ್‌ ವಿಡಿಯೊ ಇಲ್ಲಿದೆ

Pre Wedding Shoot: ಪೊಲೀಸ್‌ ಅಧಿಕಾರಿಗಳಿಬ್ಬರ ಪ್ರಿವೆಡ್ಡಿಂಗ್‌ ಶೂಟ್‌ ಸದ್ಯ ಭಾರಿ ಸದ್ದು ಮಾಡುತ್ತಿದೆ. ಸಮವಸ್ತ್ರ ತೊಟ್ಟು ಹೈದರಾಬಾದ್‌ ಮೂಲದ ಈ ಜೋಡಿ ಸಿನಿಮಾ ಹಾಡಿನ ಶೈಲಿಯಲ್ಲಿ ಚಿತ್ರೀಕರಣ ನಡೆಸಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಕಾಲ ಬದಲಾದಂತೆ ನಮ್ಮ ಜೀವನ ಶೈಲಿಯೂ ಬದಲಾಗಿದೆ. ಇದೀಗ ಪ್ರಿ ವೆಡ್ಡಿಂಗ್‌ ಶೂಟ್‌(pre wedding shoot) ಎನ್ನುವುದು ಜೀವನದ ಭಾಗವೇ ಆಗಿದೆ. ಪ್ರತಿ ಮದುವೆಯ ಮುನ್ನ ಇದು ಅತ್ಯಗತ್ಯ ಎನ್ನುವಷ್ಟರ ಮಟ್ಟಿಗೆ ಇದು ಆವರಿಸಿಕೊಂಡಿದೆ. ಇದೀಗ ಹೈದರಾಬಾದ್‌ ಮೂಲದ ಪೊಲೀಸ್‌ (police) ಜೋಡಿಯೊಂದು ತಮ್ಮ ಪ್ರಿ ವೆಡ್ಡಿಂಗ್‌ ಶೂಟ್‌ ಅನ್ನು ವಿಭಿನ್ನವಾಗಿ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ (social media) ಜನಪ್ರಿಯವಾಗಿದೆ.

ಸದ್ಯ ಈ ಪೊಲೀಸ್‌ ಜೋಡಿಯ ಈ ಪ್ರಿ ವೆಡ್ಡಿಂಗ್‌ ಶೂಟ್‌ ವೈರಲ್‌ ಆಗಿದ್ದು, ನೆಟ್ಟಿಗರು ಈ ಕುರಿತು ಚರ್ಚೆ ನಡೆಸುತ್ತಿದ್ದಾರೆ. 2 ನಿಮಿಷದ ಈ ವಿಡಿಯೊವನ್ನು ಸಿನಿಮಾದ ಹಾಡಿನ ರೀತಿಯಲ್ಲೇ ಚಿತ್ರೀಕರಿಸಿದ್ದು ವಿಶೇಷ. ಅದರಲ್ಲೂ ವಿಡಿಯೊದ ಆರಂಭದಲ್ಲಿ ಇಬ್ಬರೂ ಪೊಲೀಸ್‌ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ.

ವಿಡಿಯೊದಲ್ಲೇನಿದೆ?

ಮೊದಲು ಲೇಡಿ ಪೊಲೀಸ್‌ ಯುನಿಫಾರ್ಮ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಿಂದ ಹೊರ ಬರುತ್ತಾರೆ. ವ್ಯಕ್ತಿಯೊಬ್ಬನ ಜೊತೆ ಅವರು ಸಂಭಾಷಣೆಯಲ್ಲಿ ನಿರತರಾಗಿರುವಾಗ ಆಗಮಿಸುವ ಇನ್ನೊಬ್ಬ ಪೊಲೀಸ್‌ ಅಧಿಕಾರಿ (ಆಕೆ ಮದುವೆಯಾಗಲಿರುವ ವ್ಯಕ್ತಿ) ಆಕೆಯನ್ನು ನೋಡಿ ಕನಸಿಗೆ ಜಾರುತ್ತಾರೆ. ಬಳಿಕ ಸಿನಿಮಾಗಳಲ್ಲಿ ಕಾಣುವಂತೆ ಅವರು ಚಾರ್ ಮಿನಾರ್‌, ಲಾಡ್‌ ಬಜಾರ್‌ ಮತ್ತಿತರೆಡೆಗಳಲ್ಲಿ ಹೆಜ್ಜೆ ಹಾಕುತ್ತಾರೆ. ಹಿನ್ನೆಲೆಯಲ್ಲಿ ಸಂಗೀತ ಕೇಳಿ ಬರುತ್ತದೆ.

ನೆಟ್ಟಿಗರು ಏನಂತಾರೆ?

ಸದ್ಯ ಈ ವಿಡಿಯೊಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಈ ಜೋಡಿಯ ನಡೆಯನ್ನು ಟೀಕಿಸಿದರೆ ಇನು ಕೆಲವರು ಬೆಂಬಲ ಸೂಚಿಸಿದ್ದಾರೆ. ವೈಯಕ್ತಿಕ ಕಾರಣಕ್ಕೆ ಅವರು ಸಾರ್ವಜನಿಕ ಹಣ, ಸಾರ್ವಜನಿಕ ಸೊತ್ತು, ಪೊಲೀಸ್‌ ಸಮವಸ್ತ್ರ ಬಳಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬರು ಕಮೆಂಟ್‌ ಮಾಡಿ, ʼʼಈ ಜೋಡಿ ತಮ್ಮ ವೈಯಕ್ತಿಕ ಕಾರಣಕ್ಕೆ ಸಾರ್ವಜನಿಕ ವಸ್ತುಗಳನ್ನು ಉಪಯೋಗಿಸಿದ್ದು ಸರಿಯಲ್ಲʼʼ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನೊಬ್ಬರು, ʼʼಇದು ಉತ್ತಮ ನಡೆಯಲ್ಲ. ಸರ್ಕಾರಿ ನೌಕರರ ಇಂತಹ ನಡೆಯನ್ನು ಖಂಡಿಸಬೇಕುʼʼ ಎಂದು ಬರೆದಿದ್ದಾರೆ.

ಈ ಜೋಡಿಗೆ ಬೆಂಬಲ ವ್ಯಕ್ತಪಡಿಸಿದವರೂ ಇದ್ದಾರೆ. ʼʼನನಗೆ ಇದರಲ್ಲಿ ತಪ್ಪೇನು ಕಾಣಿಸುತ್ತಿಲ್ಲ. ಅವರ ಸೃಜನಶೀಲತೆಯನ್ನು ನಾವು ಗುರುತಿಸಬೇಕು. ತಮ್ಮ ದೈನಂದಿನ ಕೆಲಸದ ಪ್ರಕ್ರಿಯನ್ನು ತಿಳಿಸಿದ್ದಾರೆ. ಇದನ್ನೇ ಚಲನಚಿತ್ರಗಳಲ್ಲಿ ತೋರಿಸುತ್ತಾರೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹುತಾತ್ಮ ತಂದೆಗೆ ಸೇನೆ ಬಟ್ಟೆ ಧರಿಸಿ ಸೆಲ್ಯೂಟ್‌ ಹೊಡೆದ 6 ವರ್ಷದ ಮಗ; ಕರುಳು ಕಿವುಚುವ ವಿಡಿಯೊ ವೈರಲ್‌

ಹಿರಿಯ ಅಧಿಕಾರಿ ಹೇಳಿದ್ದೇನು?

ಈ ವಿಡಿಯೊ ವೀಕ್ಷಿಸಿದ ಹಿರಿಯ ಐಪಿಎಸ್‌ ಅಧಿಕಾರಿ ಸಿ.ವಿ.ಆನಂದ್‌ ಈ ಬಗ್ಗೆ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ʼʼಈ ವಿಡಿಯೊಗೆ ಲಭಿಸಿರುವ ಮಿಶ್ರ ಪ್ರತಿಕ್ರಿಯೆಯನ್ನು ಗಮನಿಸಿದ್ದೇನೆ. ನಿಜವಾಗಿಯೂ ಅವರು ತುಂಬಾ ಎಕ್ಸೈಟ್‌ ಆಗಿದ್ದರು. ಪೊಲೀಸ್‌ ಎನ್ನುವುದು ಬಹಳ ಕಠಿಣವಾದ ಕೆಲಸ. ಅದರಲ್ಲೂ ಮಹಿಳೆಯರಿಗೆ ಇದು ಬಹು ದೊಡ್ಡ ಸವಾಲು. ಇಬ್ಬರು ಪೊಲೀಸ್‌ ಅಧಿಕಾರಿಗಳು ತಮ್ಮ ಸಮವಸ್ತ್ರ ಉಪಯೋಗಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ. ಅವರು ಮೊದಲೇ ತಿಳಿಸಿದ್ದರೆ ನಾವೇ ಖುದ್ದಾಗಿ ಎಲ್ಲ ವ್ಯವಸ್ಥೆ ಮಾಡುತ್ತಿದ್ದೆವುʼʼ ಎಂದು ಬರೆದುಕೊಂಡಿದ್ದಾರೆ. ಇನ್ನು ಮುಂದೆ ಯಾರೂ ಅನುಮತಿ ಪಡೆಯದೇ ಹೀಗೆ ಮಾಡಬೇಡಿ ಎಂದೂ ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rajendra Nagar Tragedy: ನೆಲಮಾಳಿಗೆ ಗೇಟ್‌ಗೆ SUV ಕಾರು ಡಿಕ್ಕಿ ಹೊಡೆದಿದ್ದ ಚಾಲಕ ಅರೆಸ್ಟ್‌- ವಿಡಿಯೋ ವೈರಲ್‌

Rajendra Nagar Tragedy:ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಐವರನ್ನು ಅರೆಸ್ಟ್‌ ಮಾಡಲಾಗಿದೆ. ಕೋಚಿಂಗ್‌ ಸೆಂಟರ್‌ ಮಾಲಿಕ ಅಭಿಷೇಕ್‌ ಗುಪ್ತಾ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕಟ್ಟಡದ ಗೇಟ್‌ ಮುರಿದು ಬಿದ್ದಿತ್ತು ಎನ್ನಲಾಗಿದೆ.

VISTARANEWS.COM


on

Rajendra Nagara tragedy
Koo

ನವದೆಹಲಿ: ಮೂವರು ಐಎಎಸ್‌ ಆಕಾಂಕ್ಷಿ ವಿದ್ಯಾರ್ಥಿ(UPSC aspirants)ಗಳನ್ನು ಬಲಿ ಪಡೆದ ದೆಹಲಿಯ(Delhi Flood) ರಾಜೇಂದ್ರ ನಗರ ದುರಂತ(Rajendra Nagar Tragedy)ಪ್ರಕರಣದ ಪ್ರಮುಖ ಆರೋಪಿಯನ್ನು ಅರೆಸ್ಟ್‌ ಮಾಡಲಾಗಿದೆ. SUV ಕಾರಿನ ಚಾಲಕನನ್ನು ಆರೆಸ್ಟ್‌ ಮಾಡಲಾಗಿದ್ದು, ಈತ ಪ್ರವಾಹದ ನಡುವೆಯೇ ವೇಗವಾಗಿ ಕಾರು ಚಲಾಯಿಸಿ ಅದರ ಪರಿಣಾಮವಾಗಿ IAS ಕೋಚಿಂಗ್‌ ಸೆಂಟರ್‌ನ ಗೇಟು ಮುರಿದಿದ್ದಾನೆ. ಇದರ ಪರಿಣಾಮವಾಗಿ ನೆಲಮಾಳಿಗೆಗೆ ನೀರು ನುಗ್ಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಐವರನ್ನು ಅರೆಸ್ಟ್‌ ಮಾಡಲಾಗಿದೆ. ಕೋಚಿಂಗ್‌ ಸೆಂಟರ್‌ ಮಾಲಿಕ ಅಭಿಷೇಕ್‌ ಗುಪ್ತಾ ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಕಟ್ಟಡದ ಗೇಟ್‌ ಮುರಿದು ಬಿದ್ದಿತ್ತು ಎನ್ನಲಾಗಿದೆ. ಇನ್ನು ಈ ಸಂಬಂಧ ಸಿಸಿಟಿವಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಕಾರು ಚಾಲಕನ ನಿರ್ಲಕ್ಷ್ಯಕ್ಕಾಗಿ ಆತನನ್ನು ಆರೆಸ್ಟ್‌ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೆಹಲಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದರು. ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ (Rau’s IAS Coaching Institute)ನಲ್ಲಿ ಈ ದುರಂತ ಸಂಭವಿಸಿದೆ. ಶನಿವಾರ ಸಂಜೆ ಏಕಾಏಕಿ ನೀರು ನುಗ್ಗಿದ ಕಾರಣ ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮೃತರನ್ನು ಐಎಎಎಸ್‌ ಆಕಾಂಕ್ಷಿಗಳಾದ ತೆಲಂಗಾಣ, ಉತ್ತರ ಪ್ರದೇಶ ಮತ್ತು ಕೇರಳ ಮೂಲದ ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಎಂದು ಗುರುತಿಸಲಾಗಿದೆ.

ದುರಂತಕ್ಕೆ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವೇ ಕಾರಣ ಎಂಬ ಕೂಗು ಎಲ್ಲೆಡೆ ಕೇಳಿ ಬಂದಿದೆ. ಈ ಮಧ್ಯೆ ದುರಂತದಿಂದ ಪಾರಾದ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಹೃದೇಶ್ ಚೌಹಾಣ್ ಘಟನೆ ಯಾವಾಗ ನಡೆಯಿತು ಎಂಬುದರ ಆಘಾತಕಾರಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ನೆಲಮಹಡಿಗೆ ನೆರೆ ನುಗ್ಗಿದ ನಂತರ ಅಲ್ಲಿನ ಪರಿಸ್ಥಿತಿ ಹೇಗಿತ್ತು ಎನ್ನುವುದನ್ನು ಈ ವೈರಲ್ ವಿಡಿಯೊ ತೋರಿಸುತ್ತದೆ. ಹಲವು ವಿದ್ಯಾರ್ಥಿಗಳು ದುರಂತದಿಂದ ಪಾರಾಗುವುದನ್ನು ಕಾಣಬಹುದು. ಜತೆಗೆ ನೆರೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರಿಗೆ ವಿದ್ಯಾರ್ಥಿಗಳ ಗುಂಪು ಸಹಾಯಹಸ್ತ ಚಾಚಿ ನೆರವಾಗುತ್ತಿರುವುದೂ ಕಂಡು ಬಂದಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಡಿಯೊ ಹಂಚಿಕೊಂಡಿರುವ ಹೃದೇಶ್‌ ಚೌಹಾಣ್‌, ನೆಲಮಹಡಿಯು ಹತ್ತು ನಿಮಿಷಗಳಲ್ಲಿ ಪ್ರವಾಹದಿಂದ ತುಂಬಿಕೊಂಡಿತ್ತು ಎಂದು ಬರೆದುಕೊಂಡಿದ್ದಾರೆ. ಸಂಜೆ 6.40ಕ್ಕೆ ಈ ಘಟನೆ ನಡೆದಿದ್ದು, ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (National Disaster Management Authority)ಕ್ಕೆ ತಕ್ಷಣ ಮಾಹಿತಿ ನೀಡಲಾಯಿತು. ಆದರೆ ಅವರು ರಾತ್ರಿ 9ರ ನಂತರವೇ ತಲುಪಿದರು. ಇದು ಮೂವರು ಐಎಎಎಸ್‌ ಆಕಾಂಕ್ಷಿಗಳ ಸಾವಿಗೆ ಕಾರಣವಾಯಿತು ಎಂದಿದ್ದಾರೆ.

ಘಟನಾ ಸ್ಥಳದಲ್ಲಿ ಇಂದು ಬುಲ್ಡೋಜರ್‌ಗಳು ಗರ್ಜಿಸಿವೆ. ಬೆಳ್ಳಂ ಬೆಳಗ್ಗೆ ಸ್ಥಳದಲ್ಲಿ ಬೀಡು ಬಿಟ್ಟಿರುವ ಬುಲ್ಡೋಜರ್‌ಗಳು ಚರಂಡಿ ಒತ್ತೂವರಿ ತೆರವು ಕಾರ್ಯಾಚರಣೆ ನಡೆಸಿವೆ. ಚರಂಡಿಗಳಿಗೆ ತಡೆಯಾಗಿದ್ದ ಸಿಮೆಂಟ್‌ ಇಟ್ಟಿಗೆಗಳನ್ನು ತೆರವುಗೊಳಿಸಿ ನೀರು ಹರಿಯಲು ಸುಗಮವಾಗುವಂತೆ ಮಾಡಿದೆ. ಇನ್ನು ಘಟನೆ ಬೆನ್ನಲ್ಲೇ ಕಾರ್ಯಪ್ರವೃತವಾಗಿರುವ ದಿಲ್ಲಿ ನಗರ ಪಾಲಿಕೆ(MCD) ಬುಲ್ಡೋಜರ್‌ಗಳ ಸಹಾಯದಿಂದ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದು, ಚರಂಡಿಗಳನ್ನು ಸ್ವಚ್ಛಗೊಳಿಸಿ ಸಲೀಸಾಗಿ ನೀರು ಹರಿದು ಹೋಗುವಂತೆ ಮಾಡಿದೆ. ಬುಲ್ಡೋಜರ್‌ಗಳು ಕಾರ್ಯಾಚರಣೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇನ್ನು ಇದಕ್ಕೂ ಮುನ್ನ ಅಕ್ರಮವಾಗಿ ನಿರ್ಮಿಸಿರುವ 13 ಕೋಚಿಂಗ್‌ ಸೆಂಟರ್‌ಗಳಿಗೆ MCD ಬೀಗ ಜಡಿದಿದೆ.

ಇದನ್ನೂ ಓದಿ: Areca Nut Illegal Import: ಭಾರತದೊಳಗೆ 3 ತಿಂಗಳಲ್ಲಿ 3009 ಟನ್‌ ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು!

Continue Reading

ಚಿನ್ನದ ದರ

Aditya Birla Group: ಟಾಟಾ, ಅಂಬಾನಿಯೊಂದಿಗೆ ಸ್ಪರ್ಧೆ: ಆಭರಣ ವ್ಯಾಪಾರಕ್ಕೆ ಬಿರ್ಲಾ ಎಂಟ್ರಿ!

ಆದಿತ್ಯ ಬಿರ್ಲಾ ಗ್ರೂಪ್ (Aditya Birla Group) ಶುಕ್ರವಾರ ಆಭರಣ ಬ್ರ್ಯಾಂಡ್ ‘ಇಂದ್ರಿಯ’ವನ್ನು ಬಿಡುಗಡೆ ಮಾಡಿದ್ದು, 6.7 ಲಕ್ಷ ಕೋಟಿ ರೂಪಾಯಿಗಳ ಭಾರತೀಯ ಆಭರಣ ಮಾರುಕಟ್ಟೆಗೆ ತನ್ನ ಪ್ರವೇಶವನ್ನು ಪ್ರಕಟಿಸಿದೆ. ಆದಿತ್ಯ ಬಿರ್ಲಾ ಗ್ರೂಪ್ ಮುಂದಿನ ಐದು ವರ್ಷಗಳಲ್ಲಿ ಆಭರಣ ವಿಭಾಗದಲ್ಲಿ ಅಗ್ರ ಮೂರು ಚಿಲ್ಲರೆ ವ್ಯಾಪಾರಿಗಳಲ್ಲಿ ಒಂದಾಗುವ ಗುರಿಯನ್ನು ಹೊಂದಿದೆ

VISTARANEWS.COM


on

By

Aditya Birla Group
Koo

ಟಾಟಾ (TATA Group), ಅಂಬಾನಿಯಂತಹ (ambani) ದೊಡ್ಡ ಉದ್ಯಮಗಳು ಆಭರಣ ವ್ಯಾಪಾರ (Jewellery Business) ಮಾರುಕಟ್ಟೆಯನ್ನು ಪ್ರವೇಶಿಸಿದ್ದು, ಈಗ ದೇಶದ ಮತ್ತೊಂದು ಪ್ರಮುಖ ವ್ಯಾಪಾರ ಸಂಸ್ಥೆಯಾದ ಆದಿತ್ಯ ಬಿರ್ಲಾ ಗ್ರೂಪ್ (Aditya Birla Group) ಬ್ರ್ಯಾಂಡೆಡ್ ಚಿಲ್ಲರೆ ಆಭರಣ ವ್ಯಾಪಾರಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಟಾಟಾ, ಅಂಬಾನಿಯೊಂದಿಗೆ ಆದಿತ್ಯ ಬಿರ್ಲಾ ಕೂಡ ಆಭರಣ ಮಾರುಕಟ್ಟೆಯಲ್ಲಿ ಸ್ಪರ್ಧೆ ನಡೆಸಲಿದ್ದಾರೆ.

ಭಾರತೀಯ ಆಭರಣ ಮಾರುಕಟ್ಟೆಯು 2030ರ ವೇಳೆಗೆ 11,00,000-13,00,000 ಕೋಟಿ ರೂ.ಗಳಷ್ಟು ಬೆಳೆಯುವ ನಿರೀಕ್ಷೆ ಇದೆ. ಪ್ರಸ್ತುತ ಭಾರತದಲ್ಲಿ 6,70,000 ಕೋಟಿ ರೂ. ಗಳಷ್ಟು ಆಭರಣಗಳ ಚಿಲ್ಲರೆ ವ್ಯಾಪಾರವು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಕಠಿಣ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಟಾಟಾ, ಅಂಬಾನಿ ಮತ್ತು ಬಿರ್ಲಾ ಗುಂಪು ಮುಂದಿನ ಐದು ವರ್ಷಗಳಲ್ಲಿ ಭಾರತದ ಪ್ರಮುಖ ಮೂರು ಆಭರಣ ಚಿಲ್ಲರೆ ವ್ಯಾಪಾರಿಗಳಲ್ಲಿ ಸ್ಥಾನವನ್ನು ಪಡೆದುಕೊಳ್ಳುವ ಗುರಿಯನ್ನು ಹೊಂದಿದೆ.

Aditya Birla Group
Aditya Birla Group


‘ಇಂದ್ರಿಯ’ ಬ್ರ್ಯಾಂಡ್ ಬಿಡುಗಡೆ

ಆದಿತ್ಯ ಬಿರ್ಲಾ ಗ್ರೂಪ್ ಶುಕ್ರವಾರ ಆಭರಣ ಬ್ರ್ಯಾಂಡ್ ‘ಇಂದ್ರಿಯ’ವನ್ನು ಬಿಡುಗಡೆ ಮಾಡಿದ್ದು, 6.7 ಲಕ್ಷ ಕೋಟಿ ರೂಪಾಯಿಗಳ ಭಾರತೀಯ ಆಭರಣ ಮಾರುಕಟ್ಟೆಗೆ ತನ್ನ ಪ್ರವೇಶವನ್ನು ಪ್ರಕಟಿಸಿದೆ.

ಆದಿತ್ಯ ಬಿರ್ಲಾ ಗ್ರೂಪ್ ಮುಂದಿನ ಐದು ವರ್ಷಗಳಲ್ಲಿ ಆಭರಣ ವಿಭಾಗದಲ್ಲಿ ಅಗ್ರ ಮೂರು ಚಿಲ್ಲರೆ ವ್ಯಾಪಾರಿಗಳಲ್ಲಿ ಒಂದಾಗುವ ಗುರಿಯನ್ನು ಹೊಂದಿದೆ ಮತ್ತು ಆಭರಣ ವ್ಯವಹಾರಕ್ಕಾಗಿ ಚಿಲ್ಲರೆ ಜಾಲವನ್ನು ಸ್ಥಾಪಿಸಲು 5,000 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ತಿಳಿಸಿದೆ.

ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಗುರುತಿಸಿರುವ ಆದಿತ್ಯಾ ಬಿರ್ಲಾ ಗ್ರೂಪ್ ತನ್ನ ಗ್ರಾಹಕ ಬಂಡವಾಳವನ್ನು ಬಲಪಡಿಸಲಿದೆ. ಅದರ ಬಲವಾದ ಬ್ರ್ಯಾಂಡ್ ಇಕ್ವಿಟಿ ಮತ್ತು ಆಳವಾದ ಮಾರುಕಟ್ಟೆ ಒಳನೋಟಗಳನ್ನು ನಿಯಂತ್ರಿಸುವುದಾಗಿ ತಿಳಿಸಿದೆ.

Aditya Birla Group
Aditya Birla Group


ಟಾಟಾ, ಅಂಬಾನಿಯೊಂದಿಗೆ ಸ್ಪರ್ಧೆ

ಬ್ರ್ಯಾಂಡೆಡ್ ವಿಭಾಗದಲ್ಲಿ ಆದಿತ್ಯ ಬಿರ್ಲಾ ಗ್ರೂಪ್ ಬ್ರ್ಯಾಂಡೆಡ್ ಆಭರಣ ಮಾರುಕಟ್ಟೆಯಲ್ಲಿ ಮಾರುಕಟ್ಟೆ ನಾಯಕ ಟಾಟಾ ಗ್ರೂಪ್‌ನ ತನಿಷ್ಕ್ ಮತ್ತು ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಒಡೆತನದ ರಿಲಯನ್ಸ್ ಜ್ಯುವೆಲ್ಸ್‌ನೊಂದಿಗೆ ಸ್ಪರ್ಧಿಸಲಿದೆ.

ಅಭಿವೃದ್ಧಿಯ ಕುರಿತು ಪ್ರತಿಕ್ರಿಯಿಸಿರುವ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ್ ಮಂಗಳಂ ಬಿರ್ಲಾ ಅವರು ಭಾರತವು ಬಹುಶಃ ಜಾಗತಿಕವಾಗಿ ಅತ್ಯಂತ ಭರವಸೆಯ ಗ್ರಾಹಕ ಸಮೂಹವನ್ನು ಹೊಂದಿದೆ. ಈ ವರ್ಷ ನಾವು ಎರಡು ಪ್ರಮುಖ ಹೊಸ ಗ್ರಾಹಕ ಬ್ರ್ಯಾಂಡ್ ಗಳನ್ನು ಬಣ್ಣ ಮತ್ತು ಆಭರಣಗಳಲ್ಲಿ ಪ್ರಾರಂಭಿಸುವ ಮೂಲಕ ಭಾರತೀಯ ಗ್ರಾಹಕರ ಮೇಲೆ ನಮ್ಮ ಪ್ರಭಾವವನ್ನು ಬೀರಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Money Guide: ಷೇರು V/S ಚಿನ್ನ: ಹೂಡಿಕೆಗೆ ಯಾವುದು ಬೆಸ್ಟ್‌? ಇಲ್ಲಿದೆ ತಜ್ಞರ ಸಲಹೆ

ಬಿರ್ಲಾ ಗ್ರೂಪ್ ಅನೌಪಚಾರಿಕದಿಂದ ಔಪಚಾರಿಕ ವಲಯಗಳಿಗೆ ನಡೆಯುತ್ತಿರುವ ಮೌಲ್ಯದ ವಲಸೆ, ಬಲವಾದ, ವಿಶ್ವಾಸಾರ್ಹ ಬ್ರ್ಯಾಂಡ್‌ಗಳಿಗೆ ಹೆಚ್ಚುತ್ತಿರುವ ಗ್ರಾಹಕರ ಆದ್ಯತೆ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ವಿವಾಹ ಮಾರುಕಟ್ಟೆಯಂತಹ ಅಂಶಗಳನ್ನು ಪರಿಗಣಿಸುತ್ತಿದೆ. 20 ವರ್ಷಗಳಿಂದ ಫ್ಯಾಷನ್ ಬದಲಾಗಿರುವುದು ಮಾತ್ರವಲ್ಲ ಸಾಕಷ್ಟು ವಿಸ್ತರಣೆಯಾಗಿದೆ. ಇಂದ್ರಿಯ ದೆಹಲಿ, ಇಂದೋರ್ ಮತ್ತು ಜೈಪುರ ಈ ಮೂರು ನಗರಗಳಲ್ಲಿ ಏಕಕಾಲದಲ್ಲಿ ನಾಲ್ಕು ಮಳಿಗೆಗಳನ್ನು ತೆರೆಯಲಿದೆ ಎಂದರು.

ಆದಿತ್ಯ ಬಿರ್ಲಾ ಗ್ರೂಪ್ ಆರು ತಿಂಗಳೊಳಗೆ 10 ನಗರಗಳಿಗೆ ವಿಸ್ತರಿಸುವ ಯೋಜನೆಯನ್ನು ಹೊಂದಿದೆ. ಬ್ರ್ಯಾಂಡ್ 5,000 ವಿಶೇಷ ವಿನ್ಯಾಸಗಳೊಂದಿಗೆ 15,000 ಕ್ಯುರೇಟೆಡ್ ಆಭರಣಗಳ ಸಂಗ್ರಹವನ್ನು ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ತಂತ್ರಜ್ಞಾನ

New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

New Toll System: ವಿಶ್ವದಲ್ಲೇ ಮೊದಲ ಬಾರಿಗೆ ಉಪಗ್ರಹ ಆಧರಿತ ಟೋಲ್ ಸಂಗ್ರಹ (Toll Collection) ವ್ಯವಸ್ಥೆಯನ್ನು ಭಾರತದಲ್ಲಿ ಪರಿಚಯಿಸಲಾಗುತ್ತಿದೆ. ಇದಕ್ಕಾಗಿ ಜಿ ಎನ್ ಎಸ್ ಎಸ್ ಮತ್ತು ಜಿಪಿಎಸ್ ತಂತ್ರಜ್ಞಾನ ಬಳಸಿಕೊಳ್ಳಲಾಗುವುದು. ಈ ಹೊಸ ವ್ಯವಸ್ಥೆಯ ಅಡಿಯಲ್ಲಿ ವಾಹನಗಳಿಗೆ ಪ್ರಯಾಣಿಸುವ ದೂರವನ್ನು ಆಧರಿಸಿ ಶುಲ್ಕವನ್ನು ವಿಧಿಸಲಾಗುತ್ತದೆ. ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ವ್ಯವಸ್ಥೆಯು ಹೆಚ್ಚು ವ್ಯಾಪಕವಾದಂತೆ ಟೋಲ್ ಪ್ಲಾಜಾಗಳಲ್ಲಿನ ಎಲ್ಲಾ ಲೇನ್‌ಗಳನ್ನು ಅಂತಿಮವಾಗಿ ಜಿಎನ್‌ಎಸ್‌ಎಸ್ ಲೇನ್‌ಗಳನ್ನಾಗಿ ಪರಿವರ್ತಿಸಲಾಗುತ್ತದೆ. ಇದು ಭಾರತೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಣೆಯ ದಕ್ಷತೆ ಮತ್ತು ಅನುಕೂಲತೆಯನ್ನು ಹೆಚ್ಚಿಸಲಿದೆ. ಈ ಹೊಸ ತಂತ್ರಜ್ಞಾನ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

New Toll System
Koo

ವಿಶ್ವದಲ್ಲೇ ಮೊದಲ ಬಾರಿಗೆ ಉಪಗ್ರಹ ಆಧಾರಿತ ಟೋಲ್ ಸಂಗ್ರಹ (satellite based toll collection) ವ್ಯವಸ್ಥೆಯನ್ನು ಪರಿಚಯಿಸಲು (New Toll System) ಭಾರತ ಮುಂದಾಗಿದೆ. ಇದಕ್ಕಾಗಿ ಜಿಎನ್‌ಎಸ್ಎಸ್ ಮತ್ತು ಜಿಪಿಎಸ್ (GNSS And GPS) ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಟೋಲ್ ಸಂಗ್ರಹ (Toll Collection) ಪ್ರಕ್ರಿಯೆಯಲ್ಲಿ ಪರಿವರ್ತಿಸಲಾಗುವುದು. ಹೊಸ ವ್ಯವಸ್ಥೆಯ ಅಡಿಯಲ್ಲಿ ವಾಹನಗಳಿಗೆ ಪ್ರಯಾಣಿಸುವ ದೂರವನ್ನು ಆಧರಿಸಿ ಶುಲ್ಕವನ್ನು ವಿಧಿಸಲಾಗುತ್ತದೆ. ಈ ವ್ಯವಸ್ಥೆ ಪ್ರಯಾಣಿಕರ ಸಮಯ ಉಳಿಸಲಿದೆ ಎನ್ನುವುದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Union Transport Minister Nitin Gadkari) ಅವರ ಅಭಿಪ್ರಾಯ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಮತ್ತು ಅಡೆತಡೆ-ಮುಕ್ತ ಟೋಲಿಂಗ್ ಅನುಭವವನ್ನು ಒದಗಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (NHAI) ಮತ್ತು ಇಂಡಿಯನ್ ಹೈವೇಸ್ ಮ್ಯಾನೇಜ್‌ಮೆಂಟ್ ಕಂಪನಿ ಲಿಮಿಟೆಡ್ (IHMCL) ಭಾರತದಲ್ಲಿ ಜಿಎನ್‌ಎಸ್‌ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್ (ETC) ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಮತ್ತು ಕಾರ್ಯಗತಗೊಳಿಸಲು ಅರ್ಹತೆ, ಅನುಭವದ ಆಧಾರದ ಮೇಲೆ ಗ್ಲೋಬಲ್ ಎಕ್ಸ್ಪ್ರೆಷನ್ ಆಫ್ ಇಂಟ್ರೆಸ್ಟ್ (EOI) ಕಂಪನಿಯನ್ನು ಆಹ್ವಾನಿಸಿದೆ.

ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದ ಯೋಜನೆಯು ಅಸ್ತಿತ್ವದಲ್ಲಿರುವ ಫಾಸ್ಟ್ ಟ್ಯಾಗ್ ವ್ಯವಸ್ಥೆಯೊಳಗೆ ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ವ್ಯವಸ್ಥೆಯನ್ನು ಸಂಯೋಜಿಸಲಿದೆ. ಆರ್‌ಎಫ್ಐಡಿ ಆಧಾರಿತ ಇಟಿಸಿ ಮತ್ತು ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ಎರಡೂ ಏಕಕಾಲದಲ್ಲಿ ಕಾರ್ಯನಿರ್ವಹಿಸುವ ಹೈಬ್ರಿಡ್ ಮಾದರಿಯನ್ನು ಬಳಸಲಾಗುತ್ತದೆ. ಟೋಲ್ ಪ್ಲಾಜಾಗಳಲ್ಲಿ ಮೀಸಲಾದ ಜಿಎನ್ಎಸ್‌ಎಸ್‌ ಲೇನ್‌ಗಳು ಲಭ್ಯವಿದ್ದು, ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ಹೊಂದಿದ ವಾಹನಗಳು ಮುಕ್ತವಾಗಿ ಹಾದುಹೋಗಲು ಅನುವು ಮಾಡಿಕೊಡುತ್ತದೆ.

ಜಿಎನ್‌ಎಸ್‌ಎಸ್ ಆಧಾರಿತ ಇಟಿಸಿ ವ್ಯವಸ್ಥೆಯು ಹೆಚ್ಚು ವ್ಯಾಪಕವಾದಂತೆ ಟೋಲ್ ಪ್ಲಾಜಾಗಳಲ್ಲಿನ ಎಲ್ಲಾ ಲೇನ್‌ಗಳನ್ನು ಅಂತಿಮವಾಗಿ ಜಿಎನ್‌ಎಸ್‌ಎಸ್ ಲೇನ್‌ಗಳನ್ನಾಗಿ ಪರಿವರ್ತಿಸಲಾಗುತ್ತದೆ. ಇದು ಭಾರತೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಣೆಯ ದಕ್ಷತೆ ಮತ್ತು ಅನುಕೂಲತೆಯನ್ನು ಹೆಚ್ಚಿಸಲಿದೆ.

Toll Collection
Toll Collection


ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ಎಂದರೇನು?

ಈವರೆಗೆ ಟೋಲ್ ಪ್ಲಾಜಾಗಳಲ್ಲಿ ಟೋಲ್ ಪಾವತಿಗಳನ್ನು ಸಾಂಪ್ರದಾಯಿಕವಾಗಿ ಮಾಡಲಾಗುತ್ತಿದೆ. ಇದಕ್ಕಾಗಿ ಮಾನವ ಸಂಪನ್ಮೂಲ ಅಗತ್ಯವಿದೆ. ಫಾಸ್ಟ್‌ಟ್ಯಾಗ್‌ ವ್ಯವಸ್ಥೆ ಇದ್ದಾಗಲೂ ಟ್ರಾಫಿಕ್ ಜಾಮ್‌ ಸಮಸ್ಯೆ ಇದೆ. ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಉಪಗ್ರಹ ಮತ್ತು ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಬಳಸುತ್ತದೆ. ಪ್ರಯಾಣಿಸಿದ ದೂರವನ್ನು ಅಳೆಯಲು ಮತ್ತು ಅದಕ್ಕೆ ಅನುಗುಣವಾಗಿ ಟೋಲ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಇದು ಟೋಲ್ ಪ್ಲಾಜಾಗಳ ಅಗತ್ಯವನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಯಾಣಿಕರ ಸಮಯವನ್ನು ಉಳಿಸುತ್ತದೆ.

ಫಾಸ್ಟ್‌ಟ್ಯಾಗ್‌ಗಿಂತ ಇದು ಹೇಗೆ ಭಿನ್ನ?

ಫಾಸ್ಟ್‌ಟ್ಯಾಗ್‌ಗಿಂತ ಭಿನ್ನವಾಗಿ ಉಪಗ್ರಹ ಆಧಾರಿತ ಜಿಪಿಎಸ್ ಟೋಲ್ ಸಂಗ್ರಹ ವ್ಯವಸ್ಥೆಯು ಗ್ಲೋಬಲ್ ನ್ಯಾವಿಗೇಶನ್ ಸ್ಯಾಟಲೈಟ್ ಸಿಸ್ಟಮ್‌ನಲ್ಲಿ (GNSS) ಕಾರ್ಯ ನಿರ್ವಹಿಸುತ್ತದೆ. ಇದು ನಿಖರವಾಗಿ ಸ್ಥಳದ ಟ್ರ್ಯಾಕಿಂಗ್ ಒದಗಿಸುತ್ತದೆ. ಈ ವ್ಯವಸ್ಥೆಯು ನಿಖರವಾದ ದೂರ ಆಧಾರಿತ ಟೋಲ್ ಲೆಕ್ಕಾಚಾರಗಳಿಗಾಗಿ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (GPS) ಮತ್ತು ಭಾರತದ GPS Aided GEO ಆಗ್ಮೆಂಟೆಡ್ ನ್ಯಾವಿಗೇಷನ್ (GAGAN)ನಂತಹ ತಂತ್ರಜ್ಞಾನಗಳನ್ನು ಬಳಸುತ್ತದೆ.

ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ ಹೇಗೆ ಕೆಲಸ ಮಾಡುತ್ತದೆ?

ಆನ್-ಬೋರ್ಡ್ ಯೂನಿಟ್ (OBU) ಅಥವಾ ಟ್ರ್ಯಾಕಿಂಗ್ ಸಾಧನವನ್ನು ಹೊಂದಿರುವ ವಾಹನಗಳಿಗೆ ಹೆದ್ದಾರಿಗಳಲ್ಲಿ ಪ್ರಯಾಣಿಸುವ ದೂರವನ್ನು ಆಧರಿಸಿ ಶುಲ್ಕ ವಿಧಿಸಲಾಗುತ್ತದೆ. ಡಿಜಿಟಲ್ ಇಮೇಜ್ ಪ್ರೊಸೆಸಿಂಗ್ ದಾಖಲೆಗಳು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ನಿರ್ದೇಶಾಂಕಗಳನ್ನು ಹೊಂದಿದ್ದು, ಟೋಲ್ ದರಗಳನ್ನು ನಿರ್ಧರಿಸಲು ಸಾಫ್ಟ್‌ವೇರ್ ಅನ್ನು ಬಳಸಲಾಗುತ್ತದೆ. ಸಿಸಿಟಿವಿ ಕೆಮೆರಾಗಳನ್ನು ಹೊಂದಿರುವ ಸಾಧನಗಳು ವಾಹನಗಳು ಹಾದು ಹೋಗುವುದನ್ನು ದಾಖಲಿಸುತ್ತದೆ. ತಡೆರಹಿತ ಕಾರ್ಯಾಚರಣೆಯನ್ನು ಇದು ಖಾತ್ರಿಪಡಿಸುತ್ತದೆ.

ಕಾರುಗಳು ಆನ್‌ಬೋರ್ಡ್ ಯುನಿಟ್ ಅನ್ನು ಹೊಂದಿದ್ದು, ಟೋಲ್ ಸಂಗ್ರಹಕ್ಕಾಗಿ ಟ್ರ್ಯಾಕಿಂಗ್ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಆನ್ ಬೋರ್ಡ್ ಯುನಿಟ್ ಹೆದ್ದಾರಿಗಳು ಮತ್ತು ಟೋಲ್ ರಸ್ತೆಗಳಲ್ಲಿ ಕಾರಿನ ನಿರ್ದೇಶಾಂಕಗಳನ್ನು ಟ್ರ್ಯಾಕ್ ಮಾಡುತ್ತದೆ. ದೂರವನ್ನು ಲೆಕ್ಕಾಚಾರ ಮಾಡಲು ಉಪಗ್ರಹಗಳೊಂದಿಗೆ ಮಾಹಿತಿ ಹಂಚಿಕೊಳ್ಳುತ್ತದೆ.

ದೂರದ ಲೆಕ್ಕಾಚಾರದಲ್ಲಿ ನಿಖರತೆಗಾಗಿ ಸಿಸ್ಟಮ್ ಜಿಪಿಎಸ್ ಮತ್ತು ಜಿ ಎನ್ ಎಸ್ ಎಸ್ ಅನ್ನು ಬಳಸುತ್ತದೆ. ಇನ್ನು ಹೆದ್ದಾರಿಗಳಲ್ಲಿನ ಕೆಮೆರಾಗಳು ಕಾರಿನ ಚಲನೆಗಳನ್ನು ತೆಗೆದ ಚಿತ್ರಗಳೊಂದಿಗೆ ಹೋಲಿಸುವ ಮೂಲಕ ಸರಿಯಾದ ದೂರ ಮಾಪನವನ್ನು ಖಚಿತಪಡಿಸುತ್ತವೆ. ಆರಂಭದಲ್ಲಿ ಪ್ರಮುಖ ಹೆದ್ದಾರಿಗಳು ಮತ್ತು ಎಕ್ಸ್ ಪ್ರೆಸ್ ವೇಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ.

Toll Collection
Toll Collection


ಆನ್‌ ಬೋರ್ಡ್ ಯುನಿಟ್ ಎಲ್ಲಿ ಸಿಗುತ್ತದೆ?

ಆನ್ ಬೋರ್ಡ್ ಯುನಿಟ್‌ಗಳು ಫಾಸ್ಟ್‌ಟ್ಯಾಗ್‌ಗಳಂತೆಯೇ ಸರ್ಕಾರಿ ವೆಬ್‌ಸೈಟ್‌ಗಳ ಮೂಲಕ ಲಭ್ಯವಿರುತ್ತವೆ. ಇದನ್ನು ಬಾಹ್ಯವಾಗಿ ಅಂಟಿಸಬೇಕು. ಕಾರು ತಯಾರಕರೇ ಮುಂಧೆ ಇನ್‌ ಬಿಲ್ಟ್‌ ಆಗಿ ಆನ್ ಬೋರ್ಡ್ ಯುನಿಟ್‌ಗಳೊಂದಿಗೆ ಕಾರುಗಳನ್ನು ಮಾರಾಟ ಮಾಡಲು ಪ್ರಾರಂಭಿಸಬಹುದು.

ಆನ್ ಬೋರ್ಡ್ ಯುನಿಟ್ ಒಮ್ಮೆ ಹಾಕಿದ ಬಳಿಕ ಪ್ರಯಾಣಿಸಿದ ದೂರದ ಆಧಾರದ ಮೇಲೆ ಲಿಂಕ್ ಮಾಡಲಾದ ಬ್ಯಾಂಕ್ ಖಾತೆಯಿಂದ ಟೋಲ್ ಮೊತ್ತವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಗುತ್ತದೆ.

ಪಾವತಿ ಪ್ರಕ್ರಿಯೆ ಮತ್ತು ಪ್ರಾಯೋಗಿಕ ಅನುಷ್ಠಾನ ಹೇಗೆ?

ಆನ್ ಬೋರ್ಡ್ ಯುನಿಟ್‌ಗೆ ಲಿಂಕ್ ಮಾಡಲಾದ ಡಿಜಿಟಲ್ ವ್ಯಾಲೆಟ್‌ನಿಂದ ಪಾವತಿಗಳನ್ನು ಕಡಿತಗೊಳಿಸಲಾಗುತ್ತದೆ. ಟೋಲ್ ಪಾವತಿಯನ್ನು ಇದು ಸುಗಮಗೊಳಿಸುತ್ತದೆ. ರಾಷ್ಟ್ರೀಯ ಹೆದ್ದಾರಿಗಳ ಆಯ್ದ ವಿಭಾಗಗಳಲ್ಲಿನ ಪ್ರಾಯೋಗಿಕ ಯೋಜನೆಗಳು ಜಿ ಎನ್ ಎಸ್ ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ (ಇಟಿಸಿ) ವ್ಯವಸ್ಥೆಯ ಪರಿಣಾಮವನ್ನು ಆರಂಭದಲ್ಲಿ ಪರೀಕ್ಷಿಸುತ್ತವೆ. ಇದನ್ನು ಆರಂಭದಲ್ಲಿ ಫಾಸ್ಟ್ ಟ್ಯಾಗ್ ಜೊತೆಗೆನೇ ಚಾಲನೆಯಲ್ಲಿ ಇರಲಿದೆ.

ಟೋಲ್ ಆದಾಯದ ಮೇಲೆ ಏನು ಪರಿಣಾಮ?

ಪ್ರಸ್ತುತ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್‌ನಿಂದ ಸುಮಾರು 40,000 ಕೋಟಿ ರೂ. ಗಳಿಸುತ್ತಿದೆ. ಭಾರತವು ಈ ಸುಧಾರಿತ ಟೋಲ್ ಸಂಗ್ರಹ ವ್ಯವಸ್ಥೆಗೆ ಪರಿವರ್ತನೆಯಾಗುತ್ತಿದ್ದಂತೆ ಮುಂದಿನ 2- 3 ವರ್ಷಗಳಲ್ಲಿ ಈ ಮೊತ್ತವು 1,40,000 ಕೋಟಿ ರೂ.ಗೆ ಹೆಚ್ಚಾಗುವ ನಿರೀಕ್ಷೆಯಿದೆ.

ಇದು ಭಾರತದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದೆ?

ಭಾರತದಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಕಾರ್ಯಗತಗೊಳಿಸುವುದು ರಸ್ತೆ ಜಾಲದ ವಿಶಾಲವಾದ ಪ್ರಮಾಣ ಮತ್ತು ವೈವಿಧ್ಯಮಯ ವಾಹನಗಳ ಕಾರಣದಿಂದಾಗಿ ಸವಾಲಿನ ಕೆಲಸವಾಗಿದೆ. ಆದರೆ ಡಿಜಿಟಲ್ ವಹಿವಾಟುಗಳು ಮತ್ತು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಪ್ರಾವೀಣ್ಯತೆಯನ್ನು ಸಾಧಿಸಿದೆ. ಹಾಗಾಗಿ ಈ ಹೊಸ ವ್ಯವಸ್ಥೆಗೆ ವಾಹನ ಸವಾರರು ಬೇಗ ಹೊಂದಿಕೊಳ್ಳಲಿದ್ದಾರೆ ಎಂಬ ಅಭಿಪ್ರಾಯವಿದೆ.

Toll Collection
Toll Collection


ಇದನ್ನೂ ಓದಿ: Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

ಹೊಸ ವ್ಯವಸ್ಥೆಗೆ ಬದಲಿಸಲು ಗಮನಾರ್ಹ ಮೂಲಸೌಕರ್ಯದ ಅಗತ್ಯವಿರುತ್ತದೆ. ಫಾಸ್ಟ್ಯಾಗ್‌ಗಳ ಸುತ್ತ ಕೇಂದ್ರೀಕೃತವಾಗಿರುವ ಪ್ರಸ್ತುತ ಮೂಲಸೌಕರ್ಯವನ್ನು ಆಮೂಲಾಗ್ರವಾಗಿ ಬದಲಿಸಬೇಕಾಗುತ್ತದೆ. ಹಾಗಾಗಿ ಟೋಲ್ ದರ ಹೆಚ್ಚುವ ಸಾಧ್ಯತೆಯೂ ಇದೆ. ಈ ಸವಾಲುಗಳ ಹೊರತಾಗಿಯೂ ಭಾರತದಲ್ಲಿ ಟೋಲ್ ಸಂಗ್ರಹ ರಪ್ರಕ್ರಿಯೆಗಳನ್ನು ಸುವ್ಯವಸ್ಥಿತಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಯೋಜನೆ ಅನುಷ್ಠಾನ ಮಾಡೋರು ಯಾರು?

ಇಂಡಿಯನ್ ಹೈವೇಸ್ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ (IHMCL) ಜಿ ಎನ್ ಎಸ್ ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಕಲೆಕ್ಷನ್ ಸಿಸ್ಟಮ್ ಅನ್ನು ಅಭಿವೃದ್ಧಿಪಡಿಸಲು ಮತ್ತು ಕಾರ್ಯಗತಗೊಳಿಸಲು ಅರ್ಹ ಗ್ಲೋಬಲ್ ಎಕ್ಸ್ಪ್ರೆಷನ್ ಆಫ್ ಇಂಟ್ರೆಸ್ಟ್ (EOI) ಕಂಪನಿಯನ್ನು ಆಹ್ವಾನಿಸಿದೆ. ಶೀಘ್ರದಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತರುವ ಗುರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೊಂದಿದೆ.

Continue Reading

ದೇಶ

Viral News: ಕಾಲಿಗೆ ಕಬ್ಬಿಣದ ಸರಪಳಿ.. ಕೈಯಲ್ಲಿ ಅಮೆರಿಕ ಪಾಸ್‌ಪೋರ್ಟ್‌..ದಟ್ಟ ಕಾಡಿನಲ್ಲಿ ಮಹಿಳೆ ಪತ್ತೆ-ವಿಡಿಯೋ ವೈರಲ್‌

Viral News:ಮುಂಬೈನಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಶನಿವಾರ ಸಂಜೆ ಕುರಿಗಾಹಿಯೊಬ್ಬರು ಆಕೆಯ ಅಳಲು ಕೇಳಿದ್ದು, ಸರಪಳಿಯಲ್ಲಿ ಸಿಲುಕಿರುವ ಮತ್ತು ಸಂಕಷ್ಟದಲ್ಲಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನು ರಕ್ಷಿಸಿ ನಂತರ ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು

VISTARANEWS.COM


on

Viral News
Koo

ಮುಂಬೈ: ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿಹಾಕಿದ ಸ್ಥಿತಿಯಲ್ಲಿ ಮಹಿಳೆಯೊಬ್ಬಳು ಮಹಾರಾಷ್ಟ್ರದ ಸಿಂಧುದುರ್ಗ ದಟ್ಟ ಅರಣ್ಯದಲ್ಲಿ ಪತ್ತೆಯಾಗಿರುವ ಶಾಕಿಂಗ್‌ ಘಟನೆ ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಲಾಗಿದ್ದು, ಆಕೆಯ ಬಳಿ ಅಮೆರಿಕದ ಪಾಸ್‌ಪೋರ್ಟ್‌ನ ಜೆರಾಕ್ಸ್‌ ಮತ್ತು ತಮಿಳುನಾಡು ವಿಳಾಸವಿರುವ ಆಧಾರ್‌ ಕಾರ್ಡ್‌ ಪತ್ತೆಯಾಗಿದೆ(Viral News).

ಮುಂಬೈನಿಂದ ಸುಮಾರು 450 ಕಿಲೋಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಶನಿವಾರ ಸಂಜೆ ಕುರಿಗಾಹಿಯೊಬ್ಬರು ಆಕೆಯ ಅಳಲು ಕೇಳಿದ್ದು, ಸರಪಳಿಯಲ್ಲಿ ಸಿಲುಕಿರುವ ಮತ್ತು ಸಂಕಷ್ಟದಲ್ಲಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನು ರಕ್ಷಿಸಿ ನಂತರ ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯನ್ನು ಲಲಿತಾ ಕಯಿ ಎಂದು ಗುರುತಿಸಲಾಗಿದ್ದು, ಆಕೆಯ ಮಾನಸಿಕ ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಅವರಿಗೆ ಉನ್ನತ ಚಿಕಿತ್ಸೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು.

ಸದ್ಯ ಆಕೆ ಅಪಾಯದಿಂದ ಪಾರಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆಕೆ ಮನೋ ಖಾಯಿಲೆಯಿಂದ ಬಳಲುತ್ತಿದ್ದಾಳೆ. ಅದಕ್ಕೆ ಬೇಕಾದ ಸೂಕ್ತ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ನಾವು ಆಕೆಯ ತಮಿಳುನಾಡು ವಿಳಾಸ ಆಧಾರ್ ಕಾರ್ಡ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ಜೆರಾಕ್ಸ್‌ ಆಕೆಯ ಬಳಿ ಇತ್ತು. ಆಕೆಯ ವೀಸಾ ಅವಧಿ ಮುಗಿದಿದೆ.

ಇನ್ನು ಆಕೆ ಯಾವರ ದೇಶಕ್ಕೆ ಸೇರಿದವಳು ಎಂಬ ಬಗ್ಗೆ ನಾವು ಈ ಎಲ್ಲ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ನಮ್ಮ ಪೊಲೀಸರು ವಿದೇಶಿಯರ ಪ್ರಾದೇಶಿಕ ನೋಂದಣಿ ಕಛೇರಿಯೊಂದಿಗೆ ಸಂಪರ್ಕದಲ್ಲಿದೆ” ಎಂದು ಅವರು ಹೇಳಿದರು.
ಪೊಲೀಸರು ಪಡೆದ ಪ್ರಾಥಮಿಕ ಮಾಹಿತಿಯಂತೆ ಮಹಿಳೆ ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸದ್ಯ ಮಹಿಳೆ ಯಾವುದೇ ರೀತಿಯ ಹೇಳಿಕೆ ನೀಡುವ ಪರಿಸ್ಥಿತಿಯಲ್ಲಿಲ್ಲ. ಆಕೆ ತೀರ ಕ್ಷೀಣಿಸಿದ್ದಾಳೆ. ಆಕೆಯನ್ನು ಎಷ್ಟು ದಿನಗಳಿಂದ ಅಲ್ಲಿ ಕಟ್ಟಿ ಹಾಕಲಾಗಿತ್ತು? ಯಾರು ಕಟ್ಟಿ ಹಾಕಿದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರೆದಿದೆ. ಮೇಲ್ನೋಟಕ್ಕೆ ಆಕೆಯ ಪತಿಯೇ ಆಕೆಯನ್ನು ಕಟ್ಟಿ ಹಾಕಿ ಪರಾರಿಯಾಗಿರುವ ಸಾಧ್ಯತೆ ಇದೆ ಆಧಾರ್‌ ಕಾರ್ಡ್‌ನಲ್ಲಿರುವ ಆಕೆಯ ವಿಳಾಸ ಆಧರಿಸಿ ಸಂಬಂಧಿಕರನ್ನು ವಿಚಾರಣೆಗೊಳಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: Areca Nut Illegal Import: ಭಾರತದೊಳಗೆ 3 ತಿಂಗಳಲ್ಲಿ 3009 ಟನ್‌ ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು!

Continue Reading
Advertisement
Paris Olympics 2024
ಕ್ರೀಡೆ26 mins ago

Paris Olympics 2024 : ಭಾರತಕ್ಕೆ ಶೂಟಿಂಗ್​ನಲ್ಲಿ ಕಂಚಿನ ಪದಕ ಜಸ್ಟ್​ ಮಿಸ್​!

Rajendra Nagara tragedy
ದೇಶ53 mins ago

Rajendra Nagar Tragedy: ನೆಲಮಾಳಿಗೆ ಗೇಟ್‌ಗೆ SUV ಕಾರು ಡಿಕ್ಕಿ ಹೊಡೆದಿದ್ದ ಚಾಲಕ ಅರೆಸ್ಟ್‌- ವಿಡಿಯೋ ವೈರಲ್‌

Mosquito Repellents
ಆರೋಗ್ಯ55 mins ago

Natural Mosquito Repellents: ಸೊಳ್ಳೆಗಳು ನಿಮ್ಮ ಹತ್ತಿರ ಸುಳಿಯದಂತೆ ಮಾಡಲು ಇಲ್ಲಿವೆ ನೈಸರ್ಗಿಕ ಉಪಾಯಗಳು!

DK Shivakumar
ಕರ್ನಾಟಕ1 hour ago

DK Shivakumar: ಕನ್ನಂಬಾಡಿ ಕಟ್ಟೆ, ನಮ್ಮೆಲ್ಲರ ಅನ್ನದ ತಟ್ಟೆ; ಮಳೆ ಬರಲ್ಲ ಎಂದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದ ಡಿಕೆಶಿ

ICW 2024
ಫ್ಯಾಷನ್2 hours ago

ICW 2024: ರ‍್ಯಾಂಪ್‌ ಮೇಲೆ ಮಾಡೆಲ್‌ಗಳು ಧರಿಸಿರುವುದು ಗೌನಾ ಅಥವಾ ಪಂಜರ?!

Aditya Birla Group
ಚಿನ್ನದ ದರ2 hours ago

Aditya Birla Group: ಟಾಟಾ, ಅಂಬಾನಿಯೊಂದಿಗೆ ಸ್ಪರ್ಧೆ: ಆಭರಣ ವ್ಯಾಪಾರಕ್ಕೆ ಬಿರ್ಲಾ ಎಂಟ್ರಿ!

ಪ್ರಮುಖ ಸುದ್ದಿ2 hours ago

Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

karnataka Rain
ಮಳೆ2 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

New Toll System
ತಂತ್ರಜ್ಞಾನ2 hours ago

New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

Manu Bhaker
ಪ್ರಮುಖ ಸುದ್ದಿ2 hours ago

Paris Olympics 2024 : ಮನು ಭಾಕರ್ ಸೇರಿದಂತೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರ ಎಕ್ಸ್​ ಖಾತೆಯಲ್ಲಿ ಐಫೆಲ್​ ಟವರ್ ಚಿತ್ರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌