ಯೋಧನ ಸೋಗಿನಲ್ಲಿ ಬಿಎಂಡಬ್ಲ್ಯೂ ಬುಕ್‌ ಮಾಡಿ, ಸೇನೆ ಕಚೇರಿಗೆ ನುಗ್ಗಿದ ಯುವಕ; ಮುಂದೇನಾಯ್ತು? - Vistara News

ದೇಶ

ಯೋಧನ ಸೋಗಿನಲ್ಲಿ ಬಿಎಂಡಬ್ಲ್ಯೂ ಬುಕ್‌ ಮಾಡಿ, ಸೇನೆ ಕಚೇರಿಗೆ ನುಗ್ಗಿದ ಯುವಕ; ಮುಂದೇನಾಯ್ತು?

ಪಶ್ಚಿಮ ಬಂಗಾಳದಲ್ಲಿ ಸೇನೆಯ ಕಚೇರಿಯನ್ನು ಪ್ರವೇಶಿಸಲು ಮುಂದಾಗಿದ್ದ ಯುವಕನನ್ನು ಬಂಧಿಸಲಾಗಿದೆ. ಈತ ಯೋಧನ ಸೋಗಿನಲ್ಲಿ ಕಚೇರಿ ಪ್ರವೇಶಿಸಲು ಯತ್ನಿಸಿದ್ದ ಎಂದು ತಿಳಿದುಬಂದಿದೆ.

VISTARANEWS.COM


on

MS Chouhan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ: ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿರುವ ಭಾರತೀಯ ಸೇನೆಯ (Indian Army) ಈಸ್ಟರ್ನ್‌ ಕಮಾಂಡ್‌ (Eastern Command) ಕೇಂದ್ರ ಕಚೇರಿಯಾದ ಫೋರ್ಟ್‌ ವಿಲಿಯಂಅನ್ನು (Fort William) ಪ್ರವೇಶಿಸಲು ಯತ್ನಿಸಿದ ಯುವಕನನ್ನು ಬಂಧಿಸಲಾಗಿದೆ. ಸೇನೆಯ ಅಧಿಕಾರಿ ಎಂದು ಹೇಳಿಕೊಂಡ ಬಂದ ಯುವಕನು ರಿಜಿಸ್ಟರ್‌ನಲ್ಲಿ ಸರಿಯಾದ ಮಾಹಿತಿ ಭರ್ತಿ ಮಾಡಲು ಆಗದ ಕಾರಣ ಶಂಕೆ ವ್ಯಕ್ತವಾಗಿದ್ದು, ಕೂಡಲೇ ಆತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಎಂಡಬ್ಲ್ಯೂ ಕಾರ್‌ನಲ್ಲಿ ಫೋರ್ಟ್‌ ವಿಲಿಯಂಗೆ ಬಂದ ಯುವಕನು ತಾನೊಬ್ಬ ಸೇನಾ ಮೇಜರ್‌ ಎಂಬುದಾಗಿ ಹೇಳಿದ್ದಾನೆ. 5ನೇ ಗೋರ್ಖಾ ರೈಫಲ್ಸ್‌ನಲ್ಲಿ ಮೇಜರ್‌ ಆಗಿದ್ದೇನೆ ಎಂಬುದಾಗಿ ತಿಳಿಸಿದ್ದಾನೆ. ಈತನು ನಕಲಿ ಐಡಿಯನ್ನು ಕೂಡ ತೋರಿಸಿದ್ದು, ಅದರಲ್ಲಿ ಮೇಜರ್ ಎಂ.ಎಸ್.ಚೌಹಾಣ್‌ ಎಂಬುದಾಗಿ ಬರೆಯಲಾಗಿತ್ತು. ಇದಾದ ನಂತರ ರಿಜಸ್ಟರ್‌ನಲ್ಲಿ ಮೊಬೈಲ್‌ ನಂಬರ್‌ ನಮೂದಿಸಲು ಯುವಕನು ತಡವರಿಸಿದ್ದಾನೆ. ಈತನ ಬಗ್ಗೆ ಅನುಮಾನ ವ್ಯಕ್ತವಾಗುತ್ತಲೇ ಅಲ್ಲಿದ್ದ ಸಿಬ್ಬಂದಿಯು ಕಂಟ್ರೋಲ್‌ ರೂಮ್‌ಗೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಯುವಕ ತಿರುಗಾಡಿದ ಖಾಸಗಿ ಹೋಟೆಲ್‌ ಕಾರು.

ವಿಚಾರಣೆ ಬಳಿಕ ಸ್ಫೋಟಕ ಮಾಹಿತಿ ಬಹಿರಂಗ

ಎಂ.ಎಸ್.ಚೌಹಾಣ್‌ ಎಂಬ ಯುವಕನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈತನ ಕುರಿತು ಹತ್ತಾರು ಮಾಹಿತಿ ಬಹಿರಂಗವಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂನವನಾದ ಈತನು ಪದೇಪದೆ ವಂಚನೆ ಎಸಗುವುದು ರೂಢಿಯಾಗಿದೆ. ಅಲ್ಲದೆ, ಈತನ ಕೃತ್ಯಗಳಿಂದಾಗಿ 2023ರ ಸೆಪ್ಟೆಂಬರ್‌ನಿಂದ 2024ರ ಫೆಬ್ರವರಿವರೆಗೆ ಒಡಿಶಾದ ಬಾಲಾಪರಾಧಿಗಳ ಗೃಹದಲ್ಲಿ ಇರಿಸಲಾಗಿತ್ತು. ಜೈಲಿನಿಂದ ಹೊರಬಂದ ಈತನು ಮತ್ತೆ ತನ್ನ ಚಾಳಿಯನ್ನು ಮುಂದುವರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕಳೆದ ಫೆಬ್ರವರಿ 13ರಂದು ಬಾಲಾಪರಾಧಿಗಳ ಗೃಹದಿಂದ ಬಿಡುಗಡೆಗೊಂಡ ಈತನು ಕಟಕ್‌ನಲ್ಲಿರುವ ಹೋಟೆಲ್‌ ಪ್ರೈಡ್‌ನಲ್ಲಿ ತಂಗಿದ್ದಾನೆ. ಅಲ್ಲಿ ತಂಗಿದ್ದಕ್ಕಾಗಿ 6,393 ರೂ. ಹೋಟೆಲ್‌ ಬಿಲ್‌ ಪಾವತಿಸದೆ ಪರಾರಿಯಾಗಿದ್ದಾನೆ. ಅಷ್ಟೇ ಅಲ್ಲ, ಟಿಕೆಟ್‌ ಇಲ್ಲದೆಯೇ ರೈಲಿನಲ್ಲಿ ಮಾರ್ಚ್‌ 14ರಂದು ಹೌರಾ ರೈಲು ನಿಲ್ದಾಣ ತಲುಪಿದ್ದಾನೆ. ಅಲ್ಲಿಂದ ಏರ್‌ಪೋರ್ಟ್‌ಗೆ ಕ್ಯಾಬ್‌ ಬುಕ್‌ ಮಾಡಿದ ಆತ, ಜೆಡಬ್ಲ್ಯು ಮ್ಯಾರಿಯಟ್‌ ಹೋಟೆಲ್‌ಗೆ ಕರೆ ಮಾಡಿ, ವಿಮಾನ ನಿಲ್ದಾಣಕ್ಕೆ ಕ್ಯಾಭ್‌ ಕಳುಹಿಸಲು ಹೇಳಿದ್ದಾನೆ. ಕ್ಯಾಬ್‌ನಲ್ಲಿ ಫೈವ್‌ ಸ್ಟಾರ್‌ ಹೋಟೆಲ್‌ಗೆ ತೆರಳಿ, ಅಲ್ಲಿ ಉಳಿದುಕೊಂಡಿದ್ದಾನೆ.

ಇದನ್ನೂ ಓದಿ: Sandeskhali ED Attack: ಸಂದೇಶಖಾಲಿ ಪ್ರಕರಣ; ಮತ್ತೆ ಮೂವರನ್ನು ಬಂಧಿಸಿದ ಸಿಬಿಐ

ಕ್ಯಾಬ್‌ ಚಾಲಕನಿಗೆ ತಾನು ರಾಷ್ಟ್ರಪತಿ ರೆಜಿಮೆಂಟ್‌ನಲ್ಲಿರುವ ಸೇನಾಧಿಕಾರಿ ಎಂದು ಸುಳ್ಳು ಹೇಳಿದ್ದಾನೆ. ಇದನ್ನು ನಂಬಿದ ಕ್ಯಾಬ್‌ ಚಾಲಕನು, ತನ್ನ ಮಗಳಿಗೆ ಜಾಧವ್‌ಪುರ ವಿವಿಯಲ್ಲಿ ಡಿಫೆನ್ಸ್‌ ಕೋಟಾದಲ್ಲಿ ಕೆಲಸ ಕೊಡಿಸಿ ಎಂದು ಮನವಿ ಮಾಡಿದ್ದಾನೆ. ಆಗ ಚೌಹಾಣ್‌, ಕ್ಯಾಬ್‌ ಚಾಲಕನನ್ನು ಕರೆದುಕೊಂಡು ಫೋರ್ಟ್‌ ವಿಲಿಯಂಗೆ ಹೋಗಿದ್ದಾನೆ. ಅಲ್ಲಿ, ಸೇನಾಧಿಕಾರಿ ಎಂದು ಹೇಳಿ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Pawan Kalyan: ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು.

VISTARANEWS.COM


on

Pawan Kalyan Fan Narendra cut hairs after Five Years
Koo

ಬೆಂಗಳೂರು: ಇತ್ತೀಚೆಗೆ ನಡೆದ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ (Telugu Desam Party), ಬಿಜೆಪಿ ಮತ್ತು ಪವನ್‌ ಕಲ್ಯಾಣ್‌ ನೇತೃತ್ವದ ಜನಸೇನಾ ಪಾರ್ಟಿ (Jana Sena Party)ಯ ಎನ್‌ಡಿಎ (NDA) ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಇಂದು (ಜೂನ್‌ 12) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡರು. 2019ರ ಚುನಾವಣೆಯಲ್ಲಿ ಪವನ್‌ ಕಲ್ಯಾಣ್‌ ಎರಡೂ ಕ್ಷೇತ್ರಗಳಲ್ಲಿ ಸೋತು ನಗೆಪಾಟಲಿಗೀಡಾಗಿದ್ದರು. ಆ ಸಮಯದಲ್ಲಿ ಪವನ್‌ ಅವರ ಫ್ಯಾನ್‌ ತೋಟ ನರೇಂದ್ರ ಅವರು ಪವನ್ ಗೆದ್ದೇ ಗೆಲ್ಲುತ್ತಾರೆಂದು ಸವಾಲು ಹಾಕಿ, ಪವನ್ ಗೆಲ್ಲುವವರೆಗೂ ತಲೆಗೂದಲು ಕತ್ತರಿವುದಿಲ್ಲ ಎಂದು ಪ್ರಮಾಣ ಮಾಡಿದ್ದರು. ಇದೀಗ ಕೂದಲಿಗೆ ಕತ್ತರಿ ಹಾಕಿದ್ದಾರೆ.

ತೋಟ ನರೇಂದ್ರ ಉರು ತೆನಾಲಿ ಸಮೀಪದ ಕೊಳಕಲೂರು. 2019ನೇ ಚುನಾವಣೆಯಲ್ಲಿ ತಮ್ಮ ನೆಚ್ಚಿನ ನಟ ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರು. ಇದರಿಂದ ನರೇಂದ್ರ ತೀವ್ರ ಖಿನ್ನತೆಗೆ ಒಳಗಾಗಿದ್ದರು. ಎರಡು ಕಡೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ನರೇಂದ್ರ ಅವರಿಗೆ ಪವನ್‌ ಕಲ್ಯಾಣ್‌ ಸೋಲು ಭಾರಿ ನೋವುಂಟು ಮಾಡಿತ್ತು. ಹಾಗಾಗಿ ಆ ಸಮಯದಲ್ಲಿ ನರೇಂದ್ರ ಅವರು ಪ್ರಮಾಣ ಮಾಡಿದರು. ಪವನ್ ಕಲ್ಯಾಣ್ ಗೆದ್ದು ವಿಧಾನಸಭೆಗೆ ಕಾಲಿಡುವವರೆಗೂ ಕೂದಲಿಗೆ ಕತ್ತರಿ ಹಾಕಲ್ಲ ಎಂದು. ಇದೀಗ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ (Pawan Kalyan) ಅಧಿಕಾರ ವಹಿಸಿಕೊಂಡಿದ್ದಾರೆ. ಐದು ವರ್ಷಗಳ ಕಾಲ ಕೂದಲು ಬೆಳೆಸುತ್ತಲೇ ಪಕ್ಷಕ್ಕಾಗಿ ದುಡಿದ ನರೇಂದ್ರ ಕೊನೆಗೂ ಕೂದಲಿಗೆ ಕತ್ತರಿ ಹಾಕಿದ್ದಾರೆ.

ಇದನ್ನೂ ಓದಿ: Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

ಪವನ್ ಕಲ್ಯಾಣ್ ಸೇರಿದಂತೆ ಜನಸೇನಾದ 21 ಅಭ್ಯರ್ಥಿಗಳು ಈ ಬಾರಿ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದರು. ಎದುರಾಳಿ ವೈಸಿಪಿ ಅಭ್ಯರ್ಥಿ ವಂಗಾ ಗೀತ ವಿರುದ್ಧ ಭಾರಿ ಅಂತರದ ಜಯವನ್ನು ಪವನ್ ಕಲ್ಯಾಣ್ ಪಡೆದಿದ್ದಾರೆ. 

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

Continue Reading

ದೇಶ

Nagastra 1: ಭಾರತೀಯ ಸೇನೆ ಸೇರಿದ ‘ದೇಶೀಯ’ ನಾಗಾಸ್ತ್ರ ಡ್ರೋನ್‌ಗಳು; ಉಗ್ರರಿಗೆ ನಡುಕ, ಏನಿದರ ವಿಶೇಷ?

Nagastra 1: ಸುಮಾರು 30 ಕೆ.ಜಿ ತೂಕ ಹೊಂದಿರುವ ಇವುಗಳು ಒಂದು ಕೆ.ಜಿ ಸ್ಫೋಟಕಗಳನ್ನು ಕೊಂಡೊಯ್ಯಬಲ್ಲ ಸಾಮರ್ಥ್ಯ ಹೊಂದಿವೆ. ರಾತ್ರಿ ಕೂಡ ಶತ್ರುಗಳ ಮೇಲೆ ನಿಗಾ ಇರಿಸುವ ಇವುಗಳನ್ನು ಶತ್ರುಪಡೆಗಳ ಸೇನಾ ನೆಲೆಗಳು, ಉಗ್ರರ ಲಾಂಚ್‌ಪ್ಯಾಡ್‌ಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿವೆ. ರಕ್ಷಣಾ ಕ್ಷೇತ್ರದಲ್ಲೂ ಮೇಕ್‌ ಇನ್‌ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದೇ ರಕ್ಷಣಾ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

VISTARANEWS.COM


on

Nagastra 1
Koo

ನವದೆಹಲಿ: ದೇಶೀಯವಾಗಿ ನಿರ್ಮಿಸಿದ ನಾಗಾಸ್ತ್ರ 1 (Nagastra 1 Drones) ಡ್ರೋನ್‌ಗಳನ್ನು ಮೊದಲ ಹಂತದಲ್ಲಿ ಭಾರತೀಯ ಸೇನೆಗೆ ಹಸ್ತಾಂತರಿಸಲಾಗಿದೆ. ಅತ್ಯಾಧುನಿಕ ಡ್ರೋನ್‌ಗಳ ಅಳವಡಿಕೆಯಿಂದ ಭಾರತೀಯ ಸೇನೆಗೆ (Indian Army) ಆನೆ ಬಲ ಬಂದಂತಾಗಿದ್ದು, ಶತ್ರುಗಳಲ್ಲಿ ನಡುಕ ಶುರುವಾಗಿದೆ. ನಾಗ್ಪುರ ಮೂಲದ ಎಕನಾಮಿಕ್ಸ್‌ ಎಕ್ಸ್‌ಪ್ಲೋಸಿವ್ಸ್‌ ಲಿಮಿಟೆಡ್‌ (Economics Explosives Limited) ಕಂಪನಿಯು ಡ್ರೋನ್‌ಗಳನ್ನು ತಯಾರಿಸಿದ್ದು, ಮೊದಲ ಹಂತದಲ್ಲಿ 120 ಡ್ರೋನ್‌ಗಳನ್ನು ಸೇನೆಗೆ ನೀಡಲಾಗಿದೆ. ಸೇನೆಯು ಡ್ರೋನ್‌ಗಳನ್ನು ಪುಲಗಾಂವ್‌ನಲ್ಲಿ ಡ್ರೋನ್‌ಗಳನ್ನು ಸ್ವೀಕರಿಸಿದೆ ಎಂದು ತಿಳಿದುಬಂದಿದೆ.

ಸುಮಾರು ಶೇ.75ರಷ್ಟು ದೇಶೀಯ ಉಪಕರಣಗಳನ್ನು ಬಳಸಿಕೊಂಡು ನಾಗಾಸ್ತ್ರ 1 ಡ್ರೋನ್‌ಗಳನ್ನು ತಯಾರಿಸಲಾಗಿದೆ. ಇದು ರಕ್ಷಣಾ ಕ್ಷೇತ್ರದಲ್ಲೂ ಮೇಕ್‌ ಇನ್‌ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದೇ ರಕ್ಷಣಾ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. ಇದೇ ಮಾದರಿಯ ಅತ್ಯಾಧುನಿಕ ಡ್ರೋನ್‌ಗಳು ರಷ್ಯಾ, ಉಕ್ರೇನ್‌, ಸೌದಿ ಅರೇಬಿಯಾ, ರಷ್ಯಾ, ಸಿರಿಯಾ, ಅಜರ್‌ಬೈಜಾನ್‌ ಹಾಗೂ ಅರ್ಮೇನಿಯಾ ದೇಶಗಳ ಸೇನೆಗಳಲ್ಲಿ ಇವೆ.

ಏನಿವುಗಳ ವಿಶೇಷ?

ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನಾಗಾಸ್ತ್ರ ಡ್ರೋನ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇವುಗಳನ್ನು ಸೈನಿಕರು ಹೊತ್ತುಕೊಂಡು ಹೋಗಬಹುದಾಗಿದೆ. ಸುಮಾರು 60 ನಿಮಿಷ 4,500 ಮೀಟರ್‌ ಎತ್ತರದಲ್ಲಿ ಹಾರಾಟ ನಡೆಸಬಲ್ಲ ಸಾಮರ್ಥ್ಯ ಹೊಂದಿರುವ ಇವುಗಳು ರಿಮೋಟ್‌ ಕಂಟ್ರೋಲ್‌ ಮೋಡ್‌ನಲ್ಲಿ 15 ಕಿಲೋಮೀಟರ್‌ ಹಾಗೂ ಆಟೋನಾಮಸ್‌ ಮೋಡ್‌ (ಸ್ವಯಂಚಾಲಿತವಾಗಿ ಹಾರಾಟ)ನಲ್ಲಿ ಸುಮಾರು 30 ಕಿಲೋಮೀಟರ್‌ವರೆಗೆ ಹಾರಾಟ ನಡೆಸಲಿವೆ.

ಸುಮಾರು 30 ಕೆ.ಜಿ ತೂಕ ಹೊಂದಿರುವ ಇವುಗಳು ಒಂದು ಕೆ.ಜಿ ಸ್ಫೋಟಕಗಳನ್ನು ಕೊಂಡೊಯ್ಯಬಲ್ಲ ಸಾಮರ್ಥ್ಯ ಹೊಂದಿವೆ. ರಾತ್ರಿ ಕೂಡ ಶತ್ರುಗಳ ಮೇಲೆ ನಿಗಾ ಇರಿಸುವ ಇವುಗಳನ್ನು ಶತ್ರುಪಡೆಗಳ ಸೇನಾ ನೆಲೆಗಳು, ಉಗ್ರರ ಲಾಂಚ್‌ಪ್ಯಾಡ್‌ಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿವೆ. ಜಿಪಿಎಸ್‌ ಆಧಾರಿತ ಡ್ರೋನ್‌ಗಳಾಗಿರುವ ಇವು ಕ್ಯಾಮೆರಾಗಳ ಸಹಾಯದಿಂದ ಸುಮಾರು 2 ಮೀಟರ್‌ ದೂರದಿಂದ ವೈರಿಗಳ ನೆಲೆಗಳನ್ನು ಹೊಡೆದುರುಳಿಸುತ್ತವೆ. ಗಡಿಯಲ್ಲಿ ಚೀನಾ ಹಾಗೂ ಪಾಕಿಸ್ತಾನದ ಉಪಟಳವನ್ನು ನಿಗ್ರಹಿಸಲು, ತುರ್ತು ಸಂದರ್ಭಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು, ಉಗ್ರರ ನೆಲೆಗಳನ್ನು ಹೊಡೆದುರುಳಿಸಲು ಇವು ನೆರವಾಗಲಿವೆ.

ಇದನ್ನೂ ಓದಿ: MQ-9B Drones: ಅಮೆರಿಕದ ಅತ್ಯಾಧುನಿಕ ಎಂಕ್ಯೂ-9ಬಿ ಡ್ರೋನ್‌ ಖರೀದಿಗೆ ಒಪ್ಪಿಗೆ, ಬಂತು ಭಾರತೀಯ ಸೇನೆಗೆ ಭೀಮ ಬಲ

Continue Reading

ಪ್ರಮುಖ ಸುದ್ದಿ

Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

Baby Death: ಮಕ್ಕಳನ್ನು ಹೆರುವುದಕ್ಕಿಂತ ಅವರನ್ನು ಸಾಕಿ ಬೆಳೆಸುವುದು ಕೆಲವೊಮ್ಮೆ ಸವಾಲಾಗಿ ಕಾಡುತ್ತದೆ. ಈಗಿನ ಮಕ್ಕಳನ್ನು ಕಣ್ಣಿನ ರಪ್ಪೆಯ ಮೇಲಿಟ್ಟುಕೊಂಡು ಸಾಕಿದರೂ ಸಾಲದು! ಜೀವನ ಸಾಗಿಸುವುದಕ್ಕೆಂದು ಮನೆಗೆಲಸ ಮಾಡುತ್ತಿದ್ದ ತಾಯಿಯೊಬ್ಬಳು ತನ್ನ ಕರುಳಕುಡಿಯನ್ನು ಕಳೆದುಕೊಂಡ ಕರುಣಾಜನಕ ಸುದ್ದಿಯೊಂದು ಇಲ್ಲಿದೆ. ಮಹಡಿ ಮನೆಯ ಬಾಲ್ಕನಿಯ ಗ್ರಿಲ್ ನಡುವೆ ಆಡುತ್ತಿದ್ದ ಮಗುವೊಂದು ಅದರ ಒಳಗೆ ನುಸುಳಿ ಏಳನೇ ಮಹಡಿಯಿಂದ ಕೆಳಕ್ಕೆ ಬಿದ್ದು ಪ್ರಾಣ ಬಿಟ್ಟ ಘಟನೆಯೊಂದು ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ.

VISTARANEWS.COM


on

Baby Death
Koo

ಸೂರತ್‌: ಟೆರೇಸ್‌ ಮೇಲೆ ಆಟವಾಡುತ್ತಿದ್ದ ಮಗು ಆಯತಪ್ಪಿ ಕೆಳಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟಿದೆ. ನೀರಿನ ಬಕೆಟ್‌ಗೆ ಮಗು ಬಿದ್ದು ಸಾವು, ಕೊಳವೆ ಬಾವಿಗೆ ಬಿದ್ದು ಮಗು ಸಾವು ಇಂತಹ ಸುದ್ದಿಗಳನ್ನು ದಿನ ಬೆಳಗಾದರೆ ನಾವು ಪತ್ರಿಕೆಯಲ್ಲಿ, ಟಿವಿ ಮಾಧ್ಯಮದಲ್ಲಿ, ಸೋಷಿಯಲ್‌ ಮೀಡಿಯಾದಲ್ಲಿ ನೋಡಿರುತ್ತೇವೆ, ಕೇಳಿರುತ್ತೇವೆ. ಆದರೆ ಮಕ್ಕಳ ಈ ಸಾವಿಗೆ ಮೊದಲು ಹೊಣೆ ಮಾಡುವುದು ಪೋಷಕರ ನಿರ್ಲಕ್ಷ್ಯತನ. ಮಕ್ಕಳಿಗೆ ಜನ್ಮ ಕೊಡುವುದು ಮಾತ್ರ ಪೋಷಕರ ಕರ್ತವ್ಯವಾಗುವುದಿಲ್ಲ. ಜೊತೆಗೆ ಅವರನ್ನು ಕಾಳಜಿಯಿಂದ ನೋಡಿಕೊಳ್ಳುವುದು ಕೂಡ ಅವರ ಕರ್ತವ್ಯವಾಗಿರುತ್ತದೆ. ಆದರೆ ಕೆಲವು ಪೋಷಕರು ಮಕ್ಕಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಇದರಿಂದ ಜೀವಮಾನವಿಡೀ ಪಶ್ಚಾತ್ತಾಪ ಪಡುವ ಹಾಗೇ ಆಗುತ್ತದೆ. ಇಂತಹದೊಂದು ಘಟನೆ ಇದೀಗ ಗುಜರಾತ್‌ನಲ್ಲಿ ನಡೆದಿದೆ. ಕಟ್ಟಡದ 7ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಎರಡು ವರ್ಷದ ಮಗು (Baby Death) ಸಾವನಪ್ಪಿದೆ. ಗುಜರಾತ್‌ನ ಸೂರತ್‌ನಲ್ಲಿ ಈ ಘಟನೆ ನಡೆದಿದೆ.

ಮೃತ ಮಗುವಿನ ತಾಯಿ ಮತ್ತು ಚಿಕ್ಕಮ್ಮ ಆ ಪ್ರದೇಶದ ಮನೆಗಳಲ್ಲಿ ಮನೆಗೆಲಸ ಮಾಡಿ ಜೀವನ ನಡೆಸುತ್ತಿದ್ದರು. ಪ್ರತಿದಿನ ಅವರು ತಮ್ಮ ಜೊತೆ ಮಗುವನ್ನು ಕರೆದೊಯ್ಯುತ್ತಿದ್ದರು. ಅಂದು ಕೂಡ ಮಗುವಿನ ಜೊತೆ ತಾಯಿ ಮನೆಗೆಲಸಕ್ಕೆ ಹೋಗಿದ್ದಳು. ತಾಯಿ ಬಿ-ಬ್ಲಾಕ್ ನ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮಗುವಿನ ಚಿಕ್ಕಮ್ಮ ಏಳನೇ ಮಹಡಿಗೆ ಮಗುವನ್ನು ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಅವಳು ಕೆಲಸದಲ್ಲಿ ನಿರತಳಾಗಿದ್ದಾಗ ಮಗು ಬಾಲ್ಕನಿಯ ಗ್ರಿಲ್ ಬಳಿ ಆಟವಾಡುತ್ತಿತ್ತು. ಆಗ ಮಗು ಗ್ರಿಲ್ ಮೂಲಕ ನುಸುಳಿ ಅದರ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದ. ಗ್ರಿಲ್ ಅಗಲವಾಗಿರುವುದರಿಂದ ಮಗು ಸುಲಭವಾಗಿ ಅದರಲ್ಲಿ ನುಸುಳಿ ಕೆಳಕ್ಕೆ ಬಿದ್ದಿದೆ.

ಮಗುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಘಟನೆಯ ಬಳಿಕ ಪಾಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶಿಲನೆ ನಡೆಸಿದ್ದಾರೆ. ಹಾಗೂ ಇಂತಹ ಘಟನೆ ಮತ್ತೆ ಆಗದಂತೆ ತಡೆಯಲು ಈ ಗ್ರಿಲ್‌ಗಳನ್ನು ಸರಿಯಾಗಿ ಮರುವಿನ್ಯಾಸ ಮಾಡುವಂತೆ ಸೊಸೈಟಿ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

ಮೃತ ಮಗುವಿನ ಕುಟುಂಬ ವರಾಚಾ ಪ್ರದೇಶದಲ್ಲಿ ನೆಲೆಸಿತ್ತು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

ಉದ್ಯೋಗ

Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಬರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ ಕಾಟನ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ 214 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಬರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ ಕಾಟನ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (Cotton Corporation of India Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜ್‌ಮೆಂಟ್‌ ಟ್ರೈನಿ, ಅಸಿಸ್ಟೆಂಟ್‌ ಮ್ಯಾನೇಜರ್‌ ಸೇರಿ ಸುಮಾರು 214 ಹುದ್ದೆಗಳಿವೆ (Cotton Corporation of India Recruitment 2024). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2 (Job Alert).

ಹುದ್ದೆಗಳ ವಿವರ

ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) 1 ಹುದ್ದೆ, ವಿದ್ಯಾರ್ಹತೆ: ಕಾನೂನಿನಲ್ಲಿ ಪದವಿ, ಎಲ್‌ಎಲ್‌ಬಿ
ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ) 1 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಮ್ಯಾನೇಜ್‌ಮೆಂಟ್‌ ಟ್ರೈನಿ (ಮಾರ್ಕೆಟಿಂಗ್) 11 ಹುದ್ದೆ, ವಿದ್ಯಾರ್ಹತೆ: ಕೃಷಿ ಕ್ಷೇತ್ರದಲ್ಲಿ ಎಂಬಿಎ
ಮ್ಯಾನೇಜ್‌ಮೆಂಟ್‌ ಟ್ರೈನಿ (ಅಕೌಂಟ್ಸ್) 20 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಂಎ, ಎಂಬಿಎ, ಎಂ.ಕಾಂ., ಎಂಎಂಎಸ್, ಸ್ನಾತಕೋತ್ತರ ಪದವಿ
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ 120 ಹುದ್ದೆ, ವಿದ್ಯಾರ್ಹತೆ: ಬಿಎಸ್‌ಸಿ ಅಗ್ರಿಕಲ್ಚರ್
ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ) 20 ಹುದ್ದೆ, ವಿದ್ಯಾರ್ಹತೆ: ಬಿಎಸ್‌ಸಿ ಅಗ್ರಿಕಲ್ಚರ್
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) 40 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ.
ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ) 1 ಹುದ್ದೆ, ವಿದ್ಯಾರ್ಹತೆ: ಹಿಂದಿಯಲ್ಲಿ ಪದವಿ

ವಯೋಮಿತಿ ಮತ್ತು ಅರ್ಜಿ ಶುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 27 ವರ್ಷದಿಂದ 32 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ ವಿಭಾಗಕ್ಕೆ 10 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು 1,000 ರೂ., ಎಸ್‌ಸಿ / ಎಸ್‌ಟಿ / ಇಎಸ್‌ಎಂ / ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಅನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Cotton Corporation of India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (cdn.digialm.com).
  • ಅಗತ್ಯ ಮಾಹಿತಿಗಳನ್ನು ನೀಡಿ ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ಅಗತ್ಯ ಮಾಹಿತಿಗಳ ಮೂಲಕ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ಅಪ್ಲಿಕೇಷನ್‌ ಫಾರಂ ಅನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading
Advertisement
World Blood Donor Day Awareness Jatha in Bengaluru
ಕರ್ನಾಟಕ6 mins ago

World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

World Blood Donor Day
ಆರೋಗ್ಯ19 mins ago

World Blood Donor Day: ರಕ್ತದಾನ ಯಾರು ಮಾಡಬಹುದು? ಯಾರು ಮಾಡಬಾರದು?

actor Darshan
ಬೆಂಗಳೂರು19 mins ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Money Guide
ಮನಿ-ಗೈಡ್25 mins ago

Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Anant Ambani Love Letter Printed On Radhika Merchant Pre-Wedding Dress
ಬಾಲಿವುಡ್32 mins ago

Anant Ambani: ಅನಂತ್ ಅಂಬಾನಿ ಕೊಟ್ಟ ಪ್ರೇಮ ಪತ್ರ ಪ್ರಿಂಟ್ ಆಗಿದ್ದ ಗೌನ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌!

E. Tukaram
ಕರ್ನಾಟಕ40 mins ago

E. Tukaram: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಈ. ತುಕಾರಾಂ

INDW vs SAW
ಕ್ರೀಡೆ47 mins ago

INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

Actor Darshan
ಸಿನಿಮಾ52 mins ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

Pawan Kalyan Fan Narendra cut hairs after Five Years
ಟಾಲಿವುಡ್1 hour ago

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Arun Somanna
ಕರ್ನಾಟಕ1 hour ago

Arun Somanna: ವಂಚನೆ, ಜೀವ ಬೆದರಿಕೆ; ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌