Lok Sabha Election: ಬಿಜೆಪಿಯ 2 ಪಟ್ಟಿಗಳಲ್ಲಿ 63 ಹಾಲಿ ಸಂಸದರಿಗೆ ಗೇಟ್‌ಪಾಸ್;‌ ಇನ್ನೂ ಯಾರಿಗೆಲ್ಲ ಕೊಕ್? - Vistara News

ದೇಶ

Lok Sabha Election: ಬಿಜೆಪಿಯ 2 ಪಟ್ಟಿಗಳಲ್ಲಿ 63 ಹಾಲಿ ಸಂಸದರಿಗೆ ಗೇಟ್‌ಪಾಸ್;‌ ಇನ್ನೂ ಯಾರಿಗೆಲ್ಲ ಕೊಕ್?

Lok Sabha Election: ಬಿಜೆಪಿಯು ಇದುವರೆಗೆ 267 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಿಸಿದೆ. ಇವರಲ್ಲಿ 63 ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಲಾಗಿದೆ. ಬಿಜೆಪಿಯು ಈ ಬಾರಿ ಅಳೆದು-ತೂಗಿ ಟಿಕೆಟ್‌ ನೀಡುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

VISTARANEWS.COM


on

Pratap Simha Pragya Singh Thakur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಬಿಜೆಪಿಯು ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, 72 ಅಭ್ಯರ್ಥಿಗಳಿಗೆ ಟಿಕೆಟ್‌ (BJP Candidates List) ಘೋಷಣೆ ಮಾಡಿದೆ. ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೇರಿ ಕರ್ನಾಟಕದಲ್ಲಿಯೇ 8 ಹಾಲಿ ಸಂಸದರಿಗೆ ಬಿಜೆಪಿ ಗೇಟ್‌ಪಾಸ್‌ ನೀಡಿದೆ. ಅಷ್ಟೇ ಅಲ್ಲ, ಬಿಜೆಪಿಯು ಇದುವರೆಗೆ 267 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿದ್ದು, 63 ಹಾಲಿ ಸಂಸದರಿಗೆ (Sitting MPs) ಈ ಬಾರಿ ಟಿಕೆಟ್‌ ನಿರಾಕರಿಸಲಾಗಿದೆ.

ಹೌದು, ಬಿಜೆಪಿ ಇದುವರೆಗೆ ಘೋಷಿಸಿದ 267 ಅಭ್ಯರ್ಥಿಗಳಲ್ಲಿ ಶೇ.21ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ. ಇನ್ನೂ ಮುಂದಿನ ದಿನಗಳಲ್ಲಿ ಹಾಲಿ ಸಂಸದರಿಗೆ ಕೊಕ್‌ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಬಿಜೆಪಿಯು ಮೊದಲು ಘೋಷಿಸಿದ 195 ಅಭ್ಯರ್ಥಿಗಳಲ್ಲಿ ಪ್ರಜ್ಞಾ ಸಿಂಗ್‌ ಠಾಕೂರ್‌ ಸೇರಿ 33 ಸಂಸದರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಇನ್ನು ಎರಡನೇ ಪಟ್ಟಿಯಲ್ಲಿ ಕೇವಲ 72 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದರೂ 30 ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ ಎಂಬುದು ಗಮನಾರ್ಹವಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಹಾಲಿಗಳಿಗೆ ಟಿಕೆಟ್‌ ನೀಡುವುದಿಲ್ಲ ಎಂದು ತಿಳಿದುಬಂದಿದೆ.

Narendra Modi And Amit Shah

ಯಾವ ರಾಜ್ಯದಲ್ಲಿ ಎಷ್ಟು ಸಂಸದರಿಗೆ ಕೊಕ್?‌

ಬಿಜೆಪಿ ಇದುವರೆಗೆ ಘೋಷಿಸಿದ 267 ಅಭ್ಯರ್ಥಿಗಳಲ್ಲಿ ದೆಹಲಿಯ 7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ. ಇನ್ನು ಗುಜರಾತ್‌ನಲ್ಲಿ 5, ಮಹಾರಾಷ್ಟ್ರದಲ್ಲಿ 8, ಕರ್ನಾಟಕದಲ್ಲಿ 8 ಸಂಸದರು ಸೇರಿ ಒಟ್ಟು 63 ಹಾಲಿ ಸಂಸದರಿಗೆ ಬಿಜೆಪಿಯು ಟಿಕೆಟ್‌ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ 400ಕ್ಕೂ ಅಧಿಕ ಸ್ಥಾನಗಳು ಹಾಗೂ ಬಿಜೆಪಿಯು 370ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಗುರಿ ನೀಡಿದ್ದಾರೆ. ಹಾಗಾಗಿ, ಅಳೆದು-ತೂಗಿ ಟಿಕೆಟ್‌ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ 8 ಹಾಲಿ ಸಂಸದರಿಗೆ ಟಿಕೆಟ್‌ ಇಲ್ಲ

ಡಿ.ವಿ. ಸದಾನಂದಗೌಡ
ನಳಿನ್‌ ಕುಮಾರ್‌ ಕಟೀಲ್‌
ಪ್ರತಾಪ್‌ ಸಿಂಹ
ಶಿವಕುಮಾರ್‌ ಉದಾಸಿ
ದೇವೇಂದ್ರಪ್ಪ
ಜಿ.ಎಸ್.‌ ಬಸವರಾಜು
ಜಿ.ಎಂ. ಸಿದ್ದೇಶ್ವರ್‌
ಶ್ರೀನಿವಾಸ್‌ ಪ್ರಸಾದ್

ಬೆಂಗಳೂರು ಉತ್ತರದಲ್ಲಿ ಡಿ.ವಿ. ಸದಾನಂದ ಅವರ ಬದಲಿಗೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರ ಬದಲು ಬ್ರಿಗೇಡಿಯರ್‌ ಬ್ರಿಜೇಶ್‌ ಚೌಟ ಆಯ್ಕೆಯಾಗಿದ್ದಾರೆ. ಮೈಸೂರು-ಕೊಡಗಿನಲ್ಲಿ ಪ್ರತಾಪ್‌ಸಿಂಹ ಅವರ ಬದಲು ಯದುವೀರ್‌ ಒಡೆಯರ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.
ಹಾವೇರಿಯಲ್ಲಿ ಶಿವಕುಮಾರ್‌ ಉದಾಸಿ ಅವರ ಬದಲಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಿಕೆಟ್‌ ಪಡೆದಿದ್ದಾರೆ.

ಇದನ್ನೂ ಓದಿ: Lok sabha Election 2024 : ನಾನು ಕಾಂತೇಶ್‌ಗೇ ಟಿಕೆಟ್‌ ಕೊಡಿ ಅಂದಿದ್ದೆ, ಗೆಲ್ತೀನಿ ಅಂತ ನಂಗೇ ಕೊಟ್ರು ಎಂದ ಬೊಮ್ಮಾಯಿ

ಬಳ್ಳಾರಿ ಕ್ಷೇತ್ರದಲ್ಲಿ ಹಾಲಿ ಸಂಸದ ದೇವೇಂದ್ರಪ್ಪ ಅವರ ಬದಲು ಶ್ರೀರಾಮುಲು ಟಿಕೆಟ್‌ ಪಡೆದಿದ್ದಾರೆ.
ತುಮಕೂರಿನಲ್ಲಿ ಹಾಲಿ ಸಂಸದರಾದ ಜಿ.ಎಸ್.‌ ಬಸವರಾಜ ಅವರ ಬದಲಿಗೆ ವಿ ಸೋಮಣ್ಣ ಅವರಿಗೆ ಟಿಕೆಟ್‌ ಸಿಕ್ಕಿದೆ.
ದಾವಣಗೆರೆ ಕ್ಷೇತ್ರದಲ್ಲಿ ಜಿ.ಎಂ. ಸಿದ್ದೇಶ್ವರ್‌ ಅವರಿಗೆ ಟಿಕೆಟ್‌ ಮಿಸ್‌ ಆಗಿದ್ದರೂ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಟಿಕೆಟ್‌ ಸಿಕ್ಕಿದೆ. ಚಾಮರಾಜನಗರದಲ್ಲಿ ಶ್ರೀನಿವಾಸ ಪ್ರಸಾದ್‌ ಅವರ ಬದಲಿಗೆ ಮಾಜಿ ಶಾಸಕ ಬಾಲರಾಜು ಟಿಕೆಟ್‌ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

Liquid Nitrogen Paan: ಬಾಲಕಿಯೊಬ್ಬಳು ಪಾನ್‌ ಸೇವಿಸಿ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿಕೊಂಡಿದ್ದಾಳೆ. ಬೆಂಗಳೂರಿ(Bangalore)ನಲ್ಲಿ ಈ ಘಟನೆ ನಡೆದಿದ್ದು, ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.ಈ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿರುವುದನ್ನು ವೈದ್ಯರು ಗಮನಿಸಿ ಶಾಕ್‌ ಆಗಿದ್ದಾರೆ.

VISTARANEWS.COM


on

Liquid Nitrogen Paan
Koo

ಬೆಂಗಳೂರು: ಪಾನ್‌(ಬೀಡಾ)(Liquid Nitrogen Paan) ಸೇವಿಸೋದಂದ್ರೆ ಬಹುತೇಕ ಎಲ್ಲರಿಗೂ ಇಷ್ಟ ಇರುತ್ತದೆ. ಮೊದಲೆಲ್ಲಾ ವಯಸ್ಸಾದವರು ಪಾನ್‌ ಸೇವಿಸೋ ಅಭ್ಯಾಸ ಇಟ್ಟುಕೊಂಡಿದ್ದರು. ಈಗೀಗ ಯುವಕರೂ ಪಾನ್‌ ಹಾಕುವ ಶೋಕಿ ರೂಢಿಸಿಕೊಂಡಿದ್ದಾರೆ. ಇದೀಗ ಬಾಲಕಿಯೊಬ್ಬಳು ಪಾನ್‌ ಸೇವಿಸಿ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿಕೊಂಡಿದ್ದಾಳೆ. ಬೆಂಗಳೂರಿ(Bangalore)ನಲ್ಲಿ ಈ ಘಟನೆ ನಡೆದಿದ್ದು, ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿರುವುದನ್ನು ವೈದ್ಯರು ಗಮನಿಸಿ ಶಾಕ್‌ ಆಗಿದ್ದಾರೆ. ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ ಈ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಟ್ರೆಂಡಿ ಫುಡ್‌ಗಳು ಕೆಲವೊಮ್ಮೆ ಹೇಗೆ ಪ್ರಾಣಕ್ಕೆ ಕುತ್ತಾಗಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ..

ಬಾಲಕಿಯನ್ನು ಇಂಟ್ರಾಆಪರೇಟಿವ್ OGD ಸ್ಕೋಪಿಯೊಂದಿಗೆ ಪರಿಶೋಧನಾತ್ಮಕ ಲ್ಯಾಪರೊಟಮಿಗೆ ಒಳಪಡಿಸಲಾಯಿತು. ಅಲ್ಲಿ ಅನ್ನನಾಳ, ಹೊಟ್ಟೆ ಮತ್ತು ಡ್ಯುವೋಡೆನಮ್ ಅನ್ನು ಪರೀಕ್ಷಿಸಲು ಎಂಡೋಸ್ಕೋಪ್ ಬಳಸಲಾಯಿತು. ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿ ಸುಮಾರು 4×5 ಸೆಂ.ಮೀ ಅಳತೆಯ ಅನಾರೋಗ್ಯಕರ ಪ್ಯಾಚ್ ಕಂಡುಬಂದಿದೆ. ಇದೀಗ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಿದ್ದು, ಬಾಲಕಿ ವೈದ್ಯರ ನಿಗಾದಲ್ಲಿದ್ದಾಳೆ.

ಏನಿದು ಲಿಕ್ವಿಡ್‌ ನೈಟ್ರೋಜನ್‌ ಪಾನ್‌?

ಬಾಯಲ್ಲಿ ಪಾನ್ ಹಾಕಿಕೊಂಡ ಕೂಡಲೇ ಹೊಗೆ ಬರುವಂತಹ ಟ್ರೆಂಡಿ ಪಾನ್‌ ಈ ಲಿಕ್ವಿಡ್ ನೈಟ್ರೋಜನ್ ಪಾನ್. ಪಾನ್‌ನಲ್ಲಿ ದ್ರವರೂಪದಲ್ಲಿ ಸಾರಜನಕವನ್ನು ತುಂಬಲಾಗುತ್ತದೆ. ಇದನ್ನು ಸೇವಿಸಿದಾಗ ಬಾಯಲ್ಲಿ ಹೊಗೆ ಬರಲು ಶುರು ಆಗುತ್ತದೆ. ಇದು ಬಾಯಿಯ ಚರ್ಮವನ್ನು ಹಾನಿಗೊಳಿಸುತ್ತದೆ ಮತ್ತು ತೀವ್ರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ. ಈ ಆವಿಯನ್ನು ಉಸಿರಾಡುವುದರಿಂದ ಉಸಿರಾಟದ ಸಮಸ್ಯೆ ಎದುರಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಿಕ್ವಿಡ್ ನೈಟ್ರೋಜನ್ ಜಗತ್ತಿನಲ್ಲಿಯೇ ಅತಿ ತಣ್ಣನೆಯ ವಸ್ತುವಾಗಿದ್ದು, ಅದನ್ನು ಸಾರಜನಕದ ದ್ರವೀಕರಣದಿಂದ ಮಾಡಲಾಗುತ್ತದೆ. ಅದರ ತಂಪಿನಲ್ಲಿ ಎಷ್ಟೊಂದು ತೀಕ್ಷ್ಣತೆ ಇರುತ್ತದೆ ಎಂದರೆ ಅಂಗೈ ಮೇಲೆ ಸುರಿದುಕೊಂಡರೆ ಅಂಗೈ ತೂತಾಗುತ್ತದೆ. ಇದನ್ನು ಸೇವಿಸುವುದರಿಂದ ಇದು ಅಂಗಾಂಶಗಳಿಗೆ ಆಮ್ಲಜನಕದ ಪೂರೈಕೆಯನ್ನು ಕಡಿತಗೊಳಿಸುವ ಮೂಲಕ ಉಸಿರುಕಟ್ಟುವಿಕೆಗೆ ಕಾರಣವಾಗುತ್ತದೆ. ಸ್ಮೋಕ್‌ ಬಿಸ್ಕತ್‌, ಬಿಯರ್‌, ಐಸ್‌ ಕ್ರೀಂಗಳಲ್ಲಿ ಇದನ್ನು ಬಳಸಲಾಗುತ್ತಿದೆ. ಈಗಾಗಲೇ ತಮಿಳುನಾಡು ಇದರ ನೇರ ಬಳಕೆಯನ್ನು ನಿಷೇಧಿಸಿದ್ದು, ಕರ್ನಾಟಕದಲ್ಲೂ ಬ್ಯಾನ್ ಮಾಡುವಂತೆ ಹಲವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ:Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

ಕೆಲವು ತಿಂಗಳ ಹಿಂದೆ ದಾವಣಗೆರೆಯಲ್ಲೂ ಇಂತಹದ್ದೇ ಒಂ ಘಟನೆ ವರದಿ ಆಗಿತ್ತು. ವಸ್ತುಪ್ರದರ್ಶನದಲ್ಲಿ ಬಾಲಕನೊಬ್ಬ ‘ಸ್ಮೋಕ್ ಬಿಸ್ಕೆಟ್’ ಸೇವಿಸಿದ ಬಳಿಕ ಅತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಳಿಕ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ ಕುರಿತು ಹಲವರು ದ್ವನಿಯೆತ್ತಿದ್ದರು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಅದನ್ನು ಬ್ಯಾನ್‌ ಮಾಡಿತ್ತು.

Continue Reading

ದೇಶ

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

Lok Sabha Election 2024: ಪಡಿಲ ಮಹಾದೇವ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಭಾರಿ ಬೆಂಬಲಿಗರು ಸೇರಿದ್ದರು, ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

VISTARANEWS.COM


on

Lok Sabha Election 2024
Koo

ಉತ್ತರಪ್ರದೇಶ: ಲೋಕಸಭೆ ಚುನಾವಣೆ(Lok Sabha Election 2024) ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಚುನಾವಣೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ರಾಜಕೀಯ ನಾಯಕರು ಒಂದರ ಮೇಲೊಂದರಂತೆ ರ್ಯಾಲಿ, ಸಾರ್ವಜನಿಕ ಸಭೆ ನಡೆಸುವ ಮೂಲಕ ತಮ್ಮ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ. ನಿನ್ನೆ ಉತ್ತರಪ್ರದೇಶ(Uttara Pradesh)ದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ಮತ್ತು ಅಖಿಲೇಶ್‌ ಯಾದವ್‌(Akhilesh Yadav) ಭಾಗಿಯಾಗಿದ್ದ ಚುನಾವಣಾ ರ್ಯಲಿಯಲ್ಲಿ ದಾಖಲೆ ಪ್ರಮಾಣದಲ್ಲಿ ಜನಸ್ತೋಮ ಸೇರಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಫುಲ್‌ಫುರದಲ್ಲಿ ಸ್ವತಃ ನಾಯಕರೇ ಆಘಾತಕ್ಕೀಡಾಗುವಂತಹ ರೀತಿಯಲ್ಲಿ ಜನ ಭಾಗಿಯಾಗಿದ್ದರು. ನೆರೆದಿರುವ ಜನರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ಪಡಿಲ ಮಹಾದೇವ್‌ನಲ್ಲಿ ನಡೆದ ಇಂಡಿಯಾ ಒಕ್ಕೂಟದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳ ಭಾರಿ ಬೆಂಬಲಿಗರು ಸೇರಿದ್ದರು, ಜನ ವೇದಿಕೆ ಮೇಲೆ ಬರಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣ, ಗೊಂದಲದ ವಾತಾವರಣ ಉಂಟಾಗಿತ್ತು, ಸಮಾಧಾನದಿಂದ ಇರುವಂತೆ ರಾಹುಲ್ ಗಾಂಧಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಒಟ್ಟಿನಲ್ಲಿ ಒಂದು ಕ್ಷಣಕ್ಕೆ ಕಾಲ್ತುಳಿತದಂತಹ ದುರ್ಘಟನೆ ಸಂಭವಿಸುವ ಎಲ್ಲಾ ಲಕ್ಷಣ ಎದ್ದು ಕಾಣುತ್ತಿತ್ತು.

ಭಾಷಣ ಮಾಡದೇ ವೇದಿಕೆಯಿಂದ ನಿರ್ಗಮಿಸಿದ ರಾಹುಲ್‌, ಅಖಿಲೇಶ್‌

ಭಾರೀ ಜನಸ್ತೋಮ ಕಂಡು ದಂಗಾಗಿದ್ದ ರಾಹುಲ್‌ ಮತ್ತು ಅಖಿಲೇಶ್‌ ವೇದಿಕೆಯಿಂದ ನಿರ್ಗಮಿಸುವುದೇ ಸೂಕ್ತ ಎಂದು ಭಾವಿಸಿದರು. ಉದ್ರಿಕ್ತ ಜನ ಬ್ಯಾರಿಕೇಟ್‌ಗಳನ್ನು ಮುರಿದು ಒಳಗೆ ಪ್ರವೇಶಿಸಿದ್ದರು. ಅಲ್ಲದೇ ಕಹಲವು ವೇದಿಕೆಗೆ ಹತ್ತಲೂ ಯತ್ನಿಸಿದ್ದರು. ಕೆಲವರು ವೇದಿಕೆ ಏರುವಲ್ಲಿ ಯಶಸ್ವಿ ಆಗಿದ್ದರು. ಕಾರ್ಯಕರ್ತರ ಈ ರೀತಿಯಾದ ಅನುಚಿತ ವರ್ತನೆಯಿಂದ ಕುಪಿತಗೊಂಡ ಇಬ್ಬರೂ ನಾಯಕರು ಏನೂ ಮಾತನಾಡಲಿಲ್ಲ. ತಾವು ಮಾಡಬೇಕಾಗಿದ್ದ ಭಾಷಣವನ್ನೂ ಮಾಡದೇ ಇಬ್ಬರೂ ನಾಯಕರು ವೇದಿಕೆಯಿಂದ ನಿರ್ಗಮಿಸಿ ಬಳಿಕ ಇಬ್ಬರೂ ನಾಯಕರು ಇಲ್ಲಿಂದ ಹೆಲಿಕಾಪ್ಟರ್‌ನಲ್ಲಿ ತೆರಳಿದರು.

ಗಲಾಟೆ ಎಷ್ಟು ದೊಡ್ಡದಾಗಿದೆ ಎಂದರೆ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಯಾವುದೇ ಭಾಷಣ ಮಾಡದೆ ಸ್ಥಳದಿಂದ ನಿರ್ಗಮಿಸಿದರು. ಫುಲ್ಪುರ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಮತ್ತು ಅಖಿಲೇಶ್ ಜಂಟಿ ಸಾರ್ವಜನಿಕ ಸಭೆ ನಡೆಯಬೇಕಿತ್ತು. ರಾಹುಲ್ ಗಾಂಧಿ ಅವರು ಪ್ರಯಾಗ್‌ರಾಜ್‌ನ ಪಕ್ಷದ ಅಭ್ಯರ್ಥಿ ಉಜ್ವಲ್ ರಾಮನ್‌ಸಿಂಗ್‌ಗೆ ಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.

ಇದನ್ನೂ ಓದಿ:Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

ಕಾಂಗ್ರೆಸ್-ಸಮಾಜವಾದಿ ಪಕ್ಷದ ಸಹಭಾಗಿತ್ವವನ್ನು ಬೆಂಬಲಿಸಲು ನಮ್ಮ ಸಾವಿರಾರು ಕಾರ್ಯಕರ್ತರು ಇಲ್ಲಿದ್ದಾರೆ. ಮತಗಟ್ಟೆಗಳಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ನಿಂತು ಇಲ್ಲಿನ ಅಭ್ಯರ್ಥಿಯನ್ನು 5 ಲಕ್ಷ ಮತಗಳಿಂದ ಗೆಲ್ಲಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ, ಇಲ್ಲಿ ನಮ್ಮ ಅಭ್ಯರ್ಥಿ ಉಜ್ವಲ್ ರಮಣ್‌ಸಿಂಗ್ ಇದ್ದಾರೆ, ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಿ ಎಂದಷ್ಟೇ ಹೇಳಿ ವೇದಿಕೆಯಿಂದ ನಿರ್ಗಮಿಸಿದರು.

Continue Reading

ದೇಶ

Murder Case: ತಾಜ್‌ ಮಹಲ್‌ ಸಮೀಪದಲ್ಲೇ ಘೋರ ಕೃತ್ಯ; ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

Murder Case: ತಾಜ್‌ ಮಹಲ್‌ ಸಮೀಪದಲ್ಲಿರುವ ಮಸೀದಿಯಲ್ಲಿ ಈ ಘಟನೆ ನಡೆದಿದ್ದು, ಅರೆನಗ್ನಾವಸ್ಥೆಯಲ್ಲಿ 22ವರ್ಷದ ಯುವತಿ ಮೃತದೇಹ ಪತ್ತೆಯಾಗಿದೆ. ಪ್ರಾರ್ಥನೆ ಸಲ್ಲಿಸಲೆಂದು ಮಸೀದಿಗೆ ಬಂದವರು ಮೃತದೇಹ ಬಿದ್ದಿರುವುದನ್ನು ಕಂಡಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆಗೆ ಕೈಗೆತ್ತಿಕೊಂಡಿದ್ದಾರೆ. ಈ ಘಟನೆಯಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

Murder case
Koo

ಉತ್ತರಪ್ರದೇಶ :ವಿಶ್ವ ವಿಖ್ಯಾತ ತಾಜ್‌ಮಹಲ್‌(Taj Mahal) ಸಮೀಪದಲ್ಲೇ ಇರುವ ಮಸೀದಿಯಲ್ಲಿ ಯುವತಿಯ ಮೃತದೇಹ(dead body) ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಇಲ್ಲಿನ ನಾಗ್ಲಾ ಪೈಮಾ ಪ್ರದೇಶದಲ್ಲಿರುವ ಮಸೀದಿಯಲ್ಲಿ ಈ ಘಟನೆ ನಡೆದಿದ್ದು, ಇದು ಕೊಲೆ(Murder Case) ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಂತಕನಿಗಾಗಿ ಬಲೆ ಬೀಸಿದ್ದಾರೆ.

ತಾಜ್‌ ಮಹಲ್‌ ಸಮೀಪದಲ್ಲಿರುವ ಮಸೀದಿಯಲ್ಲಿ ಈ ಘಟನೆ ನಡೆದಿದ್ದು, ಅರೆನಗ್ನಾವಸ್ಥೆಯಲ್ಲಿ 22ವರ್ಷದ ಯುವತಿ ಮೃತದೇಹ ಪತ್ತೆಯಾಗಿದೆ. ಪ್ರಾರ್ಥನೆ ಸಲ್ಲಿಸಲೆಂದು ಮಸೀದಿಗೆ ಬಂದವರು ಮೃತದೇಹ ಬಿದ್ದಿರುವುದನ್ನು ಕಂಡಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆಗೆ ಕೈಗೆತ್ತಿಕೊಂಡಿದ್ದಾರೆ. ಈ ಘಟನೆಯಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಕೊಲೆಗೈದು ಮಸೀದಿಯಲ್ಲಿ ತಂದು ಬಿಸಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇನು ಹಂತಕನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇನ್ನು ಆ ಪ್ರದೇಶದಲ್ಲಿ ಅಳವಡಿಸಿರುವ ಸಿಸಿಟಿವಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮೃತದೇಹದ ಗುರುತು ಪತ್ತೆಗೆ ಯತ್ನಿಸುತ್ತಿದ್ದಾರೆ.

ಮುಖವನ್ನು ಸಂಪೂರ್ಣವಾಗಿ ಜಜ್ಜಿದ್ದ ಹಂತಕ

ಇನ್ನು ಹಂತಕ ಮೃತ ದುರ್ದೈವಿಯ ಮುಖವನ್ನು ಸಂಪೂರ್ಣವಾಗಿ ಕಲ್ಲಿನಿಂದ ಜಜ್ಜಿ ಕ್ರೌರ್ಯ ಮೆರೆದಿದ್ದಾನೆ. ಇನ್ನು ಮೃತದೇಹದಲ್ಲಿ ಸೊಂಟದ ಕೆಲಭಾಗ ಧರಿಸುವ ಬಟ್ಟೆ ಕಣ್ಮರೆಯಾಗಿದೆ. ಬಹುಷಃ ಮೃತ ಯುವತಿಗೂ ಹಂತಕನಿಗೂ ಮೊದಲೇ ಪರಿಚಯ ಇದ್ದಿರಬೇಕು. ಇದರ ಲಾಭ ಪಡೆದು ಕಿರಾತಕ ಆಕೆಯನ್ನು ಇಲ್ಲಿಗೆ ಕರೆತಂದು ಈ ದುಷ್ಕೃತ್ಯ ಎಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ:Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Continue Reading

ದೇಶ

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Lok Sabha Election 2024:ಎರಡು ನಿಮಿಷಗಳ ಅವಧಿಯ ವೀಡಿಯೊದಲ್ಲಿ, ರಾಜನ್‌ ಸಿಂಗ್‌, ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರಿಗೆ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ (ಇವಿಎಂ) ಕನಿಷ್ಠ 8 ಬಾರಿ ಮತ ಚಲಾಯಿಸುವುದನ್ನು ಕಾಣಬಹುದು. ರಜಪೂತ್ ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಎಆರ್ ಒ ಪ್ರತೀತ್ ತ್ರಿಪಾಠಿ ಅವರ ದೂರಿನ ಆಧಾರದ ಮೇಲೆ ನಯಾ ಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

VISTARANEWS.COM


on

Lok sabha Election 2024
Koo

ಉತ್ತರ ಪ್ರದೇಶ: ಚುನಾವಣೆ(Lok Sabha Election 2024) ಬಂತೆಂದರೆ ಸಾಕು ಮತಯಂತ್ರ(EVMs)ಗಳ ಕಾರ್ಯಕ್ಷಮತೆ ಬಗ್ಗೆ ಆಗಾಗ ಅನುಮಾನಗಳು ಕೇಳಿ ಬರುವುದು ಸಾಮಾನ್ಯ. ಇದಕ್ಕೆ ಪೂರಕ ಎಂಬಂತೆ ಕೆಲವೊಮ್ಮೆ ಮತಯಂತ್ರಗಳ ಕ್ಷಮತೆ ಮೇಲೆ ಅನುಮಾನ ಹುಟ್ಟಿಸುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ವಿಡಿಯೋ ಹರಿದಾಡುತ್ತಿದ್ದು, ಮತಗಟ್ಟೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಒಬ್ಬನೇ ವ್ಯಕ್ತಿ ಹಲವು ಬಾರಿ ಮತಹಾಕಿದ್ದಾನೆ. ಈ ವಿಡಿಯೋ ವೈರಲ್‌(Viral Video) ಆಗುತ್ತಿದ್ದಂತೆ ಪೊಲೀಸರು ಆ ವ್ಯಕ್ತಿಯನ್ನು ಅರೆಸ್ಟ್‌ ಮಾಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಉತ್ತರಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಾಜನ್‌ ಸಿಂಗ್‌ ಎಂಬ ಯುವಕ ತಾನು ಮತ ಚಲಾಯಿಸುವ ವಿಡಿಯೋವನ್ನು ರೆಕಾರ್ಡ್‌ ಮಾಡಿದ್ದಾರೆ. ಈ ವಿಡಿಯೋವನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳ ಹಲವಾರು ನಾಯಕರು ಎಕ್ಸ್‌ನಲ್ಲಿ ಹಂಚಿಕೊಂಡ ನಂತರ ಆರೋಪಿ ರಾಜನ್ ಸಿಂಗ್ ಎನ್ನುವಾತನನ್ನು ವಶಕ್ಕೆ ಪಡೆಯಲಾಗಿದೆ.

ಎರಡು ನಿಮಿಷಗಳ ಅವಧಿಯ ವೀಡಿಯೊದಲ್ಲಿ, ರಾಜನ್‌ ಸಿಂಗ್‌, ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರಿಗೆ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ (ಇವಿಎಂ) ಕನಿಷ್ಠ 8 ಬಾರಿ ಮತ ಚಲಾಯಿಸುವುದನ್ನು ಕಾಣಬಹುದು. ರಜಪೂತ್ ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ಎಆರ್ ಒ ಪ್ರತೀತ್ ತ್ರಿಪಾಠಿ ಅವರ ದೂರಿನ ಆಧಾರದ ಮೇಲೆ ನಯಾ ಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನು ರಾಜನ್‌ ಸಿಂಗ್‌ ವಿರುದ್ಧ ಸೂಚನೆ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 171F (ಚುನಾವಣೆಗಳಿಗೆ ಸಂಬಂಧಿಸಿದ ಅಪರಾಧ), ಐಪಿಸಿ ಸೆಕ್ಷನ್ 419 (ವ್ಯಕ್ತಿಯಿಂದ ವಂಚನೆಗೆ ಶಿಕ್ಷೆ), ಸೆಕ್ಷನ್ 128, 132, ಮತ್ತು 136 ಸೇರಿದಂತೆ ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆ (ಮತದಾನದ ಗೌಪ್ಯತೆಯನ್ನು ಕಾಪಾಡುವುದು, ಚುನಾವಣೆಗಳಲ್ಲಿ ವಂಚನೆ ಮತ್ತು ಇತರ ಚುನಾವಣಾ ಅಪರಾಧಗಳಿಗೆ ಸಂಬಂಧಿಸಿದೆ) ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಆಯೋಗ ಕೂಡ ಈ ವಿಷಯದ ಬಗ್ಗೆ ಗಮನಹರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಘಟನೆ ನಡೆದಾಗ ಮತಗಟ್ಟೆಯಲ್ಲಿ ಹಾಜರಿದ್ದ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ಹೊರಡಿಸಲಾಗಿದೆ.

ಇದನ್ನೂ ಓದಿ:Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Continue Reading
Advertisement
IPL 2024
ಕ್ರೀಡೆ27 mins ago

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

how many seats will the Congress have in the Lok Sabha elections CM Siddaramaiah statement
Lok Sabha Election 202446 mins ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್52 mins ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ55 mins ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ1 hour ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ1 hour ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ1 hour ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ1 hour ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ1 hour ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ1 hour ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ23 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ24 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌