IG Rank For Women | ಸಿಆರ್‌ಪಿಎಫ್‌ನ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಐಜಿ ರ‍್ಯಾಂಕ್‌, 35 ವರ್ಷದಲ್ಲೇ ಮೊದಲು - Vistara News

ದೇಶ

IG Rank For Women | ಸಿಆರ್‌ಪಿಎಫ್‌ನ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಐಜಿ ರ‍್ಯಾಂಕ್‌, 35 ವರ್ಷದಲ್ಲೇ ಮೊದಲು

ದೇಶದ ಸೇನೆಯಲ್ಲೂ ನಾರಿಶಕ್ತಿ ಪರ್ವ ಆರಂಭವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಸಿಆರ್‌ಪಿಎಫ್‌ನ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಇನ್ಸ್‌ಪೆಕ್ಟರ್‌ ಜನರಲ್‌ ರ‍್ಯಾಂಕ್‌ (IG Rank For Women) ನೀಡಲಾಗಿದೆ.

VISTARANEWS.COM


on

CRPF
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಸೇನೆಯಲ್ಲೀಗ ಹೆಚ್ಚಿನ ಬದಲಾವಣೆ ಆಗುತ್ತಿದ್ದು, ಮಹಿಳೆಯರಿಗೂ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಅದರಲ್ಲೂ, ನಾರಿಯರು ಈಗ ಯುದ್ಧವಿಮಾನದ ಪೈಲಟ್‌ಗಳಾಗಿ ಹೊರಹೊಮ್ಮುತ್ತಿದ್ದಾರೆ. ಉನ್ನತ ಸ್ಥಾನಗಳು ಅವರಿಗೆ ಲಭ್ಯವಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ ಕಳೆದ 35 ವರ್ಷದಲ್ಲಿಯೇ ಮೊದಲ ಬಾರಿಗೆ ಸಿಆರ್‌ಪಿಎಫ್‌ನ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಇನ್ಸ್‌ಪೆಕ್ಟರ್‌ ಜನರಲ್‌ (IG Rank For Women) ಹುದ್ದೆ ನೀಡಲಾಗಿದೆ.

ಅನಿ ಅಬ್ರಾಹಂ ಅವರು ಕ್ಷಿಪ್ರ ಕಾರ್ಯ ಪಡೆ (RAF)ಯ ಐಜಿ ಆಗಿ ನೇಮಕಗೊಂಡಿದ್ದರೆ, ಸೀಮಾ ಧುಂಡಿಯಾ ಅವರು ಸಿಆರ್‌ಪಿಎಫ್‌ ಕಮಾಂಡ್ಸ್‌ನ ಬಿಹಾರ ಸೆಕ್ಟರ್‌ ಐಜಿ ಆಗಿ ಆಯ್ಕೆಯಾಗಿದ್ದಾರೆ. ಅದರಲ್ಲೂ, ಆರ್‌ಎಎಫ್‌ಗೆ ಸೇನೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಹಿಳೆಯೊಬ್ಬರು ಐಜಿ ಆಗಿ ನೇಮಕಗೊಂಡಿದ್ದಾರೆ.

“ನಾವಿಬ್ಬರೂ 1986ರಲ್ಲಿ ಸಿಆರ್‌ಪಿಎಫ್‌ ಸೇರಿದೆವು. ಸೇರಿದ ಒಂದು ವರ್ಷದ ಬಳಿಕ ನಮ್ಮನ್ನು ಸೇನೆಗೆ ನಿಯೋಜಿಸಲಾಯಿತು. ಇದಾದ ಬಳಿಕ ಹಲವು ಸವಾಲುಗಳನ್ನು ದಾಟಿ ನಾವು ಸೇವೆ ಸಲ್ಲಿಸಿದ್ದೇವೆ. ಈಗ ಮತ್ತೊಂದು ಜವಾಬ್ದಾರಿ ಸಿಕ್ಕಿದ್ದು, ಇದನ್ನು ಸಮರ್ಥವಾಗಿ ನಿಭಾಯಿಸುತ್ತೇವೆ” ಎಂದು ಅನಿ ಅಬ್ರಾಹಂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Siachen Glacier | 19,061 ಅಡಿ ಎತ್ತರದಲ್ಲಿ ಸ್ಯಾಟಲೈಟ್‌ ಆಧಾರಿತ ಇಂಟರ್ನೆಟ್‌ಗೆ ಚಾಲನೆ, ಸೇನೆ ಸಾಧನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Fact Check

Fact Check: ಮತದಾನ ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ? ವಾಸ್ತವ ಹೀಗಿದೆ

Fact Check: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದವರ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತಗೊಳಿಸಲಾಗುತ್ತದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ನಕಲಿ ಸುದ್ದಿಯ ಕುರಿತು ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಇದರ ಬೆನ್ನಲ್ಲೇ, ಹಲವು ಮಾಧ್ಯಮ ಸಂಸ್ಥೆಗಳು, ಚುನಾವಣೆ ಆಯೋಗವು ಫ್ಯಾಕ್ಟ್‌ ಚೆಕ್‌ ಮಾಡಿದೆ.

VISTARANEWS.COM


on

Fact Check
Koo

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಶುಕ್ರವಾರ (ಏಪ್ರಿಲ್‌ 19) ಚಾಲನೆ ಸಿಗಲಿದೆ. ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಳೆ ಮೊದಲ ಹಂತದ ಮತದಾನ (First Phase Voting) ನಡೆಯಲಿದ್ದು, ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆವರೆಗೆ ಜನರು ಹಕ್ಕು ಚಲಾಯಿಸಬಹುದಾಗಿದೆ. ಇದರ ಬೆನ್ನಲ್ಲೇ, ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದವರ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತವಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟು ನಿಜ? ಇಲ್ಲಿದೆ (Fact Check) ಸತ್ಯಾಂಶ.

ಏನಿದು ವದಂತಿ?

ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದವರ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತಗೊಳಿಸಲಾಗುತ್ತದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪತ್ರಿಕೆಯೊಂದರಲ್ಲಿ ಈ ಕುರಿತು ವರದಿ ಪ್ರಕಟಿಸಲಾಗಿದೆ ಎಂಬುದಾಗಿ ನಕಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ದೇಶದಲ್ಲಿ ಮತದಾನ ಮಾಡುವುದು ಕಡ್ಡಾಯವಾಗಿದೆ. ಯಾರು ಮತದಾನ ಮಾಡುವುದಿಲ್ಲವೋ, ಅವರ ಬ್ಯಾಂಕ್‌ ಖಾತೆಯಿಂದ 350 ರೂಪಾಯಿಯನ್ನು ಕಡಿತಗೊಳಿಸಲಾಗುತ್ತದೆ ಎಂಬುದಾಗಿ ಮಾಹಿತಿ ಹರಿದಾಡಿದೆ.

‌ವಾಸ್ತವಾಂಶ ಏನು?

ಸಾಮಾಜಿಕ ಜಾಲತಾಣಗಳಲ್ಲಿ ವರದಿಯ ಪೋಸ್ಟ್‌ ವೈರಲ್ ಆಗುತ್ತಲೇ, ಚುನಾವಣಾ ಆಯೋಗ, ಹಲವು ಪೊಲೀಸ್‌ ಇಲಾಖೆಗಳು ಫ್ಯಾಕ್ಟ್‌ ಚೆಕ್‌ ಮಾಡಿವೆ. ಫ್ಯಾಕ್ಟ್‌ ಚೆಕ್‌ ಮಾಹಿತಿ ಪ್ರಕಾರ, ಮತದಾನ ಮಾಡದವರ ಬ್ಯಾಂಕ್‌ ಖಾತೆಯಿಂದ ಹಣ ಕಡಿತವಾಗುವುದಿಲ್ಲ. ಇದರ ಕುರಿತು ಯಾವುದೇ ಮಾಧ್ಯಮಗಳೂ ವರದಿ ಮಾಡಿಲ್ಲ. ಇವೆಲ್ಲ ನಕಲಿ ಸುದ್ದಿಯಾಗಿವೆ. ಯಾರೂ ಕೂಡ ಇಂತಹ ಪೋಸ್ಟ್‌ಗಳನ್ನು ಶೇರ್‌ ಮಾಡಬಾರದು ಎಂಬುದಾಗಿ ಪೊಲೀಸರು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ನಾಳೆ ಮೊದಲ ಹಂತದ ಮತದಾನ

ಶುಕ್ರವಾರ (ಏಪ್ರಿಲ್‌ 19) ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಪ್ರಜಾಪ್ರಭುತ್ವದ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ಆಚರಿಸಲು ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಮತಗಟ್ಟೆಗಳಿಗೆ ಮತಯಂತ್ರಗಳು ಸೇರಿ ಅಗತ್ಯ ಉಪಕರಣಗಳ ರವಾನೆ, ಸಿಬ್ಬಂದಿಯ ರವಾನೆ, ಮತದಾರರಿಗೆ ಸಕಲ ರೀತಿಯ ಸೌಲಭ್ಯ ಒದಗಿಸುವುದು ಸೇರಿ ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಶಾಂತಿಯುತ ಮತದಾನ ಪ್ರಕ್ರಿಯೆಗೆ ಅನುವು ಮಾಡಿಕೊಡುತ್ತಿದೆ.

ಇದನ್ನೂ ಓದಿ: Fact Check: 10 ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟಕ್ಕೆ 200 ಸ್ಥಾನ ಎಂಬ ವರದಿ ನಿಜವೇ? ಇಲ್ಲಿದೆ ಸತ್ಯ!

Continue Reading

ದೇಶ

Mahua Moitra: ‘ಸೆಕ್ಸ್’‌ ನನ್ನ ಸಾಮರ್ಥ್ಯದ ಗುಟ್ಟು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!

Mahua Moitra: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಪಡೆದ ಆರೋಪ ಹೊತ್ತಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಅದು ಸೆಕ್ಸ್‌ ಎಂಬುದಾಗಿ ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Mahua Moitra
Koo

ಕೋಲ್ಕೊತಾ: ಕೇಂದ್ರ ಸರ್ಕಾರದ (Central Government) ವಿರುದ್ಧ ಸಂಸತ್ತಿನಲ್ಲಿ ಟೀಕಾಸ್ತ್ರ ಬಳಸುತ್ತಿದ್ದ, ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದಲ್ಲಿ ಸಿಲುಕಿರುವ ಟಿಎಂಸಿ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರೀಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ಟಿಎಂಸಿಯಿಂದ ಕೃಷ್ಣನಗರ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಮಹುವಾ ಮೊಯಿತ್ರಾ ಅವರು ಪತ್ರಕರ್ತರೊಬ್ಬರ ಪ್ರಶ್ನೆಗೆ, “ನನ್ನ ಸಾಮರ್ಥ್ಯದ ಗುಟ್ಟು ಎಂದರೆ ಸೆಕ್ಸ್”‌ ಎಂಬುದಾಗಿ ಹೇಳಿದ್ದಾರೆ ಎನ್ನಲಾದ ವಿಡಿಯೊ ಈಗ ಭಾರಿ ವೈರಲ್‌ (Viral Video) ಆಗಿದೆ. ಇದು ವಿವಾದಕ್ಕೂ ಕಾರಣವಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೃಷ್ಣನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಮನೆಗೆ, ಪ್ರತಿ ಗ್ರಾಮಕ್ಕೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಹೀಗೆ, ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿರುವ ಮಹುವಾ ಮೊಯಿತ್ರಾ ಅವರಿಗೆ ಪತ್ರಕರ್ತರೊಬ್ಬರು “ನಿಮ್ಮ ಸಾಮರ್ಥ್ಯದ ಗಟ್ಟೇನು” ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಹುವಾ ಮೊಯಿತ್ರಾ ಅವರು, “ಸೆಕ್ಸ್‌ ನನ್ನ ಸಾಮರ್ಥ್ಯದ ಗುಟ್ಟು” ಎಂದಿದ್ದಾರೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ವರದಿಗಾರನ ಸ್ಪಷ್ಟನೆ ಏನು?

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ಒಪ್ಪಿಸಿದ್ದಾರೆ. ಅವರು ಲಂಚವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಲಾಗಿನ್‌ ವಿವರ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು. ಅಲ್ಲದೆ ಇದು ಸಂಸದರಲ್ಲಿ ಸಾಮಾನ್ಯ ಅಭ್ಯಾಸ ಎಂದು ವಾದಿಸಿದ್ದರು. ಆರು ಸದಸ್ಯರ ಸಮಿತಿಯಲ್ಲಿ ನಾಲ್ಕು ಮಂದಿ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಮತ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಈಗಲೂ ಅವರ ವಿರುದ್ಧ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Mahua Moitra: ಹಣ ಅಕ್ರಮ ವರ್ಗಾವಣೆ; ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

Continue Reading

ವೈರಲ್ ನ್ಯೂಸ್

Viral News: ಬಿಕಿನಿ ಧರಿಸಿ ಬಸ್‌ ಏರಿದ ಮಹಿಳೆಯಿಂದ ಅಸಭ್ಯ ವರ್ತನೆ: ಬೆಚ್ಚಿಬಿದ್ದ ಪ್ರಯಾಣಿಕರು; ಇಲ್ಲಿದೆ ವಿಡಿಯೊ

Viral News: ಬಸ್‌ ಏರಿದ ಮಹಿಳೆಯೊಬ್ಬಳು ಅಸಭ್ಯವಾಗಿ ವರ್ತಿಸಿರುವ ಘಟನೆ ದಿಲ್ಲಿಯಲ್ಲಿ ನಡೆದಿದೆ. ಸದ್ಯ ಈ ವಿಡಿಯೊ ವೈರಲ್‌ ಆಗಿದೆ. ಬಿಕಿನಿ ಧರಿಸಿದ್ದ ಈ ಮಹಿಳೆ ದೆಹಲಿಯ ಡಿಟಿಸಿ ಬಸ್‌ಗೆ ಏರಿ ಅಶ್ಲೀಲವಾಗಿ ವರ್ತಿಸಿದ್ದಾಳೆ. ಬಳಿಕ ಪುರುಷರತ್ತ ಅಸಭ್ಯವಾಗಿ ಸನ್ನೆ ಮಾಡಿದ್ದಾಳೆ. ಆಕೆಯ ವರ್ತನೆಯಿಂದ ಬೇಸತ್ತ ಪ್ರಯಾಣಿಕನೊಬ್ಬ ಕುಳಿತಿದ್ದ ಸೀಟಿನಿಂದಲೇ ಎದ್ದು ಆಚೆ ಬರುತ್ತಾನೆ. ಅಲ್ಲದೆ ಆಕೆಯ ಮೈ ಪೂರ್ತಿ ಒದ್ದೆಯಾಗಿರುವುದೂ ವಿಡಿಯೊದಲ್ಲಿ ಕಂಡು ಬಂದಿದೆ. ಮಹಿಳೆಯ ಈ ವರ್ತನೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ.

VISTARANEWS.COM


on

Viral News
Koo

ನವದೆಹಲಿ: ಸಾರ್ವಜನಿಕ ಸ್ಥಳಗಳಲ್ಲಿ, ಸಾರಿಗೆಗಳಲ್ಲಿ ಮಹಿಳೆಯರ ವಿರುದ್ಧ ಪುರುಷರು ಅಸಭ್ಯವಾಗಿ ವರ್ತಿಸುವುದು, ಕಿರುಕುಳ ನೀಡುವುದನ್ನು ಕೇಳಿದ್ದೇವೆ, ಓದಿದ್ದೇವೆ. ಆದರೆ ಇಲ್ಲೊಂದು ಇದಕ್ಕೆ ತದ್ವಿರುದ್ಧ ಪ್ರಸಂಗ ನಡೆದಿದೆ. ಬಸ್‌ ಏರಿದ ಮಹಿಳೆಯೊಬ್ಬಳು ಅಸಭ್ಯವಾಗಿ ವರ್ತಿಸಿದ್ದಾಳೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral News).

ಬಿಕಿನಿ ಧರಿಸಿದ್ದ ಈ ಮಹಿಳೆ ದೆಹಲಿಯ ಡಿಟಿಸಿ ಬಸ್‌ಗೆ ಏರಿ ಅಶ್ಲೀಲವಾಗಿ ವರ್ತಿಸಿದ್ದಾಳೆ. ಬಳಿಕ ಪುರುಷರತ್ತ ಅಸಭ್ಯವಾಗಿ ಸನ್ನೆ ಮಾಡಿದ್ದಾಳೆ. ಆಕೆಯ ವರ್ತನೆಯಿಂದ ಬೇಸತ್ತ ಪ್ರಯಾಣಿಕನೊಬ್ಬ ಕುಳಿತಿದ್ದ ಸೀಟಿನಿಂದಲೇ ಎದ್ದು ಆಚೆ ಬರುತ್ತಾನೆ. ಅಲ್ಲದೆ ಆಕೆಯ ಮೈ ಪೂರ್ತಿ ಒದ್ದೆಯಾಗಿರುವುದೂ ವಿಡಿಯೊದಲ್ಲಿ ಕಂಡು ಬಂದಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನ ʼದಿಲ್ಲಿ ಬಸ್‌ʼ (Delhi Buses) ಎಂಬ ಖಾತೆಯಲ್ಲಿ ಈ ವಿಡಿಯೊವನ್ನು ಪೋಸ್ಟ್‌ ಮಾಡಲಾಗಿದೆ. ಈಗಾಗಲೇ 5 ಲಕ್ಷಕ್ಕಿಂತ ಅಧಿಕ ಮಂದಿ ಈ ವಿಡಿಯೊವನ್ನು ವೀಕ್ಷಿಸಿ ಮಹಿಳೆಯ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿ ಸಾರಿಗೆ ಕಾರ್ಪೋರೇಷನ್‌ಗೆ ಸೇರಿದ ಬಸ್‌ನಲ್ಲಿ ಈ ಘಟನೆ ನಡೆದಿದೆ. ʼʼಮಹಿಳೆ ಬಸ್ ಏರುತ್ತಿದ್ದಂತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾಳೆ. ಅಲ್ಲದೇ ಇತರ ಪ್ರಯಾಣಿಕರ ಜತೆ ವಾದ ಮಾಡುತ್ತಾಳೆ. ಈಕೆಯ ವರ್ತನೆ ಪ್ರಯಾಣಿಕರನ್ನು ಗೊಂದಲಕ್ಕೀಡು ಮಾಡಿದೆ. ಅನೇಕರು ಈಕೆಯ ವರ್ತನೆಯಿಂದ ಕಿರಿಕಿರಿಗೊಳಗಾಗಿದ್ದರು. ಇಂತಹ ವರ್ತನೆಗೆ ಕಡಿವಾಣ ಹಾಕಲೇ ಬೇಕಿದೆʼʼ ಎಂದು ನೆಟ್ಟಿಗರೊಬ್ಬರು ತಿಳಿಸಿದ್ದಾರೆ.

ಈ ರೀತಿ ಅಸಭ್ಯವಾಗಿ ವರ್ತಿಸಿದ ಮಹಿಳೆ ಯಾರು ಎಂಬುದು ತಿಳಿದು ಬಂದಿಲ್ಲ. ಅಧಿಕಾರಿಗಳು ಈಕೆಯ ಗುರುತನ್ನು ಕೆಲವು ಕಾರಣಗಳಿಗಾಗಿ ಬಹಿರಂಗಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಈ ವಿಡಿಯೊ ವೀಕ್ಷಿಸಿದ ಅನೇಕರು ಇಂತಹ ವರ್ತನೆಗಳನ್ನು ತಡೆಯುವ ಯಾವುದೇ ಕಾನೂನುಗಳು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದವರೆಗೆ ಇಂತಹ ಅಸಹ್ಯ ವರ್ತನೆ ದೆಹಲಿ ಮೆಟ್ರೋದಲ್ಲಿ ಕಂಡು ಬರುತ್ತಿತ್ತು. ಇದೀಗ ಈ ಚಾಳಿ ಡಿಟಿಸಿ ಬಸ್‌ಗೂ ವ್ಯಾಪಿಸಿದೆ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಪ್ರಯಾಣಿಸುತ್ತಿರುತ್ತಾರೆ. ಈ ವೇಳೆ ಇಂತಹ ವರ್ತನೆ ತೋರುವುದು ಮುಜುಗರ ಉಂಟು ಮಾಡುತ್ತದೆ ಎಂದು ನೆಟ್ಟಿಗರು ಹೇಳಿದ್ದಾರೆ.

ಇದನ್ನೂ ಓದಿ: Viral video: ಫುಟ್‌ರೆಸ್ಟ್‌ ಮೇಲೆ ಮಗು ನಿಲ್ಲಿಸಿಕೊಂಡು ಬೆಂಗಳೂರು ದಂಪತಿ ಬೈಕ್‌ ರೈಡ್‌! ಬೆಚ್ಚಿಬಿದ್ದ ನೆಟಿಜನ್ಸ್

ಈ ಮಧ್ಯೆ ಕೆಲವರು ಆಕೆಯ ಬೆಂಬಲಕ್ಕೂ ಧಾವಿಸಿದ್ದಾರೆ. “ಇದು ಅವಳ ದೇಹ ಮತ್ತು ಅವಳ ಆಯ್ಕೆ. ಅವಳನ್ನು ಒಂಟಿಯಾಗಿ ಬಿಡಿ” ಎಂದು ಒಬ್ಬರು ಹೇಳಿದ್ದಾರೆ. ಆಕೆ ಧರಿಸುವ ಬಟ್ಟೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ದೇಹವನ್ನು ಪ್ರದರ್ಶಿಸುವಂತಹ, ಪ್ರಚೋದನಕಾರಿ ಬಟ್ಟೆ ಧರಿಸುವುದು ಎಷ್ಟು ಸರಿ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಅವರದ್ದೆ ಮನೆಯಲ್ಲಿ ಹೇಗೆ ಬೇಕಾದರೂ ಇರಲಿ. ಹೊರಗೆ ಬಂದಾಗ ಇತರರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಅನೇಕರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ ಆಕೆಯ ವರ್ತನೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

Lok sabha election: 2019ರ ಅವಲೋಕನ; ಗರಿಷ್ಠ- ಕನಿಷ್ಠ ಮತಗಳ ಅಂತರದಿಂದ ಗೆದ್ದವರು

Lok Sabha Election: ದೇಶದಲ್ಲಿ 2024ರ ಲೋಕಸಭಾ ಚುನಾವಣೆ ನಾಳೆಯಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಯಾರು ಅತಿ ಹೆಚ್ಚು ಹಾಗೂ ಯಾರು ಅತೀ ಕಡಿಮೆ ಅಂತರದಿಂದ ಚುನಾವಣೆ ಗೆದ್ದರು ಎನ್ನುವ ಕಿರು ಮಾಹಿತಿ ಇಲ್ಲಿದೆ.

VISTARANEWS.COM


on

By

Lok sabha election 2024
Koo

ಬೆಂಗಳೂರು: ಲೋಕಸಭೆ ಚುನಾವಣೆ- 2024ರ (Lok sabha election-2024) ಹೊಸ್ತಿಲಲ್ಲಿ ಇರುವಾಗ ಕಳೆದ ಲೋಕಸಭಾ ಚುನಾವಣೆ ಫಲಿತಾಂಶದ (election result) ಕುರಿತು ಕುತೂಹಲ ಹೆಚ್ಚಾಗಿದೆ. 2019ರ ಚುನಾವಣೆಯಲ್ಲಿ ಪ್ರಧಾನಿ (PM) ನರೇಂದ್ರ ಮೋದಿ (narendra modi) ನೇತೃತ್ವದ ಬಿಜೆಪಿ (BJP) 303 ಸ್ಥಾನಗಳನ್ನು ಗೆದ್ದಿತ್ತು. 2014ರ ಚುನಾವಣೆಯಲ್ಲಿ 282 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ 2019ರಲ್ಲಿ 21 ಹೆಚ್ಚು ಸೀಟುಗಳು ಗೆದ್ದು ದಾಖಲೆ ಬರೆದಿತ್ತು.

ಕಳೆದ ಬಾರಿ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದಿತ್ತು. ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ದೇಶದಲ್ಲೇ ಯಾರು ಅತೀ ಹೆಚ್ಚು ಹಾಗೂ ಯಾರು ಅತೀ ಕಡಿಮೆ ಮತಗಳ ಅಂತರದಿಂದ ಗೆದ್ದರು ಎನ್ನುವ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಹೆಚ್ಚು ಅಂತರದಿಂದ ಗೆದ್ದವರು


ಸಿ.ಆರ್. ಪಾಟೀಲ್

ಗುಜರಾತ್‌ನ ನವಸಾರಿ ಕ್ಷೇತ್ರದಿಂದ ಬಿಜೆಪಿ ನಾಯಕ ಸಿ.ಆರ್. ಪಾಟೀಲ್ 6.89 ಲಕ್ಷ ಮತಗಳಿಂದ ಗೆಲುವು ದಾಖಲಿಸಿದ್ದರು. ಪಾಟೀಲ್ ಅವರು 9,72,739 ಮತಗಳನ್ನು ಗಳಿಸಿ 6.89 ಲಕ್ಷ ಮತಗಳ ಅಂತರದಿಂದ ಪಟೇಲ್ ಧರ್ಮೇಶಭಾಯ್ ಭೀಮಭಾಯ್ ಅವರನ್ನು ಸೋಲಿಸಿದ್ದರು. ಧರ್ಮೇಶಭಾಯ್ ಅವರು 2,83,071 ಮತಗಳನ್ನು ಗಳಿಸಿದ್ದರು.

ಇದನ್ನೂ ಓದಿ: Lok Sabha Election 2024: ಬೇರೆಯವರು ನಮ್ಮ ಮತ ಚಲಾಯಿಸಿದರೆ ಏನು ಮಾಡಬಹುದು?


ಅಮಿತ್ ಶಾ

ಪ್ರಸ್ತುತ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಶಾ ಅವರು ಕಳೆದ ಬಾರಿ ಗಾಂಧಿನಗರದಲ್ಲಿ 5.55 ಲಕ್ಷ ಮತಗಳಿಂದ ಗೆಲುವು ದಾಖಲಿಸಿದ್ದರು.


ದರ್ಶನಾ ಜರ್ದೋಶ್

ಸೂರತ್ ಬಿಜೆಪಿ ಅಭ್ಯರ್ಥಿ ದರ್ಶನಾ ಜರ್ದೋಶ್ 5.47 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದು, ಅವರು ಒಟ್ಟು 7.95 ಲಕ್ಷ ಮತಗಳನ್ನು ಗಳಿಸಿದ್ದರು. ಇವರ ವಿರುದ್ಧ ಕಣಕ್ಕೆ ಇಳಿದಿದ್ದ ಕಾಂಗ್ರೆಸ್ ಪಕ್ಷದ ಅಶೋಕ್ ಪಟೇಲ್ ಅವರು ಕೇವಲ 2.47 ಲಕ್ಷ ಮತಗಳನ್ನು ಗಳಿಸಿದ್ದರು.


ರಂಜನ್ ಭಟ್

2014 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಕ್ಷೇತ್ರವಾಗಿದ್ದ ವಡೋದರದಿಂದ ಬಿಜೆಪಿಯ ರಂಜನ್ ಭಟ್ 5.90 ಲಕ್ಷ ಮತಗಳಿಂದ ಗೆಲುವು ದಾಖಲಿಸಿದ್ದರು.


ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ 4.8 ಲಕ್ಷ ಮತಗಳ ಅಂತರದಿಂದ ಗೆದಿದ್ದರು. ಇವರ ವಿರುದ್ಧ ಕಣದಲ್ಲಿದ್ದ ಸಮಾಜವಾದಿ ಪಕ್ಷದ ಶಾಲಿನಿ ಯಾದವ್ 1.95 ಲಕ್ಷ ಮತಗಳನ್ನು ಗಳಿಸಿದ್ದರು.

ಕಡಿಮೆ ಅಂತರದಿಂದ ಗೆದ್ದವರು

ಭೋಲಾನಾಥ್

ಉತ್ತರ ಪ್ರದೇಶದ ಮಚ್ಲಿಶಹರ್ ಲೋಕಸಭಾ ಅಭ್ಯರ್ಥಿ ಭೋಲಾನಾಥ್ ಕೇವಲ 181 ಮತಗಳಿಂದ ಎದುರಾಳಿಯನ್ನು ಸೋಲಿಸಿದರು. ಭೋಲಾನಾಥ್ 4,88,397 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಬಹುಜನ ಸಮಾಜ ಪಕ್ಷದ ತ್ರಿಭುವನ್ ರಾಮ್ 4,88,216 ಮತಗಳನ್ನು ಗಳಿಸಿದ್ದರು.

ಪಿ.ಪಿ. ಮೊಹಮ್ಮದ್ ಫೈಜಲ್

ರಾಷ್ಟ್ರದ ಅತ್ಯಂತ ಚಿಕ್ಕ ಕ್ಷೇತ್ರ ಲಕ್ಷದ್ವೀಪದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪಿ.ಪಿ. ಮೊಹಮ್ಮದ್ ಫೈಜಲ್ ಕೇವಲ 823 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

ಕುಲದೀಪ್ ರಾಯ್ ಶರ್ಮಾ

ಅಂಡಮಾನ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಕುಲದೀಪ್ ರಾಯ್ ಶರ್ಮಾ ಕೇವಲ 1,407 ಮತಗಳಿಂದ ಗೆಲುವು ದಾಖಲಿಸಿದ್ದರು.

ಅಪರೂಪಾ ಪೊದ್ದಾರ್

ಪಶ್ಚಿಮ ಬಂಗಾಳದ ಅರಾಂಬಾಗ್ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್‌ನ ಅಪರೂಪಾ ಪೊದ್ದಾರ್ ಅವರು ಬಿಜೆಪಿಯ ತಪನ್ ಕುಮಾರ್ ರೇ ವಿರುದ್ಧ 1,142 ಮತಗಳಿಂದ ಜಯಗಳಿಸಿದ್ದರು.

ಇಮ್ತಿಯಾಜ್ ಜಲೀಲ್

ಮಹಾರಾಷ್ಟ್ರದ ಔರಂಗಾಬಾದ್ ಕ್ಷೇತ್ರದಲ್ಲಿ ಕಣಕ್ಕೇ ಇಳಿದಿದ್ದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್‌ನ ಇಮ್ತಿಯಾಜ್ ಜಲೀಲ್ ಅವರು ಚಂದ್ರಕಾಂತ್ ಖೈರೆ ವಿರುದ್ಧ 1,142 ಮತಗಳ ಅಂತರದಿಂದ ಗೆದ್ದಿದ್ದರು.

Continue Reading
Advertisement
Kodagu Gowda Premier League Cricket Tournament inauguration
ಕ್ರೀಡೆ13 mins ago

Kodagu News: ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Bhasha Utsav 2024 programme on 24th April
ಬೆಂಗಳೂರು16 mins ago

Bengaluru News: ಬೆಂಗಳೂರಿನಲ್ಲಿ ಏ. 24ರಂದು ಭಾಷಾ ಉತ್ಸವ

Uttara Kannada Lok Sabha Constituency BJP candidate Vishweshwara Hegade Kageri election campaign in Honnavara
ಉತ್ತರ ಕನ್ನಡ20 mins ago

Lok Sabha Election 2024: ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ ಮನವಿ

Bangalore Rural Lok Sabha Constituency Congress candidate DK Suresh fans prayed in sri Chamundeshwari hill
ಮೈಸೂರು23 mins ago

Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು

Lok Sabha Elections-2024
Lok Sabha Election 202427 mins ago

Lok sabha election: 2019ರಲ್ಲಿ 77 ಕ್ಷೇತ್ರಗಳಲ್ಲಿ ಪ್ರಯಾಸದ ಗೆಲುವು ಕಂಡಿದ್ದ ಬಿಜೆಪಿ; ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ

Sweet potatoes have the ability to control diabetes and prevent cancer
ಆರೋಗ್ಯ27 mins ago

Sweet Potatoes: ಗೆಣಸಿಗೆ ಮಧುಮೇಹ ನಿಯಂತ್ರಿಸುವ, ಕ್ಯಾನ್ಸರ್ ತಡೆಯುವ ಸಾಮರ್ಥ್ಯವಿದೆ!

Fact Check
Fact Check39 mins ago

Fact Check: ಮತದಾನ ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ? ವಾಸ್ತವ ಹೀಗಿದೆ

Paris Olympics 2024
ಕ್ರೀಡೆ51 mins ago

Paris Olympics 2024: ಒಲಿಂಪಿಕ್ಸ್​ಗಾಗಿ ಸರ್ಕಾರಿ ಕಟ್ಟಡದಿಂದ ನೂರಾರು ವಲಸಿಗರ ತೆರವು

Fraud Case
ಬೆಂಗಳೂರು1 hour ago

Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

Food poisoning 45 people fall ill after consuming drink buttermilk
ತುಮಕೂರು1 hour ago

Food poisoning: ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌