New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ? - Vistara News

ದೇಶ

New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?

New Parliament Building: ಹೊಸ ಸಂಸತ್ ಭವನದ ಉದ್ಘಾಟನೆಯು ಮೇ 28ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ. 20 ಪ್ರತಿಪಕ್ಷಗಳು ಈ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.

VISTARANEWS.COM


on

inauguration of New parliament building and Check details
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹೊಸ ಸಂಸತ್ ಭವನ ಉದ್ಘಾಟನೆಗೆ (New Parliament Building:) ಕ್ಷಣಗಣನೆ ಆರಂಭವಾಗಿದೆ. ಲೋಕಸಭಾ ಸ್ಫೀಕರ್ ಓಂ ಬಿರ್ಲಾ (Speaker OM Birla) ಹಾಗೂ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈ ನೂತನ ಸಂಸತ್ ಭವನವನ್ನು ಇಂದು (ಮೇ 28ರಂದು)ಉದ್ಘಾಟನೆ ಮಾಡಲಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮವು ಎರಡು ಹಂತದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಮೊದಲನೆ ಹಂತದಲ್ಲಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿಯ ಮೇಲಾವರಣದೊಳಗೆ ನಡೆಯುವ ಧಾರ್ಮಿಕ ಕ್ರಿಯೆಯೊಂದಿಗೆ ಸಮಾರಂಭವು ಪ್ರಾರಂಭವಾಗುತ್ತದೆ. ಈ ವೇಳೆ, ಪ್ರಧಾನಿ ಮೋದಿ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಲಿದ್ದಾರೆ.

ಬಳಿಕ ಲೋಕಸಭೆ ಮತ್ತು ರಾಜ್ಯಸಭೆ ಆವರಣಗಳನ್ನು ಗಣ್ಯರು ಪರಿಶೀಲಿಸಿದ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಲೋಕಸಭೆ ಸ್ಪೀಕರ್ ಪೀಠದ ಮುಂದೆ ಪವಿತ್ರ ರಾಜದಂಡವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಪ್ರತಿಷ್ಠಾಪನೆಯನ್ನು ತಮಿಳುನಾಡಿನಿಂದ ಆಗಮಿಸಿದ ಪುರೋಹಿತರೇ ಮಾಡಲಿದ್ದು, ರಾಜದಂಡವನ್ನು ವಿನ್ಯಾಸ ಮಾಡಿದ ಮೂಲ ಅಕ್ಕಸಾಲಿಗ ಕೂಡ ಈ ವೇಳೆ ಹಾಜರು ಇರಲಿದ್ದಾರೆ. ಮೊದಲನೆ ಹಂತದ ಈ ಕಾರ್ಯಕ್ರಮವು ಬೆಳಗ್ಗೆ 9.30ಕ್ಕೆ ಮುಕ್ತಾಯವಾಗಲಿದೆ.

ಮಧ್ಯಾಹ್ನದ ವೇಳೆ ಎರಡನೇ ಹಂತದ ಕಾರ್ಯಕ್ರಮಗಳು ನಡೆಯಲಿವೆ. ಈ ವೇಳೆ ನಾಯಕರು ಮಾತನಾಡಲಿದ್ದಾರೆ. ಮೊದಲಿಗೆ ರಾಜ್ಯಸಭೆಯ ಡೆಪ್ಯುಟಿ ಚೇರ್ಮನ್ ಹರಿವಂಶ್ ಅವರು, ರಾಜ್ಯಸಭಾ ಚೇರ್ಮನ್ ಆಗಿರುವ ಉಪರಾಷ್ಟ್ರಪತಿಗಳ ಲಿಖಿತ ಸಂದೇಶವನ್ನು ಓದಲಿದ್ದಾರೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳುಹಿಸಿರುವ ಲಿಖಿತ ಸಂದೇಶವನ್ನೂ ಓದಲಾಗುತ್ತದೆ.

ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆ ಪ್ರಧಾನ ಕಾರ್ಯದರ್ಶಿ ಅವರು ವಂದನಾರ್ಪಣೆ ಮಾಡುವುದರೊಂದಿಗೆ ಉದ್ಘಾಟನಾ ಕಾರ್ಯಕ್ರಮವು ಸಂಪನ್ನಗೊಳ್ಳಲಿದೆ.

ಇದನ್ನೂ ಓದಿ: New Parliament: ಹೊಸ ಸಂಸತ್ ಭವನ ಉದ್ಘಾಟನೆ; ಕಾರ್ಯಕ್ರಮ ಬಹಿಷ್ಕರಿಸಿದ ಮತ್ತು ಭಾಗವಹಿಸುವ ಪಕ್ಷಗಳ ಪಟ್ಟಿ ಇಲ್ಲಿದೆ…

ಈ ಕಾರ್ಯಕ್ರಮಕ್ಕೆ ಹೊಸ ಸಂಸತ್ ಭವನದ ಮುಖ್ಯ ವಿನ್ಯಾಸಕ ಬಿಮಲ್ ಪಟೇಲ್, ಉದ್ಯಮಿ ರತನ್ ಟಾಟಾ ಸೇರಿದಂತೆ ಸಿನಿರಂಗದ ಸ್ಟಾರ್‌ಗಳು, ಕ್ರೀಡಾ ವ್ಯಕ್ತಿಗಳು ಸೇರಿದಂತೆ ಅನೇಕ ಗಣ್ಯರು ಹಾಜರಿರಲಿದ್ದಾರೆ. 20 ರಾಜಕೀಯ ಪಕ್ಷಗಳು ಈ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ ನಡುವೆಯೂ ಒಟ್ಟು 25 ರಾಜಕೀಯ ಪಕ್ಷಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಮ್ಮ ಒಪ್ಪಿಗೆ ನೀಡಿವೆ.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

CJI Chandrachud: ಹೊಸ ಕಾನೂನುಗಳ ಜಾರಿ ಐತಿಹಾಸಿಕ; ಸಿಜೆಐ ಡಿ.ವೈ.ಚಂದ್ರಚೂಡ್‌ ಬಣ್ಣನೆ

CJI Chandrachud: ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಈ ಕಾನೂನುಗಳ ಕುರಿತು ಸಿಜೆಐ ಡಿ.ವೈ.ಚಂದ್ರಚೂಡ್‌ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

VISTARANEWS.COM


on

CJI Chandrachud
Koo

ನವದೆಹಲಿ: ದೇಶದಲ್ಲಿ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳ (Criminal Laws) ಸಂಪೂರ್ಣ ತಿದ್ದುಪಡಿ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೊಳಿಸಲಾಗಿದೆ. ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ. ಇದರ ಬೆನ್ನಲ್ಲೇ, ಹೊಸ ಕಾನೂನುಗಳ ಜಾರಿಯ ಕುರಿತು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿ.ವೈ.ಚಂದ್ರಚೂಡ್‌ (CJI Chandrachud) ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವು ಬದಲಾಗುತ್ತಿದೆ ಎಂಬುದಕ್ಕೆ ಹೊಸ ಕಾನೂನುಗಳ ಜಾರಿಯೇ ಸಾಕ್ಷಿಯಾಗಿದೆ. ಭಾರತ ಹೊಸ ಹಾದಿಯತ್ತ ಸಾಗುತ್ತಿದೆ. ಆಧುನಿಕ ಭಾರತದ ಸವಾಲುಗಳನ್ನು ಎದುರಿಸಲು ಹಾಗೂ ಭವಿಷ್ಯದ ದೃಷ್ಟಿಯಿಂದ ಕಾನೂನುಗಳ ಬದಲಾವಣೆಯು ಪ್ರಮುಖವಾಗಿದೆ. ಇದರಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಆಗುತ್ತದೆ. ಹಾಗಾಗಿ, ಹೊಸ ಕಾನೂನುಗಳ ಜಾರಿಯು ಭಾರತವು ಬದಲಾಗುತ್ತಿದೆ ಎಂಬುದಕ್ಕೆ ಕುರುಹು” ಎಂದು ಹೊಸ ಕಾನೂನುಗಳನ್ನು ಶ್ಲಾಘಿಸಿದರು.

“ದೇಶದ ಕಾನೂನು ವ್ಯವಸ್ಥೆ, ಕ್ರಿಮಿನಲ್‌ ಕಾನೂನುಗಳ ಬದಲಾವಣೆಯು ಅತ್ಯಗತ್ಯವಾಗಿತ್ತು. ಇದರ ದಿಸೆಯಲ್ಲಿ ಹೊಸ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದು, ಮಹತ್ವದ ಬದಲಾವಣೆ ಮಾಡುತ್ತಿರುವುದು ಸಂತಸವಾಗಿದೆ. ಅದರಲ್ಲೂ, ಸಂತ್ರಸ್ತರನ್ನು ರಕ್ಷಿಸಿ, ಅಪರಾಧ ಎಸಗುವವರ ವಿರುದ್ಧ ಕೂಲಂಕಷ ತನಿಖೆಗೆ ಹೊಸ ಕಾನೂನುಗಳು ಸಹಕಾರಿಯಾಗಿವೆ” ಎಂದು ಬಣ್ಣಿಸಿದರು.

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ.

ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

ದೇಶದ್ರೋಹ ಕಾನೂನು ಬದಲು

ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದ ದೇಶದ್ರೋಹದ ಕಾನೂನು ನೂತನ ಕ್ರಿಮಿನಲ್‌ ಕಾನೂನಿನಲ್ಲಿ ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ದೇಶದ್ರೋಹ ಕಾನೂನಿನಲ್ಲಿ ಬಂಧಿತರಾದವರಿಗೆ ಮೂರು ವರ್ಷದಿಂದ ಜೀವಾವಧಿ ಶಿಕ್ಷೆ ನೀಡಬಹುದಾಗಿದ್ದು, ಈ ಕಾನೂನು ರದ್ದುಗೊಳಿಸಲಾಗುತ್ತದೆ ಎಂದು ಹೇಳಿದರು. ಇದರ ಬದಲಾಗಿ ಹೊಸ ನಿಯಮಗಳು ಜಾರಿಗೆ ಬರಲಿವೆ ಎಂದು ಕೂಡ ತಿಳಿಸಿದರು.

ಅತ್ಯಾಚಾರಿಗಳಿಗೆ 20 ವರ್ಷ ಜೈಲು

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ನೂತನ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. “ಹೊಸ ಕಾನೂನುಗಳ ಅಡಿಯಲ್ಲಿ ಅತ್ಯಾಚಾರಿಗಳಿಗೆ ಗರಿಷ್ಠ 20 ವರ್ಷ ಅಥವಾ ಅವರು ಜೀವಿತಾವಧಿವರೆಗೆ ಜೈಲಿನಲ್ಲಿ ಕಾಲ ಕಳೆಯುವ ರೀತಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸುವ, ಅತ್ಯಾಚಾರ ಸಂತ್ರಸ್ತೆಯರ ಮಾಹಿತಿ ಬಹಿರಂಗಪಡಿಸಿದವರಿಗೂ ಶಿಕ್ಷೆ ವಿಧಿಸುವ ಕಾನೂನು ಇರಲಿದೆ” ಎಂದು ಅಮಿತ್‌ ಶಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Parliament Session: ಅಪರಾಧ ಎಸಗಿ ದೇಶ ಬಿಟ್ಟು ಹೋದವರಿಗೆ ಇನ್ನಿಲ್ಲ ನೆಮ್ಮದಿ; ಬರ್ತಿದೆ ಹೊಸ ಕಾನೂನು!

Continue Reading

ವಿದೇಶ

Elon Musk: ಮೋದಿ ಭೇಟಿಗಾಗಿ ಈ ತಿಂಗಳು ಭಾರತಕ್ಕೆ ಬರಲ್ಲ ಎಲಾನ್‌ ಮಸ್ಕ್;‌ ಕೊಟ್ಟ ಕಾರಣ ಇದು

Elon Musk: ಭಾರತಕ್ಕೆ ಎಲಾನ್‌ ಮಸ್ಕ್‌ ಅವರು ಏಪ್ರಿಲ್‌ 21 ಹಾಗೂ 22ರಂದು ಆಗಮಿಸಬೇಕಿತ್ತು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಕೊನೆಯಲ್ಲಿ ಕ್ಷಣದಲ್ಲಿ ಅವರು ಭಾರತದ ಭೇಟಿಯನ್ನು ಮುಂದೂಡಿದ್ದಾರೆ. ಆದರೆ, ಇದೇ ವರ್ಷ ಭಾರತಕ್ಕೆ ಭೇಟಿ ನೀಡುವುದು ಖಚಿತ ಎಂಬುದಾಗಿ ಅವರು ಹೇಳಿದ್ದಾರೆ.

VISTARANEWS.COM


on

Elon Musk
Koo

ವಾಷಿಂಗ್ಟನ್‌: ಎಲೆಕ್ಟ್ರಾನಿಕ್‌ ಕಾರುಗಳ ಉತ್ಪಾದನೆಯ ದೈತ್ಯ ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ (Elon Musk) ಅವರು ಭಾರತಕ್ಕೆ ಭೇಟಿ ನೀಡುವುದನ್ನು ಮುಂದೂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿಗಾಗಿ ಭಾರತಕ್ಕೆ ಎಲಾನ್‌ ಮಸ್ಕ್‌ ಅವರು ಏಪ್ರಿಲ್‌ 21 ಹಾಗೂ 22ರಂದು ಆಗಮಿಸಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಎಲಾನ್‌ ಮಸ್ಕ್‌ ಅವರು ಭಾರತದ ಭೇಟಿಯನ್ನು ಮುಂದೂಡಿಕೆ ಮಾಡಿದ್ದಾರೆ.

ಭಾರತದ ಭೇಟಿಯನ್ನು ಮುಂದೂಡಿರುವ ಕುರಿತು ಎಲಾನ್‌ ಮಸ್ಕ್‌ ಅವರೇ ಮಾಹಿತಿ ನೀಡಿದ್ದಾರೆ. “ಟೆಸ್ಲಾ ಕಂಪನಿಯ ಅತಿ ಹೆಚ್ಚು ಜವಾಬ್ದಾರಿಗಳಿರುವ ಕಾರಣ ಭಾರತದ ಭೇಟಿಯನ್ನು ಮುಂದೂಡಲು ಬೇಸರವಾಗುತ್ತಿದೆ. ಆದರೆ, ಇದೇ ವರ್ಷದಲ್ಲಿಯೇ ಭಾರತಕ್ಕೆ ನಾನು ಭೇಟಿ ನೀಡುವುದು ನಿಶ್ಚಿತ” ಎಂದು ಎಲಾನ್‌ ಮಸ್ಕ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

ಎಲಾನ್‌ ಮಸ್ಕ್‌ ಅವರು ಅಮೆರಿಕದಲ್ಲಿ ಏಪ್ರಿಲ್‌ 23ರಂದು ನಡೆಯುವ ಮಹತ್ವದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಅವರು ಟೆಸ್ಲಾ ಕಂಪನಿಯ ಮೊದಲ ತ್ರೈಮಾಸಿದಲ್ಲಿ ನಡೆಸಿದ ವಹಿವಾಟು ಕುರಿತು ಮಾಹಿತಿ ಒದಗಿಸಲಿದ್ದಾರೆ. ಇದರ ಜತೆಗೆ ಹಲವು ಸಭೆಗಳು ಕೂಡ ಇರುವುದರಿಂದ ಅವರು ಭಾರತದ ಭೇಟಿಯನ್ನು ಮುಂದೂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೋದಿ ಭೇಟಿಯ ಅಜೆಂಡಾ ಏನು?

ಭಾರತದಲ್ಲಿ ಟೆಸ್ಲಾ ಕಾರು ಉತ್ಪಾದನೆ ಘಟಕ ಸ್ಥಾಪಿಸಲು ಟೆಸ್ಲಾ ಕಂಪನಿಯು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಲೇ ಇದೆ. ಭಾರತದ ಷರತ್ತುಗಳು, ಟೆಸ್ಲಾ ಘಟಕ ಸ್ಥಾಪಿಸಲು ಮಸ್ಕ್‌ ಹಾಕಿಕೊಂಡಿರುವ ನಿಯಮಗಳಿಂದಾಗಿ ಘಟಕ ಸ್ಥಾಪನೆ ಮುಂದೂಡಿಕೆಯಾಗುತ್ತಲೇ ಇದೆ. ಆದರೆ, ಈ ಬಾರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಮೂಲಕ ಘಟಕ ಸ್ಥಾಪನೆಯ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದೇ ಹೇಳಲಾಗುತ್ತಿದೆ. ಹಾಗಾಗಿ, ಎಲಾನ್‌ ಮಸ್ಕ್‌ ಅವರು ಭಾರತಕ್ಕೆ ಭೇಟಿ ನೀಡುರುವುದು ಮಹತ್ವ ಪಡೆದಿದೆ.

ಎಲಾನ್‌ ಮಸ್ಕ್‌ ಅವರು ಕೆಲ ತಿಂಗಳ ಹಿಂದಷ್ಟೇ ಭಾರತದ ಪರವಾಗಿ ಮಾತನಾಡಿದ್ದರು. “ವಿಶ್ವಸಂಸ್ಥೆಯು ಬದಲಾವಣೆ ತರಲು ಹಿಂಜರಿಯುತ್ತಿದೆ. ವಿಶ್ವಸಂಸ್ಥೆಯ ಕಾಯಂ ಸದಸ್ಯತ್ವ ಪಡೆದಿರುವ ಬಲಿಷ್ಠ ರಾಷ್ಟ್ರಗಳು ತಾವು ಹೊಂದಿರುವ ಹೆಚ್ಚಿನ ಅಧಿಕಾರವನ್ನು ಬಳಸಿಕೊಳ್ಳಲು ಬಯಸುತ್ತಿವೆ. ಇದೇ ಕಾರಣಕ್ಕಾಗಿ ಆಫ್ರಿಕಾ ಹಾಗೂ ಭಾರತಕ್ಕೆ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಕ್ಕಿಲ್ಲ. ಹಾಗಾಗಿ, ವಿಶ್ವಸಂಸ್ಥೆಯು ನಿಯಮಗಳನ್ನು ಬದಲಿಸಬೇಕು. ಜಗತ್ತಿನಲ್ಲೇ ಭಾರತ ಜನಪ್ರಿಯ ದೇಶವಾದರೂ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗದಿರುವುದು ಅಸಂಬದ್ಧವಾಗಿದೆ. ಭಾರತ ಹಾಗೂ ಆಫ್ರಿಕಾಗೆ ಕಾಯಂ ಸದಸ್ಯತ್ವ ನೀಡಬೇಕು” ಎಂದು ಎಲಾನ್‌ ಮಸ್ಕ್‌ ಅವರು ಕಳೆದ ಜನವರಿಯಲ್ಲಿ ಆಗ್ರಹಿಸಿದ್ದರು.

ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

Continue Reading

ಪ್ರಮುಖ ಸುದ್ದಿ

Surabhi Jain : 30 ವರ್ಷಕ್ಕೆ ಮೃತಪಟ್ಟ ಫ್ಯಾಷನ್ ಐಕಾನ್​ ಸುರಭಿ ಜೈನ್

VISTARANEWS.COM


on

Surabhi Jain
Koo

ನವದೆಹಲಿ: ಜನಪ್ರಿಯ ಫ್ಯಾಷನ್ ಐಕಾನ್​ ಸುರಭಿ ಜೈನ್ ಕ್ಯಾನ್ಸರ್​ನೊಂದಿಗಿನ ದೀರ್ಘಕಾಲದ ಹೋರಾಟದ ನಂತರ ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬವು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಇನ್​ಸ್ಟಾಗ್ರಾಮ್​ನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರೆ. ಜೈನ್ ಅಂಡಾಶಯದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದರು. ಎಂಟು ವಾರಗಳ ಹಿಂದೆ ಇನ್ಸ್ಟಾಗ್ರಾಮ್​ನಲ್ಲಿ ಹಾಕಿದ ತನ್ನ ಕೊನೆಯ ಪೋಸ್ಟ್​ನಲ್ಲಿ ಸುರಭಿ ಜೈನ್ ಆಸ್ಪತ್ರೆಯಲ್ಲಿ ತನ್ನ ಚಿತ್ರ ಹಂಚಿಕೊಂಡಿದ್ದರು.

“ನನ್ನ ಆರೋಗ್ಯದ ಬಗ್ಗೆ ನಾನು ನಿಮಗೆ ಅಪ್ಡೇಟ್ ಮಾಡಿಲ್ಲ ಎಂದು ನನಗೆ ತಿಳಿದಿದೆ. ಅದರ ಬಗ್ಗೆ ನಾನು ಪ್ರತಿದಿನ ಪಡೆಯುತ್ತಿರುವ ಸಂದೇಶಗಳ ಸಂಖ್ಯೆಯನ್ನು ನೋಡಿದರೆ ಭಯವಾಗುತ್ತಿದೆ. ವಿಷಯಗಳು ಉತ್ತಮವಾಗಿ ನಡೆಯುತ್ತಿಲ್ಲ. ಆದ್ದರಿಂದ ಹಂಚಿಕೊಳ್ಳಲು ಹೆಚ್ಚು ಇಲ್ಲ. ಕಳೆದ 2 ತಿಂಗಳುಗಳಲ್ಲಿ ನಾನು ಹೆಚ್ಚಾಗಿ ಆಸ್ಪತ್ರೆಯಲ್ಲಿ ಕಳೆದಿದ್ದೇನೆ. ಚಿಕಿತ್ಸೆ ನಡೆಯುತ್ತಿದೆ. ಕಷ್ಟ ಮತ್ತು ಇದೆಲ್ಲವೂ ಕೊನೆಗೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದು ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

ಅವರ ಸಾವಿನ ಸುದ್ದಿಯನ್ನು ಅವರ ಕುಟುಂಬವು ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದೆ. ಅವರು ಗುರುವಾರ ನಿಧನರಾದರು ಮತ್ತು ಏಪ್ರಿಲ್ 19 ರಂದು ಗಾಜಿಯಾಬಾದ್​ನಲ್ಲಿ ಅಂತ್ಯಕ್ರಿಯೆ ಮಾಡಲಾಯಿತು ಎಂದು ಅವರು ಹೇಳಿದರು.

ಸುರಭಿ ಜೈನ್ ಅವರಿಗೆ ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿರುವುದು ಇದು ಎರಡನೇ ಬಾರಿ. 27 ನೇ ವಯಸ್ಸಿನಲ್ಲಿ, ಅವರು ತಮ್ಮ ಮೊದಲ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. “ಶಸ್ತ್ರಚಿಕಿತ್ಸೆಯಿಂದ ನನಗೆ 149 ಹೊಲಿಗೆಗಳು ಮತ್ತು ಸಾಕಷ್ಟು ನೋವು ಕಾಣಿಸಿಕೊಂಡಿತು. ನಾನು ಹೆಚ್ಚು ಚಟವಟಿಕೆಯಿಂದ ಇರಲು ಹಾಗೂ ನಗು ಮೂಡಿಸಲು ಶ್ರಮ ವಹಿಸುತ್ತಿದ್ದೇನೆ ಎಂದು ಅವರು ಆ ವೇಳೆ ಬರೆದುಕೊಂಡಿದ್ದರು.

ಅಂಡಾಶಯದ ಕ್ಯಾನ್ಸರ್ ಅಂಡಾಶಯಗಳಲ್ಲಿ ಹುಟ್ಟುತ್ತದೆ ಮತ್ತು ಇದು ಮಹಿಳೆಯರಿಗೆ ಗಮನಾರ್ಹ ಆರೋಗ್ಯ ಕಾಳಜಿಯಾಗಿದೆ. ಈ ರೋಗವು ಅಂಡಾಶಯಗಳಲ್ಲಿ ಮಾರಣಾಂತಿಕ ಗೆಡ್ಡೆಯಿಂದ ಆರಂಭವಾಗುತ್ತದೆ. ಇದು ಆರೋಗ್ಯಕರ ಅಂಗಾಂಶಗಳನ್ನು ನಾಶಪಡಿಸುತ್ತದೆ. ಇದು ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ನಂತರ ಭಾರತದಲ್ಲಿ ಮಹಿಳೆಯರಲ್ಲಿ ಮೂರನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ.

Continue Reading

ಪ್ರಮುಖ ಸುದ್ದಿ

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

VISTARANEWS.COM


on

India Economy
Koo

ಬೆಂಗಳೂರು: ಐಎಂಎಫ್​​ನ ಏಷ್ಯಾ ಮತ್ತು ಪೆಸಿಫಿಕ್ (ಎಪಿಎಸಿ) ಇಲಾಖೆಯ ನಿರ್ದೇಶಕ ಕೃಷ್ಣ ಶ್ರೀನಿವಾಸನ್ ಅವರ ಪ್ರಕಾರ, ಭಾರತದ ಆರ್ಥಿಕತೆ (Indian Economy) ಚೀನಾವನ್ನು ಹಿಂದಿಕ್ಕಿ ವೇಗವಾಗಿ ಬೆಳೆಯುತ್ತಿದ್ದು, ಗಾತ್ರದಲ್ಲಿ ಭಾರತದ ಆರ್ಥಿಕತೆ ಚಿಕ್ಕದಾಗಿದ್ದರೂ ಸಾಗುತ್ತಿರುವ ವೇಗ ಹೆಚ್ಚಿದೆ ಎಂಬುದಾಗಿ ವಿವರಿಸಿದ್ದಾರೆ. ಜತೆಗೆ ಇದು ನಿರೀಕ್ಷಿತ ಹಾಗೂ ಅಚ್ಚರಿಯ ಸಂಗತಿಯೇನೂ ಅಲ್ಲ ಎಂದು ಹೇಳಿದ್ದಾರೆ.

“ಚೀನಾದ ಆರ್ಥಿಕತೆಯ ಗಾತ್ರ ಭಾರತಕ್ಕಿಂತ ನಾಲ್ಕು ಪಟ್ಟು ದೊಡ್ಡದಾಗಿದೆ. ಆದರೆ ಭಾರತವು ಇಂದು ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದ್ದರೆ. ಇದು ಆಶ್ಚರ್ಯಕರವಲ್ಲ” ಎಂದು ಶ್ರೀನಿವಾಸನ್ ಎಎನ್ಐ ಜತೆ ಮಾತನಾಡುತ್ತಾ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಕೃಷ್ಣ ಶ್ರೀನಿವಾಸನ್ ಅವರು ಭಾರತದ ಆರ್ಥಿಕ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದು, 2024-25ರ ಹಣಕಾಸು ವರ್ಷದಲ್ಲಿ ಭಾರತದ ಯೋಜಿತ ಬೆಳವಣಿಗೆಯ ದರ 6.8% ಎಂದು ನಿರೀಕ್ಷೆ ಮಾಡಿದ್ದಾರೆ.

ಇದನ್ನೂ ಓದಿ: China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

ಕೋವಿಡ್ -19 ಸಾಂಕ್ರಾಮಿಕ ರೋಗ, ರಷ್ಯಾ-ಉಕ್ರೇನ್ ಯುದ್ಧ ಮತ್ತು ಗಲ್ಫ್ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನತೆ ಸೇರಿದಂತೆ ಅನೇಕ ಆಘಾತಗಳನ್ನು ಪರಿಹರಿಸು ಭಾರತದ ಸಾಮರ್ಥ್ಯದ ಬಗ್ಗೆ ಮಾತನಾಡಿದ ಶ್ರೀನಿವಾಸನ್, ದೇಶದ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು. “ಇತ್ತೀಚಿನ ದಿನಗಳಲ್ಲಿ ನಾವು ನೋಡಿದ ಅನೇಕ ಆಘಾತಗಳನ್ನು ಭಾರತವು ಯಶಸ್ವಿಯಾಗಿ ನಿಭಾಯಿಸಿದೆ” ಎಂದು ಅವರು ಎಎನ್ಐಗೆ ತಿಳಿಸಿದರು.

ಭಾರತದ ಪ್ರಭಾವಶಾಲಿ ಬೆಳವಣಿಗೆಗೆ ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆ ಕಾರಣ ಎಂದು ಶ್ರೀನಿವಾಸನ್ ಹೇಳಿದರು, “ನಾನು ಮುಂದಿನ ದಿನಗಳಲ್ಲಿ ಯಾವುದೇ ಅಡೆತಡೆಗಳನ್ನು ನೋಡುವುದಿಲ್ಲ” ಎಂಬುದಾಗಿಯೂ ಹೇಳಿದರು. ಆದಾಗ್ಯೂ, ಭಾರತದ ವಿಸ್ತರಿಸುತ್ತಿರುವ ಕಾರ್ಮಿಕ ಶಕ್ತಿಯ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಗಮನಾರ್ಹ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಕಾರ್ಮಿಕ ಶಕ್ತಿಯ ಬಳಕೆ ಅಗತ್ಯ

“ಭಾರತವು ಯುವ, ಬೆಳೆಯುತ್ತಿರುವ ಜನಸಂಖ್ಯೆಯನ್ನು ಹೊಂದಿದೆ. ಇದು ಪ್ರತಿವರ್ಷ ಸುಮಾರು 15 ಮಿಲಿಯನ್ ಜನರನ್ನು ಕಾರ್ಮಿಕ ಬಲಕ್ಕೆ ಸೇರಿಸುವ ನಿರೀಕ್ಷೆಯಿದೆ” ಎಂದು ಶ್ರೀನಿವಾಸನ್ ಗಮನಸೆಳೆದರು. “ಈ ಜನಸಂಖ್ಯಾ ಅನುಕೂಲವನ್ನು ಬಳಸಿಕೊಳ್ಳಲು, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿ ಗಣನೀಯ ಹೂಡಿಕೆಗಳು ನಿರ್ಣಾಯಕ. ಇದರಿಂದಾಗಿ ಬೆಳೆಯುತ್ತಿರುವ ಕಾರ್ಮಿಕ ಶಕ್ತಿಯು ಆರ್ಥಿಕತೆಗೆ ನೆರವು ನೀಡಬಹುದು ಎಂದು ಹೇಳಿದ್ದಾರೆ.

ಸುಮಾರು 6.5% ಬೆಳವಣಿಗೆಯ ದರದೊಂದಿಗೆ ಭಾರತದ ಮಧ್ಯಮಾವಧಿಯ ನಿರೀಕ್ಷೆಗಳ ಬಗ್ಗೆ ಆಶಾವಾದ ವ್ಯಕ್ತಪಡಿಸಿದ ಶ್ರೀನಿವಾಸನ್, ಹಲವು ಸುಧಾರಣೆಗಳ ಮಹತ್ವವನ್ನು ಒತ್ತಿ ಹೇಳಿದರು. ಸಮಗ್ರ ಸುಧಾರಣೆಗಳನ್ನು ಶ್ರದ್ಧೆಯಿಂದ ಜಾರಿಗೆ ತಂದರೆ ಮುಂದಿನ ಹಲವಾರು ವರ್ಷಗಳಲ್ಲಿ ಭಾರತವು 6.5% ಅಥವಾ ಅದಕ್ಕಿಂತ ಹೆಚ್ಚಿನ ಬೆಳವಣಿಗೆಯ ದರ ಸಾಧಿಸಬಹುದು ಎಂದು ಹೇಳಿದ್ದಾರೆ.

Continue Reading
Advertisement
PBKS vs GT
ಕ್ರೀಡೆ10 mins ago

PBKS vs GT: ಗುಜರಾತ್​ ವಿರುದ್ಧವಾದರೂ ಪಂಜಾಬ್​ಗೆ ಒಲಿದೀತೇ ಗೆಲುವಿನ ಅದೃಷ್ಟ?

CJI Chandrachud
ದೇಶ22 mins ago

CJI Chandrachud: ಹೊಸ ಕಾನೂನುಗಳ ಜಾರಿ ಐತಿಹಾಸಿಕ; ಸಿಜೆಐ ಡಿ.ವೈ.ಚಂದ್ರಚೂಡ್‌ ಬಣ್ಣನೆ

Forest bathing activity begins at Cubbon Park
ಬೆಂಗಳೂರು24 mins ago

Forest Bathing: ಬೆಂಗಳೂರಲ್ಲೂ ಶುರು ಫಾರೆಸ್ಟ್‌ ಬಾಥಿಂಗ್‌; ಕಬ್ಬನ್ ಪಾರ್ಕ್‌ನಲ್ಲಿ ಮರ ಅಪ್ಪಲು ಕೊಡಬೇಕು 1500 ರೂ.!

Modi in Karnataka HD Deve Gowda attack on Congess
Lok Sabha Election 202424 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Lok Sabha Election 2024
ಕರ್ನಾಟಕ27 mins ago

Lok Sabha Election 2024: ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು: ಡಿಕೆಶಿ

Job Alert
ಉದ್ಯೋಗ29 mins ago

Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Viral Video
ವೈರಲ್ ನ್ಯೂಸ್34 mins ago

Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

Vinay Gowda Lunch With Kichcha Sudeep
ಸಿನಿಮಾ37 mins ago

Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

Viral Video
ವೈರಲ್ ನ್ಯೂಸ್40 mins ago

Viral Video: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವೈರಲ್ ಆದ ವಿಡಿಯೊ

Case of bringing gun to CM Siddaramaiah Four policemen suspended
Lok Sabha Election 202447 mins ago

‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka HD Deve Gowda attack on Congess
Lok Sabha Election 202424 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ4 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ5 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

ಟ್ರೆಂಡಿಂಗ್‌