Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ! - Vistara News

ದೇಶ

Independence day 2024: ಕೆಂಪು ಕೋಟೆ ಮೇಲೆ ಭಾಷಣ; ನೆಹರೂ, ಇಂದಿರಾ ಬಳಿಕ ಮೋದಿ ಹೊಸ ದಾಖಲೆ!

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ಸ್ವಾತಂತ್ರ್ಯ ದಿನದ (Independence day 2024) ಭಾಷಣ ಹೊಸ ದಾಖಲೆಯನ್ನು ಬರೆಯಲಿದೆ. ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಿ ಅವರು ದಾಖಲೆ ನಿರ್ಮಿಸಲಿದ್ದಾರೆ.

VISTARANEWS.COM


on

Independence day 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಳೆದ ಹತ್ತು ವರ್ಷಗಳಿಂದ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ (PM Modi) ಅವರು ಈ ಬಾರಿಯು ಸ್ವಾತಂತ್ರ್ಯ ದಿನದ (Independence day 2024) 11ನೇ ಭಾಷಣ ಮಾಡಲಿದ್ದಾರೆ. ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸುವ ಅವರ ಭಾಷಣದಲ್ಲಿ ಎಂದಿನಂತೆ ಏನಾದರೂ ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ಅವರ ಭಾಷಣವನ್ನು ಕೇಳಲು ದೇಶದ ಮೂಲೆಮೂಲೆಯಲ್ಲೂ ಜನರು ಕಾತರರಾಗಿರುತ್ತಾರೆ. ಮೂರನೇ ಅವಧಿಗೆ ದೇಶದ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರು ಈ ಬಾರಿ ಸ್ವಾತಂತ್ರ್ಯ ದಿನವದ ಆಗಸ್ಟ್ 15ರಂದು ಗುರುವಾರ ತಮ್ಮ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣವನ್ನು ಮಾಡಲು ಸಿದ್ಧರಾಗಿದ್ದಾರೆ.

ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ದಾಖಲೆ ಬರೆದಿರುವ ಅವರು, ಈ ಅವಧಿಯ ಮೊದಲ ಸ್ವಾತಂತ್ರ್ಯ ದಿನದ ಭಾಷಣವಾಗಿದೆ. ಈ ಭಾಷಣದೊಂದಿಗೆ ಪ್ರಧಾನಿ ಮೋದಿ ಅವರು ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿಯವರ ಅನಂತರ ಕೆಂಪು ಕೋಟೆಯಲ್ಲಿ ಸತತ 11 ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಭಾರತೀಯ ಪ್ರಧಾನಿಯಾಗಲಿದ್ದಾರೆ.


ದಾಖಲೆ ನಿರ್ಮಿಸಿದ ಮೋದಿ

ಮೋದಿಯವರ ಈ ಬಾರಿಯ 11ನೇ ಭಾಷಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಂಖ್ಯೆಯನ್ನು ಮೀರಿಸಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 10 ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿರುವ ದಾಖಲೆ ಹೊಂದಿದ್ದಾರೆ.


ಭಾರತದ ಮೊದಲ ಪ್ರಧಾನಿ ನೆಹರೂ ಅವರು 17 ಬಾರಿ ನಿರಂತರವಾಗಿ ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿದ ದಾಖಲೆಯನ್ನು ಹೊಂದಿದ್ದಾರೆ.

ಜನವರಿ 1966ರಿಂದ ಮಾರ್ಚ್ 1977ರವರೆಗೆ ಮತ್ತು ಅನಂತರ ಜನವರಿ 1980ರಿಂದ ಅಕ್ಟೋಬರ್ 1984ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ಅವರು ಒಟ್ಟು 16 ಬಾರಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣಗಳನ್ನು ಮಾಡಿದ್ದರು.

Independence day 2024
Independence day 2024


ಮಾತಿನ ಅವಧಿ

ಇನ್ನು ಪ್ರಧಾನಿಯವರ ಸ್ವಾತಂತ್ರ್ಯ ದಿನದ ಭಾಷಣದ ಅವಧಿಗೆ ಹೋಲಿಸಿದರೆ ಮೋದಿಯವರೇ ಅತಿ ಉದ್ದದ ಭಾಷಣ ಮಾಡಿರುವ ಪ್ರಧಾನಿಯಾಗಿದ್ದರೆ. ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿ ಭಾಷಣವನ್ನೂ ಸರಾಸರಿ 82 ನಿಮಿಷಗಳ ಕಾಲ ನಡೆಸಿದ್ದಾರೆ. ಇದು ಭಾರತದ ಇತಿಹಾಸದಲ್ಲೇ ಪ್ರಧಾನಿಯವರ ಅತಿ ಉದ್ದದ ಭಾಷಣವಾಗಿದೆ.


ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರು 1997ರಲ್ಲಿ 71 ನಿಮಿಷಗಳ ಕಾಲ ಕೆಂಪುಕೋಟೆಯಲ್ಲಿ ಭಾಷಣ ಮಾಡಿದ್ದರು. ಪಿಎಂ ಮೋದಿಯವರ ಭಾಷಣಗಳ ಉದ್ದವು 2017ರಲ್ಲಿ 55 ನಿಮಿಷಗಳ ಕಡಿಮೆ ಅವಧಿಯಿಂದ 2016ರಲ್ಲಿ 94 ನಿಮಿಷಗಳವರೆಗೆ ವಿಸ್ತರಿಸಿತ್ತು.

ಇದನ್ನೂ ಓದಿ: Paris Olympics 2024 : ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ಮೋದಿಯಿಂದ ಪ್ಯಾರಿಸ್ ಒಲಿಂಪಿಕ್ಸ್ ಸಾಧಕರಿಗೆ ಆತಿಥ್ಯ


ಮಾತಿನ ವಿಷಯ

ಪ್ರಧಾನಿ ಮೋದಿ ಅವರು ಪ್ರತಿ ಬಾರಿಯೂ ಸ್ವಾತಂತ್ರ್ಯ ದಿನದಂದು ವಿಶೇಷ ಘೋಷಣೆಗಳನ್ನು ಮಾಡಿರುವುದು ಹಿಂದಿನ ದಾಖಲೆಗಳಿಂದ ತಿಳಿಯುತ್ತದೆ. 2014ರಲ್ಲಿ ಅವರು ತಮ್ಮ ಮೊದಲ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಸ್ವಚ್ಛ ಭಾರತ ಮತ್ತು ಜನ್ ಧನ್ ಖಾತೆಗಳಂತಹ ಹೊಸ ಕಾರ್ಯಕ್ರಮಗಳನ್ನು ಘೋಷಿಸಿದರು. ಅಂದಿನಿಂದ ಅವರು ವಿವಿಧ ಪ್ರಮುಖ ಘೋಷಣೆಗಳನ್ನು ಮಾಡಲು ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅವರ ಭಾಷಣಗಳ ಜೊತೆಗೆ ಅವರು ಧರಿಸುವ ವಿವಿಧ ರೀತಿಯ ಪೇಟಗಳು ಎಲ್ಲರ ಗಮನ ಸೆಳೆಯುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

ದೇಶಾದ್ಯಂತ ಈಗ 78ನೇ ಸ್ವಾತಂತ್ರ್ಯ ದಿನಾಚರಣೆಯ (Independence day 2024) ಸಂಭ್ರಮ ಎದ್ದು ಕಾಣುತ್ತಿದೆ. ಎಲ್ಲೆಲ್ಲೂ ರಾಷ್ಟ್ರ ಭಕ್ತಿ ಗೀತೆಗಳ ಗಾಯನ ಮೊಳಗುತ್ತಿದೆ. ಆಗಸ್ಟ್ 15ರಂದು (Independence day 2024) ನಡೆಯುವ ಕಾರ್ಯಕ್ರಮಕ್ಕೆ ಎಲ್ಲರೂ ಕಾತರರಾಗಿದ್ದಾರೆ. ಈ ದಿನ ಎಲ್ಲರ ಚಿತ್ತ ಕೆಂಪುಕೋಟೆಯ ಮೇಲಿರಲಿದೆ. ಯಾಕೆಂದರೆ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನಡೆಸಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಯಾವಾಗ, ಎಲ್ಲಿ ಪ್ರಸಾರವಾಗಲಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Independence day 2024
Koo

ಭಾರತದಾದ್ಯಂತ ಈ ಬಾರಿ 78ನೇ ಸ್ವಾತಂತ್ರ್ಯ ದಿನವನ್ನು (Independence day 2024) ಆಚರಿಸಲು ಸಿದ್ಧತೆಗಳು ಜೋರಾಗಿವೆ. ಈ ದಿನ ಎಲ್ಲರ ಚಿತ್ತ ಕೆಂಪುಕೋಟೆಯ (delhi Red Fort) ಮೇಲಿರುತ್ತದೆ. ಯಾಕೆಂದರೆ ಇಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಧ್ವಜಾರೋಹಣ ನಡೆಸಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಆಗಸ್ಟ್‌ 15ರಂದು ಬೆಳಗ್ಗೆ 7.30ಕ್ಕೆ ರಾಷ್ಟ್ರಧ್ವಜವನ್ನು ಹಾರಿಸಿ, ಆ ಬಳಿಕ ದೇಶವನ್ನು ಉದ್ದೇಶಿಸಿ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣ ಮಾಡಲಿದ್ದಾರೆ.


ಸ್ವಾತಂತ್ರ್ಯ ದಿನದ ನೇರ ಪ್ರಸಾರ ಎಲ್ಲಿ?

ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ನೇರ ಪ್ರಸಾರ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುತ್ತದೆ. ವಿಸ್ತಾರ ನ್ಯೂಸ್‌ ಟಿವಿ ಮತ್ತು ವಿಸ್ತಾರ ನ್ಯೂಸ್‌ ಯುಟ್ಯೂಬ್‌ ಚಾನೆಲ್‌ ಮೂಲಕವೂ ಮೋದಿಯವರ ಭಾಷಣ ನೇರ ಪ್ರಸಾರ ನೋಡಬಹುದು.

ಅಲ್ಲದೇ ಕಾರ್ಯಕ್ರಮವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯೂಟ್ಯೂಬ್ ಚಾನೆಲ್‌ ಜೊತೆಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್‌ನಲ್ಲಿ @PIB_India ಮತ್ತು PMO ಟ್ವಿಟರ್ ಹ್ಯಾಂಡಲ್ ಮೂಲಕವೂ ಪ್ರಸಾರ ಮಾಡಲಾಗುತ್ತದೆ.


ಈ ಬಾರಿಯ ಥೀಮ್ ಏನು?

ಈ ಬಾರಿ ಸ್ವಾತಂತ್ರ್ಯ ದಿನದ ಥೀಮ್ “ವಿಕಸಿತ ಭಾರತ”. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಸರ್ಕಾರದ ದೃಷ್ಟಿಕೋನವನ್ನು ಇದು ಸಾರುತ್ತದೆ. ಈ ವಿಷಯವು ಶಿಕ್ಷಣ, ಆರೋಗ್ಯ ರಕ್ಷಣೆ, ಮೂಲಸೌಕರ್ಯ ಮತ್ತು ತಂತ್ರಜ್ಞಾನದಲ್ಲಿ ಸಮಗ್ರ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ. ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.


ಆಗಸ್ಟ್ 15ರಂದು ಪ್ರಧಾನಿಯವರು ರಾಷ್ಟ್ರವನ್ನು ಉದ್ದೇಶಿಸಿ ಹಿಂದಿನ ಸಾಧನೆಗಳ ಕುರಿತು ವಿವರಿಸಿ, ಭವಿಷ್ಯದ ಗುರಿ ಮತ್ತು ನೀತಿಗಳನ್ನು ವಿವರಿಸುತ್ತಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುತ್ತಾರೆ. ಪ್ರಧಾನಿ ಭಾಷಣದ ಅನಂತರ ಭಾರತದ ಮಿಲಿಟರಿ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ತಾಂತ್ರಿಕ ಪ್ರಗತಿಯನ್ನು ಪ್ರದರ್ಶಿಸುವ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ ವೇಳೆ ಪ್ರಮುಖ ಕಟ್ಟಡಗಳು, ಸ್ಮಾರಕಗಳಿಗೆ ದೀಪಾಲಂಕಾರ ಮಾಡಲಾಗಿದ್ದು, ಹಬ್ಬದ ವಾತಾವರಣವನ್ನು ಹೆಚ್ಚಿಸಲಿದೆ.


ʼಹರ್ ಘರ್ ತಿರಂಗʼ ಅಭಿಯಾನ

‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಆಗಸ್ಟ್ 9ರಿಂದ 15ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಈ ಉಪಕ್ರಮವು ಪ್ರತಿಯೊಬ್ಬ ಭಾರತೀಯನನ್ನು ರಾಷ್ಟ್ರಧ್ವಜವನ್ನು ಹಾರಿಸಲು ಪ್ರೋತ್ಸಾಹಿಸುವ ಮೂಲಕ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಅಭಿಯಾನದ ಮಹತ್ವವನ್ನು ತಿಳಿಸಿದ್ದು, ಪ್ರತಿಯೊಬ್ಬ ಭಾರತೀಯನೂ ರಾಷ್ಟ್ರಧ್ವಜವನ್ನು ಹಾರಿಸಲು ಪ್ರೋತ್ಸಾಹಿಸುವ ಮೂಲಕ ನಾಗರಿಕರಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯ ಮನೋಭಾವವನ್ನು ಹುಟ್ಟುಹಾಕುವ ಉದ್ದೇಶವನ್ನು ಈ ಉಪಕ್ರಮವು ಹೊಂದಿದೆ ಎಂದು ಹೇಳಿದ್ದಾರೆ.

Independence day 2024
Independence day 2024


“ಏಕ್ ಪೇಡ್ ಮಾ ಕೆ ನಾಮ್” ಅಭಿಯಾನ

ಸ್ವಾತಂತ್ರ್ಯ ದಿನಾಚರಣೆಯ ಜೊತೆಗೆ, ರಕ್ಷಣಾ ಸಚಿವಾಲಯವು ‘ಏಕ್ ಪೇಡ್ ಮಾ ಕೆ ನಾಮ್’ ತಾಯಿಯ ಹೆಸರಲ್ಲಿ ಒಂದು ಮರ ಅಭಿಯಾನದ ಅಡಿಯಲ್ಲಿ ರಾಷ್ಟ್ರವ್ಯಾಪಿ ಮರ ನೆಡುವ ಅಭಿಯಾನವನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: Independence Day 2024: ಸ್ವಾತಂತ್ರ್ಯ ದಿನಾಚರಣೆಗೆ ಮಾಣಿಕ್‌ ಷಾ ಮೈದಾನ ಸಿದ್ಧ; ಪಾರ್ಕಿಂಗ್‌ ಮತ್ತಿತರ ವಿವರ ಇಲ್ಲಿದೆ

ಜೂನ್ 5ರಂದು ವಿಶ್ವ ಪರಿಸರ ದಿನದಂದು ಪ್ರಧಾನಿ ಮೋದಿ ಅವರು ಪ್ರಾರಂಭಿಸಿರುವ ಈ ಅಭಿಯಾನವು ಭಾರತದಾದ್ಯಂತ 1.5 ಕೋಟಿ ಮರಗಳನ್ನು ನೆಡುವ ಗುರಿಯನ್ನು ಹೊಂದಿದೆ. ಈ ಪ್ರಯತ್ನವು ಮೂರು ಸಶಸ್ತ್ರ ಸೇವೆಗಳು ಮತ್ತು ಡಿಆರ್‌ಡಿಒ, ರಕ್ಷಣಾ ಪಿಎಸ್‌ಯುಗಳು, ಸಿಜಿಡಿಎ, ಎನ್‌ಸಿಸಿ, ಸೈನಿಕ ಶಾಲೆಗಳು ಮತ್ತು ಆರ್ಡನೆನ್ಸ್ ಫ್ಯಾಕ್ಟರಿಗಳು ಸೇರಿದಂತೆ ವಿವಿಧ ಸಂಬಂಧಿತ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಯುತ್ತಿದೆ.

Continue Reading

ಆಟೋಮೊಬೈಲ್

Tata Nexon EV: ಕೇವಲ 200 ರೂ. ಖರ್ಚಿನಲ್ಲಿ ಈ ಕಾರು 323 ಕಿ.ಮೀ ದೂರ ಸಾಗುತ್ತದೆ!

ದೆಹಲಿಯಿಂದ ನೈನಿತಾಲ್‌ಗೆ ಸರಿಸುಮಾರು 323 ಕಿಲೋ ಮೀಟರ್ ದೂರವಿದೆ. ಅಂತಹ ಪರಿಸ್ಥಿತಿಯಲ್ಲಿ ಈ ಕಾರು ಒಮ್ಮೆ ಚಾರ್ಜ್ ಮಾಡಿದ ಅನಂತರ ದೆಹಲಿಯಿಂದ ನೈನಿತಾಲ್‌ಗೆ ಸರಿಸುಮಾರು 200 ರೂ. ವೆಚ್ಚದಲ್ಲಿ ನಿಮ್ಮನ್ನು ಸುಲಭವಾಗಿ ಕರೆದೊಯ್ಯಬಹುದು. ಇದು ಸಾಮಾನ್ಯ ಕಾರು ಅಲ್ಲ. ದೇಶದ ಸುಪ್ರಸಿದ್ದ ಕಂಪನಿ ಟಾಟಾದ ನೆಕ್ಸಾನ್ ಇವಿ (Tata Nexon EV). ಕೈಗೆಟುಕುವ ಬೆಲೆ ಮತ್ತು ಟಾಟಾದ ವಿಶ್ವಾಸಾರ್ಹತೆಯಿಂದಾಗಿ ಈ ಕಾರು ಈಗಾಗಲೇ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ.

VISTARANEWS.COM


on

By

Tata Nexon EV
Koo

ಕೇವಲ 200 ರೂಪಾಯಿಯಲ್ಲಿ ದೆಹಲಿಯಿಂದ 323 ಕಿಲೋ ಮೀಟರ್ ದೂರದ ನೈನಿತಾಲ್‌ಗೆ (Delhi to Nainital) ಹೋಗಬಹುದು! ಅದು ಹೇಗೆ ಅಂತೀರಾ? ಟಾಟಾ ನೆಕ್ಸಾನ್ ಇವಿ (Tata Nexon EV) ಕಾರಿನಲ್ಲಿ! ಹೌದು, ಅತ್ಯಂತ ಕಡಿಮೆ ಬೆಲೆಯಲ್ಲಿ 323 ಕಿಲೋ ಮೀಟರ್ ದೂರದವರೆಗೆ ಪ್ರಯಾಣ ನಡೆಸಲು ಸಾಧ್ಯ ಎನ್ನುವ ಭರವಸೆಯನ್ನು ನೀಡುತ್ತಿದೆ ಈ ಕಾರು.

ಭಾರತದ ಸುಪ್ರಸಿದ್ಧ ಆಟೋಮೊಬೈಲ್ ತಯಾರಕ ಕಂಪನಿಯಾಗಿರುವ ಟಾಟಾ ಮೋಟಾರ್ಸ್ (Tata Motors) ತಯಾರಿಸಿದ ಎಲೆಕ್ಟ್ರಿಕ್ ಎಸ್‌ಯುವಿ (EV SUV) ಭಾರತದಲ್ಲಿ ಹೆಚ್ಚುತ್ತಿರುವ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ಪೂರೈಸಲು ಈ ಕಾರನ್ನು ಬಿಡುಗಡೆ ಮಾಡಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಎಲೆಕ್ಟ್ರಿಕ್ ಎಸ್‌ಯುವಿ ಎಂದೇ ಪರಿಗಣಿಸ6ಲಾಗಿದೆ. ಟಾಟಾ ನೆಕ್ಸಾನ್ ಇವಿಯು ಹಲವಾರು ವೈಶಿಷ್ಟ್ಯವನ್ನು ಹೊಂದಿದ್ದು, ಇದರ ಸಂಪೂರ್ಣ ವಿವರ ಇಲ್ಲಿದೆ.


ವಿನ್ಯಾಸ ಹೇಗಿದೆ?

ಹೊರಾಂಗಣದ ಟಾಟಾ ನೆಕ್ಸಾನ್ ಇವಿ ವಿನ್ಯಾಸವು ಅತ್ಯಂತ ಆಕರ್ಷಕ ಮತ್ತು ಆಧುನಿಕವಾಗಿದೆ. ಈ ಎಸ್‌ಯುವಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಮುಂಭಾಗದಲ್ಲಿ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ಸ್ಪೋರ್ಟಿ ಹಾಗೂ ಸ್ಟ್ರಾಂಗ್ ಲುಕ್‌ನೊಂದಿಗೆ ಬರಲಿದೆ. ಇದಲ್ಲದೆ, ಕಾರು ಬ್ಲ್ಯಾಕ್‌-ಔಟ್ ರೂಫ್ ಮತ್ತು ಸ್ಪೋರ್ಟಿ ವೀಲ್ಸ್‌ಗಳನ್ನು ಹೊಂದಿರುತ್ತದೆ.

ಒಳಾಂಗಣವು ಪ್ರೀಮಿಯಂ ಫಿನಿಶಿಂಗ್‌ನೊಂದಿಗೆ ಡ್ಯುಯಲ್-ಟೋನ್ ಬಣ್ಣದ ಥೀಮ್ ಹೊಂದಿದೆ. ಇದು 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸ್ಟೀರಿಂಗ್- ಮೌಂಟೆಡ್ ಕಂಟ್ರೋಲ್‌ಗಳು ಮತ್ತು ಪುಶ್-ಬಟನ್ ಸ್ಟಾರ್ಟ್‌ನಂತಹ ಆಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


ಬ್ಯಾಟರಿ ಪವರ್‌

ಟಾಟಾ ನೆಕ್ಸಾನ್ ಇವಿ 30.2 ಕೆಡಬ್ಲ್ಯೂ ಎಚ್ ಲಿಥಿಯಂ- ಐಯಾನ್ ಬ್ಯಾಟರಿಯನ್ನು ಹೊಂದಿದೆ. ಒಂದು ಸಂಪೂರ್ಣ ಚಾರ್ಜ್‌ನಲ್ಲಿ ಸುಮಾರು 325-400 ಕಿ.ಮೀ ವ್ಯಾಪ್ತಿಯನ್ನು ನೀಡುತ್ತದೆ. ಆದರೆ ನೈಜ ಕ್ಷಮತೆ ಚಾಲನಾ ಪರಿಸ್ಥಿತಿಗಳನ್ನು ಅವಲಂಬಿಸಿರುತ್ತದೆ. ದೂರದಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು.

ವೇಗದ ಚಾರ್ಜರ್ ಅನ್ನು ಬಳಸಿದರೆ ನೆಕ್ಸಾನ್ ಇವಿ ಅನ್ನು ಶೇ. 0-80ರಷ್ಟು ಚಾರ್ಜ್ ಮಾಡಲು ಸುಮಾರು 60 ನಿಮಿಷಗಳು ಬೇಕಾಗುತ್ತದೆ. ಹೋಮ್ ಚಾರ್ಜರ್‌ನೊಂದಿಗೆ ಸಂಪೂರ್ಣವಾಗಿ ಚಾರ್ಜ್ ಮಾಡಲು ಇದು ಸುಮಾರು 8- 9 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.


ಕಾರ್ಯಕ್ಷಮತೆ ಹೇಗಿದೆ?

ನೆಕ್ಸಾನ್ ಇವಿ 129 ಪಿಎಸ್ ಪವರ್ ಮತ್ತು 245 ಎನ್ ಎಂ ಟಾರ್ಕ್ ಅನ್ನು ಉತ್ಪಾದಿಸುವ ಪರ್ಮನೆಂಟ್‌ ಮ್ಯಾಗ್ನೆಟ್ ಸಿಂಕ್ರೊನಸ್ ಮೋಟರ್ ಅನ್ನು ಹೊಂದಿದೆ. ಈ ಎಸ್‌ಯುವಿ ಸುಮಾರು 9.9 ಸೆಕೆಂಡುಗಳಲ್ಲಿ 0-100 MPHನಿಂದ ವೇಗವನ್ನು ಹೆಚ್ಚಿಸಬಹುದು. ಇದು ಅದರ ವರ್ಗದಲ್ಲಿ ತ್ವರಿತ ಎಸ್‌ಯುವಿ ಆಗಿರುತ್ತದೆ.


ವೈಶಿಷ್ಟ್ಯಗಳು ಏನೇನು?

ಇದು ಡ್ಯುಯಲ್ ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್ , ಕಾರ್ನರ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಐಸೊಫಿಕ್ಸ್ ಮೌಂಟ್‌ಗಳಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಯೋ ಫೆನ್ಸಿಂಗ್, ಸ್ಥಳ ಟ್ರ್ಯಾಕಿಂಗ್, ರಿಮೋಟ್ ಡಯಾಗ್ನೋಸ್ಟಿಕ್ಸ್ ಇತ್ಯಾದಿಗಳನ್ನು ಒಳಗೊಂಡಂತೆ ಝಡ್ ಕನೆಕ್ಷನ್ ಅಪ್ಲಿಕೇಶನ್ ಮೂಲಕ 35ಕ್ಕೂ ಹೆಚ್ಚು ಸಂಪರ್ಕಿತ ವೈಶಿಷ್ಟ್ಯಗಳು ಲಭ್ಯವಿದೆ. 7 ಇಂಚಿನ ಟಚ್‌ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಯನ್ನು ಇದು ಬೆಂಬಲಿಸುತ್ತದೆ.

ಬೆಲೆ ಎಷ್ಟು?

ಟಾಟಾ ನೆಕ್ಸಾನ್ ಇವಿ ಬೆಲೆಗಳು ವಿವಿಧ ಮಾಡೆಲ್‌ಗಳನ್ನು ಅವಲಂಬಿಸಿ ಬದಲಾಗುತ್ತವೆ. ಆದರೆ ಸಾಮಾನ್ಯವಾಗಿ ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು 14 ಲಕ್ಷ ರೂ. ನಿಂದ 17 ಲಕ್ಷ ರೂ.ವರೆಗೆ ಲಭ್ಯವಿದೆ. ಭಾರತದಲ್ಲಿ ಲಭ್ಯವಿರುವ ಎಂಜಿ ಝಡ್ ಎಸ್‌ಇವಿ ಮತ್ತು ಹುಂಡೈ ಕೋನಾ ಎಲೆಕ್ಟ್ರಿಕ್‌ನಂತಹ ಇತರ ಎಲೆಕ್ಟ್ರಿಕ್ ಎಸ್‌ಯುವಿಗಳಿಗೆ ಟಾಟಾ ನೆಕ್ಸಾನ್ ಇವಿ ಸ್ಪರ್ಧೆ ನೀಡುವಂತಿದೆ.

ಇದನ್ನೂ ಓದಿ: Best Selling Cars: ಜುಲೈನಲ್ಲಿ ಅತೀ ಹೆಚ್ಚು ಮಾರಾಟವಾದ ಕಾರುಗಳು ಯಾವವು?

ಟಾಟಾ ನೆಕ್ಸಾನ್ ಇವಿ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಲೆಕ್ಟ್ರಿಕ್ ವಾಹನಗಳಲ್ಲಿ ಒಂದಾಗಿದೆ. ಕೈಗೆಟುಕುವ ಬೆಲೆ, ದೀರ್ಘ-ಶ್ರೇಣಿಯ ಮತ್ತು ಟಾಟಾದ ವಿಶ್ವಾಸಾರ್ಹತೆಯಿಂದಾಗಿ ಈ ಕಾರು ಗ್ರಾಹಕರಲ್ಲಿ ಬಹಳ ಜನಪ್ರಿಯವಾಗಿದೆ. ಪರಿಸರ ಪ್ರಜ್ಞೆಯುಳ್ಳವರಿಗೆ ಮತ್ತು ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಆಲೋಚನೆಯಲ್ಲಿರುವವರಿಗೆ ಈ ಕಾರು ಉತ್ತಮ ಆಯ್ಕೆಯಾಗಿದೆ ಎನ್ನುತ್ತಾರೆ ವಾಹನ ಪರಿಣತರು.

Continue Reading

ಪ್ರಮುಖ ಸುದ್ದಿ

Hindenburg Report : ಸೆಬಿ ಅಧ್ಯಕ್ಷರ ವಜಾಗೆ ಆಗ್ರಹಿಸಿದ ಕಾಂಗ್ರೆಸ್​ನಿಂದ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ

Hindenburg Report : ದೇಶದಲ್ಲಿ ಈಗ ನಡೆಯುತ್ತಿರುವ ಅತಿದೊಡ್ಡ ಹಗರಣಗಳಲ್ಲೊಂದನ್ನು ಹಿಂಡೆನ್​ಬರ್ಗ್​​ ಬಹಿರಂಗಪಡಿಸಿದೆ. ಅದಾನಿ ಮತ್ತು ಸೆಬಿಗೆ ಸಂಬಂಧಿಸಿದ ಹಗರಣದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದರು. ಅದಾನಿ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಪಕ್ಷದ ನಾಯಕತ್ವ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

VISTARANEWS.COM


on

Hindenburg Report
Koo

ಬೆಂಗಳೂರು: ಸೆಬಿ ಅಧ್ಯಕ್ಷರು ಮತ್ತು ಅದಾನಿ ಗ್ರೂಪ್ ನಡುವೆ ಸಂಬಂಧವಿದೆ ಎಂದು ಆರೋಪಿಸಿ ಅಮೆರಿಕ ಮೂಲಕ ಶಾರ್ಟ್ ಸೆಲ್ಲರ್​ ಸಂಸ್ಥೆ ಹಿಂಡೆನ್​​ಬರ್ಗ್ (Hindenburg Report) ಮಾಡಿರುವ ​​ವರದಿಯ ವಿರುದ್ಧ ಆಗಸ್ಟ್ 22 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಮಂಗಳವಾರ ಘೋಷಿಸಿದೆ. ವರದಿಯ ಆರೋಪಗಳ ಹಿನ್ನೆಲೆಯಲ್ಲಿ ಸೆಬಿ ಅಧ್ಯಕ್ಷ ಸ್ಥಾನದಿಂದ ಮಾಧಾಬಿ ಬುಚ್ ಅವರನ್ನು ತೆಗೆದುಹಾಕಬೇಕೆಂದು ಕಾಂಗ್ರೆಸ್​ ಒತ್ತಾಯಿಸುತ್ತಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ರಾಜ್ಯ ಮುಖ್ಯಸ್ಥರ ಸಭೆಯ ನಂತರ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಈ ಘೋಷಣೆ ಮಾಡಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಮಲ್ಲಿಕಾರ್ಜುನ ಖರ್ಗೆ ವಹಿಸಿದ್ದರು.

ದೇಶದಲ್ಲಿ ಈಗ ನಡೆಯುತ್ತಿರುವ ಅತಿದೊಡ್ಡ ಹಗರಣಗಳಲ್ಲೊಂದನ್ನು ಹಿಂಡೆನ್​ಬರ್ಗ್​​ ಬಹಿರಂಗಪಡಿಸಿದೆ. ಅದಾನಿ ಮತ್ತು ಸೆಬಿಗೆ ಸಂಬಂಧಿಸಿದ ಹಗರಣದ ಬಗ್ಗೆ ನಾವು ಚರ್ಚಿಸಿದ್ದೇವೆ ಎಂದು ಜೈರಾಮ್ ರಮೇಶ್ ಹೇಳಿದರು. ಅದಾನಿ ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಪಕ್ಷದ ನಾಯಕತ್ವ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು.

ಈ ವಿಷಯದ ಬಗ್ಗೆ ಎರಡು ವಿಷಯಗಳಿಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ನಾವು ಸರ್ವಾನುಮತದಿಂದ ನಿರ್ಧರಿಸಿದ್ದೇವೆ. ಒಂದು ಅದಾನಿ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆ ನಡೆಸಬೇಕು. ಇದರಲ್ಲಿ ಪ್ರಧಾನಿ ಸಂಪೂರ್ಣವಾಗಿ ಭಾಗಿಯಾಗಿದ್ದಾರೆ. ಷೇರು ಮಾರುಕಟ್ಟೆ ನಿಯಂತ್ರಣವು ಈಗ ತೀವ್ರವಾಗಿ ಸ್ವಜನಪಕ್ಷಪಾತ ನಡೆಸಿರುವುದು ಕಂಡುಬಂದಿದೆ. ಜೈರಾಮ್ ರಮೇಶ್ ಹೇಳಿದರು.

ಹಿಂಡೆನ್​ಬರ್ಗ್​ ರಿಸರ್ಚ್ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ಮತ್ತು ಅದರ ಮುಖ್ಯಸ್ಥ ಮಾಧಾಬಿ ಬುಚ್ ವಿರುದ್ಧ ಆರೋಪ ಮಾಡಿದ ಬಳಿಕ ಕಾಂಗ್ರೆಸ್ ಸಂಸದೀಯ ತನಿಖೆಗೆ ಒತ್ತಾಯಿಸಿದೆ.

ಇದನ್ನೂ ಓದಿ: Sheikh Hasina : ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್​ ದಾಖಲಿಸಿದ ಕೋರ್ಟ್​​

ಅದಾನಿ ಮನಿ ಸ್ಪೋನಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ವಿದೇಶಿ ಸಂಸ್ಥೆಗಳಲ್ಲಿ ಸೆಬಿ ಮುಖ್ಯಸ್ಥೆ ಮಾಧಾಬಿ ಪುರಿ ಬುಚ್ ಮತ್ತು ಅವರ ಪತಿ ಪಾಲನ್ನು ಹೊಂದಿದ್ದಾರೆ ಎಂದು ಹಿಂಡೆನ್​ಬರ್ಗ್​​ ರಿಸರ್ಚ್ ಹೇಳಿದೆ. ಆದರೆ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಗ್ರೂಪ್ ಆಫ್ ಕಂಪನಿಗಳಿಗೆ ಪಕ್ಷಪಾತ ಮಾಡಿರುವ ಆರೋಪಗಳನ್ನು ಸೆಬಿ, ಮಾಧಾಬಿ ಬುಚ್ ಮತ್ತು ಅವರ ಪತಿ ನಿರಾಕರಿಸಿದ್ದಾರೆ.

Continue Reading

ದೇಶ

Kolkata Doctor Murder Case: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

Kolkata Doctor Murder Case: ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ.

VISTARANEWS.COM


on

kolkata doctor murder case
Koo

ಕೋಲ್ಕತಾ: ಪಶ್ಚಿಮ ಬಂಗಾಳ(West Bengal)ದ ಕೋಲ್ಕತ್ತಾ(Kolkata)ದಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ(Kolkata Doctor Murder Case) ಪ್ರಕರಣವನ್ನು ಹೈಕೋರ್ಟ್‌ ಸಿಬಿಐ(CBI Probe) ತನಿಖೆಗೆ ಆದೇಶಿಸಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.

ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶುಕ್ರವಾರ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.
ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ನೋ ಸೇಫ್ಟಿ…ನೋ ಡ್ಯೂಟಿ- ವೈದ್ಯೆ ಕೊಲೆ ಖಂಡಿಸಿ ದೇಶವ್ಯಾಪಿ ಭಾರೀ ಪ್ರತಿಭಟನೆ

Continue Reading
Advertisement
Muda Scam
ಕರ್ನಾಟಕ2 mins ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ10 mins ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ15 mins ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್21 mins ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್27 mins ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Physical abuse
ಧಾರವಾಡ34 mins ago

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Kaun Banega Crorepati Season 16
ಬಾಲಿವುಡ್51 mins ago

Kaun Banega Crorepati Season 16: 25 ಲಕ್ಷ ರೂ. ಪ್ರಶ್ನೆಗೆ ಉತ್ತರಿಸಲು ವಿಫಲರಾದ ಬೆಂಗಳೂರಿನ ಎಂಜಿನಿಯರ್! ಏನಿತ್ತು ಆ ಪ್ರಶ್ನೆ?

Tata Nexon EV
ಆಟೋಮೊಬೈಲ್1 hour ago

Tata Nexon EV: ಕೇವಲ 200 ರೂ. ಖರ್ಚಿನಲ್ಲಿ ಈ ಕಾರು 323 ಕಿ.ಮೀ ದೂರ ಸಾಗುತ್ತದೆ!

Arshad Nadeem
ಪ್ರಮುಖ ಸುದ್ದಿ1 hour ago

Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

World Organ Donation Day
ಆರೋಗ್ಯ1 hour ago

World Organ Donation Day: ಇಂದು ವಿಶ್ವ ಅಂಗಾಂಗದಾನ ದಿನ; ಯಾರದ್ದೋ ಬದುಕಿಗೆ ಭರವಸೆಯಾಗೋಣ! ನೋಂದಣಿ ಹೇಗೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌