India- Canada relations: ಮುಯ್ಯಿಗೆ ಮುಯ್ಯಿ: ಕೆನಡಾ ರಾಯಭಾರಿಗೂ ಭಾರತದಿಂದ ಗೇಟ್‌ಪಾಸ್ - Vistara News

ದೇಶ

India- Canada relations: ಮುಯ್ಯಿಗೆ ಮುಯ್ಯಿ: ಕೆನಡಾ ರಾಯಭಾರಿಗೂ ಭಾರತದಿಂದ ಗೇಟ್‌ಪಾಸ್

ಇಂದು ಭಾರತೀಯ ವಿದೇಶಾಂಗ ಇಲಾಖೆಯು ಕೆನಡಾದ ರಾಯಭಾರಿಯನ್ನು ಕರೆಸಿಕೊಂಡು, ಇನ್ನು ಐದು ದಿನದಲ್ಲಿ ದೇಶ ಬಿಟ್ಟು ಆಚೆಗೆ ಹೋಗುವಂತೆ ಆದೇಶ ನೀಡಿದೆ. ಭಾರತದ ಆಂತರಿಕ ವ್ಯವಹಾರಗಳಲ್ಲಿ ಕೆನಡಾದ ಹಸ್ತಕ್ಷೇಪವನ್ನು ಖಂಡಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

VISTARANEWS.COM


on

narendra modi justi Trudeau
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಕೆನಡಾದಿಂದ ಭಾರತೀಯ ರಾಯಭಾರಿಯನ್ನು (Indian diplomat) ಉಚ್ಛಾಟಿಸಿದ ಅಲ್ಲಿನ ಪ್ರಧಾನಿ ಜಸ್ಟಿನ್‌ ಟ್ರುಡೊ (justin trudeau) ಕ್ರಮಕ್ಕೆ ಪ್ರತೀಕಾರವಾಗಿ ಕೆನಡಾದ ರಾಯಭಾರಿಯನ್ನು (Canada diplomat) ಭಾರತ ಆಚೆಗಟ್ಟಿದೆ. ಇದರೊಂದಿಗೆ ಭಾರತ- ಕೆನಡಾ ಸಂಬಂಧ (India- Canada relations) ಇನ್ನಷ್ಟು ಬಿಗಡಾಯಿಸಿದೆ.

ಇಂದು ಭಾರತೀಯ ವಿದೇಶಾಂಗ ಇಲಾಖೆಯು ಕೆನಡಾದ ರಾಯಭಾರಿಯನ್ನು ಕರೆಸಿಕೊಂಡು, ಇನ್ನು ಐದು ದಿನದಲ್ಲಿ ದೇಶ ಬಿಟ್ಟು ಆಚೆಗೆ ಹೋಗುವಂತೆ ಆದೇಶ ನೀಡಿದೆ. ಭಾರತದ ಆಂತರಿಕ ವ್ಯವಹಾರಗಳಲ್ಲಿ ಕೆನಡಾದ ಹಸ್ತಕ್ಷೇಪವನ್ನು ಖಂಡಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ (Khalistan terrorist) ಹರ್ದೀಪ್ ಸಿಂಗ್‌ ನಿಜ್ಜರ್‌ ಹತ್ಯೆಯ ಹಿನ್ನೆಲೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ್ದರು. ಇದಾಗಿ ಒಂದು ದಿನದಲ್ಲಿ ಭಾರತದ ರಾಜತಾಂತ್ರಿಕರನ್ನು ಅಲ್ಲಿಂದ ಹೊರಗೆಹಾಕಿ ವಿದೇಶಾಂಗ ಇಲಾಖೆ ಆದೇಶ ನೀಡಿತ್ತು. ಅದಕ್ಕೆ ಪ್ರತಿಯಾಗಿ ಕಟುವಾದ ಪ್ರಕಟಣೆಯ ತಿರುಗೇಟು ನೀಡಿರುವ ಭಾರತ, ಕೆನಡಾದ ರಾಯಭಾರಿಗೆ ಗೇಟ್‌ಪಾಸ್‌ ನೀಡಿದೆ.

ತನ್ನ ರಾಯಭಾರಿಯನ್ನು ಹೊರಹಾಕಿರುವ ಕ್ರಮವನ್ನು ಭಾರತ ವಿದೇಶಾಂಗ ಇಲಾಖೆ ಕಟುವಾದ ಶಬ್ದಗಳಲ್ಲಿ ಖಂಡಿಸಿದ್ದು, ಕೆನಡಾ ಪ್ರಧಾನಿ ಹಾಗೂ ಅಲ್ಲಿನ ವಿದೇಶಾಂಗ ಸಚಿವರು ನೀಡಿರುವ ಹೇಳಿಕೆಗಳು ಅಸಂಬದ್ಧವಾಗಿವೆ ಹಾಗೂ ದುರುದ್ದೇಶಪೂರಿತವಾಗಿವೆ ಎಂದಿದೆ.

ಭಾರತ ಸರ್ಕಾರ ಕೆನಡಾದ ಪ್ರಧಾನಿಯ ಮಾತುಗಳನ್ನು ತಿರಸ್ಕರಿಸಿದೆ. ಕೆನಡಾವೇ ಭಾರತ ವಿರೋಧಿ ಶಕ್ತಿಗಳಿಗೆ ಆಶ್ರಯ ನೀಡಿದೆ. ಅವರ ವಿರುದ್ಧ ಪರಿಣಾಮಕಾರಿ ಮತ್ತು ತ್ವರಿತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಜಿ20 ಶೃಂಗಸಭೆಗೆ (G20 summit delhi) ಜಸ್ಟಿನ್‌ ಬಂದಿದ್ದಾಗಲೂ, ಪ್ರಧಾನಿ ನರೇಂದ್ರ ಮೋದಿ (pm narendra modi) ತಮ್ಮ ಈ ಕಳವಳವನ್ನು ವ್ಯಕ್ತಪಡಿಸಿದ್ದರು. ಪ್ರತಿಯಾಗಿ ಟ್ರುಡೊ, ಕೆನಡಾದಲ್ಲಿ ಖಲಿಸ್ತಾನಿಗಳ ಪ್ರತಿಭಟನೆಯ ಹಕ್ಕನ್ನು ತಾನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ನುಣುಚಿಕೊಂಡಿದ್ದರು.

ಕೆನಡಾಗೆ ತೆರಳಿದ ಬಳಿಕ ಜಸ್ಟಿನ್‌, ಈ ಬಗ್ಗೆ ತಮ್ಮ ʼಆಳವಾದ ಕಳವಳ’ವನ್ನು ವ್ಯಕ್ತಪಡಿಸಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ʼವೈಯಕ್ತಿಕವಾಗಿ ಮತ್ತು ನೇರವಾಗಿ’ ಆ ಕಳವಳ ವ್ಯಕ್ತಪಡಿಸಿದ್ದೇನೆ ಎಂದಿದ್ದರು. ʼನಮ್ಮ ನೆಲದಲ್ಲಿ ಕೆನಡಾದ ಪ್ರಜೆಯನ್ನು ಕೊಂದಿರುವುದು ನಮ್ಮ ಸಾರ್ವಭೌಮತ್ವದ ಉಲ್ಲಂಘನೆ’ ಎಂದಿದ್ದರು.

ಭಾರತ- ಕೆನಡಾ ವ್ಯಾಪಾರ ವ್ಯವಹಾರ ಒಪ್ಪಂದ ಮಾತುಕತೆಗಳೂ ಇದರಿಂದಾಗಿ ನನೆಗುದಿಗೆ ಬಿದ್ದಿವೆ.

ಇದನ್ನೂ ಓದಿ: Justin Trudeau: ಟ್ರುಡೊ ಆರೋಪ ಅಸಂಬದ್ಧ; ಕೆನಡಾವೇ ಭಾರತ ವಿರೋಧಿಗಳಿಗೆ ಆಶ್ರಯ ನೀಡಿದೆ: ಭಾರತ ಕಟು ಪ್ರತಿಕ್ರಿಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Narendra Modi: ಸಂಸತ್‌ನಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ಇಬ್ಬರು ಪುಟಾಣಿಗಳೊಂದಿಗೆ ಮೋದಿ ನಲಿದಾಡಿದ್ದಾರೆ. ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಇಬ್ಬರು ಮೊಮ್ಮಕ್ಕಳು ಸಂಸತ್‌ಗೆ ಆಗಮಿಸಿದ್ದಾರೆ. ಅವರು ನರೇಂದ್ರ ಮೋದಿ ಅವರ ಕಚೇರಿಗೆ ತೆರಳಿದ್ದು, ಇಬ್ಬರೂ ಆಗಮಿಸುತ್ತಲೇ ಮೋದಿ ಅವರು ನಗುತ್ತಲೇ ಅವರನ್ನು ಸ್ವಾಗತಿಸಿದ್ದಾರೆ. ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಕಾಲ ಕಳೆದ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಚುನಾವಣೆ ರ‍್ಯಾಲಿ ಇರಲಿ, ರಕ್ಷಾಬಂಧನವೇ ಇರಲಿ, ಎಲ್ಲಿಯೇ ಮಕ್ಕಳನ್ನು ಕಂಡರೂ ಅವರೊಂದಿಗೆ ಮೋದಿ ಬೆರೆಯುತ್ತಾರೆ. ಅವರ ಜತೆ ಒಂದಷ್ಟು ಕಾಲ ಕಳೆಯುತ್ತಾರೆ. ಕಿವಿ ಹಿಂಡಿ ಚೇಷ್ಟೆ ಮಾಡುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ನರೇಂದ್ರ ಮೋದಿ ಅವರು ಬುಧವಾರ (ಜೂನ್‌ 26) ಸಂಸತ್ತಿನಲ್ಲಿ (Parliament) ಇಬ್ಬರು ಬಾಲಕಿಯರೊಂದಿಗೆ ಕಾಲ ಕಳೆದಿದ್ದಾರೆ. ಸಂಸತ್‌ ಅಧಿವೇಶನ, ಪ್ರತಿಪಕ್ಷಗಳ ಗಲಾಟೆ, ನೂತನ ಸ್ಪೀಕರ್‌ ಆಯ್ಕೆಯ ಭರಾಟೆಯ ಮಧ್ಯೆಯೂ ಮೋದಿ ಅವರು ಇಬ್ಬರು ಪುಟಾಣಿಗಳೊಂದಿಗೆ ಕಾಲ ಕಳೆದಿದ್ದಾರೆ.

ಹೌದು, ಸಂಸತ್‌ನಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ಇಬ್ಬರು ಪುಟಾಣಿಗಳೊಂದಿಗೆ ಮೋದಿ ನಲಿದಾಡಿದ್ದಾರೆ. ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಇಬ್ಬರು ಮೊಮ್ಮಕ್ಕಳು ಸಂಸತ್‌ಗೆ ಆಗಮಿಸಿದ್ದಾರೆ. ಅವರು ನರೇಂದ್ರ ಮೋದಿ ಅವರ ಕಚೇರಿಗೆ ತೆರಳಿದ್ದು, ಇಬ್ಬರೂ ಆಗಮಿಸುತ್ತಲೇ ಮೋದಿ ಅವರು ನಗುತ್ತಲೇ ಅವರನ್ನು ಸ್ವಾಗತಿಸಿದ್ದಾರೆ. ಇನ್ನು, ಪುಟಾಣಿಗಳೂ ಅಷ್ಟೇ, ಮೋದಿ ಅವರ ಎದುರು ದೇಶಭಕ್ತಿ ಗೀತೆಯನ್ನು ಒಟ್ಟಿಗೆ ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಇಬ್ಬರೂ ಒಂದೇ ಬಣ್ಣದ ದಿರಸು ಧರಿಸಿದ್ದು ವಿಶೇಷವಾಗಿತ್ತು. ಇಬ್ಬರು ಪುಟಾಣಿಗಳೊಂದಿಗೆ ಮೋದಿ ಸಮಯ ಕಳೆದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

18ನೇ ಲೋಕಸಭೆಯ ಮೊದಲ ಅಧಿವೇಶನದ ಮೂರನೇ ದಿನವಾದ ಬುಧವಾರ ಹಲವು ಮಹತ್ವದ ಘಟನೆಗಳಿಗೆ ಸಂಸತ್ ಸಾಕ್ಷಿಯಾಯಿತು. ಸ್ಪೀಕರ್‌ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್‌ ಆಗಿ ಚುನಾಯಿತರಾಗಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿಮತ್ತು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪರಸ್ಪರ ಹಸ್ತಾಲಾಘವ ಮಾಡಿದ ಅಪರೂಪದ ಕ್ಷಣಗಳಿಗೆ ಇಡೀ ಸದನವೇ ಸಾಕ್ಷಿ ಆಯಿತು.

ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಚುನಾಯಿತರಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕರ ರಾಹುಲ್‌ ಗಾಂಧಿ ತಮ್ಮ ತಮ್ಮ ಸ್ಥಾನಗಳಿಂದ ಎದ್ದು ಬಂದು ಓಂ ಬಿರ್ಲಾ ಅವರನ್ನು ಸ್ವಾಗತಿಸಿದರು. ಈ ವೇಳೆ ಪರಸ್ಪರ ಶೇಕ್‌ ಹ್ಯಾಂಡ್‌ ಮಾಡಿಕೊಂಡರು. ಬಳಿಕ ಓಂ ಬಿರ್ಲಾ ಅವರನ್ನು ಅವರ ಸೀಟ್‌ವರೆಗೆ ಕರೆದೊಯ್ದರು. ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತ ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. 

ಇದನ್ನೂ ಓದಿ: Parliament Sessions: ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸದನ; ಶೇಕ್‌ ಹ್ಯಾಂಡ್‌ ಮಾಡಿದ ಪ್ರಧಾನಿ ಮೋದಿ, ರಾಹುಲ್‌

Continue Reading

ದೇಶ

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Nitin Gadkari: ದೇಶದಲ್ಲಿ ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯ ಜಾರಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೆಚ್ಚುವರಿಯಾಗಿ 10 ಸಾವಿರ ಕೋಟಿ ರೂಪಾಯಿ ಆದಾಯ ಲಭಿಸುವ ಜತೆಗೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನೂ ಸರಿಪಡಿಸಲಾಗುತ್ತದೆ ಎಂಬುದಾಗಿ ನಿತಿನ್‌ ಗಡ್ಕರಿ ಹೇಳಿದ್ದಾರೆ. ವರ್ಷಾಂತ್ಯದಲ್ಲೇ ನೂತನ ಟೋಲ್‌ ಸಂಗ್ರಹ ವ್ಯವಸ್ಥೆ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

VISTARANEWS.COM


on

Nitin Gadkari
Koo

ನವದೆಹಲಿ: ಸತತ ಮೂರನೇ ಅವಧಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ವಹಿಸಿಕೊಂಡಿರುವ ನಿತಿನ್‌ ಗಡ್ಕರಿ (Nitin Gadkari) ಅವರು ದೇಶದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹ ವ್ಯವಸ್ಥೆಯನ್ನು ಬದಲಿಸಲು ತೀರ್ಮಾನಿಸಿದ್ದಾರೆ. ಟೋಲ್‌ ಗೇಟ್‌ಗಳ ಬದಲಿಗೆ ಜಿಪಿಎಸ್‌, ಸ್ಯಾಟಲೈಟ್‌ ಆಧಾರಿತ ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ (GNSS) ಅಳವಡಿಸಿಕೊಳ್ಳಲು ಮುಂದಾಗಿದ್ದಾರೆ. ಇದರಿಂದ ಜನರಿಗೆ ಸಮಯ ಉಳಿತಾಯವಾಗುವ ಜತೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) 10 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯ ಲಭಿಸಲಿದೆ ಎಂದು ನಿತಿನ್‌ ಗಡ್ಕರಿ ಹೇಳಿದ್ದಾರೆ.

“ಜಿಎನ್‌ಎಸ್‌ಎಸ್‌ ತಂತ್ರಜ್ಞಾನದ ಅಳವಡಿಕೆಯಿಂದ 10 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯದ ಜತೆಗೆ ವ್ಯವಸ್ಥೆಯಲ್ಲಿರುವ ಶೇ.99ರಷ್ಟು ಲೋಪದೋಷಗಳನ್ನು ಕೂಡ ತೆಗೆಯಬಹುದಾಗಿದೆ. ಯಾವುದೇ ಲೋಪಗಳು ಇಲ್ಲದ, ಪಾರದರ್ಶಕ ವ್ಯವಸ್ಥೆಯಿಂದ ಕೂಡಿದ ಜಿಎನ್‌ಎಸ್‌ಎಸ್‌ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಆದಾಯದ ಜತೆಗೆ ಜನರಿಗೆ ಉತ್ತಮ ಸೇವೆ ಒದಗಿಸಲಾಗುವುದು” ಎಂದು ನಿತಿನ್‌ ಗಡ್ಕರಿ ಮಾಹಿತಿ ನೀಡಿದ್ದಾರೆ. ಜಿಎನ್‌ಎಸ್‌ಎಸ್‌ ಅಳವಡಿಕೆಯ ಕುರಿತು ಕೊನೆಯ ಹಂತದ ತೀರ್ಮಾನ ಬಾಕಿ ಇದೆ. ವರ್ಷಾಂತ್ಯದಲ್ಲೇ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಏನಿದು ಜಿಪಿಎಸ್‌ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆ?

ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆ ಜಾರಿಗೆ ಬಂದರೆ, ವಾಹನಗಳಿಗೆ ಜಿಪಿಎಸ್‌ ಯಂತ್ರಗಳನ್ನು ಅಳವಡಿಸಲಾಗುತ್ತದೆ. ಜಿಪಿಎಸ್‌ ಯಂತ್ರವು ಉಪಗ್ರಹದೊಂದಿಗೆ ಸಂಪರ್ಕ ಹೊಂದಿರುತ್ತದೆ. ಇದರಿಂದಾಗಿ ನಮ್ಮ ವಾಹನವು ಯಾವ ಟೋಲ್‌ ರಸ್ತೆಗೆ ಪ್ರವೇಶ ಪಡೆದಿದೆ, ಯಾವ ರಸ್ತೆಯಿಂದ ನಿರ್ಗಮಿಸಿದೆ ಎಂಬುದನ್ನು ಲೆಕ್ಕ ಹಾಕಿ, ಬ್ಯಾಂಕ್‌ ಖಾತೆಯಿಂದ ಟೋಲ್‌ ಕಡಿತಗೊಳಿಸುತ್ತದೆ.

ಉಪಗ್ರಹ ಆಧಾರಿತ ಟೋಲ್‌ ಸಂಗ್ರಹ ವ್ಯವಸ್ಥೆಯು ಜಾರಿಗೆ ಬಂದರೆ, ಭಾರತದಲ್ಲಿ ಸಮಯದ ಜತೆಗೆ ಹಣವನ್ನೂ ಉಳಿತಾಯ ಮಾಡಬಹುದಾಗಿದೆ. ಟೋಲ್‌ ಸಂಗ್ರಹ ಇರುವ ಹೆದ್ದಾರಿಯಲ್ಲಿ ನಾವು ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಟೋಲ್‌ ಶುಲ್ಕ ಪಾವತಿಸುತ್ತೇವೆ. ಟೋಲ್‌ ಗೇಟ್‌ ನಂತರ ಅರ್ಧ ಕಿಲೋಮೀಟರ್‌ ಇದ್ದರೂ, ಪೂರ್ತಿ ಹಣವನ್ನು ನಾವೀಗ ಪಾವತಿಸಬೇಕು. ಆದರೆ, ಸ್ಯಾಟಲೈಟ್‌ ಆಧಾರಿತ ಟೋಲ್‌ ವ್ಯವಸ್ಥೆ ಜಾರಿಗೆ ಬಂದರೆ, ಎಷ್ಟು ದೂರ ಕ್ರಮಿಸಿದ್ದೇವೋ, ಅಷ್ಟಕ್ಕೆ ಮಾತ್ರ ಹಣ ಪಾವತಿಸುತ್ತೇವೆ.

ಇದನ್ನೂ ಓದಿ: Driverless Car: ಭಾರತದಲ್ಲಿ ಡ್ರೈವರ್‌‌ಲೆಸ್ ಕಾರುಗಳಿಗೆ ಅನುಮತಿ ನೀಡಲ್ಲ ಎಂದ ನಿತಿನ್ ಗಡ್ಕರಿ

Continue Reading

ದೇಶ

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Anant Ambani Video: ಮುಕೇಶ್ ಅಂಬಾನಿ, ಅವರ ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್ (Radhika Merchant) ಅವರು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಜುಲೈ 12ರಂದು ನಡೆಯಲಿರುವ ತಮ್ಮ ಮಗ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಆಮಂತ್ರಣವನ್ನು ನೀಡಿದರು. ಈ ಸಂದರ್ಭದಲ್ಲಿನ ಒಂದು ದೃಶ್ಯ ಈಗ ವೈರಲ್‌ ಆಗಿದೆ.

VISTARANEWS.COM


on

By

Anant Ambani
Koo

ಮಹಾರಾಷ್ಟ್ರ (maharastra) ಮುಖ್ಯಮಂತ್ರಿ (Chief Minister) ಏಕನಾಥ್‌ ಶಿಂಧೆ ಅವರಿಗೆ ಮದುವೆ ಆಮಂತ್ರಣ ನೀಡಲು ಹೋದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (mukesh ambani) ಅವರ ಮಗ ಅನಂತ್ ಅಂಬಾನಿ (Anant Ambani Video), ಸೀದಾ ಮುಖ್ಯಮಂತ್ರಿಯ ಹೆಗಲ ಮೇಲೆಯೇ ಕೈ ಹಾಕಿ ಫೋಟೋಗೆ ಪೋಸ್ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಎಷ್ಟೇ ಶ್ರೀಮಂತಿಕೆ ಇದ್ದರೇನು? ಕಾಮನ್‌ಸೆನ್ಸ್‌ ಇಲ್ಲದಿದ್ದರೆ ಎಲ್ಲವೂ ವ್ಯರ್ಥ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮುಕೇಶ್ ಅಂಬಾನಿ, ಅವರ ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್ (Radhika Merchant) ಅವರು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಜುಲೈ 12ರಂದು ನಡೆಯಲಿರುವ ತಮ್ಮ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಆಮಂತ್ರಣವನ್ನು ನೀಡಿದರು.

ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಬೆಳಗ್ಗೆ ಹಂಚಿಕೊಂಡಿರುವ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೋದಲ್ಲಿ ಅಂಬಾನಿ ಪುತ್ರ ಅನಂತ್ ಅಂಬಾನಿ ಮುಖ್ಯಮಂತ್ರಿ ಶಿಂಧೆ ಅವರ ಹೆಗಲಿಗೆ ಕೈ ಹಾಕಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಎಷ್ಟೇ ದೊಡ್ಡ ವ್ಯಕ್ತಿಯಾದರೂ ಮುಖ್ಯಮಂತ್ರಿಯ ಹೆಗಲಿಗೆ ಕೈ ಹಾಕಿ ಫೋಟೋ ಗೆ ಪೋಸ್ ನೀಡಿರುವುದು ಸರಿಯೇ ಎನ್ನುವ ಪ್ರಶ್ನೆ ಎದ್ದಿದ್ದು ನೆಟ್ಟಿಗರು ಸಾಕಷ್ಟು ರೀತಿಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಅನಂತ್ ಅಂಬಾನಿ ಮುಂಬಯಿನಲ್ಲಿ ರಾಧಿಕಾ ಅವರೊಂದಿಗಿನ ಮದುವೆಗೆ ವೈಯಕ್ತಿಕವಾಗಿ ಆಹ್ವಾನಿಸಲು ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮನೆಗೆ ಸೋಮವಾರ ಭೇಟಿ ನೀಡಿದರು. ರಿಲಯನ್ಸ್ ಫೌಂಡೇಶನ್‌ನ ಅಧ್ಯಕ್ಷೆ ಮತ್ತು ಸಂಸ್ಥಾಪಕಿ ನೀತಾ ಅಂಬಾನಿ ಅವರು ಸೋಮವಾರ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆಯ ಆಮಂತ್ರಣ ನೀಡಿದರು.

ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈಗಷ್ಟೇ ಬಾಬಾ ಭೋಲೆನಾಥ್ ಅವರ ದರ್ಶನ ಪಡೆದಿದ್ದೇನೆ. ಹಿಂದೂ ಸಂಪ್ರದಾಯದ ಪ್ರಕಾರ ನಾವು ಮೊದಲು ಭಗವಂತನ ಆಶೀರ್ವಾದವನ್ನು ಪಡೆಯುತ್ತೇವೆ. ನಾನು ಬಾಬಾಗೆ ಮದುವೆಯ ಆಮಂತ್ರಣವನ್ನು ನೀಡಿದ್ದೇನೆ. ನನಗೆ ತುಂಬಾ ಸಂತೋಷವಾಗಿದೆ. 10 ವರ್ಷಗಳ ಅನಂತರ ಇಲ್ಲಿಗೆ ಬಂದಿದ್ದೇನೆ. ಅಭಿವೃದ್ಧಿ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ನಮೋ ಘಾಟ್, ಸೌರಶಕ್ತಿ ಸ್ಥಾವರಗಳು ಮತ್ತು ಸ್ವಚ್ಛತೆಯನ್ನು ನೋಡಲು ನನಗೆ ಸಂತೋಷವಾಗಿದೆ. ಬದಲಾವಣೆಯನ್ನು ನೋಡಲು ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದರು.

10 ವರ್ಷಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ದರ್ಶನಕ್ಕೆ ಬಂದಿದ್ದೆ. ಇಲ್ಲಿನ ಕುಶಲಕರ್ಮಿಗಳೊಂದಿಗೆ ನನಗೆ ವಿಶೇಷ ಬಾಂಧವ್ಯವಿದೆ. ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ರಿಲಯನ್ಸ್ ಫೌಂಡೇಶನ್ ಮತ್ತು ಸ್ವದೇಶ್ ಮಾಧ್ಯಮದ ಮೂಲಕ ನಾವು ಅವರಿಗೆ ಜಾಗತಿಕ ಮನ್ನಣೆ ಮತ್ತು ಗೌರವವನ್ನು ನೀಡಲು ಬಯಸುತ್ತೇವೆ ಎಂದು ಅವರು ಹೇಳಿದರು.


ಜುಲೈ 12ರಂದು ಮದುವೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ಎಂಡಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜುಲೈ 12 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಸಾಂಪ್ರದಾಯಿಕ ಕೆಂಪು ಮತ್ತು ಚಿನ್ನದ ಬಣ್ಣದ ಕಾರ್ಡ್ ಅನ್ನು ಆಹ್ವಾನ ಪತ್ರಿಕೆ ಒಳಗೊಂಡಿದೆ ಎನ್ನಲಾಗಿದೆ.

ಮುಖ್ಯ ವಿವಾಹ ಸಮಾರಂಭಗಳು ಜುಲೈ 12ರಂದು ಪ್ರಾರಂಭವಾಗುತ್ತವೆ. ಜುಲೈ 13ರಂದು ಶುಭ ಆಶೀರ್ವಾದ್ ದಿನವಾಗಿರುತ್ತದೆ. ಜುಲೈ 14 ರಂದು ಮಂಗಲ್ ಉತ್ಸವ ಅಥವಾ ಮದುವೆಯ ಆರತಕ್ಷತೆ ನಡೆಯಲಿದೆ. ಪ್ರತಿ ಕಾರ್ಯಕ್ರಮಕ್ಕೂ ಡ್ರೆಸ್ ಕೋಡ್ ಇರಲಿದೆ. ಈ ಎಲ್ಲಾ ಕಾರ್ಯಗಳು ಬಿಕೆಸಿಯಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: Anant Ambani: ಅನಂತ್ ಅಂಬಾನಿ ಕೊಟ್ಟ ಪ್ರೇಮ ಪತ್ರ ಪ್ರಿಂಟ್ ಆಗಿದ್ದ ಗೌನ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌!

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ 2022ರಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ರಾಜಸ್ಥಾನದ ರಾಜಸಮಂದ್‌ನ ನಾಥದ್ವಾರ ಪಟ್ಟಣದ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ಸಾಂಪ್ರದಾಯಿಕ ‘ರೋಕಾ’ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.

ಫೆಬ್ರವರಿಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಆಚರಣೆಗಳ ಭಾಗವಾಗಿ, ಅಂಬಾನಿ ಕುಟುಂಬವು ಗುಜರಾತ್‌ನ ಜಾಮ್‌ನಗರದಲ್ಲಿರುವ ವಿಸ್ತಾರವಾದ ದೇವಾಲಯದ ಸಂಕೀರ್ಣದಲ್ಲಿ 14 ಹೊಸ ದೇವಾಲಯಗಳನ್ನು ನಿರ್ಮಿಸಲು ಅನುಕೂಲ ಮಾಡಿಕೊಟ್ಟಿತು. ಮಾರ್ಚ್ 1ರಿಂದ 3ರವರೆಗೆ ಜಾಮ್‌ನಗರ ನಗರದಲ್ಲಿ ಮೂರು ದಿನಗಳ ಪೂರ್ವ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು.

Continue Reading

ದೇಶ

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ ಎಂದು ಕಾಂಗ್ರೆಸ್‌ ಮಾಜಿ ನಾಯಕ ಆಚಾರ ಪ್ರಮೋದ್‌ ಕೃಷ್ಣಂ ಹೇಳಿದರು.

VISTARANEWS.COM


on

Acharya Pramod Krishnam
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ (Rahul Gandhi) ಗಾಂಧಿ ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಹೊರಹೊಮ್ಮಿದ್ದಾರೆ. ಪ್ರತಿಪಕ್ಷ ನಾಯಕನಾಗಿ ಅವರು ಕಾಂಗ್ರೆಸ್‌ ಜತೆಗೆ ಇಂಡಿಯಾ ಒಕ್ಕೂಟವನ್ನೂ (INDIA Bloc) ಸಂಸತ್‌ನಲ್ಲಿ ಪ್ರತಿನಿಧಿಸಲಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ (Acharya Pramod Krishnam) ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್‌ನಂತೆ ಪ್ರತಿಪಕ್ಷಗಳನ್ನೂ ರಾಹುಲ್‌ ಗಾಂಧಿ ನಿರ್ನಾಮ ಮಾಡಲಿದ್ದಾರೆ” ಎಂದು ಅವರು ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಯೊಂದಿಗೆ ಆಚಾರ್ಯ ಪ್ರಮೋದ್‌ ಕೃಷ್ಣಂ ಮಾತನಾಡಿದರು. “ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ” ಎಂದು ಹೇಳಿದರು. ಸಂಸತ್‌ನಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಜೈ ಪ್ಯಾಲೆಸ್ತೀನ್‌ ಎಂದು ಅಸಾದುದ್ದೀನ್‌ ಓವೈಸಿ ಘೋಷಣೆ ಕೂಗಿದ ಕುರಿತು ಪ್ರತಿಕ್ರಿಯಿಸಿದ ಅವರು, “ಇದು ಭಾರತ ಸಂಸತ್ತು. ಭಾರತದ ಸಂಸತ್‌ನಲ್ಲಿ ಹಾಗೆ ಘೋಷಣೆ ಕೂಗುವುದು ಸರಿಯಲ್ಲ. ಅವರು ಕೂಡಲೇ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಾಂಗ್ರೆಸ್‌ ನಾಯಕರೂ ಆಗಿದ್ದರು. ಕಲ್ಕಿ ಧಾಮದ ಪೀಠಾಧೀಶರೂ ಆಗಿರುವ ಇವರನ್ನು ಕೆಲವು ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಕಲ್ಕಿ ದೇವಾಲಯಕ್ಕೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಉಚ್ಚಾಟನೆ ಮಾಡಿತ್ತು. ಇದಾದ ಬಳಿಕ ನರೇಂದ್ರ ಮೋದಿ ಅವರು ಕಲ್ಕಿ ದೇವಾಲಯಕ್ಕೆ ಭೇಟಿ ನೀಡಿ, ಆಚಾರ್ಯ ಪ್ರಮೋದ್‌ ಕೃಷ್ಣಂ ಅವರನ್ನು ಹೊಗಳಿದ್ದರು.

“ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕಾಗಿ ಹೋರಾಡಿದರು. ಇದಕ್ಕೂ ಮೊದಲಿನ ಸರ್ಕಾರಗಳು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕೆ ಅವಕಾಶ ಕೊಡಲಿಲ್ಲ. ಕಾನೂನು ಹೋರಾಟವನ್ನೂ ಪ್ರಮೋದ್‌ ಕೃಷ್ಣಂ ಅವರು ಮಾಡಬೇಕಾಯಿತು. ಕಲ್ಕಿ ಮಂದಿರ ನಿರ್ಮಾಣವಾದರೆ ಕಾನೂನು ಸುವ್ಯಸ್ಥೆಗೆ ಧಕ್ಕೆಯುಂಟಾಗುತ್ತದೆ ಎಂದರು. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಕಲ್ಕಿ ಮಂದಿರ ನಿರ್ಮಾಣಕ್ಕಶಂಕುಸ್ತಾಪನೆ ನೆರವೇರಿಸಲಾಗುತ್ತದೆ” ಎಂದು ಪ್ರತಿಪಕ್ಷಗಳಿಗೆ ಮೋದಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದರು.

ಇದನ್ನೂ ಓದಿ: Parliament Session 2024: ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಹುಲ್‌ ಗಾಂಧಿ ಮಾಡಿದ್ದೇನು ಗೊತ್ತಾ? ವೈರಲಾಯ್ತು ವಿಡಿಯೋ

Continue Reading
Advertisement
Vijayalakshmi Darshan
ಕರ್ನಾಟಕ18 mins ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Monsoon Rain Boots Fashion
ಫ್ಯಾಷನ್40 mins ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ1 hour ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ1 hour ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು1 hour ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ2 hours ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್2 hours ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ2 hours ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest2 hours ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ3 hours ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌