India Canada Row: ಕೆನಡಾಗೆ ಭಾರತ ಮತ್ತೊಂದು ಗುದ್ದು; ವೀಸಾ ಸೇವೆಯೇ ರದ್ದು - Vistara News

ದೇಶ

India Canada Row: ಕೆನಡಾಗೆ ಭಾರತ ಮತ್ತೊಂದು ಗುದ್ದು; ವೀಸಾ ಸೇವೆಯೇ ರದ್ದು

India Canada Row: ಭಾರತದ ಜತೆಗಿನ ವ್ಯಾಪಾರ ಒಪ್ಪಂದವನ್ನು ಮುಂದೂಡಿ, ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಉಚ್ಚಾಟಿಸಿದ ಕೆನಡಾ ಸರ್ಕಾರಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಪೆಟ್ಟು ನೀಡಿದೆ.

VISTARANEWS.COM


on

Indian Visa And Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ ಜತೆಗಿನ ಒಪ್ಪಂದವನ್ನು ಮುಂದೂಡಿ, ಭಾರತದ ರಾಯಭಾರಿಯನ್ನು ಉಚ್ಚಾಟಿಸಿ, ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದೆಲ್ಲ ಆರೋಪ ಮಾಡುತ್ತಿರುವ ಕೆನಡಾ ಸರ್ಕಾರಕ್ಕೆ (India Canada Row) ಭಾರತ ಸರ್ಕಾರ ಮತ್ತೊಂದು ಪೆಟ್ಟು ನೀಡಿದೆ. ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನೇ (Visa Services) ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಆ ಮೂಲಕ ದಿನಕ್ಕೊಂದು ಉಪಟಳ ಮಾಡುತ್ತಿರುವ ಕೆನಡಾಗೆ ತಿರುಗೇಟು ನೀಡಿದೆ.

ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಕೆನಡಾ ಸರ್ಕಾರ ಭಾರತದ ವಿರುದ್ಧ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮುಂದಿನ ಆದೇಶದವರೆಗೆ ಅಥವಾ ಅನಿರ್ದಿಷ್ಟಾವಧಿವರೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನು ಸ್ಥಗಿತಗೊಳಿಸಿದೆ. ಈ ಕುರಿತು ಭಾರತ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸದಿದ್ದರೂ, ಕೆನಡಾದಲ್ಲಿ ವೀಸಾ ಅಪ್ಲಿಕೇಶನ್‌ ಸೆಂಟರ್‌ ಹೊಂದಿರುವ ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: Khalistani Terrorist: ಕೆನಡಾದಲ್ಲಿ ಮತ್ತೊಬ್ಬ ಭಾರತ ವಿರೋಧಿ ಖಲಿಸ್ತಾನಿ ಉಗ್ರನ ಹತ್ಯೆ

ಕೆನಡಾದಿಂದ ಭಾರತೀಯ ರಾಯಭಾರಿಯನ್ನು ಉಚ್ಚಾಟಿಸಿದ ಜಸ್ಟಿನ್‌ ಟ್ರುಡೊ ಕ್ರಮಕ್ಕೆ ಪ್ರತೀಕಾರವಾಗಿ ಕೆನಡಾದ ರಾಯಭಾರಿಯನ್ನು ಭಾರತ ಆಚೆಗಟ್ಟಿದೆ. ಇದರೊಂದಿಗೆ ಭಾರತ- ಕೆನಡಾ ಸಂಬಂಧ ಇನ್ನಷ್ಟು ಬಿಗಡಾಯಿಸಿದೆ. ಭಾರತೀಯ ವಿದೇಶಾಂಗ ಇಲಾಖೆಯು ಕೆನಡಾದ ರಾಯಭಾರಿಯನ್ನು ಕರೆಸಿಕೊಂಡು, ಇನ್ನು ಐದು ದಿನದಲ್ಲಿ ದೇಶ ಬಿಟ್ಟು ಆಚೆಗೆ ಹೋಗುವಂತೆ ಆದೇಶ ನೀಡಿದೆ. ಭಾರತದ ಆಂತರಿಕ ವ್ಯವಹಾರಗಳಲ್ಲಿ ಕೆನಡಾದ ಹಸ್ತಕ್ಷೇಪವನ್ನು ಖಂಡಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಕೆಲ ದಿನಗಳ ಹಿಂದಷ್ಟೇ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಜಸ್ಟಿನ್‌ ಟ್ರುಡೋ ಅವರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಮಾತಕತೆ ನಡೆಸಿದ್ದರು. ಇದೇ ವೇಳೆ, “ಕೆನಡಾದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಬೇಕು” ಎಂದು ಹೇಳಿದ್ದರು. ಖಲಿಸ್ತಾನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪರೋಕ್ಷವಾಗಿ ಆಗ್ರಹಿಸಿದ್ದರು. ಇದೇ ಕಾರಣಕ್ಕಾಗಿ ಕೆನಡಾ ಸರ್ಕಾರವು ಭಾರತದ ಜತೆಗಿನ ಒಪ್ಪಂದವನ್ನು ಮುಂದೂಡಿದೆ ಹಾಗೂ ಶೀತಲ ಸಮರ ಸಾರಿದೆ ಎಂದು ಹೇಳಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

Lok Sabha Election 2024: ಬೆಳಿಗ್ಗೆಯೇ ಬಂದು ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನದ ಕೇಂದ್ರ ಬಳಿ ಜನ ಸಾಗರ

Lok Sabha Election 2024: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತ್‌ನ ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕಂಡರಿ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ್ದಾರೆ. ಸುತ್ತ ನೆರೆದಿದ್ದ ಸಾವಿರಾರು ಜನರತ್ತ ಕೈ ಬೀಸುತ್ತ ಮತದಾನ ಕೇಂದ್ರಕ್ಕೆ ತೆರಳಿ ವೋಟು ಮಾಡಿದರು. ರಸ್ತೆಯುದ್ದಕ್ಕೂ ನಿಂತಿದ್ದ ಜನರು ಮೋದಿ ಪರ ಘೋಷಣೆ ಕೂಗಿದರು.

VISTARANEWS.COM


on

Lok Sabha Election 2024
Koo

ಗಾಂಧಿನಗರ: ಲೋಕಸಭಾ ಚುನಾವಣೆ (Lok Sabha Election 2024)ಯ ಮೂರನೇ ಹಂತದ ಮತದಾನ ಆರಂಭವಾಗಿದೆ. 93 ಕ್ಷೇತ್ರಗಳಲ್ಲಿ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಅದರಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಗುಜರಾತ್‌ನ ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕಂಡರಿ ಶಾಲೆ (Nishan Higher Secondary School)ಯ ಮತದಾನ ಕೇಂದ್ರದಲ್ಲಿ ಬೆಳಗ್ಗೆ 7.45ರ ಸುಮಾರಿಗೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಕೇಂದ್ರ ಸಚಿವ ಅಮಿತ್‌ ಶಾ (Amit Shah) ಅವರೊಂದಿಗೆ ಆಗಮಿಸಿದ ಅವರು ಸುತ್ತ ನೆರೆದಿದ್ದ ಸಾವಿರಾರು ಜನರತ್ತ ಕೈ ಬೀಸುತ್ತ ಮತದಾನ ಕೇಂದ್ರಕ್ಕೆ ತೆರಳಿ ವೋಟು ಮಾಡಿದರು.

ಮತದಾನ ಕೇಂದ್ರದ ಬಳಿಗೆ ಪ್ರಧಾನಿ ಸುಮಾರು 7.30ರ ಹೊತ್ತಿಗೆ ಆಗಮಿಸಿದ್ದರು. ಅಮಿತ್‌ ಶಾ ಪ್ರಧಾನಿಯನ್ನು ಸ್ವಾಗತಿಸಿದರು. ಬಳಿಕ ಇಬ್ಬರು ನಾಯಕರು ಸುತ್ತ ನೆರೆದಿದ್ದ ಸಾವರ್ಜನಿಕರತ್ತ ಕೈ ಬೀಸುತ್ತ ಮತಗಟ್ಟೆಗೆ ತೆರಳಿದರು. ರಸ್ತೆಯುದ್ದಕ್ಕೂ ನಿಂತಿದ್ದ ಜನರು ಮೋದಿ ಪರ ಘೋಷಣೆ ಕೂಗಿದರು. ಈ ಮಧ್ಯೆ ಅಭಿಮಾನಿಗಳಿಗೆ ಮೋದಿ ಆಟೋಗ್ರಾಫ್‌ ನೀಡುವುದನ್ನೂ ಮರೆಯಲಿಲ್ಲ. ಅಮಿತ್‌ ಶಾ ಸ್ಪರ್ಧಿಸುತ್ತಿರುವ ಗಾಂಧಿನಗರದಲ್ಲಿಯೂ ಇಂದು ಮತದಾನ ನಡೆಯಲಿದ್ದು, ಕೆಲ ಹೊತ್ತಿನಲ್ಲೇ ಅವರು ಹಕ್ಕು ಚಲಾಯಿಸಲಿದ್ದಾರೆ.

ಹಕ್ಕು ಚಲಾಯಿಸಿದ ಗಣ್ಯರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಮತ ಚಲಾಯಿಸಿದರು. ಅಜಿತ್ ಅವರ ಪತ್ನಿ ಸುನೇತ್ರಾ ಮತ್ತು ತಾಯಿ ಕೂಡ ಬಾರಾಮತಿಯ ಕಟೇವಾಡಿ ಮತಗಟ್ಟೆಯಲ್ಲಿ ಬೆಳಿಗ್ಗೆ ಮತದಾನ ಮಾಡಿದರು.

ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಲು ಕರೆ

ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ ಅವರು, ಈ ಮೂರನೇ ಹಂತದಲ್ಲಿ ಎಲ್ಲರೂ ಹಕ್ಕು ಚಲಾಯಿಸುವ ಮೂಲಕ ದಾಖಲೆ ಪ್ರಮಾಣದ ಮತದಾನಕ್ಕೆ ಕಾರಣವಾಗಬೇಕು ಎಂದು ಕರೆ ನೀಡಿದ್ದಾರೆ. ʼʼದಾಖಲೆ ಸಂಖ್ಯೆಯ ಮತದಾರರು ಇಂದು ತಮ್ಮ ಹಕ್ಕು ಚಲಾಯಿಸಬೇಕು. ಅವರ ಸಕ್ರಿಯ ಭಾಗವಹಿಸುವಿಕೆ ಖಂಡಿತವಾಗಿಯೂ ಚುನಾವಣೆಗಳನ್ನು ಹೆಚ್ಚು ರೋಮಾಂಚಕವಾಗಿಸುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಕರ್ನಾಟಕ ಸೇರಿ ಒಟ್ಟು 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದೆ. ಇದರಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೂ ಸೇರಿವೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

ಮತದಾನ ನಡೆಯುವ ರಾಜ್ಯಗಳು

ನಗರ್ ಹವೇಲಿ ಮತ್ತು ದಮನ್ ಮತ್ತು ದಿಯು (2), ಅಸ್ಸಾಂ (4), ಬಿಹಾರ (5), ಛತ್ತೀಸ್‌ಗಢ (7), ದಾದ್ರಾ, ಗೋವಾ (2), ಗುಜರಾತ್ (25), ಕರ್ನಾಟಕ (14), ಮಹಾರಾಷ್ಟ್ರ (11), ಮಧ್ಯಪ್ರದೇಶ (8), ಉತ್ತರ ಪ್ರದೇಶ (10) ಮತ್ತು ಪಶ್ಚಿಮ ಬಂಗಾಳ (4)ಗಳಲ್ಲಿ ಮತದಾನ ನಡೆಯುತ್ತಿದೆ. ಸೂರತ್ ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆಲುವು ಸಾಧಿಸಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರಕ್ಕೂ ಇಂದೇ ಮತದಾನ ನಿಗದಿಯಾಗಿತ್ತು. ಆದರೆ ಪ್ರತಿಕೂಲ ಹವಾಮಾನ ಕಾರಣದಿಂದ ಚುನಾವಣಾ ಆಯೋಗ ಇತ್ತೀಚೆಗೆ ಇದನ್ನು ಮೇ 25ಕ್ಕೆ ಮುಂದೂಡಿತ್ತು.

Continue Reading

ದೇಶ

Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

Lok Sabha Elections 2024:ಗೂಗಲ್‌ ಇಂದು ಹೊಸ ಡೂಡಲ್‌ ಅನ್ನು ಪ್ರಕಟಿಸಿದ್ದು, ತನ್ನ ಲೋಗೋದಲ್ಲಿ ಮತದಾನವನ್ನು ಸಾಂಕೇತಿಕವಾಗಿ ತೋರಿಸುವ ಶಾಯಿ ಇರುವ ಬೆರಳಿನ ಚಿತ್ರವನ್ನು ಇಟ್ಟಿದೆ. ಆ ಲೋಗೋವನ್ನು ಕ್ಲಿಕ್‌ ಮಾಡಿದರೆ ಗೂಗಲ್‌ ಬಳಕೆದಾರರಿಗೆ ಚುನಾವಣೆ, ಮತದಾನಕ್ಕೆ ಸಂಬಂಧಿಸಿದ ಸುದ್ದಿಗಳು ಲಭ್ಯವಾಗಲಿವೆ.

VISTARANEWS.COM


on

Google doodle
Koo

ನವದೆಹಲಿ: ದೇಶಾದ್ಯಂತ ಇಂದು ಲೋಕಸಭೆ ಚುನಾವಣೆ(Lok Sabha Elections 2024)ಯ ಮೂರನೇ ಹಂತ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಮತದಾರರು ಬಹಳಷ್ಟು ಉತ್ಸಾಹದಿಂದಲೇ ಮತ ಚಲಾಯಿಸುತ್ತಿದ್ದರೆ, ಇತ್ತ ಈ ಪ್ರಜಾಪ್ರಭುತ್ವದ ಹಬ್ಬವನ್ನು ಗೂಗಲ್‌(Google) ಕೂಡ ಸಂಭ್ರಮಿಸುತ್ತಿದೆ. ಗೂಗಲ್‌ ಇಂದು ಹೊಸ ಡೂಡಲ್‌(Google Doodle) ಅನ್ನು ಪ್ರಕಟಿಸಿದ್ದು, ತನ್ನ ಲೋಗೋದಲ್ಲಿ ಮತದಾನವನ್ನು ಸಾಂಕೇತಿಕವಾಗಿ ತೋರಿಸುವ ಶಾಯಿ ಇರುವ ಬೆರಳಿನ ಚಿತ್ರವನ್ನು ಇಟ್ಟಿದೆ. ಆ ಲೋಗೋವನ್ನು ಕ್ಲಿಕ್‌ ಮಾಡಿದರೆ ಗೂಗಲ್‌ ಬಳಕೆದಾರರಿಗೆ ಚುನಾವಣೆ, ಮತದಾನಕ್ಕೆ ಸಂಬಂಧಿಸಿದ ಸುದ್ದಿಗಳು ಲಭ್ಯವಾಗಲಿವೆ.

ಏನಿದು ಗೂಗಲ್‌ ಡೂಡಲ್‌?

ಗೂಗಲ್‌ ಲೋಗೋವನ್ನು ತಾತ್ಕಾಲಿಕವಾಗಿ ಬದಲಾಯಿಸುವುದನ್ನು ಗೂಗಲ್‌ ಡೂಡಲ್‌ ಎಂದು ಕರೆಯಲಾಗುತ್ತದೆ. ಇದು ಜಾಗತಿಕ ಮತ್ತು ಸ್ಥಳೀಯ ರಜಾದಿನಗಳು, ಪ್ರಮುಖ ದಿನಾಚರಣೆಗಳು, ಸಮಾಜಕ್ಕೆ ಕೊಡುಗೆ ನೀಡಿರುವ ಪ್ರಸಿದ್ದ ವ್ಯಕ್ತಿಗಳುಗೆ ಗೌರವ ನೀಡುವ ಉದ್ದೇಶದಿಂದ ಗೂಗಲ್‌ ಈ ಡೂಡಲ್‌ ಅನ್ನು ಪರಿಚಯಿಸಿದೆ. ಆಯಾಯ ದಿನದಂದು ಲೋಗೋವನ್ನು ಬದಲಾಯಿಸಲಾಗುತ್ತದೆ. ಅದನ್ನು ಕ್ಲಿಕ್‌ ಮಾಡಿದಾಗ ಅದಕ್ಕೆ ಸಂಬಂಧಿಸಿದ ಮಾಹಿತಿ ಲಭ್ಯವಾಗಲಿದೆ.

ಕರ್ನಾಟಕ ಸೇರಿ ದೇಶದ ವಿವಿಧ ಕಡೆ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ದೇಶದ 11 ರಾಜ್ಯ ಮತ್ತು ಕೇಂದ್ರಾಡಳಿತದ ಪ್ರದೇಶಗಳ 93 ಕ್ಷೇತ್ರಗಳಲ್ಲಿನ ಮತದಾನ ನಡೆಯುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಬಿಜೆಪಿಗೆ ಈ ಹಂತ ಪ್ರಮುಖ ಎನಿಸಿಕೊಂಡಿದೆ. ಮೂರನೇ ಹಂತದಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಮನ್ಸುಖ್ ಮಾಂಡವಿಯಾ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ (ವಿದಿಶಾ) ಮತ್ತು ದಿಗ್ವಿಜಯ್ ಸಿಂಗ್ (ರಾಜ್‌ಗಢ) ಅವರ ಭವಿಷ್ಯ ಇಂದೇ ನಿರ್ಧಾರವಾಗಲಿದೆ. ಜತೆಗೆ ಪ್ರಮುಖ ಬಿಜೆಪಿ ನಾಯಕರಾದ ಪುರುಷೋತ್ತಮ್ ರೂಪಾಲಾ (ರಾಜ್‌ಕೋಟ್‌), ಪ್ರಹ್ಲಾದ್ ಜೋಶಿ (ಧಾರವಾಡ) ಮತ್ತು ಎಸ್‌.ಪಿ. ಸಿಂಗ್ ಬಘೇಲ್ (ಆಗ್ರಾ) ಅವರಿಗೂ ಈ ಹಂತ ನಿರ್ಣಾಯಕವಾಗಲಿದೆ.

ಗುಜರಾತ್‌ನಲ್ಲಿ ಒಟ್ಟು 26 ಕ್ಷೇತ್ರಗಳಲ್ಲಿ ಈ ಪೈಕಿ ಒಂದು ಕಡೆ ಈಗಾಗಲೇ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ಇನ್ನು ಉಳಿದ 25, ಮಹಾರಾಷ್ಟ್ರದ 11, ಉತ್ತರ ಪ್ರದೇಶದ 10, ಕರ್ನಾಟಕದ 28 ಸ್ಥಾನಗಳ ಪೈಕಿ 14, ಛತ್ತೀಸ್‌ಗಢದ 7, ಬಿಹಾರದ 5, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ತಲಾ 4 ಮತ್ತು ಗೋವಾದ ಎಲ್ಲ 2, ಮಧ್ಯಪ್ರದೇಶದ 9 ಸ್ಥಾನಗಳಿಗೆ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಜತೆಗೆ ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯು (2 ಸ್ಥಾನಗಳು)ಗಳಲ್ಲಿಯೂ ಇಂದು ವೋಟಿಂಗ್‌ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ನಾಲ್ಕು ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿದ್ದು, ಎಡ ಪಕ್ಷ-ಕಾಂಗ್ರೆಸ್ ಒಕ್ಕೂಟ ಮತ್ತು ಟಿಎಂಸಿ ನಡುವೆ ಅಲ್ಪಸಂಖ್ಯಾತ ಮತಗಳ ವಿಭಜನೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಚಾರ ಫಲಿತಾಂಶವನ್ನು ನಿರ್ಣಯಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:http:Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

ಉತ್ತರ ಪ್ರದೇಶದ 10 ಲೋಕಸಭಾ ಕ್ಷೇತ್ರಗಳಿಗೆ ಮೂರನೇ ಹಂತದಲ್ಲಿ ಮತದಾನ ನಡೆಯಲಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕುಟುಂಬ ಎಲ್ಲರ ಗಮನ ಸೆಳೆದಿದೆ. ಡಿಂಪಲ್ ಯಾದವ್ ಅವರು ತಮ್ಮ ಮಾವ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ನಡೆದ ಉಪಚುನಾವಣೆಯಲ್ಲಿ ಗೆದ್ದ ಮೈನ್ಪುರಿ ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರ ಪುತ್ರ ಅಕ್ಷಯ ಯಾದವ್ ಅವರು ಗೆದ್ದಿದ್ದ ಫಿರೋಜಾಬಾದ್ ಸ್ಥಾನವನ್ನು ಮರಳಿ ಪಡೆಯಲು ಪ್ರಯತ್ನಿಸಲಿದ್ದಾರೆ.

Continue Reading

Lok Sabha Election 2024

Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

Lok Sabha Election 2024: ದೇಶದ 11 ರಾಜ್ಯ ಮತ್ತು ಕೇಂದ್ರಾಡಳಿತದ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಆರಂಭವಾಗಿದೆ. ವಿಶೇಷ ಎಂದರೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಗುಜರಾತ್‌ನ ಅಹಮದಾಬಾದ್‌ನಲ್ಲಿ ಮತದಾನ ಮಾಡಲಿದ್ದಾರೆ. ಮೂರನೇ ಹಂತದಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದು, 18.5 ಲಕ್ಷ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. 1.85 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಕರ್ನಾಟಕ ಸೇರಿ ದೇಶದ ವಿವಿಧ ಕಡೆ ಲೋಕಸಭಾ ಚುನಾವಣೆ (Lok Sabha Election 2024)ಯ ಮೂರನೇ ಹಂತದ ಮತದಾನ ಆರಂಭವಾಗಿದೆ. ದೇಶದ 11 ರಾಜ್ಯ ಮತ್ತು ಕೇಂದ್ರಾಡಳಿತದ ಪ್ರದೇಶಗಳ 93 ಕ್ಷೇತ್ರಗಳಲ್ಲಿನ ಮತದಾರರು ಇಂದು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ವಿಶೇಷ ಎಂದರೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಗುಜರಾತ್‌ನ ಅಹಮದಾಬಾದ್‌ನಲ್ಲಿ ಮತದಾನ ಮಾಡಲಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಬಿಜೆಪಿಗೆ ಈ ಹಂತ ಪ್ರಮುಖ ಎನಿಸಿಕೊಂಡಿದೆ. ಮೂರನೇ ಹಂತದಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಮನ್ಸುಖ್ ಮಾಂಡವಿಯಾ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ (ವಿದಿಶಾ) ಮತ್ತು ದಿಗ್ವಿಜಯ್ ಸಿಂಗ್ (ರಾಜ್‌ಗಢ) ಅವರ ಭವಿಷ್ಯ ಇಂದೇ ನಿರ್ಧಾರವಾಗಲಿದೆ. ಜತೆಗೆ ಪ್ರಮುಖ ಬಿಜೆಪಿ ನಾಯಕರಾದ ಪುರುಷೋತ್ತಮ್ ರೂಪಾಲಾ (ರಾಜ್‌ಕೋಟ್‌), ಪ್ರಹ್ಲಾದ್ ಜೋಶಿ (ಧಾರವಾಡ) ಮತ್ತು ಎಸ್‌.ಪಿ. ಸಿಂಗ್ ಬಘೇಲ್ (ಆಗ್ರಾ) ಅವರಿಗೂ ಈ ಹಂತ ನಿರ್ಣಾಯಕವಾಗಲಿದೆ.

ಗುಜರಾತ್‌ನಲ್ಲಿ ಒಟ್ಟು 26 ಕ್ಷೇತ್ರಗಳಲ್ಲಿ ಈ ಪೈಕಿ ಒಂದು ಕಡೆ ಈಗಾಗಲೇ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ಇನ್ನು ಉಳಿದ 25, ಮಹಾರಾಷ್ಟ್ರದ 11, ಉತ್ತರ ಪ್ರದೇಶದ 10, ಕರ್ನಾಟಕದ 28 ಸ್ಥಾನಗಳ ಪೈಕಿ 14, ಛತ್ತೀಸ್‌ಗಢದ 7, ಬಿಹಾರದ 5, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ತಲಾ 4 ಮತ್ತು ಗೋವಾದ ಎಲ್ಲ 2, ಮಧ್ಯಪ್ರದೇಶದ 9 ಸ್ಥಾನಗಳಿಗೆ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಜತೆಗೆ ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯು (2 ಸ್ಥಾನಗಳು)ಗಳಲ್ಲಿಯೂ ಇಂದು ವೋಟಿಂಗ್‌ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ನಾಲ್ಕು ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿದ್ದು, ಎಡ ಪಕ್ಷ-ಕಾಂಗ್ರೆಸ್ ಒಕ್ಕೂಟ ಮತ್ತು ಟಿಎಂಸಿ ನಡುವೆ ಅಲ್ಪಸಂಖ್ಯಾತ ಮತಗಳ ವಿಭಜನೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಚಾರ ಫಲಿತಾಂಶವನ್ನು ನಿರ್ಣಯಿಸುವ ಸಾಧ್ಯತೆ ಇದೆ.

ಉತ್ತರ ಪ್ರದೇಶದ 10 ಲೋಕಸಭಾ ಕ್ಷೇತ್ರಗಳಿಗೆ ಮೂರನೇ ಹಂತದಲ್ಲಿ ಮತದಾನ ನಡೆಯಲಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕುಟುಂಬ ಎಲ್ಲರ ಗಮನ ಸೆಳೆದಿದೆ. ಡಿಂಪಲ್ ಯಾದವ್ ಅವರು ತಮ್ಮ ಮಾವ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ನಡೆದ ಉಪಚುನಾವಣೆಯಲ್ಲಿ ಗೆದ್ದ ಮೈನ್ಪುರಿ ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರ ಪುತ್ರ ಅಕ್ಷಯ ಯಾದವ್ ಅವರು ಗೆದ್ದಿದ್ದ ಫಿರೋಜಾಬಾದ್ ಸ್ಥಾನವನ್ನು ಮರಳಿ ಪಡೆಯಲು ಪ್ರಯತ್ನಿಸಲಿದ್ದಾರೆ.

ಇದನ್ನೂ ಓದಿ: ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

ಈ ಹಂತದಲ್ಲಿ 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದು, 18.5 ಲಕ್ಷ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. 1.85 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮೊದಲ ಎರಡು ಹಂತಗಳಲ್ಲಿ 189 ಸ್ಥಾನಗಳಿಗೆ ಮತದಾನ ಪೂರ್ಣಗೊಂಡಿತ್ತು. ಮುಂದಿನ ನಾಲ್ಕು ಹಂತಗಳು ಮೇ 13, ಮೇ 20, ಮೇ 25 ಮತ್ತು ಜೂನ್ 1ರಂದು ನಡೆಯಲಿವೆ. ಜೂನ್ 4ರಂದು ಫಲಿತಾಂಶ ಘೋಷಣೆಯಾಗಲಿದೆ.

Continue Reading

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

ರಾಜಮಾರ್ಗ ಅಂಕಣ: ಮತ ಹಾಕದವರಿಗೆ ಕಾರಣ ಕೇಳುವ ನೋಟೀಸ್ ಸರಕಾರ ಜಾರಿ ಮಾಡುವುದರಿಂದ ಹಿಡಿದು, ದಂಡ ವಿಧಿಸುವ, ಸರಕಾರದ ಸೌಲಭ್ಯಗಳನ್ನು ತಡೆಹಿಡಿಯುವ ಕಾನೂನು ಇವೆ. ಬೆಲ್ಜಿಯಂ, ಆಸ್ಟ್ರೇಲಿಯ, ಆಸ್ಟ್ರಿಯಾ, ಅರ್ಜೆಂಟೀನ, ಬೊಲಿವಿಯಾ, ಯುಕ್ರೇನ್, ಬ್ರೆಜಿಲ್, ಈಜಿಪ್ಟ್, ಗ್ರೀಸ್, ಇಟಲಿ, ಮೆಕ್ಸಿಕೊ, ಫಿಲಿಫೈನ್ಸ್, ಸಿಂಗಾಪುರ, ಥೈಲ್ಯಾಂಡ್, ಟರ್ಕಿ, ಸ್ವಿಜರ್ಲ್ಯಾಂಡ್….ಮೊದಲಾದ ರಾಷ್ಟ್ರಗಳು ಕಡ್ಡಾಯ ಮತದಾನದ ಕಾನೂನು ಹೊಂದಿವೆ.

VISTARANEWS.COM


on

rajamarga column voting 1
Koo

ಮತದಾನ ಮಾಡಲು ಹೆಚ್ಚಿನ ಕಡೆ ಸುಶಿಕ್ಷಿತ ಯುವಜನತೆಯ ನಿರುತ್ಸಾಹ ಯಾಕೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತದಲ್ಲಿ ಚುನಾವಣೆಗಳನ್ನು ʼಪ್ರಜಾಪ್ರಭುತ್ವದ ಹಬ್ಬ’ (Festivals of democracy) ಎಂದು ಕರೆಯುತ್ತೇವೆ. ದೇಶ ಅಭಿವೃದ್ಧಿ ಆಗಬೇಕಾದರೆ ಸಧೃಡ ಸರಕಾರಗಳು ಬೇಕು. ದೇಶದ ನಾಗರಿಕರು ಚುನಾವಣೆಯಲ್ಲಿ ಬಂದು ಮತ ಚಲಾವಣೆ (Voting) ಮಾಡಬೇಕಾದದ್ದು, ಬಲಿಷ್ಟ ಸರಕಾರ ರಚಿಸಬೇಕಾದದ್ದು ಅನಿವಾರ್ಯ.

ದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಭಾರತ ಸರಕಾರದ SVEEP (Systematic Voters’ Education and Electoral Participation) ಎಂಬ ಸಮಿತಿಯು ಇದೆ. ಅದು ವಿವಿಧ ಮಾಧ್ಯಮಗಳ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತದೆ. ಮನರಂಜನಾ ಮಾಧ್ಯಮಗಳನ್ನು ಕೂಡ ಬಳಸಿಕೊಳ್ಳುತ್ತದೆ. ಆದರೂ ನಗರ ಪ್ರದೇಶಗಳ ಕೆಲವು ಕಡೆಗಳಲ್ಲಿ ಮತದಾನದ ಪ್ರಮಾಣವು ಉತ್ತೇಜಕವಾಗಿ ಇಲ್ಲ. ವಿಶೇಷವಾಗಿ ಹೆಚ್ಚಿನ ವಿದ್ಯಾವಂತ ಯುವಜನತೆಯು ಮತದಾನದಲ್ಲಿ ಉತ್ಸಾಹ ತೋರುತ್ತಿಲ್ಲ ಎನ್ನುವ ಆರೋಪಗಳು ಇವೆ. ಈ ಬಾರಿ ಕೂಡ ಹೆಚ್ಚು ಟೆಕ್ಕಿಗಳು ಇರುವ ಬೆಂಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಮತದಾನ ದಾಖಲು ಆಗಿದೆ. ಯಾಕೆ ಹೀಗೆ? ಯಾರು ಗೆದ್ದರೂ ನಮಗೇನು ಲಾಭ ಎಂಬ ನಕಾರಾತ್ಮಕ ಧೋರಣೆ ಯಾಕೆ?

ಭಾರತದಲ್ಲಿ ಕಡ್ಡಾಯ ಮತದಾನ ಯಾಕೆ ಸಾಧ್ಯವಿಲ್ಲ?

ಭಾರತವು ಡೆಮಾಕ್ರಟಿಕ್ ರಾಷ್ಟ್ರ ಅನ್ನುವುದು ಈ ಪ್ರಶ್ನೆಗೆ ಉತ್ತರ. ಅದಕ್ಕೆ ಪೂರಕವಾದ ಕಾನೂನು ಇನ್ನೂ ಭಾರತದಲ್ಲಿ ರೂಪುಗೊಂಡಿಲ್ಲ. ಇಲ್ಲಿ ಯಾರಿಗೂ ಒತ್ತಡ ಹಾಕುವ ಹಾಗಿಲ್ಲ. ಮನ ಒಲಿಕೆಯ ಮೂಲಕ ಮಾತ್ರ ಯಾರನ್ನಾದರೂ ಮತ ಹಾಕಲು ಕರೆದುಕೊಂಡು ಬರಬಹದು. ನಾಗರಿಕರನ್ನು ಎಜೂಕೆಟ್ ಮಾಡುವುದು ಸುಲಭದ ಕೆಲಸ ಅಲ್ಲ.

ಸ್ವೀಪ್ ಸಮಿತಿಯು ಅವಿರತ ಪ್ರಯತ್ನಗಳು

SVEEP ಸಮಿತಿಯು ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಆಕರ್ಷಕವಾದ ಮತದಾನ ಕೇಂದ್ರಗಳನ್ನು ತೆರೆದಿದೆ. ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನವನ್ನು ಮಾಡುವ ಸೌಲಭ್ಯವನ್ನು ನೀಡಿದೆ. ಮತದಾನ ಸಿಬ್ಬಂದಿಗಳಿಗೆ EDC ಮತ್ತು ಪೋಸ್ಟಲ್ ಬ್ಯಾಲೆಟ್ ಸೌಲಭ್ಯಗಳನ್ನು ನೀಡಿದೆ. BLOಗಳು ಮನೆ ಮನೆಗೆ ಹೋಗಿ ಗುರುತು ಚೀಟಿ ನೀಡಲು ಆದೇಶ ಮಾಡಿದೆ. No Voter to be Left Behind ಎಂಬ ಘೋಷಣಾ ವಾಕ್ಯದಡಿಯಲ್ಲಿ ಅವಿರತ ಜಾಗೃತಿ ಕೆಲಸಗಳು ಆಗಿವೆ. ಯಕ್ಷಗಾನ, ಬೀದಿ ನಾಟಕ ಮೊದಲಾದ ಮಾಧ್ಯಮಗಳು ಕೂಡ ಬಳಕೆ ಆಗಿವೆ. ಆದರೂ ಕೆಲವು ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಕಡಿಮೆ ಇದೆ ಎನ್ನುವುದು ನೋವಿನ ಸಂಗತಿ.

rajamarga column voting 1

31 ರಾಷ್ಟ್ರಗಳಲ್ಲಿ ಕಡ್ಡಾಯ ಮತದಾನ ಇದೆ!

ಈ ರಾಷ್ಟ್ರಗಳಲ್ಲಿ ಹೆಚ್ಚಿನವು ಡೆಮಾಕ್ರಟಿಕ್ ರಾಷ್ಟ್ರಗಳೇ ಆಗಿವೆ. ಆದರೆ ಅಲ್ಲಿ ಕಡ್ಡಾಯ ಮತದಾನದ ಕಾನೂನು ಜಾರಿಯಲ್ಲಿದೆ. ಮತ ಹಾಕದವರಿಗೆ ಕಾರಣ ಕೇಳುವ ನೋಟೀಸ್ ಸರಕಾರ ಜಾರಿ ಮಾಡುವುದರಿಂದ ಹಿಡಿದು, ದಂಡ ವಿಧಿಸುವ, ಸರಕಾರದ ಸೌಲಭ್ಯಗಳನ್ನು ತಡೆಹಿಡಿಯುವ ಕಾನೂನು ಇವೆ. ಬೆಲ್ಜಿಯಂ, ಆಸ್ಟ್ರೇಲಿಯ, ಆಸ್ಟ್ರಿಯಾ, ಅರ್ಜೆಂಟೀನ, ಬೊಲಿವಿಯಾ, ಯುಕ್ರೇನ್, ಬ್ರೆಜಿಲ್, ಈಜಿಪ್ಟ್, ಗ್ರೀಸ್, ಇಟಲಿ, ಮೆಕ್ಸಿಕೊ, ಫಿಲಿಫೈನ್ಸ್, ಸಿಂಗಾಪುರ, ಥೈಲ್ಯಾಂಡ್, ಟರ್ಕಿ, ಸ್ವಿಜರ್ಲ್ಯಾಂಡ್….ಮೊದಲಾದ ರಾಷ್ಟ್ರಗಳು ಕಡ್ಡಾಯ ಮತದಾನದ ಕಾನೂನು ಹೊಂದಿವೆ. ಪರಿಣಾಮವಾಗಿ ಅಲ್ಲಿ ಬಲಿಷ್ಠ ಸರಕಾರಗಳು ಆರಿಸಿ ಬರುತ್ತವೆ ಮತ್ತು ಜನರ ಜೀವನಮಟ್ಟ ತುಂಬಾ ಸುಧಾರಣೆ ಆಗಿದೆ.

ಬೆಲ್ಜಿಯಂ ಮಾದರಿ

ಅಲ್ಲಿ ಮೊದಲ ಬಾರಿಗೆ ಮತದಾನ ಮಾಡದಿದ್ದರೆ 4,000 ಯುರೋ ದಂಡ ಸರಕಾರ ವಿಧಿಸುತ್ತದೆ. ಎರಡನೇ ಬಾರಿಗೆ ಮತದಾನ ಮಾಡದಿದ್ದರೆ 10,000 ಯುರೋ ದಂಡ ಕಟ್ಟಬೇಕು. ಎಲ್ಲ ಸರಕಾರಿ ಸೌಲಭ್ಯಗಳು ಅವರಿಗೆ ಕಡಿತ ಆಗುತ್ತವೆ. 4 ಬಾರಿ ಮತದಾನಕ್ಕೆ ಬಾರದಿದ್ದರೆ ಅವರ ಹೆಸರು ಮತದಾನ ಪಟ್ಟಿಯಲ್ಲಿ ಕಡಿತ ಆಗುತ್ತದೆ.

ಬೊಲಿವಿಯಾ ಮಾದರಿ

ಈ ರಾಷ್ಟ್ರವು ಮತದಾನ ಮಾಡುವರಿಗೆ ಒಂದು ಗುರುತು ಚೀಟಿ ನೀಡುತ್ತದೆ. ಅವರಿಗೆ ಮಾತ್ರ ರೇಶನ್ ಸೌಲಭ್ಯ, ವಿದ್ಯುತ್, ವಸತಿ, ಇತರ ಸರಕಾರಿ ಸೌಲಭ್ಯಗಳು ದೊರೆಯುತ್ತವೆ. ಸರಕಾರಿ ನೌಕರರು ಮತದಾನಕ್ಕೆ ಬಾರದಿದ್ದರೆ ಅವರಿಗೆ ವೇತನ ಕಡಿತ ಆಗುತ್ತದೆ.

ಆಸ್ಟ್ರೇಲಿಯ ಮಾದರಿ

ಈ ದೇಶದಲ್ಲಿ ಶಕ್ತಿಶಾಲಿ ಡೆಮಾಕ್ರಟಿಕ್ ಸರಕಾರ ಇದೆ. ಮತದಾನ ಕಡ್ಡಾಯ ಕಾನೂನು ಇದೆ. ಮತದಾನದ ಪ್ರಮಾಣ ಅಲ್ಲಿ 96%ಕ್ಕಿಂತ ಕೆಳಗೆ ಬಂದದ್ದೇ ಇಲ್ಲ!

ಗ್ರೀಸ್ ಮಾದರಿ

ಅಲ್ಲಿ ಮತದಾನ ಮಾಡದಿದ್ದರೆ ಸರಕಾರ ನಾಗರಿಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುತ್ತದೆ. ತೃಪ್ತಿಕರವಾದ ಉತ್ತರ ಬಾರದೆ ಹೋದರೆ ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್ಪೋರ್ಟ್ ರದ್ದು ಆಗುತ್ತದೆ.

ಸಿಂಗಾಪುರ ಮಾದರಿ

ಇಲ್ಲಿ ಬಲಿಷ್ಟವಾದ ಸರಕಾರ ಇದೆ. ಮತದಾನ ಮಾಡದವರಿಗೆ ಕಾರಣ ಕೇಳಿ ನೋಟಿಸ್ ನೀಡಿದ ನಂತರ ತೃಪ್ತಿಕರ ಉತ್ತರ ಬಾರದಿದ್ದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ನಿರ್ದಾಕ್ಷಿಣ್ಯವಾಗಿ ಕಿತ್ತು ಹಾಕಲಾಗುತ್ತದೆ.

ಅಮೇರಿಕಾ ಮಾದರಿ

ಇಲ್ಲಿ ಯಾವುದೇ ಕಡ್ಡಾಯ ಕಾನೂನು ಇಲ್ಲ. ವೋಟಿಂಗ್ ದಿನ ರಜೆಯು ಕೂಡ ಇಲ್ಲ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮತದಾನ ಕೇಂದ್ರಗಳು ತೆರೆದಿರುತ್ತವೆ. ಅಲ್ಲಿ ಮತದಾನದ ಪ್ರಮಾಣವು ಉತ್ತಮವಾಗಿಯೇ ಇದೆ.

ಭಾರತದಲ್ಲಿ ಕಡ್ಡಾಯ ಮತದಾನದ ಕಾನೂನು ಜಾರಿಗೆ ಬರಲಿ ಮತ್ತು ಸುಸ್ಥಿರ ಸರಕಾರಗಳು ಆರಿಸಿಬರಲಿ ಎನ್ನುವುದೇ ನಮ್ಮೆಲ್ಲರ ಹಾರೈಕೆ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

Continue Reading
Advertisement
IPL 2024 Points Table
ಕ್ರೀಡೆ4 mins ago

IPL 2024 Points Table: ಕೊನೆಯ ಸ್ಥಾನದಿಂದ ಮೇಲೆದ್ದ ಮುಂಬೈ ಇಂಡಿಯನ್ಸ್​

Lok Sabha Election 2024
Lok Sabha Election 20246 mins ago

Lok Sabha Election 2024: ಬೆಳಿಗ್ಗೆಯೇ ಬಂದು ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನದ ಕೇಂದ್ರ ಬಳಿ ಜನ ಸಾಗರ

Google doodle
ದೇಶ8 mins ago

Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

lok sabha electon 2024 voting navadurge
ಪ್ರಮುಖ ಸುದ್ದಿ33 mins ago

Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

Road rage
ಕ್ರೈಂ48 mins ago

Road rage: BMW ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಪುಂಡರ ಅಟ್ಟಹಾಸ, ಇಲ್ಲಿದೆ ವಿಡಿಯೋ

Lok Sabha Election 2024
Lok Sabha Election 20241 hour ago

Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

rajamarga column voting 1
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

Summer Food Tips
ಆಹಾರ/ಅಡುಗೆ2 hours ago

Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

lok sabha election 2025 voting
Lok Sabha Election 20242 hours ago

Lok Sabha Election 2024 Live news: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಆರಂಭ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ14 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ14 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ15 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌