India vs Bharat Row: 'ಭಾರತ' ಹೆಸರಿನ ಬಗ್ಗೆ 1949ರಲ್ಲೇ ಭಾರಿ ಚರ್ಚೆ; ಅಂಬೇಡ್ಕರ್‌ ಅಭಿಪ್ರಾಯ ಏನಿತ್ತು? - Vistara News

ದೇಶ

India vs Bharat Row: ‘ಭಾರತ’ ಹೆಸರಿನ ಬಗ್ಗೆ 1949ರಲ್ಲೇ ಭಾರಿ ಚರ್ಚೆ; ಅಂಬೇಡ್ಕರ್‌ ಅಭಿಪ್ರಾಯ ಏನಿತ್ತು?

India vs Bharat Row: ಭಾರತದ ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನದಲ್ಲಿ “ಭಾರತ” ಮತ್ತು “ಇಂಡಿಯಾ” ಈ ಎರಡೂ ಪದಗಳನ್ನು ಬಳಸಲು ನಿರ್ಧರಿಸಲಾಯಿತು. ಹಾಗೆಯೇ, ಅಂಬೇಡ್ಕರ್‌ ಅವರು ಭಾರತ ಎಂಬ ಪದದ ಕುರಿತು ಮಂಡಿಸಿದ ಅಭಿಪ್ರಾಯ ಗಮನ ಸೆಳೆದಿದೆ.

VISTARANEWS.COM


on

Dr BR Ambedkar On Bharat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದೆಲ್ಲೆಡೆ ಈಗ ‘ಇಂಡಿಯಾ’ ಹಾಗೂ ‘ಭಾರತ’ ಎಂಬ ಪದಗಳದ್ದೇ ಚರ್ಚೆ ನಡೆಯುತ್ತಿದೆ. ಇತ್ತೀಚೆಗೆ ರಾಷ್ಟ್ರಪತಿ ಭವನದಿಂದ ಸೆಪ್ಟೆಂಬರ್ 9ರ G20 ಔತಣಕೂಟಕ್ಕೆ ಪ್ರತಿಪಕ್ಷಗಳಿಗೆ ಆಹ್ವಾನ ನೀಡಿದ್ದು, ಅದರಲ್ಲಿ ʼPresident of India’ ಬದಲಿಗೆ ʼPresident of Bharatʼ ಎಂದು ಉಲ್ಲೇಖಿಸಿದ ಬಳಿಕವಂತೂ, ಕೇಂದ್ರ ಸರ್ಕಾರವು ಇಂಡಿಯಾ ಎಂಬ ಹೆಸರನ್ನು ಭಾರತ ಎಂಬುದಾಗಿ ಬದಲಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ, ಭಾರತ ಎಂಬ ಪದ ಹೇಗೆ ಸೇರಿಸಲಾಯಿತು, ಭಾರತ ಎಂಬ ಪದದ ಪರ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಅಭಿಪ್ರಾಯ ಏನಾಗಿತ್ತು ಎಂಬ ಚರ್ಚೆಯೂ ಗಮನ ಸೆಳೆದಿದೆ.

ಹಾಗೆ ನೋಡಿದರೆ, ಭಾರತ ಎಂಬ ಪದವನ್ನು ದೇಶದ ಸಂವಿಧಾನದಲ್ಲಿ ಸೇರಿಸಲು ಸಂವಿಧಾನ ರಚನಾ ಸಮಿತಿಯಲ್ಲಿದ್ದ ಹೆಚ್ಚಿನ ಜನರಿಗೆ ಇಷ್ಟವಿರಲಿಲ್ಲ. ಆದರೆ, 1949ರ ಸೆಪ್ಟೆಂಬರ್‌ 17ರಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಭಾರತ ಎಂಬ ಪದದ ಅಳವಡಿಕೆಯ ಪರ ನಿಂತರು. ಸಂವಿಧಾನದ 1ನೇ ವಿಧಿಯಲ್ಲಿ ಭಾರತ ಎಂಬ ಹೆಸರು ಸೇರಿಸಬೇಕು ಎಂದು ಪ್ರಸ್ತಾಪಿಸಿದರು. ಇದಾದ ಬಳಿಕವೇ “ಇಂಡಿಯಾ, ಇದು ಭಾರತ, ರಾಜ್ಯಗಳ ಒಕ್ಕೂಟವಾಗಿದೆ” ಎಂಬ ಸಾಲು ಸೇರಿಸಲಾಯಿತು ಎಂದು ಪುಸ್ತಕಗಳ ಉಲ್ಲೇಖದಿಂದ ತಿಳಿದುಬಂದಿದೆ.

ಪ್ರಧಾನಿ ನೋಟಿಫಿಕೇಷನ್‌ನಲ್ಲೂ ಭಾರತ

ಭಾರತ ಎಂಬ ಪದವನ್ನು ಸಂವಿಧಾನದಲ್ಲಿ ಸೇರಿಸುವ ಕುರಿತು ತೀವ್ರ ಚರ್ಚೆಯಾಯಿತು. ಮೊದಲಿಗೆ ಅಂಬೇಡ್ಕರ್‌ ಅವರು ಭಾರತ ಪದ ಸೇರಿಸಲು ಪ್ರಸ್ತಾಪಿಸಿದರು. ಇದಾದ ಬಳಿಕ ಆಲ್‌ ಇಂಡಿಯಾ ಫಾರ್ವರ್ಡ್‌ ಬ್ಲಾಕ್‌ ಲೀಡರ್‌ ಎಚ್‌.ವಿ.ಕಾಮತ್‌ ಅವರು ತಿದ್ದುಪಡಿ ಪ್ರಸ್ತಾಪ ಮುಂದಿರಿಸಿದರು. ಹಲವು ನಾಯಕರು ಭಾರತ ಎಂಬ ಪದ ಸೇರಿಸುವ ಅವಶ್ಯಕತೆ, ಅನಿವಾರ್ಯತೆ, ಅದರ ಮಹತ್ವದ ಕುರಿತು ಅಭಿಪ್ರಾಯ ಮಂಡಿಸಿದ ಬಳಿಕವೇ ಪದವನ್ನು ಸೇರಿಸಲಾಯಿತು ಎಂದು ಇತಿಹಾಸದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: India vs Bharat Row: ವಿಧೇಯಕಕ್ಕೂ ಮೊದಲೇ ‘ಭಾರತ’ಮಯ; ಪ್ರಧಾನಿ ಅಧಿಸೂಚನೆಯಲ್ಲೂ ‘ಭಾರತ’

ʼಇಂಡಿಯಾʼವನ್ನು ಬದಲಿಸಿ ʼಭಾರತʼವನ್ನು ಸ್ಥಾಪಿಸಬೇಕು ಎಂಬುದು ಬಿಜೆಪಿಯ ಬಹುಕಾಲದ ಆಶಯವಾಗಿದೆ. ಈ ಹಿಂದೆ ಹಿಮಂತ ಬಿಸ್ವ ಶರ್ಮಾ, ಆರೆಸ್ಸೆಸ್‌ ಮುಖಂಡ ಮೋಹನ ಭಾಗವತ್‌ ಕೂಡ ಈ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಡಿಸೆಂಬರ್ 2022ರಲ್ಲಿ, ಗುಜರಾತ್‌ನ ಆನಂದ್‌ನ ಬಿಜೆಪಿ ಸಂಸದ ಮಿತೇಶ್ ಪಟೇಲ್ ಅವರು ʼಇಂಡಿಯಾʼವನ್ನು “ಭಾರತ್” ಅಥವಾ “ಭಾರತ್ ವರ್ಷ್” ಎಂದು ಮರುನಾಮಕರಣ ಮಾಡುವ ಬಗ್ಗೆ ಲೋಕಸಭೆಯಲ್ಲಿ ಪ್ರಶ್ನೆಯನ್ನು ಎತ್ತಿದ್ದರು. ಸೆಪ್ಟೆಂಬರ್ 1949ರಲ್ಲಿ ಸಂವಿಧಾನ ಸಭೆಯು ಈ ಬಗ್ಗೆ ಚರ್ಚಿಸಿತ್ತು. “ಇಂಡಿಯಾ” ಎಂಬುದು ದೇಶವು ಒಳಪಟ್ಟ ಗುಲಾಮಗಿರಿಯನ್ನು ಸೂಚಿಸುತ್ತದೆ. ಇದು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯಿಂದ ಬಂದಿದೆ ಎಂದು ಪಟೇಲ್ ಪ್ರತಿಪಾದಿಸಿದ್ದರು.

ಕೇಂದ್ರದ ಸ್ಪಷ್ಟನೆ ಏನು?

ಭಾರತ ಎಂಬುದಾಗಿ ಹೆಸರು ಬದಲಾವಣೆ ಕುರಿತು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಸ್ಪಷ್ಟನೆ ನೀಡಿದ್ದು, ಇದೆಲ್ಲ ವದಂತಿ ಎಂದು ಹೇಳಿದ್ದಾರೆ. “ಹೆಸರು ಬದಲಾವಣೆ ಕುರಿತು ಹಬ್ಬಿಸಿರುವುದೆಲ್ಲ ವದಂತಿಯಾಗಿದೆ. ಇದು ಪ್ರತಿಪಕ್ಷಗಳ ಮನಸ್ಥಿತಿಗೂ ಹಿಡಿದ ಕನ್ನಡಿಯಾಗಿದೆ. ಅಷ್ಟಕ್ಕೂ, ದೇಶದಲ್ಲಿ ‘ಭಾರತ’ ಎಂಬ ಹೆಸರನ್ನು ವಿರೋಧಿಸುವವರು ಯಾರು? ಯಾರಾದರೂ ವಿರೋಧಿಸುತ್ತಾರೆ ಎಂದಾದರೆ, ಅವರ ಮನಸ್ಥಿತಿ ಗೊತ್ತಾಗುತ್ತದೆ” ಎಂದು ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Kangana Ranaut: ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Kangana Ranaut
Koo

ಹಿಮಾಚಲಪ್ರದೇಶ:ಮಂಡಿ(Mandi) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್‌(Kangana Ranaut) ಹಾಗೂ ಬಿಜೆಪಿ ಕಾರ್ಯಕರ್ತರ(BJP Workers) ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ(Stone Pelting) ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಿದೆ. ನಿನ್ನೆ ಸಂಜೆ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ದೂರಿದೆ.

ನಿನ್ನೆ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆ ಬಗ್ಗೆ ಸ್ವತಃ ಕಂಗನಾ ಪ್ರತಿಕ್ರಿಯಿಸಿದ್ದು, ನಮ್ಮ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್‌ ಹಿಂಸಾಚಾರ ನಡೆಸುವುದಕ್ಕಾಗಿಯೇ ಪ್ರತಿಭಟನೆ ಹಮ್ಮಿಕೊಂಡಿತ್ತು. ಇಲ್ಲಿನ ಸ್ಥಾನ ಕೈ ತಪ್ಪುವುದು ಅವರಿಗೆ ಖಚಿತವಾಗಿದೆ. ಹೀಗಾಗಿ ಅವರು ಬೀದಿಗಿಳಿದು ಪ್ರೊಟೆಸ್ಟ್‌ ಮಾಡುತ್ತಿದ್ದಾರೆ. ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಇನ್ನು ನಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನ ಈ ವರ್ತನೆ ಅತೀವ ಬೇಸರ ತಂದಿದೆ ಎಂದು ಹೇಳಿದ್ದಾರೆ. ಇನ್ನು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಬಿಜೆಪಿ ಆರೋಪದ ಬಗ್ಗೆ ಕಾಂಗ್ರೆಸ್‌ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Continue Reading

ದೇಶ

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Sambit Patra: “ಪುರಿ ಜಗನ್ನಾಥನು ಕೂಡ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

VISTARANEWS.COM


on

Sambita Patra
Koo

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೋಟ್ಯಂತರ ಭಾರತೀಯರು ಇಷ್ಟಪಡುತ್ತಾರೆ. ಸೆಲೆಬ್ರಿಟಿಗಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರನ್ನು ಇಷ್ಟಪಡುತ್ತಾರೆ. ವಿದೇಶಗಳಲ್ಲೂ ಮೋದಿ ಅವರಿಗೆ ಅಭಿಮಾನಿಗಳಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಕೇಳುತ್ತಾರೆ. ಆದರೆ, ಬಿಜೆಪಿ ನಾಯಕ, ಒಡಿಶಾದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ಅವರು ಮೋದಿ ಅವರನ್ನು ಹೊಗಳುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಪುರಿ ಜಗನ್ನಾಥನು (Lord Jagannath) ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದಾರೆ. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಟುಕಿದ ನವೀನ್‌ ಪಟ್ನಾಯಕ್‌

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದಾರೆ. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

“ಜಗನ್ನಾಥನು ಸರ್ವಶ್ರೇಷ್ಠನಾಗಿದ್ದು, ಒಡಿಶಾದ ಅಸ್ಮಿತೆಯಾಗಿದ್ದಾನೆ. ಇಂತಹ ಜಗನ್ನಾಥನ ಬಗ್ಗೆ ಹೇಳಿಕೆ ಕೊಡುವುದು, ಮನುಷ್ಯರೊಬ್ಬರ ಭಕ್ತ ಎಂದು ಹೇಳುವುದು ಖಂಡನೀಯವಾಗಿದೆ. ಬಿಜೆಪಿ ನಾಯಕರೂ ಆದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯು ಹೀಗೆ ಹೇಳಿರುವುದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುವುದು, ಹೀನವಾದ ಹೇಳಿಕೆ ನೀಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಒಡಿಶಾದ ಜನರು ದೀರ್ಘ ಅವಧಿಗೆ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಹಾಗೂ ಎಂದಿಗೂ ಕ್ಷಮಿಸಲ್ಲ” ಎಂದು ನವೀನ್‌ ಪಟ್ನಾಯಕ್‌ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

ದೇಶ

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ತಿಥಿಯಾದ ಮೇ 21ರಂದು ಭಾರತದಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. 1991ರಲ್ಲಿ ಈ ದಿನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು. ಭಯೋತ್ಪಾದನಾ ವಿರೋಧಿ ದಿನದ (Anti Terrorism Day) ಇತಿಹಾಸ ಮತ್ತು ಅದರ ಆಚರಣೆ ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Anti Terrorism Day
Koo

ಪ್ರತಿ ವರ್ಷ ಮೇ 21ರಂದು ಭಯೋತ್ಪಾದನಾ ವಿರೋಧಿ ದಿನವನ್ನು (Anti Terrorism Day) ಆಚರಿಸಲಾಗುತ್ತದೆ. ಈ ದಿನ ಯುವಕರಿಗೆ ಭಯೋತ್ಪಾದನೆ (Terrorism) ಮತ್ತು ಇದರಿಂದಾಗುವ ಸಾವು ನೋವು ಮತ್ತು ಜೀವನದ ಮೇಲೆ ಅದರ ದುಷ್ಪರಿಣಾಮದ ಬಗ್ಗೆ ಜಾಗೃತಿ (awareness) ಮೂಡಿಸಲಾಗುತ್ತದೆ. ಈ ದಿನವು ಸಮಾಜ ವಿರೋಧಿ ಕೃತ್ಯದ ವಿರುದ್ಧ ಜನರಲ್ಲಿ ಅರಿವು ಮೂಡಿಸುತ್ತದೆ.

ರಾಷ್ಟ್ರೀಯ ಸಾಮರಸ್ಯವನ್ನು ಉತ್ತೇಜಿಸುವುದು, ಭಯೋತ್ಪಾದನೆಯನ್ನು ತಗ್ಗಿಸುವುದು ಮತ್ತು ಎಲ್ಲಾ ಜಾತಿ, ಧರ್ಮ, ಲಿಂಗಗಳ ಜನರನ್ನು ಒಂದುಗೂಡಿಸುವುದು ಭಯೋತ್ಪಾದನಾ ವಿರೋಧಿ ದಿನದ ಮುಖ್ಯ ಉದ್ದೇಶವಾಗಿದೆ. ವಿಶ್ವದಾದ್ಯಂತ ಹೆಚ್ಚುತ್ತಿರುವ ‘ಭಯೋತ್ಪಾದನೆ’ ಹಿನ್ನೆಲೆಯಲ್ಲಿ ಈ ದಿನವು ಈಗ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿದೆ.

ಪ್ರತಿ ದಿನವೂ ವಿಶ್ವದ ಒಂದಲ್ಲ ಒಂದು ಕಡೆ ಭಯೋತ್ಪಾದಕ ಕೃತ್ಯದ ಬಗ್ಗೆ ಸುದ್ದಿಗಳು ಬರುತ್ತಲೇ ಇರುತ್ತವೆ. ಮೂಲಭೂತವಾಗಿ ಭಯೋತ್ಪಾದಕರು ಸಾಮಾನ್ಯ ಜನರ ಮನಸ್ಸಿನಲ್ಲಿ ಭಯವನ್ನು ಸೃಷ್ಟಿಸಲು ಬಯಸುತ್ತಾರೆ. ಯಾವುದೇ ರೀತಿಯ ಪಶ್ಚಾತ್ತಾಪವಿಲ್ಲದೆ ಅವರು ಅಮಾಯಕ ಜನರ ಸಾವಿಗೆ ಕಾರಣರಾಗುತ್ತಾರೆ. ಇಂಥ ಭಯೋತ್ಪಾದನೆ ಚಟುವಟಿಕೆಗಳ ವಿರುದ್ಧ ಹೋರಾಡುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ಭಾರತ ಸರ್ಕಾರ ಪ್ರತಿ ವರ್ಷ ಭಯೋತ್ಪಾದನೆ ವಿರೋಧಿ ದಿನವನ್ನು ಆಚರಿಸುತ್ತಿದೆ.

ಮೇ 21ರಂದು ಈ ದಿನಾಚರಣೆ ಏಕೆ?

1991ರ ಮೇ 21ರಂದು ಭಾರತದ ಏಳನೇ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಅನಂತರ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನದ ಅಧಿಕೃತ ಘೋಷಣೆಯನ್ನು ಮಾಡಲಾಯಿತು. ಶ್ರೀಲಂಕಾದ ತಮಿಳು ಉಗ್ರರ ಸಂಚಿನಿಂದಾಗಿ ತಮಿಳುನಾಡಿನಲ್ಲಿ ರಾಜೀವ್‌ ಗಾಂಧಿ ಅವರು ಕೊಲ್ಲಲ್ಪಟ್ಟರು. ಬಳಿಕ ವಿ. ಪಿ. ಸಿಂಗ್ ನೇತೃತ್ವದ ಕೇಂದ್ರ ಸರ್ಕಾರವು ಮೇ 21 ಅನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲು ನಿರ್ಧರಿಸಿತು. ಈ ದಿನದಂದು ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಗುತ್ತದೆ.


ಈ ದಿನದ ಹಿಂದಿನ ಇತಿಹಾಸ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ತಮಿಳುನಾಡಿನ ಶ್ರೀಪೆರಂಬದೂರ್‌ಗೆ ರ‍್ಯಾಲಿಯಲ್ಲಿ ಭಾಗವಹಿಸಲು ತೆರಳಿದ್ದರು. ಲಿಬರೇಶನ್ ಆಫ್ ತಮಿಳು ಟೈಗರ್ಸ್ ಈಳಂ (ಎಲ್‌ಟಿಟಿಇ) ಭಯೋತ್ಪಾದಕ ಗುಂಪಿನ ಸದಸ್ಯಳಾಗಿದ್ದ ಮಹಿಳೆಯೊಬ್ಬಳು ರಾಜೀವ್‌ ಗಾಂಧಿ ಮುಂದೆ ಅಭಿಮಾನದ ನಾಟಕ ಆಡಿದಳು. ಆಕೆ ತನ್ನ ಬಟ್ಟೆಯ ಒಳಗೆ ಸ್ಫೋಟಕಗಳನ್ನು ಇರಿಸಿಕೊಂಡಿದ್ದಳು. ರಾಜೀವ್‌ ಬಳಿಗೆ ಬಂದು ಅವರ ಪಾದಗಳನ್ನು ಸ್ಪರ್ಶಿಸಬೇಕೆಂದು ಬಾಗಿದಳು. ಇದ್ದಕ್ಕಿದ್ದಂತೆ ಬಾಂಬ್ ಸ್ಫೋಟ ಸಂಭವಿಸಿ ರಾಜೀವ್‌ ಸೇರಿದಂತೆ ಸುಮಾರು 25 ಮಂದಿ ಸಾವನ್ನಪ್ಪಿದರು.

ಹೇಗೆ ಆಚರಣೆ?

ಭಯೋತ್ಪಾದನೆ ಮತ್ತು ಹಿಂಸಾಚಾರದ ಅಪಾಯಗಳ ಕುರಿತು ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಚರ್ಚೆಗಳನ್ನು ಆಯೋಜಿಸಲಾಗುತ್ತದೆ. ಭಯೋತ್ಪಾದನೆಯ ದುಷ್ಪರಿಣಾಮಗಳು ಮತ್ತು ಅದರ ಅನಂತರದ ಪರಿಣಾಮಗಳನ್ನು ಎತ್ತಿ ತೋರಿಸಲು ಸಾಮೂಹಿಕ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಭಯೋತ್ಪಾದನೆಯ ಪರಿಣಾಮಗಳನ್ನು ಜನರಿಗೆ ತಿಳಿಸಲು ರ‍್ಯಾಲಿ ಮತ್ತು ಮೆರವಣಿಗೆಗಳನ್ನು ಆಯೋಜಿಸುತ್ತದೆ. ರಾಜೀವ್ ಗಾಂಧಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

ಆಚರಣೆಯ ಮಹತ್ವ

ಭೀಕರ ಭಯೋತ್ಪಾದಕ ದಾಳಿಯ ಹಿನ್ನೋಟ ಗಮನಿಸಿದರೆ ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರದ ಮೇಲಿನ ದಾಳಿಯನ್ನು ನಾವು ಮರೆಯಲು ಸಾಧ್ಯವಿಲ್ಲ. ಅದೇ ರೀತಿ ಮುಂಬಯಿ ಮೇಲಿನ ಪಾಕಿಸ್ತಾನ ಪ್ರೇರಿತ 26/11 ದಾಳಿ ಕೂಡ ಇದಕ್ಕಿಂತ ಹೊರತಾಗಿಲ್ಲ. ಇಂಥ ಭಯೋತ್ಪಾದನೆಯನ್ನು ವಿರೋಧಿಸಲು ಮತ್ತು ಮಾನವೀಯತೆಯೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಲು ಭಯೋತ್ಪಾದನಾ ವಿರೋಧಿ ದಿನವು ಮಹತ್ವದ ಸಂದೇಶ ಸಾರುತ್ತದೆ. ಭಯೋತ್ಪಾದನೆಯು ಮನುಷ್ಯರ ಹಕ್ಕುಗಳ ಮೇಲಿನ ದಾಳಿ ಎಂಬುದರಲ್ಲಿ ಸಂದೇಹವಿಲ್ಲ. ಆದ್ದರಿಂದ ನಾವೆಲ್ಲ ಒಗ್ಗೂಡಿ ಪರಸ್ಪರ ಪ್ರೀತಿ, ಕಾಳಜಿ ತೋರುವ ಮೂಲಕ ಭಯೋತ್ಪಾದನೆ ಪಿಡುಗನ್ನು ಸಂಪೂರ್ಣವಾಗಿ ತೊಡೆದುಹಾಕಲು ಪ್ರಯತ್ನಿಸಬೇಕಿದೆ.

ಭಯೋತ್ಪಾದಕರಿಗೆ ಧರ್ಮವಿಲ್ಲ. ಅವರಿಗೆ ವಿನಾಶದ ಭಾಷೆ ಮಾತ್ರ ಅರ್ಥವಾಗುತ್ತದೆ. ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವು ಭಾರತದಲ್ಲಿ ಒಂದು ಪ್ರಮುಖ ದಿನವಾಗಿದೆ. ಏಕೆಂದರೆ ಇದು ಜನರು ತಮ್ಮ ದೈನಂದಿನ ಜೀವನದಲ್ಲಿ ಜಾಗರೂಕರಾಗಿರಲು ಪ್ರೇರೇಪಿಸುತ್ತದೆ. ಜನರು ತಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಸಾಮರಸ್ಯದಿಂದ ಸಹಬಾಳ್ವೆ ನಡೆಸಲು ಪ್ರೋತ್ಸಾಹಿಸುವ ಮೂಲಕ ಇದು ಶಾಂತಿಯನ್ನು ಉತ್ತೇಜಿಸುತ್ತದೆ. ಸಮಾಜವನ್ನು ಶಾಂತಿಯುತವಾಗಿ ಇಡುವುದು ಎಷ್ಟು ಮುಖ್ಯ ಎಂಬ ಅರಿವು ಮೂಡಿಸುತ್ತದೆ. ಭಯೋತ್ಪಾದನೆಯ ವಿರುದ್ಧ ನಾವೆಲ್ಲರೂ ಕೈಜೋಡಿಸೋಣ.

Continue Reading

ದೇಶ

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

ಮಹಾರಾಷ್ಟ್ರದಲ್ಲಿ 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಇದರಿಂದಾಗಿ ಬಾಲಕಿಯು ಗರ್ಭ ಧರಿಸಿದ್ದು, ಗರ್ಭಪಾತ ಮಾಡಿಸಲು ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬಯಲಾಗಿದೆ.

VISTARANEWS.COM


on

Mobile
Koo

ಮುಂಬೈ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಭಾರತ ಸೇರಿ ಜಗತ್ತು ಏಳಿಗೆ ಹೊಂದಲು ಕಾರಣವಾಗಿದೆ. ಆದರೆ, ಇದೇ ತಂತ್ರಜ್ಞಾನವು ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಅದರಲ್ಲೂ, ಸಣ್ಣ ಮಕ್ಕಳಿಂದ ಹಿಡಿದು, ಹಿರಿಯರವರೆಗೆ ಲಭ್ಯ ಇರುವ ಸ್ಮಾರ್ಟ್‌ಫೋನ್‌ಗಳು (Smart Phones) ಅತ್ಯಾಚಾರ, ಲೈಂಗಿಕ ಕಿರುಕುಳ, ಕೊಲೆ, ಸುಲಿಗೆಗೆ ದಾರಿ ಮಾಡಿಕೊಡುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ (Maharashtra) 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.

ಹೌದು, ಬಾಲಕನು ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ ಪರಿಣಾಮ, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಮೂರು ತಿಂಗಳು ಗರ್ಭಿಣಿಯಾಗಿರುವ ಬಾಲಕಿಯನ್ನು ಪೋಷಕರು ಮುಂಬೈನಲ್ಲಿರುವ ವಾಶಿ ಜನರಲ್‌ ಹಾಸ್ಪಿಟಲ್‌ಗೆ ಕರೆದುಕೊಂಡು ಹೋಗಿ, ಗರ್ಭಪಾತ ಮಾಡಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಾದ ಬಳಿಕ ಪೊಲೀಸರು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

physical Abuse

“ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ವಿರುದ್ಧ ಪೋಕ್ಸೊ, ಐಪಿಸಿಯ ಸೆಕ್ಷನ್‌ 376 ಸೇರಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಾದ ಬಳಿಕ ಪ್ರಕರಣವನ್ನು ಖಂಡೇಶ್ವರ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಮಕ್ಕಳ ಕಲ್ಯಾಣ ಆಯೊಗವು ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. ಇಂತಹ ಪ್ರಕರಣಗಳು ಬೆಳಕಿಗೆ ಬರುವ ಕಾರಣದಿಂದಾಗಿಯೇ, ಮಕ್ಕಳಿಗೆ ಮೊಬೈಲ್‌ ಕೊಡಬಾರದು, ಕೊಟ್ಟರೂ ಅವರು ಏನು ಮಾಡುತ್ತಾರೆ ಎಂಬುದರ ಮೇಲೆ ಪೋಷಕರು ಗಮನ ಇಡಬೇಕು ಎಂದು ತಜ್ಞರು ಹೇಳುತ್ತಲೇ ಇರುತ್ತಾರೆ.

ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

Continue Reading
Advertisement
Kangana Ranaut
ದೇಶ3 seconds ago

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Job Alert
ಉದ್ಯೋಗ19 mins ago

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

belagavi farmer self harming
ಕ್ರೈಂ23 mins ago

Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

Health Benefits Of Tofu
ಆರೋಗ್ಯ24 mins ago

Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

2nd PUC Exam 2 Result tomorrow
ಶಿಕ್ಷಣ56 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Karnataka Weather Forecast
ಮಳೆ1 hour ago

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Tea Tips
ಆರೋಗ್ಯ1 hour ago

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

Sambita Patra
ದೇಶ2 hours ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ2 hours ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ3 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌