Year Ender 2023: ಜಗತ್ತನ್ನೇ ಬೆರಗುಗೊಳಿಸಿದ ಭಾರತದ ಟಾಪ್ 10 ಕ್ಷಣಗಳು! - Vistara News

ದೇಶ

Year Ender 2023: ಜಗತ್ತನ್ನೇ ಬೆರಗುಗೊಳಿಸಿದ ಭಾರತದ ಟಾಪ್ 10 ಕ್ಷಣಗಳು!

Year Ender 2023: ಪ್ರಸಕ್ತ ಸಾಲಿನ ಭಾರತವು ಅನೇಕ ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಹಲವು ಸಾಧನೆಗಳು ಭಾರತದ ಸಾಧನೆಯನ್ನು ಹೆಚ್ಚಿಸಿವೆ. ಅಂಥ ವಿಸ್ಮಯ-ವಿಕ್ರಮಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

VISTARANEWS.COM


on

Indian govt share 10 moments that are stunned the world and Year Ender 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2023ರಲ್ಲಿ ಇಡೀ ಜಗತ್ತೇ ಹುಬ್ಬೇರಿಸುವಂತೆ (india stunned the world in 2023) ಮಾಡಿದ ಟಾಪ್ 10 ಭಾರತದ (India) ಸಾಧನೆಗಳನ್ನು (Top 10 Moments) ಒಳಗೊಂಡ ವಿಡಿಯೋವೊಂದನ್ನು ಭಾರತ ಸರ್ಕಾರವು (Indian Government) ಷೇರ್ ಮಾಡಿದೆ. ಪ್ರಸಕ್ತ ಸಾಲಿನಲ್ಲಿ ಭಾರತವು ಸಾಧಿಸಿದ ವಿಕ್ರಮಗಳು, ಪ್ರಥಮಗಳು, ವಿಶ್ವದಾಖಲೆಗಳನ್ನು ಒಳಗೊಂಡ ಪಟ್ಟಿ ಇದಾಗಿದೆ(Year Ender 2023).

ಐತಿಹಾಸಿಕ ಚಂದ್ರಯಾನ-3ರಿಂದ ಹಿಡಿದು ನಾಗಾಲೋಟದಲ್ಲಿ ಅಭಿವೃದ್ಧಿಯಾಗುತ್ತಿರುವ ಭಾರತದ ಆರ್ಥಿಕತೆಯವರೆಗೆ 10 ಸಾಧನೆಗಳನ್ನು ಈ ವಿಡಿಯೋದಲ್ಲಿ ಪಟ್ಟಿ ಮಾಡಲಾಗಿದೆ. ಈ ವಿಡಿಯೋದಲ್ಲಿ ಪ್ರಧಾನಿ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ಮಾಡುತ್ತಿರುವ ಯೋಗದ ದಿನಚರಿ ಕೂಡ ಸೇರಿಸಲಾಗಿದೆ. ಹಾಗೆಯೇ, ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿರುವ, ಜಗತ್ತಿನ ಅತಿದೊಡ್ಡ ಧ್ಯಾನಕೇಂದ್ರ ಸ್ವರವೇದ ಮಹಾ ಮಂದಿರ ಸೇರಿದಂತೆ ಅನೇಕ ಸ್ಮರಣೀಯ ಭಾರತದ ಕ್ಷಣಗಳನ್ನು ಸ್ಮರಿಸಲಾಗಿದೆ.

2023ರ ಮುಕ್ತಾಯ ಹಂತದಲ್ಲಿ ದೇಶವು ಈ ವರ್ಷ ಸಾಧಿಸಿದ ಸಾಧನೆಗಳನ್ನು ಮೆಲುಕು ಹಾಕುವ ವಿಶಿಷ್ಟ ಪ್ರಯತ್ನವನ್ನು ಭಾರತವು ಮಾಡಿದೆ. ಈ ಪಟ್ಟಿಯಲ್ಲಿ ಏರ್‌ ಇಂಡಿಯಾ ಪೂರ್ತಿಗೊಳಿಸಿದ ಏರ್‌ಕ್ರಾಫ್ಟ್ ಡೀಲ್, ಭಾರತದ ಡಿಜಿಟಲ್ ಪೇಮೆಂಟ್, ಜಗತ್ತಿನ ಅತಿದೊಡ್ಡ ಕಚೇರಿ ಕಟ್ಟಡ ಸೇರಿದಂತೆ ಇತರ ಸಾಧನೆಗಳನ್ನು ತೋರಿಸಲಾಗಿದೆ.

1.ಚಂದ್ರಯಾನ-3
ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸುವ ಮೂಲಕ ಇಸ್ರೋ ವಿಶಿಷ್ಠ ಸಾಧನೆ ಮಾಡಿತು. ಚಂದ್ರನ ದಕ್ಷಿಣ ಧ್ರುವನ್ನು ಸ್ಪರ್ಶಿದ ಜಗತ್ತಿನ ಮೊದಲ ರಾಷ್ಟ್ರ ಭಾರತವಾಗಿದೆ.

    2.ಫಾಸ್ಟೆಸ್ಟ್ 5ಜಿ
    ಭಾರತವು 2023ರಲ್ಲಿ 5ಜಿ ತಂತ್ರಜ್ಞಾನಕ್ಕೆ ತೆರೆದುಕೊಂಡಿತು. ಇದರೊಂದಿಗೆ 5ಜಿ ಸೇವೆಯನ್ನು ಒದಗಿಸುತ್ತಿರುವ ಜಗತ್ತಿನ ಎಲೈಟ್ ರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಯಿತು.

    3.ಸ್ವರವೇದ ಧ್ಯಾನಕೇಂದ್ರ
    ವಾರಾಣಸಿಯಲ್ಲಿ ತಲೆ ಎತ್ತಿ ನಿಂತಿರುವ ಸ್ವರವೇದ ಧ್ಯಾನ ಕೇಂದ್ರವು ಜಗತ್ತಿನ ಅತ್ಯಂತ ದೊಡ್ಡ ಧ್ಯಾನಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಧಾನಿ ಮೋದಿ ಅವರು ಮೊನ್ನೆಯಷ್ಟೇ ಈ ಧ್ಯಾನ ಕೇಂದ್ರವನ್ನು ಉದ್ಘಾಟಿಸಿದರು.

    4.ಗಂಗಾ ವಿಲಾಸ ಕ್ರೂಸ್
    2023ರಲ್ಲಿ ಭಾರತವು ಮತ್ತೊಂದು ವೈಭವಕ್ಕೆ ಸಾಕ್ಷಿಯಾಯಿತು. ಜಗತ್ತಿನ ಅತ್ಯಂತ ಉದ್ದ ನದಿ ಕ್ರೂಸ್-ಎಂವಿ ಹಡಗಿಗೆ ಚಾಲನೆ ನೀಡಲಾಯಿತು. ಗಂಗಾ ವಿಲಾಸ ನದಿಯಲ್ಲಿ ಕಾರ್ಯನಿರ್ವಹಣೆ ಮಾಡುವ ಜಗತ್ತಿನ ಅತ್ಯಂತದ ಉದ್ದದ ಕ್ರೂಸ್ ಆಗಿದೆ.

    5.ವಿಶ್ವಸಂಸ್ಥೆಯಲ್ಲಿ ಮೋದಿ ಯೋಗ
    2023ರ ಯೋಗ ದಿನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ಆಚರಿಸಿದರು. ಈ ವೇಳೆ ಅವರು ಭಾಗವಹಿಸಿದ ಯೋಗ ದಿನಚರಿಯು ವಿಶ್ವ ದಾಖಲೆಯನ್ನು ಬರೆಯಿತು.

    6.ಏರ್ ಇಂಡಿಯಾ ಡೀಲ್
    ಟಾಟಾ ಕಂಪನಿ ಒಡೆತನದಲ್ಲಿರುವ ಏರ್ ಇಂಡಿಯಾ 70 ಶತಕೋಟಿ ಡಾಲರ್ ವೆಚ್ಚದಲ್ಲಿ ವಿಮಾನ ಖರೀದಿ ಒಪ್ಪಂದವನ್ನು ಮಾಡಿಕೊಂಡಿತು. ಇಷ್ಟು ದೊಡ್ಡ ಪ್ರಮಾಣದಲ್ಲಿ ವಿಮಾನ ಖರೀದಿ ಒಪ್ಪಂದವು ಈ ಹಿಂದೆ ನಡೆದಿಲ್ಲ.

    7.ವೇಗದ ಆರ್ಥಿಕತೆ
    ಪ್ರಸಕ್ತ ಸಾಲಿನಲ್ಲಿ ಭಾರತದ ಪಾಲಿಗೆ ಆರ್ಥಿಕಾಭಿವೃದ್ಧಿ ಹೊಸ ಮಜಲು ಮುಟ್ಟಿದೆ. ಜಗತ್ತಿನಲ್ಲೇ ಅತ್ಯಂತ ವೇಗದಲ್ಲಿ ಬೆಳವಣಿಗೆಯಾಗುತ್ತಿರುವ ಆರ್ಥಿಕತೆ ಎಂಬ ಖ್ಯಾತಿ ಭಾರತಕ್ಕೆ ಬಂತು.

    8.ಡಿಜಿಟಲ್ ಪೇಮೆಂಟ್ಸ್
    ಡಿಜಿಟಲ್ ಇಂಡಿಯಾ ಮೂಲಕ ಭಾರತವು ಡಿಜಿಟಲ್ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡುತ್ತಿದೆ. ಜಗತ್ತಿನಲ್ಲೇ ಅತಿ ಹೆಚ್ಚು ಡಿಜಿಟಲ್ ಪೇಮೆಂಟ್ಸ್‌ಗೆ ಭಾರತವು ಸಾಕ್ಷಿಯಾಗಿದೆ.

    9.ಬೃಹತ್ ಕಚೇರಿ ಕಟ್ಟಡ
    ಗುಜರಾತ್‌ನ ಸೂರತ್‌ನಲ್ಲಿ ನಿರ್ಮಾಣವಾದ, ಸೂರತ್ ಡೈಮಂಡ್ ಬೌರ್ಸ್ ಜಗತ್ತಿನ ಅತಿದೊಡ್ಡ ಕಚೇರಿ ಕಟ್ಟಡ ಎಂಬ ಕೀರ್ತಿಗೆ ಪಾತ್ರವಾಗಿದೆ. ಪ್ರಧಾನಿ ಮೋದಿ ಅವರು ಇತ್ತೀಚೆಗಷ್ಟೇ ಈ ಕಟ್ಟಡವನ್ನು ಉದ್ಘಾಟಿಸಿದ್ದರು.

    10.ಅಯೋಧ್ಯೆ ದೀಪೋತ್ಸವ
    ಪ್ರತಿ ವರ್ಷವೂ ಅಯೋಧ್ಯೆಯಲ್ಲಿ ದೀಪೋತ್ಸವದ ವೈಭವ ನಡೆಯುತ್ತದೆ. ಈ ವರ್ಷ 22.23 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಯಾಯಿತು.

    ಈ ಸುದ್ದಿಯನ್ನೂ ಓದಿ: Year Ender 2023: ಗೂಗಲ್‌ನಲ್ಲಿ  ಪ್ರವಾಸಿಗರು ಹುಡುಕಿದ ಜಾಗತಿಕ ಟಾಪ್‌ 10 ಪಟ್ಟಿಯಲ್ಲಿ ಕರ್ನಾಟಕದ ಸ್ಥಳವೂ ಇದೆ!

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

    ಬೆಂಗಳೂರು

    Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

    Bengaluru Airport : ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ 2 ದಶಲಕ್ಷ ಚದರ ಅಡಿ ಪ್ರದೇಶದ ಬಿಸಿನೆಸ್ ಪಾರ್ಕ್ ತೆರೆಯಲು ಮೊದಲ ಹೆಜ್ಜೆ ಇಟ್ಟಿದೆ.

    VISTARANEWS.COM


    on

    By

    ಸಾಂದರ್ಭಿಕ ಚಿತ್ರ
    Koo

    ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗ ಸಂಸ್ಥೆಯಾದ (Bengaluru Airport) ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

    ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

    Construction of Business Park of Bangalore Airport City Limited a subsidiary of Bangalore International Airport Limited
    Construction of Business Park of Bangalore Airport City Limited a subsidiary of Bangalore International Airport Limited

    ಈ ಬ್ಯುಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್‌ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

    ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, “ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್‌ ಕ್ಷೇತ್ರದಲ್ಲಿ ಶೇ. 36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (GCCs) ಬೆಂಗಳೂರು, ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

    ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹ ಕೊಡಲಿದೆ.

    ಇದನ್ನೂ ಓದಿ: Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

    ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್ ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3D ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

    ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್‌ ಆವರಣದಲ್ಲಿರುವ ಹೋಟೆಲ್‌ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ & ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್‌ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

    ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿ ಯ ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ, ಬೃಹತ್‌ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು , ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ, ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

    ಇನ್ನು, ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್‌ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ, ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. BIAL ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

    ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಕಳೆದ ವರ್ಷ 37.5 ದಶಲಕ್ಷ ರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030 ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವುಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

    Continue Reading

    ಹೊಸ ಸುದ್ದಿ

    Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

    Jio Cloud PC : ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ ಕಂಪ್ಯೂಟರ್‌ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ ಎಂಬುದು ತಂತ್ರಜ್ಞಾನವಾಗಿದ್ದು, ಯಾವುದೇ ಟಿವಿಯು ಇಂಟರ್ ನೆಟ್ ಮೂಲಕ ಕ್ಲೌಡ್ ಕಂಪ್ಯೂಟಿಂಗ್‌ಗೆ ಸಂಪರ್ಕಿಸಲು ಸಾಧ್ಯವಾಗುತ್ತದೆ.

    VISTARANEWS.COM


    on

    By

    Jio Cloud PC to turn home TV into computer
    Koo

    ನವದೆಹಲಿ : ಮನೆಗಳ ಸ್ಮಾರ್ಟ್ ಟಿವಿಗಳನ್ನು ಸುಲಭವಾಗಿ ಕಂಪ್ಯೂಟರ್‌ಗಳಾಗಿ ಪರಿವರ್ತಿಸುವ ತಂತ್ರಜ್ಞಾನವನ್ನು ರಿಲಯನ್ಸ್ ಜಿಯೋ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024ರಲ್ಲಿ ಪ್ರದರ್ಶಿಸಿದೆ. ಜಿಯೋ ಕ್ಲೌಡ್ ಪಿಸಿ (Jio Cloud PC) ಹೆಸರಿನ ಈ ತಂತ್ರಜ್ಞಾನವು ಕೇವಲ ನೂರು ರೂಪಾಯಿಗಳಿಗೆ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸುತ್ತದೆ. ಇದಕ್ಕೆ ಬೇಕಾಗಿರುವುದು ಇಂಟರ್ ನೆಟ್ ಸಂಪರ್ಕ, ಸ್ಮಾರ್ಟ್ ಟಿವಿ, ಟೈಪಿಂಗ್ ಕೀಬೋರ್ಡ್, ಮೌಸ್ ಮತ್ತು ಜಿಯೋ ಕ್ಲೌಡ್ ಪಿಸಿ ಅಪ್ಲಿಕೇಷನ್. ಟಿವಿಗಳು ಸ್ಮಾರ್ಟ್ ಅಲ್ಲದಿದ್ದಲ್ಲಿ ಸಾಮಾನ್ಯ ಟಿವಿಗಳು ಸಹ ಜಿಯೋಫೈಬರ್ (JioFiber) ಅಥವಾ ಜಿಯೋಏರ್ ಫೈಬರ್ (JioAirFiber) ಜತೆಗೆ ಬರುವ ಸೆಟ್-ಟಾಪ್ ಬಾಕ್ಸ್ ಮೂಲಕ ಕಂಪ್ಯೂಟರ್ ಆಗಬಹುದು.

    ಜಿಯೋ ಕ್ಲೌಡ್ ಪಿಸಿ ಎಂಬುದು ತಂತ್ರಜ್ಞಾನವಾಗಿದ್ದು, ಯಾವುದೇ ಟಿವಿಯು ಇಂಟರ್ ನೆಟ್ ಮೂಲಕ ಕ್ಲೌಡ್ ಕಂಪ್ಯೂಟಿಂಗ್‌ಗೆ ಸಂಪರ್ಕಿಸಲು ಸಾಧ್ಯವಾಗುತ್ತದೆ. ಇದು ಬಳಸುವುದಕ್ಕೆ ಸಹ ಸುಲಭ. ಆದರೆ ಗ್ರಾಹಕರು ಅಪ್ಲಿಕೇಷನ್‌ಗೆ ಲಾಗಿನ್ ಮಾಡಬೇಕಾಗುತ್ತದೆ ಮತ್ತು ಕ್ಲೌಡ್‌ನಲ್ಲಿ ಸಂಗ್ರಹವಾಗಿರುವ ಎಲ್ಲ ಡೇಟಾ ಟಿವಿಯಲ್ಲಿ ಕಾಣಿಸುತ್ತದೆ. ಇಮೇಲ್, ಸಂದೇಶ ಕಳುಹಿಸುವುದು, ಸಾಮಾಜಿಕ ನೆಟ್‌ವರ್ಕಿಂಗ್, ಇಂಟರ್ ನೆಟ್ ಸರ್ಫಿಂಗ್, ಶಾಲಾ ಪ್ರಾಜೆಕ್ಟ್ ಗಳು, ಕಚೇರಿ ಪ್ರಸೆಂಟೇಷನ್ ಮುಂತಾದ ಕಂಪ್ಯೂಟರ್‌ನಲ್ಲಿ ಮಾಡಬಹುದಾದ ಎಲ್ಲ ಕೆಲಸಗಳನ್ನು ಮನೆಯ ಟಿವಿಯಲ್ಲಿ ಮಾಡಬಹುದು. ಸರಳವಾಗಿ ಹೇಳುವುದಾದರೆ, ಎಲ್ಲ ಡೇಟಾವು ಕ್ಲೌಡ್‌ನಲ್ಲಿರುತ್ತದೆ ಮತ್ತು ಸರ್ವರ್, ಸ್ಟೋರೇಜ್, ಡೇಟಾಬೇಸ್, ನೆಟ್‌ವರ್ಕಿಂಗ್, ಸಾಫ್ಟ್‌ವೇರ್ ಮತ್ತು ಅನಲಿಟಿಕ್ಸ್ ಥರದ ಸೇವೆಗಳನ್ನು ಟಿವಿ ಮೂಲಕ ಬಳಕೆ ಮಾಡಬಹುದು.

     Jio Cloud PC to turn home TV into computer
    Jio Cloud PC to turn home TV into computer

    ಭಾರತೀಯ ಮಧ್ಯಮ ವರ್ಗದ ಕುಟುಂಬಗಳು ಹೆಚ್ಚಿನ ಪ್ರಮಾಣದಲ್ಲಿ ಕಂಪ್ಯೂಟರ್‌ಗೆ ಸಂಪರ್ಕ ಹೊಂದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈ ತಂತ್ರಜ್ಞಾನ ವರದಾನವಿದ್ದಂತೆ. ಏಕೆಂದರೆ ಕ್ಲೌಡ್ ಕಂಪ್ಯೂಟಿಂಗ್ ಸಾಮರ್ಥ್ಯವನ್ನು ಅಗತ್ಯಕ್ಕೆ ತಕ್ಕಂತೆ ಹೆಚ್ಚಿಸಬಹುದು ಅಥವಾ ಕಡಿಮೆ ಮಾಡಬಹುದು. ಇದು ಸುರಕ್ಷಿತ ಮಾತ್ರವಲ್ಲ, ಡೇಟಾ ಮರುಪಡೆಯುವಿಕೆ ಸಹ ಸಾಮಾನ್ಯ ಕಂಪ್ಯೂಟರ್ ಅನ್ನು ಬಳಸುವುದಕ್ಕಿಂತ ಸುಲಭವಾಗಿದೆ. ಟಿವಿ ಜೊತೆಗೆ ಮೊಬೈಲ್ ನಲ್ಲೂ ಬಳಸಬಹುದು. ಕಂಪನಿಯು ಈ ಅಪ್ಲಿಕೇಷನ್‌ ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸದಿದ್ದರೂ ಮುಂದಿನ ಕೆಲವು ತಿಂಗಳಲ್ಲಿ ಇದನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಬಹುದು.

    ಭಾರತದ ಡೇಟಾವು ಭಾರತೀಯ ಡೇಟಾ ಕೇಂದ್ರಗಳಲ್ಲಿಯೇ ಇರಬೇಕು: ಆಕಾಶ್ ಅಂಬಾನಿ

    ಭಾರತದ ಡೇಟಾವನ್ನು ಭಾರತೀಯ ಡೇಟಾ ಕೇಂದ್ರಗಳಲ್ಲಿಯೇ ಇರಿಸಬೇಕು ಎಂದು ರಿಲಯನ್ಸ್ ಜಿಯೋದ ಅಧ್ಯಕ್ಷರಾದ ಆಕಾಶ್ ಅಂಬಾನಿ ಅವರು ಪ್ರತಿಪಾದನೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್- 2024ರಲ್ಲಿ ಭಾಗವಹಿಸಿದ್ದ ಅವರು ಈ ಅಭಿಪ್ರಾಯ ಪಟ್ಟರು. ಭಾರತದಲ್ಲಿ ಡೇಟಾ ಉತ್ಪಾದನೆ ಪ್ರಮಾಣ ಹಾಗೂ ವೇಗ ಎರಡೂ ತೀವ್ರವಾಗಿ ಹೆಚ್ಚಾಗಿದೆ. ಇನ್ನು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನೊಂದಿಗೆ (ಕೃತಕ ಬುದ್ಧಿಮತ್ತೆ) ಇದು ಇನ್ನಷ್ಟು ವೇಗವನ್ನು ಪಡೆದುಕೊಳ್ಳುತ್ತದೆ. ಈ ಕಾರಣದಿಂದ ದೇಶದಲ್ಲಿಯೇ ಎಐ ಹಾಗೂ ಮಶೀನ್ ಲರ್ನಿಂಗ್ ಡೇಟಾ ಸೆಂಟರ್ ಗಳನ್ನು ಸ್ಥಾಪಿಸುವ ಅಗತ್ಯವಿದೆ. ಇದಕ್ಕಾಗಿ ಭಾರತೀಯ ಕಂಪನಿಗಳಿಗೆ ಸರ್ಕಾರದಿಂದ ಪ್ರೋತ್ಸಾಹ ಸಿಗಬೇಕು. ದತ್ತಾಂಶ ಕೇಂದ್ರ ನೀತಿ- 2020ರ ಕರಡನ್ನು ಶೀಘ್ರದಲ್ಲಿಯೇ ನವೀಕರಿಸಬೇಕು ಎಂದು ಅವರು ಸರ್ಕಾರನ್ನು ಮನವಿ ಮಾಡಿದರು.

    ಆಕಾಶ್ ಅಂಬಾನಿ ಅವರು ಮಾತು ಮುಂದುವರಿಸಿ, “ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಕೃತಕ ಬುದ್ಧಿಮತ್ತೆ (AI) ಅತ್ಯಂತ ಮುಖ್ಯವಾಗಿದೆ. ಮತ್ತು ಕೃತಕ ಬುದ್ಧಿಮತ್ತೆಯ ಪ್ರಯೋಜನಗಳನ್ನು ಪ್ರತಿ ಭಾರತೀಯರಿಗೂ ತಲುಪಿಸಲು ಜಿಯೋ ಪ್ರಯತ್ನಗಳನ್ನು ಆರಂಭಿಸಿದೆ. ನಾವು ಮೊಬೈಲ್ ಬ್ರಾಡ್‌ಬ್ಯಾಂಡ್‌ನೊಂದಿಗೆ ಮಾಡಿದಂತೆಯೇ ಕೈಗೆಟುಕುವ ಬೆಲೆಯಲ್ಲಿ ಶಕ್ತಿಯುತವಾದ ಎಐ ಮಾದರಿಗಳು ಮತ್ತು ಸೇವೆಗಳನ್ನು ತಲುಪಿಸಲು ಬದ್ಧರಾಗಿದ್ದೇವೆ. ಇದಕ್ಕಾಗಿ, ನಾವು ರಾಷ್ಟ್ರೀಯ ಎಐ ಮೂಲಸೌಕರ್ಯದ ಆಧಾರ ಸಿದ್ಧಪಡಿಸುತ್ತಿದ್ದೇವೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವವನ್ನು ಶ್ಲಾಘಿಸಿದ ಆಕಾಶ್ ಅಂಬಾನಿ, “ಇಂದು ಭಾರತೀಯ ಮೊಬೈಲ್ ಕಂಪನಿಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಯಿಂದಾಗಿ ಭಾರತವು ಅಭಿವೃದ್ಧಿ ಹೊಂದಿದ ದೇಶಗಳು ಸೇರಿದಂತೆ ಜಗತ್ತಿಗೆ ಎಐ ಸಲ್ಯೂಷನ್ ಗಳನ್ನು ಒದಗಿಸಬಹುದು. ಸರ್ಕಾರವು ಉದ್ಯಮ ಮತ್ತು ನಾವೀನ್ಯತೆಗೆ ಹೆಚ್ಚು ಪ್ರೋತ್ಸಾಹ- ಉತ್ತೇಜನ ನೀಡುವುದರಿಂದ ಭಾರತದಲ್ಲಿ ಅತಿದೊಡ್ಡ ಡಿಜಿಟಲ್ ಕ್ರಾಂತಿ ಸಂಭವಿಸಿದೆ. ನವ ಭಾರತದಲ್ಲಿ ಈಗ ವ್ಯಾಪಾರ ಸಂಪೂರ್ಣ ಬದಲಾಗಿದೆ. 145 ಕೋಟಿ ಭಾರತೀಯರ ಅಗತ್ಯಗಳು ಮತ್ತು ನಿರೀಕ್ಷೆಗಳನ್ನು ಪೂರೈಸಲು ಸರ್ಕಾರ ಮತ್ತು ಉದ್ಯಮವು ಉತ್ತಮ ಬಾಂಧವ್ಯದಲ್ಲಿ ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು.

    ಭಾರತವು ಮೊಬೈಲ್ ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿರುತ್ತದೆ. ಆದರೆ ನಾವು ಸಂಪರ್ಕಿತ (ಕನೆಕ್ಟೆಡ್), ಬುದ್ಧಿವಂತ (ಇಂಟೆಲಿಜೆಂಟ್) ಭವಿಷ್ಯಕ್ಕಾಗಿ ಎಐ ಶಕ್ತಿಯನ್ನು ಬಳಸಿಕೊಳ್ಳುತ್ತೇವೆ. ಕಂಪ್ಯೂಟರ್ ಮತ್ತು ಇಂಟರ್‌ನೆಟ್ ಅಳವಡಿಕೆ ಸಮಯದಲ್ಲಿ ಆದಂತೆಯೇ ಇದರಿಂದಲೂ ಉದ್ಯೋಗವೂ ಹೆಚ್ಚಾಗುತ್ತವೆ ಎಂದು ಅವರು ಅಭಿಪ್ರಾಯ ಪಟ್ಟರು.

    ಜುಲೈ- ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭ 16,563 ಕೋಟಿ ರೂಪಾಯಿ

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನಿಂದ ಸೋಮವಾರ (ಅಕ್ಟೋಬರ್ 14) ಜುಲೈನಿಂದ ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದ ಹಣಕಾಸು ಫಲಿತಾಂಶವನ್ನು ಘೋಷಣೆ ಮಾಡಿದೆ. ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ಬಾರಿ ನಿವ್ವಳ ಲಾಭವು ಶೇಕಡಾ 9.4ರಷ್ಟು ಏರಿಕೆಯಾಗಿ 16,563 ಕೋಟಿ ರೂಪಾಯಿ ತಲುಪಿದೆ. ಭಾರತದ ಅತ್ಯಂತ ಮೌಲ್ಯಯುತ ಕಂಪನಿ ಎನಿಸಿಕೊಂಡಿರುವ ರಿಲಯನ್ಸ್ ಇಂಡಸ್ಟ್ರೀಸ್, ಪ್ರಸಕ್ತ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ಮೂಲಕ ಗಳಿಸಿರುವ ಆದಾಯವು 2.35 ಲಕ್ಷ ಕೋಟಿಗಳಾಗಿದ್ದು, ಕಳೆದ ತ್ರೈಮಾಸಿಕದಲ್ಲಿ ಆದಾಯವು 2.36 ಲಕ್ಷ ಕೋಟಿ ರೂಪಾಯಿಗಳಿತ್ತು.

    ಜಿಯೋ ಪ್ಲಾಟ್ ಫಾರ್ಮ್

    ರಿಲಯನ್ಸ್ ಕಂಪನಿಯ ಡಿಜಿಟಲ್ ಸೇವೆ ವ್ಯವಹಾರದ ಅಂಗವಾದ ಜಿಯೋ ಪ್ಲಾಟ್ ಫಾರ್ಮ್ಸ್ ಜುಲೈನಿಂದ ಸೆಪ್ಟೆಂಬರ್ ಕೊನೆ ತನಕದ ತ್ರೈಮಾಸಿಕದಲ್ಲಿ ದಾಖಲೆಯ 6,536 ಕೋಟಿ ರೂಪಾಯಿ ಲಾಭ ಗಳಿಸಿದೆ. ವರ್ಷದಿಂದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ 23.2ರಷ್ಟು ಬೆಳವಣಿಗೆ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಜಿಯೋ 5,058 ಕೋಟಿ ರೂಪಾಯಿ ವರದಿ ಮಾಡಿತ್ತು. ಕಂಪನಿಯ ಆದಾಯವು ವರ್ಷದಿಂದ ವರ್ಷಕ್ಕೆ ಶೇ 14.5ರಷ್ಟು ಏಇಕೆ ಕಂಡು, 28,338 ಕೋಟಿ ರೂಪಾಯಿ ತಲುಪಿದೆ. “ಡಿಜಿಟಲ್ ಸೇವೆಯಲ್ಲಿನ ಬೆಳವಣಿಗೆಗೆ ಮುಖ್ಯ ಕಾರಣ ನೋಡುವುದಾದರೆ ಪ್ರತಿ ಬಳಕೆದಾರರಿಂದ ಬರುವ ಸರಾಸರಿ ಆದಾಯದಲ್ಲಿನ ಹೆಚ್ಚಳ ಹಾಗೂ ಗ್ರಾಹಕರು ತೊಡಗಿಕೊಳ್ಳುವ ಪ್ರಮಾಣದಲ್ಲಿನ ಸುಧಾರಣೆಯಿಂದ ನಮ್ಮ ಸೇವೆಗಳಲ್ಲಿ ಪ್ರಬಲವಾದ ಮೌಲ್ಯ ಸೇರ್ಪಡೆಯಾಗಿದೆ,” ಎಂದು ಕಂಪನಿಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಮುಕೇಶ್ ಅಂಬಾನಿ ಹೇಳಿದ್ದಾರೆ.

    ಜಿಯೋದ ತಿಂಗಳ ಎಆರ್ ಪಿಯು (ಪ್ರತಿ ಬಳಕೆದಾರರಿಂದ ಬರುವಂಥ ಸರಾಸರಿ ಆದಾಯ) ವರ್ಷದಿಂದ ವರ್ಷಕ್ಕೆ ಶೇಕಡಾ 7.4ರಷ್ಟು ಏರಿಕೆಯಾಗಿ, 195.1 ರೂಪಾಯಿ ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಸರಾಸರಿ ಆದಾಯವು 181.70 ರೂಪಾಯಿ ಇತ್ತು. ಇನ್ನು ಮುಂದಿನ ಎರಡು- ಮೂರು ತ್ರೈಮಾಸಿಕದಲ್ಲಿ ದರ ಏರಿಕೆಯ ಪೂರ್ಣ ಪ್ರಮಾಣದ ಪ್ರಭಾವ ತಿಳಿಯಲಿದೆ ಎಂದು ಕಂಪನಿ ಹೇಳಿದೆ. 5ಜಿ ಸೇವೆಯ ವಿಚಾರದಲ್ಲಿ ಮಾರುಕಟ್ಟೆಯಲ್ಲಿ ಜಿಯೋ ನಾಯಕತ್ವದ ಸ್ಥಾನದಲ್ಲಿದೆ. ಒಟ್ಟಾರೆ ಜಿಯೋ 5ಜಿ ಬಳಕೆದಾರರ ಸಂಖ್ಯೆ 14.8 ಕೋಟಿ ತಲುಪಿದೆ. ರಿಲಯನ್ಸ್ ಜಿಯೋದ ಒಟ್ಟಾರೆ ವೈರ್ ಲೆಸ್ ಡೇಟಾ ದಟ್ಟಣೆಯ ಶೇಕಡಾ 34ರಷ್ಟು ಈ ಸೆಗ್ಮೆಂಟ್ ನಿಂದ ಬಂದಿದೆ. ಇನ್ನು ಸದ್ಯದಲ್ಲೆ ಜಿಯೋಕ್ಲೌಡ್ ಬೀಟಾ ಜಿಯೋದಿಂದ ಆರಂಭವಾಗಲಿದೆ.

    “ಜಿಯೋದ ವ್ಯಾಪಕ ಶ್ರೇಣಿ ಕೊಡುಗೆಗಳು ಭಾರತದ ಪ್ರತಿ ಹಳ್ಳಿ, ಪಟ್ಟಣ ಮತ್ತು ನಗರಗಳನ್ನು ಡಿಜಿಟಲ್ ಆಗಿ ಸಶಕ್ತಗೊಳಿಸಲು, ಹಾಗೆಯೇ ದೇಶದ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳನ್ನು ಸಹ ಸಕ್ರಿಯಗೊಳಿಸುತ್ತದೆ. ಡಿಜಿಟಲ್ ಸೇವೆಗಳ ವ್ಯವಹಾರವು ರಾಷ್ಟ್ರೀಯ ಮಟ್ಟದಲ್ಲಿ ನವೀನ ಡೀಪ್-ಟೆಕ್ ಸಲ್ಯೂಷನ್ ಗಳ ಮೇಲೆ ಕೇಂದ್ರೀಕರಿಸುವುದನ್ನು ಮುಂದುವರಿಸಿದೆ ಮತ್ತು ಎಲ್ಲ ಭಾರತೀಯರಿಗೆ ಕೃತಕ ಬುದ್ಧಿಮತ್ತೆಯ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಪ್ರಯೋಜನಗಳನ್ನು ತಲುಪಿಸುವ ಹಾದಿಯಲ್ಲಿದೆ,” ಎಂದು ಮುಕೇಶ್ ಅಂಬಾನಿ ಹೇಳಿದರು.

    ಜಿಯೋ ಪ್ಲಾಟ್‌ಫಾರ್ಮ್‌ಗಳ ಅಧ್ಯಕ್ಷ ಕಿರಣ್ ಥಾಮಸ್ ಮಾತನಾಡಿ, ಕಂಪನಿಯ ಗೃಹ ಬಳಕೆಯ ಬ್ರಾಡ್‌ಬ್ಯಾಂಡ್ ವಿಭಾಗವು ಗಮನಾರ್ಹ ಬೆಳವಣಿಗೆ ದರವನ್ನು ಕಂಡಿದೆ. ಕಳೆದ ನಾಲ್ಕು ತ್ರೈಮಾಸಿಕಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದರು. ಪ್ರತಿ ತಿಂಗಳು ತಮ್ಮ ಬ್ರಾಡ್‌ಬ್ಯಾಂಡ್ ಸೇವೆಗೆ 1 ಮಿಲಿಯನ್, ಅಂದರೆ ಹತ್ತು ಲಕ್ಷ ಹೊಸ ಮನೆಗಳನ್ನು ತಲುಪುವುದು ಮಹತ್ವಾಕಾಂಕ್ಷೆಯ ಗುರಿಯಾಗಿದೆ ಎಂದು ಅವರು ಒತ್ತಿ ಹೇಳಿದರು.

    ರೀಟೇಲ್ ವೆಂಚರ್ಸ್
    ರಿಲಯನ್ಸ್ ರೀಟೇಲ್ ವೆಂಚರ್ಸ್ ತೆರಿಗೆ ನಂತರದ ಲಾಭವು 2,935 ಕೋಟಿ ರೂಪಾಯಿ ಬಂದಿದೆ. ಕಳೆದ ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ಇದು ಶೇ 20ರಷ್ಟಕ್ಕೆ ಹತ್ತಿರವಾಗುತ್ತದೆ. ಈ ರೀಟೇಲ್ ಘಟಕದ ಕಾರ್ಯಾಚರಣೆ ಮೂಲಕದ ಆದಾಯವು 66,502 ಕೋಟಿ ರೂಪಾಯಿ ಬಂದಿದೆ. ಕಳೆದ ತ್ರೈಮಾಸಿಕದಲ್ಲಿ ಇದು 66,260 ಕೋಟಿ ರೂಪಾಯಿ ಬಂದಿತ್ತು. “ರೀಟೇಲ್ ಸೆಗ್ಮೆಂಟ್ ತನ್ನ ಗ್ರಾಹಕರ ನೆಲೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದೆ. ಆನ್ ಲೈನ್ ಅಥವಾ ಆಫ್ ಲೈನ್ ಹೀಗೆ ಎಲ್ಲ ಚಾನೆಲ್ ಗಳಲ್ಲೂ ಪರಿಣಾಮಕಾರಿಯಾಗಿ ಗ್ರಾಹಕರನ್ನು ತಲುಪಿ, ಅವರ ಅಗತ್ಯಗಳ ಎಲ್ಲ ಮಾದರಿ ಉತ್ಪನ್ನಗಳನ್ನು ತಲುಪಿಸಲಾಗುತ್ತಿದೆ,” ಎಂದು ಅಂಬಾನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ತೈಲ ಹಾಗೂ ಅನಿಲ
    ರಿಲಯನ್ಸ್ ಇಂಡಸ್ಟ್ರೀಸ್ ತೈಲ ಹಾಗೂ ಅನಿಲ ವ್ಯವಹಾರದಲ್ಲಿ ಇಬಿಐಟಿಡಿಎ ವರ್ಷದಿಂದ ವರ್ಷಕ್ಕೆ ಶೇಕಡಾ 11ರಷ್ಟು ಹೆಚ್ಚಳವಾಗಿ 5290 ಕೋಟಿ ರೂಪಾಯಿ ಮುಟ್ಟಿದೆ. ಕಳೆದ ವರ್ಷ ಇಬಿಐಟಿಡಿಎ 4760 ಕೋಟಿ ರೂಪಾಯಿ ಇತ್ತು. ಇನ್ನೂ ಮುಖ್ಯ ಸಂಗತಿ ಏನೆಂದರೆ, ವರ್ಷದಿಂದ ವರ್ಷಕ್ಕೆ ಇಬಿಐಟಿಡಿಎ ಮಾರ್ಜಿನ್ ಶೇ 72ರಿಂದ ಶೇ 85ಕ್ಕೆ ತಲುಪಿದೆ.

    ಕಂಪನಿಯ ನ್ಯೂ ಎನರ್ಜಿ ಗಿಗಾ-ಫ್ಯಾಕ್ಟರಿಗಳ ಪ್ರಗತಿಯ ಬಗ್ಗೆ ಮುಕೇಶ್ ಅಂಬಾನಿ ಗಮನ ಸೆಳೆದರು. “ನಮ್ಮ ಮೊದಲ ನ್ಯೂ ಎನರ್ಜಿ ಗಿಗಾ-ಕಾರ್ಖಾನೆಗಳು ಈ ವರ್ಷದ ಅಂತ್ಯದ ವೇಳೆಗೆ ಸೌರ ಪಿವಿ ಮಾಡ್ಯೂಲ್‌ಗಳ ಉತ್ಪಾದನೆಯನ್ನು ಪ್ರಾರಂಭಿಸುವ ಹಾದಿಯಲ್ಲಿದೆ. ನವೀಕರಿಸಬಹುದಾದ ಸಮಗ್ರ ಶ್ರೇಣಿಯೊಂದಿಗೆ ಸೌರಶಕ್ತಿ, ಇಂಧನ ಶೇಖರಣಾ ವ್ಯವಸ್ಥೆಗಳು, ಹಸಿರು ಜಲಜನಕ, ಜೈವಿಕ ಶಕ್ತಿ ಮತ್ತು ಪವನ ಸೇರಿದಂತೆ ಸಲ್ಯೂಷನ್ ಗಳು, ನ್ಯೂ ಎನರ್ಜಿ ವ್ಯವಹಾರವು ಜಾಗತಿಕ ಸ್ವಚ್ಛ ಇಂಧನ ಪರಿವರ್ತನೆಗೆ ಗಮನಾರ್ಹ ಕೊಡುಗೆ ನೀಡಲು ಸಿದ್ಧವಾಗಿದೆ,” ಎಂದು ಅವರು ಹೇಳಿದರು.

    ಇನ್ನು ಒಟ್ಟಾರೆ ಹಣಕಾಸು ಫಲಿತಾಂಶದ ಬಗ್ಗೆ ತೃಪ್ತಿಯನ್ನು ವ್ಯಕ್ತಪಡಿಸಿದ ಮುಕೇಶ್ ಅಂಬಾನಿ, ರಿಲಯನ್ಸ್ ಇಂಡಸ್ಟ್ರೀಸ್ ನ ವೈವಿಧ್ಯಮಯವಾದ ವ್ಯವಹಾರಗಳ ಪೋರ್ಟ್ ಫೋಲಿಯೋಗೆ ಇರುವಂಥ ಸಾಮರ್ಥ್ಯದ ಬಗ್ಗೆ ಒತ್ತಿ ಹೇಳಿದರು.

    Continue Reading

    ದೇಶ

    Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ!

    Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ರತನ್‌ ಟಾಟಾ ಮಿಸ್‌ ಮಾಡಿದ್ದರು. ಬೀದಿ ನಾಯಿಗಳ ಅವರ ಕಾಳಜಿಗೆ ಇಡೀ ಲಂಡನ್‌ ಜನತೆ ತಲೆಬಾಗಿತ್ತು.

    VISTARANEWS.COM


    on

    By

    Ratan Tata missed england's royal honour to take care of sick dogs
    Koo

    ಭಾರತದ ಅತಿ ಶ್ರೇಷ್ಠ ಉದ್ಯಮಿಯಾದ ರತನ್ ಟಾಟಾ (Ratan Tata) ಅವರ ಮಾನವೀಯ ಗುಣಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ.. ತಮ್ಮ ಸಂಪತ್ತಿನ ಅರ್ಧ ಭಾಗವನ್ನು ದಾನ ಮಾಡಿದ್ದು, ಕೊರೊನಾ ಸಂಕಷ್ಟದ ಸಮಯದಲ್ಲಿ ಪ್ರಧಾನಿ ಪರಿಹಾರ ನಿಧಿಗೆ 500 ಕೋಟಿ ರೂ. ದಾನ ಮಾಡಿದ್ದು.. ಹೀಗೆ ನೂರಾರು ಉದಾಹರಣೆಗಳು ದೊರೆಯುತ್ತವೆ. ಅದಕ್ಕೆ ಇನ್ನೊಂದು ಪುರಾವೆಯು ಇಲ್ಲಿದೆ.

    ರತನ್ ಟಾಟಾ ಅವರ ಜೀವಮಾನದ ಸಾಧನೆಗಳನ್ನು ಪರಿಗಣಿಸಿ 2018ರಲ್ಲಿ ಸನ್ಮಾನ ಮಾಡಲು ಇಂಗ್ಲೆಂಡಿನ ರಾಜಕುಮಾರ ಚಾರ್ಲ್ಸ್ ಅವರು ಇಂಗ್ಲೆಂಡಿಗೆ ಆಮಂತ್ರಿಸಿದ್ದರು. ಅದು ರಾಯಲ್ ಮನೆತನದ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಏರ್ಪಾಡಾಗಿದ್ದ ರಾಜಗೌರವದ ಸನ್ಮಾನ! ಪ್ರಿನ್ಸ್ ಚಾರ್ಲ್ಸ್ ಈ ಗೌರವದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನೂರಾರು ಅತಿ ಗಣ್ಯ ವ್ಯಕ್ತಿಗಳನ್ನು ಕರೆದಿದ್ದರು. ರತನ್ ಟಾಟಾ ಅವರು ಕೂಡ ಈ ಆಮಂತ್ರಣವನ್ನು ಸ್ವೀಕರಿಸಿ ಲಂಡನ್ನಿಗೆ ಹೊರಡುವ ತಯಾರಿ ಮಾಡಿದ್ದರು.

    ಅವರನ್ನು ಇಂಗ್ಲೆಂಡಿನಲ್ಲಿ ಸ್ವಾಗತ ಮಾಡಿ ಅವರ ಆತಿಥ್ಯದ ವ್ಯವಸ್ಥೆಯನ್ನು ಮಾಡಲು ಚಾರ್ಲ್ಸ್ ಅವರಿಂದ ನಿಯುಕ್ತ ಆದವರು ಖ್ಯಾತ ಉದ್ಯಮಿಗಳು ಮತ್ತು ಅಂಕಣಕಾರರಾದ ಸುಹೇಲ್ ಸೇಥ ಅವರು. ಸುಹೇಲ್ ಅವರು ನಾಲ್ಕು ದಿನ ಮೊದಲೇ ಲಂಡನ್ನಿಗೆ ಹೋಗಿ ಟಾಟಾ ಅವರನ್ನು ಸ್ವಾಗತ ಮಾಡಲು ಸಿದ್ಧತೆಯನ್ನೂ ಮಾಡಿದ್ದರು.

    ಒಮ್ಮೆ ಸುಹೇಲ್ ಅವರು ಯಾವುದೋ ಒಂದು ಕೆಲಸದಲ್ಲಿ ಮುಳುಗಿದ್ದಾಗ ಅವರ ಮೊಬೈಲ್ ಫೋನ್ ಒಂದೇ ಸಮನೆ ಹೊಡೆದುಕೊಳ್ಳಲು ಆರಂಭ ಆಯಿತು. ಸುಹೇಲ್ ಸ್ವಲ್ಪ ಹೊತ್ತಿನ ನಂತರ ಮೊಬೈಲ್ ನೋಡಿದಾಗ ರತನ್ ಟಾಟಾ ಅವರ ಹನ್ನೊಂದು ಮಿಸ್ ಕಾಲ್ ಇತ್ತು! ಯಾಕೆಂದು ಸುಹೇಲ್ ಗಾಬರಿ ಬಿದ್ದು ಟಾಟಾ ಅವರಿಗೆ ಮರು ಕಾಲ್ ಮಾಡಿದರು. ಕಾಲ್ ಕನೆಕ್ಟ್ ಆಯಿತು. ಅಂದು ರತನ್ ಟಾಟಾ ಅವರ ಧ್ವನಿ ನಡುಗುತ್ತಿತ್ತು.

    ಅವರು ಹೇಳುತ್ತಾ ಹೋದರು. “ಸುಹೇಲ್ ಸಾರಿ. ನಿಮಗೆ ತೊಂದರೆ ಕೊಡುತ್ತಾ ಇದ್ದೇನೆ. ನಿಮಗೆ ಹೇಗೆ ಹೇಳಬೇಕೋ ಗೊತ್ತಾಗುತ್ತಿಲ್ಲ. ನನ್ನ ಎರಡು ನಾಯಿಗಳಾದ ಟ್ಯಾಂಗೋ ಮತ್ತು ಟಿಟೋಗಳ ಪೈಕಿ ಒಂದು ಇಂದು ತೀವ್ರವಾಗಿ ಅಸ್ವಸ್ಥ ಆಗಿದೆ. ನಿಮಗೆ ಗೊತ್ತು ನಾನು ಎಷ್ಟು ಅವುಗಳನ್ನು ಪ್ರೀತಿ ಮಾಡುತ್ತೇನೆ ಎಂದು. ಇಂಥಹ ಸಂಕೀರ್ಣ ಸನ್ನಿವೇಶದಲ್ಲಿ ನಾನು ನಾಯಿಗಳನ್ನು ಬಿಟ್ಟು ಲಂಡನ್‌ಗೆ ಬರಲು ಸಾಧ್ಯ ಇಲ್ಲ. ನೀವಿದನ್ನು ದಯವಿಟ್ಟು ಪ್ರಿನ್ಸ್ ಚಾರ್ಲ್ಸ್ ಅವರಿಗೆ ತುರ್ತಾಗಿ ತಿಳಿಸಬೇಕು ಮತ್ತು ನಾನು ಅವರ ಕ್ಷಮೆಯನ್ನು ಕೇಳುತ್ತಿದ್ದೇನೆ ಎಂದು ಕೂಡ ತಿಳಿಸಬೇಕು” ಎಂದರು.

    ಸುಹೇಲ್ ಅವರಿಗೆ ಏನು ಉತ್ತರ ಹೇಳಬೇಕು ಎಂದು ಗೊತ್ತಾಗಲಿಲ್ಲ. ಅವರು “ರತನ್ ಜಿ. ಇದು ಸಾಮಾನ್ಯ ಕಾರ್ಯಕ್ರಮ ಅಲ್ಲ. ಇಂಗ್ಲಿಷ್ ರಾಜಮನೆತನದ ಗೌರವದ ಕಾರ್ಯಕ್ರಮ. ಸ್ವತಃ ಪ್ರಿನ್ಸ್ ಚಾರ್ಲ್ಸ್ ಮುಂದೆ ನಿಂತು ಈ ಕಾರ್ಯಕ್ರಮ ಏರ್ಪಡಿಸುತ್ತಿದ್ದಾರೆ. ನೂರಕ್ಕೂ ಹೆಚ್ಚಿನ ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ. ಸ್ವತಃ ಇಂಗ್ಲೆಂಡ್ ರಾಣಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ. ಆದ್ದರಿಂದ ನೀವು ನಾಯಿಗಳ ಬಗ್ಗೆ ಬೇರೇನಾದರೂ ವ್ಯವಸ್ಥೆಯನ್ನು ಮಾಡಿ ಲಂಡನ್ನಿಗೆ ಹೊರಡಬೇಕು ಎಂದು ವಿನಂತಿ ಮಾಡುತ್ತೇನೆ” ಎಂದರು.

    ಆದರೆ ರತನ್ ಟಾಟಾ ತಮ್ಮ ನಿರ್ಧಾರವನ್ನು ಬದಲಾಯಿಸಲು ಒಪ್ಪಲಿಲ್ಲ. “ನಿಮಗೆ ಗೊತ್ತಿದೆ ನಾನು ನನ್ನ ನಾಯಿಗಳನ್ನು ಎಷ್ಟು ಪ್ರೀತಿ ಮಾಡುತ್ತೇನೆ ಎಂದು. ದಯವಿಟ್ಟು ನನಗೆ ಒತ್ತಾಯ ಮಾಡಬೇಡಿ. ನನ್ನ ಮಾತುಗಳನ್ನು ಪ್ರಿನ್ಸ್ ಚಾರ್ಲ್ಸ್ ಅವರಿಗೆ ವಿನೀತವಾಗಿ ತಲುಪಿಸಿ” ಅಂದು ಫೋನ್ ಇಟ್ಟರು. ಸುಹೇಲ್ ಅವರಿಗೆ ಈಗ ನಿಜವಾಗಿ ಉಭಯ ಸಂಕಟ ಆರಂಭ ಆಯಿತು. ಅವರು ಮರುದಿನವೇ ಮುಂಜಾನೆ ಬಕಿಂಗ್ ಹ್ಯಾಮ್ ಅರಮನೆಗೆ ಹೋದಾಗ ಅಲ್ಲಿ ಎಲ್ಲ ಸಿದ್ಧತೆಗಳೂ ಕೊನೆಯ ಹಂತದಲ್ಲಿ ಇದ್ದವು.

    ಅವರು ಸಂಕೋಚದಿಂದ ಪ್ರಿನ್ಸ್ ಚಾರ್ಲ್ಸ್ ಮುಂದೆ ಹೋಗಿ ಟಾಟಾ ಹೇಳಿದ್ದನ್ನು ಪ್ರೀತಿಯಿಂದ ಹೇಳಿದರು. ಅದೇ ಕಾರಣವನ್ನು ಕೂಡ ನಿವೇದನೆ ಮಾಡಿಕೊಂಡರು. ಒಮ್ಮೆ ಚಾರ್ಲ್ಸ್ ಹಣೆಯ ಮೇಲೆ ನೆರಿಗೆಗಳು ಕಂಡುಬಂದವು. ತಕ್ಷಣ ಅವರ ಮೊದಲ ಉದ್ಗಾರ – That’s the man!

    “ರತನ್ ಅವರಿಗೆ ಬರಲು ಆಗುವುದಿಲ್ಲ ಎಂದು ನೀವು ಹೇಳಿದಾಗ ನನಗೆ ಒಮ್ಮೆ ಬೇಜಾರು ಆಯಿತು. ಆದರೆ ಅವರು ನೀಡಿದ ಕಾರಣ ನೋಡಿ ನನಗೆ ಅವರ ಬಗ್ಗೆ ತುಂಬ ಹೆಮ್ಮೆ ಅನ್ನಿಸಿತು. ನನಗೆ ಅವರ ಬಗ್ಗೆ ಇರುವ ಗೌರವ, ಪ್ರೀತಿ ಇಮ್ಮಡಿ ಆಗಿದೆ. ನೋ ಪ್ರಾಬ್ಲಂ. ಈ ಕಾರ್ಯಕ್ರಮವನ್ನು ಮುಂದಕ್ಕೆ ಹಾಕೋಣ” ಎಂದು ಚಾರ್ಲ್ಸ್ ಹೇಳಿದರು. ಕೊನೆಗೂ ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹೋಗಲಿಲ್ಲ ಮತ್ತು ಆ ಕಾರ್ಯಕ್ರಮವು ಮುಂದೆ ನಡೆಯಲೇ ಇಲ್ಲ!

    ಟಾಟಾ ಒಮ್ಮೆ ತಮ್ಮ ಎರಡು ನಾಯಿಗಳ ಬಗ್ಗೆ ಮಾಡಿದ ಟ್ವೀಟ್ ಹೀಗಿದೆ – Tito and Tango seek nothing in return for their affection other than a little love and attention. I miss them terribly when I am away!

    ಯಾರೂ ಸುಖಾಸುಮ್ಮನೆ ದೊಡ್ಡವರು ಆಗುವುದಿಲ್ಲ! ಅವೆರಡೂ ರತನ್ ಟಾಟಾ ಸಾಕಿದ ಬೀದಿ ನಾಯಿಗಳು ಆಗಿದ್ದವು!

    ಟಾಟಾ ಅವರಿಗೆ ತಮ್ಮ ಜೀವನದ ಆದ್ಯತೆಗಳನ್ನು ನಿರ್ಧಾರ ಮಾಡಲು ಗೊತ್ತಿದೆ ಮತ್ತು ಅವರು ತಮ್ಮ ಆದ್ಯತೆಗಳಿಂದ ಒಂದಿಷ್ಟೂ ವಿಚಲಿತ ಆಗುವುದಿಲ್ಲ. ತಮ್ಮ ಕಂಪೆನಿಯ ಪ್ರತಿ ಉದ್ಯೋಗಿಯನ್ನೂ ಅವರು ಅದೇ ಮಾನವೀಯ ಅಂತಃಕರಣದಿಂದ ನೋಡಿಕೊಳ್ಳುತ್ತಾರೆ ಎಂದು ಅನೇಕರು ಹೇಳಿದ್ದಾರೆ. ಅಂದ ಹಾಗೆ ರತನ್ ಟಾಟಾ ಈವರೆಗೆ ಮದುವೆ ಆಗಿಲ್ಲ! ನಾನು ನಾಲ್ಕು ಬಾರಿ ಮದುವೆಯ ಹೊಸ್ತಿಲಿನ ತನಕ ಬಂದು ಭಯದಿಂದ ಹಿಂದೆ ಹೋಗಿದ್ದೆ ಎಂದವರು ತಮಾಷೆಗೆ ಹೇಳಿದ್ದಾರೆ!

    Continue Reading

    ದೇಶ

    Ratan Tata : ರತನ್‌ ಟಾಟಾ ಕಂಪನಿ ಸೇರಿದ್ದು ಸಾಮಾನ್ಯ ಉದ್ಯೋಗಿಯಾಗಿ! ಉದ್ಯಮ ರಂಗದ ಗುರು ಆಗಿದ್ದೇಗೆ?

    Ratan Tata : ತಮ್ಮ ಸಂಪತ್ತಿನ ಬಹುಪಾಲನ್ನು ಆಗಲೇ ದಾನ ಮಾಡಿರುವ ರತನ್‌ ಟಾಟಾ ಅವರು ತಮ್ಮದೇ ಕಂಪನಿಯನ್ನು ಸೇರಿದ್ದು ಒಬ್ಬ ಸಾಮಾನ್ಯ ಉದ್ಯೋಗಿಯಾಗಿ ಎನ್ನುವುದು ಅವರ ದೊಡ್ಡಸ್ತಿಕೆ.

    VISTARANEWS.COM


    on

    By

    Ratan Tata joined the company as an ordinary employee but Why is he the guru of the industry
    Koo

    ಭಾರತದ ಮಹೋನ್ನತ ಬಿಸಿನೆಸ್ ಮ್ಯಾಗ್ನೆಟ್ ರತನ್ ಟಾಟಾ ಪ್ರಧಾನಮಂತ್ರಿಗಳ ಕೊರೊನಾ ತುರ್ತು ಪರಿಹಾರ ನಿಧಿಗೆ 1500 ಕೋಟಿ ರೂಪಾಯಿ ಕೊಡುಗೆ ನೀಡಿದಾಗ ಎಲ್ಲರೂ ಮೂಗಿನ ಮೇಲೆ ಬೆರಳು ಇಟ್ಟಿದ್ದರು! (ಇದು ಎಷ್ಟೋ ರಾಷ್ಟ್ರಗಳ ವಾರ್ಷಿಕ ಬಜೆಟ್‌ಗಿಂತಲೂ ಅಧಿಕ!). ಎಷ್ಟೋ ಸಿರಿವಂತರು ಹೃದಯವಂತರು ಆಗಿರುವುದಿಲ್ಲ. ಆದರೆ ರತನ್ ಟಾಟಾ ಅದಕ್ಕೊಂದು ಅಪವಾದ. ಅವರು ತಮ್ಮ ಸಂಪತ್ತಿನ 60-65% ಭಾಗವನ್ನು ಈಗಾಗಲೇ ದಾನ ಮಾಡಿಯಾಗಿದೆ! ಬೇರೆ ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಿ ಎಸ್ ಆರ್ ಯೋಜನೆಗಳನ್ನು ರೂಪಿಸಲು ಕೂಡ ರತನ್ ಟಾಟಾ ಮಾದರಿಯಾಗಿ ನಿಂತಿದ್ದರು.

    ಟಾಟಾ ಕಂಪೆನಿಗೆ ಒಬ್ಬ ಸಾಮಾನ್ಯ ಉದ್ಯೋಗಿಯಾಗಿ ಸೇರಿದರು!

    1937 ರಲ್ಲಿ ಸೂರತ್ ನಗರದಲ್ಲಿ ಜನಿಸಿದ ರತನ್ ಟಾಟಾ ವಿದೇಶಗಳಲ್ಲೇ ಹೆಚ್ಚು ಶಿಕ್ಷಣ ಪಡೆದವರು. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಕಲಿಕೆ. 1961 ರಲ್ಲಿ ಟಾಟಾ ಕಂಪನಿಯನ್ನು ಒಬ್ಬ ಸಾಮಾನ್ಯವಾದ ಉದ್ಯೋಗಿಯಾಗಿ ಸೇರಿದ ಅವರು ತಮ್ಮ ಕಾರ್ಯಕ್ಷಮತೆ, ಶಿಸ್ತು ಮತ್ತು ದಕ್ಷತೆಯಿಂದ ಎಲ್ಲರ ಮನಗೆದ್ದರು. 1991 ರಲ್ಲಿ ಟಾಟಾ ಸಮೂಹ ಸಂಸ್ಥೆಗಳ ಭೀಷ್ಮ ಜೆ. ಆರ್. ಡಿ. ಟಾಟಾ ಅವರು ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗುವಾಗ ತನ್ನ ಉತ್ತರಾಧಿಕಾರಿಯಾಗಿ ರತನ್ ಟಾಟಾ ಅವರನ್ನು ನೇಮಕ ಮಾಡಿದರು.

    ಇದು ಟಾಟಾ ವಿವಿಧ ಕಂಪನಿಗಳ ಮುಖ್ಯಸ್ಥರ ಅಸಾಮಾಧಾನಕ್ಕೆ ಕಾರಣವಾಯಿತು. ಆದರೆ ರತನ್ ಟಾಟಾ ಇದಕ್ಕೆಲ್ಲ ಸೊಪ್ಪು ಹಾಕುವವರೇ ಅಲ್ಲ! ಎಲ್ಲ ಟಾಟಾ ಸಂಸ್ಥೆಗಳನ್ನು ಒಗ್ಗೂಡಿಸಿ ಟಾಟಾ ಸಮೂಹ ಸಂಸ್ಥೆಯಾಗಿ ರೂಪಿಸಿದ್ದು ಅವರ ಜಾಣ ನಡೆಯಾಗಿತ್ತು. ಹಿರಿಯ ತಲೆಗಳನ್ನು ನಿವೃತ್ತಿ ಮಾಡಿ ಹೊಸಬರಿಗೆ ಅವಕಾಶ ನೀಡಿದರು. ಹೊಸ ಆವಿಷ್ಕಾರ, ನಾವೀನ್ಯತೆ, ಜಾಗತಿಕ ದೃಷ್ಟಿಕೋನ, ಆರ್ಥಿಕ ಶಿಸ್ತು, ಪರಿಣಾಮಕಾರಿ ನಿರ್ಧಾರ, ಉತ್ತರದಾಯಿತ್ವ, ಜವಾಬ್ದಾರಿಗಳ ಹಂಚಿಕೆ ಇವುಗಳಿಗೆ ಆದ್ಯತೆ ನೀಡಿದರು. ಆರ್ಥಿಕ ಶಿಸ್ತು ಅವರಲ್ಲಿ ಎದ್ದುಕಾಣುವ ಗುಣ. ತನ್ನ ಉದ್ಯೋಗಿಗಳನ್ನು ತುಂಬಾ ಚೆನ್ನಾಗಿ ವಿಶ್ವಾಸಕ್ಕೆ ತೆಗೆದುಕೊಂಡರು. ಪರಿಣಾಮವಾಗಿ ಅವರ 21 ವರ್ಷಗಳ ಅಧಿಕಾರದ ಅವಧಿಯಲ್ಲಿ ಟಾಟಾ ಸಂಸ್ಥೆಯ ಆದಾಯವು 40 ಪಟ್ಟು ಅಧಿಕವಾಯಿತು! ಲಾಭವು 50 ಪಟ್ಟು ಅಧಿಕವಾಯಿತು! ರತನ್ ಟಾಟಾ ಅವರ ಅವಧಿಯನ್ನು ಭಾರತೀಯ ಉದ್ಯಮ ರಂಗದ ಸುವರ್ಣ ಯುಗ ಎಂದು ಕರೆಯಲಾಯಿತು.

    ಟಾಟಾ ಜಗದಗಲ ಬೆಳೆಯಿತು!

    ಟಾಟಾ ಸಂಸ್ಥೆಗಳು 100ಕ್ಕೂ ಅಧಿಕ ದೇಶಗಳಲ್ಲಿ ಸ್ಥಾಪನೆಯಾದವು. ಗುಂಡು ಪಿನ್‌ನಿಂದ ಆರಂಭಿಸಿ ಟ್ರಕ್‌ಗಳವರೆಗೆ, ಉಪ್ಪಿನಿಂದ ಆರಂಭಿಸಿ ವಿಮಾನದವರೆಗೆ, ಕೈ ಗಡಿಯಾರದಿಂದ ಆರಂಭಿಸಿ ಚಿನ್ನದ ಮಳಿಗೆಗಳವರೆಗೆ, ಹೋಟೆಲ್ ಉದ್ಯಮದಿಂದ ಆರಂಭ ಮಾಡಿ ನ್ಯಾನೋ ಕಾರುಗಳವರೆಗೆ ಉದ್ಯಮವನ್ನು ವಿಸ್ತಾರ ಮಾಡಿದ ಕೀರ್ತಿಯು ಅವರಿಗೆ ಸಲ್ಲುತ್ತದೆ! ನಷ್ಟದಲ್ಲಿ ಇದ್ದ ಏರ್ ಇಂಡಿಯಾ ಸಂಸ್ಥೆಯನ್ನು ವಹಿಸಿಕೊಂಡು ಭಾರಿ ಲಾಭಕ್ಕೆ ಪರಿವರ್ತನೆ ಮಾಡಿದ ಕೀರ್ತಿ ಟಾಟಾ ಅವರಿಗೆ ಸಲ್ಲುತ್ತದೆ. ಅದೇ ರೀತಿಯಲ್ಲಿ ಬೆಳೆಯುತ್ತಿರುವ ಹಲವು ಉದ್ಯಮಿಗಳಿಗೆ ಅವರು ತಮ್ಮ ಗೆಲುವಿನ ಗುಟ್ಟನ್ನು ಯಾವ ಮುಚ್ಚುಮರೆ ಮಾಡುವುದರಲ್ಲಿ ಟಾಟಾ ಇಂದು ಉದ್ಯಮರಂಗದ ಗುರು ಎಂದು ಕೂಡ ಕರೆಸಿಕೊಂಡಿದ್ದರು.

    ಕೊಟ್ಟ ಮಾತಿನಂತೆ ನಡೆದುಕೊಂಡರು ರತನ್ ಟಾಟಾ

    75ನೆಯ ವಯಸ್ಸಿನಲ್ಲಿ ಅವರು ತಾವು ಕೊಟ್ಟ ಮಾತಿನಂತೆ ಸೇವಾ ನಿವೃತ್ತಿಯನ್ನು ಘೋಷಿಸಿ ತನ್ನ ಉತ್ತರಾಧಿಕಾರಿಯನ್ನು ನೇಮಿಸಿದರು. ಆದರೆ ಆಡಳಿತ ಮಂಡಳಿ, ಶೇರ್ ಹೋಲ್ಡರ್ಸ್, ಸಹಯೋಗಿ ಸಂಸ್ಥೆಗಳು ಅವರ ಮೇಲೆ ಪೂರ್ತಿ ಭರವಸೆ ಇಟ್ಟು ಅವರನ್ನೇ ಟಾಟಾ ಸಂಸ್ಥೆಗಳು ಹಾಗೂ ಟ್ರಸ್ಟ್‌ಗಳ ‌ಹೆಡ್ ಆಗಿ ಮುಂದುವರಿಸಿಕೊಂಡು ಬಂದಿದ್ದರು. ಸಂಸ್ಥೆಗಳ ಲಾಭದ 51% ಗಿಂತ ಅಧಿಕ ಪಾಲನ್ನು ಅವರು ಟಾಟಾ ಸಮಾಜಸೇವಾ ಟ್ರಸ್ಟ್ ಗಳಿಗೆ ಹಂಚಿಕೆ ಮಾಡುತ್ತಿದ್ದರು. ಕೇವಲ 1% ಗಿಂತ ಕಡಿಮೆ ಲಾಭವನ್ನು ಪಡೆಯುತ್ತಿದ್ದರು. ಅವರಿಗೆ ಪದ್ಮಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗಳು ಈಗಾಗಲೇ ದೊರೆತಿದ್ದು ಭಾರತರತ್ನ ಮಾತ್ರ ಬಾಕಿಯಿದೆ!

    ನೊಂದವರ, ಬಡವರ ಬಗ್ಗೆ ಕಾಳಜಿ ಅವರಿಗೆ ರಕ್ತದಲ್ಲೇ ಬಂದಿದ್ದು ಜಗತ್ತಿನ ಅತೀ ಕಡಿಮೆ ಬೆಲೆಯ ಟಾಟಾ ನ್ಯಾನೋ ಬಡವರ ಕಾರು( ಬೆಲೆ ಕೇವಲ ಒಂದು ಲಕ್ಷ ರೂಪಾಯಿ) ರೂಪಿಸಿದ ಕೀರ್ತಿ ಅವರದ್ದು! ಬೀದಿ ನಾಯಿಗಳನ್ನು ಪೋಷಣೆ ಮಾಡುವುದರಲ್ಲಿ ಕೂಡ ಅವರು ಮಾದರಿ ಆಗಿದ್ದರು. ಒಮ್ಮೆ ತನ್ನ ಬೀದಿನಾಯಿಗಳ ಅನಾರೋಗ್ಯದ ಕಾರಣಕ್ಕೆ ಇಂಗ್ಲೆಂಡ್ ಅರಮನೆಯ ಅದ್ದೂರಿ ಸನ್ಮಾನ ನಿರಾಕರಿಸಿ ಅವರು ಭಾರೀ ಸುದ್ದಿಯಾಗಿದ್ದರು.

    ರತನ್ ಟಾಟಾ ಎಲ್ಲರಂತಲ್ಲ!

    ಸಂಪೂರ್ಣ ಸಸ್ಯಾಹಾರಿ ಆದ, ಮದ್ಯಪಾನದಿಂದ ಗಾವುದ ದೂರ ಇರುವ, ನಾಚಿಕೆ ಸ್ವಭಾವದ, ಹೆಚ್ಚು ಏಕಾಂತವನ್ನು ಬಯಸುವ, ಸಾಮಾಜಿಕ ಕಾರ್ಯಕ್ರಮಗಳಿಗೆ ಕಡಿಮೆ ಬರುವ, ಪ್ರಚಾರದಿಂದ ದೂರ ಇರುವ, ಪಿಯಾನೋ ನುಡಿಸುವ, ಹಳೆ ಹಿಂದಿ ಸಿನಿಮಾ ಗೀತೆಗಳನ್ನು ಗುನುಗುವ, ಸರಳವಾಗಿ ಬದುಕುತ್ತಿರುವ, ಬೀದಿ ನಾಯಿಗಳನ್ನು ಪೋಷಿಸುವ, ತುಂಬಾ ಓದುವ ಅಭ್ಯಾಸವಿರುವ ರತನ್ ಟಾಟಾ ತಮ್ಮ 86ನೇ ವಯಸ್ಸಿಗೆ ವಿದಾಯ ಹೇಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ಬೇರೆಲ್ಲ ಕಂಪನಿಗಳು ತನ್ನ ಉದ್ಯೋಗಿಗಳಿಗೆ ವೇತನ ಕಡಿತ ಮಾಡಿದ್ದರೆ ಟಾಟಾ ಕಂಪೆನಿಯು ಪೂರ್ಣ ವೇತನ ಕೊಟ್ಟು ಮಾದರಿ ಆಗಿತ್ತು. ತನ್ನ ಜೀವನದಲ್ಲಿ 4 ಹುಡುಗಿಯರನ್ನು ಪ್ರೀತಿ ಮಾಡಿದ್ದೆ ಎಂದು ಹೇಳಿಕೊಳ್ಳುವ ಅವರಿನ್ನೂ ಮದುವೆಯಾಗದೇ ಏಕಾಂಗಿಯಾಗಿ ಜೀವಿಸಿದ್ದರು.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading
    Advertisement
    Dina bhavishya
    ಭವಿಷ್ಯ5 ಗಂಟೆಗಳು ago

    Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

    Gosavi samaj lathicharged Sri Ram Sene calls for bandh in Lakshmeshwara town on October 19
    ಗದಗ20 ಗಂಟೆಗಳು ago

    Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

    A man killed his wife and her lover then committed suicide
    ಬೆಂಗಳೂರು22 ಗಂಟೆಗಳು ago

    Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

    Parvati Nair to play dual role in suspense thriller un Paravail Tamil film
    ಸಿನಿಮಾ23 ಗಂಟೆಗಳು ago

    Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

    ಬೆಂಗಳೂರು1 ದಿನ ago

    Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

    Jio Cloud PC to turn home TV into computer
    ಹೊಸ ಸುದ್ದಿ1 ದಿನ ago

    Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

    Dina Bhavishya
    ಭವಿಷ್ಯ1 ದಿನ ago

    Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

    dina bhavishya
    ಭವಿಷ್ಯ2 ದಿನಗಳು ago

    Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

    karnataka Rain
    ಮಳೆ3 ದಿನಗಳು ago

    Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    Actor Darshan
    ಬೆಂಗಳೂರು3 ದಿನಗಳು ago

    Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

    galipata neetu
    ಕಿರುತೆರೆ11 ತಿಂಗಳುಗಳು ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ1 ವರ್ಷ ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Sharmitha Gowda in bikini
    ಕಿರುತೆರೆ1 ವರ್ಷ ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Bigg Boss- Saregamapa 20 average TRP
    ಕಿರುತೆರೆ12 ತಿಂಗಳುಗಳು ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ12 ತಿಂಗಳುಗಳು ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ10 ತಿಂಗಳುಗಳು ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ11 ತಿಂಗಳುಗಳು ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Action Prince Dhruva Sarja much awaited film Martin to hit the screens on October 11
    ಸಿನಿಮಾ2 ವಾರಗಳು ago

    Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

    Sudeep's birthday location shift
    ಸ್ಯಾಂಡಲ್ ವುಡ್2 ತಿಂಗಳುಗಳು ago

    Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

    Actor Darshan
    ಸ್ಯಾಂಡಲ್ ವುಡ್2 ತಿಂಗಳುಗಳು ago

    Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

    ಮಳೆ2 ತಿಂಗಳುಗಳು ago

    Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

    karnataka Weather Forecast
    ಮಳೆ2 ತಿಂಗಳುಗಳು ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 ತಿಂಗಳುಗಳು ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 ತಿಂಗಳುಗಳು ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 ತಿಂಗಳುಗಳು ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 ತಿಂಗಳುಗಳು ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ2 ತಿಂಗಳುಗಳು ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    ಟ್ರೆಂಡಿಂಗ್‌