Year Ender 2023: ಜಗತ್ತನ್ನೇ ಬೆರಗುಗೊಳಿಸಿದ ಭಾರತದ ಟಾಪ್ 10 ಕ್ಷಣಗಳು! - Vistara News

ದೇಶ

Year Ender 2023: ಜಗತ್ತನ್ನೇ ಬೆರಗುಗೊಳಿಸಿದ ಭಾರತದ ಟಾಪ್ 10 ಕ್ಷಣಗಳು!

Year Ender 2023: ಪ್ರಸಕ್ತ ಸಾಲಿನ ಭಾರತವು ಅನೇಕ ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಹಲವು ಸಾಧನೆಗಳು ಭಾರತದ ಸಾಧನೆಯನ್ನು ಹೆಚ್ಚಿಸಿವೆ. ಅಂಥ ವಿಸ್ಮಯ-ವಿಕ್ರಮಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

VISTARANEWS.COM


on

Indian govt share 10 moments that are stunned the world and Year Ender 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2023ರಲ್ಲಿ ಇಡೀ ಜಗತ್ತೇ ಹುಬ್ಬೇರಿಸುವಂತೆ (india stunned the world in 2023) ಮಾಡಿದ ಟಾಪ್ 10 ಭಾರತದ (India) ಸಾಧನೆಗಳನ್ನು (Top 10 Moments) ಒಳಗೊಂಡ ವಿಡಿಯೋವೊಂದನ್ನು ಭಾರತ ಸರ್ಕಾರವು (Indian Government) ಷೇರ್ ಮಾಡಿದೆ. ಪ್ರಸಕ್ತ ಸಾಲಿನಲ್ಲಿ ಭಾರತವು ಸಾಧಿಸಿದ ವಿಕ್ರಮಗಳು, ಪ್ರಥಮಗಳು, ವಿಶ್ವದಾಖಲೆಗಳನ್ನು ಒಳಗೊಂಡ ಪಟ್ಟಿ ಇದಾಗಿದೆ(Year Ender 2023).

ಐತಿಹಾಸಿಕ ಚಂದ್ರಯಾನ-3ರಿಂದ ಹಿಡಿದು ನಾಗಾಲೋಟದಲ್ಲಿ ಅಭಿವೃದ್ಧಿಯಾಗುತ್ತಿರುವ ಭಾರತದ ಆರ್ಥಿಕತೆಯವರೆಗೆ 10 ಸಾಧನೆಗಳನ್ನು ಈ ವಿಡಿಯೋದಲ್ಲಿ ಪಟ್ಟಿ ಮಾಡಲಾಗಿದೆ. ಈ ವಿಡಿಯೋದಲ್ಲಿ ಪ್ರಧಾನಿ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ಮಾಡುತ್ತಿರುವ ಯೋಗದ ದಿನಚರಿ ಕೂಡ ಸೇರಿಸಲಾಗಿದೆ. ಹಾಗೆಯೇ, ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿರುವ, ಜಗತ್ತಿನ ಅತಿದೊಡ್ಡ ಧ್ಯಾನಕೇಂದ್ರ ಸ್ವರವೇದ ಮಹಾ ಮಂದಿರ ಸೇರಿದಂತೆ ಅನೇಕ ಸ್ಮರಣೀಯ ಭಾರತದ ಕ್ಷಣಗಳನ್ನು ಸ್ಮರಿಸಲಾಗಿದೆ.

2023ರ ಮುಕ್ತಾಯ ಹಂತದಲ್ಲಿ ದೇಶವು ಈ ವರ್ಷ ಸಾಧಿಸಿದ ಸಾಧನೆಗಳನ್ನು ಮೆಲುಕು ಹಾಕುವ ವಿಶಿಷ್ಟ ಪ್ರಯತ್ನವನ್ನು ಭಾರತವು ಮಾಡಿದೆ. ಈ ಪಟ್ಟಿಯಲ್ಲಿ ಏರ್‌ ಇಂಡಿಯಾ ಪೂರ್ತಿಗೊಳಿಸಿದ ಏರ್‌ಕ್ರಾಫ್ಟ್ ಡೀಲ್, ಭಾರತದ ಡಿಜಿಟಲ್ ಪೇಮೆಂಟ್, ಜಗತ್ತಿನ ಅತಿದೊಡ್ಡ ಕಚೇರಿ ಕಟ್ಟಡ ಸೇರಿದಂತೆ ಇತರ ಸಾಧನೆಗಳನ್ನು ತೋರಿಸಲಾಗಿದೆ.

1.ಚಂದ್ರಯಾನ-3
ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸುವ ಮೂಲಕ ಇಸ್ರೋ ವಿಶಿಷ್ಠ ಸಾಧನೆ ಮಾಡಿತು. ಚಂದ್ರನ ದಕ್ಷಿಣ ಧ್ರುವನ್ನು ಸ್ಪರ್ಶಿದ ಜಗತ್ತಿನ ಮೊದಲ ರಾಷ್ಟ್ರ ಭಾರತವಾಗಿದೆ.

    2.ಫಾಸ್ಟೆಸ್ಟ್ 5ಜಿ
    ಭಾರತವು 2023ರಲ್ಲಿ 5ಜಿ ತಂತ್ರಜ್ಞಾನಕ್ಕೆ ತೆರೆದುಕೊಂಡಿತು. ಇದರೊಂದಿಗೆ 5ಜಿ ಸೇವೆಯನ್ನು ಒದಗಿಸುತ್ತಿರುವ ಜಗತ್ತಿನ ಎಲೈಟ್ ರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಯಿತು.

    3.ಸ್ವರವೇದ ಧ್ಯಾನಕೇಂದ್ರ
    ವಾರಾಣಸಿಯಲ್ಲಿ ತಲೆ ಎತ್ತಿ ನಿಂತಿರುವ ಸ್ವರವೇದ ಧ್ಯಾನ ಕೇಂದ್ರವು ಜಗತ್ತಿನ ಅತ್ಯಂತ ದೊಡ್ಡ ಧ್ಯಾನಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಧಾನಿ ಮೋದಿ ಅವರು ಮೊನ್ನೆಯಷ್ಟೇ ಈ ಧ್ಯಾನ ಕೇಂದ್ರವನ್ನು ಉದ್ಘಾಟಿಸಿದರು.

    4.ಗಂಗಾ ವಿಲಾಸ ಕ್ರೂಸ್
    2023ರಲ್ಲಿ ಭಾರತವು ಮತ್ತೊಂದು ವೈಭವಕ್ಕೆ ಸಾಕ್ಷಿಯಾಯಿತು. ಜಗತ್ತಿನ ಅತ್ಯಂತ ಉದ್ದ ನದಿ ಕ್ರೂಸ್-ಎಂವಿ ಹಡಗಿಗೆ ಚಾಲನೆ ನೀಡಲಾಯಿತು. ಗಂಗಾ ವಿಲಾಸ ನದಿಯಲ್ಲಿ ಕಾರ್ಯನಿರ್ವಹಣೆ ಮಾಡುವ ಜಗತ್ತಿನ ಅತ್ಯಂತದ ಉದ್ದದ ಕ್ರೂಸ್ ಆಗಿದೆ.

    5.ವಿಶ್ವಸಂಸ್ಥೆಯಲ್ಲಿ ಮೋದಿ ಯೋಗ
    2023ರ ಯೋಗ ದಿನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ಆಚರಿಸಿದರು. ಈ ವೇಳೆ ಅವರು ಭಾಗವಹಿಸಿದ ಯೋಗ ದಿನಚರಿಯು ವಿಶ್ವ ದಾಖಲೆಯನ್ನು ಬರೆಯಿತು.

    6.ಏರ್ ಇಂಡಿಯಾ ಡೀಲ್
    ಟಾಟಾ ಕಂಪನಿ ಒಡೆತನದಲ್ಲಿರುವ ಏರ್ ಇಂಡಿಯಾ 70 ಶತಕೋಟಿ ಡಾಲರ್ ವೆಚ್ಚದಲ್ಲಿ ವಿಮಾನ ಖರೀದಿ ಒಪ್ಪಂದವನ್ನು ಮಾಡಿಕೊಂಡಿತು. ಇಷ್ಟು ದೊಡ್ಡ ಪ್ರಮಾಣದಲ್ಲಿ ವಿಮಾನ ಖರೀದಿ ಒಪ್ಪಂದವು ಈ ಹಿಂದೆ ನಡೆದಿಲ್ಲ.

    7.ವೇಗದ ಆರ್ಥಿಕತೆ
    ಪ್ರಸಕ್ತ ಸಾಲಿನಲ್ಲಿ ಭಾರತದ ಪಾಲಿಗೆ ಆರ್ಥಿಕಾಭಿವೃದ್ಧಿ ಹೊಸ ಮಜಲು ಮುಟ್ಟಿದೆ. ಜಗತ್ತಿನಲ್ಲೇ ಅತ್ಯಂತ ವೇಗದಲ್ಲಿ ಬೆಳವಣಿಗೆಯಾಗುತ್ತಿರುವ ಆರ್ಥಿಕತೆ ಎಂಬ ಖ್ಯಾತಿ ಭಾರತಕ್ಕೆ ಬಂತು.

    8.ಡಿಜಿಟಲ್ ಪೇಮೆಂಟ್ಸ್
    ಡಿಜಿಟಲ್ ಇಂಡಿಯಾ ಮೂಲಕ ಭಾರತವು ಡಿಜಿಟಲ್ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡುತ್ತಿದೆ. ಜಗತ್ತಿನಲ್ಲೇ ಅತಿ ಹೆಚ್ಚು ಡಿಜಿಟಲ್ ಪೇಮೆಂಟ್ಸ್‌ಗೆ ಭಾರತವು ಸಾಕ್ಷಿಯಾಗಿದೆ.

    9.ಬೃಹತ್ ಕಚೇರಿ ಕಟ್ಟಡ
    ಗುಜರಾತ್‌ನ ಸೂರತ್‌ನಲ್ಲಿ ನಿರ್ಮಾಣವಾದ, ಸೂರತ್ ಡೈಮಂಡ್ ಬೌರ್ಸ್ ಜಗತ್ತಿನ ಅತಿದೊಡ್ಡ ಕಚೇರಿ ಕಟ್ಟಡ ಎಂಬ ಕೀರ್ತಿಗೆ ಪಾತ್ರವಾಗಿದೆ. ಪ್ರಧಾನಿ ಮೋದಿ ಅವರು ಇತ್ತೀಚೆಗಷ್ಟೇ ಈ ಕಟ್ಟಡವನ್ನು ಉದ್ಘಾಟಿಸಿದ್ದರು.

    10.ಅಯೋಧ್ಯೆ ದೀಪೋತ್ಸವ
    ಪ್ರತಿ ವರ್ಷವೂ ಅಯೋಧ್ಯೆಯಲ್ಲಿ ದೀಪೋತ್ಸವದ ವೈಭವ ನಡೆಯುತ್ತದೆ. ಈ ವರ್ಷ 22.23 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಯಾಯಿತು.

    ಈ ಸುದ್ದಿಯನ್ನೂ ಓದಿ: Year Ender 2023: ಗೂಗಲ್‌ನಲ್ಲಿ  ಪ್ರವಾಸಿಗರು ಹುಡುಕಿದ ಜಾಗತಿಕ ಟಾಪ್‌ 10 ಪಟ್ಟಿಯಲ್ಲಿ ಕರ್ನಾಟಕದ ಸ್ಥಳವೂ ಇದೆ!

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಕರ್ನಾಟಕ

    Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

    Pralhad Joshi: ಗೋಧಿ ದಾಸ್ತಾನು ಮತ್ತು ಬೆಲೆಗಳ ಬಗ್ಗೆ ಸಮಗ್ರ ಚರ್ಚೆ ನಡೆದಿದ್ದು, 2023ಕ್ಕೆ ಹೋಲಿಸಿದರೆ ಈ ಬಾರಿ 4 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಗೋಧಿ ದಾಸ್ತಾನಿದೆ. PDS ಮತ್ತು ಇತರ ಕಲ್ಯಾಣ ಯೋಜನೆಗಳ ಅಗತ್ಯವನ್ನು ಪೂರೈಸಿದ ನಂತರ ಸುಮಾರು 184 LMT ನಷ್ಟು ಗೋಧಿ ದಾಸ್ತಾನು ಲಭ್ಯವಿರಲಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

    VISTARANEWS.COM


    on

    Central Government monitoring wheat price stability: Union Minister Pralhad Joshi
    Koo

    ನವದೆಹಲಿ: ದೇಶದಲ್ಲಿ ಗೋಧಿ ಬೆಲೆ ಸ್ಥಿರತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಿಗಾ ವಹಿಸಲು ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಮಿತಿ ಸಭೆಯಲ್ಲಿ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಆಹಾರೋತ್ಪನ್ನಗಳ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಇರುವ ಮಾರ್ಗಗಳ ಕುರಿತು ಮಾಹಿತಿ ಕಲೆ ಹಾಕಲಾಯಿತು ಎಂದು ಹೇಳಿದ್ದಾರೆ.

    ಅಗತ್ಯ ವಸ್ತುಗಳ ಬೆಲೆಗಳನ್ನು ಪರಿಶೀಲಿಸಲೆಂದೇ ನಡೆದ ಈ ಸಭೆಯಲ್ಲಿ ವಿಶೇಷವಾಗಿ ಗೋಧಿ ದಾಸ್ತಾನು ಮತ್ತು ಬೆಲೆ ಬಗ್ಗೆ ಪ್ರಸ್ತಾಪಿಸಿ, ಚರ್ಚಿಸಲಾಯಿತು.

    ಇದನ್ನೂ ಓದಿ: Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

    2024ರ ಜೂನ್ 18ರವರೆಗೆ 266 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹಿಸಲಾಗಿದೆ. 2023ರಲ್ಲಿ ಇದೇ ವೇಳೆಗೆ 262 LMT ಗೋಧಿ ಸಂಗ್ರಹ ಇತ್ತು ಎಂದು ಸಚಿವ ಜೋಶಿ ತಿಳಿಸಿದ್ದಾರೆ.

    ಗೋಧಿ ದಾಸ್ತಾನು ಮತ್ತು ಬೆಲೆಗಳ ಬಗ್ಗೆ ಸಮಗ್ರ ಚರ್ಚೆ ನಡೆದಿದ್ದು, 2023ಕ್ಕೆ ಹೋಲಿಸಿದರೆ ಈ ಬಾರಿ 4 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಗೋಧಿ ದಾಸ್ತಾನಿದೆ. PDS ಮತ್ತು ಇತರ ಕಲ್ಯಾಣ ಯೋಜನೆಗಳ ಅಗತ್ಯವನ್ನು ಪೂರೈಸಿದ ನಂತರ ಸುಮಾರು 184 LMTನಷ್ಟು ಗೋಧಿ ದಾಸ್ತಾನು ಲಭ್ಯವಿರಲಿದೆ ಎಂದು ಹೇಳಿದ್ದಾರೆ.

    ಗೋಧಿ ಬೆಲೆಗಳ ಮೇಲೆ ನಿಕಟವಾಗಿ ನಿಗಾ ಇಡಲು ಮತ್ತು ದೇಶದ ಗ್ರಾಹಕರಿಗೆ ಬೆಲೆ ಸ್ಥಿರತೆಗಾಗಿ ಸೂಕ್ತ ನೀತಿ ರೂಪಿಸಿ ಕ್ರಮ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಸಲಹೆ ನೀಡಿದ್ದಾರೆ.

    ರಾಜ್ಯ ಸಚಿವರು ಮತ್ತು ಉನ್ನತ ಅಧಿಕಾರಿಗಳ ಸಭೆ: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ರಾಜ್ಯ ಸಚಿವರು ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಪ್ರಲ್ಹಾದ್‌ ಜೋಶಿ ಅವರು ಪ್ರತ್ಯೇಕ ಸಭೆ ನಡೆಸಿದರು.‌

    ಇದನ್ನೂ ಓದಿ: Shivamogga News: ಕಾರ ಹುಣ್ಣಿಮೆ; ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

    ಅಧ್ಯಕ್ಷತೆ ವಹಿಸಿದ್ದ ಸಚಿವರು, ಸಚಿವಾಲಯದ ವಿವಿಧ ಕಾರ್ಯಗಳ ಬಗ್ಗೆ ಕುರಿತು ಚರ್ಚೆ ನಡೆಸಿದರು. ಸಚಿವಾಲಯ ಮತ್ತು ಅದರ ಕಚೇರಿಗಳ ಕಾರ್ಯನಿರ್ವಹಣೆ ಪರಿಶೀಲಿಸಿ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

    Continue Reading

    ವಿದೇಶ

    Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

    Hinduja Family: ಪ್ರಕಾಶ್‌ ಹಿಂದುಜಾ ಹಾಗೂ ಅವರ ಕುಟುಂಬಸ್ಥರು ಮನೆಗೆಲಸದ ಮಹಿಳೆಗೆ ಕಡಿಮೆ ಸಂಬಳ ನೀಡುವುದು, ದಿನಕ್ಕೆ 18 ಗಂಟೆ ಕೆಲಸ ಮಾಡಿಸುವುದು ಸೇರಿ ಹಲವು ರೀತಿಯ ದೌರ್ಜನ್ಯ ಎಸಗಿದ್ದಾರೆ ಎಂಬುದಾಗಿ ಸ್ಟಿಟ್ಜರ್‌ಲ್ಯಾಂಡ್‌ ಕೋರ್ಟ್‌ನಲ್ಲಿ ಸಾಬೀತಾಗಿದೆ. ಹಾಗಾಗಿ, ನ್ಯಾಯಾಲಯವು ಪ್ರಕಾಶ್‌ ಹಿಂದುಜಾ ಸೇರಿ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಿದೆ.

    VISTARANEWS.COM


    on

    Hinduja Family
    Koo

    ಜಿನೀವಾ:‌ ವಿಶ್ವದ ಶ್ರೀಮಂತ ಕುಟುಂಬಗಳಲ್ಲಿ ಒಂದಾದ, ಭಾರತ ಮೂಲದ ಉದ್ಯಮಿ ಪ್ರಕಾಶ್‌ ಹಿಂದುಜಾ (Prakash Hinduja) ಸೇರಿ ಅವರ ಕುಟುಂಬದ (Hinduja Family) ನಾಲ್ವರಿಗೆ ಸ್ವಿಟ್ಜರ್‌ಲ್ಯಾಂಡ್‌ ನ್ಯಾಯಾಲಯವು (Swiss Court) ನಾಲ್ಕೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮನೆಯಲ್ಲಿ ಸಾಕಿದ ನಾಯಿಗೆ ವ್ಯಯಿಸುವ ಹಣಕ್ಕಿಂತ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಡಿಮೆ ಸಂಬಳ ನೀಡುವುದು, ಅಗತ್ಯಕ್ಕಿಂತ ಹೆಚ್ಚು ದುಡಿಸುವುದು ಸೇರಿ ಹಲವು ರೀತಿಯಲ್ಲಿ ದೌರ್ಜನ್ಯ ಎಸಗಿದ ಕಾರಣ ನಾಲ್ವರಿಗೂ ನ್ಯಾಯಾಲಯವು ನಾಲ್ಕೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಹಿಂದುಜಾ ಕುಟುಂಬದ ಉದ್ಯಮಿ ಪ್ರಕಾಶ್‌ ಹಿಂದುಜಾ, ಅವರ ಪತ್ನಿ ಕಮಲ್, ಮಗ ಅಜಯ್ ಹಾಗೂ ಸೊಸೆ ನಮ್ರತಾ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿದ್ದ, ಹಿಂದುಜಾ ಕುಟುಂಬದ ಮ್ಯಾನೇಜರ್‌ ನಜೀಬ್‌ ಜಿಯಾಜಿಗೆ 18 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನ ಕಾರ್ಮಿಕ ಕಾನೂನು ಉಲ್ಲಂಘನೆ, ಮಾನವ ಕಳ್ಳಸಾಗಣೆ, ಮನೆಗೆಲಸದವರ ಮೇಲೆ ದೌರ್ಜನ್ಯ ಸೇರಿ ಹಲವು ಪ್ರಕರಣಗಳಲ್ಲಿ ನಾಲ್ವರನ್ನೂ ದೋಷಿಗಳು ಎಂದು ಕೋರ್ಟ್‌ ತೀರ್ಪು ನೀಡಿ, ಶಿಕ್ಷೆ ವಿಧಿಸಿದೆ.

    ಹಿಂದುಜಾ ಕುಟುಂಬವು ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿರುವ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮಹಿಳೆಯೊಬ್ಬಳಿಗೆ ಕಡಿಮೆ ಸಂಬಳ ನೀಡಿದ್ದಾರೆ. ಆಕೆಯನ್ನು ವಾರದಲ್ಲಿ ಏಳು ದಿನಗಳ ಕಾಲ ಹಾಗೂ ಪ್ರತಿದಿನ 18 ಗಂಟೆಕಾಲ ಕೆಲಸ ಮಾಡಿದ್ದಕ್ಕೆ ಕೇವಲ ಏಳು ಸ್ವಿಸ್, ಅಂದರೆ ದಿನಕ್ಕೆ 650 ರೂ. ಸಂಬಳ ನೀಡಿದ್ದಾರೆ. ಆದರೆ ಅವರು ಮನೆಯಲ್ಲಿ ಸಾಕಿದ ನಾಯಿಗೆ ಮಾತ್ರ ವಾರ್ಷಿಕವಾಗಿ 8,584 ಸ್ವಿಸ್ (ಸುಮಾರು 8 ಲಕ್ಷ ರೂ.) ಖರ್ಚು ಮಾಡುತ್ತಾರೆ. ಹಾಗಾಗಿ ಹಿಂದುಜಾ ಕುಟುಂಬದವರು ತಮ್ಮ ಸೇವಕರಿಗಿಂತ ಸಾಕು ನಾಯಿಗಳಿಗೆ ಹೆಚ್ಚು ಖರ್ಚು ಮಾಡುತ್ತಾರೆ ಎಂದು ಮಹಿಳೆಯು ಕೋರ್ಟ್‌ ಮೊರೆ ಹೋಗಿದ್ದರು. ಅವರ ಪರವಾಗಿ ಸ್ವಿಟ್ಜರ್‌ಲ್ಯಾಂಡ್ ನ್ಯಾಯಾಲಯದ ಸರ್ಕಾರಿ ವಕೀಲ ಯವೆಸ್ ಬರ್ಟೋಸಾ ವಾದ ಮಂಡಿಸಿದ್ದರು.

    ಅಷ್ಟೇ ಅಲ್ಲದೇ ಹಿಂದುಜಾ ಕುಟುಂಬದವರು ಮನೆ ಕೆಲಸದ ಮಹಿಳೆಯ ಪಾಸ್‌ಪೋರ್ಟ್ ಕಿತ್ತುಕೊಂಡು ಅನುಮತಿಯಿಲ್ಲದೇ ಮನೆಯಿಂದ ಹೊರಬರದಂತೆ ನಿರ್ಬಂಧ ಹೇರಿದೆ. ಕೆಲಸದವರಿಗೆ ರಜೆ ಕೂಡ ನೀಡುತ್ತಿರಲಿಲ್ಲ. ಅಲ್ಲದೇ ಕರೆನ್ಸಿಯಲ್ಲಿ ಸಂಬಳ ನೀಡುತ್ತಿದ್ದ ಕಾರಣ ಅವರಿಗೆ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಖರ್ಚು ಮಾಡಲು ಹಣವಿರುತ್ತಿರಲಿಲ್ಲ ಎಂದು ವಕೀಲರು ವಾದ ಮಂಡಿಸಿದ್ದರು. ಈಗ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

    ಬ್ರಿಟನ್‌ನಲ್ಲಿ ಹಿಂದುಜಾ ಕುಟುಂಬವೇ ಶ್ರೀಮಂತ ಕುಟುಂಬ

    ಕೆಲ ತಿಂಗಳ ಹಿಂದಷ್ಟೇ, ಭಾರತ ಮೂಲದ ಗೋಪಿಚಂದ್‌ ಹಿಂದುಜಾ ಹಾಗೂ ಅವರ ಕುಟುಂಬವು ಬ್ರಿಟನ್‌ನ ಶ್ರೀಮಂತ ಕುಟುಂಬ ಅಥವಾ ಉದ್ಯಮಿ ಎಂಬ ಖ್ಯಾತಿಗೆ ಭಾಜನವಾಗಿದೆ. ಅಷ್ಟೇ ಅಲ್ಲ, ಸತತ ಮೂರನೇ ವರ್ಷವೂ ಹಿಂದುಜಾ ಕುಟುಂಬವೇ ಅತ್ಯಂತ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರವಾಗಿದೆ.

    ‘ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌’ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗೋಪಿಚಂದ್‌ ಹಿಂದುಜಾ ಅವರೇ ಬ್ರಿಟನ್‌ನ ಶ್ರೀಮಂತ ಉದ್ಯಮಿ ಎನಿಸಿದ್ದಾರೆ. ಇವರ ಆಸ್ತಿಯ ಒಟ್ಟು ಮೌಲ್ಯವು 37 ಶತಕೋಟಿ ಪೌಂಡ್ಸ್‌ (ಸುಮಾರು 3.9 ಲಕ್ಷ ಕೋಟಿ ರೂ.) ಇದೆ. ಬ್ರಿಟನ್‌ನವರೇ ಆದ ಸರ್‌ ಲೆನಾರ್ಡ್‌ ಬ್ಲಾವಾಟ್ನಿಕ್‌ (29 ಶತಕೋಟಿ ಪೌಂಡ್ಸ್)‌, ಡೇವಿಡ್‌, ಸೈಮನ್‌ ರುಬೇನ್‌ ಮತ್ತು ಕುಟುಂಬ (24.98 ಶತಕೋಟಿ ಪೌಂಡ್ಸ್)‌, ಸರ್‌ ಜಿಮ್‌ ರ‍್ಯಾಟ್‌ಕ್ಲಿಫ್‌ (23 ಶತಕೋಟಿ ಪೌಂಡ್ಸ್)‌ ಆಸ್ತಿಯೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

    ಇದನ್ನೂ ಓದಿ: Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

    Continue Reading

    ಕರ್ನಾಟಕ

    HD Kumaraswamy: ಯೋಗ ನಮ್ಮ ಜೀವನ ಶೈಲಿಯಾಗಬೇಕು; ಎಚ್.ಡಿ.ಕುಮಾರಸ್ವಾಮಿ

    HD Kumaraswamy: ಯೋಗದ ಮೂಲಕ ಮಾಡುವ ಸಾಧನೆ ಭವ್ಯ ಭಾರತಕ್ಕೆ ಪೂರಕ. ವಿಕಾಸಕ್ಕೆ ಪೂರಕ. ಮನುಕುಲಕ್ಕೆ ಪೂರಕ. ಸಾಧನೆಯ ಮೆಟ್ಟಿಲೇರಲು ಕೂಡ ಪೂರಕ. ಒಟ್ಟಾರೆಯಾಗಿ ಯೋಗವು ನಮ್ಮನ್ನು ಸಾಧಕರನ್ನಾಗಿ ಮಾಡಿ ದೇಶವನ್ನು ರಚನಾತ್ಮಕವಾಗಿ ಕಟ್ಟುತ್ತದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

    VISTARANEWS.COM


    on

    Everyone should make yoga a lifestyle says Union Minister HD Kumaraswamy
    Koo

    ನವದೆಹಲಿ: ಪ್ರತಿಯೊಬ್ಬರೂ ಯೋಗವನ್ನು (Yoga) ಜೀವನ ಶೈಲಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದರು.

    ನವದೆಹಲಿಯ ನೋಯ್ಡಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಸಮುಚ್ಚಯದಲ್ಲಿ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿಗೆ ಭಾರತ ಕೊಟ್ಟ ಅಮೂಲ್ಯ ಕೊಡುಗೆ ಯೋಗ. ಯೋಗದ ಮೂಲಕ ಇಡೀ ಜಗತ್ತನ್ನು ಭಾರತ ಬೆಸೆದಿದೆ. ಯೋಗವೆಂದರೆ ‘ಜೋಡಿಸು’ ‘ಸೇರಿಸು’ ‘ಕೂಡಿಸು’ ಎಂಬ ಅರ್ಥ ಬರುತ್ತದೆ. ಅದಕ್ಕೆ ಸಾರ್ಥಕತೆ ತರುವ ನಿಟ್ಟಿನಲ್ಲಿ ಯೋಗ ಇಡೀ ಜಗತ್ತನ್ನು ಬೆಸೆದುಕೊಂಡು ಬೆಳಗುತ್ತಿದೆ ಎಂದು ಅವರು ಹೇಳಿದರು.

    ಇದನ್ನೂ ಓದಿ: T20 World Cup 2024 : ಭಾರತ- ಬಾಂಗ್ಲಾ ಸೂಪರ್​ 8 ಪಂದ್ಯಕ್ಕೆ ಮಳೆ ಅಡಚಣೆ ಇದೆಯೇ?

    ಋಷಿ ಮುನಿಗಳು ನಮಗೆ ಯೋಗವನ್ನು ಕೊಟ್ಟು ಹೋದರು. ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರಗೊಳಿಸಿ ಭಾರತದ ನೆಲದಲ್ಲಿ ನಿಂತು ಜಗತ್ತನ್ನು ನೋಡುವ ಹಿರಿಮೆಯನ್ನು ತಂದುಕೊಟ್ಟರು. ಇದಕ್ಕಾಗಿ ನಾನು ಪ್ರಧಾನಿಗಳನ್ನು ಮನಸಾರೆ ಅಭಿನಂದಿಸುತ್ತೇನೆ ಎಂದು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

    ಯೋಗ ವಿಕಾಸಕ್ಕೆ ಪೂರಕ

    ಯೋಗದ ಮೂಲಕ ಮಾಡುವ ಸಾಧನೆ ಭವ್ಯ ಭಾರತಕ್ಕೆ ಪೂರಕ. ವಿಕಾಸಕ್ಕೆ ಪೂರಕ. ಮನುಕುಲಕ್ಕೆ ಪೂರಕ. ಸಾಧನೆಯ ಮೆಟ್ಟಿಲೇರಲು ಕೂಡ ಪೂರಕ. ಒಟ್ಟಾರೆಯಾಗಿ ಯೋಗವು ನಮ್ಮನ್ನು ಸಾಧಕರನ್ನಾಗಿ ಮಾಡಿ ದೇಶವನ್ನು ರಚನಾತ್ಮಕವಾಗಿ ಕಟ್ಟುತ್ತದೆ ಎಂದು ಸಚಿವರು ಒತ್ತಿ ಹೇಳಿದರು.

    ಯೋಗವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಮನಸ್ಸನ್ನು ನಿಯಂತ್ರಿಸುತ್ತದೆ. ಯೋಗವು ನಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುತ್ತದೆ. ಪ್ರತಿದಿನ ಯೋಗ ಮಾಡುವ ಮೂಲಕ ನಾವೆಲ್ಲರೂ ನಮ್ಮ ದೇಹ, ಮನಸ್ಸು ಚೈತನ್ಯಶೀಲವಾಗಿರುತ್ತದೆ ಎಂದು ಅವರು ತಿಳಿಸಿದರು.

    ಇದನ್ನೂ ಓದಿ: Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

    ಮನಸ್ಸು, ದೇಹ ಎರಡೂ ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುವ ಯೋಗಕ್ಕೆ 5,000 ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ಯೋಗದ ಬಗ್ಗೆ ಉಲ್ಲೇಖವಿದೆ ಎಂದು ನಾನು ಕೇಳಿದ್ದೇನೆ. ಅಂತ ಯೋಗ ನಮ್ಮ ದೇಶಕ್ಕೆ ಆರೋಗ್ಯವಂತ ಮಾನವ ಸಂಪನ್ಮೂಲವನ್ನು ಸೃಷ್ಟಿ ಮಾಡುತ್ತಿದೆ. ದೃಢತೆಯ ನಾಯಕತ್ವಕ್ಕೆ ಯೋಗ ದೊಡ್ಡ ಕಾಣಿಕೆ ನೀಡುತ್ತಿದೆ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

    ಪ್ರಧಾನಿಗಳು ಯುವಕರಿಗೆ ಪ್ರೇರಣೆ

    ನಾನು ಕಂಡ ಹಾಗೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನೇ ಬದುಕು ಮಾಡಿಕೊಂಡಿರುವ ನಿಜಯೋಗಿ. ಬಹುಶಃ ಅವರ ಜೀವನ ಶೈಲಿ, ಯೋಗದ ಕಡೆಗಿನ ಒಲವು ಈ ತಲೆಮಾರಿನ ಯುವಕರಿಗೆ ಪ್ರೇರಣೆ ಎಂದು ಬಲವಾಗಿ ನಂಬಿದೇನೆ. ಐದು ಸಾವಿರ ವರ್ಷಗಳಿಂದ ಭಾರತ ನೆಲದಲ್ಲಿ ನಮ್ಮ ಜೀವನ ಶೈಲಿಯೇ ಆಗಿರುವ ಯೋಗವನ್ನು ವಿಶ್ವಸಂಸ್ಥೆಗೆ ತೆಗೆದುಕೊಂಡು ಹೋದ ಪ್ರಧಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

    2014ರಲ್ಲಿ ಮೋದಿ ಅವರು ಪ್ರಧಾನಿಯಾದ ನಂತರ ವಿಶ್ವಸಂಸ್ಥೆಯಲ್ಲಿ ಯೋಗ ಜಗತ್ತಿನ ಜೀವನ ಶೈಲಿ ಆಯಿತು. ಅಂದಿನಿಂದ ಯೋಗಾಭ್ಯಾಸ ಇಲ್ಲದೆ ದೇಶವೇ ಇಲ್ಲ. 2015ರಿಂದ ಪ್ರತೀ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

    ನನ್ನ ಪ್ರಕಾರ ಈ ದಿನ ಯೋಗದ ದಿನವಷ್ಟೇ ಅಲ್ಲ, ಭಾರತದ ಪಾರಂಪರಿಕ ಭವ್ಯತೆಯನ್ನು ಸಾರುವ ಸುದಿನ. ಇಡೀ ಜಗತ್ತೇ ಯೋಗವನ್ನು ಅವಲಂಬಿಸುತ್ತಿದೆ ಎಂದರೆ, ಇಡೀ ಜಗತ್ತು ಭಾರತವನ್ನು ವಿಶ್ವಗುರುವಾಗಿ ಪರಿಭಾವಿಸುತ್ತಿದೆ ಎಂದೇ ಅರ್ಥ. ಇಂಥ ದೇಶದ ಮಕ್ಕಳಾದ ನಾವು ಭಾಗ್ಯಶಾಲಿಗಳು. ನಾವರೆಲ್ಲರೂ ಯೋಗವನ್ನು ಜೀವನ ಶೈಲಿ ಮಾಡಿಕೊಳ್ಳೋಣ. ಎಲ್ಲರೂ ಯೋಗಾಭ್ಯಾಸ ಮಾಡೋಣ. ಯೋಗದಿಂದ ಆರೋಗ್ಯವಂತ ಬದುಕು, ಜೀವನ ಕಟ್ಟಿಕೊಳ್ಳೋಣ ಎಂದು ಸಚಿವರು ಕರೆ ನೀಡಿದರು.

    ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

    ಭಾರೀ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವೀ, ಬಿಎಚ್‌ಇಎಲ್‌ ಅಧ್ಯಕ್ಷ-ವ್ಯವಸ್ಥಾಪಕ ನಿರ್ದೇಶಕ ಕೆ. ಸದಾಶಿವಮೂರ್ತಿ, ಕಂಪನಿಯ ನಿರ್ದೇಶಕರು, ಹಿರಿಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಅನೇಕರು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.

    Continue Reading

    ದೇಶ

    Joint CSIR UGC NET: ನೆಟ್‌ ಪರೀಕ್ಷೆ ರದ್ದಾದ ಬೆನ್ನಲ್ಲೇ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಮುಂದೂಡಿಕೆ!

    Joint CSIR UGC NET: ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ (JRF) ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು.

    VISTARANEWS.COM


    on

    Joint CSIR UGC NET
    Koo

    ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET 2024) ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಮತ್ತೊಂದೆಡೆ, ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಯುಜಿಸಿ ನೆಟ್‌ (ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆ ನಡೆದ ಒಂದೇ ದಿನದಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಯನ್ನೇ ರದ್ದುಗೊಳಿಸಿದೆ. ಇದರ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ (Joint CSIR UGC NET-Council of Scientific and Industrial Research-University Grants Commission National Eligibility Test) ಪರೀಕ್ಷೆಯನ್ನು ಮುಂದೂಡಿದೆ.

    ದೇಶದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಜ್ಯೂನಿಯರ್‌ ರಿಸರ್ಚ್‌ ಫೆಲೋಶಿಪ್‌ (JRF) ಪಡೆಯಲು ಹಾಗೂ ಉಪನ್ಯಾಸಕರಾಗಿ ಅಥವಾ ಸಹಾಯ ಪ್ರಾಧ್ಯಾಪಕರಾಗಿ ಆಯ್ಕೆಯಾಗಲು ಅರ್ಹತೆ ಪಡೆಯಬೇಕಾದರೆ ಜಂಟಿ ಸಿಎಸ್‌ಐಆರ್‌ ಯುಜಿಸಿ ನೆಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು. ಜೂನ್‌ 25 ಹಾಗೂ ಜೂನ್‌ 27ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಈಗ ಪರೀಕ್ಷೆಯನ್ನು ಮುಂದೂಡಿ ಎನ್‌ಟಿಎ ಆದೇಶ ಹೊರಡಿಸಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ಗೆ (https://csirnet.nta.ac.in/) ಭೇಟಿ ನೀಡಿ ಎಂದು ಕೂಡ ತಿಳಿಸಿದೆ.

    ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ಎರಡು ದಿನಗಳ ಹಿಂದಷ್ಟೇ ರದ್ದುಗೊಳಿಸಿದೆ. ನ್ಯಾಷನ್‌ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

    ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್‌ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌.ಡಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಬದಲು ಅಭ್ಯರ್ಥಿಯು ನೆಟ್‌ನಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲು ಯುಜಿಸಿಯು ಈಗಾಗಲೇ ಅನುಮೋದನೆ ನೀಡಿದೆ. ಹಾಗಾಗಿ, ಅಭ್ಯರ್ಥಿಗಳಿಗೆ ನೆಟ್‌ ಪ್ರಮುಖ ಸಂಗತಿಯಾಗಿದೆ.

    ಇದನ್ನೂ ಓದಿ: NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

    Continue Reading
    Advertisement
    Kalki 2898 AD Final Trailer Released
    ಕರ್ನಾಟಕ1 hour ago

    Kalki 2898 AD: ‘ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ ಹೀಗಿದೆ ನೋಡಿ! ಜೂ.27ರಂದು ಚಿತ್ರ ರಿಲೀಸ್

    Sonakshi Sinha
    ಬಾಲಿವುಡ್2 hours ago

    Sonakshi Sinha: ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್‌ ಮದುವೆ; ಮೆಹಂದಿ ಶಾಸ್ತ್ರದ ವೇಳೆ ಪತಿ ಜತೆ ನಟಿ ಮಿಂಚಿಂಗ್!

    T20 World Cup 2024
    ಪ್ರಮುಖ ಸುದ್ದಿ2 hours ago

    T20 World Cup 2024 : ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ತಂಡಕ್ಕೆ 7 ರನ್ ಜಯ

    Suryakumar Yadav
    ಪ್ರಮುಖ ಸುದ್ದಿ3 hours ago

    Suryakumar Yadav : ವಿಶ್ವದ ಬೆಸ್ಟ್​ ಟಿ20 ಆಟಗಾರ ಸೂರ್ಯಕುಮಾರ್​ ಯಾದವ್​ ಎಂದ ಅಂಬಾಟಿ ರಾಯುಡು

    Central Government monitoring wheat price stability: Union Minister Pralhad Joshi
    ಕರ್ನಾಟಕ3 hours ago

    Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

    regional Laboratory sanctioned to Kims Hubballi
    ಕರ್ನಾಟಕ3 hours ago

    Pralhad Joshi: ಕಿಮ್ಸ್‌ಗೆ ಅತ್ಯಾಧುನಿಕ “ವೈರಾಣು ಸಂಶೋಧನೆ, ರೋಗ ನಿರ್ಣಯ ಪ್ರಯೋಗಾಲಯ” ಮಂಜೂರು

    Hinduja Family
    ವಿದೇಶ3 hours ago

    Hinduja Family: ಮನೆಗೆಲಸದವರ ಮೇಲೆ ದೌರ್ಜನ್ಯ; ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

    Gautam Gambhir
    ಪ್ರಮುಖ ಸುದ್ದಿ3 hours ago

    Gautam Gambhir : ಕೋಚ್​ ಹುದ್ದೆ ಅಂತಿಮವಾಗಿಲ್ಲ; ವರದಿಗಳಿಗೆ ವ್ಯತಿರಿಕ್ತ ಹೇಳಿಕೆ ನೀಡಿದ ಗಂಭೀರ್​!

    Rishabh Pant
    ಪ್ರಮುಖ ಸುದ್ದಿ4 hours ago

    Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

    Parking Complex
    ಬೆಂಗಳೂರು4 hours ago

    Parking Complex: ಬೆಂಗಳೂರಿನಲ್ಲಿ ಸುಸಜ್ಜಿತ ಪಾರ್ಕಿಂಗ್‌ ಕಾಂಪ್ಲೆಕ್ಸ್;‌ ಶುಲ್ಕದ ಕುರಿತ ಮಾಹಿತಿ ಇಲ್ಲಿದೆ

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ8 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ8 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ6 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ7 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka weather Forecast
    ಮಳೆ7 hours ago

    Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

    International Yoga Day 2024
    ಕರ್ನಾಟಕ13 hours ago

    International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

    Karnataka Weather Forecast
    ಮಳೆ1 day ago

    Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

    Actor Darshan
    ಮೈಸೂರು5 days ago

    Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

    Bakrid 2024
    ಬೆಂಗಳೂರು5 days ago

    Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

    Renukaswamy murder case The location of the accused is complete
    ಸಿನಿಮಾ5 days ago

    Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

    Renuka swamy murder
    ಚಿತ್ರದುರ್ಗ5 days ago

    Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

    Vijayanagara News
    ವಿಜಯನಗರ6 days ago

    Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

    Actor Darshan
    ಯಾದಗಿರಿ7 days ago

    Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

    Karnataka Weather Forecast
    ಮಳೆ1 week ago

    Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

    ಟ್ರೆಂಡಿಂಗ್‌