Monkeypox India | ಕೇರಳದಲ್ಲಿ ಭಾರತದ ಮೊದಲ ಮಂಕಿಪಾಕ್ಸ್‌ ಸಾವು - Vistara News

ದೇಶ

Monkeypox India | ಕೇರಳದಲ್ಲಿ ಭಾರತದ ಮೊದಲ ಮಂಕಿಪಾಕ್ಸ್‌ ಸಾವು

Monkeypox India: ಯುಎಇಯಿಂದ ಹಿಂದಿರುಗಿದ ಕೇರಳದ ವ್ಯಕ್ತಿ ಜ್ವರ, ಕ್ಷಯರೋಗ, ಮೆದುಳುಜ್ವರದ ಲಕ್ಷಣಗಳಿಂದ ಮೃತಪಟ್ಟಿದ್ದು, ಮಂಕಿಪಾಕ್ಸ್‌ನಿಂದ ಸಾವು ಶಂಕಿಸಲಾಗಿದೆ.

VISTARANEWS.COM


on

monkeypox
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತ್ರಿಶೂರ್: ಕೇರಳದ ಗುರುವಾಯೂರು ಸಮೀಪದ ಕುರಂಜಿಯೂರ್‌ನ 22 ವರ್ಷದ ವ್ಯಕ್ತಿಯೊಬ್ಬರು ಮಂಕಿಪಾಕ್ಸ್‌ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

ಶನಿವಾರ ಬೆಳಗ್ಗೆ ವ್ಯಕ್ತಿ ಸಾವಿಗೀಡಾಗಿದ್ದಾರೆ. ಅವರಿಂದ ತೆಗೆದ ಮಾದರಿಗಳನ್ನು ಆಲಪ್ಪುಳದಲ್ಲಿರುವ ರಾಷ್ಟ್ರೀಯ ವೈರಾಲಜಿ ಘಟಕಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವ್ಯಕ್ತಿ ಯುಎಇಯಿಂದ ಎರಡು ದಿನಗಳ ಹಿಂದೆ ವಾಪಸಾಗಿದ್ದರು. ಮಂಕಿಪಾಕ್ಸ್‌ಗೆ ಸಾಮಾನ್ಯವಾಗಿ ಸಂಬಂಧಿಸಿದ ಯಾವುದೇ ಬಾಹ್ಯ ರೋಗಲಕ್ಷಣಗಳನ್ನು ಅವರು ಹೊಂದಿರಲಿಲ್ಲ. ಆದರೆ ಜುಲೈ 27ರಂದು ಅವರನ್ನು ಜ್ವರ ಎಂದು ಕುಟುಂಬಿಕರು ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಜ್ವರದಿಂದ ಬಳಲಿ ಅವರು ಕುಸಿದು ಬಿದ್ದಿದ್ದರು ಎಂದು ಕುಟುಂಬಿಕರು ತಿಳಿಸಿದ್ದರು.‌

ಇದನ್ನೂ ಓದಿ: CWG- 2022 | ಮಂಕಿಪಾಕ್ಸ್ ಭೀತಿ, ಸುರಕ್ಷಿತ ಲೈಂಗಿಕತೆಗೆ ಮನವಿ, 1.5 ಲಕ್ಷ ಕಾಂಡೋಮ್‌ ವಿತರಣೆ

ಆರಂಭದಲ್ಲಿ, ಅವರು ಮೆನಿಂಜೈಟಿಸ್‌ನಿಂದ (ಮೆದುಳುಪೊರೆ ಊತ) ಬಳಲುತ್ತಿದ್ದಾರೆ ಎಂದು ವೈದ್ಯರು ಶಂಕಿಸಿದ್ದರು. ಜ್ವರದ ರೋಗಲಕ್ಷಣಗಳು ಹಾಗೂ ಭ್ರಮಾತ್ಮಕ ಪ್ರಜ್ಞೆಯಿಂದ ಬಳಲುತ್ತಿದ್ದರು. ಅವರಲ್ಲಿ ಕ್ಷಯರೋಗವೂ ಇದೆ ಎಂದು ವೈದ್ಯರು ಭಾವಿಸಿದ್ದರಿಂದ ಆಸ್ಪತ್ರೆಯಲ್ಲಿ ಅವರನ್ನು ಬೇರೆಯಾಗಿಟ್ಟು ಪರೀಕ್ಷೆಗಳನ್ನು ನಡೆಸಲಾಗಿತ್ತು.

ಶನಿವಾರ ಬೆಳಗ್ಗೆ ಅವರು ಮೃತಪಟ್ಟಾಗ, ಆ ವ್ಯಕ್ತಿ ಯುಎಇಯಲ್ಲಿ ಮಂಕಿಪಾಕ್ಸ್‌ ರೋಗಿಯ ಸಂಪರ್ಕಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಕುಟುಂಬಿಕರು ಮಾಹಿತಿ ನೀಡಿದ್ದರು. ಯುಎಇಯಿಂದ ಅವರ ಸ್ನೇಹಿತರು ಪರೀಕ್ಷಾ ಫಲಿತಾಂಶದ ಸ್ಕ್ರೀನ್‌ಶಾಟ್ ಕಳುಹಿಸಿದ್ದರು. ಆದರೆ ಇದರಲ್ಲಿ ಮೃತ ವ್ಯಕ್ತಿಯ ಹೆಸರು ಇಲ್ಲದಿದ್ದುದರಿಂದ, ದೃಢಪಡಿಸಿಕೊಳ್ಳಲು ವೈದ್ಯರು ಭಾರತದಲ್ಲಿ ಪರೀಕ್ಷೆಗಾಗಿ ಸ್ಯಾಂಪಲ್‌ಗಳನ್ನು ಕಳಿಸಿದ್ದಾರೆ.

ಇದನ್ನೂ ಓದಿ: Monkeypox fear | ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಇಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಶಿಂಧೆ, ಅಜಿತ್‌ ಬಣಕ್ಕೆ ನೀವೇ ಸೇರಿಬಿಡಿ; ಠಾಕ್ರೆ, ಶರದ್‌ ಪವಾರ್‌ಗೆ ಮೋದಿ ಸಲಹೆ!

Narendra Modi: “ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು, ಚುನಾವಣೆ ಫಲಿತಾಂಶದ ಬಳಿಕ ನರಳುವ ಬದಲು ಏಕನಾಥ್‌ ಶಿಂಧೆ ಬಣದ ಶಿವಸೇನೆ ಹಾಗೂ ಅಜಿತ್‌ ಪವಾರ್‌ ಬಣದ ಎನ್‌ಸಿಪಿ ಜತೆ ವಿಲೀನ ಘೋಷಿಸುವುದು ಉತ್ತಮ” ಎಂಬುದಾಗಿ ಪರೋಕ್ಷವಾಗಿ ಉದ್ಧವ್‌ ಠಾಕ್ರೆ ಹಾಗೂ ಶರದ್‌ ಪವಾರ್‌ ಅವರಿಗೆ ಸಲಹೆ ನೀಡಿದರು. ಹಾಗೆಯೇ, ನಕಲಿ ಎನ್‌ಸಿಪಿ, ನಕಲಿ ಶಿವಸೇನೆ ಎಂದು ಕೂಡ ಚಾಟಿ ಬೀಸಿದರು.

VISTARANEWS.COM


on

Narendra Modi
Koo

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳು ಹರಿದು ಹಂಚಿ ಹೋಗಿರುವ ಕಾರಣ ಈ ಬಾರಿಯ ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶವು ತೀವ್ರ ಕುತೂಹಲ ಕೆರಳಿಸಿದೆ. ಶಿವಸೇನೆಯನ್ನು ಇಬ್ಭಾಗ ಮಾಡಿದ ಏಕನಾಥ್‌ ಶಿಂಧೆ ಈಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಶರದ್‌ ಪವಾರ್‌ (Sharad Pawar) ನೇತೃತ್ವದ ಎನ್‌ಸಿಪಿಯನ್ನು ಒಡೆದ ಅಜಿತ್‌ ಪವಾರ್‌ (Ajit Pawar) ಈಗ ಉಪ ಮುಖ್ಯಮಂತ್ರಿಯಾಗಿದ್ದಾರೆ. ಹಾಗಾಗಿ, ರಾಜ್ಯದ ಎರಡು ಪ್ರಮುಖ ಪಕ್ಷಗಳೀಗ ಹರಿದು ಹಂಚಿ ಹೋಗಿವೆ. ಇದರ ಮಧ್ಯೆಯೇ, ಉದ್ಧವ್‌ ಠಾಕ್ರೆ (Uddhav Thackeray) ಬಣದ ಶಿವಸೇನೆಗೆ ಹಾಗೂ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ನರೇಂದ್ರ ಮೋದಿ (Narendra Modi) ಹೊಸ ಸಲಹೆ ನೀಡಿದ್ದಾರೆ.

ಮಹಾರಾಷ್ಟ್ರದ ನಂದುರ್‌ಬರ್‌ನಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, ಎನ್‌ಸಿಪಿ ಹಾಗೂ ಶಿವಸೇನೆಗೆ ಪರೋಕ್ಷವಾಗಿ ಚಾಟಿ ಬೀಸಿದರು. ಹಾಗೆಯೇ ಸಲಹೆಯನ್ನೂ ನೀಡಿದರು. “ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು, ಚುನಾವಣೆ ಫಲಿತಾಂಶದ ಬಳಿಕ ನರಳುವ ಬದಲು ಏಕನಾಥ್‌ ಶಿಂಧೆ ಬಣದ ಶಿವಸೇನೆ ಹಾಗೂ ಅಜಿತ್‌ ಪವಾರ್‌ ಬಣದ ಎನ್‌ಸಿಪಿ ಜತೆ ವಿಲೀನ ಘೋಷಿಸುವುದು ಉತ್ತಮ” ಎಂಬುದಾಗಿ ಪರೋಕ್ಷವಾಗಿ ಉದ್ಧವ್‌ ಠಾಕ್ರೆ ಹಾಗೂ ಶರದ್‌ ಪವಾರ್‌ ಅವರಿಗೆ ಸಲಹೆ ನೀಡಿದರು.

ನಕಲಿ ಪಕ್ಷಗಳು ಎಂದು ವಾಗ್ದಾಳಿ

ಶರದ್‌ ಪವಾರ್‌ ಅವರ ಎನ್‌ಸಿಪಿ ಹಾಗೂ ಉದ್ಧವ್‌ ಠಾಕ್ರೆ ಅವರ ಶಿವಸೇನೆಯನ್ನು ನರೇಂದ್ರ ಮೋದಿ ಅವರು ನಕಲಿ ಪಕ್ಷಗಳು ಎಂದು ಜರಿದರು. “ರಾಜ್ಯದಲ್ಲಿ ಕಳೆದ 40-50 ವರ್ಷದಿಂದ ರಾಜಕೀಯ ಮಾಡುತ್ತಿರುವ ಪ್ರಮುಖ ನಾಯಕರೊಬ್ಬರು ಬಾರಾಮತಿ ಲೋಕಸಭೆ ಕ್ಷೇತ್ರದ ಬಗ್ಗೆ ಹೆಚ್ಚು ಚಿಂತಿತರಾಗಿದ್ದಾರೆ. ಜೂನ್‌ 4ರ ನಂತರ ಸಣ್ಣ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನವಾಗಲಿವೆ ಎಂಬುದಾಗಿ ಹೇಳಿದ್ದಾರೆ. ಇದರ ಅರ್ಥವು ನಕಲಿ ಎನ್‌ಸಿಪಿ ಹಾಗೂ ನಕಲಿ ಶಿವಸೇನೆಯು ಕಾಂಗ್ರೆಸ್‌ ಜತೆ ವಿಲೀನ ಮಾಡಿಕೊಳ್ಳುತ್ತವೆ ಎಂಬುದಾಗಿದೆ. ಇದರ ಬದಲು ಅಜಿತ್‌ ಹಾಗೂ ಶಿಂಧೆ ಬಣಗಳೊಂದಿಗೆ ವಿಲೀನಗೊಳಿಸುವುದು ಉತ್ತಮ” ಎಂದು ಹೇಳಿದರು.

ಶರದ್‌ ಪವಾರ್‌ ಹೇಳಿದ್ದೇನು?

ಮಹಾರಾಷ್ಟ್ರದ ಸಣ್ಣ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನಗೊಳ್ಳಲಿವೆ ಎಂಬುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದ ವೇಳೆ ಎನ್‌ಸಿಪಿ ವರಿಷ್ಠ ನಾಯಕ ಶರದ್‌ ಪವಾರ್‌ ಹೇಳಿದ್ದರು. “ಮುಂದಿನ ಎರಡು ವರ್ಷಗಳಲ್ಲಿ ಹಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನಗೊಳ್ಳಲಿವೆ ಇಲ್ಲವೇ ವಿಲೀನಗೊಳಿಸಲು ಚಿಂತನೆ ನಡೆಸಲಿವೆ. ಪ್ರಾದೇಶಿಕ ಪಕ್ಷಗಳು ಅಸ್ತಿತ್ವಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ” ಎಂದು ಹೇಳಿದ್ದರು. ಹಾಗಾಗಿ, ಮೋದಿ ಅವರು ಶರದ್‌ ಪವಾರ್‌ ಹಾಗೂ ಉದ್ಧವ್‌ ಠಾಕ್ರೆ ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Continue Reading

ದೇಶ

Cash Transfers: ಚುನಾವಣೆ; ಸರ್ಕಾರದ 14 ಸಾವಿರ ಕೋಟಿ ರೂ. ಜನರ ಖಾತೆಗೆ ವರ್ಗಾಯಿಸಲು ಕೋರ್ಟ್‌ ತಡೆ!

Cash Transfers: ಆಂಧ್ರಪ್ರದೇಶದಲ್ಲಿ ಹಲವು ಯೋಜನೆಗಳಿಗಾಗಿ ಮೀಸಲಿಸಿರುವ ಸುಮಾರು 14,165 ಕೋಟಿ ರೂಪಾಯಿಯನ್ನು ವರ್ಗಾವಣೆ ಮಾಡಬೇಕಿದೆ. ಆದರೆ, ಮೇ 13ರಂದು ರಾಜ್ಯ ವಿಧಾನಸಭೆಯ 175 ಸ್ಥಾನಗಳಿಗೆ ಹಾಗೂ 25 ಲೋಕಸಭೆ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಹಾಗಾಗಿ ನ್ಯಾಯಾಲಯವು ಹಣ ವರ್ಗಾವಣೆಗೆ ತಡೆ ನೀಡಿದೆ. ಮೇ 13ರ ನಂತರವಷ್ಟೇ ವರ್ಗಾವಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

VISTARANEWS.COM


on

Court Order
Koo

ಹೈದರಾಬಾದ್:‌ ಆಂಧ್ರಪ್ರದೇಶದಲ್ಲಿ (Andhra Pradesh) ರಾಜ್ಯ ಸರ್ಕಾರದ ಹಣವನ್ನು ಫಲಾನುಭವಿಗಳಿಗೆ ವರ್ಗಾಯಿಸುವ ದಿಸೆಯಲ್ಲಿ ಆಡಳಿತ ಪಕ್ಷ ವೈಎಸ್‌ಆರ್‌ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಬೆನ್ನಲ್ಲೇ ರಾಜ್ಯ ಹೈಕೋರ್ಟ್‌ (High Court) ಮಹತ್ವದ ಆದೇಶ ಹೊರಡಿಸಿದೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಅಂದರೆ, ಮೇ 13ರವರೆಗೆ ಹಣವನ್ನು ಜನರ ಖಾತೆಗಳಿಗೆ ವರ್ಗಾವಣೆ (Cash Transfers) ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಆಂಧ್ರಪ್ರದೇಶದಲ್ಲಿ ಹಲವು ಯೋಜನೆಗಳಿಗಾಗಿ ಮೀಸಲಿಸಿರುವ ಸುಮಾರು 14,165 ಕೋಟಿ ರೂಪಾಯಿಯನ್ನು ವರ್ಗಾವಣೆ ಮಾಡಬೇಕಿದೆ. ಆದರೆ, ಮೇ 13ರಂದು ರಾಜ್ಯ ವಿಧಾನಸಭೆಯ 175 ಸ್ಥಾನಗಳಿಗೆ ಹಾಗೂ 25 ಲೋಕಸಭೆ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ನ್ಯಾಯಾಲಯವೀಗ ಮತದಾನ ಮುಗಿಯುವವರೆಗೆ ಹಣ ವರ್ಗಾವಣೆ ಮಾಡಬಾರದು ಎಂದು ಆದೇಶಿಸಿದೆ. ಇದಕ್ಕೂ ಮೊದಲು, ಮತದಾನಕ್ಕೂ 72 ಗಂಟೆ ಮೊದಲು ವರ್ಗಾವಣೆ ಮಾಡಲು ಅನುಮತಿ ನೀಡಿತ್ತು.

ಒಬ್ಬ ವಿದ್ಯಾರ್ಥಿ ಹಾಗೂ ಹಲವು ಮಹಿಳಾ ಫಲಾನುಭವಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಹಣ ವರ್ಗಾವಣೆಗೆ ಅನುಮತಿ ನೀಡಿತ್ತು. ಮತದಾನಕ್ಕೂ 72 ಗಂಟೆ ಮೊದಲು ಹಣವನ್ನು ವರ್ಗಾವಣೆ ಮಾಡಬಹುದು ಎಂದು ತಿಳಿಸಿತ್ತು. ಆದರೆ, ಲೋಕಸಭೆ ಹಾಗೂ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸರ್ಕಾರವು ಹಣ ವರ್ಗಾವಣೆ ಮಾಡಬಾರದು. ಅದರಲ್ಲೂ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಹಣ ವರ್ಗಾವಣೆ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದವು.

ಜನರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೋಜನೆ (DBT) ಸೇರಿ ಹಲವು ಯೋಜನೆಗಳ ಹಣವನ್ನು ವರ್ಗಾವಣೆ ಮಾಡುವುದು ಕೆಲ ತಿಂಗಳಿಂದ ಬಾಕಿ ಇದೆ. ಚುನಾವಣೆ ಸಂದರ್ಭದಲ್ಲಿ ಹಣ ವರ್ಗಾವಣೆ ವಿಷಯದಲ್ಲಿ ರಾಜಕೀಯ ಮೇಲಾಟವೂ ಶುರುವಾಗಿದೆ. “ರಾಜ್ಯದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಹಾಗೂ ಬಿಜೆಪಿಯು ಜನರಿಗೆ ಯೋಜನೆಗಳ ಹಣ ತಲುಪಲು ಬಿಡುತ್ತಿಲ್ಲ. ಇವರಿಂದಾಗಿ ಕೇಂದ್ರದ ನೆರವನ್ನೂ ಪಡೆಯಲು ಆಗುತ್ತಿಲ್ಲ” ಎಂದು ದೂರಿದ್ದಾರೆ.

ಇದನ್ನೂ ಓದಿ: EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

Continue Reading

ತಂತ್ರಜ್ಞಾನ

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Reliance Jio: ರಿಲಯನ್ಸ್ ಜಿಯೋದಿಂದ ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂ. ಆಗಲಿದ್ದು, ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ಲಭ್ಯವಿದೆ. ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ ಡೇಟಾ ಸಹ ದೊರೆಯುತ್ತಿದೆ.

VISTARANEWS.COM


on

888 rupees postpaid plan with 15 OTT applications for JioFiber AirFiber customers
Koo

ನವದೆಹಲಿ: ಜಿಯೋಫೈಬರ್ (Jio Fiber) ಹಾಗೂ ಜಿಯೋ ಏರ್ ಫೈಬರ್ (Jio Air Fiber) ಗ್ರಾಹಕರಿಗಾಗಿ ರಿಲಯನ್ಸ್ ಜಿಯೋದಿಂದ (Reliance Jio) ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಒಟಿಟಿ ಪ್ಲಾಟ್ ಫಾರ್ಮ್‌ಗಳನ್ನು ಅತಿ ಹೆಚ್ಚು ಬಳಕೆ ಮಾಡುವವರಿಗೆ, ಇಷ್ಟ ಪಡುವವರಿಗೆ ಇದು ಹೇಳಿ ಮಾಡಿಸಿದ ಯೋಜನೆಯಾಗಿದೆ. ಈ ಪ್ಲಾನ್‌ಗೆ ತಿಂಗಳಿಗೆ 888 ರೂಪಾಯಿ ಆಗಲಿದೆ.

ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು 15 ಪ್ರೀಮಿಯಂ ಒಟಿಟಿ ಅಪ್ಲಿಕೇಷನ್‌ಗಳನ್ನು ಪಡೆಯಲಿದ್ದು, ಅನಿಯಮಿತ (Unlimited) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಅಪ್ಲಿಕೇಷನ್‌ಗಳಲ್ಲಿ ಯಾವಾಗ ಮತ್ತು ಎಲ್ಲಿ ಬೇಕಾದರೂ ಕಾರ್ಯಕ್ರಮಗಳ ವೀಕ್ಷಣೆ ಮಾಡಬಹುದಾಗಿದೆ.

ಇದನ್ನೂ ಓದಿ: Dr C N Manjunath: ಮತ್ತೆ ವೈದ್ಯ ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

ಈ ಹೊಸ ಯೋಜನೆಯ ಅಡಿಯಲ್ಲಿ ಗ್ರಾಹಕರು 30 ಎಂಬಿಪಿಎಸ್ (Mbps) ವೇಗವನ್ನು ಪಡೆಯಲಿದ್ದು, ಇದರ ಜತೆಗೆ ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್, ಜಿಯೋಸಿನಿಮಾ ಪ್ರೀಮಿಯಂ ರೀತಿಯ ಹದಿನೈದಕ್ಕೂ ಹೆಚ್ಚು ಪ್ರಮುಖ ಒಟಿಟಿ ಅಪ್ಲಿಕೇಷನ್‌ಗಳು ದೊರೆಯುತ್ತವೆ. ಈ ಅಪ್ಲಿಕೇಷನ್‌ನ ಸಬ್‌ಸ್ಕ್ರಿಪ್ಷನ್ ದೊರೆಯುವುದು ಯೋಜನೆಯ ಜತೆಗೆ ಮಾತ್ರ. ಈ ಯೋಜನೆಯನ್ನು ಹೊಸ ಚಂದಾದಾರಷ್ಟೇ ಅಲ್ಲ, 10 ಅಥವಾ 30 ಎಂಬಿಪಿಎಸ್ ಯೋಜನೆಯನ್ನು ಈಗಾಗಲೇ ಬಳಸುತ್ತಿರುವ ಜಿಯೋದ ಈಗಿನ ಬಳಕೆದಾರರು ಸಹ ಪಡೆಯಬಹುದಾಗಿದೆ.

ಇನ್ನು ಈ 888 ರೂಪಾಯಿಯ ಪೋಸ್ಟ್‌ಪೇಯ್ಡ್ ಯೋಜನೆಯು ಪ್ರತಿಯೊಬ್ಬರಿಗೂ ದೊರೆಯಲಿದ್ದು, ಸದ್ಯಕ್ಕೆ ಪ್ರಿಪೇಯ್ಡ್ ಯೋಜನೆ ಹೊಂದಿರುವ ಗ್ರಾಹಕರು ಈ ಹೊಸ ಪೋಸ್ಟ್ ಪೇಯ್ಡ್ ಯೋಜನೆಗೆ ಅಪ್‌ಗ್ರೇಡ್ ಮಾಡಬಹುದು.

ಇದನ್ನೂ ಓದಿ: T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

ಇನ್ನೊಂದು ವಿಶೇಷತೆಯೆಂದರೆ ಇತ್ತೀಚೆಗೆ ಘೋಷಣೆಯಾದ ಜಿಯೋ ಐಪಿಎಲ್ ಧನ್ ಧನಾ ಧನ್ ಆಫರ್ ಕೂಡ ಈ ಯೋಜನೆಗೆ ಅನ್ವಯಿಸುತ್ತದೆ. ಜಿಯೋಫೈಬರ್ ಅಥವಾ ಏರ್ ಫೈಬರ್‌ನ ಅರ್ಹ ಗ್ರಾಹಕರು ತಮ್ಮ ಜಿಯೋ ಹೋಮ್ ಬ್ರಾಡ್ ಬ್ಯಾಂಡ್ ಸಂಪರ್ಕದಲ್ಲಿ 50 ದಿನ ರಿಯಾಯಿತಿ ಕ್ರೆಡಿಟ್ ವೋಚರ್ ಸಹ ಪಡೆಯಬಹುದು. ಈ ಪ್ಲಾನ್ ಮೇ 31, 2024ರ ವರೆಗೆ ಲಭ್ಯವಿರುತ್ತದೆ, ಜಿಯೋ ಡಿಡಿಡಿ (Jio Dhan Dhana Dhan) ಕೊಡುಗೆಯನ್ನು ವಿಶೇಷವಾಗಿ ಟಿ20 ಋತುವಿಗಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ದೇಶ

Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

Akbar Nagar: ಅಕ್ಬರ್‌ ನಗರದಲ್ಲಿ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದ ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತಾ ನೇತೃತ್ವದ ನ್ಯಾಯಪೀಠವು, ಲಖನೌ ಅಭಿವೃದ್ಧಿ ಪ್ರಾಧಿಕಾರಕ್ಕೆ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ, ಪ್ರಾಧಿಕಾರಕ್ಕೆ ಜನರ ಹಿತದೃಷ್ಟಿಯಿಂದ ಕೋರ್ಟ್‌ ಕೆಲ ಸೂಚನೆಗಳನ್ನು ನೀಡಿದೆ.

VISTARANEWS.COM


on

Akbar Nagar
Koo

ಲಖನೌ: ಉತ್ತರ ಪ್ರದೇಶದ (Uttar Pradesh) ಲಖನೌನಲ್ಲಿರುವ ಅಕ್ಬರ್‌ ನಗರದಲ್ಲಿ (Akbar Nagar) ಅಕ್ರಮವಾಗಿ ನಿರ್ಮಿಸಲಾಗಿರುವ ಎಲ್ಲ ಮನೆಗಳನ್ನು ನೆಲಸಮಗೊಳಿಸಲು ಸುಪ್ರೀಂ ಕೋರ್ಟ್‌ (Supreme Court) ಗ್ರೀನ್‌ ಸಿಗ್ನಲ್‌ ನೀಡಿದೆ. ಇದರೊಂದಿಗೆ ಅಕ್ಬರ್‌ ನಗರದಲ್ಲಿ ಕಟ್ಟಡಗಳ ನೆಲಸಮಗೊಳಿಸುವ ಕುರಿತು ಲಖನೌ ಅಭಿವೃದ್ಧಿ ಪ್ರಾಧಿಕಾರ (LDA) ತೆಗೆದುಕೊಂಡ ನಿರ್ಧಾರಕ್ಕೆ ಭಾರಿ ಮುನ್ನಡೆ ಸಿಕ್ಕಂತಾಗಿದೆ. ಶೀಘ್ರದಲ್ಲಿಯೇ ಅಕ್ಬರ್‌ ನಗರದಲ್ಲಿರುವ ಎಲ್ಲ ಮನೆಗಳನ್ನು ನೆಲಸಮಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಅಕ್ಬರ್‌ ನಗರದಲ್ಲಿ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದ ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತಾ ನೇತೃತ್ವದ ನ್ಯಾಯಪೀಠವು, ಲಖನೌ ಅಭಿವೃದ್ಧಿ ಪ್ರಾಧಿಕಾರಕ್ಕೆ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿತು. “ಕಟ್ಟಡಗಳನ್ನು ನೆಲಸಮಗೊಳಿಸುವ ಕುರಿತು ಅಲಹಾಬಾದ್‌ ಹೈಕೋರ್ಟ್‌ ಸೂಚನೆಗಳು, ನಿರ್ದೇಶನಗಳು ಸರಿಯಾಗಿವೆ” ಎಂದು ಸ್ಪಷ್ಟಪಡಿಸಿತು.

ಏಕೆ ಕಟ್ಟಡಗಳ ನೆಲಸಮ?

ಅಕ್ಬರ್‌ ನಗರದಲ್ಲಿ ಕಾನೂನುಬಾಹಿರವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅದರಲ್ಲೂ, ಪ್ರವಾಹದ ಭೀತಿ ಜಾಸ್ತಿ ಇರುವ ಪ್ರದೇಶದಲ್ಲಿ (Floodplain) ಇಡೀ ನಗರದ ಕಟ್ಟಡಗಳು ನಿರ್ಮಾಣಗೊಂಡಿವೆ. ಕುಕ್ರೈಲ್‌ ನದಿ ತೀರದಲ್ಲಿ ಸುಮಾರು 15 ಸಾವಿರ ಜನ ವಾಸಿಸುತ್ತಿದ್ದು, ಸಾವಿರಾರು ಕಟ್ಟಡಗಳು ತಲೆಎತ್ತಿವೆ. ಇಲ್ಲಿ ಸರ್ಕಾರದ ಜಾಗವನ್ನು ಅತಿಕ್ರಮಣ ಮಾಡಿಕೊಂಡು, ಸ್ಲಮ್‌ಗಳನ್ನು ನಿರ್ಮಾಣ ಮಾಡಿಕೊಂಡು, ದೊಡ್ಡ ಊರನ್ನೇ ನಿರ್ಮಿಸಲಾಗಿದೆ. ಆದರೆ, ಈ ಊರು ನದಿ ತೀರದಲ್ಲಿರುವುದರಿಂದ ಪ್ರವಾಹದ ಭೀತಿ ಜಾಸ್ತಿ ಇದೆ. ಇದನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ನೆಲಸಮಕ್ಕೆ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

15 ಸಾವಿರ ಜನರ ಸ್ಥಿತಿ ಏನು?

ಕಟ್ಟಡಗಳು, ಸ್ಲಮ್‌ಗಳಲ್ಲಿರುವ ಜೋಪಡಿಗಳನ್ನು ನೆಲಸಮಗೊಳಿಸುವುದರಿಂದ ಸುಮಾರು 15 ಸಾವಿರ ಜನರಿಗೆ ತೊಂದರೆಯಾಗಲಿದೆ ಎಂದು ತಿಳಿದುಬಂದಿದೆ. ಇದನ್ನು ಕೂಡ ಗಮನದಲ್ಲಿಟ್ಟುಕೊಂಡಿರುವ ಸುಪ್ರೀಂ ಕೋರ್ಟ್‌, “ನೀವು ಯಾರನ್ನು ಸ್ಥಳಾಂತರ ಮಾಡಬೇಕು ಎಂದಿದ್ದೀರೋ, ಅವರಿಗೆ ಬೇರೆ ಜಾಗದಲ್ಲಿ ಮನೆ ನಿರ್ಮಿಸಿಕೊಡಿ. ಅವರಿಗೆ ಬದಲಿ ಮನೆಯ ವ್ಯವಸ್ಥೆ ಆಗುವವರೆಗೆ ಅಲ್ಲಿಂದ ಸ್ಥಳಾಂತರ ಮಾಡುವ ಹಾಗಿಲ್ಲ” ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಹಾಗಾಗಿ, ಅಕ್ಬರ್‌ ನಗರದ ನಿವಾಸಿಗಳು ನಿರಾಶ್ರಿತರಾಗುವುದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Bulldozer Justice Video: ಅತ್ಯಾಚಾರ ಎಸಗಿ ಕ್ರೂರಹಿಂಸೆ; ಆರೋಪಿ ಅಯಾನ್‌ ಪಠಾಣ್‌ ಮನೆ ಧ್ವಂಸಗೊಳಿಸಿದ ಬುಲ್ಡೋಜರ್‌!

Continue Reading
Advertisement
Narendra Modi
ದೇಶ44 mins ago

Narendra Modi: ಶಿಂಧೆ, ಅಜಿತ್‌ ಬಣಕ್ಕೆ ನೀವೇ ಸೇರಿಬಿಡಿ; ಠಾಕ್ರೆ, ಶರದ್‌ ಪವಾರ್‌ಗೆ ಮೋದಿ ಸಲಹೆ!

Wonderla Bengaluru
ಕರ್ನಾಟಕ46 mins ago

Wonderla Bengaluru: ತಾಯಂದಿರ ದಿನ ಹಿನ್ನೆಲೆ ವಂಡರ್‌ಲಾದಿಂದ ವಿಶೇಷ ಆಫರ್‌; 2 ಟಿಕೆಟ್‌ ಖರೀದಿಸಿದರೆ ತಾಯಿಗೆ ಫ್ರೀ ಎಂಟ್ರಿ!

IPL 2024
ಕ್ರೀಡೆ48 mins ago

IPL 2024 : ಚೆನ್ನೈ ವಿರುದ್ಧ ಗುಜರಾತ್​ಗೆ 35 ರನ್ ವಿಜಯ, ಆರ್​​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು

Court Order
ದೇಶ2 hours ago

Cash Transfers: ಚುನಾವಣೆ; ಸರ್ಕಾರದ 14 ಸಾವಿರ ಕೋಟಿ ರೂ. ಜನರ ಖಾತೆಗೆ ವರ್ಗಾಯಿಸಲು ಕೋರ್ಟ್‌ ತಡೆ!

Prajwal Revanna Case
ಕರ್ನಾಟಕ2 hours ago

Prajwal Revanna Case: 36 ಸೆಕೆಂಡ್‌‌ಗಳ ಮತ್ತೊಂದು ಆಡಿಯೊ ಬಾಂಬ್; ಪ್ರಜ್ವಲ್ ಕೇಸ್‌‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!

Mr. & Mrs. Mahi'
ಪ್ರಮುಖ ಸುದ್ದಿ2 hours ago

Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

888 rupees postpaid plan with 15 OTT applications for JioFiber AirFiber customers
ತಂತ್ರಜ್ಞಾನ2 hours ago

Reliance Jio: ಜಿಯೋಫೈಬರ್, ಏರ್ ಫೈಬರ್ ಗ್ರಾಹಕರಿಗೆ ಆಫರ್‌; 15 ಒಟಿಟಿ ಅಪ್ಲಿಕೇಷನ್‌ ಜತೆಗೆ 888 ರೂ. ಪೋಸ್ಟ್ ಪೇಯ್ಡ್ ಪ್ಲಾನ್

Prajwal Revanna case SIT to issue Red Corner Notice against Prajwal
ಕ್ರೈಂ2 hours ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

IPL 2024
ಕ್ರೀಡೆ3 hours ago

IPL 2024 : ಐಪಿಎಲ್​ನಲ್ಲಿ ಹೊಸ ಇತಿಹಾಸ; ಸಚಿನ್​ ದಾಖಲೆ ಮುರಿದ ಸಾಯಿ ಸುದರ್ಶನ್​

US
ಪ್ರಮುಖ ಸುದ್ದಿ3 hours ago

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ10 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ12 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ13 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ20 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ1 day ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌