Actor Kajol : ಭಾರತದ ಲೀಡರ್​ ಅನಕ್ಷರಸ್ಥರು; ಸೋಶಿಯಲ್​ ಮೀಡಿಯಾದಲ್ಲಿ ಕಿಡಿ ಹಚ್ಚಿದ ಕಾಜೋಲ್​ ಹೇಳಿಕೆ - Vistara News

ದೇಶ

Actor Kajol : ಭಾರತದ ಲೀಡರ್​ ಅನಕ್ಷರಸ್ಥರು; ಸೋಶಿಯಲ್​ ಮೀಡಿಯಾದಲ್ಲಿ ಕಿಡಿ ಹಚ್ಚಿದ ಕಾಜೋಲ್​ ಹೇಳಿಕೆ

ಕಾಜೋಲ್ ಭಾರತದ ರಾಜಕೀಯ ನಾಯಕರ ಶೈಕ್ಷಣಿಕ ಅರ್ಹತೆಯ ಬಗ್ಗೆ ಕಾಮೆಂಟ್ ಮಾಡಿದ ನಂತರ ಟ್ವಿಟರ್​ನಲ್ಲಿ ಪರ ವಿರೋಧ ಚರ್ಚೆ ನಡೆಯಿತು,

VISTARANEWS.COM


on

Actor Kajol
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಾಲಿವುಡ್ ನಟಿ ಕಾಜೋಲ್ (Actor Kajol) ಭಾರತದ ರಾಜಕೀಯ ನಾಯಕರ ಬಗ್ಗೆ ಕಾಮೆಂಟ್ ಮಾಡುವ ವೇಳೆ ಅನಕ್ಷರಸ್ಥರು ಎಂಬುದನ್ನು ಉಲ್ಲೇಖಿಸುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ. ಭಾರತ ಹಿಂದುಳಿವುದಕ್ಕೆ ಅನಕ್ಷರಸ್ಥ ನಾಯಕರೇ ಕಾರಣ ಎಂದು ಅವರು ನೀಡಿರುವ ಹೇಳಿಕೆಗೆ ವಿರೋಧ ಹಾಗ ಬೆಂಬಲ ಏಕಕಾಲಕ್ಕೆ ವ್ಯಕ್ತಗೊಂಡಿವೆ. ಅವರ ಮಾತುಗಳು ಹಲವಾರು ಜನರಿಂದ ಮತ್ತು ರಾಜಕೀಯ ವ್ಯಕ್ತಿಗಳಿಂದ ಟೀಕೆಗೆ ಗುರಿಯಾಗಿವೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಕಾಜೋಲ್, ಜನರು ಸಂಪ್ರದಾಯಗಳಲ್ಲೇ ಮುಳುಗಿರುವುದರಿಂದ ಮತ್ತು ಸರಿಯಾದ ಶಿಕ್ಷಣ ಪಡೆಯದ ಕಾರಣ ಭಾರತದಲ್ಲಿ ಪ್ರಗತಿ ನಿಧಾನವಾಗಿದೆ ಎಂದು ಹೇಳಿದರು. ಅವರು ತಮ್ಮ ಹೇಳಿಕೆಯಲ್ಲಿ ರಾಜಕೀಯ ನಾಯಕರನ್ನು ಸಹ ಸೇರಿಸಿದ್ದಾರೆ. ಅವರ ಮುಂಬರುವ ಕಾರ್ಯಕ್ರಮ ದಿ ಟ್ರಯಲ್ ನ ಪ್ರಚಾರ ಸಂದರ್ಶನದ ವೇಳೆ ಈ ಮಾತನ್ನು ಉಲ್ಲೇಖಿಸಿದ್ದರು.

ಅವರ ಮಾತುಗಳಿಗೆ ಪ್ರತಿಕ್ರಿಯಿಸಿದ ಬಳಕೆದಾರರೊಬ್ಬರು, ಸ್ವಜನಪಕ್ಷಪಾತದ ಫಲ ಪಡೆದುಕೊಂಡಿರುವ ಕಾಜೋಲ್ ಸ್ವತಃ ಅನಕ್ಷರಸ್ಥೆ. ಅರ್ಧಕ್ಕೆ ಶಾಲೆ ಬಿಟ್ಟವರು. ಆಕೆಯ ಪತಿ ಕ್ಯಾನ್ಸರ್ ಮಾರುವವರು ಎಂದು ಬರೆದುಕೊಂಡಿದ್ದಾರೆ. ಕಾಜೋಲ್ ಸ್ವತಃ 8 ನೇ ತರಗತಿಯ ನಂತರ ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಇನ್ನೊಬ್ಬರು ಬರೆದುಕೊಂಡಿದ್ದಾರೆ..

ಕಾಜೋಲ್ ತಾವು ಉನ್ನತ ಶಿಕ್ಷಣ ಪಡೆದವರು ಎಂದು ಎಲ್ಲಿಯೂ ಹೇಳಿಕೊಳ್ಳುವುದಿಲ್ಲ. ಅವರು ಸೀಮಿತ ಶಿಕ್ಷಣವನ್ನು ಹೊಂದಿದ್ದರು ಒಪ್ಪುತ್ತಾರೆ. ಅವರು ನಕಲಿ ಪದವಿಗಳನ್ನು ಹೊಂದಿಲ್ಲ. ಕಾಜೋಲ್ ಯಾವಾಗಲೂ ನನ್ನ ನೆಚ್ಚಿನ ನಟಿ. “ಅವಳು ಸಾಕಷ್ಟು ವಿದ್ಯಾವಂತಳಲ್ಲ ಆದರೆ ಅವಳು ದೇಶವನ್ನು ನಡೆಸುತ್ತಿಲ್ಲ. ಅವಳು ತನ್ನ ಸ್ವಂತ ವ್ಯವಹಾರ ಮತ್ತು ಕುಟುಂಬವನ್ನು ಗಮನದಲ್ಲಿಟ್ಟುಕೊಂಡು ತನ್ನ ಶಿಕ್ಷಣವನ್ನು ಮುಂದುವರಿಸಿದ್ದಾರೆ. ಅವಿದ್ಯಾವಂತ ರಾಜಕಾರಣಿಗಳು ಮಾಡುತ್ತಿರುವಂತೆ ದೇಶದ ಜನರಿಗೆ ಸುಳ್ಳು ಭರವಸೆಗಳನ್ನು ಹೇಳುತ್ತಿಲ್ಲ, ಅವಳ ಖ್ಯಾತಿಯನ್ನು ಹಾಳುಮಾಡಲು ಪ್ರಯತ್ನಿಸಬೇಡಿ” ಎಂದು ಬಳಕೆದಾರರೊಬ್ಬರು ಅವರ ಬೆಂಬಲಕ್ಕೆ ನಿಂತಿದ್ದಾರೆ.

ಏನು ಹೇಳಿದ್ದರು ಕಾಜೋಲ್​

ಕಾಜೋಲ್ ದಿ ಕ್ವಿಂಟ್ ಜೊತೆ ಮಾತನಾಡುತ್ತಾ ಬದಲಾವಣೆ, ವಿಶೇಷವಾಗಿ ಭಾರತದಂತಹ ದೇಶದಲ್ಲಿ ನಿಧಾನವಾಗಿದೆ. ಇದು ತುಂಬಾ ನಿಧಾನ. ಏಕೆಂದರೆ ನಾವು ನಮ್ಮ ಸಂಪ್ರದಾಯಗಳಲ್ಲಿ ಮುಳುಗಿದ್ದೇವೆ. ಆಲೋಚನಾ ಕ್ರಮಗಳಿಂದ ದೂರ ಉಳಿದಿದ್ದೇವೆ. ಅದುವೇ ಶಿಕ್ಷಣಕ್ಕೆ ಸಂಬಂಧಿಸಿದ್ದು.

ಇದನ್ನೂ ಓದಿ : Lust Stories 2: ಹೆಣ್ಣಿನ ʻಕಾಮ ಸಂತೃಪ್ತಿʼಯನ್ನು ಸಹಜವಾಗಿ ನೋಡಿ ಎಂದ ನಟಿ ಕಾಜೋಲ್‌

ಶಿಕ್ಷಣ ವ್ಯವಸ್ಥೆಯ ಹಿನ್ನೆಲೆಯಿಲ್ಲದ ರಾಜಕೀಯ ನಾಯಕರನ್ನು ನಾವು ಹೊಂದಿದ್ದೇವೆ. ಯಾವುದೇ ದೂರದೃಷ್ಟಿ ಇಲ್ಲದ ನಾಯಕರಿಂದ ನಾವು ಆಳಿಸಿಕೊಳ್ಳುತ್ತಿದ್ದೇವೆ. ಒಳ್ಳೆಯ ದೃಷ್ಟಿಕೋನವನ್ನು ಶಿಕ್ಷಣ ನೀಡುತ್ತದೆ ಎಂಬುದು ನನ್ನ ನಂಬಿಕೆ. ಕನಿಷ್ಠ ಶಿಕ್ಷಣ ವಿಭಿನ್ನ ದೃಷ್ಟಿಕೋನವನ್ನು ನೋಡುವ ಅವಕಾಶವನ್ನು ಕೊಡುತ್ತದೆ ” ಎಂದು ಅವರು ಹೇಳಿದ್ದಾರೆ.

ಕಾಜೋಲ್ ಸ್ಪಷ್ಟನೆ

ವಿವಾದ ಉಂಟಾಗುತ್ತಿದ್ದಂತೆ ನಟಿ ತನ್ನ ಹೇಳಿಕೆಯನ್ನು ಸ್ಪಷ್ಟಪಡಿಸಿದ್ದಾರೆ. “ನಾನು ಶಿಕ್ಷಣ ಮತ್ತು ಅದರ ಪ್ರಾಮುಖ್ಯತೆಯ ಬಗ್ಗೆ ಕೇವಲ ಒಂದು ಅಂಶವನ್ನು ಹೇಳುತ್ತಿದ್ದೆ. ನನ್ನ ಉದ್ದೇಶ ಯಾವುದೇ ರಾಜಕೀಯ ನಾಯಕರನ್ನು ಅವಮಾನಿಸುವುದು ಅಲ್ಲ. ದೇಶವನ್ನು ಸರಿಯಾದ ಹಾದಿಯಲ್ಲಿ ಮುನ್ನಡೆಸುತ್ತಿರುವ ಕೆಲವು ಮಹಾನ್ ನಾಯಕರನ್ನು ನಾವು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Sachin Tendulkar:ಮಹಾರಾಷ್ಟ್ರದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗಿನ ಜಾವ 1:30ಕ್ಕೆ ತನ್ನ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಕಾಶ್ ಅದಾಗಲೇ ಮೃತಪಟ್ಟಿದ್ದರು. ಪ್ರಕಾಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Sachin Tendulkar
Koo

ಮುಂಬೈ: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್(Sachin Tendulkar) ಅವರ ಭದ್ರತಾ ಸಿಬ್ಬಂದಿ(VVIP Security guard) ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Self Harming) ಮಾಡಿಕೊಂಡಿದ್ದಾರೆ. ರಾಜ್ಯ ಮೀಸಲು ಪೊಲೀಸ್ ಪಡೆಯ ಜವಾನ್ ಪ್ರಕಾಶ್ ಕಾಪ್ಡೆ (39) ಮೃತ ದುರ್ದೈವಿ. ಸಚಿನ್ ಅವರ ವಿವಿಐಪಿ ಭದ್ರತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಪ್ಡೆ, ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಊರಿಗೆ ತೆರಳಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿರುವ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗಿನ ಜಾವ 1:30ಕ್ಕೆ ತನ್ನ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಕಾಶ್ ಅದಾಗಲೇ ಮೃತಪಟ್ಟಿದ್ದರು. ಪ್ರಕಾಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

ಆದರೆ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ತಿಳಿಯಲು ಪ್ರಕಾಶ್ ಅವರ ಪೋಷಕರು, ಪತ್ನಿ, ಮಕ್ಕಳು, ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿವಿಐಪಿ ಭದ್ರತಾ ಸಿಬ್ಬಂದಿಯ ಆತ್ಮಹತ್ಯೆಯ ಬಗ್ಗೆಯೂ ಎಸ್‌ಆರ್‌ಪಿಎಫ್ ತನಿಖೆ ನಡೆಸುತ್ತಿದೆ.

ಪ್ರಕಾಶ್ ಕಾಪ್ಡೆ ಪತ್ನಿ, ಇಬ್ಬರು ಪುಟ್ಟ ಮಕ್ಕಳು, ಪೋಷಕರು, ಸಹೋದರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕಾಶ್ ಕಾಪ್ಡೆ ಮೃತದೇಹ, ರಿವಾಲ್ವರ್ , ಮೊಬೈಲ್ ಫೋನ್ ಸೇರಿದಂತೆ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇತ್ತ ಘಟನೆಗೆ ಕಾರಣಗಳು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಜಾಮ್ನೆರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್‌ಸ್ಪೆಕ್ಟರ್ ಕಿರಣ್ ಶಿಂಧೆ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪಡೆದಿರುವ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರಿಗೆ, ಭಾರತ ಸರ್ಕಾರವು ಭಾರತ ರತ್ನ ಗೌರವ ನೀಡಿದೆ. ಪ್ರಸ್ತುತ ಅವರು ಮುಂಬೈ ಇಂಡಿಯನ್ಸ್‌ ತಂಡದ ಭಾಗವಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಹಾಗೂ ಶತಕ ಸಿಡಿಸಿರುವ ದಾಖಲೆ ಈಗಲೂ ತೆಂಡೂಲ್ಕರ್‌ ಹೆಸರಲ್ಲಿದೆ.

Continue Reading

ವೈರಲ್ ನ್ಯೂಸ್

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Viral Video:ಅಹ್ಮದಾಬಾದ್‌ನಿಂದ ಮುಂಬೈಗೆ SUV ಕಾರಿನಲ್ಲಿ ರೋಡ್‌ ಟ್ರಿಪ್‌ ಹೊರಟಿದ್ದ ಐವರು ಯುವಕರು ಕಾರು ಚಲಾಯಿಸುತ್ತಲೇ ಇನ್‌ಸ್ಟಾಗ್ರಾಂ ಲೈವ್‌ ಹೋಗಿದ್ದಾರೆ. ಒಂದು ಅತೀ ವೇಗದ ಕಾರು ಚಾಲನೆ ಅದರ ಜೊತೆ ಇನ್‌ಸ್ಟಾಗ್ರಾಂನಲ್ಲಿ ಲೈವ್‌ ಹೀಗೆ ಎದುರಿಗೆ ಬರುತ್ತಿದ್ದ ಒಂದೊಂದೆ ವಾಹಗಳನ್ನು ಓವರ್‌ಟೇಕ್‌ ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ. ಫುಲ್‌ ಎಂಜಾಯ್‌ ಮೂಡ್‌ನಲ್ಲಿದ್ದ ಯುವಕರ ಹುಚ್ಚಾಟದಿಂದ ಎದುರಿಗೆ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಬಲಿಯಾಗಿದ್ದಾರೆ.

VISTARANEWS.COM


on

Viral Video
Koo

ಗುಜರಾತ್‌: ಮೋಜಿಗೆಂದು ವೇಗವಾಗಿ ವಾಹನ ಚಲಾಯಿಸಿ(Rash Driving) ಯುವಕರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುವ ಬಗ್ಗೆ ದಿನಾ ಒಂದಿಲ್ಲೊಂದು ಘಟನೆ ವರದಿ ಆಗುತ್ತಲೇ ಇರುತ್ತದೆ. ಅಂತಹದ್ದೇ ಮತ್ತೊಂದು ಘಟನೆ ಗುಜರಾತ್‌(Gujarat Accident)ನಲ್ಲಿ ನಡೆದಿದ್ದು, ಐವರು ಯುವಕರು ಇನ್‌ಸ್ಟಾ ಗ್ರಾಂ ಲೈವ್‌(Viral Video) ಹೋಗುತ್ತಾ ಕಾರನ್ನು ಪ್ರತಿ ಗಂಟೆಗೆ 160 ಕಿಲೋಮೀಟರ್‌ ವೇಗದಲ್ಲಿ ಚಲಾಯಿಸಿ ಕೊನೆಗೆ ಭೀಕರ ಅಪಘಾತಕ್ಕೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಅಸುನೀಗಿದರೆ, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ವಿವರ:

ಗುಜರಾತ್‌ನ ಕಛ್‌ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಹ್ಮದಾಬಾದ್‌ನಿಂದ ಮುಂಬೈಗೆ SUV ಕಾರಿನಲ್ಲಿ ರೋಡ್‌ ಟ್ರಿಪ್‌ ಹೊರಟಿದ್ದ ಐವರು ಯುವಕರು ಕಾರು ಚಲಾಯಿಸುತ್ತಲೇ ಇನ್‌ಸ್ಟಾಗ್ರಾಂ ಲೈವ್‌ ಹೋಗಿದ್ದಾರೆ. ಒಂದು ಅತೀ ವೇಗದ ಕಾರು ಚಾಲನೆ ಅದರ ಜೊತೆ ಇನ್‌ಸ್ಟಾಗ್ರಾಂನಲ್ಲಿ ಲೈವ್‌ ಹೀಗೆ ಎದುರಿಗೆ ಬರುತ್ತಿದ್ದ ಒಂದೊಂದೆ ವಾಹಗಳನ್ನು ಓವರ್‌ಟೇಕ್‌ ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ. ಫುಲ್‌ ಎಂಜಾಯ್‌ ಮೂಡ್‌ನಲ್ಲಿದ್ದ ಯುವಕರ ಹುಚ್ಚಾಟದಿಂದ ಎದುರಿಗೆ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಬಲಿಯಾಗಿದ್ದಾರೆ. ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸುವುದಕ್ಕೂ ಮುನ್ನ ನಡೆದ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಜೋರಾಗಿ ಮ್ಯೂಸಿಕ್‌ ಹಾಕಿಕೊಂಡು ಯುವಕನೋರ್ವ “ನೋಡಿ ನಮ್ಮ ಕಾರು ಎಷ್ಟು ವೇಗವಾಗಿ ಹೋಗುತ್ತಿದೆ” ಎಂದು ಹೇಳುತ್ತಾ ಸ್ಪೀಡೋ ಮೀಟರ್‌ ಅನ್ನು ತೋರಿಸುತ್ತಾನೆ. ಅದು ಪ್ರತಿಗಂಟೆಗೆ 160 ಕಿ.ಮೀ ವೇಗ ತೋರಿಸುತ್ತಿತ್ತು. ಅಷ್ಟು ಹೊತ್ತಿಗೆ ಕಾರನ್ನು ಮತ್ತಷ್ಟು ವೇಗವಾಗಿ ಚಲಾಯಿಸಿ ಒಂದೊಂದೆ ವಾಹನಗಳನ್ನು ಹಿಂದಿಕ್ಕಲು ಶುರು ಮಾಡುತ್ತಾರೆ. ಆಗ ಮತ್ತೊರ್ವ ಯುವಕ ಯೆಸ್‌…ಒನ್‌ ಮೋರ್‌ ಎಂದು ಕಿರುಚುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ:Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

ಈ ಘಟನೆ ಮೇ 2ರಂದು ಅದಾಸ್‌ ಪ್ರದೇಶದಲ್ಲಿ ಬೆಳಗ್ಗಿನ ಜಾವ 3.30 ಮತ್ತು 4.30ರ ನಡುವೆ ನಡೆದಿದ್ದು, ಮೃತರನ್ನು ಅಮನ್‌ ಮೆಹಬೂಬ್‌ ಭಾಯ್‌ ಶೇಖ್‌ ಮತ್ತು ಚಿರಾಗ್‌ ಕುಮಾರ್‌ ಕೆ ಪಟೇಲ್‌ ಎಂದು ಗುರುತಿಸಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕಾರು ಚಲಾಯಿಸುತ್ತಿದ್ದ ಮುಸ್ತಾಫಾ ಅಲಿಯಾಸ್‌ ಶಹಬಾದ್‌ ಖಾನ್‌ ಪಠಾಣ್‌ ವಿರುದ್ಧ ಕೇಸ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ಮಮತಾ ಬ್ಯಾನರ್ಜಿ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗ (Election Commission Of India) ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿವೆ. ಅಭ್ಯರ್ಥಿಗಳೂ ಇದೇ ಲೆಕ್ಕಾಚಾರದಲ್ಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರದ ಬಿಜೆಪಿ ಸರ್ಕಾರವನ್ನು ಕೆಳಗಿಳಿಸಬೇಕು ಎಂದೇ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಶಾಕ್‌ ನೀಡಿದ್ದಾರೆ. “ಇಂಡಿಯಾ ಒಕ್ಕೂಟಕ್ಕೆ ನಮ್ಮದೇನಿದ್ದರೂ ಬಾಹ್ಯ ಬೆಂಬಲ” ಎಂದಿದ್ದಾರೆ.

“ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಟಿಎಂಸಿಯು ನಾಯಕತ್ವದ ಸಹಕಾರ ನೀಡುತ್ತದೆ. ಬಾಹ್ಯವಾಗಿಯೇ ಇಂಡಿಯಾ ಒಕ್ಕೂಟಕ್ಕೆ ಟಿಎಂಸಿಯು ಬೆಂಬಲ ನೀಡಲಿದೆ. ಪ್ರತಿಯೊಂದು ವಿಚಾರದಲ್ಲಿಯೂ ಇಂಡಿಯಾ ಒಕ್ಕೂಟಕ್ಕೆ ನಾವು ಸಹಕಾರ ನೀಡುತ್ತೇವೆ. ಅಷ್ಟೇ ಅಲ್ಲ, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳದ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಅದರಲ್ಲೂ, 100 ದಿನಗಳ ಉದ್ಯೋಗ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗಂತೂ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ, ಇಂಡಿಯಾ ಒಕ್ಕೂಟಕ್ಕೂ ಮಮತಾ ಬ್ಯಾನರ್ಜಿ ಅವರು ವ್ಯಾಖ್ಯಾನ ನೀಡಿದರು. “ಯಾವುದು ಇಂಡಿಯಾ ಒಕ್ಕೂಟ, ಎಲ್ಲಿ ಮೈತ್ರಿ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಥವಾ ಸಿಪಿಎಂ ಬಗ್ಗೆ ಯೋಚನೆ ಮಾಡದಿರಿ. ಈ ಪಕ್ಷಗಳ ಲೆಕ್ಕಾಚಾರ ತೆಗೆದುಕೊಳ್ಳದಿರಿ. ಈ ಎರಡೂ ಪಕ್ಷಗಳು ಬಿಜೆಪಿ ಜತೆಗಿವೆ. ನಾನು ಮಾತನಾಡುತ್ತಿರುವುದು ದೆಹಲಿ ಮೈತ್ರಿಯ ಬಗ್ಗೆ ಮಾತ್ರ” ಎಂದು ಹೇಳಿದರು. ಆ ಮೂಲಕ ಚುನಾವಣೆ ಫಲಿತಾಂಶದ ಬಳಿಕದ ಮೈತ್ರಿಯ ಬಗ್ಗೆ ಸೂಚನೆ ನೀಡಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರದವನ್ನು ಅಧಿಕಾರದಿಂದ ಕೆಳಗಿಳಿಸುವ ಏಕಮಾತ್ರ ಉದ್ದೇಶದಿಂದ ಹಲವು ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಿವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ನಮ್ಮದೇನಿದ್ದರೂ ಬಾಹ್ಯ ಬೆಂಬಲ ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರು ಶಾಕ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸಿಎಎ ಮತ್ತು ಅಷ್ಟೇ ವಿವಾದಾತ್ಮಕ ಎನ್ಆರ್​​ಸಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ತರಲಾಗಿದೆ ಎಂಬ ಭಯವನ್ನು ಗೃಹ ಸಚಿವರು ಆಗಾಗ ಹೇಳಿಕೆಗಳ ಮೂಲಕ ನಿವಾರಿಸುತ್ತ ಬಂದಿದ್ದಾರೆ. ಸಿಎಎ ಬಗ್ಗೆ ಅಪಪ್ರಚಾರಗಳ ಮೂಲಕ ಈಗಲೂ ಮುಸ್ಲಿಮರನ್ನು ದಾರಿ ತಪ್ಪಿಸಲು ಯತ್ನಿಸಲಾಗುತ್ತಿದೆ. ಇದು ಯಾರ ಪೌರತ್ವವನ್ನೂ ಕಸಿದುಕೊಳ್ಳಲು ಇರುವುದಲ್ಲ.

VISTARANEWS.COM


on

CAA
Koo

ಭಾರಿ ಆಕ್ಷೇಪದ ಮಧ್ಯೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಡಿ (ಸಿಎಎ) ಮೊದಲ ಕಂತಿನಲ್ಲಿ 14 ಜನರಿಗೆ ಭಾರತೀಯ ನಾಗರಿಕತ್ವವನ್ನು ನೀಡಲಾಗಿದೆ. ಎಲ್ಲರಿಗೂ ಪೌರತ್ವ ಪ್ರಮಾಣಪತ್ರವನ್ನು ಬುಧವಾರ ವಿತರಿಸಲಾಯಿತು. ಈ ಮೂಲಕ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆ ನೀಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು, 14 ಜನರು ಆನ್​ಲೈನ್​ ಮೂಲಕ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಭಾರತೀಯ ಪೌರತ್ವ ನೀಡಿದ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು. ಜಿಲ್ಲಾ ಮಟ್ಟದ ಸಮಿತಿಗಳು ಗೊತ್ತುಪಡಿಸಿದ ಅಧಿಕಾರಿಗಳ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆಯ ನಂತರ ಅರ್ಜಿಗಳನ್ನು ಅಖೈರು ಮಾಡಲಾಗಿದೆ.

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ನಾಲ್ಕು ವರ್ಷಗಳ ನಂತರ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯಿದೆಯನ್ನು ಈ ವರ್ಷ ಜಾರಿ ಮಾಡಿದೆ. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರು 2014ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ಬಂದಿದ್ದಲ್ಲಿ ಅವರಿಗೆ ಭಾರತದ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಸಿಎಎ ಕಾಯ್ದೆ ಜಾರಿಗೆ ತಂದಿದೆ. 2019ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಾಯ್ದೆಯಡಿ ಬರುತ್ತಾರೆ. 2019ರಲ್ಲಿ ಜಾರಿಯಾದರೂ ಇದರ ನಿಯಮಗಳನ್ನು ರೂಪಿಸಲು ಸರ್ಕಾರ 4 ವರ್ಷ ಸಮಯಾವಕಾಶ ತೆಗೆದುಕೊಂಡಿತು. 2024ರ ಮಾರ್ಚ್ 11ರಂದು ಅಧಿಕೃತ ನಿಯಮಾವಳಿಗಳನ್ನು ರೂಪಿಸಿ ಆದೇಶ ಹೊರಡಿಸಿತು. ನಿಗದಿಪಡಿಸಿದ ಪೋರ್ಟಲ್​ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಇವುಗಳನ್ನು ಜಿಲ್ಲಾ ಮಟ್ಟದ ಸಮಿತಿ (ಡಿಎಲ್​ಸಿ), ರಾಜ್ಯ ಮಟ್ಟದ ಸಶಕ್ತ ಸಮಿತಿಯಿಂದ (ಇಸಿ) ಪರಿಶೀಲನೆ ಮಾಡಿದ ಬಳಿಕ ಪೌರತ್ವ ನೀಡಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ.

ಇದೊಂದು ಐತಿಹಾಸಿಕ ಘಟ್ಟ. ಇತಿಹಾಸದ ಸಂಕಷ್ಟಗಳಲ್ಲಿ ನೊಂದವರು ಒಂದು ನೆಲೆಯನ್ನು ಪಡೆಯಲು ಇಂದು ಸಾಧ್ಯವಾಗಿದೆ. ಯಥಾಪ್ರಕಾರ, ಕೇಂದ್ರ ಸರ್ಕಾರದ ಎದುರಾಳಿಗಳು ಈ ಕ್ರಮವನ್ನು ಹಳಿಯುತ್ತಿದ್ದಾರೆ. ಇದು ಸಂಸತ್​ನಲ್ಲಿ ಅಂಗೀಕಾರಗೊಂಡಾಗ ದೆಹಲಿಯಯಲ್ಲಿ ಮತ್ತು ಅಸ್ಸಾಂನಲ್ಲಿ ಭಾರಿ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸರ್ಕಾರ ಎಲ್ಲ ಸಿದ್ಧತೆಗಳ ಬಳಿಕ ಜಾರಿಗೆ ತಂದಿದೆ. ಪಶ್ಚಿಮ ಬಂಗಾಳ, ಕೇರಳದಂಥ ಕೆಲವು ರಾಜ್ಯಗಳು ಇದನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿದ್ದೂ ಉಂಟು. ಆದರೆ ಕಾಲಕ್ರಮೇಣ ಇದರ ಕುರಿತು ಇದ್ದ ಪ್ರತಿಭಟನೆಯ ಅಂಶ ಕಡಿಮೆಯಾಗಿದೆ. ಆದರೆ ಇದರ ಬಗೆಗೆ ಕೆಲವು ವಲಯದಲ್ಲಿ ಇನ್ನೂ ತಪ್ಪು ಕಲ್ಪನೆ ಉಳಿದಂತಿದೆ. ಇದು ನಿವಾರಣೆ ಆಗುವುದು ಮತ್ತು ಎಲ್ಲರೂ ಇದರ ಜಾರಿಗೆ ಸಹಕರಿಸುವುದು ಮುಖ್ಯ.

ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸಿಎಎ ಮತ್ತು ಅಷ್ಟೇ ವಿವಾದಾತ್ಮಕ ಎನ್ಆರ್​​ಸಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ತರಲಾಗಿದೆ ಎಂಬ ಭಯವನ್ನು ಗೃಹ ಸಚಿವರು ಆಗಾಗ ಹೇಳಿಕೆಗಳ ಮೂಲಕ ನಿವಾರಿಸುತ್ತ ಬಂದಿದ್ದಾರೆ. ಸಿಎಎ ಬಗ್ಗೆ ಅಪಪ್ರಚಾರಗಳ ಮೂಲಕ ಈಗಲೂ ಮುಸ್ಲಿಮರನ್ನು ದಾರಿ ತಪ್ಪಿಸಲು ಯತ್ನಿಸಲಾಗುತ್ತಿದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಮಾತ್ರ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಇದು ಯಾರ ಪೌರತ್ವವನ್ನೂ ಕಸಿದುಕೊಳ್ಳಲು ಇರುವುದಲ್ಲ. ಈ ಕಾಯ್ದೆಯಲ್ಲಿ ಮುಸ್ಲಿಮರನ್ನು ಕೈಬಿಟ್ಟ ಕಾರಣ ವಿರೋಧ ಪಕ್ಷಗಳಿಂದ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ ಇದರಲ್ಲಿ ಹುರುಳಿಲ್ಲ. ಮುಸ್ಲಿಮರಿಗೂ ಈ ಕಾಯಿದೆಗೂ ಯಾವುದೇ ಸಂಬಂಧವಿಲ್ಲ.

ಹಿಂದೂ, ಸಿಖ್, ಬೌದ್ಧರಿಗೆ ಭಾರತ ಹೊರತುಪಡಿಸಿ ಪೌರತ್ವ ಪಡೆಯಲು ಬೇರೆ ದೇಶಗಳೇ ಇಲ್ಲ. ಇತಿಹಾಸವನ್ನು ನೋಡಿದರೆ, ಭಾರತ, ಅಫ್ಘಾನಿಸ್ಥಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ಗಡಿಯುದ್ದಕ್ಕೂ ವಲಸೆ ನಡೆದಿರುವುದು ತಿಳಿಯುತ್ತದೆ. ಧರ್ಮದ ಕಾರಣಕ್ಕಾಗಿ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ಆಶ್ರಯ ಕೋರಿ ಬಂದಿರುವ ಸಮುದಾಯಗಳಲ್ಲಿ ಅನೇಕರ ಟ್ರಾವೆಲ್‌ ಡಾಕ್ಯುಮೆಂಟ್‌ಗಳ ಅವಧಿ ಮುಗಿದಿದೆ ಅಥವಾ ಅಪೂರ್ಣ ದಾಖಲೆಗಳಿವೆ ಅಥವಾ ಅವರ ಬಳಿ ದಾಖಲೆಗಳೇ ಇಲ್ಲ. ಮೋದಿ ಸರ್ಕಾರವು ತನ್ನ ಮೊದಲನೇ ಅವಧಿಯಲ್ಲಿ ಈ ರೀತಿಯ ವಲಸಿಗರಿಗೆ ಪಾಸ್‌ಪೋರ್ಟ್‌ ಅಧಿನಿಯಮ (ಭಾರತ ಪ್ರವೇಶಕ್ಕೆ) 1920ರ ಹಾಗೂ ವಿದೇಶಿ ಅಧಿನಿಯಮ 1946ರ ಪ್ರತಿಕೂಲ ದಂಡನಾರ್ಹ ಅಂಶಗಳಿಂದಲೂ ವಿನಾಯಿತಿ ನೀಡಿದೆ. ಇದಷ್ಟೇ ಅಲ್ಲದೇ 2016ರಲ್ಲಿ ಮೋದಿ ಸರ್ಕಾರ ಈ ನಿರಾಶ್ರಿತರಿಗೆ ದೀರ್ಘ‌ಕಾಲಿಕ ವೀಸಾ ಪಡೆಯಲೂ ಅರ್ಹರನ್ನಾಗಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಒಟ್ಟಲ್ಲಿ, ಧಾರ್ಮಿಕ ಹಿಂಸೆಗೆ ತುತ್ತಾಗಿರುವವರಿಗೆ ನಾಗರಿಕತೆ ದೊರಕುವಂತೆ ಮಾಡಲು ಸಶಕ್ತಗೊಳಿಸುತ್ತದೆ.

ಸಂವಿಧಾನದ ಅನುಚ್ಛೇದ 25, ಪ್ರತಿಯೊಬ್ಬ ವ್ಯಕ್ತಿಗೂ ತನಗೆ ಇಷ್ಟವಾದ ಧರ್ಮವನ್ನು ಮುಕ್ತವಾಗಿ ಅನುಸರಿಸಲು, ಆಚರಿಸಲು ಸಮಾನ ಹಕ್ಕನ್ನು ನೀಡುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಯಾವುದೇ ರೀತಿಯಲ್ಲೂ ಈ ಅಂಶಗಳನ್ನು ಉಲ್ಲಂಘಿಸಿಲ್ಲ. ಸಿಎಎಯಿಂದಾಗಿ ಭಾರತೀಯ ಅಲ್ಪಸಂಖ್ಯಾತರ ಹಕ್ಕುಗಳ, ಭಾರತೀಯ ಜಾತ್ಯತೀತ ಮೌಲ್ಯಗಳ ಮತ್ತು ಸಂಪ್ರದಾಯಗಳ ಹನನವಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ. ಸಿಎಎ ಎನ್ನುವುದು ಅನ್ಯಾಯವನ್ನು ಎದುರಿಸುತ್ತಿರುವ ಸಾವಿರಾರು ನಿರ್ವಸಿತ ಕುಟುಂಬಗಳನ್ನು ಸಬಲೀಕರಣಗೊಳಿಸುವ ಐತಿಹಾಸಿಕ ಹೆಜ್ಜೆಯಾಗಿದೆ. ಇದು ಸಮರ್ಪಕವಾಗಿ ಅನುಷ್ಠಾನಕ್ಕೂ ಬರುತ್ತಿದೆ ಎಂದು ಸಂತೋಷಪಡೋಣ.

ಇದನ್ನೂ ಓದಿ: CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Continue Reading
Advertisement
Sachin Tendulkar
ದೇಶ3 mins ago

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

777 Charlie Dog Gives Birth To 6 Puppies Rakshit Shetty on live
ಸಿನಿಮಾ4 mins ago

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

Kangana Ranaut
Lok Sabha Election 202439 mins ago

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

anjali murder case hubli
ಕ್ರೈಂ46 mins ago

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Viral Video
ವೈರಲ್ ನ್ಯೂಸ್50 mins ago

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Slovakian PM Robert Fico critical after assassination attempt
ಪ್ರಮುಖ ಸುದ್ದಿ1 hour ago

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Health Tips in Kannada lady finger okra benefits
ಆರೋಗ್ಯ2 hours ago

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ಕರ್ನಾಟಕ2 hours ago

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

stay awake till late night what is the problem For health
ಆರೋಗ್ಯ3 hours ago

Health Tips in Kannada: ತಡರಾತ್ರಿಯವರೆಗೆ ಎಚ್ಚರದಿಂದ ಇದ್ದರೆ ಆಗುವ ಸಮಸ್ಯೆಗಳೇನು ಗೊತ್ತೇ?

dina bhavishya read your daily horoscope predictions for May 16 2024
ಭವಿಷ್ಯ4 hours ago

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌