Snake bite: ರಕ್ಷಿಸಿದವನ ಪ್ರಾಣಕ್ಕೆ ಎರವಾದ ನಾಗಪ್ಪ; ಹಾವು ಕಡಿದು ಉರಗ ಪ್ರೇಮಿ ಸಾಯುವ ವಿಡಿಯೊ ವೈರಲ್ - Vistara News

ದೇಶ

Snake bite: ರಕ್ಷಿಸಿದವನ ಪ್ರಾಣಕ್ಕೆ ಎರವಾದ ನಾಗಪ್ಪ; ಹಾವು ಕಡಿದು ಉರಗ ಪ್ರೇಮಿ ಸಾಯುವ ವಿಡಿಯೊ ವೈರಲ್

Snake bite: ನಾಗರ ಹಾವನ್ನು ಹಿಡಿದು ಅದನ್ನು ಸುರಕ್ಷಿತ ಜಾಗಕ್ಕೆ ಹಸ್ತಾಂತರಿಸಲು ತೆರಳುತ್ತಿದ್ದಾಗ ಅದರ ಕಡಿತದಿಂದ ಯುವಕನೋರ್ವ ಮೃತಪಟ್ಟ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

VISTARANEWS.COM


on

snake bite
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್‌: ಇತ್ತೀಚೆಗಷ್ಟೇ ಶೂ ಒಳಗೆ ಅಡಗಿ ಕುಳಿತ ಹಾವಿನ ಸುದ್ದಿ ಸದ್ದು ಮಾಡಿತ್ತು. ಇದೀಗ ವ್ಯಕ್ತಿಯೊಬ್ಬ ಚಲಿಸುತ್ತಿರುವ ಬೈಕ್‌ನಲ್ಲಿ ನಾಗರಹಾವಿನ ಕಡಿತಕ್ಕೆ(snake bite) ಒಳಗಾಗಿ ಮೃತಪಟ್ಟಿದ್ದು, ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ(social media) ಹರಿದಾಡುತ್ತಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಈ ಘಟನೆ ನಡೆದಿದ್ದು, ಮನೀಶ್‌ ಎನ್ನುವ ವ್ಯಕ್ತಿ ಮೃತಪಟ್ಟಿದ್ದಾನೆ. ಈತ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರಂತ ನಡೆದಿದೆ. ಈತನ ಸ್ನೇಹಿತ ಬೈಕ್‌ ಚಲಾಯಿಸುತ್ತಿದ್ದರೆ ಈತ ಹಿಂದೆ ಕುಳಿತ್ತಿದ್ದ.

ಏನಿದು ಘಟನೆ?

ಮನೀಶ್‌ ನಾಗರಹಾವನ್ನು ಸೆರೆ ಹಿಡಿದಿದ್ದ. ಬಳಿಕ ಅದನ್ನು ಎರಡೂ ಕೈಯಲ್ಲಿ ಹಿಡಿದು ಬೈಕ್‌ ಹಿಂದೆ ಕುಳಿತಿದ್ದ. ಬೈಕ್‌ ಸಂಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಮನೀಶ್‌ನ ಹಿಡಿತ ಸಡಿಲವಾಗಿತ್ತು. ಆ ಸಂದರ್ಭದಲ್ಲಿ ಹಾವು ಅವನ ಕೈಗೆ ಕಚ್ಚಿತ್ತು. ಕೂಡಲೇ ಗೆಳೆಯ ಬೈಕ್‌ ಅನ್ನು ನಿಲ್ಲಿಸಿದ್ದ. ಮನೀಶ್‌ ಬೈಕ್‌ನಿಂದ ಕೆಳಗೆ ಇಳಿದು ಕುಸಿದು ಬೀಳುತ್ತಿರುವ ದೃಶ್ಯ ಸಿಸಿ ಟವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಮನೀಶ್‌ ಹಾವು ಹಿಡಿಯುವುದರಲ್ಲಿ ಪರಿಣಿತ. ಹೀಗಾಗಿ  ನಾಗರಹಾವೊಂದು ಹಿಡಿದಿದ್ದ. ಜನ ಸಂಚಾರ ಸ್ಥಳದಿಂದ ದೂರ ಸಾಗಿಸಲು ಬರೀ ಕೈಯಲ್ಲೇ ಹಿಡಿದು ತೆರಳುತ್ತಿರುವಾಗ ಈ ಘಟನೆ ನಡೆದಿದೆ. ಈಗಾಗಲೇ ಈ ವಿಡಿಯೊವನ್ನು 6 ಸಾವಿರಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಈ ವಿಡಿಯೊ ನೋಡಿ ಹಲವರು ಕಮೆಂಟ್‌ ಮೂಲಕ ಶಾಕ್‌ ವ್ಯಕ್ತಪಡಿಸಿದ್ದಾರೆ.

ಇದೇ ರೀತಿಯ ಘಟನೆ ತಮಿಳುನಾಡಿನ ವೆಲ್ಲೂರ್‌ನಲ್ಲಿಯೂ ನಡೆದಿದೆ. ಗುಡಿಯಾಟ್ಟಮ್‌ ನಗರದ ಸಮೀಪದ ಹಳ್ಳಿಯೊಂದರಲ್ಲಿ 6 ವರ್ಷದ ಬಾಲಕ ಹಾವು ಕಡಿತಕ್ಕೊಳಗಾಗಿ ಅಸುನೀಗಿದ್ದಾನೆ. ಷಷ್ಮುಗವೇಲ್‌ ಮೃತ ಬಾಲಕ. ಸ್ಥಳೀಯ ಖಾಸಗಿ ಶಾಲೆಯೊಂದರ ಒಂದನೇ ತರಗತಿಯಲ್ಲಿ ಓದುತ್ತಿದ್ದ ಆತನಿಗೆ ಸಂಜೆ ಹಾವು ಕಡಿದಿತ್ತು. ಸಂಜೆ 6 ಗಂಟೆ ಸುಮಾರಿಗೆ ಷಣ್ಮುಗವೇಲ್‌ ಕರಿಬೇವು ಸೊಪ್ಪು ತರಲು ಹೋಗಿದ್ದಾಗ ಈ ಅವಘಡ ನಡೆದಿದೆ. ಬಾಲಕ ತುಂಬಾ ಹೊತ್ತಾದರೂ ಬಾರದಿರುವುದನ್ನು ಗಮನಿಸಿದ ಮನೆಯವರು ಹುಡುಕಿಕೊಂಡು ಹೋದಾಗ ಇದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: Viral Video: ಗಣೇಶ ಪೆಂಡಾಲ್​​ನಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಂತೆ ಹಾರಿ ಹೋಯ್ತು ಯುವಕನ ಪ್ರಾಣ

ಇಂದೋರ್‌ ಮತ್ತು ಗುಡಿಯಾಟ್ಟಮ್‌ ಹಾವು ಕಡಿತದ ಘಟನೆಗಳಲ್ಲಿ ಸುತ್ತಮುತ್ತಲಿನ ಜನರು ತಕ್ಷಣ ಕಾರ್ಯ ಪ್ರವೃತ್ತರಾದರೂ ಇಬ್ಬರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಸದ್ಯ ಎರಡೂ ಘಟನೆಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶೂ ಒಳಗೆ ಹಾವು

ಹಾವೊಂದು ಶೂ ಒಳಗೆ ಅಡಗಿ ಕುಳಿತುಕೊಳ್ಳುವ ದೃಶ್ಯ ಇತ್ತೀಚೆಗೆ ಭಾರೀ ವೈರಲ್‌ ಆಗಿತ್ತು. ವ್ಯಕ್ತಿಯೊಬ್ಬರು ಶೂ ಎತ್ತಿ ಕ್ಯಾಮೆರಾದ ಹತ್ತಿರ ತಂದು ಹಾವು ಹೇಗೆ ಅದರೊಳಗೆ ಅಡಗಿ ಕೂತಿದೆ ಎನ್ನುವುದನ್ನು ತೋರಿಸುವ ವಿಡಿಯೊ ಅದಾಗಿತ್ತು. ಇದನ್ನು ನೋಡಿ ನೆಟ್ಟಿಗರು ಬಿಚ್ಚಿಬಿದ್ದಿದ್ದರು. ಇನ್ನು ಮುಂದೆ ಶೂ ಧರಿಸುವಾಗ ಎರಡೆರಡು ಬಾರಿ ಪರಿಶೀಲಿಸಿ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದರು. ಆ ಘಟನೆ ಮಾಸುವ ಮುನ್ನವೇ ಈ ದುರಂತ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Narendra Modi Election: Narendra Modi Election: ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೆ ಬಹುಮತ ನೀಡಿರುವುದಕ್ಕೆ ದೇಶದ ಜನರಿಗೆ ನರೇಂದ್ರ ಮೋದಿ ಅವರು ಧನ್ಯವಾದ ತಿಳಿಸಿದರು. ಇನ್ನು ಪಕ್ಷದ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಅವರು ತಮ್ಮ ತಾಯಿಯನ್ನು ನೆನೆದರು

VISTARANEWS.COM


on

Narendra Modi Election
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು (NDA) ಸ್ಪಷ್ಟ ಬಹುಮತ ಸಾಧಿಸಿದ ಕಾರಣ ಬಿಜೆಪಿ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ನರೇಂದ್ರ ಮೋದಿ (Narendra Modi) ಮಾತನಾಡಿದರು. ಇದೇ ವೇಳೆ ಮಾತನಾಡಿದ (Narendra Modi Election) ಮೋದಿ, “ಮೂರನೇ ಅವಧಿಯಲ್ಲಿ ದೇಶವು ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗಲಿದೆ” ಎಂದರು. ಅಷ್ಟೇ ಅಲ್ಲ, ನರೇಂದ್ರ ಮೋದಿ ಅವರು ತಮ್ಮ ತಾಯಿಯನ್ನು ನೆನೆದು ಭಾವುಕರಾದರು.

“ನನ್ನ ತಾಯಿ ಅಗಲಿದ ಬಳಿಕ ಇದು ನನ್ನ ಮೊದಲ ಚುನಾವಣೆಯಾಗಿತ್ತು. ಆದರೆ, ದೇಶದ ಮೂಲೆ ಮೂಲೆಯಲ್ಲಿ, ಕೋಟ್ಯಂತರ ತಾಯಂದಿರು ನನ್ನನ್ನು ಮಗನಂತೆ ಸ್ವೀಕರಿಸಿದರು. ಹೆಣ್ಣುಮಕ್ಕಳು ನನಗೆ ಆಶೀರ್ವಾದ ಮಾಡಿದರು. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯರು ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿದರು. ಇಂತಹ ಅಭೂತಪೂರ್ವ ಬೆಳವಣಿಗೆಯನ್ನು ನಾನು ಎಂದಿಗೂ ಮರೆಯುವುದಿಲ್ಲ. ದೇಶದ ಕೋಟ್ಯಂತರ ಮಾತೆಯರು ನೀಡಿದ ಆಶೀರ್ವಾದ, ಪ್ರೇರಣೆಯು ನನ್ನ ಮನದಲ್ಲಿ ತುಂಬಿದೆ” ಎಂದು ಮೋದಿ ಹೇಳಿದರು.

ಭಾಷಣದ ವೇಳೆ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. “ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಪಕ್ಷಗಳು ಜೋರು ಧ್ವನಿಯಲ್ಲಿ ಮಾತನಾಡುತ್ತಿವೆ. ಆದರೆ, ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಗಳಿಗೆ ಗೊತ್ತಿಲ್ಲ, ಬಿಜೆಪಿಯೊಂದೇ ಗಳಿಸಿರುವಷ್ಟು ಸ್ಥಾನಗಳನ್ನು ಎಲ್ಲ ಪ್ರತಿಕ್ಷಗಳು ಒಗ್ಗೂಡಿ ಜಯಿಸಿಲ್ಲ. ಆದರೆ, ಮೂರನೇ ಅವಧಿಯಲ್ಲೂ ಎನ್‌ಡಿಎ ಸರ್ಕಾರವು ಉತ್ತಮ ಆಡಳಿತ ನೀಡಲಿದೆ. ದೇಶದಲ್ಲಿ ಹೊಸ ಅಧ್ಯಾಯ ಸೃಷ್ಟಿಯಾಗಲಿದೆ. ಇದು ನರೇಂದ್ರ ಮೋದಿಯ ಗ್ಯಾರಂಟಿ” ಎಂದು ಹೇಳಿದರು.

“10 ವರ್ಷಕ್ಕೂ ಮೊದಲು ದೇಶವು ಬದಲಾವಣೆ ಬಯಸುತ್ತಿತ್ತು. 2014ರಲ್ಲಿ ನಾಗರಿಕರು ನಿರಾಸೆಯ ಕಡಲಲ್ಲಿ ಮುಳುಗಿದ್ದರು. ಯುವಕರು ತಮ್ಮ ಭವಿಷ್ಯವನ್ನು ನೆನೆದುಕೊಂಡು ಆತಂಕದಲ್ಲಿದ್ದರು. ಬಡವರು ಸಂಕಷ್ಟದಲ್ಲಿದ್ದರು. ಅಂತಹ ಕಾಲಘಟದಲ್ಲಿ ಬಿಜೆಪಿ ಎಂಬ ಆಶಾವಾದವನ್ನು ಜನ ಆಯ್ಕೆ ಮಾಡಿದರು. ನಾವು ಕೂಡ ಕಳೆದ 10 ವರ್ಷಗಳಿಂದ ಪರಿಶ್ರಮ ವಹಿಸಿದೆವು. ಜನರ ಪರವಾಗಿ ಕೆಲಸ ಮಾಡಿದೆವು. ಇದೇ ಕಾರಣಕ್ಕೆ 2019ರಲ್ಲಿ ಜನ ನಮ್ಮನ್ನು ಆಯ್ಕೆ ಮಾಡಿದರು. ಈಗ 2024ರಲ್ಲೂ ಜನರ ಆಶೀರ್ವಾದ ಪಡೆಯಲು ದೇಶದ ಮೂಲೆ ಮೂಲೆ ಸುತ್ತಿದೆ. ಜನರು ಕೂಡ ಮೂರನೇ ಬಾರಿಗೆ ಎನ್‌ಡಿಎಗೆ ಜನರ ಬೆಂಬಲ ಸಿಕ್ಕಿದೆ. ಹಾಗಾಗಿ, ಜನರಿಗೆ ನಾನು ವಿನಮ್ರವಾಗಿ ಧನ್ಯವಾದ ತಿಳಿಸಲು ಬಯಸುತ್ತೇನೆ” ಎಂದರು.

ಇದನ್ನೂ ಓದಿ: Narendra Modi Election: 3ನೇ ಸಲ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ; ರಿಸಲ್ಟ್ ಬಳಿಕ ಮೋದಿ ಭಾವುಕ ಪೋಸ್ಟ್

Continue Reading

Lok Sabha Election 2024

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Election Results 2024: ದಕ್ಷಿಣ ಭಾರತದಲ್ಲಿ ಭರ್ಜರಿಯಾಗಿ ಗೆಲುವಿನ ಖಾತೆ ತೆರೆಯಬೇಕು ಎನ್ನುವ ಬಿಜೆಪಿ (BJP) ಕನಸಿಗೆ ತಮಿಳುನಾಡಿನ ಮತದಾರರು ಸ್ಪಂದಿಸಿಲ್ಲ ಎನ್ನುವುದು ಈ ರಿಸಲ್ಟ್‌ ಮೂಲಕ ಸ್ಪಷ್ಟವಾಗಿದೆ. ತಮಿಳುನಾಡಿನಲ್ಲಿ ಸೀಟು ಗೆಲ್ಲಬೇಕೆನ್ನುವ ಬಿಜೆಪಿ ಕನಸು ಕೈಗೂಡಿಲ್ಲ. ಅದಾಗ್ಯೂ ರಾಜ್ಯದಲ್ಲಿ ಬಿಜೆಪಿಗೆ ದೊರೆತ ಮತಗಳ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ.

VISTARANEWS.COM


on

Election Results 2024
Koo

ಚೆನ್ನೈ: ದಕ್ಷಿಣ ಭಾರತದಲ್ಲಿ ಭರ್ಜರಿಯಾಗಿ ಗೆಲುವಿನ ಖಾತೆ ತೆರೆಯಬೇಕು ಎನ್ನುವ ಬಿಜೆಪಿ (BJP) ಕನಸಿಗೆ ತಮಿಳುನಾಡಿನ ಮತದಾರರು ಸ್ಪಂದಿಸಿಲ್ಲ ಎನ್ನುವುದು ಈ ರಿಸಲ್ಟ್‌ ಮೂಲಕ ಸ್ಪಷ್ಟವಾಗಿದೆ. ಕೊನೆಗೂ ಕೇರಳದಲ್ಲಿ ಖಾತೆ ತೆರೆಯಲು ಯಶಸ್ವಿಯಾಗಿರುವ ಬಿಜೆಪಿ 1 ಸೀಟು ಗೆದ್ದುಕೊಂಡಿದೆ. ತ್ರಿಶೂರ್‌ನಲ್ಲಿ ನಟ ಸುರೇಶ್‌ ಗೋಪಿ ಗೆಲುವಿನ ನಗೆ ಬೀರಿದ್ದಾರೆ. ಇತ್ತ ತಮಿಳುನಾಡಿನಲ್ಲಿ ಸೀಟು ಗೆಲ್ಲಬೇಕೆನ್ನುವ ಬಿಜೆಪಿ ಕನಸು ಕೈಗೂಡಿಲ್ಲ. ಆದಾಗ್ಯೂ ರಾಜ್ಯದಲ್ಲಿ ಬಿಜೆಪಿಗೆ ದೊರೆತ ಮತಗಳ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ಪ್ರತಿಪಕ್ಷಗಳ ʼಇಂಡಿಯಾʼ ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ಆಡಳಿತ ರೂಢ ಡಿಎಂಕೆ (DMK) ಮುನ್ನಡೆ ಕಾಯ್ದುಕೊಂಡಿದೆ.

ಸುಮಾರು 4 ಪಟ್ಟು ಹೆಚ್ಚಾದ ಮತ ಗಳಿಕೆ

ವಿಶೇಷ ಎಂದರೆ ಬಿಜೆಪಿಗೆ ಇದೇ ಮೊದಲ ಬಾರಿಗೆ ತಮಿಳುನಾಡಿನಲ್ಲಿ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ವೋಟಿಂಗ್‌ ಶೇರ್‌ನಲ್ಲಿ ಸುಮಾರು 4 ಪಟ್ಟು ಹೆಚ್ಚಳ ದಾಖಲಿಸಿದೆ. ಕಳೆದ ಬಾರಿ ಶೇ. 3.57ರಷ್ಟಿದ್ದ ಮತ ಗಳಿಕೆಯ ಪ್ರಮಾಣ ಶೇ. 11.04ಕ್ಕೆ ತಲುಪಿದೆ. ಸದ್ಯ ಇದು ಬಿಜೆಪಿಗೆ ದೊರೆತ ಜನ ಬೆಂಬಲದ ಪ್ರತೀಕ ಎಂದೇ ವಿಶ್ಲೇಷಿಸಲಾಗುತ್ತಿದೆ.

ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುವ ತಮಿಳುನಾಡಿನಲ್ಲಿ 1967ರಿಂದ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಸ್ಪರ್ಧೆ ನಡೆಯುತ್ತಿದೆ. ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ 10ಕ್ಕಿಂತ ಹೆಚ್ಚು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದರು. ಈ ಬಾರಿ ಬಿಜೆಪಿ 23 ಸೀಟುಗಳಲ್ಲಿ ಸ್ಪರ್ಧಿಸಿತ್ತು.

ಸ್ಪರ್ಧೆ ನೀಡಿದ ಅಣ್ಣಾಮಲೈ

ತಮಿಳುನಾಡಿನ ಕೊಯಮತ್ತೂರು (Coimbatore) ಕ್ಷೇತ್ರದಿಂದ ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಕಣಕ್ಕೆ ಇಳಿದಿದ್ದರು. ಆ ಮೂಲಕ ಕಾರ್ಯಕರ್ತರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದರು. ಅಲ್ಲದೆ ಅವರ ಸ್ಪರ್ಧೆಯಿಂದ ಈ ಕ್ಷೇತ್ರ ದೇಶದ ಗಮನ ಸೆಳೆದಿತ್ತು. ಸಮೀಕ್ಷೆಗಳೂ ಅಣ್ಣಾಮಲೈ ಜಯ ಸಾಧಿಸಬಹುದು ಎಂದು ಊಹಿಸಿದ್ದವು. ಆದರೆ ಈ ನಿರೀಕ್ಷೆ ಹುಸಿಯಾಗಿದೆ. ಅಣ್ಣಾಮಲೈ ತಮಿಳುನಾಡಿನಲ್ಲಿ ಕಮಲ ಅರಳಿಸಲು ವಿಫಲರಾಗಿದ್ದಾರೆ. ಇಲ್ಲಿ ಡಿಎಂಕೆಯಿಂದ ಸ್ಪರ್ಧಿಸಿದ್ದ ಗಣಪತಿ ಪಿ. ರಾಜ್‌ಕುಮಾರ್ ಜಯ ದಾಖಲಿಸಿದ್ದಾರೆ. ವಿಶೇಷ ಎಂದರೆ ಇಂದು (ಜೂನ್‌ 4) ಅಣ್ಣಾಮಲೈ ಅವರ ಹುಟ್ಟುಹಬ್ಬ. ಜನ್ಮದಿನದ ಸಂಭ್ರಮ ಸೋಲಿನ ಕಹಿಯೊಂದಿಗೆ ಮರೆಯಾಗಿದೆ.

2019ರಲ್ಲಿಯೂ ಇಲ್ಲಿ ಡಿಎಂಕೆ ತನ್ನ ಗೆಲುವು ಸಾಧಿಸಿತ್ತು. 39 ಸ್ಥಾನಗಳ ಪೈಕಿ 38 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿಯೂ ಡಿಎಂಕೆ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಲ್ಲಿ ಡಿಎಂಕೆ, ಕಾಂಗ್ರೆಸ್, ಎಡಪಕ್ಷಗಳು, ದಲಿತ ಗುಂಪುಗಳು ಮತ್ತು ಅಲ್ಪಸಂಖ್ಯಾತ ಪಕ್ಷಗಳನ್ನು ಮೈತ್ರಿ ಮಾಡಿಕೊಂಡಿವೆ.

ಕಣದಲ್ಲಿದ್ದ ಪ್ರಮುಖರು

ಮಣಿ ಎ. (ಡಿಎಂಕೆ), ಎಂ.ಕೆ. ಕೃಷ್ಣ ಪ್ರಸಾದ್ (ಕಾಂಗ್ರೆಸ್), ವೆಂಕಟೇಶನ್ ಎಸ್. (ಸಿಪಿಐ (ಎಂ)), ಎ. ರಾಜಾ (ಡಿಎಂಕೆ), ಮುರಸೋಳಿ ಎಸ್. (ಡಿಎಂಕೆ), ಅಣ್ಣಾಮಲೈ (ಬಿಜೆಪಿ), ರಾಧಿಕಾ ಶರತ್‌ ಕುಮಾರ್‌ (ಬಿಜೆಪಿ), ಕನಿಮೋಳಿ (ಡಿಎಂಕೆ), ದಯಾನಿಧಿ ಮಾರನ್ (ಡಿಎಂಕೆ), ಸ್ಟಾಲಿನ್‌ (ಡಿಎಂಕೆ), ತಮಿಳಿಸಾಯಿ ಸುಂದರರಾಜನ್‌ (ಬಿಜೆಪಿ).

ಇದನ್ನೂ ಓದಿ: Election Results 2024: ಶಶಿ ತರೂರ್‌ ವಿರುದ್ಧ ವೀರೋಚಿತ ಸೋಲು ಕಂಡ ಬಿಜೆಪಿಯ ರಾಜೀವ್‌ ಚಂದ್ರಶೇಖರ್‌

Continue Reading

ದೇಶ

Narendra Modi Election: 3ನೇ ಅವಧಿಯಲ್ಲಿ ಹೊಸ ಅಧ್ಯಾಯ ಸೃಷ್ಟಿ; ಫಲಿತಾಂಶದ ಬೆನ್ನಲ್ಲೇ ಮೋದಿ ವಿಶ್ವಾಸ

Narendra Modi Election: ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೆ ಬಹುಮತ ನೀಡಿರುವುದಕ್ಕೆ ದೇಶದ ಜನರಿಗೆ ನರೇಂದ್ರ ಮೋದಿ ಅವರು ಧನ್ಯವಾದ ತಿಳಿಸಿದರು. ಇನ್ನು ಪಕ್ಷದ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದರು.

VISTARANEWS.COM


on

Narendra Modi Election
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ ಫಲಿತಾಂಶವು (Lok Sabha Election 2024) ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತಿದೆ. ಹಾಗಾಗಿ, ನರೇಂದ್ರ ಮೋದಿ (Narendra Modi) ಅವರು ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. “ದೇಶದ ಜನರೇ ಜನಾರ್ದನರು. ಅವರ ತೀರ್ಪನ್ನು ಸ್ವಾಗತಿಸುತ್ತ ಉತ್ತಮ ಆಡಳಿತ ನೀಡುವತ್ತ ಮುಂದೆ ಸಾಗೋಣ. ಮೂರನೇ ಅವಧಿಯಲ್ಲಿ ಹೊಸ ಅಧ್ಯಾಯ ಸೃಷ್ಟಿಸೋಣ” ಎಂದು ನರೇಂದ್ರ ಮೋದಿ ಹೇಳಿದರು.

“ದೇಶದ ನಾಗರಿಕರು ಬಿಜೆಪಿ ಹಾಗೂ ಎನ್‌ಡಿಎ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಇದು ದೇಶದ ಪ್ರಜಾಪ್ರಭುತ್ವದ ಗೆಲುವಾಗಿದೆ. ಇದು ಭಾರತದ ಸಂವಿಧಾನಕ್ಕೆ ಸಿಕ್ಕ ಗೆಲುವಾಗಿದೆ. ಇದು ವಿಕಸಿತ ಭಾರತದ ಉದ್ದೇಶದ ವಿಜಯವಾಗಿದೆ. ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂಬ ಮಂತ್ರದ ಜಯವಾಗಿದೆ. ದೇಶದ 140 ಕೋಟಿ ಜನರ ಗೆಲುವಾಗಿದೆ” ಎಂದು ತಿಳಿಸಿದರು.

“ದೇಶದಲ್ಲಿ ಎನ್‌ಡಿಎ ಸರ್ಕಾರವು ಎರಡು ಅವಧಿಗೆ ಆಡಳಿತ ನಡೆಸಿ, ಮೂರನೇ ಅವಧಿಗೆ ಆಡಳಿತ ನಡೆಸಲು ಸಜ್ಜಾಗಿದೆ. ದೇಶದೆಲ್ಲೆಡೆ ಎನ್‌ಡಿಎಗೆ ಜನರಿಂದ ಉತ್ತಮ ಸ್ಪಂದನೆ, ಬೆಂಬಲ ವ್ಯಕ್ತವಾಗಿದೆ. ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶದಲ್ಲಿ ನಮಗೆ ಭಾರಿ ಬೆಂಬಲ ವ್ಯಕ್ತವಾಗಿದ್ದು, ಕಾಂಗ್ರೆಸ್‌ ಸೋತು ಸುಣ್ಣವಾಗಿದೆ. ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದೆ. ಬಿಜೆಪಿಯ ಮುಖ್ಯಮಂತ್ರಿಯು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಒಡಿಶಾದಲ್ಲಿ ಹೆಚ್ಚಿನ ಕ್ಷೇತ್ರಗಳು ಸಿಕ್ಕಿವೆ. ಕೇರಳದಲ್ಲೂ ಬಿಜೆಪಿ ಗೆಲುವು ಸಿಕ್ಕಿದೆ. ಕೇರಳದ ಕಾರ್ಯಕರ್ತರು ಬಲಿದಾನ ನೀಡಿದ್ದಾರೆ. ಪೀಳಿಗೆಗಳವರೆಗೆ ಅವರು ಜನರ ಸೇವೆ ಜತೆಗೆ ಸಂಘರ್ಷ ಎದುರಿಸಿದ್ದಾರೆ. ಪೀಳಿಗೆಗಳವರೆಗೆ ಇಂತಹ ಕ್ಷಣಕ್ಕಾಗಿ ಅವರು ಕಾಯುತ್ತಿದ್ದರು. ಈಗ ಅವರು ಕನಸು ನನಸಾಗಿದೆ” ಎಂದು ಹೇಳಿದರು.

“10 ವರ್ಷಕ್ಕೂ ಮೊದಲು ದೇಶವು ಬದಲಾವಣೆ ಬಯಸುತ್ತಿತ್ತು. 2014ರಲ್ಲಿ ನಾಗರಿಕರು ನಿರಾಸೆಯ ಕಡಲಲ್ಲಿ ಮುಳುಗಿದ್ದರು. ಯುವಕರು ತಮ್ಮ ಭವಿಷ್ಯವನ್ನು ನೆನೆದುಕೊಂಡು ಆತಂಕದಲ್ಲಿದ್ದರು. ಬಡವರು ಸಂಕಷ್ಟದಲ್ಲಿದ್ದರು. ಅಂತಹ ಕಾಲಘಟದಲ್ಲಿ ಬಿಜೆಪಿ ಎಂಬ ಆಶಾವಾದವನ್ನು ಜನ ಆಯ್ಕೆ ಮಾಡಿದರು. ನಾವು ಕೂಡ ಕಳೆದ 10 ವರ್ಷಗಳಿಂದ ಪರಿಶ್ರಮ ವಹಿಸಿದೆವು. ಜನರ ಪರವಾಗಿ ಕೆಲಸ ಮಾಡಿದೆವು. ಇದೇ ಕಾರಣಕ್ಕೆ 2019ರಲ್ಲಿ ಜನ ನಮ್ಮನ್ನು ಆಯ್ಕೆ ಮಾಡಿದರು. ಈಗ 2024ರಲ್ಲೂ ಜನರ ಆಶೀರ್ವಾದ ಪಡೆಯಲು ದೇಶದ ಮೂಲೆ ಮೂಲೆ ಸುತ್ತಿದೆ. ಜನರು ಕೂಡ ಮೂರನೇ ಬಾರಿಗೆ ಎನ್‌ಡಿಎಗೆ ಜನರ ಬೆಂಬಲ ಸಿಕ್ಕಿದೆ. ಹಾಗಾಗಿ, ಜನರಿಗೆ ನಾನು ವಿನಮ್ರವಾಗಿ ಧನ್ಯವಾದ ತಿಳಿಸಲು ಬಯಸುತ್ತೇನೆ” ಎಂದರು.

ತಾಯಿಯ ನೆನೆದ ಮೋದಿ

“ನನ್ನ ತಾಯಿ ಅಗಲಿದ ಬಳಿಕ ಇದು ನನ್ನ ಮೊದಲ ಚುನಾವಣೆಯಾಗಿತ್ತು. ಆದರೆ, ದೇಶದ ಮೂಲೆ ಮೂಲೆಯಲ್ಲಿ, ಕೋಟ್ಯಂತರ ತಾಯಂದಿರು ನನ್ನನ್ನು ಮಗನಂತೆ ಸ್ವೀಕರಿಸಿದರು. ಹೆಣ್ಣುಮಕ್ಕಳು ನನಗೆ ಆಶೀರ್ವಾದ ಮಾಡಿದರು. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯರು ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿದರು. ಇಂತಹ ಅಭೂತಪೂರ್ವ ಬೆಳವಣಿಗೆಯನ್ನು ನಾನು ಎಂದಿಗೂ ಮರೆಯುವುದಿಲ್ಲ. ದೇಶದ ಕೋಟ್ಯಂತರ ಮಾತೆಯರು ನೀಡಿದ ಆಶೀರ್ವಾದ, ಪ್ರೇರಣೆಯು ನನ್ನ ಮನದಲ್ಲಿ ತುಂಬಿದೆ” ಎಂದು ಮೋದಿ ಹೇಳಿದರು.

ಪ್ರತಿಪಕ್ಷಗಳಿಗೆ ಮೋದಿ ಟಾಂಗ್‌

ಭಾಷಣದ ವೇಳೆ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. “ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಪಕ್ಷಗಳು ಜೋರು ಧ್ವನಿಯಲ್ಲಿ ಮಾತನಾಡುತ್ತಿವೆ. ಆದರೆ, ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಗಳಿಗೆ ಗೊತ್ತಿಲ್ಲ, ಬಿಜೆಪಿಯೊಂದೇ ಗಳಿಸಿರುವಷ್ಟು ಸ್ಥಾನಗಳನ್ನು ಎಲ್ಲ ಪ್ರತಿಕ್ಷಗಳು ಒಗ್ಗೂಡಿ ಜಯಿಸಿಲ್ಲ. ಆದರೆ, ಮೂರನೇ ಅವಧಿಯಲ್ಲೂ ಎನ್‌ಡಿಎ ಸರ್ಕಾರವು ಉತ್ತಮ ಆಡಳಿತ ನೀಡಲಿದೆ. ದೇಶದಲ್ಲಿ ಹೊಸ ಅಧ್ಯಾಯ ಸೃಷ್ಟಿಯಾಗಲಿದೆ. ಇದು ನರೇಂದ್ರ ಮೋದಿಯ ಗ್ಯಾರಂಟಿ” ಎಂದು ಹೇಳಿದರು.

“ತಂತ್ರಜ್ಞಾನ, ರಫ್ತು, ಮೂಲ ಸೌಕರ್ಯ, ಬಾಹ್ಯಾಕಾಶ, ದೇಶದ ರಕ್ಷಣಾ ವ್ಯವಸ್ಥೆ ಸೇರಿ ಸರ್ವ ಕ್ಷೇತ್ರಗಳ ಏಳಿಗೆಗೆ ಶ್ರಮಿಸುತ್ತೇವೆ. ನಮ್ಮ ಯುವಕರಿಗೆ ಶಿಕ್ಷಣ, ಉದ್ಯೋಗ, ಕೌಶಲ ಅಭಿವೃದ್ಧಿ, ರೈತರ ಆದಾಯ ಹೆಚ್ಚಿಸುವುದು, ಕೃಷಿ ಉತ್ಪನ್ನ ಹೆಚ್ಚಿಸುವುದು, ರೈತರು ಆತ್ಮನಿರ್ಭರರಾಗಲು ಏನು ಬೇಕೋ ಎಲ್ಲವನ್ನೂ ಮೂರನೇ ಅವಧಿಯ ಆಡಳಿತದ ವೇಳೆ ಮಾಡಲಿದ್ದೇವೆ” ಎಂದು ಭರವಸೆ ನೀಡಿದರು.

ಚುನಾವಣೆ ಆಯೋಗಕ್ಕೆ ಅಭಿನಂದನೆ

“ನನ್ನ ಸಹೋದರ, ಸಹೋದರಿಯರೇ, ಇಂದು ಚುನಾವಣಾ ಆಯೋಗಕ್ಕೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆ ಆಯೋಗವು ಜಗತ್ತಿನಲ್ಲೇ ಅತಿ ದೊಡ್ಡ ಚುನಾವಣೆಯನ್ನು ಯಶಸ್ವಿಯಾಗಿ ಕೈಗೊಂಡಿದೆ. ಸುಮಾರು 1 ಕೋಟಿ ಮತದಾರರು, 11 ಲಕ್ಷ ಮತಕೇಂದ್ರಗಳು, 1.5 ಕೋಟಿ ಸಬ್ಬಂದಿ ಸೇರಿ ಎಲ್ಲರೂ ಬೇಸಿಗೆಯ ಬಿಸಿಲಿನಲ್ಲೂ ಕಾರ್ಯನಿರ್ವಹಿಸಿದ್ದಾರೆ. ಇದರಿಂದಲೇ ಚುನಾವಣೆಯು ಯಶಸ್ವಿಯಾಗಿದೆ. ಚುನಾವಣೆ ಆಯೋಗವು ದಕ್ಷತೆಯಿಂದ ಕೆಲಸ ಮಾಡಿದ ಕಾರಣ ಬೃಹತ್‌ ಪ್ರಜಾಪ್ರಭುತ್ವದ ಬೃಹತ್‌ ಚುನಾವಣೆಯು ವಿಶ್ವಾಸಾರ್ಹತೆಯಿಂದ ಮುಗಿದಿದೆ. ಇದರ ಶ್ರೇಯಸ್ಸು ಆಯೋಗಕ್ಕೇ ಸಲ್ಲಬೇಕು” ಎಂಬುದಾಗಿ ನರೇಂದ್ರ ಮೋದಿ ಬಣ್ಣಿಸಿದರು.

ಇದನ್ನೂ ಓದಿ: Narendra Modi Election: 3ನೇ ಸಲ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ; ರಿಸಲ್ಟ್ ಬಳಿಕ ಮೋದಿ ಭಾವುಕ ಪೋಸ್ಟ್

Continue Reading

ಕರ್ನಾಟಕ

NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

NEET UG result 2024: ಜೂನ್‌ 4ರಂದು ನೀಟ್‌ ಯುಜಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌ ಆಗಿದ್ದಾರೆ.

VISTARANEWS.COM


on

By

NEET UG Result 2024
Koo

ಬೆಂಗಳೂರು/ನವದೆಹಲಿ: ಮೇ 5ರಂದು ನಡೆದಿದ್ದ ನೀಟ್‌ ಪರೀಕ್ಷೆಯ (NEET UG 2024) ಫಲಿತಾಂಶ ಜೂ.4ರಂದು ಪ್ರಕಟಗೊಂಡಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ದೇಶದಲ್ಲಿ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪಟ್ಟಿಯಲ್ಲಿ 6 ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದಿದ್ದಾರೆ. ಕರ್ನಾಟಕದ ವಿ.ಕಲ್ಯಾಣ್, ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಪದ್ಮನಾಭ್ ಮೆನನ್, ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಸ್ಥಾನದಲ್ಲಿದ್ದಾರೆ.

NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers
NEET UG Result 2024 Out of the 100 students who secured the first rank six from Karnataka are NEET toppers

ಅಂದಹಾಗೇ, ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET UG Results 2024: ನೀಟ್‌ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಹೀಗೆ ಮಾಡಿ

ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದಿದ್ದ ನೀಟ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಮರುಪರಿಶೀಲನೆ ಅಥವಾ ಮರುಮೌಲ್ಯಮಾಪನಕ್ಕೆ ಅವಕಾಶವಿಲ್ಲ ಎನ್ನಲಾಗಿದೆ. ಇನ್ನೂ ನೀಟ್‌ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಮೇ 29 ರಂದು ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಜೂನ್ 3 ರಂದು ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಬಿಡುಗಡೆಯಾಗಿರುವ ಅಂತಿಮ ಕೀ ಉತ್ತರಗಳ ಆಧಾರದ ಮೇಲೆ ನೀಟ್ ಯುಜಿ 2024ರ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi Election
ದೇಶ17 mins ago

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Karnataka Election Results 2024
ಕರ್ನಾಟಕ17 mins ago

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Novak Djokovic
ಕ್ರೀಡೆ26 mins ago

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Election Results 2024
Lok Sabha Election 202442 mins ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Narendra Modi Election
ದೇಶ50 mins ago

Narendra Modi Election: 3ನೇ ಅವಧಿಯಲ್ಲಿ ಹೊಸ ಅಧ್ಯಾಯ ಸೃಷ್ಟಿ; ಫಲಿತಾಂಶದ ಬೆನ್ನಲ್ಲೇ ಮೋದಿ ವಿಶ್ವಾಸ

Hanuma Vihari
ಕ್ರಿಕೆಟ್1 hour ago

Hanuma Vihari: 2 ತಿಂಗಳ ಬಳಿಕ ನಿರಾಕ್ಷೇಪಣಾ ಪತ್ರ ಪಡೆದ ಹನುಮ ವಿಹಾರಿ

NEET UG Result 2024
ಕರ್ನಾಟಕ2 hours ago

NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

Mysore election results 2024
ಕರ್ನಾಟಕ2 hours ago

Mysore Election Result 2024: ಮೈಸೂರು-ಕೊಡಗು ಲೋಕಸಭಾ ಚುನಾವಣೆ; ಯಾವ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತ?

Election Results 2024
Lok Sabha Election 20242 hours ago

Election Results 2024: ಶಶಿ ತರೂರ್‌ ವಿರುದ್ಧ ವೀರೋಚಿತ ಸೋಲು ಕಂಡ ಬಿಜೆಪಿಯ ರಾಜೀವ್‌ ಚಂದ್ರಶೇಖರ್‌

Election Results 2024
ಕ್ರಿಕೆಟ್2 hours ago

Election Results 2024: ಪಶ್ಚಿಮ ಬಂಗಾಳದಲ್ಲಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್​ಗೂ ಜಯಭೇರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ15 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌