Supreme Court: ದ್ವೇಷ ಭಾಷಣ ತಡೆಗೆ ಸರ್ಕಾರಕ್ಕೆ ಶಕ್ತಿ ಇಲ್ಲವೇ?: ಕೇಂದ್ರ ವಿರುದ್ಧ ಸುಪ್ರೀಂ ಕೋರ್ಟ್ ಗರಂ Vistara News
Connect with us

ಕೋರ್ಟ್

Supreme Court: ದ್ವೇಷ ಭಾಷಣ ತಡೆಗೆ ಸರ್ಕಾರಕ್ಕೆ ಶಕ್ತಿ ಇಲ್ಲವೇ?: ಕೇಂದ್ರ ವಿರುದ್ಧ ಸುಪ್ರೀಂ ಕೋರ್ಟ್ ಗರಂ

Supreme Court: ದ್ವೇಷ ಭಾಷಣ ತಡೆಗೆ ವ್ಯವಸ್ಥೆಯನ್ನು ರೂಪಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರ ವಿರುದ್ದ ಸುಪ್ರೀಂ ಕೋರ್ಟ್ ಗರಂ ಆಗಿದೆ. ಈ ವಿಷಯದಲ್ಲಿ ಸರ್ಕಾರವು ಶಕ್ತಿಹೀನವಾಗಿದೆ ಎಂದು ಆರೋಪಿಸಿದೆ.

VISTARANEWS.COM


on

Supreme Court questioned the Centre over ED chief extension of service
Koo

ನವದೆಹಲಿ: ಕಾಲಮಿತಿಯೊಳಗೇ ದೇಶಾದ್ಯಂತ ದ್ವೇಷ ಭಾಷಣವನ್ನು ಹತ್ತಿಕ್ಕಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈ ವಿಷಯದಲ್ಲಿ ಸರ್ಕಾರವು ಶಕ್ತಿಹೀನವಾಗಿದೆ(State is Impotent) ಎಂದು ಸುಪ್ರೀಂ ಕೋರ್ಟ್‌ (Supreme Court) ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ರ್ಯಾಲಿಗಳಲ್ಲಿ ದ್ವೇಷದ ಭಾಷಣಗಳ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾದ ಆರೋಪದ ಮೇಲೆ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಜಸ್ಟೀಸ್ ಜೋಸಫ್ ಅವರು, ಈ ವಿಷಯದಲ್ಲಿ ಮೌನವಾಗಿರುವುದಾದರೆ ನಮಗೆ ಸರ್ಕಾರವೇಕೆ ಬೇಕು ಎಂದು ಪ್ರಶ್ನಿಸಿದರು.

ಭಾತೃತ್ವ ಮತ್ತು ಸಹಿಷ್ಣುತೆಯ ಮಹತ್ವದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜಸ್ಟೀಸ್ ಜೋಸೆಫ್,
ಪ್ರತಿದಿನ ನೀವು ನ್ಯಾಯಾಲಯದಲ್ಲಿ ಕುಳಿತುಕೊಳ್ಳುತ್ತೀರಿ ಮತ್ತು ಸುತ್ತಮುತ್ತಲಿನ ಪ್ರತಿಯೊಬ್ಬರೂ ನಿಮ್ಮ ಬಗ್ಗೆ ಕೆಟ್ಟದ್ದನ್ನು ಹೇಳುತ್ತಾರೆಂದು ಭಾವಿಸೋಣ, ಮನುಷ್ಯನಿಗೆ ಅತ್ಯಂತ ಮುಖ್ಯವಾದ ವಿಷಯವೆಂದರೆ ಘನತೆ. ನಿತ್ಯವೂ ಅದನ್ನು ಹಾಳುಮಾಡುತ್ತಿದ್ದರೆ, ಪಾಕಿಸ್ತಾನಕ್ಕೆ ಹೋಗು ಎಂಬಂತೆ ಕೆಲವು ಹೇಳಿಕೆಗಳನ್ನು ನೀಡಲಾಗುತ್ತಿದೆ. ಈ ವ್ಯಕ್ತಿಗಳು ನಿಜವಾಗಿಯೂ ಈ ದೇಶವನ್ನು ಆರಿಸಿಕೊಂಡರು. ಅವರು ನಮ್ಮ ಸಹೋದರ ಮತ್ತು ಸಹೋದರಿಯರಂತೆ. ಒಂದೊಮ್ಮೆ ನಾವು ಸೂಪರ್ ಪವರ್ ಆಗಲು ಬಯಸಿದರೆ, ಮೊದಲು ದೇಶದಲ್ಲಿ ಕಾನೂನು ಅನುಷ್ಠಾನ ನಡೆಯಬೇಕು ಎಂದು ಅವರು ಹೇಳಿದರು.

ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮಹ್ತಾ ಅವರು, ಅರ್ಜಿದಾರರು ಈ ಪ್ರಕರಣದಲ್ಲಿ ಸೆಲೆಕ್ಟಿವ್ ಆಗಿ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿದರು. ಅರ್ಜಿದಾರರಾಗಿರುವ ವ್ಯಕ್ತಿ ತನ್ನ ಸ್ವಂತ ರಾಜ್ಯದ (ಕೇರಳ) ನ್ಯಾಯಾಲಯದ ಮುಂದೆ ನಿದರ್ಶನಗಳನ್ನು ಕೋರುತ್ತಿಲ್ಲ ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ ಮಾತ್ರ ದ್ವೇಷ ಭಾಷಣಗಳ ಪ್ರಕರಣಗಳನ್ನು ಪರಿಗಣಿಸಬಾರದು. ಆದರೆ ಕೇರಳ ಮತ್ತು ತಮಿಳುನಾಡಿನಂತಹ ರಾಜ್ಯಗಳಲ್ಲಿ ಇದೇ ರೀತಿಯ ನಿದರ್ಶನಗಳನ್ನು ನೋಡಬೇಕು ಎಂಬ ಸಂಗತಿಯನ್ನು ಕೋರ್ಟ್ ಗಮನಕ್ಕೆ ತರಲಾಯಿತು.

ಇದನ್ನೂ ಓದಿ: Supreme Court: ದ್ವೇಷ ಭಾಷಣದ ಆರೋಪ, ಹಿಂದೂ ಜನ್ ಆಕ್ರೋಶ್ ಸಭೆ ಚಿತ್ರೀಕರಿಸಲು ಕೋರ್ಟ್ ಸೂಚನೆ

ಕೇರಳದಲ್ಲಿ ಹಿಂದೂಗಳ ವಿರುದ್ಧ ದ್ವೇಷ ಭಾಷಣಗಳನ್ನು ಮಾಡಲಾಗುತ್ತಿದೆ ಎಂದು ಸಂಗತಿಯನ್ನು ಹೈಲೈಟ್ ಮಾಡಿದ ತುಷಾರ್ ಮಹ್ತಾ ಅವರು, ನ್ಯಾಯಾಲಯವು ಈ ಬಗ್ಗೆ ಯಾಕೆ ಸ್ವಯಂ ಆಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲಿಲ್ಲ ಎಂದು ಪ್ರಶ್ನಿಸಿದರು. ಫೆಬ್ರವರಿ 5 ರಂದು ಮುಂಬೈನಲ್ಲಿ ಹಿಂದೂ ಜನ ಆಕ್ರೋಶ್ ಸಭಾ ಆಯೋಜಿಸಿದ್ದ ಕಾರ್ಯಕ್ರಮವನ್ನು ವಿಡಿಯೋಗ್ರಾಫ್ ಮಾಡಿ ವರದಿ ಸಲ್ಲಿಸುವಂತೆ ಫೆಬ್ರವರಿ ಮೊದಲ ವಾರದಲ್ಲಿ ಸುಪ್ರೀಂ ಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕೋರ್ಟ್

Allahabad High Court: ದೀರ್ಘ ಕಾಲದವರೆಗೆ ಸಂಗಾತಿಗೆ ಸೆಕ್ಸ್ ನಿರಾಕರಿಸಿದರೆ, ಅದು ಮಾನಸಿಕ ಕ್ರೌರ್ಯ! ಕೋರ್ಟ್ ಹೀಗೆ ಹೇಳಿದ್ದೇಕೆ?

Allahabad High Court: ಉತ್ತರ ಪ್ರದೇಶದ ಕೌಟುಂಬಿಕ ನ್ಯಾಯಾಲಯವೊಂದು ಡಿವೋರ್ಸ್ ನೀಡಲು ನಿರಾಕರಿಸಿದ ಬೆನ್ನಲ್ಲೇ ವ್ಯಕ್ತಿಯೊಬ್ಬರು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ದೀರ್ಘ ಕಾಲದವರೆಗೆ ತಮ್ಮ ಹೆಂಡತಿ ಜತೆ ಭೌತಿಕ ಸಂಪರ್ಕ ನಡೆಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು.

VISTARANEWS.COM


on

Edited by

Denying sex to spouse for long time is mental cruelty Says Allahabad High court
Koo

ಅಲಹಾಬಾದ್, ಉತ್ತರ ಪ್ರದೇಶ: ದೀರ್ಘ ಕಾಲದವರೆಗೆ, ಯಾವುದೇ ಕಾರಣವಿಲ್ಲದೇ ಸಂಗಾತಿಗೆ(ಗಂಡ/ಹೆಂಡತಿ) ಸೆಕ್ಸ್ ನಿರಾಕರಿಸಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ (mental cruelty) ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ (Allahabad High Court) ಅಭಿಪ್ರಾಯಪಟ್ಟಿದೆ. ಕೌಟುಂಬಿಕ ನ್ಯಾಯಾಲಯವು ಡಿವೋರ್ಸ್ (divorce) ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು, ಸಂಗಾತಿಯೊಂದಿಗೆ ದೀರ್ಘ ಕಾಲದವರೆಗೆ ಸೆಕ್ಸ್ ಮಾಡದಿದ್ದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮನಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿತು.

ನ್ಯಾಯಾಲಯಕ್ಕೆ ಸಲ್ಲಿಸಿದ ದಾಖಲೆಗಳಿಂದ, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಅರ್ಜಿದಾರರು ದೀರ್ಘ ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆಂಬುದು ಖಾತ್ರಿಯಾಗುತ್ತದೆ. ವೈವಾಹಿಕ ಹೊಣೆಗಾರಿಕೆಯನ್ನು ನಿಭಾಯಿಸಲು ಪತ್ನಿಯು ಸ್ಪಷ್ಟವಾಗಿ ನಿರಾಕರಿಸಿದ್ದಾರೆಂದು ತಿಳಿದು ಬರುತ್ತದೆ ಎಂದು ನ್ಯಾಯಾಲಯವು ಹೇಳಿದೆ.

1979ರಲ್ಲಿ ದಂಪತಿಯು ವಿವಾಹವಾಗಿದ್ದರು. 7 ವರ್ಷದ ಬಳಿಕ ಗೌನಾ (ಉತ್ತರ ಭಾರತದಲ್ಲಿ ಆಚರಣೆಯಲ್ಲಿರುವ ಪದ್ಧತಿ) ಸಮಾರಂಭದ ಬಳಿಕ ದಂಪತಿ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದರು. ವೈವಾಹಿಕ ಜೀವನದ ಹೊಣೆಗಾರಿಕೆಯನ್ನು ನಿಭಾಯಿಸಲು ಹೆಂಡತಿ ನಿರಾಕರಿಸಿದ್ದಾಳೆ. ಅಲ್ಲದೇ ಮನೆಯಲ್ಲೇ ತನ್ನ ಪೋಷಕರನ್ನು ಬಿಟ್ಟು ಹೋಗಿದ್ದಾಳೆಂದು ಅರ್ಜಿದಾರರು ದೂರಿನಲ್ಲಿ ತಿಳಿಸಿದ್ದಾರೆ.

ಹೆಂಡತಿಯ ಮನವೊಲಿಸುವ ಅನೇಕ ಪ್ರಯತ್ನಗಳನ್ನು ಅರ್ಜಿದಾರರು ಮಾಡಿದ್ದಾರೆ. ಆದರೆ, ಗಂಡನ ಜತೆಗೆ ಯಾವುದೇ ಭೌತಿಕ ಸಂಪರ್ಕ ಹೊಂದಲು ಹೆಂಡತಿ ನಿರಾಕರಿಸಿದ್ದಾಳೆ. 1994ರ ಜುಲೈ ತಿಂಗಳಲ್ಲಿ ಅರ್ಜಿದಾರ ತನ್ನ ಹೆಂಡತಿಗೆ 22,000 ರೂ. ಜೀವನಾಂಶ ಪಾವತಿಸಿ, ಪಂಚಾಯ್ತಿಯ ಮುಂದೆ ಪರಸ್ಪರ ವಿಚ್ಛೇದನ ಪಡೆದುಕೊಂಡಿದ್ದರು. ಬಳಿಕ ಆಕೆ, ಬೇರೋಬ್ಬನನ್ನು ಮದುವೆಯಾಗಿದ್ದಳು.

ಇದನ್ನೂ ಓದಿ: 13 ವರ್ಷದ ಹುಡುಗನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ, ಮಗು ಹೆತ್ತ 31 ವರ್ಷದ ಮಹಿಳೆ ಜೈಲು ಶಿಕ್ಷೆಯಿಂದ ಪಾರು!

ಇಷ್ಟೆಲ್ಲ ಘಟನೆಗಳು ನಡೆದ ಬಳಿಕ ಪತಿ, ಮಾನಸಿಕ ಕ್ರೌರ್ಯ ಮತ್ತು ಪರಿತ್ಯಕ್ತ ಆಧಾರದ ಮೇಲೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಕೌಟುಂಬಿಕ ನ್ಯಾಯಾಲಯವು ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನ ನೀಡಲು ನಿರಾಕರಿಸಿತು. ತನ್ನ ವಿಚ್ಛೇದನ ಅರ್ಜಿಯನ್ನು ವಜಾಗೊಳಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶದ ವಿರುದ್ಧ ನೊಂದ ಅವರು ಅಲಹಾಬಾದ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕರ್ನಾಟಕ

Karnataka High court: ಡಿಎನ್‌ಎ ವರದಿ ಇಲ್ಲದ ಕಾರಣಕ್ಕೆ ಅತ್ಯಾಚಾರಿಯ ಖುಲಾಸೆ; ಆದೇಶ ರದ್ದುಪಡಿಸಿದ ಹೈಕೋರ್ಟ್‌

VISTARANEWS.COM


on

Edited by

high court cancels acquttal of rape victim
Koo

ಬೆಂಗಳೂರು: ಅವಳಿಗೆ ಆಗ ಇನ್ನೂ 18 ತುಂಬಿರಲಿಲ್ಲ. ಸೋದರ ಸಂಬಂಧಿಯೊಬ್ಬ ಆಕೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಸಖ್ಯ ಬೆಳೆಸಿದ್ದ (Sexual harrassment). ಆಕೆ ಗರ್ಭಿಣಿಯಾದಾಗ ಊರಿನವರ ಮುಂದೆ ಮದುವೆಯಾಗುವುದಾಗಿ ಮಾತುಕೊಟ್ಟಿದ್ದ. ಆಕೆಗೆ ಹೆರಿಗೆಯಾದಾಗ ತಪ್ಪಿಸಿಕೊಂಡಿದ್ದ. ಇನ್ನೊಂದು ಕಡೆ ಕೋರ್ಟ್‌ ಕೂಡಾ ಆತನನ್ನು ಖುಲಾಸೆಗೊಳಿಸಿತು. ಎರಡೂ ಕಡೆ ಮೋಸಕ್ಕೊಳಗಾದ ಯುವತಿ ಮತ್ತೆ ಕೋರ್ಟ್‌ ಮೆಟ್ಟಿಲು ಹತ್ತಿದ್ದಳು. ಈಗ ಕೊನೆಗೆ ಆತನನ್ನು ಖುಲಾಸೆಗೊಳಿಸಿದೆ ವಿಚಾರಣಾಧೀನ ನ್ಯಾಯಾಲಯ ಆದೇಶವನ್ನು ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್‌ (Karnataka High court) ಆತನಿಗೆ ಶಿಕ್ಷೆ ವಿಧಿಸುವಂತೆ ಆದೇಶ ಮಾಡಿದೆ. ಡಿಎನ್‌ಎ ಪರೀಕ್ಷೆ ವರದಿ ಇಲ್ಲ ಎಂಬ ಕಾರಣಕ್ಕೆ ಆತನಿಗೆ ಆವತ್ತು ಖುಲಾಸೆಯಾಗಿತ್ತು. ಆದರೆ, ಇದನ್ನು ಹೈಕೋರ್ಟ್‌ ಒಪ್ಪಿಲ್ಲ.

ಇದು ಮಡಿಕೇರಿಯ ಮಡೆ ಗ್ರಾಮದ ವಿಜಯ ಅಲಿಯಾಸ್‌ ವಿಜಯಕುಮಾರ್‌ ಎಂಬಾತನ ಮೇಲಿರುವ ಅತ್ಯಾಚಾರದ ಕೇಸು. 2016ರ ಮಾರ್ಚ್‌ 10ರಂದು ಕೊಡಗಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆತನನ್ನು ಖುಲಾಸೆಗೊಳಿಸಿತ್ತು. ಇದನ್ನು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಕೆ ಎಸ್‌ ಮುದಗಲ್‌ ಮತ್ತು ರಾಜೇಂದ್ರ ಬದಾಮಿಕರ್‌ ಅವರ ನೇತೃತ್ವದ ವಿಭಾಗೀಯ ಪೀಠವು ಪುರಸ್ಕರಿಸಿದೆ.

ಹಾಗಿದ್ದರೆ ಹೈಕೋರ್ಟ್‌ ಆದೇಶದಲ್ಲಿ ಹೇಳಿದ್ದೇನು?

  1. ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ರೂಪಿಸಲಾಗಿರುವ ನಿಯಮಗಳಿಗೆ ಪೂರಕವಾಗಿ ಅಧಿಕೃತ ಸಾಕ್ಷ್ಯಗಳನ್ನು ವಿಚಾರಣಾಧೀನ ನ್ಯಾಯಾಲಯವು ಪರಿಗಣಿಸದೇ ಆರೋಪಿಯನ್ನು ಖುಲಾಸೆಗೊಳಿಸುವ ಮೂಲಕ ಕಾನೂನುಬಾಹಿರವಾಗಿ ನಡೆದುಕೊಂಡಿದೆ.
  2. ನಿಷಿದ್ಧವಾಗಿರುವ 15 ವರ್ಷದ ತನ್ನ ಸೋದರ ಸಂಬಂಧಿಯ ಜೊತೆ ಸಂಭೋಗ ನಡೆಸಿರುವುದಲ್ಲದೇ ಆಕೆಗೆ ವಂಚಿಸಿರುವುದನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯ ವಿಫಲವಾಗಿದೆ.
  3. ಆರೋಪಿಯನ್ನು ಖುಲಾಸೆ ಮಾಡಿರುವ ಆದೇಶವು ನ್ಯಾಯದಾನಕ್ಕೆ ಮಾರಕವಾಗಿದ್ದು, ಅದನ್ನು ಬದಿಗೆ ಸರಿಸಲು ಅರ್ಹವಾಗಿದೆ.
  4. ಅತ್ಯಾಚಾರ ಪ್ರಕರಣಗಳಲ್ಲಿ ವಂಶವಾಹಿ ಪರೀಕ್ಷೆ ನಡೆಸಿಲ್ಲ ಎಂಬ ಅಂಶವನ್ನು ವಿಚಾರಣೆಯ ಹಣೆಬರಹ ನಿರ್ಧರಿಸಲು ಅನುಮತಿಸಲಾಗದು ಎಂದು ಸುಪ್ರೀಂ ಕೋರ್ಟ್‌ ವೀರೇಂದ್ರ ಪ್ರಕರಣದಲ್ಲಿ ತಿಳಿಸಿದೆ ಎಂದು ಹೈಕೋರ್ಟ್‌ ನೆನಪಿಸಿದೆ.

ಮೂಲ ಘಟನೆ ನಡೆದಿದ್ದು 2008ರಲ್ಲಿ.. ಈಗ ಆಕೆ ಎಲ್ಲಿದ್ದಾಳೆ?

ಅತ್ಯಾಚಾರದ ಮೂಲ ಘಟನೆ ನಡೆದಿರುವುದು 2008ರಲ್ಲಿ. ಆಕೆ ಜನಿಸಿದ್ದು 1992ರ ಫೆಬ್ರವರಿ 29ರಂದು. ಆರೋಪಿಯು ಆಕೆಯ ಚಿಕ್ಕಪ್ಪನ ಮಗ. 2008ರ ಆ ದಿನ ಆರೋಪಿಯ ಜಮೀನಿಗೆ ಕೂಲಿ ಕೆಲಸಕ್ಕೆ ತೆರಳಿದ್ದ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಬಳಸಿಕೊಂಡಿದ್ದ.

ಇದರಿಂದ ಆಕೆ ಗರ್ಭಿಣಿಯಾಗಿದ್ದು, ವಿಚಾರ ಪೋಷಕರ ಗಮನಕ್ಕೆ ಬಂದಿತ್ತು. ಮಗುವನ್ನು ತೆಗೆಸಿದರೆ ಮದುವೆಯಾಗುವುದಾಗಿ ಆತ ಷರತ್ತು ವಿಧಿಸಿದ್ದ. ಊರಿನವರ ಪಂಚಾಯಿತಿಯಲ್ಲಿ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ತಿಳಿಸಿದ್ದ. ಆದರೆ, ಬಳಿಕ ನಾಪತ್ತೆಯಾಗಿದ್ದ. ಹೀಗಾಗಿ, ಆತನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 376 ಮತ್ತು 420ರ ಪ್ರಕರಣ ದಾಖಲಿಸಲಾಗಿತ್ತು. ಈ ನಡುವೆ ಸಂತ್ರಸ್ತೆಗೆ ಈ ಸಂಬಂಧದಿಂದ ಹೆಣ್ಣು ಮಗು ಹುಟ್ಟಿತ್ತು. ಬಳಿಕ ಆಕೆ ಮತ್ತೊಂದು ಮದುವೆಯಾಗಿದ್ದರು. ಈ ಸಂಬಂಧದಿಂದ ಮತ್ತೊಂದು ಮಗುವಿದೆ.

ವಿಚಾರಣಾಧೀನ ನ್ಯಾಯಾಲಯ ಏನು ಹೇಳಿತ್ತು?

ವಿಚಾರಣಾಧೀನ ನ್ಯಾಯಾಲಯವು ಸಂತ್ರಸ್ತೆಯ ವಯಸ್ಸು ಸಾಬೀತಾಗಿಲ್ಲ. ಆರೋಪಿ ಮತ್ತು ಸಂತ್ರಸ್ತೆಯ ನಡುವಿನ ಸಂಬಂಧ ಒಪ್ಪಿತವಾಗಿತ್ತು. ಆರೋಪಿಯು ಸಂತ್ರಸ್ತೆಯ ಜೊತೆಗೆ ಹೊಂದಿದ್ದ ಸಂಭೋಗದಿಂದ ಆಕೆ ಗರ್ಭಿಣಿಯಾಗಿದ್ದಳು ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ ವಂಶವಾಹಿ ಪರೀಕ್ಷೆ ವರದಿ ಸಲ್ಲಿಸಿಲ್ಲ ಎಂದು ಕಾರಣಗಳನ್ನು ನೀಡಿ, ಆರೋಪಿಯನ್ನು ಖುಲಾಸೆಗೊಳಿಸಿತ್ತು.

ಇದನ್ನೂ ಓದಿ: High court Relief : ಅಪರಾಧಿಯ ಮದುವೆಗಾಗಿ ಭರ್ಜರಿ ರಿಲೀಫ್‌, 60 ದಿನ ಪೆರೋಲ್!‌

Continue Reading

ಕರ್ನಾಟಕ

Cow slaughter: ಜಾನುವಾರು ಸಾಗಾಟದ ವೇಳೆ ಸಾವು; ಪುನೀತ್‌ ಕೆರೆಹಳ್ಳಿ ಟೀಮ್‌ಗೆ ಷರತ್ತುಬದ್ಧ ಜಾಮೀನು

Puneet Kerehalli: ಸಾತನೂರಿನಲ್ಲಿ ನಡೆದ ಜಾನುವಾರು ಸಾಗಾಟಗಾರನ ಕೊಲೆಯಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಪುನೀತ್‌ ಕೆರೆಹಳ್ಳಿ ಮತ್ತು ತಂಡಕ್ಕೆ ಹೈಕೋರ್ಟ್‌ ಜಾಮೀನು ನೀಡಿದೆ.

VISTARANEWS.COM


on

Edited by

puneet kerehalli
Koo

ಬೆಂಗಳೂರು: ಏಪ್ರಿಲ್‌ 1ರಂದು ಸಾತನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜಾನುವಾರು ಸಾಗಾಟವನ್ನು (Cow slaughter) ತಡೆದ ಸಂದರ್ಭದಲ್ಲಿ ಇದ್ರಿಸ್‌ ಪಾಷಾ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದ ರಾಷ್ಟ್ರ ರಕ್ಷಣಾ ಪಡೆಯ ಪುನೀತ್‌ ಕೆರೆಹಳ್ಳಿ (puneet kerehalli) ಮತ್ತು ಇತರ ನಾಲ್ವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ (Karnataka High court) ಷರತ್ತುಬದ್ಧ ಜಾಮೀನು ನೀಡಿದೆ.

ಮಾರ್ಚ್‌ 31ರಂದು ರಾತ್ರಿ ಮಂಡ್ಯದ ಕಡೆಯಿಂದ ಬರುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್‌ ಠಾಣೆ ಸಮೀಪ ಅಡ್ಡಗಟ್ಟಿದ್ದ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರು ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಏಪ್ರಿಲ್‌ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ 100 ಮೀಟರ್‌ ದೂರದಲ್ಲಿ ಇದ್ರೀಶ್ ಪಾಷಾ ಅವರ ಶವ ಪತ್ತೆಯಾಗಿತ್ತು.

ಪುನೀತ್‌ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎಂದು ಪಾಷಾ ಅವರ ಸಹೋದರ ಯೂನಸ್‌ ಪಾಷಾ ದೂರು ನೀಡಿದ್ದರು. ಇದನ್ನು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 302, 324, 341, 504, 506 ಜೊತೆಗೆ 34 ಅಡಿ ಪ್ರಕರಣ ದಾಖಲಾಗಿತ್ತು. ಏಪ್ರಿಲ್‌ 5ರಂದು ಆರೋಪಿಗಳನ್ನು ರಾಜಸ್ಥಾನದ ಬನ್‌ಸ್ವಾರ ಬಳಿ ರಾಮನಗರ ಪೊಲೀಸರು ಬಂಧಿಸಿದ್ದರು.

ಆರೋಪಿಗಳಾದ ಪುನೀತ್‌ ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿ, ಗೋಪಿ, ಸುರೇಶ್‌, ಪವನ್‌ ಕುಮಾರ್‌ ಎ ಎನ್‌, ಪಿ ಲಿಂಗಪ್ಪ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ ಉಮಾ ಅವರ ನೇತೃತ್ವದ ರಜಾಕಾಲೀನ ಏಕಸದಸ್ಯ ಪೀಠವು ಜಾಮೀನು ಮಂಜೂರು ಮಾಡಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ ಶ್ಯಾಮ್‌ ಅವರು “ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಶ್‌ ಪಾಷಾ ಅವರ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಾಗಿದ್ದು, ಗಂಭೀರ ಗಾಯಗಳ ಬಗ್ಗೆ ಏನೂ ಮಾಹಿತಿ ಇಲ್ಲ. ಪ್ರಕರಣವು ಸಾತನೂರು ಠಾಣೆಯ 100 ಮೀಟರ್‌ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಹೀಗಿದ್ದಾಗ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗಲೇಬೇಕಿತ್ತು. ಈಗ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ಏನೇನು ವಶಪಡಿಸಿಕೊಳ್ಳಬೇಕು ಎಲ್ಲವೂ ಪೂರ್ಣಗೊಂಡಿದೆ. ಇನ್ನೂ ಆರೋಪ ಪಟ್ಟಿ ಸಲ್ಲಿಕೆಯಾಗಿ, ವಿಚಾರಣೆ ನಡೆಯಬೇಕಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದ್ದರು. ಈ ವಾದವನ್ನು ನ್ಯಾಯಾಲಯ ಪುರಸ್ಕರಿಸಿದೆ.

ಇದನ್ನೂ ಓದಿ : Cow slaughter : ಜಾನುವಾರು ಸಾಗಾಟಗಾರನ ಸಾವು; ಪುನೀತ್‌ ಕೆರೆಹಳ್ಳಿ ಸೇರಿ ಐವರು ರಾಜಸ್ಥಾನದಲ್ಲಿ ಸೆರೆ

Continue Reading

ಕರ್ನಾಟಕ

DK Shivakumar: ಮತ್ತೆ ಬೆನ್ನುಹತ್ತಿದ ಸಿಬಿಐ; ಡಿ.ಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌

Supreme court: ಗೊತ್ತಾದ ಆದಾಯ ಮೂಲಕ್ಕಿಂತ ಹೆಚ್ಚು ಸಂಪತ್ತು ಹೊಂದಿರುವ ಆರೋಪದಡಿ ತನಿಖೆ ನಡೆಸಲು ಹೈಕೋರ್ಟ್‌ ವಿಧಿಸಿರುವ ತಡೆಯಾಜ್ಞೆಯ ತೆರವಿಗೆ ಮನವಿ ಮಾಡಿ ಸಿಬಿಐ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. ಅಲ್ಲಿ ಏನಾಯಿತು?

VISTARANEWS.COM


on

Edited by

dk shivakumar got relief in misappropriate case in supreme court
Koo

ಬೆಂಗಳೂರು: ಒಂದು ಕಡೆ ಡಿ.ಕೆ. ಶಿವಕುಮಾರ್‌‌ (DK Shivakumar) ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಭಾರಿ ಪ್ರಯತ್ನ ನಡೆಸುತ್ತಿರುವ ನಡುವೆಯೇ ಕೇಂದ್ರೀಯ ತನಿಖಾ ಮಂಡಳಿ (Central bureau of investigation) ಅವರ ಬೆನ್ನು ಹತ್ತಲು ಶುರು ಮಾಡಿದೆ. ಅವರ ಮೇಲಿರುವ ಪ್ರಕರಣಗಳ ವಿಚಾರಣೆಗೆ ರಾಜ್ಯ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯ ತೆರವು ಕೋರಿ ಸಿಬಿಐ ಬುಧವಾರ ಸುಪ್ರೀಂಕೋರ್ಟ್‌ (Supreme court) ಮೆಟ್ಟಿಲು ಹತ್ತಿದೆ. ಆದರೆ, ಸುಪ್ರೀಂಕೋರ್ಟ್‌ ಈ ಹಂತದಲ್ಲಿ ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಶಿವಕುಮಾರ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಗೊತ್ತಾದ ಆದಾಯ ಮೂಲಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹ ಮಾಡಿದ ಆರೋಪಕ್ಕೆ ಸಂಬಂಧಿಸಿ ಡಿ.ಕೆ. ಶಿವಕುಮಾರ್‌ ವಿರುದ್ಧ ತನಿಖೆಗೆ ಸಿಬಿಐ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ನಾನಾ ಹಂತಗಳಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್‌ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯ ತೆರವಿಗೆ ಹೈಕೋರ್ಟ್‌ಗೆ ಸಿಬಿಐ ಮನವಿ ಸಲ್ಲಿಸಿದೆ.

ಈ ನಡುವೆ ಕೇಂದ್ರೀಯ ತನಿಖಾ ಮಂಡಳಿ ಗುರುವಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. ತನಿಖೆಗೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ರದ್ದುಗೊಳಿಸಬೇಕು, ತನಿಖೆಗೆ ಅವಕಾಶ ನೀಡಬೇಕು ಕೇಳಿಕೊಂಡಿದೆ.

ಈ ಅರ್ಜಿಯ ವಿಚಾರಣೆಯ ವೇಳೆ ಡಿ.ಕೆ. ಶಿವಕುಮಾರ್‌ ಅವರ ಪರ ವಕೀಲರಾದ ಅಭಿಷೇಕ್‌ ಮನುಸಿಂಘ್ವಿ ಅವರು, ಇದೇ ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಮಂಗಳವಾರ (ಮೇ 23) ಹೈಕೋರ್ಟ್‌ನಲ್ಲೇ ವಿಚಾರಣೆ ಇದೆ. ಇದು ಮಧ್ಯಂತರ ಆದೇಶ ಅಷ್ಟೇ. ಹೀಗಾಗಿ ನೀವು ಇದರ ಬಗ್ಗೆ ಈಗ ವಿಚರಣೆ ಮಾಡಬೇಡಿʼʼ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ಸಿಬಿಐ ಪರ ವಕೀಲ, ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ ರಾಜು ಅವರು, ಸುಪ್ರೀಂಕೋರ್ಟ್ ರಜೆ ಇರುವುದರಿಂದ ನಾವು ತ್ವರಿತ ವಿಚರಣೆಗೆ ಕೇಳಿದ್ದೇವೆ ಎಂದು ಹೇಳಿದರು.

ಆದರೆ, ಮೇ 23ರಂದು ಹೈಕೋರ್ಟ್‌ನಲ್ಲೇ ವಿಚಾರಣೆ ಇರುವುದರಿಂದ ತಕ್ಷಣಕ್ಕೆ ವಿಚಾರಣೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಾದವನ್ನು ಹೈಕೋರ್ಟ್‌ನಲ್ಲೇ ಮಂಡಿಸಿ ಎಂದು ಸೂಚಿಸಿತು. ಸುಪ್ರೀಂಕೋರ್ಟ್‌ಗೆ ರಜೆ ಇದ್ದರೂ ಬೇಸಗೆ ರಜೆ ನ್ಯಾಯಪೀಠ ಪ್ರತಿ ದಿನವೂ ಕಾರ್ಯ ನಿರ್ವಹಿಸಲಿದೆ. ಏನೇ ಸಮಸ್ಯೆ ಇದ್ದರೂ ಆಗ ನೀವು ಬರಬಹುದು ಎಂದ ನ್ಯಾ ಗವಾಯ್ ನೇತೃತ್ವದ ನ್ಯಾಯಪೀಠ ಹೇಳಿತು.

ಹೀಗಾಗಿ ಈ ಯಾವುದೇ ತಡೆಯಾಜ್ಞೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್‌ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.

ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ಹಲವಾರು ಪ್ರಕರಣಗಳನ್ನು ದಾಖಲಿಸಿವೆ. ಎಲ್ಲ ಪ್ರಕರಣಗಳು ವಿಚಾರಣೆಯ ನಾನಾ ಹಂತದಲ್ಲಿವೆ. ಇದೀಗ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲು ಮುಂದಾಗುತ್ತಿದ್ದಂತೆಯೇ ಪ್ರಕರಣಗಳು ಮೇಲೆದ್ದು ಬರುತ್ತಿವೆ. ಅದರ ನಡುವೆ ಸಿಬಿಐ ನಿರ್ದೇಶಕರಾಗಿ, ಡಿ.ಕೆ.ಶಿ ಅವರು ಕಟುವಾಗಿ ಟೀಕಿಸಿದ ಪ್ರವೀಣ್‌ ಸೂದ್‌ ಅವರೇ ನೇಮಕಗೊಂಡಿದೆ.

ಇದನ್ನೂ ಓದಿ: Karnataka CM: ಕೊಟ್ರೆ ಸಿಎಂ ಹುದ್ದೆ ಕೊಡಿ; ಇಲ್ಲಾಂದ್ರೆ ನೀವೇ ಆಗಿಬಿಡಿ: ಎಐಸಿಸಿ ಅಧ್ಯಕ್ಷರಿಗೇ ಆಫರ್‌ ಕೊಟ್ಟ ಡಿ.ಕೆ. ಶಿವಕುಮಾರ್‌

Continue Reading
Advertisement
Sphoorti Salu
ಸುವಚನ20 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Horoscope Today
ಪ್ರಮುಖ ಸುದ್ದಿ20 mins ago

Horoscope Today: ಈ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಎಚ್ಚರ ಇರಲಿ!

Hindu janajagruti samiti pressmeet
ಕರ್ನಾಟಕ5 hours ago

ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ

Man Dies Of Heart Attack In Noida
ಕ್ರೀಡೆ5 hours ago

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ವ್ಯಕ್ತಿ ಸಾವು

Digital Payment
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ಡಿಜಿಟಲ್ ಪಾವತಿಯಲ್ಲಿ ಭಾರತ ನಂ.1, ಭಾರತೀಯರ ಪ್ರೌಢಿಮೆಗೆ ಇದು ಸಾಕ್ಷಿ

aamir khan to act in rajamouli movie
ಸಿನಿಮಾ6 hours ago

Aamir Khan : ದಕ್ಷಿಣ ಭಾರತ ಸಿನಿಮಾದಲ್ಲಿ ವಿಲನ್‌ ಆಗ್ತಾರಂತೆ ಬಾಲಿವುಡ್‌ನ ಮಿಸ್ಟರ್‌ ಪರ್ಫೆಕ್ಟ್‌ ಆಮೀರ್ ಖಾನ್‌!

Minister Pralhad Joshi
ಕರ್ನಾಟಕ6 hours ago

ಹುಬ್ಬಳ್ಳಿ ಏರ್‌ಪೋರ್ಟ್‌ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್‌ ಜೋಶಿ ಧನ್ಯವಾದ

Viat kohli WTC Final 2023
ಕ್ರಿಕೆಟ್6 hours ago

WTC Final : ಭಾರತದ ಗೆಲುವಿಗೆ ಇನ್ನೂ ಬೇಕು 280 ರನ್​, ಕೌತುಕದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​

Debt Under Narendra Modi Government
ದೇಶ7 hours ago

Narendra Modi: 14 ಪ್ರಧಾನಿಗಳು ಮಾಡಿದ್ದ ಸಾಲ 55 ಲಕ್ಷ ಕೋಟಿ ರೂ., ಮೋದಿ ಒಬ್ಬರೇ ಮಾಡಿದ ಸಾಲವೆಷ್ಟು?

murder case accused tippayya
ಕರ್ನಾಟಕ7 hours ago

Bellary News: ಪತ್ನಿ, ಮಕ್ಕಳು ಸೇರಿ ಐವರನ್ನು ಕೊಂದವನಿಗೆ ಮರಣ ದಂಡನೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ1 day ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Autodrivers oppose free bus service
ಕರ್ನಾಟಕ12 hours ago

Free Bus Service: ನನ್ ಒಂದೇ ಓಟಲ್ಲ ಸ್ವಾಮಿ, ನಮ್ ಫ್ಯಾಮಿಲಿದೆಲ್ಲ ಇದೆ ಹುಷಾರ್: ಸಿದ್ದರಾಮಯ್ಯಗೆ ಆಟೋ ಡ್ರೈವರ್‌ ವಾರ್ನಿಂಗ್‌

accident in kerala
ವೈರಲ್ ನ್ಯೂಸ್17 hours ago

Viral Video: ಬಸ್ಸು ಮತ್ತು ಲಾರಿ ಮಧ್ಯೆ ಸ್ಕೂಟರ್‌ ಅಪ್ಪಚ್ಚಿ, ಸವಾರರ ಕಣ್ ಮುಂದೆ ಯಮ ರಪ್ ಅಂತ ಪಾಸ್ ಆದ!

Cancellation of tenders for 108 ambulances and Dinesh Gundu rao
ಆರೋಗ್ಯ2 days ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ2 days ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ2 days ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ2 days ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ2 days ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ2 days ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ3 days ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ3 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

ಟ್ರೆಂಡಿಂಗ್‌

error: Content is protected !!