ದಯವೇ ಧರ್ಮದ ಮೂಲವಯ್ಯ; ಪ್ಯಾಲೆಸ್ತೀನ್‌ಗೆ ಭಾರತ 38 ಟನ್‌ ಅಗತ್ಯ ವಸ್ತುಗಳ ನೆರವು - Vistara News

ದೇಶ

ದಯವೇ ಧರ್ಮದ ಮೂಲವಯ್ಯ; ಪ್ಯಾಲೆಸ್ತೀನ್‌ಗೆ ಭಾರತ 38 ಟನ್‌ ಅಗತ್ಯ ವಸ್ತುಗಳ ನೆರವು

Israel Palestine War: ಹಮಾಸ್‌ ಉಗ್ರರ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ನಡೆಸುತ್ತಿರುವ ಪ್ರತಿದಾಳಿಗೆ ಗಾಜಾ ನಗರವು ಸಂಪೂರ್ಣವಾಗಿ ನಲುಗಿಹೋಗಿದೆ. ಹಾಗಾಗಿ, ಭಾರತ ಸರ್ಕಾರವು ಮಾನವೀಯ ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಪ್ಯಾಲೆಸ್ತೀನ್‌ಗೆ ಕಳುಹಿಸಿಕೊಟ್ಟಿದೆ.

VISTARANEWS.COM


on

Humanitarian Aid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಗಾಜಾ ನಗರದಲ್ಲಿರುವ ಹಮಾಸ್‌ ಉಗ್ರರು ಇಸ್ರೇಲ್‌ ಮೇಲೆ ದಾಳಿ ಆರಂಭಿಸಿದ ಬಳಿಕ ಇಸ್ರೇಲ್‌ ಪ್ರತಿದಾಳಿ ಆರಂಭಿಸಿದೆ. ಇದರಿಂದಾಗಿ ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ಸಂಘರ್ಷ (Israel Palestine War) ಉಲ್ಬಣಗೊಂಡಿದ್ದು, ಎರಡೂ ದೇಶಗಳ ನಾಗರಿಕರು ಮಾತ್ರ ಪರಿತಪಿಸುತ್ತಿದ್ದಾರೆ. ದಾಳಿ-ಪ್ರತಿದಾಳಿಯಿಂದ ಇದುವರೆಗೆ ಉಭಯ ದೇಶಗಳಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅದರಲ್ಲೂ, ಪ್ಯಾಲೆಸ್ತೀನ್‌ನ ಗಾಜಾ ನಗರವಂತೂ ಅಕ್ಷರಶಃ ಮಸಣದಂತಾಗಿದೆ. ಹಾಗಾಗಿ, ಭಾರತ ಸರ್ಕಾರವು ಪ್ಯಾಲೆಸ್ತೀನ್‌ಗೆ ಸುಮಾರು 38 ಟನ್‌ ಅಗತ್ಯ ವಸ್ತುಗಳನ್ನು (Humanitarian aid) ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದೆ.

ಭಾರತೀಯ ವಾಯುಪಡೆಯ ಸಿ-17 ವಿಮಾನದಲ್ಲಿ ಈಜಿಪ್ತ್‌ನ ಎಲ್‌-ಐರಿಶ್‌ ವಿಮಾನ ನಿಲ್ದಾಣಕ್ಕೆ ಅಗತ್ಯ ವಸ್ತುಗಳನ್ನು ಕಳುಹಿಸಲಾಗಿದೆ. 6.5 ಟನ್‌ ವೈದ್ಯಕೀಯ ಉಪಕರಣಗಳು ಹಾಗೂ 32 ಟನ್‌ ಅಗತ್ಯ ವಸ್ತುಗಳು ಸೇರಿ ಒಟ್ಟು 38.5 ಟನ್‌ ವಸ್ತುಗಳನ್ನು ಮಾನವೀಯತೆ ಆಧಾರದ ಮೇಲೆ ಪ್ಯಾಲೆಸ್ತೀನ್‌ಗೆ ಕಳುಹಿಸಲಾಗಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿರುವ ಹಿಂಡನ್‌ ವಾಯುನೆಲೆಯಿಂದ ಅಗತ್ಯ ವಸ್ತುಗಳನ್ನು ಹೊತ್ತುಕೊಂಡ ವಿಮಾನವು ಹಾರಾಟ ಆರಂಭಿಸಿದೆ.

ಗಾಯಾಳುಗಳಿಗೆ ಬೇಕಾಗುವ ಔಷಧಗಳು, ಶಸ್ತ್ರಚಿಕಿತ್ಸೆಗೆ ಬೇಕಾಗುವ ವೈದ್ಯಕೀಯ ಸಲಕರಣೆಗಳು, ನಿರಾಶ್ರಿತರು ಆಶ್ರಯ ಪಡೆಯಲು ಟೆಂಟ್‌ಗಳು, ಸ್ಲೀಪಿಂಗ್‌ ಬ್ಯಾಗ್‌ಗಳು, ಟಾರ್ಪಲ್‌ಗಳು, ಸ್ಯಾನಿಟರಿ ಉಪಕರಣಗಳು, ನೀರು ಸ್ವಚ್ಛಗೊಳಿಸುವ ಟ್ಯಾಬ್ಲೆಟ್‌ಗಳು ಸೇರಿ ಹಲವು ವಸ್ತುಗಳನ್ನು ಭಾರತವು ಪ್ಯಾಲೆಸ್ತೀನ್‌ಗೆ ಕಳುಹಿಸಿದೆ.

ಗಾಜಾ ನಗರವೊಂದರಲ್ಲಿಯೇ ಸುಮಾರು 3,800 ಜನ ಮೃತಪಟ್ಟಿದ್ದಾರೆ. ಇನ್ನೂ ಸಾವಿರಾರು ಜನ ಗಾಯಗೊಂಡಿದ್ದಾರೆ. ಇಡೀ ನಗರವೇ ಮಸಣದಂತಾಗಿದೆ. ಮಹಿಳೆಯರು, ಮಕ್ಕಳು ಹಾಗೂ ಹಿರಿಯರು ಪರಿತಪಿಸುವಂತಾಗಿದೆ. ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ. ಹಾಗಾಗಿ, ಜಗತ್ತಿನ ಹಲವು ರಾಷ್ಟ್ರಗಳು ಪ್ಯಾಲೆಸ್ತೀನ್‌ಗೆ ಮಾನವೀಯತೆ ಆಧಾರದ ಮೇಲೆ ಅಗತ್ಯ ವಸ್ತುಗಳ ನೆರವು ನೀಡುತ್ತಿವೆ.

ಇದನ್ನೂ ಓದಿ: Israel Palestine War: ಇಸ್ರೇಲ್‌ ಪೊಲೀಸರಿಗೂ ಕೇರಳದ ಟೇಲರ್‌ಗಳಿಗೂ ಎಲ್ಲಿಂದೆಲ್ಲಿಯ ಸಂಬಂಧ!

ಮತ್ತೊಂದೆಡೆ, ಜಗತ್ತಿನ ಹಲವು ರಾಷ್ಟ್ರಗಳಿಂದ ಪ್ಯಾಲೆಸ್ತೀನ್‌ಗೆ ಅಗತ್ಯ ವಸ್ತುಗಳ ನೆರವು ಸಿಗುತ್ತಲೇ ಇಸ್ರೇಲ್‌ ಸೇನೆಯು ಗಾಜಾ ನಗರದ ಮೇಲಿನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಗಾಜಾ ನಗರದಲ್ಲಿರುವ ಮಸೀದಿಗಳು, ಉಗ್ರರು ಅಡಗಿರುವ ಕಟ್ಟಡಗಳನ್ನು ಗುರಿಯಾಗಿಸಿ ಇಸ್ರೇಲ್‌ ದಾಳಿ ರಾಕೆಟ್‌ ದಾಳಿ ನಡೆಸುತ್ತಿದೆ. ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲೂ 1,400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

M‌ine Lift Collapse: ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ತುರ್ತು ಪರಿಸ್ಥಿತಿಗೆ ಸಿದ್ಧವಾಗಿವೆ. ಹಿಂದೂಸ್ತಾನ್ ಕಾಪರ್‌ ಅಧಿಕಾರಿಗಳು ನೂರಾರು ಮೀಟರ್ ಆಳದಲ್ಲಿ ಸಿಲುಕಿಕೊಂಡಿದ್ದಾರೆ.

VISTARANEWS.COM


on

copper mine lift collapse
Koo

ಜೈಪುರ: ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ಕೋಲಿಹಾನ್ ತಾಮ್ರದ ಗಣಿಯಲ್ಲಿ (copper mine) ಲಿಫ್ಟ್ ಕುಸಿದು (M‌ine Lift Collapse) 14 ಮಂದಿ ಸಿಕ್ಕಿಬಿದ್ದಿದ್ದಾರೆ. ಇವರು ಪಿಎಸ್‌ಯು ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ (Hindustan copper Ltd) 14 ಅಧಿಕಾರಿಗಳು ಹಾಗೂ ವಿಜಿಲೆನ್ಸ್ ತಂಡದ ಸದಸ್ಯರಾಗಿದ್ದಾರೆ. ಮಂಗಳವಾರ ರಾತ್ರಿ ರಕ್ಷಣಾ ಕಾರ್ಯಾಚರಣೆ (rescue Operation) ಆರಂಭವಾಗಿದ್ದು, ಘಟನೆಯಲ್ಲಿ (Mine tragedy) ಕೆಲ ಅಧಿಕಾರಿಗಳು ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸ್ಥಳಕ್ಕೆ ರಕ್ಷಣಾ ತಂಡ ತಲುಪಿದೆ ಎಂದು ನೀಮ್ ಕಾ ಥಾನಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ನಾಯಕ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಇಲ್ಲಿಯವರೆಗೆ, ಗಣಿ ಲಿಫ್ಟ್ ಕುಸಿತದಿಂದ ಯಾವುದೇ ಸಾವುಗಳು ವರದಿಯಾಗಿಲ್ಲ.

ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ತುರ್ತು ಪರಿಸ್ಥಿತಿಗೆ ಸಿದ್ಧವಾಗಿವೆ. ಹಿಂದೂಸ್ತಾನ್ ಕಾಪರ್‌ ಅಧಿಕಾರಿಗಳು ನೂರಾರು ಮೀಟರ್ ಆಳದಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನೆ ವರದಿಯಾದ ಕೂಡಲೇ ಬಿಜೆಪಿ ಶಾಸಕ ಧರ್ಮಪಾಲ್ ಗುರ್ಜರ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. “ರಕ್ಷಣಾ ತಂಡವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. 6-7 ಆಂಬ್ಯುಲೆನ್ಸ್‌ಗಳು ಸಿದ್ಧವಾಗಿವೆ. ಇಡೀ ಆಡಳಿತ ಅಲರ್ಟ್ ಆಗಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಖಂಡಿತವಾಗಿಯೂ ಎಲ್ಲರೂ ಸುರಕ್ಷಿತವಾಗಿ ಹೊರಬರುತ್ತಾರೆ” ಎಂದು ಧರ್ಮಪಾಲ್ ಗುರ್ಜರ್ ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಈ ಕಂಪನಿಯ ಹಿರಿಯ ಅಧಿಕಾರಿಗಳೊಂದಿಗೆ ವಿಜಿಲೆನ್ಸ್ ತಂಡವು ಪರಿಶೀಲನೆಗಾಗಿ ಗಣಿ ಒಳಗೆ ಹೋದಾಗ ಈ ಘಟನೆ ಸಂಭವಿಸಿದೆ. ಅವರು ಮೇಲಕ್ಕೆ ಬರಲು ಮುಂದಾದಾಗ, ಶಾಫ್ಟ್ ಅಥವಾ ʼಪಂಜರ’ದ ಹಗ್ಗ ಮುರಿದು ಸುಮಾರು 14 ಜನರು ಕೆಳಗೆ ಸಿಲುಕಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಲಿಫ್ಟ್ ಅನ್ನು ಹಸ್ತಚಾಲಿತವಾಗಿ ಚಲಿಸಲು ಮತ್ತು ಸಿಕ್ಕಿಬಿದ್ದ ಸಿಬ್ಬಂದಿಯನ್ನು ಹೊರತೆಗೆಯಲು ಪ್ರಯತ್ನಿಸಲಾಗುತ್ತಿದೆ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

Kangana Ranaut: ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

VISTARANEWS.COM


on

Kangana Ranaut
Koo

ಬೆಂಗಳೂರು: ಬಾಲಿವುಡ್ ನಟಿ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಲೋಕಸಭಾ (Lok Sabha Election) ಅಭ್ಯರ್ಥಿ ಕಂಗನಾ ರಣಾವತ್​ (Kangana Ranaut) ಮೇ 14 ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

ಕ್ವೀನ್ ಸಿನಿಮಾದ ನಟಿ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಇದಲ್ಲದೆ, ಅವರು 53,000 ರೂ.ಗಳ ಮೌಲ್ಯದ ವೆಸ್ಪಾ ಸ್ಕೂಟರ್ ಅನ್ನು ಹೊಂದಿದ್ದಾರೆ. ಅಫಿಡವಿಟ್ ಪ್ರಕಾರ, ಅವರು 2 ಲಕ್ಷ ರೂ ನಗದು ಮತ್ತು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದಾರೆ, 17 ಕೋಟಿ ರೂ.ಗಳ ಸಾಲವಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

2022-23ರ ಆರ್ಥಿಕ ವರ್ಷದಲ್ಲಿ ಅವರ ಆದಾಯ 4 ಕೋಟಿ ರೂ.ಗಳಾಗಿದ್ದರೆ, ಹಿಂದಿನ ವರ್ಷ ಅವರು 12.3 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಕಂಗನಾ ರಣಾವತ್ ಅವರ ಅಫಿಡವಿಟ್ ಪ್ರಕಾರ, ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಅವರು ಎಂಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಚಂಡೀಗಢದ ಖಾಸಗಿ ಶಾಲೆಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರುವುದು ತನ್ನ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಎಂದು ಅವರು ಘೋಷಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Bank Loan Fraud: ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Bank Loan Fraud
Koo

ನವದೆಹಲಿ: 17 ಸದಸ್ಯರ ಬ್ಯಾಂಕ್ ಒಕ್ಕೂಟಕ್ಕೆ 34,000 ಕೋಟಿ ರೂ. ವಂಚನೆ ಮಾಡಿದ (Bank Loan Fraud) ಆರೋಪದ ಮೇಲೆ ಡಿಎಚ್ಎಫ್ಎಲ್ ಮಾಜಿ ನಿರ್ದೇಶಕ ಧೀರಜ್ ವಾಧ್ವಾನ್ ಅವರನ್ನು ಸಿಬಿಐ ಮಂಗಳವಾರ ಬಂಧಿಸಿದೆ ಸೋಮವಾರ ರಾತ್ರಿ ಮುಂಬೈನಲ್ಲಿ ವಶಕ್ಕೆ ಪಡೆದ ವಾಧ್ವಾನ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅದು ಅವರನ್ನು ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಡಿಎಚ್ಎಫ್ಎಲ್​​ನ ಮಾಜಿ ನಿರ್ದೇಶಕ ಮತ್ತು ಅವರ ಸಹೋದರ ಕಪಿಲ್ ಅವರನ್ನು ಈ ಹಿಂದೆ ಜುಲೈ 19, 2022 ರಂದು ಬಂಧಿಸಲಾಗಿತ್ತು. ಅಕ್ಟೋಬರ್ 15, 2022 ರಂದು ಕಪಿಲ್ ಮತ್ತು ಧೀರಜ್ ಸೇರಿದಂತೆ 75 ಸಂಸ್ಥೆಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್​ ಸಲ್ಲಿಸಲಾಗಿತ್ತು. ತನಿಖೆ ಅಪೂರ್ಣವಾಗಿದೆ ಮತ್ತು ಸಲ್ಲಿಸಲಾದ ಚಾರ್ಜ್​ಶೀಟ್​ನಲ್ಲಿ ತೊಡಕುಗಳಿಗೆ ಎಂಬ ಆಧಾರದ ಮೇಲೆ ಅವರಿಗೆ ಡಿಸೆಂಬರ್ 3, 2022 ರಂದು ವಿಶೇಷ ನ್ಯಾಯಾಲಯದಿಂದ “ಶಾಸನಬದ್ಧ” ಜಾಮೀನು ನೀಡಿತ್ತು. ಈ ಆದೇಶವನ್ನು ದೆಹಲಿ ಹೈಕೋರ್ಟ್ ಕೂಡ ಎತ್ತಿಹಿಡಿದಿದೆ.

ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮತ್ತು ಇತ್ಯರ್ಥಪಡಿಸಿದ ಕಾನೂನು ಸ್ಥಾನವನ್ನು ನಿರ್ಲಕ್ಷಿಸುವಲ್ಲಿ “ಕಾನೂನಿನ ಗಂಭೀರ ತಪ್ಪು ಮಾಡಿದೆ” ಎಂದು ಉಲ್ಲೇಖಿಸಿ ಜಾಮೀನು ಆದೇಶಗಳನ್ನು ಸರ್ವೋಚ್ಛ ರದ್ದುಗೊಳಿಸಿತು.

ಏತನ್ಮಧ್ಯೆ, ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಧೀರಜ್ ವಾಧ್ವಾನ್ ಮತ್ತು ಅವರ ಸಹೋದರ ಕಪಿಲ್ ವಾಧ್ವಾನ್ ಮತ್ತು ಅಜಯ್ ನವಂದರ್ ಈ ಆರೋಪಿಗಳಾಗಿದ್ದಾರೆ.

ಸಾಲ ವಾಪಸ್​ ಕೊಡದ ಡಿಎಚ್​ಎಲ್​ಎಫ್​

2010 ಮತ್ತು 2018 ರ ನಡುವೆ ಡಿಎಚ್ಎಫ್ಎಲ್​ಗೆ 42,871 ಕೋಟಿ ರೂ.ಗಳ ಸಾಲ ನೀಡಿದ್ದ 17 ಸದಸ್ಯರ ಸಾಲದಾತ ಒಕ್ಕೂಟದ ಮುಂಚೂಣಿ ಸಂಸ್ಥೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಮೇರೆಗೆ ಸಿಬಿಐ ವಾಧ್ವಾನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಕಪಿಲ್ ಮತ್ತು ಧೀರಜ್ ವಾಧ್ವಾನ್ ಇತರರೊಂದಿಗೆ ಕ್ರಿಮಿನಲ್ ಪಿತೂರಿ ಮಾಡಿದ್ದು ಸತ್ಯ ಮರೆ ಮಾಚಲಾಗಿದೆ ಎಂದು ಹೇಳಲಾಗಿದೆ. ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮಾಡಿದ್ದಾರೆ ಮತ್ತು 2019 ರ ಮೇ ತಿಂಗಳಿನಿಂದ ಸಾಲ ಮರುಪಾವತಿಯಲ್ಲಿ ವಿಫಲರಾಗುವ ಮೂಲಕ ಒಕ್ಕೂಟಕ್ಕೆ 34,615 ಕೋಟಿ ರೂ.ಗಳನ್ನು ವಂಚಿಸಲಾಗಿದೆ. ಅಲ್ಲದೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ತನ್ನ ಚಾರ್ಜ್​ಶೀಟ್​ನಲ್ಲಿ ಆರೋಪಿಸಿದೆ.

Continue Reading

ಪ್ರಮುಖ ಸುದ್ದಿ

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ದೆಹಲಿಯ ಅವರ ಮನೆಯಲ್ಲಿ ಕಾಯುತ್ತಿದ್ದಾಗ ಕೇಜ್ರಿವಾಲ್ ಅವರ ಸಹಾಯಕ ಸ್ವಾತಿ ಮಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಒಪ್ಪಿಕೊಂಡಿದ್ದಾರೆ.

VISTARANEWS.COM


on

Swati Maliwal
Koo

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಿಎಂ ನಿವಾಸದೊಳಗೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ (Swati Maliwal ) ಅರೋಪಿಸಿದ ಮರುದಿನ ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಈ ಮಾಹಿತಿಯನ್ನು ಒಪ್ಪಿಕೊಂಡಿದೆ. ಎಎಪಿ ಮುಖ್ಯಸ್ಥರ ಸಹಾಯಕ ತಪ್ಪು ಮಾಡಿರುವುದು ಸತ್ಯ ಕೇಜ್ರಿವಾಲ್ ಅವರು ಈ ವಿಷಯವನ್ನು ಗಮನಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಎಪಿ ಹೇಳಿದೆ.

ಹಿರಿಯ ಎಎಪಿ ನಾಯಕಿ ಮತ್ತು ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಸೋಮವಾರ ಬೆಳಿಗ್ಗೆ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿ ಅರವಿಂದ್ ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಅವರು ಅಧಿಕೃತ ದೂರು ದಾಖಲಿಸಿರಲಿಲ್ಲ. ಈ ಮುಜುಗರದ ವಿವಾದದ ಬಗ್ಗೆ ಸ್ವಾತಿ ಮಲಿವಾಲ್ ಅಥವಾ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಪ್ರತಿಕ್ರಿಯಿಸಲಿಲ್ಲ.

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ದೆಹಲಿಯ ಅವರ ಮನೆಯಲ್ಲಿ ಕಾಯುತ್ತಿದ್ದಾಗ ಕೇಜ್ರಿವಾಲ್ ಅವರ ಸಹಾಯಕ ಸ್ವಾತಿ ಮಾಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಒಪ್ಪಿಕೊಂಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಡ್ರಾಯಿಂಗ್ ರೂಂನಲ್ಲಿ ಈ ಘಟನೆ ನಡೆದಿದೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. “ನಿನ್ನೆ, ಖಂಡನೀಯ ಘಟನೆ ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಾಲಿವಾಲ್ ಅವರ ನಿವಾಸಕ್ಕೆ ಹೋಗಿದ್ದರು. ಡ್ರಾಯಿಂಗ್ ರೂಮ್​ನಲ್ಲಿ ಅವರಿಗೆ ಕಾಯುತ್ತಿದ್ದಾಗ, ಬಿಭವ್ ಕುಮಾರ್ ಅವರಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಸಿಎಂ ಈ ವಿಷಯವನ್ನು ಅರಿತುಕೊಂಡಿದ್ದಾರೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಂಜಯ್​ ಸಿಂಗ್​ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

ದೆಹಲಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬೆಳಿಗ್ಗೆ 9.34 ಕ್ಕೆ ಪಿಸಿಆರ್ ಸಂಖ್ಯೆಗೆ ಕರೆ ಮಾಡಿ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದಾರೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದರು.

ದೂರು ದಾಖಲಿಸದ ಸ್ವಾತಿ

ಸೋಮವಾರ ಬೆಳಿಗ್ಗೆ 10 ಗಂಟೆಗೆ ಪೊಲೀಸ್ ಠಾಣೆಗೆ ಬಂದ ಸ್ವಾತಿ ಅವರು ಐದು ನಿಮಿಷಗಳ ನಂತರ ಔಪಚಾರಿಕ ದೂರು ದಾಖಲಿಸದೆ ಹೊರಟುಹೋಗಿದ್ದರು. ಹಲ್ಲೆ ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆ ಕಡ್ಡಾಯ ಎಂದು ಹೇಳಿದ ನಂತರ ಅವರು ಹೊರಟುಹೋದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು. ಕೇಜ್ರಿವಾಲ್ ಅವರ ಮನೆಯನ್ನು ‘ಬಾಕ್ಸಿಂಗ್ ರಿಂಗ್’ ಎಂದು ಕರೆದಿದೆ. ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೂ ಅವರ ಮನೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದೆ

Continue Reading
Advertisement
copper mine lift collapse
ಪ್ರಮುಖ ಸುದ್ದಿ20 mins ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ25 mins ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ1 hour ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ1 hour ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ7 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ8 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್8 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ12 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202415 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ19 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು20 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌