Israel Palestine War: ಇಸ್ರೇಲ್‌-ಪ್ಯಾಲೆಸ್ತೀನ್‌ ಬಿಕ್ಕಟ್ಟು; ಈಜಿಪ್ಟ್‌ ಅಧ್ಯಕ್ಷರ ಜತೆ ಮೋದಿ ಚರ್ಚೆ - Vistara News

ದೇಶ

Israel Palestine War: ಇಸ್ರೇಲ್‌-ಪ್ಯಾಲೆಸ್ತೀನ್‌ ಬಿಕ್ಕಟ್ಟು; ಈಜಿಪ್ಟ್‌ ಅಧ್ಯಕ್ಷರ ಜತೆ ಮೋದಿ ಚರ್ಚೆ

Israel Palestine War: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧದ ಹಿನ್ನೆಲೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಈಜಿಪ್ಟ್‌ ಅಧ್ಯಕ್ಷ ಅಬ್ದೆಲ್‌ ಫತ್ತಾಹ್‌ ಅಲ್‌-ಸಿಸಿ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.

VISTARANEWS.COM


on

pm
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಈಜಿಪ್ಟ್‌ ಅಧ್ಯಕ್ಷ ಅಬ್ದೆಲ್‌ ಫತ್ತಾಹ್‌ ಅಲ್‌-ಸಿಸಿ (Abdel Fattah al-Sisi) ಶನಿವಾರ ಮಹತ್ವದ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹದಗೆಡುತ್ತಿರುವ ಭದ್ರತೆ ಮತ್ತು ಪರಿಸ್ಥಿತಿಯ ಬಗ್ಗೆ ಎರಡೂ ದೇಶಗಳ ನಾಯಕರು ಚರ್ಚೆ ನಡೆಸಿದರು. ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ಸಮರದಿಂದಾಗಿ (Israel Palestine War) ಹೆಚ್ಚುತ್ತಿರುವ ಭಯೋತ್ಪಾದನೆ, ಹಿಂಸೆ ಮತ್ತು ನಾಗರಿಕರ ಸಾವುನೋವುಗಳ ಬಗ್ಗೆ ಇಬ್ಬರೂ ಕಳವಳ ವ್ಯಕ್ತಪಡಿಸಿದರು.

ಶಾಂತಿ ಮತ್ತು ಸುವ್ಯವಸ್ಥೆಯನ್ನು ತ್ವರಿತವಾಗಿ ಪುನಃಸ್ಥಾಪಿಸುವ ಮತ್ತು ಸಂಘರ್ಷದಿಂದ ಬಾಧಿತರಾದವರಿಗೆ ಮಾನವೀಯ ನೆರವು ನೀಡುವ ಅಗತ್ಯವನ್ನು ಮೋದಿ ಮತ್ತು ಎಲ್-ಸಿಸಿ ಒತ್ತಿ ಹೇಳಿದರು. ʼʼಅಬ್ದೆಲ್‌ ಫತ್ತಾಹ್‌ ಅಲ್‌-ಸಿಸಿ ಜತೆ ಸಮಾಲೋಚನೆ ನಡೆಸಲಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಭಯೋತ್ಪಾದನೆ, ಹಿಂಸೆ ಮತ್ತು ನಾಗರಿಕರ ಸಾವಿನ ಬಗ್ಗೆ ಮಾತನಾಡಿದ್ದೇವೆ. ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸುವ ಮತ್ತು ಮಾನವೀಯ ಸಹಾಯವನ್ನು ಸುಗಮಗೊಳಿಸುವ ಅಗತ್ಯವನ್ನು ಒಪ್ಪುತ್ತೇವೆʼʼ ಎಂದು ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಗಾಜಾ ಪಟ್ಟಿಯಲ್ಲಿನ ಇಸ್ರೇಲ್‌ ಮಿಲಿಟರಿ ಕಾರ್ಯಾಚರಣೆಗಳಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಈಜಿಪ್ಟ್ ಅಧ್ಯಕ್ಷರ ವಕ್ತಾರರು ತಿಳಿಸಿದ್ದಾರೆ. ʼʼಫತಾಹ್ ಎಲ್-ಸಿಸಿ ಅವರಿಗೆ ಮೋದಿ ದೂರವಾಣಿ ಕರೆ ಮಾಡಿದರು. ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಮಿಲಿಟರಿ ಕಾರ್ಯಾಚರಣೆಗಳಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ನಾಗರಿಕರ ಜೀವನದ ಮೇಲೆ ಇದು ಬೀರುವ ಗಂಭೀರ ಪರಿಣಾಮಗಳ ಬಗ್ಗೆ ಉಭಯ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು” ಎಂದು ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Israel Palestine War: ಪ್ರತಿ ಉಗ್ರನ ಹೆಣ ಬೀಳುವುದು ನಿಶ್ಚಿತ ಎಂದ ಇಸ್ರೇಲ್;‌ 3,700 ಸಾವು

ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 1,400 ಜನರು ಮೃತಪಟ್ಟಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಗಾಜಾದಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 8,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಅರ್ಧದಷ್ಟು ಮಕ್ಕಳು ಸೇರಿದ್ದಾರೆ ಎಂದು ಹಮಾಸ್ ನಿಯಂತ್ರಿತ ಆರೋಗ್ಯ ಸಚಿವಾಲಯ ತಿಳಿಸಿದೆ.

ಮತದಾನದಿಂದ ದೂರ ಉಳಿದ ಭಾರತ

ಇಸ್ರೇಲ್-ಹಮಾಸ್ ಯುದ್ಧದಲ್ಲಿ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಕರೆ ನೀಡಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಮತದಾನದಿಂದ ಭಾರತ ಶುಕ್ರವಾರ ದೂರ ಉಳಿದಿತ್ತು. ನಿರ್ಣಯವು ಹಮಾಸ್ ಅನ್ನು ಉಲ್ಲೇಖಿಸುವುದಿಲ್ಲ ಎಂದು ಭಾರತ ಇದಕ್ಕೆ ಕಾರಣ ತಿಳಿಸಿದೆ. ಯುಎನ್ ಭಯೋತ್ಪಾದನೆಯ ವಿರುದ್ಧ ಸ್ಪಷ್ಟ ಸಂದೇಶವನ್ನು ಕಳುಹಿಸುವ ಅಗತ್ಯವಿದೆ ಎಂದು ಹೇಳಿದೆ.

ಭಾರತದ ಪ್ರತಿನಿಧಿ ಯೋಜ್ನಾ ಪಟೇಲ್, “ಅಕ್ಟೋಬರ್ 7ರಂದು ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಆಘಾತಕಾರಿ ಮತ್ತು ಖಂಡನಾರ್ಹ. ಭಯೋತ್ಪಾದಕ ಕೃತ್ಯಗಳ ಯಾವುದೇ ಸಮರ್ಥನೆಯನ್ನು ಜಗತ್ತು ಅಂಗೀಕರಿಸಬಾರದು. ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಒಗ್ಗೂಡೋಣ ಮತ್ತು ಭಯೋತ್ಪಾದಕರ ವಿರುದ್ಧ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಅಳವಡಿಸಿಕೊಳ್ಳೋಣ” ಎಂದು ಅವರು ಹೇಳಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

ಅಮೆರಿಕದ ನ್ಯೂಜೆರ್ಸಿಯಲ್ಲಿ ಪಂಜಾಬ್‌ ಮೂಲದ, 19 ವರ್ಷದ ಗೌರವ್‌ ಗಿಲ್ಲ ಎಂಬಾತನು 29 ವರ್ಷದ ಜಸ್ವೀರ್‌ ಕೌರ್‌ ಎಂಬ ಮಹಿಳೆಯನ್ನು ಕೊಂದಿದ್ದಾನೆ. ಗುಂಡಿನ ದಾಳಿಯಲ್ಲಿ 20 ವರ್ಷದ ಗಗನ್‌ದೀಪ್‌ ಕೌರ್‌ ಎಂಬ ಯುವತಿಯು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಮಾಡಲೆಂದೇ ಆತನು ಅಮೆರಿಕಕ್ಕೆ ತೆರಳಿದ್ದ ಎಂದು ತಿಳಿದುಬಂದಿದೆ.

VISTARANEWS.COM


on

Indian Women
ಜಸ್ವೀನ್‌ ಕೌರ್‌ ಹಾಗೂ ಗಗನ್‌ದೀಪ್‌ ಕೌರ್.‌
Koo

ವಾಷಿಂಗ್ಟನ್‌: ಇತ್ತೀಚಿನ ಯುವಕ-ಯುವತಿಯರಲ್ಲಿ ಸೇಡಿನ ಕೃತ್ಯಗಳು, ಲವ್‌ ಬ್ರೇಕಪ್‌ (Love Breakup) ಆದ ಕೂಡಲೇ ಪ್ರೇಯಸಿಯನ್ನು ಕೊಲ್ಲುವುದು, ಆಸಿಡ್‌ ದಾಳಿ ಮಾಡುವುದು ಸೇರಿ ಹಲವು ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಇನ್ನು ಪಂಜಾಬ್‌ ಯುವಕನೊಬ್ಬ ಭಾರತದಿಂದ ಅಮೆರಿಕಕ್ಕೆ (America) ತೆರಳಿ, ಅಲ್ಲಿ 29 ವರ್ಷದ ಮಹಿಳೆಯ ಮೇಲೆ 7 ಬಾರಿ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಈ ಭೀಕರ ಹತ್ಯೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಅಮೆರಿಕದ ನ್ಯೂಜೆರ್ಸಿಯಲ್ಲಿ ಪಂಜಾಬ್‌ ಮೂಲದ, 19 ವರ್ಷದ ಗೌರವ್‌ ಗಿಲ್ಲ ಎಂಬಾತನು 29 ವರ್ಷದ ಜಸ್ವೀರ್‌ ಕೌರ್‌ ಎಂಬ ಮಹಿಳೆಯನ್ನು ಕೊಂದಿದ್ದಾನೆ. ಗುಂಡಿನ ದಾಳಿಯಲ್ಲಿ 20 ವರ್ಷದ ಗಗನ್‌ದೀಪ್‌ ಕೌರ್‌ ಎಂಬ ಯುವತಿಯು ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತದಿಂದ ಅಮೆರಿಕಕ್ಕೆ ತೆರಳಿ, ಅಲ್ಲಿ ಯುವತಿಯನ್ನು ಹುಡುಕಿ, ಅವರ ಮನೆಗೇ ತೆರಳಿ ಗುಂಡಿನ ದಾಳಿ ಮಾಡಲು ನಿಖರ ಕಾರಣ ತಿಳಿದುಬಂದಿಲ್ಲ. ಕೃತ್ಯದ ಬಳಿಕ ಪೊಲೀಸರು ಗೌರವ್‌ ಗಿಲ್‌ನನ್ನು ಬಂಧಿಸಿದ್ದಾರೆ.

ಪಂಜಾಬ್‌ನ ಗೌರವ್‌ ಗಿಲ್‌ ಇತ್ತೀಚೆಗೆ ಅಮೆರಿಕಕ್ಕೆ ತೆರಳಿದ್ದು, ವಾಷಿಂಗ್ಟನ್‌ ಜಿಲ್ಲೆಯ ಕೆಂಟ್‌ ಪಟ್ಟಣದಲ್ಲಿ ವಾಸಿಸುತ್ತಿದ್ದ. ನ್ಯೂಜೆರ್ಸಿಯ ಕಾರ್ಟರೆಟ್‌ನಲ್ಲಿ ಘಟನೆ ನಡೆದಿದೆ. ಗೌರವ್‌ ಗಿಲ್‌ ಹಾಗೂ ಗಗನ್‌ದೀಪ್‌ ಕೌರ್‌ ಅವರು ಪಂಜಾಬ್‌ನ ನಾಕೋದರ್‌ನಲ್ಲಿ ಕೋಚಿಂಗ್‌ ಸೆಂಟರ್‌ನಲ್ಲಿ ಅಧ್ಯಯನ ಮಾಡುವಾಗ ಪರಸ್ಪರ ಪರಿಚಯವಾಗಿದ್ದರು ಎಂದು ತಿಳಿದುಬಂದಿದೆ. ಜಸ್ವೀರ್‌ ಅವರು ಗಗನ್‌ದೀಪ್‌ ಕಸಿನ್‌ ಆಗಿದ್ದು, ಗಗನ್‌ದೀಪ್‌ ಅವರು ಜಸ್ವೀರ್‌ ಮನೆಗೆ ಹೋಗಿದ್ದರು. ಆಗ ಗೌರವ್‌ ಗಿಲ್‌ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಜಸ್ವೀರ್‌ ಕೌರ್‌ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಅಮೆಜಾನ್‌ ಫೆಸಿಲಿಟಿಯಲ್ಲಿ ಇದಕ್ಕೂ ಮೊದಲು ಕೆಲಸ ಮಾಡುತ್ತಿದ್ದರು. ಜಸ್ವೀರ್‌ ಕೌರ್‌ ಅವರ ಪತಿಯು ವಾಹನ ಚಾಲಕರಾಗಿದ್ದು, ಘಟನೆ ನಡೆದಾಗ ಅವರು ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಜಸ್ವೀರ್‌ ಅವರು ಐದು ವರ್ಷದ ಹಿಂದೆಯೇ ಅಮೆರಿಕಕ್ಕೆ ತೆರಳಿದ್ದಾರೆ. ಇನ್ನು ಗಗನ್‌ದೀಪ್‌ ಅವರು ಅಧ್ಯಯನ ವೀಸಾ ಪಡೆದು ಇತ್ತೀಚೆಗೆ ಅಮೆರಿಕಕ್ಕೆ ಹೋಗಿದ್ದರು ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ಗೌರವ್‌ ಗಿಲ್‌ ಹಾಗೂ ಗಗನ್‌ದೀಪ್‌ ಕೌರ್‌ ಪ್ರೀತಿಸುತ್ತಿದ್ದರು. ಇಬ್ಬರ ಮಧ್ಯೆ ಬ್ರೇಕಪ್‌ ಆಗಿತ್ತು. ಇದರಿಂದ ಕುಪಿತಗೊಂಡ ಗೌರವ್‌ ಗಿಲ್‌, ಗಗನ್‌ದೀಪ್‌ ಕೌರ್‌ ಅವರನ್ನು ಕೊಲೆ ಮಾಡಲು ಗುಂಡು ಹಾರಿಸಿದ್ದಾನೆ. ಆಗ ಜಸ್ವೀರ್‌ ಕೌರ್‌ಗೆ ಗುಂಡು ತಗುಲಿ, ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಸ್ವೀರ್‌ ತಂದೆ ಹೇಳುವುದೇನು?

“ನನ್ನ ಪುತ್ರಿ ಜಸ್ವೀರ್‌ ಕೌರ್‌ ಮನೆಯಲ್ಲಿ ಗಗನ್‌ದೀಪ್‌ ಕೌರ್‌ ಇದ್ದಳು. ಘಟನೆ ನಡೆಯುವಾಗ ಜಸ್ವೀರ್‌ ಕೌರ್‌ ಮಲಗಿದ್ದಳು. ಮನೆಯ ಹೊರಗೆ ಗಗನ್‌ದೀಪ್‌ ಕೌರ್‌ ಹಾಗೂ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಮಧ್ಯೆ ವಾಗ್ವಾದ ನಡೆದಿದೆ. ಆಗ ಸಹಾಯಕ್ಕಾಗಿ ಗಗನ್‌ದೀಪ್‌ ಕೌರ್‌ ನನ್ನ ಮಗಳನ್ನು ಕರೆದಿದ್ದಾಳೆ. ಆಗ ಜಸ್ವೀರ್‌ ಕೌರ್‌ ಜಗಳ ಬಿಡಿಸಲು ಹೋಗಿದ್ದು, ಆರೋಪಿಯು ನನ್ನ ಮಗಳ ಮುಖಕ್ಕೆ ಏಳು ಗುಂಡು ಹಾರಿಸಿ ಕೊಂದಿದ್ದಾನೆ” ಎಂದು ಜಸ್ವೀರ್‌ ಕೌರ್‌ ತಂದೆ ಕೇವಾಲ್‌ ಸಿಂಗ್‌ ಹೇಳಿದ್ದಾರೆ.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Continue Reading

ದೇಶ

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Train Accident: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ ಸುಮಾರು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ರೈಲು ಅಪಘಾತಕ್ಕೆ ಕಾರಣವೇನು ಎನ್ನುವ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಸಿಗ್ನಲ್‌ನಲ್ಲಿ ಕಂಡು ಬಂದ ದೋಷವೇ ದುರಂತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Train Accident
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ (Train Accident) ಸುಮಾರು 9 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೀಗ ರೈಲು ಅಪಘಾತಕ್ಕೆ ಕಾರಣವೇನು ಎನ್ನುವ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಸಿಗ್ನಲ್‌ನಲ್ಲಿ ಕಂಡು ಬಂದ ದೋಷವೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ದೋಷದಿಂದ ಕೂಡಿದ ಸ್ವಯಂಚಾಲಿತ ಸಿಗ್ನಲ್‌ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಗೂಡ್ಸ್‌ ರೈಲು ವೇಗದ ಮಿತಿಯನ್ನು ಮೀರಿ ಸಂಚರಿಸಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮಂಡಳಿಯ ಆರಂಭಿಕ ವರದಿ ತಿಳಿಸಿದೆ.

ನಿಯಮ ಏನು ಹೇಳುತ್ತದೆ?

ಟಿಎ 912 (TA 912) (ಸ್ವಯಂಚಾಲಿತ ವ್ಯವಸ್ಥೆಯಲ್ಲಿ ಸಿಗ್ನಲ್ ವೈಫಲ್ಯ ಸಂಭವಿಸಿದಾಗ, ಕೆಂಪು ಸಿಗ್ನಲ್‌ಗಳನ್ನು ದಾಟಲು ಸ್ಟೇಷನ್ ಮಾಸ್ಟರ್ ಚಾಲಕನಿಗೆ ಲಿಖಿತ ಪಾಸ್ ಅನ್ನು ಟಿಎ 912 ಎಂದು ಕರೆಯಲಾಗುತ್ತದೆ) ನಿಯಮದ ಪ್ರಕಾರ ಒಂದುವೇಳೆ ದೋಷಪೂರಿತ ಸಿಗ್ನಲ್‌ಗಳನ್ನು ದಾಟಲು ಅನುಮತಿ ಪಡೆದಿದ್ದರೆ, ಚಾಲಕ ಪ್ರತಿ ಸಿಗ್ನಲ್‌ನಲ್ಲಿ ಕೆಲವು ಹೊತ್ತು ನಿಂತು ಗಂಟೆಗೆ 10 ಕಿ.ಮೀ. ವೇಗದಲ್ಲಿ ಮಾತ್ರ ರೈಲು ಓಡಿಸಬೇಕು. ಮಾತ್ರವಲ್ಲ ಇನ್ನೊಂದು ರೈಲಿನಿಂದ 150 ಮೀಟರ್ ಅಂತರವನ್ನು ಕಾಯ್ದುಕೊಳ್ಳಬೇಕು. ಆದಾಗ್ಯೂ ಈ ಘಟನೆಯಲ್ಲಿ ಗೂಡ್ಸ್‌ ರೈಲು ಚಾಲಕ ಈ ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಟಿಎ 912ರೊಂದಿಗೆ 9 ಸ್ವಯಂಚಾಲಿತ ಸಿಗ್ನಲ್‌ಗಳನ್ನು ದಾಟಿ ಮುಂದೆ ಸಾಗಲು ಅನುಮತಿಗಾಗಿ ಕಾಯುತ್ತಿತ್ತು ಎನ್ನಲಾಗಿದೆ.

ದೋಷಯುಕ್ತ ಸ್ವಯಂಚಾಲಿತ ಸಿಗ್ನಲ್‌ ವ್ಯವಸ್ಥೆಯಿಂದಾಗಿ ಗೂಡ್ಸ್‌ ರೈಲು ಚಾಲಕನಿಗೆ ರಂಗಪಾಣಿ ಮತ್ತು ಚಟ್ಟರ್ ಹ್ಯಾಟ್ ರೈಲ್ವೆ ನಿಲ್ದಾಣಗಳ ನಡುವಿನ ಎಲ್ಲ ಸಿಗ್ನಲ್‌ಗಳನ್ನು ದಾಟಲು ಅನುಮತಿ ನೀಡಲಾಗಿತ್ತು. ಆದರೆ ರೈಲು ಅಂತಹ ಸಂದರ್ಭಗಳಿಗೆ ನಿಗದಿಪಡಿಸಿದ ಮಿತಿಯನ್ನು ಮೀರಿ ಸಂಚರಿಸಿದೆ. ʼʼರಾಣಿಪಾತ್ರ ರೈಲ್ವೆ ನಿಲ್ದಾಣ ಮತ್ತು ಚಟ್ಟರ್ ಹ್ಯಾಟ್ ಜಂಕ್ಷನ್ ನಡುವಿನ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯು ಸೋಮವಾರ ಬೆಳಿಗ್ಗೆ 5.50ರಿಂದ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಗೂಡ್ಸ್ ರೈಲು ಚಾಲಕನಿಗೆ ರಂಗಪಾಣಿಯ ಸ್ಟೇಷನ್ ಮಾಸ್ಟರ್ ಟಿಎ 912 ಅನ್ನು ನೀಡಿ, ಒಂಬತ್ತು ಸಿಗ್ನಲ್‌ ಅನ್ನು ಹಾದುಹೋಗಲು ಅನುಮತಿ ನೀಡಿದ್ದರು. ಆದರೆ ಚಾಲಕ ನಿಗದಿ ಪಡಿಸಿದ ಮಿತಿಗಿಂತ ವೇಗವಾಗಿ ಚಲಿಸಿದ್ದರಿಂದ ದುರಂತ ಸಂಭವಿಸಿದೆʼʼ ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ 8:42ಕ್ಕೆ ರಂಗಪಾಣಿಯಿಂದ ಹೊರಟ ಗೂಡ್ಸ್ ರೈಲು ಬೆಳಿಗ್ಗೆ 8:55ಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಗಾರ್ಡ್ ಕೋಚ್, ಎರಡು ಪಾರ್ಸೆಲ್ ಬೋಗಿಗಳು ಮತ್ತು ಪ್ಯಾಸೆಂಜರ್ ರೈಲಿನ ಸಾಮಾನ್ಯ ಆಸನದ ಬೋಗಿ ಹಳಿ ತಪ್ಪಿದೆ. ಮೃತರಲ್ಲಿ ಗೂಡ್ಸ್ ರೈಲಿನ ಚಾಲಕ ಕೂಡ ಸೇರಿದ್ದಾರೆ. ಇತ್ತ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಚಾಲಕ ಸಿಗ್ನಲಿಂಗ್ ದೋಷದ ಸಮಯದಲ್ಲಿ ಅಗತ್ಯವಿರುವ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿದ್ದಾರೆ. ಎಲ್ಲ ಕೆಂಪು ಸಿಗ್ನಲ್‌ಗಳಲ್ಲಿ ಒಂದು ನಿಮಿಷ ನಿಲ್ಲಿಸಿ 10 ಕಿ.ಮೀ. ವೇಗದಲ್ಲಿ ಸಂಚರಿಸಿದ್ದರು ಎಂದು ವರದಿ ತಿಳಿಸಿದೆ.

ಸದ್ಯ ರೈಲ್ವೆ ಸುರಕ್ಷತಾ ಆಯುಕ್ತರು (Commissioner of Railway Safety) ಅಪಘಾತದ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50 ಸಾವಿರ ರೂ. ಪ್ರಕಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Andhra train accident: 13 ಜನರ ಬಲಿ ಪಡೆದ ಆಂಧ್ರ ರೈಲು ಅಪಘಾತದ‌ ಮೂಲ ಕಾರಣ ಬಹಿರಂಗ

Continue Reading

ದೇಶ

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಆತನ ನೋವಿಗೆ ಈಕೆ ಮುಲಾಮು ಆಗುತ್ತಿದ್ದಳು. ಈಕೆಯ ಮುನಿಸನ್ನು ಆತ ಪಿಸುಮಾತಿನಿಂದಲೇ ಸಮಾಧಾನ ಮಾಡುತ್ತಿದ್ದ. ಆದರೆ, ಕೆಲ ದಿನಗಳ ಹಿಂದಷ್ಟೇ ಆರತಿ ಯಾದವ್‌, ಬ್ರೇಕಪ್‌ ಮಾಡಿಕೊಳ್ಳೋಣ ಎಂದಿದ್ದಳು. ಈಕೆಯು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದಾಳೆ ಎಂಬ ಶಂಕೆಯೂ ರೋಹಿತ್‌ ಯಾದವ್‌ ಮನಸ್ಸಲ್ಲಿ ಮೂಡಿತ್ತು. ಹಾಗಾಗಿಯೇ, ನಡು ರಸ್ತೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai News
Koo

ಮುಂಬೈ: ಬದಲಾದ ಕಾಲಘಟ್ಟದಲ್ಲಿ ಲವ್‌ ಬ್ರೇಕಪ್‌ (Love Breakup) ಎನ್ನುವುದು ತುಂಬ ಸಾಮಾನ್ಯ ಎನಿಸಿದೆ. ಆಕರ್ಷಣೆಗೆ ಒಳಗಾಗಿ ಪ್ರೀತಿಸುವುದು, ಒಂದು ವರ್ಷ ಜತೆಗೆ ತಿರುಗಾಡಿ, ಸಣ್ಣ ಭಿನ್ನಾಭಿಪ್ರಾಯ ಬಂದರೂ ಪ್ರೀತಿಗೆ ತಿಲಾಂಜಲಿ ಇಡುವುದು ಯುವಕ-ಯುವತಿಯರಿಗೆ ರೂಢಿಯಾಗಿದೆ. ಆದರೆ, ಕೆಲವೊಂದು ಪ್ರಕರಣಗಳಲ್ಲಿ ಬ್ರೇಕಪ್‌ಗಳು ಹಿಂಸೆ, ಕೊಲೆಗೂ ಕಾರಣವಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಮುಂಬೈನಲ್ಲಿ (Mumbai) ವ್ಯಕ್ತಿಯೊಬ್ಬ ಲವ್‌ ಬ್ರೇಕಪ್‌ ಎಂದಿದ್ದಕ್ಕೆ ಪ್ರೇಯಸಿಯನ್ನು ನಡು ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಕೃತ್ಯದ ಭೀಕರ ವಿಡಿಯೊ ಈಗ ವೈರಲ್‌ ಆಗಿದೆ.

ಮುಂಬೈ ಬಳಿಯ ವಸಾಯ್‌ ಪ್ರದೇಶದ ರಸ್ತೆಯೊಂದರಲ್ಲಿ 20 ವರ್ಷದ ಆರತಿ ಯಾದವ್ ನಡೆದುಕೊಂಡು ಹೋಗುತ್ತಿರುತ್ತಾರೆ. ಆಗ 29 ವರ್ಷದ ರೋಹಿತ್‌ ಯಾದವ್‌ ಎಂಬಾತ ಸ್ಪ್ಯಾನರ್‌ ಹಿಡಿದುಕೊಂಡೇ ಓಡಿ ಬಂದು ಯುವತಿ ಮೇಲೆ ದಾಳಿ ಮಾಡಿದ್ದಾನೆ. ಯುವತಿ ತಲೆಗೆ, ಎದೆಗೆ ಸ್ಪ್ಯಾನರ್‌ನಿಂದ ಹೊಡೆದು, ಆಕೆ ನೆಲಕ್ಕೆ ಬಿದ್ದ ಮೇಲೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ಒಂದಿಬ್ಬರು ವ್ಯಕ್ತಿಯನ್ನು ತಡೆಯಲು ಪ್ರಯತ್ನಿಸಿದರೂ ಅಷ್ಟೊತ್ತಿಗಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಆರತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಲವ್‌ ಬ್ರೇಕಪ್‌ ಆಗಿದ್ದೇ ಕಾರಣ?

ಆರತಿ ಯಾದವ್‌ ಹಾಗೂ ರೋಹಿತ್‌ ಯಾದವ್‌ ಅವರು ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕೆಲ ದಿನಗಳ ಹಿಂದೆ ಆರತಿ ಯಾದವ್‌ ಈತನಿಗೆ ಬ್ರೇಕಪ್‌ ಎಂದಿದ್ದಳು. ಇನ್ಯಾವತ್ತೂ ನನ್ನನ್ನು ನೋಡಲು ಬರಬೇಡ, ಮಾತನಾಡಿಸಬೇಡ, ಕಾಲ್‌ ಮಾಡಿ ತೊಂದರೆ ಕೊಡಬೇಡ ಎಂದಿದ್ದಳು. ಇದರಿಂದ ರೋಹಿತ್‌ ಯಾದವ್‌ ನೊಂದಿದ್ದ. ಅಲ್ಲದೆ, ಆರತಿ ಯಾದವ್‌ ಬೇರೊಬ್ಬನ ಜತೆ ಪ್ರೀತಿಯ ಬಲೆಗೆ ಸಿಲುಕಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿತ್ತು.

ಬೇರೆಯವನನ್ನು ಪ್ರೀತಿಸುತ್ತಿದ್ದಾಳೆ ಎಂದು ಭಾವಿಸಿದ ರೋಹಿತ್‌ ಯಾದವ್‌, ನನಗೆ ಸಿಗದವಳು ಯಾರಿಗೂ ಸಿಗಬಾರದು ಎಂದು ಭಾವಿಸಿದ್ದಾನೆ. ಇದೇ ಕಾರಣಕ್ಕಾಗಿ ತುಂಬಿದ ರಸ್ತೆಯಲ್ಲಿಯೇ ಸ್ಪ್ಯಾನರ್‌ನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ಬಳಿಕ, “ನನಗೇಕೆ ಹೀಗೆ ಮಾಡಿದೆ” ಎಂದು ಹತಾಶಯ ಧ್ವನಿಯಲ್ಲಿ ಕಿರುಚಿದ್ದಾನೆ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Continue Reading

ದೇಶ

Reliance Jio Down: ದೇಶಾದ್ಯಂತ ಜಿಯೋ ನೆಟ್‌ವರ್ಕ್‌ ಡೌನ್;‌ ಇಂಟರ್‌ನೆಟ್‌ ಇಲ್ಲದೆ ಅಲ್ಲೋಲಕಲ್ಲೋಲ!

Reliance Jio Down: ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಜಿಯೋ ಸಮಸ್ಯೆಯಾಗಿದೆ. ಇನ್ನೂ ಕೆಲವರು, ಇಂಟರ್‌ನೆಟ್‌ ಕನೆಕ್ಷನ್‌ ಇದೆ. ಆದರೆ, ದಿನ ನಿತ್ಯ ಬಳಸುವ ಫೇಸ್‌ಬುಕ್‌, ವಾಟ್ಸ್ಯಾಪ್‌, ಜಿಯೋ ಟಿವಿ ಸೇರಿ ಹಲವು ಅಪ್ಲಿಕೇಶನ್‌ಗಳನ್ನು ಓಪನ್‌ ಮಾಡಲು ಆಗುತ್ತಿಲ್ಲ ಎಂಬುದಾಗಿ ತಿಳಿದುಬಂದಿದೆ. ಆದರೆ, ನೆಟ್‌ವರ್ಕ್‌, ಇಂಟರ್‌ನೆಟ್‌ ಡೌನ್‌ ಆಗಿರುವ ಕುರಿತು ಇದುವರೆಗೆ ರಿಲಯನ್ಸ್‌ ಜಿಯೋ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

VISTARANEWS.COM


on

Reliance Jio Down
Koo

ನವದೆಹಲಿ: ಕರ್ನಾಟಕ ಸೇರಿ ದೇಶಾದ್ಯಂತ ರಿಲಯನ್ಸ್‌ ಜಿಯೋ ನೆಟ್‌ವರ್ಕ್‌ ಡೌನ್‌ (Reliance Jio Down) ಆಗಿದ್ದು, ನೆಟ್‌ವರ್ಕ್‌ ಇಲ್ಲದೆ, ಇಂಟರ್‌ನೆಟ್‌ ಇಲ್ಲದೆ ಜನರ ಪರದಾಡುತ್ತಿದ್ದಾರೆ. ಮೊಬೈಲ್‌ ಇಂಟರ್‌ನೆಟ್‌ (Mobile Internet), ಜಿಯೋ ಫೈಬರ್‌, ಮೊಬೈಲ್‌ ನೆಟ್‌ವರ್ಕ್‌ (Mobile Network) ಸೇರಿ ಗ್ರಾಹಕರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಕುರಿತು ಎಕ್ಸ್‌ ಸೇರಿ ಹಲವು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಾವಿರಾರು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಇಂಟರ್‌ನೆಟ್‌, ನೆಟ್‌ವರ್ಕ್‌ ಸಮಸ್ಯೆ ಬಗ್ಗೆ ಇದುವರೆಗೆ ರಿಲಯನ್ಸ್‌ ಜಿಯೋ (Reliance Jio) ಪ್ರತಿಕ್ರಿಯೆ ನೀಡಿಲ್ಲ.

ಸರ್ವರ್‌ಗಳ ಮೇಲೆ ನಿಗಾ ಇಡುವ ಡೌನ್‌ಡಿಟೆಕ್ಟರ್‌ ಸಂಸ್ಥೆ ವರದಿ ಪ್ರಕಾರ ಶೇ.54ರಷ್ಟು ಗ್ರಾಹಕರು ಮೊಬೈಲ್‌ ಇಂಟರ್‌ನೆಟ್‌ ಸಮಸ್ಯೆ ಬಗ್ಗೆ ದೂರಿದರೆ, ಶೇ.38ರಷ್ಟು ಜಿಯೋ ಬಳಕೆದಾರರು ಜಿಯೋ ಫೈಬರ್‌ ಹಾಗೂ ಶೇ.7ರಷ್ಟು ಗ್ರಾಹಕರು ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಬಗ್ಗೆ ದೂರಿದ್ದಾರೆ ಎಂದು ತಿಳಿಸಿದೆ. ಬೆಂಗಳೂರು, ಹೈದರಾಬಾದ್‌, ಚೆನ್ನೈ ಸೇರಿ ದೇಶದ ಮೂಲೆ ಮೂಲೆಗಳ ಗ್ರಾಹಕರು ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಇಂಟರ್‌ನೆಟ್‌, ನೆಟ್‌ವರ್ಕ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಜಿಯೋ ಸಮಸ್ಯೆಯಾಗಿದೆ. ಇನ್ನೂ ಕೆಲವರು, ಇಂಟರ್‌ನೆಟ್‌ ಕನೆಕ್ಷನ್‌ ಇದೆ. ಆದರೆ, ದಿನ ನಿತ್ಯ ಬಳಸುವ ಫೇಸ್‌ಬುಕ್‌, ವಾಟ್ಸ್ಯಾಪ್‌, ಜಿಯೋ ಟಿವಿ ಸೇರಿ ಹಲವು ಅಪ್ಲಿಕೇಶನ್‌ಗಳನ್ನು ಓಪನ್‌ ಮಾಡಲು ಆಗುತ್ತಿಲ್ಲ ಎಂಬುದಾಗಿ ತಿಳಿದುಬಂದಿದೆ. ದೇಶಾದ್ಯಂತ ಕೋಟ್ಯಂತರ ಜನ ಜಿಯೋ ಸಿಮ್‌, ಜಿಯೋ ಫೈಬರ್‌ಅನ್ನು ಬಳಸುವ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಜನ ದೂರಿದ್ದಾರೆ.

ಕೆಲ ತಿಂಗಲ ಹಿಂದೆ ಎಕ್ಸ್‌ ಸಾಮಾಜಿಕ ಜಾಲತಾಣದ ಸರ್ವರ್‌ ಡೌನ್‌ ಆಗಿತ್ತು, ಶೇ.53ರಷ್ಟು ಜನ ವೆಬ್‌ನಲ್ಲಿ ಸಮಸ್ಯೆ ಎದುರಿಸಿದರೆ, ಶೇ.29ರಷ್ಟು ಮಂದಿಗೆ ಸರ್ವರ್‌ನಲ್ಲಿ ಸಮಸ್ಯೆ ಎದುರಾಗಿದೆ ಹಾಗೂ ಶೇ.18ರಷ್ಟು ಬಳಕೆದಾರರು ಅಪ್ಲಿಕೇಶನ್‌ನಲ್ಲಿ (App) ಸಮಸ್ಯೆ ಎದುರಿಸಿದ್ದಾರೆ. ಒಂದಷ್ಟು ಜನರಿಗೆ ಪೋಸ್ಟ್‌ಗಳು, ಅಪ್‌ಡೇಟ್‌ಗಳು ಕಾಣಿಸಿಲ್ಲ. ಇನ್ನೂ ಒಂದಷ್ಟು ಜನರ ಖಾತೆಗಳು ಲಾಗೌಟ್‌ ಆಗಿವೆ. ಕೆಲವೊಂದಿಷ್ಟು ಮಂದಿಗೆ ತಮ್ಮ ಪೋಸ್ಟ್‌ಗಳು ಅಪ್‌ಲೋಡ್‌ ಆಗಿಲ್ಲ ಎಂಬುದಾಗಿ ಡೌನ್‌ಡಿಟೆಕ್ಟರ್‌ ಮಾಹಿತಿ ನೀಡಿತ್ತು.

ಇದನ್ನೂ ಓದಿ: Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Continue Reading
Advertisement
Electric Shock
ವಿಜಯಪುರ13 mins ago

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Woman having headache. stressed, Migraine, World Brain Tumor day
ಆರೋಗ್ಯ19 mins ago

Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

Indian Women
ವಿದೇಶ34 mins ago

ಭಾರತದಿಂದ ಅಮೆರಿಕಕ್ಕೆ ತೆರಳಿ, 29 ವರ್ಷದ ಯುವತಿಯನ್ನು ಕೊಂದ ಪಂಜಾಬ್‌ ವ್ಯಕ್ತಿ; ಇಷ್ಟೇಕೆ ಸೇಡು?

Pavithra Gowda
ಪ್ರಮುಖ ಸುದ್ದಿ36 mins ago

Pavithra Gowda: ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್‌

International Yoga Day 2024
ಫ್ಯಾಷನ್51 mins ago

International Yoga Day 2024: ಯುವತಿಯರ ಯೋಗಾಭ್ಯಾಸಕ್ಕೆ ಸಾಥ್‌ ನೀಡುವ 3 ಶೈಲಿಯ ಫ್ಯಾಷನ್‌ವೇರ್ಸ್

wild animals Attack
ಕೊಡಗು56 mins ago

Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

Viral Video
ಕ್ರಿಕೆಟ್1 hour ago

Viral Video: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ ಪಾಕ್​ ವೇಗಿ; ತಡೆದು ನಿಲ್ಲಿಸಿದ ಪತ್ನಿ

Kempegowda Jayanti
ಕರ್ನಾಟಕ1 hour ago

Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Train Accident
ದೇಶ1 hour ago

Train Accident: ಸಿಬ್ಬಂದಿ ನಿರ್ಲಕ್ಷ್ಯ, ಸಿಗ್ನಲ್‌ ದೋಷ; ಬಂಗಾಳ ರೈಲು ಅಪಘಾತಕ್ಕೇನು ಕಾರಣ?

Mumbai News
ದೇಶ2 hours ago

‘ಯಾಕ್‌ ಹೀಗ್‌ ಮೋಸ ಮಾಡ್ದೆ’ ಎನ್ನುತ್ತಲೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಡಿದು ಕೊಂದ ಪ್ರೇಮಿ; Video ಇದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌