ದೇಶ
ITR FILING 2021-22 | ಇವತ್ತೇ ಕೊನೆಯ ದಿನ, ಹಾಗಿದ್ರೆ ಇವತ್ತೂ ಫೈಲಿಂಗ್ ಮಾಡದಿದ್ದರೆ ಏನಾಗ್ತದೆ?
ಇವತ್ತು ಜುಲೈ 31. ಸರಕಾರ ಹೇಳಿರುವ ಪ್ರಕಾರ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇವತ್ತೇ ಲಾಸ್ಟ್ ಡೇಟ್. ಅದು ಸರಿ, ಒಂದು ವೇಳೆ ಇವತ್ತೂ ಸಲ್ಲಿಸಲು ಆಗಿಲ್ಲ ಅಂತಿಟ್ಟುಕೊಳ್ಳೋಣ.. ಏನಾಗುತ್ತದೆ..? ಈ ವರದಿ ಓದಿ.
ನವ ದೆಹಲಿ: ೨೦೨೧-೨೨ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ ೩೧ ಕೊನೆ ದಿನ ಎಂದು ಸಾರಿ ಸಾರಿ ಹೇಳಲಾಗಿದೆ. ಯಾವುದೇ ಕಾರಣಕ್ಕೂ ಈ ಬಾರಿ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆದರೂ ಕೊನೆಯ ಕ್ಷಣದಲ್ಲಾದರೂ ವಿಸ್ತರಣೆ ಆದೀತು ಎಂದು ಕಾಯುವವರ ಸಂಖ್ಯೆ ಕಡಿಮೆ ಏನಿಲ್ಲ.
೨೦೨೦-೨೧ನೇ ಸಾಲಿನಲ್ಲಿ ಡಿಸೆಂಬರ್ ೩೧ರವರೆಗೆ ವಿಸ್ತರಿತ ಗಡುವಿನಲ್ಲಿ ಒಟ್ಟು ೫.೮೯ ಕೋಟಿ ರೂ. ರಿಟರ್ನ್ಸ್ ಸಲ್ಲಿಕೆಯಾಗಿತ್ತು. ಈ ಸಾಲಿನಲ್ಲಿ ಜುಲೈ ೩೦ಕ್ಕೆ ಐದು ಕೋಟಿ ಸಲ್ಲಿಕೆಯಾಗಿವೆ. ಕೊನೆಯ ದಿನವಾದ ಭಾನುವಾರದ ಭರಾಟೆ ಇನ್ನೂ ಜೋರಾಗಿದ್ದು ಮಧ್ಯಾಹ್ನದ ಹೊತ್ತಿಗೆ ೧೯ ಮಂದಿ ರಿಟರ್ನ್ಸ್ ಸಲ್ಲಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಸಲ್ಲಿಸದೆ ಹೋದರೆ ಏನಾಗುತ್ತದೆ?
ಜುಲೈ ೩೧ರ ಗಡುವಿನೊಳಗೆ ಅದಾಯ ತೆರಿಗೆ ಐಟಿಆರ್ ಸಲ್ಲಿಸದೆ ಹೋದರೆ ದೊಡ್ಡ ಸಮಸ್ಯೆ ಏನೂ ಆಗುವುದಿಲ್ಲ. ಈ ವರ್ಷದ ಡಿಸೆಂಬರ್ ೩೧ರವರೆಗೂ ಐಟಿಆರ್ ಸಲ್ಲಿಸಲು ಅವಕಾಶವಿದೆ. ಆದರೆ, ೫೦೦೦ ರೂ. ದಂಡ ವಿಧಿಸಲಾಗುತ್ತದೆ. ಈ ದಂಡದ ಮೊತ್ತ ಐದು ಲಕ್ಷಕ್ಕಿಂತ ಹೆಚ್ಚು ಆದಾಯ ಇರುವವರಿಗೆ ಮಾತ್ರ ಅನ್ವಯ. ಒಂದು ವೇಳೆ ಒಟ್ಟು ಆದಾಯ ಐದು ಲಕ್ಷಕ್ಕಿಂತ ಕಡಿಮೆ ಇದ್ದರೆ ಒಂದು ಸಾವಿರ ರೂ. ದಂಡ ಪಾವತಿಸಿ ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ಯಾವಾಗ ಬೇಕಾದರೂ ಐಟಿಆರ್ ಸಲ್ಲಿಸಬಹುದು. ಆದಾಯ ತೆರಿಗೆ ಕಾಯಿದೆ ೧೯೬೧ರ ಪ್ರಕಾರ ವಿಳಂಬ ಶುಲ್ಕ (ಲೇಟ್ ಫೀ) ಪಾವತಿಸಿ ಐಟಿಆರ್ ಫೈಲಿಂಗ್ ಮಾಡುವುದಕ್ಕೆ ಅವಕಾಶವಿದೆ.
ಕೆಲವು ಅನನುಕೂಲಗಳೂ ಇವೆ!
ಹಾಗಂತ ಲೇಟ್ ಫೀ ಜತೆ ಐಟಿಆರ್ ಫೈಲ್ ಮಾಡುವುದರಿಂದ ಕೆಲವೊಂದು ಅನನುಕೂಲಗಳೂ ಇವೆ.
೧. ಒಬ್ಬ ವ್ಯಕ್ತಿ ಅಂತಿಮ ಗಡು ಮೀರಿದ ಬಳಿಕ ದಂಡ ಶುಲ್ಕರೊಂದಿಗೆ ಐಟಿಆರ್ ಫೈಲ್ ಮಾಡಿದರೆ ಅವನಿಗೆ ಕೆಲವೊಂದು ವಿಚಾರಗಳಲ್ಲಿ ನಷ್ಟವನ್ನು ಫಾರ್ವರ್ಡ್ ಮಾಡಲು ಅವಕಾಶವಿಲ್ಲ. ಉದಾಹರಣೆಗೆ, ಇತರ ಆದಾಯ ಮೂಲಗಳನ್ನು ಸೇರಿಸುವಂತಿಲ್ಲ, ಕ್ಯಾಪಿಟಲ್ ಗೇನ್ಸ್ನಿಂದ ಬಂದಿರುವ ಲಾಭವನ್ನು ತೋರಿಸುವಂತಿಲ್ಲ, ಉದ್ಯಮ ಮತ್ತು ವೃತ್ತಿಯಿಂದ ಬಂದಿರುವ ಇತರ ಆದಾಯ ಉಲ್ಲೇಖಿಸುವಂತಿಲ್ಲ. ಆದರೆ, ಮನೆ ಮತ್ತಿತರ ಆಸ್ತಿಗಳಿಂದ ಬಂದಿರುವ ಆದಾಯವನ್ನು ತೋರಿಸಲು ಯಾವುದೇ ಅಡ್ಡಿಯಿಲ್ಲ.
೨. ಒಂದು ವೇಳೆ ಆದಾಯ ತೆರಿಗೆ ರಿಫಂಡ್ ಬರುವುದಿದ್ದರೆ ಅದು ಐಟಿಆರ್ ಫೈಲಿಂಗ್ ಆಗಿ ಪರಿಶೀಲನೆ ಆದ ಮೇಲಷ್ಟೇ ಬರುತ್ತದೆ. ಅದಕ್ಕಿಂತ ಮೊದಲು ಪಾವತಿಸಿದರೆ ತಕ್ಷಣವೇ ಬರುತ್ತದೆ.
೩. ಆದಾಯ ತೆರಿಗೆ ರಿಫಂಡ್ ಮಾಡುವಾಗ ವಿಳಂಬವಾದರೆ ಇಲಾಖೆ ಗ್ರಾಹಕನಿಗೆ ಪ್ರತಿ ತಿಂಗಳು ೦.೫% ಬಡ್ಡಿಯನ್ನು ನೀಡುತ್ತದೆ. ಈ ಅನುಕೂಲ ಅಂತಿಮ ಗಡು ಮೀರಿ ಪಾವತಿ ಮಾಡುವವನಿಗೆ ಇರುವುದಿಲ್ಲ.
೪. ವಿಳಂಬವಾಗಿ ಐಟಿಆರ್ ಫೈಲಿಂಗ್ ಮಾಡುತ್ತೀರಿ ಎಂದಿಟ್ಟುಕೊಳ್ಳಿ. ಆಗ ನಿಮಗೆ ಬರಬೇಕಾದ ರಿಫಂಡ್ನಲ್ಲಿ ೫೦೦೦ ರೂ. ದಂಡ ಶುಲ್ಕವನ್ನು ಮುರಿದುಕೊಳ್ಳಲಾಗುತ್ತದೆ. ಒಂದು ವೇಳೆ ರಿಫಂಡ್ ಮೊತ್ತ ೫೦೦೦ ರೂ.ಗಿಂತ ಕಡಿಮೆ ಇದ್ದರೆ ಬಡ್ಡಿಯೊಂದಿಗೆ ಪಾವತಿಸಬೇಕಾಗುತ್ತದೆ. ಇದು ತಿಂಗಳಿಗೆ ೧% ಇರುತ್ತದೆ.
ಡಿಸೆಂಬರ್ ೩೧ಕ್ಕೂ ಪಾವತಿಸದಿದ್ದರೆ!?
ಇನ್ನೂ ಒಂದು ಸಾಧ್ಯತೆಯನ್ನು ಪರಿಶೀಲಿಸುವುದಾದರೆ, ಒಂದು ವೇಳೆ ಡಿಸೆಂಬರ್ ೩೧ರ ಗಡುವಿಗೂ ಆದಾಯ ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡದೆ ಹೋದರೆ ಏನಾಗುತ್ತದೆ? ಆ ಬಳಿಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಇದರಿಂದ ಒಂದು ವರ್ಷದ ಐಟಿಆರ್ ದಾಖಲೆಯೇ ಸಿಗುವುದಿಲ್ಲ. ಹಾಗಿರುವಾಗ ಯಾವುದಾದರೂ ಲೋನ್ ಮಾಡಬೇಕು, ಮನೆ ಕಟ್ಟಬೇಕು ಎಂದಾದರೆ ಕಷ್ಟವಾಗುತ್ತದೆ. ಕೆಲವೊಂದು ಪ್ರಕರಣಗಳಲ್ಲಿ ಆದಾಯ ತೆರಿಗೆ ಇಲಾಖೆಯೇ ನಿಮ್ಮ ಐಟಿಆರ್ ಫೈಲ್ ಆಗಿಲ್ಲ ಎಂದು ನೋಟಿಸ್ ಕಳುಹಿಸುವುದೂ ಉಂಟು. ಆಗ ಒಂದು ಛಾನ್ಸ್ ಉಳಿದಿರುತ್ತದೆ!
ಇದನ್ನೂ ಓದಿ| ITR Filing 2021-22| ಜುಲೈ 31ರ ಗಡುವು ವಿಸ್ತರಣೆಗೆ ಚಾರ್ಟರ್ಡ್ ಅಕೌಂಟೆಂಟ್ಗಳ ಒತ್ತಾಯ
ದೇಶ
ವಿಸ್ತಾರ ಸಂಪಾದಕೀಯ: ಖಲಿಸ್ತಾನಿ ಭಯೋತ್ಪಾದಕರ ಹೆಡೆಮುರಿ ಕಟ್ಟಲೇಬೇಕಿದೆ
Vistara Editorial: ಕೆನಡಾ ವಿಚಾರದಲ್ಲಿ ಭಾರತ ದೃಢ ನಿರ್ಧಾರ ತೆಗೆದುಕೊಂಡಿದೆ. ಭಾರತದ ನಡೆಗಳು ಖಲಿಸ್ತಾನಿಗಳಿಗೆ ನಡುಕ ಹುಟ್ಟಿಸಿರುವಂತೆಯೇ ಕೆನಡಾ ಸರ್ಕಾರಕ್ಕೆ ಎಚ್ಚರಿಕೆಯನ್ನೂ ರವಾನಿಸಿವೆ.
ಖಲಿಸ್ತಾನ್ ಉಗ್ರರು (Khalistani Terrorist) ಹಾಗೂ ಗ್ಯಾಂಗ್ಸ್ಟರ್ಗಳ ನಡುವಿನ ಲಿಂಕ್ಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಬುಧವಾರ ಆರು ರಾಜ್ಯಗಳ 50 ಸ್ಥಳಗಳಲ್ಲಿ ಬೃಹತ್ ಪ್ರಮಾಣದ ದಾಳಿ (NIA raid) ನಡೆಸಿದೆ. ಮೂಲಗಳ ಪ್ರಕಾರ, ಖಲಿಸ್ತಾನ್ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಹವಾಲಾ ಆಪರೇಟರ್ಗಳು, ದರೋಡೆಕೋರರು, ಮತ್ತಿತರ ಸಂಘಟಿತ ಅಪರಾಧ ಜಾಲಗಳಲ್ಲಿ ಸಕ್ರಿಯರಾದವರನ್ನು ಬಂಧಿಸಲು ದಾಳಿಗಳು ನಡೆಯುತ್ತಿವೆ. ಪಂಜಾಬ್ನಲ್ಲಿ 30, ರಾಜಸ್ಥಾನದಲ್ಲಿ 13, ಹರಿಯಾಣದಲ್ಲಿ 4, ಉತ್ತರಾಖಂಡದಲ್ಲಿ 2 ಮತ್ತು ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ತಲಾ 1 ಸ್ಥಳಗಳಲ್ಲಿ ದಾಳಿ ನಡೆದಿದೆ. ಭಾರತದಿಂದ ಪರಾರಿಯಾಗಿ ಬ್ರಿಟನ್, ಅಮೆರಿಕ, ಕೆನಡಾ, ದುಬೈ, ಪಾಕಿಸ್ತಾನ ಮತ್ತು ಇತರ ದೇಶಗಳಲ್ಲಿ ನೆಲೆಸಿರುವ 19 ಖಲಿಸ್ತಾನಿ ಭಯೋತ್ಪಾದಕರ ಪಟ್ಟಿಯನ್ನು ಈ ಹಿಂದೆ ಎನ್ಐಎ ಬಿಡುಗಡೆ ಮಾಡಿತ್ತು. ಇಲ್ಲಿರುವ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ. ಇಂಥದೊಂದು ವ್ಯಾಪಕ ಕಾರ್ಯಾಚರಣೆಯ ಅಗತ್ಯವಿತ್ತು(Vistara Editorial).
ಸದ್ಯ ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಳಿಕ ಬಿಗಡಾಯಿಸಿರುವ ಕೆನಡಾ- ಭಾರತ ಸಂಬಂಧದ ಹಿನ್ನೆಲೆಯಲ್ಲಿ, ಭಾರತದಲ್ಲಿರುವ ಖಲಿಸ್ತಾನ್ ಸಹಾನುಭೂತಿಪರರ ಹೆಡೆಮುರಿ ಕಟ್ಟುವುದು ಎನ್ಐಎಯ ತಕ್ಷಣದ ಉದ್ದೇಶವಾಗಿರುವಂತಿದೆ. ಈಗಾಗಲೇ ಕೆನಡಾದಲ್ಲಿರುವ, ನಿಷೇಧಿತ ಖಲಿಸ್ತಾನಿ ಪರವಾದ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಸದಸ್ಯ, ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಂಬಾತನ ಆಸ್ತಿಯನ್ನು ಎನ್ಐಎ ಮುಟ್ಟುಗೋಲು ಹಾಕಿಕೊಂಡಿದೆ. ನಿಷೇಧಿತ ಉಗ್ರ ಸಂಘಟನೆಯಾದ ಬಬ್ಬರ್ ಖಾಲ್ಸಾ ಇಂಟರ್ನ್ಯಾಶನಲ್ (ಬಿಕೆಐ) ನೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಹರ್ವಿಂದರ್ ಸಿಂಗ್ ಸಂಧು ಅಲಿಯಾಸ್ ರಿಂಡಾ ಮತ್ತು ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾ ಅವರ ತಲೆಗೆ ತಲಾ 10 ಲಕ್ಷ ರೂಪಾಯಿ ಹಾಗೂ ಫಿರೋಜ್ಪುರದ ಪರ್ಮಿಂದರ್ ಸಿಂಗ್ ಕೈರಾ, ಪಂಜಾಬ್ನ ತರ್ನ್ ತರನ್ನ ಸತ್ನಾಮ್ ಸಿಂಗ್ ಮತ್ತು ಯದ್ವಿಂದರ್ ಸಿಂಗ್ ಎಂಬವರ ತಲೆಗೆ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಎನ್ಐಎ ಘೋಷಿಸಿದೆ.
ಒಂದು ಕಾಲದಲ್ಲಿ ಸಂಪೂರ್ಣ ನಾಶವಾಗಿದೆ ಎಂದು ಭಾವಿಸಲಾಗಿದ್ದ ಖಲಿಸ್ತಾನ್ ಚಳುವಳಿಯ ಪರ ಚಟುವಟಿಕೆ ಇತ್ತೀಚಿನ ಒಂದು ದಶಕದಲ್ಲಿ ನಿಧಾನವಾಗಿ ಹೆಚ್ಚುತ್ತ ಬಂದಿತ್ತು. ಕಾಶ್ಮೀರದಲ್ಲಿ ತನ್ನ ಆಟ ನಡೆಯುವುದಿಲ್ಲ ಎಂದು ಗೊತ್ತಾದ ಬಳಿಕ ಪಂಜಾಬ್ನತ್ತ ಪಾಕಿಸ್ತಾನ ತನ್ನ ದೃಷ್ಟಿಯನ್ನು ಹರಿಸಿದ್ದು, ಖಲಿಸ್ತಾನ ಚಳವಳಿಗಾರರಿಗೆ ಬೆಂಬಲ ನೀಡತೊಡಗಿದೆ. ಹೀಗಾಗಿ, ಇದು ಚಿಗುರುತ್ತಿರುವಾಗಲೇ ಚಿವುಟುವುದು ಅತ್ಯಂತ ಉತ್ತಮ. ಬೆಳೆಯಲು ಬಿಟ್ಟರೆ ಯಾವ ಬಗೆಯ ಅನಾಹುತವನ್ನು ಇದು ಎಸಗಬಹುದು ಎಂಬುದನ್ನು ತೊಂಬತ್ತರ ದಶಕದಲ್ಲಿ ನೋಡಿದ್ದಾಗಿದೆ. ಕಳೆದ ವರ್ಷ ಪಂಜಾಬ್ನ ತರಣ್ ತಾರಣ್ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ರಾಕೆಟ್ ಲಾಂಚರ್ನಿಂದ ಖಲಿಸ್ತಾನ್ ಉಗ್ರರು ದಾಳಿ ನಡೆಸಿದ್ದರು. ಅದೇ ವರ್ಷ ಮೇ ತಿಂಗಳಲ್ಲಿ ಪಂಜಾಬ್ ಗುಪ್ತಚರ ಇಲಾಖೆ ಪ್ರಧಾನ ಕಚೇರಿ ಮೇಲೂ ಇದೇ ರೀತಿಯ ದಾಳಿ ನಡೆಸಲಾಗಿತ್ತು. ರಾಕೆಟ್ ಲಾಂಚರ್ ಮೂಲಕ, ಡ್ರೋನ್ಗಳ ಮೂಲಕ ದಾಳಿ ನಡೆಸುವುದೆಂದರೆ ಮಿಲಿಟರಿ ಮಟ್ಟದ ದಾಳಿ. ಇದು ಗಡಿಯಾಚೆಯಿಂದ ಸ್ಮಗಲ್ ಆಗಿ ಬಂದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದರು. ಯುದ್ಧದ ಹಂತಕ್ಕೆ ಖಲಿಸ್ತಾನಿ ಉಗ್ರರು ಮುಟ್ಟಿದ್ದಾರೆ ಎಂದ ಬಳಿಕ ಇದನ್ನು ಗಂಭೀರವಾಗಿಯೇ ಪರಿಗಣಿಸಬೇಕಿದೆ.
ಈ ಸಂಪಾದಕೀಯವನ್ನೂ ಓದಿ: Khalistani Terrorist: ಖಲಿಸ್ತಾನ್- ಗ್ಯಾಂಗ್ಸ್ಟರ್ ಜಾಲ ಭೇದಿಸಲು 6 ರಾಜ್ಯಗಳ 50 ಕಡೆ NIA ದಾಳಿ
1980-90ರ ದಶಕದಲ್ಲಿ ಒಂದು ಚಳವಳಿಯಾಗಿ ಹುಟ್ಟಿಕೊಂಡ ಖಲಿಸ್ತಾನಿ ಬೇಡಿಕೆ ಮುಂದೆ ಭಾರತದೊಳಗೇ ರಣಗಾಯವಾಗಿ ಸೃಷ್ಟಿಯಾಗಿದ್ದು, ಭದ್ರತೆಗೆ ತಲೆನೋವಾಗಿ ಪರಿಣಮಿಸಿದ್ದು ನಮಗೆ ಗೊತ್ತಿದೆ. ಸುಮಾರು 12,000 ನಾಗರಿಕರು, 10,000 ಉಗ್ರರು ಆಗ ಬಲಿಯಾಗಿದ್ದರು. ಪ್ರಧಾನ ಮಂತ್ರಿಯ ಕಗ್ಗೊಲೆ ನಡೆಸುವ ಮಟ್ಟಕ್ಕೂ ಆ ಭಯೋತ್ಪಾದಕರು ಹೋಗಿದ್ದರು. ಈಗ ಮತ್ತೆ ಖಲಿಸ್ತಾನಿಗಳು ಬಾಲ ಬಿಚ್ಚುತ್ತಿದ್ದಾರೆ. ಸಿಖ್ ಪ್ರತ್ಯೇಕತಾವಾದಿ ಖಲಿಸ್ತಾನಿಗಳಿಗೆ ಪಾಕಿಸ್ತಾನ ಮಾತ್ರವಲ್ಲ ಕೆನಡಾವೂ ನೇರವಾಗಿ ಬೆಂಬಲ ನೀಡುತ್ತಿದೆ. ಕೆನಡಾದಲ್ಲಿ ಮಿತಿ ಮೀರಿರುವ ಸಿಖ್ ಪ್ರತ್ಯೇಕತಾವಾದಿ ಭಯೋತ್ಪಾದಕರ ವಿರುದ್ಧ ಅಲ್ಲಿನ ಆಡಳಿತವಾಗಲೀ, ರಾಜಕೀಯ ಪಕ್ಷಗಳಾಗಲೀ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಯಾಕೆಂದರೆ ಅಲ್ಲಿ ಗಣನೀಯವಾಗಿರುವ ಸಿಖ್ಖರು ಹಾಗೂ ಅವರ ಮತ ಬ್ಯಾಂಕ್. ಸಿಖ್ ಫಾರ್ ಜಸ್ಟಿಸ್ ಸಂಘಟನೆ ಕೆನಡಾದಿಂದಲೇ ಸಕ್ರಿಯವಾಗಿದ್ದುಕೊಂಡು ಪಂಜಾಬಿನಲ್ಲಿ ಮತ್ತೆ ಭಯೋತ್ಪಾದನೆ ಬಿತ್ತುತ್ತಿದೆ. ಸಾವಿರಾರು ಹಿಂದೂ ಕುಟುಂಬಗಳು ಕೆನಡಾ, ಆಸ್ಟ್ರೇಲಿಯಾದಲ್ಲಿ ವೃತ್ತಿ ಕಾರಣ ನೆಲೆಸಿವೆ. ಇದೀಗ ಇದೇ ಖಲಿಸ್ತಾನಿಗಳೇ ಕೆನಡಾ ಮತ್ತು ಭಾರತದ ನಡುವೆ ಸಂಬಂಧ ಹಳಸಲು ಕಾರಣರಾಗಿದ್ದಾರೆ. ಇವರನ್ನು ಬುಡದಿಂದಲೇ ಚಿವುಟಿ ಹಾಕಿದಾಗಲಷ್ಟೇ ಇವರ ಆವುಟ ತಣ್ಣಗಾಗಲು ಸಾಧ್ಯ.
ಸದ್ಯ ಕೆನಡಾ ವಿಚಾರದಲ್ಲಿ ಭಾರತ ದೃಢ ನಿರ್ಧಾರ ತೆಗೆದುಕೊಂಡಿದೆ. ಭಾರತದ ನಡೆಗಳು ಖಲಿಸ್ತಾನಿಗಳಿಗೆ ನಡುಕ ಹುಟ್ಟಿಸಿರುವಂತೆಯೇ ಕೆನಡಾ ಸರ್ಕಾರಕ್ಕೆ ಎಚ್ಚರಿಕೆಯನ್ನೂ ರವಾನಿಸಿವೆ. ಕೆನಡಾದಲ್ಲಿ ಖಲಿಸ್ತಾನಿ ಉಗ್ರರನ್ನು ಹೊಡೆದುರುಳಿಸಿದವರು ಭಾರತದ ಏಜೆಂಟರು ಎಂಬುದಕ್ಕೆ ಸಾಕ್ಷ್ಯವಿಲ್ಲವಾದರೂ, ಸತ್ತವರು ಆ ಶಿಕ್ಷೆಗೆ ಒಳಗಾಗಬೇಕಿದ್ದವರೇ ಎಂಬುದರಲ್ಲಿ ಸಂಶಯವಿಲ್ಲ. ಹಾಗೆಯೇ ಭಾರತದಲ್ಲಿರುವ ಖಲಿಸ್ತಾನಿ ಉಗ್ರರು ಮತ್ತು ಅವರ ಸಹಾನುಭೂತಿಪರರೂ ಕಾನೂನು ತನಿಖೆ, ನ್ಯಾಯಾಂಗ ವಿಚಾರಣೆ ಹಾಗೂ ಶಿಕ್ಷೆಯ ವ್ಯಾಪ್ತಿಯಡಿಗೆ ಬರಬೇಕು. ಎನ್ಐಎ ಈ ವಿಚಾರದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಆಶಿಸೋಣ.
ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ದೇಶ
ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!
Gujarat High Court: ಗುಜರಾತ್ ಹೈಕೋರ್ಟ್ ಜಾಮೀನು ನೀಡಿದರೂ ಜೈಲು ಅಧಿಕಾರಿಗಳು ಆರೋಪಿಯನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿ ಉಳಿಸಿಕೊಂಡಿದ್ದೇಕೆ?
ಅಹಮದಾಬಾದ್: ಜಾಮೀನು ನೀಡಿದರೂ 3 ವರ್ಷಗಳಿಂದ ಜೈಲಿನಿಂದ ಬಿಡುಗಡೆಯಾಗದ 27 ವರ್ಷದ ಯುವಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗುಜರಾತ್ ಹೈಕೋರ್ಟ್(Gujarat High Court), ಗುಜರಾತ್ ರಾಜ್ಯ ಸರ್ಕಾರಕ್ಕೆ (Gujarat State Government) ಬುಧವಾರ ಆದೇಶಿಸಿದೆ. 2020ರಲ್ಲಿ ಗುಜರಾತ್ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ಜೈಲು ಅಧಿಕಾರಿಗಳ (Jail Officials) ನಿರ್ಲಕ್ಷ್ಯದಿಂದಾಗಿ ಯುವಕ ಆಲ್ಮೋಸ್ಟ್ 3 ವರ್ಷಗಳವರೆಗೆ ಜೈಲಿನಲ್ಲಿ ಕೊಳೆಯುವಂತಾಯಿತು. ಅಲ್ಲದೇ, ಜೈಲು ಅಧಿಕಾರಿಗಳು ಕೊಟ್ಟಿರುವ ಕಾರಣ ಕೂಡ ವಿಚಿತ್ರವಾಗಿದೆ. ಜಿಮೇಲ್ ತೆರೆಯಲು (Gmail) ಸಾಧ್ಯವಾಗದ್ದಕ್ಕೆ ಜೈಲಿನಿಂದ ಬಿಡುಗಡೆ ಸಾಧ್ಯವಾಗಿಲ್ಲ ಎಂದು ಸಬೂಬು ಹೇಳಿರುವುದು ಅಪಹಾಸ್ಯಕ್ಕೆ ಕಾರಣವಾಗಿದೆ.
ಜಾಮೀನು ಆದೇಶವನ್ನು 2020ರ ಸೆಪ್ಟೆಂಬರ್ 29ರಂದು ನೀಡಲಾಯಿತು. ಆದರೆ ನಿನ್ನೆ, 2023ರ ಸೆಪ್ಟೆಂಬರ್ 21ರಂದು ಅಂತಿಮವಾಗಿ ಅಪರಾಧಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ ಮತ್ತು ಎಂಆರ್ ಮೆಂಗ್ಡೆ ಅವರ ಪೀಠವು 35 ಪುಟಗಳ ಆದೇಶದಲ್ಲಿ ತಿಳಿಸಿದೆ. ಕಾರಾಗೃಹ ಅನುಭವಿಸುತ್ತಿದ್ದ 27 ವರ್ಷದ ಚಂದನ್ಜಿ ಠಾಕೂರ್ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ಪೀಠವು ಈ ಆದೇಶವನ್ನು ನೀಡಿದೆ.
ಜೈಲು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೈಕೋರ್ಟ್ ಆದೇಶದ ಹೊರತಾಗಿಯೂ ಜೈಲಿನಲ್ಲಿಯೇ ಉಳಿದಿರುವ ಅರ್ಜಿದಾರರ ದುರವಸ್ಥೆಯನ್ನು ಪರಿಗಣಿಸಿ, ಸುಮಾರು ಮೂರು ವರ್ಷಗಳ ಕಾಲ ಅಕ್ರಮವಾಗಿ ಜೈಲಿನಲ್ಲಿದ್ದಕ್ಕಾಗಿ ಪರಿಹಾರವನ್ನು ನೀಡಲು ನಾವು ಒಲವು ತೋರಿದ್ದೇವೆ. ಅರ್ಜಿದಾರರನ್ನು ಸಾಮಾನ್ಯ ಜಾಮೀನಿನ ಮೇಲೆ ಬಿಡುಗಡೆ ಮಾಡುವ ಈ ನ್ಯಾಯಾಲಯವು ಸೆಪ್ಟೆಂಬರ್ 2020 ರ ಜಾಮೀನು ಆದೇಶದ ಬಗ್ಗೆ ಹೈಕೋರ್ಟ್ನ ನೋಂದಾವಣೆ ಜೈಲು ಅಧಿಕಾರಿಗಳಿಗೆ ಸ್ಪಷ್ಟವಾಗಿ ತಿಳಿಸಿದೆ. ಜೈಲು ಅಧಿಕಾರಿಗಳಿಗೆ ಆದೇಶದ ಇ-ಮೇಲ್ ಬಂದಿಲ್ಲ ಎಂಬುದು ನಿಜವಲ್ಲ.ಅವರು ಇ-ಮೇಲ್ ಸ್ವೀಕರಿಸಿದ್ದರೂ, ಅಟ್ಯಾಚ್ಮೆಂಟ್ ಓಪನ್ ಮಾಡಲು ಸಾಧ್ಯವಾಗಿಲ್ಲ ಎಂದು ಕೋರ್ಟ್ ಹೇಳಿದೆ.
ಈ ಸುದ್ದಿಯನ್ನೂ ಓದಿ: Congress Guarantee : ಗೃಹಲಕ್ಷ್ಮಿ, ಗೃಹಜ್ಯೋತಿ ಜಾಹೀರಾತಿನಲ್ಲಿ ಸಿಎಂ, ಡಿಸಿಎಂ ಫೋಟೊ ಬಳಕೆ ಪ್ರಶ್ನಿಸಿದ ಅರ್ಜಿ ವಜಾ
ಜಾಮೀನು ಆದೇಶವನ್ನು ಒಳಗೊಂಡಿರುವ ಇಮೇಲ್ ಅನ್ನು ಮೆಹ್ಸಾನಾದ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಆದೇಶದ ಸರಿಯಾದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಯಾವುದೇ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿಲ್ಲ. ದುರದೃಷ್ಟವಶಾತ್, ನಿನ್ನೆಯವರೆಗೆ ಈ ವಿಷಯದ ಬಗ್ಗೆ ಯಾರೂ ತಲೆಯೇ ಕೆಡಿಸಿಕೊಂಡಿಲ್ಲ. ಆದ್ದರಿಂದ, ನ್ಯಾಯದ ಹಿತದೃಷ್ಟಿಯಿಂದ ಮತ್ತು ಜೈಲು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅರ್ಜಿದಾರರು ಜೈಲಿನಲ್ಲಿ ಉಳಿಯುಂತಾಯಿತು. ಹಾಗಾಗಿ ಅವರಿಗೆ 1 ಲಕ್ಷ ರೂ. ಪರಿಹಾರವನ್ನು ನೀಡುವಂತೆ ರಾಜ್ಯಕ್ಕೆ ನಿರ್ದೇಶಿಸುತ್ತಿದ್ದೇವೆ. ಲಕ್ಷ. 14 ದಿನಗಳ ಅವಧಿಯೊಳಗೆ ಪಾವತಿಸಬೇಕು ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಜೈಲು ದಾಖಲೆಗಳ ಪ್ರಕಾರ, ಅರ್ಜಿದಾರರು ಈಗಾಗಲೇ ಐದು ವರ್ಷಗಳಿಗಿಂತ ಹೆಚ್ಚು ಅವಧಿಯನ್ನು ಜೈಲಿನಲ್ಲಿ ಕಳೆದಿದ್ದಾರೆ.
ದೇಶ
Flipkart, Amazon Sale: ಹಬ್ಬದ ಸೀಸನ್ ಆನ್ಲೈನ್ ಖರೀದಿ, ಕ್ರೆಡಿಟ್ ಕಾರ್ಡ್ದಾರರು ತಿಳಿದುಕೊಳ್ಳಬೇಕಾದ ಸಂಗತಿಗಳು
Flipkart, Amazon Sale: ಫ್ಲಿಪ್ಕಾರ್ಟ್, ಅಮೆಜಾನ್ ಸೇರಿದಂತೆ ಆನ್ಲೈನ್ ಶಾಪಿಂಗ್ ಜಾಲತಾಣಗಳು ಬೃಹತ್ ಸೇಲ್ ಆರಂಭಿಸಲಿವೆ. ಈ ವೇಳೆ, ಕ್ರೆಡಿಟ್ ಕಾರ್ಡ್ ಲಾಭದಾಯಕವಾಗಿ ಬಳಸುವುದು ಹೇಗೆ?
ಭಾರತದಲ್ಲೀಗ ಈಗ ಹಬ್ಬಗಳ ಸಮಯ(Festive Season in India). ಹಾಗಾಗಿ, ಭರ್ಜರಿ ಸೇಲ್ಗಳ ಭರಾಟೆ ಇದ್ದೆ ಇರುತ್ತದೆ. ಈ ರೇಸ್ನಲ್ಲಿ ಆನ್ಲೈನ್ ಕಾಮರ್ಸ್ ತಾಣಗಳು ಕೂಡ ಹಿಂದೆ ಬಿದ್ದಿಲ್ಲ. ಫ್ಲಿಪ್ಕಾರ್ಟ್ (Flipkart), ಅಮೆಜಾನ್ನಂತ (Amazon) ದೈತ್ಯ ಆನ್ಲೈನ್ ಮಾರಾಟ ಕಂಪನಿಗಳು ಈ ಹಬ್ಬದ ಸಂದರ್ಭದಲ್ಲಿ ಸೇಲ್ಸ್ ಆರಂಭಿಸುತ್ತವೆ. ಈ ಹಬ್ಬದ ಸಮಯದಲ್ಲಿ ಭಾರತೀಯ ಕುಟುಂಬಗಳು ಸಾಕಷ್ಟು ಹಣವನ್ನು ಖರೀದಿಯ ಮೇಲೆ ವೆಚ್ಚ ಮಾಡುತ್ತವೆ. ಹಾಗಿದ್ದರೆ, ನೀವು ಆನ್ಲೈನ್ ಖರೀದಿಗೆ ಕ್ರೆಡಿಟ್ ಕಾರ್ಡ್ಗಳನ್ನು (Credit Cards) ಬಳಸುತ್ತಿದ್ದರೆ, ಒಂಚೂರು ಜಾಣ ತೋರಿಸಿದ್ರೆ ಸಾಕಷ್ಟು ಹಣವನ್ನು ಉಳಿತಾಯ (Save Money) ಮಾಡಬಹುದು. ಹೇಗೆ ವೆಚ್ಚ ಉಳಿತಾಯ ಮಾಡಬಹುದು ಎಂದು ನೋಡೋಣ ಬನ್ನಿ(Flipkart, Amazon Sale).
ಸೂಕ್ತ ಕಾರ್ಡ್ ಬಳಕೆ ಮಾಡಿ
ಆನ್ಲೈನ್ ಖರೀದಿಯ ಸಮಯದಲ್ಲಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ಮೊಟ್ಟ ಮೊದಲ ವಿಷಯ ಏನೆಂದರೆ, ನೀವು ಸರಿಯಾದ ಕ್ರೆಡಿಟ್ ಕಾರ್ಡ್ ಅನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಯಾವುದೇ ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳುವ ಮೊದಲು, ನೀವು ಅದರ ಎಲ್ಲಾ ಸೇವೆಗಳನ್ನು ಅವಶ್ಯಕತೆಗಳಿಗೆ ಅನುಗುಣವಾಗಿ ಪರಿಶೀಲಿಸಬೇಕು. ನಿಮ್ಮ ಅಗತ್ಯಗಳಿಗೆ ಅನುಗುಣವಾಗಿ ನಿಮಗೆ ಸೂಕ್ತವಾದ ಯಾವುದೇ ಕ್ರೆಡಿಟ್ ಮಿತಿಯನ್ನು ನೀವು ತೆಗೆದುಕೊಳ್ಳಬಹುದು. ಇದಲ್ಲದೆ, ಹಲವಾರು ಕಂಪನಿಗಳು ವಿವಿಧ ರೀತಿಯ ಕ್ರೆಡಿಟ್ ಕಾರ್ಡ್ಗಳನ್ನು ನೀಡುತ್ತವೆ. ಹಾಗಾಗಿ, ಕಾರ್ಡ್ ಪಡೆಯುವಾಗ ನಿಮ್ಮ ಅಗತ್ಯಗಳನ್ನು ಪೂರೈಸು ಕಾರ್ಡ್ ಪಡೆದುಕೊಳ್ಳಿ.
ಕ್ರೆಡಿಟ್ ಕಾರ್ಡ್ ಕೆಟಗರಿ ತಿಳಿದಿರಲಿ
ಕ್ರೆಡಿಟ್ ಕಾರ್ಡ್ ಬ್ಯಾಂಕ್ಗಳು ಅನೇಕ ವಿಧಗಳಲ್ಲಿ ಗ್ರಾಹಕರಿಗೆ ಆಫರ್ಗಳನ್ನು ನೀಡುತ್ತವೆ. ಹಾಗಾಗಿ, ಅವರ ಕ್ರೆಡಿಟ್ ಕಾರ್ಡ್ಗಳನ್ನು ಆಯ್ಕೆ ಮಾಡುವ ಮುನ್ನ ಅವುಗಳ ಬಗ್ಗೆ ತಿಳಿದುಕೊಳ್ಳಬೇಕಾದದ್ದು ಮಹತ್ವವಾಗುತ್ತದೆ. ನಿರ್ದಿಷ್ಟ ಕೆಟಗರಿಯ ಕೊಡುಗೆಗಳ ಪ್ರಕಾರ ಒಬ್ಬ ಕಾರ್ಡ್ ಹೋಲ್ಡರ್ ಶಾಪಿಂಗ್ ಮಾಡಿದರೆ, ನಂತರ ಆತನಿಗೆ ಕ್ಯಾಶ್ಬ್ಯಾಕ್, ರಿಯಾಯಿತಿಗಳು ಅಥವಾ ಪ್ರಯೋಜನಗಳು ದೊರೆಯುತ್ತವೆ. ಈ ಬಗ್ಗೆ ಗಮನಹರಿಸಬೇಕು.
ಕ್ರೆಡಿಟ್ ಕಾರ್ಡ್ ಬಳಕೆ ಎಷ್ಟು?
ಕ್ರೆಡಿಟ್ ಕಾರ್ಡ್ ಪಡೆಯುವಾಗ ನೀವು ಎಷ್ಟು ಬಾರಿ ಕ್ರೆಡಿಟ್ ಕಾರ್ಡ್ ಬಳಸಬೇಕಾಗುತ್ತದೆ ಎಂಬುದನ್ನು ತಿಳಿದುಕೊಂಡರೆ ಉತ್ತಮ. ಒಂದು ವೇಳೆ ಅಗತ್ಯವೇ ಇಲ್ಲದಿದ್ದರೆ ಸುಮ್ಮನೆ ಕ್ರೆಡಿಟ್ ಕಾರ್ಡ್ ಪಡೆದುಕೊಂಡರೆ ಲಾಭವಿಲ್ಲ. ಅದು ನಿಮ್ಮ ಮೇಲೆ ಹಣಕಾಸಿನ ಹೊರೆಯಾಗುತ್ತದೆ. ದೈನಂದಿನ ವಹಿವಾಟುಗಳಿಗೆ ನೀವು ಕ್ರೆಡಿಟ್ ಕಾರ್ಡ್ಗಳನ್ನು ನಿಯಮಿತವಾಗಿ ಬಳಸಬೇಕಾಗುತ್ತದೆ ಎಂದು ತಜ್ಞರು ಸೂಚಿಸುತ್ತಾರೆ. ಆಹಾರ ಅಥವಾ ಇತರ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಕ್ರೆಡಿಟ್ ಕಾರ್ಡ್ಗಳನ್ನು ಬಳಸಬಹುದು. ಇದರೊಂದಿಗೆ, ಭವಿಷ್ಯದಲ್ಲಿ ಯಾವುದೇ ವಸ್ತುವಿನ ಬೆಲೆಯನ್ನು ಕಡಿಮೆ ಮಾಡಲು ಮತ್ತಷ್ಟು ಬಳಸಬಹುದಾದ ಕ್ರೆಡಿಟ್ ಕಾರ್ಡ್ ಬಹುಮಾನಗಳು ಅಥವಾ ಬೋನಸ್ ಅಂಕಗಳನ್ನು ಪಡೆಯಬಹುದು.
ಚೆಕ್ ಸೈನ್ಅಪ್ ಲಾಭಗಳು
ಹಲವಾರು ಬ್ಯಾಂಕುಗಳು ಮತ್ತು ಕಂಪನಿಗಳು ಸಹ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸೈನ್ ಅಪ್ ಬೋನಸ್ ಮತ್ತು ವೆಲ್ಕಮ್ ಬೆನ್ಫಿಟ್ಸ್ ನೀಡುತ್ತವೆ. ಹಲವಾರು ಇತರ ಕಾರ್ಡ್ ವಿತರಕರು ಹೊಸ ಗ್ರಾಹಕರಿಗೆ ಕ್ಯಾಶ್ಬ್ಯಾಕ್ ಬಹುಮಾನಗಳು, ಕೂಪನ್ಗಳು ಮತ್ತು ರಿಯಾಯಿತಿಗಳನ್ನು ಸಹ ನೀಡುತ್ತಾರೆ. ಹಾಗಾಗಿ ಕಾರ್ಡ್ ಖರೀದಿಸುವ ಮುನ್ನ ಈ ರೀತಿಯ ಆಫರ್ಸ್, ಬೆನ್ಫಿಟ್ಸ್ ಇದೆಯಾ ಅಂತ ಚೆಕ್ ಮಾಡುವುದು ಉತ್ತಮ ನಡೆಯಾಗುತ್ತದೆ.
ಈ ಸುದ್ದಿಯನ್ನೂ ಓದಿ: ವಿಸ್ತಾರ Money Guide | ನಿಮ್ಮ ಡೆಬಿಟ್, ಕ್ರೆಡಿಟ್ ಕಾರ್ಡ್ ಸುರಕ್ಷತೆಗೆ ಆರ್ಬಿಐ ಟೋಕನ್ ಶೀಘ್ರ, ಏನಿದು?
ಕ್ರೆಡಿಟ್ ಕಾರ್ಡ್ಸ್ನ ವಿಶಿಷ್ಟ ಬೆನೆಫಿಟ್ಸ್
ಎಲ್ಲಾ ಕ್ರೆಡಿಟ್ ಕಾರ್ಡ್ಗಳು ವಿಶಿಷ್ಟ ಪ್ರಯೋಜನದ ರಚನೆಯನ್ನು ಹೊಂದಿವೆ. ಕಾರ್ಡ್ ಮಲಕ ವಹಿವಾಟುಗಳನ್ನು ನಡೆಸಿದಾಗ ಕ್ಯಾಶ್ಬ್ಯಾಕ್, ವ್ಯಾಪಾರಿ ಮಳಿಗೆಗಳಲ್ಲಿ ರಿಯಾಯಿತಿಗಳು, ಪಾಲುದಾರ ವ್ಯಾಪಾರಿಗಳಲ್ಲಿ ವೇಗವರ್ಧಿತ ರಿವಾರ್ಡ್ ಪಾಯಿಂಟ್ಗಳು, ಇಂಧನ ಸರ್ಚಾರ್ಜ್ ಮನ್ನಾ ಮತ್ತು ಇನ್ನೂ ಹೆಚ್ಚಿನ ಲಾಭಗಳು ದೊರೆಯುತ್ತವೆ. ಹಾಗಾಗಿ, ಕಾರ್ಡ್ ಅನ್ನು ಬಳಸುವ ಮೊದಲು ಅದರ ಸಂಪೂರ್ಣ ಪ್ರಯೋಜನದ ರಚನೆಯನ್ನು ನೀವು ಅರ್ಥಮಾಡಿಕೊಳ್ಳಬೇಕು. ಇಲ್ಲದಿದ್ದರೆ ಕೆಲವೊಮ್ಮೆ ನಷ್ಟವಾಗುವ ಸಾಧ್ಯತೆಗಳಿರುತ್ತವೆ.
ಕರ್ನಾಟಕ
VISTARA TOP 10 NEWS : ಎಲ್ಲರ ಕಣ್ಣು ಶುಕ್ರವಾರದ ಕರ್ನಾಟಕ ಬಂದ್ನತ್ತ, ಇಸ್ರೋ ಚಿತ್ತ ಮಾತ್ರ ಶುಕ್ರನತ್ತ!
VISTARA TOP 10 NEWS: ಕರ್ನಾಟಕ ಬಂದ್ಗೆ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಇತ್ತ ಇಸ್ರೋ ಮಂಗಳದತ್ತ ಹೊರಡಲು ಸಜ್ಜಾಗಿದೆ. ಹೀಗೆ ದಿನದ ಪ್ರಮುಖ ಸುದ್ದಿಗಳ ಸಾರವೇ ವಿಸ್ತಾರ ಟಾಪ್ 10 ನ್ಯೂಸ್
1.ಕಾವೇರಿ ಉಳಿವಿಗಾಗಿ ಸಿಡಿದೆದ್ದ ಬಿಜೆಪಿ, ಜೆಡಿಎಸ್; ವಿಧಾನಸೌಧದ ಮುಂದೆ ದೋಸ್ತಿಗಳ ಪ್ರತಿಭಟನೆ
ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಬಿಜೆಪಿ – ಜೆಡಿಎಸ್ ನಾಯಕರು (BJP JDS leaders) ಜಂಟಿಯಾಗಿ ಬುಧವಾರ (ಸೆಪ್ಟೆಂಬರ್ 27) ಅಖಾಡಕ್ಕೆ ಇಳಿದಿದ್ದು, ರಾಜ್ಯ ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
2 ಬೆಂಗಳೂರು ಬಂದ್ ಬಳಿಕ ಶುಕ್ರವಾರದ ಕರ್ನಾಟಕ ಬಂದ್ಗೆ ಸಿದ್ಧತೆ: ಏನಿರುತ್ತೆ? ಏನಿರಲ್ಲ?
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ, ಕೆಲವು ಬೆಂಬಲ ಕೊಡುವುದಿಲ್ಲ ಎಂದಿವೆ. ಹಾಗಿದ್ದರೆ ಹೇಗಿರುತ್ತದೆ ಬಂದ್? ಯಾರೆಲ್ಲ ಬೆಂಬಲ ನೀಡಿದ್ದಾರೆ? ಇಲ್ಲಿದೆ ವಿವರ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
3. ಕರ್ನಾಟಕ ಬಂದ್ ದಿನವೇ ಪ್ರಾಧಿಕಾರದ ಸಭೆ-ಕಾವೇರಿ ಹೋರಾಟಕ್ಕೆ ನಂಜಾವಧೂತ, ಸುತ್ತೂರು ಶ್ರೀ ಎಂಟ್ರಿ
ಕರ್ನಾಟಕ ಬಂದ್ ನಡೆಯಲಿರುವ ಸೆ. 29ರಂದೇ ಕಾವೇರಿ ಪ್ರಾಧಿಕಾರದ ಸಭೆಯೂ ನಡೆಯಲಿದೆ. ಈ ಬಾರಿ ಏನಾಗಲಿದೆ ಎಂಬ ಕುತೂಹಲವಿದೆ. ಈ ನಡುವೆ ಇಬ್ಬರು ಸ್ವಾಮೀಜಿಗಳು ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
4. ಬಿಜೆಪಿ ದೋಸ್ತಿಯಿಂದ ಜಾತ್ಯತೀತ ನಿಲುವು ಬದಲಾಗಲ್ಲ ಎಂದ ಎಚ್.ಡಿ. ದೇವೇಗೌಡ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಬಿಜೆಪಿ ಜತೆಗಿನ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್ನಿಂದ ಪಕ್ಷಕ್ಕಾದ ಅನ್ಯಾಯದ ಬಗ್ಗೆ ಹೇಳಿದ್ದಾರೆ. ಈ ಹಿಂದೆ ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿದ್ದು ಯಾರು ಎಂಬ ಬಗ್ಗೆಯೂ ಚರ್ಚೆ ಮಾಡೋಣ ಎಂದು ಸವಾಲು ಹಾಕಿದ್ದಾರೆ. ಇದೇವೇಳೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರೂ ಜಾತ್ಯತೀತ ನಿಲುವು ಬದಲಾಗುವುದಿಲ್ಲ ಎಂದಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಲೋಕಸಮರ ಮುನ್ನ ಬಿಜೆಪಿ ರಥಯಾತ್ರೆ; 2.5 ಲಕ್ಷ ಗ್ರಾಮಗಳಲ್ಲಿ ಪ್ರಚಾರದ ರಣತಂತ್ರ
ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲು ಬಿಜೆಪಿಯು ರಣತಂತ್ರ ರೂಪಿಸಿದೆ. ಗ್ರಾಮೀಣ ಸಂವಾದ ಯಾತ್ರೆ ಮೂಲಕ ಗ್ರಾಮೀಣ ಭಾಗದ ಜನರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. 2.5 ಲಕ್ಷ ಗ್ರಾಮ ತಲುಪುವ ಯಾತ್ರೆ ಮಾಹಿತಿ ಇಲ್ಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ಭಾರತದಲ್ಲಿ ಶುರುವಾಯ್ತು ಆಪರೇಷನ್ ಖಲಿಸ್ತಾನ್- ಒಂದೇ ದಿನ ದೇಶದ 50 ಕಡೆ ಎನ್ಐಎ ದಾಳಿ
ಖಲಿಸ್ತಾನ್ ಉಗ್ರರು (Khalistani Terrorist) ಹಾಗೂ ಗ್ಯಾಂಗ್ಸ್ಟರ್ಗಳ (gangsters) ನಡುವಿನ ಲಿಂಕ್ಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ಆರು ರಾಜ್ಯಗಳ 50 ಸ್ಥಳಗಳಲ್ಲಿ ಬೃಹತ್ ಪ್ರಮಾಣದ ದಾಳಿ ನಡೆಸಿದೆ. ಇದು ಖಲಿಸ್ತಾನಿಗಳ ವಿರುದ್ಧದ ದೊಡ್ಡ ಆಪರೇಷನ್ ಎನ್ನಲಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
7. ಸತ್ತು ಹೋಯ್ತಾ ಮಾನವೀಯತೆ?; ಅತ್ಯಾಚಾರಕ್ಕೀಡಾದ ಬಾಲಕಿ ಕಣ್ಣೀರಿಟ್ಟು ಅಡ್ಡಾಡಿದ್ರೂ ಕರಗದ ಮನಸ್ಸು
ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಇಸ್ರೋಗೆ ಶುರುವಾಯ್ತು ಶುಕ್ರದೆಸೆ- ಚಂದ್ರ, ಸೂರ್ಯನ ಬಳಿಕ ಶುಕ್ರಯಾನಕ್ಕೆ ಭಾರತ ಸಿದ್ಧತೆ
ಚಂದ್ರಯಾನ 3 ಮಿಷನ್ (Chandrayaan 3) ಯಶಸ್ಸಿನ ಬಳಿಕ ಜಾಗತಿಕವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಗೌರವ ನೂರ್ಮಡಿಯಾಗಿದೆ. ಆದಿತ್ಯ ಮಿಷನ್ ಬೆನ್ನಲ್ಲೇ ಇಸ್ರೋ ಗಮನ ಈಗ ಶುಕ್ರನ (Venus Misssion) ಮೇಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9.- ಇರಾಕ್ ಅಗ್ನಿಅವಘಡದಲ್ಲಿ ವಧು, ವರ ಸೇರಿ 114ಕ್ಕೂ ಹೆಚ್ಚುಮಂದಿ ಸಜೀವ ದಹನ
ಇರಾಕ್ನ ನಿನೆವೆಹ್ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿರುವ ಮದುವೆ ಹಾಲ್ನಲ್ಲಿ (Wedding Hall) ಭೀಕರ ಅಗ್ನಿ ದುರಂತ (Iraq Fire Accident) ಸಂಭವಿಸಿದ್ದು, 114 ಜನ ಮೃತಪಟ್ಟಿದ್ದಾರೆ. ದುರಂತದಲ್ಲಿ ಮದುಮಕ್ಕಳು ಕೂಡ ಮೃತಪಟ್ಟಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. 101 ಕೋಟಿ ರೂ. ಮೌಲ್ಯದ ಷೇರು ಹೊಂದಿರುವ ಈ ವ್ಯಕ್ತಿ ಹೇಗೆ ಜೀವನ ಸಾಗಿಸುತ್ತಿದ್ದಾರೆ ನೋಡಿ!
ಒಂದು ದೊಡ್ಡ ಚಡ್ಡಿ ಧರಿಸಿ, ಮೇಲುಮೈಯಲ್ಲಿ ಇನ್ಯಾವ ದಿರಸನ್ನೂ ಧರಿಸದೆ ಅತ್ಯಂತ ಸರಳವಾಗಿ ನಗುತ್ತಿರುವ ಈ ಹಿರಿಯ ನಾಗರಿಕರ ಆಸ್ತಿ ಮೌಲ್ಯ ಎಷ್ಟು ಎಂದು ತಿಳಿದರೆ ನೀವು ನಿಜಕ್ಕೂ ಬೆಚ್ಚಿ ಬೀಳಬಹುದು. ಹೌದು, ಇವರೇ ಹೇಳಿಕೊಳ್ಳುವಂತೆ, ಇವರ ಬಳಿ 101 ಕೋಟಿ ರೂ. ಮೌಲ್ಯದ ಷೇರುಗಳಿವೆ! ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
-
ಪ್ರಮುಖ ಸುದ್ದಿ23 hours ago
Iraq Fire Accident: ಮದುವೆ ಮನೆಯಲ್ಲಿ ಅಗ್ನಿ ದುರಂತ; ಮದುಮಕ್ಕಳು ಸೇರಿ 114 ಜನರ ಸಾವು!
-
ಪ್ರಮುಖ ಸುದ್ದಿ13 hours ago
German Shepherd: ಸೀಕ್ರೆಟ್ ಸರ್ವಿಸ್ ಏಜೆಂಟ್ನಿಗೆ ಕಚ್ಚಿದ ಅಮೆರಿಕ ಅಧ್ಯಕ್ಷ ಬೈಡನ್ ಅವರ ‘ಕಮಾಂಡರ್’!
-
ವಿದೇಶ14 hours ago
Most expensive wedding: ಜಗತ್ತಿನ ದುಬಾರಿ ವಿವಾಹ ಯಾವುದು ಗೊತ್ತೆ? ಖರ್ಚಾಗಿದ್ದು ಇಷ್ಟು ಕೋಟಿ ರೂ.
-
ಸುವಚನ2 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕ್ರೈಂ18 hours ago
ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!
-
ಕರ್ನಾಟಕ14 hours ago
Car Accident: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು
-
ದೇಶ15 hours ago
Venus Mission: ಇಸ್ರೋಗೆ ‘ಶುಕ್ರ’ದೆಸೆ; ಚಂದ್ರ, ಸೂರ್ಯನ ಬಳಿಕ ಶುಕ್ರನತ್ತ ಚಿತ್ತ; ಉಡಾವಣೆ ಯಾವಾಗ?
-
ಕರ್ನಾಟಕ9 hours ago
PSI Recruitment Scam: ಕೊನೆಗೂ ಅಮೃತ್ ಪಾಲ್ ಸೆಂಟ್ರಲ್ ಜೈಲಿನಿಂದ ಬಿಡುಗಡೆ