ಯುರೋಪ್ ದೇಶಗಳಿಗೆ ತಮ್ಮ ಸಮಸ್ಯೆ ಜಗತ್ತಿನ ಸಮಸ್ಯೆ ಎಂಬ ಭ್ರಮೆ: ವಿದೇಶಾಂಗ ಸಚಿವ ಜೈ ಶಂಕರ್ ಖಡಕ್‌ ಮಾತು Vistara News

ದೇಶ

ಯುರೋಪ್ ದೇಶಗಳಿಗೆ ತಮ್ಮ ಸಮಸ್ಯೆ ಜಗತ್ತಿನ ಸಮಸ್ಯೆ ಎಂಬ ಭ್ರಮೆ: ವಿದೇಶಾಂಗ ಸಚಿವ ಜೈ ಶಂಕರ್ ಖಡಕ್‌ ಮಾತು

ಉಕ್ರೇನ್‌ ವಿಚಾರದಲ್ಲಿ ಭಾರತದ ನಿಲುವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿಪಾದಿಸಿದ ಹಾಗೂ ಯುರೋಪಿನ ಇಬ್ಬಂದಿತನವನ್ನು ಬಯಲಿಗೆಳೆದ ವಿದೇಶಾಂಗ ಸಚಿವ ಜೈಶಂಕರ್ ನಡೆ ಭಾರತೀಯರ ಮೆಚ್ಚುಗೆಗೆ ಪಾತ್ರವಾಗಿದೆ.

VISTARANEWS.COM


on

jai shankar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • ಜಾಗತಿಕ ಚಿಂತಕರ ಚಾವಡಿ ಗ್ಲೋಬ್‌ಸೆಕ್-‌2022ರಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಬಲವಾಗಿ ಸಮರ್ಥಿಸಿದ ಜೈ ಶಂಕರ್‌
  • ಯುರೋಪ್‌ ನ ಇಬ್ಬಂದಿತನವನ್ನು ಬಯಲಿಗೆಳೆದ ವಿದೇಶಾಂಗ ಸಚಿವರಿಗೆ ಭೇಷ್‌ ಎಂದ ನೆಟ್ಟಿಗರು
  • ಉಕ್ರೇನ್‌ ವಿಚಾರದಲ್ಲಿ ಭಾರತ ತನ್ನದೇ ನಿಲುವು ಹೊಂದಿದೆ ಎಂದು ಪ್ರತಿಪಾದಿಸಿದ ಜೈ ಶಂಕರ್

ನವ ದೆಹಲಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟಿಗೆ ಸಂಬಂಧಿಸಿ ಜಾಗತಿಕ ಚಿಂತಕರ ಚಾವಡಿ ಗ್ಲೋಬ್‌ಸೆಕ್‌ 2022ರ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್‌ ಪತ್ರಕರ್ತೆಯೊಬ್ಬರ ಪ್ರಶ್ನೆಗೆ ನೀಡಿದ ಖಡಕ್‌ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತವನ್ನು ಸದಾ ಟೀಕಿಸುತ್ತಿರುವ ಯುರೋಪ್‌ ಅನ್ನು ತರಾಟೆಗೆ ತೆಗೆದುಕೊಂಡ ಜೈಶಂಕರ್‌, ಯುರೋಪ್‌ ತನಗೆ ಬೇಕಾದಂತೆ ರಷ್ಯಾ ವಿರುದ್ಧ ನಿರ್ಬಂಧಗಳನ್ನು ಹೇರುತ್ತಿದೆ. ರಷ್ಯಾದ ತೈಲ ಮತ್ತು ಅನಿಲ ಅದಕ್ಕೆ ಬೇಕು, ಆದರೆ ಭಾರತ ಮಾತ್ರ ಖರೀದಿಸಬಾರದು ಎಂದರೆ ಹೇಗೆ ಎಂದು ಯುರೋಪಿಗೆ ತಿರುಗೇಟು ಕೊಟ್ಟರು.

ಭಾರತ ರಷ್ಯಾದಿಂದ ತೈಲ ಖರೀದಿಸಿ ಯುದ್ಧಕ್ಕೆ ಹಣ ನೀಡುತ್ತದೆ ಎಂದು ಯುರೋಪ್‌ ಟೀಕಿಸುತ್ತಿದೆ. ಆದರೆ ಯುರೋಪ್‌ ಕೂಡ ರಷ್ಯಾದಿಂದ ಅನಿಲ ಖರೀದಿಸುತ್ತಿದೆ. ಅದು ಯುದ್ಧಕ್ಕೆ ಬಳಕೆಯಾಗುತ್ತಿಲ್ಲವೇ ಎಂದು ಜೈ ಶಂಕರ್‌ ಯುರೋಪ್‌ ಬೂಟಾಟಿಕೆಯನ್ನು ವಿವರಿಸಿದರು.

ಉಕ್ರೇನ್‌ ಸಂಘರ್ಷದ ಬಗ್ಗೆ ಭಾರತದ ನಿಲುವು ಸೇರಿದಂತೆ ವಿದೇಶಾಂಗ ನೀತಿ ಕುರಿತ ಹಲವಾರು ಪ್ರಶ್ನೆಗಳಿಗೆ ಜೈ ಶಂಕರ್‌ ಖಡಕ್‌ ಉತ್ತರ ನೀಡಿರುವುದು ಗಮನ ಸೆಳೆದಿದೆ. ಉಕ್ರೇನ್‌ ಸಮರದ ವಿಷಯದಲ್ಲಿ ಭಾರತದ ನಿಲುವನ್ನು ಬಲವಾಗಿ ಸಮರ್ಥಿಸಿದ ಜೈ ಶಂಕರ್‌, ಒಂದು ಹಂತದಲ್ಲಿ ” ಯುರೋಪ್‌ ತನ್ನ ಸಮಸ್ಯೆ ಜಗತ್ತಿನ ಸಮಸ್ಯೆ ಹಾಗೂ ಜಗತ್ತಿನ ಸಮಸ್ಯೆ ತನ್ನದಲ್ಲ ಎಂಬ ಭ್ರಮೆಯಿಂದ ಹೊರ ಬರಬೇಕುʼʼ ಎಂದು ಕುಟುಕಿದರು.

ಉಕ್ರೇನ್‌ ಸಮರ ವಿಚಾರದಲ್ಲಿ ಭಾರತ ಯಾವ ದೇಶದ ಜತೆಗೆ ನಿಲ್ಲಲಿದೆ? ಅಮೆರಿಕ ಅಥವಾ ಚೀನಾದ ಪೈಕಿ ಯಾವುದನ್ನು ಆಯ್ಕೆ ಮಾಡಿಕೊಳ್ಳಲಿದೆ? ಎಂಬ ಪ್ರಶ್ನೆಗೆ ಜೈಶಂಕರ್‌, ” ಭಾರತ ಅಮೆರಿಕದ ಜತೆಗೆ ಅಥವಾ ಚೀನಾದ ಜತೆಗೆ ನಿಲ್ಲಬೇಕು ಎಂದು ಕೇಳುವುದೇ ಸರಿಯಲ್ಲ, ಅದನ್ನು ನಾನು ಒಪ್ಪುವುದಿಲ್ಲ. ಭಾರತ ಜಗತ್ತಿನ ಐದನೇ ಒಂದರಷ್ಟು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರ. ಪ್ರಪಂಚದ 5 ಅಥವಾ 6ನೇ ಅತಿ ದೊಡ್ಡ ಆರ್ಥಿಕತೆ. ನಾವು ಯಾರೊಬ್ಬರ ಬದಿಗೆ ಹೋಗಿ ನಿಲ್ಲಬೇಕಾದ ಅಗತ್ಯ ಇಲ್ಲ. ನಮಗೆ ನಮ್ಮದೇ ನಿಲುವು ಇದೆʼʼ ಎಂದು ಬಲವಾಗಿ ಸಮರ್ಥಿಸಿದರು.

ಅಂತಾರಾಷ್ಟ್ರೀಯ ಚಿಂತಕರ ಚಾವಡಿಯಲ್ಲಿ ಪಾಶ್ಚಿಮಾತ್ಯ ದೇಶಗಳ ಇಬ್ಬಂದಿತನವನ್ನು ತರಾಟೆಗೆ ತೆಗೆದುಕೊಂಡು, ಭಾರತದ ವಿದೇಶಾಂಗ ನೀತಿಯನ್ನು ಸ್ಪಷ್ಟವಾಗಿ ಮತ್ತು ಬಲವಾಗಿ ಸಮರ್ಥಿಸಿದ ಜೈ ಶಂಕರ್‌ ಅವರ ಖಡಕ್‌ ಶೈಲಿ ಜಾಲತಾಣದಲ್ಲಿ ನೆಟ್ಟಿಗರ ಮೆಚ್ಚುಗೆ ಗಳಿಸಿದೆ.

ಭಾರತದ ವಿದೇಶಾಂಗ ನೀತಿಯ ಇತಿಹಾಸದಲ್ಲಿ ಎರಡು ವಿಭಾಗಗಳು ಇವೆ. ಒಂದು ಡಾ. ಜೈಶಂಕರ್‌ ಅವರ ಮೊದಲು ಮತ್ತೊಂದು ಡಾ. ಜೈಶಂಕರ್‌ ನಂತರ ಎಂದು ಟ್ವಿಟಿಗರೊಬ್ಬರು ಶ್ಲಾಘಿಸಿದ್ದಾರೆ. ಭಾರತದ ಶ್ರೇಷ್ಠ ವಿದೇಶಾಂಗ ಸಚಿವರಾಗಿ ಜೈಶಂಕರ್‌ ಅವರನ್ನು ಇತಿಹಾಸ ಸ್ಮರಿಸಿಕೊಳ್ಳಲಿದೆ ಎಂದು ಅನೇಕ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತ ತನ್ನ ಇಂಧನ ಭದ್ರತೆಗೆ ರಷ್ಯಾದಿಂದ ತೈಲ ಕೊಳ್ಳುತ್ತಿದೆಯೇ ಹೊರತು ಅದರಲ್ಲಿ ಬೇರೆ ಯಾವ ದುರುದ್ದೇಶವೂ ಇಲ್ಲ. ಆದರೆ ಭಾರತವು ರಷ್ಯಾದಿಂದ ಒಂದು ತಿಂಗಳಿಗೆ ಖರೀದಿಸುವ ತೈಲವನ್ನು ಸ್ವತಃ ಯುರೋಪ್‌ ಒಂದು ಹೊತ್ತಿಗೆ ಖರೀದಿಸುತ್ತದೆ ಎಂದು ಈ ಹಿಂದೆಯೂ ಜೈಶಂಕರ್‌, ಮುಟ್ಟಿ ನೋಡಿಕೊಳ್ಳುವಂಥ ತೀಕ್ಷ್ಣ ತಿರುಗೇಟು ಕೊಟ್ಟಿದ್ದರು. ಇದಾದ ಬಳಿಕ ಅಮೆರಿಕ ಮತ್ತು ಯುರೋಪ್‌ ಗಪ್‌ ಚುಪ್‌ ಆಗಿತ್ತು. ಭಾರತವನ್ನು ವೃಥಾ ಟೀಕಿಸುವ ಗೋಜಿಗೆ ಪಾಶ್ಚಿಮಾತ್ಯ ಸರಕಾರಗಳ ವಕ್ತಾರರು ಬಳಿಕ ಕೈ ಹಾಕಿರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Uttarkashi Tunnel Rescue: ನವೆಂಬರ್ 12ರಂದು ಕುಸಿದ ಸುರಂಗ ಮಾರ್ಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು, 17 ದಿನಗಳ ಬಳಿಕ ರಕ್ಷಣೆ ಮಾಡಲಾಗಿದೆ.

VISTARANEWS.COM


on

Uttarakhand CM announces rs 1 lakh rupees to trapped labourers Who rescued after 17 days
Koo

ನವದೆಹಲಿ: ಕಾರ್ಮಿಕರನ್ನು ರಕ್ಷಣೆ ಮಾಡಿ, ಅವರನ್ನು ಅವರ ಮನೆಗೆ ತಲುಪಿಸುವ ಟಾಸ್ಕ್ ಅನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi) ನನಗೆ ನೀಡಿದ್ದರು ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ (Uttarakhand CM Pushkar Singh Dhami) ಅವರು ಹೇಳಿದ್ದಾರೆ. ಕುಸಿದ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಯಶಸ್ವಿ ರಕ್ಷಣಾ ಕಾರ್ಯಾಚರಣೆಯ (Uttarkashi Tunnel Rescue) ಬಳಿಕ ಸುದ್ದಿಗೋಷ್ಠಿ ಮಾತನಾಡಿದ ಸಿಎಂ ಧಾಮಿ ಅವರು, ರಕ್ಷಿಸಲಾಗಿರುವ ಎಲ್ಲ ಕಾರ್ಮಿಕರನ್ನು 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ನಿಗಾವಹಿಸಲಾಗುವುದು ಎಂದು ತಿಳಿಸಿದ್ದಾರೆ(Rescue Operation).

ರಕ್ಷಣಾ ಕಾರ್ಯಾಚರಣೆಯ ಕುರಿತಂತೆ ಕೇಂದ್ರ ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ, ಸಚಿವರಾದ ವಿ ಕೆ ಸಿಂಗ್ ಸೇರಿದಂತೆ ಪ್ರಧಾನಿ ಕಾರ್ಯಾಲಯವು ನಿರಂತರವಾಗಿ ನಿಗಾ ವಹಿಸಿತ್ತು. ಕಾರ್ಯಾಚರಣೆಗಾಗಿ ಇಂದೋರ್‌, ಹೈದ್ರಾಬಾದ್‌ಗಳಿಂದ ಯಂತ್ರಗಳನ್ನು ತರಸಲಾಗಿತ್ತು. ದೆಹಲಿ ಸೇರಿದಂತೆ ಬೇರೆಕಡೆಯಿಂದ ಬಂದ ಎಲ್ಲಾ ಕಾರ್ಮಿಕರಿಗೆ ಧನ್ಯವಾದ ಎಂದು ಹೇಳಿ ಪುಷ್ಕರ ಸಿಂಗ್ ಧಾಮಿ ಹೇಳಿದರು.

ಕಾರ್ಯಾಚರಣೆಯ ಆರಂಭದಲ್ಲಿ ಆರಂಭಿಕ ಹಂತದಲ್ಲಿ ನಮಗೆ ತುಂಬಾ ಭಯವಾಗಿತ್ತು. ಯಾವಾಗ ಕಾರ್ಮಿಕರ ಜೊತೆ ಮಾತುಕತೆ ಮಾಡಿದ್ವೋ ಆಗ ನಮಗೆ ಭರವಸೆ ಬಂತು, ಮೊದಲು ಚಿಕ್ಕವರನ್ನ ಕರೆತರಲು ನಿರ್ಧಾರ ಮಾಡಿದ್ವಿ ನಂತರ ದೊಡ್ಡವರು ಟೀಂ ಲೀಡ್ ಮಾಡೊ ಐದು ಜನ ಬರಲು ನಿರ್ಧಾರ ಮಾಡಿದ್ರು. ಮೊದಲು ನನಗೆ ರಕ್ಷಣಾ ಕಾರ್ಯಾಚರಣೆ ನಿಂತಾಗ ಕರೆ ಬಂದಾಗ ಭಯವಾಗಿತ್ತು. ಸದ್ಯ ಈ ಎಲ್ಲರನ್ನ 24 ಗಂಟೆ ನಿಗಾದಲ್ಲಿ ಇಡಲಾಗುವುದು ಎಂದು ಸಿಎಂ ಧಾಮಿ ತಿಳಿಸಿದರು.

ಹೊರ ಬಂದ ಯಾವ ಕಾರ್ಮಿಕರು ಸಹ ತೊಂದರೆಯಲ್ಲಿಲ್ಲ, ಎಲ್ಲರು ಆರಾಮಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ದೇಶ ಮತ್ತು ವಿದೇಶದ ಹಲವಾರು ಜನ ಕಾರ್ಯದಲ್ಲಿ ಭಾಗಿಯಾಗಿದ್ದರು ಎಂದು ಧಾಮಿ ಹೇಳಿದರು.

ಮಂದಿರ ನಿರ್ಮಾಣಕ್ಕೆ ನಾವು ತೀರ್ಮಾನ ಮಾಡಿದ್ದೆವೆ. ದೆಹಲಿ ಮತ್ತು ಗೋರಕ್ ಪುರ್ ನಿಂದ ಬಂದಿರೊ ಕಾರ್ಮಿಕರಿಂದ ರ್ಯಾಟ್ ಮೈನಿಂಗ್ ರೀತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆಗಿದೆ. ದೀವಾಪಳಿಯ ಮಾರನೆ ದಿನದಿಂದ ನಾನು ನಿರಂತರವಾಗಿ ಇಲ್ಲೆ ಇದ್ದೆ. ಇಲ್ಲಿಂದಲೆ ನಾನು ರಾಜ್ಯದ ಇತರ ಕೆಲಸ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಕಾರ್ಮಿಕರಿಗೆ ತಲಾ 1 ಲಕ್ಷ ಪರಿಹಾರ

ರಾಜ್ಯ ಸರ್ಕಾರದಿಂದ ಎಲ್ಲಾ ಕಾರ್ಮಿಕರಿಗೆ ತಲಾ ಒಂದು ಲಕ್ಷ ಘೋಷಣೆ. ನಾಳೆ ಚೆಕ್ ಮೂಲಕ ಪರಿಹಾರ ನೀಡಲಾಗುವುದು. ಎಲ್ಲರಿಗೂ 15 ದಿನ ಅಥವಾ ಒಂದು ತಿಂಗಳು ಮನೆಗೆ ಹೋಗಲು ಅವಕಾಶ ನೀಡಲಾಗುವುದು. ರಕ್ಷಣಾ ಕಾರ್ಯಾಚರಣೆಯ ವೆಚ್ಚ ಎಷ್ಟೆ ಆದ್ರು ನಾವು ನೀಡಲು ತೀರ್ಮಾನಿಸಿದ್ವಿ. ಪ್ರಧಾನಿ ಮೋದಿ ಈ ಬಗ್ಗೆ ಸೂಚನೆ ನೀಡಿದ್ದರು. ನಮಗೆ ಕಾರ್ಮಿಕರ ಜೀವ ಮುಖ್ಯವಾಗಿತ್ತು ಎಂದು ಧಾಮಿ ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ: ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ

Continue Reading

ಕರ್ನಾಟಕ

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Siddaramaiah
Koo

ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿ (Uttarkashi Tunnel Collapse) ಜಿಲ್ಲೆಯ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಿರಂತರ ಪ್ರಯತ್ನದಿಂದ ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಸತತ ಹದಿನೇಳು ದಿನಗಳ ರಕ್ಷಣಾ ಕಾರ್ಯಾಚರಣೆ ನಂತರ ಉತ್ತರಾಖಂಡದ ಸುರಂಗದೊಳಗೆ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿರುವುದು ನೋಡಿ ಅತ್ಯಂತ ಖುಷಿಯಾಯಿತು. ಈ ಸವಾಲಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ರಕ್ಷಣಾ ಸಿಬ್ಬಂದಿಗಳಿಗೆ ಧನ್ಯವಾದಗಳು.

ಇದನ್ನೂ ಓದಿ | ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

ನಿಮ್ಮ ಶ್ರಮ ಮತ್ತು ನಿರಂತರ ಪ್ರಯತ್ನದಿಂದ ಸುರಂಗದೊಳಗೆ ಸಿಲುಕಿದ್ದ ಕಾರ್ಮಿಕರಿಗೆ ಮರುಹುಟ್ಟು ಸಿಕ್ಕಂತಾಗಿದೆ.
ಕೋಟ್ಯಂತರ ಭಾರತೀಯರ ಹಾರೈಕೆಗಳು, ಕಾರ್ಮಿಕರ ಕುಟುಂಬ ಸದಸ್ಯರ ಪ್ರಾರ್ಥನೆ ಈ ಕ್ಷಣ ಫಲ ನೀಡಿದೆ ಎಂದು ತಿಳಿಸಿದ್ದಾರೆ.

ಉತ್ತರಕಾಶಿಯಲ್ಲಿ 41 ಕಾರ್ಮಿಕರ ರಕ್ಷಣೆ

ಉತ್ತರಾಖಂಡದ (Uttarakhand) ಉತ್ತರಕಾಶಿ (Uttarkashi Tunnel Collapse) ಜಿಲ್ಲೆಯಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರನ್ನು ಯಶಸ್ವಿಯಾಗಿ ಹೊರ ತರಲಾಗಿದೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ಒಬ್ಬೊಬ್ಬರಾಗಿ ಸುರಂಗದೊಳಿಗಿಂದ ಕಾರ್ಮಿಕರನ್ನು ಹೊರ ಕರೆ ತರಲಾಯಿತು(rescue operation). ಅಂತಿಮ ಹಂತದ ಕಾರ್ಯಾಚರಣೆ ಆರಂಭವಾದ ಅರ್ಧ ಗಂಟೆಯಲ್ಲಿ ಎಲ್ಲ 41 ಕಾರ್ಮಿಕರು ಸುರಂಗದ ಅವಶೇಷಗಳಿಂದ ಹೊರ ಬಂದಿದ್ದಾರೆ.

ಸುರಂಗದ ಅವಶೇಷಗಳಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಮಂಗಳವಾರ (ನವೆಂಬರ್‌ 28) ಫಲ ಕೊಟ್ಟಿದೆ (Uttarkashi Tunnel Rescue). ಕಾರ್ಮಿಕರು ಸುರಕ್ಷಿತವಾಗಿ ಹೊರಬರಲಿ ಎಂದು ಶತಕೋಟಿ ಭಾರತೀಯರು ಮಾಡಿದ ಪ್ರಾರ್ಥನೆಯು ಫಲಿಸಿದೆ. ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರು ಸುರಕ್ಷಿತವಾಗಿದ್ದು, ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ಸಿಬ್ಬಂದಿ, ಪೊಲೀಸರು, ನುರಿತ ರಕ್ಷಣಾ ಸಿಬ್ಬಂದಿ, ವಿದೇಶಿ ತಂಡಗಳು, ಅತ್ಯಾಧುನಿಕ ಯಂತ್ರಗಳು, ಡ್ರಿಲ್ಲಿಂಗ್‌ ಮಷೀನ್‌ಗಳನ್ನು ಬಳಸಿ ಸತತವಾಗಿ ಕಾರ್ಯಾಚರಣೆ ಕೈಗೊಂಡರೂ ಹಲವು ಅಡೆತಡೆಗಳು ಎದುರಾದವು. ಆದರೆ, ಇದೆಲ್ಲವನ್ನೂ ಮೀರಿ ಕೈಗೊಂಡ ಕಾರ್ಯಾಚರಣೆ ಯಶಸ್ವಿಯಾಗಿದೆ. 41 ಹಾಸಿಗೆಗಳು ಇರುವ ತಾತ್ಕಾಲಿಕ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಆಂಬುಲೆನ್ಸ್‌ ಮೂಲಕ ಎಲ್ಲ ಕಾರ್ಮಿಕರನ್ನು ಕರೆದೊಯ್ಯಲಾಗಿದೆ.ತಾತ್ಕಾಲಿಕ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಆಂಬುಲೆನ್ಸ್‌ ಮೂಲಕ ಎಲ್ಲ ಕಾರ್ಮಿಕರನ್ನು ಕರೆದೊಯ್ಯಲಾಗಿದೆ.

ಇದನ್ನೂ ಓದಿ | ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ

ಸ್ಥಳದಲ್ಲಿ ಹಾಜರಿದ್ದ ಉತ್ತರಾಖಂಡ ಸಿಎಂ ಪುಷ್ಕರ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ಅವರು ಸುರಂಗದಿಂದ ಹೊರ ಬಂದ ಕಾರ್ಮಿಕರನ್ನು ಬರಮಾಡಿಕೊಂಡು, ಅವರೊಂದಿಗೆ ಮಾತುಕತೆ ನಡೆಸಿದರು. ಕೂಡಲೇ ಕಾರ್ಮಿಕರನ್ನು ತಾತ್ಕಾಲಿಕ ಆಸ್ಪತ್ರೆಗೆ ದಾಖಲಿಸಲಾಯಿತು. 17 ದಿನಗಳ ಕಾಲ ಸುರಂಗದ ಅವಶೇಷಗಳಲ್ಲಿ ಸಿಲುಕಿದ್ದ ಕಾರ್ಮಿಕರು ಹೊರ ಬಂದಾಗಲೂ ಅವರ ಮುಖದ ಮೇಲೆ ಮಂದಹಾಸವಿತ್ತು. ಈ ಕಾರ್ಮಿಕರ ರಕ್ಷಣೆಗೆ ಕೋಟ್ಯಂತರ ಭಾರತೀಯರು ಪಾರ್ಥನೆ ಮಾಡಿದ್ದರು.

Continue Reading

ದೇಶ

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

ಸುಮಾರು 17 ದಿನಗಳ ಸತತ ಕಾರ್ಯಾಚರಣೆ ಬಳಿಕ ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಎಲ್ಲ ಕಾರ್ಮಿಕರನ್ನು ಹೊರಗೆ ಕರೆತರಲಾಗಿದ್ದು, ಮುಂದಿನ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Uttarkashi Tunnel Rescue and Makeshift hospital
Koo

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಸುಮಾರು 17 ದಿನ ನೂರಾರು ಸಿಬ್ಬಂದಿಯ ಫಲವಾಗಿ ಎಲ್ಲ ಕಾರ್ಮಿಕರನ್ನು ಸುರಂಗದ ಅವಶೇಷಗಳಿಂದ ರಕ್ಷಣೆ ಮಾಡಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ, ಕೇಂದ್ರ ಸಚಿವ ಜನರಲ್‌ ವಿ.ಕೆ. ಸಿಂಗ್‌ ಅವರು ಸ್ಥಳಕ್ಕೆ ಆಗಮಿಸಿದ್ದು, ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಇನ್ನು, 41 ಕಾರ್ಮಿಕರನ್ನು ಸುರಂಗದಿಂದ ಹೊರತೆಗೆದರೂ ಕಾರ್ಮಿಕರ ಹಿತದೃಷ್ಟಿಯಿಂದಾಗಿ ಹಲವು ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ.

ಆರೋಗ್ಯ ತಪಾಸಣೆ

ಸುರಂಗ ಕುಸಿದು 12 ದಿನಗಳು ಕಳೆದಿದ್ದು, ಇಷ್ಟೂ ದಿನಗಳನ್ನು ಕಾರ್ಮಿಕರು ಸುರಂಗದ ಒಳಗಡೆಯೇ ಕಳೆದಿದ್ದಾರೆ. ಅವರು ಮಾನಸಿಕವಾಗಿ, ದೈಹಿಕವಾಗಿ ಕುಗ್ಗಿ ಹೋಗಿದ್ದಾರೆ. ಹಾಗಾಗಿ, ಸುರಂಗದಿಂದ 41 ಕಾರ್ಮಿಕರನ್ನು ಹೊರಗೆ ಕರೆತರುತ್ತಲೇ ವೈದ್ಯರ ತಂಡವು ಅವರ ಆರೋಗ್ಯ ತಪಾಸಣೆ ನಡೆಸಿದೆ. ಇದಾದ ಬಳಿಕ ಅವರನ್ನು ಚಿನ್ಯಾಲಿಸೌರ್‌ನಲ್ಲಿರುವ 41 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗುತ್ತದೆ. ಅಲ್ಲಿಯೂ ಕಾರ್ಮಿಕರ ಆರೋಗ್ಯ ತಪಾಸಣೆ, ಅವರಿಗೆ ಮಾನಸಿಕವಾಗ ಸ್ಥೈರ್ಯ ತುಂಬುವುದು, ಆರೋಗ್ಯದ ಸ್ಥಿತಿಯ ಆಧಾರದ ಮೇಲೆ ಅವರಿಗೆ ಆಹಾರ, ಪಾನೀಯ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ನುರಿತ ವೈದ್ಯರಿಂದ ಕೌನ್ಸೆಲಿಂಗ್‌

ಸುರಂಗದಲ್ಲಿ ಸಿಲುಕಿದ ಎಲ್ಲ ಕಾರ್ಮಿಕರು 17 ದಿನಗಳಲ್ಲಿ ಕುಗ್ಗಿ ಹೋಗಿದ್ದಾರೆ. ಅವರು ಮಾನಸಿಕವಾಗಿ ಸ್ಥೈರ್ಯ ಕಳೆದುಕೊಂಡಿದ್ದಾರೆ. ಹಾಗಾಗಿ, ಅವರು ಮತ್ತೆ ಸಾಮಾನ್ಯ ಸ್ಥಿತಿಗೆ ಮರಳಲು ನುರಿತ ವೈದ್ಯರು ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಲಿದ್ದಾರೆ. ಆ ಮೂಲಕ ಅವರಲ್ಲಿ ಧೈರ್ಯ ತುಂಬುತ್ತಾರೆ ಎಂದು ಮೂಲಗಳು ತಿಳಿಸಿವೆ. ಹಾಗೊಂದು ವೇಳೆ ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದರೆ ರಿಷಿಕೇಶದಲ್ಲಿರುವ ಏಮ್ಸ್‌ಗೂ ಕರೆದೊಯ್ಯಲು ಸಕಲ ವ್ಯವಸ್ಥೆ ಮಾಡಲಾಗಿದೆ. ಚಿನೂಕ್‌ ಹೆಲಿಕಾಪ್ಟರ್‌ ಕೂಡ ನೆರವಿಗೆ ಸಜ್ಜಾಗಿದೆ.

ಇದನ್ನೂ ಓದಿ: ಲೈಫ್‌ಲೈನ್ ಪೈಪ್ ಅಳವಡಿಕೆ, ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಆಹಾರ ರವಾನೆ

ಕುಟುಂಬಸ್ಥರ ಜತೆ ಮಾತುಕತೆ

ಕುಟುಂಬಸ್ಥರ ಸಂಪರ್ಕವೇ ಇಲ್ಲದೆ ಕಾರ್ಮಿಕರು 17 ದಿನ ಕಳೆದಿದ್ದಾರೆ. ಇತ್ತ ಕುಟುಂಬಸ್ಥರು ಕೂಡ ಇವರ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಹಾಗಾಗಿ, ವೈದ್ಯಕೀಯ ತಪಾಸಣೆ ಬಳಿಕ ಸುರಂಗದಲ್ಲಿ ಸಿಲುಕಿದ್ದವರ ಜತೆ ಅವರ ಕುಟುಂಬಸ್ಥರು ಮಾತುಕತೆ ನಡೆಸಲಿದ್ದಾರೆ. ಅವರು ಕೂಡ ಕಾರ್ಮಿಕರಿಗೆ ಧೈರ್ಯ ತುಂಬಲಿದ್ದಾರೆ. ಎಲ್ಲ ನೋವಿನಿಂದ ಅವರು ಹೊರಬರಲು ಇದು ನೆರವಾಗಲಿದೆ ಎಂದು ವೈದ್ಯಕೀಯ ಮೂಲಗಳಿಂದ ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News

VISTARANEWS.COM


on

Top 10 news
Koo

1. ಹೊರ ಬಂದರು ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಕಾರ್ಮಿಕರು! ಫಲಿಸಿತು ಭಾರತೀಯರ ಪ್ರಾರ್ಥನೆ
ಡೆಹ್ರಾಡೂನ್:‌ ಉತ್ತರಾಖಂಡದ (Uttarakhand) ಉತ್ತರಕಾಶಿ (Uttarkashi Tunnel Collapse) ಜಿಲ್ಲೆಯಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರನ್ನು ಯಶಸ್ವಿಯಾಗಿ ಹೊರ ತರಲಾಗಿದೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ಒಬ್ಬೊಬ್ಬರಾಗಿ ಸುರಂಗದೊಳಿಗಿಂದ ಕಾರ್ಮಿಕರನ್ನು ಹೊರ ಕರೆ ತರಲಾಯಿತು(rescue operation). ಅಂತಿಮ ಹಂತದ ಕಾರ್ಯಾಚರಣೆ ಆರಂಭವಾದ ಅರ್ಧ ಗಂಟೆಯಲ್ಲಿ ಎಲ್ಲ 41 ಕಾರ್ಮಿಕರು ಸುರಂಗದ ಅವಶೇಷಗಳಿಂದ ಹೊರ ಬಂದಿದ್ದಾರೆ. ಅಂತೂ, ಸುರಂಗದ ಅವಶೇಷಗಳಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಗೆ ಕೈಗೊಂಡ ಕಾರ್ಯಾಚರಣೆಯು ಮಂಗಳವಾರ (ನವೆಂಬರ್‌ 28) ಫಲ ಕೊಟ್ಟಿದೆ (Uttarkashi Tunnel Rescue). ಕಾರ್ಮಿಕರು ಸುರಕ್ಷಿತವಾಗಿ ಹೊರಬರಲಿ ಎಂದು ಶತಕೋಟಿ ಭಾರತೀಯರು ಮಾಡಿದ ಪ್ರಯತ್ನವು ಯಶಸ್ವಿಯಾಗಿದೆ. ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರು ಸುರಕ್ಷಿತವಾಗಿದ್ದು, ಅವರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

2. ಮಕ್ಕಳ ಮಾರಾಟದ ಬೃಹತ್‌ ಜಾಲ ಪತ್ತೆ;‌ ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್!
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಭ್ರೂಣ ಹತ್ಯೆ ಜಾಲದ (feticide scam) ಭಯಾನಕ ಮುಖಗಳು ಒಂದೊಂದಾಗಿ ಹೊರಬರುತ್ತಿರುವ ನಡುವೆಯೇ ಬೆಂಗಳೂರಿನಲ್ಲಿ ಇನ್ನೊಂದು ಆತಂಕಕಾರಿ ದಂಧೆ ಬಯಲಾಗಿದೆ. ಇದು ಹಸುಗೂಸುಗಳನ್ನೇ (Newborn Child Market) ಮಾರಾಟ ಮಾಡುವ ಕ್ರಿಮಿನಲ್‌ ದಂಧೆ. ಸಾಮಾನ್ಯವಾಗಿ ಮಕ್ಕಳ ಮಾರಾಟ ಜಾಲ ಎಂದರೆ ಮಕ್ಕಳನ್ನು ಅಪಹರಣ (Children kidnap) ಮಾಡಿ ಮಾರಾಟ ಮಾಡುವುದು ಅಥವಾ ಹೆತ್ತವರೇ ತಮ್ಮ ಮಕ್ಕಳನ್ನು ಮಾರಾಟ ಮಾಡುವುದು ಎಂದು ಅಂದುಕೊಳ್ಳುತ್ತೇವೆ. ಆದರೆ, ಇಲ್ಲಿ ಬಯಲಾಗಿರುವುದು ಅದನ್ನೂ ಮೀರಿದ ದಂಧೆ. ಅದೇನೆಂದರೆ ಮಕ್ಕಳನ್ನು ಮಾರಾಟಕ್ಕಾಗಿಯೇ ಹುಟ್ಟಿಸಿ ಬಳಿಕ ಮಾರಾಟ ಮಾಡುವ ದಂಧೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : Child Trade : ಒಂದು ಮಗು ಹೆತ್ತು ಕೊಟ್ರೆ ತಾಯಿಗೆ 3 ಲಕ್ಷ, ಏಜೆಂಟ್‌ಗೆ 5 ಲಕ್ಷ ರೂ.!

3. ನಿಗಮ-ಮಂಡಳಿ ಲಿಸ್ಟ್‌ ಡೆಲ್ಲಿಗೆ ರವಾನೆ;‌ ಶಾಸಕರಿಗೆ ಮಾತ್ರ ಅವಕಾಶವೆಂದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ (Congress Karnataka) ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದ ಬಳಿಕ ನಿಗಮ – ಮಂಡಳಿಗಳ ಅಧ್ಯಕ್ಷರ ಆಯ್ಕೆ ಫೈನಲ್‌ ಆಗಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ನಡುವಿನ ಮುಸುಕಿನ ಗುದ್ದಾಟದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಮೇಲುಗೈ ಸಾಧಿಸಿದ್ದಾರೆ. ಕಾರ್ಯಕರ್ತರಿಗೂ ಈ ಬಾರಿ ಅವಕಾಶ ನೀಡಬೇಕು ಎಂಬ ಡಿಕೆಶಿ ಬೇಡಿಕೆಗೆ ಈ ಬಾರಿ ಬೆಲೆ ಸಿಕ್ಕಿಲ್ಲ. ಹೀಗಾಗಿ ಮೊದಲ ಹಂತದ ಲಿಸ್ಟ್‌ನಲ್ಲಿ ಶಾಸಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

4. ಡಿಕೆಶಿ ವಿರುದ್ಧದ ಸಿಬಿಐ ಕೇಸ್‌ ವಾಪಸ್‌ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್‌
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ಅವರ ವಿರುದ್ಧ ಸಿಬಿಐ ದಾಖಲಿಸಿಕೊಂಡಿರುವ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು (CBI Case against DK Shivakumar) ಹಿಂದಕ್ಕೆ ಪಡೆಯುವ ರಾಜ್ಯ ಸಚಿವ ಸಂಪುಟದ (State Cabinet meeting) ತೀರ್ಮಾನವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಬಸನ ಗೌಡ ಪಾಟೀಲ್‌ ಯತ್ನಾಳ್‌ (Basanagowda pateel Yatnal) ಅವರು ಹೈಕೋರ್ಟ್‌ (Karnataka High court) ಮೆಟ್ಟಿಲೇರಿದ್ದಾರೆ. ಸರ್ಕಾರದ ಈ ನಡೆ ಕಾನೂನುಬಾಹಿರವಾಗಿದ್ದು, ಇದನ್ನು ತಡೆಯಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಿದ ದಾವೆಯಲ್ಲಿ ಮನವಿ ಮಾಡಲಾಗಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

5. ಸಿಎಂ, ಡಿಸಿಎಂ ನಡೆಗೆ ಹಿರಿಯ ಸಚಿವರ ಮುನಿಸು; ಅಭಿಪ್ರಾಯ ಕೇಳುತ್ತಿಲ್ಲವೆಂದ ಪರಮೇಶ್ವರ್!
ಬೆಂಗಳೂರು: ಪೂರ್ಣ ಬಹುಮತದೊಂದಿಗೆ ಅಧಿಕಾರ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್‌ನಲ್ಲಿ (Congress Karnataka) ಒಂದಲ್ಲ ಒಂದು ಸಮಸ್ಯೆ ಕಾಣಿಸಿಕೊಳ್ಳುತ್ತಲೇ ಇದೆ. ಒಂದನ್ನು ಬಗೆಹರಿಸುವ ಹೊತ್ತಿಗೆ ಮತ್ತೊಂದು ಶುರು ಎಂಬಂತೆ ಆಗುತ್ತಿದೆ. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಅವರ ನಡೆಗೆ ಹಿರಿಯ ಸಚಿವರು ಅಸಮಾಧಾನಗೊಂಡಿದ್ದಾರೆ. ಜತೆಗೆ ಹೈಕಮಾಂಡ್‌ (Congress High Command) ಬಗ್ಗೆಯೂ ತಮ್ಮ ಬೇಸರವನ್ನು ಹೊರಹಾಕುತ್ತಿದ್ದಾರೆ. ಯಾವುದೇ ಪ್ರಮುಖ ನಿರ್ಣಯವನ್ನು ತೆಗೆದುಕೊಳ್ಳಬೇಕಿದ್ದರೂ ಸಲಹೆಗಳನ್ನು ಸಹ ಕೇಳುತ್ತಿಲ್ಲ. ಅವರಿಬ್ಬರೇ ಫೈನಲ್‌ ಮಾಡುತ್ತಿದ್ದಾರೆ. ಅವರ ಮಾತುಗಳಿಗೆ ಹೈಕಮಾಂಡ್‌ ಕೂಡಾ ಮಣೆ ಹಾಕುತ್ತಿದೆ ಎಂಬ ಅಸಮಾಧಾನವನ್ನು ಹೊರಹಾಕಲಾಗುತ್ತಿದೆ. ಈಗ ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ (Home Minister Dr G Parameshwara) ಸ್ವತಃ ಆಕ್ರೋಶ ಹೊರಹಾಕಿದ್ದಾರೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

6. ಯೂಟ್ಯೂಬ್​ನಲ್ಲಿ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್; ವೀವ್ಸ್ ಎಷ್ಟು?
ಬೆಂಗಳೂರು: ಕಳೆದ ವರ್ಷ ತೆರೆಕಂಡ ʼಕಾಂತಾರʼ ಚಿತ್ರ (Kantara Movie) ಸೂಪರ್‌ ಹಿಟ್‌ ಆಗಿತ್ತು. ಕನ್ನಡ ಮಾತ್ರವಲ್ಲ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಅದರ ಎರಡನೇ ಭಾಗ ಬರುತ್ತದೆ ಎನ್ನುವಾಗಲೇ ಸಾಕಷ್ಟು ಕುತೂಹಲ ಮೂಡಿತ್ತು. ಅದರಂತೆ ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆಯ ವೀಕ್ಷಣೆ ಕಂಡಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ : ಕನ್ನಡ ಚಿತ್ರಗಳನ್ನು ನಿರಾಕರಿಸುತ್ತಿರುವ ಒಟಿಟಿ ವೇದಿಕೆಗಳು: ರಿಷಬ್ ಶೆಟ್ಟಿ ಆರೋಪ

7. ಗೂಳಿ’ಯಂತೆ ಜಿಗಿದ ಅದಾನಿ ಗ್ರೂಪ್‌ ಷೇರುಗಳ ಮೌಲ್ಯ, 20% ಏರಿಕೆಗೆ ಏನು ಕಾರಣ?
ಮುಂಬೈ: ಗೌತಮ್‌ ಅದಾನಿ (Gautam Adani) ನೇತೃತ್ವದ ಅದಾನಿ ಗ್ರೂಪ್‌ ಷೇರುಗಳ (Adani Stocks) ಮೌಲ್ಯವು ಮಂಗಳವಾರ (ನವೆಂಬರ್‌ 18) ದಿಢೀರನೇ ಏರಿಕೆಯಾಗಿದೆ. ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಬೆಳಗ್ಗೆ ವಹಿವಾಟು (Share Market) ಆರಂಭವಾಗುತ್ತಲೇ ಅದಾನಿ ಗ್ರೂಪ್‌ ಷೇರುಗಳ ಮೌಲ್ಯದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅದಾನಿ ಗ್ರೂಪ್‌ ಷೇರುಗಳ ಮೌಲ್ಯವು ಶೇ.20ರಷ್ಟು ಏರಿಕೆಯಾಗಿದ್ದು, ಹೂಡಿಕೆದಾರರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

8. ಆಧಾರ್‌ ಮಾಹಿತಿ ಪಕ್ಕಾ ಪರ್ಸನಲ್‌, ಹೆಂಡತಿಗೂ ಕೊಡುವಂತಿಲ್ಲ!
ಬೆಂಗಳೂರು: ಆಧಾರ್‌ ಕಾರ್ಡ್‌ಗೆ (Aadhaar Card) ಸಂಬಂಧಿಸಿದ ಮಾಹಿತಿಗಳು ಖಾಸಗಿಯಾಗಿದ್ದು, ಅದನ್ನು ಹೆಂಡತಿಗೂ ಕೊಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ (Karnataka High court) ಮಹತ್ವದ ತೀರ್ಪೊಂದರಲ್ಲಿ ಹೇಳಿದೆ. ಗಂಡ-ಹೆಂಡತಿ ಮಧ್ಯೆ ಏನು ಗೌಪ್ಯತೆ, ಹೆಂಡತಿಯ ಮಾಹಿತಿಯನ್ನು ಗಂಡನಿಗೆ, ಗಂಡನ ಮಾಹಿತಿಯನ್ನು ಹೆಂಡತಿಗೆ ನೀಡಬಹುದಲ್ಲವೇ ಎಂಬ ಪ್ರಶ್ನೆಗೆ ಕೋರ್ಟ್‌ ಕಾನೂನಿನ ಉತ್ತರ ನೀಡಿದೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

9. ದುಡ್ಡು ಖಾಲಿಯಾಗಿದ್ದು ಆರ್​ಸಿಬಿಯದ್ದು, ಲಾಭ ಆಗುತ್ತಿರುವುದು ಮುಂಬೈಗೆ!
ಬೆಂಗಳೂರು: ಗುಜರಾತ್ ಟೈಟಾನ್ಸ್ ತಂಡದ ಮಾಜಿ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2024 ರಲ್ಲಿ ಆಡಲು ಮುಂಬೈ ಇಂಡಿಯನ್ಸ್ ಸೇರಲು ನಿರ್ಧರಿಸಿದಾಗಿನಿಂದ ಐಪಿಎಲ್​ 2024ನೇ ಆವೃತ್ತಿಯು ಕಳೆಗಟ್ಟುತ್ತಿದೆ. ಹೊಸ ಫ್ರಾಂಚೈಸಿ ಗುಜರಾತ್ ಟೈಟನ್ಸ್ ್ಪರ ನಾಯಕನಾಗಿ ಮತ್ತು ಆಟಗಾರನಾಗಿ ಒಂದೆರಡು ಯಶಸ್ವಿ ವರ್ಷಗಳ ಕಳೆದ ನಂತರ ಅವರು ಮುಂಬೈಗೆ ವಾಪಸಾಗಿದ್ದಾರೆ. ಅವರೀಗ , ರೋಹಿತ್ ಶರ್ಮಾ ನೇತೃತ್ವದ ತಂಡದ ಜತೆ ಹೊಸ ಒಪ್ಪಂದ ಮಾಡಿಕೊಂಡಿದ್ದಾರೆ. ಇದರಿಂದ ಅವರು ಈ ಫ್ರಾಂಚೈಸಿಯ ಭವಿಷ್ಯದ ನಾಯಕ ಎಂದೇ ಹೇಳಲಾಗುತ್ತಿದೆ. ಆದರೆ, ಈ ಟ್ರೇಡಿಂಗ್ ಡೀಲ್ ಅತ್ಯಂತ ಕುತೂಹಲಕಾರಿಯಾಗಿತ್ತು. ಅವರಿಗೆ ನೀಡಬೇಕಾದ 15 ಕೋಟಿ ರೂಪಾಯಿ ಮೊತ್ತವನ್ನು ಸಜ್ಜುಗೊಳಿಸಲು ಮುಂಬಯಿ ಇಂಡಿಯನ್ಸ್​ ತಂಡ ಹೊಸ ಐಡಿಯಾ ಮಾಡಿತ್ತು. ತನ್ನ ತಂಡದಲ್ಲಿರುವ 17.5 ಕೋಟಿ ರೂಪಾಯಿ ಮೌಲ್ಯದ ಆಸ್ಟ್ರೇಲಿಯನ್​ ಆಲ್​ರೌಂಡರ್ ಕ್ಯಾಮೆರೂನ್ ಗ್ರೀನ್ ಅವರನ್ನು ಬೆಂಗಳೂರು ತಂಡಕ್ಕೆ ಮಾರಿತು. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

10. `ಗೇ’ ಆ್ಯಪ್‌ನಲ್ಲಿ ಸಿಕ್ಕ ಮಹಾಶೂರ; ಮೀಟ್‌ ಮಾಡಲು ಬಂದವ ಲೂಟ್‌ ಮಾಡಿದ!
ಬೆಂಗಳೂರು: ಈಗಂತೂ ಆನ್‌ಲೈನ್‌ನಲ್ಲಿ ನೂರಾರು ಡೇಟಿಂಗ್‌ ಆ್ಯಪ್‌ಗಳು (Dating App) ಸಿಗುತ್ತವೆ. ಇದರ ಹಿಂದೆ ಬಿದ್ದ ಯುವಜನತೆ ಮೋಸ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಸದ್ಯ ಆಡುಗೋಡಿಯಲ್ಲಿ ಗ್ರೈಂಡರ್ (GRINDR) ಎಂಬ ಗೇ ಡೇಟಿಂಗ್‌ ಆ್ಯಪ್‌ (Gay App) ಮೂಲಕ ಪರಿಚಯ ಆದವನೇ ದರೋಡೆಕೋರನಾಗಿ ಎಲ್ಲವನ್ನೂ (Robbery Case) ದೋಚಿ ಹೋಗಿದ್ದಾನೆ. ಪೂರ್ಣ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading
Advertisement
mantralaya mutt
ಕರ್ನಾಟಕ18 mins ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ59 mins ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್1 hour ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ1 hour ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ2 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ2 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER2 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ3 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್3 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Child trade in Bangalore
ಕರ್ನಾಟಕ3 hours ago

Child trade : IVFಗೆ ಗಾರ್ಮೆಂಟ್ಸ್‌ ಯುವತಿಯರ ಅಂಡಾಣು!; ಮಕ್ಕಳ ಮಾರಾಟ ಗ್ಯಾಂಗ್‌ ಕರಾಮತ್ತು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ19 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌