ದೆಹಲಿ ಜಾಮಾ ಮಸೀದಿಗೆ ಹುಡುಗಿಯರಿಗಿಲ್ಲ ಪ್ರವೇಶ, ಕುಟುಂಬದವರ ಜತೆ ಬಂದರೆ ಮಾತ್ರ ಅವಕಾಶ; ವ್ಯಾಪಕ ಆಕ್ರೋಶ - Vistara News

ದೇಶ

ದೆಹಲಿ ಜಾಮಾ ಮಸೀದಿಗೆ ಹುಡುಗಿಯರಿಗಿಲ್ಲ ಪ್ರವೇಶ, ಕುಟುಂಬದವರ ಜತೆ ಬಂದರೆ ಮಾತ್ರ ಅವಕಾಶ; ವ್ಯಾಪಕ ಆಕ್ರೋಶ

ಮುಸ್ಲಿಂ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಇಡೀ ವಿಶ್ವದಾದ್ಯಂತ ಹೋರಾಡುತ್ತಿದ್ದಾರೆ. ಅಂಥ ಹೊತ್ತಲ್ಲೇ ದೆಹಲಿ ಜಾಮಾ ಮಸೀದಿ ಆಡಳಿತ ಮಂಡಳಿ ಇಂಥ ಸೂಚನಾ ಫಲಕ ಹಾಕಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಮುಸ್ಲಿಂ ರಾಷ್ಟ್ರೀಯ ವೇದಿಕೆ ವಕ್ತಾರ ಶಾಹೀದ್​ ಸಯೀದ್ ಕೂಡ ಇದನ್ನು ವಿರೋಧಿಸಿದ್ದಾರೆ.

VISTARANEWS.COM


on

Jama Masjid forbids entry of girls
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಇತಿಹಾಸ ಪ್ರಸಿದ್ಧ, ದೆಹಲಿಯ ಜಾಮಾ ಮಸೀದಿಯ ಮೂರು ಪ್ರವೇಶ ದ್ವಾರಗಳಲ್ಲಿ ಫಲಕಗಳನ್ನು ಹಾಕಲಾಗಿದ್ದು, ಅದರ ಮೇಲೆ ‘ಹುಡುಗಿಯರು/ಮಹಿಳೆಯರು ಗುಂಪಾಗಿಯಾಗಲೀ, ಒಬ್ಬಂಟಿಯಾಗಿ ಆಗಲೀ ಮಸೀದಿ ಪ್ರವೇಶಿಸುವಂತಿಲ್ಲ’ ಎಂದು ದೊಡ್ಡದಾಗಿ ಬರೆಯಲಾಗಿದೆ. ಅಂದರೆ ಜಾಮಾ ಮಸೀದಿಗೆ ಇನ್ನು ಹುಡುಗಿಯರು ಗುಂಪಾಗಿ ಮತ್ತು ಏಕಾಂಗಿಯಾಗಿ ಹೋಗುವುದನ್ನು ನಿರ್ಬಂಧಿಸಲಾಗಿದೆ. ಇದು ಜಾಮಾ ಮಸೀದಿಯ ಆಡಳಿತ ಮಂಡಳಿಯ ಆದೇಶವಾಗಿದೆ. ಈ ಆದೇಶದ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇಷ್ಟು ದಿನ ಜಾಮಾ ಮಸೀದಿಗೆ ಮಹಿಳೆಯರಷ್ಟೇ ಗುಂಪಾಗಿ ಹೋಗಬಹುದಿತ್ತು. ಇದೊಂದು ಪ್ರವಾಸಿ ಸ್ಥಳವಾಗಿದ್ದು, ಆಗಮಿಸುವ ಪ್ರವಾಸಿಗರೂ ಕೂಡ ಮಸೀದಿ ಪ್ರವೇಶ ಮಾಡಬಹುದಿತ್ತು. ಆದರೆ ಇನ್ನು ಮುಂದೆ ಮಹಿಳೆಯರಷ್ಟೇ ಗುಂಪುಗುಂಪಾಗಿ ಹೋಗಲು ಸಾಧ್ಯವಿಲ್ಲ. ಯಾವುದೇ ಹುಡುಗಿ/ಮಹಿಳೆ ಏಕಾಂಗಿಯಾಗಲೂ ಹೋಗುವಂತಿಲ್ಲ. ಹಾಗಂತ ಮಹಿಳೆಯರಿಗೆ ಪ್ರವೇಶವೇ ಇಲ್ಲ ಎಂತಲೂ ಅಲ್ಲ. ಅವರು ತಮ್ಮ ಪತಿಯೊಂದಿಗೋ, ಸಹೋದರ/ ತಂದೆ/ ಇನ್ನಿತರ ಕುಟುಂಬ ಸದಸ್ಯರ ಜತೆ ಮಸೀದಿಯೊಳಕ್ಕೆ ಹೋಗಬಹುದು ಎಂದು ಜಾಮಾ ಮಸೀದಿ ತನ್ನ ಆದೇಶದಲ್ಲಿ ತಿಳಿಸಿದೆ.

ಆದರೆ ಜಾಮಾ ಮಸೀದಿಯ ಈ ಆದೇಶ ಅಪಾರ ಟೀಕೆಗೆ ವ್ಯಕ್ತವಾಗಿದೆ. ಮುಸ್ಲಿಂ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಇಡೀ ವಿಶ್ವದಾದ್ಯಂತ ಹೋರಾಡುತ್ತಿದ್ದಾರೆ. ಅಂಥ ಹೊತ್ತಲ್ಲೇ ದೆಹಲಿ ಜಾಮಾ ಮಸೀದಿ ಆಡಳಿತ ಮಂಡಳಿ ಇಂಥ ಸೂಚನಾ ಫಲಕ ಹಾಕಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಮುಸ್ಲಿಂ ರಾಷ್ಟ್ರೀಯ ವೇದಿಕೆ ವಕ್ತಾರ ಶಾಹೀದ್​ ಸಯೀದ್​ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ‘ಜಾಮಾ ಮಸೀದಿ ಆಡಳಿತ ಮಂಡಳಿಯ ಈ ಆದೇಶ ಸರಿಯಲ್ಲ. ಇಂಥ ಮನಸ್ಥಿತಿ ಒಳ್ಳೆಯದಲ್ಲ. ಮಹಿಳೆಯರನ್ನು ಯಾಕೆ ಎರಡನೇ ದರ್ಜೆಯವರಂತೆ ನಡೆಸಿಕೊಳ್ಳಬೇಕು? ಪೂಜಾ ಸ್ಥಳಗಳಲ್ಲಿ ಈ ತಾರತಮ್ಯ ತಪ್ಪು’ ಎಂದಿದ್ದಾರೆ.

ವಿಎಚ್​ಪಿ ಖಂಡನೆ
ಜಾಮಾ ಮಸೀದಿ ಆಡಳಿತ ಮಂಡಳಿಯ ನಿರ್ಧಾರವನ್ನು ವಿಶ್ವ ಹಿಂದು ಪರಿಷತ್​ ಕೂಡ ಖಂಡಿಸಿದೆ. ಇದು ಮಹಿಳಾ ವಿರೋಧಿ ನಡವಳಿಕೆ ಎಂದು ಹೇಳಿದ್ದಲ್ಲದೆ, ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಾಷ್ಟ್ರೀ ಮಹಿಳಾ ಆಯೋಗವನ್ನು ಆಗ್ರಹಿಸಿದೆ.

ಇದನ್ನೂ ಓದಿ: ಆಗ್ರಾ ಜಾಮಾ ಮಸೀದಿಯಲ್ಲೂ ದೇವರ ಮೂರ್ತಿ ಇರಬಹುದಾ? ಉತ್ಖನನ ಕೋರಿ ಹೈಕೋರ್ಟ್‌ಗೆ ಅರ್ಜಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Lok Sabha Election: ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

VISTARANEWS.COM


on

Lok Sabha Election
Koo

ಧಾರವಾಡ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್​ ಜೋಶಿ (pralhad joshi) ಪರ ಗುರುವಾರ ಮಹಾರಾಷ್ಟ್ರ ಸಿಎಂ ಹಾಗೂ ಶಿವಸೇನೆ (Eknath Shinde) ಮುಖ್ಯಸ್ಥ ಏಕನಾಥ ಶಿಂಧೆ ಅವರು ಪ್ರಚಾರ ಭಾಷಣೆ ಮಾಡಿದರು. ನಗರದ ಮೃತ್ಯುಂಜಯ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಮೋದಿ (Narendra Modi) ನೀಡುವ ಗ್ಯಾರಂಟಿ ಪಡೆಯಲು ಪ್ರಲ್ಹಾದ್ ಜೋಶಿಯನ್ನು ಗೆಲ್ಲಿಸಿ ಎಂದು ಕರೆಕೊಟ್ಟರು.

ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಸಿಎಂ ಶಿಂಧೆ ಅವರು, ಧಾರವಾಡದ ಜನತೆಯನ್ನು ಭೇಟಿ ಮಾಡಿದ್ದು ಖುಷಿ ತಂದಿದೆ ಎಂದು ಹೇಳಿದರು. ಛತ್ರಪತಿ ಶಿವಾಜಿ ಅವರಿಗೂ ಧಾರವಾಡಕ್ಕೂ ಸಂಬಂಧ ಇದೆ. ಪುಣೆ ಹಾಗೂ ಧಾರವಾಡ ಸಾಂಸ್ಕೃತಿಕ, ಶೈಕ್ಷಣಿಕ ಕೇಂದ್ರ ಎಂಬುದಾಗಿ ನುಡಿದರು.

ದೇಶದ ವಿಕಾಸ ಹಾಗೂ ಪ್ರಗತಿಯ ಚುನಾವಣೆ ಇದಾಗಿದೆ. ಜೋಶಿ ಅವರು 5ನೆಯ ಬಾರಿ ಸ್ಪರ್ದೆ ಮಾಡಿದ್ದಾರೆ. ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಅವರು ಗೆಲ್ಲಬೇಕು. ಆ ಮೂಲಕ ಮೋದಿಯವರ ಕೈ ಬಲಪಡಿಸಬೇಕು. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿ ಸಿಎಂ ಆಗಿದ್ದೇನೆ. ಈಗಲೂ ಸಹ ನಾನು ಕಾರ್ಯಕರ್ತನಾಗಿಯೇ ಇದ್ದೇನೆ. ನೀವೆಲ್ಲ ಭಾಗ್ಯವಂತರು ಯಾಕೆಂದರೆ ಜೋಶಿ ಆದರ್ಶ ಸಂಸದರು. ಅವರು ಮೋದಿಯವರ ಹತ್ತಿರವೇ ಇರುವ ಸಂಸದರಾಗಿದ್ದಾರೆ ಎಂದು ನುಡಿದರು.

ಕಾಂಗ್ರೆಸ್ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಅವರು ಗೆಲ್ಲುವ ಮೊದಲು ಏನೇನೋ ಕೊಡ್ತೀನಿ ಅಂಥ ಹೇಳಿದ್ದರು. ಆದರೆ ಈಗ ನಮ್ಮಲ್ಲಿ ದುಡ್ಡಿಲ್ಲ ಅಂತಾರೆ. ಆದ್ರೆ ದೇಶದಲ್ಲಿ ಚಾಲ್ತಿ ಇರೋದು ಮೋದಿ ಗ್ಯಾರಂಟಿ ಎಂದು ಅವರು ಹೇಳಿದರು.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಜಾಗತಿಕ ಅರ್ಥ ವ್ಯವಸ್ಥೆಯಲ್ಲಿ ನಾವು 5ನೆಯ ಪಡೆಯಲು ಮೋದಿ ಕಾರಣ. ದೇಶದಲ್ಲಿ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಒಂದೇ ಒಂದು ರಜೆ ಸಹ ಪಡೆಯದೆ ಕೆಲಸ ಮಾಡಿದ್ದಾರೆ. ಸ್ವಲ್ಪ ಚಳಿ ಆದರೆ ವಿದೇಶಕ್ಕೆ ತೆರಳುವವರು ಬೇರೆ ಪಾರ್ಟಿಯ ಯುವರಾಜ (ರಾಹುಲ್ ಗಾಂಧಿ) ಎಂದು ಶಿಂಧೆ ಹೇಳಿದರು.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ದ್ವಜ ಹಾರಿಸಿದ ಕೀರ್ತಿ ಜೋಶಿ ಅವರಿಗೆ ಇದೆ. ಪಾಕಿಸ್ತಾನದವರು ಮೊದಲು ನಮ್ಮ ದೇಶದಲ್ಲಿ ಬಾಂಬ್ ಹಾಕುತ್ತಿದ್ದರು. ಈಗ ಭಾರತ ಮೋದಿ ನೇತೃತ್ವದಲ್ಲಿ ಪಾಕ್ ನ ಒಳಗೆ ಹೊಕ್ಕು ಸದೆಬಡಿಯುತ್ತಿದೆ ಎಂದು ಹೇಳಿದರು.

ದ್ವಾರಕಾ ನಗರದಲ್ಲಿ ಸಮುದ್ರದ ಒಳಗೆ ಹೋಗಿ ಮೋದಿ ದೇಶದ ಒಳಿತಿಗೆ ಪ್ರಾರ್ಥನೆ ಮಾಡಿದ್ದಾರೆ. ಮೋದಿ ದೇಶದ ಕೆಲಸಕ್ಕಾಗಿ ಅವರು ಇದ್ದಾರೆ. ಕೋಟ್ಯಾನುಕೋಟಿ ರಾಮನ ಭಕ್ತರ ಸಂಕಲ್ಪ ಪೂರ್ಣ ಆಗಿದೆ. ಈಗ ಎಲ್ಲರೂ ಖುಷಿಯಿಂದ ಇದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮಾಡಿದ ಚಂದ್ರಯಾನ ಫೇಲ್ ಆಗಿವೆ. ಪದೇ ಪದೇ ತಪ್ಪುಗಳನ್ನು ಮಾಡಿದ್ದಾರೆ. ಆದಾಗ್ಯೂ ಇಂಡಿಯಾ ಬಣ ಮೋದಿಯನ್ನು ಸೋಲಿಸುವುದಕ್ಕೆ ನಿಂತಿದೆ, ಅದು ಅದು ಎಂದಿಗೂ ಆಗುವುದಿಲ್ಲ ಎಂದು ನುಡಿದರು.

Continue Reading

ದೇಶ

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

Amit Shah: Lok Sabha Election 2024: ಚುನಾವಣೆ ಆಯೋಗದ ಅಂತಿಮ ಮಾಹಿತಿ ಪ್ರಕಾರ, ಹಂತ 1ರಲ್ಲಿ 66.1%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.7% ರಷ್ಟು ಮತದಾನವಾಗಿದೆ. 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದೇ ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಮತದಾನ ಪ್ರಮಾಣದ ಪರಿಣಾಮದ ಕುರಿತು ಅಮಿತ್‌ ಶಾ ಮಾತನಾಡಿದ್ದಾರೆ.

VISTARANEWS.COM


on

Amit Shah
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election) ಮೊದಲನೇ ಹಾಗೂ ಎರಡನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಎರಡೂ ಹಂತಗಳಲ್ಲಿ ಕಳೆದ ಬಾರಿಗಿಂತ ಈ ಬಾರಿ ತಲಾ ಶೇ.3ರಷ್ಟು ಮತದಾನ ಪ್ರಮಾಣ ಕುಸಿತವಾಗಿದೆ. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ. ನರೇಂದ್ರ ಮೋದಿ (Narendra Modi) ಅವರ ಅಲೆ ಕಡಿಮೆಯಾಗಿದ್ದು, ಮತದಾನ ಪ್ರಮಾಣ ಕುಂಠಿತಗೊಂಡಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ, ಮತದಾನ ಪ್ರಮಾಣ ಕಡಿಮೆಯಾಗಿರುವ ಕಾರಣ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂಬುದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಿರಸ್ಕರಿಸಿದ್ದಾರೆ.

ನ್ಯೂಸ್‌ 18 ಸುದ್ದಿ ಸಂಸ್ಥೆಗೆ ಸಂದರ್ಶನ ನೀಡುವ ವೇಳೆ ಮತದಾನ ಪ್ರಮಾಣ ಕುಸಿತ, ಅದರಿಂದ ಬಿಜೆಪಿ ಮೇಲೆ ಉಂಟಾಗುವ ಪರಿಣಾಮ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. “ದೇಶದಲ್ಲಿ ಮತದಾನ ಪ್ರಮಾಣ ಕಡಿಮೆಯಾಯಿತು ಎಂಬ ಮಾತ್ರಕ್ಕೆ ಫಲಿತಾಂಶದ ಮೇಲೆ ಅದು ಪರಿಣಾಮ ಬೀರುವುದಿಲ್ಲ. ಬಿಜೆಪಿಯು ಖಂಡಿತವಾಗಿಯೂ ಸರಿಯಾದ ಮಾರ್ಗದಲ್ಲಿದೆ. ನೀವು ಬೇಕಾದರೆ ಗಮನಿಸಿ, ಜೂನ್‌ 4ರಂದು ಫಲಿತಾಂಶ ಪ್ರಕಟವಾಗುವ ದಿನ ಮಧ್ಯಾಹ್ನ 12.30ರ ವೇಳೆಗೆ ಎನ್‌ಡಿಎ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುತ್ತದೆ. ಅಷ್ಟಕ್ಕೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ” ಎಂದು ಹೇಳಿದರು.

ಮತದಾನ ಕುಸಿತಕ್ಕೆ 2 ಕಾರಣ ಕೊಟ್ಟ ಶಾ

ಎರಡು ಹಂತಗಳಲ್ಲಿ ಮತದಾನ ಕುಸಿತಗೊಂಡಿರುವುದಕ್ಕೆ ಅಮಿತ್‌ ಶಾ ಅವರು ಎರಡು ಪ್ರಮುಖ ಕಾರಣ ಕೊಟ್ಟಿದ್ದಾರೆ. “12 ವರ್ಷಗಳ ಬಳಿಕ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಬದಲಾವಣೆಗಳಾಗಿವೆ. ಇನ್ನು, ಬಿಜೆಪಿ ವಿರುದ್ಧ ಪ್ರಬಲ ಸ್ಪರ್ಧಿಗಳು ಇಲ್ಲದ ಕಾರಣ ಮತದಾನ ಕುಸಿತವಾಗಿದೆ. ಆದರೆ, ನಮ್ಮ ಪಕ್ಷ, ಪರಿಣತರು ಸೇರಿ ನಾವೊಂದು ವಿಶ್ಲೇಷಣೆ ಮಾಡಿದ್ದೇವೆ. ಎರಡು ಹಂತಗಳಲ್ಲಿ ಬಿಜೆಪಿಗೆ 100 ಸೀಟು ಸಿಗಲಿವೆ. 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಎರಡು ಹಂತಗಳ ಮತದಾನ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ 66.1%ರಷ್ಟು ಮತದಾನವಾಗಿದ್ದು, 2ನೇ ಹಂತದಲ್ಲಿ 66.7%ರಷ್ಟು ಮತದಾನವಾಗಿದೆ. ಆದರೆ, 2019ರಲ್ಲಿ, ಈ ಹಂತಗಳ ಅಂಕಿಅಂಶಗಳು ಕ್ರಮವಾಗಿ 69.4% ಮತ್ತು 69.6% ಆಗಿದ್ದವು. ಮತದಾನ ಪ್ರಮಾಣ ಕಡಿಮೆಯಾದ ಕಾರಣ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆದರೆ, ಇನ್ನೂ ಐದು ಹಂತಗಳ ಮತದಾನ ಬಾಕಿ ಇರುವ ಕಾರಣ ಮತದಾನ ಪ್ರಮಾಣದ ಮೇಲೆ ಎಲ್ಲರ ಗಮನ ಇದೆ.

ಇದನ್ನೂ ಓದಿ: Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

Continue Reading

ದೇಶ

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

ಮುಂಬೈ ನಗರದಲ್ಲಿರುವ ಸುಷ್ಮಾ ಸ್ವರಾಜ್‌ ಆಸ್ಪತ್ರೆಯಲ್ಲಿ ವಿದ್ಯುತ್‌ ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿಯು ಸಹಿದುನ್‌ ಎಂಬ ಮಹಿಳೆಗೆ ಸಿಸೇರಿಯನ್‌ ಮೂಲಕ ಹೆರಿಗೆ ಮಾಡಿದ್ದಾರೆ. ಸರಿಯಾದ ಮೂಲ ಸೌಕರ್ಯ, ಚಿಕಿತ್ಸೆ ಸಿಗದೆ, ಹೆರಿಗೆ ಬಳಿಕ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ. ಇದಾದ ಬಳಿಕ ಕುಟುಂಬಸ್ಥರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಿಎಂಸಿಯು ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದೆ.

VISTARANEWS.COM


on

Mumbai
Koo

ಮುಂಬೈ: 3 ಈಡಿಯಟ್ಸ್‌ ಸಿನಿಮಾ ನೋಡಿದವರಿಗೆ ಆ ಭಾವುಕ ದೃಶ್ಯ ನೆನಪಿದ್ದೇ ಇರುತ್ತದೆ. ಜೋರು ಮಳೆಯಿಂದ ಕರೆಂಟ್‌ ಕೈಕೊಟ್ಟಾಗ 3 ಈಡಿಯಟ್ಸ್‌ ಸೇರಿ ಎಲ್ಲರೂ ಬ್ಯಾಟರಿ ಮೂಲಕ, ವ್ಯಾಕ್ಯೂಮ್‌ ಕ್ಲೀನರ್‌ ಬಳಸಿ ಮಹಿಳೆಯೊಬ್ಬರ ಹೆರಿಗೆ ಮಾಡಿಸುತ್ತಾರೆ. ಆದರೆ, ಮುಂಬೈನ (Mumbai) ಸರ್ಕಾರಿ ಆಸ್ಪತ್ರೆಯೊಂದರಲ್ಲಿ (Government Hospital) ಮೂಲ ಸೌಕರ್ಯವಿಲ್ಲದೆ, ಮೊಬೈಲ್‌ ಟಾರ್ಚ್‌ ಬಳಸಿ ಮಹಿಳೆಯ ಹೆರಿಗೆ ಮಾಡಿದ್ದಾರೆ. ಹೆರಿಗೆ ಬಳಿಕ ತಾಯಿ ಹಾಗೂ ಮಗು ಮೃತಪಟ್ಟಿದ್ದು, ಮನ ಕಲಕುವ ಘಟನೆಯು ಜನರ ಆಕ್ರೋಶ ಕೆರಳಿಸಿದೆ.

ಹೌದು, ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (BMC) ವ್ಯಾಪ್ತಿಯ ಸುಷ್ಮಾ ಸ್ವರಾಜ್‌ ಆಸ್ಪತ್ರೆಯಲ್ಲಿ ವಿದ್ಯುತ್‌ ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿಯು ಸಹಿದುನ್‌ ಎಂಬ ಮಹಿಳೆಗೆ ಸಿಸೇರಿಯನ್‌ ಮೂಲಕ ಹೆರಿಗೆ ಮಾಡಿದ್ದಾರೆ. ಸರಿಯಾದ ಮೂಲ ಸೌಕರ್ಯ, ಚಿಕಿತ್ಸೆ ಸಿಗದೆ, ಹೆರಿಗೆ ಬಳಿಕ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ. ಖುಸ್ರುದ್ದೀನ್‌ ಅನ್ಸಾರಿ ಅವರು 11 ತಿಂಗಳ ಹಿಂದಷ್ಟೇ ಸಹಿದುನ್‌ ಅವರನ್ನು ಮದುವೆಯಾಗಿದ್ದರು. ಮದುವೆಯಾದ ಕೆಲವೇ ತಿಂಗಳಿಗೆ ಸಹಿದುನ್‌ ಗರ್ಭಿಣಿಯಾಗಿದ್ದರು. ಕೆಲ ದಿನಗಳ ಹಿಂದಷ್ಟೇ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈಗ ಮೂಲ ಸೌಕರ್ಯ, ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಟುಂಬಸ್ಥರು ಹೇಳುವುದೇನು?

ಹೆರಿಗೆ ಮಾಡಿಸುವ ಕೋಣೆಯಲ್ಲಿ ವಿದ್ಯುತ್‌ ಕಡಿತವಾಗಿದೆ. ಸಿಸೇರಿಯನ್‌ ಮಾಡುವಾಗಲೇ ವಿದ್ಯುತ್‌ ಕೈಕೊಟ್ಟ ಕಾರಣ ಆಪರೇಷನ್‌ಗೆ ತೊಂದರೆಯಾಗಿದೆ. ಇನ್ನು ಮೂರು ಗಂಟೆಯಿಂದ ಜನರೇಟರ್‌ ಆನ್‌ ಆಗಿಲ್ಲ. ಇದಾದ ಬಳಿಕ ವೈದ್ಯರು ಮೊಬೈಲ್‌ ಬ್ಯಾಟರಿ ಬಳಸಿ ಆಪರೇಷನ್‌ ಮಾಡಿದ್ದಾರೆ. ಇದರಿಂದಾಗಿ ನನ್ನ ಪತ್ನಿ ಹಾಗೂ ಮಗುವನ್ನು ಕಳೆದುಕೊಳ್ಳಬೇಕಾಯಿತು ಎಂದು ಮಹಿಳೆಯ ಕುಟುಂಬಸ್ಥರು ದೂರಿದ್ದಾರೆ. ಅಷ್ಟೇ ಅಲ್ಲ, ಆಸ್ಪತ್ರೆ ಹೊರಗೆ ತೀವ್ರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣವನ್ನು ಬಿಎಂಸಿಯು ತನಿಖೆಗೆ ಆದೇಶಿಸಿದೆ. ಏಪ್ರಿಲ್‌ 29ರಂದು ಡೆಲಿವರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬಿಎಂಸಿ ಬಜೆಟ್‌ 52 ಸಾವಿರ ಕೋಟಿ ರೂ.

ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ನ ವಾರ್ಷಿಕ ಬಜೆಟ್‌ 52 ಸಾವಿರ ಕೋಟಿ ರೂ. ಆಗಿದೆ. ಆರೋಗ್ಯ ಕ್ಷೇತ್ರಕ್ಕಾಗಿಯೇ ಆಸ್ಪತ್ರೆಯು 6,250 ಕೋಟಿ ರೂ. ಮೀಸಲಿರಿಸಿದೆ. ಇಷ್ಟಿದ್ದರೂ, ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಮೂಲ ಸೌಕರ್ಯಗಳು, ವೈದ್ಯಕೀಯ ಉಪಕರಣಗಳು ಬಿಡಿ, ಕನಿಷ್ಠ ಸಮರ್ಪಕ ವಿದ್ಯುತ್‌, ವಿದ್ಯುತ್‌ ಕೈಕೊಟ್ಟರೆ ಇನ್ವರ್ಟರ್‌ ಸೇರಿ ಯಾವುದೇ ಸೌಕರ್ಯಗಳು ಇಲ್ಲದಿರುವುದು ಸಾಮಾನ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಖಾಸಗಿ ಆಸ್ಪತ್ರೆಗೆ ಹೋದರೆ ಲಕ್ಷಾಂತರ ರೂ. ಕೊಡಬೇಕು, ದುಡ್ಡಿಲ್ಲದ ಕಾರಣ ಸರ್ಕಾರಿ ಆಸ್ಪತ್ರೆಗೆ ಹೋದರೆ ಪ್ರಾಣವನ್ನೇ ತ್ಯಾಗ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜನ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Continue Reading

ದೇಶ

Reliance Retail: ರಿಲಯನ್ಸ್ ರಿಟೇಲ್‌ನ ಟಿರಾ ಬ್ಯೂಟಿಯಿಂದ ಹೊಸ ಬ್ರ್ಯಾಂಡ್ ‘ನೈಲ್ಸ್ ಅವರ್ ವೇ’ ಅನಾವರಣ

Reliance Retail: ರಿಲಯನ್ಸ್ ರೀಟೇಲ್‌ನ ಟಿರಾ ಬ್ಯೂಟಿಯಿಂದ ತನ್ನ ಇತ್ತೀಚಿನ ಖಾಸಗಿ ಲೇಬಲ್ ಬ್ರಾಂಡ್ ‘ನೈಲ್ಸ್ ಅವರ್ ವೇ’ (Nails Our Way) ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದು,ಇದು ಪ್ರೀಮಿಯಂ ಉಗುರು ಬಣ್ಣ ಮತ್ತು ಆರೈಕೆ ಉತ್ಪನ್ನಗಳ ವ್ಯಾಪಕವಾದ ಶ್ರೇಣಿ ಹೊಂದಿದೆ.

VISTARANEWS.COM


on

Reliance Retail Tira Beauty launch new brand Nails Our Way
Koo

ಮುಂಬೈ: ರಿಲಯನ್ಸ್ ರೀಟೇಲ್‌ನ (Reliance Retail) ಟಿರಾ ಬ್ಯೂಟಿಯಿಂದ ತನ್ನ ಇತ್ತೀಚಿನ ಖಾಸಗಿ ಲೇಬಲ್ ಬ್ರಾಂಡ್ ‘ನೈಲ್ಸ್ ಅವರ್ ವೇ’ (Nails Our Way) ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಪ್ರೀಮಿಯಂ ಉಗುರುಗಳ ಬಣ್ಣ ಮತ್ತು ಆರೈಕೆ ಉತ್ಪನ್ನಗಳ ವ್ಯಾಪಕವಾದ ಶ್ರೇಣಿ ಇದು ಹೊಂದಿದ್ದು, ಗ್ರಾಹಕರು ತಮ್ಮ ವಿಶಿಷ್ಟ ಶೈಲಿ ಅಭಿವ್ಯಕ್ತಪಡಿಸಲು ಮತ್ತು ವೈಯಕ್ತಿಕ ಸೃಜನಶೀಲತೆಗಾಗಿ ಅಳವಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ.

ನೈಲ್ಸ್ ಅವರ್ ವೇ ನ ವಿಶೇಷತೆ

‘ನೈಲ್ಸ್ ಅವರ್ ವೇ’ ಎಂಬುದು ಉಗುರುಗಳ ಆರೈಕೆಗೆ ನವೀನವಾದ ವಿಧಾನವನ್ನು ತರುತ್ತದೆ. ಈ ಉತ್ಪನ್ನ ಸಾಲಿನಲ್ಲಿ ಜೆಲ್ ವೆಲ್, ಸ್ವಿಫ್ಟ್ ಡ್ರೈ, ಬ್ರೀತ್ ಅವೇ ಮತ್ತು ಟ್ರೀಟ್ ಕೋಟ್ ನೇಲ್ ಎನಾಮೆಲ್ ಸಂಗ್ರಹಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

ಈ ಸಂಗ್ರಹವು ವೈವಿಧ್ಯಮಯ ಬಣ್ಣಗಳ ಪ್ಯಾಲೆಟ್ ಹೊಂದಿದ್ದು, ಪ್ರತಿ ಮನಸ್ಥಿತಿ ಮತ್ತು ಸಂದರ್ಭಕ್ಕೂ ಪರಿಪೂರ್ಣ ಹೊಂದಾಣಿಕೆ ಖಾತ್ರಿಪಡಿಸುತ್ತದೆ. ರೋಮಾಂಚಕ ಬಣ್ಣಗಳ ಜತೆಗೆ ನೋ ಬಂಪ್ ಬೇಸ್, ಕ್ಯೂಟಿ ಕೇರ್ ಮತ್ತು ಉಗುರುಗಳ ಪೋಷಣೆಗೆ, ಬಲಪಡಿಸುವುದಕ್ಕೆ ಮತ್ತು ರಕ್ಷಣೆಗೆ ಕಠಿಣ ಸಲ್ಯೂಷನ್ ಗಳನ್ನು ಒಳಗೊಂಡಂತೆ ಅಗತ್ಯವಾದ ಉಗುರು ಆರೈಕೆ ಉತ್ಪನ್ನಗಳನ್ನು ನೀಡುತ್ತದೆ.

ಈ ಶ್ರೇಣಿಯು ನವೀನ 2 ಟೋನ್ಡ್ ವ್ಯಾನಿಶರ್ ಮತ್ತು ಅಸಿಟೋನ್-ಮುಕ್ತ ಸಂಪೂರ್ಣ ಸ್ವಚ್ಛ ಮಾಡುವಂಥ ಸೌಮ್ಯವಾದ ಹಾಗೂ ಪರಿಣಾಮಕಾರಿಯಾದ ಉಗುರು ಬಣ್ಣವನ್ನು ತೆಗೆಯುವ ಸಾಧನಗಳನ್ನು ಪರಿಚಯಿಸುತ್ತದೆ.

ಸಂಪೂರ್ಣ ಮಿನಿಕ್ಯೂರ್ (ಕೈ ಬೆರಳುಗಳ ಅಲಂಕಾರ) ಮಾಡುವ ಸಲ್ಯೂಷನ್‌ಗಳನ್ನು ಹುಡುಕುತ್ತಿರುವವರಿಗೆ, ಫ್ರೆಂಚ್ ಎಂ ಅಪ್ ಮತ್ತು ನೇಯ್ಲ್ಡ್ ಇಟ್‌ ನಂತಹ ಅನುಕೂಲಕರ ಕಿಟ್‌ಗಳು ಸಹ ಲಭ್ಯವಿವೆ, ಮನೆಯಲ್ಲಿ ವೃತ್ತಿಪರ ಗುಣಮಟ್ಟದಲ್ಲಿ ಕಾಣುವುದಕ್ಕೆ ಸಿದ್ಧವಾಗಲು ಅಗತ್ಯವಿರುವ ಎಲ್ಲ ಸಾಧನಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Tirabeauty.com ಮೂಲಕ ಆನ್‌ಲೈನ್‌ನಲ್ಲಿ ಸಂಪೂರ್ಣ ‘ನೈಲ್ಸ್ ಅವರ್ ವೇ’ ಸಂಗ್ರಹವನ್ನು ಕಾಣಬಹುದಾಗಿದೆ.

Continue Reading
Advertisement
Lok Sabha Election
ದೇಶ16 mins ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ19 mins ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ40 mins ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ46 mins ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ2 hours ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ2 hours ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Dr Vinayaka Prasanna passed away
ಬಳ್ಳಾರಿ2 hours ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 hours ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ2 hours ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ2 hours ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ18 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌