Farooq Abdullah | ಕಾಶ್ಮೀರದಲ್ಲಿ ಎಲ್ಲಿಯ ತನಕ ಕೊಲೆಗಳಾಗಲಿವೆ? ಫಾರೂಖ್ ಅಬ್ದುಲ್ಲಾ ಹೇಳಿದ್ದೇನು? - Vistara News

ದೇಶ

Farooq Abdullah | ಕಾಶ್ಮೀರದಲ್ಲಿ ಎಲ್ಲಿಯ ತನಕ ಕೊಲೆಗಳಾಗಲಿವೆ? ಫಾರೂಖ್ ಅಬ್ದುಲ್ಲಾ ಹೇಳಿದ್ದೇನು?

ನ್ಯಾಯ ಸಿಗುವವರೆಗೂ ಕಣಿವೆ ರಾಜ್ಯದಲ್ಲಿ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ (Farooq Abdullah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

VISTARANEWS.COM


on

Article 370 may came back in 200 years Says Farooq Abdullah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನ್ಯಾಯ ಸಿಗುವವರೆಗೂ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ನಾಯಕ ಫಾರೂಖ್ ಅಬ್ದುಲ್ಲಾ (Farooq Abdullah) ವಿವಾದತ್ಮಕ ಹೇಳಿಕೆ ನೀಡಿದ್ದಾರೆ. ಈಗ ಕಣಿವೆ ರಾಜ್ಯದಲ್ಲಿ 370 ಆರ್ಟಿಕಲ್ ಕೂಡ ಇಲ್ಲ. ಆದರೂ ಏಕೆ ಹತ್ಯೆಗಳು ನಡೆಯುತ್ತಿವೆ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶೋಪಿಯಾನ್ ಪ್ರದೇಶದಲ್ಲಿ ಹಾಡಹಗಲೇ ಕಾಶ್ಮೀರ ಪಂಡಿತ ಪೂರನ್ ಕೃಷ್ಣ ಭಟ್ ಅವರ ಭೀಕರ ಹತ್ಯೆ ನಡೆದ ಎರಡು ದಿನಗಳ ಬೆನ್ನಲ್ಲೇ ಫಾರೂಖ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ನ್ಯಾಯ ಸಿಗುವವರೆಗೂ ಹತ್ಯೆಗಳು ನಿಲ್ಲುವುದಿಲ್ಲ. ಈ ಮೊದಲು ಅವರು(ಬಿಜೆಪಿ) ಕಣಿವೆ ರಾಜ್ಯದಲ್ಲಾಗುವ ಎಲ್ಲ ಅವಘಡಗಳಿಗೂ ಆರ್ಟಿಕಲ್ 379 ಮೇಲೆ ಗೂಬೆ ಕೂರಿಸುತ್ತಿದ್ದರು. ಈಗ 370 ಆರ್ಟಿಕಲ್ ತೆಗೆದು ಹಾಕಲಾಗಿದೆಯಲ್ಲ, ಈಗಲೂ ಅಂಥ ಘಟನೆಗಳು ಏಕೆ ಕಣಿವೆ ರಾಜ್ಯದಲ್ಲಾಗುತ್ತಿವೆ? ಇದಕ್ಕೆ ಯಾರು ಜವಾಬ್ದಾರರು ಹೇಳಿ ನೋಡೋಣ? ಅವರು ಹೇಳಿದ ಹಾಗೇ ಕಣಿವೆ ರಾಜ್ಯದಲ್ಲಿ ನಿಜವಾಗಲೂ ಪರಿಸ್ಥಿತಿ ಸುಧಾರಿಸಿದ್ದರೆ ಪಂಡಿತರ ಕೊಲೆಗಳು ಏಕೆ ನಡೆಯುತ್ತಿವೆ ಎಂದು ಫಾರೂಖ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

ಫಾರೂಖ್ ಅಬ್ದುಲ್ಲಾ ಅವರ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರ ಅವಾಮಿ ನ್ಯಾಷನಲ್ ಕಾನ್ಫರೆನ್ಸ್(ಜೆಕೆಎಎನ್‌ಸಿ) ಬೆಂಬಲಿಸಿದೆ. ಅಬ್ದುಲ್ಲಾ ಅವರು ಹೇಳಿದ್ದು ಸಂಪೂರ್ಣವಾಗಿ ಸರಿಯಾಗಿದೆ. 370 ಆರ್ಟಿಕಲ್ ತೆಗೆದು ಹಾಕಿದರೂ ಟಾರ್ಗೆಟ್ ಕಿಲ್ಲಿಂಗ್ ಏಕೆ ನಡೆಯುತ್ತಿದೆ ಎಂದು ಪಕ್ಷದ ಹಿರಿಯ ನಾಯಕ ಮುಝ್ಪಪರ್ ಅಹ್ಮದ್ ಅವರು ಹೇಳಿದ್ದಾರೆ.

ಕಳೆದ ಬಾರಿ ಕುಟುಂಬದ ಸದಸ್ಯರ ಭದ್ರತೆಯನ್ನು ಕೇಳಿದ್ದರೂ ಭದ್ರತೆಯನ್ನು ಒದಗಿಸಲಿಲ್ಲ. ಕೊನೆಗೆ ಪಂಡಿತ ಗುಂಡಿಗೆ ಬಲಿಯಾಗಬೇಕಾಯಿತು. ಆದರೆ, ಮತ್ತೊಂದೆಡೆ, ಬಿಜೆಬಿ ನಾಯಕರು ಮತ್ತು ಆಡಳಿತದಲ್ಲಿ ಇರುವವರಿಗೆ ಭದ್ರತಾ ಸಿಬ್ಬಂದಿಯ ಶೇ.30 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸರ್ಕಾರ ಏನೂ ಮಾಡುತ್ತಿಲ್ಲ. ಇದು ಅನ್ಯಾಯದ ಪರಮಾವಧಿ. 2010ರಿಂದ ಯಾವ ನಾಗರಿಕರು ಕಣಿವೆ ರಾಜ್ಯದಲ್ಲಿ ಸತ್ತಿರಲಿಲ್ಲ. ಆದರೆ, ರಾಜ್ಯಪಾಲರ ಆಡಳಿತದಲ್ಲಿ ಕಣಿವೆ ತುಂಬ ಹತ್ಯೆಗಳಾಗುತ್ತಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ | ಮತ್ತೊಬ್ಬ ಕಾಶ್ಮೀರಿ ಪಂಡಿತನನ್ನು ಹತ್ಯೆ ಮಾಡಿದ ಉಗ್ರರು; ಆತನ ಸಹೋದರನಿಗೆ ಗಂಭೀರ ಗಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

UPI in Healthcare: ಆರೋಗ್ಯ ಕ್ಷೇತ್ರದಲ್ಲೂ ಡಿಜಿಟಲ್ ಕ್ರಾಂತಿ!

ಆರೋಗ್ಯ ಕ್ಷೇತ್ರದಲ್ಲೂ ಈಗ ಡಿಜಿಟಲ್ ಬಳಕೆ (UPI in Healthcare) ಹೆಚ್ಚಾಗಿದ್ದು, ನೋಂದಣಿ, ಓಪಿಡಿ ಟೋಕನ್ ಪಡೆಯಲು, ಪಾವತಿಗಳನ್ನು ನಡೆಸಲು ಪ್ರತಿ ದಿನ ಒಂದು ಲಕ್ಷಕ್ಕೂ ಹೆಚ್ಚು ಜನ ಸ್ಕ್ಯಾನರ್ ಗಳನ್ನು ಬಳಸಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದು ಬಂದಿದೆ

VISTARANEWS.COM


on

By

UPI in Healthcare
Koo

ಡಿಜಿಟಲ್ ಕ್ಷೇತ್ರದಲ್ಲಿ (digital wave) ಈಗ ಕ್ರಾಂತಿಯಾಗುತ್ತಿದೆ. ಎಲ್ಲ ಕಡೆಯೂ ಯುಪಿಐ ಆಧಾರಿತ ಪಾವತಿಗಳು (UPI in Healthcare) ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಆರೋಗ್ಯ ಕ್ಷೇತ್ರದಲ್ಲೂ (health sector) ಡಿಜಿಟಲ್ ಪಾವತಿ, ಇತರ ತಂತ್ರಜ್ಞಾನಗಳ ಬಳಕೆ ಹೊಸ ಅಲೆಯನ್ನೇ ಸೃಷ್ಟಿಸುತ್ತಿದೆ. ಭಾರತದ (India) ಆರೋಗ್ಯ ಕ್ಷೇತ್ರದಲ್ಲಿ ಡಿಜಿಟಲ್ ತರಂಗ ಹೊರಹೊಮ್ಮುವ ಲಕ್ಷಣಗಳು ಕಾಣುತ್ತಿರುವುದು ಸರ್ಕಾರದ ಅಂಕಿಅಂಶಗಳಿಂದ ತಿಳಿದುಬರುತ್ತವೆ.

ಪ್ರತಿ ದಿನ ಸುಮಾರು ಒಂದು ಲಕ್ಷ ರೋಗಿಗಳು ಭಾರತದಾದ್ಯಂತ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳ ಹೊರರೋಗಿ ವಿಭಾಗದಲ್ಲಿ (OPD) ತಮ್ಮನ್ನು ನೋಂದಾಯಿಸಿಕೊಳ್ಳಲು ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡುತ್ತಾರೆ. ಈ ಟ್ರೆಂಡ್ ವೇಗವನ್ನು ಪಡೆದಿರುವುದು ಕೇವಲ ಮೆಟ್ರೋಪಾಲಿಟನ್ ಪ್ರದೇಶಗಳಲ್ಲ. ಉತ್ತರ ಪ್ರದೇಶವು ಆಂಧ್ರಪ್ರದೇಶ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ದೆಹಲಿಯಲ್ಲೂ ಹೆಚ್ಚಾಗಿ ಜನರು ಡಿಜಿಟಲ್ ಬಳಕೆಯನ್ನು ಹೆಚ್ಚಿಸಿದ್ದಾರೆ. ಯುಪಿಯಲ್ಲಿ, 86 ಲಕ್ಷಕ್ಕೂ ಹೆಚ್ಚು ಕ್ಯೂಆರ್ ಕೋಡ್ ಆಧಾರಿತ ನೋಂದಣಿಗಳನ್ನು ನೋಂದಾಯಿಸಲಾಗಿದೆ. ಕಾನ್ಪುರ್ ನಗರ ಮತ್ತು ಪ್ರಯಾಗ್‌ರಾಜ್ ನಲ್ಲೂ ಗರಿಷ್ಠ ನೋಂದಣಿಗಳು ನಡೆದಿವೆ.

ಎಲ್ಲ ವರದಿಗಳೂ ಡಿಜಿಟಲ್‌ನಲ್ಲಿ ಲಭ್ಯ

ರೋಗಿಗಳು ಸ್ಕ್ಯಾನಿಂಗ್ ಮಾಡುವುದಲ್ಲದೆ ತಮ್ಮ ಡಿಜಿಟಲ್ ಆರೋಗ್ಯ ದಾಖಲೆಗಳನ್ನು ರಚಿಸುತ್ತಿದ್ದಾರೆ ಅಥವಾ ಬಳಸುತ್ತಿದ್ದಾರೆ. ಇದರರ್ಥ ಅವರು ಡಿಜಿಟಲ್ ಪ್ರಿಸ್ಕ್ರಿಪ್ಷನ್‌ಗಳು, ಫಾರ್ಮಸಿ ದಾಖಲೆಗಳು, ರೋಗನಿರ್ಣಯದ ವರದಿಗಳು ಮತ್ತು ಬಹು ಆರೋಗ್ಯ ದಾಖಲೆಗಳನ್ನು ಒಂದೇ ಸ್ಥಳದಲ್ಲಿ ಸಂಗ್ರಹಿಸಿಡುತ್ತಿದ್ದಾರೆ. ಮೊಬೈಲ್ ಫೋನ್‌ನಲ್ಲಿ ಎಲ್ಲ ದಾಖಲೆ ಲಭ್ಯವಾಗುವುದರಿಂದ ಕಾಗದ ಆಧಾರಿತ ಪ್ರಿಸ್ಕ್ರಿಪ್ಷನ್‌ಗಳು ಅಥವಾ ವರದಿಗಳನ್ನು ಸಾಗಿಸುವ ಅಗತ್ಯವಿರುವುದಿಲ್ಲ.

1 ಲಕ್ಷ ಮಂದಿ ಬಳಕೆ

ಸರಕಾರದ ಅಂಕಿಅಂಶಗಳು ಪ್ರತಿದಿನ ಸರಾಸರಿ 1 ಲಕ್ಷಕ್ಕೂ ಹೆಚ್ಚು ನಾಗರಿಕರು ಈ ವೈಶಿಷ್ಟ್ಯವನ್ನು ಬಳಸುತ್ತಿದ್ದಾರೆ. ಇದು ಏಪ್ರಿಲ್ 2023 ಮತ್ತು ಏಪ್ರಿಲ್ 2024 ರ ನಡುವೆ ಮಾಸಿಕ ಟೋಕನ್‌ಗಳ ಸಂಖ್ಯೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವನ್ನು ತೋರಿಸುತ್ತಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (NHA) ವಿಶೇಷ ಕರ್ತವ್ಯದ ಅಧಿಕಾರಿ ಹಿಮಾಂಶು ಬುರಾದ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.


ಹೆಚ್ಚು ಬಳಸಿದ ಆಸ್ಪತ್ರೆಗಳು

ಏಪ್ರಿಲ್‌ನಲ್ಲಿ ಸ್ಕ್ಯಾನ್ ಮತ್ತು ಟೋಕನ್ ಹಂಚಿಕೆ ವೈಶಿಷ್ಟ್ಯವನ್ನು ಹೆಚ್ಚು ವ್ಯಾಪಕವಾಗಿ ಬಳಸಿದ ಉತ್ತಮ ಪ್ರದರ್ಶನ ನೀಡುವ ಆಸ್ಪತ್ರೆಗಳೆಂದರೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS), ನವದೆಹಲಿ ಅನಂತರ AIIMS ಭೋಪಾಲ್ (ಮಧ್ಯಪ್ರದೇಶ), ಸರ್ಕಾರಿ ಜನರಲ್ ಆಸ್ಪತ್ರೆ, ಕಾಕಿನಾಡ (ಆಂಧ್ರ ಪ್ರದೇಶ) , ಗೌತಮ್ ಬುದ್ಧ ನಗರದಲ್ಲಿ (ಉತ್ತರ ಪ್ರದೇಶ) ಜಿಲ್ಲಾ ಸಂಯೋಜಿತ ಆಸ್ಪತ್ರೆ ಮತ್ತು ಉತ್ತರ ಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜು.

ಅತೀ ಹೆಚ್ಚು ನೋಂದಣಿ

ಅಧಿಕೃತವಾಗಿ ‘ಸ್ಕ್ಯಾನ್ ಮತ್ತು ಶೇರ್’ ಎಂದು ಕರೆಯಲ್ಪಡುವ ವೈಶಿಷ್ಟ್ಯವನ್ನು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ABDM) ಅಡಿಯಲ್ಲಿ ಅಕ್ಟೋಬರ್ 2022 ರಲ್ಲಿ ಪರಿಚಯಿಸಲಾಯಿತು. ಇದು ರೋಗಿಗಳಿಗೆ OPD ನೋಂದಣಿ ಕೌಂಟರ್‌ನಲ್ಲಿ ಇರಿಸಲಾದ QR ಕೋಡ್ ಅನ್ನು ಸ್ಕ್ಯಾನ್ ಮಾಡಲು ಮತ್ತು ತ್ವರಿತ ನೋಂದಣಿಗಾಗಿ ಅವರ ABHA ಪ್ರೊಫೈಲ್ ಅನ್ನು ಹಂಚಿಕೊಳ್ಳಲು ಅನುಮತಿಸುತ್ತದೆ.

ABHA ಎಂಬುದು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಯ ಪೂರ್ಣ ರೂಪವಾಗಿದೆ. ABHA ಕಾರ್ಡ್ ABHA ID ಎಂಬ ವಿಶಿಷ್ಟ 14-ಅಂಕಿಯ ಗುರುತಿನ ಸಂಖ್ಯೆಯನ್ನು ಒಳಗೊಂಡಿದೆ. ಸಂಪೂರ್ಣ ವೈದ್ಯಕೀಯ ಇತಿಹಾಸ, ಸಮಾಲೋಚನೆ ವಿವರಗಳು ಮತ್ತು ಪ್ರಿಸ್ಕ್ರಿಪ್ಷನ್‌ಗಳನ್ನು ABHA ID ಯಲ್ಲಿ ಸೇರಿಸಲಾಗಿದೆ.

ಈ ಸೇವೆಯು ಪ್ರಸ್ತುತ ಭಾರತದ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 529 ಜಿಲ್ಲೆಗಳಾದ್ಯಂತ 4,694 ಕ್ಕೂ ಹೆಚ್ಚು ಆರೋಗ್ಯ ಸೌಲಭ್ಯಗಳಲ್ಲಿ ಸಕ್ರಿಯವಾಗಿದೆ. ಮೇ 14ರಂದು 1.60 ಲಕ್ಷಕ್ಕೂ ಹೆಚ್ಚು ಟೋಕನ್‌ಗಳನ್ನು ಪಡೆಯಲಾಗಿದೆ ಎಂದು ಬುರಾದ್ ತಿಳಿಸಿದ್ದು, ಈ ಪ್ರವೃತ್ತಿಯು ಭಾರತೀಯರು ಡಿಜಿಟಲ್ ಆರೋಗ್ಯದ ಸೌಕರ್ಯವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಮತ್ತು ಕ್ರಮೇಣ ತಮ್ಮ ಡಿಜಿಟಲ್ ಆರೋಗ್ಯ ದಾಖಲೆಗಳನ್ನು ರಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಸರಾಸರಿ, ಒಂದು ಲಕ್ಷ ರೋಗಿಗಳು ಈಗ ಪ್ರತಿದಿನ ಈ ಸೌಲಭ್ಯವನ್ನು ಬಳಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

ಶೀಘ್ರದಲ್ಲೇ ವಿಸ್ತರಣೆ

ಒಪಿಡಿ ಕೌಂಟರ್‌ಗಳಲ್ಲಿ ನೀಡಲಾಗುವ ಸ್ಕ್ಯಾನ್ ಮತ್ತು ಶೇರ್ ಸೇವೆಯು ತಂತ್ರಜ್ಞಾನ ಆಧಾರಿತ ಪರಿಹಾರವಾಗಿದ್ದು ಇದು ಸುಮಾರು ಒಂದು ಲಕ್ಷ ರೋಗಿಗಳಿಗೆ ಪ್ರತಿದಿನ ಆಸ್ಪತ್ರೆಯ ಸರತಿ ಸಾಲಿನಲ್ಲಿ ಕಾಯುವ ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ. ರೋಗಿಗಳು ತಮ್ಮ ಆರೋಗ್ಯ ಭೇಟಿಗಳ ಸಮಯದಲ್ಲಿ ಎದುರಿಸುವ ಹೊರೆಗಳನ್ನು ಕಡಿಮೆ ಮಾಡಲು, ನಾವು ಇದನ್ನು ವಿಸ್ತರಿಸುವ ಗುರಿಯನ್ನು ಹೊಂದಿದ್ದೇವೆ. ಔಷಧಾಲಯ ಕೌಂಟರ್‌ಗಳು ಮತ್ತು ಪ್ರಯೋಗಾಲಯಗಳನ್ನು ಈ ಸೇವೆಯಡಿ ಸೇರಿಸಲು ನಿರ್ಧರಿಸಿದ್ದೇವೆ ಎಂದರು.

ವಯಸ್ಸಾದ ರೋಗಿಗಳು, ಗರ್ಭಿಣಿಯರು ಮತ್ತು ಇತರ ನಾಗರಿಕರು ಆರೋಗ್ಯ ಸೇವೆಗಳನ್ನು ಪಡೆಯಲು ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಹೆಚ್ಚುವರಿಯಾಗಿ, ABHA- ಆಧಾರಿತ ನೋಂದಣಿಗಳು ರೋಗಿಗಳಿಗೆ ಅವರ OPD ಡಿಜಿಟಲ್ ಪ್ರಿಸ್ಕ್ರಿಪ್ಷನ್‌ಗಳು, ಫಾರ್ಮಸಿ IPD ದಾಖಲೆಗಳು ಮತ್ತು ರೋಗನಿರ್ಣಯದ ವರದಿಗಳಿಗೆ ಇದು ಡಿಜಿಟಲ್ ಪ್ರವೇಶಕ್ಕೆ ಅನುಮತಿಯನ್ನು ನೀಡುತ್ತದೆ.

Continue Reading

ದೇಶ

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

CAA: ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಈಗ ಸಿಎಎ ನಿಯಮಗಳ ಅಡಿಯಲ್ಲಿ 14 ಜನರಿಗೆ ಕೇಂದ್ರ ಸರ್ಕಾರ ಪ್ರಮಾಣಪತ್ರ ನೀಡಿದೆ. ಪೌರತ್ವ ಪಡೆದ ಹಿಂದುಗಳು ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

CAA
Koo

ನವದೆಹಲಿ: ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ (Indian Citizenship) ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು (Central Government) 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು (Citizenship Papers) ಹಸ್ತಾಂತರಿಸಲಾಗಿದೆ. ಹೀಗೆ, ಪಾಕಿಸ್ತಾನದಲ್ಲಿ ಬಹುಸಂಖ್ಯಾತರಿಂದ ಸಂಕಷ್ಟ ಅನುಭವಿಸಿ, ಭಾರತಕ್ಕೆ ಬಂದು ನೆಲೆಸಿದ ಹಿಂದುಗಳಿಗೆ ಪೌರತ್ವ ದೊರೆತಿದ್ದು, ಅವರ ಇಡೀ ಕುಟುಂಬವು ಸಂತಸ ವ್ಯಕ್ತಪಡಿಸಿದೆ.

ಹೌದು, ಪಾಕಿಸ್ತಾನದಿಂದ ಬಂದು, ದೆಹಲಿಯ ಆದರ್ಶ ನಗರದಲ್ಲಿ ವಾಸಿಸುತ್ತಿರುವ ಹಲವರಿಗೆ ಭಾರತದ ಪೌರತ್ವ ನೀಡಲಾಗಿದ್ದು, ಅವರೀಗ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಭಾರತದ ಪೌರತ್ವ ಹಿಡಿದಿರುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. “ಪಾಕಿಸ್ತಾನದಲ್ಲಿ ಹಿಂದು ಹೆಣ್ಣುಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಹಿಂದು ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದು ಬಿಡಿ, ಮನೆಯಿಂದಲೂ ಹೊರಗೆ ಬರಲು ಆಗುವುದಿಲ್ಲ. ಮುಸ್ಲಿಮರು ಹಿಂದು ಹೆಣ್ಣುಮಕ್ಕಳನ್ನು ಅಪಹರಣ ಮಾಡುತ್ತಾರೆ. ಬಲವಂತವಾಗಿ ಮತಾಂತರ ಮಾಡುತ್ತಾರೆ, ಕಿರುಕುಳ ನೀಡುತ್ತಾರೆ. ಈಗ ಭಾರತದ ಪೌರತ್ವ ಸಿಕ್ಕಿರುವುದು ಖುಷಿಯಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಧನ್ಯವಾದಗಳು” ಎಂದು ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಭಾವನಾ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

Continue Reading

ಸಿನಿಮಾ

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

ಕ್ಷೀಣಿಸುತ್ತಿರುವ ಬಾಕ್ಸ್ ಆಫೀಸ್ ಆದಾಯದ ನಡುವೆ, ಐಪಿಎಲ್ ಮತ್ತು ಸಾರ್ವತ್ರಿಕ ಚುನಾವಣೆಗಳಿಂದ ಟಾಲಿವುಡ್ ನಲ್ಲಿ ಯಾವುದೇ ಚಲನಚಿತ್ರ ತೆರೆಗೆ ಬಂದಿಲ್ಲ. ಹೀಗಾಗಿ ನಷ್ಟದ ಹಾದಿಯನ್ನು ಸರಿಪಡಿಸಿಕೊಳ್ಳಲು ತೆಲಂಗಾಣದಲ್ಲಿ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು (Single Screen Theaters) ಹತ್ತು ದಿನಗಳ ಕಾಲ ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ.

VISTARANEWS.COM


on

By

Single Screen Theaters
Koo

ಪ್ರಮುಖ ಚಲನಚಿತ್ರಗಳ ಬಿಡುಗಡೆ (movie releases) ಕೊರತೆಯಿಂದಾಗಿ ತೆಲಂಗಾಣದಾದ್ಯಂತ (Telangana) ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು (Single Screen Theaters) 10 ದಿನಗಳ ಕಾಲ ತಾತ್ಕಾಲಿಕ ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಯಾವುದೇ ಗಮನಾರ್ಹ ಚಲನಚಿತ್ರ ಬಿಡುಗಡೆಗೆ ಇಲ್ಲದಿರುವ ಪರಿಣಾಮ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಯಾವುದೇ ದೊಡ್ಡ ಬಜೆಟ್ ನ ಚಿತ್ರಗಳು ಬಾರದೇ ಇರುವುದರಿಂದ ಥಿಯೇಟರ್ ಗಳನ್ನು ಮುಚ್ಚುತ್ತಿರುವುದಾಗಿ ಥಿಯೇಟರ್ ಮಾಲೀಕರು ಉಲ್ಲೇಖಿಸಿದ್ದಾರೆ. ಪ್ರೇಕ್ಷಕರನ್ನು ಆಕರ್ಷಿಸಲು ಯಾವುದೇ ಪ್ರಮುಖ ಚಿತ್ರಗಳು ಬಿಡುಗಡೆಯಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಚಲನಚಿತ್ರ ಪ್ರದರ್ಶನ ಕಾರ್ಯಾಚರಣೆಯ ವೆಚ್ಚ ಮತ್ತು ಕಡಿಮೆಯಾದ ಆದಾಯ ಸೇರಿದಂತೆ ಹಣಕಾಸಿನ ಸವಾಲುಗಳ ನಡುವೆ 2024ರ ಸಂಕ್ರಾಂತಿ ನಂತರ ಯಾವುದೇ ದೊಡ್ಡ ಚಿತ್ರಗಳು ಪ್ರೇಕ್ಷಕರನ್ನು ಥಿಯೇಟರ್‌ಗಳಿಗೆ ಸೆಳೆಯುವಲ್ಲಿ ಯಶಸ್ವಿಯಾಗಲಿಲ್ಲ.

ಏನು ಕಾರಣ?

ಕಳೆದ ಕೆಲವು ವಾರಗಳಲ್ಲಿ ತೆಲಂಗಾಣದಲ್ಲಿ ಚಲನಚಿತ್ರ ವ್ಯಾಪಾರಿಗಳು ಮೇ 17ರಿಂದ ಥಿಯೇಟರ್ ಗಳನ್ನು ಮುಚ್ಚುವ ನಿರ್ಧಾರವನ್ನು ಕೈಗೊಂಡರು. ಒಂದೆಡೆ ಲೋಕ ಸಭಾ ಚುನಾವಣೆ, ಇನ್ನೊಂದೆಡೆ ದೊಡ್ಡ ಚಿತ್ರಗಳ ಬಿಡುಗಡೆಗಳ ಕೊರತೆ, ಇಂಡಿಯನ್ ಪ್ರೀಮಿಯರ್ ಲೀಗ್ ಗಳು ತೆಲಂಗಾಣ ಮತ್ತು ಆಂಧ್ರಪ್ರದೇಶದಾದ್ಯಂತ ಥಿಯೇಟರ್‌ಗಳ ಮೇಲೆ ಭಾರಿ ಪ್ರಭಾವವನ್ನು ಬೀರಿದೆ.

ಮತ್ತೆ ತೆರೆಯುವ ನಿರೀಕ್ಷೆ

ಮೇ 31 ರಂದು ವಿಶ್ವಕ್ ಸೇನ್ ಅವರ ‘ಗ್ಯಾಂಗ್ಸ್ ಆಫ್ ಗೋದಾವರಿ’ಗಾಗಿ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳು ಮತ್ತೆ ತೆರೆಯಲ್ಪಡುತ್ತವೆ. ಅಲ್ಲದೆ ಅನೇಕ ಥಿಯೇಟರ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ‘ಕಲ್ಕಿ’ಯಂತಹ ದೊಡ್ಡ-ಬಜೆಟ್ ಚಿತ್ರಗಳ ಮೇಲೆ ಭರವಸೆ ಇಡುತ್ತಿವೆ. 2898 AD’, ‘ಪುಷ್ಪ: ದಿ ರೂಲ್’, ‘ಗೇಮ್ ಚೇಂಜರ್’, ‘ವಿಶ್ವಂಭರ’ ಮತ್ತು ‘ಇಂಡಿಯನ್ 2’ ಸೇರಿದಂತೆ ಈ ಬಾರಿ ಹಲವು ಚಿತ್ರಗಳು ತೆರೆಗೆ ಬರುವ ನಿರೀಕ್ಷೆಯಲ್ಲಿದೆ.

ಹತ್ತು ದಿನ ಬಂದ್

ತೆಲಂಗಾಣದಲ್ಲಿ ಚಲನಚಿತ್ರ ವ್ಯವಹಾರವು ಕೆಲವು ಅಭೂತಪೂರ್ವ ಸವಾಲುಗಳನ್ನು ಎದುರಿಸುತ್ತಿದೆ. ಇದು ರಾಜ್ಯದ ಮನರಂಜನಾ ವಲಯದಾದ್ಯಂತ ತಲ್ಲಣ ಉಂಟು ಮಾಡಿದೆ. ಗಲ್ಲಾಪೆಟ್ಟಿಗೆಯಲ್ಲಿ ಆದಾಯ ಕಡಿಮೆಯಾಗುತ್ತಿರುವ ಕಾರಣ ತೆಲಂಗಾಣದಾದ್ಯಂತ ಹಲವಾರು ಏಕ-ಪರದೆಯ ಚಿತ್ರಮಂದಿರಗಳು ಮೇ 17ರಿಂದ ಮೇ 26ರವರೆಗೆ ಹತ್ತು ದಿನಗಳ ಕಾಲ ಬಾಗಿಲು ಮುಚ್ಚಲು ಯೋಜಿಸಿದೆ.

ಈ ಬಾರಿ ಬೇಸಿಗೆಯಲ್ಲಿ ಪ್ರಮುಖ ಚಲನಚಿತ್ರ ಬಿಡುಗಡೆಯಾಗಿಲ್ಲ. ಸಾಮಾನ್ಯವಾಗಿ ಈ ಸಂದರ್ಭದಲ್ಲಿ ದೊಡ್ಡ ಜನಸಮೂಹವನ್ನು ಸೆಳೆಯುವ ಬ್ಲಾಕ್‌ಬಸ್ಟರ್ ಹಿಟ್‌ ಚಿತ್ರಗಳು ತೆರೆಗೆ ಬರುತ್ತದೆ. ಆದರೆ ಈ ಬಾರಿ ಯಾವುದೇ ಅಂತಹ ಚಿತ್ರಗಳು ಬಂದಿಲ್ಲ. ಇದು ಸಿಂಗಲ್ ಸ್ಕ್ರೀನ್‌ಗಳ ಮೇಲೆ ಗಂಭೀರ ಪರಿಣಾಮವನ್ನೇ ಬೀರಿದೆ.

ಇದನ್ನೂ ಓದಿ: Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

ಥಿಯೇಟರ್‌ಗಳು ತಮ್ಮ ಆದಾಯವನ್ನು ಸಂಗ್ರಹಿಸಲು ಕಡಿಮೆ ಅವಕಾಶಗಳನ್ನು ಹೊಂದಿರುತ್ತದೆ. ಚಲನಚಿತ್ರದ ವೇಳಾಪಟ್ಟಿ ಮತ್ತು ಪ್ರೇಕ್ಷಕರ ಸಂಖ್ಯೆಯಲ್ಲಿನ ಏರಿಳಿತಗಳಿಗೆ ಹೆಚ್ಚು ಗುರಿಯಾಗುತ್ತವೆ. ಕಳೆದ ಎರಡು ತಿಂಗಳುಗಳಲ್ಲಿ ಸಣ್ಣ ಮತ್ತು ಮಧ್ಯಮ-ಬಜೆಟ್ ಚಲನಚಿತ್ರಗಳ ಸರಣಿಯು ಛಾಪು ಮೂಡಿಸುವಲ್ಲಿ ವಿಫಲವಾಗಿದೆ. ಇದರಿಂದ ಚಿತ್ರೋದ್ಯಮ ವ್ಯಾಪಾರವನ್ನು ಮತ್ತಷ್ಟು ತಗ್ಗಿದೆ.

ನಷ್ಟ ತಡೆಗೆ ಕ್ರಮ

ತೆಲಂಗಾಣ ಥಿಯೇಟರ್ಸ್ ಅಸೋಸಿಯೇಷನ್ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವ ಮೂಲಕ ಮತ್ತಷ್ಟು ನಷ್ಟವನ್ನು ತಡೆಯಲು ತಡೆಗಟ್ಟಲು ನಿರ್ಧರಿಸಿದೆ.

Continue Reading

ದೇಶ

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

Fire Accident: ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ.

VISTARANEWS.COM


on

Fire Accident
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ (Delhi BJP Office) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಅಗ್ನಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸುತ್ತಮುತ್ತಲೂ ಹೊಗೆ ಆವರಿಸಿದ ಕಾರಣ ಜನರಿಗೆ ಆತಂಕ ಎದುರಾಗಿದೆ ಎಂದು ತಿಳಿದುಬಂದಿದೆ.

ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್‌, ಯಾರಿಗೂ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಕೆಲ ತಿಂಗಳ ಹಿಂದೆ ಮಧ್ಯಪ್ರದೇಶ ವಿಧಾನಸೌಧದ ಸಚಿವಾಲಯದ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿತ್ತು. ಭೋಪಾಲ್‌ನ ಅರೇರಾ ಹಿಲ್‌ನಲ್ಲಿರುವ ವಲ್ಲಭ ಭವನ ರಾಜ್ಯ ಸಚಿವಾಲಯದ ಕಟ್ಟಡದಲ್ಲಿ (State Secretariat) ಏಕಾಏಕಿ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 10-15 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿದ್ದವು. ಅಗ್ನಿಯ ಕೆನ್ನಾಲಗೆಗೆ ಹಲವು ಕಡತಗಳು ಭಸ್ಮವಾಗಿವೆ ಎಂದು ತಿಳಿದುಬಂದಿತ್ತು.

ಕೆಲವು ದಿನಗಳ ಹಿಂದೆ ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ಆಕಸ್ಮಿಕದಲ್ಲಿ 11 ಜನರು ಮೃತಪಟ್ಟಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು. ಅಗ್ನಿಶಾಮಕ ದಳದ ಪ್ರಕಾರ ಎರಡು ಬಣ್ಣ ಮತ್ತು ರಾಸಾಯನಿಕ ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಇದನ್ನೂ ಓದಿ: Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

Continue Reading
Advertisement
KEA Department of Technical Education Director Prasanna has been appointed as the Executive Director of KEA
ಬೆಂಗಳೂರು9 mins ago

KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

Udupi
ಕರ್ನಾಟಕ11 mins ago

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

UPI in Healthcare
ಆರೋಗ್ಯ12 mins ago

UPI in Healthcare: ಆರೋಗ್ಯ ಕ್ಷೇತ್ರದಲ್ಲೂ ಡಿಜಿಟಲ್ ಕ್ರಾಂತಿ!

Sri Vedavyasa Jayanti Madhva Raddhanta Samvardhak Sabha 81st session at Bengaluru
ಬೆಂಗಳೂರು18 mins ago

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

CAA
ದೇಶ35 mins ago

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Single Screen Theaters
ಸಿನಿಮಾ39 mins ago

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

Pushpa 2
ಪ್ರಮುಖ ಸುದ್ದಿ46 mins ago

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

HD Revanna case Revanna gets interim bail in Holenarasipura sexual assault case
ಕರ್ನಾಟಕ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

Murder case in Belgavi
ಬೆಳಗಾವಿ1 hour ago

Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Sunil Chhetri
ಕ್ರೀಡೆ2 hours ago

Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು8 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌