JNU Election: ದಿಲ್ಲಿಯ ಜೆಎನ್‌ಯು ವಿದ್ಯಾರ್ಥಿ ಚುನಾವಣೆಯಲ್ಲಿ ಎಡಪಕ್ಷಗಳ ಕ್ಲೀನ್‌ ಸ್ವೀಪ್ - Vistara News

ದೇಶ

JNU Election: ದಿಲ್ಲಿಯ ಜೆಎನ್‌ಯು ವಿದ್ಯಾರ್ಥಿ ಚುನಾವಣೆಯಲ್ಲಿ ಎಡಪಕ್ಷಗಳ ಕ್ಲೀನ್‌ ಸ್ವೀಪ್

JNU Election: 1969ರಲ್ಲಿ ಜೆಎನ್‌ಯು ಸ್ಥಾಪನೆಯಾದಾಗಿನಿಂದ, ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಇಲ್ಲಿ ಪ್ರಾಬಲ್ಯ ಸಾಧಿಸಿವೆ.

VISTARANEWS.COM


on

JNU election left parties win
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ದಿಲ್ಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (JNU) ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ (JNU election) ಎಡಪಕ್ಷಗಳು (Left Parties) ಜಯಭೇರಿ ಬಾರಿಸಿವೆ. ಮತ ಎಣಿಕೆಯ ಆರಂಭಿಕ ಗಂಟೆಗಳಲ್ಲಿ ಎಬಿವಿಪಿ (ABVP) ಮುಂದಿದ್ದು, ನಂತರ ಅದನ್ನು ಹಿಂದಿಕ್ಕಿದ ಎಡಪಕ್ಷಗಳು ಮತ್ತೊಮ್ಮೆ ವಿಶ್ವವಿದ್ಯಾಲಯದಲ್ಲಿ ತಮ್ಮ ಪ್ರಾಬಲ್ಯವನ್ನು ತೋರಿಸಿದವು.

ವಿದ್ಯಾರ್ಥಿ ಸಂಘದ ಎಲ್ಲಾ ನಾಲ್ಕು ಹುದ್ದೆಗಳನ್ನು ಎಡಪಕ್ಷಗಳು ಬಾಚಿಕೊಂಡಿವೆ. ಆ ಮೂಲಕ ಆರ್‌ಎಸ್‌ಎಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆಯ ಭರವಸೆಯನ್ನು ಹುಸಿಗೊಳಿಸಿವೆ. ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆ ಯಾವಾಗಲೂ ವಿವಾದದಿಂದ ಕೂಡಿದ್ದಾಗಿದ್ದು, ಅಂತಾರಾಷ್ಟ್ರೀಯ ಗಮನ ಸೆಳೆಯುತ್ತದೆ.

ಎಬಿವಿಪಿ ಒಂದು ಹಂತದಲ್ಲಿ ಸ್ವೀಪ್‌ನತ್ತ ಸಾಗುತ್ತಿದ್ದುದು ಅನೇಕರಿಗೆ ಆಶ್ಚರ್ಯವನ್ನುಂಟು ಮಾಡಿತು. ಆದರೆ ಎಣಿಕೆ ಮುಂದುವರೆದಂತೆ ಎಡಪಕ್ಷಗಳು ತಮ್ಮ ಮತಗಳನ್ನು ಹೆಚ್ಚಿಸಿಕೊಂಡವು.

4 ವರ್ಷಗಳ ಕೋವಿಡ್ ವಿರಾಮದ ನಂತರ ನಡೆದ ಚುನಾವಣೆಯಲ್ಲಿ, ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎಐಎಸ್‌ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್‌ಎಫ್), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಶನ್ (ಎಐಎಸ್‌ಎಫ್) ಒಳಗೊಂಡ ಯುನೈಟೆಡ್ ಲೆಫ್ಟ್ ಮೈತ್ರಿ ಅಭ್ಯರ್ಥಿಗಳು, ಆರ್‌ಎಸ್‌ಎಸ್-ಸಂಯೋಜಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿರುದ್ಧ ಸ್ಪರ್ಧಿಸಿದ್ದರು.

ಎಬಿವಿಪಿಯ ಅಧ್ಯಕ್ಷೀಯ ಅಭ್ಯರ್ಥಿ ಉಮೇಶ್ ಚಂದ್ರ 2,118 ಮತಗಳನ್ನು ಪಡೆದರೆ, ಎಡಪಕ್ಷ ಅಭ್ಯರ್ಥಿ ಧನಂಜಯ್ 3,100 ಮತಗಳನ್ನು ಪಡೆದರು.

ಅಧ್ಯಕ್ಷ
ಧನಂಜಯ್ (ಎಡ)- 3,100
ಉಮೇಶ್ ಚಂದ್ರ ಅಜ್ಮೀರ್ (ಎಬಿವಿಪಿ)- 2,118

ಉಪಾಧ್ಯಕ್ಷ
ಅವಿಜಿತ್ ಘೋಷ್ (ಎಡ)- 2,762‌
ದೀಪಿಕಾ ಶರ್ಮಾ (ಎಬಿವಿಪಿ)- 1,848

ಪ್ರಧಾನ ಕಾರ್ಯದರ್ಶಿ
ಅರ್ಜುನ್ ಆನಂದ್ (ಎಬಿವಿಪಿ) – 2,4,12
ಪ್ರಿಯಾಂಶಿ ಆರ್ಯ (BAPSA, ಎಡ ಬೆಂಬಲಿತ) – 3,440

ಜಂಟಿ ಕಾರ್ಯದರ್ಶಿ
ಗೋವಿಂದ್ ಡಾಂಗಿ (ABVP) – 2,591
ಮೊ ಸಾಜಿದ್ (ಎಡ) – 3,035

1969ರಲ್ಲಿ ಜೆಎನ್‌ಯು ಸ್ಥಾಪನೆಯಾದಾಗಿನಿಂದ, ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು, ನಿರ್ದಿಷ್ಟವಾಗಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೊಂದಿಗೆ ಸಂಯೋಜಿತವಾಗಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ವಿದ್ಯಾರ್ಥಿ ರಾಜಕೀಯದ ಮೇಲೆ ಬಲವಾದ ಪ್ರಭಾವ ಹೊಂದಿದೆ.

ಅಧ್ಯಕ್ಷೀಯ ಹುದ್ದೆಯಲ್ಲಿ ಎಸ್‌ಎಫ್‌ಐ ಪ್ರಭಾವಿ 22 ಬಾರಿ ಗೆಲುವು ಸಾಧಿಸಿದ್ದರೆ, ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎಐಎಸ್‌ಎ) 11 ಬಾರಿ ಗೆದ್ದಿದೆ. ಹಲವು ವರ್ಷಗಳಿಂದ ಜೆಎನ್‌ಯುನಲ್ಲಿ ವಿದ್ಯಾರ್ಥಿ ರಾಜಕೀಯವನ್ನು ರೂಪಿಸುವಲ್ಲಿ ಈ ಸಂಸ್ಥೆಗಳು ಬೀರಿದ ಪ್ರಭಾವ ಗಮನಾರ್ಹ. ಜೆಎನ್‌ಯುಎಸ್‌ಯು ಚುನಾವಣೆಗೆ ಅಧ್ಯಕ್ಷೀಯ ಡಿಬೇಟ್ ಮಾರ್ಚ್ 20ರಂದು ನಡೆದಿತ್ತು. ಮಾರ್ಚ್ 22ರಂದು ಮತದಾನ ನಡೆದಿದ್ದು, ಭಾನುವಾರ ಫಲಿತಾಂಶ ಹೊರಬಿದ್ದಿದೆ.

ಜೆಎನ್‌ಯು ಈಗಿನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವಾರು ರಾಜಕಾರಣಿಗಳು, ಸಾರ್ವಜನಿಕ ಕ್ಷೇತ್ರದ ಗಣ್ಯರು, ವಿದ್ವಾಂಸರು, ಗಣ್ಯರು, ಚಿಂತಕರನ್ನು ನೀಡಿದೆ. ಹಾಗೆಯೇ ʼಹಿಂದೂಸ್ತಾನ್‌ ತುಕ್ಡೇ ತುಕ್ಡೇʼ ಘೋಷಣೆ ಹಾಗೂ ಅದನ್ನು ಬೆಂಬಲಿಸಿದ ವಿದ್ಯಾರ್ಥಿಗಳಿಂದಲೂ ಕುಖ್ಯಾತವಾಗಿದೆ.

ಇದನ್ನೂ ಓದಿ: Shehla Rashid: ಮೋದಿಯ ಉಗ್ರ ವಿರೋಧಿಯಾಗಿದ್ದ ನಾನೀಗ ಕಟ್ಟಾ ಅಭಿಮಾನಿ ಎಂದ ಜೆಎನ್‌ಯು ಹೋರಾಟಗಾರ್ತಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 15 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Job News: ಇತ್ತೀಚೆಗೆ ಮಾಹಿತಿ ತಂತ್ರಜ್ಞಾನದ ಸೇವೆಗಳ ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾ 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಈ ಮಧ್ಯೆ ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ.

VISTARANEWS.COM


on

Job News
Koo

ನವದೆಹಲಿ: ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ (HCLTech) ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ (Job News).

“24ರ ಹಣಕಾಸು ವರ್ಷದಲ್ಲಿ ನಾವು ಸುಮಾರು 15,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಈಗಾಗಲೇ 12,000ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆʼʼ ಎಂದು ಎಚ್‌ಸಿಎಲ್‌ ಟೆಕ್‌ನ ಮುಖ್ಯ ಪೀಪಲ್ ಆಫೀಸರ್ ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈ ಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್‌ 3,096 ಪ್ರೆಶರ್‌ಗಳನ್ನು ನೇಮಿಸಿದೆ. ಜತೆಗೆ ಕಂಪನಿಯು 2024ರ ಸಂಪೂರ್ಣ ಹಣಕಾಸು ವರ್ಷದಲ್ಲಿ 12,141 ಪ್ರೆಶರ್‌ಗಳನ್ನು ನೇಮಕ ಮಾಡಿಕೊಂಡಿದೆ. ನಾಲ್ಕನೇ ತ್ರೈಮಾಸಿಕದ ವೇಳೆಗೆ ಅದರ ಒಟ್ಟು ಉದ್ಯೋಗಿಗಳ ಸಂಖ್ಯೆ 2,27,481ಕ್ಕೆ ತಲುಪಿದೆ.

”ಮುಂಬರುವ ವರ್ಷದಲ್ಲಿ ನೇಮಕಾತಿಯು ಇದೇ ರೀತಿಯಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಬಹುಶಃ 10,000ಕ್ಕೂ ಹೆಚ್ಚು ಮಂದಿಯನ್ನು ನಿಯೋಜಿಸಲು ಯೋಜನೆ ಹಾಕಿಕೊಂಡಿದ್ದೇವೆ. ಅಂದರೆ ನಾವು ಕ್ಯಾಂಪಸ್ ಮೂಲಕ ನೇಮಕಾತಿ ಮುಂದುವರಿಸುತ್ತೇವೆ” ಎಂದು ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ.

6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. 

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ಮೋಹಿತ್‌ ಜೋಶಿ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

Mamata Banerjee: ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು.

VISTARANEWS.COM


on

mamata banerjee helicopter
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal chief minister Mamata Banerjee) ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ (Helicopter) ಏರುತ್ತಿದ್ದಾಗ ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹೆಲಿಕಾಪ್ಟರ್‌ ಏರಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಮುಂದಾದಾಗ ನಿಯಂತ್ರಣ (Imbalance) ಕಳೆದುಕೊಂಡು ಮಮತಾ ಬಿದ್ದುಬಿಟ್ಟರು. ಮುಖ್ಯಮಂತ್ರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರ ಭದ್ರತಾ ಸಿಬ್ಬಂದಿ (Security) ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.

ನಂತರ ಮಮತಾ ತಮ್ಮ ಮುಂದಿನ ಪ್ರಯಾಣವನ್ನು ಅಸನ್ಸೋಲ್‌ಗೆ ಮುಂದುವರಿಸಿದೃು ಎಂದು ಗೊತ್ತಾಗಿದೆ. ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು. ಮಮತಾ ಅವರನ್ನು ಹಲವು ಗಂಟೆಗಳ ಕಾಲ ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿತ್ತು.

ಬ್ಯಾನರ್ಜಿಯವರ ಸಹೋದರ ಕಾರ್ತಿಕ್ ಬ್ಯಾನರ್ಜಿ ಬಂಗಾಳಿ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡುತ್ತಾ, ಟಿಎಂಸಿ ನಾಯಕಿಗೆ ʼಸೆರೆಬ್ರಲ್ ಕನ್ಕ್ಯುಶನ್ʼ ಇತ್ತು ಮತ್ತು ಆಕೆಯ ಹಣೆ ಮತ್ತು ಮೂಗಿನ ಮೇಲೆ ತೀಕ್ಷ್ಣವಾದ ಗಾಯವಾಗಿದೆ, ತೀವ್ರವಾಗಿ ರಕ್ತಸ್ರಾವವಾಗಿದೆ ಎಂದು ತಿಳಿಸಿದ್ದರು.

ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂಡೋಪಾಧ್ಯಾಯ ಅವರು, ಆರಂಭದಲ್ಲಿ “ಹಿಂದಿನಿಂದ ತಳ್ಳಿದಂಥ ಅನುಭವದಿಂದಾಗಿ ಅವರ ಮನೆಯಲ್ಲಿ ಬಿದ್ದಿದ್ದಾರೆ” ಎಂದು ಹೇಳಿದರೆಂದು ವರದಿಯಾಗಿತ್ತು. ಇದು ಂಮತಾ ಅವರ ಬೀಳುವಿಕೆಯ ಬಗ್ಗೆ ದೊಡ್ಡ ಪ್ರಮಾಣದ ಗೊಂದಲ ಮತ್ತು ಊಹಾಪೋಹಗಳನ್ನು ಹುಟ್ಟುಹಾಕಿತ್ತು.

ಬಂದೋಪಾಧ್ಯಾಯ ಅವರು ನಂತರ ಸ್ಪಷ್ಟನೆ ನೀಡಿದ್ದು, ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದರು. “ಸಿಎಂ ಮಮತಾ ಅವರ ದೇಹವು ಹಿಂದಿನಿಂದ ತಳ್ಳುವ ಸಂವೇದನೆಯನ್ನು ಅನುಭವಿಸಿದೆ. ಇದು ತಲೆ ತಿರುಗುವುದಕ್ಕೆ ಸಮನಾದುದು. ಚಿಕಿತ್ಸೆ ನೀಡುವುದು ನಮ್ಮ ಕೆಲಸ ಮತ್ತು ನಾವು ಅದನ್ನು ಮಾಡಿದ್ದೇವೆ. ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ” ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಕಳೆದ ಬಾರಿ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಅಪಘಾತವೊಂದರಲ್ಲಿ ಕಾಲು ಫ್ರಾಕ್ಚರ್‌ ಆಗಿತ್ತು. ಆದರೆ ಮಮತಾ ಬ್ಯಾಂಡೇಜ್‌ ಧರಿಸಿದ ಕಾಲುಗಳ ಮೂಲಕವೇ ರಾಜ್ಯಾದ್ಯಂತ ಬಿರುಗಾಳಿಯಂತೆ ಓಡಾಡಿ ಪ್ರಚಾರ ನಡೆಸಿ ಅಧಿಕಾರಕ್ಕೆ ಮರಳಿದ್ದರು.

ಇದನ್ನೂ ಓದಿ: Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Continue Reading

ದೇಶ

Self harming: ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ಆತ್ಮಹತ್ಯೆ

Self harming:ಮದುವೆ ಕಾರ್ಯಕ್ರಮದಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲ್ವೇ ಹಳಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಿಹಾರದಲ್ಲಿ ನಡೆಸಿದೆ.

VISTARANEWS.COM


on

By

Koo

ಬಿಹಾರ: ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ (Self harming)ಗೆ ಶರಣಾಗಿರುವ ಘಟನೆ ಬಿಹಾರ(Bihar)ದ ಬದಾರಿಯಾದಲ್ಲಿ ನಡೆದಿದೆ. ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್‌ ಸಿಂಗ್‌ ರಸೂಲ್‌ಪುರ ಪೊಲೀಸ್‌ ಠಾಣೆ(Rasulpur police Station) ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್‌ ಹಾಲ್ಟರ್‌ ರೈಲು ನಿಲ್ದಾಣ(Mahendra Nath Halter Railway station)ದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೋಪಾಲ್‌ ಸಿಂಗ್‌ ಬೇನತ್‌ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ತೆರಳಿದ್ದ. ಈ ವೇಳೆ ಸಂಭ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡಿದ್ದ ಗೋಪಾಲ್‌ ಆಕೆಯನ್ನು ತಡೆದಿದ್ದಾನೆ.

ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್‌ ಡಾನ್ಸ್‌ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದ. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ಆಗಿತ್ತು. ಅಷ್ಟೇ ಅಲ್ಲದೇ ಪತಿ ಪತ್ನಿಯರ ಜಗಳಕ್ಕೆ ಗೋಪಾಲ್‌ ಬಾವ ಕೂಡ ಎಂಟ್ರಿ ಕೊಟ್ಟಿದ್ದ. ಆಗ ಬಾವ-ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಇದರಿಂದ ತೀರ ಬೇಸರಗೊಂಡಿದ್ದ ಗೋಪಾಲ್‌, ರೈಲು ಬರುತ್ತಿದ್ದ ಸಮಯ ನೋಡಿಕೊಂಡು ಹಳಿಗೆ ಹಾರಿಗೆ ಪ್ರಾಣ ಬಿಟ್ಟಿದ್ದಾನೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರ ತಂಡ ಸ್ಥಳಕ್ಕೆ ದೌಡಾಯಿಸಿ ಗೋಪಾಲ್‌ ಮೃತದೇಹವನ್ನು ರೈಲಿನಡಿಯಿಂದ ಹೊರ ತೆಗೆದು ಕುಟುಂಬಸ್ಥರಿಗೆ ಮಾಹಿತಿ ನೀಡಿದರು.

ಮೃತನ ಕುಟುಂಬಸ್ಥರು ಹೇಳೋದೇನು?

ಗೋಪಾಲ ಸಿಂಗ್‌ ಕುಟುಂಬಸ್ಥರು ಹೇಳುವ ಪ್ರಕಾರ ಆತನಿಗೆ ಮೊದಲಿನಿಂದಲೂ ಮಾನಸಿಕ ಸಮಸ್ಯೆ ಇತ್ತು. ಇದಕ್ಕೂ ಮುನ್ನ ದಿಲ್ಲಿ ಸಾರಿಗೆ ಮತ್ತು ಎಲ್‌ಐಸಿಯಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ, 10 ವರ್ಷದ ಮಗಳು ಹಾಗೂ ಅಣ್ಣನ ಜೊತೆ ಬದುಕುತ್ತಿದ್ದ ಎನ್ನಲಾಗಿದೆ. ಒಟ್ಟಿನಲ್ಲಿ ಕುಳಿತು ಬಗೆಹರಿಸಬಹುದಾಗಿದ್ದ ಸಮಸ್ಯೆ ಒಬ್ಬ ವ್ಯಕ್ತಿ ಸಾವಿಯಲ್ಲಿ ಅಂತ್ಯವಾಗಿರುವ ಬಗ್ಗೆ ಕುಟುಂಬಸ್ಥರು ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

ಕೆಲವು ದಿನಗಳ ಹಿಂದೆಯಷ್ಟೇ ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟಿದ್ದರು. ಬಳಿಕ ಅದು ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿತ್ತು. ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದಶಶಿಕುಮಾರ್ (23), ಲೋಕೇಶ್ (25) ಎಂದು ಗುರುತಿಸಲಾಗಿತ್ತು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ರೈಲ್ವೆ ಟ್ರ್ಯಾಕ್‌ ಇರುವ ಕಾರಣ ರಾತ್ರಿಯಲ್ಲಿ ಯುವಕರು ಮೊಬೈಲ್ ಹಾಗೂ ಹೆಡ್‌ಫೋನ್‌ ಹಾಕಿಕೊಂಡು ಟ್ರ್ಯಾಕ್ ಮೇಲೆ ಕುಳಿತುಕೊಳ್ಳುತ್ತಾರೆ. ಪೊಲೀಸರು ಬಂದಾಗ ಇಲ್ಲಿಂದ ತೆರಳುತ್ತಾರೆ, ನಂತರ ಮತ್ತೆ ವಾಪಸ್ ಬಂದು ಇಲ್ಲೇ ಕೂರುತ್ತಾರೆ. ಹೀಗಾಗಿ ಆಕಸ್ಮಿಕವಾಗಿ ರೈಲು ಅವರ ಮೇಲೆ ಹರಿದಿರಬಹುದು ಎಂದು ತಿಳಿಸಿದ್ದರು.

Continue Reading

ಕ್ರೈಂ

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Mobile Blast: ಬೈಕ್‌ ರಸ್ತೆಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಮಹಿಳೆಯ ತಲೆಯ ಮೇಲೆ ಬೈಕ್ ಬಿದ್ದಿದ್ದು, ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಬದುಕುಳಿಯಲಿಲ್ಲ. ಅಪಘಾತದ ವೇಳೆ ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ.

VISTARANEWS.COM


on

mobile blast woman death
Koo

ಕಾನ್ಪುರ: ಹೆಲ್ಮೆಟ್ (helmet) ಇಲ್ಲದೇ ಇಯರ್‌ಫೋನ್‌ (Earphone) ಹಾಕಿಕೊಂಡು ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಮೊಬೈಲ್‌ ಸ್ಫೋಟಗೊಂಡ (Mobile Blast) ಪರಿಣಾಮ ತಬ್ಬಿಬ್ಬಾಗಿ ಬೈಕ್‌ ಮೇಲಿನ ನಿಯಂತ್ರಣ ಕಳೆದುಕೊಂಡು (bike Accident) ಡಿವೈಡರ್‌ಗೆ ಗುದ್ದಿ ಮೃತ (woman death) ಪಟ್ಟಿದ್ದಾರೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಜೇಬಿನಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದ್ದರಿಂದ ತಬ್ಬಿಬ್ಬಾದ ಆಕೆ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ಬೈಕ್‌ ರಸ್ತೆಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಮಹಿಳೆಯ ತಲೆಯ ಮೇಲೆ ಬೈಕ್ ಬಿದ್ದಿದ್ದು, ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಬದುಕುಳಿಯಲಿಲ್ಲ. ಅಪಘಾತದ ವೇಳೆ ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ.

ಮಹಿಳೆ ನೆಲಕ್ಕುರುಳುತ್ತಿದ್ದಂತೆ ಸ್ಥಳದ ಸುತ್ತ ಜನ ಜಮಾಯಿಸಿದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಗಾಯಾಳು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಪಘಾತದಲ್ಲಿ ಉಂಟಾದ ತೀವ್ರ ರಕ್ತಸ್ರಾವದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಗೆ ಮಹಿಳೆ ತನ್ನ ಸ್ಕೂಟರ್‌ನಲ್ಲಿ ಕಾನ್ಪುರ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಹಿಳೆಯನ್ನು ಫರೂಕಾಬಾದ್ ಜಿಲ್ಲೆಯ ನೆಹ್ರಾರಿಯಾ ಗ್ರಾಮದ ನಿವಾಸಿ ಪೂಜಾ (28) ಎಂದು ಗುರುತಿಸಲಾಗಿದೆ. ಕಾನ್ಪುರ ರೈಲು ನಿಲ್ದಾಣದಿಂದ ಮುಂಬೈಗೆ ರೈಲು ಹಿಡಿಯಲು ಮಹಿಳೆ ತೆರಳುತ್ತಿದ್ದರು.

ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮನ್ಪುರ್ ಗ್ರಾಮದ ಬಳಿ ಕಾನ್ಪುರ-ಅಲಿಘರ್ ಹೆದ್ದಾರಿಯಲ್ಲಿರುವ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ಈ ದುರಂತ ಘಟನೆ ಸಂಭವಿಸಿದೆ. ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ ಮತ್ತು ಆಕೆಯ ಕಿವಿಯಲ್ಲಿ ಇಯರ್ ಫೋನ್ ಇತ್ತು. ಜೊತೆಗೆ ಆಕೆ ಸ್ಕೂಟರ್ ಅನ್ನು ವೇಗದಲ್ಲಿ ಓಡಿಸುತ್ತಿದ್ದರು ಎಂದು ಗೊತ್ತಾಗಿದೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಮಹಿಳೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವಾಹನ ಚಲಾಯಿಸುವ ಸಂದರ್ಭದಲ್ಲಿ ಮೊಬೈಲ್‌ ಬಳಸದಂತೆ ಪದೇ ಪದೆ ಸೂಚನೆ ನೀಡುತ್ತಿದ್ದರೂ ಅದನ್ನು ಬಹಳ ಮಂದಿ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಅಪಘಾತಗಳಲ್ಲಿ ಶೇಕಡಾ ಇಪ್ಪತ್ತರಷ್ಟು ಮೊಬೈಲ್‌ ಕಾರಣದಿಂದ ಆಗುತ್ತಿವೆ ಎಂದು ವರದಿಗಳು ಸೂಚಿಸಿವೆ.

ಇದನ್ನೂ ಓದಿ: Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Continue Reading
Advertisement
Job News
ಉದ್ಯೋಗ9 mins ago

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 15 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Lok Sabha
ಕರ್ನಾಟಕ16 mins ago

ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

assault case in anekla
ಬೆಂಗಳೂರು ಗ್ರಾಮಾಂತರ45 mins ago

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

shilpa shetty visits shibaruru sri kodamanittaya
ಸಿನಿಮಾ45 mins ago

Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

mamata banerjee helicopter
ಪ್ರಮುಖ ಸುದ್ದಿ50 mins ago

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ದೇಶ1 hour ago

Self harming: ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ಆತ್ಮಹತ್ಯೆ

mobile blast woman death
ಕ್ರೈಂ2 hours ago

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Randeep Surjewala
ಕರ್ನಾಟಕ2 hours ago

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Murder case in dharwad
ಕ್ರೈಂ2 hours ago

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

miss universe Buenos Aires
ವಿದೇಶ2 hours ago

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ4 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ11 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌