Gujarat Election Results | ಬಿಜೆಪಿಯ ಐತಿಹಾಸಿಕ ಗೆಲುವಿಗೆ ಕಾರ್ಯಕರ್ತರನ್ನು ಅಭಿನಂದಿಸಿದ ಜೆಪಿ ನಡ್ಡಾ - Vistara News

ದೇಶ

Gujarat Election Results | ಬಿಜೆಪಿಯ ಐತಿಹಾಸಿಕ ಗೆಲುವಿಗೆ ಕಾರ್ಯಕರ್ತರನ್ನು ಅಭಿನಂದಿಸಿದ ಜೆಪಿ ನಡ್ಡಾ

ಗುಜರಾತ್‌ನಲ್ಲಿ ಬಿಜೆಪಿಯ ಗೆಲುವನ್ನು ಐತಿಹಾಸಿಕ ಎಂದು ಬಣ್ಣಿಸಿರುವ ಪಕ್ಷಾಧ್ಯಕ್ಷ ಜೆಪಿ ನಡ್ಡಾ, ಇದಕ್ಕಾಗಿ ದುಡಿದಿರುವ ಕಾರ್ಯಕರ್ತರ ಶ್ರಮ ದೊಡ್ಡದು (Gujarat Election Results) ಎಂದಿದ್ದಾರೆ.

VISTARANEWS.COM


on

J P Nadda to visit Udupi, Chikkamagaluru, Hassan districts from Feb 20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಗುಜರಾತ್‌ನಲ್ಲಿ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ಪಕ್ಷದ (Gujarat Election Results) ಕಾರ್ಯಕರ್ತರನ್ನು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಅಭಿನಂದಿಸಿದರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್‌, ಹಿಮಾಚಲಪ್ರದೇಶ ಮತ್ತು ದಿಲ್ಲಿಯ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವನ್ನು ಪಕ್ಷ ವಿನಮ್ರವಾಗಿ ಸ್ವೀಕರಿಸುತ್ತದೆ. ಜನತೆಯ ಕಲ್ಯಾಣಕ್ಕಾಗಿ ಪಕ್ಷ ಶ್ರಮಿಸಲಿದೆ ಎಂದರು. ಗುಜರಾತ್‌ನಲ್ಲಿ ಬಿಜೆಪಿಯ ಚಾರಿತ್ರಿಕ ಗೆಲುವಿನ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು, ಅಭಿವೃದ್ಧಿ ಯೋಜನೆಗಳು ಪರಿಣಾಮ ಬೀರಿವೆ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ವಿರುದ್ಧ ಜನತೆ ಸಿಡಿದೆದ್ದಿದ್ದಾರೆ ಎಂದರು.

ಹಿಮಾಚಲಪ್ರದೇಶದಲ್ಲಿ ಪಕ್ಷದ ಕಾರ್ಯಕರ್ತರು ದಣಿವರಿಯದೆ ಶ್ರಮಿಸಿದ್ದಾರೆ. ಪಕ್ಷಕ್ಕೆ ಸರ್ಕಾರ ರಚನೆ ಮಾಡಲು ಸಾಧ್ಯವಾಗದೆ ಇರಬಹುದು. ಆದರೆ ಪಕ್ಷದ ಕಾರ್ಯಕರ್ತರ ಸಾಧನೆ ಕಡಿಮೆಯೇನಲ್ಲ. ನೂತನ ಸರ್ಕಾರಕ್ಕೆ ಅಭಿನಂದನೆಗಳು. ಒಳ್ಳೆಯ ಕೆಲಸಕ್ಕೆ ಪಕ್ಷ ಬೆಂಬಲಿಸಲಿದೆ. ಹಿಮಾಚಲ ಪ್ರದೇಶದ ಹಿತಾಸಕ್ತಿಗೆ ಬಿಜೆಪಿ ಮುಂದೆಯೂ ಕಾರ್ಯಪ್ರವೃತ್ತವಾಗಲಿದೆ ಎಂದು ಜೆಪಿ ನಡ್ಡಾ ತಿಳಿಸಿದರು. ದಿಲ್ಲಿಯ ಪಾಲಿಕೆ ಚುನಾವಣೆಯಲ್ಲಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Narayana Murthy : ಕಳೆದ ವರ್ಷ ನವೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದ ಏಕಾಗ್ರ ರೋಹನ್ ಮೂರ್ತಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಮೂರನೇ ಮೊಮ್ಮಗಳು. ಏಕಾಗ್ರಹ ರೋಹನ್ ಮೂರ್ತಿ ಮತ್ತು ಅಪರ್ಣಾ ಕೃಷ್ಣನ್ ಅವರ ಪುತ್ರ. ಕೃಷ್ಣ ಮತ್ತು ಅನೌಷ್ಕಾ, ಅಕ್ಷತಾ ಮೂರ್ತಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿಯರಾಗಿದ್ದಾರೆ.

VISTARANEWS.COM


on

Narayana Murthy
Koo

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅವರ ಮೊಮ್ಮಗ ಏಕಾಗ್ರ ರೋಹನ್ ಕೇವಲ ಐದು ತಿಂಗಳ ವಯಸ್ಸಿನಲ್ಲಿ ಇನ್ಫೋಸಿಸ್​ ಸಂಸ್ಥೆಯಿಂದ 4.2 ಕೋಟಿ ರೂ.ಗಳ ಲಾಭಾಂಶವನ್ನು ಪಡೆದುಕೊಂಡಿದ್ದಾರೆ. ನಾರಾಯಣ ಮೂರ್ತಿ ಅವರು ಕಳೆದ ತಿಂಗಳು ಇನ್ಫೋಸಿಸ್​​ನ 240 ಕೋಟಿ ಮೌಲ್ಯದ 15 ಲಕ್ಷ ಷೇರುಗಳನ್ನು (0.04% ಪಾಲನ್ನು ಪುಟ್ಟ ಬಾಲಕನಿಗೆ ನೀಡಿದ್ದರು. ಆ ಷೇರುಗಳಿಗೆ ಈಗ ದೊಡ್ಡ ಮೊತ್ತದ ಡಿವಿಡೆಂಡ್​ ಸಿಕ್ಕಿದೆ.

ಎಕ್ಸ್​ಚೇಂಜ್​ ಫೈಲಿಂಗ್ ಪ್ರಕಾರ, ಏಕಾಗ್ರ ಇನ್ಫೋಸಿಸ್​ನ 15,00,000 ಷೇರುಗಳನ್ನು ಹೊಂದಿದ್ದಾನೆ. ಈ ವ್ಯವಹಾರವನ್ನು “ಆಫ್-ಮಾರ್ಕೆಟ್” ನಡೆಸಲಾಯಿತು ಎಂದು ಫೈಲಿಂಗ್ ಬಹಿರಂಗಪಡಿಸಿದೆ.

ಕಳೆದ ವರ್ಷ ನವೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದ ಏಕಾಗ್ರ ರೋಹನ್ ಮೂರ್ತಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಮೂರನೇ ಮೊಮ್ಮಗಳು. ಏಕಾಗ್ರಹ ರೋಹನ್ ಮೂರ್ತಿ ಮತ್ತು ಅಪರ್ಣಾ ಕೃಷ್ಣನ್ ಅವರ ಪುತ್ರ. ಕೃಷ್ಣ ಮತ್ತು ಅನೌಷ್ಕಾ, ಅಕ್ಷತಾ ಮೂರ್ತಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿಯರಾಗಿದ್ದಾರೆ.

ಶೇಕಡಾ 30ರಷ್ಟು ಲಾಭ ಹೆಚ್ಚಳ

ಇನ್ಫೋಸಿಸ್ ನಾಲ್ಕನೇ ತ್ರೈಮಾಸಿಕದಲ್ಲಿ ಲಾಭದಲ್ಲಿ 30% ಹೆಚ್ಚಳವನ್ನು ಘೋಷಿಸಿದೆ. ಕಳೆದ ವರ್ಷದ 6,128 ಕೋಟಿ ರೂ.ಗೆ ಹೋಲಿಸಿದರೆ 7,969 ಕೋಟಿ ರೂ.ಗೆ ತಲುಪಿದೆ. ಆದಾಯವು 37,923 ಕೋಟಿ ರೂ.ಗೆ ಸ್ವಲ್ಪ ಏರಿಕೆ ಕಂಡಿದೆ. ಮಾರ್ಚ್ 2024 ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ, ಒಟ್ಟು ಲಾಭವು 8.9% ರಷ್ಟು ಏರಿಕೆಯಾಗಿ 26,233 ಕೋಟಿ ರೂ.ಗೆ ತಲುಪಿದೆ/ ಕಾರ್ಯಾಚರಣೆಗಳಿಂದ ವಾರ್ಷಿಕ ಆದಾಯವು 4.7% ರಷ್ಟು ಏರಿಕೆಯಾಗಿ 1,53,670 ಕೋಟಿ ರೂ.ಗೆ ತಲುಪಿದೆ. ಇನ್ಫೋಸಿಸ್ ಮಂಡಳಿಯು 2024ರ ಹಣಕಾಸು ವರ್ಷದಲ್ಲಿ ಪ್ರತಿ ಷೇರಿಗೆ 20 ರೂ.ಗಳ ಅಂತಿಮ ಲಾಭಾಂಶ ಶಿಫಾರಸು ಮಾಡಿದೆ. ಜೊತೆಗೆ ಪ್ರತಿ ಷೇರಿಗೆ 8 ರೂ.ಗಳ ವಿಶೇಷ ಲಾಭಾಂಶವನ್ನು ಶಿಫಾರಸು ಮಾಡಿದೆ. ಹೆಚ್ಚುವರಿಯಾಗಿ, ಇನ್ಫೋಸಿಸ್ ಜರ್ಮನಿಯ ಇನ್-ಟೆಕ್ ಸಂಸ್ಥೆಯನ್ನು 450 ಮಿಲಿಯನ್ ಯುರೋಗಳ ಒಪ್ಪಂದದಲ್ಲಿ ಸ್ವಾಧೀನಪಡಿಸಿಕೊಳ್ಳಲು ಯೋಜಿಸಿದೆ.

ಇದನ್ನೂ ಓದಿ: CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

ಮುಂದಿನ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ 1-3% ಆದಾಯದ ಬೆಳವಣಿಗೆಯನ್ನು ನಿರೀಕ್ಷಿಸುತ್ತದೆ. ಸಂಶೋಧನಾ ಸಂಸ್ಥೆ ಮೋತಿಲಾಲ್ ಓಸ್ವಾಲ್ ಪ್ರಕಾರ, 2025ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಆದಾಯ ನಿರೀಕ್ಷೆಗಿಂತ ಕಡಿಮೆಯಾಗಿದೆ. ಆದರೆ ಇನ್ಫೋಸಿಸ್ ಮಧ್ಯಮಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು ಎಂದು ಅವರು ಊಹೆ ಮಾಡಿದ್ದಾರೆ. ಇನ್ಫೋಸಿಸ್ 2025 ರ ಹಣಕಾಸು ವರ್ಷದ ನಂತರ ವೇಗವಾಗಿ ಬೆಳೆಯಲು ಪ್ರಾರಂಭಿಸಬಹುದು ಎಂದು ಹೇಳಿದೆ. ಟಿಸಿಎಸ್​ನಂತ ಕಂಪನಿಗಳಿಗೆ ಹೋಲಿಸಿದರೆ ಇನ್ಪೋಸಿಸ್​ ಷೇರುಗಳು ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಬಿಸಿನೆಸ್ ಟುಡೇ ವರದಿ ಮಾಡಿದೆ.

Continue Reading

Lok Sabha Election 2024

Lok Sabha Election 2024: ಹಕ್ಕು ಚಲಾಯಿಸಿ ಮಾದರಿಯಾದ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ

Lok Sabha Election 2024: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ವೋಟಿಂಗ್‌ಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯುತ್ತಿದೆ. ಈ ಮಧ್ಯೆ ಮಹಾರಾಷ್ಟ್ರದ ನಾಗ್ಪುರದ ಮತಗಟ್ಟೆಯೊಂದರಲ್ಲಿ ವಿಶಿಷ್ಟ ಮಹಿಳೆಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಗಮನ ಸೆಳೆದಿದ್ದಾರೆ. ಅವರೇ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಎನಿಸಿಕೊಂಡಿರುವ ಜ್ಯೋತಿ ಆಮ್ಗೆ. 30 ವರ್ಷದ ಜ್ಯೋತಿ 62.8 ಸೆಂ.ಮೀ. ಎತ್ತರ ಹೊಂದಿದ್ದಾರೆ. ಈ ಕಾರಣಕ್ಕೆ ಜ್ಯೋತಿ ಅವರನ್ನು ವಿಶ್ವದ ಕುಬ್ಜ ಮಹಿಳೆ ಎಂಬುದಾಗಿ ಗಿನ್ನಿಸ್ ಸಂಸ್ಥೆ ಪ್ರಕಟಿಸಿದೆ.

VISTARANEWS.COM


on

Lok Sabha Election 2024
Koo

ಮುಂಬೈ: ಲೋಕಸಭಾ ಚುನಾವಣೆ (Lok Sabha Election 2024)ಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಗೆ ಆರಂಭವಾದ ವೋಟಿಂಗ್‌ಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮಧ್ಯೆ ಮಹಾರಾಷ್ಟ್ರದ ನಾಗ್ಪುರದ ಮತಗಟ್ಟೆಯೊಂದರಲ್ಲಿ ವಿಶಿಷ್ಟ ಮಹಿಳೆಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸಿ ಗಮನ ಸೆಳೆದಿದ್ದಾರೆ. ಅವರೇ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಎನಿಸಿಕೊಂಡಿರುವ ಜ್ಯೋತಿ ಆಮ್ಗೆ (Jyoti Amge).

30 ವರ್ಷದ ಜ್ಯೋತಿ 62.8 ಸೆಂ.ಮೀ. ಎತ್ತರ ಇದ್ದಾರೆ. ನಾಗ್ಪುರದ ನಿವಾಸಿಯಾಗಿರುವ ಅವರು ತಮ್ಮ ಪೋಷಕರ ಜತೆಗೆ ಮನೆ ಸಮೀಪದ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದರು. ಹೊಳೆಯುವ ಕೆಂಪು ಬಾರ್ಬಿ ಶೈಲಿಯ ಉಡುಪನ್ನು ಧರಿಸಿ ಆಗಮಿಸಿದ್ದ ಅವರು ಎಲ್ಲರ ಗಮನ ಸೆಳೆದರು. ಅಧಿಕಾರಿಗಳು ಕೂಡ ಕರ್ತವ್ಯ ಮರೆಯದ ಜ್ಯೋತಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ʼʼಇದು ನನ್ನ ಎರಡನೇ ಲೋಕಸಭಾ ಚುನಾವಣೆಯ ಮತದಾನ. ನಾನು ಈಗಾಗಲೇ ಎರಡು ಬಾರಿ ಮತ ಚಲಾಯಿಸಿದ್ದೇನೆ. ಈ ಹಿಂದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿಯೂ ಮತದಾನ ಮಾಡಿದ್ದೇನೆ. ನಾನು ಯಾವಾಗಲೂ ನನ್ನ ಮತದಾನದ ಹಕ್ಕನ್ನು ಚಲಾಯಿಸುತ್ತೇನೆ ಮತ್ತು ಅದು ನನ್ನ ಕರ್ತವ್ಯವೂ ಹೌದು” ಎಂದು ಜ್ಯೋತಿ ಹಕ್ಕು ಚಲಾಯಿಸಿದ ನಂತರ ಹೆಮ್ಮೆಯಿಂದ ಮಾಧ್ಯಮಗಳಿಗೆ ತನ್ನ ಶಾಯಿ ಮೆತ್ತಿದ ಬೆರಳನ್ನು ಪ್ರದರ್ಶಿಸಿದರು. 2011ರಲ್ಲಿ ಜ್ಯೋತಿ ಅವರನ್ನು ವಿಶ್ವದ ಕುಬ್ಜ ಮಹಿಳೆ ಎಂಬುದಾಗಿ ಗಿನ್ನಿಸ್ ಸಂಸ್ಥೆ ಪ್ರಕಟಿಸಿದೆ.

“ಮತದಾನ ನಮ್ಮ ಕರ್ತವ್ಯ ಮತ್ತು ಹಕ್ಕು. ನಮ್ಮ ಮತದೊಂದಿಗೆ, ನಮ್ಮನ್ನು ಪ್ರತಿನಿಧಿಸಲು ಉತ್ತಮ ನಾಯಕನನ್ನು ಆಯ್ಕೆ ಮಾಡುವುದನ್ನು ನಾವು ಖಚಿತಪಡಿಸಬಹುದು” ಎಂದು ಮಿಷನ್ಸ್ಕಿ ಇಂಡಿಯಾ ಹ್ಯೂಮನ್ ರೈಟ್ಸ್ ಅಸೋಸಿಯೇಷನ್‌ (Missionsky India Human Rights Association)ನ ಬ್ರ್ಯಾಂಡ್‌ ಅಂಬಾಸಿಡರ್ ಆಗಿರುವ ಜ್ಯೋತಿ ಹೇಳಿದರು.

‘Primordial Dwarfism’ (ಪ್ರಿಮೊರ್ಡಿಯಲ್ ಡ್ವಾರ್ಫಿಸಂ) ಎಂಬ ಕಾರಣದಿಂದ ಜ್ಯೋತಿ ಅವರ ಬೆಳವಣಿಗೆ ಕುಂಠಿತಗೊಂಡಿದೆ. ಅವರು ಭಾರತೀಯ ಮತ್ತು ಹಾಲಿವುಡ್ ಚಲನಚಿತ್ರಗಳು ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಜ್ಯೋತಿ ಅಮ್ಗೆ ಅವರು 1993ರ 16 ಡಿಸೆಂಬರ್ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ್ದರು.

ಇದನ್ನೂ ಓದಿ: Lok Sabha Election: ಚುನಾವಣೆಗೆ ಸ್ಪರ್ಧಿಸಿದವರಲ್ಲಿ ಡಿಕೆಸು ನಂ.1 ಶ್ರೀಮಂತ; ಟಾಪ್‌ 10 ಪಟ್ಟಿ ಇಲ್ಲಿದೆ

ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮತದಾನದ ಪ್ರಮಾಣ ಗಮನಾರ್ಹವಾಗಿ ಏರಿಕೆ ಕಂಡಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ತ್ರಿಪುರಾದಲ್ಲಿ ಶೇ. 53.04 ಹಕ್ಕು ಚಲಾವಣೆಯಾಗಿದೆ. ಮೇಘಾಲಯ ಮತ್ತು ಮಣಿಪುರ ನಂತರದ ಸ್ಥಾನದಲ್ಲಿವೆ. ಪಶ್ಚಿಮ ಬಂಗಾಳದಲ್ಲಿ ಶೇ. 50.96ರಷ್ಟು ಮತದಾನವಾಗಿದ್ದರೆ, ಲಕ್ಷದ್ವೀಪದಲ್ಲಿ ಕಡಿಮೆ ಶೇ. 29.91ರಷ್ಟು ಮಂದಿ ಹಕ್ಕು ಚಲಾಯಿಸಿದ್ದಾರೆ. ಮೊದಲ ಹಂತದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ. 43.11, ಅಸ್ಸಾಂನಲ್ಲಿ ಶೇ. 45.12 ಮತ್ತು ಮಧ್ಯಪ್ರದೇಶದಲ್ಲಿ ಶೇ. 44.43, ಶೇ. 40.05ರಷ್ಟು ಮತದಾನವಾಗಿದೆ.

Continue Reading

Lok Sabha Election 2024

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

VVPAT Verification: ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ.

VISTARANEWS.COM


on

evm vvpat verification lok sbha election 2024
Koo

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

Continue Reading

ದೇಶ

Lok Sabha Election : ಮಣಿಪುರದ ಮತಗಟ್ಟೆಯಲ್ಲಿ ಗುಂಡಿನ ಚಕಮಕಿ; ಇಲ್ಲಿದೆ ವಿಡಿಯೊ

Lok Sabha Election: ಗುಂಡಿನ ದಾಳಿಯಿಂದಾಗಿ ಮತದಾನದ ಹಕ್ಕನ್ನು ಚಲಾಯಿಸಲು ಸಾಲುಗಟ್ಟಿ ನಿಂತಿದ್ದ ಮತದಾರರಲ್ಲಿ ಭೀತಿಯನ್ನುಂಟು ಮಾಡಿತು. ಮತದಾನ ಪ್ರದೇಶದಲ್ಲಿ ಸುಮಾರು ೧೦ ಸೆಕೆಂಡುಗಳ ಕಾಲ ಗುಂಡಿನ ಚಕಮಕಿ ನಡೆಯಿತು ಎಂದು ವರದಿಯಾಗಿದೆ. ಘಟನೆಯಲ್ಲಿ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ.

VISTARANEWS.COM


on

lok sabha Election
Koo

ಇಂಫಾಲ್​: ಮಣಿಪುರದ ಎರಡು ಕ್ಷೇತ್ರಗಳಾದ ಇನ್ನರ್​ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಶುಕ್ರವಾರ ಬೆಳಿಗ್ಗೆ ಲೋಕಸಭಾ ಚುನಾವಣೆಗೆ (Lok Sabha Election) ಮತದಾನ ನಡೆದಿದೆ. ಈ ವೇಳೆ ಈಶಾನ್ಯ ರಾಜ್ಯದ ಮತಗಟ್ಟೆಯೊಂದರ ಬಳಿ ಹಲವಾರು ದುಷ್ಕರ್ಮಿಗಳು ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗುಂಡಿನ ದಾಳಿಯಿಂದಾಗಿ ಮತದಾನದ ಹಕ್ಕನ್ನು ಚಲಾಯಿಸಲು ಸಾಲುಗಟ್ಟಿ ನಿಂತಿದ್ದ ಮತದಾರರಲ್ಲಿ ಭೀತಿಯನ್ನುಂಟು ಮಾಡಿತು. ಮತದಾನ ಪ್ರದೇಶದಲ್ಲಿ ಸುಮಾರು ೧೦ ಸೆಕೆಂಡುಗಳ ಕಾಲ ಗುಂಡಿನ ಚಕಮಕಿ ನಡೆಯಿತು ಎಂದು ವರದಿಯಾಗಿದೆ. ಘಟನೆಯಲ್ಲಿ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ.

ಇನ್ನರ್ ಸ್ಥಾನದಿಂದ ತೌನೋಜಮ್ ಬಸಂತ ಕುಮಾರ್ ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದರೆ. ನಾಗಾ ಪೀಪಲ್ಸ್ ಫ್ರಂಟ್ (ಬಿಜೆಪಿ ಮಿತ್ರ) ನಾಯಕ ಕಚುಯಿ ತಿಮೋತಿ ಜಿಮಿಕ್ ಹೊರ ಕ್ಷೇತ್ರದಿಂದ ಕಣದಲ್ಲಿದ್ದಾರೆ. ಮಣಿಪುರದ ಸ್ಥಳೀಯ ಜನರನ್ನು ಉಳಿಸಲು ಮತ್ತು ಅದರ ಪ್ರಾದೇಶಿಕ ಸಮಗ್ರತೆಯನ್ನು ಪ್ರತಿಭಟಿಸಲು ಮತ ಚಲಾಯಿಸುವಂತೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಶುಕ್ರವಾರ ಜನರನ್ನು ಒತ್ತಾಯಿಸಿದರು.

ಮಣಿಪುರದ ಜನರು ತಮ್ಮ ಮತಗಳನ್ನು ಚಲಾಯಿಸಲು ಮತ್ತು ರಾಜ್ಯದ ಸ್ಥಳೀಯ ಜನಸಂಖ್ಯೆಯನ್ನು ಉಳಿಸಲು ಮತ್ತು ರಾಜ್ಯದ ಸಮಗ್ರತೆಯನ್ನು ರಕ್ಷಿಸಲು ಮತ್ತು ಆದಷ್ಟು ಬೇಗ ಶಾಂತಿಯನ್ನು ತರಲು ನಾನು ಮನವಿ ಮಾಡಲು ಬಯಸುತ್ತೇನೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ನಾನು ಇಂದು ತುಂಬಾ ಸಂತೋಷವಾಗಿದ್ದೇನೆ. ಏಕೆಂದರೆ 140 ಕೋಟಿ ಭಾರತೀಯರಿಗಾಗಿನ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ನಾವು ಮೋದಿ (ಜಿ) ಅವರನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಬೇಕಾಗಿದೆ. ಬಿಜೆಪಿಗೆ ಮತ ಚಲಾಯಿಸಿ ಮೋದಿ ಗೆಲ್ಲಿಸುವಂತೆ ನಾನು ರಾಜ್ಯದ ನನ್ನ ಸಹೋದರ ಸಹೋದರಿಯರಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಮೇ 2023 ರಿಂದ ಮಣಿಪುರವು ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಅಲ್ಲಿ ಎರಡು ಸಮುದಾಯಗಳ ನಡುವಿನ ಘರ್ಷಣೆಗಳಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ.

Continue Reading
Advertisement
ಶಿವಮೊಗ್ಗ5 mins ago

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Wipro Q4 Results
ವಾಣಿಜ್ಯ8 mins ago

Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

Fraud Case in Bengaluru
ಬೆಂಗಳೂರು23 mins ago

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Jackfruit benefits
ಆರೋಗ್ಯ24 mins ago

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

Narayana Murthy
ಪ್ರಮುಖ ಸುದ್ದಿ25 mins ago

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Neha Murder case Congress creates jihadi Karnataka R Ashok
ರಾಜಕೀಯ27 mins ago

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Group Clash
ಕರ್ನಾಟಕ36 mins ago

Group Clash: ರಾಮ ನವಮಿಯಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ; ಇಬ್ಬರಿಗೆ ಚಾಕು ಇರಿತ

IPL 2024
ಕ್ರಿಕೆಟ್37 mins ago

IPL 2024: ಅಭ್ಯಾಸದ ವೇಳೆ ರಾಹುಲ್​ಗೆ ಪತ್ನಿಯಿಂದ ಸಾಥ್​; ವಿಡಿಯೊ ವೈರಲ್​

Rain in Karnataka
ಮಳೆ52 mins ago

Weather Report: ಬೆಂಗಳೂರಿನ ಜನ ಮಳೆಗಾಗಿ ಮೇವರೆಗೆ ಕಾಯಬೇಕು!

Tumkur Lok Sabha constituency BJP candidate Somanna election campaign in various places of Koratagare
ತುಮಕೂರು57 mins ago

Lok Sabha Election 2024: ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ ನನ್ನನ್ನು ಬೆಂಬಲಿಸಿ: ವಿ. ಸೋಮಣ್ಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ2 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ12 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌