Site icon Vistara News

Gujarat Election Results | ಬಿಜೆಪಿಯ ಐತಿಹಾಸಿಕ ಗೆಲುವಿಗೆ ಕಾರ್ಯಕರ್ತರನ್ನು ಅಭಿನಂದಿಸಿದ ಜೆಪಿ ನಡ್ಡಾ

J P Nadda to visit Udupi, Chikkamagaluru, Hassan districts from Feb 20

ನವ ದೆಹಲಿ: ಗುಜರಾತ್‌ನಲ್ಲಿ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ಪಕ್ಷದ (Gujarat Election Results) ಕಾರ್ಯಕರ್ತರನ್ನು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಅಭಿನಂದಿಸಿದರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್‌, ಹಿಮಾಚಲಪ್ರದೇಶ ಮತ್ತು ದಿಲ್ಲಿಯ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವನ್ನು ಪಕ್ಷ ವಿನಮ್ರವಾಗಿ ಸ್ವೀಕರಿಸುತ್ತದೆ. ಜನತೆಯ ಕಲ್ಯಾಣಕ್ಕಾಗಿ ಪಕ್ಷ ಶ್ರಮಿಸಲಿದೆ ಎಂದರು. ಗುಜರಾತ್‌ನಲ್ಲಿ ಬಿಜೆಪಿಯ ಚಾರಿತ್ರಿಕ ಗೆಲುವಿನ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು, ಅಭಿವೃದ್ಧಿ ಯೋಜನೆಗಳು ಪರಿಣಾಮ ಬೀರಿವೆ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ವಿರುದ್ಧ ಜನತೆ ಸಿಡಿದೆದ್ದಿದ್ದಾರೆ ಎಂದರು.

ಹಿಮಾಚಲಪ್ರದೇಶದಲ್ಲಿ ಪಕ್ಷದ ಕಾರ್ಯಕರ್ತರು ದಣಿವರಿಯದೆ ಶ್ರಮಿಸಿದ್ದಾರೆ. ಪಕ್ಷಕ್ಕೆ ಸರ್ಕಾರ ರಚನೆ ಮಾಡಲು ಸಾಧ್ಯವಾಗದೆ ಇರಬಹುದು. ಆದರೆ ಪಕ್ಷದ ಕಾರ್ಯಕರ್ತರ ಸಾಧನೆ ಕಡಿಮೆಯೇನಲ್ಲ. ನೂತನ ಸರ್ಕಾರಕ್ಕೆ ಅಭಿನಂದನೆಗಳು. ಒಳ್ಳೆಯ ಕೆಲಸಕ್ಕೆ ಪಕ್ಷ ಬೆಂಬಲಿಸಲಿದೆ. ಹಿಮಾಚಲ ಪ್ರದೇಶದ ಹಿತಾಸಕ್ತಿಗೆ ಬಿಜೆಪಿ ಮುಂದೆಯೂ ಕಾರ್ಯಪ್ರವೃತ್ತವಾಗಲಿದೆ ಎಂದು ಜೆಪಿ ನಡ್ಡಾ ತಿಳಿಸಿದರು. ದಿಲ್ಲಿಯ ಪಾಲಿಕೆ ಚುನಾವಣೆಯಲ್ಲಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದರು.

Exit mobile version