Kanwar Yatra: ನೇಮ್‌ಪ್ಲೇಟ್‌ ಅಳವಡಿಕೆಗೆ ಆದೇಶ ಪ್ರಶ್ನಿಸಿ ಅರ್ಜಿ; ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ - Vistara News

ದೇಶ

Kanwar Yatra: ನೇಮ್‌ಪ್ಲೇಟ್‌ ಅಳವಡಿಕೆಗೆ ಆದೇಶ ಪ್ರಶ್ನಿಸಿ ಅರ್ಜಿ; ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

Kanwar Yatra: ಯೋಗಿ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆಯ ಎನ್‌ಜಿಒವೊಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌ ಮತ್ತು ಎಸ್‌ವಿಎನ್‌ ಭಟ್ಟಿ ಇರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಲಿದೆ.

VISTARANEWS.COM


on

Kanwar Yatra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿರುವುದು ಇದೀಗ ಕಾನೂನು ಸಮರಕ್ಕೆ ಕಾರಣವಾಗಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ಯೋಗಿ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆಯ ಎನ್‌ಜಿಒವೊಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್‌ ರಾಯ್‌ ಮತ್ತು ಎಸ್‌ವಿಎನ್‌ ಭಟ್ಟಿ ಇರುವ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಲಿದೆ.

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bangladesh Protests: ಸರ್ಕಾರಿ ಉದ್ಯೋಗದಲ್ಲಿನ ಶೇ. 30 ಮೀಸಲಾತಿ ಕಡಿತಗೊಳಿಸಿದ ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Mamata Banerjee: ಕಾಫಿರ್‌ ಎಂದರೆ ಮುಸ್ಲಿಮೇತರ ಅಥವಾ ಇಸ್ಲಾಂನಲ್ಲಿ ನಂಬಿಕೆ ಇರದವರು ಎಂಬ ಅರ್ಥವಿದೆ. ಹಾಗಾಗಿ, ಮಮತಾ ಬ್ಯಾನರ್ಜಿ ಅವರು ನಾನು ಕಾಫಿರ್‌ ಅಲ್ಲ, ಹೇಡಿ ಅಲ್ಲ ಎಂಬುದಾಗಿ ಹೇಳಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಹಲವು ನಾಯಕರು ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ನೀಡಿದ ಒಂದು ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು ಬಿಜೆಪಿ ಆಕ್ರೋಶಕ್ಕೂ ಗುರಿಯಾಗಿದೆ. “ನಾನು ಕಾಫಿರ್‌ ಅಲ್ಲ” ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದು, ಇದಕ್ಕೆ ಬಿಜೆಪಿ ನಾಯಕ ಅಮಿತ್‌ ಮಾಳವಿಯ (Amit Malviya) ಅವರು ತಿರುಗೇಟು ನೀಡಿದ್ದು, “ಸಾಮಾಜಿಕ ಸಾಮರಸ್ಯವನ್ನು ಮಮತಾ ಬ್ಯಾನರ್ಜಿ ಅವರು ಹಾಳು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಫಿರ್‌ ಎಂದರೆ ಮುಸ್ಲಿಮೇತರ ಅಥವಾ ಇಸ್ಲಾಂನಲ್ಲಿ ನಂಬಿಕೆ ಇರದವರು ಎಂಬ ಅರ್ಥವಿದೆ. ಸಮಾವೇಶವೊಂದರಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ಯಾರು ಹೆದರುತ್ತಾರೋ, ಅವರು ಸಾಯುತ್ತಾರೆ. ನಾನು ಕಾಫಿರ್‌ ಅಲ್ಲ. ನಾನು ದೇಶದ್ರೋಹಿ ಅಲ್ಲ” ಎಂಬುದಾಗಿ ಅವರು ಹೇಳಿದ್ದರು. ಅಷ್ಟೇ ಅಲ್ಲ, “ನಾನು ಪಶ್ಚಿಮ ಬಂಗಾಳದ ಸಂಬಂಧವು ಭಾರತದ ಜತೆ ಉತ್ತಮವಾಗಿರಲಿ ಎಂದೇ ಬಯಸುತ್ತೇನೆ. ಅಖಿಲೇಶ್‌ ಯಾದವ್‌ ಅವರು ಇಲ್ಲಿಗೆ ಬಂದರು, ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ” ಎಂದಿದ್ದಾರೆ. ಹಾಗಾಗಿ, “ಪಶ್ಚಿಮ ಬಂಗಾಳವು ಭಾರತದ ಭಾಗವಲ್ಲವೇ? ಅದೊಂದು ಪ್ರತ್ಯೇಕ ದೇಶವೇ” ಎಂಬುದಾಗಿ ಬಿಜೆಪಿಯ ಶೆಹಜಾದ್‌ ಪೂನಾವಾಲಾ ಅವರು ಪ್ರಶ್ನಿಸಿದ್ದಾರೆ.

ಅಮಿತ್‌ ಮಾಳವೀಯ ವಾದ ಹೀಗಿದೆ…

“ನಾನು ಕಾಫಿರ್‌ ಅಲ್ಲ ಎಂಬುದಾಗಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಆ ಮೂಲಕ ಅವರು ಕಾಫಿರರು ಹೇಡಿಗಳು ಎಂಬಂತೆ ಮಮತಾ ಬ್ಯಾನರ್ಜಿ ಬಿಂಬಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಕೋಲ್ಕೊತಾ ಮೇಯರ್‌ ಪಕ್ಕದಲ್ಲಿ ಕೂತು, ಎಲ್ಲರೂ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಬೇಕು ಎಂಬುದಾಗಿ ಕರೆ ನೀಡಿದ್ದರು. ಅಷ್ಟೇ ಅಲ್ಲ, ಅವರು ಬಹಿರಂಗವಾಗಿಯೇ ಮುಸ್ಲಿಮೇತರರ ವಿರುದ್ಧ ಮಾತನಾಡುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್‌ ಪಕ್ಷವು ದೇಶದ ಸಾಮಾಜಿಕ ಸಾಮರಸ್ಯವನ್ನೇ ಹಾಳು ಮಾಡುತ್ತಿದೆ” ಎಂದು ಅಮಿತ್‌ ಮಾಳವೀಯ ಹೇಳಿದ್ದಾರೆ.

“ಪಶ್ಚಿಮ ಬಂಗಾಳವು ಭಾರತದ ಅವಿಭಾಜ್ಯ ಅಂಗವಾಗಿದೆ. ಇದನ್ನು ಮಮತಾ ಬ್ಯಾನರ್ಜಿ ಅವರು ಅರ್ಥ ಮಾಡಿಕೊಳ್ಳಬೇಕು. ಲಕ್ಷಾಂತರ ಹಿಂದು ಬೆಂಗಾಲಿಗಳು ತಾಯ್ನಾಡಿಗಾಗಿ ಹೋರಾಟ ಮಾಡಿದ್ದಾರೆ. ಹಾಗಾಗಿ, ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳವನ್ನು, ಆ ರಾಜ್ಯದ ಜನರನ್ನು ಕಡೆಗಣಿಸಿ ಮಾತನಾಡಬಾರದು. ಒಬ್ಬ ಮುಖ್ಯಮಂತ್ರಿಯಾಗಿ ಈ ರೀತಿಯ ದೇಶದ್ರೋಹದ ಮಾತುಗಳನ್ನು ಆಡಬಾರದು. ಇಂತಹ ರಾಜಕೀಯ ಮೇಲಾಟಗಳ ಮೂಲಕ ಅವರು ಗದ್ದುಗೆ ಏರುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ. ಆದರೆ ಅದು ಕೈಗೂಡುವುದಿಲ್ಲ” ಎಂದು ಅಮಿತ್‌ ಮಾಳವೀಯ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Viral Video: ಪ.ಬಂಗಾಳದಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಬರ್ಬರ ಹಲ್ಲೆ; ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ‌ ಮೇಲೆ ಕಿಡಿಕಾರಿದ ಜನ

Continue Reading

ದೇಶ

Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು?

Budget Session 2024: ಜುಲೈ 22ರಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಮತ್ತೊಂದೆಡೆ, ಸಾಲು ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇಂಡಿಯಾ ಒಕ್ಕೂಟವು ಸಜ್ಜಾಗಿದೆ.

VISTARANEWS.COM


on

Budget Session 2024
Koo

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನವು (Budget Session 2024) ಸೋಮವಾರದಿಂದ (ಜುಲೈ 22) ಆರಂಭವಾಗಲಿದ್ದು, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಜ್ಜಾಗಿದ್ದಾರೆ. ಇನ್ನು, ಪ್ರತಿಪಕ್ಷಗಳೂ ಅಷ್ಟೇ, ದೇಶದ ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಸಂಸತ್ತಿನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ಹಾಗಾಗಿ, ಬಜೆಟ್‌ ಅಧಿವೇಶನವು ತೀವ್ರ ಕುತೂಹಲ ಕೆರಳಿಸಿದೆ.

ಜುಲೈ 22ರಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಸೋಮವಾರವೇ ಆರ್ಥಿಕ ಸಮೀಕ್ಷೆ ಪ್ರಕಟಿಸಲಾಗುತ್ತದೆ. ಅಧಿವೇಶನದ ವೇಳೆ ಕೇಂದ್ರ ಸರ್ಕಾರವು ವಿಪತ್ತು ನಿರ್ವಹಣಾ (ತಿದ್ದುಪಡಿ) ವಿಧೇಯಕ, ಭಾರತೀಯ ವಾಯುಯಾನ ವಿಧೇಯಕ ಸೇರಿ ಒಟ್ಟು ಆರು ವಿಧೇಯಕಗಳನ್ನು ಮಂಡಿಸಲಿದೆ ಎಂದು ತಿಳಿದುಬಂದಿದೆ.

Union Budget 2024

ಪ್ರತಿಪಕ್ಷಗಳ ಮುಂದಿರುವ ವಿಷಯಗಳು ಯಾವವು?

ಸಾಲು ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇಂಡಿಯಾ ಒಕ್ಕೂಟವು ಸಜ್ಜಾಗಿದೆ. ಅದರಲ್ಲೂ, ಮಣಿಪುರ ಹಿಂಸಾಚಾರ, ನೀಟ್‌ ಪ್ರಶ್ನೆಪತ್ರಿಕೆ ಪ್ರಕರಣ, ಬೆಲೆ ಏರಿಕೆ, ಯುಪಿಎಸ್‌ಸಿ ಅಕ್ರಮ ಸೇರಿ ಹಲವು ವಿಷಯಗಳನ್ನು ಪ್ರತಿಪಕ್ಷಗಳು ಚರ್ಚೆಗೆ ತರಲಿವೆ. ಸರ್ಕಾರಕ್ಕೆ ಚಾಟಿ ಬೀಸಲು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೂ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

India Bloc Meeting

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತೆರಿಗೆ ರಿಲೀಫ್?

Continue Reading

ದೇಶ

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

Vande Mataram: ಸದನದ ಕಾರ್ಯಕಲಾಪಗಳ ಶಿಸ್ತು, ಪ್ರಕ್ರಿಯೆ ಹಾಗೂ ಶಿಷ್ಟಾಚಾರಗಳನ್ನು ಪಾಲಿಸುವ ದೃಷ್ಟಿಯಿಂದ ಹಲವು ಘೋಷಣೆಗಳನ್ನು ಸದಸ್ಯರು ಕೂಗಬಾರದು. ಥ್ಯಾಂಕ್ಸ್‌, ಥ್ಯಾಂಕ್‌ ಯು, ಜೈ ಹಿಂದ್‌, ವಂದೇ ಮಾತರಂ ಸೇರಿ ಯಾವುದೇ ಘೋಷಣೆಗಳನ್ನು ಕೂಗಬಾರದು ಎಂದು ಸದಸ್ಯರಿಗೆ ಸೂಚಿಸಲಾಗಿದೆ.

VISTARANEWS.COM


on

Vande Mataram
Koo

ನವದೆಹಲಿ: ಜುಲೈ 22ರಿಂದ ಆಗಸ್ಟ್‌ 12ರವರೆಗೆ ಸಂಸತ್‌ ಬಜೆಟ್‌ ಅಧಿವೇಶನ (Parliament Session 2024) ನಡೆಯಲಿದೆ. ಜುಲೈ 23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ. ಕೇಂದ್ರ ಸರ್ಕಾರವು ಬಜೆಟ್‌ ಮೂಲಕ ಜನರ ಗಮನ ಸೆಳೆಯಲು ಸಜ್ಜಾಗಿದ್ದರೆ, ಬೆಲೆಯೇರಿಕೆ, ನೀಟ್‌ ಹಗರಣ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿವೆ. ಇದರ ಬೆನ್ನಲ್ಲೇ, ಅಧಿವೇಶನದ ವೇಳೆ ವಂದೇ ಮಾತರಂ, ಜೈ ಹಿಂದ್‌ ಸೇರಿ ಹಲವು ಘೋಷಣೆಗಳನ್ನು ಕೂಗದಂತೆ ಉಭಯ ಸದನಗಳ ಸದಸ್ಯರಿಗೆ ಸೂಚಿಸಲಾಗಿದೆ.

ಘೋಷಣೆಗಳನ್ನು ಕೂಗಬಾರದು ಎಂದು ರಾಜ್ಯಸಭೆಯ ಸಭಾಧ್ಯಕ್ಷರು ಜುಲೈ 15ರಂದೇ ಬುಲೆಟಿನ್‌ ಹೊರಡಿಸಿದ್ದಾರೆ. “ಸದನದ ಕಾರ್ಯಕಲಾಪಗಳ ಶಿಸ್ತು, ಪ್ರಕ್ರಿಯೆ ಹಾಗೂ ಶಿಷ್ಟಾಚಾರಗಳನ್ನು ಪಾಲಿಸುವ ದೃಷ್ಟಿಯಿಂದ ಹಲವು ಘೋಷಣೆಗಳನ್ನು ಸದಸ್ಯರು ಕೂಗಬಾರದು. ಥ್ಯಾಂಕ್ಸ್‌, ಥ್ಯಾಂಕ್‌ ಯು, ಜೈ ಹಿಂದ್‌, ವಂದೇ ಮಾತರಂ ಸೇರಿ ಯಾವುದೇ ಘೋಷಣೆಗಳನ್ನು ಕೂಗಬಾರದು. ಅಧಿವೇಶನ ನಡೆಯುವಾಗ ಸದನದ ಒಳಗೆ ಹಾಗೂ ಸಂಸತ್‌ ಆವರಣದಲ್ಲಿಯೂ ಘೋಷಣೆಗಳನ್ನು ಕೂಗುವಂತಿಲ್ಲ” ಎಂದು ಸದಸ್ಯರಿಗೆ ಸೂಚಿಸಲಾಗಿದೆ.

Parliament Security

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಹಾಗೆಯೇ, ಬಜೆಟ್‌ನಲ್ಲಿ ತೆರಿಗೆ ವಿನಾಯಿತಿ ಸೇರಿ ಹಲವು ನಿರೀಕ್ಷೆಗಳನ್ನು ಜನ ಇಟ್ಟುಕೊಂಡಿದ್ದಾರೆ. “ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದ್ದು, ಈ ಮೊತ್ತವನ್ನು 5 ಲಕ್ಷ ರೂ.ಗೆ ಏರಿಕೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಇವುಗಳ ಜತೆಗೆ ನೌಕರರ ಮನೆ ಬಾಡಿಗೆ ಭತ್ಯೆ (HRA) ಹಾಗೂ 80 ಟಿಟಿಎ ಅಡಿಯಲ್ಲಿ ಮೊತ್ತವನ್ನು 10 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಏರಿಕೆ ಮಾಡುವುದು ಸೇರಿ ಹಲವು ನಿರೀಕ್ಷೆಗಳಿವೆ.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading

ವಿದೇಶ

Pakistan Army: ಭಾರತದ ಗಡಿಯಲ್ಲಿ ಉಗ್ರರಿಗೆ ಪಾಕ್ ಸೇನೆಯಿಂದಲೇ ತರಬೇತಿ, ಮಾರ್ಗದರ್ಶನ; ಮತ್ತೊಂದು ಕಳ್ಳಾಟ ಬಯಲು

Pakistan Army: ಪಾಕಿಸ್ತಾನದ ಸೇನಾ ನೆಲೆಗಳಲ್ಲಿ, ಬಂಕರ್‌ಗಳಲ್ಲಿಯೇ ಉಗ್ರರಿಗೆ ಸೈನಿಕರು ಆಶ್ರಯ ನೀಡಿದ್ದಾರೆ. ಅವರನ್ನು ಗಡಿಯ ತನಕ ಕರೆದುಕೊಂಡು ಬಂದು, ಭಾರತದೊಳಗೆ ನುಸುಳಲು ಯಾವ ಮಾರ್ಗದ ಮೂಲಕ ತೆರಳಬೇಕು ಎಂಬುದಾಗಿ ಮಾರ್ಗದರ್ಶನ ನೀಡಿದ್ದಾರೆ. ಈ ಫೋಟೊಗಳು ಈಗ ಪಾಕಿಸ್ತಾನದ ಬಣ್ಣವನ್ನು ಬಯಲು ಮಾಡಿವೆ.

VISTARANEWS.COM


on

Pakistan Army
Koo

ಇಸ್ಲಾಮಾಬಾದ್:‌ ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ದಾಳಿಗಳು ಜಾಸ್ತಿಯಾಗಿವೆ. ಅದರಲ್ಲೂ, ನಾಗರಿಕರು ಹಾಗೂ ಸೈನಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಉಗ್ರರಿಗೆ ನೆರವು ನೀಡುವ ಪಾಕಿಸ್ತಾನದ ಕುತಂತ್ರ ಬುದ್ಧಿಯ ಅನಾವರಣ ಆಗಿದೆ. ಹೌದು, ಜಮ್ಮು-ಕಾಶ್ಮೀರ (Jammu Kashmir) ಗಡಿ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರಿಗೆ (Pakistan Terrorists) ಪಾಕಿಸ್ತಾನದ ಸೇನೆಯೇ (Pakistan Army) ತರಬೇತಿ ನೀಡುತ್ತಿದೆ. ಹಾಗೆಯೇ, ಯಾವ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಬಹುದು ಎಂಬುದರ ಬಗ್ಗೆ ಮಾರ್ಗದರ್ಶನ ನೀಡುತ್ತಿದೆ ಎಂದು ತಿಳಿದುಬಂದಿದೆ. ಹಾಗೆಯೇ, ಉಗ್ರರಿಗೆ ಪಾಕಿಸ್ತಾನದ ಸೈನಿಕರು ಮಾರ್ಗದರ್ಶನ ನೀಡುತ್ತಿರುವ ಫೋಟೊಗಳು ಕೂಡ ಲಭ್ಯವಾಗಿವೆ. ಈ ಕುರಿತು ಇಂಡಿಯಾ ಟಿವಿ ವರದಿ ಮಾಡಿದೆ.

ಹೌದು, ಪಾಕ್‌ ಆಕ್ರಮಿತ ಕಾಶ್ಮೀರದ ಗಡಿಯ ಕೊಟ್ಲಿ ಸೇರಿ ಹಲವು ಪ್ರದೇಶಗಳಲ್ಲಿ ಪಠಾಣಿ ಉಡುಪುಗಳನ್ನು ಧರಿಸಿರುವ ಉಗ್ರರಿಗೆ ಪಾಕಿಸ್ತಾನದ ಸೈನಿಕರು ತರಬೇತಿ ನೀಡುತ್ತಿರುವ, ಅವರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುತ್ತಿರುವ ಹಾಗೂ ಭಾರತದ ಕಡೆಗೂ ನುಗ್ಗಿಸುತ್ತಿರುವ ಫೋಟೊಗಳು ಲಭ್ಯವಾಗಿವೆ. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರಿಗೆ ಪಾಕ್‌ ಸೈನಿಕರು ತರಬೇತಿ ನೀಡುತ್ತಿರುವ ಫೋಟೊಗಳು ಲಭ್ಯವಾದ ಬೆನ್ನಲ್ಲೇ, ಅವರಿಗೆ ಮಾರ್ಗದರ್ಶನ ನೀಡುವ ಫೋಟೊಗಳು ಕೂಡ ಲಭ್ಯವಾಗಿವೆ.

“ಪಾಕಿಸ್ತಾನದ ಸೇನಾ ನೆಲೆಗಳಲ್ಲಿ, ಬಂಕರ್‌ಗಳಲ್ಲಿಯೇ ಉಗ್ರರಿಗೆ ಸೈನಿಕರು ಆಶ್ರಯ ನೀಡಿದ್ದಾರೆ. ಅವರನ್ನು ಗಡಿಯ ತನಕ ಕರೆದುಕೊಂಡು ಬಂದು, ಭಾರತದೊಳಗೆ ನುಸುಳಲು ಯಾವ ಮಾರ್ಗದ ಮೂಲಕ ತೆರಳಬೇಕು ಎಂಬುದಾಗಿ ಮಾರ್ಗದರ್ಶನ ನೀಡಿದ್ದಾರೆ” ಎಂದು ಮೂಲಗಳು ತಿಳಿಸಿವೆ. ಇನ್ನು, ಪಾಕಿಸ್ತಾನದ ಎಸ್‌ಎಸ್‌ಜಿ ಕಮಾಂಡೋಗಳೇ ಉಗ್ರರಿಗೆ ದಾರಿ ತೋರಿಸುತ್ತಿರುವ ಫೋಟೊಗಳು ಕೂಡ ಬಹಿರಂಗವಾಗಿವೆ.

ಉಗ್ರರ ಬೇಟೆಗೆ ಭಾರತದ ಸೇನೆ ಸಜ್ಜು

ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡಿಯಲು ಭಾರತೀಯ ಸೇನೆ ಸಂಪೂರ್ಣವಾಗಿ ಸಜ್ಜಾಗಿದೆ. ಉಗ್ರರನ್ನು ಮಟ್ಟ ಹಾಕುವ ಪಣ ತೊಟ್ಟಿರುವ ಭಾರತೀಯ ಸೇನೆ 500ಕ್ಕೂ ಹೆಚ್ಚು ಪ್ಯಾರಾ ಕಮಾಂಡೋಗಳನ್ನು ಜಮ್ಮುವಿನಲ್ಲಿ ನಿಯೋಜಿಸಿದೆ. ಈ ಪ್ಯಾರಾ ಕಮಾಂಡೋಗಳು ಪಾಕಿಸ್ತಾನ ಮೂಲದ ಉಗ್ರರ ಬೇಟೆಯಲ್ಲಿ ತೊಡಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶದಲ್ಲಿ ಕೆಲವು ದಿನಗಳಿಂದ ಉಗ್ರರ ಉಪಟಳ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದರ ಹಿಂದೆ ಒಂದರಂತೆ ನಿರಂತರ ದಾಳಿಗಳು ನಡೆಯುತ್ತಲೇ ಇವೆ. ಈ ಪ್ರದೇಶದಲ್ಲಿ 50-55 ಉಗ್ರರು ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಸೇನೆ ಭದ್ರತೆಯನ್ನು ಹೆಚ್ಚಿಸಿದೆ. ಇನ್ನು ಕಳೆದ ವಾರದಿಂದ ನಡೆಯುತ್ತಿರುವ ಉಗ್ರರ ದಾಳಿ ಹಿಂದೆ ಪಾಕಿಸ್ತಾನ ನಿವೃತ ಸೈನಿಕರು ಅಥವಾ ಸೇನಾ ತರಬೇತಿ ಇರುವ ಉಗ್ರರ ಕೈವಾಡ ಇರುವ ಬಗ್ಗೆ ಭಾರತೀಯ ಗುಪ್ತಚರ ಇಲಾಖೆ ಶಂಕೆ ವ್ಯಕ್ತಪಡಿಸಿದೆ.

ಇದನ್ನೂ ಓದಿ: Pakistan Crisis: ಲೀಟರ್‌ ಪೆಟ್ರೋಲ್‌ಗೆ 275 ರೂ., ಸಾಲ 79 ಲಕ್ಷ ಕೋಟಿ ರೂ.; ಪಾಕ್‌ ಸಂಪೂರ್ಣ ದಿವಾಳಿ

Continue Reading
Advertisement
Ankola landslide
ಕರ್ನಾಟಕ7 mins ago

Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

Mamata Banerjee
ದೇಶ24 mins ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ38 mins ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

ಕರ್ನಾಟಕ39 mins ago

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Paris Olympics 2024 :
ಕ್ರೀಡೆ1 hour ago

Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

ಕರ್ನಾಟಕ1 hour ago

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Budget Session 2024
ದೇಶ2 hours ago

Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು?

Paris Olympics 2024
ಕ್ರಿಕೆಟ್2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ಈ ಅಥ್ಲೀಟ್​ಗೆ ಕೇವಲ 11 ವರ್ಷ! ಇಲ್ಲಿದೆ ಆಕೆಯ ವಿವರ

HD Kumaraswamy
ಕರ್ನಾಟಕ2 hours ago

HD Kumaraswamy: ನನ್ನ ಮತ್ತು ದೇವೇಗೌಡರ ಸರ್ಕಾರ ಕೆಡವಿದ್ದು ಯಾರು ಅಂತ ಹೇಳಿ; ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Women's Asia Cup 2024
ಪ್ರಮುಖ ಸುದ್ದಿ2 hours ago

Women’s Asia Cup 2024 : ದಾಖಲೆ ಬರೆದ ರಿಚಾ ಘೋಷ್​, ಇತಿಹಾಸ ಸೃಷ್ಟಿಸಿದ ಭಾರತ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌