Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ತತ್ತರಿಸಿದ ಪಾಕಿಗಳು; ಈ ನಾಲ್ವರು ಯೋಧರ ಸಾಹಸ ರೋಚಕ! - Vistara News

ದೇಶ

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ತತ್ತರಿಸಿದ ಪಾಕಿಗಳು; ಈ ನಾಲ್ವರು ಯೋಧರ ಸಾಹಸ ರೋಚಕ!

ಕಾರ್ಗಿಲ್ (Kargil Vijay Diwas) ಯುದ್ಧದ ಸಮಯದಲ್ಲಿ ದೇಶದ ಸಾರ್ವಭೌಮತೆಗೆ ಒಂದಿಷ್ಟೂ ಧಕ್ಕೆಯಾಗದಂತೆ ಸೇನಾ ಯೋಧರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಅವರ ಶೌರ್ಯ, ಧೈರ್ಯ ಮತ್ತು ಉತ್ಸಾಹದ ಕಥೆಗಳು ಕೇವಲ ನಮ್ಮನ್ನು ಹೆಮ್ಮೆ ಪಡುವಂತೆ ಮಾಡುವುದು ಮಾತ್ರವಲ್ಲ. ಜೊತೆಗೆ ನಮ್ಮ ಕಣ್ಣುಗಳನ್ನೂ ತೇವಗೊಳ್ಳುವಂತೆ ಮಾಡುತ್ತದೆ. ಅಂತಹ ಕಾರ್ಗಿಲ್ ವೀರರ ಕಥೆಗಳು ಇಲ್ಲಿವೆ.

VISTARANEWS.COM


on

Kargil Vijay Diwas 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಜಮ್ಮು ಕಾಶ್ಮೀರದ (jammu and kashmir) ಕಾರ್ಗಿಲ್‌ನಲ್ಲಿ (Kargil Vijay Diwas 2024) 1999ರ ಮೇ ತಿಂಗಳಿನಲ್ಲಿ ಪಾಕಿಸ್ತಾನದ (pakistan army) ದಾಳಿಕೋರರು ಮತ್ತು ಭಾರತೀಯ ಸೇನೆಯ (indian army) ನಡುವೆ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದವರೆಗೆ ಅಂದರೆ ಸುಮಾರು ಮೂರು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಸೈನಿಕರು ಮತ್ತು ಭಯೋತ್ಪಾದಕರನ್ನು ಬಗ್ಗುಬಡಿದು ವಿಜಯ ಸಾಧಿಸಿತ್ತು. ಆದರೆ ಈ ಸಾಹಸದಲ್ಲಿ ಅನೇಕ ಭಾರತೀಯ ಯೋಧರು ಹುತಾತ್ಮರಾದರು.

ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕರನ್ನು ಸ್ಮರಿಸಲು ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ. ಕಾರ್ಗಿಲ್ ಯುದ್ಧದಲ್ಲಿ ಹಲವಾರು ಸೇನಾ ನಾಯಕರು ದೇಶವೇ ಹೆಮ್ಮೆಪಡುವಂತಹ ಅಸಾಧಾರಣ ಶೌರ್ಯವನ್ನು ಪ್ರದರ್ಶಿಸಿದ್ದರು. ಕಾರ್ಗಿಲ್‌ನ ಡ್ರಾಸ್‌ ಪ್ರದೇಶದಲ್ಲಿ ಪಾಕಿಸ್ತಾನಿ ದಾಳಿಕೋರರು ವಶಪಡಿಸಿಕೊಂಡ ಪ್ರದೇಶಗಳನ್ನು ಹಿಂಪಡೆಯಲು 1999ರಲ್ಲಿ ಪ್ರಾರಂಭಿಸಲಾದ ‘ಆಪರೇಷನ್ ವಿಜಯ್’ನ ಯಶಸ್ಸನ್ನು ಕಾರ್ಗಿಲ್ ವಿಜಯ್ ದಿನವು ಸೂಚಿಸುತ್ತದೆ.
ಕಾರ್ಗಿಲ್ ಯುದ್ಧದ ಸಮಯದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕ ಶಾಂತಿಯಿಂದ ಮಲಗಲು ಸೇನಾ ಯೋಧರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ಅವರ ಶೌರ್ಯ, ಧೈರ್ಯ ಮತ್ತು ಉತ್ಸಾಹದ ಕಥೆಗಳು ಕೇವಲ ನಮ್ಮನ್ನು ಹೆಮ್ಮೆ ಪಡುವಂತೆ ಮಾಡುವುದು ಮಾತ್ರವಲ್ಲ, ನಮ್ಮ ಕಣ್ಣುಗಳು ತೇವಗೊಳ್ಳುವಂತೆ ಮಾಡುತ್ತದೆ. ಅಂತಹ ಕಾರ್ಗಿಲ್ ವೀರರ ಕಥೆಗಳು ಇಲ್ಲಿದೆ.

Kargil Vijay Diwas


ಕ್ಯಾಪ್ಟನ್ ವಿಕ್ರಮ್ ಬಾತ್ರಾ

1974ರ ಸೆಪ್ಟೆಂಬರ್ 9ರಂದು ಹಿಮಾಚಲ ಪ್ರದೇಶದ ಪಾಲಂಪುರದಲ್ಲಿ ಜನಿಸಿದ ಕ್ಯಾಪ್ಟನ್ ವಿಕ್ರಮ್ ಬಾತ್ರಾ ಅವರ ತಾಯಿ ಕಮಲ್ ಕಾಂತ ಶಾಲಾ ಶಿಕ್ಷಕಿಯಾಗಿದ್ದು, ತಂದೆ ಗಿರಿಧಾರಿ ಲಾಲ್ ಬಾತ್ರಾ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದರು.


1996ರ ಜೂನ್‌ನಲ್ಲಿ ಮಾಣೆಕ್‌ ಶಾ ಬೆಟಾಲಿಯನ್‌ನಲ್ಲಿ ಐಎಂಎಗೆ ಸೇರಿದ ವಿಕ್ರಮ್ ಬಾತ್ರಾ ತಮ್ಮ 19 ತಿಂಗಳ ತರಬೇತಿಯನ್ನು ಪೂರ್ಣಗೊಳಿಸಿದ ಅನಂತರ 1997ರ ಡಿಸೆಂಬರ್ 6ರಂದು ಐಎಂಎನಿಂದ ಪದವಿ ಪಡೆದರು. ಅವರನ್ನು ಜಮ್ಮು ಮತ್ತು ಕಾಶ್ಮೀರ ರೈಫಲ್ಸ್‌ನ 13ನೇ ಬೆಟಾಲಿಯನ್‌ಗೆ ಲೆಫ್ಟಿನೆಂಟ್ ಆಗಿ ನಿಯೋಜಿಸಲಾಯಿತು. ತರಬೇತಿ ಮತ್ತು ಹಲವಾರು ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅನಂತರ ಅವರ ಬೆಟಾಲಿಯನ್, 13 ಜಮ್ಮು ಆಂಡ್ ಕಾಶ್ಮೀರ್ ರೈಫಲ್ಸ್ ನ ಉತ್ತರ ಪ್ರದೇಶದ ಶಹಜಹಾನ್‌ಪುರಕ್ಕೆ ಹೋಗಲು ಆದೇಶವನ್ನು ಪಡೆದರು. ಜೂನ್ 5ರಂದು ಬೆಟಾಲಿಯನ್ ಆದೇಶಗಳನ್ನು ಬದಲಾಯಿಸಲಾಯಿತು ಮತ್ತು ಜಮ್ಮು ಮತ್ತು ಕಾಶ್ಮೀರದ ಡ್ರಾಸ್‌ಗೆ ಅವರನ್ನು ಸ್ಥಳಾಂತರಿಸಲು ಆದೇಶಿಸಲಾಯಿತು.

ಕಾರ್ಗಿಲ್ ಯುದ್ಧದ ಹೀರೋ ಎಂದೇ ಕರೆಯಲ್ಪಡುವ ವಿಕ್ರಮ್ ಬಾತ್ರಾ ʼಶಿಖರ 5140ʼ ಅನ್ನು ಪುನಃ ಪಾಕಿಸ್ತಾನಿಯರಿಂದ ವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಶಿಖರವನ್ನು ವಶಪಡಿಸಿಕೊಂಡ ಅನಂತರ ಅವರು ವಾಪಸ್‌ ಶಿಬಿರಕ್ಕೆ ಬಂದು ವಿರಾಮ ತೆಗೆದುಕೊಳ್ಳಲು ಅವಕಾಶ ಇತ್ತು. ಆದರೆ ಅವರು ವಿರಮಿಸದೆ ಸ್ವಯಂಪ್ರೇರಣೆಯಿಂದ ಪೀಕ್ 4875 ಶಿಖರವನ್ನು ವಶಪಡಿಸಿಕೊಳ್ಳಲು ಮತ್ತೊಂದು ಕಾರ್ಯಾಚರಣೆಯನ್ನು ಕೈಗೊಂಡರು. ಇದು ಭಾರತೀಯ ಸೇನೆಯು ಪ್ರಯತ್ನಿಸಿದ ಅತ್ಯಂತ ಕಷ್ಟಕರವಾದ ಕಾರ್ಯಾಚರಣೆಗಳಲ್ಲಿ ಒಂದಾಗಿದೆ. ಇದರಲ್ಲಿ ವಿಕ್ರಮ್ ಬಾತ್ರಾ ವೀರಾವೇಶದಿಂದ ಮತ್ತು ಸಾಹಸದಿಂದ ಹೋರಾಡಿ ಹಲವಾರು ವೈರಿ ಸೈನಿಕರನ್ನು ಕೊಂದರು. ಆದರೆ ಅಂತಿಮವಾಗಿ ತಾವು ಹುತಾತ್ಮರಾದರು. ಮರಣೋತ್ತರವಾಗಿ ಅವರಿಗೆ ಭಾರತದ ಅತ್ಯುನ್ನತ ಮತ್ತು ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ಪರಮ ವೀರ ಚಕ್ರವನ್ನು ನೀಡಿ ಗೌರವಿಸಲಾಯಿತು.


ಕಾರ್ಗಿಲ್ ಯುದ್ಧದ ಸಮಯದಲ್ಲಿ ಅವರು ಹೇಳುತ್ತಿದ್ದ ಒಂದು ಮಾತನ್ನು ಈಗಲೂ ಅವರ ಮನೆಯವರು ನೆನಪಿಸಿಕೊಳ್ಳುತ್ತಾರೆ. ಒಂದೋ ನಾನು ತ್ರಿವರ್ಣ ಹಾರಿಸಿದ ಅನಂತರ ಹಿಂತಿರುಗುತ್ತೇನೆ ಅಥವಾ ನಾನು ಆ ಧ್ವಜದಲ್ಲಿ ಸುತ್ತಿ ಹಿಂತಿರುಗುತ್ತೇನೆ. ಆದರೆ ನಾನು ಖಂಡಿತವಾಗಿ ಹಿಂತಿರುಗುತ್ತೇನೆ!

Kargil Vijay Diwas


ಗ್ರೆನೇಡಿಯರ್ ಯೋಗೇಂದ್ರ ಸಿಂಗ್ ಯಾದವ್

1980ರ ಮೇ 10ರಂದು ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಸಿಕಂದರಾಬಾದ್‌ನಲ್ಲಿ ಕರಣ್ ಸಿಂಗ್ ಯಾದವ್ ಮತ್ತು ಸಂತರಾ ದೇವಿ ದಂಪತಿಯ ಮಗನಾಗಿ ಜನಿಸಿದರು. 1999ರ ಆಗಸ್ಟ್ ನಲ್ಲಿ ಪರಮವೀರ ಚಕ್ರ ಪ್ರಶಸ್ತಿ ಪಡೆದ ಅತ್ಯಂತ ಕಿರಿಯ ವ್ಯಕ್ತಿ. ನಯಾಬ್ ಸುಬೇದಾರ್ ಯೋಗೇಂದ್ರ ಸಿಂಗ್ ಯಾದವ್ ಬೆಟಾಲಿಯನ್ 1999ರ ಜೂನ್ 12ರಂದು ಟೋಲೋಲಿಂಗ್ ಟಾಪ್ ಅನ್ನು ವಶಪಡಿಸಿಕೊಂಡಿತು. ಈ ವೇಳೆ ಇಬ್ಬರು ಅಧಿಕಾರಿಗಳು, 2 ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 21 ಸೈನಿಕರು ತಮ್ಮ ಪ್ರಾಣ ತ್ಯಾಗ ಮಾಡಿದರು.


ಘಟಕ್ ಪ್ಲಟೂನ್‌ನ ಭಾಗವಾಗಿದ್ದ ಯೋಗೇಂದ್ರ ಸಿಂಗ್ ಯಾದವ್ ಅವರನ್ನು ಟೈಗರ್ ಹಿಲ್‌ನಲ್ಲಿ ಸುಮಾರು 16500 ಅಡಿ ಎತ್ತರದ ಬಂಡೆಯ ಕಡಿದಾದ ಮೇಲ್ಭಾಗದಲ್ಲಿ ನೆಲೆಗೊಂಡಿರುವ ಮೂರು ಆಯಕಟ್ಟಿನ ಬಂಕರ್‌ಗಳನ್ನು ಸೆರೆಹಿಡಿಯಲು ನಿಯೋಜಿಸಲಾಗಿತ್ತು. ಶತ್ರುಗಳು ಬಂಕರ್‌ನಿಂದ ರಾಕೆಟ್ ದಾಳಿ ಮಾಡುತ್ತಿದ್ದರೂ ಅವರು ಹಗ್ಗದ ಸಹಾಯದಿಂದ ಪರ್ವತ ಹತ್ತುತ್ತ ವೈರಿಗಳನ್ನು ಕಂಗೆಡಿಸಿದರು. ಹಲವಾರು ಗುಂಡೇಟು ತಗಲಿದರೂ ನೋವನ್ನು ತೋರ್ಪಡಿಸದೆ ಕಾರ್ಯಾಚರಣೆಯನ್ನು ಮುಂದುವರಿಸಿದರು. ಶತ್ರು ಬಂಕರ್‌ಗೆ ತವಳಿಕೊಂಡು ಹೋಗಿ ಗ್ರೆನೇಡ್ ಹಾರಿಸಿದರು. ಅದು ನಾಲ್ಕು ಪಾಕಿಸ್ತಾನಿ ಸೈನಿಕರನ್ನು ಕೊಂದಿತು ಮತ್ತು ಶತ್ರುಗಳನ್ನು ಹಿಮ್ಮೆಟ್ಟಿಸಿತು. ಇದು ಭಾರತದ ಉಳಿದ ತುಕಡಿಗಳಿಗೆ ಬಂಡೆಯನ್ನು ಏರಲು ಅವಕಾಶ ಮಾಡಿಕೊಟ್ಟಿತು.

ಯಾದವ್ ಹೋರಾಟವನ್ನು ಮುಂದುವರಿಸಿದರು. ಎರಡನೇ ಬಂಕರ್ ಅನ್ನು ಸಹ ಸೈನಿಕರ ಸಹಾಯದಿಂದ ನಾಶಪಡಿಸಿದರು. ಇನ್ನೂ ಹಲವು ಪಾಕಿಸ್ತಾನಿ ಸೈನಿಕರನ್ನು ಕೊಂದರು. ಇದು ತುಕಡಿಯ ಉಳಿದವರಿಗೆ ಆಗಮಿಸಲು ಮತ್ತೊಮ್ಮೆ ಅವಕಾಶವನ್ನು ಒದಗಿಸಿತು. ಈ ರೀತಿಯಾಗಿ ಅವರು ಕಾರ್ಗಿಲ್ ಯುದ್ಧದ ಅತ್ಯಂತ ಕಠಿಣ ಕಾರ್ಯಾಚರಣೆಗಳಲ್ಲಿ ಒಂದರಲ್ಲಿ ಮೇಲುಗೈ ಸಾಧಿಸುತ್ತ ಮುನ್ನಡೆದರು.


ಸಂದರ್ಶನವೊಂದರಲ್ಲಿ ಮಾತನಾಡಿದ್ದ ಯೋಗೇಂದ್ರ ಸಿಂಗ್ ಯಾದವ್, ಸೈನಿಕನು ನಿಸ್ವಾರ್ಥ ಪ್ರೇಮಿಯಂತೆ. ಬೇಷರತ್ತಾದ ಈ ಪ್ರೀತಿಯೊಂದಿಗೆ ದೃಢಸಂಕಲ್ಪ ಬರುತ್ತದೆ ಮತ್ತು ತನ್ನ ರಾಷ್ಟ್ರ, ತನ್ನ ರೆಜಿಮೆಂಟ್ ಮತ್ತು ತನ್ನ ಸಹ ಸೈನಿಕರ ಮೇಲಿನ ಈ ಪ್ರೀತಿಗಾಗಿ ಸೈನಿಕನು ತನ್ನ ಜೀವದ ಬಗ್ಗೆ ಯೋಚಿಸುವುದಿಲ್ಲ ಎಂದು ಹೇಳಿದ್ದರು.

Kargil Vijay Diwas

ಕ್ಯಾಪ್ಟನ್ ಮನೋಜ್ ಕುಮಾರ್ ಪಾಂಡೆ

1975ರ ಜೂನ್ 25ರಂದು ಉತ್ತರ ಪ್ರದೇಶದ ಸೀತಾಪುರದ ರೂಧಾ ಗ್ರಾಮದಲ್ಲಿ ಗೋಪಿ ಚಂದ್ ಪಾಂಡೆ ಮತ್ತು ಮೋಹಿನಿ ಪಾಂಡೆ ದಂಪತಿಗೆ ಜನಿಸಿದ ಮನೋಜ್ ಕುಮಾರ್ ಪಾಂಡೆ ಅವರು 1/11 ಗೂರ್ಖಾ ರೈಫಲ್ಸ್‌ನ ಸೈನಿಕರಾಗಿದ್ದರು. ಅವರ ತಂದೆಯ ಪ್ರಕಾರ, ಅವರು ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಪರಮವೀರ ಚಕ್ರವನ್ನು ಪಡೆಯುವ ಏಕೈಕ ಗುರಿಯೊಂದಿಗೆ ಭಾರತೀಯ ಸೇನೆಗೆ ಸೇರಿದ್ದರು. ಅವರಿಗೆ ಮರಣೋತ್ತರವಾಗಿ ಪರಮವೀರ ಚಕ್ರವನ್ನು ನೀಡಲಾಯಿತು.


ಕಾರ್ಗಿಲ್ ಯುದ್ಧದಲ್ಲಿ ಶತ್ರು ಪಡೆಗಳನ್ನು ತೆರವುಗೊಳಿಸಲು ಅವರ ತಂಡವನ್ನು ನಿಯೋಜಿಸಲಾಯಿತು. ಒಳನುಗ್ಗುವವರನ್ನು ಹಿಂದಕ್ಕೆ ತಳ್ಳಲು ಅವರು ಸರಣಿ ದಾಳಿಗಳನ್ನು ನಡೆಸಿದರು. ಈ ವೇಳೆ ತೀವ್ರ ಗಾಯಗೊಂಡ ಅವರು ಆಕ್ರಮಣವನ್ನು ಮುಂದುವರಿಸಿದರು. ಇದು ಅಂತಿಮವಾಗಿ ಬಟಾಲಿಕ್ ವಲಯದ ಜೌಬರ್ ಟಾಪ್ ಮತ್ತು ಖಲುಬರ್ ಬೆಟ್ಟವನ್ನು ವಶಪಡಿಸಿಕೊಳ್ಳಲು ಕಾರಣವಾಯಿತು. ಅವರ ಧೈರ್ಯ ಮತ್ತು ನಾಯಕತ್ವಕ್ಕಾಗಿ ಅವರಿಗೆ ಮರಣೋತ್ತರವಾಗಿ ಪರಮವೀರ ಚಕ್ರವನ್ನು ನೀಡಲಾಯಿತು.

Kargil Vijay Diwas


ಲೆಫ್ಟಿನೆಂಟ್ ಬಲ್ವಾನ್ ಸಿಂಗ್

1973ರ ಅಕ್ಟೋಬರ್‌ನಲ್ಲಿ ಹರಿಯಾಣದ ರೋಹ್ಟಕ್ ಜಿಲ್ಲೆಯ ಸಾಸ್ರೌಲಿಯಲ್ಲಿ ಜನಿಸಿದ ಲೆಫ್ಟಿನೆಂಟ್ ಬಲ್ವಾನ್ ಸಿಂಗ್ 1999ರ ಜುಲೈ 3ರಂದು ತನ್ನ ಘಟಕ್ ಪ್ಲಟೂನ್‌ನೊಂದಿಗೆ ಬಹುಮುಖಿ ದಾಳಿಯ ಭಾಗವಾಗಿ ಈಶಾನ್ಯ ದಿಕ್ಕಿನಿಂದ ಟೈಗರ್ ಹಿಲ್‌ನ ಮೇಲೆ ದಾಳಿ ಮಾಡಲು ನಿಯೋಜಿಸಲಾಯಿತು. ಈ ಮಾರ್ಗವು 16,500 ಅಡಿ ಎತ್ತರದಲ್ಲಿದೆ. ಇದು ಹಿಮದಿಂದ ಆವೃತವಾಗಿದೆ. ಅಪಾಯಕಾರಿ ಬಿರುಕುಗಳಿಂದ ಕೂಡಿದ್ದು, ಜಲಪಾತಗಳಿಂದ ಕೂಡಿದೆ.

ಗೊತ್ತುಪಡಿಸಿದ ಸ್ಥಳ ತಲುಪಲು ಅತ್ಯಂತ ಕಷ್ಟಕರವಾದ ಮತ್ತು ಅನಿಶ್ಚಿತ ಮಾರ್ಗದಲ್ಲಿ ಅವರ ತಂಡವು ಫಿರಂಗಿ ಶೆಲ್‌ಗಳ ಮೂಲಕ 12 ಗಂಟೆಗಳ ಕಾಲ ಮುನ್ನಡೆದು ಶತ್ರುಗಳನ್ನು ಆಘಾತಕ್ಕೊಳಗಾಗಿಸಿತು. ಇವರ ಸಾಹಸಮಯ ದಾಳಿ ನೋಡಿದ ಶತ್ರುಗಳು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದರು!

ಇದನ್ನೂ ಓದಿ: Union Budget 2024 Live: ಕಸ್ಟಮ್ಸ್‌ ತೆರಿಗೆ ಇಳಿಸಿದ ಕೇಂದ್ರ; ವೈದ್ಯಕೀಯ ಉಪಕರಣಗಳಿಗೆ ಕಸ್ಟಮ್ಸ್‌ ಸುಂಕದಿಂದ ವಿನಾಯಿತಿ

ಗುಂಡಿನ ಚಕಮಕಿಯಲ್ಲಿ ಲೆಫ್ಟಿನೆಂಟ್ ಬಲ್ವಾನ್ ಸಿಂಗ್ ಗಂಭೀರವಾಗಿ ಗಾಯಗೊಂಡರು. ಆದರೂ ಅವರು ಶತ್ರುವನ್ನು ಮುಗಿಸಲು ನಿರ್ಧರಿಸಿದರು. ಶತ್ರುಗಳನ್ನು ಸುತ್ತುವರಿದು ನಾಲ್ವರನ್ನು ಕೊಂದರು. ಬಲ್ವಾನ್ ಸಿಂಗ್ ನಾಯಕತ್ವ, ಅವರ ಧೈರ್ಯ ಮತ್ತು ಅವರ ಶೌರ್ಯವು ಟೈಗರ್ ಹಿಲ್ ಅನ್ನು ವಶಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿತು. ಅವರ ಧೈರ್ಯ ಮತ್ತು ಶೌರ್ಯಕ್ಕಾಗಿ ಅವರಿಗೆ ಮಹಾವೀರ ಚಕ್ರವನ್ನು ನೀಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading
Advertisement
Latest12 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest13 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest17 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌