Narendra Modi : ಕರ್ನಾಟಕವನ್ನು ನಿರ್ನಾಮ ಮಾಡುತ್ತಿದೆ ಕಾಂಗ್ರೆಸ್​; ಪ್ರಧಾನಿ ಮೋದಿ ಟೀಕೆ - Vistara News

ದೇಶ

Narendra Modi : ಕರ್ನಾಟಕವನ್ನು ನಿರ್ನಾಮ ಮಾಡುತ್ತಿದೆ ಕಾಂಗ್ರೆಸ್​; ಪ್ರಧಾನಿ ಮೋದಿ ಟೀಕೆ

ರಾಜಸ್ಥಾನದಲ್ಲಿ ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಪ್ರಧಾನಿ ಮೋದಿ (Narendra Modi) ಆರೋಪಿಸಿದ್ದಾರೆ.

VISTARANEWS.COM


on

PM Narendra Modi express concern about Deepfake at G20 Virtual Summit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಭಿವೃದ್ಧಿ ಸಂಪೂರ್ಣವಾಗಿ ಸ್ಥಗಿತಗೊಂಡಿರುವ ಕರ್ನಾಟಕಕ್ಕೆ ಕಾಂಗ್ರೆಸ್ ಸರ್ಕಾರ ಹಾನಿ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ಟೀಕೆ ಮಾಡಿದ್ದಾರೆ. ಈ ವೇಳೆ ಅವರು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವುದೇ ಅನುಮಾನ ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಪಕ್ಷದ ರ್ಯಾಲಿಯೊಂದರಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಕುಂಠಿತಗೊಳಿಸಿ ದೇಶವನ್ನು ನಾಶ ಮಾಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ತೊಡಗಿದೆ. ಅದು ಸರ್ಕಾರ ರಚಿಸುವ ರಾಜ್ಯಗಳು ಪಾಳು ಬೀಳುತ್ತಿವೆ. ಅವರು ಒಳಜಗಳದಲ್ಲಿ ಮಾಡುತ್ತಲೇ ಇರುತ್ತಾರೆ. ಆದರೆ ಜನರಿಗೆ ಇದು ಮಾರಕ ಎಂದು ಮಧ್ಯಪ್ರದೇಶದ ಖಾಂಡ್ವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದರು.

“ಕರ್ನಾಟಕದಲ್ಲಿ ಕೇವಲ ಆರು ತಿಂಗಳ ಹಿಂದೆ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ.. ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯದ ಚುಕ್ಕಾಣಿ ಹೊಂದುತ್ತಾರೆ ಎಂದು ತಿಳಿದಿಲ್ಲ. ಅಭಿವೃದ್ಧಿ ಚಟುವಟಿಕೆಗಳು ಸ್ಥಗಿತಗೊಂಡಿರುವ ಕರ್ನಾಟಕವನ್ನು ಅವರು ಹಾಳು ಮಾಡಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ : Betting App : 21 ಬೆಟ್ಟಿಂಗ್ ಆ್ಯಪ್​ ಬ್ಯಾನ್​ ಮಾಡಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಜಗಳವನ್ನು ಉಲ್ಲೇಖಿಸಿ ಎರಡು ಗುಂಪುಗಳ ನಡುವಿನ ಒಳಜಗಳದ ಬಗ್ಗೆಯೂ ಮೋದಿ ಇದೇ ವೇಳೆ ಬೆಳಕು ಚೆಲ್ಲಿದರು.

ದೆಹಲಿ ನಿಯಂತ್ರಿತ ಪಕ್ಷ

ಒಳಜಗಳಗಳು ಕಾಂಗ್ರೆಸ್ ನಾಯಕರ ಸಂಸ್ಕೃತಿ. ಅದು ಸದಾ ಇರುತ್ತದೆ. ದೆಹಲಿಯಲ್ಲಿ ಕುಳಿತಿರುವ ಅವರ ಮುಖಂಡರು ಜಗಳದ ಬಗ್ಗೆ ತೀರ್ಪು ನೀಡುತ್ತಾರೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್ ಸರ್ಕಾರವು ರಚನೆಯಾದ ರಾಜ್ಯಗಳಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ಮತ್ತು ಅವರ ಉಪಮುಖ್ಯಮಂತ್ರಿಗಳು ನಡುವೆ ರಾಜ್ಯವನ್ನು ಲೂಟಿ ಮಾಡಲು ಸ್ಪರ್ಧೆ ಮಾಡುತ್ತಿದ್ದಾರೆ. ಅಂತಹ ಸುದ್ದಿಗಳು ಕರ್ನಾಟಕದಿಂದ ನಿಯಮಿತವಾಗಿ ಬರುತ್ತಿವೆ ಎಂದು ಪ್ರಧಾನಿ ಹೇಳಿದರು.

24 ಗಂಟೆಗಳ ಹೋರಾಟ

ರಾಜಸ್ಥಾನದಲ್ಲಿ, ಸ್ಪಷ್ಟ ಬಹುಮತವನ್ನು ಪಡೆದ ನಂತರ, ಎರಡು ಗುಂಪುಗಳು ಕಳೆದ ನಾಲ್ಕೂವರೆ ವರ್ಷಗಳಿಂದ 24 ಗಂಟೆಗಳ ಕಾಲ ಹೋರಾಡುತ್ತಿವೆ ಎಂದು ಮೋದಿ ಹೇಳಿದರು. ರಾಜಸ್ಥಾನದಲ್ಲಿ ಕನ್ನಯ್ಯಲಾಲ್​​ ಅವರ ಹತ್ಯೆಯನ್ನೂ ಅವರು ಪರೋಕ್ಷವಾಗಿ ಉಲ್ಲೇಖಿಸಿದರು. ಕಾಂಗ್ರೆಸ್ ಮಾಫಿಯಾ ರಾಜ್, ಭ್ರಷ್ಟಾಚಾರ ಮತ್ತು ಲೂಟಿಯನ್ನು ಉತ್ತೇಜಿಸುತ್ತಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Prashant Kishor: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಪ್ರಶಾಂತ್‌ ಕಿಶೋರ್‌ ಅವರು ಪ್ರತಿಪಕ್ಷಗಳಿಗೆ, ಟೀಕಾಕಾರರಿಗೆ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. “ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಜೂನ್‌ 4ರಂದು ಪಕ್ಕದಲ್ಲಿ ನೀರು ಇಟ್ಟುಕೊಂಡಿರಿ” ಎಂದು ಪೋಸ್ಟ್‌ ಮಾಡಿದ್ದಾರೆ. ಬಿಜೆಪಿಗೆ 300ಕ್ಕೂ ಅಧಿಕ ಸ್ಥಾನಗಳು ಲಭಿಸುವುದು ನಿಶ್ಚಿತ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಹೇಳಿದ್ದರು.

VISTARANEWS.COM


on

Prashant Kishor
Koo

ನವದೆಹಲಿ: ಚುನಾವಣಾ ರಣತಂತ್ರಗಾರ, ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆ ಮಾತನಾಡಿರುವ, ಸಂದರ್ಶನದಲ್ಲಿ ಉಲ್ಲೇಖಿಸಿರುವ ಅಂಶಗಳು ದೇಶಾದ್ಯಂತ ಚರ್ಚೆಯಾಗುತ್ತಿವೆ. ನರೇಂದ್ರ ಮೋದಿ (Narendra Modi) ಅವರ ವರ್ಚಸ್ಸು ಕಡಿಮೆಯಾದರೂ ಬಿಜೆಪಿ ಬಹುಮತ ಸಾಬೀತುಪಡಿಸಲಿದೆ ಎಂಬುದಾಗಿ ವಿಶ್ಲೇಷಿಸಿದ್ದಾರೆ. ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಪ್ರಶಾಂತ್‌ ಕಿಶೋರ್‌ ಅವರು ಪ್ರತಿಪಕ್ಷಗಳಿಗೆ, ಟೀಕಾಕಾರರಿಗೆ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. “ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಜೂನ್‌ 4ರಂದು ಪಕ್ಕದಲ್ಲಿ ನೀರು ಇಟ್ಟುಕೊಂಡಿರಿ” ಎಂದು ಪೋಸ್ಟ್‌ ಮಾಡಿದ್ದಾರೆ.

“ಹೆಚ್ಚಿನ ಪ್ರಮಾಣದ ನೀರು ಕುಡಿಯುವುದರಿಂದ ದೇಹ ಹಾಗೂ ಮನಸ್ಸು ನಿರ್ಜಲೀಕರಣಗೊಳ್ಳುತ್ತದೆ. ನಾನು ನೀಡಿರುವ ಸಮೀಕ್ಷಾ ವರದಿಯ ಕುರಿತು ಗಾಬರಿಗೊಂಡವರು ಜೂನ್‌ 4ರಂದು ಹೆಚ್ಚಿನ ಪ್ರಮಾಣದ ನೀರನ್ನು ಪಕ್ಕದಲ್ಲೇ ಇಟ್ಟುಕೊಳ್ಳುವುದು ತುಂಬ ಒಳಿತು” ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಅವರು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಷ್ಟೇ ಅಲ್ಲ, 2021ರಲ್ಲಿ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಪ್ರಶಾಂತ್‌ ಕಿಶೋರ್‌ ಲೆಕ್ಕಾಚಾರ ನಿಖರವಾಗಿತ್ತು ಎಂಬುದನ್ನು ಕೂಡ ಅವರು ನೆನಪಿಸಿದ್ದಾರೆ.

ಪ್ರಶಾಂತ್‌ ಕಿಶೋರ್‌ ಹೇಳಿದ್ದೇನು?

ಕೆಲ ದಿನಗಳ ಹಿಂದಷ್ಟೇ ಸಂದರ್ಶನವೊಂದರಲ್ಲಿ ಪ್ರಶಾಂತ್‌ ಕಿಶೋರ್‌ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದರು. “ದೇಶದಲ್ಲಿ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾದರೂ ಜನಕ್ಕೆ ಅವರ ಮೇಲೆ ಸಿಟ್ಟಿಲ್ಲ. ಹಾಗಾಗಿ, ಬಿಜೆಪಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದಿದ್ದರು. ಹಾಗೆಯೇ, ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದರು. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದರು. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Lok Sabha Election : ಬಿಜೆಪಿ 305 ಸೀಟ್ ಗೆಲ್ಲೋದು ಗ್ಯಾರಂಟಿ; ಅಮೆರಿಕದ ರಾಜಕೀಯ ಪಂಡಿತನ ಭವಿಷ್ಯ

Continue Reading

ಸಿನಿಮಾ

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

ಬಾಹುಬಲಿ: ಕ್ರೌನ್ ಆ ಬ್ಲಡ್ ಅನಿಮೇಟೆಡ್ ಸರಣಿ ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ ಬಿಡುಗಡೆಯಾಗಿದ್ದು, ಶರದ್ ಕೇಲ್ಕರ್ (Sharad Kelkar) ಚಿತ್ರದೊಂದಿಗಿನ ತಮ್ಮ ನಂಟನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Sharad Kelkar
Koo

ಅದ್ಧೂರಿ ಬಜೆಟ್‌ನ ʼಬಾಹುಬಲಿʼ (bahubali) ಚಿತ್ರದ ಒಂದೊಂದು ದೃಶ್ಯಗಳು ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷ ಸಮೀಪಿಸಿದರೂ ಈಗಲೂ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ʼಬಾಹುಬಲಿʼ ಪಾತ್ರಧಾರಿ ಪ್ರಭಾಸ್‌ಗೆ (actor prabhas) ಧ್ವನಿ ನೀಡಿರುವ ಶರದ್ ಕೇಳ್ಕರ್ (Sharad Kelkar) ತಮ್ಮ ಮರೆಯಲಾಗದ ಅನುಭವವನ್ನು ಹಂಚಿಕೊಂಡಿದ್ದಾರೆ.

ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ (Disney Plus star) ಬಿಡುಗಡೆಯಾಗಿರುವ “ಬಾಹುಬಲಿ: ಕ್ರೌನ್ ಆ ಬ್ಲಡ್” (Baahubali: Crown of Blood) ಅನಿಮೇಟೆಡ್ ಸರಣಿಯು ಈಗ ಚರ್ಚೆಯಲ್ಲಿದೆ. ಬಾಹುಬಲಿ ಮತ್ತು ಮಾಹಿಷ್ಮತಿಯ ಜಗತ್ತಿನಲ್ಲಿ ಇದೂವರೆಗೂ ಕೇಳಿರದ, ಕಂಡಿರದ ಹಾಗೂ ತಿಳಿಯಲಾಗದಿದ್ದ ಅನೇಕ ಘಟನೆಗಳು ಕಥೆಗಳು ಒಂದೊಂದಾಗಿ ಕೇಳಿ ಬರುತ್ತಿವೆ.


ಅನೇಕ ಐತಿಹಾಸಿಕ ಚಿತ್ರಗಳಿಗೆ ಧ್ವನಿ ನೀಡಿ ಖ್ಯಾತರಾಗಿರುವ ಮೂಲತಃ ನಟರೂ ಆಗಿರುವ ಶರದ್ ಕೇಳ್ಕರ್ ಅವರು ಬಾಹುಬಲಿ ನಾಯಕ ಪ್ರಭಾಸ್‌ ಅವರಿಗೆ ಕಂಠದಾನ ಮಾಡಿದ್ದರು. ಈ ಕುರಿತಂತೆ ಅವರು ತಮ್ಮ ಸಂತಸವನ್ನು ಈಗ ಹಂಚಿಕೊಂಡಿದ್ದಾರೆ.

ತನ್ನ ಬಲವಾದ ಧ್ವನಿಗಾಗಿ ಹೆಸರಾಗಿರುವ ಶರದ್ , ಐಕಾನಿಕ್ ‘ಬಾಹುಬಲಿ’ ಸರಣಿಯನ್ನು ಹಿಂದಿ ಭಾಷೆಗೆ ಡಬ್‌ ಮಾಡುವಾಗ ಚಲನಚಿತ್ರ ನಿರ್ಮಾಪಕ ಎಸ್‌.ಎಸ್. ರಾಜಮೌಳಿ ಅವರು ತಮ್ಮ ಆಯ್ಕೆ ಬಗ್ಗೆ ಮೊದಲು ಸಂದೇಹ ಪಟ್ಟಿದ್ದರು. ‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಎರಡರಲ್ಲೂ ರೆಬೆಲ್ ಸ್ಟಾರ್ ಪ್ರಭಾಸ್ ಮೂಲತಃ ಚಿತ್ರಿಸಿದ ಅಮರೇಂದ್ರ ಬಾಹುಬಲಿ ಮತ್ತು ಮಹೇಂದ್ರ ಬಾಹುಬಲಿ ಪಾತ್ರಗಳಿಗೆ ಧ್ವನಿ ನೀಡಿದ ಕೇಳ್ಕರ್‌ ಅವರು ಎಪಿಕ್ ಸಾಹಸದ ಡಬ್ಬಿಂಗ್ ಕಾರ್ಯದ ಬಗ್ಗೆ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಅಭಿನಯದ 2016 ರ ತೆಲುಗು ಆಕ್ಷನ್- ಕಾಮಿಡಿ ಚಿತ್ರ ‘ಸರ್ದಾರ್ ಗಬ್ಬರ್ ಸಿಂಗ್’ ನಲ್ಲಿ ಕೇಳ್ಕರ್ ತೊಡಗಿಸಿಕೊಂಡಿದ್ದರು. ಈ ವೇಳೆ ಸಿಬ್ಬಂದಿಯೊಬ್ಬ ಅವರ ಗಾಯನವನ್ನು ಗುರುತಿಸಿ ರಾಜಮೌಳಿ ಅವರಿಗೆ ಇವರ ಹೆಸರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.


ನನಗೆ ‘ಬಾಹುಬಲಿ’ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ. ಆದರೆ ನಾನು ರಾಜಮೌಳಿ ಅವರ ಹಿಂದಿನ ಚಿತ್ರಗಳಾದ ‘ಮಗಧೀರ’ ನೋಡಿದ್ದೇನೆ. ಒಬ್ಬ ನಟನಾಗಿ ನಾನು ಈ ಮಾಸ್ಟರ್‌ಪೀಸ್‌ನ ಸೃಷ್ಟಿಕರ್ತನನ್ನು ಭೇಟಿಯಾಗಲು ಬಯಸಿದ್ದೆ. ಹಾಗಾಗಿ ನಾನು ನನ್ನ ಧ್ವನಿ ಪರೀಕ್ಷೆಯನ್ನು ಮಾಡಿದೆ. ಟೇಪ್ ನೊಂದಿಗೆ ಮರುದಿನ ಅವರನ್ನು ಸ್ಟುಡಿಯೋದಲ್ಲಿ ಭೇಟಿಯಾದೆ. ನೀವು ಬಾಹುಬಲಿಗಾಗಿ ಡಬ್ಬಿಂಗ್ ಮಾಡುತ್ತಿದ್ದೀರಿ ಎಂದು ಅವರು ಹೇಳಿದಾಗ ನಂಬಲು ಅಸಾಧ್ಯವಾಯಿತು ಎಂದಿದ್ದಾರೆ ಕೇಳ್ಕರ್.

ಈ ಪಾತ್ರವು ಕೇಳ್ಕರ್ ಅವರ ವೃತ್ತಿಜೀವನವನ್ನು ಗಮನಾರ್ಹವಾಗಿ ಹೆಚ್ಚಿಸಿತು. ಮಾತ್ರವಲ್ಲದೆ ಅವರನ್ನು ಅಪಾರ ಅಭಿಮಾನಿಗಳ ಗುಂಪಿಗೆ ಪ್ರೀತಿಸುವಂತೆ ಮಾಡಿತು, ಅವರಿಗೆ “ಬಾಹುಬಲಿಯ ಧ್ವನಿ” ಮತ್ತು ಪ್ರೀತಿಯಿಂದ “ಭಾರತದ ಧ್ವನಿ” ಎಂಬ ಬಿರುದು ಸಿಗುವಂತಾಯಿತು. ಮೊದಲು ನಾನೊಬ್ಬ ನಟ. ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದರೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಇನ್ನು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ ಶರದ್.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್. ರಾಜಮೌಳಿ- ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿದ್ದು, ಜೀವನ್ ಜೆ. ಕಾಂಗ್, ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಎಂದು ಶರದ್ ಹೇಳಿದ್ದಾರೆ.


ಅನಿಮೇಟೆಡ್ ಸರಣಿ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಹಿಂದಿ ಭಾಷೆಗೆ ಭಾಷಾಂತರವಾಗಿದ್ದು, ಕೇಲ್ಕರ್ ಧ್ವನಿ ನೀಡಿದ್ದಾರೆ. ಈ ಸರಣಿಯು ಮೇ 17ರಿಂದ ಡಿಸ್ನಿ ಪ್ಲಸ್‌ನಲ್ಲಿ ಪ್ರದರ್ಶನ ಕಾಣುತ್ತಿದೆ.

Continue Reading

ದೇಶ

Chemical Factory: ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ನಾಲ್ವರ ಸಾವು, 25 ಮಂದಿಗೆ ಗಾಯ

Chemical Factory: ಥಾಣೆ ಜಿಲ್ಲೆಯಲ್ಲಿರುವ ಅಮುದನ್‌ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಕೆಲವೇ ನಿಮಿಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಅಗ್ನಿ ನಂದಿಸುತ್ತಿದ್ದಾರೆ. ಇನ್ನು ಎನ್‌ಡಿಆರ್‌ಎಫ್‌ ಸೇರಿ ಹಲವು ರಕ್ಷಣಾ ಸಿಬ್ಬಂದಿಯನ್ನು ಜನರ ರಕ್ಷಣೆಗೆ ನಿಯೋಜಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ

VISTARANEWS.COM


on

Chemical Factory
Koo

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ (Chemical Factory) ಭೀಕರ ಸ್ಫೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ (Rescue Operation) ಮುಂದುವರಿದಿದೆ ಎಂದು ತಿಳಿದುಬಂದಿದೆ. ದೊಂಬಿವಿಲಿ ಬಳಿಯ ಎಂಐಡಿಸಿ ಫೇಸ್‌ 2ರಲ್ಲಿರುವ ಕಾರ್ಖಾನೆಯಲ್ಲಿ ಕಾರ್ಮಿಕರು ಗುರುವಾರ (ಮೇ 23) ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಅಮುದನ್‌ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಕೆಲವೇ ನಿಮಿಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಅಗ್ನಿ ನಂದಿಸುತ್ತಿದ್ದಾರೆ. ಇನ್ನು ಎನ್‌ಡಿಆರ್‌ಎಫ್‌ ಸೇರಿ ಹಲವು ರಕ್ಷಣಾ ಸಿಬ್ಬಂದಿಯನ್ನು ಜನರ ರಕ್ಷಣೆಗೆ ನಿಯೋಜಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ ಎಂಬುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ತಿಂಗಳ ಹಿಂದಷ್ಟೇ ತಮಿಳುನಾಡಿನ ವಿರುದ್ಧುನಗರ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿ 11 ಜನ ಮೃತಪಟ್ಟಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿರುದ್ಧುನಗರ ಜಿಲ್ಲೆಯ ವೆಂಬಕೊಟ್ಟಾಯಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ (ಫೆಬ್ರವರಿ 17) ಮಧ್ಯಾಹ್ನ ಭೀಕರ ಸ್ಫೋಟ ಸಂಭವಿಸಿತ್ತು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರೂ ಅಷ್ಟೊತ್ತಿಗಾಗಲೇ ಹಲವು ಜನ ಮೃತಪಟ್ಟಿದ್ದರು ಎಂದು ತಿಳಿದುಬಂದಿತ್ತು.

ಉತ್ತರ ಪ್ರದೇಶದ ಕೌಶಂಭಿ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲೂ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದರು. ದುರಂತದಲ್ಲಿ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಸ್ಫೋಟ ಸಂಭವಿಸುತ್ತಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಪ್ರಯತ್ನ ಮಾಡಿದರೂ ಜನರನ್ನು ಸಾವಿನ ದವಡೆಯಿಂದ ಪಾರು ಮಾಡಲು ಆಗಿರಲಿಲ್ಲ. ನೂರಾರು ಮಂದಿ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗಲೇ ಸ್ಫೋಟ ಸಂಭವಿಸಿತ್ತು.

ಇದನ್ನೂ ಓದಿ: Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

Continue Reading

ದೇಶ

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ಪೊಲೀಸರಿಂದ ಲಾಠಿಚಾರ್ಜ್‌

West Bengal Violence: ಗುರುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ರೋತಿಬಾಲಾ ಅರಿ ಎಂಬ ಮಹಿಳೆಯ ಮೃತಪಟ್ಟಿದ್ದಾಳೆ. ಉಳಿದ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಘಟನೆ ಖಂಡಿಸಿ ಬಿಜೆಪಿ ನಂದಿಗ್ರಾಮದಲ್ಲಿ 12ಗಂಟೆಗಳ ಕಾಲ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ರಸ್ತೆ ತಡೆದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.

VISTARANEWS.COM


on

West Bengal Violence
Koo

ಪಶ್ಚಿಮ ಬಂಗಾಳ: ಲೋಕಸಭೆ ಚುನಾವಣೆ (Lok Sabha Election 2024)ಯ ಆರನೇ ಹಂತದ ಮತದಾನಕ್ಕೂ ಮುನ್ನವೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ(West Bengal Violence) ನಡೆದಿದೆ. ನಂದಿಗ್ರಾಮ ಜಿಲ್ಲೆಯಲ್ಲಿ ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತೆಯೊಬ್ಬರ ಹತ್ಯೆ ನಡೆದಿದ್ದು, ಇದರಲ್ಲಿ ಟಿಎಂಸಿ(TMC) ಮುಖಂಡರದ್ದೇ ಕೈವಾಡ ಇದೆ ಎಂದು ಆರೋಪಿಸಿ ಬಿಜೆಪಿ(BJP) ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣ ತರಲು ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ.

ಗುರುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ರೋತಿಬಾಲಾ ಅರಿ ಎಂಬ ಮಹಿಳೆಯ ಮೃತಪಟ್ಟಿದ್ದಾಳೆ. ಉಳಿದ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಘಟನೆ ಖಂಡಿಸಿ ಬಿಜೆಪಿ ನಂದಿಗ್ರಾಮದಲ್ಲಿ 12ಗಂಟೆಗಳ ಕಾಲ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ರಸ್ತೆ ತಡೆದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಜಿಲ್ಲೆಯ ಸೋನಾಚೂರ ಪ್ರದೇಶದಲ್ಲಿ ಹಿಂಸಾಚಾರದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶದಲ್ಲಿ ಸಿಆರ್‌ಪಿಎಫ್‌ ಪೊಲೀಸರನ್ನು ನಿಯೋಜಿಸಲಾಗಿದೆ.

ಬಿಜೆಪಿ ಆರೋಪ ಏನು?

ಚುನಾವಣೆ ಸಂದರ್ಭದಲ್ಲಿ ಮಹಿಳಾ ಕಾರ್ಯಕರ್ತರು ಸೇರದಂತೆ ಅನೇಕ ಬಿಜೆಪಿಗರು ಸೋನಾಚೂರ ಪ್ರದೇಶದಲ್ಲಿ ಸಮಾಜದ್ರೋಹಿ ಚಟುವಟಿಕೆ ವಿರುದ್ಧ ನಿಗಾ ವಹಿಸುವ ನಿಟ್ಟಿನಲ್ಲಿ ಗಸ್ತು ತಿರುಗುತ್ತಿದ್ದರು. ಈ ಸಂದರ್ಭದಲ್ಲಿ ಮೋಟರ್‌ ಬೈಕ್‌ನಲ್ಲಿ ಬಂದ ಕೆಲವು ಟಿಎಂಸಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋತಿಬಾಲಾ ಎಂಬ ಕಾರ್ಯಕರ್ತೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಆಕೆಯ ಮಗ ಸೇರಿದಂತೆ ಅನೇಕರಿಗೆ ಗಂಭೀರ ಗಾಯಗಳಾಗಿವೆ ಎಂದು ಬಿಜೆಪಿ ಆರೋಪಿಸಿದೆ.

ಘಟನೆ ಬಗ್ಗೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ ಪ್ರತಿಕ್ರಿಯಿಸಿದ್ದು, ಕಳೆದ ವಾರ ಹಲ್ದೀಯಾದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ತಮ್ಮ ಸೋಲಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಘೋಷಣೆ ಹೊರಡಿಸಿದ್ದರು. ಇದೀಗ ಅದನ್ನು ಮಾಡಿ ತೋರಿಸಿದ್ದಾರೆ ಎಂದು ಎಕ್ಸ್‌ ಮೂಲಕ ಕಿಡಿ ಕಾರಿದ್ದಾರೆ. ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗ ವರದಿ ಕೇಳಿದೆ

ಇದನ್ನೂ ಓದಿ:Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Continue Reading
Advertisement
IPL 2024
ಪ್ರಮುಖ ಸುದ್ದಿ3 mins ago

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

IPL 2024
ಕ್ರೀಡೆ24 mins ago

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

Golden Star Ganesh Krishnam Pranaya Sakhi movie first song release on May 25 in Mysore
ಸಿನಿಮಾ32 mins ago

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Prashant Kishor
ದೇಶ51 mins ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Virat Kohli
ಕ್ರೀಡೆ52 mins ago

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ2 hours ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ2 hours ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ2 hours ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ2 hours ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ2 hours ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ15 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌