ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ | ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ - Vistara News

ಕೋರ್ಟ್

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ | ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದಲ್ಲಿ ವಿಚಾರಣೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನಿಗದಿ ಮಾಡಿದೆ. ಇಂದು (ನ.30) ವಿಚಾರಣೆ ನಡೆಯಲಿದೆ.

VISTARANEWS.COM


on

Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದಲ್ಲಿ ವಿಚಾರಣೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನಿಗದಿ ಮಾಡಿದೆ. ಇಂದು (ನ.30) ವಿಚಾರಣೆ ನಡೆಯಲಿದೆ.

ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠದ ಮುಂದೆ ವಿಚಾರಣೆ ನಡೆಯಲಿದ್ದು, ಪೀಠದಲ್ಲಿ ನ್ಯಾಯಮೂರ್ತಿ ಕೆ.ಎಂ ಜೋಸೆಫ್, ವಿ. ರಾಮ ಸುಬ್ರಹ್ಮಣಿಯನ್, ಬಿ.ವಿ. ನಾಗರತ್ನ ಇರಲಿದ್ದಾರೆ.

ಏನಿದು ಅರ್ಜಿ?

1956ರ ರಾಜ್ಯ ಪುನರ್ವಿಂಗಡನಾ ಕಾಯ್ದೆಯನ್ನೇ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು 2004ರಲ್ಲಿ ಅರ್ಜಿಯನ್ನು ಸಲ್ಲಿಸಿತ್ತು. ಈ ಗಡಿ ವಿವಾದದ ಅರ್ಜಿ ವಿಚಾರಣೆ(Maintainability)ಯನ್ನು ಸುಪ್ರೀಂ ಕೋರ್ಟ್ ನಡೆಸಬೇಕೇ ಅಥವಾ ಬೇಡವೇ ಎಂಬುದರ ಕುರಿತೇ ಇತ್ಯರ್ಥವಾಗಬೇಕಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿದ್ದು, ಕಾನೂನು ತಂಡಗಳನ್ನು ಸಿದ್ಧಪಡಿಸಲಾಗಿತ್ತು. ಈ ಹಿಂದೆ ಅರ್ಜಿ ವಿಚಾರಣೆಯನ್ನು ನ.23 ನಿಗದಿಪಡಿಸಲಾಗಿದ್ದು, ಅದನ್ನು ಮತ್ತೆ ಮುಂದೂಡಲಾಗಿತ್ತು.

ಕರ್ನಾಟಕದ ಪರ ಸಮರ್ಥ ವಾದ: ಸಿಎಂ

ಕೋರ್ಟ್‌ನಲ್ಲಿ ಮಹಾರಾಷ್ಟ್ರದ ಈ ತಕರಾರು ಸಂಬಂಧಿಸಿ ಕರ್ನಾಟಕದ ಪರ ಸಮರ್ಥ ವಾದ ಮಂಡನೆ ಮಾಡಲಿದ್ದೇವೆ ಎಂದು ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಭೇಟಿ ಮಾಡಿದ ಬಳಿಕ ಸಿಎಂ ಪ್ರತಿಕ್ರಿಯೆ ನೀಡಿದರು. ಮುಕುಲ್ ರೋಹಟಗಿ ನಾವು ನೇಮಕ ಮಾಡಿಕೊಂಡ ಪ್ಯಾನೆಲ್‌ನಲ್ಲಿ ತುಂಬಾ ಸೀನಿಯರ್ ಅಡ್ವೋಕೇಟ್. ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲವನ್ನು ಸಹ ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ಕೋರ್ಟ್‌ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದಿದ್ದಾರೆ.

ಹಿಂದಿನ ಸಿಜೆಐ ದೀಪಕ್ ಮಿಶ್ರ ಅವರು ಇದರ ಮೇಂಟೇನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ಧರಾಗಿದ್ದೇವೆ. ನಮಗೆ ಭರವಸೆ ಇದೆ. ಮಹಾರಾಷ್ಟ್ರದ ನಾಯಕರುಗಳು, ಈ ವಿಚಾರದಲ್ಲಿ ನಾವು ಗಂಭೀರವಾಗಿ ಇದ್ದೇವೆ ಎಂದು ತೋರಿಸಿಕೊಳ್ಳಲು ಆ ರೀತಿ ಮಾಡ್ತಿದ್ದಾರೆ ಅಷ್ಟೇ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ | Border Dispute | ಸುಪ್ರೀಂನಲ್ಲಿ ಏನೇ ತೀರ್ಪು ಬರಲಿ, ಸುರಕ್ಷತೆ ಆದ್ಯತೆಯಾಗಲಿ; ಕರ್ನಾಟಕ- ಮಹಾರಾಷ್ಟ್ರ ಪೊಲೀಸರ ತೀರ್ಮಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Karnataka High Court: ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

VISTARANEWS.COM


on

karnataka high court
Koo

ಬೆಂಗಳೂರು: ʼಇಡೀ ಜಗತ್ತು ಯುಪಿಐ (UPI) ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿದೆ. ದಿನಸಿ ಅಂಗಡಿಯವರಲ್ಲೂ ಅದು ಇದೆ. ಆದರೆ ನಿಮ್ಮಲ್ಲಿ ಇಲ್ಲ ಎಂಬುದು ವಿಚಿತ್ರವಾದ ಸಂಗತಿʼ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ- BESCOM) ಅನ್ನು ಕರ್ನಾಟಕ ಹೈಕೋರ್ಟ್ (Karnataka High Court) ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 47(5)ರ ಪ್ರಕಾರ ಪೂರ್ವಪಾವತಿ ಮೀಟರ್ ಒದಗಿಸುವಂತೆ ಮತ್ತು ಯುಪಿಐ ಮೋಡ್‌ನಲ್ಲಿ ಪಾವತಿಯನ್ನು ಸ್ವೀಕರಿಸಲು ಬೆಸ್ಕಾಂಗೆ ನಿರ್ದೇಶನ ನೀಡಬೇಕೆಂದು ಕೋರಿ ಹಿರಿಯ ನಾಗರಿಕರಾದ ಸೀತಾಲಕ್ಷ್ಮಿ ಎಂಬವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಈ ನಿರ್ದೇಶನ ನೀಡಲಾಗಿದೆ.

ಇಡೀ ಜಗತ್ತು ಯುಪಿಐ ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿರುವ ಈ ಯುಗದಲ್ಲಿ ಬೆಸ್ಕಾಂ ಯುಪಿಐ ಮೂಲಕ ಹಣವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಚಿತ್ರವಾಗಿದೆ. ಯಾರಾದರೂ ನಿಮಗೆ ಹಣವನ್ನು ಪಾವತಿಸಲು ಬಯಸಿದರೆ, ಅದು ಈಗ ಸ್ವೀಕರಿಸಲ್ಪಟ್ಟ ವಿಧಾನವಾಗಿದ್ದರೂ, ನೀವು ಅದನ್ನು ಅಳವಡಿಸಿಕೊಳ್ಳಬೇಕಿದ್ದರೆ ಯಾರಾದರೂ ನ್ಯಾಯಾಲಯಕ್ಕೆ ಬಂದು ರಿಟ್ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾರೋ ನಿಮಗೆ ಹಣವನ್ನು ನೀಡಲು ಬಯಸುತ್ತಾರೆ. ಎಲ್ಲರೂ ಡಿಜಿಟಲ್‌ (Digital) ಆಗಿರಿ ಎಂದು ಸರಕಾರ ಘೋಷಿಸುತ್ತದೆ. ಆದರೆ ನೀವು ಕರೆನ್ಸಿ ನೋಟುಗಳನ್ನು ಸಂಗ್ರಹಿಸುವ ಕಾಲಕ್ಕೆ ಹಿಂತಿರುಗಲು ಬಯಸುತ್ತಿದ್ದೀರಿ ಎಂದು ಹೈಕೋರ್ಟ್‌ ಪೀಠ ಬೆಸ್ಕಾಂನ ಕಿವಿ ಹಿಂಡಿತು.

ಪ್ರತಿಯೊಬ್ಬ ದಿನಸಿ ವ್ಯಾಪಾರಿಯೂ ಈಗ ಅವನ ಮುಂದೆ ಯುಪಿಐ ಸ್ಕ್ಯಾನರ್ ಅನ್ನು ಹೊಂದಿದ್ದಾನೆ. ಆದರೆ ನೀವು ಇನ್ನೂ ಅರ್ಜಿದಾರರಿಗೆ ಕ್ಯುಆರ್ ಕೋಡ್ (‌QR Code) ನೀಡಲು ಮೀನಮೇಷ ಎಣಿಸುತ್ತಿದ್ದೀರಿ. ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ನ್ಯಾಯಾಲಯವೇ ಅತ್ಯಂತ ನಿಧಾನವಾಗಿತ್ತು; ನೀವು ನಮಗಿಂತಲೂ ಹಿಂದುಳಿದಿದ್ದೀರಿ ಎಂದು ಕೂಡ ಪೀಠ ಹೇಳಿದೆ.

ವಿಚಾರಣೆಯ ವೇಳೆ ಬೆಸ್ಕಾಂ ಪರ ವಕೀಲರು, ಬೆಸ್ಕಾಂ ಕೌಂಟರ್‌ಗಳಲ್ಲಿ ಯುಪಿಐ ಪಾವತಿ ಮಾಡಲು ಅವಕಾಶವಿಲ್ಲ. ನಗದು ಪಾವತಿಯನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದರು. ಆದರೆ ಗ್ರಾಹಕರು ಬೆಸ್ಕಾಂ ಅಪ್ಲಿಕೇಶನ್ ಮೂಲಕ ಆನ್‌ಲೈನ್/ಯುಪಿಐ ಪಾವತಿಗಳನ್ನು ಮಾಡಬಹುದು. ಹಿರಿಯ ನಾಗರಿಕರು ಮತ್ತು ವಯಸ್ಸಾದವರು ಕೌಂಟರ್‌ಗೆ ಬರುವ ಅಗತ್ಯವಿಲ್ಲದೆ ಮನೆಯಲ್ಲಿ ಕುಳಿತು ಅಪ್ಲಿಕೇಶನ್‌ನಲ್ಲಿ ಇದನ್ನು ಮಾಡಬಹುದು ಎಂದು ಹೇಳಿದರು.

ಅಕ್ಟೋಬರ್ 25, 2023ರಂದು, ಅರ್ಜಿದಾರರು ಮನೆಬಾಡಿಗೆ ಉದ್ದೇಶಗಳಿಂದ ಉಂಟಾಗುವ ಭಾರೀ ಶುಲ್ಕವನ್ನು ಕಟ್ಟಲು ಬೆಸ್ಕಾಂ ಹೊಸಕೋಟೆ ಶಾಖೆಯ ಕ್ಯಾಶ್ ಕೌಂಟರ್‌ಗೆ ಭೇಟಿ ನೀಡಿದ್ದರು. ಯುಪಿಐ ಮೂಲಕ ಪಾವತಿ ಲಭ್ಯವಿಲ್ಲದ ಕಾರಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಅರ್ಜಿದಾರರಿಗೆ ಡಿಡಿ ಮೂಲಕ ಪಾವತಿಸಲು ಸೂಚಿಸಿದ್ದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶ್ರೀಧರ್ ಪ್ರಭು ಅವರು, ವಯಸ್ಸಾದ ಮಹಿಳೆ ದೈನಂದಿನ ಕೆಲಸಗಳನ್ನು ನಿರ್ವಹಿಸುವಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಪಡೆಯಲು ಸರದಿಯಲ್ಲಿ ನಿಂತು ಕಷ್ಟಪಟ್ಟಿದ್ದಾರೆ. ನಂತರ ಪಾವತಿ ಮಾಡಿದ್ದಾರೆ. ಹೀಗಾಗಿ ಅವರು ತಮ್ಮ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಐಡೆಂಟಿಟಿ (ಯುಪಿಐಡಿ) ಅನ್ನು ಒದಗಿಸುವ ಮೂಲಕ ಪ್ರಕ್ರಿಯೆಯನ್ನು ಸುಲಭಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Continue Reading

ದೇಶ

Supreme Court Argument : ಸೆಕ್ಯುರಿಟಿಯನ್ನು ಕರೆಸಿ ಹೊರಹಾಕಿಸುವೆ; ಲಾಯರ್ ವಿರುದ್ಧ ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಗರಂ

supreme court argument : ಹೂಡಾ ಅವರು ತಮ್ಮ ವಾದ ಮಾಡುತ್ತಿರುವ ನಡುವೆಯೇ ಮಧ್ಯಪ್ರವೇಶಿಸಿದ ನೆಡುಂಪರಾ ನನಗೂ ಮಂಡಿಸುವುದಕ್ಕೆ ಒಂದು ವಿಷಯವಿದೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಅವರು (ಹೂಡಾ) ವಾದಿಸುತ್ತಿದ್ದಾರೆ. ನೀವು ಅವನಿಗೆ ಅಡ್ಡಿಪಡಿಸಬಾರದು ಎಂದು ಹೇಳಿದರು. ಇದಕ್ಕೆ ಸವಾಲು ಹಾಕಿದ ನೆಡಂಪೆರಾ ಅವರು “ನಾನು ಇಲ್ಲಿ ಹಿರಿಯವ” ಎಂದು ಹೇಳಿದರು.

VISTARANEWS.COM


on

supreme court argument
Koo

ಬೆಂಗಳೂರು: ಸುಪ್ರೀಂ ಕೋರ್ಟ್​​ನಲ್ಲಿ ಜುಲೈ 23 ರಂದು ನೀಟ್-ಯುಜಿ ಕುರಿತ ಅರ್ಜಿಗಳ ವಿಚಾರಣೆಯ ವೇಳೆ (Supreme Court Argument) ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ ಅವರು ಹಿರಿಯ ವಕೀಲ ಮ್ಯಾಥ್ಯೂಸ್ ನೆಡುಂಪರಾ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಪ್ರಕರಣದಲ್ಲಿ ಅರ್ಜಿದಾರರಲ್ಲಿ ಒಬ್ಬರನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲರಾದ ನರೇಂದ್ರ ಹೂಡಾ ಅವರು ತಮ್ಮ ವಾದಗಳನ್ನು ಮಂಡಿಸುತ್ತಿದ್ದಾಗ ನೆಡುಂಪರಾ ಮಧ್ಯ ಪ್ರವೇಶಿಸಿದ್ದಕ್ಕೆ ಅವರು ಸಿಟ್ಟಾದರು. ಅಲ್ಲದೆ, ಭದ್ರತಾ ಸಿಬ್ಬಂದಿಯನ್ನು ಕರೆದು ಕೋರ್ಟ್​ನಿಂದ ಹೊರಕ್ಕೆ ಹಾಕುವೆ ಎಂದು ಎಚ್ಚರಿಕೆ ನೀಡಿದರು.

ಹೂಡಾ ಅವರು ತಮ್ಮ ವಾದ ಮಾಡುತ್ತಿರುವ ನಡುವೆಯೇ ಮಧ್ಯಪ್ರವೇಶಿಸಿದ ನೆಡುಂಪರಾ ನನಗೂ ಮಂಡಿಸುವುದಕ್ಕೆ ಒಂದು ವಿಷಯವಿದೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಅವರು (ಹೂಡಾ) ವಾದಿಸುತ್ತಿದ್ದಾರೆ. ನೀವು ಅವನಿಗೆ ಅಡ್ಡಿಪಡಿಸಬಾರದು ಎಂದು ಹೇಳಿದರು. ಇದಕ್ಕೆ ಸವಾಲು ಹಾಕಿದ ನೆಡಂಪೆರಾ ಅವರು “ನಾನು ಇಲ್ಲಿ ಹಿರಿಯವ” ಎಂದು ಹೇಳಿದರು. ಅವರ ಮಾತು ಸಿಜೆಐ ಅವರನ್ನು ಕೆರಳಿಸಿತು. ಅವರು ನೆಡುಂಪರಾಗೆ ತಕ್ಷಣವೇ ಎಚ್ಚರಿಕೆ ನೀಡಿದರು.

ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ನೀವು ಕೋರ್ಟ್​ನ ಗ್ಯಾಲರಿ ಜತೆ ಮಾತನಾಡುತ್ತಿಲ್ಲ. ನೀವು ನನ್ನ ಮಾತನ್ನು ಕೇಳಬೇಕು. ನಾನು ಈ ನ್ಯಾಯಾಲಯದ ಉಸ್ತುವಾರಿ. ತಕ್ಷಣವೇ ಸೆಕ್ಯೂರಿಟಿಯನ್ನು ಕರೆದು ನಿಮ್ಮ ಹೊರ ಹಾಕಬೇಕಾಗುತ್ತದೆ ಎಂದು ಹೇಳಿದರು. ಈ ವೇಳೆ ನೆಡುಂಪರಾ, ಇದನ್ನು ನೀವು ಹೇಳುವ ಅಗತ್ಯವಿಲ್ಲ ಹೇಳಿ ಹೊರಡಲು ಅನುವಾದರು.

ಈ ವೇಳೆ ಮುಖ್ಯ ನ್ಯಾಯಮೂರ್ತಿ, ನೀವು ಅದನ್ನು ಹೇಳಬೇಕಾಗಿಲ್ಲ. ನೀವಿನ್ನು ಹೋಗಬಹುದು. ನಾನು ಕಳೆದ 24 ವರ್ಷಗಳಿಂದ ನ್ಯಾಯಾಂಗ ವ್ಯವಸ್ಥೆಯನ್ನು ನೋಡಿದ್ದೇನೆ. ಈ ನ್ಯಾಯಾಲಯದಲ್ಲಿ ವಕೀಲರ ಕಾರ್ಯವಿಧಾನವನ್ನು ನನಗೆ ನಿರ್ದೇಶಿಸಲು ನಾನು ಅನುಮತಿ ಕೊಡುವುದಿಲ್ಲ ಎಂದು ಹೇಳಿದರು. ಈ ವೇಳೆ ನೆಡುಂಪರಾ ” ಈ ನ್ಯಾಯಾಲಯವನ್ನು 1979 ರಿಂದ ನೋಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Union Budget 2024 : ಹೂಡಿಕೆಗಳನ್ನು ಉತ್ತೇಜಿಸಲು ‘ಏಂಜಲ್ ಟ್ಯಾಕ್ಸ್’ ರದ್ದು ಮಾಡಿದ ಕೇಂದ್ರ ಸರ್ಕಾರ

ಈ ವೇಳೆ ಮುಖ್ಯ ನ್ಯಾಯಮೂರ್ತಿ ನೆಡುಂಪರಾ ಅವರಿಗೆ. “ದಯವಿಟ್ಟು ಸುಮ್ಮನಿರಿ. ಅಥವಾ ಕುಳಿತುಕೊಳ್ಳಿ. ನೀವು ಹೊರಡಲು ಬಯಸುತ್ತೀರಿ ಎಂದಾದರೆ ಹೋಗಬಹುದು. ಅದು ನಿಮ್ಮ ಆಯ್ಕೆ. ನೀವು ವಿಚಾರಣೆ ಮಧ್ಯಪ್ರವೇಶಿಸಬೇಕಾಗಿಲ್ಲ” ಎಂದು ಸಿಜೆಐ ಹೇಳಿದರು.

ನಾನೇ ನಿಮಗೆ ಕ್ಷಮೆ ನೀಡುತ್ತಿದ್ದೇನೆ ಎಂದ ನೆಡುಂಪರಾ

ಅಲ್ಲಿಗೂ ಸುಮ್ಮನಾಗದ ಮ್ಯಾಥ್ಯೂಸ್ ನೆಡುಂಪರಾ, ಬಳಿಕ “ನಾನು ಒಂದು ವಾಕ್ಯವನ್ನು ಹೇಳುವ ಮೂಲಕ ಮುಕ್ತಾಯಗೊಳಿಸುತ್ತೇನೆ. ನನಗೆ ಮಾಡಿದ ಎಲ್ಲಾ ಅವಮಾನಕ್ಕಾಗಿ ನಾನು ನ್ಯಾಯಾಂಗದ ಪ್ರಭುತ್ವವನ್ನು ಕ್ಷಮಿಸುತ್ತಿದ್ದೇನೆ. ಏಕೆಂದರೆ ಅವರು ಏನು ಮಾಡುತ್ತಿದ್ದಾರೆಂದು ನಿಮಗೆ ತಿಳಿದಿಲ್ಲ. ನನ್ನ ಮನಸ್ಸಿನಲ್ಲಿ ಏನೂ ಇಲ್ಲ, ಪ್ರಭುತ್ವದ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಹೇಳಿ ಹೊರಟರು.

ವಿಚಾರಣೆಯಲ್ಲಿ ಎನ್​ಟಿಎಯನ್ನು ಪ್ರತಿನಿಧಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನೆಡುಂಪರಾ ಅವರ ನಡವಳಿಕೆಯನ್ನು ಅಗೌರವ ಎಂದು ಕರೆದಿದ್ದಾರೆ.

ಶಿಕ್ಷೆಗೆ ಒಳಗಾಗಿದ್ದ ನೆಡುಂಪಾರಾ?

2019ರಲ್ಲಿ, ಸುಪ್ರೀಂ ಕೋರ್ಟ್ ನೆಡುಂಪರಾ ಅವರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಘೋಷಿಸಿ. ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಆ ವೇಳೆ ಅವರು ಆಗಿನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಅವರ ತಂದೆ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ಹೆಸರನ್ನು ಅನಗತ್ಯವಾಗಿ ಕೋರ್ಟ್​ನಲ್ಲಿ ಉಲ್ಲೇಖಿಸಿದ್ದರು. ಬಳಿಕ ನೆಡುಂಪರಾ ಅವರು ಬೇಷರತ್​​ ಕ್ಷಮೆಯಾಚನೆ ಕೋರಿದ ಬಳಿಕ ಶಿಕ್ಷೆಯನ್ನು ಅಮಾನತುಗೊಳಿಸಿತ್ತು.

Continue Reading

ಪ್ರಮುಖ ಸುದ್ದಿ

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Pennar River Dispute: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್‌, 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

VISTARANEWS.COM


on

Pennar River Dispute
Koo

ಬೆಂಗಳೂರು: ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ (Pennar River Dispute) ಸಂಬಂಧಿಸಿ 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನೀರು ಹಂಚಿಕೆ ಸಂಬಂಧ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ನ್ಯಾ.ಹಿಮಾ ಕೊಯ್ಲಿ ನೇತೃತ್ವದ ಪೀಠ, ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ನಿರ್ದೇಶನ ನೀಡಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಅಂತಾರಾಜ್ಯ ವಿವಾದವಾಗಿದ್ದರಿಂದ ನ್ಯಾಯಾಧೀಕರಣ ಸ್ಥಾಪನೆಗೆ ಆಗ್ರಹಿಸಿತ್ತು. ಆದರೆ ಮಾತುಕತೆಯಲ್ಲಿ ಇತ್ಯರ್ಥ ಮಾಡಿಕೊಳ್ಳುವ ಇರಾದೆಯನ್ನು ಕರ್ನಾಟಕ ವ್ಯಕ್ತಪಡಿಸಿತ್ತು. ಹಾಗಾಗಿ ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸಲು 8 ವಾರಗಳಲ್ಲಿ ವರದಿ ನೀಡುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

2022ರ ಡಿಸೆಂಬರ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್‌ ನದಿ (ದಕ್ಷಿಣ ಪಿನಾಕಿನಿ) ನೀರು ಬಳಕೆ ವಿವಾದ ಬಗೆಹರಿಸಲು ಮೂರು ತಿಂಗಳೊಳಗೆ ನ್ಯಾಯಾಧಿಕರಣ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಇದರಿಂದಾಗಿ, ಮಾತುಕತೆ ಮೂಲಕ ಜಲವಿವಾದ ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಕರ್ನಾಟಕಕ್ಕೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ದಕ್ಷಿಣ ಪಿನಾಕಿನಿಯ ಉಪನದಿಯಾದ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಅಣೆಕಟ್ಟು ನಿರ್ಮಿಸಲು ಮುಂದಾಗಿದೆ. ಕೋಲಾರ, ಮಾಲೂರು, ಬಂಗಾರಪೇಟೆಯ ಹಲವು ಹಳ್ಳಿಗಳು ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಸುಮಾರು 240 ಕೋಟಿ ರೂ. ವೆಚ್ಚದ ಅಣೆಕಟ್ಟು ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಅನುಮತಿಯನ್ನೂ ಪಡೆದಿದೆ. ಆದರೆ, ಇದಕ್ಕೆ ತಮಿಳುನಾಡು ಸರ್ಕಾರ ತಕರಾರು ತೆಗೆದಿದ್ದು, ಸುಪ್ರೀಂ ಕೋರ್ಟ್‌ ಮೊರೆಹೋಗಿದೆ.

ತಮಿಳುನಾಡು ತಕರಾರು ಏನು?

ಪೆನ್ನಾರ್‌ ನದಿಯ ನೀರಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವುದು ಅಂತಾರಾಜ್ಯ ಜಲವಿವಾದ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂಬುದು ತಮಿಳುನಾಡಿನ ತಕರಾರಾಗಿದೆ. ಮಾರ್ಕಂಡೇಯ ನದಿಯು ಪೆನ್ನಾರ್‌ನ ಉಪನದಿಯಾದ ಕಾರಣ ಅಣೆಕಟ್ಟು ನಿರ್ಮಿಸಿದರೆ ನದಿ ನೀರಿನ ಹರಿವಿಗೆ ತೊಂದರೆಯಾಗುತ್ತದೆ. ತಮಿಳುನಾಡಿನ ಜನರು ಕೃಷಿ ಹಾಗೂ ಕುಡಿಯಲು ಪೆನ್ನಾರ್‌ ನದಿ ನೀರನ್ನು ಅವಲಂಬಿಸಿದ್ದಾರೆ. ಹಾಗಾಗಿ, ಅಣೆಕಟ್ಟು ನಿರ್ಮಿಸಲು ಅವಕಾಶ ನೀಡಬಾರದು ಎಂದು ತಕರಾರು ತೆಗೆದಿದೆ.

ಇದನ್ನೂ ಓದಿ | Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಕರ್ನಾಟಕದ ವಾದವೇನು?

ಅಣೆಕಟ್ಟು ನಿರ್ಮಾಣ ಯೋಜನೆ ವೈಜ್ಞಾನಿಕವಾಗಿದ್ದು, ಕೇಂದ್ರ ಜಲಶಕ್ತಿ ಸಚಿವಾಲಯವೇ ಅನುಮತಿ ನೀಡಿದೆ ಎಂದು ಕರ್ನಾಟಕ ವಾದ ಮಂಡಿಸಿದೆ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದು ಕರ್ನಾಟಕದ ಉದ್ದೇಶವಾಗಿತ್ತು. ಇದನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೂ ಮನವರಿಕೆ ಮಾಡಿತ್ತು. ನ್ಯಾಯಾಧಿಕರಣದ ರಚನೆಯು ಬಿಕ್ಕಟ್ಟು ಬಗೆಹರಿಸಲು ಸಮಯ ತೆಗೆದುಕೊಳ್ಳುವುದರಿಂದ ಮಾತುಕತೆಗೆ ಕರ್ನಾಟಕ ಆದ್ಯತೆ ನೀಡಿತ್ತು.

Continue Reading

ಪ್ರಮುಖ ಸುದ್ದಿ

DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

DK Shivakumar: ಸಿಬಿಐ ಎಫ್‌ಐಆರ್‌ ವಜಾ ಮಾಡಬೇಕು ಅಂತ ಕೇಳಿದ್ದೆವು. ಹೈಕೋರ್ಟ್‌ನಲ್ಲಿ ಮಾಡಲು ಆಗುವುದಿಲ್ಲ ಎಂದಿದ್ದರು. ಹೀಗಾಗಿ ಅಪೀಲ್ ಹಾಕಿದ್ದೆ. ಅಲ್ಲೂ ಏನೂ ಮಾಡಲು ಆಗುವುದಿಲ್ಲ ಎಂದು ನಿರ್ಣಯ ಬಂದಿದೆ. ಕೋರ್ಟ್ ಏನು ಹೇಳುತ್ತದೋ ಕೇಳೋಣ. ತನಿಖೆ ನಡೆಯಲಿ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದರು.

VISTARANEWS.COM


on

Kempambudi lake encroachment cleared soon says DCM DK Shivakumar
Koo

ಬೆಂಗಳೂರು: ಒಂದು ಸಲ ನಮ್ಮ ಸರಕಾರ ಪ್ರಕರಣವನ್ನು ಲೋಕಾಯುಕ್ತಕ್ಕೆ (Lokayukta) ಕೊಟ್ಟ ಮೇಲೆ ಸಿಬಿಐಯವರು ತನಿಖೆ (CBI Probe) ಮಾಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ (Supreme Court) ತೀರ್ಮಾನವನ್ನು ಒಪ್ಪಿಕೊಳ್ಳುತ್ತೇನೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಆರಂಭಿಸಿರುವ ತನಿಖೆಯನ್ನು ಕೈಬಿಡುವಂತೆ ಸೂಚಿಸಬೇಕು ಎಂದು ಡಿಕೆ ಶಿವಕುಮಾರ್ (DK Shivakumar) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

ಸಿಬಿಐ ಎಫ್‌ಐಆರ್‌ ವಜಾ ಮಾಡಬೇಕು ಅಂತ ಕೇಳಿದ್ದೆವು. ಹೈಕೋರ್ಟ್‌ನಲ್ಲಿ ಮಾಡಲು ಆಗುವುದಿಲ್ಲ ಎಂದಿದ್ದರು. ಹೀಗಾಗಿ ಅಪೀಲ್ ಹಾಕಿದ್ದೆ. ಅಲ್ಲೂ ಏನೂ ಮಾಡಲು ಆಗುವುದಿಲ್ಲ ಎಂದು ನಿರ್ಣಯ ಬಂದಿದೆ. ಕೋರ್ಟ್ ಏನು ಹೇಳುತ್ತದೋ ಕೇಳೋಣ. ತನಿಖೆ ನಡೆಯಲಿ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದರು.

ಲೋಕಾಯುಕ್ತದವರು ಇನ್ವೆಸ್ಟಿಗೇಶನ್ ಮಾಡುತ್ತಿದ್ದಾರೆ. CBIನವರಿಗೆ ಮಾಡಬೇಡಿ ಅಂತ ಹೇಳಿದರೂ ಮಾಡುತ್ತಿದ್ದಾರೆ. ಏನು ಬೇಕಾದರೂ ಮಾಡಲಿ, ನನ್ನದೇನೂ ತಪ್ಪಿಲ್ಲ. ನಮ್ಮ‌ ಸರ್ಕಾರ ಒಂದು ಸಲ ವಿತ್‌ಡ್ರಾ ಮಾಡಿದ ಮೇಲೆ ಮುಗಿಯಿತು. ನನ್ನ ಆಸ್ತಿ ದಾಖಲೆ ಏನಿದೆ ಕೊಡ್ತೀನಿ ಎಂದು ಡಿಕೆಶಿ ತಿಳಿಸಿದರು. ಕೇಂದ್ರ ಸರ್ಕಾರ ಇದನ್ನು ಉದ್ದೇಶಪೂರ್ವಕ ಮಾಡುತ್ತಿದೆಯಾ ಎಂಬ ಪ್ರಶ್ನೆಗೆ ʼಕೋರ್ಟ್ ಬಗ್ಗೆ ಏನು ಮಾತನಾಡಲೂ ಆಗುವುದಿಲ್ಲ. ಕೋರ್ಟ್ ಹೇಳಿದಂತೆ ಕೇಳಬೇಕುʼ ಎಂದು ಡಿಕೆಶಿ ಉತ್ತರಿಸಿದರು.

ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಾಲಾ ತ್ರಿವೇದಿ ನೇತೃತ್ವದ ಪೀಠ, ಡಿಕೆ ಶಿವಕುಮಾರ್ ಅವರ ಅರ್ಜಿಯನ್ನು ವಜಾಗಳಿಸಿತು.

ಈ ಹಿಂದಿನ ಸಿದ್ದರಾಮಯ್ಯನವರ ರಾಜ್ಯ ಸರ್ಕಾರದಲ್ಲಿ ಡಿಕೆಶಿಯವರು ಇಂಧನ ಸಚಿವರಾಗಿದ್ದರು. ಆ ಸರ್ಕಾರದ ಅವಧಿಯಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯವನ್ನು ಡಿಕೆ ಶಿವಕುಮಾರ್ ಅವರು ಗಳಿಸಿದ್ದಾರೆಂದು ಹೇಳಲಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

2019ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಸಿಬಿಐ ಮನವಿಗೆ ಸ್ಪಂದಿಸಿ ತನಿಖೆಗೆ ಅನುಮತಿ ನೀಡಿತ್ತು. ಆನಂತರ ಸಿಬಿಐ, ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಅದೇ ತನಿಖೆಯನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಮೊದಲಿಗೆ ಅದು ವಿಭಾಗೀಯ ಪೀಠದಲ್ಲಿ ವಿಚಾರಣೆಯಾಗಿ ಆನಂತರ ಅದೀಗ ವಿಸ್ತ್ರೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಇದನ್ನೂ ಓದಿ: DK Shivakumar : ಡಿಕೆ ಶಿವಕುಮಾರ್‌ ಟಿಪ್ಪಣಿ ಆಧರಿಸಿ ಮಾಡಿದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆಗೆ ಹೈಕೋರ್ಟ್‌ ತಡೆ

Continue Reading
Advertisement
SL vs IND 3rd T20I
ಕ್ರೀಡೆ7 mins ago

SL vs IND 3rd T20I: ಇಂದು ಅಂತಿಮ ಟಿ20; ವೈಟ್‌ವಾಶ್‌ ಭೀತಿಯಿಂದ ಪಾರಾದೀತೇ ಶ್ರೀಲಂಕಾ?

Liquor Price Karnataka
ಪ್ರಮುಖ ಸುದ್ದಿ18 mins ago

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Parliament Session
ರಾಜಕೀಯ21 mins ago

Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ

Kerala Landslide
ದೇಶ28 mins ago

Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ದೇಶ32 mins ago

Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Rebel star Prabhas starrer The Rajasaab short glimpse released
ದೇಶ44 mins ago

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

IPL 2025
ಕ್ರೀಡೆ56 mins ago

IPL 2025: ಆರ್​ಸಿಬಿ ಇನ್​ಸ್ಟಾಗ್ರಾಮ್​ ಖಾತೆ ಅನ್​ಫಾಲೋ ಮಾಡಿದ ಮ್ಯಾಕ್ಸ್​ವೆಲ್; ಕಾರಣವೇನು?

ಪ್ರಮುಖ ಸುದ್ದಿ58 mins ago

Uttara Kannada Landslide: ನೀರಿನಡಿ ಇನ್ನೂ 9 ದೇಹಗಳಿವೆ ಎಂದ ಸ್ವಾಮೀಜಿ! ಬರಲಿದೆ ಕೇರಳದಿಂದ ಬಾರ್ಜ್‌ ಮೌಂಟೆಡ್‌ ಹಿಟಾಚಿ

Mahila Samman Savings Certificate
ಮನಿ-ಗೈಡ್1 hour ago

Mahila Samman Savings Certificate: ಮಹಿಳಾ ಸಮ್ಮಾನ್‌‌ನಲ್ಲಿ ಹೂಡಿಕೆಯಿಂದ ಏನು ಲಾಭ?

Kerala Landslide
ದೇಶ1 hour ago

Kerala Landslide: ಕೇರಳದಲ್ಲಿ ವರುಣನ ರೌದ್ರ ನರ್ತನ ಶುರು; ಭಾರೀ ಭೂಕುಸಿತಕ್ಕೆ ಐವರು ಬಲಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ16 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ17 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ20 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌