Kashmir Travel: ಕಾಶ್ಮೀರದಲ್ಲಿ ಈ ಬಾರಿ ಹಿಮವೇ ಇಲ್ಲ! ಜನವರಿಯಲ್ಲೂ ಒಣಕಲಾದ ʻಭೂಮಿ ಮೇಲಿನ ಸ್ವರ್ಗʼ! - Vistara News

ದೇಶ

Kashmir Travel: ಕಾಶ್ಮೀರದಲ್ಲಿ ಈ ಬಾರಿ ಹಿಮವೇ ಇಲ್ಲ! ಜನವರಿಯಲ್ಲೂ ಒಣಕಲಾದ ʻಭೂಮಿ ಮೇಲಿನ ಸ್ವರ್ಗʼ!

ನೂರಾರು ಕನಸು ಕಂಡು ಕಾಶ್ಮೀರದ ಕಡೆಗೆ ಹೊರಟು ನಿಂತ (Kashmir Travel) ಮಂದಿಗೆ ಈ ಬಾರಿ ನಿರಾಸೆ ಕಾದಿತ್ತು. ಯಾಕೆಂದರೆ, ಅತೀ ಹೆಚ್ಚು ಹಿಮ ಇರಬೇಕಾದ ಜನವರಿ ಮೊದಲ ವಾರದಲ್ಲಿ ಕಾಶ್ಮೀರದ ಗುಲ್ಮಾರ್ಗ್‌ ಒಣ ಭೂಮಿಯಂತೆ ಖಾಲಿ ಖಾಲಿ.

VISTARANEWS.COM


on

no snow in kashmir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಳಿಗಾಲ ಬಂದ ತಕ್ಷಣ ಬಹುತೇಕ ಪ್ರವಾಸಿಗರ ಬಯಕೆ, ಜೀವಮಾನದಲ್ಲಿ ಒಮ್ಮೆಯಾದರೂ ಹಿಮದೂರಿಗೆ (Snow mountains) ಪ್ರವಾಸ ಮಾಡಬೇಕು, ಕನಸಲ್ಲಿ ಕಾಣುವ ಹಾಗೆ ಹಿಮದೂರಿನ ಸೌಂದರ್ಯವನ್ನು ಕಣ್ಣಾರೆ ನೋಡಬೇಕು, ಹಿಮದಲ್ಲಿ ಮಗುವಿನ ಹಾಗೆ ಆಡಬೇಕು. ಹಿಮದಲ್ಲಿ ಮುಳುಗಿ ಹೋಗುವ ಹಾಗೆ ಕುಣಿದಾಡಿ ಬಗೆಬಗೆಯ ಫೋಟೋ ತೆಗೆಸಬೇಕು, ಮಗುವಿನ ಹಾಗೆ ಆಗಸಕ್ಕೆ ಮುಖಮಾಡಿ, ಬೀಳುವ ಹಿಮವನ್ನು ಕುಡಿಯಬೇಕು… ಹೀಗೆ, ಒಂದೇ ಎರಡೇ? ನೂರಾರು ಪುಟ್ಟಪುಟ್ಟ ಕನಸುಗಳು. ಸಾಮಾನ್ಯ ಮಧ್ಯಮವರ್ಗದ ಮಂದಿಗೆ ಇಂತಹ ಒಂದು ಪ್ರವಾಸವನ್ನು ಮಾಡಲೂ ಕೂಡಾ ಸಾಕಷ್ಟು ವರ್ಷಗಳ ಕನಸು ಕಾಣಬೇಕು, ಕಂಡ ಕನಸನ್ನು ನನಸಾಗಿಸಲು ಶ್ರಮಪಟ್ಟು ಕೆಲಸ ಮಾಡಬೇಕು, ಒಂದು ದಿನ ಕನಸನ್ನು ಸಾಕಾರಗೊಳಿಸಲು ಎಲ್ಲ ತಯಾರಿಯನ್ನೂ ಮಾಡಿ, ಹಿಮ ಬೀಳುವ ಕಾಲವನ್ನು ನೋಡಿ ಅಂಥ ಸಮಯದಲ್ಲಿ ಹೊರಟು ನಿಲ್ಲುವವರು ಕೆಲವು ಮಂದಿ. ಭಾರತದಲ್ಲಿ ಹಿಮದೂರಿನ ಕನಸು ಕಂಡರೆ, ಸಾಮಾನ್ಯವಾಗಿ ಎಲ್ಲರೂ ಹೊರಡುವುದು ಒಂದೋ ಮನಾಲಿಯೆಡೆಗೆ, ಇಲ್ಲವೇ ಕಾಶ್ಮೀರದ ಗುಲ್ಮಾರ್ಗ್‌ (Kashmir Travel) ಕಡೆಗೆ. ಆದರೆ, ಈ ಬಾರಿ ಹಿಮದೂರಿನ ಕನಸು ಕಂಡು ಜನವರಿ ತಿಂಗಳಲ್ಲಿ ಹಿಮ ಸಿಕ್ಕೇ ಸಿಗುತ್ತದೆ ಎಂಬ ನೂರಾರು ಕನಸು ಕಂಡು ಕಾಶ್ಮೀರದ ಕಡೆಗೆ ಹೊರಟು ನಿಂತ ಮಂದಿಗೆ ನಿರಾಸೆ ಕಾದಿತ್ತು. ಯಾಕೆಂದರೆ, ಅತೀ ಹೆಚ್ಚು ಹಿಮ ಇರಬೇಕಾದ ಜನವರಿ ಮೊದಲ ವಾರದಲ್ಲಿ ಕಾಶ್ಮೀರದ ಗುಲ್ಮಾರ್ಗ್‌ ಒಣ ಭೂಮಿಯಂತೆ ಖಾಲಿ ಖಾಲಿ. ಒಂದಿಂಚು ಹಿಮವೂ ನೆಲದ ಮೇಲಿಲ್ಲ! ಆಸೆಯಿಟ್ಟು ಹೋದವರ ಪರಿಸ್ಥಿತಿ ಊಹಿಸಿ!

ಹೌದು, ಜಾಗತಿಕ ತಾಪಮಾನದ ಏರಿಕೆಯ ಪರಿಣಾಮವೋ ಎಂಬಂತೆ ಕಾಶ್ಮೀರ ಈ ಬಾರಿ ವಿಚಿತ್ರ ಹವಾಮಾನ ಬದಲಾವಣೆಯನ್ನು ಕಂಡಿದೆ. ಕಾಶ್ಮೀರದಲ್ಲಿ ಶೇ.79ರಷ್ಟು ಮಳೆ ಈ ಬಾರಿ ಕಡಿಮೆಯಾಗಿದ್ದೂ ಆಲ್ಲದೆ, ಡಿಸೆಂಬರ್‌ನಲ್ಲಿ ಅತ್ಯಂತ ಕಡಿಮೆ ಹಿಮ ಸುರಿದಿದೆ. ಸ್ಕೀಯಿಂಗ್‌ ಮಾಡುವ ಹಂಬಲದಲ್ಲಿ ವರ್ಷವೂ ಕಾಶ್ಮೀರಕ್ಕೆ ಸಾವಿರಾರು ಮಂದಿ ಕೇವಲ ಸ್ಕೀಯಿಂಗ್‌ ಕಲಿಯುವ ಉದ್ದೇಶದಿಂದಲೂ ಬರುತ್ತಾರೆ. ಈ ಬಾರಿ ಅವರ ಪಾಲಿಗೂ ನಿರಾಸೆ.

ಭಾರತದ ಅತ್ಯಂತ ಸುಂದರ ಜಾಗಗಳಲ್ಲಿ ಒಂದಾದ ಗುಲ್ಮಾರ್ಗ್‌ ಎಂಬ ತಾಣವನ್ನು ಈಗ ಹಿಮಬೀಳುವ ಸಮಯದಲ್ಲಿ ಹಿಮವಿಲ್ಲದೆ ಖಾಲಿಯಾಗಿ ಒಣಕಲಾಗಿ ಬರಡಾಗಿ ನೋಡಿದರೆ, ಯಾರಿಗಾದರೂ ಎದೆ ಒಡೆದು ಹೋದೀತು. ಹಲವಾರು ವರ್ಷಗಳು ಕನಸು ಕಂಡು ಒಮ್ಮೆ ಕಾಶ್ಮೀರದ ಸೌಂದರ್ಯವನ್ನು ನೋಡಲು ಪ್ರವಾಸ ಹೊರಟಾಗ, ಹಿಮ ನೋಡುವ ಅದೃಷ್ಟ ಸಿಗದಿದ್ದರೆ ಹೇಗಾದೀತು ಹೇಳಿ!

ಸಮುದ್ರಮಟ್ಟದಿಂದ ಸುಮಾರು 8694 ಅಡಿ ಎತ್ತರದಲ್ಲಿರುವ ಗುಲ್ಮಾರ್ಗ್‌ ಚಳಿಗಾಲ ಬಂದಾಕ್ಷಣ ಪೋಸ್ಟರ್‌ನ ಹಾಗೆ ಬದಲಾಗಿಬಿಡುತ್ತದೆ. ಅತತ ರಮಣೀಯವಾಗಿ ಕಾಣುವ ಗುಲ್ಮಾರ್ಗ್‌ ಚಳಿಗಾಲ ಕಳೆದು ವಸಂತ ಕಾಲ ಬರುತ್ತಿದ್ದ ಹಾಗೆ ಹಸಿರು ಹಸಿರಾಗಿ ಹೂಗಳಿಂದ ತುಂಬಿ ನಳನಳಿಸುತ್ತದೆ. ಹೀಗಾಗಿ ಗುಲ್ಮಾರ್ಗ್‌ ನಮ್ಮ ದೇಶದ ಅತ್ಯಂತ ರಮಣೀಯ ಸ್ಥಳಗಳ ಪೈಕಿ ಅಗ್ರಸ್ಥಾನದಲ್ಲಿದೆ ಎಂದರೂ ತಪ್ಪಿಲ್ಲ. ಆದರೆ, ಈ ಬಾರಿ ಮಾತ್ರ ಕೇವಲ ಗುಲ್ಮಾರ್ಗ್‌ ಮಾತ್ರವಲ್ಲ ಕಾಶ್ಮೀರದ ಎಲ್ಲ ಪ್ರೇಕ್ಷಣೀಯ ಸ್ಥಳಗಳಾದ ಸೋನ್‌ಮಾರ್ಗ್‌, ಪೆಹಲ್‌ಗಾಂ ಮತ್ತಿತರ ಪ್ರದೇಶಗಳೂ ಕೂಡಾ ಒಣಕಲಾಗಿದೆ.

ತಜ್ಞರು ಇದನ್ನು ಎಲ್‌ ನೈನೋ ಎಂದು ಹೆಸರಿಸಿದ್ದು, ಜಾಗತಿಕ ತಾಪಮಾನದಲ್ಲಾದ ಬದಲಾವಣೆಯೇ ಇದಕ್ಕೆ ಕಾರಣ ಎಂದಿದ್ದಾರೆ. ಕಾಶ್ಮೀರದ ಹವಾಮಾನ ಇಲಾಖೆ ಈ ಬಾರಿ ಡಿಸೆಂಬರ್‌ ಹಾಗೂ ಜನವರಿಯ ಒಂದು ವಾರ ಪೂರ್ತಿಯಾಗಿ ಯಾವುದೇ ಹಿಮ ಸುರಿಯದೆ ಒಣಕಲಾಗಿ ಇತ್ತು ಎಂದು ವರದಿ ಮಾಡಿದೆ. ಇದರಿಂದಾಗಿ ಈಗಾಗಲೇ ಬುಕ್‌ ಮಾಡಿರುವ ಸಾಕಷ್ಟು ಪ್ರವಾಸಿಗರು ತಮ್ಮ ಪ್ರವಾಸವನ್ನು ರದ್ದು ಮಾಡುತ್ತಿದ್ದು, ಇದು ನಿಜಕ್ಕೂ ಪ್ರವಾಸೋದ್ಯಮಕ್ಕೂ ಧಕ್ಕೆ ತರಲಿದೆ ಎಂದಿದ್ದಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಶ್ಮೀರಿ ಪಂಡಿತರ ಅಳಲು ಕೊನೆಯಾಗಲು ಹೊಸ ವಿಧೇಯಕ ನೆರವಾಗಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

VISTARANEWS.COM


on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅರನ್ನು ‘ಭಯೋತ್ಪಾದಕ’ ಎಂದು ಟೀಕಿಸಿರುವ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹಿರಿಯ ಬಿಜೆಪಿ ಮಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಎಕ್ಸ್‌ ನಲ್ಲಿ ಅವರು ವಿವರವಾದ ಹೇಳಿಕೆ ನೀಡಿದ್ದು, ಇಂತಹ ಹೇಳಿಕೆ ನಿಮ್ಮ ಅಹಂಕಾರವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆಯಾಚಿಸಬೇಕು ಎಂದೂ ಆಗ್ರಹಪಡಿಸಿದ್ದಾರೆ.


ತೀರಾಕೀಳು ಮಟ್ಟದಲ್ಲಿ ನೀವು ನೀಡಿರುವ ಹೇಳಿಕೆ ನಿಮ್ಮ ದುರಹಂಕಾರದ ಪರಮಾವಧಿ ಮಾತ್ರವಲ್ಲ, ಅದು ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ಖರ್ಗೆಯವರೇ, ಪ್ರಧಾನಿ ಮೋದಿ ರವರ ನಾಯಕತ್ವದ ಮೇಲೆ ಅಚಲ ವಿಶ್ವಾಸವಿಟ್ಟು ಭಾರತದ ಜನತೆ ಸತತ ಮೂರನೇ ಬಾರಿಗೆ ಅವರನ್ನು ಪ್ರಧಾನಿ ಪೀಠದಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುವ ಭರದಲ್ಲಿ ಹೀಗೆ ಅವಮಾನಿಸುವುದು ಎಂದರೆ ಮೋದಿ ರವರನ್ನು ಬೆಂಬಲಿಸಿದ ಕೋಟ್ಯಂತರ ಭಾರತೀಯರನ್ನು ಅಪಮಾನಿಸಿದಂತೆ! ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿಬಿಟ್ಟಿದೆ. ಚುನಾವಣೆ ಬಂದಾಗಲೆಲ್ಲ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದು, ಜನರು ನಿಮಗೆ ಪಾಠ ಕಳಿಸುತ್ತಲೇ ಬಂದಿದ್ದಾರೆ. ಆದರೂ ತಿದ್ದಿಕೊಳ್ಳದ ನಿಮ್ಮ ವರ್ತನೆ ನಿಮ್ಮ ಅಹಂಕಾರಕ್ಕೆ ಕನ್ನಡಿ ಹಿಡಿದಿದೆ.


ಖರ್ಗೆಯವರೇ, ಭಾರತದ ಪ್ರಧಾನಿ @narendramodi ರವರು ಅಪ್ರತಿಮ ಜಾಗತಿಕ ನಾಯಕ ಎಂದು ವಿಶ್ವದ ಹಲವಾರು ದೇಶಗಳ ನೇತಾರರು ಕೊಂಡಾಡುತ್ತಿದ್ದಾರೆ. ವಿಶ್ವದ 26ಕ್ಕೂ ಅಧಿಕ ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಮೋದಿ ಅವರನಾಯಕತ್ವವನ್ನು ಗೌರವಿಸಿವೆ. ಇಡೀ ಜಗತ್ತೇ ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ಕೇವಲ ನಿಮ್ಮ ರಾಜಕೀಯ ವೈಷಮ್ಯಕ್ಕಾಗಿ ದೇಶದ ಪ್ರಧಾನಮಂತ್ರಿಗಳ ಬಗ್ಗೆ ಇಷ್ಟು ಕೀಳುಮಟ್ಟದ ಶಬ್ದಗಳನ್ನು ಬಳಸುವುದು, ನಿಮ್ಮ ಕೀಳು ಮನಸ್ಥಿತಿಯನ್ನು ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸಿದೆ. ಅಧಿಕಾರದ ಹಪಾಹಪಿಯಲ್ಲಿ, ಒಂದು ಮನೆತನವನ್ನು ಸಂತೋಷಪಡಿಸುವ ಭರದಲ್ಲಿ ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ಹಿರಿಯರಾದ ನಿಮ್ಮಿಂದ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಅಸಂಬದ್ಧ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

Latest

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

VISTARANEWS.COM


on

ಲಖನೌ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷಗಳು ತಮ್ಮ ಮಹಿಳಾ ವಿರೋಧಿ ನೀತಿಯನ್ನು ಪ್ರದರ್ಶಿಸಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಲಖನೌದಲ್ಲಿ ಇಂದು ನಡೆದ ಜನ ಆಕ್ರೋಶ ಮಹಿಳಾ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿರು. ದೇಶಾದ್ಯಂತ ಮಹಿಳೆಯರು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ಬೀದಿಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ಸಮಾಜವಾದಿ, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಮಹಿಳೆಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಅವರ ಅಸಮಾಧಾನ ಈ ಪಾದಯಾತ್ರೆಯಲ್ಲಿ ಕಂಡುಬರುತ್ತಿದೆ ಎಂದರು. ಮಹಿಳಾ ಮೀಸಲಾತಿಗೆ ಸಂಬಂಧಿಸಿದ ನಿರ್ಣಾಯಕ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್‌ ನೇತೃತ್ವದ ಪಕ್ಷಗಳ ನಡೆ ವಿರುದ್ಧ ಈ ಪಾದಯಾತ್ರೆಯನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ಆಯೋಜಿಸಿತ್ತು.

Continue Reading

Latest

ಭಾರತ ಈಗ ‘ವಿಶ್ವಗುರು’ ಅಲ್ಲ, ಆ ಪದ ಬಳಸಬೇಡಿ: ಮುರಳಿ ಮನೋಹರ ಜೋಶಿ ಪ್ರತಿಪಾದನೆ

VISTARANEWS.COM


on

ನವದೆಹಲಿ: ಭಾರತವು ಪ್ರಸ್ತುತ ‘ವಿಶ್ವಗುರು’ ಆಗಿ ಉಳಿದಿಲ್ಲ, ಆದ್ದರಿಂದ ಆ ಪದವನ್ನು ಬಳಸುವುದರಿಂದ ನಾವು ದೂರವಿರಬೇಕು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಆರ್‌ಎಸ್‌ಎಸ್ ಅಂಗಸಂಸ್ಥೆಯಾದ ‘ಸಂಸ್ಕೃತ ಭಾರತಿ’ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ತಮ್ಮ ವೈಯಕ್ತಿಕ ಮತ್ತು ವಾಸ್ತವಿಕ ನಿಲುವನ್ನು ಬಿಚ್ಚಿಟ್ಟರು.

ಸತ್ಯವನ್ನು ಒಪ್ಪಿಕೊಳ್ಳಬೇಕು:
ಭಾರತವು ‘ವಿಶ್ವಗುರು’ ಆಗುತ್ತಿರುವ ಮತ್ತು ಎ.ಐ (AI) ಕೇಂದ್ರವಾಗುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಾವು ಒಂದು ಕಾಲದಲ್ಲಿ ವಿಶ್ವಗುರು ಆಗಿದ್ದೆವು ಎಂಬುದು ಸತ್ಯ. ಆದರೆ ಇಂದು ನಾವು ಹಾಗಿಲ್ಲ ಎಂಬ ವಾಸ್ತವವನ್ನು ಒಪ್ಪಿಕೊಳ್ಳಬೇಕು. ಈ ಹಂತದಲ್ಲಿ ನಾವು ವಿಶ್ವಗುರು ಅಲ್ಲ, ಬದಲಾಗಿ ಆ ಸ್ಥಾನಕ್ಕೇರಲು ಪ್ರಯತ್ನಿಸಬೇಕಷ್ಟೇ,” ಎಂದು ಮಾರ್ಮಿಕವಾಗಿ ನುಡಿದರು.

ಸಂಸ್ಕೃತಕ್ಕೆ ಅಗ್ರಸ್ಥಾನ ನೀಡಲು ಕರೆ:
ಸಂಸ್ಕೃತ ಭಾಷೆಯ ಮಹತ್ವದ ಬಗ್ಗೆ ಮಾತನಾಡಿದ ಜೋಶಿ, ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಆಧುನಿಕ ತಂತ್ರಜ್ಞಾನಗಳಲ್ಲಿ ಸಂಸ್ಕೃತವನ್ನು ಬಳಸಬೇಕು ಎಂದು ಆಶಿಸಿದರು. ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಲು ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಶ್ರಮಿಸಿದ್ದರು. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಬಳಕೆಯಿಂದ ಮಾತ್ರ ಭಾರತವು ತನ್ನ ಪ್ರಾಚೀನ ಗೌರವವನ್ನು ಮರಳಿ ಪಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

Continue Reading
Advertisement
Latest10 hours ago

ಮಹಿಳಾ ಮೀಸಲಾತಿಗೆ ಬೆಂಬಲ; ಡಿಲಿಮಿಟೇಷನ್‌ ಗೆ ವಿರೋಧ:ಸಿಎಂ ಸಿದ್ದರಾಮಯ್ಯ ಸಷ್ಟನೆ

Latest10 hours ago

ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Latest10 hours ago

ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಟೀಕಿಸಿದ ಖರ್ಗೆ; ಕ್ಷಮೆ ಯಾಚನೆಗೆ ಯಡಿಯೂರಪ್ಪ ಆಗ್ರಹ

Latest10 hours ago

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

Latest10 hours ago

ದಲಿತರಿಗೆ ಒಳ ಮೀಸಲಾತಿ: ಏ.24ರಂದು ವಿಶೇಷ ಸಂಪುಟ ಸಭೆ

Latest10 hours ago

“ಗ್ರೇಟರ್ ಇಸ್ರೇಲ್” ಸಾಕಾರಕ್ಕೆ ನೆತನ್ಯಾಹು ಬಿಗ್‌ ಪ್ಲಾನ್:‌ ಮಧ್ಯ ಪ್ರಾಚ್ಯದಲ್ಲಿ ಶಾಂತಿಗಿಲ್ಲ ನೆಲೆ

Latest10 hours ago

ಜೆಡಿಎಸ್‌ ಗೆ ಮರಳುತ್ತೀರಾ?; ಸಚಿವ ಜಮೀರ್‌ ಅಹಮದ್‌ ಕೊಟ್ಟ ಉತ್ತರ ಏನು?

Latest11 hours ago

ಬೇಸಿಗೆಯಲ್ಲೂ ಸಣ್ಣ ನೀರಾವರಿ ಕೆರೆಗಳಲ್ಲಿ ಸಮೃದ್ದ ನೀರು ಸಂಗ್ರಹ: ಸಚಿವ ಎನ್‌ ಎಸ್‌ ಭೋಸರಾಜು

Latest11 hours ago

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

Latest12 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ ಆಕ್ರೋಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌