Kashmir Travel: ಕಾಶ್ಮೀರದಲ್ಲಿ ಈ ಬಾರಿ ಹಿಮವೇ ಇಲ್ಲ! ಜನವರಿಯಲ್ಲೂ ಒಣಕಲಾದ ʻಭೂಮಿ ಮೇಲಿನ ಸ್ವರ್ಗʼ! - Vistara News

ದೇಶ

Kashmir Travel: ಕಾಶ್ಮೀರದಲ್ಲಿ ಈ ಬಾರಿ ಹಿಮವೇ ಇಲ್ಲ! ಜನವರಿಯಲ್ಲೂ ಒಣಕಲಾದ ʻಭೂಮಿ ಮೇಲಿನ ಸ್ವರ್ಗʼ!

ನೂರಾರು ಕನಸು ಕಂಡು ಕಾಶ್ಮೀರದ ಕಡೆಗೆ ಹೊರಟು ನಿಂತ (Kashmir Travel) ಮಂದಿಗೆ ಈ ಬಾರಿ ನಿರಾಸೆ ಕಾದಿತ್ತು. ಯಾಕೆಂದರೆ, ಅತೀ ಹೆಚ್ಚು ಹಿಮ ಇರಬೇಕಾದ ಜನವರಿ ಮೊದಲ ವಾರದಲ್ಲಿ ಕಾಶ್ಮೀರದ ಗುಲ್ಮಾರ್ಗ್‌ ಒಣ ಭೂಮಿಯಂತೆ ಖಾಲಿ ಖಾಲಿ.

VISTARANEWS.COM


on

no snow in kashmir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಚಳಿಗಾಲ ಬಂದ ತಕ್ಷಣ ಬಹುತೇಕ ಪ್ರವಾಸಿಗರ ಬಯಕೆ, ಜೀವಮಾನದಲ್ಲಿ ಒಮ್ಮೆಯಾದರೂ ಹಿಮದೂರಿಗೆ (Snow mountains) ಪ್ರವಾಸ ಮಾಡಬೇಕು, ಕನಸಲ್ಲಿ ಕಾಣುವ ಹಾಗೆ ಹಿಮದೂರಿನ ಸೌಂದರ್ಯವನ್ನು ಕಣ್ಣಾರೆ ನೋಡಬೇಕು, ಹಿಮದಲ್ಲಿ ಮಗುವಿನ ಹಾಗೆ ಆಡಬೇಕು. ಹಿಮದಲ್ಲಿ ಮುಳುಗಿ ಹೋಗುವ ಹಾಗೆ ಕುಣಿದಾಡಿ ಬಗೆಬಗೆಯ ಫೋಟೋ ತೆಗೆಸಬೇಕು, ಮಗುವಿನ ಹಾಗೆ ಆಗಸಕ್ಕೆ ಮುಖಮಾಡಿ, ಬೀಳುವ ಹಿಮವನ್ನು ಕುಡಿಯಬೇಕು… ಹೀಗೆ, ಒಂದೇ ಎರಡೇ? ನೂರಾರು ಪುಟ್ಟಪುಟ್ಟ ಕನಸುಗಳು. ಸಾಮಾನ್ಯ ಮಧ್ಯಮವರ್ಗದ ಮಂದಿಗೆ ಇಂತಹ ಒಂದು ಪ್ರವಾಸವನ್ನು ಮಾಡಲೂ ಕೂಡಾ ಸಾಕಷ್ಟು ವರ್ಷಗಳ ಕನಸು ಕಾಣಬೇಕು, ಕಂಡ ಕನಸನ್ನು ನನಸಾಗಿಸಲು ಶ್ರಮಪಟ್ಟು ಕೆಲಸ ಮಾಡಬೇಕು, ಒಂದು ದಿನ ಕನಸನ್ನು ಸಾಕಾರಗೊಳಿಸಲು ಎಲ್ಲ ತಯಾರಿಯನ್ನೂ ಮಾಡಿ, ಹಿಮ ಬೀಳುವ ಕಾಲವನ್ನು ನೋಡಿ ಅಂಥ ಸಮಯದಲ್ಲಿ ಹೊರಟು ನಿಲ್ಲುವವರು ಕೆಲವು ಮಂದಿ. ಭಾರತದಲ್ಲಿ ಹಿಮದೂರಿನ ಕನಸು ಕಂಡರೆ, ಸಾಮಾನ್ಯವಾಗಿ ಎಲ್ಲರೂ ಹೊರಡುವುದು ಒಂದೋ ಮನಾಲಿಯೆಡೆಗೆ, ಇಲ್ಲವೇ ಕಾಶ್ಮೀರದ ಗುಲ್ಮಾರ್ಗ್‌ (Kashmir Travel) ಕಡೆಗೆ. ಆದರೆ, ಈ ಬಾರಿ ಹಿಮದೂರಿನ ಕನಸು ಕಂಡು ಜನವರಿ ತಿಂಗಳಲ್ಲಿ ಹಿಮ ಸಿಕ್ಕೇ ಸಿಗುತ್ತದೆ ಎಂಬ ನೂರಾರು ಕನಸು ಕಂಡು ಕಾಶ್ಮೀರದ ಕಡೆಗೆ ಹೊರಟು ನಿಂತ ಮಂದಿಗೆ ನಿರಾಸೆ ಕಾದಿತ್ತು. ಯಾಕೆಂದರೆ, ಅತೀ ಹೆಚ್ಚು ಹಿಮ ಇರಬೇಕಾದ ಜನವರಿ ಮೊದಲ ವಾರದಲ್ಲಿ ಕಾಶ್ಮೀರದ ಗುಲ್ಮಾರ್ಗ್‌ ಒಣ ಭೂಮಿಯಂತೆ ಖಾಲಿ ಖಾಲಿ. ಒಂದಿಂಚು ಹಿಮವೂ ನೆಲದ ಮೇಲಿಲ್ಲ! ಆಸೆಯಿಟ್ಟು ಹೋದವರ ಪರಿಸ್ಥಿತಿ ಊಹಿಸಿ!

ಹೌದು, ಜಾಗತಿಕ ತಾಪಮಾನದ ಏರಿಕೆಯ ಪರಿಣಾಮವೋ ಎಂಬಂತೆ ಕಾಶ್ಮೀರ ಈ ಬಾರಿ ವಿಚಿತ್ರ ಹವಾಮಾನ ಬದಲಾವಣೆಯನ್ನು ಕಂಡಿದೆ. ಕಾಶ್ಮೀರದಲ್ಲಿ ಶೇ.79ರಷ್ಟು ಮಳೆ ಈ ಬಾರಿ ಕಡಿಮೆಯಾಗಿದ್ದೂ ಆಲ್ಲದೆ, ಡಿಸೆಂಬರ್‌ನಲ್ಲಿ ಅತ್ಯಂತ ಕಡಿಮೆ ಹಿಮ ಸುರಿದಿದೆ. ಸ್ಕೀಯಿಂಗ್‌ ಮಾಡುವ ಹಂಬಲದಲ್ಲಿ ವರ್ಷವೂ ಕಾಶ್ಮೀರಕ್ಕೆ ಸಾವಿರಾರು ಮಂದಿ ಕೇವಲ ಸ್ಕೀಯಿಂಗ್‌ ಕಲಿಯುವ ಉದ್ದೇಶದಿಂದಲೂ ಬರುತ್ತಾರೆ. ಈ ಬಾರಿ ಅವರ ಪಾಲಿಗೂ ನಿರಾಸೆ.

ಭಾರತದ ಅತ್ಯಂತ ಸುಂದರ ಜಾಗಗಳಲ್ಲಿ ಒಂದಾದ ಗುಲ್ಮಾರ್ಗ್‌ ಎಂಬ ತಾಣವನ್ನು ಈಗ ಹಿಮಬೀಳುವ ಸಮಯದಲ್ಲಿ ಹಿಮವಿಲ್ಲದೆ ಖಾಲಿಯಾಗಿ ಒಣಕಲಾಗಿ ಬರಡಾಗಿ ನೋಡಿದರೆ, ಯಾರಿಗಾದರೂ ಎದೆ ಒಡೆದು ಹೋದೀತು. ಹಲವಾರು ವರ್ಷಗಳು ಕನಸು ಕಂಡು ಒಮ್ಮೆ ಕಾಶ್ಮೀರದ ಸೌಂದರ್ಯವನ್ನು ನೋಡಲು ಪ್ರವಾಸ ಹೊರಟಾಗ, ಹಿಮ ನೋಡುವ ಅದೃಷ್ಟ ಸಿಗದಿದ್ದರೆ ಹೇಗಾದೀತು ಹೇಳಿ!

ಸಮುದ್ರಮಟ್ಟದಿಂದ ಸುಮಾರು 8694 ಅಡಿ ಎತ್ತರದಲ್ಲಿರುವ ಗುಲ್ಮಾರ್ಗ್‌ ಚಳಿಗಾಲ ಬಂದಾಕ್ಷಣ ಪೋಸ್ಟರ್‌ನ ಹಾಗೆ ಬದಲಾಗಿಬಿಡುತ್ತದೆ. ಅತತ ರಮಣೀಯವಾಗಿ ಕಾಣುವ ಗುಲ್ಮಾರ್ಗ್‌ ಚಳಿಗಾಲ ಕಳೆದು ವಸಂತ ಕಾಲ ಬರುತ್ತಿದ್ದ ಹಾಗೆ ಹಸಿರು ಹಸಿರಾಗಿ ಹೂಗಳಿಂದ ತುಂಬಿ ನಳನಳಿಸುತ್ತದೆ. ಹೀಗಾಗಿ ಗುಲ್ಮಾರ್ಗ್‌ ನಮ್ಮ ದೇಶದ ಅತ್ಯಂತ ರಮಣೀಯ ಸ್ಥಳಗಳ ಪೈಕಿ ಅಗ್ರಸ್ಥಾನದಲ್ಲಿದೆ ಎಂದರೂ ತಪ್ಪಿಲ್ಲ. ಆದರೆ, ಈ ಬಾರಿ ಮಾತ್ರ ಕೇವಲ ಗುಲ್ಮಾರ್ಗ್‌ ಮಾತ್ರವಲ್ಲ ಕಾಶ್ಮೀರದ ಎಲ್ಲ ಪ್ರೇಕ್ಷಣೀಯ ಸ್ಥಳಗಳಾದ ಸೋನ್‌ಮಾರ್ಗ್‌, ಪೆಹಲ್‌ಗಾಂ ಮತ್ತಿತರ ಪ್ರದೇಶಗಳೂ ಕೂಡಾ ಒಣಕಲಾಗಿದೆ.

ತಜ್ಞರು ಇದನ್ನು ಎಲ್‌ ನೈನೋ ಎಂದು ಹೆಸರಿಸಿದ್ದು, ಜಾಗತಿಕ ತಾಪಮಾನದಲ್ಲಾದ ಬದಲಾವಣೆಯೇ ಇದಕ್ಕೆ ಕಾರಣ ಎಂದಿದ್ದಾರೆ. ಕಾಶ್ಮೀರದ ಹವಾಮಾನ ಇಲಾಖೆ ಈ ಬಾರಿ ಡಿಸೆಂಬರ್‌ ಹಾಗೂ ಜನವರಿಯ ಒಂದು ವಾರ ಪೂರ್ತಿಯಾಗಿ ಯಾವುದೇ ಹಿಮ ಸುರಿಯದೆ ಒಣಕಲಾಗಿ ಇತ್ತು ಎಂದು ವರದಿ ಮಾಡಿದೆ. ಇದರಿಂದಾಗಿ ಈಗಾಗಲೇ ಬುಕ್‌ ಮಾಡಿರುವ ಸಾಕಷ್ಟು ಪ್ರವಾಸಿಗರು ತಮ್ಮ ಪ್ರವಾಸವನ್ನು ರದ್ದು ಮಾಡುತ್ತಿದ್ದು, ಇದು ನಿಜಕ್ಕೂ ಪ್ರವಾಸೋದ್ಯಮಕ್ಕೂ ಧಕ್ಕೆ ತರಲಿದೆ ಎಂದಿದ್ದಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಶ್ಮೀರಿ ಪಂಡಿತರ ಅಳಲು ಕೊನೆಯಾಗಲು ಹೊಸ ವಿಧೇಯಕ ನೆರವಾಗಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading

Latest

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

VISTARANEWS.COM


on

ನೀಟ್ ಪರೀಕ್ಷೆ ರದ್ದು ವಿಚಾರದಲ್ಲಿ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ಕಿಡಿಕಾರಿದ್ದಾರೆ.

ಶ್ರಮವಹಿಸಿ ವಿದ್ಯಾರ್ಥಿಗಳು ಬರೆದಿದ್ದ ನೀಟ್‌ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದರ ಸಂಪೂರ್ಣ ಹೊರೆಯನ್ನು ನೇರವಾಗಿ ಕೇಂದ್ರ ಸರ್ಕಾರ ಹೊರಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳು ಕಷ್ಟಪಟ್ಟು ಪರೀಕ್ಷೆ ಬರೆದಿದ್ದು, ಅವರ ಬಾಳಲ್ಲಿ ಯಾರೂ ಚೆಲ್ಲಾಟವಾಡಬಾರದು. ನೀಟ್‌ ಪರೀಕ್ಷೆ ವೈಫಲ್ಯದ ಕುರಿತು ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಎನ್‌ಟಿಎ ಸಾಕಷ್ಟು ಬಾರಿ ನೀಟ್‌ ಪರೀಕ್ಷೆ ನಡೆಸಲು ವಿಫಲವಾಗಿದ್ದು, ಅಯಾ ರಾಜ್ಯಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ‌ನಡೆಸಲು ಅವಕಾಶ ‌ಮಾಡಿಕೊಡಬೇಕು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಬಾರದು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು, ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಬೇಕು. ಜೊತೆಗೆ, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಸಚಿವ ಸುಧಾಕರ್ ಆಗ್ರಹಿಸಿದ್ದಾರೆ.

Continue Reading

Latest

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

VISTARANEWS.COM


on

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ NTA 2026ನೇ ಸಾಲಿನ ನೀಟ್‌-ಯುಜಿ, ಪರೀಕ್ಷೆಯನ್ನು ರದ್ದುಗೊಳಿಸಿದೆ.
ಮೇ ಮೂರರಂದು ದೇಶಾದ್ಯಂತ ನೀಟ್‌ ಪರೀಕ್ಷೆ ನಡೆದಿತ್ತು. ರಾಜಾಸ್ಥಾನದಲ್ಲಿ ನೀಟ್‌ ಪ್ರಶ್ನೆ ಪತ್ರಿಕೆಗಳು ಲೀಕ್‌ ಆದ ಹಿನ್ನೆಲೆಯಲ್ಲಿ ಎನ್‌ಟಿಎ ಈ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆ ಲೀಕ್‌ ಆಗಿರುವುದನ್ನು ಎನ್‌ಟಿಎ ಸೇರಿ ವಿವಿಧ ಏಜೆನ್ಸಿಗಳು ದೃಢಪಡಿಸಿರುವ ಹಿನ್ನೆಲೆಯಲ್ಲಿ ಎನ್‌ಟಿಎ ನೀಟ್‌-ಯುಜಿ ಪರೀಕ್ಷೆಯನ್ನು ರದ್ದು ಪಡಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಮತ್ತೊಮ್ಮೆ ನೀಟ್‌ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಸದ್ಯದಲ್ಲೇ ಅದರ ದಿನಾಂಕ ಪ್ರಕಟಿಸಲಿದೆ. ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸಲಿದೆ.
ಮೇ 3ರಂದು ದೇಶವ್ಯಾಪಿ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ 22.79 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಏನಿದು ಪ್ರಕರಣ?:
ಮೇ ಮೂರರ ನೀಟ್‌ ಪರೀಕ್ಷೆಯಲ್ಲಿ ರಾಜಾಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಹರಿದಾಡಿದ್ದವು. ರಾಜಸ್ಥಾನ ಸ್ಪೆಷಲ್‌ ಆಪರೇಷನ್‌ ಗ್ರೂಪ್‌ ಸಂಸ್ಥೆ ಈ ಪ್ರಕರಣದ ತನಿಖೆ ನಡೆಸುತ್ತಿದೆ. ತನಿಖೆ ವೇಳೆ ಅಸಲಿ ನೀಟ್‌ ಪರೀಕ್ಷೆಯ 120 ಪ್ರಶ್ನೆಗಳು ಸಲಹೆ ಪತ್ರಿಕೆ ಅಂದರೆ ಸಜೆಶನ್‌ ಪೇಪರ್‌ನ ಪ್ರಶ್ನೆಗಳ ಜೊತೆ ತಾಳೆಯಾಗಿದ್ದುದ್ದು ಬಹಿರಂಗವಾಗಿತ್ತು. ಹಾಗಾಗಿ, ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಅನುಮಾನ ದೃಢಪಟ್ಟಿತ್ತು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾದ ಕಾರಣ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ.

Continue Reading

Latest

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

VISTARANEWS.COM


on


ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಶರ್ಮಾ ಇಂದು ಪದಗ್ರಹಣ ಮಾಡಿದರು. ಗುವಾಹುಟಿಯ ಪಶು ವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಹಿಮಂತ್‌ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ನಿತಿನ್‌ ಗಡ್ಕರಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಸೇರಿದಂತೆ ಬಿಜೆಪಿ ಆಡಳಿತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದು, 2 ನೇ ಬಾರಿಗೆ ಹಿಮಂತ್‌ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಸಂಭ್ರಮಾಚರಣೆ ನಡೆಸಿದರು.

Continue Reading
Advertisement
Latest3 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest21 hours ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ23 hours ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ1 day ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ1 day ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest2 days ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest2 days ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest2 days ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest3 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest4 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌