ದೇಶ
Kaun Banega Crorepati 15: 12.5 ಲಕ್ಷ ರೂ.ಗೆ ಸಾಧಕ ಕನ್ನಡಿಗನ ಕುರಿತು ಪ್ರಶ್ನೆ ಕೇಳಿದ ಬಚ್ಚನ್!
Kaun Banega Crorepati 15: ಕೌನ್ ಬನೇಗಾ ಕರೋಡ್ಪತಿ ಶೋನಲ್ಲಿ ಕನ್ನಡಿಗ ಸಾಧಕನ ಕುರಿತು ಅಮಿತಾಭ್ ಬಚ್ಚನ್ ಪ್ರಶ್ನೆ ಕೇಳಿದ್ದರು. ಆದರೆ, ಸ್ಪರ್ಧಿಯು ಪ್ರಶ್ನೆಗೆ ಉತ್ತರ ನೀಡುವಲ್ಲಿ ವಿಫಲರಾದರು. ನಿಮಗೆ ಉತ್ತರ ಗೊತ್ತಾ?
ಮುಂಬೈ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಡೆಸಿಕೊಡುವ ಖ್ಯಾತ ಕೌನ್ ಬನೇಗಾ ಕರೋಡ್ಪತಿ (Kaun Banega Crorepati 15) ಶೋನಲ್ಲಿ 12.50 ಲಕ್ಷ ರೂ.ಗೆ ಕನ್ನಡಿಗ, ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ (Anil Kumble) ಕುರಿತು ಪ್ರಶ್ನೆ ಕೇಳಲಾಗಿದೆ. ಆದರೆ, ಸಾಹಿಲ್ ಎಂಬ ಸ್ಪರ್ಧಿಯು ಕನ್ನಡಿಗನ ಕುರಿತು ಕೇಳಿದ ಪ್ರಶ್ನೆಗೆ ಉತ್ತರ ನೀಡುವಲ್ಲಿ ವಿಫಲರಾಗಿದ್ದಾರೆ. ಆ ಮೂಲಕ 12.50 ಲಕ್ಷ ರೂ. ಗೆಲ್ಲುವ ಬದಲು ಕೇವಲ 3.2 ಲಕ್ಷ ರೂ.ಗೆ ಆಟ ಮುಗಿಸಿದ್ದಾರೆ.
ಏನದು ಪ್ರಶ್ನೆ?
12.50 ಲಕ್ಷ ರೂ.ಗೆ ಅಮಿತಾಭ್ ಬಚ್ಚನ್ ಅವರು ಅನಿಲ್ ಕುಂಬ್ಳೆ ಕುರಿತು ಪ್ರಶ್ನೆ ಕೇಳಿದ್ದರು. “ಅನಿಲ್ ಕುಂಬ್ಳೆ ಅವರು ಟೆಸ್ಟ್ ಕ್ರಿಕೆಟ್ನ ಇನ್ನಿಂಗ್ಸ್ ಒಂದರಲ್ಲಿ ಎಲ್ಲ 10 ವಿಕೆಟ್ ಪಡೆದಾಗ ಯಾರು ಅಂಪೈರ್ ಆಗಿದ್ದರು” ಎಂಬುದು ಪ್ರಶ್ನೆಯಾಗಿತ್ತು. ಎ. ಪಿಲೂ ರಿಪೋರ್ಟರ್, ಬಿ. ಎಸ್. ವೆಂಕಟರಾಘವನ್, ಸಿ. ಡೇವಿಡ್ ಶೆಫರ್ಡ್ ಹಾಗೂ ಡಿ. ಎ.ವಿ. ಜಯಪ್ರಕಾಶ್ ಎಂಬ ಆಯ್ಕೆಗಳನ್ನೂ ನೀಡಲಾಗಿತ್ತು. ಆದರೆ, ಸಾಹಿಲ್ ಅವರು ಸರಿಯಾದ ಉತ್ತರ ನೀಡಲು ಆಗಲಿಲ್ಲ.
ಇದಕ್ಕೆ ಸರಿಯಾದ ಉತ್ತರ ಎ.ವಿ. ಜಯಪ್ರಕಾಶ್ ಆಗಿತ್ತು. 1999ರಲ್ಲಿ ಅನಿಲ್ ಕುಂಬ್ಳೆ ಅವರು ಪಾಕಿಸ್ತಾನ ವಿರುದ್ಧ ನಡೆದ ಟೆಸ್ಟ್ ಕ್ರಿಕೆಟ್ನ ಒಂದೇ ಇನ್ನಿಂಗ್ಸ್ನಲ್ಲಿ ಎಲ್ಲ 10 ವಿಕೆಟ್ ಪಡೆದ ಸಾಧನೆ ಮಾಡಿದರು. ಇಂತಹ ಸಾಧನೆ ಮಾಡಿದ ವಿಶ್ವದ ಎರಡನೇ ಹಾಗೂ ಭಾರತದ ಮೊದಲ ಬೌಲರ್ ಎಂಬ ಖ್ಯಾತಿಗೆ ಭಾಜನರಾದರು. ಈ ಪಂದ್ಯದ ಅಂಪೈರ್ ಆಗಿದ್ದ ಎ.ವಿ.ಜಯಪ್ರಕಾಶ್ ಅವರು ಕೂಡ ಕನ್ನಡಿಗರೇ ಎಂಬುದು ಮತ್ತೊಂದು ವಿಶೇಷ. ಪ್ರಥಮ ದರ್ಜೆ ಕ್ರಿಕೆಟರ್ ಆಗಿದ್ದ ಎ.ವಿ.ಜಯಪ್ರಕಾಶ್ ಅವರು ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಜತೆಗೆ ಐಪಿಎಲ್ನಲ್ಲೂ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು. 2008ರಲ್ಲಿ ಇವರು ಎಲ್ಲ ಮಾದರಿಯ ಕ್ರಿಕೆಟ್ ಅಂಪೈರಿಂಗ್ಗೆ ವಿದಾಯ ಹೇಳಿದ್ದರು.
ಇದನ್ನೂ ಓದಿ: Amitabh Bachchan: ಭಾರತ್ ಮಾತಾ ಕಿ ಜೈ ಎಂದು ಅಮಿತಾಭ್ ಬಚ್ಚನ್ ಪೋಸ್ಟ್ ಮಾಡಿದ್ದೇಕೆ?
ಕೌನ್ ಬನೇಗಾ ಕರೋಡ್ಪತಿ ಶೋ ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿದೆ. 15 ಸೀಸನ್ಗಳನ್ನೂ ಅಮಿತಾಭ್ ಬಚ್ಚನ್ ಅವರೇ ನಡೆಸುಕೊಂಡು ಬರುತ್ತಿದ್ದು, ಭಾರತ ಮಾತ್ರವಲ್ಲ ವಿದೇಶದಲ್ಲೂ ಶೋ ಖ್ಯಾತಿ ಗಳಿಸಿದೆ. ಬಡವರು, ಪ್ರತಿಭಾವಂತರು, ಸೆಲೆಬ್ರಿಟಿಗಳು ಕೂಡ ಶೋನಲ್ಲಿ ಭಾಗವಹಿಸಿದ್ದಾರೆ. ಕನ್ನಡದಲ್ಲೂ ಇದೇ ಮಾದರಿಯ ಶೋ, “ಕನ್ನಡದ ಕೋಟ್ಯಧಿಪತಿ” ಹಲವು ಸಿಸನ್ಗಳಲ್ಲಿ ಪ್ರಸಾರವಾಗಿದೆ.
ದೇಶ
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
Manipur Horror: ಹದಿ ಹರಿಯದ ಇಬ್ಬರ ವಿದ್ಯಾರ್ಥಿಗಳನ್ನು ಅಪಹರಿಸಿದ ದುಷ್ಕರ್ಮಿಗಳು, ಅವರನ್ನು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ನವದೆಹಲಿ: ನನ್ನ ಮಗ ಅಥವಾ ಆ ಹುಡುಗಿ ಮಾಡಿದ ಅಪರಾಧವಾದರೂ ಏನು? (done anything wrong?) ಅವರನ್ನು ಅಪಹರಿಸಿದ ವೇಳೆ ಅವರು ಪ್ರಯಾಣಿಸುತ್ತಿರುವುದೇ ತಪ್ಪಾಯ್ತಾ ಎಂದು ಶಸ್ತ್ರ ಸಜ್ಜಿತ ದುಷ್ಕರ್ಮಿಗಳಿಂದ ಹತ್ಯೆಗೀಡಾದ 17 ವರ್ಷದ ವಿದ್ಯಾರ್ಥಿಯ ತಂದೆ ಫಿಜಾಮ್ ಇಬುಂಗೋಬಿ ಅವರು ಪ್ರಶ್ನಿಸಿದ್ದಾರೆ(Parents Of Manipur Teens). ಶಸ್ತ್ರಸಜ್ಜಿತ ದುಷ್ಕರ್ಮಿಗಳಿಂದ ಹತ್ಯೆಗೀಡಾದ 17 ವರ್ಷದ ವಿದ್ಯಾರ್ಥಿಯ ಪೋಷಕರು ಎರಡು ತಿಂಗಳಿನಿಂದ ಪ್ರತಿದಿನ ಬೆಳಿಗ್ಗೆ ತಿಂಡಿಯ ತಟ್ಟೆಯನ್ನು ಅವನ ಟೇಬಲ್ಗೆ ಹಾಕುತ್ತಿದ್ದರು, ಅವನು ಮನೆಗೆ ಮರಳುತ್ತಾನೆ ಎಂದು ಆಶಿಸುತ್ತಿದ್ದರು. ಅವರು ಈಗ ಟೇಬಲ್ನಲ್ಲಿ ಆಹಾರ ತಟ್ಟೆ ಹಾಕುವುದನ್ನು ನಿಲ್ಲಿಸಿದ್ದಾರೆ. ಈ ವಿಷಯವನ್ನು ಕಣ್ಣೀರು ಹಾಕುತ್ತಲೇ ಅವರು ತಿಳಿಸಿದರು(Manipur Horror).
ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳಾದ ಹಿಜಾಮ್ ಲಿಂಥೋಯಿಂಗಾಂಬಿ (17) ಮತ್ತು ಫಿಜಾಮ್ ಹೇಮ್ಜಿತ್ (20) ಅವರ ಕೊಲೆಯಾಗಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ವೈರಲ್ ಆಗಿರುವ ಫೋಟೋವೊಂದರಲ್ಲಿ ಸಶಸ್ತ್ರ ಗುಂಪೊಂದರ ಮುಂದೆ ಹುಲ್ಲುಗಾವಲಿನ ಕಾಂಪೌಂಡ್ನಲ್ಲಿ ವಿದ್ಯಾರ್ಥಿಗಳಿಬ್ಬರು ಕುಳಿತಿದ್ದಾರೆ. ಲಿಂಥೋಯಿಂಗಾಂಬಿ ಬಿಳಿ ಟೀ ಶರ್ಟ್ ಧರಿಸಿದ್ದರೆ, ಹೇಮ್ಜಿತ್ ಚೆಕ್ಸ್ ಶರ್ಟ್ ಧರಿಸಿದ್ದಾರೆ. ಅವರ ಹಿಂದೆ ಬಂದೂಕುಗಳನ್ನು ಹಿಡಿದುಕೊಂಡಿರುವ ಇಬ್ಬರು ನಿಂತಿದ್ದಾರೆ. ಇನ್ನೊಂದು ಫೋಟೋದಲ್ಲಿ ವಿದ್ಯಾರ್ಥಿಗಳ ದೇಹಗಳು ನೆಲದ ಮೇಲೆ ಬಿದ್ದಿರುವುದು ಕಾಣಬಹುದು.
ಈ ಫೋಟೋಗಳು ವೈರಲ್ ಆಗುತ್ತಿದ್ದಂತೆ ಭಾರೀ ಆಕ್ರೋಶವಾಗಿದ್ದು, ಸಿಬಿಐ ಈ ಪ್ರಕರಣದ ತನಿಖೆಯನ್ನು ಕೈಗೊಂಡಿದೆ. ಈ ಮಧ್ಯೆ, ಹತರಾದ ವಿದ್ಯಾರ್ಥಿಯ ತಂದೆ ಎನ್ಡಿ ಟಿವಿಯೊಂದಿಗೆ ಮಾತನಾಡಿ, ತಮ್ಮ ಅಳಲನ್ನು ಹೊರ ಹಾಕಿದ್ದಾರೆ.
17ರ ಹರೆಯದ ಬಾಲಕಿ ಜುಲೈ 6ರಂದು ಬೆಳಗ್ಗೆ ಕೆಲ ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಿದಾಗ ವೈದ್ಯಕೀಯ ಪೂರ್ವ ವ್ಯಾಸಂಗಕ್ಕೆ ಪ್ರವೇಶಕ್ಕಾಗಿ ನೀಟ್ ತರಗತಿಗಳಿಗೆ ಹಾಜರಾಗಲು ಮನೆಯಿಂದ ತೆರಳಿದ್ದಳು. ಆಕೆಯನ್ನು ಅವಳ ಸ್ನೇಹಿತ ಮೋಟಾರು ಸೈಕಲ್ನಲ್ಲಿ ಕರೆದುಕೊಂಡು ಹೋಗಿದ್ದ. ಪರಿಸ್ಥಿತಿ ಸುಧಾರಿಸಿದೆ ಎಂದು ಭಾವಿಸಿ, ಇಬ್ಬರೂ ಚುರಚಂದಪುರ ಮತ್ತು ಬಿಷ್ಣುಪುರ ಜಿಲ್ಲೆಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆಗೆ ಹೋಗಿದ್ದರು. ಈ ಪ್ರದೇಶದಲ್ಲಿ ಮೇ ಮತ್ತು ಜೂನ್ ತಿಂಗಳಲ್ಲಿ ಭಾರೀ ಸಂಘರ್ಷ ನಡೆದಿತ್ತು. ಬಳಿಕ ಅವರು ಕಾಣೆಯಾಗಿದ್ದರು. ವಿದ್ಯಾರ್ಥಿಗಳಿಬ್ಬರ ತಂದೆ-ತಾಯಿ ಮಕ್ಕಳ ಕಾಣೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದದ್ರು.
ಈ ಸುದ್ದಿಯನ್ನೂ ಓದಿ: Manipur Horror: ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್; ಮಣಿಪುರ ಮತ್ತೆ ಉದ್ವಿಗ್ನ?
ಮಗಳು ಮನೆಗೆ ಬರಲಿಲ್ಲ. ಆಗ ಅವಳಿಗೆ ಕರೆ ಮಾಡಿದೆ. ಕರೆ ಸ್ವೀಕರಿಸಿದಳು. ಆದರೆ, ಭಯಭೀತಳಂತೆ ಕಂಡಳು. ಅಲ್ಲದೇ ನಂಬೋಲ್ನಲ್ಲಿದ್ದೇನೆ ಎಂದು ಹೇಳಿದಳು. ಅಲ್ಲಿಗೆ ಯಾಕೆ ಹೋಗಿರುವೆ ಎಂದು ಪ್ರಶ್ನಿಸಿದೆ. ಅಲ್ಲದೇ, ನಂಬೋಲ್ನಲ್ಲಿ ಎಲ್ಲಿದ್ದಿಯಾ ಸ್ಥಳ ಮಾಹಿತಿ ನೀಡು ಎಂದು ಕೇಳಿದೆ. ಅವಳು ಖೌಪುಮ್ (ನಂಬೋಲ್ನಿಂದ 20 ಕಿಮೀ) ಎಂದು ಗೊಣಗಿದಳು ಮತ್ತು ಅವಳ ಫೋನ್ ಸ್ವಿಚ್ ಆಫ್ ಆಯಿತು ಎಂದು ವಿದ್ಯಾರ್ಥಿನಿಯ ತಾಯಿ ಜಯಶ್ರೀ ಆಗಸ್ಟ್ 2 ರಂದು ಎನ್ಡಿಟಿವಿಗೆ ತಿಳಿಸಿದ್ದರು. ನಮಗೆ ನ್ಯಾಯ ದೊರೆಯಬೇಕು. ಕೊಲೆಗಾರರಿ ಶಿಕ್ಷೆಯಾಗಬೇಕು. ನಾನು ಈ ದಿನಗಳನ್ನು ಹೇಗೆ ಕಳೆದಿದ್ದೇನೆ ಎಂದು ನನಗೆ ಗೊತ್ತು ಎಂದು ಬಾಲಕಿಯ ತಂದೆ ಹಿಜಾಮ್ ಕುಲ್ಲಜಿತ್ ಹೇಳುತ್ತಾ ಕಣ್ಣೀರಾದರು.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ದೇಶ
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
GST Evasion: ಮಹಾರಾಷ್ಟ್ರದ ಬಿಜೆಪಿ ನಾಯಕಿಯೊಬ್ಬರ ಕಾರ್ಖಾನೆಯು ಸಕ್ಕರೆ ಮಾರಾಟದ ಸಂಬಂಧ ಜಿಎಸ್ಟಿ ವಂಚಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ.
ಮುಂಬೈ: ಜಿಎಸ್ಟಿ ವಂಚನೆ (GST Evasion) ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಪಂಕಜಾ ಮುಂಡೆ (BJP national secretary Pankaja Munde) ಒಡೆತನದ, ಬೀಡ್ ಜಿಲ್ಲೆಯಲ್ಲಿರುವ (Beed District) ವೈದ್ಯನಾಥ್ ಸಹಕಾರಿ ಸಕ್ಕರೆ ಕಾರ್ಖಾನೆಗೆ (Vaidyanath Co-operative sugar factory) ಸೇರಿದ 19 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸರಕು ಮತ್ತು ಸೇವಾ ತೆರಿಗೆ ಕಮಿಷನರೇಟ್ (Goods and Services Tax Commissionerate) ಸೋಮವಾರ ವಶಪಡಿಸಿಕೊಂಡಿದೆ. ಸಕ್ಕರೆ ಮಾರಾಟಕ್ಕೆ ಸಂಬಂಧಿಸಿದಂತೆ ಜಿಎಸ್ಟಿ ವಂಚನೆ ಹಿನ್ನೆಲೆಯಲ್ಲಿ ಕಮಿಷನರೇಟ್ ಈ ಕ್ರಮ ಕೈಗೊಂಡಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ವೈದ್ಯನಾಥ್ ಸಹಕಾರಿ ಸಕ್ಕರೆ ಕಾರ್ಖಾನೆಯು ಜಿಎಸ್ಟಿ ಪಾವತಿಸಲು ವಿಫಲವಾಗಿತ್ತು. ವಶಪಡಿಸಿಕೊಂಡ ಸೊತ್ತುಗಳಲ್ಲಿ 19 ಕೋಟಿ ರೂ. ಮೌಲ್ಯದ ಕಾರ್ಖಾನೆಯ ಬಾಯ್ಲರ್ ಮತ್ತು ಇತರ ಸಂಬಂಧಿತ ಯಂತ್ರೋಪಕರಣಗಳು ಸೇರಿವೆ.
ಹಣದ ಕೊರತೆಯಿಂದಾಗಿ ನಮ್ಮ ಕಾರ್ಖಾನೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಾವು ಮೊದಲು ರೈತರ ಬಾಕಿ ಪಾವತಿಸಲು ನಿರ್ಧರಿಸಿದ್ದೇವೆ. ನಮಗೆ ಸರ್ಕಾರದಿಂದ ಆರ್ಥಿಕ ನೆರವು ಬೇಕಿತ್ತು. ಇನ್ನು ಕೆಲವು ಕಾರ್ಖಾನೆಗಳ ಜತೆಗೆ ನಮ್ಮ ಸಕ್ಕರೆ ಕಾರ್ಖಾನೆಯ ಹೆಸರೂ ಮೊದಲ ಪಟ್ಟಿಯಲ್ಲಿದ್ದು, ಸರ್ಕಾರದಿಂದ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ ನಮ್ಮ ಕಾರ್ಖಾನೆಯನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಖಾನೆಗಳು ಆರ್ಥಿಕ ನೆರವು ಪಡೆದಿವೆ. ಆ ಸಮಯದಲ್ಲಿ ನಮಗೆ ನೆರವು ಸಿಕ್ಕಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪಂಕಜಾ ಮುಂಡೆ ಅವರು ಹೇಳಿದ್ದಾರೆ.
ಮುಂಡೆ ಅವರು ಜುಲೈ 7 ರಿಂದ ಎರಡು ತಿಂಗಳ ರಾಜಕೀಯ ವಿರಾಮ ತೆಗೆದುಕೊಂಡಿದ್ದರು. ಅದಾದ ಬಳಿಕ ಶಿವಶಕ್ತಿ ಯಾತ್ರೆಗಾಗಿ ಸುಮಾರು 10 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಪ್ರವಾಸವನ್ನು ಅವರು ಬಿಜೆಪಿಯ ಬ್ಯಾನರ್ನ ಅಡಿ ಮಾಡಿರಲಿಲ್ಲ. ಸ್ವಂತ ರಾಜಕೀಯ ಪ್ರವಾಸ ಕೈಗೊಂಡಿದ್ದರು. ಈ ಹಂತದಲ್ಲಿ ಮುಂಡೆ ನೇತೃತ್ವದ ಸಕ್ಕರೆ ಕಾರ್ಖಾನೆಯ ಸೊತ್ತುಗಳನ್ನು ಜಫ್ತಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.
ಈ ಸುದ್ದಿಯನ್ನೂ ಓದಿ: NCP Crisis: ಎನ್ಸಿಪಿ-ಬಿಜೆಪಿ ದೋಸ್ತಿ; ‘ಮಹಾ’ ಕಮಲ ಶಾಸಕರ ಅಸಮಾಧಾನ! ಪಂಕಜಾ ಮುಂಡೆ ಬಹಿರಂಗ ಆಕ್ರೋಶ
2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್ಸಿಪಿಯ ತಮ್ಮ ಸೋದರಸಂಬಂಧಿ ಧನಂಜಯ್ ಮುಂಡೆ ವಿರುದ್ಧ ಪಂಕಾಜ ಮುಂಡೆ ಅವರು ಸೋಲು ಅನುಭವಿಸಿದ್ದರು. ಆ ಬಳಿಕ ಅವರನ್ನು ಬಿಜೆಪಿಯಲ್ಲಿ ಪೂರ್ತಿಯಾಗಿ ಪಕ್ಕಕ್ಕೆ ತಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪಂಕಜಾ ಮುಂಡೆ ಅವರು ಮಹಾರಾಷ್ಟ್ರದಲ್ಲಿ ಪಕ್ಷದ ನಾಯಕತ್ವದ ವಿರುದ್ಧ, ವಿಶೇಷವಾಗಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ.
ಕ್ರೀಡೆ
VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು
VISTARA TOP 10 NEWS: ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News
1. ಬೆಂಗಳೂರು ಬಂದ್ ಸಕ್ಸಸ್; ಕಾವೇರಿ ಹೋರಾಟಕ್ಕೆ ಜನತೆ ಸ್ವಯಂಪ್ರೇರಿತ ಬೆಂಬಲ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆ (Cauvery Water Dispute) ಮಾಡಲೇಬೇಕು ಎಂದು ಆದೇಶ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management authority) ಮತ್ತು ಅದು ಹೇಳಿದಂತೆ ನೀರು ಬಿಡುಗಡ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala samrakshana samiti) ಕರೆ ನೀಡಿದ್ದ ಮಂಗಳವಾರದ (ಸೆ. 26) ಬೆಂಗಳೂರು ಬಂದ್ (Bangalore bandh) ಯಶಸ್ವಿಯಾಗಿದೆ. ಯಾವುದೇ ಗೊಂದಲ, ಗಲಾಟೆ, ಹಿಂಸಾತ್ಮಕ ಘಟನೆಗಳಿಲ್ಲದೆ ಅದು ಸಫಲತೆಯನ್ನು ಕಂಡಿದೆ. ಆದರೆ, ಇದು ಸರ್ಕಾರದ ನಿರ್ಧಾರಗಳ ಮೇಲೆ ಪರಿಣಾಮ ಬೀರುತ್ತದೆಯೇ ಕಾದು ನೋಡಬೇಕು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ :ಕೇಳಿದ್ದಕ್ಕಿಂತಲೂ ಹೆಚ್ಚು ನೀರು ಕೊಡುತ್ತಿದೆ ಕರ್ನಾಟಕ! ಈಗ ಹರಿಯುತ್ತಿರುವುದು 6300 ಕ್ಯೂಸೆಕ್!
2. CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್ ನೀರು ಬಿಡಲು ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಕಾವೇರಿ ನೀರು ಬಿಡದಂತೆ ಸುಗ್ರೀವಾಜ್ಞೆ; ಸರ್ಕಾರಕ್ಕೆ ಹೋರಾಟಗಾರರಿಂದ ಮೂರು ದಿನ ಗಡುವು
3. ಬೆಂಗಳೂರು ಬಂದ್ ಹತ್ತಿಕ್ಕಲು ಪೊಲೀಸ್ ಬಲ ಪ್ರಯೋಗ ನಡೆಯಿತೇ? ಕಮಿಷನರ್ ಹೇಳಿದ್ದೇನು?
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ (Cauvery water Dispute) ಕರ್ನಾಟಕ ಜಲ ಸಂರಕ್ಷಣಾ ಸಮಿತಿ (Karnataka Jala Samrakshana Samiti) ಕರೆ ನೀಡಿದ್ದ ಒಂದು ದಿನದ ಬೆಂಗಳೂರು ಬಂದ್ (Bangalore Bandh) ಸಾಂಗವಾಗಿ ಮುಕ್ತಾಯಗೊಂಡಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ನಡೆದ ಪ್ರತಿಭಟನೆಯ ವೇಳೆ ಗಮನೀಯ ಅನಾಹುತಕಾರಿ ಘಟನೆಗಳು ಇಲ್ಲದೆ ಬಂದ್ ಬಹುತೇಕ ಶಾಂತಿಯುತವಾಗಿ ನಡೆಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
4. ಜಡ್ಜ್ ನೇಮಕಾತಿ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ! 10 ತಿಂಗಳಾದ್ರೂ ಶಿಫಾರಸು ಕ್ಲಿಯರ್ ಮಾಡಿಲ್ಲ ಸರ್ಕಾರ
ಜಡ್ಜ್ಗಳ ನೇಮಕಾತಿ ವಿಷಯಕ್ಕೆ (Appointment of Judges) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಹಾಗೂ ಕೇಂದ್ರ ಸರ್ಕಾರ (Central Government) ನಡುವೆ ಮತ್ತೊದು ಸುತ್ತಿನ ಜಟಾಪಟಿ ಶುರುವಾಗುವ ಸಾಧ್ಯತೆಗಳಿವೆ. ಹೈಕೋರ್ಟ್ ಶಿಫಾರಸಗಳನ್ನು (High court Recommendations) ಕೊಲಿಜಿಯಂಗೆ (Collegium) ಏಕೆ ಕಳುಹಿಸಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರು ಅಂತಿಮಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ವಿಳಂ ಧೋರಣೆಯನ್ನು ಅನುಸರಿಸುತ್ತಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರಿದ್ದ ಪೀಠವು ಹೇಳಿದೆ. ಅಲ್ಲದೇ ಈ ವಿಷಯವನ್ನು ಸುಪ್ರೀಂ ಕೋರ್ಟ್ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್; ಮಣಿಪುರ ಮತ್ತೆ ಉದ್ವಿಗ್ನ?
ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಶವಗಳ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಣಿಪುರದಲ್ಲಿ ಮತ್ತೆ ಜನಾಕ್ರೋಶ ಭುಗಿಲೇಳುವ ಸಂಭವ ಕಂಡುಬರುತ್ತಿದೆ. ಬಂದೂಕು ಹಿಡಿದಿರುವ ಇಬ್ಬರು ದುಷ್ಕರ್ಮಿಗಳು ಕೂಡ ಈ ಫೋಟೋದಲ್ಲಿದ್ದಾರೆ. ಇವರು ಕುಕಿ ಸಮುದಾಯದವರು ಎಂದು ಹೇಳಲಾಗಿದೆ.
6. ಮನ ಕಲಕುವ ವಿಡಿಯೊ; ಜಿಮ್ನಾಸ್ಟಿಕ್ಸ್ನಲ್ಲಿ ಗೆದ್ದ ಬಾಲಕಿಗೆ ಕಪ್ಪು ಬಣ್ಣದವಳೆಂದು ಪದಕ ನೀಡದ ಆಯೋಜಕರು!
7. ಚಾಟ್ಜಿಪಿಟಿ ಜತೆ ನೀವಿನ್ನು ಮಾತನಾಡಬಹುದು! ಹೊಸ ಫೀಚರ್ ಪರಿಚಯಿಸಿದ ಓಪನ್ಎಐ
8. ಹೌದು, ನಾನು ಈಗಲೂ ರಶ್ಮಿಕಾ ಜತೆ ಸಂಪರ್ಕದಲ್ಲಿದ್ದೇನೆ! ರಕ್ಷಿತ್ ಶೆಟ್ಟಿ ಹೇಳಿಕೆ
9. Dadasaheb Phalke Award: ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
10. ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ದೇಶ
Kashmir Dispute: ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ ಅಮೆರಿಕ ರಾಯಭಾರಿ ರಹಸ್ಯ ಭೇಟಿ! ಭಾರತಕ್ಕೆ ಶೀಘ್ರ ಸಿಗುತ್ತಾ ಸಿಹಿ ಸುದ್ದಿ?
Kashmir Dispute: ಪಾಕ್ ಆಕ್ರಮಿತ ಪ್ರದೇಶದ ಗಿಲ್ಗಿಟ್-ಬಾಲ್ಟಿಸ್ತಾನ ಪ್ರದೇಶಕ್ಕೆ ಪಾಕಿಸ್ತಾನದಲ್ಲಿರುವ ಅಮೆರಿಕ ರಾಯಭಾರಿ ಭೇಟಿ ನೀಡಿರುವ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.
ನವದೆಹಲಿ: ಭಾರತ-ಪಾಕಿಸ್ತಾನ (India and Pakistan) ನಡುವಿನ ಕಾಶ್ಮೀರ ವಿವಾದ (Kashmir Dispute) ಬಗೆಹರಿಸಲು ಅಮೆರಿಕ (America) ಮಧ್ಯಸ್ಥಿಕೆಗೆ ಮುಂದಾಗಿದೆಯಾ? ಇಂಥದೊಂದು ಅನುಮಾನ ಮೂಡಲು ಕಾರಣವಿದೆ. ಜಿ20 ಶೃಂಗಸಭೆ (G20 Summit) ನಡೆಯುತ್ತಿರುವಾಗಲೇ ಅಮೆರಿಕನ್ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಿದರೆ, ಅದೇ ಸಮಯದಲ್ಲಿ ಪಾಕಿಸ್ತಾನದಲ್ಲಿರುವ ಅಮೆರಿಕದ ರಾಯಭಾರಿ ಡೇವಿಡ್ ಬ್ಲೋಮ್ (David Blome) ಅವರು ಪಾಕಿಸ್ತಾನ್ ಆಕ್ರಮಿತ ಕಾಶ್ಮೀರ ಪ್ರದೇಶದ ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ (Gilgit-Baltistan) ರಹಸ್ಯ ಭೇಟಿ ನೀಡಿದ್ದರು. ಈ ಕಾರಣಕ್ಕಾಗಿಯೇ ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ. ಆದರೆ, ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ (Eric Garcetti) ಅವರು ಮಾತ್ರ, ಪಾಕಿಸ್ತಾನ ಮತ್ತು ಭಾರತಗಳು ತಮ್ಮ ನಡುವಿನ ಈ ಸಮಸ್ಯೆಯವನ್ನು ದ್ವಿಪಕ್ಷೀಯವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿನ ಅಮೆರಿಕ ರಾಯಭಾರಿಗೆ ಪ್ರತಿಕ್ರಿಯಿಸುವುದು ನನ್ನ ಕೆಲಸವಲ್ಲ. ಆದರೆ, ಅವರು ಆಗಲೇ ಅಲ್ಲಿದ್ದರು. ಜಿ20 ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಮ್ಮ ನಿಯೋಗದ ಭಾಗವವಾಗಿ ನಾವಿದ್ದೇವೆ ಎಂದು ಅಮೆರಿಕದ ರಾಯಭಾರಿ 20 ನೇ ಭಾರತ-ಅಮೆರಿಕ ಆರ್ಥಿಕ ಶೃಂಗದ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕಾಶ್ಮೀರ ವಿಷಯದ ಬಗ್ಗೆ ಅಮೆರಿಕದ ಹೊಂದಿರುವ ನಿಲುವನ್ನು ರಾಯಭಾರಿ ಗಾರ್ಸೆಟ್ಟಿ ಅವರು ಪುನರುಚ್ಚಾರ ಮಾಡಿದರು. ಕಾಶ್ಮೀರ ವಿವಾದವು ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆಯ ಮೂಲಕ ಪರಿಹರಿಸಬೇಕಾದ ದ್ವಿಪಕ್ಷೀಯ ವಿಷಯವಾಗಿದೆ. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಹರಿಸಬೇಕಾದ ಸಮಸ್ಯೆಯಾಗಿದೆ ಮತ್ತು ಅಮೆರಿಕ ಸೇರಿದಂತೆ ಮೂರನೇ ವ್ಯಕ್ತಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಎರಿಕ್ ಗಾರ್ಸೆಟ್ಟಿ ಅವರು ಹೇಳಿದರು.
ಪಾಕಿಸ್ತಾನದಲ್ಲಿರುವ ಅಮೆರಿಕದ ರಾಯಭಾರಿ ಡೊನಾಲ್ಡ್ ಬ್ಲೋಮ್ ಅವರು ಇತ್ತೀಚೆಗೆ ಗಿಲ್ಗಿಟ್-ಬಾಲ್ಟಿಸ್ತಾನ್ಗೆ ಖಾಸಗಿ ಭೇಟಿ ನೀಡಿದ್ದರು. ಈ ಘಟನೆಯೇ ಗಾರ್ಸೆಟ್ಟಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಪ್ರೇರಣೆಯಾಗಿದೆ. ಗಿಲ್ಗಿಟ್-ಬಾಲ್ಟಿಸ್ತಾನವನ್ನು ನವದೆಹಲಿಯು, ಅವಿಭಜಿತ ಜಮ್ಮು ಮತ್ತು ಕಾಶ್ಮೀರ ಹಾಗೂ ಭಾರತದ ಅವಿಭಾಜ್ಯ ಅಂಗ ಎಂದು ಪರಿಗಣಿಸುತ್ತದೆ.
ಈ ಸುದ್ದಿಯನ್ನೂ ಓದಿ: G 20 Meeting: ಚೀನಾ ಮತ್ತೆ ಉದ್ಧಟತನ; ಕಾಶ್ಮೀರ ವಿವಾದಿತ ಪ್ರದೇಶ ಎಂದು ಹೇಳಿಕೆ, ಜಿ-20 ಸಭೆ ಬಹಿಷ್ಕಾರ
ಭೇಟಿಯ ವೇಳೆ ಪಾಕಿಸ್ತಾನದ ರಾಯಭಾರಿ ಡೊನಾಲ್ಡ್ ಬ್ಲೋಮ್ ಅವರು ಗಿಲ್ಗಿಟ್-ಬಾಲ್ಟಿಸ್ತಾನದ ಅನೇಕ ಮನರಂಜನೆಯ ಸ್ಥಳಗಳಿಗೆ ಭೇಟಿ ನೀಡಿದರು ಮತ್ತು ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ನಡೆಯುತ್ತಿರುವ ವಿವಿಧ ಯೋಜನೆಗಳನ್ನು ಪರಿಶೀಲಿಸಿದರು. ಇದೇ ವೇಳೆ ಅವರು ಗಿಲ್ಗಿಟ್-ಬಾಲ್ಟಿಸ್ತಾನ್ ಅಸೆಂಬ್ಲಿಯ ಡೆಪ್ಯುಟಿ ಸ್ಪೀಕರ್ ಸಾದಿಯಾ ಡ್ಯಾನಿಶ್ ಮತ್ತು ಅಸೆಂಬ್ಲಿ ಸದಸ್ಯೆ ರಾಣಿ ಸನಮ್ ಫರ್ಯಾದ್ ಅವರೊಂದಿಗೆ ಸಭೆ ನಡೆಸಿದರು.
ಅಮೆರಿಕದ ರಾಜತಾಂತ್ರಿಕರು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಲ್ಲ. 2002ರ ಅಕ್ಟೋಬರ್ನಲ್ಲಿ ಡೊನಾಲ್ಡ್ ಬ್ಲೋಮ್ ಅವರು ಮುಜಫರಾಬಾದ್ಗೆ ಭೇಟಿ ನೀಡಿ, ಪಾಕ್ನಿಂದ ನೇಮಕವಾಗಿರುವ ತನ್ವೀರ್ ಇಲ್ಯಾಸ್ ಅವರನ್ನು ಭೇಟಿ ಮಾಡಿದ್ದರು. 2005ರ ಭೂಕಂಪದಲ್ಲಿ ಮೃತಪಟ್ಟ ಜನರಿಗೆ ಈ ವೇಳೆ ಬ್ಲೋಮ್ ಶ್ರದ್ಧಾಂಜಲಿ ಸಲ್ಲಿಸಿದ್ದರು. ಅಲ್ಲದೇ, ಪಾಕಿಸ್ತಾನ ಮತ್ತು ಅಮೆರಿಕ ನಡುವಿನ ಪಾಲುದಾರಿಕೆಯನ್ನು ದೃಢಪಡಿಸಿದ್ದರು.
-
Live News17 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ8 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
South Cinema11 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕ್ರಿಕೆಟ್24 hours ago
Babar Azam: ಆಡಿ ಕಾರ್ ಓವರ್ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!
-
ಕರ್ನಾಟಕ11 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್7 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ7 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್11 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ