Kerala Train Fire : ಬೋಗಿಗೆ ಬೆಂಕಿ ಹಚ್ಚಿ 3 ಜನರ ಕೊಂದ ಆರೋಪಿ ಸೆರೆ, ಪೊಲೀಸರ ಕಾರ್ಯಾಚರಣೆ ಹೇಗಿತ್ತು? - Vistara News

ದೇಶ

Kerala Train Fire : ಬೋಗಿಗೆ ಬೆಂಕಿ ಹಚ್ಚಿ 3 ಜನರ ಕೊಂದ ಆರೋಪಿ ಸೆರೆ, ಪೊಲೀಸರ ಕಾರ್ಯಾಚರಣೆ ಹೇಗಿತ್ತು?

Kerala Train Fire: ಉತ್ತರ ಪ್ರದೇಶದ ನೋಯ್ಡಾ ನಿವಾಸಿಯಾಗಿದ್ದ ಆರೋಪಿ ಶಾರುಖ್ ಖಾನ್ ಕೇರಳದಲ್ಲಿ ರೈಲಿನ ಬೋಗಿಯಲ್ಲಿ ಬೆಂಕಿ ಹಚ್ಚಿ ಮೂವರ ಸಾವಿಗೆ ಕಾರಣವಾಗಿದ್ದ. ಆತನ ಸೆರೆಗೆ ಪೊಲೀಸರು ಬಲೆ ಬೀಸಿದ್ದರು.

VISTARANEWS.COM


on

Kerala train fire incident will be probed by NIA
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 3 ಜನರ ಸಾವಿಗೆ ಕಾರಣವಾದ ಕೇರಳ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಪ್ರಮುಖ ಆರೋಪಿಯನ್ನು ಮಹಾರಾಷ್ಟ್ರ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ. ಕೇರಳ ರೈಲು ಬೆಂಕಿ ಪ್ರಕರಣದಲ್ಲಿ ಮೂವರ ಸಾವು ಮಾತ್ರವಲ್ಲದೇ 9 ಜನರು ಗಾಯಗೊಂಡಿದ್ದರು. ಏಪ್ರಿಲ್ 4 ರಾತ್ರಿ ಮಹಾರಾಷ್ಟ್ರದ ರತ್ನಾಗಿರಿ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಶಾರುಖ್ ಸೈಫಿಯನ್ನು ಪೊಲೀಸರು ಬಂಧಿಸಿದ್ದಾರೆ(Kerala train Fire).

ಕೊಯಿಕ್ಕೋಡ್‌ನಲ್ಲಿ ಅಳಪುಳಾ- ಕಣ್ಣೂರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ಆರೋಪಿ ಅಲ್ಲಿಂದ ತಪ್ಪಿಸಿಕೊಂಡಿದ್ದ. ಮಂಗಳವಾರ ಆತ ರತ್ನಾಗಿರಿಯಲ್ಲಿದ್ದಾನೆಂಬ ಲೊಕೇಷನ್ ಪತ್ತೆಯಾಗಿತ್ತು. ರೈಲಿಗೆ ಬೆಂಕಿ ಹಚ್ಚಿ ಅಲ್ಲಿಂದ ಕೆಳಗೆ ಜಿಗಿಯುವಾಗ ಆತನ ತಲೆಗೆ ಗಾಯಾಗಿತ್ತು. ಅದಕ್ಕೆ ಚಿಕಿತ್ಸೆ ಪಡೆಯಲು ಆತ ರತ್ನಾಗಿರಿ ಜಿಲ್ಲಾಸ್ಪತ್ರೆಗೆ ತೆರಳಿದ್ದ. ಆದರೆ, ಅಲ್ಲಿ ಪೂರ್ತಿ ಚಿಕಿತ್ಸೆಯನ್ನು ಪಡೆದುಕೊಳ್ಳದೇ ಪರಾರಿಯಾಗಿದ್ದ. ಬಳಿಕ ರತ್ನಾಗಿರಿಯಲ್ಲಿ ಆತನಿಗಾಗಿ ತೀವ್ರ ಶೋಧ ನಡೆಸಲಾಯಿತು ಕೊನೆಗೆ ಆತ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಸದ್ಯಕ್ಕೆ ರತ್ನಾಗಿರಿ ಆರ್‌ಪಿಎಫ್ ವಶದಲ್ಲಿರುವ ಆತನನ್ನು ಕೇರಳ ಪೊಲೀಸರು ಶೀಘ್ರವೇ ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ.

Kerala Train Fire: ಏನಿದು ಕೇರಳ ರೈಲು ಬೆಂಕಿ ಪ್ರಕರಣ?

ಕೇರಳದ ಕೋಯಿಕ್ಕೋಡ್‌ನಲ್ಲಿ ವ್ಯಕ್ತಿಯೊಬ್ಬ ರೈಲಿನ ಬೋಗಿಯಲ್ಲಿ ಬೆಂಕಿ ಹಚ್ಚಿ ಮೂವರ ಸಾವಿಗೆ ಕಾರಣನಾಗಿದ್ದ. ಬಳಿಕ ಆತನ ಗುರುತು ಪತ್ತೆ ಹಚ್ಚಲಾಗಿತ್ತು. ಈತ ನೋಯಿಡಾ ನಿವಾಸಿ ಎಂದು ಗೊತ್ತಾಗಿದ್ದು, ಈತನ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು.

ದುರ್ಘಟನೆ ನಡೆದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದರು. ಎನ್‌ಐಎ ಈ ಘಟನೆಯ ತನಿಖೆಯನ್ನು ಕೈಗೆತ್ತಿಕೊಂಡಿಲ್ಲವಾದರೂ, ಉಗ್ರ ಸಂಚಿನ ಶಂಕೆ ಇರುವ ಯಾವುದೇ ಕೃತ್ಯವನ್ನು ಎನ್‌ಐಎ ಪರಿಶೀಲಿಸುವ ಹಿನ್ನೆಲೆಯಲ್ಲಿ ಇದನ್ನೂ ಪರಿಶೀಲಿಸಲಾಗಿದೆ.

ಬೆಂಕಿ ಹಚ್ಚಿದ ಆರೋಪಿಯನ್ನು ನೋಯಿಡಾ ನಿವಾಸಿ ಶಾರೂಖ್‌ ಸೈಫಿ ಎಂದು ಗುರುತಿಸಲಾಗಿದೆ. ಈತ ಆಲಪ್ಪುರ- ಕಣ್ಣೂರ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸಿದ್ದ. ಭಾನುವಾರ ರಾತ್ರಿ 9.45ರ ಸುಮಾರಿಗೆ ಕೋರಾಪುಳ ಸೇತುವೆಯಲ್ಲಿ ರೈಲಿನ ಬೋಗಿಯಲ್ಲಿದ್ದ ಸಹ ಪ್ರಯಾಣಿಕರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಬೋಗಿಯಿಂದ ನೆಗೆದು ಪರಾರಿಯಾಗಿದ್ದ. ಇದರಿಂದ 9 ಮಂದಿ ಸುಟ್ಟ ಗಾಯಗಳಿಗೀಡಾಗಿದ್ದರು.

ಇದನ್ನೂ ಓದಿ: Vande Bharat Express | ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಮತ್ತೆ ಅಪಘಾತ; ಹಸು, ಎಮ್ಮೆ ಆಯ್ತು, ಈ ಸಲ ಗೂಳಿಗೆ ಡಿಕ್ಕಿ

ಕೆಲವು ಗಂಟೆಗಳ ಬಳಿಕ, ರೈಲು ಹಳಿಗಳ ಮೇಲೆ ಇದೇ ರೈಲಿನ ಪ್ರಯಾಣಿಕರಾಗಿದ್ದ ಮೂವರ ಶವಗಳನ್ನು ಪೊಲೀಸರು ಪತ್ತೆ ಮಾಡಿದ್ದರು. ಇವರಲ್ಲಿ ಒಬ್ಬಾಕೆ ಮಹಿಳೆ, ಒಬ್ಬ ಪುರುಷ ಹಾಗೂ ಒಂದು ಮಗುವಾಗಿತ್ತು. ಬೆಂಕಿ ಹಚ್ಚಿದ ಸಂದರ್ಭದಲ್ಲಿ ಭಯಭೀತರಾದ ಇವರು ರೈಲಿನಿಂದ ನೆಗೆದ ಪರಿಣಾಮ ಸತ್ತಿರಬಹುದು ಎಂದು ಶಂಕಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಕೊಲೆಯಾಗಿದ್ದಾರೆ ಎನ್ನಲಾದ ಸಹೋದರಿಯರು ವರ್ಷದ ಬಳಿಕ ಪತ್ತೆ; ಯಾವ ಸಿನಿಮಾಕ್ಕೂ ಕಡಿಮೆ ಇಲ್ಲ ಈ ಘಟನೆ

Viral News: ಕೆಲವೊಮ್ಮೆ ನಿಜ ಜೀವನದಲ್ಲಿ ನಡೆಯುವ ಘಟನೆಗಳು ಯಾವ ಸಿನಿಮಾ ಕಥೆಗಳಿಗಿಂತ ಕಡಿಮೆ ಇರುವುದಿಲ್ಲ. ಜೀವನದಲ್ಲಿ ಘಟಿಸುವ ಕೆಲವು ಸನ್ನಿವೇಶಗಳು ನಾವು ಊಹಿಸದ ರೀತಿಯ ತಿರುವು ಪಡೆದುಕೊಳ್ಳುತ್ತವೆ. ಅದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ. ಉತ್ತರ ಪ್ರದೇಶದ ಗೋರಖ್‌ಪುರ ಮೂಲದ, ದಿಲ್ಲಿಯಲ್ಲಿ ವಾಸವಾಗಿದ್ದ ಸೀತಾ-ಗೀತಾ ಎನ್ನುವ ಸಹೋದರಿಯರ ಜೀವನದ ಕಥೆ ಇದು. ಪಾಲಕರು ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದ ಸೀತಾ (20) ಮತ್ತು ಗೀತಾ (21) ಇಬ್ಬರೂ 2023ರಲ್ಲಿ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ಅಜಯ್ ಪ್ರಜಾಪತಿ ದೂರು ನೀಡಿದ್ದ. ತನ್ನ ಸಹೋದರಿಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದ. ಇದೀಗ ಸಹೋದರಿಯರು ಮನೆಗೆ ಮರಳಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಈ ರೋಚಕ ಘಟನೆಯ ವಿವರ ಇಲ್ಲಿದೆ.

VISTARANEWS.COM


on

Viral News
Koo

ಲಕ್ನೋ: ಕೆಲವೊಮ್ಮೆ ನಿಜ ಜೀವನದಲ್ಲಿ ನಡೆಯುವ ಘಟನೆಗಳು ಯಾವ ಸಿನಿಮಾ ಕಥೆಗಳಿಗಿಂತ ಕಡಿಮೆ ಇರುವುದಿಲ್ಲ. ಜೀವನದಲ್ಲಿ ಘಟಿಸುವ ಕೆಲವು ಸನ್ನಿವೇಶಗಳು ನಾವು ಊಹಿಸದ ರೀತಿಯ ತಿರುವು ಪಡೆದುಕೊಳ್ಳುತ್ತವೆ. ಇಲ್ಲೂ ಆಗಿದ್ದು ಇದೇ. ಕೊಲೆಯಾಗಿದ್ದಾರೆ ಎಂದು ಮನೆಯವರು ಭಾವಿಸಿದ್ದ ಸಹೋದರಿಯರು ಒಂದು ವರ್ಷದ ಬಳಿಕ ಪತ್ತೆಯಾಗಿದ್ದಾರೆ. ಅದು ಕೂಡ ಅವರಿಗೆ ಮದುವೆಯಾಗಿ ಮಕ್ಕಳಿವೆ ಎನ್ನುವುದು ವಿಶೇಷ. ಸದ್ಯ ಈ ರೋಚಕ ಘಟನೆ ವೈರಲ್‌ ಆಗಿದೆ (Viral News).

ಉತ್ತರ ಪ್ರದೇಶದ ಗೋರಖ್‌ಪುರ ಮೂಲದ, ದಿಲ್ಲಿಯಲ್ಲಿ ವಾಸವಾಗಿದ್ದ ಸೀತಾ-ಗೀತಾ ಎನ್ನುವ ಸಹೋದರಿಯರ ಜೀವನದ ಕಥೆ ಇದು. ಪಾಲಕರು ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದ ಸೀತಾ (20) ಮತ್ತು ಗೀತಾ (21) ಇಬ್ಬರೂ 2023ರಲ್ಲಿ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ಅಜಯ್ ಪ್ರಜಾಪತಿ ದೂರು ನೀಡಿದ್ದ. ತನ್ನ ಸಹೋದರಿಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದ. ಇದೀಗ ಸಹೋದರಿಯರು ಮನೆಗೆ ಮರಳಿದ್ದು ಪ್ರಕರಣ ಸುಖಾಂತ್ಯ ಕಂಡಿದೆ.

ಘಟನೆಯ ವಿವರ

ಕಳೆದ ವರ್ಷ ಜನವರಿಯಲ್ಲಿ ಸೀತಾ-ಗೀತಾ ಇಬ್ಬರೂ ನಾಪತ್ತೆಯಾಗುವ ಮೂಲಕ ಕಥೆ ಆರಂಭವಾಗುತ್ತದೆ. ಸಹೋದರಿಯರಿಗಾಗಿ ಹುಡುಕಾಟ ನಡೆಸಿದ ಅಜಯ್ ಪ್ರಜಾಪತಿ ಅವರು ಎಲ್ಲೂ ಪತ್ತೆಯಾಗದಿದ್ದಾಗ ಆತಂಕಕ್ಕೆ ಒಳಗಾಗಿದ್ದ. ಹೀಗಾಗಿ ನಾಪತ್ತೆ ದೂರು ದಾಖಲಿಸಿದ್ದ. ಹೀಗಿದ್ದರೂ ತನ್ನ ಹುಡುಕಾಟವನ್ನು ನಿಲ್ಲಿಸಿರಲಿಲ್ಲ. ಈ ಮಧ್ಯೆ ಸಹೋದರಿಯರ ಪೈಕಿ ಒಬ್ಬಾಕೆಯೊಂದಿಗೆ ಗೆಳೆತನ ಬೆಳೆಸಿದ್ದ ಅದೇ ಗ್ರಾಮದ ಜಯಂತ್‌ ಮೌರ್ಯನನ್ನು ಅಜಯ್ ಪ್ರಜಾಪತಿ ಭೇಟಿಯಾಗಿದ್ದ. ತನ್ನ ಸಹೋದರಿಯರು ಎಲ್ಲಿದ್ದಾರೆಂದು ಪ್ರಶ್ನಿಸಿದಾಗ ರೊಚ್ಚಿಗೆದ್ದಿದ್ದ ಜಯಂತ್‌, ʼʼನಿನ್ನ ಸಹೋದರಿಯರಿಗಾದ ಗತಿ ನಿನಗೂ ಬರುತ್ತದೆʼʼ ಎಂದು ಬೆದರಿಕೆ ಹಾಕಿದ್ದ.

ಇದರಿಂದ ತನ್ನ ಸಹೋದರಿಯರ ಬಗ್ಗೆ ಆತಂಕಗೊಂಡ ಅಜಯ್ ಪ್ರಜಾಪತಿ ಪೊಲೀಸ್‌ ಠಾಣೆಗೆ ತೆರಳಿ ಜಯಂತ್‌ ಮೌರ್ಯ ವಿರುದ್ಧ ಕೊಲೆಯ ಕೇಸ್‌ ದಾಖಲಿಸಿದ್ದ. ಆದರೆ ಸಾಕ್ಷಿಯ ಕೊರತೆಯಿಂದ ಪೊಲೀಸರು ಜಯಂತ್‌ ಮತ್ತು ಆತನ ಮನೆಯವರ ವಿರುದ್ಧ ದೂರು ದಾಖಲಿಸಿರಲಿಲ್ಲ. ಹೀಗಾಗಿ ಅಜಯ್ ಕೋರ್ಟ್ ಮೆಟ್ಟಿಲೇರಿದ್ದ. ಇದಾಗಿ ಸುಮಾರು ಒಂದು ವರ್ಷದ ಬಳಿಕ 2024ರ ಜನವರಿ 8ರಂದು ಕೋರ್ಟ್ ಆದೇಶದ ತರುವಾಯ ಗೋರಖ್‌ಪುರದ ಬೆಲ್ಘಾಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ತನಿಖೆ ಆರಂಭಿಸಿ ನಾಲ್ಕು ತಿಂಗಳ ನಂತರ ಈ ಸಹೋದರಿಯರು ಜೀವಂತ ಇರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ವೇಳೆ ಸಹೋದರಿಯರ ಕಣ್ಮರೆಯ ಹಿಂದಿನ ನಿಜ ಕಾರಣ ಬಯಲಾಗಿತ್ತು. ಸಹೋದರಿಯರಿಬ್ಬರು ತಮ್ಮ ಪ್ರೇಮಿಗಳನ್ನು ಮದುವೆಯಾಗಲು ಮನೆ ಬಿಟ್ಟು ಓಡಿ ಹೋಗಿದ್ದರು. ತಮ್ಮ ಸಹೋದರ ಕೊಲೆ ಪ್ರಕರಣ ದಾಖಲಿಸಿರುವುದನ್ನು ತಿಳಿದ ಇವರು ಅಮಾಯಕರು ಜೈಲು ಪಾಲಾಗುವುದನ್ನು ತಪ್ಪಿಸಲು ಪೊಲೀಸರನ್ನು ಸಂಪರ್ಕಿಸಿದ್ದರು.

ಇದನ್ನೂ ಓದಿ: ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

ಸೀತಾ ಹರಿಯಾಣದ ವಿಜೇಂದರ್ ಎಂಬಾತನನ್ನು ಮದುವೆಯಾಗಿದ್ದಾಳೆ. ತಮ್ಮಿಬ್ಬರಿಗೂ ಈಗ ಐದು ತಿಂಗಳ ಹೆಣ್ಣು ಮಗು ಇದ್ದು, ಸಂತೋಷದಿಂದ ಜೀವನ ನಡೆಸುತ್ತಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾಳೆ. ಇನ್ನು ಗೀತಾ ಉತ್ತರಾಖಂಡದ ಅಲ್ಮೋರಾದ ನಿವಾಸಿ ಸುರೇಶ್ ರಾಮ್‌ನನ್ನು ಮದುವೆಯಾಗಿದ್ದು, ಈ ದಂಪತಿಗೆ ಆರು ತಿಂಗಳ ಹೆಣ್ಣು ಮಗು ಇದೆ. ಒಟ್ಟಿನಲ್ಲಿ ಕೊಲೆ ಎನ್ನಲಾಗಿದ್ದ ಪ್ರಕರಣ ಶುಭಂಗೊಂಡಿದೆ.

Continue Reading

ದೇಶ

Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

Hassan Pen Drive Case:ಕರ್ನಾಟಕದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ಮೌನವಹಿಸಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ಈ ಘೋರ ಅಪರಾಧದ ಬಗ್ಗೆ ಪ್ರಧಾನಿ ಮೌನವಹಿಸಿದ್ದು ಯಾಕೆ? ಕೂಡಲೇ ಪ್ರಧಾನಿ ಉತ್ತರಿಸಬೇಕು ಎಂದು ರಾಹುಲ್‌ ಗಾಂಧಿ ಕಿಡಿ ಕಾರಿದ್ದಾರೆ.

VISTARANEWS.COM


on

Hassan Pen Drive Case
Koo

ನವದೆಹಲಿ: ಸಂಸದ ಪ್ರಜ್ವಲ್‌ ರೇವಣ್ಣ(Prajwal Revanna) ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ(Hassan Pen Drive Case) ಆರೋಪದ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ಹರಿಹಾಯ್ದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ರಾಹುಲ್‌ ಗಾಂಧಿ ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ಮೌನವಹಿಸಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ಈ ಘೋರ ಅಪರಾಧದ ಬಗ್ಗೆ ಪ್ರಧಾನಿ ಮೌನವಹಿಸಿದ್ದು ಯಾಕೆ? ಕೂಡಲೇ ಪ್ರಧಾನಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನೂರಾರು ಹೆಣ್ಣುಮಕ್ಕಳನ್ನು ಶೋಷಣೆ ಮಾಡಿದ ವಿಚಾರ ಗೊತ್ತಿದ್ದರೂ ಕೇವಲ ಮತಕ್ಕಾಗಿ ನರರೂಪ ರಾಕ್ಷಸನ ಪರವಾಗಿ ಪ್ರಚಾರ ಮಾಡಿದ್ದು ಯಾಕೆ? ಈ ಘೋರ ಅಪರಾಧದ ಬಗ್ಗೆ ಪ್ರಧಾನಿ ಮೌನವಹಿಸಿದ್ದು ಯಾಕೆ? ಕೂಡಲೇ ಪ್ರಧಾನಿ ಉತ್ತರಿಸಬೇಕು. ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ತಪ್ಪಿಸಿಕೊಂಡರು? ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣು ಮಕ್ಕಳ ಅಪರಾಧಿಗಳಿಗೆ ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ. ಇನ್ನು ಎಲ್ಲ ಅಪರಾಧಿಗಳು ಮೋದಿಯವರ ‘ರಾಜಕೀಯ ಕುಟುಂಬದ’ ಭಾಗವಾಗುವುದರಿಂದ ಅವರಿಗೆ ಭದ್ರತೆ ಸಿಗುತ್ತದೆ ಎಂಬುದು ಖಾತ್ರಿ ಆಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಹಾಸನ ಸಂಸದ, ಜೆಡಿಎಸ್‌ ಮುಖಂಡ , ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ( ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 24 ಗಂಟೆಯೊಳಗೆ ವಿಚಾರಣೆಗೆ ಹಾಜಾರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಒಂದು ವೇಳೆ ಗಡುವಿನೊಳಗೆ ವಿಚಾರಣೆಗೆ ಹಾಜರಾಗದೇ ಇದ್ದರೆ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇದೆ. ಇಲ್ಲವೇ ಇನ್ನೂ ಎರಡು ಬಾರಿ ನೋಟಿಸ್‌ ನೀಡಿ ಕಾಯಬಹುದಾಗಿದೆ. ಈ ಎಲ್ಲವೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಷಯವಾಗಿದೆ.

ಇದನ್ನೂ ಓದಿ: Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ. ವಿದೇಶದಿಂದ ಮೇ 3 ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಏರ್‌ಫೋರ್ಟ್‌ಗೆ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದರೆ ಎನ್ನಲಾಗಿದ್ದು, ಬಳಿಕವಷ್ಟೇ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

Continue Reading

ಪ್ರವಾಸ

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

E-Pass Mandatory: ಬೇಸಿಗೆಯಲ್ಲಿ ಬೆಟ್ಟ ಗುಡ್ಡಗಳಿರುವ ತಂಪಾದ ಪ್ರದೇಶದಲ್ಲಿ ಸುತ್ತಾಡಬೇಕು ಎನ್ನುವ ಆಸೆಯಿಂದ ಊಟಿ, ಕೊಡೈಕೆನಾಲ್‌ ಗೆ ಪ್ರವಾಸ ಹೊರಡುವ ಯೋಜನೆ ಇದ್ದರೆ ಕೂಡಲೇ ಇ ಪಾಸ್ ಪಡೆಯಿರಿ.

VISTARANEWS.COM


on

By

E-Pass Mandatory
Koo

ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟು ಎಲ್ಲಾದರೂ ತಂಪಾದ ಪ್ರದೇಶಗಳಲ್ಲಿ ಸುತ್ತಾಡಬೇಕು ಎನ್ನುವ ಆಸೆಯಿಂದ ಊಟಿ ಮತ್ತು ಕೊಡೈಕೆನಾಲ್‌ ಗೆ ಪ್ರವಾಸ ಹೊರಡಲು ಯೋಜನೆ ಹಾಕಿಕೊಂಡಿದ್ದೀರಾ. ಹಾಗಿದ್ದರೆ ಒಂದು ಮಹತ್ವದ ಸುದ್ದಿ ಇದೆ. ಈ ಬಾರಿ ಊಟಿ (Ooty) ಮತ್ತು ಕೊಡೈಕೆನಾಲ್‌ ಗೆ ( Kodaikanal) ಪ್ರವಾಸ (tour) ಹೋಗುವವರಿಗೆ ಇ-ಪಾಸ್ (E-Pass Mandatory) ಕಡ್ಡಾಯವಾಗಿದೆ.

ಬೇಸಗೆ ರಜೆ (summer vacation) ಹಿನ್ನೆಲೆಯಲ್ಲಿ ಊಟಿ ಮತ್ತು ಕೊಡೈಕೆನಾಲ್ ಪ್ರವಾಸಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬರುತ್ತಿರುವುದರಿಂದ ಪ್ರಸ್ತುತ ಇರುವ ವಿವಿಧ ವಾಹನಗಳು ಮತ್ತು ಬೇಸಿಗೆಯ ತಿಂಗಳುಗಳಲ್ಲಿ ಈ ಗಿರಿಧಾಮಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಗೆ ಸಂಬಂಧಿಸಿದಂತೆ ಡೇಟಾವನ್ನು ಸಂಗ್ರಹಿಸಲು ಜಿಲ್ಲಾಡಳಿತಗಳಿಗೆ ಅನುಕೂಲವಾಗುವಂತೆ ಇ-ಪಾಸ್ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

ಇ-ಪಾಸ್ ಕಡ್ಡಾಯ

ಮೇ 7ರಿಂದ ಜೂನ್ 30ರವರೆಗೆ ಊಟಿ ಮತ್ತು ಕೊಡೈಕೆನಾಲ್‌ಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಇ-ಪಾಸ್ ಪಡೆಯಬೇಕು ಎಂದು ನ್ಯಾಯಮೂರ್ತಿಗಳಾದ ಎನ್. ಸತೀಶ್ ಕುಮಾರ್ ಮತ್ತು ಡಿ. ಭರತ್ ಚಕ್ರವರ್ತಿ ಅವರನ್ನೊಳಗೊಂಡ ವಿಶೇಷ ವಿಭಾಗೀಯ ಪೀಠ ಆದೇಶ ನೀಡಿದೆ.


ವಿಶೇಷ ವಿಭಾಗೀಯ ಪೀಠವು ನೀಲಗಿರಿ ಮತ್ತು ದಿಂಡುಗಲ್ ಕಲೆಕ್ಟರೇಟ್‌ಗಳಿಂದ ಇ-ಪಾಸ್‌ಗಳ ವಿತರಣೆಗೆ ಯಾವುದೇ ಮಿತಿಯಿಲ್ಲ ಎಂದು ಹೇಳಿದೆ. ಈ ಪಾಸ್‌ಗಳನ್ನು ಪಡೆದುಕೊಳ್ಳುವುದರಿಂದ ಸ್ಥಳೀಯ ನಿವಾಸಿಗಳಿಗೆ ವಿನಾಯಿತಿ ನೀಡಲಾಗಿದೆ.

ಹಲವು ವ್ಯವಸ್ಥೆ

ಇ- ಪಾಸ್ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಜೊತೆಗೆ ಇಬ್ಬರು ಕಲೆಕ್ಟರ್‌ಗಳು, ಮಾಹಿತಿ ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ, ಇ-ಪಾಸ್ ವ್ಯವಸ್ಥೆಯಲ್ಲಿ ಪಾವತಿ ಗೇಟ್‌ವೇ ಅನ್ನು ಸಂಯೋಜಿಸುವ ಬಗ್ಗೆ ಅನ್ವೇಷಿಸಲು ಪ್ರಸ್ತಾಪಿಸಲಾಗಿದೆ. ಇದು ಅರ್ಜಿದಾರರಿಗೆ ಆನ್‌ಲೈನ್‌ನಲ್ಲಿ ಟೋಲ್ ಶುಲ್ಕವನ್ನು ಪಾವತಿಸಲು, ಚೆಕ್‌ಪೋಸ್ಟ್‌ಗಳ ಬಳಿ ದಟ್ಟಣೆಯನ್ನು ಕಡಿಮೆ ಮಾಡಲು, ಇಂಧನವನ್ನು ಉಳಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ತಡೆಯಲು ಅನುವು ಮಾಡಿಕೊಡುತ್ತದೆ.


ಯಾಕೆ ಈ ಕ್ರಮ?

ಪ್ರವಾಸಿಗರ ಸಂಖ್ಯೆಗೆ ಕಡಿವಾಣ ಹಾಕುವ ಹೈಕೋರ್ಟ್‌ನ ಚಿಂತನೆಗೆ ಪ್ರತಿಕ್ರಿಯೆಯಾಗಿ ನೀಲಗಿರಿ ಮತ್ತು ದಿಂಡುಗಲ್ ಜಿಲ್ಲಾಧಿಕಾರಿಗಳು ವಾಹನ ಸಂಚಾರವನ್ನು ನಿರ್ಬಂಧಿಸಲು ಈ ಹಿಂದೆ ಪ್ರಸ್ತಾಪಿಸಲಾಗಿತ್ತು. ರಜೆ ಸೀಸನ್‌ಗಳಲ್ಲಿ ಊಟಿ ಮತ್ತು ಕೊಡೈಕೆನಾಲ್‌ ಗೆ ಬರುವ ವಾಹನಗಳ ಸಂಖ್ಯೆ ದಿನಕ್ಕೆ 2,000 ರಿಂದ 20,000ಕ್ಕೆ ಏರುತ್ತದೆ. ಇದು ವಾಹನ ದಟ್ಟಣೆ ಮತ್ತು ಪರಿಸರ ಹಾನಿಗೆ ಕಾರಣವಾಗುತ್ತದೆ.


ಈ ವಿಷಯವನ್ನು ಅಂಗೀಕರಿಸಿದ ನ್ಯಾಯಮೂರ್ತಿಗಳ ವಿಶೇಷ ವಿಭಾಗೀಯ ಪೀಠವು ಈ ವಿಷಯದ ಬಗ್ಗೆ ಚರ್ಚೆ ನಡೆಸಿದೆ. ಘಾಟ್ ರಸ್ತೆಗಳ ಮೇಲಿನ ಒತ್ತಡ ಮತ್ತು ಬೇಸಿಗೆಯಲ್ಲಿ ಅತಿಯಾದ ಪ್ರವಾಸಿ ಚಟುವಟಿಕೆಯಿಂದ ಉಂಟಾಗುವ ಪರಿಸರ ನಾಶವನ್ನು ವಕೀಲರು ಎತ್ತಿ ತೋರಿಸಿದರು.

ಈ ಕುರಿತು ಮಾತನಾಡಿರುವ ನೀಲಗಿರಿ ಜಿಲ್ಲಾಧಿಕಾರಿ ಎಂ. ಅರುಣಾ, ಕೇರಳ ಮತ್ತು ಕರ್ನಾಟಕ ಗಡಿಯಲ್ಲಿರುವ ಊಟಿ ಮತ್ತು ಕೊಡೈಕೆನಾಲ್‌ ಗೆ ಒಂಬತ್ತು ಗಡಿ ಚೆಕ್ ಪೋಸ್ಟ್‌ ಗಳಿವೆ. ರಜೆಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ವಾಹನ ದಟ್ಟಣೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತದೆ. ಹೀಗಾಗಿ ವಾಹನಗಳ ಎಣಿಕೆಯು ಅಗತ್ಯ. ಕೇವಲ ಪ್ರವಾಸಿ ವಾಹನಗಳಲ್ಲದೇ ಸರಕುಗಳ ಸಾಗಣೆಯ ವಾಹನಗಳನ್ನೂ ಇದು ಒಳಗೊಂಡಿರುತ್ತದೆ ಎಂದು ಹೇಳಿದರು.

Continue Reading

ರಾಜಕೀಯ

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

Maria Alam Khan: I.N.D.I.A ಒಕ್ಕೂಟದ ಅಭ್ಯರ್ಥಿ ನಾವಲ್‌ ಕಿಶೋರ್‌ ಸಾಕ್ಯ ಪರ ಫಾರೂಖ್‌ಬಾದ್‌ನಲ್ಲಿ ಪ್ರಚಾರ ಕೈಗೊಂಡಿದ್ದ ಮರಿಯಾ ಮಾತಿನ ಭರದಲ್ಲಿ ಜಿಹಾದ್‌ಗಾಗಿ ಮತ ನೀಡಿ. ಬಿಜೆಪಿ ಸರ್ಕಾರದ ಆಡಳಿತದಿಂದ ಅಲ್ಪ ಸ‍ಂಖ್ಯಾತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ಜಿಹಾದ್‌ನ ಅವಶ್ಯಕತೆ ಇದೆ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ.

VISTARANEWS.COM


on

Maria alam Khan
Koo

ನವದೆಹಲಿ: ಸಮಾಜವಾದಿ ಪಕ್ಷದ (SP) ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್‌(Salman Khurshid) ಅವರ ಸೋದರ ಸೊಸೆ ಜಿಹಾದ್‌ಗಾಗಿ ಮತ ನೀಡಿ ಎಂದು ಕರೆ ನೀಡುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಉತ್ತರಪ್ರದೇಶದ ಫಾರೂಖ್‌ಬಾದ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸಲ್ಮಾನ್‌ ಖುರ್ಷಿದ್‌ ಅವರ ಸೊಸೆ ಮರಿಯಾ ಆಲಂ ಖಾನ್‌(Maria Alam Khan) ಹೀಗಿನ ಪರಿಸ್ಥಿತಿಯಲ್ಲಿ ಜಿಹಾದ್‌ಗಾಗಿ ವೋಟ್‌ ಮಾಡಬೇಕಿದೆ ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ವೈರಲ್‌(Viral Video) ಆಗುತ್ತಿದ್ದಂತೆ ಮರಿಯಾ ಖಾನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮರಿಯಾ ಹೇಳಿದ್ದೇನು?

I.N.D.I.A ಒಕ್ಕೂಟದ ಅಭ್ಯರ್ಥಿ ನಾವಲ್‌ ಕಿಶೋರ್‌ ಸಾಕ್ಯ ಪರ ಫಾರೂಖ್‌ಬಾದ್‌ನಲ್ಲಿ ಪ್ರಚಾರ ಕೈಗೊಂಡಿದ್ದ ಮರಿಯಾ ಮಾತಿನ ಭರದಲ್ಲಿ ಜಿಹಾದ್‌ಗಾಗಿ ಮತ ನೀಡಿ. ಬಿಜೆಪಿ ಸರ್ಕಾರದ ಆಡಳಿತದಿಂದ ಅಲ್ಪ ಸ‍ಂಖ್ಯಾತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ಜಿಹಾದ್‌ನ ಅವಶ್ಯಕತೆ ಇದೆ. ಹೀಗಾಗಿ ನಾವೆಲ್ಲಾ ಒಗ್ಗಟ್ಟಾಗಿ ಜಿಹಾದ್‌ಗಾಗಿ ಮತ ನೀಡೋಣ. ಯಾವುದೇ ಆಮೀಷ, ಭಾವನೆಗಳಿಗೆ ಬಲಿಯಾಗದೇ ಮತ ನೀಡೋಣ. ಈ ʼಸಂಘಿʼ ಸರ್ಕಾರವನ್ನು ಕೆಳಗಿಳಿಸಲು ಜಿಹಾದಿಯಿಂದ ಮಾತ್ರ ಸಾಧ್ಯ. ಇಲ್ಲವಾದಲ್ಲಿ ಈ ಸಂಘಿ ಸರ್ಕಾರ ನಮ್ಮ ಅಸ್ತಿತ್ವವನ್ನೇ ನಾಶ ಮಾಡುತ್ತದೆ ಎಂದು ಅವರು ಹೇಳಿಕೆ ನೀಡಿದ್ದರು.

ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂದು ಜನ ಭೀತಿಗೊಳಗಾಗಿದ್ದಾರೆ. ಆದರೆ ಪ್ರಜಾಪ್ರಭುತ್ವ ಮಾತ್ರವಲ್ಲ ಮಾನವೀಯತೆ ಕೂಡ ಅಪಾಯದಲ್ಲಿದೆ. ಈಗ ಮಾನವೀಯತೆ ಮೇಲೆ ದಾಳಿಗಳು ನಡೆಯುತ್ತಿವೆ. ನೀವು ನಮ್ಮ ಈ ದೇಶದ ಸಂಸ್ಕೃತಿ, ಪರಂಪರೆ ಮತ್ತು ಸೌಂದರ್ಯ ಉಳಿಯಬೇಕೆಂದು ಬಯಸುವುದಾದರೆ ಬುದ್ದಿವಂತಿಕೆಯಿಂದ ಮತ ಚಲಾಯಿಸಿ ಎಂದು ಕರೆ ನೀಡಿದ್ದರು.

ಮರಿಯಾ, ಖುರ್ಷಿದ್‌ ವಿರುದ್ಧ FIR

ಇನ್ನು ಮರಿಯಾ ನೀಡಿರುವ ಈ ಹೇಳಿಕೆ ಎಲ್ಲೆಡೆ ಭಾರೀ ವೈರಲ್‌ ಆಗುತ್ತಿದ್ದು, ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಯಾ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ರ್ಯಾಲಿಯಲ್ಲಿ ಭಾಗಿಯಾಗಿದ್ದ ಸಲ್ಮಾನ್‌ ಖುರ್ಷಿದ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು ಘಟನೆ ಬಗ್ಗೆ ಸಲ್ಮಾನ್‌ ಖುರ್ಷಿದ್‌ ಸ್ಪಷ್ಟನೆ ನೀಡಿದ್ದು, ಜಿಹಾದ್‌ ಅಂದರೆ ಪ್ರತಿಕೂಲ ಪರಿಸ್ಥಿತಿ ವಿರುದ್ಧ ಹೋರಾಡುವುದು. ಜನರ ಸಾಂವಿಧಾನಿಕ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಆಕೆ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

ಚುನಾವಣಾ ಪ್ರಚಾರದಲ್ಲಿ ವಿವಾದಾತ್ಮಕ ಹೇಳಿಕೆಗಳು, ಆ ಹೇಳಿಕೆ ಮೇಲೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇತ್ತ ಛತ್ತೀಸ್‌ಗಡದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಅಧ್ಯಕ್ಷ ಎಐಸಿಸಿ ಮಲ್ಲಿಕಾರ್ಜುನ ಖರ್ಗೆಯವರು ಭಗವಾನ್‌ ಶಿವನ ಬಗ್ಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಛತ್ತೀಸ್‌ಗಡದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್‌ ದಹಾರಿಯಾ ಪರ ಪ್ರಚಾರದ ವೇಳೆ ಶಿವಕುಮಾರ್‌ ಅವರನ್ನು ಭಗವಾನ್‌ ಶಿವನಿಗೆ ಹೋಲಿಸಿ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.

Continue Reading
Advertisement
Drowned in water in raichur and karwar
ಕ್ರೈಂ57 seconds ago

Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

Viral News
ವೈರಲ್ ನ್ಯೂಸ್3 mins ago

Viral News: ಕೊಲೆಯಾಗಿದ್ದಾರೆ ಎನ್ನಲಾದ ಸಹೋದರಿಯರು ವರ್ಷದ ಬಳಿಕ ಪತ್ತೆ; ಯಾವ ಸಿನಿಮಾಕ್ಕೂ ಕಡಿಮೆ ಇಲ್ಲ ಈ ಘಟನೆ

IPL 2024 Points Table
ಕ್ರೀಡೆ6 mins ago

IPL 2024 Points Table: 3ನೇ ಸ್ಥಾನಕ್ಕೇರಿದ ಲಕ್ನೋ; ಕುಸಿತ ಕಂಡ ಹಾಲಿ ಚಾಂಪಿಯನ್​ ಚೆನ್ನೈ

Hassan Pen Drive Case
ದೇಶ27 mins ago

Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

australia t20 world cup
ಕ್ರೀಡೆ32 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

E-Pass Mandatory
ಪ್ರವಾಸ1 hour ago

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

Davanagere lok sabha constituency bjp candidate gayatri siddeshwar election campaign in mayakonda
ದಾವಣಗೆರೆ1 hour ago

Lok Sabha Election 2024: ಮಾಯಕೊಂಡ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Hassan Pen Drive case Prajwal and Revanna arrested if they fail to appear before SIT
ಕ್ರೈಂ1 hour ago

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Medical Negligence
ಕೊಪ್ಪಳ1 hour ago

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Maria alam Khan
ರಾಜಕೀಯ2 hours ago

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌