Rahul Gandhi: ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭಾಷಣದ ವೇಳೆ ಖಲಿಸ್ತಾನ್‌ ಜಿಂದಾಬಾದ್‌ ಘೋಷಣೆ; ವಿಡಿಯೊ ವೈರಲ್ - Vistara News

ದೇಶ

Rahul Gandhi: ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭಾಷಣದ ವೇಳೆ ಖಲಿಸ್ತಾನ್‌ ಜಿಂದಾಬಾದ್‌ ಘೋಷಣೆ; ವಿಡಿಯೊ ವೈರಲ್

Rahul Gandhi: ಅಮೆರಿಕದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇದೇ ವೇಳೆ ಒಂದಷ್ಟು ಜನ ಖಲಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದೆ.

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಯಾನ್‌ ಫ್ರಾನ್ಸಿಸ್ಕೋ: ‌ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಆಯೋಜಿಸಿದ್ದ ʼಮೊಹಬ್ಬತ್‌ ಕಿ ದುಕಾನ್ʼ‌ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮಾತನಾಡಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ನರೇಂದ್ರ ಮೋದಿ ಅವರ ಆಡಳಿತ ವೈಖರಿ ಕುರಿತು ಟೀಕೆ, ತನಿಖಾ ಸಂಸ್ಥೆಗಳ ದುರ್ಬಳಕೆ ಸೇರಿ ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಆದರೆ, ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ಮಧ್ಯೆಯೇ, ಒಂದಷ್ಟು ಜನ ಖಲಿಸ್ತಾನ್‌ ಪ್ರತ್ಯೇಕ ರಾಷ್ಟ್ರದ ಪರ ಘೋಷಣೆ ಕೂಗಿದ್ದಾರೆ.

ರಾಹುಲ್‌ ಗಾಂಧಿ ಅವರು ಭಾಷಣ ಮಾಡುವ ಮಧ್ಯೆ ಖಲಿಸ್ತಾನ ಪರವಾಗಿ ಒಂದಷ್ಟು ಜನ ಘೋಷಣೆ ಕೂಗಿದ್ದಾರೆ. ಅಲ್ಲದೆ, ಖಲಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆಯನ್ನೂ ಅವರು ಕೂಗಿದ್ದಾರೆ. ಇದೇ ವೇಳೆ, ರಾಹುಲ್‌ ಗಾಂಧಿ ಅವರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲಾಗಿದೆ ಎಂದರೂ ಕೇಳದೆ ಖಲಿಸ್ತಾನ್‌ ಪರ ಘೋಷಣೆ ಕೂಗಲಾಗಿದೆ. ಈ ವಿಡಿಯೊ ವೈರಲ್‌ ಆಗಿದ್ದು, ಭಾರಿ ಟೀಕೆ ವ್ಯಕ್ತವಾಗಿವೆ.

ಇಲ್ಲಿದೆ ನೋಡಿ ವಿಡಿಯೊ

ರಾಷ್ಟ್ರಗೀತೆಗೆ ಅಗೌರವ

ರಾಹುಲ್‌ ಗಾಂಧಿ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಹಾಡಲಾಯಿತು. ರಾಷ್ಟ್ರಗೀತೆ ಮೊಳಗುತ್ತಿದ್ದರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೂರಾರು ಜನ ಎದ್ದು ನಿಂತು ಗೌರವ ಸೂಚಿಸದಿರುವ ಕುರಿತು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತ ವಿಡಿಯೊ ಕೂಡ ಈಗ ವೈರಲ್‌ ಆಗಿದೆ.

ಭಾಷಣದ ವೇಳೆ ರಾಹುಲ್‌ ಗಾಂಧಿ ಹಲವು ವಿಚಾರ ಪ್ರಸ್ತಾಪಿಸಿದರು. ಅಲ್ಪಸಂಖ್ಯಾತರ ಬಗ್ಗೆ ಮಾತನಾಡುತ್ತ, “1980ರ ದಶಕದಲ್ಲಿ ಉತ್ತರ ಪ್ರದೇಶ ಸೇರಿ ಹಲವೆಡೆ ದಲಿತರ ಮೇಲೆ ದೌರ್ಜನ್ಯ ನಡೆಯಿತು. ಈಗ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಬರೀ ಮುಸ್ಲಿಮರು ಮಾತ್ರವಲ್ಲ, ಸಿಖ್ಖರು, ಕ್ರೈಸ್ತರು, ದಲಿತರು ಹಾಗೂ ಬುಡಕಟ್ಟು ಸಮುದಾಯದವರು ಕೂಡ ಭಾರತದಲ್ಲಿ ಇಂತಹದ್ದೇ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ. ಆದರೆ, ಯಾವಾಗಲೂ ದ್ವೇಷದಿಂದ ದ್ವೇಷವನ್ನು ತೊಲಗಿಸಲು ಸಾಧ್ಯವಿಲ್ಲ. ಪ್ರೀತಿಯಿಂದ ಮಾತ್ರ ದ್ವೇಷವನ್ನು ನಿರ್ಮೂಲನೆ ಮಾಡಲು ಸಾಧ್ಯ” ಎಂದು ಹೇಳಿದರು.

“ಮುಸ್ಲಿಮರು ಸೇರಿ ಎಲ್ಲ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ನಾವು ಹೋರಾಡಬೇಕಿದೆ. ಆದರೆ, ದ್ವೇಷದಿಂದ ಹೋರಾಟ ಮಾಡುವುದು ಕೂಡದು. ಪ್ರೀತಿಯಿಂದಲೇ ದ್ವೇಷವನ್ನು ಸೋಲಿಸೋಣ. ಇದಕ್ಕೆ ಕಾಂಗ್ರೆಸ್‌ ಕೂಡ ಬದ್ಧವಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಟ್ಟಿಗೊಳಿಸುವುದು ಕಾಂಗ್ರೆಸ್‌ನ ಪ್ರಮುಖ ಧ್ಯೇಯೋದ್ದೇಶವಾಗಿದೆ” ಎಂದು ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡುವಾಗ ತಿಳಿಸಿದರು.

ಇದನ್ನೂ ಓದಿ: Rahul Gandhi: 1980ರಲ್ಲಿ ದಲಿತರಿಗೆ ಆದಂತೆ ಈಗ ಮುಸ್ಲಿಮರ ಮೇಲೆ ದೌರ್ಜನ್ಯ; ಅಮೆರಿಕದಲ್ಲಿ ರಾಹುಲ್‌ ಗಾಂಧಿ ಚಾಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Prajwal Revanna Case: ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

Prajwal Revanna case Siddaramaiah writes to PM narendra Modi
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕೇಂದ್ರ ಸರಕಾರದ ವಿರುದ್ಧ ರಾಜತಾಂತ್ರಿಕ ಸಮರದ ಹಾದಿ ಹಿಡಿದಿರುವ ಕರ್ನಾಟಕ ಸರ್ಕಾರ, ಇನ್ನೊಂದು ಪತ್ರವನ್ನು ರವಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಆರೆಸ್ಟ್‌ ವಾರೆಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Continue Reading

ಕ್ರೈಂ

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

Physical Abuse: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಹಿಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿಗೆ ಬಿಹಾರದ ಮಧುಬನಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಮಧುಬನಿಯ ಹರ್ಲಾಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರ ಸೆಪ್ಟೆಂಬರ್ 5ರಂದು ಈ ಘಟನೆ ನಡೆದಿತ್ತು. 16 ವರ್ಷದ ಸಂತ್ರಸ್ತೆ ಮೇಲೆ ಎರಗಿದ ಈ ನಾಲ್ವರು ಸಾಮೂಹಿಕ ಅತ್ಯಚಾರ ಎಸಗಿದ್ದರು.

VISTARANEWS.COM


on

Physical Abuse
Koo

ಪಟ್ನ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಹಿಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ್ದ ನಾಲ್ವರಿಗೆ ಬಿಹಾರದ ಮಧುಬನಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಇವರೇ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಜತೆಗೆ ನ್ಯಾಯಾಲಯವು ಅಪರಾಧಿಗಳಿಗೆ ತಲಾ 25,000 ರೂ.ಗಳ ದಂಡವನ್ನೂ ವಿಧಿಸಿದೆ (Crime News).

ಮಧುಬನಿಯ ಹರ್ಲಾಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರ ಸೆಪ್ಟೆಂಬರ್ 5ರಂದು ಈ ಘಟನೆ ನಡೆದಿತ್ತು. 16 ವರ್ಷದ ಸಂತ್ರಸ್ತೆ ಮೇಲೆ ಎರಗಿದ ಈ ನಾಲ್ವರು ಸಾಮೂಹಿಕ ಅತ್ಯಚಾರ ಎಸಗಿದ್ದರು.

ಘಟನೆಯ ವಿವರ

ಅಂದು ಸಂತ್ರಸ್ತೆ ತನ್ನ ಸಹೋದರನೊಂದಿಗೆ ಕಸೆರಾ ಗ್ರಾಮದ ಜಾತ್ರೆಗೆ ಹೋಗಿದ್ದಳು. ಸ್ವಲ್ಪ ಸಮಯದ ನಂತರ ಆಕೆ ಸಮೀಪದ ಶಾಲೆಯೊಂದರ ಶೌಚಾಲಯಕ್ಕೆ ತೆರಳಿದ್ದಳು. ಈ ವೇಳೆ ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಕೂಡ ಅಲ್ಲಿಗೆ ಆಗಮಿಸಿದ್ದರು. ಶೌಚಾಲಯದಿಂದ ಹೊರಬಂದ ಆಕೆಯನ್ನು ಬಲವಂತವಾಗಿ ಶಾಲೆಯ ಛಾವಣಿಗೆ ಕರೆದೊಯ್ದರು. ಅಲ್ಲಿ ಅವರು ಸರದಿಯಂತೆ ಸಾಮೂಹಿಕ ಅತ್ಯಾಚಾರ ಎಸಗಿದರು. ಬಾಲಕಿಯ ಕೂಗು ಕೇಳಿದ ಸ್ಥಳೀಯರು ಜಮಾಯಿಸಲು ಆರಂಭಿಸುತ್ತಿದ್ದಂತೆ ತಾವು ಸಿಕ್ಕಿಬೀಳುತ್ತೇವೆ ಎಂಬ ಭಯದಿಂದ ಈ ಎಲ್ಲ ನಾಲ್ಕು ಅಪರಾಧಿಗಳು ಅಲ್ಲಿಂದ ತಲೆ ಮರೆಸಿಕೊಂಡಿದ್ದರು. ಬಳಿಕ ಸ್ಥಳೀಯರು ಬೆನ್ನಟ್ಟಿ ಜಾಫರ್ ಅನ್ಸಾರಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ತನಿಖೆ ವೇಳೆ ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಅವರೂ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡು ಬಂದಿತ್ತು. ಬಳಿಕ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ಬಂಧಿಸಿದ್ದರು. ಘಟನೆ ನಡೆದ ಮಾರನೇ ದಿನ ಅಂದರೆ 2022ರ ಸೆಪ್ಟೆಂಬರ್‌ 6ರಂದು ಅಪರಾಧಿಗಳ ವಿರುದ್ಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ನಾಲ್ವರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 376 (ಡಿ) ಮತ್ತು ಪೋಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದರು.

ಸಂತ್ರಸ್ತೆಯ ಸಹೋದರಿಯ ಮೇಲೂ ನಡೆದಿತ್ತು ದೌರ್ಜನ್ಯ

ʼʼನ್ಯಾಯಾಲಯವು ತನ್ನ ತೀರ್ಪಿನಲ್ಲಿ ಎಲ್ಲ ಅಪರಾಧಿಗಳನ್ನು ಅವರ ಕೊನೆಯ ಉಸಿರಿರುವವರೆಗೂ ಜೈಲಿನಲ್ಲಿಡಲು ಆದೇಶಿಸಿದೆ. ಒಂದೂವರೆ ವರ್ಷಗಳ ಕಾಲ ನಡೆದ ವಿಚಾರಣೆಯ ಸಮಯದಲ್ಲಿ, ಅಪರಾಧಿಗಳು ಅನೇಕ ಬಾರಿ ವಕೀಲರನ್ನು ಬದಲಾಯಿಸಿದ್ದಾರೆ. ಆದಾಗ್ಯೂ ಅವರಿಗೆ ಯಾವುದೇ ಪ್ರಯೋಜನ ಸಿಗಲಿಲ್ಲ. ಕೊನೆಗೂ ಅಪರಾಧಿಗಳಿಗೆ ಶಿಕ್ಷೆಯಾಗಿದೆʼʼ ಎಂದು ಸಂತ್ರಸ್ತೆಯ ಪರ ವಕೀಲರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 5 ಲಕ್ಷ ರೂ. ಪರಿಹಾರ ಪಾವತಿಸುವಂತೆಯೂ ಬಿಹಾರ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ʼʼದೌರ್ಭಾಗ್ಯ ಎಂದರೆ ಸಂತ್ರಸ್ತೆಯ ಸಹೋದರಿಯ ಮೇಲೂ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜೂನ್‌ನಲ್ಲಿ ಕೈಗೆತ್ತಿಕೊಳ್ಳಲಿದೆʼʼ ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Continue Reading

ಕ್ರೈಂ

ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು

Cyber Crime: ಉತ್ತರ ಪ್ರದೇಶದ ಬರೇಲಿಯಲ್ಲಿ ಹಿಂದು ವಿದ್ಯಾರ್ಥಿನಿಯನ್ನು ಬೆದರಿಸಿ ಇಸ್ಲಾಂಗೆ ಮತಾಂತರಗೊಳಿಸಲು ಮುಂದಾದ ಆಘಾತಕಾರಿ ಘಟನೆ ನಡೆದಿದೆ. ಮತಾಂತರಗೊಂಡು ಮದುವೆಯಾಗುವಂತೆ ಫೈಜಲ್ ಮತ್ತು ಅಮೀನ್ ಅವರಿಂದ ಬೆದರಿಕೆಗಳು ಬರುತ್ತಿವೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಈ ಸಂಬಂಧ ಮೇ 20ರಂದು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Cyber Crime
Koo

ಬೆಂಗಳೂರು: ಉತ್ತರ ಪ್ರದೇಶದ ಬರೇಲಿಯಲ್ಲಿ ಹಿಂದು ವಿದ್ಯಾರ್ಥಿನಿಯನ್ನು ಬೆದರಿಸಿ ಇಸ್ಲಾಂಗೆ ಮತಾಂತರಗೊಳಿಸಲು ಮುಂದಾದ ಆಘಾತಕಾರಿ ಘಟನೆ ನಡೆದಿದೆ. ಮತಾಂತರಗೊಂಡು ಮದುವೆಯಾಗುವಂತೆ ಫೈಜಲ್ ಮತ್ತು ಅಮೀನ್ ಅವರಿಂದ ಬೆದರಿಕೆಗಳು ಬರುತ್ತಿವೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಆರೋಪಿಗಳು ಎಐ ತಂತ್ರಜ್ಞಾನ (AI tool) ಬಳಸಿಕೊಂಡು ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೊವನ್ನು ರಚಿಸಿದ್ದು, ಇದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಒಡ್ಡಿ ಮತಾಂತರ ನಡೆಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ಮೇ 20ರಂದು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ (Cyber Crime).

ಬರೇಲಿಯ ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ಮಗಳು ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದಾಳೆ ಎಂದು ಆಕೆಯ ತಂದೆ ತಿಳಿಸಿದ್ದಾರೆ. ʼʼಮೇ 7ರಂದು ಫೈಜಲ್ ಮಗಳ ವಾಟ್ಸ್‌ಆ್ಯಪ್‌ ನಂಬರ್‌ಗೆ ʼಹಾಯ್ʼ ಎನ್ನುವ ಸಂದೇಶ ಕಳುಹಿಸಿದ್ದ. ಅಪರಿಚಿತ ನಂಬರ್‌ ಆಗಿರುವುದರಿಂದ ಮಗಳು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಆತ ಕರೆ ಮಾಡಿ ಬಲವಂತವಾಗಿ ಮಾತನಾಡಲು ಪ್ರಯತ್ನಿಸಿದ್ದ. ಈ ವೇಳೆ ಫೈಜಲ್ ತಾನು ಆಕೆಯನ್ನು ಇಷ್ಟಪಡುವುದಾಗಿ ಹೇಳಿದ್ದ. ಜತೆಗೆ ಇಸ್ಲಾಂಗೆ ಮತಾಂತರವಾಗು. ಆಗ ನಾನು ಯಾವಾಗಲೂ ನಿನ್ನನ್ನು ಸಂತೋಷವಾಗಿರಿಸುತ್ತೇನೆ ಎಂದು ಹೇಳಿದ್ದʼʼ ಎನ್ನುವುದು ಸಂತ್ರಸ್ತೆಯ ತಂದೆ ನೀಡಿದ ವಿವರಣೆ.

ʼʼಇದನ್ನು ಕೇಳಿದ ನಂತರ ಮಗಳು ಯಾವುದೇ ಪ್ರತಿಕ್ರಿಯೆ ನೀಡದೆ ಫೋನ್ ಸಂಪರ್ಕ ಕಡಿತಗೊಳಿಸಿದ್ದಳು. ಮೇ 19ರಂದು ಮತ್ತೆ ಆಕೆಗೆ ಅದೇ ಸಂಖ್ಯೆಯಿಂದ ಮತ್ತೊಮ್ಮೆ ಮೆಸೇಜ್‌ ಬಂದಿದೆ. ಆಕೆ ಯಾರೆಂದು ಕೇಳಿದಾಗ ವಿಡಿಯೊ ಫೈಜಲ್‌ ಕರೆ ಮಾಡಲು ಆರಂಭಿಸಿದ್ದ. ಆಕೆ ರಿಸೀವ್‌ ಮಾಡದೇ ಇದ್ದಾಗ ಅಶ್ಲೀಲ ಸಂದೇಶಗಳು ಮತ್ತು ಅಶ್ಲೀಲ ವಿಡಿಯೊಗಳನ್ನು ಕಳುಹಿಸಿದ್ದ. ಇದಕ್ಕೆ ಆಕ್ಷೇಪ ಸಲ್ಲಿಸಿದಾಗ ಆತ ಮನೆಗೆ ಬಂದು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ. ಮಾತ್ರವಲ್ಲ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಹೆದರಿಸಿದ್ದʼʼ ಎಂದು ವಿದ್ಯಾರ್ಥಿನಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಜತೆಗೆ ಫೈಜಲ್‌, ಮತಾಂತರಗೊಳ್ಳಲಿದಿದ್ದರೆ ಎಐ ತಂತ್ರಜ್ಞಾನ ಬಳಿಸಿ ಯುವತಿಯ ಅಶ್ಲೀಲ ಫೋಟೊ, ವಿಡಿಯೊ ರಚಿಸುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಇದು ಹೊರ ಬಂದರೆ ಮತ್ತೆ ಆಕೆಗೆ ತಲೆ ಎತ್ತು ನಡೆಯಲೂ ಸಾಧ್ಯವಿಲ್ಲ ಎಂದು ಹೇಳಿದ್ದಾಗಿ ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Attempting to Convert: ಯೋಗಿ ನಾಡಿನಲ್ಲಿ ಮತಾಂತರಕ್ಕೆ ಯತ್ನ; ಪಾದ್ರಿ ಸೇರಿ 10 ಮಂದಿಯ ಬಂಧನ

ಇದಾದ ಬಳಿಕ ಸಂತ್ರಸ್ತೆ ತಮ್ಮ ಮನೆಯವರಿಗೆ ವಿಷಯ ತಿಳಿಸಿದ್ದಳು. ತನಿಖೆ ನಡೆಸಿದಾಗ ಬೆದರಿಕೆಯ ಕರೆ ಬಂದ ಫೋನ್‌ ನಂಬರ್‌ ಬರೇಲಿಯ ಭೋಜಿಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ವಾಸಿಸುವ ಫೈಜಲ್‌ನದ್ದು ಎಂದು ತಿಳಿದು ಬಂತು. ಹೆಚ್ಚಿನ ವಿಚಾರಣೆ ವೇಳೆ ಪ್ರಕರಣದಲ್ಲಿ ಫೈಜಲ್‌ನ ತಂದೆ ಅಮೀನ್‌ನ ಕೈವಾಡ ಇರುವುದು ಕೂಡ ಕಂಡುಬಂತು. ಇಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತೆಯ ತಂದೆ ಆಗ್ರಹಿಸಿದ್ದಾರೆ.

Continue Reading

ದೇಶ

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Phalodi Satta Bazar: ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು.

VISTARANEWS.COM


on

Phalodi satta market
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ಐದನೇ ಹಂತದ ಮತದಾನ ಪೂರ್ಣಗೊಂಡಿದ್ದು, ಈಗಿನಿಂದಲೇ ಸೋಲು ಗೆಲವಿನ ಲೆಕ್ಕಾಚಾರ ಒಂದೆಡೆಯಾದರೆ ಬಿಜೆಪಿ(BJP)ಯ 400 ಸ್ಥಾನಗಳ ಟಾರ್ಗೆಟ್‌ ಬಗೆಗಿನ ಚರ್ಚೆ ಮತ್ತೊಂದೆಡೆ. ಇದರ ನಡುವೆ ನಿಖರ ಚುನಾವಣಾ ಫಲಿತಾಂಶ(Election Result)ದ ಬಗ್ಗೆ ನಿಖರವಾದ ಸಮೀಕ್ಷೆ ವರದಿಗೆ ಖ್ಯಾತಿ ಪಡೆದಿರುವ ಫಲೋಡಿ ಸಟ್ಟಾ ಬಜಾರ್‌(Phalodi Satta Bazar) ಫಲಿತಾಂಶದ ಭವಿಷ್ಯವಾಣಿಯತ್ತ ಎಲ್ಲರ ಕಣ್ಣು ನೆಟ್ಟಿದೆ.‍ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡ ಬಳಿಕ ಫಲಿತಾಂಶದ ಬಗ್ಗೆ ಭವಿಷ್ಯವಾಣಿ ನುಡಿದಿದ್ದ ಸಟ್ಟಾ ಬಜಾರ್‌, ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 329 ರಿಂದ 332 ಸೀಟು ಗೆಲ್ಲಬಹುದೆಂದು ಹೇಳುವ ಮೂಲಕ ಬಿಜೆಪಿಗೆ ಶಾಕ್‌ ಕೊಟ್ಟಿತ್ತು.

ಫಲೋಡಿ ಸಟ್ಟಾ ಮಾರುಕಟ್ಟೆ ಇತಿಹಾಸವೇನು?

ಇದೀಗ ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ತಲುಪಿದ್ದು, ಇನ್ನುಳಿದಿರುವುದು ಕೇವಲ ಎರಡೇ ಹಂತದ ಚುನಾವಣೆ. ಹೀಗಿರುವಾಗ ಮತ್ತೊಮ್ಮೆ ಚುನಾವಣಾ ಫಲಿತಾಂಶದ ಭವಿಷ್ಯವಾಣಿಗಾಗಿ ರಾಜಸ್ಥಾನ ಮೂಲಕ ಫಲೋಡಿ ಸಟ್ಟಾ ಬಜಾರ್‌ನತ್ತ ಎಲ್ಲರೂ ಮುಖಮಾಡಿದ್ದಾರೆ. ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು. ಕಾನೂನೂ ಬಾಹಿರವಾಗಿದ್ದರೂ ಕ್ರಿಕೆಟ್‌, ಐಪಿಎಲ್‌ ಸಂದರ್ಭದಲ್ಲಿ ಇಲ್ಲಿ ಅತಿ ಹೆಚ್ಚಾಗಿ ಬೆಟ್ಟಿಂಗ್‌ ನಡೆಯುತ್ತದೆ ಎಂಬ ಆರೋಪ ಕೇಳಿಬರುತ್ತದೆ.

ಫಲೋಡಿ ಮಾರುಕಟ್ಟೆಗೆ ಎಂಟ್ರಿ ಸಿಗೋಗು ಅಷ್ಟು ಸುಲಭ ಅಲ್ಲ

ಫಲೋಡಿ ಸಟ್ಟಾ ಮಾರುಕಟ್ಟೆಯನ್ನು ಪ್ರವೇಶಿಸುವುದು ಹೊರಗಿನವರಿಗೆ ಅಷ್ಟೊಂದು ಸುಲಭದ ಮಾತಲ್ಲ. ಸಾಮಾನ್ಯವಾಗಿ ಏಜೆಂಟ್‌ಗಳ ಮೂಲಕ ಹೋಗಬೇಕಾಗುತ್ತದೆ. ಬೆಟ್ಟಿಂಗ್‌ನಲ್ಲಿ ಭಾಗವಹಿಸುವವರು ಮುಂಚಿತವಾಗಿ ಹಣ ಪಾವತಿಸಬೇಕು. ಈ ಮಾರುಕಟ್ಟೆಯಲ್ಲಿ ಎಲ್ಲಾ ಹಣಕಾಸು ವಹಿವಾಟುಗಳು ಡಿಜಿಟಲ್ ಚಾನೆಲ್‌ಗಳ ಮೂಲಕ ನಡೆಸಲ್ಪಡುತ್ತವೆ. ವಿಷಯದ ಆಧಾರದ ಮೇಲೆ ಬೆಟ್ಟಿಂಗ್‌ ಮೊತ್ತವು ಬದಲಾಗುತ್ತದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾರುಕಟ್ಟೆ ಕಾರ್ಯ ನಿರ್ವಹಿಸುತ್ತಿದ್ದು, ಕೋಟ್ಯಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಇದು ಅಕ್ರಮ ಚಟುವಟಿಕೆ ಆಗಿದ್ದರೂ ಚುನಾವಣಾ ಭವಿಷ್ಯ ಕ್ಷೇತ್ರ ನುಡಿಯುವುದರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ.

ಚುನಾವಣಾ ಭವಿಷ್ಯವಾಣಿ ಏನು?

ಮೇ 13, 2024 ರಂದು, ಬೆಟ್ಟಿಂಗ್ ಮಾರುಕಟ್ಟೆಯು ಬಿಜೆಪಿ ಈ ಬಾರಿ ಉತ್ತಮ ಪ್ರದರ್ಶನ ತೋರಲಿದೆ ಎಂದು ಹೇಳಿತ್ತು, ಬಿಜೆಪಿ ಸುಮಾರು 300 ಸ್ಥಾನಗಳನ್ನು ಗೆಲ್ಲಲಿದ್ದು. ಹೋಲಿಸಿದರೆ, ಕಾಂಗ್ರೆಸ್ 40 ರಿಂದ 42 ಸ್ಥಾನಗಳನ್ನು ಪಡೆಯಬಹುದೆಂದು ನಿರೀಕ್ಷಿಸಿತ್ತು. ಉತ್ತರಪ್ರದೇಶದಲ್ಲಿ ಮತದಾನದ ಪ್ರಮಾಣ ಕಡಿಮೆಯಾದರೂ ಬಿಜೆಪಿ 80 ಸ್ಥಾನಗಳಲ್ಲಿ 62 ರಿಂದ 65 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ರಾಷ್ಟ್ರವ್ಯಾಪಿ ಕಾಂಗ್ರೆಸ್ 70–85 ಸ್ಥಾನಗಳನ್ನು ಗೆಲ್ಲಲಿದ್ದು, ಬಿಜೆಪಿ 280–290 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬೆಟ್ಟಿಂಗ್ ಮಾರುಕಟ್ಟೆ ಭವಿಷ್ಯ ನುಡಿದಿತ್ತು. ಫಲೋಡಿ ಸತ್ತಾ ಬಜಾರ್ ಮತ್ತು ಮಾಧ್ಯಮ ಮೂಲಗಳು ಬಿಜೆಪಿಯು ಒಟ್ಟಾರೆಯಾಗಿ 335 ರಿಂದ 340 ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಹೊಂದಿದೆ ಎಂದು ಭವಿಷ್ಯ ನುಡಿದಿತ್ತು.

ಇದನ್ನೂ ಓದಿ:Bangladesh MP Missing Case: ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

Continue Reading
Advertisement
Prajwal Revanna case Siddaramaiah writes to PM narendra Modi
ಕ್ರೈಂ5 mins ago

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Physical Abuse
ಕ್ರೈಂ14 mins ago

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

India Head Coach
ಕ್ರೀಡೆ18 mins ago

India Head Coach: ರಿಕಿ ಪಾಂಟಿಂಗ್ ಟೀಮ್​ ಇಂಡಿಯಾದ ಮುಂದಿನ ಕೋಚ್​!

Viral Video
ವೈರಲ್ ನ್ಯೂಸ್21 mins ago

Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

Hanuman Chalisa
ಧಾರ್ಮಿಕ41 mins ago

Hanuman Chalisa: ಹನುಮಾನ್ ಚಾಲೀಸಾ ಪಠಿಸುವಾಗ ಈ ತಪ್ಪುಗಳನ್ನು ಮಾಡಬೇಡಿ

RCB
ಕ್ರೀಡೆ46 mins ago

RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

Cyber Crime
ಕ್ರೈಂ1 hour ago

ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು

vegetable rates increase
ಪ್ರಮುಖ ಸುದ್ದಿ1 hour ago

Vegetable Rates: ತರಕಾರಿ ಮುಟ್ಟಿದರೆ ಶಾಕ್‌, ಕಿಲೋಗೆ 320 ದಾಟಿದ ಬೀನ್ಸ್!‌

Phalodi satta market
ದೇಶ1 hour ago

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Virat Kohli
ಕ್ರೀಡೆ1 hour ago

Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ6 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌