Air India: ಒಂದು ವ್ಹೀಲ್​ ಚೇರ್​ ಕೂಡ ಇಲ್ಲ; ಏರ್​ ಇಂಡಿಯಾದ್ದು ಅತ್ಯಂತ ಕಳಪೆ ಸೇವೆ ಎಂದು ಕಿಡಿ ಕಾರಿದ ಬಿಜೆಪಿ ನಾಯಕಿ ಖುಷ್ಬು - Vistara News

ದೇಶ

Air India: ಒಂದು ವ್ಹೀಲ್​ ಚೇರ್​ ಕೂಡ ಇಲ್ಲ; ಏರ್​ ಇಂಡಿಯಾದ್ದು ಅತ್ಯಂತ ಕಳಪೆ ಸೇವೆ ಎಂದು ಕಿಡಿ ಕಾರಿದ ಬಿಜೆಪಿ ನಾಯಕಿ ಖುಷ್ಬು

ಏರ್​ ಇಂಡಿಯಾ ಸಂಸ್ಥೆಗೆ ಇತ್ತೀಚೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಎರಡು ಬಾರಿ ದಂಡ ವಿಧಿಸಿದೆ. ಶಂಕರ್ ಮಿಶ್ರಾ ಕೇಸ್​​ನಲ್ಲಿ 30 ಲಕ್ಷ ರೂ ಮತ್ತು ಇನ್ನೊಬ್ಬ ಪ್ರಯಾಣಿಕನ ಕೇಸ್​​ನಲ್ಲಿ 10 ಲಕ್ಷ ರೂಪಾಯಿ ದಂಡ ಬಿದ್ದಿದೆ.

VISTARANEWS.COM


on

My father started sexually abusing me when I was 8: Khushbu Sundar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಈಗಾಗಲೇ ಸಾಲುಸಾಲು ವಿವಾದಾತ್ಮಕ ಪ್ರಕರಣಗಳ ಕಾರಣಕ್ಕೆ ಸುದ್ದಿಯಲ್ಲಿರುವ ಏರ್​ ಇಂಡಿಯಾ (Air India) ವಿಮಾನ ಯಾನ ಸಂಸ್ಥೆಗೆ ಬಿಜೆಪಿ ನಾಯಕಿ, ಚಿತ್ರ ನಟಿ ಖುಷ್ಬು ಸುಂದರ್​ ಛೀಮಾರಿ ಹಾಕಿದ್ದಾರೆ. ಏರ್​ ಇಂಡಿಯಾದ್ದು ಅತ್ಯಂತ ಕಳಪೆ ಮಟ್ಟದ ಸೇವೆ, ಅವರ ಬಳಿ ಒಂದು ವ್ಹೀಲ್​ ಚೇರ್​ (ಗಾಲಿ ಕುರ್ಚಿ) ಕೂಡ ಇಲ್ಲ ಎಂದು ಟ್ವಿಟರ್​ ಮೂಲಕ ಕಿಡಿಕಾರಿದ್ದಾರೆ.

ಟ್ವೀಟ್ ಮಾಡಿರುವ ಬಿಜೆಪಿ ನಾಯಕಿ ಖುಷ್ಬು ‘ನನಗೆ ಮೊಣಕಾಲಿಗೆ ಗಂಭೀರ ಗಾಯವಾಗಿದ್ದು, ಅಲ್ಲಿ ಪಟ್ಟಿಕಟ್ಟಲಾಗಿದೆ. ನಡೆದಾಡಲು ಸಾಧ್ಯವಿಲ್ಲ. ಚೆನ್ನೈ ಏರ್​ಪೋರ್ಟ್​​ನಲ್ಲಿ ನನಗೆ ಕೆಟ್ಟ ಅನುಭವ ಆಯಿತು. ಏರ್​ ಇಂಡಿಯಾದವರು ನನಗೆ ಒಂದು ವ್ಹೀಲ್​ ಚೇರ್​ ಒದಗಿಸಲು 30 ನಿಮಿಷ ಕಾಯಿಸಿದರು. ಆಮೇಲೆ ಕೂಡ ಇನ್ನೊಂದು ವಿಮಾನಯಾನ ಸಂಸ್ಥೆಯಿಂದ ಎರವಲು ಪಡೆದು ನನಗೆ ನೀಡಿದರು ಹೊರತು ಅವರ ಪ್ರಯಾಣಿಕರಿಗಾಗಿ, ಅವರದ್ದೇ ಒಂದು ವ್ಹೀಲ್​ಚೇರ್​​ನ್ನು ಇಟ್ಟುಕೊಂಡಿಲ್ಲ. ಏರ್​ ಇಂಡಿಯಾ ಇಂಥ ವಿಷಯದಲ್ಲಿ ಇನ್ನಷ್ಟು ಉತ್ತಮ ಸೇವೆಯನ್ನು ಒದಗಿಸಬೇಕು’ ಎಂದು ಹೇಳಿದ್ದಾರೆ.

ಖುಷ್ಬು ಟ್ವೀಟ್​ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿ ಟ್ವೀಟ್​ ಮಾಡಿದ ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆ ‘ಮೇಡಂ, ನಮ್ಮಿಂದ ತಪ್ಪಾಗಿದೆ, ದಯವಿಟ್ಟು ಕ್ಷಮಿಸಿ. ನಾವು ಈ ಬಗ್ಗೆ ಚೆನ್ನೈ ಏರ್​ಪೋರ್ಟ್ ಸಿಬ್ಬಂದಿಯನ್ನು ವಿಚಾರಿಸುತ್ತೇವೆ ಮತ್ತು ನಿಮಗಾದ ಅನನುಕೂಲತೆಗೆ ವಿಷಾದಿಸುತ್ತೇವೆ’ ಎಂದು ಹೇಳಿದೆ.

ಏರ್​ ಇಂಡಿಯಾ ಸಂಸ್ಥೆಗೆ ಇತ್ತೀಚೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಎರಡು ಬಾರಿ ದಂಡ ವಿಧಿಸಿದೆ. ಕಳೆದ ವರ್ಷ ನವೆಂಬರ್ 26ರಂದು ಯುಎಸ್​ನಿಂದ ದೆಹಲಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಶಂಕರ್ ಮಿಶ್ರಾ ಎಂಬಾತ ಕುಡಿದ ಅಮಲಿನಲ್ಲಿ ತನ್ನ ಸಹಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಆತ ಮೂತ್ರ ವಿಸರ್ಜಿದ ಸಂದರ್ಭವನ್ನು ಏರ್​ ಇಂಡಿಯಾ ಸಿಬ್ಬಂದಿ ಸೂಕ್ತವಾಗಿ ನಿಭಾಯಿಸಲಿಲ್ಲ ಎಂದು ಆ ಮಹಿಳೆ ಆರೋಪ ಮಾಡಿದ್ದರು. ಈ ಬಗ್ಗೆ ಏರ್​ ಇಂಡಿಯಾ ಅಧ್ಯಕ್ಷರಿಗೂ ಪತ್ರಬರೆದಿದ್ದರು. ಡಿಜಿಸಿಎ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮೊದಲ ಬಾರಿಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಹಾಗೇ, ಇನ್ನೊಂದು ಕೇಸ್​ನಲ್ಲಿ, ಪ್ಯಾರಿಸ್​ನಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲೂ ಪ್ರಯಾಣಿಕನೊಬ್ಬ ಕುಡಿದ ಸ್ಥಿತಿಯಲ್ಲಿ ಅಶಿಸ್ತಿನಿಂದ ವರ್ತನೆ ಮಾಡಿದ್ದ. ವಿಮಾನದ ಶೌಚಗೃಹದಲ್ಲಿ ಸಿಗರೇಟ್​ ಸೇದಿದ್ದಲ್ಲದೆ, ಆತನೂ ಖಾಲಿ ಇರುವ ಸೀಟ್​ವೊಂದರ ಮೇಲೆ ಮೂತ್ರ ವಿಸರ್ಜಿಸಿದ್ದ. ಈ ವಿಷಯವನ್ನು ಏರ್​ ಇಂಡಿಯಾ ಮುಚ್ಚಿಟ್ಟಿದೆ. ನಾವೇ ಕೇಳುವವರೆಗೂ ಘಟನೆಯ ವರದಿ ನೀಡಿರಲಿಲ್ಲ ಎಂದು ಹೇಳಿದ್ದ ಡಿಜಿಸಿಎ ಎರಡನೇ ಬಾರಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿತ್ತು.

ಇದನ್ನೂ ಓದಿ: Air India Alcohol Policy: ಡಿಜಿಸಿಎ ಭಾರಿ ದಂಡದ ಬೆನ್ನಲ್ಲೇ ಆಲ್ಕೋಹಾಲ್‌ ನೀತಿ ಬದಲಿಸಿದ ಏರ್‌ ಇಂಡಿಯಾ, ಏನಿದು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

Char Dham Yatra 2024: ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ್ ಗೆ ನಡೆಸುವ ಯಾತ್ರೆಗೆ ಚಾರ್ ಧಾಮ್ ಯಾತ್ರೆ ಎಂದು ಕರೆಯಲಾಗುತ್ತದೆ. ಈ ಬಾರಿ ಅಕ್ಷಯ ತೃತೀಯದ ಬಳಿಕ ಈ ನಾಲ್ಕು ದೇವಾಲಯದ ಬಾಗಿಲುಗಳು ತೆರೆಯಲಿದ್ದು, ಆರು ತಿಂಗಳ ಕಾಲ ಭಕ್ತರ ಭೇಟಿಗೆ ಅವಕಾಶವಿದೆ. ಆದರೆ ಅಲ್ಲಿಗೆ ಹೋಗಲು ಮೊದಲೇ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Char Dham Yatra 2024
Koo

ಚಾರ್ ಧಾಮ್ ಯಾತ್ರೆ ಬಗ್ಗೆ ಸಾಕಷ್ಟು ಮಂದಿ ಕೇಳಿರುತ್ತಾರೆ. ಆದರೆ ಎಲ್ಲರಿಗೂ ಅಲ್ಲಿ ಹೋಗೋ ಅವಕಾಶ ಸಿಗುವುದಿಲ್ಲ. ಹಲವು ಬಾರಿ ಯೋಜನೆ ಮಾಡಿ ಯಾವುದೋ ಕಾರಣದಿಂದ ಅದನ್ನು ಮುಂದೂಡಿರುತ್ತಾರೆ. ಆದರೆ ಈ ಬಾರಿ ಬೇಸಿಗೆ ರಜೆಯಲ್ಲೇ (summer holidays) ಚಾರ್ ಧಾಮ್ ಯಾತ್ರೆ (Char Dham Yatra 2024) ಮಾಡಿ ಬರಬಹುದು.

ಚಾರ್ ಧಾಮ್ ಯಾತ್ರೆ ಎಂದೇ ಕರೆಯಲ್ಪಡುವ ಉತ್ತರಾಖಂಡದ (uttarakhand) ನಾಲ್ಕು ಪವಿತ್ರ ಕ್ಷೇತ್ರಗಳಾದ ಗಂಗೋತ್ರಿ (Gangotri), ಯಮುನೋತ್ರಿ (Yamunotri), ಕೇದಾರನಾಥ ( Kedarnath) ಮತ್ತು ಬದರಿನಾಥರ (Badrinath) ವಾರ್ಷಿಕ ತೀರ್ಥಯಾತ್ರೆಯ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಸೋಮವಾರ ಪ್ರಾರಂಭವಾಗಿದೆ.
ಯಾತ್ರೆಗೆ ಬರಲು ಇಚ್ಛಿಸುವವರು ಪ್ರವಾಸೋದ್ಯಮ ಇಲಾಖೆಯ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 10ರಂದು ಪ್ರಾರಂಭ

ವಾರ್ಷಿಕ ಚಾರ್ ಧಾಮ್ ಯಾತ್ರೆಯು ಮೇ 10ರಂದು ಅಕ್ಷಯ ತೃತೀಯ ಸಂದರ್ಭದಲ್ಲಿ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಈ ಮೂರು ದೇಗುಲಗಳಲ್ಲಿ ಬಾಗಿಲನ್ನು ಭಕ್ತರಿಗಾಗಿ ತೆರೆಯಲಾಗುತ್ತದೆ. ಬದರಿನಾಥ ದೇವಾಲಯದ ಬಾಗಿಲು ಮೇ 12 ರಂದು ಸಾರ್ವಜನಿಕರಿಗೆ ತೆರೆಯಲಾಗುವುದು.

ಇದನ್ನೂ ಓದಿ: Mantralaya Tour: ಮಂತ್ರಾಲಯಕ್ಕೆ ಒಂದೇ ದಿನದಲ್ಲಿ ಹೋಗಿ ಬರಬೇಕೆ? ಈ ರೈಲುಗಳಲ್ಲಿ ಹೊರಡಿ

ಆರು ತಿಂಗಳು ಬಂದ್

ಪ್ರತಿ ವರ್ಷ ಲಕ್ಷಾಂತರ ಭಕ್ತರು ಎತ್ತರದಲ್ಲಿರುವ ಈ ಪವಿತ್ರ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಪ್ರತಿ ವರ್ಷ ಚಳಿಗಾಲದ ತಿಂಗಳ ಆರಂಭದಿಂದ ಸುಮಾರು ಆರು ತಿಂಗಳ ಕಾಲ ಮುಚ್ಚಲಾಗುತ್ತದೆ. ಯಾತ್ರೆಯು ಸಾಮಾನ್ಯವಾಗಿ ಏಪ್ರಿಲ್- ಮೇ ತಿಂಗಳಿನಿಂದ ಅಕ್ಟೋಬರ್-ನವೆಂಬರ್ ವರೆಗೆ ನಡೆಯುತ್ತದೆ.

ಪ್ರದಕ್ಷಿಣಾಕಾರ ಪೂಜೆ

ಹಿಂದೂ ಧರ್ಮದಲ್ಲಿ ಈ ಪವಿತ್ರ ದೇವಾಲಯಗಳು ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. ಇಲ್ಲಿ ಪ್ರದಕ್ಷಿಣಾಕಾರವಾಗಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಬೇಕು ಎಂದೇ ನಂಬಲಾಗಿದೆ. ಹೀಗಾಗಿ ಯಾತ್ರೆಯು ಯಮುನೋತ್ರಿಯಿಂದ ಪ್ರಾರಂಭವಾಗುತ್ತದೆ, ಗಂಗೋತ್ರಿ ಕಡೆಗೆ ಸಾಗುತ್ತದೆ, ಕೇದಾರನಾಥದ ಭೇಟಿ ಬಳಿಕ ಅಂತಿಮವಾಗಿ ಬದರಿನಾಥದಲ್ಲಿ ಕೊನೆಗೊಳ್ಳುತ್ತದೆ.

ನೋಂದಣಿ ಹೇಗೆ?

ಚಾರ್ ಧಾಮ್ ಯಾತ್ರೆಗೆ ಹೋಗಲು ಇಚ್ಛಿಸುವವರು ಉತ್ತರಾಖಂಡ ಪ್ರವಾಸೋದ್ಯಮ ಇಲಾಖೆಯ ಚಾರ್ ಧಾಮ್ ಯಾತ್ರೆಗಾಗಿ ಗೊತ್ತುಪಡಿಸಿದ ಅಧಿಕೃತ ವೆಬ್‌ಸೈಟ್‌ನಲ್ಲಿ andtouristcare.uk.gov.in ಅಥವಾ registrationandtouristcare.uk.gov.in ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಮೊದಲು ವೆಬ್ ಸೈಟ್ ಗೆ ಭೇಟಿ ನೀಡಿ ರಿಜಿಸ್ಟರ್ ಅಥವಾ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ.
ಹೆಸರು, ಸಂಪರ್ಕ ಸಂಖ್ಯೆ, ಇಮೇಲ್ ಐಡಿ, ಇತ್ಯಾದಿ ಸೇರಿದಂತೆ ಅಗತ್ಯವಿರುವ ವಿವರಗಳನ್ನು ನಮೂದಿಸಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಿದ ಒಟಿಪಿಯನ್ನು ನಮೂದಿಸುವ ಮೂಲಕ ನೋಂದಣಿಯನ್ನು ಪೂರ್ಣಗೊಳಿಸಿ.

ಬಳಿಕ ಹೊಸ ಡ್ಯಾಶ್‌ಬೋರ್ಡ್ ಕಾಣಿಸಿಕೊಳ್ಳುತ್ತದೆ. ಅಲ್ಲಿ ವ್ಯಕ್ತಿಯು ಪ್ರಯಾಣದ ದಿನಾಂಕಗಳು, ಪ್ರವಾಸಿಗರ ಸಂಖ್ಯೆ, ಭೇಟಿ ನೀಡಲು ದೇವಾಲಯಗಳು ಸೇರಿದಂತೆ ಹೆಚ್ಚಿನ ಪ್ರವಾಸದ ವಿವರಗಳನ್ನು ನೋಡಬಹುದು.
ನೋಂದಣಿ ಪೂರ್ಣಗೊಂಡ ಅನಂತರ ನೋಂದಾಯಿತ ಮೊಬೈಲ್ ಸಂಖ್ಯೆಗೆ ನೋಂದಣಿ ಸಂಖ್ಯೆಯನ್ನು ಕಳುಹಿಸಲಾಗುತ್ತದೆ ಮತ್ತು ಮುಂದೆ ಚಾರ್ ಧಾಮ್ ಯಾತ್ರೆಗಾಗಿ ನೋಂದಣಿ ಪತ್ರವನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಬೇಕು.

ನೋಂದಣಿಗೆ ಬೇರೆ ಅವಕಾಶವೂ ಇದೆ

ವೆಬ್‌ಸೈಟ್‌ನ ಹೊರತಾಗಿ ಪ್ರವಾಸಿಗರು ಟೂರಿಸ್ಟ್‌ಕೇರರ್ ತಾರಾಖಂಡ್ ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಮೂಲಕ ತಮ್ಮನ್ನು ನೋಂದಾಯಿಸಿಕೊಳ್ಳಬಹುದು. ನೋಂದಾಯಿಸಲು ಇನ್ನೊಂದು ಮಾರ್ಗವೆಂದರೆ WhatsApp ನಲ್ಲಿ 8394833833 ಗೆ ಸಂದೇಶ ಕಳುಹಿಸುವುದು. ಪ್ರವಾಸೋದ್ಯಮ ಇಲಾಖೆಯು ಟೋಲ್ ಫ್ರೀ ಸಂಖ್ಯೆ 0135-1364 ಅನ್ನು ಡಯಲ್ ಮಾಡುವ ಮೂಲಕ ನೋಂದಣಿ ಸೇವೆಯನ್ನು ಪೂರ್ಣಗೊಳಿಸಬಹುದು.

ಇದಲ್ಲದೇ ಉತ್ತರಾಖಂಡ ಪ್ರವಾಸೋದ್ಯಮ ಇಲಾಖೆಯು ರಿಷಿಕೇಶ ಮತ್ತು ಹರಿದ್ವಾರದಲ್ಲಿ ನೋಂದಣಿ ಕೌಂಟರ್‌ಗಳನ್ನು ಸ್ಥಾಪಿಸಿದೆ. ಅಲ್ಲಿ ಯಾತ್ರಾರ್ಥಿಗಳು ಆಫ್‌ಲೈನ್ ನೋಂದಣಿ ನಡೆಸಬಹುದು. ಯಾತ್ರಿಕರು ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್‌ನಂತಹ ಅಗತ್ಯ ದಾಖಲೆಗಳನ್ನು ಇಲ್ಲಿ ತೋರಿಸಬೇಕಾಗುತ್ತದೆ.

ದೇಗುಲಗಳ ವಿಶೇಷತೆ


ಯಮುನೋತ್ರಿ ಧಾಮ್ ದೇವಾಲಯವು ಯಮುನಾ ನದಿಯ ಮೂಲಕ್ಕೆ ಸಮೀಪದಲ್ಲಿ 3,293 ಮೀಟರ್ ಎತ್ತರದಲ್ಲಿ ಕಿರಿದಾದ ಕಂದರದಲ್ಲಿದೆ. ದೇವಾಲಯವು ಅಕ್ಷಯ ತೃತೀಯದಂದು ತೆರೆಯುತ್ತದೆ. ಚಳಿಗಾಲಕ್ಕಾಗಿ ಮುಂಚಿತವಾಗಿ ಯಮ ದ್ವಿತೀಯ ಅಂದರೆ ದೀಪಾವಳಿಯ ಅನಂತರ ಎರಡನೇ ದಿನ ಮುಚ್ಚುತ್ತದೆ. ಯಮುನೆಯ ನಿಜವಾದ ಮೂಲವು ಸುಮಾರು 4,421 ಮೀಟರ್ ಎತ್ತರದಲ್ಲಿ ದೇವಸ್ಥಾನಕ್ಕಿಂತ ಸ್ವಲ್ಪ ಮುಂದಿದೆ.


ಗಂಗೋತ್ರಿ ಗಂಗಾ ನದಿಯ ಅಥವಾ ಗೌಮುಖ ನದಿಯ ಮೂಲವೆಂದು ಪರಿಗಣಿಸಲಾಗಿದೆ. ಗಂಗೋತ್ರಿ ಧಾಮವು ಭಾಗೀರಥಿಯ ಬಲದಂಡೆಯಲ್ಲಿ ಸಮುದ್ರ ಮಟ್ಟದಿಂದ 3,140 ಮೀಟರ್ ಎತ್ತರದಲ್ಲಿದೆ.


ಕೇದಾರನಾಥ ದೇವಾಲಯವು ಸಮುದ್ರ ಮಟ್ಟದಿಂದ ಸುಮಾರು 3,500 ಮೀಟರ್ ಎತ್ತರದಲ್ಲಿದೆ. ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥವು ರುದ್ರಪ್ರಯಾಗ ಜಿಲ್ಲೆಯ ಮಂದಾಕಿನಿ ನದಿಯ ಸಮೀಪದಲ್ಲಿದೆ.


ಭಗವಾನ್ ವಿಷ್ಣುವಿನ ಪವಿತ್ರ ಚಾರ್ ಧಾಮಗಳಲ್ಲಿ ಒಂದಾಗಿರುವ ಬದರಿನಾಥವನ್ನು ಭೂಮಿಯ ಮೇಲಿನ ವೈಕುಂಠ ಅಂದರೆ ಭಗವಾನ್ ವಿಷ್ಣುವಿನ ನಿವಾಸ ಎಂದು ಪರಿಗಣಿಸಲಾಗಿದೆ. ಸುಮಾರು 3,100 ಮೀ. ಎತ್ತರದಲ್ಲಿ ಗರ್ವಾಲ್ ಹಿಮಾಲಯದಲ್ಲಿ ಅಲಕನಂದಾ ನದಿಯ ದಡದಲ್ಲಿ ಈ ಪವಿತ್ರ ಪಟ್ಟಣವು ನಾರ್ ಮತ್ತು ನಾರಾಯಣ ಪರ್ವತ ಶ್ರೇಣಿಗಳ ನಡುವೆ ಇದೆ. ಈ ದೇವಾಲಯವನ್ನು 8 ನೇ ಶತಮಾನದಲ್ಲಿ ಋಷಿ ಆದಿ ಶಂಕರಾಚಾರ್ಯರು ಸ್ಥಾಪಿಸಿದರು ಎಂದು ನಂಬಲಾಗಿದೆ.

Continue Reading

ದೇಶ

Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

Instagram Reel: ಇನ್‌ಸ್ಟಾಗ್ರಾಮ್‌ ರೀಲ್ಸ್‌ ಹುಚ್ಚಿಗೆ 21 ವರ್ಷದ ಯುವ ಬಲಿಯಾಗಿದ್ದಾನೆ. ಉತ್ತರ ಪ್ರದೇಶದ ಜನಪದ್ ಬಂದಾದ ಖೈರಾಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವಂ ಕುಮಾರ್ ಎನ್ನುವ ಯುವ ಧ್ವಜ ಸ್ತಂಭದಲ್ಲಿ ತಲೆಕೆಳಗಾಗಿ ನೇತಾಡುವ ಸಾಹಸ ಪ್ರದರ್ಶನಕ್ಕೆ ಮುಂದಾಗಿದ್ದ. ಈ ವೇಳೆ ಕಂಬ ಕುಸಿದು ಬಿದ್ದು ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Instagram Reel
Koo

ಲಕ್ನೋ: ಇತ್ತೀಚಿನ ದಿನಗಳಲ್ಲಿ ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಅದರಲ್ಲೂ ಜನಪ್ರಿಯತೆ ಗಳಿಸಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯಲು ತಯಾರಿರುತ್ತಾರೆ. ಇಂತಹ ಇನ್‌ಸ್ಟಾಗ್ರಾಮ್‌ ರೀಲ್ಸ್‌ (Instagram Reel) ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅಂತಹದ್ದೇ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ನ ಚಿತ್ರೀಕರಣಕ್ಕಾಗಿ ಸಾಹಸ ಪ್ರದರ್ಶಿಸುತ್ತಿದ್ದ 21 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ.

ಮೃತನನ್ನು ಶಿವಂ ಕುಮಾರ್ ಎಂದು ಗುರುತಿಸಲಾಗಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಶಿವಂ ಕುಮಾರ್‌ ಶಾಲೆಯ ಧ್ವಜ ಸ್ತಂಭದಲ್ಲಿ ನೇತಾಡುತ್ತಿದ್ದ. ಸ್ನೇಹಿತರು ಇದನ್ನು ಚಿತ್ರೀಕರಿಸುತ್ತಿದ್ದರು. ಈ ವೇಳೆ ಆತನ ಭಾರ ತಾಳಲಾರದೆ ಧ್ವಜ ಸ್ತಂಭ ಕುಸಿದು ಶಿವಂ ಕುಮಾರ್ ಕೊನೆಯುಸಿರು ಎಳೆದಿದ್ದಾನೆ.

ಘಟನೆ ವಿವರ

ಈ ಅವಘಡ ಗುರುವಾರ (ಏಪ್ರಿಲ್‌ 18) ಸಂಜೆ ನಡೆದಿದೆ. ಉತ್ತರ ಪ್ರದೇಶದ ಜನಪದ್ ಬಂದಾದ ಖೈರಾಡಾ ಗ್ರಾಮದ ಪ್ರೌಢಶಾಲೆಯಲ್ಲಿ ಈ ಘಟನೆ ವರದಿಯಾಗಿದೆ. ಶಿವಂ ತನ್ನ ತಂದೆಯನ್ನು ರೈಲ್ವೆ ನಿಲ್ದಾಣದಿಂದ ಕರೆದುಕೊಂಡು ಬಂದು ಮನೆಗೆ ಬಿಟ್ಟು ಸಂಜೆ ಸುಮಾರು 5 ಗಂಟೆಗೆ ಶಾಲೆಗೆ ತಲುಪಿದ್ದ. ಅಷ್ಟರಲ್ಲೆ ಶಾಲೆಗೆ ಬಂದಿದ್ದ ಆತನ ಸ್ನೇಹಿತರಾದ ಅನು ಮತ್ತು ಅಂಕಿತ್ ಅವನಿಗಾಗಿ ಕಾಯುತ್ತಿದ್ದರು. ನಂತರ ಈ ಮೂವರು ಶಾಲೆಯ ಛಾವಣಿಯನ್ನು ಏರಿದರು. ಇದು ಶಿವಂ ಅವರ ಕೊನೆಯ ಇನ್‌ಸ್ಟಾಗ್ರಾಂ ಸ್ಟಂಟ್ ಎಂದು ಆಗ ಅವರಿಗೆ ತಿಳಿದಿರಲಿಲ್ಲ. ಸ್ನೇಹಿತರು ರೆಕಾರ್ಡ್‌ ಮಾಡುತ್ತಿದ್ದಂತೆ ಶಿವಂ ಕಂಬದಲ್ಲಿ ಸಾಹಸ ಪ್ರದರ್ಶಿಸತೊಡಗಿದ್ದ. ಆಗ ಇದ್ದಕ್ಕಿದ್ದಂತೆ ಕಂಬ ಕುಸಿಯಿತು. ಬಿದ್ದು ಗಂಭೀರ ಗಾಯಗೊಂಡಿದ್ದ ಶಿವಂ ಸ್ನೇಹಿತರ ಕಣ್ಣೇದುರು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹಿಂದೆಯೂ ಇದೇ ರೀತಿಯ ಸಾಹಸ ಪ್ರದರ್ಶಿಸಿದ್ದ

ಅಚ್ಚರಿ ಎಂದರೆ ಶಿವಂ ಇಂತಹ ಸಾಹಸ ಪ್ರದರ್ಶಿಸುತ್ತಿರುವುದು ಇದು ಮೊದಲ ಸಲವೇನಲ್ಲ. ಆತನ ಇನ್‌ಸ್ಟಾಗ್ರಾಂ ತುಂಬ ಇಂತಹದ್ದೇ ಸಾಹಸದ ವಿಡಿಯೊ ತುಂಬಿಕೊಂಡಿದೆ. ಮರ ಮತ್ತು ಛಾವಣಿಯಲ್ಲಿ ತಲೆಕೆಳಗಾಗಿ ನೇತಾಡುತ್ತಿರುವ ಹಲವು ರೀಲ್ಸ್‌ಗಳಿವೆ.

ಶಿವಂ ಅವರದ್ದು ಬಡತನದ ಕುಟುಂಬ. ಅವರ ತಂದೆ ವರ್ದಾನಿ ವಾಟರ್ ಪೌಚ್ ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದಾರೆ. ಕುಟುಂಬವು ಇದುವರೆಗೆ ಯಾವುದೇ ಔಪಚಾರಿಕ ದೂರು ದಾಖಲಿಸಿಲ್ಲ ಎಂದು ಮಾಟೌಂಡ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರಾಮ್ ಮೋಹನ್ ರೈ ಹೇಳಿದ್ದಾರೆ.

ಇದನ್ನೂ ಓದಿ: Viral News: ರಿಕ್ಷಾದ ಟಾಪ್‌ಗೆ ಹತ್ತಿ ಸ್ಟೆಪ್‌ ಹಾಕಿದ ಯುವಕ; ವಿಡಿಯೊ ಕೊನೆಯಲ್ಲಿರುವ ರೋಚಕ ಟ್ವಿಸ್ಟ್‌ ಮಿಸ್‌ ಮಾಡದೆ ನೋಡಿ

ಕೆಲವು ದಿನಗಳ ಹಿಂದೆ ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಉತ್ತರ ಪ್ರದೇಶದಲ್ಲಿ ಅಮಾನುಷ ಘಟನೆಯೊಂದು ನಡೆದಿತ್ತು. ಗಾಜಿಯಾಬಾದ್‌ನಲ್ಲಿ ಯುವಕನೋರ್ವ ನಾಯಿಯ ಕಾಲನ್ನು ಹಿಡಿದು ಕ್ರೂರವಾಗಿ ತಿರುಗಿಸುವ ಮೂಲಕ ಅಮಾನುಷವಾಗಿ ವರ್ತಿಸಿದ ವಿಡಿಯೊ ವೈರಲ್‌ ಆದ ಬಳಿಕ ಈತನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ಝಾಫರ್‌ (Zafar) ಎನ್ನುವ ಯುವಕ ನಾಯಿಯನ್ನು ಬಲವಂತದಿಂದ ಎಳೆದುಕೊಂಡು ಬರುತ್ತಾನೆ. ನಾಯಿ ಗಾಬರಿಯಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಮತ್ತಷ್ಟು ಬಿಗಿಯಾಗಿ ಹಿಡಿದುಕೊಳ್ಳುವ ಆತ ಅದನ್ನು ಅನಾಮತ್ತಾಗಿ ಎತ್ತಿಕೊಳ್ಳುತ್ತಾನೆ. ಬಳಿಕ ಅದರ ಕಾಲುಗಳನ್ನು ಹಿಡಿದುಕೊಂಡು ವೇಗವಾಗಿ ಸುತ್ತುತ್ತಾನೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ಗಾಗಿ ಇದನ್ನು ಚಿತ್ರೀಕರಿಸಲಾಗಿತ್ತು.

Continue Reading

ಪ್ರಮುಖ ಸುದ್ದಿ

Lok Sabha Election : ಕಾಂಗ್ರೆಸ್​ ಪರ ಶಾರುಖ್​ ಖಾನ್​ ಪ್ರಚಾರ; ಬಿಜೆಪಿಯಿಂದ ಆಕ್ಷೇಪ!; ವಿಡಿಯೊ ಇದೆ

Lok Sabah Election: ಪ್ರಣೀತಿ ಶಿಂಧೆ ಅವರು 2003-2004ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ. ಅವರು ಸೋಲಾಪುರ ಸಿಟಿ ಸೆಂಟ್ರಲ್ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದಾರೆ. ಲೋಕಸಭೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಸೋಲಾಪುರದಲ್ಲಿ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

VISTARANEWS.COM


on

lok sabha Election
Koo

ಮುಂಬಯಿ: ಮಹಾರಾಷ್ಟ್ರದ ಸೋಲಾಪುರದಲ್ಲಿ (Lok Sabha Election) ಕಾಂಗ್ರೆಸ್ ಅಭ್ಯರ್ಥಿ ಪ್ರಣೀತಿ ಶಿಂಧೆ ಪರ ಬಾಲಿವುಡ್ ಬಾದ್​ ಶಾ ಶಾರುಖ್ ಖಾನ್ (Shah Rukh Khan) ಅವರನ್ನೇ ಹೋಲುವ ವ್ಯಕ್ತಿಯೊಬ್ಬರು ಪ್ರಚಾರ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಇದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು. ಕಾಂಗ್ರೆಸ್ ಪಕ್ಷದ ‘ಹಗರಣ’ ಎಂದು ಕರೆದಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಚುನಾವಣಾ ಆಯೋಗ ಮತ್ತು ಶಾರುಖ್ ಖಾನ್ ಅವರನ್ನು ಟ್ಯಾಗ್ ಮಾಡಿ ಪ್ರಚಾರದ ಬಗ್ಗೆ ಕೆಲವು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ . “ಕಾಂಗ್ರೆಸ್ ಪಕ್ಷವು ಜನರನ್ನು ನಾಚಿಕೆಯಿಲ್ಲದೆ ಮತ್ತು ಬಹಿರಂಗವಾಗಿ ಮೂರ್ಖರನ್ನಾಗಿಸಲು ಮುಂದಾಗಿದೆ.. ನಕಲಿ ಸಮೀಕ್ಷೆಗಳನ್ನು ಹರಡುವುದು, ಭಾರತ ವಿರೋಧಿ ನಿರೂಪಣೆಗಳನ್ನು ರಚಿಸುವುದು, ಎಐ ಬಳಸಿ ಸೆಲೆಬ್ರಿಟಿಗಳ ಡೀಪ್ ಫೇಕ್​​ಗಳನ್ನು ನಿರ್ಮಿಸುತ್ತದೆ. ಈ ಪಕ್ಷವು ಈಗಾಗಲೇ ಇವಿಎಂಗಳನ್ನು ದೂಷಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ವರದಿಗಳ ಪ್ರಕಾರ ಇದು ಶಾರುಖ್ ಖಾನ್ ಅವರ ಹೋಲುವ ಇಬ್ರಾಹಿಂ ಖಾದ್ರಿ ಎಂಬುವರು ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಇಬ್ರಾಹಿಂ ಖಾದ್ರಿ ಶಾರುಖ್ ಖಾನ್ ಅವರ ತದ್ರೂಪಿ ಎಂದೇ ಪ್ರಸಿದ್ದರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಅಭಿಮಾನಿಗಳನ್ನು ಹೊಂದಿದ್ದಾರೆ. ಶಾರುಖ್​ ಖಾನ್​ ಅವರ ರಯೀಸ್ ಸಿನಿಮಾ ಬಿಡುಗಡೆಯಾದಾಗ ಗುಜರಾತ್ ಮೂಲದ ಇಬ್ರಾಹಿಂ ಖಾದ್ರಿ ಖ್ಯಾತಿ ಪಡೆದುಕೊಂಡಿದ್ದರು. ಏಕೆಂದರೆ ಶಾರುಖ್​ ಅವರೊಂದಿಗಿನ ಖಾದ್ರಿ ಅವರ ಹೋಲಿಕೆ ಈ ವೇಳೆ ಗಮನಕ್ಕೆ ಬಂದಿತ್ತು. ಖಾದ್ರಿ ಶಾರುಖ್​ ಅವರಂತೆಯೇ ಮಾತನಾಡುವ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾರೆ. ಶಾರುಖ್ ಅವರ ಸಿಗ್ನೇಚರ್ ಸ್ಟೈಲ್​ಗಳನ್ನು ನಕಲ ಮಾಡುತ್ತಾರೆ. ಅವರ ನೃತ್ಯ ಚಲನೆಗಳನ್ನೂ ಅನುಕರಣೆ ಮಾಡುತ್ತಾರೆ.

ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಶಾರುಖ್ ಅವರ ತದ್ರೂಪಿ ಖಾದರ್​ ಪೋನಿಟೈಲ್ ಹೊಂದಿದ್ದಾರೆ. ಜನರತ್ತ ಕೈ ಬೀಸುತ್ತಾ ತೆರೆದ ವಾಹನದಲ್ಲಿ ಸಾಗಿದ್ದಾರೆ. ಆವಾಹನದಲ್ಲಿ ರಾಹುಲ್ ಗಾಂಧಿ, ಪ್ರಣೀತಿ ಶಿಂಧೆ ಅವರ ಭಾವಚಿತ್ರವಿರುವ ಕಾಂಗ್ರೆಸ್ ಬ್ಯಾನರ್ ಇತ್ತು.

ಪ್ರಣೀತಿ ಶಿಂಧೆ ಅವರು 2003-2004ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ. ಅವರು ಸೋಲಾಪುರ ಸಿಟಿ ಸೆಂಟ್ರಲ್ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದಾರೆ. ಲೋಕಸಭೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಸೋಲಾಪುರದಲ್ಲಿ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. 2019 ರಲ್ಲಿ ಸುಶೀಲ್ ಶಿಂಧೆ ಸೋಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಜೈಸಿದ್ದೇಶ್ವರ ಸ್ವಾಮಿ ವಿರುದ್ಧ ಸೋತಿದ್ದರು. ಈ ಬಾರಿ ಸುಶೀಲ್ ಶಿಂಧೆ ಅವರ ಪುತ್ರಿಯ ವಿರುದ್ಧ ಬಿಜೆಪಿ ರಾಮ್ ಸಾತ್ಪುತೆ ಅವರನ್ನು ಕಣಕ್ಕಿಳಿಸಿದೆ. ರಾಮ್ ಅವರು ಮಹಾರಾಷ್ಟ್ರದ ಮಾಲ್ಶಿರಾಸ್ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ.

ಇತ್ತೀಚೆಗೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ವೀಡಿಯೊ ವೈರಲ್ ಆಗಿತ್ತು.

Continue Reading

ಪ್ರಮುಖ ಸುದ್ದಿ

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Narayana Murthy : ಕಳೆದ ವರ್ಷ ನವೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದ ಏಕಾಗ್ರ ರೋಹನ್ ಮೂರ್ತಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಮೂರನೇ ಮೊಮ್ಮಗಳು. ಏಕಾಗ್ರಹ ರೋಹನ್ ಮೂರ್ತಿ ಮತ್ತು ಅಪರ್ಣಾ ಕೃಷ್ಣನ್ ಅವರ ಪುತ್ರ. ಕೃಷ್ಣ ಮತ್ತು ಅನೌಷ್ಕಾ, ಅಕ್ಷತಾ ಮೂರ್ತಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿಯರಾಗಿದ್ದಾರೆ.

VISTARANEWS.COM


on

Narayana Murthy
Koo

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಅವರ ಮೊಮ್ಮಗ ಏಕಾಗ್ರ ರೋಹನ್ ಕೇವಲ ಐದು ತಿಂಗಳ ವಯಸ್ಸಿನಲ್ಲಿ ಇನ್ಫೋಸಿಸ್​ ಸಂಸ್ಥೆಯಿಂದ 4.2 ಕೋಟಿ ರೂ.ಗಳ ಲಾಭಾಂಶವನ್ನು ಪಡೆದುಕೊಂಡಿದ್ದಾರೆ. ನಾರಾಯಣ ಮೂರ್ತಿ ಅವರು ಕಳೆದ ತಿಂಗಳು ಇನ್ಫೋಸಿಸ್​​ನ 240 ಕೋಟಿ ಮೌಲ್ಯದ 15 ಲಕ್ಷ ಷೇರುಗಳನ್ನು (0.04% ಪಾಲನ್ನು ಪುಟ್ಟ ಬಾಲಕನಿಗೆ ನೀಡಿದ್ದರು. ಆ ಷೇರುಗಳಿಗೆ ಈಗ ದೊಡ್ಡ ಮೊತ್ತದ ಡಿವಿಡೆಂಡ್​ ಸಿಕ್ಕಿದೆ.

ಎಕ್ಸ್​ಚೇಂಜ್​ ಫೈಲಿಂಗ್ ಪ್ರಕಾರ, ಏಕಾಗ್ರ ಇನ್ಫೋಸಿಸ್​ನ 15,00,000 ಷೇರುಗಳನ್ನು ಹೊಂದಿದ್ದಾನೆ. ಈ ವ್ಯವಹಾರವನ್ನು “ಆಫ್-ಮಾರ್ಕೆಟ್” ನಡೆಸಲಾಯಿತು ಎಂದು ಫೈಲಿಂಗ್ ಬಹಿರಂಗಪಡಿಸಿದೆ.

ಕಳೆದ ವರ್ಷ ನವೆಂಬರ್ 10ರಂದು ಬೆಂಗಳೂರಿನಲ್ಲಿ ಜನಿಸಿದ ಏಕಾಗ್ರ ರೋಹನ್ ಮೂರ್ತಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಮೂರನೇ ಮೊಮ್ಮಗಳು. ಏಕಾಗ್ರಹ ರೋಹನ್ ಮೂರ್ತಿ ಮತ್ತು ಅಪರ್ಣಾ ಕೃಷ್ಣನ್ ಅವರ ಪುತ್ರ. ಕೃಷ್ಣ ಮತ್ತು ಅನೌಷ್ಕಾ, ಅಕ್ಷತಾ ಮೂರ್ತಿ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿಯರಾಗಿದ್ದಾರೆ.

ಶೇಕಡಾ 30ರಷ್ಟು ಲಾಭ ಹೆಚ್ಚಳ

ಇನ್ಫೋಸಿಸ್ ನಾಲ್ಕನೇ ತ್ರೈಮಾಸಿಕದಲ್ಲಿ ಲಾಭದಲ್ಲಿ 30% ಹೆಚ್ಚಳವನ್ನು ಘೋಷಿಸಿದೆ. ಕಳೆದ ವರ್ಷದ 6,128 ಕೋಟಿ ರೂ.ಗೆ ಹೋಲಿಸಿದರೆ 7,969 ಕೋಟಿ ರೂ.ಗೆ ತಲುಪಿದೆ. ಆದಾಯವು 37,923 ಕೋಟಿ ರೂ.ಗೆ ಸ್ವಲ್ಪ ಏರಿಕೆ ಕಂಡಿದೆ. ಮಾರ್ಚ್ 2024 ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ, ಒಟ್ಟು ಲಾಭವು 8.9% ರಷ್ಟು ಏರಿಕೆಯಾಗಿ 26,233 ಕೋಟಿ ರೂ.ಗೆ ತಲುಪಿದೆ/ ಕಾರ್ಯಾಚರಣೆಗಳಿಂದ ವಾರ್ಷಿಕ ಆದಾಯವು 4.7% ರಷ್ಟು ಏರಿಕೆಯಾಗಿ 1,53,670 ಕೋಟಿ ರೂ.ಗೆ ತಲುಪಿದೆ. ಇನ್ಫೋಸಿಸ್ ಮಂಡಳಿಯು 2024ರ ಹಣಕಾಸು ವರ್ಷದಲ್ಲಿ ಪ್ರತಿ ಷೇರಿಗೆ 20 ರೂ.ಗಳ ಅಂತಿಮ ಲಾಭಾಂಶ ಶಿಫಾರಸು ಮಾಡಿದೆ. ಜೊತೆಗೆ ಪ್ರತಿ ಷೇರಿಗೆ 8 ರೂ.ಗಳ ವಿಶೇಷ ಲಾಭಾಂಶವನ್ನು ಶಿಫಾರಸು ಮಾಡಿದೆ. ಹೆಚ್ಚುವರಿಯಾಗಿ, ಇನ್ಫೋಸಿಸ್ ಜರ್ಮನಿಯ ಇನ್-ಟೆಕ್ ಸಂಸ್ಥೆಯನ್ನು 450 ಮಿಲಿಯನ್ ಯುರೋಗಳ ಒಪ್ಪಂದದಲ್ಲಿ ಸ್ವಾಧೀನಪಡಿಸಿಕೊಳ್ಳಲು ಯೋಜಿಸಿದೆ.

ಇದನ್ನೂ ಓದಿ: CET 2024 Exam: ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು; ಏಪ್ರಿಲ್‌ 24ಕ್ಕೆ ಸಮಿತಿ ರಚನೆಗೆ ಕೆಇಎ ನಿರ್ಧಾರ

ಮುಂದಿನ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ 1-3% ಆದಾಯದ ಬೆಳವಣಿಗೆಯನ್ನು ನಿರೀಕ್ಷಿಸುತ್ತದೆ. ಸಂಶೋಧನಾ ಸಂಸ್ಥೆ ಮೋತಿಲಾಲ್ ಓಸ್ವಾಲ್ ಪ್ರಕಾರ, 2025ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಆದಾಯ ನಿರೀಕ್ಷೆಗಿಂತ ಕಡಿಮೆಯಾಗಿದೆ. ಆದರೆ ಇನ್ಫೋಸಿಸ್ ಮಧ್ಯಮಾವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು ಎಂದು ಅವರು ಊಹೆ ಮಾಡಿದ್ದಾರೆ. ಇನ್ಫೋಸಿಸ್ 2025 ರ ಹಣಕಾಸು ವರ್ಷದ ನಂತರ ವೇಗವಾಗಿ ಬೆಳೆಯಲು ಪ್ರಾರಂಭಿಸಬಹುದು ಎಂದು ಹೇಳಿದೆ. ಟಿಸಿಎಸ್​ನಂತ ಕಂಪನಿಗಳಿಗೆ ಹೋಲಿಸಿದರೆ ಇನ್ಪೋಸಿಸ್​ ಷೇರುಗಳು ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ ಎಂದು ಬಿಸಿನೆಸ್ ಟುಡೇ ವರದಿ ಮಾಡಿದೆ.

Continue Reading
Advertisement
Surapura assembly constituency by election Congress candidate Rajavenugopal Nayaka filed nomination
ಯಾದಗಿರಿ2 mins ago

Yadgiri News: ರಾಜಾವೇಣುಗೋಪಾಲ ನಾಯಕಗೆ ಬೆಂಬಲಿಸಿ, ಗೆಲ್ಲಿಸಿ: ಸಚಿವ ದರ್ಶನಾಪುರ

Royal Challengers Banaglore
ಕ್ರೀಡೆ5 mins ago

Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

Video Viral Parameshwara statement on ballot paper bogus voting
ವೈರಲ್ ನ್ಯೂಸ್7 mins ago

Video Viral: ಬ್ಯಾಲೆಟ್‌ ಪೇಪರ್‌ ಕಳ್ಳ ಮತದಾನದ ರಹಸ್ಯ ಬಿಚ್ಚಿಟ್ಟ ಪರಮೇಶ್ವರ್;‌ ಕಾಂಗ್ರೆಸ್‌ EVM ಬೇಡ ಎನ್ನಲು ಇದೇ ಕಾರಣವೆಂದ ಜೆಡಿಎಸ್!

Money Guide
ಮನಿ-ಗೈಡ್31 mins ago

Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

‌Assault Case
ಕರ್ನಾಟಕ32 mins ago

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

Char Dham Yatra 2024
Latest46 mins ago

Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

Diabetic Controle
ಲೈಫ್‌ಸ್ಟೈಲ್55 mins ago

Diabetic Controle: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

Banned Films
ಸಿನಿಮಾ57 mins ago

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Workers protest
ವಿದೇಶ1 hour ago

Workers protest: ಇಸ್ರೇಲ್​ ಜತೆಗಿನ ಒಪ್ಪಂದ ವಿರೋಧಿಸಿ ಪ್ರತಿಭಟಿಸಿದ್ದ ಗೂಗಲ್​​ನ 28​ ಉದ್ಯೋಗಿಗಳ ವಜಾ

Cardiac Arrest
ಲೈಫ್‌ಸ್ಟೈಲ್1 hour ago

Cardiac Arrest: ಮಹಿಳೆಯರೇ ಹುಷಾರು; ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆಕಾರಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ5 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ15 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌