Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ? - Vistara News

ದೇಶ

Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Kolkata Doctor murder case: ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಖಾಂತ ಮಜುಮ್ದಾರ್‌, ಬಿಜೆಪಿ ನಾಯಕ ಅಗ್ನಿಮಿತ್ರ ಪೌಲ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ. ಕೊನೆಗೆ ಸುಖಾಂತ ಮಜುಮ್ದಾರ್‌ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರು ವಾಹನ ಹರಿಸಲು ಯತ್ನಿಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.

VISTARANEWS.COM


on

Kolkata Doctor Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತಾ: ಕೋಲ್ಕತಾದಲ್ಲಿ ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ವಿರುದ್ಧ ಭುಗಿಲೆದ್ದಿರುವ ವೈದ್ಯರ ಸಮೂಹದ ಆಕ್ರೋಶ, ಇದೀಗ ರಾಜ್ಯ ಸರಕಾರದ ವಿರುದ್ಧ ತಿರುಗಿದೆ. ವೈದ್ಯರ ಪ್ರತಿಭಟನೆಗೆ ಇದೀಗ ಬಿಜೆಪಿ ಮುಖಂಡರು(BJP Leaders) ಮತ್ತು ಕಾರ್ಯಕರ್ತರು ಕೈ ಜೋಡಿಸಿದ್ದು, ಮಮತಾ ಬ್ಯಾನರ್ಜಿ(Mamata Banerjee) ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಖಾಂತ ಮಜುಮ್ದಾರ್‌, ಬಿಜೆಪಿ ನಾಯಕ ಅಗ್ನಿಮಿತ್ರ ಪೌಲ್‌ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ. ಕೊನೆಗೆ ಸುಖಾಂತ ಮಜುಮ್ದಾರ್‌ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಿಜೆಪಿ ಪ್ರತಿಭಟನಾಕಾರರ ಮೇಲೆ ಪೊಲೀಸರು ವಾಹನ ಹರಿಸಲು ಯತ್ನಿಸಿದ್ದಾರೆಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಅಲ್ಲದೇ ಅದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.

ಕೇಂದ್ರ ಸಚಿವ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಬಂಧನದ ಕುರಿತು ಬಿಜೆಪಿ ಮುಖಂಡ ಅಗ್ನಿಮಿತ್ರ ಪಾಲ್, “ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ, ಇಂದು ಕೇಂದ್ರ ಸಚಿವರನ್ನು ಹತ್ಯೆ ಮಾಡಿದ ಸಹೋದರಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಬಂಧಿಸಲಾಗಿದೆ. ಇಂದು ಮುಖ್ಯಮಂತ್ರಿ ನಾಟಕ ಮಾಡುತ್ತಿದ್ದಾರೆ. ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರಿಗೆ ಮರಣದಂಡನೆ ವಿಧಿಸುವಂತೆ ಬಾಲಿವುಡ್ ತಾರೆಯರ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

Pralhad Joshi: ಆಹಾರ ಹಂಚಿಕೆ ಪ್ರಮಾಣ ಹೆಚ್ಚಿಸುವ ಸಂಬಂಧ ಭಾರತ ಮತ್ತು ಅರ್ಜೆಂಟೀನಾ ಮಧ್ಯೆ ಪರಸ್ಪರ ಚರ್ಚೆ ನಡೆದಿದೆ. ಅರ್ಜೆಂಟೀನಾ ರಾಯಭಾರಿ ಮರಿಯಾನೋ ಅಗಸ್ಟಿನ್ ಕೌಸಿನೊ ಅವರ ನಿಯೋಗ ಇಂದು ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಭೇಟಿ ಮಾಡಿ ಆಹಾರೋತ್ಪಾದನೆ ಬಗ್ಗೆ ಸಮಾಲೋಚನೆ ನಡೆಸಿದೆ. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Pralhad Joshi
Koo

ನವದೆಹಲಿ: ಆಹಾರ ಹಂಚಿಕೆ ಪ್ರಮಾಣ ಹೆಚ್ಚಿಸುವ ಸಂಬಂಧ ಭಾರತ ಮತ್ತು ಅರ್ಜೆಂಟೀನಾ ಮಧ್ಯೆ ಪರಸ್ಪರ ಚರ್ಚೆ ನಡೆದಿದೆ. ಅರ್ಜೆಂಟೀನಾ ರಾಯಭಾರಿ ಮರಿಯಾನೋ ಅಗಸ್ಟಿನ್ ಕೌಸಿನೊ ಅವರ ನಿಯೋಗ ಇಂದು ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರನ್ನು ಭೇಟಿ ಮಾಡಿ ಆಹಾರೋತ್ಪಾದನೆ ಬಗ್ಗೆ ಸಮಾಲೋಚನೆ ನಡೆಸಿದೆ.

ಉಭಯ ರಾಷ್ಟ್ರಗಳಲ್ಲೂ ಆಹಾರ ಧಾನ್ಯ, ಖಾದ್ಯ ತೈಲದ ಉತ್ಪಾದನೆ ಮತ್ತು ಪೂರೈಕೆಗೆ ಬೇಕಿರುವ ಅಗತ್ಯ ಸಹಕಾರ ಕುರಿತು ಚರ್ಚಿಸಲಾಯಿತು.

ಇದನ್ನೂ ಓದಿ: Government Employees Sports: ಆ.17ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಜಾಗತಿಕ ಸವಾಲುಗಳನ್ನು ನಿಭಾಯಿಸಲು ಮತ್ತು ಆಹಾರ ಹಂಚಿಕೆಯ ಪ್ರಮಾಣವನ್ನು ಹೆಚ್ಚಿಸಲು ಭಾರತ-ಅರ್ಜೆಂಟೀನಾ ಎರಡೂ ದೇಶಗಳ ನಡುವೆ ಪರಸ್ಪರ ಸಹಕಾರ, ಅಗತ್ಯ ನೆರವಿನ ಬಗ್ಗೆ ಚರ್ಚಿಸಲಾಗಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಅವರು ಟ್ವೀಟ್ ಮಾಡಿದ್ದಾರೆ.

Continue Reading

ದೇಶ

PM Narendra Modi: ರಾಜತಾಂತ್ರಿಕ ಮಾತುಕತೆಯೇ ಸಂಘರ್ಷಕ್ಕೆ ಪರಿಹಾರ..ದೂರವಾಣಿ ಮೂಲಕ ಮೋದಿ- ನೆತನ್ಯಾಹು ಸಂಭಾಷಣೆ

PM Narendra Modi: ಇಸ್ರೇಲ್‌ನ ಸೇನಾ ಕಾರ್ಯಾಚರಣೆಯಲ್ಲಿ ಗಾಜಾಪಟ್ಟಿಯನ್ನು ಸಂಪೂರ್ಣವಾಗಿ ಪುಡಿಗಟ್ಟಲಾಗಿದೆ. ಅಲ್ಲದೇ 40,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರನ್ನು ಇಸ್ರೇಲ್‌ ಸೇನೆ ಕೊಂದಿದೆ. ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳ ಪ್ರಕಾರ. 17,000 ಹಮಾಸ್ ಉಗ್ರನ್ನು ಮಟ್ಟಹಾಕುವಲ್ಲಿ ಇಸ್ರೇಲ್‌ ಯಶಸ್ವಿಯಾಗಿದೆ. ಎಲ್ಲಾ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಮಾನವೀಯತೆ ತೋರುವಂತೆ ನೆತನ್ಯಾಹು ಜೊತೆಗಿನ ಮಾತುಕತೆ ವೇಳೆ ಪ್ರಧಾನಿ ಮೋದಿ ಪುನರುಚ್ಚರಿಸಿದರು.

VISTARANEWS.COM


on

PM Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು(Benjamin Netanyahu) ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಸರಿ ಸುಮಾರು ಒಂದು ವರ್ಷದಿಂದ ಭುಲೆದ್ದಿರುವ ಸಂಘರ್ಷವನ್ನು ಪರಸ್ಪರ ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಶೀಘ್ರ ಮತ್ತು ಶಾಂತಿಯುತವಾಗಿ ಪರಿಹರಿಸುವಂತೆ ಮೋದಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಪಶ್ಚಿಮ ಏಷ್ಯಾದಲ್ಲಿ ಕಳೆದ ವರ್ಷ ಅಕ್ಟೋಬರ್ 7 ರಂದು ಪ್ಯಾಲೇಸ್ಟಿನಿಯನ್‌ ಮೂಲದ ಹಮಾಸ್ ಉಗ್ರರು ಇಸ್ರೇಲ್‌ಗೆ ನುಗ್ಗಿ ಸುಮಾರು 1,200 ಜನರನ್ನು ಕೊಂದು, ಸುಮಾರು 250 ಜನರನ್ನು ಅಪಹರಿಸಿ ಒತ್ತೆಯಾಳುಗಳನ್ನಾಗಿರಿಸಿಕೊಂಡ ನಂತರ ಈ ಸಂಘರ್ಷ ಶುರುವಾಗಿತ್ತು. ಇಸ್ರೇಲ್‌ನ ಸೇನಾ ಕಾರ್ಯಾಚರಣೆಯಲ್ಲಿ ಗಾಜಾಪಟ್ಟಿಯನ್ನು ಸಂಪೂರ್ಣವಾಗಿ ಪುಡಿಗಟ್ಟಲಾಗಿದೆ. ಅಲ್ಲದೇ 40,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರನ್ನು ಇಸ್ರೇಲ್‌ ಸೇನೆ ಕೊಂದಿದೆ. ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳ ಪ್ರಕಾರ. 17,000 ಹಮಾಸ್ ಉಗ್ರನ್ನು ಮಟ್ಟಹಾಕುವಲ್ಲಿ ಇಸ್ರೇಲ್‌ ಯಶಸ್ವಿಯಾಗಿದೆ. ಎಲ್ಲಾ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಮಾನವೀಯತೆ ತೋರುವಂತೆ ನೆತನ್ಯಾಹು ಜೊತೆಗಿನ ಮಾತುಕತೆ ವೇಳೆ ಪ್ರಧಾನಿ ಮೋದಿ ಪುನರುಚ್ಚರಿಸಿದರು.

ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ. ಉಭಯ ನಾಯಕರು ದ್ವಿಪಕ್ಷೀಯ ಸಹಕಾರದ ವಿವಿಧ ಅಂಶಗಳನ್ನು ಮತ್ತು ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆಯೂ ಚರ್ಚಿಸಿದ್ದಾರೆ. ಅಲ್ಲದೇ ಸದಾ ಪರಸ್ಪರರ ಜೊತೆ ಸಂಪರ್ಕ ಕಾಪಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಥವಾ MEA ಹೇಳಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಹೋರಾಟವನ್ನು ಕೊನೆಗೊಳಿಸಲು ಮತ್ತು ಉಳಿದ ಒತ್ತೆಯಾಳುಗಳನ್ನು ಮುಕ್ತಗೊಳಿಸಲು ಇಂದು ದೋಹಾದಲ್ಲಿ ನಡೆಯಬೇಕಾಗಿದ್ದ ಗಾಜಾ ಕದನ ವಿರಾಮ ಮಾತುಕತೆಗಳನ್ನು ಶುಕ್ರವಾರ ರದ್ದುಗೊಂಡಿದೆ. ಇದುವರೆಗಿನ ಮಾತುಕತೆಯಲ್ಲಿ ಹಮಾಸ್‌ ಪ್ರತಿನಿಧಿಗಳು ನೇರವಾಗಿ ಔಆಗಿಯಾಗಿರಲೇ ಇಲ್ಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ, ಅಂದರೆ ಗಾಜಾದಲ್ಲಿ ಯುದ್ಧ ಪ್ರಾರಂಭವಾದ ಎರಡು ತಿಂಗಳ ನಂತರ, ಪ್ರಧಾನಿ ಮೋದಿ ಅವರು ಬೆಂಜಮಿನ್ ನೆತನ್ಯಾಹು ಅವರಿಗೆ ಭಾರತದ “ಸ್ಥಿರ ನಿಲುವು” ಯನ್ನು ಪುನರುಚ್ಚರಿಸಿದ್ದಾರೆ. ಅಲ್ಲದೇ ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಸಂಘರ್ಷದಿಂದ ಬಾಧಿತರಾದವರಿಗೆ ಮಾನವೀಯ ನೆರವು ನೀಡಲು ಭಾರತ ಕರೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಇನ್ನು ಇಂದು ಪ್ರಧಾನಿ ನರೇಂದ್ರ ಮೋದಿಗೆ ಬಾಂಗ್ಲಾದೇಶ ಸರ್ಕಾರದ ಹಂಗಾಮಿ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್‌(Muhammad Yunus) ಕರೆ ಮಾಡಿ ಬಾಂಗ್ಲಾದೇಶ(Bangladesh Unrest)ದ ಪ್ರಸ್ತುತ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: Israel attack: ಗಾಜಾದ ವಸತಿ ಶಾಲೆ ಮೇಲೆ ಇಸ್ರೇಲ್ ದಾಳಿ; 100ಕ್ಕೂ ಹೆಚ್ಚು ಮಂದಿ ಸಾವು

Continue Reading

ದೇಶ

Bureaucratic Reshuffle: ಆಡಳಿತಾತ್ಮಕ ಸುಧಾರಣೆಗೆ ಮೋದಿ ಗೇಮ್‌ ಪ್ಲಾನ್‌; ಉನ್ನತ ಮಟ್ಟದ ಅಧಿಕಾರಿಗಳ ಬದಲಾವಣೆ

Bureaucratic Reshuffle: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಆಡಳಿತಾತ್ಮಕವಾಗಿ ಹಲವು ಮಹತ್ವದ ಬದಲಾವಣೆ ಮಾಡುತ್ತಿದ್ದಾರೆ. ದಕ್ಷ ಹಾಗೂ ಹೊಸ ಅಧಿಕಾರಿಗಳನ್ನು ಹೊಸ ಹೊಸ ಹುದ್ದೆಗಳಿಗೆ ನೇಮಿಸುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ವಾರದ ಹಿಂದೆಯಷ್ಟೇ ಕೇಂದ್ರ ಸರ್ಕಾರವು ಟಿ.ವಿ.ಸೋಮನಾಥನ್‌ ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಿತ್ತು.

VISTARANEWS.COM


on

Bureaucratic Reshuffle
Koo

ನವದೆಹಲಿ: ಕೇಂದ್ರ ಅಧಿಕಾರಿ ವರ್ಗದಲ್ಲಿ ಮಹತ್ವದ ಬದಲಾವಣೆಗೆ(Bureaucratic Reshuffle) ಸರ್ಕಾರ ಮುಂದಾಗಿದ್ದು, ಹಣಕಾಸು, ರಕ್ಷಣೆ ಮತ್ತು ಅಲ್ಪಸಂಖ್ಯಾತ ವ್ಯವಹಾರ ಇಲಾಖೆಗಳಿಗೆ ಹೊಸ ಕಾರ್ಯದರ್ಶಿಗಳನ್ನು ನೇಮಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi)ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆಮೂಲಕ ಮೋದಿ ಸರ್ಕಾರ ಆಡಳಿತ ವರ್ಗದ ಬಲವರ್ದನೆ, ಆಡಳಿತಾತ್ಮಕ ಸುಧಾರಣೆಗೆ ಮುಂದಾಗಿದೆ.

ಉನ್ನತ ಮಟ್ಟದ ಅಧಿಕಾರಿಗಳ ಬದಲಾವಣೆ ಭಾಗವಾಗಿ ಹಿರಿಯ ಅಧಿಕಾರಿ ಪುಣ್ಯ ಸಲಿಲಾ ಶ್ರೀವಾಸ್ತವ ಅವರನ್ನು ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ ಶ್ರೀವಾಸ್ತವ ಅವರು ಆರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿ (OSD) ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಹಾಲಿ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಸೆಪ್ಟೆಂಬರ್ 30ರಂದು ನಿವೃತ್ತರಾದ ನಂತರ ಅವರು ಆರೋಗ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರನ್ನು ನೂತನ ರಕ್ಷಣಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅಕ್ಟೋಬರ್ 31 ರಂದು ಅರಮನೆ ಗಿರಿಧರ್ ಅವರ ನಿವೃತ್ತಿಯ ನಂತರ ರಕ್ಷಣಾ ಕಾರ್ಯದರ್ಶಿ ಹುದ್ದೆಯನ್ನು ವಹಿಸಿಕೊಳ್ಳುವ ಮೊದಲು ಅವರು ಆರಂಭದಲ್ಲಿ ಸಚಿವಾಲಯದ OSD ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಲ್ಪಸಂಖ್ಯಾತ ವ್ಯವಹಾರಗಳ ಕಾರ್ಯದರ್ಶಿ ಕಟಿಕಿತ್ತಲ ಶ್ರೀನಿವಾಸ್ ಮುಂದಿನ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿಯಾಗಲಿದ್ದಾರೆ. ಹಿರಿಯ ಅಧಿಕಾರಿ ದೀಪ್ತಿ ಉಮಾಶಂಕರ್ ಅಧ್ಯಕ್ಷರ ಹೊಸ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಆಡಳಿತಾತ್ಮಕವಾಗಿ ಹಲವು ಮಹತ್ವದ ಬದಲಾವಣೆ ಮಾಡುತ್ತಿದ್ದಾರೆ. ದಕ್ಷ ಹಾಗೂ ಹೊಸ ಅಧಿಕಾರಿಗಳನ್ನು ಹೊಸ ಹೊಸ ಹುದ್ದೆಗಳಿಗೆ ನೇಮಿಸುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ವಾರದ ಹಿಂದೆಯಷ್ಟೇ ಕೇಂದ್ರ ಸರ್ಕಾರವು ಟಿ.ವಿ.ಸೋಮನಾಥನ್‌ (TV Somanathan) ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಿತ್ತು. ಟಿ.ವಿ.ಸೋಮನಾಥನ್‌ ಅವರು ಸದ್ಯ ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟಿ.ವಿ.ಸೋಮನಾಥನ್‌ ಅವರು 1987ರ ಬ್ಯಾಚ್‌, ತಮಿಳುನಾಡು ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದರೆ. ಇವರು ತಮಿಳುನಾಡು ಸರ್ಕಾರದಲ್ಲೂ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. ಕೋಲ್ಕೊತಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಎಚ್‌.ಡಿ ಪಡೆದಿರುವ ಇವರು ಹಲವು ವಿಷಯಗಳಲ್ಲಿ ಪರಿಣತಿ ಹೊಂದಿದ್ದಾರೆ. ಇವರು 2019ರಿಂದ 2021ರವರೆಗೆ ಹಣಕಾಸು ವೆಚ್ಚ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 2015-2017ರ ಅವಧಿಯಲ್ಲಿ ಇವರು ಪಿಎಂಒ ಜಂಟಿ ಕಾರ್ಯದರ್ಶಿಯಾಗಿದ್ದರು.

ಇದನ್ನೂ ಓದಿ:TV Somanathan: ಸಂಪುಟ ಕಾರ್ಯದರ್ಶಿಯಾಗಿ ಸೋಮನಾಥನ್‌ ನೇಮಕ; ಯಾರಿವರು?

Continue Reading

ದೇಶ

Union Cabinet Meeting: 2 ಏರ್‌ಪೋರ್ಟ್‌ ಅಭಿವೃದ್ಧಿ, 3 ಮೆಟ್ರೋ ರೈಲು ಯೋಜನೆಗಳಿಗೆ ಕೇಂದ್ರ ಅಸ್ತು

Union Cabinet meeting: ಪಾಟ್ನಾದ ಬಿಹ್ತಾದಲ್ಲಿ ₹ 1,413 ಕೋಟಿ ಅಂದಾಜು ವೆಚ್ಚದೊಂದಿಗೆ, ಹೊಸ ಸಮಗ್ರ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಅಸ್ತು ಅಂದಿದೆ. 66,000 ಚದರ ಮೀಟರ್ ವಿಸ್ತೀರ್ಣದಲ್ಲಿ, ಟರ್ಮಿನಲ್ ಅನ್ನು 3,000 ಪೀಕ್ ಅವರ್ ಪ್ರಯಾಣಿಕರನ್ನು (PHP) ನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ. ಈ ಟರ್ಮಿನಲ್‌ನಲ್ಲಿ ವಾರ್ಷಿಕವಾಗಿ 50 ಲಕ್ಷ ಪ್ರಯಾಣಿಕರನ್ನು ಹೊಂದುವ ಸಾಮರ್ಥ್ಯ ಇರಲಿದೆ.

VISTARANEWS.COM


on

Union Cabinet meeting
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ(Union Cabinet Meeting) ಸಭೆಯಲ್ಲಿ ಇಂದು ಭಾರತದಾದ್ಯಂತ ಮೂರು ಪ್ರಮುಖ ಮೆಟ್ರೋ ರೈಲು ಯೋಜನೆಗಳು ಮತ್ತು ಎರಡು ಹೊಸ ವಿಮಾನ ನಿಲ್ದಾಣ ಸೌಲಭ್ಯಗಳಿಗೆ ಅನುಮೋದನೆ ನೀಡಿದೆ. ಬಿಹಾರ ಮತ್ತು ಪಶ್ಚಿಮಬಂಗಾಳದ ಎರಡು ವಿಮಾನ ನಿಲ್ದಾಣಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಮುಂದಾಗಿದೆ.

ಪಾಟ್ನಾದ ಬಿಹ್ತಾದಲ್ಲಿ ₹ 1,413 ಕೋಟಿ ಅಂದಾಜು ವೆಚ್ಚದೊಂದಿಗೆ, ಹೊಸ ಸಮಗ್ರ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಅಸ್ತು ಅಂದಿದೆ. 66,000 ಚದರ ಮೀಟರ್ ವಿಸ್ತೀರ್ಣದಲ್ಲಿ, ಟರ್ಮಿನಲ್ ಅನ್ನು 3,000 ಪೀಕ್ ಅವರ್ ಪ್ರಯಾಣಿಕರನ್ನು (PHP) ನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ. ಈ ಟರ್ಮಿನಲ್‌ನಲ್ಲಿ ವಾರ್ಷಿಕವಾಗಿ 50 ಲಕ್ಷ ಪ್ರಯಾಣಿಕರನ್ನು ಹೊಂದುವ ಸಾಮರ್ಥ್ಯ ಇರಲಿದೆ. ಭವಿಷ್ಯದಲ್ಲಿ ವಾರ್ಷಿಕವಾಗಿ ಒಂದು ಕೋಟಿ ಪ್ರಯಾಣಿಕರಿಗೆ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶವಿದೆ. ಯೋಜನೆಯು A-321/B-737-800/A-320 ಮಾದರಿಯ ವಿಮಾನಗಳಿಗೆ 10 ಪಾರ್ಕಿಂಗ್ ಬೇಗಳನ್ನು ಈ ಟರ್ಮಿನಲ್‌ ಹೊಂದಲಿದೆ.

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿರುವ ಬಾಗ್ಡೋಗ್ರಾ ವಿಮಾನ ನಿಲ್ದಾಣದಲ್ಲಿ 70,390 ಚದರ ಮೀಟರ್‌ನ ಹೊಸ ಟರ್ಮಿನಲ್ ಕಟ್ಟಡವು 3,000 ಪೀಕ್ ಅವರ್ ಪ್ರಯಾಣಿಕರಿಗೆ (PHP) ಅವಕಾಶ ಕಲ್ಪಿಸಲು ಮತ್ತು ವಾರ್ಷಿಕವಾಗಿ 10 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಲು ವಿನ್ಯಾಸಗೊಳಿಸಲಾಗಿದೆ. ಇಲ್ಲಿ ₹1,549 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸಂಪುಟ ಸಭೆಯಲ್ಲಿ ತಿಳಿಸಿದ್ದಾರೆ.

3 ಮೆಟ್ರೋ ಯೋಜನೆಗಳು

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮೂರು ಮೆಟ್ರೋ ಯೋಜನೆಗಳಿಗೆ ಹಸಿರು ನಿಶಾನೆ ದೊರೆತಿದೆ. ಬೆಂಗಳೂರು ಮೆಟ್ರೊ ರೈಲು 3ನೇ ಹಂತದ ಯೋಜನೆಗೆ ಸಂಪುಟ ಅಸ್ತು ಎಂದಿದೆ. ಈ ಯೋಜನೆ ಒಟ್ಟು 44.65 ಕಿಮೀ ಉದ್ದದ ಎರಡು ಎಲಿವೇಟೆಡ್ ಕಾರಿಡಾರ್‌ಗಳ ಅಭಿವೃದ್ಧಿ ಮತ್ತು 31 ನಿಲ್ದಾಣಗಳನ್ನು ಒಳಗೊಂಡಿದೆ.

ಕ್ಯಾಬಿನೆಟ್ ಥಾಣೆ ಇಂಟಿಗ್ರಲ್ ರಿಂಗ್ ಮೆಟ್ರೋ ರೈಲ್ ಪ್ರಾಜೆಕ್ಟ್‌ಗೂ ಅನುಮೋದನೆ ಸಿಕ್ಕಿದೆ. ಥಾಣೆ ನಗರದ ಪಶ್ಚಿಮ ಭಾಗದ ಪರಿಧಿಯಲ್ಲಿ 22 ನಿಲ್ದಾಣಗಳನ್ನು ಒಳಗೊಂಡಿರುವ 29-ಕಿಮೀ ಕಾರಿಡಾರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಮೆಟ್ರೋ ಮಾರ್ಗವು 2029 ರ ವೇಳೆಗೆ ನಿತ್ಯ 6.47 ಲಕ್ಷ ಪ್ರಯಾಣಿಕರನ್ನು ಹೊಂದುವ ನಿರೀಕ್ಷೆ ಇದೆ. 2045 ರ ವೇಳೆಗೆ ಮೆಟ್ರೋ ಪ್ರಯಾಣಿಕರ ಸಂಖ್ಯೆ 8.72 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಈ ಯೋಜನೆಯ ವೆಚ್ಚ ₹ 12,200.10 ಅಂದಾಜಿಸಲಾಗಿದೆ.

ಪುಣೆಯ ಸ್ವರ್ಗೇಟ್ ಟು ಕಟ್ರಾಜ್ ಅಂಡರ್ಗ್ರೌಂಡ್ ಲೈನ್ ವಿಸ್ತರಣೆ ಕ್ಯಾಬಿನೆಟ್ ಅನುಮೋದಿಸಿದ ಮೂರನೇ ಮೆಟ್ರೋ ಯೋಜನೆ. ಲೈನ್-1B ಎಂದು ಕರೆಯಲ್ಪಡುವ ಈ ಹೊಸ ವಿಸ್ತರಣೆಯು 5.46 ಕಿಮೀ ವ್ಯಾಪಿಸುತ್ತದೆ. ₹ 2,954.53 ಕೋಟಿ ಅಂದಾಜು ವೆಚ್ಚದ ಈ ಯೋಜನೆಯು ಫೆಬ್ರವರಿ 2029 ರೊಳಗೆ ಪೂರ್ಣಗೊಳ್ಳಲಿದೆ.

ಇದನ್ನೂ ಓದಿ: PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Continue Reading
Advertisement
Pralhad Joshi
ದೇಶ2 mins ago

Pralhad Joshi: ಭಾರತ-ಅರ್ಜೆಂಟೀನಾ; ಆಹಾರ ಹಂಚಿಕೆ ಹೆಚ್ಚಳ ಕುರಿತು ಸಚಿವ ಪ್ರಲ್ಹಾದ್‌ ಜೋಶಿ ಚರ್ಚೆ

PM Narendra Modi
ದೇಶ4 mins ago

PM Narendra Modi: ರಾಜತಾಂತ್ರಿಕ ಮಾತುಕತೆಯೇ ಸಂಘರ್ಷಕ್ಕೆ ಪರಿಹಾರ..ದೂರವಾಣಿ ಮೂಲಕ ಮೋದಿ- ನೆತನ್ಯಾಹು ಸಂಭಾಷಣೆ

Bureaucratic Reshuffle
ದೇಶ34 mins ago

Bureaucratic Reshuffle: ಆಡಳಿತಾತ್ಮಕ ಸುಧಾರಣೆಗೆ ಮೋದಿ ಗೇಮ್‌ ಪ್ಲಾನ್‌; ಉನ್ನತ ಮಟ್ಟದ ಅಧಿಕಾರಿಗಳ ಬದಲಾವಣೆ

Indian Paralympic Team
ಕ್ರೀಡೆ44 mins ago

Indian Paralympic Team: ಪದಕ ಬೇಟೆಗೆ ಹೊರಟ ಭಾರತೀಯ ಪ್ಯಾರಾಲಿಂಪಿಕ್ಸ್‌ ತಂಡಕ್ಕೆ ಬೀಳ್ಕೊಡುಗೆ

ICC Women's T20 World Cup
ಕ್ರೀಡೆ2 hours ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್‌ ಆತಿಥ್ಯಕ್ಕೆ ಮುಂದಾದ ಜಿಂಬಾಬ್ವೆ

Union Cabinet meeting
ದೇಶ2 hours ago

Union Cabinet Meeting: 2 ಏರ್‌ಪೋರ್ಟ್‌ ಅಭಿವೃದ್ಧಿ, 3 ಮೆಟ್ರೋ ರೈಲು ಯೋಜನೆಗಳಿಗೆ ಕೇಂದ್ರ ಅಸ್ತು

Money Guide
ಮನಿ-ಗೈಡ್2 hours ago

Money Guide: ಎಸ್‌ಐಪಿ-ಪಿಪಿಎಫ್; ಹಣ ಹೂಡಿಕೆಗೆ ಯಾವುದು ಬೆಸ್ಟ್?

CM Siddaramaiah
ಬೆಂಗಳೂರು2 hours ago

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Shivamogga News
ಕರ್ನಾಟಕ2 hours ago

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Viral News
ಕ್ರೀಡೆ2 hours ago

Viral News: ಮಾವ ಎಮ್ಮೆ ಬದಲು ಆ ಗಿಫ್ಟ್​ ಕೊಡುತ್ತಿದ್ದರೆ ಸಂತಸವಾಗುತ್ತಿತ್ತು ಎಂದ ಒಲಿಂಪಿಕ್ಸ್ ಚಿನ್ನ​ ವಿಜೇತ ಅರ್ಷದ್​ ನದೀಮ್

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌