Site icon Vistara News

Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Kolkata Doctor Murder Case

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆಯ (Kolkata Doctor Murder Case) ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ಭುಗಿಲೆದ್ದಿದ್ದು, ಭಾರತೀಯ ವೈದ್ಯಕೀಯ ಸಂಘ (Indian Medical Association) ಇಂದು (ಆಗಸ್ಟ್ 17) ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.

ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳ ಓಪಿಡಿ ಬಂದ್ ಇರಲಿದ್ದು, ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ಸಿಗಲಿದೆ‌. ಎಲ್ಲ ವೈದ್ಯರು ಓಪಿಡಿ ಸೇವೆಗಳಿಗೆ ಹಾಜರಾಗದೆ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನ್ನ ಮಾತ್ರ ನೀಡಲಿದ್ದಾರೆ.

ಐಎಂಎ ಮುಂದಿಟ್ಟ 5 ಬೇಡಿಕೆ

ಭಾರತೀಯ ವೈದ್ಯಕೀಯ ಸಂಘ ಶುಕ್ರವಾರ 5 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದೆ.

ಇಂದು ಲಭ್ಯವಿರುವ ಸೇವೆಗಳು

ತುರ್ತು ಚಿಕಿತ್ಸೆ, ಮೆಡಿಕಲ್ ಶಾಪ್ಸ್, ಇನ್ ಪೇಷೆಂಟ್ ಸೇವೆ, ಹೆರಿಗೆ ಮತ್ತು ಎಮರ್ಜೆನ್ಸಿ ಸರ್ಜರಿ.

ಲಭ್ಯವಿಲ್ಲದ ಸೇವೆಗಳು

ಓಪಿಡಿ, ಡಯಾಲಿಸಿಸ್, ಕ್ಲಿನಿಕ್ ಸೇವೆ, ಮಕ್ಕಳ ಓಪಿಡಿ, ಡೆಂಟಲ್ ಸರ್ವಿಸ್.

ಇದನ್ನೂ ಓದಿ: Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Exit mobile version