ದೇಶ
ಸ್ಥಳೀಯ ಕುಶಲಕರ್ಮಿಗಳು, ನೇಕಾರರಿಗೆ ಆನ್ ಲೈನ್ ಮಾರಾಟದಲ್ಲಿ ಭರ್ಜರಿ ಏರಿಕೆ
ಸ್ಥಳೀಯ ಕುಶಲಕರ್ಮಿಗಳು, ನೇಕಾರರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದೇ ದುಸ್ತರ. ಆದರೆ, ಆನ್ಲೈನ್ ವೇದಿಕೆಗಳು (Online platforms) ಇವರ ನೆರವಿಗೆ ಬಂದಿದ್ದು, ಸಾಕಷ್ಟು ಸುಧಾರಣೆ ಕಾಣುತ್ತಿವೆ.
ಬೆಂಗಳೂರು, ಕರ್ನಾಟಕ: ಭಾರತೀಯ ಕುಶಲಕರ್ಮಿಗಳು ಮತ್ತು ನೇಕಾರರು ತಮ್ಮ ಸಾಂಪ್ರದಾಯಿಕ ಕಲೆ ಮತ್ತು ಜೀವನೋಪಾಯವನ್ನು ಕಾಪಾಡಿಕೊಳ್ಳಲು ಭಾರೀ ಹೋರಾಟವನ್ನು ನಡೆಸುತ್ತಿದ್ದಾರೆ. ಸದ್ಯಕ್ಕೆ ತಾವು ಉತ್ಪಾದಿಸಿದ ವಸ್ತುಗಳ ಮಾರಾಟದಲ್ಲಿ ಭಾರೀ ಏರಿಕೆ ಕಾಣುತ್ತಿರುವುದಕ್ಕೆ ಆನ್ಲೈನ್ ಪ್ಲಾಟ್ಫಾರ್ಮ್ಗಳಿಗೆ (Online platforms) ಋಣಿಯಾಗಿದ್ದಾರೆ. ಉದಾಹರಣೆಗೆ, ನಶಿಸುತ್ತಿರುವ ಕರಕುಶಲ ಕಲೆಯನ್ನು ಜೀವಂತವಾಗಿ ಇರಿಸಲು ಡಿಜಿಟಲ್ನ ಶಕ್ತಿಯನ್ನು ಬಳಸಿಕೊಳ್ಳಲು ಪ್ರಾರಂಭಿಸಿದ್ದಾರೆ ಸ್ಥಳೀಯ ಮಾರಾಟಗಾರ ಅದಿಲ್. ಶತಮಾನದ-ಹಳೆಯ ಅವರ ಕುಟುಂಬ-ನಿಯಂತ್ರಿತ ವ್ಯಾಪಾರ ಚನ್ನಪಟ್ಟಣ ಆಟಿಕೆಗಳು ಹಲವಾರು ಸ್ಥಳೀಯ ಕುಶಲಕರ್ಮಿಗಳ ಮೇಲೆ ಪರಿಣಾಮ ಬೀರುತ್ತವೆ.
“ನನ್ನೊಂದಿಗೆ ಸುಮಾರು 35 ಕುಶಲಕರ್ಮಿಗಳು ಕೆಲಸ ಮಾಡುತ್ತಿದ್ದಾರೆ. ಕೆಲವರು 40 ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿದ್ದರೆ, ಇನ್ನೂ ಕೆಲವರು 60 ವರ್ಷ ವಯಸ್ಸಿನವರಾಗಿದ್ದಾರೆ,’ ಎಂದು ಅವರು ಹೇಳುತ್ತಾರೆ.
“ಆನ್ಲೈನ್ ಪ್ಲಾಟ್ಫಾರ್ಮ್ಗಳು ಈ ಕುಶಲಕರ್ಮಿಗಳಿಗೆ ಜೀವನೋಪಾಯದ ಪ್ರಮುಖ ಮೂಲವಾಗಿವೆ. ಈ ಸೌಲಭ್ಯಗಳು ನನ್ನ ತಂದೆ ಮತ್ತು ತಾತನಿಗೆ ಇರಲಿಲ್ಲ. ಆದರೆ ಇಂದು ನಾನು ಕಡಿಮೆ ಹೂಡಿಕೆಯೊಂದಿಗೆ ಖರೀದಿದಾರರ ಜತೆಗೆ ತೊಡಗಿಸಿಕೊಳ್ಳಲು ಮತ್ತು ದೊಡ್ಡ ಪರಿಣಾಮ ರೂಪಿಸಲು ಡಿಜಿಟಲ್ ಪ್ಲಾಟ್ಫಾರ್ಮ್ಗಳ ಶಕ್ತಿಯನ್ನು ಬಳಸಿಕೊಳ್ಳಬಹುದು. ನಮ್ಮ ಭವ್ಯವಾದ ಕರಕುಶಲ ಪರಂಪರೆ ಸಂರಕ್ಷಿಸುವ ಜೊತೆಗೆ ವ್ಯಾಪಾರವನ್ನು ಹೆಚ್ಚಿಸಲು ಮತ್ತು ಈ ವಿಶಿಷ್ಟ ಚನ್ನಪಟ್ಟಣದ ಆಟಿಕೆಗಳನ್ನು ಭಾರತದಿಂದ ಜಗತ್ತಿಗೆ ಲಭ್ಯವಾಗುವಂತೆ ಮಾಡಲು ನಾನು ಬಯಸುತ್ತೇನೆ,” ಎಂದು ಅವರು ಹೇಳುತ್ತಾರೆ.
ಆಂಧ್ರಪ್ರದೇಶ ಮೂಲದ ಆದಿಲಕ್ಷ್ಮಿ ಟಾಯ್ಸ್ನ ಮಾಲೀಕ ಅಡವಿ ಶ್ರೀನಿವಾಸ್ ಅವರಿಗೆ ತಮ್ಮ ಉದ್ಯಮಶೀಲತೆಯ ಕನಸನ್ನು ಉತ್ತೇಜಿಸಲು ಸಾಮಾಜಿಕ ಮಾಧ್ಯಮ ಮತ್ತು ಜಿಯೋಮಾರ್ಟ್ ಸೇರಿದಂತೆ ಹೊಸ ವಿತರಣೆ ಚಾನೆಲ್ಗಳತ್ತ ಮುಖ ಮಾಡಿದ್ದಾರೆ. ಜಿಯೋಮಾರ್ಟ್ನ ಕ್ರಾಫ್ಟ್ಸ್ ಮೇಳಗಳಂತಹ ಆನ್ಲೈನ್ ಮಳಿಗೆಗಳಿಂದ ಕುಶಲಕರ್ಮಿಗಳು ಮತ್ತು ಶ್ರೀನಿವಾಸ್ ಅವರಂಥ ಉದ್ಯಮಿಗಳಿಗೆ ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನು ದೇಶಾದ್ಯಂತದ ಹೊಸ ಗ್ರಾಹಕರಿಗೆ ತಲುಪಿಸಲು ಸಹಾಯ ಮಾಡುತ್ತವೆ.
ಅದೇ ರೀತಿ, ತಮಿಳುನಾಡು ರಾಜ್ಯದ ಈರೋಡ್ನ ಲಾವಣ್ಯಾ ಅವರು ಹೊಸ ಗ್ರಾಹಕರನ್ನು ಹುಡುಕಲು ಮತ್ತು ಕಾರ್ಯಾಚರಣೆಯನ್ನು ಹೆಚ್ಚಿಸಲು ದರ್ಭಾಯಿ ಮತ್ತು ಸಾಂಬು ನದಿ ಹುಲ್ಲಿನಿಂದ ನೇಯ್ದ ಯೋಗ ಮತ್ತು ಧ್ಯಾನ ಮ್ಯಾಟ್ಗಳನ್ನು ಮಾರಾಟ ಮಾಡುವ 100 ವರ್ಷಗಳ ಹಳೆಯ ಮತ್ತು ಸ್ಪಾರ್ಟಾನ್ ಕುಟುಂಬ ನಡೆಸುವ ಅಂಗಡಿಯನ್ನು ಆನ್ಲೈನ್ನಲ್ಲಿ ತಂದಿದ್ದಾರೆ.
“ಸಾಂಕ್ರಾಮಿಕ ಸಮಯದಲ್ಲಿ ಕೆಲಸ ಕಳೆದುಕೊಂಡ ನಂತರ ನನ್ನ ಹಳ್ಳಿಯ ಜನರು ಇತರ ನಗರಗಳಿಂದ ಮರಳಿದರು,” ಎಂದು 17 ವರ್ಷಗಳ ಕೆಲಸದ ಅನುಭವ ಹೊಂದಿರುವ ಸಾಫ್ಟ್ವೇರ್ ಇಂಜಿನಿಯರ್ ಲಾವಣ್ಯಾ ಹೇಳುತ್ತಾರೆ. ಅವರ ಮೂರನೇ ತಲೆಮಾರಿನ ವ್ಯವಹಾರವನ್ನು ಮುಂದುವರಿಸಲು ತಮ್ಮ ಒಂಬತ್ತರಿಂದ ಐದು ಗಂಟೆ ತನಕ ಮಾಡುವ ಕೆಲಸವನ್ನು ತೊರೆದಿದ್ದಾರೆ. “ಪುರುಷ ಮತ್ತು ಸ್ತ್ರೀ ಕುಶಲಕರ್ಮಿಗಳಿಗೆ ಕೈಮಗ್ಗದ ಟವೆಲ್ ಮತ್ತು ಯೋಗ ಹಾಗೂ ಧ್ಯಾನ ಮ್ಯಾಟ್ಗಳನ್ನು ನೇಯಲು ತರಬೇತಿ ನೀಡುವುದಕ್ಕೆ ನಾನು ನಿರ್ಧರಿಸಿದೆ. ಅವರ ಜೀವನೋಪಾಯವು ಇದರ ಮೇಲೆ ಅವಲಂಬಿತವಾಗಿದೆ,” ಎಂದು ಹೇಳುತ್ತಾರೆ.
ಪ್ರಬಲವಾದ ವ್ಯಾಪಾರವನ್ನು ರೂಪಿಸುವುದಕ್ಕೆ ತನ್ನ ಹಳ್ಳಿಯಲ್ಲಿ ನೇಕಾರರ ಜೀವನೋಪಾಯವನ್ನು ಬೆಂಬಲಿಸಲು ಮತ್ತು ತನ್ನ ಸಮುದಾಯದ ಇತರ ಮಹಿಳೆಯರಿಗೆ ಮಾದರಿಯಾಗಿ, ಲಾವಣ್ಯಾ ತನ್ನದೇ ಆದ ವೆಬ್ಸೈಟ್ ಅನ್ನು ಪ್ರಾರಂಭಿಸಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಪ್ಲಾಟ್ಫಾರ್ಮ್ಗಳನ್ನು ಬಳಸಲು ಶುರು ಮಾಡಿದರು.
“ನಾನು ಜಿಯೋಮಾರ್ಟ್ನಂತಹ ಆನ್ಲೈನ್ ಮಾರ್ಕೆಟ್ ಪ್ಲೇಸ್ ಗಳಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದೇನೆ, ಅಲ್ಲಿ ಇತ್ತೀಚೆಗೆ ನನ್ನ ಉತ್ಪನ್ನಗಳನ್ನು ಲಿಸ್ಟ್ ಮಾಡಿದ್ದೇನೆ ಮತ್ತು ಆರ್ಡರ್ಗಳನ್ನು ಪಡೆಯಲು ಪ್ರಾರಂಭಿಸಿದ್ದೇನೆ,” ಎಂದು ಅವರು ಹೇಳುತ್ತಾರೆ.
2019 ರಲ್ಲಿ ಹೈದರಾಬಾದ್ನ ದಿಲ್ಸುಖ್ ನಗರದಲ್ಲಿ ಆದಿಲಕ್ಷ್ಮಿ ಟಾಯ್ಸ್ ಪ್ರಾರಂಭಿಸಲು 18 ವರ್ಷಗಳ ಕೆಲಸವನ್ನು ತೊರೆದ ಇನ್ನೊಬ್ಬ ಮಾರಾಟಗಾರ ಶ್ರೀನಿವಾಸ್ ಕೂಡ ಡಿಜಿಟಲ್ ವಿತರಣಾ ಚಾನೆಲ್ಗಳನ್ನು ಅನುಸರಿಸುವ ಮೂಲಕ ಫೇಸ್ಬುಕ್ ಜಾಹೀರಾತುಗಳತ್ತ ಹೊರಳಿದರು ಮತ್ತು ದೃಢವಾದ ಸಾಮಾಜಿಕ ಮಾಧ್ಯಮ ಉಪಸ್ಥಿತಿಯನ್ನು ರೂಪಿಸುವ ಮೂಲಕ ಹೆಚ್ಚಿನ ಮಾರಾಟವನ್ನು ಮಾಡುತ್ತಿದ್ದಾರೆ.
“ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ನೇಕಾರರಿಗೆ ಡಿಜಿಟಲೈಸೇಷನ್ ಬಗ್ಗೆ ಸ್ವಲ್ಪವೇ ತಿಳಿದಿದೆ. ಅವರ ಕಲೆಯನ್ನು ಮುನ್ನೆಲೆಗೆ ತರುವುದು ಮತ್ತು ಅವರನ್ನು ಬೆಂಬಲಿಸುವುದು ಬಹಳ ಮುಖ್ಯ. ವಿಷಕಾರಿಯಲ್ಲದ, ಬಾಳಿಕೆ ಬರುವ ಮತ್ತು ಸುಸ್ಥಿರವಾಗಿರುವ ಮರದ ಆಟಿಕೆಗಳನ್ನು ಉತ್ತೇಜಿಸುವುದು ನಮ್ಮ ಗುರಿಯಾಗಿದೆ,” ಎಂದು ಜಿಯೋಮಾರ್ಟ್ನ ಮಾರಾಟಗಾರ ಶ್ರೀನಿವಾಸ್ ಹೇಳುತ್ತಾರೆ.
ಇದನ್ನೂ ಓದಿ: JioMart layoffs : ಜಿಯೊ ಮಾರ್ಟ್ನಲ್ಲಿ 1,000 ಉದ್ಯೋಗಿಗಳ ವಜಾ, ಕಾರಣವೇನು?
ಹಲವಾರು ಆನ್ಲೈನ್ ಪ್ಲಾಟ್ಫಾರ್ಮ್ಗಳಿಂದ ಹೆಚ್ಚುತ್ತಿರುವ ಆರ್ಡರ್ಗಳನ್ನು ಪಡೆಯುವುದರ ಹೊರತಾಗಿ, ಅವರು ಸದ್ಯಕ್ಕೆ ಆಟಿಕೆಗಳನ್ನು ರಫ್ತು ಮಾಡುತ್ತಿದ್ದಾರೆ. ಇನ್ನೂ ಕುತೂಹಲಕಾರಿ ಅಂಶ ಏನೆಂದರೆ, ಅವರ ಗ್ರಾಹಕರಲ್ಲಿ ಹೆಚ್ಚಿನವರು 40ರಿಂದ 50 ವರ್ಷ ವಯಸ್ಸಿನವರಾಗಿದ್ದಾರೆ.
ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ದೇಶ
New Parliament Building: ರಾಜಸ್ಥಾನದ ಶಿಲೆ, ಮಹಾರಾಷ್ಟ್ರದ ತೇಗದ ಮರ; ವೈವಿಧ್ಯತೆಯಲ್ಲಿ ಏಕತೆಯ ಸಂಕೇತ ಈ ಸಂಸತ್ ಭವನ
New Parliament Building: ನೂತನ ಸಂಸತ್ ಭವನದ ನಿರ್ಮಾಣಕ್ಕೆ ದೇಶದ ಹತ್ತಾರು ಭಾಗಗಳಿಂದ ಶಿಲೆ, ಮರದ ತುಂಡು, ಮಾರ್ಬಲ್ಗಳನ್ನು ಬಳಸಲಾಗಿದೆ. ಹಾಗಾಗಿ, ಇದು ವೈವಿಧ್ಯತೆಯಲ್ಲಿ ಏಕತೆ ಸಾರುವ ಸಂಕೇತವೆನಿಸಿದೆ.
ನವದೆಹಲಿ: ದೇಶದ ಶಕ್ತಿಕೇಂದ್ರವಾಗಲಿರುವ ನೂತನ ಸಂಸತ್ ಭವನವನ್ನು (New Parliament Building) ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (May 28) ಉದ್ಘಾಟನೆ ನೆರವೇರಿಸಲಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ ಬಳಕೆ, ಉತ್ತಮ ಆಸನ ವ್ಯವಸ್ಥೆ ಸೇರಿ ಸಕಲ ಸೌಕರ್ಯಗಳಿರುವ ನೂತನ ಸಂಸತ್ ಭವನದ ನಿರ್ಮಾಣಕ್ಕೆ ದೇಶದ ಹತ್ತಾರು ಭಾಗಗಳಿಂದ ಕಲ್ಲು, ಮಾರ್ಬಲ್ ಸೇರಿ ಹಲವು ವಸ್ತುಗಳನ್ನು ಬಳಸಲಾಗಿದೆ. ದೇಶದ ಮೂರ್ತರೂಪವಾಗಿ ಸಂಸತ್ ಭವನ ತಲೆ ಎತ್ತಿದ್ದು, ಇದಕ್ಕಾಗಿ ದೇಶದ ಯಾವ ಭಾಗದಿಂದ ಯಾವ ವಸ್ತುವನ್ನು ಬಳಸಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಹೀಗಿದೆ.
ಸಂಸತ್ ಭವನಕ್ಕೆ ಯಾವ ಭಾಗದಿಂದ ಯಾವ ವಸ್ತು ಬಳಕೆ?
- ರಾಜಸ್ಥಾನದ ಸರ್ಮಥುರದಿಂದ ಕೆಂಪು ಹಾಗೂ ಬಿಳಿಯ ಸ್ಯಾಂಡ್ಸ್ಟೋನ್ಗಳನ್ನು ಬಳಸಿ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ದೆಹಲಿಯಲ್ಲಿ ಕೆಂಪುಕೋಟೆ ಹಾಗೂ ಹುಮಾಯುನ್ ಸಮಾಧಿಯನ್ನು ಇದೇ ಶಿಲೆಗಳಿಂದ ನಿರ್ಮಿಸಲಾಗಿದೆ ಎಂಬುದು ಗಮನಾರ್ಹ.
- ನೂತನ ಸಂಸತ್ ಭವನದ ನಿರ್ಮಾಣದ ವೇಳೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಹೆಚ್ಚಾಗಿ ಸಿಗುವ ತೇಗದ ಮರದ ತುಂಡುಗಳನ್ನು ಬಳಸಲಾಗಿವೆ. ಇವು ಕಟ್ಟಡದ ಅಂದ ಹೆಚ್ಚಿಸುವ ಜತೆಗೆ ದೀರ್ಘ ಬಾಳಿಕೆಗೆ ಹೆಸರಾಗಿವೆ.
- ಸಂಸತ್ ಭವನದ ಸೌಂದರ್ಯ ಹೆಚ್ಚಿಸುವ ದೃಷ್ಟಿಯಿಂದ ರಾಜಸ್ಥಾನದ ಅಜ್ಮೇರ್ ಬಳಿಯ ಲಾಖದಿಂದ ಕೇಶರಿಯಾ ಹಸಿರು ಶಿಲೆ, ಕೆಂಪು ಗ್ರಾನೈಟ್ ಹಾಗೂ ಅಂಬಾಜಿಯಿಂದ ಬಿಳಿ ಅಮೃತಶಿಲೆಗಳನ್ನು ಬಳಸಲಾಗಿದೆ.
- ಸಂಸತ್ ಭವನದ ಒಳಗಡೆಯ ಪೀಠೋಪಕರಣಗಳನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಕೆತ್ತಲಾಗಿದೆ. ಇದರಿಂದ ಸಂಸತ್ ಭವನದ ಆಕರ್ಷಣೆ ಹೆಚ್ಚಾಗಿದೆ.
- ಲೋಕಸಭೆ ಹಾಗೂ ರಾಜ್ಯಸಭೆಯ ಸೀಲಿಂಗ್ಗಳಿಗೆ ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯುನ ಉಕ್ಕಿನ ಉಪಕರಣಗಳನ್ನು ಬಳಸಲಾಗಿದೆ.
- ಕಟ್ಟಡದ ಅಂದವನ್ನು ಹೆಚ್ಚಿಸುವ, ಜಾಲಿ ಎಂದೇ ಖ್ಯಾತಿಯಾದ ಕಲ್ಲುಗಳನ್ನು ರಾಜಸ್ಥಾನದ ರಾಜನಗರ ಹಾಗೂ ಉತ್ತರ ಪ್ರದೇಶದ ನೊಯ್ಡಾದಿಂದ ತರಿಸಿ, ಬಳಸಲಾಗಿದೆ.
- ಲೋಕಸಭೆ ಹಾಗೂ ರಾಜ್ಯಸಭೆಯ ಗೋಡೆಗಳ ಮೇಲೆ ಅಶೋಕ ಚಕ್ರಗಳನ್ನು ಸುಂದರವಾಗಿ ಕೆತ್ತಿಸಲು ಮಹಾರಾಷ್ಟ್ರದ ಔರಂಗಾಬಾದ್ ಹಾಗೂ ರಾಜಸ್ಥಾನದ ಜೈಪುರದಿಂದ ಶಿಲೆಗಳನ್ನು ತರಿಸಲಾಗಿದೆ.
- ರಾಜಸ್ಥಾನದ ಅಬುರೋಡ್ (ನಗರ) ಹಾಗೂ ಉದಯಪುರದ ಕೌಶಲಯುತ ಶಿಲ್ಪಿಗಳು ರಾಜಸ್ಥಾನದ ಕೊಟ್ಪುಟಲಿ ಶಿಲೆಗಳನ್ನು ಸುಂದರವಾಗಿ ಕೆತ್ತಿದ್ದಾರೆ.
- ನಿರ್ಮಾಣ ಚಟುವಟಿಕೆಗಳಿಗಾಗಿ ಹರಿಯಾಣದ ಚರ್ಖಿ ದಾದ್ರಿಯಿಂದ ಎಂ-ಸ್ಯಾಂಡ್ಅನ್ನು ಬಳಸಲಾಗಿದೆ. ಎಂ-ಸ್ಯಾಂಡ್ಗೆ ಗುಣಮಟ್ಟದ ಕಾಂಕ್ರೀಟ್ಅನ್ನು ಮಿಕ್ಸ್ ಮಾಡಲಾಗಿದೆ.
- ಪರಿಸರ ಸ್ನೇಹಿ ಎನಿಸುವ ಇಟ್ಟಿಗೆಗಳನ್ನು ಹರಿಯಾಣ ಹಾಗೂ ಉತ್ತರ ಪ್ರದೇಶದಿಂದ ತರಿಸಿ ಬಳಸಲಾಗಿದೆ. ವಾಸ್ತುಶಿಲ್ಪಕ್ಕಾಗಿ ಗುಜರಾತ್ನ ಅಹ್ಮದಾಬಾದ್ನಿಂದ ಹಿತ್ತಾಳೆ ಉತ್ಪನ್ನಗಳನ್ನು ತರಿಸಲಾಗಿದೆ.
ಇದನ್ನೂ ಓದಿ: New Parliament Building: ನೂತನ ಸಂಸತ್ ಭವನದ ವೈಭವ ಹೇಗಿದೆ? ಇಲ್ಲಿದೆ ಅದ್ಭುತ ವಿಡಿಯೊ!
ದೇಶ
New Parliament Building: ಮೋದಿಗೆ ಸೆಂಗೋಲ್ ಹಸ್ತಾಂತರಿಸಿದ ಸ್ವಾಮೀಜಿಗಳು; ಭಾನುವಾರ ಸಂಸತ್ನಲ್ಲಿ ಪ್ರತಿಷ್ಠಾಪನೆ
New Parliament Building: ತಮಿಳುನಾಡಿನ ಅಧೀನಾಮ್ ಮಠದ ಸ್ವಾಮೀಜಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಂಗೋಲ್ ಅಥವಾ ರಾಜದಂಡವನ್ನು ನೀಡಿದರು. ಭಾನುವಾರ ಮಧ್ಯಾಹ್ನ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ.
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಗೆ (New Parliament Building) ಕ್ಷಣಗಣನೆ ಆರಂಭವಾಗಿದೆ. ಸಂಸದರು, ನಾಯಕರು, ಪ್ರತಿಪಕ್ಷಗಳ ನಾಯಕರು, ಕೇಂದ್ರ ಸಚಿವರು ಸೇರಿ ನೂರಾರು ಗಣ್ಯರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಇನ್ನು, ಸಂಸತ್ ಭವನದ ಉದ್ಘಾಟನೆ ಹಿನ್ನೆಲೆಯಲ್ಲಿ ಶನಿವಾರ ಸಂಜೆಯೇ ತಮಿಳುನಾಡಿನ ಶೈವ ಪರಂಪರೆಯ ಅಧೀನಾಮ್ ಮಠದ ಸ್ವಾಮೀಜಿಗಳು ನರೇಂದ್ರ ಮೋದಿ ಅವರಿಗೆ ಶಾಸ್ತ್ರೋಕ್ತವಾಗಿ ಸೆಂಗೋಲ್ ಅಥವಾ ರಾಜದಂಡವನ್ನು ಹಸ್ತಾಂತರಿಸಿದರು.
ನೂತನ ಸಂಸತ್ ಭವನದಲ್ಲಿರುವ ಸ್ಪೀಕರ್ ಪೀಠದ ಬಳಿ ಚೋಳರ ಕಾಲದ ಸೆಂಗೋಲ್ಅನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದುವರೆಗೆ ಮ್ಯೂಸಿಯಂನಲ್ಲಿದ್ದ ಸೆಂಗೋಲ್ಅನ್ನು ನೂತನ ಸಂಸತ್ನಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಹಾಗಾಗಿ, ತಮಿಳುನಾಡಿನ ಧರ್ಮಾಪುರಂ ಹಾಗೂ ತಿರುವಾವದುತುರೈಂನ ಶೈವ ಪರಂಪರೆಯ ಅಧೀನಾಮ್ ಮಠದ ಸ್ವಾಮೀಜಿಗಳು ನರೇಂದ್ರ ಮೋದಿ ಅವರ ನಿವಾಸದಲ್ಲಿ ಸೆಂಗೋಲ್ಅನ್ನು ಅವರಿಗೆ ಹಸ್ತಾಂತರಿಸಿದ್ದಾರೆ.
ಮೋದಿಗೆ ಸೆಂಗೋಲ್ ಹಸ್ತಾಂತರ
PM @narendramodi meets the Adheenams today at his residence and take their blessings. @PMOIndia@nsitharaman@kishanreddybjp#MyParilamentMypride#SengolAtNewParliament#NewParliamentBuilding pic.twitter.com/DBWkDJm7xf
— PIB in KERALA (@PIBTvpm) May 27, 2023
ಮೋದಿ ಅವರ ಹಣೆಗೆ ತಿಲಕ ಇಟ್ಟು, ಹಾರ ಹಾಕಿ, ಶಾಲು ಹೊದಿಸಿದ ಸ್ವಾಮೀಜಿಗಳು ಬಳಿಕ ಮೋದಿ ಅವರಿಗೆ ಸೆಂಗೋಲ್ಅನ್ನು ನೀಡಿದರು. ಮೋದಿ ಅವರು ರಾಜದಂಡಕ್ಕೆ ನಮಸ್ಕಾರ ಮಾಡಿದರು. ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.
ಇದನ್ನೂ ಓದಿ: New Parliament Building : ನೂತನ ಸಂಸತ್ ಭವನ ಉದ್ಘಾಟನೆಗೆ ಶೃಂಗೇರಿ ಪುರೋಹಿತರು
ವಿಶೇಷವೆಂದರೆ ಸಂಸತ್ ಭವನದಲ್ಲಿ ನಡೆಯಲಿರುವ ಉದ್ಘಾಟನೆ ಸಂಬಂಧಿತ ಪೂಜಾ ಕೈಂಕರ್ಯಗಳನ್ನು ನಡೆಸುವ ಜವಾಬ್ದಾರಿಯನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಪುರೋಹಿತರಿಗೆ ನೀಡಲಾಗಿದೆ. ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವುದಕ್ಕಾಗಿ ಶೃಂಗೇರಿಯ ಪುರೋಹಿತರ ತಂಡ ಆಗಲೇ ದಿಲ್ಲಿ ತಲುಪಿಸಿದ್ದು ಶನಿವಾರ ಸಂಜೆಯಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಉದ್ಘಾಟಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂಜೆಗಳನ್ನು ಶೃಂಗೇರಿಯ ವೇದಪಾರಂಗತ ಪುರೋಹಿತರಾದ ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಅವರು ನೆರವೇರಿಸಲಿದ್ದಾರೆ.
ಕರ್ನಾಟಕ
New Parliament Building : ನೂತನ ಸಂಸತ್ ಭವನ ಉದ್ಘಾಟನೆಗೆ ಶೃಂಗೇರಿ ಪುರೋಹಿತರು
ನೂತನ ಸಂಸತ್ ಭವನ: ಭಾನುವಾರ ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆಗೆ ಸಂಬಂಧಿಸಿದ ಪೂಜಾ ಕಾರ್ಯಕ್ರಮಗಳ ಸಾರಥ್ಯವನ್ನು ಶೃಂಗೇರಿಯ ಋತ್ವಿಜರು ವಹಿಸಿದ್ದಾರೆ.
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಾರಥ್ಯದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸತ್ ಭವನ (New Parliament Building) ಉದ್ಘಾಟನೆ ಭಾನುವಾರ (ಮೇ 28) ಅದ್ಧೂರಿಯಾಗಿ ಮತ್ತು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ವಿಶೇಷವೆಂದರೆ ಸಂಸತ್ ಭವನದಲ್ಲಿ ನಡೆಯಲಿರುವ ಉದ್ಘಾಟನೆ ಸಂಬಂಧಿತ ಪೂಜಾ ಕೈಂಕರ್ಯಗಳನ್ನು (Pooja programmes) ನಡೆಸುವ ಜವಾಬ್ದಾರಿ ಹೊತ್ತಿರುವವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ (Shringeri) ಪುರೋಹಿತರು.
ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವುದಕ್ಕಾಗಿ ಶೃಂಗೇರಿಯ ಪುರೋಹಿತರ ತಂಡ ಆಗಲೇ ದಿಲ್ಲಿ ತಲುಪಿಸಿದ್ದು ಶನಿವಾರ ಸಂಜೆಯಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಉದ್ಘಾಟಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂಜೆಗಳನ್ನು ಶೃಂಗೇರಿಯ ವೇದಪಾರಂಗತ ಪುರೋಹಿತರಾದ ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಅವರು ನೆರವೇರಿಸಲಿದ್ದಾರೆ.
ಶನಿವಾರದಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ. ಶನಿವಾರ ರಾತ್ರಿ ವಾಸ್ತು ಹೋಮ ನಡೆಯಲಿದ್ದು, ಭಾನುವಾರ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.
ಅಡಿಗಲ್ಲು ಕಾರ್ಯಕ್ರಮದಲ್ಲೂ ಶೃಂಗೇರಿಯ ಪುರೋಹಿತರಿಂದಲೇ ಪೂಜೆ
2020ರಲ್ಲಿ ಸಂಸತ್ ಭವನಕ್ಕೆ ಅಡಿಗಲ್ಲು ಇಡುವ ಸಂದರ್ಭದಲ್ಲಿ ನಡೆದ ಪೂಜೆಯನ್ನೂ ಶೃಂಗೇರಿಯ ಪುರೋಹಿತರೇ ನಡೆಸಿದ್ದರು. ಆರು ಜನ ಪುರೋಹಿತರಿಂದ ಭೂಮಿ ಪೂಜೆ ನೆರವೇರಿಸಲಾಗಿತ್ತು.
2020ರ ಡಿಸೆಂಬರ್ 10ರಂದು ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ವೈದಿಕ ಪಂಡಿತರಾದ ವೇದಬ್ರಹ್ಮ ಡಾ. ಟಿ. ಶಿವಕುಮಾರ ಶರ್ಮಾ, ವೇದ ಬ್ರಹ್ಮ ಶ್ರೀ ಲಕ್ಷ್ಮೀನಾರಾಯಣ ಸೋಮಯಾಜಿ, ವೇದಬ್ರಹ್ಮ ಶ್ರೀ ಗಣೇಶ ಸೋಮಯಾಜಿ, ನಾಗರಾಜ ಅಡಿಗ, ಋಗ್ವೇದ ಪ್ರಾಧ್ಯಾಪಕರಾಗಿರುವ ರಾಘವೇಂದ್ರ ಭಟ್, ಋಷ್ಯಶೃಂಗ ಭಟ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಬಾರಿ ಏನೇನು ಕಾರ್ಯಕ್ರಮವಿರುತ್ತದೆ?
ನೂತನ ಸಂಸತ್ ಭವನದ ಉದ್ಘಾಟನೆ ಭಾನುವಾರ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲನೆ ಹಂತದಲ್ಲಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿಯ ಮೇಲಾವರಣದೊಳಗೆ ನಡೆಯುವ ಧಾರ್ಮಿಕ ಕ್ರಿಯೆಯೊಂದಿಗೆ ಸಮಾರಂಭವು ಪ್ರಾರಂಭವಾಗುತ್ತದೆ. ಈ ವೇಳೆ, ಪ್ರಧಾನಿ ಮೋದಿ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಲಿದ್ದಾರೆ.
ಬಳಿಕ ಲೋಕಸಭೆ ಮತ್ತು ರಾಜ್ಯಸಭೆ ಆವರಣಗಳನ್ನು ಗಣ್ಯರು ಪರಿಶೀಲಿಸಿದ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಲೋಕಸಭೆ ಸ್ಪೀಕರ್ ಪೀಠದ ಮುಂದೆ ಪವಿತ್ರ ರಾಜದಂಡವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಪ್ರತಿಷ್ಠಾಪನೆಯನ್ನು ತಮಿಳುನಾಡಿನಿಂದ ಆಗಮಿಸಿದ ಪುರೋಹಿತರೇ ಮಾಡಲಿದ್ದು, ರಾಜದಂಡವನ್ನು ವಿನ್ಯಾಸ ಮಾಡಿದ ಮೂಲ ಅಕ್ಕಸಾಲಿಗ ಕೂಡ ಈ ವೇಳೆ ಹಾಜರು ಇರಲಿದ್ದಾರೆ. ಮೊದಲನೆ ಹಂತದ ಈ ಕಾರ್ಯಕ್ರಮವು ಬೆಳಗ್ಗೆ 9.30ಕ್ಕೆ ಮುಕ್ತಾಯವಾಗಲಿದೆ.
ಮಧ್ಯಾಹ್ನದ ವೇಳೆ ಎರಡನೇ ಹಂತದ ಕಾರ್ಯಕ್ರಮಗಳು ನಡೆಯಲಿವೆ. ಈ ವೇಳೆ ನಾಯಕರು ಮಾತನಾಡಲಿದ್ದಾರೆ. ಮೊದಲಿಗೆ ರಾಜ್ಯಸಭೆಯ ಡೆಪ್ಯುಟಿ ಚೇರ್ಮನ್ ಹರಿವಂಶ್ ಅವರು, ರಾಜ್ಯಸಭಾ ಚೇರ್ಮನ್ ಆಗಿರುವ ಉಪರಾಷ್ಟ್ರಪತಿಗಳ ಲಿಖಿತ ಸಂದೇಶವನ್ನು ಓದಲಿದ್ದಾರೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳುಹಿಸಿರುವ ಲಿಖಿತ ಸಂದೇಶವನ್ನೂ ಓದಲಾಗುತ್ತದೆ.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆ ಪ್ರಧಾನ ಕಾರ್ಯದರ್ಶಿ ಅವರು ವಂದನಾರ್ಪಣೆ ಮಾಡುವುದರೊಂದಿಗೆ ಉದ್ಘಾಟನಾ ಕಾರ್ಯಕ್ರಮವು ಸಂಪನ್ನಗೊಳ್ಳಲಿದೆ.
ಇದನ್ನೂ ಓದಿ: New Parliament: ಹೊಸ ಸಂಸತ್ ಭವನದ ವಿಡಿಯೊ ಹಂಚಿಕೊಂಡು, ವಿಶೇಷ ಮನವಿ ಮಾಡಿದ ಪ್ರಧಾನಿ ಮೋದಿ
ದೇಶ
ಹಳೇ ಬೇರು, ಹೊಸ ಚಿಗುರು: ಮೊದಲಿನ ಸಂಸತ್, ನೂತನ ಸಂಸತ್ ಭವನದ ನಡುವಿನ ವ್ಯತ್ಯಾಸ ಹೀಗಿದೆ ನೋಡಿ
New Parliament Building: ನೂತನ ಸಂಸತ್ ಭವನದ ಉದ್ಘಾಟನೆಯು ಭಾನುವಾರ ನೆರವೇರಲಿದೆ. ಇದರ ಮಧ್ಯೆಯೇ, ಕೇಂದ್ರ ಸರ್ಕಾರವು ಹಳೆಯ ಹಾಗೂ ನೂತನ ಸಂಸತ್ ಭವನದ ನಡುವಿನ ವ್ಯತ್ಯಾಸದ ಕುರಿತು ಮಾಹಿತಿ ನೀಡಿದೆ.
ನವದೆಹಲಿ: ನೂತನ ಹಾಗೂ ಭವ್ಯ ಸಂಸತ್ ಭವನದ ಉದ್ಘಾಟನೆಗೆ ಕ್ಷಣಗಣನೆ (May 28) ಆರಂಭವಾಗಿದೆ. ಪ್ರತಿಪಕ್ಷಗಳ ಬಹಿಷ್ಕಾರದ ಮಧ್ಯೆಯೂ ಅದ್ಧೂರಿಯಾಗಿ ನೂತನ ಸಂಸತ್ ಭವನದ ಉದ್ಘಾಟನೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದರ ಮಧ್ಯೆಯೇ, ಹಳೆಯ ಹಾಗೂ ನೂತನ ಸಂಸತ್ ಭವನದ ನಡುವಿನ ವ್ಯತ್ಯಾಸ, ತಂತ್ರಜ್ಞಾನದ ಅಳವಡಿಕೆ, ವಿನ್ಯಾಸ ಸೇರಿ ಹಲವು ದಿಸೆಯಲ್ಲಿ ಹೋಲಿಕೆ ಮಾಡಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಮೊದಲಿನ ಹಾಗೂ ನೂತನ ಸಂಸತ್ ಭವನಗಳ ನಡುವಿನ ವ್ಯತ್ಯಾಸವನ್ನು ಚಿತ್ರಗಳಲ್ಲಿ ನೋಡಿ.
ಹಳೆಯ ಸಂಸತ್ನ ಲೋಕಸಭೆಯಲ್ಲಿ 550 ಆಸನ, ಹೊಸ ಸಂಸತ್ನ ಲೋಕಸಭೆಯಲ್ಲಿ 888 ಆಸನಗಳು.
ಹಳೆಯ ರಾಜ್ಯಸಭೆಯಲ್ಲಿ 250 ಆಸನ, ಹೊಸ ರಾಜ್ಯಸಭೆಯಲ್ಲಿ 384 ಆಸನ
ಭೂಕಂಪ ವಲಯಗಳಿಗೆ ಆಧರಿಸಿ ನೂತನ ಸಂಸತ್ ಭವನ ನಿರ್ಮಾಣ, ಇದರಿಂದ ಕಟ್ಟಡ ಸುರಕ್ಷಿತ
ನೂತನ ಸಂಸತ್ ಭವನದಲ್ಲಿ ಆಸನಗಳ ವ್ಯವಸ್ಥೆ, ಜಾಗ ನಿರ್ವಹಣೆ ಸಮರ್ಪಕವಾಗಿದೆ
ಹಳೆಯ ಹಾಗೂ ಹೊಸ ಸಂಸತ್ ಭವನದ ವಿಸ್ತೀರ್ಣದಲ್ಲಿ ವ್ಯತ್ಯಾಸ
ಇದನ್ನೂ ಓದಿ: New Parliament Building: ನೂತನ ಸಂಸತ್ ಭವನದ ವೈಭವ ಹೇಗಿದೆ? ಇಲ್ಲಿದೆ ಅದ್ಭುತ ವಿಡಿಯೊ!
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ8 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ11 hours ago
Karnataka Cabinet Expansion Live : 34 ಸಚಿವರಿಗೆ ಖಾತೆ ಹಂಚಿಕೆ; ಬಯಸಿದ ಖಾತೆ ಪಡೆದ ಡಿ ಕೆ ಶಿವಕುಮಾರ್
-
ಕರ್ನಾಟಕ23 hours ago
RP Ashok: ಇನ್ಸ್ಪೆಕ್ಟರ್ ಆರ್.ಪಿ.ಅಶೋಕ್ಗೆ ಆರ್ಯಭಟ ಪ್ರಶಸ್ತಿ ಪ್ರದಾನ
-
ಕರ್ನಾಟಕ23 hours ago
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
-
ಕ್ರಿಕೆಟ್24 hours ago
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
-
ಉತ್ತರ ಕನ್ನಡ22 hours ago
Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ
-
ಪ್ರಮುಖ ಸುದ್ದಿ22 hours ago
ವಿಸ್ತಾರ ಸಂಪಾದಕೀಯ: ರಾಜ್ಯಾದ್ಯಂತ ಗ್ಯಾರಂಟಿ ಭರವಸೆಯ ಗದ್ದಲ, ಹೊಸ ಸರ್ಕಾರ ಗೊಂದಲ ನಿವಾರಿಸಲಿ