ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂ. 8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್ಡಿಎ ಸಭೆಯ ಬಳಿಕ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಎನ್ಡಿಎ ಒಕ್ಕೂಟ 292 ಸೀಟುಗಳು ಹಾಗೂ ಇಂಡಿಯಾ ಬಣ 234 ಸ್ಥಾನಗಳನ್ನು ತನ್ನದಾಗಿಸಿಕೊಂಡಿವೆ. ಎರಡೂ ಬಣಗಳು ಸರ್ಕಾರ ರಚನೆಯ ಕಡೆಗೆ ಗಮನ ಹರಿಸಿವೆ. ಬುಧವಾರ ರಾಷ್ಟ್ರ ರಾಜಧಾನಿ ಡೆಲ್ಲಿಯಲ್ಲಿ ಎರಡೂ ಬಣಗಳ ಮಹತ್ವದ ಸಭೆ ನಡೆಯಲಿದೆ. ಮಿತ್ರಪಕ್ಷಗಳು ಒಟ್ಟಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ತಂತ್ರ- ಪ್ರತಿ ತಂತ್ರ ಹೂಡಲಿವೆ.
ಸಮೀಕ್ಷೆ ಹಾಗೂ ಚುನಾವಣಾ ಪೂರ್ವದ ಸ್ಥಿತಿಗತಿಗಳನ್ನು ಗಮನಿಸಿದರೆ ಇದು ಅಚ್ಚರಿಯ ಫಲಿತಾಂಶವಾಗಿದೆ. ಪ್ರಮುಖವಾಗಿ ಬಲಿಷ್ಠ ಎನಿಸಿಕೊಂಡಿದ್ದ ಬಿಜೆಪಿಗೆ 32 ಸೀಟ್ಗಳ ಕೊರತೆ ಎದುರಿಸಿದೆ. ಆದಾಗ್ಯೂ ತಮ್ಮನ್ನು ಮತ್ತೊಂದು ಬಾರಿ ಅಧಿಕಾರಕ್ಕೆ ಏರಿಸಿದ ಮತದಾರರಿಗೆ ಮೋದಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್ ಏರಿಕೆ
ಬೆಳಗಾವಿಯನ್ನು ಭರ್ಜರಿ ಮುನ್ನಡೆ ಕಾಪಾಡಿಕೊಂಡಿರುವ ಜಗದೀಶ್ ಶೆಟ್ಟರ್. ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ 50 ಸಾವಿರ ಮತಗಳ ಅಂತರ ಕಾಪಾಡಿಕೊಂಡಿದ್ದಾರೆ.
ಆರಂಭದಲ್ಲೇ 78 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿರುವ ಜೆಡಿಎಸ್ ವರಿಷ್ಠ ಕುಮಾರ ಸ್ವಾಮಿ. ಕರ್ನಾಟಕದಲ್ಲಿ ಬಿಜೆಪಿಯ ಮುನ್ನಡೆ ನಿರಂತರ.
ವಾರಾಣಸಿಯಲ್ಲಿ ಮೋದಿಗೆ ಮುನ್ನಡೆ
ಕಾಂಗ್ರೆಸ್ನ ಅಜಯ್ ರಾಯ್ ವಿರುದ್ಧ 400 ಮತಗಳ ಮುನ್ನಡೆ
ಕಲಬುರಗಿ
ಬಿಜೆಪಿ – 90,012
ಕಾಂಗ್ರೆಸ್ -83,757
ಬಿಜೆಪಿ ಮುನ್ನಡೆ – 6,255
ಮೈಸೂರು-ಕೊಡಗು
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -128,870
ಬಿಜೆಪಿ ಅಭ್ಯರ್ಥಿ ಯದುವೀರ್-1,64,337
ಯದುವೀರ್ಗೆ 35,467 ಮತಗಳ ಮುನ್ನಡೆ