Rakesh Jhunjhunwala | ನನ್ನ ಸೋದರನನ್ನು ಕಳೆದುಕೊಂಡೆ ಎಂದು ಪರಿತಪಿಸಿದ ಸ್ಮೃತಿ ಇರಾನಿ - Vistara News

ದೇಶ

Rakesh Jhunjhunwala | ನನ್ನ ಸೋದರನನ್ನು ಕಳೆದುಕೊಂಡೆ ಎಂದು ಪರಿತಪಿಸಿದ ಸ್ಮೃತಿ ಇರಾನಿ

ರಾಕೇಶ್​ ಜುಂಜುನ್​ವಾಲಾ ಸಾವಿಗೆ ಸ್ಮೃತಿ ಇರಾನಿ ಪರಿತಪಿಸಿದ್ದಾರೆ. ನಮ್ಮಿಬ್ಬರ ಮಧ್ಯದ ಬಾಂಧವ್ಯ ಎಷ್ಟೋ ಜನರಿಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Smriti irani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಖ್ಯಾತ ಹೂಡಿಕೆದಾರ ರಾಕೇಶ್​ ಜುಂಜುನ್​​ವಾಲಾ ನಿಧನಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ದುಃಖ ವ್ಯಕ್ತಪಡಿಸಿದ್ದಾರೆ. ‘ನಾನು ನನ್ನ ಸಹೋದರನನ್ನು ಕಳೆದುಕೊಂಡೆ. ರಾಕೇಶ್​ ಜುಂಜುನ್​ವಾಲಾ ಜೀವಂತವಾಗಿ ಇಲ್ಲದೆ ಇದ್ದರೂ. ಅವರು ಹಾಕಿಕೊಟ್ಟ ಪರಂಪರೆ ಸದಾ ಉಳಿಯುತ್ತದೆ’ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ‘ಬಾಂಬೆ ಸ್ಟಾಕ್​ ಎಕ್ಸ್​​ಚೇಂಜ್​​ನ ಬಾದ್​ಶಾ ಆಗಿದ್ದರು’ ಎಂದು ಬಣ್ಣಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು ‘ನಮ್ಮಿಬ್ಬರ ಮಧ್ಯೆ ಇದ್ದ ಬಾಂಧವ್ಯ ಅನೇಕರಿಗೆ ಗೊತ್ತಿಲ್ಲ. ಅವರೊಬ್ಬ ನಿಜವಾದ ಕನಸುಗಾರ’ ಎಂದೂ ತಿಳಿಸಿದ್ದಾರೆ.

ರಾಕೇಶ್​ ಜುಂಜುನ್​ವಾಲಾ ಅವರು ದೃಢ ನಿಶ್ಚಯ ಹೊಂದಿದ್ದರು. ಅಷ್ಟೇ ಕೋಮಲಹೃದಯದವರು. ವಿನಯಶೀಲರು ಮತ್ತು ನನ್ನ ಪಾಲಿಗೆ ಅಸಾಮಾನ್ಯ ಸಾಮರ್ಥ್ಯ ಉಳ್ಳವರು. ಅವರಿಗೆ ಹೇಗೆ ಬೇಕೋ, ಹಾಗೆ ಬದುಕಿ ಹೋಗಿದ್ದಾರೆ ಎಂದು ಇನ್ನೊಂದು ಟ್ವೀಟ್​ನಲ್ಲಿ ಸ್ಮೃತಿ ಇರಾನಿ ಬರೆದುಕೊಂಡಿದ್ದಾರೆ.

ತುಂಬ ದಿನಗಳಿಂದಲೂ ಡಯಾಬಿಟಿಸ್​ನಿಂದ ಬಳಲುತ್ತಿದ್ದ ರಾಕೇಶ್​ ಜುಂಜುನ್​ವಾಲಾ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಷೇರು ಮಾರುಕಟ್ಟೆಯ ದಿಗ್ಗಜರಾದ ಅವರು ಇತ್ತೀಚೆಗಷ್ಟೇ ಆಕಾಶೋದ್ಯಮಕ್ಕೂ ಕಾಲಿಟ್ಟಿದ್ದರು. ಆಕಾಸ ಏರ್​ ಎಂಬ ಹೊಸ ವಾಯುಯಾನ ಸಂಸ್ಥೆಯನ್ನು ಹುಟ್ಟುಹಾಕಿದ್ದರು. ಆಕಾಸ ಏರ್​​ನ ಮೊಟ್ಟಮೊದಲ ವಿಮಾನ ಆಗಸ್ಟ್​ 7ರಂದು ಟೇಕ್​ಆಫ್​ ಕೂಡ ಆಗಿದೆ. ವಿಮಾನಯಾನವೆಂಬುದು ಎಲ್ಲರಿಗೂ ಕೈಗೆಟಕುವ ದರದಲ್ಲಿ ಸಿಗಬೇಕು ಎಂಬ ಮಹದುದ್ದೇಶದಿಂದ ಈ ಸಂಸ್ಥೆಯನ್ನು ಪ್ರಾರಂಭಿಸಿ, ಒಂದು ವಾರದಲ್ಲಿ ಅವರು ಇನ್ನಿಲ್ಲವಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Viral Video | ಅದೆಂಥ ಜೀವನೋತ್ಸಾಹಿಯಾಗಿದ್ದರು ರಾಕೇಶ್​ ಜುಂಜುನ್​ವಾಲಾ; ಅದ್ಭುತ ಡ್ಯಾನ್ಸ್ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Amanatullah Khan: ದೆಹಲಿ ಅಬಕಾರಿ ನೀತಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಒಂದು ತಿಂಗಳೊಳಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಅರೆಸ್ಟ್‌ ಮಾಡಲಾಗಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಶಾಸಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Amanatullah Khan
Koo

ನವದೆಹಲಿ: ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (AAP)ಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ದೆಹಲಿ ಅಬಕಾರಿ ನೀತಿ ಹಗರಣ (Delhi Liquor Scam)ದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಿದ ಒಂದು ತಿಂಗಳೊಳಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate) ವಶಕ್ಕೆ ತೆಗೆದುಕೊಂಡಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ (Waqf Board-linked money laundering case) ಸಂಬಂಧಿಸಿದಂತೆ ಶಾಸಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?

ದೆಹಲಿ ವಕ್ಫ್ ಬೋರ್ಡ್ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆ ಹಾಗೂ ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು ಇದೀಗ ಆಪ್ ನಾಯಕನನ್ನು ಬಂಧಿಸಿದೆ. ಸತತ 9 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧನಕ್ಕೂ ಮುನ್ನ ಖಾನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೊ ಸಂದೇಶವನ್ನು ಪೋಸ್ಟ್ ಮಾಡಿದ್ದು ಅದರಲ್ಲಿ, ʼʼಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಕ್ಷಿ ಹೇಳಲು ಏಜೆನ್ಸಿ ಬಯಸಿದೆʼʼ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಶಾಸಕರ ನಿವಾಸದ ಮೇಲೆ ದಾಳಿ ನಡೆಸಿದ್ದ ಇ.ಡಿ ದೆಹಲಿ ವಕ್ಫ್ ಮಂಡಳಿಯಲ್ಲಿ ಸಿಬ್ಬಂದಿಯನ್ನು ಅಕ್ರಮವಾಗಿ ನೇಮಕ ಮಾಡುವ ಮೂಲಕ ಖಾನ್ ಅಪಾರ ಪ್ರಮಾಣದ ಹಣವನ್ನು ನಗದು ರೂಪದಲ್ಲಿ ಗಳಿಸಿದ್ದಾರೆ ಮತ್ತು ತಮ್ಮ ಸಹವರ್ತಿಗಳ ಹೆಸರಿನಲ್ಲಿ ಸ್ಥಿರಾಸ್ತಿಗಳನ್ನು ಖರೀದಿಸಲು ಹೂಡಿಕೆ ಮಾಡಿದ್ದಾರೆ ಎಂದು ಹೇಳಿತ್ತು. ಇ.ಡಿ ಅಧಿಕಾರಿಗಳ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಖಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕುರಿತು ಮಧ್ಯಪ್ರವೇಶಿಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಬಳಿಕ ಇ.ಡಿ ಅಧಿಕಾರಿಗಳು ಖಾನ್ ಅವರ ವಿಚಾರಣೆ ನಡೆಸಿದ್ದರು. ಹಲವು ಗಂಟೆಗಳ ಕಾಲ ವಿಚಾರಣೆ ಮುಂದುವರಿದಿತ್ತು. ಕೊನೆಗೆ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಗಿದೆ.

ಅಮಾನತುಲ್ಲಾ ಖಾನ್‌ ಬಂಧನಕ್ಕೂ ಮುನ್ನ ಆಪ್‌ ಸಂಸದ ಸಂಜಯ್ ಸಿಂಗ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೋದಿ ಸರ್ಕಾರ ಆಪರೇಷನ್ ಕಮಲದಲ್ಲಿ ಸಂಪೂರ್ಣವಾಗಿ ಭಾಗಿಯಾಗಿದೆ ಮತ್ತು ಸಚಿವರು ಮತ್ತು ಶಾಸಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಅವರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿದ್ದರು. “ಅಮಾನತುಲ್ಲಾ ಖಾನ್‌ ವಿರುದ್ಧ ಆಧಾರರಹಿತ ಪ್ರಕರಣ ದಾಖಲಿಸುವ ಮೂಲಕ ಅವರನ್ನು ಬಂಧಿಸಲು ಇ.ಡಿ ಸಿದ್ಧತೆ ನಡೆಸುತ್ತಿದೆ. ಸರ್ವಾಧಿಕಾರ ಶೀಘ್ರದಲ್ಲೇ ಕೊನೆಗೊಳ್ಳುತ್ತದೆ. ನಾನು ಅವರ ಕುಟುಂಬವನ್ನು ಭೇಟಿಯಾಗಲಿದ್ದೇನೆ” ಎಂದು ಸಿಂಗ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಅಮಾನತುಲ್ಲಾ ಖಾನ್‌ ದೆಹಲಿ ವಕ್ಫ್ ಬೋರ್ಡ್ ಮುಖ್ಯಸ್ಥರಾಗಿದ್ದ ವೇಳೆ ಭಾರಿ ಹಗರಣ ನಡೆಸಿದ್ದಾರೆ ಎನ್ನುವ ಆರೋಪದಡಿಯಲ್ಲಿ ತನಿಖೆ ನಡೆಯುತ್ತಿದೆ. ಅಮಾನತುಲ್ಲಾ ಖಾನ್‌ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಆಪ್ ಸಚಿವೆ ಆತೀಷಿ ಹಾಗೂ ನಾಯಕ ಸಂಜಯ್ ಸಿಂಗ್ ಅಮಾನತುಲ್ಲಾ ಖಾನ್‌ ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ: Arvind Kejriwal : ಅಬಕಾರಿ ಲಂಚ ಪ್ರಕರಣದಲ್ಲಿ ಡೆಲ್ಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಅರೆಸ್ಟ್​​

Continue Reading

ದೇಶ

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Indian Railways: ಪ್ರಯಾಣಿಕರ ಮನ ಗೆದ್ದಿರುವ ಭಾರತೀಯ ರೈಲ್ವೆ ಹೊಸದೊಂದು ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಹಿರಿಯ ನಾಗರಿಕರು ಇನ್ನಷ್ಟು ಆರಾಮದಾಯಕವಾಗಿ ರೈಲ್ವೆ ಪ್ರಯಾಣ ನಡೆಸಬಹುದು. ಸಾಮಾನ್ಯವಾಗಿ ಹಿರಿಯ ನಾಗರಿಕರು ವಿವಿಧ ಕಾರಣಗಳಿಂದ ಲೋವರ್‌ ಬರ್ತ್‌ ಹೊಂದಲು ಬಯಸುತ್ತಾರೆ. ಹೀಗಾಗಿ ವಯಸ್ಸಾದ ಪ್ರಯಾಣಿಕರಿಗೆ ಕೆಳ ಬರ್ತ್‌ಗಳನ್ನು ಕಾಯ್ದಿರಿಸುವುದಕ್ಕೆ ಆದ್ಯತೆ ನೀಡುವ ಹೊಸ ನಿಯಮ ಜಾರಿಗೆ ತರಲಾಗಿದೆ.

VISTARANEWS.COM


on

Indian Railways
Koo

ನವದೆಹಲಿ: ದೇಶದಲ್ಲಿ ರೈಲು ಪ್ರಯಾಣ ಸುರಕ್ಷಿತ ಮತ್ತು ಹೆಚ್ಚು ಅನುಕೂಲ ಎಂದೇ ಪರಿಗಣಿಸಲಾಗುತ್ತದೆ. ದೂರ ಸಂಚಾರ ಇರಲಿ ಸಮೀಪದ ಗಮ್ಯವೇ ಇರಲಿ ಬಹುತೇಕರ ಮೊದಲ ಆಯ್ಕೆ ರೈಲು ಪ್ರಯಾಣವೇ ಆಗಿರುತ್ತದೆ. ಅದರಲ್ಲೂ ವಯಸ್ಸಾದವರಿಗೆ, ಆರೋಗ್ಯ ಸಮಸ್ಯೆ ಇರುವವರಿಗೆ ಇದು ಇನ್ನೂ ಅನೂಕೂಲ. ಇತ್ತೀಚಿನ ದಿನಗಳಲ್ಲಿ ರೈಲು ಸೇವೆಯೂ ಸಾಕಷ್ಟು ಸುಧಾರಣೆ ಕಂಡಿದ್ದು, ಪ್ರಯಾಣಿಕರಿಗೆ ಇನ್ನಷ್ಟು ಹತ್ತಿರವಾಗಿದೆ. ಈ ಮಧ್ಯೆ ಭಾರತೀಯ ರೈಲ್ವೆ (Indian Railways) ಹಿರಿಯ ನಾಗರಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ಲೋವರ್ ಬರ್ತ್ ಕಾಯ್ದಿರಿಸುವಿಕೆ (Lower Berth Reservation)ಯ ನಿಯಮದಲ್ಲಿ ಬದಲಾವಣೆ ತಂದಿದೆ.

ಸಾಮಾನ್ಯವಾಗಿ ಹಿರಿಯ ನಾಗರಿಕರು ವಿವಿಧ ಕಾರಣಗಳಿಂದ ಲೋವರ್‌ ಬರ್ತ್‌ ಹೊಂದಲು ಬಯಸುತ್ತಾರೆ. ಒಂದು ವೇಳೆ ಅಪ್ಪರ್ ಬರ್ತ್ ಲಭ್ಯವಿದ್ದರೆ ಅದನ್ನು ಲೋವರ್‌ ಬರ್ತ್‌ಗೆ ಬದಲಾಯಿಸುವುದು ದೊಡ್ಡ ತಲೆನೋವಿನ ಸಂಗತಿ. ಆದರೆ ಇನ್ನು ಮುಂದೆ ಹಾಗಾಗುವುದಿಲ್ಲ. ವಯಸ್ಸಾದ ಪ್ರಯಾಣಿಕರಿಗೆ ಕೆಳ ಬರ್ತ್‌ಗಳನ್ನು ಕಾಯ್ದಿರಿಸುವುದಕ್ಕೆ ಆದ್ಯತೆ ನೀಡುವ ಹೊಸ ನಿಯಮ ಜಾರಿಗೆ ತರಲಾಗಿದೆ. ರೈಲು ಪ್ರಯಾಣದ ಸಮಯದಲ್ಲಿ ಹಿರಿಯ ನಾಗರಿಕರ ನಿರ್ದಿಷ್ಟ ಅಗತ್ಯಗಳನ್ನು ಪೂರೈಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ʼʼವೃದ್ಧರಿಗೆ, ವಯಸ್ಸಾದವರಿಗೆ ಅನುಕೂಲ ಒದಗಿಸಲು, ಅತ್ಯುತ್ತಮ ಪ್ರಯಾಣದ ಅನುಭವ ನೀಡಲು ಲೋವರ್ ಬರ್ತ್‌ಗಳನ್ನು ಕಾಯ್ದಿರಿಸುವ ಆಯ್ಕೆ ಪರಿಚಯಿಸಿದ್ದೇವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲ ವರ್ಗದ ಪ್ರಯಾಣಿಕರ ಅಗತ್ಯಗಳನ್ನು ಪೂರೈಸಲು ರೈಲ್ವೆ ಇಲಾಖೆ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆʼʼ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಭಾರತೀಯ ರೈಲ್ವೆಯ ಪ್ರಕಟಣೆ ಪ್ರಕಾರ, ಪ್ರಯಾಣಿಕರು ಲೋವರ್ ಬರ್ತ್ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಬುಕಿಂಗ್ ಸಮಯದಲ್ಲಿ ಲೋವರ್ ಬರ್ತ್ ಮೀಸಲಾತಿಯ ಆಯ್ಕೆಯನ್ನು ಆರಿಸಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಬೇಗ ಸೀಟು ಕಾಯ್ದಿರಿಸಿದವರಿಗೆ ಲೋವರ್ ಬರ್ತ್ ಸಿಗುತ್ತದೆ. ಲಭ್ಯತೆಯ ಆಧಾರದ ಮೇಲೆ ಸಾಮಾನ್ಯ ಕೋಟಾದಡಿ ಸೀಟುಗಳನ್ನು ಸ್ವಯಂಚಾಲಿತವಾಗಿ ನಿಗದಿಪಡಿಸಲಾಗಿದ್ದರೂ ಪ್ರಯಾಣಿಕರು ಲಭ್ಯವಿದ್ದರೆ ಲೋವರ್ ಬರ್ತ್‌ಗಾಗಿ ರೈಲು ಟಿಕೆಟ್ ಪರೀಕ್ಷಕರೊಂದಿಗೆ (TTE) ಮಾತುಕತೆ ನಡೆದಬಹುದಾಗಿದೆ.

ಇದನ್ನೂ ಓದಿ: Mantralaya Tour: ಮಂತ್ರಾಲಯಕ್ಕೆ ಒಂದೇ ದಿನದಲ್ಲಿ ಹೋಗಿ ಬರಬೇಕೆ? ಈ ರೈಲುಗಳಲ್ಲಿ ಹೊರಡಿ

ಈ ಹೊಸ ನಿಯಮದ ಅನುಷ್ಠಾನವು ಹಿರಿಯ ನಾಗರಿಕರ ಪ್ರಯಾಣದ ಅನುಭವವನ್ನು ಸುಧಾರಿಸಲಿದೆ ಎನ್ನುವ ನಿರೀಕ್ಷೆ ಇದೆ. ಆರೋಗ್ಯ ಸಮಸ್ಯೆ ಇರುವ ವೃದ್ಧ ಸಂಬಂಧಿಯೊಬ್ಬರು ಲೋವರ್ ಬರ್ತ್ ಬುಕ್ ಮಾಡಿದ್ದರೂ ಅವರಿಗೆ ಅಪ್ಪರ್‌ ಬರ್ತ್‌ಗಳ ಹಂಚಿಕೆ ಮಾಡಿರುವ ಬಗ್ಗೆ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಾಮಾಜಿಕ ಜಾಲತಾಣ ಪ್ರಶ್ನಿಸಿದ್ದರು. ಇದು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿತ್ತು. ಹೀಗಾಗಿ ಈ ಹೊಸ ನಿಯಮ ಜಾರಿಗೆ ತರಲಾಗಿದೆ. ʼʼಭಾರತೀಯ ರೈಲ್ವೆ ತನ್ನ ಪ್ರಯಾಣಿಕರಿಗೆ ಅತ್ಯುತ್ತಮ ಸೇವೆಗಳನ್ನು ನೀಡಲು ಸದಾ ಸಿದ್ಧ. ಈ ರೀತಿಯ ಅಗತ್ಯ ಎಲ್ಲ ಕ್ರಮಗಳು ಕೈಗೊಳ್ಳಲಾಗುವುದುʼʼ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabah Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

Lok Sabah Election: ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಗಳಿಗೆ ಕತ್ತೆಗಳು ಮೇಲೇರಿಸಿ ಇವಿಎಂಗಳನ್ನು ಸಾಗಿಸಲಾಗಿದೆ ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಸಂಸ್ಥೆ ಎಎನ್ಐ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

VISTARANEWS.COM


on

Lok Sabah Election
Koo

ಚೆನ್ನೈ: ತಮಿಳುನಾಡಿನ ಎಲ್ಲ 39 ಲೋಕಸಭಾ ಕ್ಷೇತ್ರಗಳಿಗೆ (Lok Sabah Election) ಏಪ್ರಿಲ್ 19ರಂದು ಮತದಾನ ನಡೆಯಲಿದೆ. ಇದು 17ನೇ ಲೋಕಸಭೆಗೆ ಮೊದಲ ಹಂತದ ಚುನಾವಣಾ ಪ್ರಕ್ರಿಯೆಯಾಗಿದೆ. ಮತದಾನಕ್ಕಾಗಿ ಅಧಿಕಾರಿಗಳು ಸಕಲ ಸಿದ್ದತೆ ನಡೆಸಲಾಗಿದ್ದು, ಬೂತ್​ಗಳಿಗೆ ಇವಿಎಂ ಯಂತ್ರಗಳು ತಲುಪಿವೆ. ಏತನ್ಮಧ್ಯೆ ತಮಿಳುನಾಡಿನಲ್ಲಿ ಮತದಾನದ ಒಂದು ದಿನ ಮುಂಚಿತವಾಗಿ ಕತ್ತೆಗಳ ಮೂಲಕ ಇವಿಎಂಗಳನ್ನು ದೂರದ ಪ್ರದೇಶಗಳಿಗೆ ಸಾಗಿಸುವ ವೀಡಿಯೊವೊಂದು ವೈರಲ್ ಆಗಿದೆ. ಇದು ರಸ್ತೆ ಮೂಲಸೌಕರ್ಯದ ಕೊರತೆಯ ಚರ್ಚೆಯನ್ನು ಹುಟ್ಟುಹಾಕಿದೆ.

ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಗಳಿಗೆ ಕತ್ತೆಗಳು ಮೇಲೇರಿಸಿ ಇವಿಎಂಗಳನ್ನು ಸಾಗಿಸಲಾಗಿದೆ ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಸಂಸ್ಥೆ ಎಎನ್ಐ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಸ್ಥಳೀಯರು ಇವಿಎಂಗಳನ್ನು ಲೋಡ್ ಮಾಡುವುದನ್ನು ಮತ್ತು ನಂತರ ಇವಿಎಂಗಳನ್ನು ಕತ್ತೆಗಳಿಗೆ ಕಟ್ಟುವುದನ್ನು ವೀಡಿಯೊದಲ್ಲಿ ಕಾಣಬಹುದು. ವೀಡಿಯೊ ಮುಂದುವರಿಯುತ್ತಿದ್ದಂತೆ, ಕತ್ತೆಗಳು ಬಿಗಿ ಭದ್ರತೆಯಲ್ಲಿ ಇವಿಎಂಗಳನ್ನು ಹೊತ್ತುಕೊಂಡು ಹೋಗುವುದನ್ನು ನೋಡಬಹುದು.

ಏಜೆನ್ಸಿ ಏಪ್ರಿಲ್ 18 ರಂದು ವೀಡಿಯೊವನ್ನು ಹಂಚಿಕೊಂಡಿದೆ. ಅಲ್ಲಿಂದ ಅದು 41,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಕಂಡಿದೆ. ಅದೆರ ಸಂಖ್ಯೆಗಳು ಇನ್ನೂ ಹೆಚ್ಚುತ್ತಿವೆ. ಅನೇಕರು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಪೋಸ್ಟ್ ನ ಕಾಮೆಂಟ್ ವಿಭಾಗವನ್ನು ಬಳಸಿಕೊಂಡಿದ್ದಾರೆ.

“ನಾವು ಗಗನಯಾತ್ರಿಗಳನ್ನು ಚಂದ್ರನಿಗೆ ಕಳುಹಿಸಲು ಸಿದ್ಧರಾಗುತ್ತಿದ್ದೇವೆ. ಆದರೆ ದೂರದ ಪ್ರದೇಶಗಳಲ್ಲಿ ಹೆಲಿಕಾಪ್ಟರ್​ ಮೂಲಕ ಮತ ಪೆಟ್ಟಿಗೆ ತರಲು ಸಾಧ್ಯವಾಗುತ್ತಿಲ್ಲ. ಇಸ್ರೋದ ಆರಂಭಿಕ ದಿನಗಳಲ್ಲಿ ಬೈಸಿಕಲ್​​ಗಳಲ್ಲಿ ರಾಕೆಟ್ ಭಾಗಗಳನ್ನು ಸಾಗಿಸುವ ಚಿತ್ರ ನೆನಪಿರಬಹುದು. ಈ ವೀಡಿಯೊವನ್ನು ನೆನಪಿಟ್ಟುಕೊಳ್ಳಿ” ಎಂದು ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal : ಜಾಮೀನಿಗಾಗಿ ಕುತಂತ್ರ; ಸಿಹಿ ತಿಂಡಿ ತಿಂದು ಸಕ್ಕರೆ ಕಾಯಿಲೆ ಎನ್ನುತ್ತಿರುವ ಕೇಜ್ರಿವಾಲ್​ ಎಂದ ಇಡಿ

“ಇದು ಭಾರತದ ಚುನಾವಣಾ ಆಯೋಗದ ಮೇಲೆ ಕೆಟ್ಟ ಸ್ಥಿತಿಗೆ ಉದಾಹರಣೆ” ಎಂದು ಇನ್ನೊಬ್ಬರು ಹೇಳಿದರು.

ಕಳಪೆ ರಸ್ತೆ ಮೂಲಸೌಕರ್ಯಗಳ ಬಗ್ಗೆ ಅನೇಕರು ಆಡಳಿತಾರೂಢ ಸರ್ಕಾರವನ್ನು ಟೀಕಿಸಿದ್ದಾರೆ. ಒಬ್ಬರು ಇದನ್ನು “ಡಿಎಂಕೆ ಅಭಿವೃದ್ಧಿ” ಎಂದು ಕರೆದಿದ್ದಾರೆ.

ಲೋಕಸಭಾ ಚುನಾವಣೆ 2024: ಮೊದಲ ಹಂತದ ಮತದಾನ

18ನೇ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದೆ. ಈ ಹಂತದಲ್ಲಿ 21 ರಾಜ್ಯಗಳ ಒಟ್ಟು 102 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಪೈಕಿ ಪುದುಚೇರಿಯ ಏಕೈಕ ಕ್ಷೇತ್ರ ಸೇರಿದಂತೆ ತಮಿಳುನಾಡಿನ 39 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Continue Reading

ತಂತ್ರಜ್ಞಾನ

DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

DRDO Test: ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಮತ್ತೊಂದು ಯಶಸ್ಸು ಲಭಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಒಡಿಶಾ ಕರಾವಳಿಯ ಚಾಂದಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ದೇಶೀಯ ತಂತ್ರಜ್ಞಾನದ ಕ್ರೂಸ್ ಕ್ಷಿಪಣಿ ಯ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ.

VISTARANEWS.COM


on

DRDO
Koo

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಗುರುವಾರ (ಏಪ್ರಿಲ್‌ 18) ಒಡಿಶಾ ಕರಾವಳಿಯ ಚಾಂದಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR)ನಿಂದ ದೇಶೀಯ ತಂತ್ರಜ್ಞಾನದ ಕ್ರೂಸ್ ಕ್ಷಿಪಣಿ (ITCM)ಯ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ (DRDO Test).

ಕ್ಷಿಪಣಿ ಹಾರಾಟದ ಪರೀಕ್ಷೆಯ ಎಲ್ಲ ಹಂತಗಳು ನಿರೀಕ್ಷೆಯಂತೆ ನಡೆದವು. ಹಾರಾಟ ಮಾರ್ಗದ ಸಂಪೂರ್ಣ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಲು ವಿವಿಧ ಸ್ಥಳಗಳಲ್ಲಿ ರಾಡಾರ್, ಎಲೆಕ್ಟ್ರೋ-ಆಪ್ಟಿಕಲ್ ಟ್ರ್ಯಾಕಿಂಗ್ ಸಿಸ್ಟಮ್ (Electro-Optical Tracking System) ಮತ್ತು ಟೆಲಿಮೆಟ್ರಿಯಂತಹ ಹಲವಾರು ಶ್ರೇಣಿ ಸಂವೇದಕಗಳನ್ನು ನಿಯೋಜಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಕ್ಷಿಪಣಿಯ ಹಾರಾಟವನ್ನು ಐಎಎಫ್ ಸು-30-ಎಂಕೆ-I (IAF Su-30-Mk-I) ವಿಮಾನದ ಮೂಲಕವೂ ಮೇಲ್ವಿಚಾರಣೆ ನಡೆಸಲಾಯಿತು. “ಕ್ಷಿಪಣಿಯು ವೇಪಾಯಿಂಟ್ ನ್ಯಾವಿಗೇಷನ್ ಬಳಸಿ ನಿರೀಕ್ಷಿತ ಗುರಿಯನ್ನು ತಲುಪಿತು ಮತ್ತು ಅತ್ಯಂತ ಕಡಿಮೆ ಎತ್ತರದ ಹಾರಾಟ ನಡೆಸಿತು” ಎಂದು ರಕ್ಷಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಅಭಿವೃದ್ಧಿ

ವಿಶೇಷ ಎಂದರೆ ಇಡೀ ಕ್ಷಿಪಣಿ ವ್ಯವಸ್ಥೆಯನ್ನು ಬೆಂಗಳೂರಿನಲ್ಲಿರುವ ಡಿಆರ್‌ಡಿಒ ಸಂಗಸಂಸ್ಥೆಯಾದ ಏರೋನಾಟಿಕಲ್‌ ಡೆವಲಪ್‌ಮೆಂಟ್‌ ಎಸ್ಟಾಬ್ಲಿಷ್‌ಮೆಂಟ್‌ (ADE) ಅಭಿವೃದ್ಧಿಪಡಿಸಿದೆ. ಜತೆಗೆ ಇತರ ಪ್ರಯೋಗಾಲಯಗಳು ಮತ್ತು ಉದ್ದಿಮೆಗಳೂ ಈ ಮಹತ್ತರ ಕಾರ್ಯದಲ್ಲಿ ಕೈ ಜೋಡಿಸಿವೆ ಎಂದು ಮೂಲಗಳು ತಿಳಿಸಿವೆ. ಐಟಿಸಿಎಂನ ಯಶಸ್ವಿ ಪರೀಕ್ಷೆಗಾಗಿ ಡಿಆರ್‌ಡಿಒವನ್ನು ಅಭಿನಂದಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ದೇಶೀಯ ತಂತ್ರಜ್ಞಾನದ ಕ್ರೂಸ್ ಕ್ಷಿಪ ಯಶಸ್ವಿ ಅಭಿವೃದ್ಧಿಯು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಗೆ ಪ್ರಮುಖ ಮೈಲಿಗಲ್ಲಾಗಿದೆ” ಎಂದು ಹೇಳಿದ್ದಾರೆ. ಜತೆಗೆ ರಕ್ಷಣಾ ಇಲಾಖೆ ಕಾರ್ಯದರ್ಶಿ ಮತ್ತು ಡಿಆರ್‌ಡಿಒ ಅಧ್ಯಕ್ಷ ಡಾ.ಸಮೀರ್ ವಿ. ಕಾಮತ್ ಕೂಡ ಇಡೀ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ.

ʼʼಐಟಿಸಿಎಂ ಕ್ಷಿಪಣಿಯು ಉತ್ತಮ ಮತ್ತು ಹೆಚ್ಚು ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಸುಧಾರಿತ ಏವಿಯಾನಿಕ್ಸ್ ಮತ್ತು ಸಾಫ್ಟ್‌ವೇರ್‌ ಅನ್ನು ಸಹ ಹೊಂದಿದೆʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ಯಾಲಿಸ್ಟಿಕ್‌ ಕ್ಷಿಪಣಿ ಅಗ್ನಿ- ಪ್ರೈಮ್‌ ಯಶಸ್ವಿ ಪರೀಕ್ಷೆ

ಕೆಲವು ದಿನಗಳ ಹಿಂದೆ ಭಾರತವು ಹೊಸ ತಲೆಮಾರಿನ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-ಪ್ರೈಮ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿತ್ತು. ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಇದರ ಪರೀಕ್ಷಾರ್ಥ ಹಾರಾಟ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. ಪರೀಕ್ಷೆಯು ಎಲ್ಲಾ ಪ್ರಯೋಗದ ಉದ್ದೇಶಗಳನ್ನು ಪೂರೈಸಿದ್ದು, ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು ದೃಢೀಕರಿಸಿದೆ. ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾದ ಹಲವಾರು ಶ್ರೇಣಿಯ ಸೆನ್ಸರ್‌ಗಳಿಂದ ಸೆರೆಹಿಡಿಯಲಾದ ಡೇಟಾಗಳು ಇದನ್ನು ದೃಢೀಕರಿಸಿವೆ.

“ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್‌ಎಫ್‌ಸಿ), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಜೊತೆಗೆ ಹೊಸ ಪೀಳಿಗೆಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-ಪ್ರೈಮ್‌ನ ಯಶಸ್ವಿ ಹಾರಾಟ- ಪರೀಕ್ಷೆಯನ್ನು ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಏಪ್ರಿಲ್ 3ರಂದು ಸುಮಾರು 7 ಗಂಟೆಗೆ ನಡೆಸಿತು,” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Mission Divyastra : ಏನಿದು ಮಿಷನ್​ ದಿವ್ಯಾಸ್ತ್ರ, ಸೇನೆ ಸೇರಲಿರುವ ಹೊಸ ಅಸ್ತ್ರ? ಇಲ್ಲಿದೆ ಪೂರ್ಣ ಮಾಹಿತಿ

Continue Reading
Advertisement
Amanatullah Khan
ದೇಶ5 mins ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ26 mins ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ46 mins ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ49 mins ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ1 hour ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ2 hours ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Indian Railways
ದೇಶ2 hours ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Man death in tiger attack in Nittur village
ಕೊಡಗು2 hours ago

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Surapura Assembly Constituency By election BJP candidate Raju Gowda filed nomination
ಯಾದಗಿರಿ2 hours ago

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

Preity Zinta
ಕ್ರೀಡೆ2 hours ago

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌