Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ - Vistara News

ದೇಶ

Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

Made In India: ʼಮೇಕ್‌ ಇನ್‌ ಇಂಡಿಯಾʼ ಕೇಂದ್ರ ಸರ್ಕಾರ 2014ರಲ್ಲಿ ಪರಿಚಯಿಸಿದ ಈ ಅಭಿಯಾನ ಭಾರತದ ಉತ್ಪಾದನಾ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾದ ಈ ಯೋಜನೆ ಮೂಲಕ ಭಾರತವನ್ನು ಉತ್ಪನ್ನಗಳ ತಯಾರಿಕಾ ಕೇಂದ್ರವನ್ನಾಗಿ ರೂಪಿಸುವ ಪ್ರಮುಖ ಉದ್ದೇಶ ಹೊಂದಲಾಗಿದೆ. ಸದ್ಯ ಈ ಯೋಜನೆ ಯಶಸ್ವಿಯಾಗಿದ್ದು, ಭಾರತ ಅನೇಕ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಿದೆ. ಇದೀಗ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಯೋಜನೆಯ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

Made In India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ʼಮೇಕ್‌ ಇನ್‌ ಇಂಡಿಯಾʼ (Make In India)-ಕೇಂದ್ರ ಸರ್ಕಾರ 2014ರಲ್ಲಿ ಪರಿಚಯಿಸಿದ ಈ ಅಭಿಯಾನ ಭಾರತದ ಉತ್ಪಾದನಾ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕನಸಿನ ಕೂಸಾದ ಈ ಯೋಜನೆ ಮೂಲಕ ಭಾರತವನ್ನು ಉತ್ಪನ್ನಗಳ ತಯಾರಿಕಾ ಕೇಂದ್ರವನ್ನಾಗಿ ರೂಪಿಸುವ ಪ್ರಮುಖ ಉದ್ದೇಶ ಹೊಂದಲಾಗಿದೆ. ಭಾರತದಲ್ಲೇ ಸರಕುಗಳನ್ನು ತಯಾರಿಸುವ ಮೂಲಕ ದೇಶದ ಆರ್ಥಿಕತೆಯನ್ನು ಮೇಲಕ್ಕೆತ್ತಲಾಗುತ್ತದೆ (Made In India). ಇದರಿಂದ ರಫ್ತು ಪ್ರಮಾಣ ಹೆಚ್ಚಿ, ಆಮದು ಕಡಿಮೆಯಾಗುತ್ತಿದೆ. ಸದ್ಯ ಈ ಯೋಜನೆ ಯಶಸ್ವಿಯಾಗಿದ್ದು, ಭಾರತ ಅನೇಕ ಕ್ಷೇತ್ರಗಳಲ್ಲಿ ಸ್ವಾವಲಂಬಿಯಾಗಿದೆ. ಇದೀಗ ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಯೋಜನೆಯ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

MyGovIndia ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾರತದಲ್ಲೇ ತಯಾರಾದ ಉತ್ಪನ್ನಗಳು ಹೇಗೆ ಜಾಗತಿಕವಾಗಿ ಪರಿಣಾಮ ಬೀರಿವೆ ಎನ್ನುವುದನ್ನು ವಿವರಿಸುವ ಪೋಸ್ಟ್‌ ಹಂಚಿಕೊಂಡಿದೆ. ಇದನ್ನು ಶೇರ್‌ ಮಾಡಿಕೊಂಡಿರುವ ಮೋದಿ ಅವರು, ‘ʼಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆಯನ್ನು ಜಾಗತಿಕ ವೇದಿಕೆಗೆ ಹೇಗೆ ಕೊಂಡೊಯ್ಯುತ್ತಿದೆ ಎಂಬುದರ ಒಂದು ನೋಟ ಇಲ್ಲಿದೆʼʼ ಎಂದು ಬರೆದುಕೊಂಡಿದ್ದಾರೆ.

MyGovIndia ಪೋಸ್ಟ್‌ನಲ್ಲಿ ಏನಿದೆ?

ʼʼಸ್ಥಳೀಯ ಕರಕುಶಲತೆಯಿಂದ ಜಾಗತಿಕ ಪರಿಣಾಮದವರೆಗೆ: ಮೇಡ್‌ ಇನ್‌ ಇಂಡಿಯಾ ಯಶಸ್ಸಿನ ಕಥೆ. ಮೇಡ್ ಇನ್ ಇಂಡಿಯಾ ಉಪಕ್ರಮವು ಜಾಗತಿಕವಾಗಿ ಭಾರತೀಯ ನಿರ್ಮಿತ ಉತ್ಪನ್ನಗಳ ಯಶಸ್ಸನ್ನು ಸಾರುತ್ತಿದೆ. ಸೈಕಲ್‌ನಿಂದ ಹಿಡಿದು ಡಿಜಿಟಲ್ ಪಾವತಿಗಳವರೆಗೆ ಭಾರತವು ತನ್ನ ಉತ್ಪನ್ನಗಳೊಂದಿಗೆ ಜಗತ್ತಿನ ಗಮನ ಸೆಳೆದಿದೆʼʼ ಎಂದು MyGovIndia ಮಾಡಿರುವ ಪೋಸ್ಟ್‌ ಅನ್ನು ಮೋದಿ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಸರಣಿ ಪೋಸ್ಟ್‌ ಹಂಚಿಕೊಂಡಿರುವ MyGovIndia ಭಾರತದಲ್ಲಿ ತಯಾರಾಗಿರುವ ಉತ್ಪನ್ನಗಳು ಹೇಗೆ ಜಾಗತಿಕವಾಗಿ ಪರಿಣಾಮ ಬೀರಿದೆ ಎನ್ನುವುದನ್ನು ವಿವರಿಸಿದೆ.

ಭಾರತದ ಸೈಕಲ್‌ಗೆ ವಿದೇಶಗಳಲ್ಲಿ ಬೇಡಿಕೆ

ಭಾರತದಲ್ಲಿ ತಯಾರಾಗುವ ಸೈಕಲ್‌ ಜಾಗತಿಕವಾಗಿ ಛಾಪು ಮೂಡಿಸಿದೆ. ಇಂಗ್ಲೆಂಡ್‌, ಜರ್ಮನಿ ಮತ್ತು ನೆದರ್‌ಲ್ಯಾಂಡ್‌ಗೆ ಭಾರತೀಯ ಸೈಕಲ್‌ಗಳನ್ನು ರಫ್ತು ಮಾಡಲಾಗುತ್ತಿದೆ. ಈ ಬೆಳವಣಿಗೆಯು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವವನ್ನು ಎತ್ತಿ ತೋರಿಸುತ್ತದೆ.

ರಷ್ಯಾ ಸೈನಿಕರಿಗೆ ಬಿಹಾರದಿಂದ ಶೂ ಪೂರೈಕೆ

ರಷ್ಯಾ ಸೈನಿಕರಿಗೆ ಬಿಹಾರದಲ್ಲಿ ತಯಾರಿಸಲಾಗುವ ಸೇಫ್ಟಿ ಶೂಗಳನ್ನು ಪೂರೈಸಲಾಗುತ್ತಿದೆ. ಈ ಮೈಲಿಗಲ್ಲು ಅಂತಾರಾಷ್ಟ್ರೀಯ ರಕ್ಷಣಾ ಮಾರುಕಟ್ಟೆಗಳಲ್ಲಿ ಹೆಚ್ಚುತ್ತಿರುವ ಭಾರತದ ಪ್ರಭಾವ ಮತ್ತು ಉತ್ಪಾದನಾ ಸಾಮರ್ಥ್ಯಗಳನ್ನು ಪ್ರತಿಬಿಂಬಿಸುತ್ತಿದೆ. ಜತೆಗೆ ಕೆಲವು ಯುರೋಪಿಯನ್‌ ದೇಶಗಳಿಗೆ ಡಿಸೈನರ್ ಶೂಗಳನ್ನೂ ರಫ್ತು ಮಾಡಲಾಗುತ್ತಿದೆ.

ಕಾಶ್ಮೀರದ ಬ್ಯಾಟ್‌ಗಳಿಗೆ ಜಾಗತಿಕ ಬೇಡಿಕೆ

ಇತ್ತೀಚೆಗೆ ನಡೆದ ಟಿ-20 ವಿಶ್ವಕಪ್ ವೇಳೆ ಕಾಶ್ಮೀರದ ವಿಲ್ಲೋ ಬ್ಯಾಟ್‌ಗಳಿಗೆ ವಿದೇಶಗಳಲ್ಲಿಯೂ ಹೆಚ್ಚಿನ ಬೇಡಿಕೆ ಕಂಡು ಬಂದಿತ್ತು. ಈ ಬ್ಯಾಟ್‌ಗಳು ಭಾರತದ ಉತ್ಕೃಷ್ಟ ಕರಕುಶಲತೆ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಕಾರಣದಿಂದ ಜನಪ್ರಿಯವಾಗುತ್ತಿದೆ.

ಅಮೂಲ್‌ ಬ್ರ್ಯಾಂಡ್‌ಗೆ ಎಲ್ಲೆಡೆ ಮನ್ನಣೆ

ಅಮುಲ್ ಬ್ರ್ಯಾಂಡ್‌ ಭಾರತದ ವಿಶಿಷ್ಟ ರುಚಿಗಳನ್ನು ಜಗತ್ತಿನಾದ್ಯಂತ ಪಸರಿಸುತ್ತಿದೆ. ತನ್ನ ಉತ್ಪನ್ನಗಳನ್ನು ಅಮೆರಿಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಅಂತಾರಾಷ್ಟ್ರೀಯ ವಿಸ್ತರಣೆಯು ಭಾರತೀಯ ಹಾಲಿನ ಉತ್ಪನ್ನಗಳನ್ನು ವಿಶ್ವಾದ್ಯಂತ ಹರಡುವ ಅಮುಲ್‌ನ ಬದ್ಧತೆಗೆ ಸಾಕ್ಷಿ.

ವಿದೇಶದಲ್ಲಿಯೂ ಯುಪಿಐ ಕಮಾಲ್‌

ಭಾರತದ ಯುಪಿಐ ವ್ಯವಸ್ಥೆಗೆ ಈಗ ಜಾಗತಿಕ ಮನ್ನಣೆ ಲಭಿಸಿದ್ದು, ಅನೇಕ ದೇಶಗಳು ಈ ತಡೆರಹಿತ ಡಿಜಿಟಲ್ ಪಾವತಿಗಳನ್ನು ಸಕ್ರಿಯಗೊಳಿಸಿವೆ. ಇದು ಡಿಜಿಟಲ್ ವಹಿವಾಟುಗಳಲ್ಲಿ ಕ್ರಾಂತಿಯನ್ನುಂಟು ಮಾಡುವ ಭಾರತದ ಬದ್ಧತೆಯನ್ನು ಒತ್ತಿ ಹೇಳುತ್ತದೆ.

ಕ್ರಾಂತಿ ಸೃಷ್ಟಿಸಿದ ಬ್ರಹ್ಮೋಸ್ ಕ್ಷಿಪಣಿ

ಭಾರತ ಮತ್ತು ರಷ್ಯಾ ನಡುವಿನ ಜಂಟಿ ಉದ್ಯಮವಾದ ಬ್ರಹ್ಮೋಸ್ ಕ್ಷಿಪಣಿ ಈಗ ದಕ್ಷಿಣ ಚೀನಾ ಸಮುದ್ರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಬೆಳವಣಿಗೆಯು ಭಾರತದ ರಕ್ಷಣಾ ಸಾಮರ್ಥ್ಯವನ್ನು ಜಗತ್ತಿಗೆ ಸಾರಿ ಹೇಳಿದೆ. ಮಾತ್ರವಲ್ಲ ಜಾಗತಿಕ ಭದ್ರತೆಯನ್ನು ಹೆಚ್ಚಿಸುವಲ್ಲಿ ನಮ್ಮ ದೇಶದ ಮಹತ್ವದ ಪಾತ್ರವನ್ನು ಒತ್ತಿ ಹೇಳಿದೆ.

ಇ-ಕಾಮರ್ಸ್ ಮಾರುಕಟ್ಟೆಯಲ್ಲಿಯೂ ಪ್ರಾಬಲ್ಯ

ಅಮೆಜಾನ್‌ನ ʼಬ್ಲ್ಯಾಕ್ ಫ್ರೈಡೆʼ ಮತ್ತು ʼಸೈಬರ್ ಮಂಡೆʼ ಮಾರಾಟದಲ್ಲಿ ಭಾರತೀಯ ಉತ್ಪನ್ನಗಳು ಪ್ರಾಬಲ್ಯ ಸಾಧಿಸಿವೆ. ಈ ಯಶಸ್ಸಿನ ಕಥೆಯು ಮೇಡ್‌ ಇನ್‌ ಇಂಡಿಯಾ ವಸ್ತುಗಳಿಗೆ ಅಂತಾರಾಷ್ಟ್ರೀಯ ಬೇಡಿಕೆ ಮತ್ತು ಜಾಗತಿಕ ಇ-ಕಾಮರ್ಸ್ ಮಾರುಕಟ್ಟೆಗಳಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವನ್ನು ತೋರಿಸುತ್ತದೆ.

ಇದನ್ನೂ ಓದಿ: Made In Bihar: ರಷ್ಯಾ ಸೈನ್ಯಕ್ಕೆ ಬಿಹಾರದಿಂದ ಸೇಫ್ಟಿ ಶೂ ಪೂರೈಕೆ; ವಾರ್ಷಿಕ 100 ಕೋಟಿ ರೂ. ವ್ಯವಹಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

Pooja Khedkar: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿದೆ. ಇದೀಗ ಅವರು ಅಂಗವೈಕಲ್ಯ ಪ್ರಮಾಣಪತ್ರ ವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಅವರ ಕಳ್ಳಾಟಗಳು ಬಗೆದಷ್ಟೂ ಹೊರ ಬರುತ್ತಿದೆ. ಇದೀಗ ಅವರು ಅಂಗವೈಕಲ್ಯ ಪ್ರಮಾಣಪತ್ರ (Disability certificate)ವನ್ನು ಪಡೆಯಲು ಸುಳ್ಳು ವಿಳಾಸ ಮತ್ತು ನಕಲಿ ಪಡಿತರ ಚೀಟಿಯನ್ನು ಬಳಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.

ಪುಣೆಯ ಯಶವಂತರಾವ್ ಚವಾಣ್ ಸ್ಮಾರಕ ಆಸ್ಪತ್ರೆ 2022ರ ಆಗಸ್ಟ್ 24ರಂದು ಪೂಜಾಗೆ ಅಂಗವೈಕಲ್ಯ ಪ್ರಮಾಣಪತ್ರವನ್ನು ನೀಡಿದೆ. ಅದರಲ್ಲಿ ಪೂಜಾ ಖೇಡ್ಕರ್ ಅವರ ವಿಳಾಸವನ್ನು ʼʼಪುಣೆ ಜಿಲ್ಲೆಯ ಪ್ಲಾಟ್ ಸಂಖ್ಯೆ 53, ದೇಹು ಅಲಂಡಿ ರಸ್ತೆ, ತಲವಾಡೆ, ಪಿಂಪ್ರಿ ಚಿಂಚ್ವಾಡ್” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಸ್ಥಳದಲ್ಲಿ ಯಾವುದೇ ಮನೆ ಇಲ್ಲ. ಬದಲಾಗಿ ಥರ್ಮೋವರ್ಟಾ ಎಂಜಿನಿಯರಿಂಗ್ ಕಂಪನಿ ಎಂಬ ಕಾರ್ಖಾನೆ ಇದೆ. ಕುತೂಹಲಕಾರಿ ಸಂಗತಿಯೆಂದರೆ, ಕೆಂಪು-ನೀಲಿ ದೀಪವನ್ನು ಅಕ್ರಮವಾಗಿ ಬಳಸಿದ ನಂತರ ವಶಪಡಿಸಿಕೊಳ್ಳಲಾದ ಖೇಡ್ಕರ್ ಅವರ ಆಡಿ ಕಾರು ಈ ಕಂಪನಿಯ ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿದೆ.

ಅಲ್ಲದೆ ಅಂಗವೈಕಲ್ಯ ಪ್ರಮಾಣಪತ್ರಗಳನ್ನು ಪಡೆಯಲು ಸರ್ಕಾರವು ಆಧಾರ್ ಕಾರ್ಡ್‌ ಅನ್ನು ಕಡ್ಡಾಯಗೊಳಿಸಿದ್ದರೂ ಪೂಜಾ ಅದರ ಬದಲು ಪಡಿತರ ಚೀಟಿ ಹಾಜರುಪಡಿಸಿದ್ದರು ಎಂದು ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ನಕಲಿ ಪಡಿತರ ಚೀಟಿಯನ್ನು ತಯಾರಿಸಲು ಪೂಜಾ ನಕಲಿ ವಿಳಾಸವನ್ನು ಬಳಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪೂಜಾ ಖೇಡ್ಕರ್ ಮೊಣಕಾಲಿನಲ್ಲಿ ಶೇ. 7ರಷ್ಟು ಅಂಗವೈಕಲ್ಯವನ್ನು ಹೊಂದಿದ್ದಾರೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಸಿವಿಲ್‌ ಸರ್ವಿಸ್‌ ಆಯ್ಕೆಯ ಸಮಯದಲ್ಲಿ ಈ ಅಂಗವೈಕಲ್ಯ ಪ್ರಮಾಣಪತ್ರದಿಂದ ಪೂಜಾ ಅವರಿಗೆ ಅದು ಹೇಗೆ ರಿಯಾಯಿತಿ ಸಿಕ್ಕಿತು ಎನ್ನುವ ಪ್ರಶ್ನೆಯೂ ಎದ್ದಿದೆ. ಯಾಕೆಂದರೆ ಪೂಜಾ ʼಬೆಂಚ್‌ಮಾರ್ಕ್‌ ಅಂಗವೈಕಲ್ಯ ಹೊಂದಿರುವ ವ್ಯಕ್ತಿʼ ವಿಭಾಗದಲ್ಲಿ ವಿನಾಯಿತಿ ಕೋರಿದ್ದರು. ಆದರೆ ಯುಪಿಎಸ್‌ಸಿ ನಿಯಮದ ಪ್ರಕಾರ ಈ ರಿಯಾಯಿತಿ ಶೇ. 40ಕ್ಕಿಂತ ಕಡಿಮೆ ಇಲ್ಲದ ವ್ಯಕ್ತಿಗೆ ದೊರೆಯಬೇಕು. ಆದರೆ ಪೂಜಾ ಅವರ ಪ್ರಮಾಣಪತ್ರದಲ್ಲಿ ಅವರ ಅಂಗವೈಕಲ್ಯದ ಪ್ರಮಾಣವನ್ನು ಶೇ. 7 ಎಂದು ಉಲ್ಲೇಖಿಸಲಾಗಿದ್ದು, ಇದು ಯುಪಿಎಸ್‌ಸಿ ಮಿತಿಗಿಂತ ತುಂಬಾ ಕಡಿಮೆ ಇದೆ.

ಈ ಹಿಂದೆ ಅವರು ತಮ್ಮ ಅಂಗವೈಕಲ್ಯ ಪ್ರಮಾಣಪತ್ರವನ್ನು ಪರಿಶೀಲಿಸುವ ವೈದ್ಯಕೀಯ ತಪಾಸಣೆಯನ್ನು ತಪ್ಪಿಸಿಕೊಂಡಿದ್ದರು. ನಂತರ ಖಾಸಗಿ ವರದಿಯನ್ನು ಸಲ್ಲಿಸಿದ್ದರು. ಸದ್ಯ ಪೂಜಾ ಸಲ್ಲಿಸಿದ ಪ್ರಮಾಣಪತ್ರಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಪುಣೆಯ ಅಂಗವಿಕಲರ ಆಯುಕ್ತರ ಕಚೇರಿ ಪೊಲೀಸರಿಗೆ ಸೂಚಿಸಿದೆ.

ತರಬೇತಿಗೆ ತಡೆ, ಅಕಾಡೆಮಿಗೆ ವಾಪಸ್‌

ಈ ಮಧ್ಯೆ ಪೂಜಾ ಅವರ ತರಬೇತಿಯನ್ನ ತಡೆ ಹಿಡಿಯಲಾಗಿದೆ. ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: Manorama Khedkar: ಪಿಸ್ತೂಲ್‌ ತೋರಿಸಿ ರೈತರಿಗೆ ಬೆದರಿಕೆ ಹಾಕಿದ ಐಎಎಸ್‌ ಅಧಿಕಾರಿ ತಾಯಿಯ ವಿರುದ್ಧ ಎಫ್‌ಐಆರ್‌

Continue Reading

ವಾಣಿಜ್ಯ

Anant Radhika Wedding: ಮನಮುಟ್ಟುವಂತೆ ಕನ್ಯಾದಾನದ ಮಹತ್ವ ತಿಳಿಸಿದ ನೀತಾ ಅಂಬಾನಿ; ಭಾವುಕರಾದ ಅತಿಥಿಗಳು; ವಿಡಿಯೊ ನೋಡಿ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ (Anant Radhika Wedding) ಸಮಾರಂಭದಲ್ಲಿ ಅನಂತ್ ತಾಯಿ, ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಅವರು ‘ಕನ್ಯಾದಾನ’ ಕುರಿತು ಕಾವ್ಯಾತ್ಮಕ ವರ್ಣನೆಯನ್ನು ನೀಡಿದರು. ಇದು ಮುಕೇಶ್ ಅಂಬಾನಿ ಸೇರಿದಂತೆ ನೆರೆದಿದ್ದ ಅತಿಥಿಗಳ ಕಣ್ಣಂಚಲ್ಲಿ ನೀರು ಜಿನುಗುವಂತೆ ಮಾಡಿತ್ತು. ಈ ವಿಡಿಯೊ ನೋಡಿ.

VISTARANEWS.COM


on

By

Anant Radhika Wedding
Koo

ಭಾರತೀಯ ಸಂಸ್ಕೃತಿಯಲ್ಲಿ ಕನ್ಯಾದಾನಕ್ಕೆ (Kanyadaan) ಹೆಚ್ಚಿನ ಮಹತ್ವವಿದೆ. ವಿವಾಹದ (wedding) ವಿಧಿವಿಧಾನಗಳಲ್ಲಿ ಇದರ ಕುರಿತು ವಿವರಿಸಲಾಗಿದ್ದರೂ ಹೆಚ್ಚಿನವರು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹದಲ್ಲಿ (Anant Radhika Wedding) ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ (nita ambani) ಅವರು ‘ಕನ್ಯಾದಾನ’ ಕುರಿತು ಕಾವ್ಯಾತ್ಮಕ ವರ್ಣನೆಯನ್ನು ನೀಡಿದ್ದಾರೆ. ಇದು ಮುಕೇಶ್ ಅಂಬಾನಿ (mukesh ambani) ಸೇರಿದಂತೆ ನೆರೆದಿದ್ದ ಅತಿಥಿಗಳ ಕಣ್ಣಂಚಲ್ಲಿ ನೀರು ಜಿನುಗುವಂತೆ ಮಾಡಿತ್ತು.

ಕನ್ಯಾದಾನವು ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಮತ್ತು ಉದಾತ್ತ ಕಾರ್ಯ ಎಂದಿರುವ ನೀತಾ ಅಂಬಾನಿ, ಯಾವುದೇ ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕನ್ಯಾದಾನದ ಮಹತ್ವದ ಕುರಿತು ಮಾತನಾಡಿದ ಅವರು, ಒಬ್ಬರು ತಮ್ಮ ಹೃದಯದ ತುಣುಕಿನೊಂದಿಗೆ ಪ್ರೀತಿ, ಸಂತೋಷ ಮತ್ತು ನೆನಪುಗಳಲ್ಲಿ ಸಂಪೂರ್ಣ ಭಾಗವಾಗಿರುತ್ತಾರೆ. ಮಗಳನ್ನು ಇನ್ನೊಂದು ಕುಟುಂಬದೊಂದಿಗೆ ಹಂಚಿಕೊಳ್ಳಲಾಗುತ್ತದೆ ಆದರೆ ಅವರನ್ನು ಹಸ್ತಾಂತರಿಸಲು ಸಾಧ್ಯವಿಲ್ಲ ಮತ್ತು ಅವರು ಶಾಶ್ವತವಾಗಿ ಇರುತ್ತಾರೆ. ಮಗಳು ವರ್ಗಾಯಿಸುವ ಆಸ್ತಿಯಲ್ಲ. ಪಾಲಿಸಬೇಕಾದ ಮತ್ತು ಅಮೂಲ್ಯವಾದ ಆಶೀರ್ವಾದ ಅವಳು. ಈಗ ತನ್ನ ಹೊಸ ಕುಟುಂಬದೊಂದಿಗೆ ಹಂಚಿಕೊಳ್ಳುವ ಸಂತೋಷ, ಪ್ರೀತಿ ಮತ್ತು ಬೆಳಕಿನ ಮೂಲ ಮಗಳು.

ನೀತಾ ಅಂಬಾನಿ ‘ಕನ್ಯಾದಾನ’ ಆಚರಣೆಯನ್ನು ವಿವರಿಸುತ್ತಿದ್ದಂತೆ ಅವರ ಪತಿ ಮುಖೇಶ್ ಅಂಬಾನಿ ಸೇರಿದಂತೆ ಹಲವಾರು ಅತಿಥಿಗಳು ಭಾವುಕರಾದರು.

Ananth Radhika wedding


ಭಾರತೀಯ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳು ಮಹಿಳೆಯರಿಗೆ ಹೆಚ್ಚಿನ ಗೌರವವನ್ನು ನೀಡುತ್ತವೆ. ನಮ್ಮ ಧರ್ಮಗ್ರಂಥಗಳು ನಮಗೆ ಎಲ್ಲಿ ಹೆಣ್ಣು ಮಕ್ಕಳು ಅಲ್ಲಿ ಮಂಗಳಕರವೆಂದು ಕಲಿಸುತ್ತವೆ. ಹೆಣ್ಣುಮಕ್ಕಳಿಗೆ ಹೆಚ್ಚಿನ ದೇವರು ಕೊಟ್ಟಿರುವ ಶಕ್ತಿಯಿದೆ. ನಮ್ಮ ಹೆಣ್ಣು ಮಕ್ಕಳು ಮನೆಗಳನ್ನು ಸ್ವರ್ಗದಂತೆ ಭಾವಿಸುತ್ತಾರೆ ಎಂದು ಅವರು ಹೇಳಿದರು.

ಭಾರತೀಯ ವಿವಾಹವು ವರ ಮತ್ತು ವಧುವಿನ ನಡುವೆ ಮತ್ತು ಅವರ ನಿಜವಾದ ಕುಟುಂಬಗಳ ನಡುವೆ ಪರಿಪೂರ್ಣ ಸಮಾನತೆಯ ಅಡಿಪಾಯದ ಮೇಲೆ ನಿಂತಿದೆ. ಆದ್ದರಿಂದ, ಕನ್ಯಾದಾನದ ನಿಜವಾದ ಸಾಂಸ್ಕೃತಿಕ ಮಹತ್ವವೆಂದರೆ ವಧುವಿನ ಪೋಷಕರು ವರನನ್ನು ತಮ್ಮ ಮಗನಾಗಿ ಸ್ವೀಕರಿಸುತ್ತಾರೆ ಮತ್ತು ಅವರ ಕುಟುಂಬವನ್ನು ತಮ್ಮ ಅಮೂಲ್ಯ ಮಗಳೊಂದಿಗೆ ಒಪ್ಪಿಸುತ್ತಾರೆ ಎಂದು ನೀತಾ ಅಂಬಾನಿ ಹೇಳಿದ್ದಾರೆ.


ನಾನೇ ಮಗಳಾಗಿ, ಮಗಳ ತಾಯಿಯಾಗಿ ಮತ್ತು ಅತ್ತೆಯಾಗಿ ಯಾವುದೇ ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಎಂದಿಗೂ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ ಎಂದು ಅವರು ಹೇಳಿದರು.

ಹೆಣ್ಣುಮಕ್ಕಳು ಜೀವನದ ದೊಡ್ಡ ಆಶೀರ್ವಾದಗಳು ಮತ್ತು ದೊಡ್ಡ ಸಂತೋಷಗಳು. ಅವರು ಲಕ್ಷ್ಮಿ ದೇವಿಯ ಅಭಿವ್ಯಕ್ತಿಗಳು. ಅವರು ಹುಟ್ಟಿದ ಸಮಯದಿಂದ ನಮ್ಮ ಮನೆ ಮತ್ತು ಜೀವನಕ್ಕೆ ಸಮೃದ್ಧಿ ಮತ್ತು ಮಂಗಳವನ್ನು ತರುತ್ತಾರೆ. ಅವರು ನಮ್ಮ ಆತ್ಮದ ಶುದ್ಧ ಭಾಗಗಳು, ನಮ್ಮ ಅಸ್ತಿತ್ವದೊಂದಿಗೆ ಹೆಣೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Anant Radhika Wedding: ಅನಂತ್ ಅಂಬಾನಿ ಟರ್ಬನ್‌ನಲ್ಲಿದ್ದ ಡೈಮಂಡ್ ಬ್ರೋಚ್‌ ಮೌಲ್ಯ 150 ಫ್ಲಾಟ್‌ಗಳ ಬೆಲೆಗೆ ಸಮಾನ!

ಮುಂಬಯಿಯ ಜಿಯೋ ವರ್ಲ್ಡ್ ನ ಬಿಕೆಸಿ ಕನ್ವೆನ್ಷನ್ ಹಾಲ್ ನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹವು ಜುಲೈ 12ರಂದು ನಡೆಯಿತು. ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು, ಸಮಾಜವಾದಿಗಳಾದ ಕಿಮ್ ಕಾರ್ಡಶಿಯಾನ್ ಮತ್ತು ಖ್ಲೋ ಕರ್ದಾಶಿಯಾನ್, ರಾಜಕಾರಣಿಗಳು ಇದರಲ್ಲಿ ಪಾಲ್ಗೊಂಡಿದ್ದರು.

Continue Reading

ಪ್ರಮುಖ ಸುದ್ದಿ

Anant Radhika Wedding: ಪ್ರತಿ ಭಾನುವಾರ ನಮ್ಮನೇಲಿ ನಿಮ್ಮದೇ ತಿಂಡಿ; ಮೈಸೂರು ಕೆಫೆ ಮಾಲಕಿಯ ಕಾಲು ಮುಟ್ಟಿ ನಮಸ್ಕರಿಸಿದ ಅನಂತ್ ಅಂಬಾನಿ! ವಿಡಿಯೊ ನೋಡಿ

Anant Radhika Wedding: ಮೂರು ದಿನಗಳ ಸಮಾರಂಭದಲ್ಲಿ ಜಾಗತಿಕ ನಾಯಕರು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ಭಾಗವಹಿಸಿದ್ದರು. ಮುಂಬಯಿಯ ಖ್ಯಾತ ಮೈಸೂರು ಕೆಫೆಯ ಮಾಲೀಕರಾದ ನರೇಶ್ ನಾಯಕ್ ಅವರ ತಾಯಿ ಶಾಂತೇರಿ ನಾಯಕ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

VISTARANEWS.COM


on

anant radhika wedding
Koo

ಮುಂಬಯಿ: ತಮ್ಮ ಮದುವೆ (Anant Radhika Wedding) ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೈಸೂರು ಕೆಪೆಯ (Mysore Cafe) ಮಾಲಕಿಯ ಕಾಲು ಮುಟ್ಟಿ ಅನಂತ್‌ ಅಂಬಾನಿ (Anant Ambani) ಹಾಗೂ ರಾಧಿಕಾ (Radhika Merchant) ನಮಸ್ಕರಿಸಿದ ವಿಡಿಯೋ ಇದೀಗ ವೈರಲ್‌ (Viral Video) ಆಗುತ್ತಿದೆ. “ಪ್ರತಿ ಭಾನುವಾರ ನಮ್ಮ ಮನೆಯಲ್ಲಿ ನಿಮ್ಮದೇ ತಿಂಡಿ” ಎಂದು ಅನಂತ್‌ ಆಡುವ ಮಾತುಗಳು ಕೂಡ ವಿಡಿಯೋದಲ್ಲಿ ದಾಖಲಾಗಿವೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ವಿಐಪಿ ತಾರಾ ಬಳಗ ಭಾಗವಹಿಸಿದ್ದು, ಜೊತೆಗೆ ಉದ್ಯಮ ಕ್ಷೇತ್ರದ ಗಣ್ಯರೂ ಆಗಮಿಸಿದರು. ಮೂರು ದಿನಗಳ ಸಮಾರಂಭದಲ್ಲಿ ಜಾಗತಿಕ ನಾಯಕರು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ಭಾಗವಹಿಸಿದ್ದರು. ಮುಂಬಯಿಯ ಖ್ಯಾತ ಮೈಸೂರು ಕೆಫೆಯ ಮಾಲೀಕರಾದ ನರೇಶ್ ನಾಯಕ್ ಅವರ ತಾಯಿ ಶಾಂತೇರಿ ನಾಯಕ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಅನಂತ್‌ ಅಂಬಾನಿ ಶಾಂತೇರಿ ನಾಯಕ್‌ ಅವರನ್ನು ಗುರುತಿಸಿ ರಾಧಿಕಾರನ್ನು ಕರೆದಿದ್ದಾರೆ. ನಂತರ ರಾಧಿಕಾ ಹಾಗೂ ಅನಂತ್‌ ಬಾಗಿ ಶಾಂತೇರಿಯವರ ಕಾಲು ಮುಟ್ಟಿ ನಮಸ್ಕರಿಸಿದರು. “ಪ್ರತಿ ಭಾನುವಾರ ನಮ್ಮ ಮನೆಯಲ್ಲಿ ನಿಮ್ಮದೇ ತಿಂಡಿ” ಎಂದು ಅನಂತ್‌ ಹೇಳಿದರು. ಶಾಂತೇರಿ ನಗುತ್ತಾ ಇಬ್ಬರನ್ನೂ ಆಶೀರ್ದಿಸಿದರು. ಮೈಸೂರು ಕೆಫೆಯ ಮಾಲಕಿ ಶಾಂತೇರಿಯವರು ಕೆಫೆಯನ್ನು ಮಗ ನರೇಶ್‌ಗೆ ಇತ್ತಿಚೆಗೆ ಹಸ್ತಾಂತರಿಸಿದ್ದಾರೆ.

ಜುಲೈ 12ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ತಾರಾಗಣದ ಮುಂದೆ ಮದುವೆಯಾದರು. ಅದ್ಧೂರಿ ಮದುವೆಯಲ್ಲಿ ಗುಜರಾತಿ ಸಂಪ್ರದಾಯ ಹಾಗೂ ಪಾಶ್ಚಾತ್ಯ ಪದ್ಧತಿಗಳನ್ನು ಬೆರೆಸಲಾಗಿತ್ತು. ಅವರು ಹಾರಗಳನ್ನು ತೊಡಿಸಿದ್ದಲ್ಲದೆ, ಅಗ್ನಿಕುಂಡದ ಸುತ್ತ ಹೆಜ್ಜೆ ಹಾಕಿದರು. ಮದುವೆಯ ಪ್ರತಿಜ್ಞೆಗಳನ್ನು ಪರಸ್ಪರ ಪಠಿಸಿದರು.

ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬ್ರಿಟನ್‌ನ ಮಾಜಿ ಪ್ರಧಾನಿಗಳಾದ ಬೋರಿಸ್ ಜಾನ್ಸನ್, ಟೋನಿ ಬ್ಲೇರ್, ಫ್ಯೂಚರಿಸ್ಟ್ ಪೀಟರ್ ಡೈಮಂಡಿಸ್, ಕಲಾವಿದ ಜೆಫ್ ಕೂನ್ಸ್, ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ, ಕೆನಡಾದ ಮಾಜಿ ಪ್ರಧಾನಿ ಸ್ಟೀಫನ್ ಹಾರ್ಪರ್ ಉಪಸ್ಥಿತರಿದ್ದರು. ಅಂಬಾನಿ ಕುಟುಂಬವು ಮಾಡೆಲ್‌ಗಳಾದ ಕಿಮ್ ಕಾರ್ಡಶಿಯಾನ್, ಖ್ಲೋ ಕಾರ್ಡಶಿಯಾನ್, ಜಾನ್ ಸೆನಾ, ನಟ ನಟಿಯರಾದ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ಮತ್ತಿತರ ಬಾಲಿವುಡ್ ಸೆಲೆಬ್ರಿಟಿಗಳಿಗೆ ಆತಿಥ್ಯ ನೀಡಿದೆ.

ಅನಂತ್ ಪೇಟಾದಲ್ಲಿ ಧರಿಸಿದ್ದ ಕಲ್ಗಿ ಬೆಲೆ ಎಷ್ಟು?

ಭಾರತದ ಶ್ರೀಮಂತ ಕುಟುಂಬವಾದ ಅಂಬಾನಿ ಮನೆತನದ (ambani family) ವಿವಾಹ (Anant Radhika Wedding) ಸಮಾರಂಭ ವಿಶ್ವದ ಗಮನ ಸೆಳೆದಿದೆ. ಉಡುಗೆ ತೊಡುಗೆಯಿಂದ ಹಿಡಿದು ಖಾದ್ಯ ವೈಶಿಷ್ಟ್ಯಗಳು ಸೇರಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಪ್ರತಿಯೊಂದು ಕ್ಷಣ, ಪ್ರತಿಯೊಂದು ವಿಷಯಗಳು ಎಲ್ಲರ ಗಮನ ಸೆಳೆದಿತ್ತು. ಇದರಲ್ಲಿ ಈಗ ಅನಂತ್ ಪೇಟಾದಲ್ಲಿ ಧರಿಸಿದ್ದ ಕಲ್ಗಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಮುಂಬಯಿಯಲ್ಲಿ (mumbai) ಕನಸಿನ ಲೋಕವನ್ನೇ ತೆರೆದಿಟ್ಟಿತ್ತು. ಅನೇಕರ ಕಲ್ಪನೆಗೆ ಬಣ್ಣ ತುಂಬಿದ ಈ ಮದುವೆಯಲ್ಲಿ ಬೆರಗುಗೊಳಿಸುವ ಅಲಂಕಾರ, ಅದ್ದೂರಿ ವಿನ್ಯಾಸಕ ಉಡುಪುಗಳು ಹೀಗೆ ಮದುವೆಯ ಪ್ರತಿಯೊಂದು ಅಂಶವು ಇಲ್ಲಿಯವರೆಗಿನ ಅತ್ಯಂತ ಅತಿರಂಜಿತ ಭಾರತೀಯ ವಿವಾಹಗಳಲ್ಲಿ ಒಂದಾಗಿ ಅಲೆಗಳನ್ನು ಸೃಷ್ಟಿಸಿತು.

ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಬಿಕೆಸಿ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜುಲೈ 12ರಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಬಾಲ್ಯದ ಸ್ನೇಹಿತೆಯನ್ನು ವಿವಾಹವಾದ ಅನಂತ್ ಅವರ ಮದುವೆ ಕಾರ್ಯಕ್ರಮಗಳು ಐಷಾರಾಮಿ ಮತ್ತು ಸೊಬಗುಗಳ ಅದ್ಭುತ ಪ್ರದರ್ಶನವಾಗಿತ್ತು. ಸಂಕೀರ್ಣವಾದ ಹೂವಿನ ಅಲಂಕಾರ, ಬೆರಗುಗೊಳಿಸುವ ದೀಪಗಳು ಮತ್ತು ಐಷಾರಾಮಿ ಸೆಟ್ಟಿಂಗ್‌ಗಳೊಂದಿಗೆ ಅತಿಥಿಗಳಿಗೆ ವೈಭವಯುತವಾದ ಹಬ್ಬದ ಸತ್ಕಾರ ನೀಡಲಾಯಿತು.

ಅನಂತ್ ಅವರ ಉಡುಪಿನ ಅಸಾಧಾರಣ ಅಂಶವೆಂದರೆ ಅವರ ರಾಯಲ್ ಕಲ್ಗಿ ಬ್ರೋಚ್. ಸಫಾ ಸಮಾರಂಭದಲ್ಲಿ ಅವರು ಚಿನ್ನದ ಸಫಾ (ಟರ್ಬನ್) ಮತ್ತು ಅವರ ಕೆಂಪು ಬಂಧನಿ ಸಫಾ ಎರಡರಲ್ಲೂ ಇದನ್ನು ಧರಿಸಿದ್ದರು. ಬೃಹತ್ ವಜ್ರ ಹೊದಿಕೆಯನ್ನು ಹೊಂದಿದ್ದ ಇದು ಸಾಂಪ್ರದಾಯಿಕವಾಗಿ ರಾಜಮನೆತನದವರು ಧರಿಸುವ ಅತಿರಂಜಿತ ಪರಿಕರವಾಗಿದೆ. ವೈರಲ್ ಭಯಾನಿ ಅವರ ಇನ್‌ಸ್ಟಾಗ್ರಾಮ್ ಪೋಸ್ಟ್ ಪ್ರಕಾರ ಈ ಕಲ್ಗಿಯ ಮೌಲ್ಯವು 160 ಕೋಟಿ ರೂ. ಗಳಾಗಿದ್ದು, ಇದು 150 ಫ್ಲಾಟ್‌ಗಳ ಬೆಲೆಗೆ ಸಮನಾಗಿದೆ.

ಇದನ್ನೂ ಓದಿ: Anant Ambani Wedding: ಅನಂತ್‌ ಅಂಬಾನಿ ಮದುವೆಯಲ್ಲಿ ಬಾಂಬ್‌ ಸ್ಫೋಟಕ್ಕೆ ನಡೆದಿತ್ತಾ ಸಂಚು? ಕಿಡಿಗೇಡಿ ಅರೆಸ್ಟ್‌

Continue Reading

ಟಾಲಿವುಡ್

Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು!

Sudha Murty: ಸುಧಾ ಮೂರ್ತಿ ಅವರು ವಿವಾಹ ಸಮಾರಂಭದಲ್ಲಿ ನೇರಳೆ ಬಣ್ಣದ ಸೀರೆಯನ್ನು ಧರಿಸಿ, ಕೇವಲ ಮಂಗಳಸೂತ್ರ ಮತ್ತು ಸ್ಮಾರ್ಟ್ ವಾಚ್‌ನೊಂದಿಗೆ ಸಿಂಪಲ್‌ ಆಗಿ ಬಂದಿದ್ದರು. ಅವರ ಸರಳತೆಗೆ ಹೆಚ್ಚು ಪ್ರಶಂಸೆಯನ್ನು ಗಳಿಸಿದರು. ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Sudha Murty praised for simplicity at Ambani wedding
Koo

ಮುಂಬೈ: ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಅದ್ದೂರಿ ವಿವಾಹದಲ್ಲಿ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಪಾಲ್ಗೊಂಡಿದ್ದರು.   (Sudha Murty) ಅವರ ಜತೆ ಮಹೇಶ್‌ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಸುಧಾ ಮೂರ್ತಿ ಜೊತೆಗಿನ ಫೋಟೊ ಶೇರ್ ಮಾಡಿ, ಈ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ನಮ್ರತಾ ಶಿರೋಡ್ಕರ್ ಬರೆದುಕೊಂಡಿದ್ದಾರೆ. ಜತೆಗೆ ಸುಧಾ ಮೂರ್ತಿ ಅವರ ಸರಳತೆಗೆ ನೆಟ್ಟಿಗರು ಹಾಡಿ ಹೊಗಳಿದ್ದಾರೆ. ಮಾತ್ರವಲ್ಲ ಕೊರಳಲ್ಲಿ ಮಂಗಳ ಸೂತ್ರ ಮಾತ್ರ ಧರಿಸಿ ಸಿಂಪಲ್‌ ಆಗಿ ಕಂಡಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ಸುಧಾ ಮೂರ್ತಿ ಅವರು ವಿವಾಹ ಸಮಾರಂಭದಲ್ಲಿ ನೇರಳೆ ಬಣ್ಣದ ಸೀರೆಯನ್ನು ಧರಿಸಿ, ಕೇವಲ ಮಂಗಳಸೂತ್ರ ಮತ್ತು ಸ್ಮಾರ್ಟ್ ವಾಚ್‌ನೊಂದಿಗೆ ಸಿಂಪಲ್‌ ಆಗಿ ಬಂದಿದ್ದರು. ಅವರ ಸರಳತೆಗೆ ಹೆಚ್ಚು ಪ್ರಶಂಸೆಯನ್ನು ಗಳಿಸಿದರು. ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಈ ಬುದ್ಧಿವಂತ ಮಹಿಳೆಯ ಬಗ್ಗೆ ತುಂಬಾ ಕೇಳಿದ್ದೆ, ಅವರನ್ನು ಭೇಟಿಯಾದ ನಂತರ ನನ್ನ ನಂಬಿಕೆಯು ನಿಜವಾಯಿತು. ರೋಮಾಂಚಕ, ಜೀವನದಲ್ಲಿ ನೀಡಲು ತುಂಬಾ ಪ್ರೀತಿಯಿದೆ ಎನಿಸಿತು ಎಂದು ಮಹೇಶ್ ಬಾಬು ಪತ್ನಿ ನಮ್ರತಾ ಬಣ್ಣಿಸಿದ್ದಾರೆ.

ಇದನ್ನೂ ಓದಿ: Sudha Murty: ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ; ಇದಕ್ಕೆ ಕಾರಣ ಕಾಶಿಯಂತೆ!

ಇನ್ನು ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಸುಧಾ ಮೂರ್ತಿ ಅವರನ್ನು ನೆಟ್ಟಿಗರು ಹೊಗಳಿದ್ದಾರೆ. ʻʻಬಿಲಿಯನೇರ್ ಮಹಿಳೆ ಕೇವಲ ಮಂಗಳಸೂತ್ರದೊಂದಿಗೆ ಹಾಜರಾಗುವುದನ್ನು ನೋಡಲು ಖುಷಿ ಆಗುತ್ತೆʼʼಎಂದು ಒಬ್ಬರು ಕಮೆಂಟ್‌ ಮಾಡಿದರೆ, ʻಸರಳ ಮತ್ತು ವಿನಮ್ರʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ʻಸ್ಫೂರ್ತಿದಾಯಕ ಮಹಿಳೆ. ಶೋ-ಆಫ್ ಇಲ್ಲʼʼಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ತಮ್ಮ ಸರಳತೆಯಿಂದಲೇ ಸುದ್ದಿಯಲ್ಲಿರುವ ರಾಜ್ಯಸಭೆಯ ನೂತನ (Rajya Sabha) ಸದಸ್ಯೆ (MP), ಲೇಖಕಿ, ಇನ್ಫೋಸಿಸ್‌ನ ಸಂಸ್ಥಾಪಕ (Infosys chairman) ನಾರಾಯಣ ಮೂರ್ತಿ (Narayana Murthy) ಅವರ ಪತ್ನಿ ಸುಧಾ ಮೂರ್ತಿ (Sudha Murty) ಅವರು ಕಳೆದ 30 ವರ್ಷಗಳಿಂದ ಒಂದೇ ಒಂದು ಸೀರೆಯನ್ನೂ ಖರೀದಿ ಮಾಡಿಲ್ಲವಂತೆ! ಇತ್ತೀಚಿಗೆ ಅವರು ನೀಡಿರುವ ಸಂದರ್ಶನವೊಂದರಲ್ಲಿ ಈ ವಿಚಾರ ಬಹಿರಂಗಪಡಿಸಿದ್ದರು.

ಇದಕ್ಕೆ ಮುಖ್ಯ ಕಾರಣ ಕಾಶಿಗೆ ಪ್ರವಾಸ ಮಾಡಿರುವುದು ಎಂಬುದಾಗಿ ಅವರು ತಿಳಿಸಿದ್ದರು. ಅಪಾರ ಸಂಪತ್ತು ಇದ್ದರೂ ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ತಮ್ಮ ಸರಳವಾದ ಉಡುಗೆ ತೊಡುಗೆಗಳಿಂದ, ಸಾಮಾನ್ಯ ಜೀವನ ಶೈಲಿಯಿಂದ ಎಲ್ಲರಿಗೂ ಸ್ಫೂರ್ತಿಯಾಗಿದ್ದರು ದಿ ವಾಯ್ಸ್ ಆಫ್ ಫ್ಯಾಶನ್‌ಗೆ ನೀಡಿದ ಸಂದರ್ಶನದಲ್ಲಿ ಸುಧಾ ಮೂರ್ತಿ ಅವರು ಈ ವಿಚಾರವನ್ನು ಹೀಗೆ ಹಂಚಿಕೊಂಡಿದ್ದರು

Continue Reading
Advertisement
Pooja Khedkar
ದೇಶ7 mins ago

Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

Dhammika Niroshana
ಕ್ರೀಡೆ13 mins ago

Dhammika Niroshana: ಶ್ರೀಲಂಕಾದ ಮಾಜಿ ಕ್ರಿಕೆಟಿಗನನ್ನು ಗುಂಡಿಕ್ಕಿ ಕೊಲೆಗೈದ ಅಪರಿಚಿತ ವ್ಯಕ್ತಿ

Urfi Javed Steps Out Drunk For Third Time In A Month
ವೈರಲ್ ನ್ಯೂಸ್50 mins ago

Urfi Javed: ಮತ್ತೆ ಕುಡಿದು ತೇಲಾಡಿದ ಉರ್ಫಿ ಜಾವೇದ್; ವಿಡಿಯೊ ವೈರಲ್‌!

NMMS scholarship
ಕರ್ನಾಟಕ1 hour ago

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

The Olympic Games
ಕ್ರೀಡೆ1 hour ago

The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

jobs for kannadigas cm siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

Valmiki Corporation Scam
ಕರ್ನಾಟಕ1 hour ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Niveditha Gowda new reels with brother
ಸ್ಯಾಂಡಲ್ ವುಡ್2 hours ago

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Gold Rate Today
ಚಿನ್ನದ ದರ2 hours ago

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

IND vs SL
ಕ್ರೀಡೆ2 hours ago

IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌